– ಜಪಾನ್ಗೆ 4 ಆನೆ ನೀಡಿ, ಚೀತಾ, ಜಾಗ್ವಾರ್, ಪೂಮಾ, ಚಿಂಪಾಂಜಿ, ಕ್ಯಾಪುಚಿನ್ ಕೋತಿ ತರಲು ಸಿದ್ಧತೆ
ಆನೇಕಲ್: ಬನ್ನೇರುಘಟ್ಟ ಜೈವಿಕ ಉದ್ಯಾನವನದಿಂದ (Bannerghatta Biological Park) ಇತಿಹಾಸದಲ್ಲೇ ಮೊದಲ ಬಾರಿಗೆ ಅಂತರಾಷ್ಟ್ರೀಯ ಪ್ರಾಣಿಗಳ ವಿನಿಮಯ ಮಾಡಿಕೊಳ್ಳಲು ಸಿದ್ಧತೆ ನಡೆದಿದೆ.
ಜಪಾನ್ನ ಹಿಮೇಜಿ ಸೆಂಟ್ರಲ್ ಪಾರ್ಕ್ (Himeji Central Park) ಜೊತೆ ಪ್ರಾಣಿಗಳ ವಿನಿಮಯ ಮಾಡಿಕೊಳ್ಳಲು ಕೇಂದ್ರ ಮೃಗಾಲಯ ಪ್ರಾಧಿಕಾರದಿಂದ ನಿರಂತರ ಪ್ರಯತ್ನ ನಡೆಯುತ್ತಿದೆ. ಉದ್ಯಾನವನದ 1 ಗಂಡು ಮತ್ತು 3 ಹೆಣ್ಣು ಆನೆಗಳಾದ ಸುರೇಶ್ (8), ಗೌರಿ ( 9 ), ಶೃತಿ (7) ತುಳಸಿ (5) ಜಪಾನ್ಗೆ ನೀಡಿ, ಪ್ರತಿಯಾಗಿ 4 ಚೀತಾ, 4 ಜಾಗ್ವಾರ್, 4 ಪೂಮಾ, 3 ಚಿಂಪಾಂಜಿ ಮತ್ತು 8 ಕ್ಯಾಪುಚಿನ್ ಕೋತಿಗಳನ್ನು ತರಲು ತೀರ್ಮಾನಿಸಲಾಗಿದೆ. ಇದನ್ನೂ ಓದಿ: ಬ್ರಿಟನ್ನಲ್ಲಿ ಮೋದಿಗೆ ಸಾಂಪ್ರದಾಯಿಕ ಸ್ವಾಗತ – ಇಂದೇ ಮುಕ್ತ ವ್ಯಾಪಾರ ಒಪ್ಪಂದಕ್ಕೆ ಸಹಿ ಸಾಧ್ಯತೆ
ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಕತಾರ್ ಏರ್ವೇಸ್ನ ಸರಕು ವಿಮಾನ B777-200F ದಲ್ಲಿ ಜಪಾನ್ ದೇಶದ ಒಸಾಕಾ ಕಾನ್ಸೈ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ರವಾನೆ ಆಗಲಿವೆ. ಸುಮಾರು 20 ಗಂಟೆಗಳ ಪ್ರಯಾಣಕ್ಕೆ ತಯಾರಿ ಮಾಡಲಾಗಿದೆ. ಈಗಾಗಲೇ ಆನೆಗಳಿಗೆ ವಿಮಾನ ಪ್ರಯಾಣಕ್ಕೆ ತರಬೇತಿ ನೀಡಲಾಗಿದೆ.
ಬನ್ನೇರುಘಟ್ಟ ಜೈವಿಕ ಉದ್ಯಾನವನದ ಇಬ್ಬರು ಪಶುವೈದ್ಯಕೀಯ ಅಧಿಕಾರಿಗಳು, ನಾಲ್ವರು ಪಾಲಕರು, ಒಬ್ಬ ಮೇಲ್ವಿಚಾರಕ ಮತ್ತು ಒಬ್ಬ ಜೀವಶಾಸ್ತ್ರಜ್ಞೆ ಪ್ರಾಣಿಗಳೊಂದಿಗೆ ತೆರಳಲಿದ್ದಾರೆ. ಹೊಸ ಪರಿಸರಕ್ಕೆ ಒಗ್ಗಿಕೊಳ್ಳಲು ಆನೆಗಳಿಗೆ ತರಬೇತಿ ನೀಡಲು ಅವರು ತೆರಳಲಿದ್ದಾರೆ. ಎರಡು ವಾರಗಳ ಕಾಲ ಹಿಮೇಜಿ ಪಾರ್ಕ್ ಸಿಬ್ಬಂದಿಗೆ ತರಬೇತಿ ನೀಡಲಿದ್ದಾರೆ. ಇದನ್ನೂ ಓದಿ: ಚಿಕ್ಕಮಗಳೂರು | ಕಾಡಾನೆ ದಾಳಿಗೆ ಮಹಿಳೆ ಬಲಿ
ಬೆಂಗಳೂರು: ಬನ್ನೇರುಘಟ್ಟ ಜೈವಿಕ ಉದ್ಯಾನದಲ್ಲಿ ದೇಶದ ಪ್ರಥಮ ವಿದ್ಯುತ್ ಚಾಲಿತ ಸಫಾರಿ ಬಸ್ನ ಪ್ರಾಯೋಗಿಕ ಸಂಚಾರಕ್ಕೆ ವಿಕಾಸಸೌಧದಿಂದ ವರ್ಚುವಲ್ ಮೂಲಕ ಚಾಲನೆ ನೀಡಲಾಯಿತು.
ಅರಣ್ಯ ಸಚಿವ ಈಶ್ವರ್ ಖಂಡ್ರೆ ಮಾತನಾಡಿ, ಮುಂದಿನ 4-5 ತಿಂಗಳಲ್ಲಿ ಹಂಟಿಂಗ್ ಚೀತಾ, ಕ್ಯಾಪಚಿನ್ ಕೋತಿಯನ್ನು ದಕ್ಷಿಣ ಅಮೆರಿಕದಿಂದ ವಿನಿಮಯ ಮಾಡಿಕೊಳ್ಳಲಾಗುವುದು. ಮುಂದಿನ ವರ್ಷ ಚಿಂಪಾಂಜಿ, ಜಾಗ್ವಾರ್, ಪೂಮಾ (ಉತ್ತರ ಅಮೆರಿಕ ಸಿಂಹ) ಸೇರಿದಂತೆ ಒಟ್ಟು 10 ವಿದೇಶಿ ವನ್ಯಜೀವಿಗಳು ಬನ್ನೇರುಘಟ್ಟಕ್ಕೆ ಆಗಮಿಸಲಿವೆ ಎಂದು ತಿಳಿಸಿದರು.
