Tag: Barachukki

  • ಭರಚುಕ್ಕಿಯಲ್ಲಿ ಪ್ರವಾಸಿಗರ ಹುಚ್ಚಾಟ – ಸಾವಿನ ದವಡೆಯಲ್ಲಿ ಮೋಜು-ಮಸ್ತಿ

    ಭರಚುಕ್ಕಿಯಲ್ಲಿ ಪ್ರವಾಸಿಗರ ಹುಚ್ಚಾಟ – ಸಾವಿನ ದವಡೆಯಲ್ಲಿ ಮೋಜು-ಮಸ್ತಿ

    ಚಾಮರಾಜನಗರ: ಭರಚುಕ್ಕಿ ಜಲಪಾತದ ಹಿನ್ನೀರಿನಲ್ಲಿ ಪ್ರವಾಸಿಗರ ಹುಚ್ಚಾಟ ಜೋರಾಗಿದ್ದು, ಸಾವಿನ ದವಡೆಯಲ್ಲಿ ಮೋಜು-ಮಸ್ತಿ ಮಾಡುತ್ತಿರುವುದು ಅಪಾಯಕಾರಿ ಬೆಳವಣಿಗೆಯಾಗಿದೆ.

    ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ತಾಲೂಕಿನ ಶಿವನ ಸಮುದ್ರ ಗ್ರಾಮದ ವೆಸ್ಲಿ ಸೇತುವೆ ಕೆಳಗೆ ಹರಿಯುವ ಕಾವೇರಿ ನದಿಗೆ ಇಳಿದು ಪ್ರವಾಸಿಗರು ಜಲಕ್ರೀಡೆ ಆಡುತ್ತಿದ್ದಾರೆ. ಅಪಾಯದ ಮಟ್ಟದಲ್ಲಿ ಹರಿಯುವ ಕಾವೇರಿ ನದಿಯಲ್ಲಿ ಮೈಮರೆತ್ತಿದ್ದಾರೆ. ಇದನ್ನೂ ಓದಿ: ವರದಾ, ತುಂಗಭದ್ರಾ ನದಿಯಲ್ಲಿ ಹೆಚ್ಚಿದ ನೀರು – ಮೆಕ್ಕೆಜೋಳ ಸೇರಿ ವಿವಿಧ ಬೆಳೆ ಜಲಾವೃತ 

    ವೈನಾಡು ಮತ್ತು ಮಲೆನಾಡಿನ ಪ್ರದೇಶದಲ್ಲಿ ಅತ್ಯಧಿಕ ಮಳೆಯಾಗುತ್ತಿದ್ದು, ಕಬಿನಿ ಹಾಗೂ ಕೆಆರ್‌ಎಸ್ ಜಲಾಶಯ ಭರ್ತಿಯಾಗಿದೆ. ಈ ಹಿನ್ನೆಲೆ ಕಾವೇರಿ ನದಿಗೆ ಕಳೆದ ಆರು ದಿನಗಳಿಂದಲೂ ಒಂದು ಲಕ್ಷಕ್ಕೂ ಹೆಚ್ಚು ಕ್ಯೂಸೆಕ್ ನೀರು ಹರಿಯ ಬೀಡುತ್ತಿದ್ದು, ಕಾವೇರಿ ನದಿಯಲ್ಲಿ ಪ್ರವಾಹ ಉಂಟಾಗಿದೆ.

    ನದಿಯಲ್ಲಿ ನೀರು ಹೆಚ್ಚಾಗಿರುವುದನ್ನು ತಿಳಿದ ಪ್ರವಾಸಿಗರು ಗಗನಚುಕ್ಕಿ ಮತ್ತು ಭರಚುಕ್ಕಿ ಜಲಪಾತಗಳನ್ನು ವೀಕ್ಷಣೆ ಮಾಡಲೂ ಒಂದು ವಾರದಿಂದಲೇ ಸಾವಿರಾರು ಸಂಖ್ಯೆಯಲ್ಲಿ ಆಗಮಿಸುತ್ತಿದ್ದರು. ಈ ಬೆಳವಣಿಗೆಯಿಂದ ಎಚ್ಚೆತ್ತ ಜಿಲ್ಲಾಡಳಿತ ಜು.12 ರಂದು ಭರಚುಕ್ಕಿ ಜಲಪಾತ ವೀಕ್ಷಣೆಗೆ ಸಾರ್ವಜನಿಕರ ಪ್ರವೇಶವನ್ನು ನಿರ್ಬಂಧಿಸಿದೆ. ನದಿಯ ಬಳಿ ತೆರಳದಂತೆ ಮೇಲಿಂದ ಮೇಲೆ ಆದೇಶದ ಸುತ್ತೊಲೆ ಹೊರಡಿಸುತ್ತಿದೆ.

