Tag: baramulla

  • ಪಹಲ್ಗಾಮ್ ದಾಳಿಯ ಬೆನ್ನಲ್ಲೇ 2 ಭಯೋತ್ಪಾದಕರನ್ನ ಹೊಡೆದುರುಳಿಸಿದ ಸೇನಾ ಪಡೆ

    ಪಹಲ್ಗಾಮ್ ದಾಳಿಯ ಬೆನ್ನಲ್ಲೇ 2 ಭಯೋತ್ಪಾದಕರನ್ನ ಹೊಡೆದುರುಳಿಸಿದ ಸೇನಾ ಪಡೆ

    ಶ್ರೀನಗರ: ಭದ್ರತಾ ಪಡೆಯು ಜಮ್ಮು ಮತ್ತು ಕಾಶ್ಮೀರದ ಬಾರಾಮುಲ್ಲಾ (Baramulla) ಜಿಲ್ಲೆಯ ಗಡಿ ನಿಯಂತ್ರಣ ರೇಖೆಯ ಒಳನುಸುಳಲು ಮುಂದಾಗುತ್ತಿದ್ದ ಇಬ್ಬರು ಭಯೋತ್ಪಾದಕರನ್ನು (Terrorists) ಹತ್ಯೆ ಮಾಡಿದೆ.

    ಈ ಇಬ್ಬರು ಭಯೋತ್ಪಾದಕರು ಬಾರಾಮುಲ್ಲಾದ ಉರಿ ನಾಲಾದ ಸರ್ಜೀವನ್ ಪ್ರದೇಶದ ಮೂಲಕ ಒಳನುಸುಳಲು ಪ್ರಯತ್ನಿಸಿದರು ಎಂದು ಚಿನಾರ್ ಕಾರ್ಪ್ಸ್ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದೆ. ಇದನ್ನೂ ಓದಿ: ಐಷಾರಾಮಿ ಕಾರುಗಳಲ್ಲಿ ಪ್ರಯಾಣ, ಪಾಕ್‌ ಸೇನೆಯ ನಂಬಿಕಸ್ಥನೇ ದಾಳಿಯ ಮಾಸ್ಟರ್‌ ಮೈಂಡ್‌!

    ಅಕ್ರಮವಾಗಿ ಒಳನುಸುಳಲು ಪ್ರಯತ್ನಿಸುತ್ತಿದ್ದ ಭಯೋತ್ಪಾದಕರನ್ನು ತಡೆದಿದ್ದು, ಈ ವೇಳೆ ಗುಂಡಿನ ಚಕಮಕಿ ನಡೆಯಿತು. ಸತತ 1 ಗಂಟೆಯ ಕಾರ್ಯಾಚರಣೆ ನಂತರ ಇಬ್ಬರು ಭಯೋತ್ಪಾದಕರನ್ನು ಸದೆಬಡಿಯಲಾಯಿತು. ಈ ವೇಳೆ ದೊಡ್ಡ ಪ್ರಮಾಣದ ಶಸ್ತ್ರಾಸ್ತ್ರಗಳು, ಮದ್ದುಗುಂಡುಗಳು ಮತ್ತು ಆಯುಧಗಳನ್ನು ವಶಪಡಿಸಿಕೊಳ್ಳಲಾಗಿದ್ದು, ಕಾರ್ಯಾಚರಣೆ ಪ್ರಗತಿಯಲ್ಲಿದೆ ಎಂದು ಪೋಸ್ಟ್‌ನಲ್ಲಿ ತಿಳಿಸಿದೆ. ಇದನ್ನೂ ಓದಿ: Pahalgam Terror Attack | ಹಿಂದೂಗಳೇ ಭಯೋತ್ಪಾದಕರ ಟಾರ್ಗೆಟ್!