ಬನ್ನೇರುಘಟ್ಟದಲ್ಲಿ ಸೀಮಿತ ಆವರಣ ಪ್ರದೇಶದೊಳಗೆ ರೂಪಿಸಿರುವ ವನ್ಯಜೀವಿ ಸಫಾರಿಯಲ್ಲಿ ಹುಲಿ, ಚಿರತೆ, ಸಿಂಹ, ಕರಡಿಗಳ ದರ್ಶನ ಪ್ರವಾಸಿಗರಿಗೆ ನಿಶ್ಚಿತವಾಗಿ ಆಗುತ್ತದೆ. ಈ ಸಫಾರಿಗಳಿಗೆ ಪ್ರಸ್ತುತ ಡೀಸೆಲ್ ವಾಹನಗಳನ್ನು ಬಳಸಲಾಗುತ್ತಿದ್ದು, ಈ ವಾಹನಗಳಿಂದ ಹೊರಹೊಮ್ಮುವ ಇಂಗಾಲದ ಪ್ರಮಾಣ ತಗ್ಗಿಸುವ ಉದ್ದೇಶದಿಂದ ಇದೇ ಮೊದಲ ಬಾರಿಗೆ ಪ್ರಾಯೋಗಿಕವಾಗಿ ದೇಶದಲ್ಲೇ ವಿದ್ಯುತ್ ಚಾಲಿತ ವಾಹನ ಪರಿಚಯಿಸಲಾಗುತ್ತಿದೆ ಎಂದರು.
ಬಸ್ ವಿಶೇಷತೆ ಏನು?
ವಿದ್ಯುತ್ ಚಾಲಿತ ಬಸ್, 22 ಆಸನಗಳನ್ನು ಹೊಂದಿದ್ದು, 100 ಕೆ.ವಿ. ಬ್ಯಾಟರಿ ಸಾಮರ್ಥ್ಯದ್ದಾಗಿದೆ. 2 ಗಂಟೆ ಚಾರ್ಜ್ ಮಾಡಿದರೆ 160 ಕಿ.ಮೀ. ಅಂದರೆ 8 ಟ್ರಿಪ್ ಸಂಚರಿಸಲಿದೆ. ಹಾಲಿ ಒಂದು ಬಸ್ ಮಾತ್ರವೇ ಕಾರ್ಯಾರಂಭ ಮಾಡಲಿದ್ದು, 2027 ರೊಳಗೆ ಬನ್ನೇರುಘಟ್ಟ ಉದ್ಯಾನವನ್ನು (ಟ್ರ್ಯಾಕ್ಟರ್ ಇತ್ಯಾದಿ ಉಪಯೋಗಿ ವಾಹನ ಹೊರತುಪಡಿಸಿ) ಪಳೆಯುಳಿಕೆ ಇಂಧನ ರಹಿತ ವಾಹನ ವಲಯವಾಗಿ ಪರಿವರ್ತಿಸಲಾಗುವುದು ಎಂದು ತಿಳಿಸಿದರು.
ಬನ್ನೇರುಘಟ್ಟ ಮೃಗಾಲಯ ಮತ್ತು ಸಫಾರಿ ವೀಕ್ಷಣೆಗೆ ವಾರಂತ್ಯದಲ್ಲಿ ಮತ್ತು ಸರ್ಕಾರಿ ರಜಾ ದಿನಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ವನ್ಯಜೀವಿ ಪ್ರಿಯರು ಮತ್ತು ಪ್ರವಾಸಿಗರು ಆಗಮಿಸುವ ಕಾರಣ, ಇಲ್ಲಿ ಸ್ಮಾರ್ಟ್ ಪಾರ್ಕಿಂಗ್ ವ್ಯವಸ್ಥೆ ಕಲ್ಪಿಸಲು ತೀರ್ಮಾನಿಸಲಾಗಿದೆ. ಶೀಘ್ರವೇ ಟೆಂಡರ್ ಕರೆಯಲಾಗುವುದು ಎಂದು ಹೇಳಿದರು.
ದಾಖಲೆಯ ಪ್ರವಾಸಿಗರ ಆಗಮನ
ಕಳೆದ ತಿಂಗಳು ಬನ್ನೇರುಘಟ್ಟ ಜೈವಿಕ ಉದ್ಯಾನಕ್ಕೆ ಸುಮಾರು 2,85,000 ಪ್ರವಾಸಿಗರು ಆಗಮಿಸಿದ್ದು, ಇದು ದಾಖಲೆಯಾಗಿದೆ. ಚಿರತೆ ಸಫಾರಿ ಈಗ ಜನಾಕರ್ಷಣೆಯ ಕೇಂದ್ರ ಬಿಂದುವಾಗಿದೆ ಎಂದರು. ಬನ್ನೇರುಘಟ್ಟ ಜೈವಿಕ ಉದ್ಯಾನಕ್ಕೆ ಇನ್ನು ಕೆಲವೇ ತಿಂಗಳುಗಳಲ್ಲಿ ಚಿಂಪಾಜಿ, ಬೇಟೆ ಚೀತಾ, ಜಾಗ್ವಾರ್ ಸೇರಿದಂತೆ 10 ವಿದೇಶೀ ವನ್ಯಜೀವಿಗಳ ಸೇರ್ಪಡೆ ಆಗಲಿದೆ ಎಂದು ತಿಳಿಸಿದರು.
ಬೃಹತ್ ಮತ್ಯಾಗಾರ ನಿರ್ಮಾಣ
ಬನ್ನೇರುಘಟ್ಟ ರಾಷ್ಟ್ರೀಯ ಉದ್ಯಾನಕ್ಕೆ ಮತ್ತೊಂದು ಆಕರ್ಷಣೆಯಾಗಿ ಬೃಹತ್ ಮತ್ಸ್ಯಾಗಾರ ನಿರ್ಮಿಸಲು ಉದ್ದೇಶಿಸಲಾಗಿದೆ. ಇದಕ್ಕೆ ವಿಸ್ತೃತ ಯೋಜನಾ ವರದಿ ಸಿದ್ಧಪಡಿಸಿ ಟೆಂಡರ್ ಕರೆಯಲಾಗುವುದು. ಬನ್ನೇರುಘಟ್ಟ ಉದ್ಯಾನದ ವ್ಯಾಪ್ತಿಯಲ್ಲಿ 7 ಕೆರೆಗಳಿವೆ. ಜೊತೆಗೆ ಈಗ ಉದ್ಯಾನಕ್ಕೆ ಬರುವ ಪ್ರವಾಸಿಗರಿಗೆ ಹಾಗೂ ಪ್ರಾಣಿಗಳಿಗಾಗಿ ಬೆಂಗಳೂರು ನೀರು ಸರಬರಾಜು ಮತ್ತು ಒಳ ಚರಂಡಿ ಮಂಡಳಿಯಿಂದಲೂ ನೀರು ಪಡೆಯಲಾಗುತ್ತಿದ್ದು, ಮತ್ಯಾಗಾರಕ್ಕೆ ನೀರಿನ ಕೊರತೆ ಇರುವುದಿಲ್ಲ ಎಂದೂ ತಿಳಿಸಿದರು.