    ವಿಪರ್ಯಾಸವೆಂದರೆ ಪ್ರವಾಸಿಗರು ಕಾವೇರಿ ನದಿಯಲ್ಲಿ ಇಳಿದು ಮನಬಂದಂತೆ ಆಟವಾಡುವುದು ಮತ್ತು ಈಜುವ ಹುಚ್ಚಾಟವನ್ನು ಮಾಡುತ್ತಿದ್ದಾರೆ. ಬೆಂಗಳೂರು ಸೇರಿದಂತೆ ಇನ್ನಿತರ ಕಡೆಗಳಿಂದ ತಂಡೋಪ ತಂಡವಾಗಿ ಬಂದು ನದಿಗಿಳಿಯುತ್ತಿದ್ದಾರೆ. ಭರಚುಕ್ಕಿ ಪ್ರವೇಶಕ್ಕೆ ನಿರ್ಬಂಧವಿರುವುದ್ದರಿಂದ ವೆಸ್ಲಿ ಸೇತುವೆಯಿಂದ ಬಲಗಡೆಗೆ ತೆರಳುವ ಬೂದಗಟ್ಟದೊಡ್ಡಿ ಅರಣ್ಯ ಪ್ರದೇಶದೊಳಗೆ ಅಕ್ರಮವಾಗಿ ನುಸುಳಿ ಭರಚುಕ್ಕಿ ಜಲಪಾತ ವೀಕ್ಷಣೆಗೆ ಮುಗಿ ಬೀಳುತ್ತಿದ್ದಾರೆ.

    ಎಚ್ಚರ ತಪ್ಪಿದ್ರೆ ಶಿವನ ಪಾದ
    ಭರಚುಕ್ಕಿ ವೀಕ್ಷಣೆಗೆ ಜಲಪಾತದ ತುದಿಗೆ ತೆರಳುತ್ತಿರುವ ಯುವಕ, ಯುವತಿಯರ ಗುಂಪು ತುತ್ತತುದಿಯಲ್ಲಿ ನಿಂತು ಫೋಟೋ, ಸೆಲ್ಫಿ ತೆಗೆದುಕೊಳ್ಳುವ ದುಸ್ಸಾಹಸ ಪ್ರಯತ್ನದಲ್ಲಿ ಮುಳುಗಿದ್ದಾರೆ. ಯುವಕ, ಯುವತಿಯರು, ವಯೋವೃದ್ಧರು, ಮಹಿಳೆಯರು, ಸಣ್ಣ-ಸಣ್ಣ ಮಕ್ಕಳು ಸೇರಿ ಜಲಪಾತ ವೀಕ್ಷಣೆಗೆ ಆಗಮಿಸುತ್ತಿದ್ದಾರೆ. ಇದನ್ನೂ ಓದಿ:  ಈ ಚುನಾವಣೆ ಪ್ರಜಾಪ್ರಭುತ್ವದ ಉಳಿವಿನ ಬಗ್ಗೆ ನಿರ್ಧರಿಸುತ್ತೆ: ಯಶವಂತ್ ಸಿನ್ಹಾ

    ಇವೆಲ್ಲವನ್ನು ನೋಡಿದ ಪ್ರಜ್ಞಾವಂತರು ಎಲ್ಲಿಂದಲು ಇಲ್ಲಿನ ನದಿ, ಜಲಪಾತ ವೀಕ್ಷಣೆಗೆ ಬಂದು ಸಾವು-ನೋವುಗಳು ಸಂಭವಿಸಲು ಕಾರಣವಾಗುತ್ತಿರುವ ಪ್ರವಾಸಿಗರಿಗೆ ಕಡಿವಾಣ ಹಾಕಬೇಕು. ಅಕ್ರಮವಾಗಿ ತೆರಳಿ ಜಲಪಾತ ವೀಕ್ಷಣೆ ಮಾಡುವ ದಾರಿಯನ್ನು ಬಂದ್ ಮಾಡಿ ಪೊಲೀಸರ ನಿಯೋಜನೆ ಮಾಡಬೇಕು. ನದಿಯ ಬಳಿ ಯಾರು ಸುಳಿಯದಂತೆ ಕ್ರಮವಹಿಸಬೇಕು ಎಂದು ಒತ್ತಾಯಿಸುತ್ತಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಹಾಲ್ನೊರೆಯಂತೆ ಧುಮ್ಮಿಕ್ಕುತ್ತಿರೋ ಭರಚುಕ್ಕಿ ಜಲಪಾತ

