Tag: Bannerghatta National Park

  • ವಿಶ್ವದಲ್ಲೇ ಮೊದಲ ಬಾರಿಗೆ ಕರಡಿಗೆ ಕೃತಕ ಕಾಲು ಜೋಡಣೆ – ಬನ್ನೇರುಘಟ್ಟ ಜೈವಿಕ ಉದ್ಯಾನದಲ್ಲಿ ಯಶಸ್ವಿ ಕಾರ್ಯ

    ವಿಶ್ವದಲ್ಲೇ ಮೊದಲ ಬಾರಿಗೆ ಕರಡಿಗೆ ಕೃತಕ ಕಾಲು ಜೋಡಣೆ – ಬನ್ನೇರುಘಟ್ಟ ಜೈವಿಕ ಉದ್ಯಾನದಲ್ಲಿ ಯಶಸ್ವಿ ಕಾರ್ಯ

    – ಪಶು ವೈದ್ಯಕೀಯ ಕ್ಷೇತ್ರದಲ್ಲಿ ಮೈಲಿಗಲ್ಲು

    ಆನೇಕಲ್: ವಿಶ್ವದಲ್ಲೇ ಮೊದಲ ಬಾರಿಗೆ ಕರಡಿಗೆ ಕೃತಕ ಕಾಲನ್ನು ಯಶಸ್ವಿಯಾಗಿ ಜೋಡಣೆ ಮಾಡಿರುವ ಅಪರೂಪದ ಘಟನೆ ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ (Bannerghatta National Park) ನಡೆದಿದೆ.

    ಬನ್ನೇರುಘಟ್ಟ ಜೈವಿಕ ಉದ್ಯಾನವನದ ವಸಿಕರನ್ ಎಂಬ ಕರಡಿಗೆ ವೈಲ್ಡ್ ಲೈಫ್ SOS ಸಂಸ್ಥೆ ಹಾಗೂ ಕರ್ನಾಟಕ ಅರಣ್ಯ ಇಲಾಖೆ (Forest Deparment) ಸಹಯೋಗದಲ್ಲಿ ಕಳೆದ ಮೂರು ದಿನಗಳಿಂದ ಕೈಗೊಂಡಿದ್ದ ಕೃತಕ ಕಾಲು ಜೋಡಣೆ ಕಾರ್ಯ ಯಶಸ್ವಿಯಾಗಿದ್ದು, ಇದೀಗ ಮೊದಲಿನಂತೆ ನಡೆಯಲು ಪ್ರಾರಂಭಿಸಿದೆ.ಇದನ್ನೂ ಓದಿ: ಕೆಲಸದಿಂದ ತೆಗೆದಿದ್ದಕ್ಕೆ ಸಿಟ್ಟು; ಫುಡ್ ಡೆಲಿವರಿ ನೆಪದಲ್ಲಿ ವೃದ್ಧೆ ಕೈ-ಕಾಲು ಕಟ್ಟಿಹಾಕಿ 8 ಲಕ್ಷ ದರೋಡೆ

    2019ರಲ್ಲಿ ಬೇಟೆಗಾರರ ಬಲೆಗೆ ಸಿಲುಕಿ ಜೀವನ್ಮರಣದ ಹೋರಾಟ ನಡೆಸಿದ್ದ ವಸಿಕರನ್ ಕರಡಿಯನ್ನು ಬಳ್ಳಾರಿ ಅರಣ್ಯ ಪ್ರದೇಶದಿಂದ ರಕ್ಷಣೆ ಮಾಡಲಾಗಿತ್ತು. ಈ ವೇಳೆ ಹಿಂಬದಿಯ ಎಡಗಾಲು ಮುರಿದು ಕರಡಿ ನರಳಾಡುತ್ತಿತ್ತು. ಗಾಯಗೊಂಡಿದ್ದ ವಸಿಕರನ್ ಅನ್ನು ಬನ್ನೇರುಘಟ್ಟ ಕರಡಿ ಆರೈಕೆ ಕೇಂದ್ರಕ್ಕೆ ಕರೆತಂದು ಚಿಕಿತ್ಸೆ ನೀಡಲಾಗಿತ್ತು. ಬಳಿಕ ಆರೋಗ್ಯ ಸುಧಾರಣೆಯಾಗಿ, ಮೂರು ಕಾಲಿನಿಂದ ನಡೆಯಲು ಅಭ್ಯಾಸ ಮಾಡಿಕೊಂಡಿತ್ತು.

    ಈ ಸಮಯದಲ್ಲಿ ಪ್ರಾಣಿಗಳ ಜಾಗತಿಕ ಮೂಳೆ ತಜ್ಞರಾದ ಅಮೆರಿಕದ ಡೆರಿಕ್ ಕಂಪನಾ ಬನ್ನೇರುಘಟ್ಟಕ್ಕೆ ಭೇಟಿ ನೀಡಿದ್ದರು. ಆಗ ಕರಡಿ ವಸಿಕರನ್ ಓಡಾಡುವುದನ್ನ ಗಮನಿಸಿದ್ದರು. ಬಳಿಕ ಮಣ್ಣು ತೋಡಲು, ಮರ ಹತ್ತಲು, ಮೇವು ಸಂಗ್ರಹಕ್ಕೆ ಕೃತಕ ಕಾಲನ್ನು ಸಿದ್ಧಪಡಿಸಿದರು. ಸದ್ಯ ಇದೀಗ ಕರಡಿ ಕೃತಕ ಕಾಲಿನಿಂದ ಮೊದಲಿನ ಹಾಗೆ ಓಡಾಡುತ್ತಿದೆ.

    ಈ ಕುರಿತು ಡೆರಿಕ್ ಕಂಪನಾ ಅವರು ಪ್ರತಿಕ್ರಿಯಿಸಿದ್ದು, ಪ್ರಾಣಿ ಎಂಬುದು ನನಗೆ ಹೊಸ ವಿಷಯ ಕಲಿಸುತ್ತದೆ. ಆದರೆ, ವಸಿಕರನ್ ಪ್ರಕರಣದಲ್ಲಿ ಇದೊಂದು ಅತ್ಯದ್ಭುತವೇ ಹೌದು. ಕರಡಿಗೆ ಕೃತಕ ಕಾಲು ಸಿದ್ಧಪಡಿಸುವುದು ದೊಡ್ಡ ಸವಾಲಾಗಿತ್ತು. ಆದರೆ, ವಸಿಕರನ್ ನಡಿಗೆಯನ್ನು ಕಂಡು ನಮ್ಮ ಶ್ರಮಕ್ಕೆ ಬೆಲೆ ಸಿಕ್ಕಂತಾಗಿದೆ ಎಂದಿದ್ದಾರೆ. ಇದನ್ನೂ ಓದಿ: 579 ಕೋಟಿ ಜೆರ್ಸಿ ಪ್ರಾಯೋಜಕತ್ವ – ಪ್ರತಿ ಪಂದ್ಯಕ್ಕೆ ಬಿಸಿಸಿಐಗೆ ಸಿಗಲಿದೆ ಕೋಟಿ ಕೋಟಿ ರೂ.