    ಪಹಲ್ಗಾಮ್‌ನಲ್ಲಿ ಭಯೋತ್ಪಾದಕರು (Pahalgam Terror Attack) ಪ್ರವಾಸಿಗರ ಮೇಲೆ ದಾಳಿ ನಡೆಸಿದ ಒಂದು ಘಟನೆಯ ನಂತರ ಈ ಕಾರ್ಯಾಚರಣೆ ನಡೆದಿದೆ. ಪಹಲ್ಗಾಮ್ ಭಯೋತ್ಪಾದಕರ ದಾಳಿಯಲಿ 26 ಮಂದಿ ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆ. ನೌಕಾಪಡೆಯ ಒಬ್ಬ ಅಧಿಕಾರಿ ಹಾಗೂ ಗುಪ್ತಚರ ಬ್ಯೂರೋದ ಅಧಿಕಾರಿಯೊಬ್ಬರು ದಾಳಿಯಲ್ಲಿ ಮೃತಪಟ್ಟಿದ್ದಾರೆ. ಇದನ್ನೂ ಓದಿ: Pahalgam Terror Attack | ಉಗ್ರರ ದಾಳಿಗೆ ಬೆಂಗಳೂರಿನ ಮಧುಸೂದನ್‌ ಬಲಿ

    ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕರ ದಾಳಿಯನ್ನು ಪ್ರಧಾನಿ ಮೋದಿಯವರು (Narendra Modi) ಖಂಡಿಸಿದ್ದಾರೆ. ಈ ಘೋರ ಕೃತ್ಯದ ಹಿಂದಿರುವವರನ್ನು ಬಿಡಲಾಗುವುದಿಲ್ಲ. ಅವರ ದುಷ್ಟ ಕಾರ್ಯಸೂಚಿ ಎಂದಿಗೂ ಯಶಸ್ವಿಯಾಗುವುದಿಲ್ಲ. ಭಯೋತ್ಪಾದನೆಯ ವಿರುದ್ಧ ಹೋರಾಡುವ ನಮ್ಮ ಸಂಕಲ್ಪ ಅಚಲ ಮತ್ತು ಅದು ಇನ್ನಷ್ಟು ಬಲಗೊಳ್ಳುತ್ತದೆ ಎಂದು ಮಂಗಳವಾರ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದರು. ಇದನ್ನೂ ಓದಿ: Pahalgam Attack | ಉಗ್ರರ ಅಟ್ಟಹಾಸಕ್ಕೆ ಪತ್ನಿ ಕಣ್ಣೆದುರೇ ಬೆಂಗಳೂರಿನ ಟೆಕ್ಕಿ ಸಾವು

    ಸೌದಿ ಅರೇಬಿಯಾದ ತಮ್ಮ ಪ್ರವಾಸವನ್ನು ಅರ್ಧಕ್ಕೆ ಕೈಬಿಟ್ಟು ಬುಧವಾರ ಬೆಳಗ್ಗೆ ಭಾರತಕ್ಕೆ ಹಿಂತಿರುಗಿದರು. ಬಳಿಕ ಅವರು ದೆಹಲಿ ವಿಮಾನ ನಿಲ್ದಾಣದಲ್ಲಿ ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ಮತ್ತು ವಿದೇಶಾಂಗ ಸಚಿವ ಎಸ್ ಜೈಶಂಕರ್ ಅವರೊಂದಿಗೆ ಸಭೆ ನಡೆಸಿ ಪಹಲ್ಗಾಮ್ ಭಯೋತ್ಪಾದಕ ದಾಳಿಯ ನಂತರದ ಪರಿಸ್ಥಿತಿಯನ್ನು ಅವಲೋಕಿಸಿದರು.