ಜೀಬ್ರಾ ಸಾವಿನ ಬಗ್ಗೆ ತನಿಖೆಗೆ ಆದೇಶ
ಇತ್ತೀಚೆಗೆ ಬನ್ನೇರುಘಟ್ಟ ಉದ್ಯಾನದಲ್ಲಿ ಜೀಬ್ರಾ ಮತ್ತು ನೀಲಗಾಯ್ ಸಾವಿಗೀಡಾಗಿರುವುದು ಅತ್ಯಂತ ನೋವಿನ ಸಂಗತಿ. ಈ ಬಗ್ಗೆ ತನಿಖೆ ಮಾಡಿ ವರದಿ ನೀಡಲು ಸಿಸಿಎಫ್ ಅವರಿಗೆ ತಿಳಿಸಿದ್ದು, ವರದಿ ಬಂದ ಬಳಿಕ ಮುಂದಿನ ಕ್ರಮ ಕೈಗೊಳ್ಳಲಾಗುವುದು. ಇನ್ಮುಂದೆ ಮೃಗಾಲಯದಲ್ಲಿ ಮತ್ತು ಜೈವಿಕವನದಲ್ಲಿ ಯಾವುದೇ ವನ್ಯಜೀವಿ ಅಸಹಜವಾಗಿ ಸಾವನ್ನಪ್ಪದಂತೆ ಎಚ್ಚರ ವಹಿಸುವಂತೆ ಅಧಿಕಾರಿಗಳಿಗೆ ಸ್ಪಷ್ಟ ಸೂಚನೆ ನೀಡಲಾಗಿದೆ. ಕಲ್ಯಾಣ ಕರ್ನಾಟಕ ಭಾಗ ಗುಲ್ಬರ್ಗಾದಲ್ಲಿ ನೂತನವಾಗಿ ಮೃಗಾಲಯ ನಿರ್ಮಿಸಲಾಗುತ್ತಿದ್ದು, ಬರುವ ಡಿಸೆಂಬರ್ ಹೊತ್ತಿಗೆ ಸಿದ್ಧವಾಗಲಿದೆ ಎಂದರು.
-3 ತಿಂಗಳಲ್ಲಿ ಚಿರತೆ, ಹುಲಿ ಸೇರಿ 20 ಅಪರೂಪದ ಪ್ರಾಣಿಗಳ ಸರಣಿ ಸಾವು
ಆನೇಕಲ್: ಮೈಸೂರು ಮಹಾರಾಜರ ಕುಟುಂಬ ರಕ್ಷಣೆ ಮಾಡಿ ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ (Bannerghatta Biological Park) ಇರಿಸಿದ್ದ ಚಿರತೆ ದಿಢೀರ್ ಸಾವನ್ನಪ್ಪಿದ್ದು, ಬನ್ನೇರುಘಟ್ಟ ಪಾರ್ಕ್ ಅಧಿಕಾರಿಗಳ ವಿರುದ್ಧ ಪ್ರಾಣಿ ಪ್ರಿಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಬಂಡಿಪುರ ಅರಣ್ಯದಲ್ಲಿ ತಾಯಿಯಿಂದ ಬೇರ್ಪಟ್ಟಿದ್ದ ಚಿರತೆ ಮರಿಯನ್ನು ಮೈಸೂರು ಮಹಾರಾಜರ ಕುಟುಂಬ ರಕ್ಷಣೆ ಮಾಡಿತ್ತು. ಅದಕ್ಕೆ ಶ್ಯಾಡೋ ಎಂದು ಹೆಸರಿಟ್ಟು, ಮೈಸೂರು ಮೃಗಾಲಯಕ್ಕೆ ಹಸ್ತಾಂತರಿಸಿದ್ದರು. ಬಳಿಕ ಅಲ್ಲಿಂದ ಬನ್ನೇರುಘಟ್ಟ ಜೈವಿಕ ಉದ್ಯಾನವನಕ್ಕೆ ಸ್ಥಳಾಂತರಿಸಲಾಗಿತ್ತು. ಆದರೆ ಇದೀಗ ಚಿರತೆ ದಿಢೀರ್ ಸಾವನ್ನಪ್ಪಿದೆ. ಚಿರತೆ ಸಾವನ್ನಪ್ಪಿದ್ದು ಯಾಕೆ? ಚಿರತೆಗೆ ಏನಾಯ್ತು ಎಂಬ ಪ್ರಶ್ನೆ ಮೂಡಿದೆ.ಇದನ್ನೂ ಓದಿ: ಮುಂಬೈ ದಾಳಿಕೋರ ತಹವ್ವೂರ್ ಅರ್ಜಿ ವಜಾ – ಶೀಘ್ರವೇ ಭಾರತಕ್ಕೆ ಹಸ್ತಾಂತರ
ಬೆಂಗಳೂರು ಹೊರವಲಯದ ಬನ್ನೇರುಘಟ್ಟ ಜೈವಿಕ ಉದ್ಯಾನವನದ ರೆಸ್ಕ್ಯೂ ಸೆಂಟರ್ಲ್ಲಿದ್ದ ಹೆಣ್ಣು ಚಿರತೆ ಶ್ಯಾಡೋ ದಿಢೀರ್ ಸಾವನ್ನಪ್ಪಿದೆ. ಆದರೆ ಆರೋಗ್ಯವಾಗಿದ್ದ ಚಿರತೆ ಸಾವಿಗೆ ಬನ್ನೇರುಘಟ್ಟ ಜೈವಿಕ ಉದ್ಯಾನವನದ ಅನುಭವಿ ವೈದ್ಯರು ಮತ್ತು ಅಧಿಕಾರಿಗಳ ನಡುವಿನ ಭಿನ್ನಾಭಿಪ್ರಾಯಗಳು ಕಾರಣ ಎಂದು ಪ್ರಾಣಿ ಪ್ರಿಯರ ಆರೋಪವಾಗಿದೆ. ಇನ್ನೂ ಕಳೆದ ಮೂರು ತಿಂಗಳಲ್ಲಿ ಚಿರತೆ, ಹುಲಿ ಸೇರಿ 20 ಅಪರೂಪದ ಪ್ರಾಣಿಗಳ ಸರಣಿ ಸಾವನ್ನಪ್ಪಿದೆ.
ಇನ್ನೂ 2 ಸಾವಿರಕ್ಕೂ ಅಧಿಕ ಅಪರೂಪದ ವ್ಯನ್ಯ ಜೀವಿಗಳ ತಾಣವಾಗಿರುವ ಬನ್ನೇರುಘಟ್ಟ ಜೈವಿಕ ಉದ್ಯಾನವನದಿಂದ ವರ್ಷಕ್ಕೆ 50 ಕೋಟಿ ರೂ.ಗಿಂತಲೂ ಅಧಿಕ ಹಣ ಸಂಗ್ರಹವಾಗುತ್ತಿದೆ. ಆದರೆ ಪ್ರಾಣಿಗಳ ಪಾಲನೆ ಪೋಷಣೆಗಿರುವುದು ಓರ್ವ ವೈದ್ಯ ಮಾತ್ರ. ನುರಿತ ವೈದ್ಯರ ಜೊತೆಗೆ ಇಬ್ಬರು ಆರ್ಎಫ್ಓ ಮತ್ತು ಡೆಪ್ಯುಟಿ ಡೈರೆಕ್ಟರ್ ಹುದ್ದೆ ಖಾಲಿ ಇದೆ. ಡಿಆರ್ಎಫ್ಓಗಳಿಗೆ ಹೆಚ್ಚುವರಿ ಜವಾಬ್ದಾರಿ ನೀಡಿ ಒತ್ತಡದಲ್ಲಿ ಕೆಲಸ ಮಾಡಿಸಲಾಗುತ್ತಿದೆ. ಅಲ್ಲದೆ 2024-25ನೇ ಸಾಲಿನಲ್ಲಿ 15 ಕೋಟಿ ರೂ.ಗೂ ಅಧಿಕ ಹಣವನ್ನು ಕಚೇರಿ (ಅಂದಾಜು 7ಕೋಟಿ ರೂ.) ಸೇರಿದಂತೆ ಅನಗತ್ಯ ಕಾಮಗಾರಿಗಳಿಗೆ ಹಣ ದುರ್ಬಳಕೆ ಮಾಡಲಾಗುತ್ತಿದೆ.