  • ಬನ್ನೇರುಘಟ್ಟ To ಜಪಾನ್ – 4 ಆನೆಗಳ ಯಶಸ್ವಿ ಏರ್‌ಲಿಫ್ಟ್!

    ಬನ್ನೇರುಘಟ್ಟ To ಜಪಾನ್ – 4 ಆನೆಗಳ ಯಶಸ್ವಿ ಏರ್‌ಲಿಫ್ಟ್!

    ಆನೆಕಲ್: ಬನ್ನೇರುಘಟ್ಟ ಜೈವಿಕ ಉದ್ಯಾನವನದಿಂದ 1 ಗಂಡು ಹಾಗೂ 3 ಆನೆಗಳನ್ನು ಯಶಸ್ವಿಯಾಗಿ ಜಪಾನ್‍ಗೆ ವಿಮಾನದ ಮೂಲಕ ರವಾನೆ ಮಾಡಲಾಗಿದೆ.

    ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಕತಾರ್ ಏರ್‌ವೇಸ್ ಸರಕು ಸಾಗಾಣಿಕೆ ವಿಮಾನದ ಮೂಲಕ ಜಪಾನ್‍ಗೆ ರವಾನೆ ಮಾಡಲಾಗಿದೆ.‌ ವಿಮಾನದಲ್ಲಿ ಕೇಜ್‌ಗಳಲ್ಲಿ ಆನೆಗಳನ್ನು ಇರಿಸಲಾಗಿತ್ತು. ಜಪಾನ್‍ನ ಓಸಾಕಾ ಕಾನ್ಲೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸರಕು ಸಾಗಾಣಿಕೆ ವಿಮಾನ ಲ್ಯಾಂಡ್ ಆಗಿದೆ. ಅಲ್ಲಿಂದ ಹಿಮೇಜಿ ಸೆಂಟ್ರಲ್ ಪಾರ್ಕ್‍ಗೆ ಆನೆಗಳನ್ನು ಟ್ರಕ್‌ ಮೂಲಕ ರವಾನೆ ಮಾಡಲಾಗಿದೆ. ಇದನ್ನೂ ಓದಿ: ಬನ್ನೇರುಘಟ್ಟ ಜೈವಿಕ ಉದ್ಯಾನವನದಿಂದ ಇತಿಹಾಸದಲ್ಲೇ ಮೊದಲ ಬಾರಿಗೆ ಪ್ರಾಣಿಗಳ ವಿನಿಮಯ

    ಬನ್ನೇರುಘಟ್ಟ ಜೈವಿಕ ಉದ್ಯಾನವನದ 1 ಗಂಡು ಮತ್ತು 3 ಹೆಣ್ಣು ಆನೆಗಳಾದ ಸುರೇಶ್ (8), ಗೌರಿ (9), ಶ್ರುತಿ (7) ತುಳಸಿ (5) ಜಪಾನ್‍ಗೆ ತೆರಳಿವೆ. ಆನೆಗಳ ಜೊತೆ ಬನ್ನೇರುಘಟ್ಟ ಜೈವಿಕ ಉದ್ಯಾನವನದ ಸಿಬ್ಬಂದಿ ಸಹ ತೆರಳಿದ್ದಾರೆ. ಅಲ್ಲಿನ ಪಾರ್ಕ್ ಸಿಬ್ಬಂದಿಗೆ ಅವರು ತರಬೇತಿ ನೀಡಲಿದ್ದಾರೆ.‌

    ಈ ಆನೆಗಳಿಗೆ ಪ್ರತಿಯಾಗಿ 4 ಚೀತಾ, 4 ಜಾಗ್ವಾರ್, 4 ಪೂಮಾ, 3 ಚಿಂಪಾಂಜಿ ಮತ್ತು 8 ಕ್ಯಾಪುಚಿನ್ ಕೋತಿಗಳನ್ನು ತರಲು ತೀರ್ಮಾನಿಸಲಾಗಿದೆ. ಬನ್ನೇರುಘಟ್ಟ ಜೈವಿಕ ಉದ್ಯಾನವನದ ಇತಿಹಾಸದಲ್ಲೇ ಅಂತಾರಾಷ್ಟ್ರೀಯ ಪ್ರಾಣಿಗಳ ವಿನಿಮಯ ಮೊದಲಾಗಿದೆ. ಇದನ್ನೂ ಓದಿ: ಪ್ರಾಣಿ ಪ್ರಿಯರಿಗೆ ಟಿಕೆಟ್ ದರ ಏರಿಕೆ ಶಾಕ್ – ಬನ್ನೇರುಘಟ್ಟ ಜೈವಿಕ ಉದ್ಯಾನ ಟಿಕೆಟ್ ದರ 20% ಏರಿಕೆ

  • ಪ್ರಾಣಿ ಪ್ರಿಯರಿಗೆ ಟಿಕೆಟ್ ದರ ಏರಿಕೆ ಶಾಕ್ – ಬನ್ನೇರುಘಟ್ಟ ಜೈವಿಕ ಉದ್ಯಾನ ಟಿಕೆಟ್ ದರ 20% ಏರಿಕೆ

    ಪ್ರಾಣಿ ಪ್ರಿಯರಿಗೆ ಟಿಕೆಟ್ ದರ ಏರಿಕೆ ಶಾಕ್ – ಬನ್ನೇರುಘಟ್ಟ ಜೈವಿಕ ಉದ್ಯಾನ ಟಿಕೆಟ್ ದರ 20% ಏರಿಕೆ

    ಬೆಂಗಳೂರು ಗ್ರಾಮಾಂತರ: ದಿನ ಬಳಕೆ ವಸ್ತುಗಳ ಬೆಲೆ ಏರಿಕೆ ನಡುವೆ ಪ್ರಾಣಿ ಪ್ರಿಯರಿಗೆ ಸರ್ಕಾರ ಶಾಕ್‌ ನೀಡಿದೆ. ಬನ್ನೇರುಘಟ್ಟ ಜೈವಿಕ ಉದ್ಯಾನದ (Bannerghatta National Park) ಟಿಕೆಟ್ ದರವನ್ನು 20% ರಷ್ಟು ಸರ್ಕಾರ ಏರಿಕೆ ಮಾಡಿದ್ದು, ಆ.1 ರಿಂದ ಜಾರಿಗೆ ಬರಲಿದೆ.