    ಹಾಲ್ನೊರೆಯಂತೆ ಧುಮ್ಮಿಕ್ಕುತ್ತಿರೋ ಭರಚುಕ್ಕಿ ಜಲಪಾತ

    ಚಾಮರಾಜನಗರ: ವರುಣನ ಅಬ್ಬರದಿಂದ ಒಂದೆಡೆ ಅಪಾರ ಆಸ್ತಿಪಾಸ್ತಿ ನಷ್ಟವಾಗಿದ್ದರೆ ಇನ್ನೊಂದೆಡೆ ರುದ್ರರಮಣೀಯ ದೃಶ್ಯಕ್ಕೂ ಸಾಕ್ಷಿಯಾಗಿದೆ.

    ಕೆಆರ್‍ಎಸ್ ಹಾಗೂ ಕಬಿನಿ ಜಲಾಶಯಗಳಿಂದ ಅಪಾರ ಪ್ರಮಾಣದ ನೀರು ಬಿಡುಗಡೆ ಮಾಡಿರುವುದರಿಂದ ಕಾವೇರಿ ನದಿ ಉಕ್ಕು ಹರಿಯುತ್ತಿದೆ. ಚಾಮರಾಜನಗರ ಜಿಲ್ಲೆಯ ಭರಚುಕ್ಕಿ ಭೋರ್ಗೆರೆದು ಧುಮ್ಮಿಕ್ಕುತ್ತಿದೆ. ಆದರೆ ಈ ರಮಣೀಯ ದೃಶ್ಯ ಕಣ್ತುಂಬಿಕೊಳ್ಳಲು ಪ್ರವಾಸಿಗರಿಗೆ ಅವಕಾಶ ಇಲ್ಲದಂತಾಗಿದೆ.

    ಕೊರೊನಾ ಹಿನ್ನೆಲೆಯಲ್ಲಿ ಜಿಲ್ಲೆಯ ಪ್ರೇಕ್ಷಣೀಯ ಸ್ಥಳಗಳಿಗೆ ಪ್ರವಾಸಿಗರ ಪ್ರವೇಶಕ್ಕೆ ನಿರ್ಬಂಧ ಇರುವುದರಿಂದ ಭರಚುಕ್ಕಿ ಜಲಪಾತಕ್ಕೂ ಪ್ರವಾಸಿಗರ ಪ್ರವೇಶ ಇಲ್ಲದಂತಾಗಿದೆ. ಕೊಳ್ಳೇಗಾಲ ತಾಲೂಕು ಶಿವನಸಮುದ್ರದ ಬಳಿ ಗಗನಚುಕ್ಕಿ, ಭರಚುಕಿ ಭೋರ್ಗೆರೆದು ಧುಮ್ಮಿಕುತ್ತಿದೆ.

    ಕರ್ನಾಟಕದ ನಯಾಗಾರ ಎಂದೇ ಹೆಸರಾದ ಭರಚುಕ್ಕಿಯಲ್ಲಿ ಬೆಟ್ಟಗುಡ್ಡಗಳ ನಡುವೆ ಕವಲು ಕವಲಾಗಿ 60 ಅಡಿ ಆಳಕ್ಕೆ ಹಾಲ್ನೊರೆಯಂತೆ ಧುಮ್ಮಿಕ್ಕುವ ಕಾವೇರಿಯ ರುದ್ರ ರಮಣೀಯ ದೃಶ್ಯಗಳನ್ನು ನೋಡಲು ಕಣ್ಣೆಗಳೆರಡು ಸಾಲದಂತೆ ಭಾಸವಾಗುತ್ತಿದೆ.

    ಪ್ರವಾಸಿಗರಿಗೆ ನಿರ್ಬಂಧ ತೆರುವುಗೊಳಿಸುವ ಸಂಬಂಧ ಜಿಲ್ಲಾಧಿಕಾರಿ ಡಾ.ಎಂ.ಆರ್.ರವಿ ಭರಚುಕ್ಕಿ ಜಲಪಾತಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ಜಲಪಾತದ ಸೊಬಗು ಸವಿಯಲು ಸಾರ್ವಜನಿಕರಿಗೆ ಅವಕಾಶ ಮಾಡಿಕೊಡುವಂತೆ ಜಿಲ್ಲಾ ಉಸ್ತುವಾರಿ ಸಚಿವರು ಸೂಚನೆ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಅರಣ್ಯ ಹಾಗೂ ಕಂದಾಯ ಇಲಾಖೆಯ ಸಮಿತಿ ಸಭೆ ಕರೆದು ಇನ್ನೆರಡು ದಿನದಲ್ಲಿ ನಿರ್ಬಂಧ ತೆರವುಗೊಳಿಸಲಾಗುವುದು ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.