ಈ ಬಗ್ಗೆ ಪ್ರಶ್ನಿಸಿದಾಗ ಬನ್ನೇರುಘಟ್ಟ ಜೈವಿಕ ಉದ್ಯಾನವನದ ಕಾರ್ಯನಿರ್ವಾಹಕ ನಿರ್ದೇಶಕ ಸೂರ್ಯ ಸೇನ್ ಅವರು, 2,000ಕ್ಕೂ ಅಧಿಕ ಪ್ರಾಣಿಗಳಿರುವ ಉದ್ಯಾನವನದಲ್ಲಿ ವರ್ಷಕ್ಕೆ ನೂರಕ್ಕೂ ಅಧಿಕ ಪ್ರಾಣಿಗಳು ಸಾಯುವುದು ಸರ್ವೇ ಸಾಮಾನ್ಯವಾಗಿದೆ. ಕಾಮಗಾರಿಗಳನ್ನು ಪ್ರಾಧಿಕಾರದ ಅನುಮತಿ ಪಡೆದು ನಡೆಸಲಾಗುತ್ತಿದೆ ಎಂದು ಸಮರ್ಥಿಸಿಕೊಂಡಿದ್ದಾರೆ.
ಪ್ರಾಣಿಗಳು ಮತ್ತು ಪ್ರವಾಸಿಗರಿಗೆ ಆದ್ಯತೆ ನೀಡಬೇಕಿದ್ದ ಉದ್ಯಾನವನದ ಅಧಿಕಾರಿಗಳು ಕೋಟಿ ಕಾಮಗಾರಿಗಳಿಗೆ ಆದ್ಯತೆ ನೀಡುತ್ತಿರುವುದು ನಿಜಕ್ಕೂ ಬೇಸರದ ಸಂಗತಿ. ಇನ್ನಾದರೂ ಅಪರೂಪದ ಪ್ರಾಣಿಗಳ ಪಾಲನೆ ಪೋಷಣೆಗೆ ಹೆಚ್ಚು ಗಮನ ನೀಡುತ್ತಾರಾ ಎಂಬುದನ್ನು ಕಾದುನೋಡಬೇಕಿದೆ.ಇದನ್ನೂ ಓದಿ: ಚಿತ್ರರಂಗ ಕೇಳಿದ್ದೆಲ್ಲಾ ಸಿಎಂ ಕೊಡುತ್ತಲೇ ಬಂದಿದ್ದಾರೆ: ನರಸಿಂಹಲು
– ಅಳಿವಿನಂಚಲ್ಲಿರುವ ಬಿಳಿ ಹುಲಿ, ಕಾಡು ಬೆಕ್ಕು, ಮೊಸಳೆ ಆಮದು
ಆನೇಕಲ್: ಪ್ರಾಣಿ ವಿನಿಯಯ ಯೋಜನೆಯಡಿ (Animal Exchange) ಬನ್ನೇರುಘಟ್ಟ ಜೈವಿಕ ಉದ್ಯಾನವನಕ್ಕೆ (Bannerghatta Biological Park) ನೂತನ ಅಥಿತಿಗಳ ಆಗಮನವಾಗಿದೆ.
ನವದೆಹಲಿಯ ಕೇಂದ್ರ ಮೃಗಾಲಯ ಪ್ರಾಧಿಕಾರದ ಅನುಮೋದನೆಯಂತೆ ಬೆಂಗಳೂರು ಹೊರವಲಯದ ಬನ್ನೇರುಘಟ್ಟ ಜೈವಿಕ ಉದ್ಯಾನವನ, ಸಂಜಯ್ ಗಾಂಧಿ ಜೈವಿಕ ಉದ್ಯಾನವನ, ಪಾಟ್ನಾ ಹಾಗೂ ಬಿಹಾರದ ನಡುವೆ ಪ್ರಾಣಿ ವಿನಿಮಯ ಯಶಸ್ವಿಯಾಗಿದೆ. ವಿನಿಮಯದ ಭಾಗವಾಗಿ ಬನ್ನೇರುಘಟ್ಟ ಜೈವಿಕ ಉದ್ಯಾನವನದಿಂದ ಒಂದು ಗಂಡು ಜೀಬ್ರಾ ಮತ್ತು ಎರಡು ಗಂಡು ಥಮಿನ್ ಜಿಂಕೆಗಳನ್ನು ಪಾಟ್ನಾ ಮೃಗಾಲಯಕ್ಕೆ ಕಳುಹಿಸಲಾಗಿದೆ. ಇದರ ಪ್ರತಿಯಾಗಿ ಅಳಿವಿನಂಚಿನಲ್ಲಿರುವ ಘಾರಿಯಲ್ ಮೊಸಳೆ, ಬಿಳಿ ಹುಲಿ ಮತ್ತು ಕಾಡು ಬೆಕ್ಕನ್ನು ಬನ್ನೇರುಘಟ್ಟ ಜೈವಿಕ ಉದ್ಯಾನವನಕ್ಕೆ ತರಲಾಗಿದ್ದು, ನೂತನ ಪ್ರಾಣಿಗಳ ಆಗಮನದಿಂದ ಉದ್ಯಾನವನದಲ್ಲಿ ಸಂತಸ ಮನೆ ಮಾಡಿದೆ. ಇದನ್ನೂ ಓದಿ: ಬೆಂಗಳೂರಿನಲ್ಲಿ ತಂದೆಯಿಂದಲೇ ಮಗನ ಭೀಕರ ಕೊಲೆ
ಬೆಂಗಳೂರಿನ ಹವಾಮಾನಕ್ಕೆ ಹೊಂದಿಕೊಳ್ಳಲು ಈ ಹೊಸ ಪ್ರಾಣಿಗಳನ್ನು ಕೆಲವು ದಿನಗಳವರೆಗೆ ಕ್ವಾರಂಟೈನ್ ಪ್ರದೇಶದಲ್ಲಿ ಪ್ರತ್ಯೇಕವಾಗಿ ಇರಿಸಲಾಗಿದೆ ಮತ್ತು ನಿರಂತರ ವೀಕ್ಷಣೆಯಲ್ಲಿರಲು ಪ್ರತ್ಯೇಕ ಸಿಬ್ಬಂದಿಗಳನ್ನು ಕೂಡ ನೇಮಕ ಮಾಡಲಾಗಿದೆ. ಈ ಪ್ರಾಣಿ ವಿನಿಮಯವು ಮೃಗಾಲಯಗಳಲ್ಲಿನ ಪ್ರಾಣಿಗಳ ಸಂರಕ್ಷಣೆ ಮತ್ತು ಸಂತಾನೋತ್ಪತ್ತಿ ಹೆಚ್ಚಿಸಲು ಸಹಕಾರಿಯಾಗಿದ್ದು, ಪ್ರಾಣಿ ವೀಕ್ಷಣೆಗೆ ಆಗಮಿಸುವ ಪ್ರವಾಸಿಗರಿಗೂ ಪ್ರಾಣಿಗಳನ್ನು ಹತ್ತಿರದಿಂದ ವೀಕ್ಷಿಸಿ, ಹೊಸ ಪ್ರಾಣಿಗಳ ಬಗ್ಗೆ ತಿಳಿದುಕೊಳ್ಳಲು ಅವಕಾಶ ಸಿಗಲಿದೆ. ಇದನ್ನೂ ಓದಿ: ಬೆಂಗಳೂರು| ಬೈಕ್ನಲ್ಲಿ ಬಂದು ಪೆಪ್ಪರ್ ಸ್ಪ್ರೇ ಹಾಕಿ ಯುವಕರ ಮೇಲೆ ಹಲ್ಲೆ