    ಬೆಂಗಳೂರು ಹೊರವಲಯದ ಬನ್ನೇರುಘಟ್ಟ ಜೈವಿಕ ಉದ್ಯಾನದಲ್ಲಿನ ಟಿಕೆಟ್ ದರ ಏರಿಕೆಗೆ ಸರ್ಕಾರ ಅಸ್ತು ಎಂದಿದೆ. 20% ರಷ್ಟು ಟಿಕೆಟ್ ದರ ಹೆಚ್ಚಳಕ್ಕೆ ಕರ್ನಾಟಕ ಮೃಗಾಲಯ ಪ್ರಾಧಿಕಾರ ಒಪ್ಪಿಗೆ ಸೂಚಿಸಿದ್ದು, ಅಂತಿಮ ಆದೇಶ ಇನ್ನೇನು ಕೆಲವೇ ದಿನಗಳಲ್ಲಿ ಹೊರಬೀಳಲಿದೆ. ಆ.1 ರಿಂದ ಟಿಕೆಟ್ ದರ ಏರಿಕೆ ಅಧಿಕೃತವಾಗಲಿದೆ. ಸದ್ಯ ಬನ್ನೇರುಘಟ್ಟ ಜೈವಿಕ ಉದ್ಯಾನದ ಝೂ ವೀಕ್ಷಣೆಗೆ ವಯಸ್ಕರಿಗೆ ಹಾಲಿ ಟಿಕೆಟ್ ದರ 100 ರೂ. ಇದ್ದು, 120 ರೂ. ಆಗಲಿದೆ. ಮಕ್ಕಳಿಗೆ ಹಾಲಿ ದರ 50 ರೂ. ಇದ್ದು, 60 ರೂ. ಆಗಲಿದೆ. ಹಿರಿಯ ನಾಗರಿಕರಿಗೆ ಹಾಲಿ ಟಿಕೆಟ್ ದರ 60 ರೂ. ಇದ್ದು, 70 ರೂ. ಆಗಲಿದೆ. ಅಲ್ಲದೇ, ಸಫಾರಿ ಕಾಂಬೋ ಪ್ಯಾಕ್ ದರ ಕೂಡ ಹೆಚ್ಚಳವಾಗಿದ್ದು, ವಾರದ ದಿನಗಳಲ್ಲಿ 350 ರೂ. ಇದ್ದದ್ದು, 370 ರೂ. ಆಗಲಿದೆ. ವಾರದ ಕೊನೆ ದಿನಗಳಲ್ಲಿ ಅಂದರೆ ಶನಿವಾರ ಮತ್ತು ಭಾನುವಾರ 400 ರೂ. ದರ 420 ರೂ. ಆಗಲಿದೆ. ಇದನ್ನೂ ಓದಿ: ಮಂತ್ರಾಲಯ | ಸ್ನಾನಘಟ್ಟದ ಬಳಿ ಈಜಲು ಹೋಗಿದ್ದ ಮೂವರು ಯುವಕರು ನಾಪತ್ತೆ

    ಪ್ರಾಣಿಗಳ ಆಹಾರ, ನಿರ್ವಹಣೆ ಸಿಬ್ಬಂದಿ ವೇತನ ಹೆಚ್ಚಳವಾಗಿದೆ. ಆದರೆ, ಕಳೆದ ಐದು ವರ್ಷದಿಂದ ಮೃಗಾಲಯದ ಟಿಕೆಟ್ ದರ ಏರಿಕೆ ಆಗಿಲ್ಲ. ಬನ್ನೇರುಘಟ್ಟ ಜೈವಿಕ ಉದ್ಯಾನವನ ಸ್ವಾಯತ್ತ ಸಂಸ್ಥೆಯಾಗಿದ್ದು, ಪ್ರವಾಸಿಗರ ಟಿಕೆಟ್ ಹಣವೇ ಆದಾಯದ ಮೂಲವಾಗಿದೆ. ಹಾಗಾಗಿ, 50% ರಷ್ಟು ದರ ಹೆಚ್ಚಳಕ್ಕೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದೆ. ಆದರೆ, ಸರ್ಕಾರ 20% ರಷ್ಟು ಟಿಕೆಟ್ ದರ ಹೆಚ್ಚಳಕ್ಕೆ ಒಪ್ಪಿಗೆ ಸೂಚಿಸಿದೆ.

    ಮೃಗಾಲಯ ಪ್ರಾಧಿಕಾರದ ಆದೇಶದಂತೆ ಆ.1 ರಿಂದ ಹೊಸ ದರ ಜಾರಿಗೆ ಬರಲಿದೆ ಎಂದು ಬನ್ನೇರುಘಟ್ಟ ಜೈವಿಕ ಉದ್ಯಾನದ ಕಾರ್ಯನಿರ್ವಾಹಕ ನಿರ್ದೇಶಕ ಸೂರ್ಯ ಸೇನ್ ತಿಳಿಸಿದ್ದಾರೆ. ಬನ್ನೇರುಘಟ್ಟ ಜೈವಿಕ ಉದ್ಯಾನದ ಟಿಕೆಟ್ ದರ 20% ರಷ್ಟು ಏರಿಕೆಗೆ ಪ್ರವಾಸಿಗರ ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ. ಈಗಾಗಲೇ ಬೆಲೆ ಏರಿಕೆ ಜನರನ್ನು ಕಂಗೆಡಿಸಿದೆ. ಇದರ ನಡುವೆ ದಿನನಿತ್ಯದ ಜಂಜಾಟದಿಂದ ರೋಸಿ ಹೋಗಿ ಮನರಂಜನೆಗಾಗಿ ಮಕ್ಕಳಿಗೆ ಅಪರೂಪದ ವನ್ಯಜೀವಿಗಳನ್ನು ಪರಿಚಯಿಸಲು ದೂರದ ಊರುಗಳಿಂದ ಕುಟುಂಬದೊಂದಿಗೆ ಪ್ರವಾಸಿಗರು ಬರ್ತಾರೆ. ದೇಶವಿದೇಶಗಳಿಂದಲೂ ಸಾಕಷ್ಟು ಪ್ರವಾಸಿಗರು ಬರ್ತಾರೆ. ಬನ್ನೇರುಘಟ್ಟ ಜೈವಿಕ ಉದ್ಯಾನವನಕ್ಕೆ ಸಾಕಷ್ಟು ಹಣ ಕೂಡ ಸಂಗ್ರಹ ಆಗುತ್ತಿದೆ. ಆದರೂ, ಟಿಕೆಟ್ ದರ ಏರಿಕೆ ಮಾಡುತ್ತಿರುವುದರ ಬಿಸಿ ಪ್ರವಾಸಿಗರಿಗೆ ತಟ್ಟಲಿದೆ. ಈಗಾಗಲೇ ಬನ್ನೇರುಘಟ್ಟ ಜೈವಿಕ ಉದ್ಯಾನವನ ಅಭಿವೃದ್ಧಿ ಹೊಂದಿದೆ. ಪ್ರಾಣಿಗಳ ನಿರ್ವಹಣೆ ಮತ್ತು ಸಿಬ್ಬಂದಿ ವೇತನಕ್ಕೆ ಸರ್ಕಾರದಿಂದ ಅನುದಾನ ಪಡೆಯಲಿ ಎನ್ನುತಾರೆ. ಕೆಲ ಪ್ರವಾಸಿಗರು ವನ್ಯಜೀವಿಗಳ ನಿರ್ವಹಣೆಗಾಗಿ ಟಿಕೆಟ್ ದರ ಹೆಚ್ಚಿಸಲಿ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಶಿರಡಿ ಸಾಯಿಬಾಬಾನ ದರ್ಶನ ಪಡೆದ ಡಿಕೆಶಿ – ಪ್ರಾರ್ಥನೆ ಫಲ ನೀಡಲಿದೆ ಅಂತ ಪೋಸ್ಟ್