  • ಒಮ್ಮೆ ನೋಡಬನ್ನಿ ಕಾವೇರಿಯ ಜಲವೈಭವ – ವಿಡಿಯೋ

    ಒಮ್ಮೆ ನೋಡಬನ್ನಿ ಕಾವೇರಿಯ ಜಲವೈಭವ – ವಿಡಿಯೋ

    ಚಾಮರಾಜನಗರ: ನಿಜಕ್ಕೂ ಇದೊಂದು ದೃಶ್ಯ ವೈಭವವೇ ಸರಿ. ಒಂದೆಡೆ ಪ್ರಕೃತಿಯ ಸೊಬಗು, ಮತ್ತೊಂದೆಡೆ ಕಾವೇರಿಯ ನೃತ್ಯ ವೈಯ್ಯಾರ. ಇದು ಜಗತ್ತಿನಲ್ಲಿಯೇ ಅಪರೂಪದ ಭೂ ಸೃಷ್ಠಿಯ ಅಚ್ಚರಿಯಾಗಿದೆ. ಚಾಮರಾಜನಗರ ಜಿಲ್ಲೆ ಭರಚುಕ್ಕಿ ಹಾಗು ಗಗನಚುಕ್ಕಿ ಜಲಪಾತಗಳಲ್ಲಿ ಕಾವೇರಿಯ ಆರ್ಭಟ, ಭೂಮಿಯನ್ನು ಸೀಳಿ ಧುಮ್ಮಿಕ್ಕುವ ಐಸಿರಿ ನಿಜಕ್ಕೂ ವರ್ಣಾತೀತವಾಗಿದೆ.

    ಜಲಾನಯನ ಪ್ರದೇಶದಲ್ಲಿ ವರುಣನ ಆರ್ಭಟ ಹೆಚ್ಚಾದ ಪರಿಣಾಮ ಚಾಮರಾಜನಗರ ಜಿಲ್ಲೆಯಲ್ಲಿ ಕಾವೇರಿ ಮೈದುಂಬಿ ಹರಿಯುತ್ತಿದ್ದಾಳೆ. ಇಲ್ಲಿ ಒಂದಲ್ಲ ಎರಡಲ್ಲ, ಲೆಕ್ಕವಿಲ್ಲದಷ್ಟು ಜಲಪಾತಗಳು ನಯನ ಮನೋಹರವಾಗಿ ಹರಿದಾಡುತ್ತವೆ. ಒಂದೆಡೆ ವಿಶಾಲವಾಗಿ ಕವಲು ಕವಲಾಗಿ ಶರವೇಗದಲ್ಲಿ ಬಿರುಸು ಬಿರುಸಾಗಿ ರಭಸದಿಂದ ಧುಮ್ಮಿಕ್ಕುವ ಭರಚುಕ್ಕಿ, ಮತ್ತೊಂದೆಡೆ ಗಗನದಿಂದ ಧುಮ್ಮಿಕ್ಕು ಹರಿಯುತ್ತಿರುವ ಗಗನಚುಕ್ಕಿ.

    ಕಾವೇರಿ ಧುಮ್ಮಿಕ್ಕುವ ಭರಚುಕ್ಕಿ ಜಲಪಾತದ ಸೊಬಗನ್ನು ನೋಡಿಯೇ ಅನುಭವಿಸಬೇಕು. ಇಲ್ಲಿನ ಪ್ರಕೃತಿಯ ಸೊಬಗಂತು ಅತ್ಯದ್ಭುತವಾಗಿದೆ. ಹಾಲ್ನೊರೆಯಂತೆ ಧುಮ್ಮಿಕ್ಕುವ ಕಾವೇರಿಯ ಐಸಿರಿ ನಯನಮನೋಹರವಾಗಿದ್ದು, ಭರಚುಕ್ಕಿಯಷ್ಟೇ ಆಕರ್ಷಕವಾಗಿದೆ ಗಗನಚುಕ್ಕಿ. ಭರಚುಕ್ಕಿಯದ್ದು ಅಗಲವಾದ ನೋಟವಾದರೆ ಗಗನಚುಕ್ಕಿಯದ್ದು ಆಳದ ನೋಟ. ಅಕ್ಕಪಕ್ಕದಲ್ಲೇ ಇರುವ ಈ ಜೋಡಿ ಜಲಪಾತಗಳು ನೋಡುಗರ ಕಣ್ಮನ ಸೆಳೆಯುತ್ತಿವೆ. ಈ ದೃಶ್ಯ ವೈಭವಕ್ಕೆ ಮನಸೋಲದ ಪ್ರವಾಸಿಗರೇ ಇಲ್ಲ.