ಪ್ರಾಣಿ ವಿನಿಮಯ ಕಾರ್ಯಕ್ರಮಗಳು ಹೆಚ್ಚಾಗಿ ಆದಾಗ ಸಂರಕ್ಷಣೆ, ಶಿಕ್ಷಣ ಮತ್ತು ವಿಭಿನ್ನ ಪ್ರಾಣಿಗಳ ಜೀವನ ಶೈಲಿ ಸೇರಿದಂತೆ ಜನರಲ್ಲಿ ದೇಶದಾದ್ಯಂತ ಇರುವ ಪ್ರಾಣಿಗಳ ಬಗ್ಗೆ ತಿಳಿದುಕೊಳ್ಳಲು ಭಾರತೀಯ ಪ್ರಾಣಿ ಸಂಗ್ರಹಾಲಯ ಈ ಮಹತ್ತರದ ಪ್ರಾಣಿ ವಿನಿಮಯ ಯೋಜನೆಯನ್ನು ಮಾಡಿದೆ. ಇದನ್ನೂ ಓದಿ: ಮಳೆ ಬೆನ್ನಲ್ಲೇ ತರಕಾರಿ ಬೆಲೆ ಏರಿಕೆ – ಗ್ರಾಹಕರು ಹೈರಾಣು, ಯಾವ ತರಕಾರಿಗೆ ಎಷ್ಟು ಬೆಲೆ?
ಬೆಂಗಳೂರು: ಸಫಾರಿಗೆ ವೀಕ್ಷಣೆಗೆ ಆಗಮಿಸಿದ್ದ ಪ್ರವಾಸಿಗರ ಮಿನಿ ಬಸ್ನ ಮೇಲೆ ಚಿರತೆ ಏರಿದ್ದರಿಂದ ಕೆಲವರಿಗೆ ಆತಂಕವಾಗಿದ್ದು, ಕೆಲವರು ಕಿಟಕಿಯಲ್ಲಿ ಚಿರತೆ (Cheetah) ನೋಡಿ ಖುಷಿ ಪಟ್ಟ ಘಟನೆ ಬೆಂಗಳೂರು ಹೊರವಲಯದ ಆನೇಕಲ್ ತಾಲೂಕಿನ ಬನ್ನೇರುಘಟ್ಟ ಜೈವಿಕ ಉದ್ಯಾನದಲ್ಲಿ (Bannerghatta Biological Park) ನಡೆದಿದೆ.
ಇತ್ತೀಚಿಗೆ ಆರಂಭವಾಗಿರುವ ಚಿರತೆ ಸಫಾರಿಯಲ್ಲಿ (Cheetah Safari) ಚಿರತೆಗಳು ಬಸ್, ಜೀಪ್ ಬಳಿ ಬರುವುದು, ಕೆಲವು ಬಾರಿ ಬಸ್, ಜೀಪ್ಗಳ ಮೇಲೆ ಹತ್ತುವ ವಾಡಿಕೆ ಮಾಡಿಕೊಂಡಿವೆ. ಅದೇ ರೀತಿ ಇಂದು ಸಹ ಒಂದು ಚಿರತೆ ಬಸ್ ಮೇಲೆ ಏರಿ ಕಿಟಕಿಗಳಲ್ಲಿ ಪ್ರವಾಸಿಗರನ್ನು ನೋಡಿ ಗುರ್ ಎಂದಿದೆ. ನಂತರ ಚಾಲಕ ಬಸ್ ನಿಧಾನವಾಗಿ ಮುಂದಕ್ಕೆ ಚಲಿಸುತ್ತಿದ್ದಂತೆ ಬಸ್ನಿಂದ ಕೆಳಕ್ಕೆ ಹಾರಿ ಹೋಗಿದೆ. ಇದನ್ನೂ ಓದಿ: ಕುರ್ಚಿ ಕಾದಾಟ ಮಧ್ಯೆ ಸತೀಶ್ ಜಾರಕಿಹೊಳಿಯನ್ನು ಭೇಟಿಯಾದ ವಿಜಯೇಂದ್ರ
ಕಳೆದ ಮೂರು ತಿಂಗಳ ಹಿಂದೆ ಉದ್ಯಾನವನದ ಕರಡಿ, ಸಿಂಹ ಸಫಾರಿಗಳಿಗೆ ಹೊಂದಿಕೊಂಡಂತೆ ಇರುವ ವಿಶಾಲ ತೆರೆದ ಆವರಣದಲ್ಲಿ 19 ಚಿರತೆಗಳಿಗೆ ಆಶ್ರಯ ನೀಡಿ ಪ್ರತಿ ದಿನ ಒಂದೊಂದು ತಂಡವನ್ನು ಸಫಾರಿಗೆ ಬಿಡಲಾಗುತ್ತಿದೆ. ಸದ್ಯ ಚಿರತೆಗಳನ್ನು ಸಫಾರಿಯಲ್ಲಿ ನೋಡಿ ಖುಷಿ ಪಡುತ್ತಿದ್ದಾರೆ. ಇದನ್ನೂ ಓದಿ: ಮಕ್ಕಳ ಕಳ್ಳಿಯೆಂದು ಮಾನಸಿಕ ಅಸ್ವಸ್ಥೆಗೆ ಥಳಿತ: ಪೊಲೀಸರಿಂದ ಮಹಿಳೆಯ ರಕ್ಷಣ
ಚಿರತೆಗಳು ಬುದ್ಧಿವಂತ ಪ್ರಾಣಿಗಳು ಚಿಕ್ಕ ಜಾಗ ಸಿಕ್ಕರೂ ನುಸುಳಿ ಬಿಡುತ್ತವೆ ಹಾಗಾಗಿ ಪ್ರವಾಸಿ ವಾಹನದಲ್ಲಿ ಕಿಟಕಿಯ ಗ್ಲಾಸ್ಗಳನ್ನು ಮುಚ್ಚಿರಬೇಕು. ಮಕ್ಕಳನ್ನು ಕಿಟಕಿ ಪಕ್ಕ ಕೂರಿಸಿದ್ದರೆ ಎಚ್ಚರಿಕೆಯಿಂದ ಇರುವಂತೆ ನೋಡಿಕೊಳ್ಳಬೇಕು. ಅದೇ ರೀತಿ ನಮ್ಮ ವಾಹನಗಳ ಚಾಲಕ ಮತ್ತು ಸಹಾಯಕ ಸಿಬ್ಬಂದಿಗಳಿಗೂ ಸಲಹೆ ಸೂಚನೆಗಳನ್ನು ನೀಡಲಾಗಿದೆ ಎಂದು ಬನ್ನೇರುಘಟ್ಟ ಜೈವಿಕ ಉದ್ಯಾನವನದ ಕಾರ್ಯನಿರ್ವಾಹಕ ನಿರ್ದೇಶಕ ಸೂರ್ಯಸೇನ್ ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: ಮೊಯಿದ್ದೀನ್ ಬಾವ ಸಹೋದರನ ಶವ ಫಲ್ಗುಣಿ ನದಿಯಲ್ಲಿ ಪತ್ತೆ