  • ಜಮ್ಮು-ಕಾಶ್ಮೀರದ ಕಿಶ್ತ್ವಾರ್‌ನಲ್ಲಿ ಎನ್‌ಕೌಂಟರ್: ಇಬ್ಬರು ಯೋಧರಿಗೆ ಗಾಯ

    ಜಮ್ಮು-ಕಾಶ್ಮೀರದ ಕಿಶ್ತ್ವಾರ್‌ನಲ್ಲಿ ಎನ್‌ಕೌಂಟರ್: ಇಬ್ಬರು ಯೋಧರಿಗೆ ಗಾಯ

    ಶ್ರೀನಗರ: ಜಮ್ಮು (Jammu) ಮತ್ತು ಕಾಶ್ಮೀರದ (Kashmir) ಕಿಶ್ತ್ವಾರ್‌ನಲ್ಲಿ ಭಯೋತ್ಪಾದಕರೊಂದಿಗೆ ಭಾರೀ ಗುಂಡಿನ ಚಕಮಕಿ ಮುಂದುವರಿದಿದ್ದು, ಇಬ್ಬರು ಭದ್ರತಾ ಸಿಬ್ಬಂದಿ ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

    ಕಳೆದ 24 ಗಂಟೆಗಳಲ್ಲಿ ನಡೆದ ಮೂರನೇ ಎನ್‌ಕೌಂಟರ್ ಇದಾಗಿದೆ. ಗಾಯಗೊಂಡ ಇಬ್ಬರು ಸೈನಿಕರು ಜೂನಿಯರ್ ಕಮಿಷನ್ಡ್ ಆಫೀಸರ್ (JCO) ಆಗಿದ್ದಾರೆ. ಎರಡು ದಿನಗಳ ಹಿಂದೆ ಇಬ್ಬರು ಗ್ರಾಮ ರಕ್ಷಣಾ ಸಿಬ್ಬಂದಿಯ ಹತ್ಯೆಯ ಹಿಂದೆ ಉಗ್ರರನ್ನು ಭದ್ರತಾ ಪಡೆಗಳು ಮೂಲೆಗುಂಪು ಮಾಡಿದ ನಂತರ ಕಿಶ್ತ್ವಾರ್‌ನಲ್ಲಿ ಎನ್‌ಕೌಂಟರ್ ನಡೆಯಿತು. ಇದನ್ನೂ ಓದಿ: ಬಟ್ಟೆ ಅಂಗಡಿಗಳಿಗೆ ಹಣ ನೀಡದೇ ವಂಚನೆ – ಚಾರ್ಟೆರ್ಡ್ ಅಕೌಂಟೆಂಟ್ ಆಗಿದ್ದ ಯುವತಿ ಅರೆಸ್ಟ್

    ಭಯೋತ್ಪಾದಕರ ಉಪಸ್ಥಿತಿಯ ಬಗ್ಗೆ ನಿರ್ದಿಷ್ಟ ಗುಪ್ತಚರ ಆಧಾರದ ಮೇಲೆ ಶ್ರೀನಗರದ ಜಬರ್ವಾನ್ ಅರಣ್ಯ ಪ್ರದೇಶದಲ್ಲಿ ಜಂಟಿ ಪೊಲೀಸ್ ಮತ್ತು ಭದ್ರತಾ ಪಡೆಗಳ ಕಾರ್ಯಾಚರಣೆಯನ್ನು ಪ್ರಾರಂಭಿಸಲಾಯಿತು. ಕಾರ್ಯಾಚರಣೆ ವೇಳೆ ಗುಂಡಿನ ಚಕಮಕಿ ನಡೆದಿದೆ ಎಂದು ಕಾಶ್ಮೀರ ವಲಯ ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: ಮೈಸೂರಿನಲ್ಲಿ ಸಚಿವರಿಗೆ ಕಪಾಳಕ್ಕೆ ಹೊಡೆಯಲಾಗಿದೆ ಎಂಬುದು ಸುಳ್ಳು ಆರೋಪ: ಡಿಕೆಶಿ