    ಬನ್ನೇರುಘಟ್ಟ ಜೈವಿಕ ಉದ್ಯಾನ ಟಿಕೆಟ್ ದರ ಹೆಚ್ಚಳದ ಬಗ್ಗೆ ಪ್ರವಾಸಿಗರಲ್ಲಿ ಭಿನ್ನಾಭಿಪ್ರಾಯ ವ್ಯಕ್ತವಾಗಿದೆ. ಆದರೂ, ಪ್ರವಾಸಿಗರಿಗೆ ಹೆಚ್ಚಿನ ಸೌಲಭ್ಯ ಮತ್ತು ಮತ್ತಷ್ಟು ಅಪರೂಪದ ಪ್ರಾಣಿಗಳನ್ನು ಕಾಣುವಂತಾಗಬೇಕು ಎಂದು ಆಗ್ರಹ ಕೂಡ ಕೇಳಿ ಬರುತ್ತಿದೆ.

  • ಬನ್ನೇರುಘಟ್ಟ ಜೈವಿಕ ಉದ್ಯಾನವನಕ್ಕೆ ನೂತನ ಅತಿಥಿಗಳ ಆಗಮನ – ನಾಲ್ಕು ಮರಿಗಳಿಗೆ ಜನ್ಮ ನೀಡಿದ `ಹಿಮಾ’!

    ಬನ್ನೇರುಘಟ್ಟ ಜೈವಿಕ ಉದ್ಯಾನವನಕ್ಕೆ ನೂತನ ಅತಿಥಿಗಳ ಆಗಮನ – ನಾಲ್ಕು ಮರಿಗಳಿಗೆ ಜನ್ಮ ನೀಡಿದ `ಹಿಮಾ’!

    ಆನೇಕಲ್: ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ (Bannerghatta National Park) 6 ವರ್ಷದ ಹಿಮಾ ಎಂಬ ಹುಲಿ (Tiger) ನಾಲ್ಕು ಮರಿಗಳಿಗೆ ಜನ್ಮ ನೀಡಿದೆ. ತಾಯಿ ಮತ್ತು ಮರಿಗಳು ಆರೋಗ್ಯವಾಗಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಹಿಮಾ ಜೂನ್ 2024 ರಲ್ಲಿ ಮೊದಲ ಬಾರಿಗೆ ಮರಿಗಳಿಗೆ ಜನ್ಮ ನೀಡಿತ್ತು. ಈಗ ಮತ್ತೆ ಮರಿಗಳಿಗೆ ಜನ್ಮ ನೀಡಿದೆ.

    8 ವರ್ಷದ ಆರುಣ್ಯ ಎಂಬ ಹುಲಿ ಮೊದಲ ಬಾರಿಗೆ ಎರಡು ಮರಿಗಳಿಗೆ ಜನ್ಮ ನೀಡಿದೆ. ಈ ಹೆಣ್ಣು ಹುಲಿಯನ್ನು ಪ್ರಾಣಿ ವಿನಿಮಯ ಕಾರ್ಯಕ್ರಮದ ಅಡಿಯಲ್ಲಿ ತಮಿಳುನಾಡಿನ ಚೆನ್ನೈನ ಅರಿಗ್ನಾರ್ ಅನ್ನಾ ಜೂಲಾಜಿಕಲ್ ಪಾರ್ಕ್‌ನಿಂದ ತಂದಿರುವ ಬಿಳಿ ಹುಲಿ ವೀರ್‌ಗೆ ಜೊತೆ ಮಾಡಲಾಗಿತ್ತು. ತಾಯಿ ಮತ್ತು ಮರಿಗಳು ಎರಡೂ ಆರೋಗ್ಯವಾಗಿವೆ.

    ಸಫಾರಿಯಲ್ಲಿರುವ ತಾಯಿ ಆರುಣ್ಯ ಜೊತೆ ಎರಡು ಮರಿಗಳು ಆರೋಗ್ಯವಾಗಿದ್ದು ತಾಯಿ ಮರಿಗಳಿಗೆ ಹಾಲುಣಿಸುತ್ತಿದೆ. ಹಿಮಾ ನಾಲ್ಕು ಮರಿಗಳಿಗೆ ಜನ್ಮ ನೀಡಿದ ಕೆಲವು ಹೊತ್ತು ಮಾತ್ರ ಮರಿಗಳ ಜೊತೆಗೆ ಇತ್ತು. ಅದಾದ ಬಳಿಕ ಮರಿಗಳಿಗೆ ಹಾಲುಣಿಸದೆ ದೂರವಾಗಿತ್ತು.

    ಹಿಮಾ ಜನ್ಮ ನೀಡಿದ ಮರಿಗಳಿಗೆ ಬನ್ನೇರುಘಟ್ಟ ಜೈವಿಕ ಉದ್ಯಾನವನದ ಆಸ್ಪತ್ರೆಯಲ್ಲಿ ಆರೈಕೆ ಮಾಡಲಾಗುತ್ತಿದೆ. ಪ್ರತಿದಿನ ಬೆಳಗ್ಗೆಯಿಂದ ರಾತ್ರಿಯವರೆಗೆ ಮರಿಗಳಿಗೆ ಆಡಿನ ಹಾಲನ್ನು ನೀಡಲಾಗುತ್ತಿದೆ. ಮರಿಗಳ ಆರೈಕೆಗಾಗಿ ಸಿಬ್ಬಂದಿ ನೇಮಕ ಮಾಡಲಾಗಿದೆ. ವೈದ್ಯರು ಮರಿಗಳನ್ನು ನೋಡಿಕೊಳ್ಳುತ್ತಿದ್ದು, ನಾಲ್ಕು ಮರಿಗಳನ್ನು ಪ್ರತ್ಯೇಕವಾಗಿಟ್ಟು ಆರೈಕೆ ಮಾಡುತ್ತಿದ್ದಾರೆ.

  • ಬೆಂಗಳೂರು ಹೊರವಲಯದಲ್ಲಿ ಮತ್ತೆ ಚಿರತೆ ಹಾವಳಿ – ಒಬ್ಬೊಬ್ಬೊರೆ ಓಡಾಡದಂತೆ ಎಚ್ಚರಿಕೆ

    ಬೆಂಗಳೂರು ಹೊರವಲಯದಲ್ಲಿ ಮತ್ತೆ ಚಿರತೆ ಹಾವಳಿ – ಒಬ್ಬೊಬ್ಬೊರೆ ಓಡಾಡದಂತೆ ಎಚ್ಚರಿಕೆ

    ಬೆಂಗಳೂರು/ಆನೇಕಲ್‌: ನಗರದ ಹೊರವಲಯಗಳಲ್ಲಿ ಚಿರತೆ (Leopard) ಹಾವಳಿ ಹೆಚ್ಚಾಗಿದೆ. ಕಾಡಿನಿಂದ ನಾಡಿಗೆ ಬಂದು ಜನರಲ್ಲಿ ಆತಂಕ ಹೆಚ್ಚಿಸಿವೆ. ಬನ್ನೇರುಘಟ್ಟ (Bannerghatta National Park) ವ್ಯಾಪ್ತಿಯಲ್ಲೂ ಚಿರತೆ ಕಾಣಿಸಿಕೊಳ್ಳುತ್ತಿದ್ದು, ಜನರು ಆತಂಕದಲ್ಲಿ ಜೀವನ ನಡೆಸುತ್ತಿದ್ದಾರೆ.