ಚಿರತೆಗಳು ನಾಚಿಕೆ ಸ್ವಭಾವದ ಪ್ರಾಣಿ. ಇವುಗಳಿಗೆ ಯಾವುದೇ ಅಪಾಯ ಇಲ್ಲ ಎಂಬುದು ಖಾತರಿ ಪಡಿಸಿಕೊಂಡ ಮೇಲೆಯೇ ನಡೆದು ಸಾಗುವುದು. ಹಾಗಾಗಿ ಪ್ರತಿ ದಿನ ವಾಹನಗಳನ್ನು ನೋಡಿ ಅಪಾಯವಿಲ್ಲ ಎಂಬುದು ಖಚಿತವಾಗಿದ್ದರಿಂದ ವಾಹನಗಳ ಬಳಿ ಬರುವುದು, ಮೇಲೆ ಏರುವುದು ವಾಡಿಕೆ ಮಾಡಿ ಕೊಂಡಿವೆ ಎಂದು ಅವರು ತಿಳಿಸಿದ್ದಾರೆ. ಇದನ್ನೂ ಓದಿ: ಚೆನ್ನೈ ಏರ್ ಶೋ ವೇಳೆ ದುರಂತ – ಬಿಸಿಲಿನ ತಾಪಕ್ಕೆ ಐವರು ಸಾವು, 230ಕ್ಕೂ ಹೆಚ್ಚು ಮಂದಿ ಅಸ್ವಸ್ಥ
ಬೆಂಗಳೂರು: ಬನ್ನೇರುಘಟ್ಟ ಜೈವಿಕ ಉದ್ಯಾನವನಕ್ಕೆ (Bannerghatta Biological Park) ಹೊಸ ಅತಿಥಿಯೊಂದರ ಆಗಮನವಾಗಿದೆ. 15 ವರ್ಷದ ಆನೆಯೊಂದು (Elephant) ಹೆಣ್ಣು ಮರಿಗೆ ಜನ್ಮ ನೀಡಿದ್ದು, ಜೈವಿಕ ಉದ್ಯಾನವನದಲ್ಲಿ ಸಂತಸ ಮನೆ ಮಾಡಿದೆ.
ಡಿ.11 ರಂದು ರೂಪಾ ಎಂಬ ಆನೆ ಮರಿಗೆ ಜನ್ಮ ನೀಡಿದ್ದು, ಸಫಾರಿಯ ಸೀಗೆಕಟ್ಟೆಯಲ್ಲಿ ಮರಿ ಆನೆ ಪ್ರವಾಸಿಗರ ಕಣ್ಮನ ಸೆಳೆಯುತ್ತಿದೆ. ಪಶುವೈದ್ಯರ ಆರೈಕೆಯಲ್ಲಿ ತಾಯಿ ಹಾಗೂ ಮರಿ ಆನೆಗಳು ಆರೋಗ್ಯವಾಗಿವೆ. ಈ ಹಿಂದೆ ಎರಡು ಮರಿಗಳಿಗೆ ರೂಪಾ ಜನ್ಮ ನೀಡಿತ್ತು. ಇದನ್ನೂ ಓದಿ: ನಾನು ಅಮ್ಮನಾಗುತ್ತಿದ್ದೇನೆ: ಗುಡ್ ನ್ಯೂಸ್ ಕೊಟ್ಟ ನಟಿ ಅದಿತಿ ಪ್ರಭುದೇವ್
ಈ ಹಿಂದೆ ಒಂದು ಗಂಡು ಹಾಗೂ ಒಂದು ಹೆಣ್ಣು ಮರಿಗೆ ರೂಪಾ ಜನ್ಮ ನೀಡಿತ್ತು. ಇದೀಗ ಮೂರನೇ ಹೆಣ್ಣು ಮರಿಗಳಿಗೆ ಜನ್ಮ ನೀಡಿದ್ದು, ಜೈವಿಕ ಉದ್ಯಾನವನದ ಆನೆಗಳ ಸಂಖ್ಯೆ 25ಕ್ಕೆ ಏರಿಕೆ ಕಂಡಿದೆ. ಇದನ್ನೂ ಓದಿ: ಹೊಸ ವರ್ಷ, ಹೊಸ ದಿನ- ದೇವರ ಮೊರೆ ಹೋದ ರಾಜ್ಯದ ಜನ
ಬೆಂಗಳೂರು: ರಾಜಧಾನಿ ಸುತ್ತ ಪ್ರವಾಸಿತಾಣಗಳ ನಿರ್ಬಂಧ ಹಿನ್ನಲೆಯಲ್ಲಿ ಮನರಂಜನಾ ಮನುಸ್ಸುಗಳು ಉದ್ಯಾನದತ್ತ ಮುಖಮಾಡಿವೆ. ಸಾವಿರಾರು ಪ್ರವಾಸಿಗರು ಬನ್ನೇರುಘಟ್ಟ ಉದ್ಯಾನವನಕ್ಕೆ ಲಗ್ಗೆ ಇಡುತ್ತಿದ್ದಾರೆ.
ಭಾನುವಾರ ಸ್ವಾತಂತ್ರ್ಯ ದಿನಾಚರಣೆ ಜೊತೆಗೆ ರಜಾದಿನ, ಮುಂದೆ ಶಾಲಾರಂಭ ಸಹ ಘೋಷಣೆಯಾಗಿದೆ ಮತ್ತು ರಜೆಯ ಅಂತಿಮ ದಿನಗಳ ಲೆಕ್ಕಚಾರದಲ್ಲಿ ಬನ್ನೇರುಘಟ್ಟ ಜೈವಿಕ ಉದ್ಯಾನವನಕ್ಕೆ ಪ್ರಾಣಿ ಪ್ರಿಯರು ಮತ್ತು ಪೋಷಕರು ಆಗಮಿಸುತ್ತಿದ್ದಾರೆ.
ಬೆಳಗ್ಗೆಯಿಂದ ಬನ್ನೇರುಘಟ್ಟ ಜೈವಿಕ ಉದ್ಯಾನವನದ ಗೇಟ್ ಮುಂಭಾಗದಲ್ಲಿ ಸರತಿ ಸಾಲಿನಲ್ಲಿನಿಂತಿರುವ ಸಾವಿರಾರು ಪ್ರಾಣಿ ಪ್ರಿಯರು, ಜೀವ ಸಂಕುಲವನ್ನು ಕಾಣಲು ಮುಗಿಬಿದ್ದಿದ್ದಾರೆ. ಆನ್ಲೈನ್ ಸೇರಿದಂತೆ ಕೌಂಟರ್ ಗಳಲ್ಲಿ ಸಹ ಮಧ್ಯಾಹ್ನದವರೆಗೆ ಟಿಕೆಟ್ ಜೋರಾಗಿ ಮಾರಾಟವಾಗಿವೆ. ಬೆಳಗ್ಗೆಯಿಂದ ಸಂಜೆವರೆಗೆ 10,000 ಪ್ರವಾಸಿಗರು ಭೇಟಿ ನೀಡಿದ್ದಾರೆ.