    ಶನಿವಾರ ಬಾರಾಮುಲ್ಲಾ ಜಿಲ್ಲೆಯಲ್ಲಿ ನಡೆದ ಎನ್‌ಕೌಂಟರ್‌ನಲ್ಲಿ ಭಯೋತ್ಪಾದಕನನ್ನು ಹೊಡೆದುರುಳಿಸಿತು. ಅನುಮಾನಾಸ್ಪದ ಚಟುವಟಿಕೆಯನ್ನು ಗಮನಿಸಿದ ಭದ್ರತಾ ಪಡೆಗಳು ಮತ್ತು ರಾಜ್ಯ ಪೊಲೀಸರು ರಾಜಪುರದಲ್ಲಿ ಜಂಟಿ ಕಾರ್ಯಾಚರಣೆಯನ್ನು ಆರಂಭಿಸಿದ್ದರು. ಉಗ್ರರು ಮೇಲೆ ರಕ್ಷಣಾ ಪಡೆಗಳು ಗುಂಡಿನ ದಾಳಿ ನಡೆಸಿದ ಬಳಿಕ ಎನ್‌ಕೌಂಟರ್ ನಡೆದಿದೆ. ರಾಜಪುರ, ಸೋಪೋರ್, ಬಾರಾಮುಲ್ಲಾ ಸಾಮಾನ್ಯ ಪ್ರದೇಶದಲ್ಲಿ ನಡೆಯುತ್ತಿರುವ ಕಾರ್ಯಾಚರಣೆಯಲ್ಲಿ ಒಬ್ಬ ಭಯೋತ್ಪಾದಕನನ್ನು ಭದ್ರತಾ ಪಡೆಗಳು ತಟಸ್ಥಗೊಳಿಸಿದ್ದು, ಕಾರ್ಯಾಚರಣೆ ಮುಂದುವರೆದಿದೆ ಎಂದು ಮೂಲಗಳು ತಿಳಿಸಿವೆ. ಇದನ್ನೂ ಓದಿ: ಹಿಂದೂಗಳ ಮೇಲೆ ದಾಳಿ – ಕೆನಡಾ ರಾಯಭಾರ ಕಚೇರಿ ಎದುರು ಹಿಂದೂ ಸಿಖ್ ಗ್ಲೋಬಲ್ ಫೋರಂ ಪ್ರತಿಭಟನೆ

  • ಜಮ್ಮು ಕಾಶ್ಮೀರದಲ್ಲಿ ಎನ್‌ಕೌಂಟರ್ – ಇಬ್ಬರು ಉಗ್ರರ ಹತೈಗೈದ ಸೇನೆ

    ಜಮ್ಮು ಕಾಶ್ಮೀರದಲ್ಲಿ ಎನ್‌ಕೌಂಟರ್ – ಇಬ್ಬರು ಉಗ್ರರ ಹತೈಗೈದ ಸೇನೆ

    ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ (Jammu Kashmir) ಬಾರಾಮುಲ್ಲದಲ್ಲಿ (Baramulla) ಭಯೋತ್ಪಾದಕರು (Terrorist) ಮತ್ತು ಭದ್ರತಾ ಪಡೆಗಳ (Security Force) ನಡುವೆ ನಡೆದ ಎನ್‌ಕೌಂಟರ್‌ನಲ್ಲಿ (Encounter) ಇಬ್ಬರು ಭಯೋತ್ಪಾದಕರು ಮೃತಪಟ್ಟಿದ್ದು, ಇಬ್ಬರು ಸೇನಾ ಸಿಬ್ಬಂದಿ ಗಾಯಗೊಂಡಿದ್ದಾರೆ.

    ಉತ್ತರ ಕಾಶ್ಮೀರದ ಸೋಪೋರ್ ಪ್ರದೇಶದ ಚೆಕ್ ಮೊಹಲ್ಲಾ ನೌಪೋರಾದಲ್ಲಿ ಗುರುವಾರ ಭಯೋತ್ಪಾದಕರು ಮತ್ತು ಭದ್ರತಾ ಪಡೆಗಳ ನಡುವೆ ಎನ್‌ಕೌಂಟರ್ ಪ್ರಾರಂಭಗೊಂಡು, ಶುಕ್ರವಾರ ಮುಂಜಾನೆಯೂ ಗುಂಡಿನ ದಾಳಿ ಮುಂದುವರೆದಿದೆ. ಇದುವರೆಗೆ ಇಬ್ಬರು ಉಗ್ರರು ಬಲಿಯಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇದನ್ನೂ ಓದಿ: 100% ವಿವಿಪ್ಯಾಟ್ ಸ್ಲಿಪ್ ಎಣಿಕೆ ಸಾಧ್ಯವಿಲ್ಲ: ಸುಪ್ರೀಂ ಹೇಳಿದ್ದೇನು?