    ಬನ್ನೇರುಘಟ್ಟ ಕಾಡಂಚಿನ ಗ್ರಾಮದ ಬಡಾವಣೆಗಳಲ್ಲಿ ಪದೇ ಪದೇ ಚಿರತೆ ಪ್ರತ್ಯಕ್ಷವಾಗುತ್ತಿರುವುದು ನಿವಾಸಿಗಳಲ್ಲಿ ಆತಂಕ ಸೃಷ್ಟಿ ಮಾಡಿದೆ. ಇದನ್ನೂ ಓದಿ: ದೇಸಿ ಬೆಳ್ಳುಳ್ಳಿ ದುಬಾರಿ – ನಿಷೇಧಿತ ಚೀನಾ ಬೆಳ್ಳುಳ್ಳಿ ಚಿಕ್ಕಬಳ್ಳಾಪುರಕ್ಕೂ ಎಂಟ್ರಿ?

    ಹೌದು. ಬೆಂಗಳೂರು (Bengaluru) ಹೂರವಲಯದ ಆನೇಕಲ್ (Anekal) ತಾಲೂಕಿನ ಜಿಗಣಿ ಸಮೀಪದ ನಿಸರ್ಗ ಬಡಾವಣೆ ಮತ್ತು ಲೋಟಸ್ ಬಡಾವಣೆ ಸುತ್ತಮುತ್ತ ಚಿರತೆ ಓಡಾಡುತ್ತಿದ್ದು ಚಿರತೆ ಓಡಾಟದ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಈ ವಿಚಾರ ಅರಣ್ಯ ಇಲಾಖೆ ಅಧಿಕಾರಿಗಳಿಗೆ ಮಾಹಿತಿ ತಿಳಿಸಿದ್ದು ಅರಣ್ಯ ಇಲಾಖೆ ಅಧಿಕಾರಿಗಳು ಕಳೆದ ರಾತ್ರಿ ಚಿರತೆಗಾಗಿ ಹುಡುಕಾಟ ನಡೆಸಿದ್ದಾರೆ. ಆದ್ರೆ ರಾತ್ರಿ ಚಿರತೆ ಎಲ್ಲೂ ಸಹ ಪತ್ತೆ ಆಗಿಲ್ಲ. ಇನ್ನು ನಿಸರ್ಗ ಬಡಾವಣೆ ಸೇರಿದಂತೆ ಸುತ್ತಮುತ್ತ ಇರುವ ಎಲ್ಲಾ ಬಡಾವಣೆ ನಿವಾಸಿಗಳು ರಾತ್ರಿ ಸಮಯದಲ್ಲಿ ಒಬ್ಬೊಬ್ಬರೇ ಆಚೆ ಓಡಾಡಬೇಡಿ ಎಂದು ಅರಣ್ಯ ಇಲಾಖೆಯಿಂದ ಎಚ್ಚರಿಕೆ ನೀಡುತ್ತಿದ್ದಾರೆ.

    ಜೊತೆಗೆ ಇತ್ತೀಚಿಗೆ ಬನ್ನೇರುಘಟ್ಟ ಕಾಡಂಚಿನ ಗ್ರಾಮ ಹಾಗೂ ಬಡಾವಣೆಗಳಲ್ಲಿ ಆದಷ್ಟು ಎಚ್ಚರಿಕೆಯಿಂದ ಇರಬೇಕು ಎಂದು ಅರಣ್ಯ ಇಲಾಖೆ ಅಧಿಕಾರಿಗಳು ಸೂಚನೆ ನೀಡುತ್ತಿದ್ದಾರೆ. ಇನ್ನು ರಾತ್ರಿ ಸಹ ಅರಣ್ಯ ಇಲಾಖೆ ಕಾರ್ಯಚರಣೆ ನಡೆಸಿದ್ದು, ಆದಷ್ಟು ಬೇಗ ಚಿರತೆ ಸೆರೆಹಿಡಿಯಲು ಹರಸಾಹಸ ಪಡುತ್ತಿದ್ದಾರೆ. ಇದನ್ನೂ ಓದಿ: ದಾವಣಗೆರೆ | 7 ತಿಂಗಳಲ್ಲಿ 135 ಶಿಶುಗಳು, 28 ಗರ್ಭಿಣಿಯರು ಸಾವು!

  • ಬನ್ನೇರುಘಟ್ಟ ಉದ್ಯಾನದಲ್ಲಿ ಮಾರಕ ವೈರಸ್‌ಗೆ 7 ಚಿರತೆ ಮರಿಗಳು ಸಾವು

    ಬನ್ನೇರುಘಟ್ಟ ಉದ್ಯಾನದಲ್ಲಿ ಮಾರಕ ವೈರಸ್‌ಗೆ 7 ಚಿರತೆ ಮರಿಗಳು ಸಾವು

    ಆನೇಕಲ್: ಮಾರಕ ವೈರಸ್‌ಗೆ 7 ಚಿರತೆ ಮರಿಗಳು ಸಾವನ್ನಪ್ಪಿರುವ ಘಟನೆ ಬನ್ನೇರುಘಟ್ಟ ಜೈವಿಕ ಉದ್ಯಾನದಲ್ಲಿ (Bannerghatta National Park) ನಡೆದಿದೆ. ಪೆಲಿನ್ ಪ್ಯಾನ್ಲೂಕೋಪೇನಿಯಾ (Feline Panleukopenia Virus) ಎಂಬ ಮಾರಕ ವೈರಸ್‌ಗೆ ಚಿರತೆ ಮರಿಗಳು ಬಲಿಯಾಗಿವೆ ಎನ್ನಲಾಗಿದೆ.