ಕೋವಿಡ್ ನಿಯಮಗಳನ್ನು ಗಾಳಿಗೆ ತೂರಿ ಗುಂಪು ಗುಂಪಾಗಿ ಜನ ಸೇರುತ್ತಿರುವುದು ಆತಂಕ ಮೂಡಿಸಿದೆ. ಜೊತೆಗೆ ಪಾರ್ಕ್ ನ ಸಿಬ್ಬಂದಿ ಮೈಕ್ನಲ್ಲಿ ಕೊರೊನಾ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲನೆ ಮಾಡಲು ಸೂಚನೆ ನೀಡುತ್ತಿದ್ದರು. ಯಾವುದೇ ಪ್ರವಾಸಿಗರು ಆದೇಶ ಪಾಲನೆ ಮಾಡದೆ ಗುಂಪುಗುಂಪಾಗಿ ಸೇರಿ ಕೊರೊನಾ ಮತ್ತಷ್ಟು ಸ್ಫೋಟ ಆಗಲು ದಾರಿ ಮಾಡಿದಂಗೆ ಕಾಣುತ್ತಿತ್ತು.
ಬೆಂಗಳೂರು: ಇಂದು ವಿಶ್ವಾದ್ಯಂತ ಹುಲಿ ದಿನಾಚರಣೆಯನ್ನು ಆಚರಿಸಲಾಗಿತ್ತು. ಅದೇ ರೀತಿ ಬೆಂಗಳೂರು ಹೊರವಲಯದ ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ ಸಹ ವಿಶ್ವ ಹುಲಿ ದಿನಾಚರಣೆ ಅಂಗವಾಗಿ ಮಕ್ಕಳಿಗೆ ಅರಿವಿನ ಶಿಬಿರವನ್ನು ಹಮ್ಮಿಕೊಳ್ಳಲಾಗಿತ್ತು.
ಬನ್ನೇರುಘಟ್ಟದಲ್ಲಿ ಹುಲಿ ದಿನಾಚರಣೆ ವೈವಿಧ್ಯಮಯವಾಗಿ ಆಚರಣೆ ಮಾಡಲಾಯಿತು. ಲಯನ್ಸ್ ಕ್ಲಬ್ ಹಾಗೂ ಎಸ್ಒಎಸ್ ಚಿಲ್ಡ್ರನ್ಸ್ ವಿಲೇಜಸ್ ಇಂಡಿಯಾದ 55ಕ್ಕೂ ಹೆಚ್ಚು ಮಕ್ಕಳಿಗೆ ಹುಲಿ ಕುರಿತು ಚಿತ್ರಕಲಾ ಸ್ಪರ್ಧೆಯನ್ನು ಏರ್ಪಪಡಿಸಲಾಗಿತ್ತು. ಮಕ್ಕಳು ಹುಲಿ ಮುಖವಾಡ ಧರಿಸಿ ಉದ್ಯಾನದಲ್ಲಿ ಜಾಥಾ ಮಾಡುವ ಮೂಲಕ ಸಂಭ್ರಮಿಸಿದರು. ಹಾಗೆ ಪಾರ್ಕಿಗೆ ಬಂದಿದ್ದ ಸಾರ್ವಜನಿಕರು ಸಹ ಭಾಗವಹಿಸಿ ಹುಲಿಗಳು ಹಾಗೂ ಅವುಗಳ ವಾಸಸ್ಥಾನ ಎಂಬ ವಿಷಯವನ್ನು ಆಧರಿಸಿ ನಡೆಸಿದ ಕಾರ್ಯಕ್ರಮದಲ್ಲಿ ಅನೇಕ ಬಗೆಯ ಮಾಹಿತಿಯನ್ನು ಪಡೆದುಕೊಂಡರು. ಇದನ್ನೂ ಓದಿ: ಬನ್ನೇರುಘಟ್ಟದಲ್ಲಿದೆ ಆರು ತಿಂಗಳ ‘ಹಿಮಾದಾಸ್’ ಹುಲಿಮರಿ
ಹುಲಿಗಳ ಚಲನ, ವಲನಗಳ ಬಗ್ಗೆ ಸಾರ್ವಜನಿಕರಿಗೆ ಅರಣ್ಯ ಅಧಿಕಾರಿಗಳು ಶಿಬಿರದಲ್ಲಿ ಮಾಹಿತಿಯನ್ನು ನೀಡಿದರು. ಇದೇ ಸಂದರ್ಭದಲ್ಲಿ ಮಾತನಾಡಿದ ಓರ್ವ ವಿದ್ಯಾರ್ಥಿ ನಾವು ಹುಲಿ ಬಗ್ಗೆ ಸಾಕಷ್ಟು ಮಾಹಿತಿಯನ್ನು ತಿಳಿದುಕೊಂಡಿದ್ದೇವೆ ಜೊತೆಗೆ ಹುಲಿ ಚಲನವಲನ ಬಗ್ಗೆ ಮತ್ತು ಎಷ್ಟು ಆಹಾರ ಸೇವಿಸುತ್ತದೆ ಎಂಬುದರ ಬಗ್ಗೆ ಸಂಪೂರ್ಣವಾಗಿ ನಮಗೆ ಮಾಹಿತಿ ಕೊಟ್ಟಿದ್ದಾರೆ. ಈ ಒಂದು ಕಾರ್ಯಕ್ರಮದಲ್ಲಿ ಭಾಗವಹಿಸಿದಕ್ಕೆ ತುಂಬಾ ಸಂತೋಷವಾಗಿದೆ ಎಂದು ತಿಳಿಸಿದರು. ಇದೇ ಸಂದರ್ಭದಲ್ಲಿ ಅರ್ಚನಾ ಎಂಬವರು ಹಿಮ ಎಂಬ ಹುಲಿಯನ್ನು ಒಂದು ವರ್ಷಕ್ಕೆ ದತ್ತು ಪಡೆದಿದ್ದಾರೆ.
ಬೆಂಗಳೂರು: ಬನ್ನೇರುಘಟ್ಟ ಉದ್ಯಾನವನದ ಆನೆ ಮರಿಗೆ ಸುಧಾ ಮೂರ್ತಿ ಅವರ ಹೆಸರಿಡುವ ಮೂಲಕ ಉದ್ಯಾನವದ ಸಿಬ್ಬಂದಿ ಇನ್ಫೋಸಿಸ್ ಫೌಂಡೇಶನ್ ಅಧ್ಯಕ್ಷರಿಗೆ ಗೌರವ ಸಲ್ಲಿಸಿದ್ದಾರೆ.