    ಭರಚುಕ್ಕಿಯಲ್ಲಿ ಸುಮಾರು ಒಂದು ಕಿಲೋ ಮೀಟರ್ ಅಗಲವಾಗಿ ಮೈದಳೆದಿರುವ ಕಾವೇರಿ ಸುಮಾರು 75 ರಿಂದ 100 ಅಡಿವರೆಗೆ ಧುಮ್ಮಿಕ್ಕುವ ದೃಶ್ಯವಂತು ನಯನ ಮನೋಹರವಾಗಿದೆ. ನಭೋ ಲೋಕ ಮುಟ್ಟಿದಂತೆ ಭಾಸವಾಗುವ ಭೋರ್ಗರೆತ, ಸುತ್ತಲೂ ಇರುವ ಬೆಟ್ಟಸಾಲು, ಹಸಿರಿನಿಂದ ಕಂಗೊಳಿಸುವ ಅರಣ್ಯ, ಭರಚುಕ್ಕಿ ಜಲಪಾತದ ಸೊಬಗನ್ನು ಮತ್ತಷ್ಟು ಸುಂದರವಾಗಿಸಿದೆ. ಇಲ್ಲಿ ಅಗಲವಾಗಿ ಧುಮ್ಮಿಕ್ಕುವ ಹಾಲ್ನೊರೆಯಂತಹ ನೀರಿನ ಸೊಬಗನ್ನು ಕಣ್ತುಂಬಿಕೊಳ್ಳುವುದೇ ಒಂದು ಪರಮಾನಂದ. ಇನ್ನು ಗಗನಚುಕ್ಕಿಯಲ್ಲಿ ಗಗನದಿಂದ ಧುಮ್ಮಿಕ್ಕುವವಳಂತೆ ಗೋಚರಿಸುವ ಕಾವೇರಿಯ ನೋಟ ವರ್ಣಿಸಲಸದಳ. ಸುಮಾರು ನೂರು ಮೀಟರ್ ಆಳಕ್ಕೆ ಧುಮ್ಮಿಕ್ಕುವ ರಭಸ ಹಾಗು ಭೋರ್ಗರೆತ ಎಂತಹವರರನ್ನು ಬೆರಗೊಳಿಸುತ್ತದೆ ಎಂದು ಪ್ರವಾಸಿಗರು ಹೇಳಿದ್ದಾರೆ.

    ಶಿವನ ಸಮುದ್ರದ ಟಿಪ್ಪು ಸೇತುವೆಯಿಂದ ಹಿಡಿದು ಭರಚುಕ್ಕಿ ಗಗನಚುಕ್ಕಿ ಜಲಪಾತದವರೆಗೂ ಎತ್ತ ನೋಡಿದರೂ ಕಾವೇರಿಯ ಸೊಬಗೇ ಮೈದುಂಬಿಕೊಂಡಿದೆ. ಜಲಪಾತದ ಸಮೂಹವನ್ನು ಒಳಗೊಂಡಿರುವ ಈ ಪ್ರದೇಶ ನಿಜಕ್ಕು ಭೂ ಸೃಷ್ಠಿಯ ಅಚ್ಚರಿಯಾಗಿದೆ. ಕಾವೇರಿಯ ಸಂಭ್ರಮಕ್ಕೆ ಇಲ್ಲಿ ಎಣ್ಣೆಯೇ ಇಲ್ಲ. ವಾರಾಂತ್ಯದ ದಿನಗಳಲ್ಲಂತು ಇಲ್ಲಿಗೆ ಪ್ರವಾಸಿಗರ ದಂಡೇ ಹರಿದುಬರುತ್ತಿದೆ. ಹಾಲ್ನೊರೆಯಂತಹ ಜಲಧಾರೆಯನ್ನು ಕಣ್ಣಿನಿಂದಲೇ ಆಸ್ವಾಧಿಸುವ, ಕಾವೇರಿಯ ದೃಶ್ಯ ವೈಭವವನ್ನು ಕಣ್ತುಂಬಿಕೊಂಡು ಹೋಗುವ ಪ್ರವಾಸಿಗರ ಆನಂದಕ್ಕೆ ಇಲ್ಲಿ ಮಿತಿಯೇ ಇಲ್ಲ.