    ಬೆಕ್ಕಿನಿಂದ ಹರಡುವ‌ ಮಾರಕ ರೋಗ ಇದು. ಮೊದಲಿಗೆ ಆಗಸ್ಟ್ 22 ರಂದು ಕಾಣಿಸಿಕೊಂಡಿತ್ತು. ಆಗಸ್ಟ್ 22 ರಿಂದ ಸೆಪ್ಟೆಂಬರ್ 5ರ ಅವಧಿಯಲ್ಲಿ 7 ಚಿರತೆಗಳ ಸಾವು ಕಂಡಿವೆ. ಮನೆಯಲ್ಲಿ ಬೆಕ್ಕು ಸಾಕಿದ್ದ ಅನಿಮಲ್ ಕೀಪರ್‌ನಿಂದ ಸೋಂಕು ಹರಡಿರುವ ಸಾಧ್ಯತೆ ಇದೆ ಎಂದು ತಿಳಿಸಲಾಗಿದೆ. ಇದನ್ನೂ ಓದಿ: ಲಕ್ನೋದಲ್ಲಿ ಇಲಿ ಹಿಡಿಯೋದಕ್ಕೆ 69 ಲಕ್ಷ ರೂ. ಖರ್ಚು ಮಾಡಿದ ರೈಲ್ವೆ

    ರಾಜ್ಯದ ನಾನಾ ಭಾಗಗಳಿಂದ ರೈತರ ಜಮೀನುಗಳ ಬಳಿ ಸಿಕ್ಕಿದ್ದ ಚಿರತೆ ಮರಿಗಳು ಇವಾಗಿದ್ದವು. ಚಿರತೆ ಮರಿಗಳನ್ನ ರಕ್ಷಣೆ ಮಾಡಿ ಬನ್ನೇರುಘಟ್ಟ ಜೈವಿಕ ಉದ್ಯಾನಕ್ಕೆ ತರಲಾಗಿತ್ತು. ಮಾರಕ ರೋಗಕ್ಕೆ ತುತ್ತಾಗಿ ಈಗ ಏಳು ಚಿರತೆ ಮರಿಗಳ ಮೃತಪಟ್ಟಿವೆ.

    ಒಂದು ವರ್ಷದವರೆಗೆ ಮರಿಗಳಿಗೆ ಯಾವುದೇ ವ್ಯಾಕ್ಸಿನೇಷನ್ ನೀಡುವಂತಿಲ್ಲ. 11 ಜನರ ಕಮಿಟಿ‌ ಮಾಡಿ ಬೂಸ್ಟರ್ ಡೋಸ್ ನೀಡಿ ಕಂಟ್ರೋಲ್‌ ಮಾಡಲು ಕ್ರಮ ವಹಿಸಲಾಗಿತ್ತು. ಸೋಂಕು ತಗುಲಿದ ಬಳಿಕ ಜೀರ್ಣ ಕ್ರಿಯೆ ಆಗದೇ ರಕ್ತ ವಾಂತಿಯಾಗಿ ಪ್ರಾಣ ಬಿಟ್ಟಿವೆ. ಇದನ್ನೂ ಓದಿ: ಕುರುಡುಮಲೆ ವಿನಾಯಕನ ಹುಂಡಿಗೆ 2 ಕಂತೆ ಹಣ ಹಾಕಿದ ಯಡಿಯೂರಪ್ಪ – ಎಲ್ಲರಲ್ಲೂ ಅಚ್ಚರಿ

    ಚಿರತೆ, ಹುಲಿ, ಸಿಂಹ ಸೇರಿದಂತೆ ಎಲ್ಲಾ ಕೇಜ್‌ಗಳಿಗೆ ಬರ್ನಿಂಗ್ ಮಾಡಿ ಜಾಗೃತಿ ವಹಿಸಲಾಗಿದೆ. ಬ್ಲೀಚಿಂಗ್ ಪೌಡರ್, ಔಷಧಿ ಸಿಂಪಡಣೆ ಮಾಡಿ ಸ್ವಚ್ಛತೆಗೆ ಆದ್ಯತೆ ನೀಡಲಾಗಿದೆ. ವೈರಾಣು ನಿಯಂತ್ರಣಕ್ಕಾಗಿ ಅಧಿಕಾರಿಗಳು ಮುಂಜಾಗ್ರತಾ ಕ್ರಮ ವಹಿಸಿದ್ದಾರೆ.

    ವಿಶೇಷ ತಜ್ಞರು ವೈದ್ಯರ ಸಮಿತಿ ರಚನೆ ಮಾಡಿ ವೈರಸ್ ನಿಯಂತ್ರಣಕ್ಕೆ ಮುಂದಾಗಿದ್ದಾರೆ. ಹೆಲ್ತ್ ಕಮಿಟಿಯಲ್ಲಿ ಬನ್ನೇರುಘಟ್ಟ ಕಾರ್ಯ ನಿರ್ವಾಹಕ ಅಧಿಕಾರಿ ಸೂರ್ಯ ಸೇನ್, ಡಾ.ರವಿಂದ್ರ ಹೆಗ್ಡೆ, ಡಾ. ಉಮಾಶಂಕರ್, ಮಂಜುನಾಥ್. ವಿಜಯ್ ಇದ್ದಾರೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಕಣ್ಣು ಬಿಡುವ ಮುನ್ನವೇ ತಾಯಿಯಿಂದ ಬೇರ್ಪಟ್ಟ ಸಿಂಹದ ಮರಿಗಳು – ಮೇಕೆಯೇ ಅಮ್ಮ

    ಕಣ್ಣು ಬಿಡುವ ಮುನ್ನವೇ ತಾಯಿಯಿಂದ ಬೇರ್ಪಟ್ಟ ಸಿಂಹದ ಮರಿಗಳು – ಮೇಕೆಯೇ ಅಮ್ಮ

    – ಅಪರೂಪದ ಕಾರ್ಯಕ್ಕೆ ಸಾಕ್ಷಿಯಾಯ್ತು ಬನ್ನೇರುಘಟ್ಟ ಬಯೋಲಾಜಿಕಲ್ ಪಾರ್ಕ್

    ಆನೇಕಲ್ : ಕಣ್ಣು ಬಿಡುವ ಮುನ್ನವೇ ತನ್ನ ತಾಯಿಯಿಂದ ಬೇರ್ಪಟ್ಟಿದ್ದ ಸಿಂಹದ ಮರಿಗಳಿಗೆ ಹೊಸ ತಾಯಿಯನ್ನು ನೀಡುವ ಮೂಲಕ ಅವುಗಳಿಗೆ ಮರುಜೀವ ನೀಡಿರುವ ಅಪರೂಪದ ಕಾರ್ಯಕ್ಕೆ ಬನ್ನೇರುಘಟ್ಟ ಬಯೋಲಾಜಿಕಲ್ ಪಾರ್ಕ್ ಸಾಕ್ಷಿಯಾಗಿದೆ.