ಇತ್ತೀಚೆಗೆ ಜೈವಿಕ ಉದ್ಯಾನವನದ ಎರಡು ಸಾಕಾನೆಗಳು ಮರಿಗಳಿಗೆ ಜನ್ಮ ನೀಡಿದ್ದವು. ಆಗಸ್ಟ್ 17 ರಂದು 45 ವರ್ಷ ವಯಸ್ಸಿನ ಸುವರ್ಣ ಆನೆ ಹೆಣ್ಣು ಮರಿಗೆ ಜನ್ಮ ನೀಡಿತ್ತು. ಇದರೊಂದಿಗೆ ಶಿಬಿರ ಆನೆಗಳ ಸಂಖ್ಯೆ 25ಕ್ಕೇರಿತ್ತು.
Happy to announce that Elephant Suvarna’s calf will be named as ‘Sudha’ to acknowledge the contribution of Chairperson, Infosys Foundation, Sudha Murthy towards the cause of wildlife conservation.Madam has kindly consented to our proposal to do so. @ZKarnataka@Infy_Foundationpic.twitter.com/DWYVAVAHSI
ಉದ್ಯಾನವನದ ಅಧಿಕಾರಿಗಳು ಆನೆ ಮರಿಗೆ ಹೆಸರಿಡಲು ಸಾರ್ವಜನಿಕರಿಂದ ಆನ್ಲೈನ್ನಲ್ಲಿ ಹೆಸರು ಸೂಚಿಸುವಂತೆ ಮನವಿ ಮಾಡಿದ್ದರು. ಈ ವೇಳೆ ಬಹುತೇಕರು ಸುಧಾ ಮೂರ್ತಿ ಅವರ ಹೆಸರನ್ನು ಸೂಚಿಸಿದ್ದರು. ಇದೇ ಆಗಸ್ಟ್ 19 ರಂದು ಸುಧಾಮೂರ್ತಿ ಅವರು 70ನೇ ವಸಂತಕ್ಕೆ ಕಾಲಿಟ್ಟಿದ್ದರು.
ಈ ಕುರಿತು ಮಾಹಿತಿ ನೀಡಿರುವ ಬನ್ನೇರುಘಟ್ಟ ಉದ್ಯಾನವನದ ಕಾರ್ಯನಿರ್ವಾಹಕ ನಿರ್ದೇಶಕಿ ವನಶ್ರೀ ಬಿಪಿನ್ ಸಿಂಗ್ ಅವರು, ಆನೆ ಮರಿಗೆ ‘ಸುಧಾ’ ಎಂದು ನಾಮಕರಣ ಮಾಡಿರುವುದಾಗಿ ತಿಳಿಸಿದ್ದರು. ಅಲ್ಲದೇ ಹಲವು ಬಾರಿ ಸುಧಾ ಮೂರ್ತಿ ಅವರೇ ವೈಯಕ್ತಿಕವಾಗಿ ಉದ್ಯಾನವನಕ್ಕೇ ಭೇಟಿ ನೀಡಿ ಕೆಲಸ ಮೇಲ್ವಿಚಾರಣೆ ಮಾಹಿತಿ ಪಡೆಯುತ್ತಿದ್ದರು ಎಂದು ನೆನಪಿಸಿಕೊಂಡಿದ್ದಾರೆ. ಗದಗ ಬಳಿ ಇರುವ ಬನ್ನೇರುಘಟ್ಟ ಉದ್ಯಾನವನದ ಮಿನಿ ಮೃಗಾಲಯದ ಅಭಿವೃದ್ಧಿಗೆ ಸುಧಾ ಮೂರ್ತಿ ಅವರು ಸಹಾಯ ಹಸ್ತಚಾಚಿದ್ದರು ಎಂದು ಅಧಿಕಾರಿ ತಿಳಿಸಿದ್ದಾರೆ.
ರಾಮನಗರ: ತಾಲ್ಲೂಕಿನ ಬಿಡದಿ ಕೈಗಾರಿಕಾ ಪ್ರದೇಶದಲ್ಲಿ ಏಳು ಅಡಿ ಉದ್ದದ ಹೆಬ್ಬಾವನ್ನು ರಕ್ಷಣೆ ಮಾಡಲಾಗಿದೆ.
ಕೈಗಾರಿಕಾ ಪ್ರದೇಶದಲ್ಲಿದ್ದ ಟಯೋಟಾ ಕಾರ್ಖಾನೆಯ ಬಳಿ ಹೆಬ್ಬಾವು ಕಾಣಿಸಿಕೊಂಡಿದ್ದು, ಕಾರ್ಖಾನೆ ಸಿಬ್ಬಂದಿಗಳು ಆತಂಕಕ್ಕೆ ಒಳಗಾಗಿದ್ದರು. ಹೆಬ್ಬಾವು ಕಂಡ ಕಾರ್ಖಾನೆ ಸಿಬ್ಬಂದಿ ಕೂಡಲೇ ಭೈರಮಂಗಲ ಗ್ರಾಮದ ಉರಗ ತಜ್ಞ ಸ್ನೇಕ್ ಗಿರಿಧರ್ ಅವರಿಗೆ ಮಾಹಿತಿ ನೀಡಿದ್ದರು.
ಸ್ಥಳಕ್ಕೆ ಭೇಟಿ ನೀಡಿದ ಸ್ನೇಕ್ ಗಿರಿಧರ್, ಹೆಬ್ಬಾವನ್ನು ರಕ್ಷಣೆ ಮಾಡಿದರು. ಈ ವೇಳೆ ಸ್ಥಳದಲ್ಲಿದ್ದ ಕಾರ್ಮಿಕರಿಗೆ ಹಾವಿನ ಕುರಿತು ಕೆಲ ವಿಶೇಷ ಮಾಹಿತಿಯನ್ನು ನೀಡಿದರು. ಅಲ್ಲದೇ ಹಾವು ಕಂಡರೆ ಕೊಲ್ಲದಿರಿ, ಹಾವುಗಳು ಮಾನವನ ಭಯದಿಂದ ಮಾತ್ರ ಕಚ್ಚುವ ಪ್ರಯತ್ನ ಮಾಡುತ್ತವೆ. ಇಲ್ಲದಿದ್ದರೆ ತಮ್ಮ ಪಾಡಿಗೆ ತಾವಿರುತ್ತವೆ. ಹಾವುಗಳು ಕಂಡ ಕೂಡಲೇ ಕರೆ ಮಾಡಿ ಮಾಹಿತಿ ನೀಡಿ ಎಂದು ಮನವಿ ಮಾಡಿದರು.
ಸದ್ಯ ರಕ್ಷಣೆ ಮಾಡಿದ ಹೆಬ್ಬಾವನ್ನು ಬನ್ನೇರುಘಟ್ಟ ರಾಷ್ಟ್ರೀಯ ವನ್ಯಜೀವಿ ಧಾಮಕ್ಕೆ ರವಾನಿಸಲಾಗಿದೆ. ಏಳು ಅಡಿ ಉದ್ದವಿರುವ ಕಾರಣ ಪ್ರವಾಸಿಗರ ವೀಕ್ಷಣೆಗೂ ಸಹ ಹೆಬ್ಬಾವನ್ನು ಬಳಸಿಕೊಳ್ಳಲು ಸಾಧ್ಯವಿದೆ ಎಂದು ಉರಗ ತಜ್ಞ ಸ್ನೇಕ್ ಗಿರಿಧರ್ ತಿಳಿಸಿದರು.