    ನಗರದ ಹೊರವಲಯದ ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ ಕಳೆದ ಒಂದು ತಿಂಗಳ ಹಿಂದೆ ಸನಾ ಹಾಗೂ ಶಂಕರ್ ಎಂಬ ಸಿಂಹಗಳು ಮುದ್ದಾದ ಸಿಂಹದ ಮರಿಗಳಿಗೆ ಜನ್ಮ ನೀಡಿದ್ದವು. ಒಂದು ತಿಂಗಳ ಹಿಂದೆ ಸನಾ 4 ಸಿಂಹದ ಮರಿಗಳಿಗೆ ಜನ್ಮ ನೀಡಿತ್ತು. ಆದರೆ ಹುಟ್ಟಿದ್ದ ಒಂದೇ ದಿನಕ್ಕೆ 1 ಮರಿಯನ್ನ ತಿಂದು ಹಾಕಿದ್ದ ಸನಾ ಮತ್ತೊಂದು ಮರಿಯನ್ನ ತುಳಿದು ಕೊಂದಿತ್ತು. ಇನ್ನುಳಿದ ಎರಡು ಮರಿಗಳ ಆರೈಕೆಯನ್ನು ಮಾಡುವ ಸ್ಥಿತಿಯಲ್ಲಿ ಆಕೆ ಇರಲಿಲ್ಲ. ಹೀಗಾಗಿ ಈ ಎರಡು ಮರಿಗಳನ್ನ ಕಣ್ಣು ಬಿಡುವ ಮುನ್ನವೇ ಉದ್ಯಾನವನದ ಅಧಿಕಾರಿಗಳು ತಾಯಿ ಸನಾಳಿಂದ ಅನಿವಾರ್ಯವಾಗಿ ದೂರ ಮಾಡಿ ಆರೈಕೆ ಮಾಡಿದ್ದರು.

    ತಾಯಿಯಿಂದ ಬೇರ್ಪಟ್ಟಿದ್ದ ಮರಿಗಳಿಗೆ ಹಾಲು ಕೂಡಿಸುವುದೇ ದೊಡ್ಡ ಸಮಸ್ಯೆಯಾಗಿತ್ತು. ಇದರಿಂದ ಪಾರ್ಕ್ ನ ವೈದ್ಯ ಡಾ. ಉಮಾಶಂಕರ್ ಮರಿಗಳಿಗೆ ಮೇಕೆಯ ಹಾಲು ಪೂರೈಸಲು 3 ಮೇಕೆಗಳನ್ನ ಖರೀದಿಸಿ ಮರಿಗಳಿಗೆ ಮೇಕೆಗಳನ್ನು ಎರಡನೇ ತಾಯಿಯಾಗಿ ಪರಿಚಯಿಸಿದರು. ಮೇಕೆ ಹಾಲನ್ನು ಕುಡಿದ ಸಿಂಹದ ಮರಿಗಳು ಕ್ರಮೇಣ ಚೇತರಿಸಿಕೊಂಡು ಈಗ ಆರೋಗ್ಯವಾಗಿದ್ದು, ಇಂದು ಮೃಗಾಲಯದ ಪ್ರಮುಖ ಆಕರ್ಷಣೆಯಯಾಗಿದೆ.

    ಪುಟ್ಟ ಮರಿಗಳನ್ನು ತಾಯಿಯಿಂದ ಬೇರೆ ಮಾಡಿ ಅವುಗಳನ್ನ ಉಳಿಸಿಕೊಂಡಿರುವುದು ಪಾರ್ಕ್ ಇತಿಹಾಸದಲ್ಲಿ ಇದೇ ಮೊದಲು ಎನ್ನಲಾಗಿದ್ದು, ಈ ಹಿಂದೆ ಸಹ ಸನಾ ತನ್ನ ಎಲ್ಲಾ ಮರಿಗಳನ್ನ ತಿಂದು ಹಾಕಿತ್ತು. ಹೀಗಾಗಿ ಈ ಬಾರಿಯೂ ಅದೇ ರೀತಿ ತೊಂದರೆ ಮಾಡಬಹುದೆಂಬ ಮುಂಜಾಗ್ರತೆ ವಹಿಸಿದ ಪಾರ್ಕ್ ಡಿಡಿ ಕುಶಾಲಪ್ಪ ಹಾಗೂ ಇಡಿ ಗೋಕುಲ್ ಹೊಸ ಉಪಾಯ ಮಾಡಿ ಮರಿಗಳನ್ನ ಉಳಿಸಿಕೊಂಡಿದ್ದಾರೆ.

    ಒಂದು ತಿಂಗಳ ಮರಿಗಳು ಸ್ವಲ್ಪ ಮಾಂಸಾಹಾರ ಸಹ ಸೇವನೆ ಮಾಡುವಷ್ಟರ ಮಟ್ಟಿಗೆ ಬೆಳೆದು ನಿಂತಿದೆ. ಮಕ್ಕಳಂತೆ ಓಡಾಡಿಕೊಂಡಿರುವ ಈ ಸಿಂಹದ ಮರಿಗಳನ್ನು ಆರೈಕೆ ಮಾಡುವಲ್ಲಿ ಸಿಬ್ಬಂದಿಗಳು ಕಾರ್ಯವೂ ಇದೆ. ಸದ್ಯ ಇನ್ನು ಎರಡು ತಿಂಗಳ ಕಾಲ ಮರಿಗಳಿಗೆ ಆರೈಕೆ ಅಗತ್ಯವಿದ್ದು, ಬಳಿಕ ತಾಯಿ ಸನಾ ಜೊತೆ ಬಿಡಲಾಗುತ್ತದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲದೇ ಇದೇ ರೀತಿ ಮರಿಗಳನ್ನು ತಿನ್ನುವ ಇನ್ನೂ ಕೆಲವು ಚಿರತೆಗಳಿದ್ದು ಅವುಗಳ ಮರಿಗಳನ್ನು ಕೂಡ ಇದೇ ರೀತಿ ರಕ್ಷಣೆ ಮಾಡಿ ಜೀವಂತ ಉಳಿಸಿಕೊಳ್ಳಬಹುದು ಎಂದು ಡಿಡಿ ಕುಶಾಲಪ್ಪ ತಿಳಿಸಿದ್ದಾರೆ.  ಇದನ್ನೂ ಓದಿ: ಅಮ್ಮನಿಂದ ಬೇರ್ಪಟ್ಟ ಕೋತಿಗೆ ಇದೀಗ ಮೇಕೆಯೇ ತಾಯಿ!

    ತಾಯಿ ಬಳಿ ಹಾಲನ್ನೇ ಕುಡಿಯದ ಆ ಪುಟ್ಟ ಸಿಂಹದ ಮರಿಗಳಿಗೆ ಪಾರ್ಕ್‍ನ ಸಿಬ್ಬಂದಿ ಹಾಗೂ ವೈದ್ಯರೇ ತಂದೆ-ತಾಯಿಯಾಗುವ ಮೂಲಕ ಪೋಷಣೆ ಮಾಡುತ್ತಿದ್ದು, ತಾಯಿ ಮಡಿಲು ಸೇರಲು ಸಿದ್ಧವಾಗಿರುವ ಮರಿಗಳನ್ನ ಇನ್ನೂ ಕೆಲವೇ ತಿಂಗಳುಗಳಲ್ಲಿ ತಾಯಿ ಸನಾ ಜೊತೆ ಸಫಾರಿಯಲ್ಲಿ ಪ್ರವಾಸಿಗರು ವೀಕ್ಷಣೆ ಮಾಡಬಹುದಾಗಿದೆ.  ಇದನ್ನೂ ಓದಿ: ತಾಯಿ ಸಿಂಹದ ಹೊಟ್ಟೆ ಸೇರುತ್ತಿದ್ದ 2 ಮರಿಗಳನ್ನು ರಕ್ಷಿಸಿದ ಸಿಬ್ಬಂದಿ!

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictvnews

  • ಬನ್ನೇರುಘಟ್ಟ ಜೈವಿಕ ಉದ್ಯಾನದಲ್ಲಿದ್ದ `ಸಿಂಹಿಣಿ’ ಸಾವು

    ಬನ್ನೇರುಘಟ್ಟ ಜೈವಿಕ ಉದ್ಯಾನದಲ್ಲಿದ್ದ `ಸಿಂಹಿಣಿ’ ಸಾವು

    ಬೆಂಗಳೂರು: ಯುಗಾದಿ ಹಬ್ಬದಂದು ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ ಸಿಂಹಿಣಿಯೊಂದು ಮೃತಪಟ್ಟಿದೆ.

    ಇಲ್ಲಿನ ಸಿಂಹ ಸಫಾರಿಯಲ್ಲಿದ್ದ 25 ವರ್ಷ ವಯಸ್ಸಿನ ಸಿಂಹಿಣಿ ಮೃತಪಟ್ಟಿದ್ದು, ವಯೋಸಹಜ ಕಾಯಿಲೆ ಹಾಗೂ ಬಹು ಅಂಗಾಂಗ ವೈಫಲ್ಯದಿಂದ ಸಾವನ್ನಪ್ಪಿದೆ ಎಂದು ಬನ್ನೇರುಘಟ್ಟ ಜೈವಿಕ ಉದ್ಯಾನವನದ ವೈದ್ಯರು ತಿಳಿಸಿದ್ದಾರೆ.

    ಸಿಂಹಿಣಿಯನ್ನು 8 ನೇ ವಯಸ್ಸಿನಲ್ಲಿ ಮಹಾರಾಷ್ಟ್ರದ ಸಾಂಗ್ಲಿಯಿಂದ ಪ್ರಾಣಿ ವಿನಿಮಯದಡಿಯಲ್ಲಿ ಬನ್ನೇರುಘಟ್ಟಕ್ಕೆ ತರಲಾಗಿತ್ತು. ಈಗಾಗಲೇ ಜೈವಿಕ ಉದ್ಯಾನವನದಲ್ಲಿ ಹಲವು ಪ್ರಾಣಿಗಳು ಸಾವನ್ನಪ್ಪಿದ್ದು ಹಲವು ಅನುಮಾನಕ್ಕೆ ಕಾರಣವಾಗಿದ್ದು, ಇದೀಗ ಸಿಂಹಿಣಿ ಸಾವು ಮತ್ತಷ್ಟು ಅನುಮಾನಗಳಿಗೆ ಕಾರಣವಾಗಿದೆ.

  • ನಾಡಿಗೆ ಬಂದ ಕಾಡಾನೆಗಳ ಪತ್ತೆಗಾಗಿ ಡ್ರೋನ್ ಕ್ಯಾಮೆರಾ ಬಳಸಿದ ಅರಣ್ಯ ಇಲಾಖೆ

    ನಾಡಿಗೆ ಬಂದ ಕಾಡಾನೆಗಳ ಪತ್ತೆಗಾಗಿ ಡ್ರೋನ್ ಕ್ಯಾಮೆರಾ ಬಳಸಿದ ಅರಣ್ಯ ಇಲಾಖೆ

    ರಾಮನಗರ: ಆಹಾರ ಅರಸಿಕೊಂಡು ಕಾಡಿನಿಂದ ನಾಡಿಗೆ ಎರಡು ಕಾಡಾನೆಗಳು ಬಂದಿದ್ದು, ಬೆಂಗಳೂರು ಹೊರವಲಯದ ಕುಂಬಳಗೋಡು ಹಾಗೂ ಕೆಂಗೇರಿ ಬಳಿ ಬೀಡುಬಿಟ್ಟಿವೆ ಎನ್ನಲಾಗಿದೆ.

    ಕೆಂಗೇರಿ ಸಮೀಪದ ಕಂಬೀಪುರದಲ್ಲಿ ಈ ಎರಡು ಆನೆಗಳು ಕಾಣಿಸಿಕೊಂಡು ಸಾರ್ವಜನಿಕರಲ್ಲಿ ಆತಂಕ ಮೂಡಿಸಿವೆ. ಬೆಂಗಳೂರು- ಮೈಸೂರು ಹೆದ್ದಾರಿ ಸಮೀಪದಲ್ಲೇ ಕಾಡಾನೆಗಳು ಓಡಾಟ ನಡೆಸಿದ್ದು, ನಂತರ ಅವುಗಳು ದಟ್ಟವಾದ ಪೊದೆಗಳ ನಡುವೆ ಸೇರಿರುವ ಕಾರಣ ಅರಣ್ಯ ಇಲಾಖೆ ಆನೆಗಳ ಪತ್ತೆಗಾಗಿ ಡ್ರೋನ್ ಕ್ಯಾಮೆರಾದ ಬಳಕೆ ಮಾಡಿದ್ದಾರೆ.

    ಬನ್ನೇರುಘಟ್ಟ ಅರಣ್ಯ ಪ್ರದೇಶದಿಂದ ಬಂದಿರುವ ಕಾಡಾನೆಗಳು ಸಾವನದುರ್ಗ ಅರಣ್ಯ ಪ್ರದೇಶ ತಲುಪುವ ವೇಳೆ ತಪ್ಪು ದಾರಿಯಲ್ಲಿ ನುಗ್ಗಿ ನಗರಪ್ರದೇಶದ ಕಡೆಗೆ ಬಂದಿವೆ. ಇನ್ನೂ ರಾಮನಗರ ವಲಯ ಅರಣ್ಯಾಧಿಕಾರಿ ದಾಳೇಶ್ ನೇತೃತ್ವದಲ್ಲಿ ಕಾಡಾನೆಗಳನ್ನು ಬನ್ನೇರುಘಟ್ಟ ಅರಣ್ಯಕ್ಕೆ ಓಡಿಸುವ ಕಾರ್ಯಾಚರಣೆ ನಡೆಸಲಾಗುತ್ತಿದೆ. ಕಾರ್ಯಾಚರಣೆಗಾಗಿ 40 ಅರಣ್ಯ ಇಲಾಖೆಯ ಸಿಬ್ಬಂದಿಗಳನ್ನು ನಿಯೋಜನೆ ಮಾಡಲಾಗಿದೆ.

    ಬೆಂಗಳೂರು ದಕ್ಷಿಣ ತಾಲೂಕಿನ ಎಸಿಎಫ್ ವರುಣ್ ಕುಮಾರ್ ಹಾಗೂ ಕಗ್ಗಲೀಪುರ ವಲಯ ಅರಣ್ಯಾಧಿಕಾರಿಗಳು ಮೊಕ್ಕಾಂ ಹೂಡಿದ್ದಾರೆ.