    ಎನ್‌ಕೌಂಟರ್‌ನಲ್ಲಿ ಗಾಯಗೊಂಡ ಇಬ್ಬರು ಸೇನಾ ಸಿಬ್ಬಂದಿಯನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ರವಾನಿಸಲಾಗಿದೆ. ಗುರುವಾರ ನಡೆದ ಎನ್‌ಕೌಂಟರ್‌ನಲ್ಲಿ ಸಮೀಪದ ನಾಗರಿಕರೊಬ್ಬರು ಗಾಯಗೊಂಡಿದ್ದಾರೆ. ಎನ್‌ಕೌಂಟರ್ ನಡೆದ ಪ್ರದೇಶದಲ್ಲಿ ಕಾರ್ಯಾಚರಣೆ ಮುಂದುವರಿದಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: ಇಸ್ರೇಲ್‌ ವಿರುದ್ಧ ಪ್ರತಿಭಟನೆ – ಅಮೆರಿಕದಲ್ಲಿ ಭಾರತ ಮೂಲದ ವಿದ್ಯಾರ್ಥಿನಿ ಬಂಧನ

  • ಸೇನಾ ವಾಹನದ ಮೇಲೆ ದಾಳಿ – ಓರ್ವ ಉಗ್ರನ ಹತ್ಯೆ

    ಸೇನಾ ವಾಹನದ ಮೇಲೆ ದಾಳಿ – ಓರ್ವ ಉಗ್ರನ ಹತ್ಯೆ

    ಶ್ರೀನಗರ: ಉತ್ತರ ಕಾಶ್ಮೀರದ ಬಾರಾಮುಲ್ಲಾ (Baramulla) ಜಿಲ್ಲೆಯಲ್ಲಿ ಶನಿವಾರ ಬೆಳಗ್ಗೆ ಭಯೋತ್ಪಾದಕರು (Terrorist) ಮತ್ತು ಭದ್ರತಾ ಪಡೆಗಳ ನಡುವೆ ಎನ್‌ಕೌಂಟರ್ ಆರಂಭವಾಗಿದ್ದು, ಭದ್ರತಾ ಪಡೆ ಒಬ್ಬ ಭಯೋತ್ಪಾದಕನನ್ನು ಹೊಡೆದುರುಳಿಸಿದೆ ಎಂದು ವರದಿಗಳು ತಿಳಿಸಿವೆ.

    ಬಾರಾಮುಲ್ಲಾದ ಕರ್ಹಾಮಾ ಕುಂಜರ್ ಪ್ರದೇಶದಲ್ಲಿ ಎನ್‌ಕೌಂಟರ್ ಆರಂಭವಾಗಿದ್ದು, ಭದ್ರತಾ ಪಡೆಗಳು (Security Force) ಭಯೋತ್ಪಾದಕರಿಗೆ ತಕ್ಕ ಪ್ರತ್ಯುತ್ತರ ನೀಡುತ್ತಿವೆ ಎಂದು ಪೊಲೀಸರು ತಿಳಿಸಿದ್ದಾರೆ. ಆ ಪ್ರದೇಶದಲ್ಲಿ ಭಯೋತ್ಪಾದಕರು ಇರುವ ಬಗ್ಗೆ ಮಾಹಿತಿ ಪಡೆದ ಪೊಲೀಸರು ಮತ್ತು ಭದ್ರತಾ ಪಡೆಗಳ ಜಂಟಿ ತಂಡವು ಪ್ರದೇಶವನ್ನು ಸುತ್ತುವರೆದಿವೆ. ಭಯೋತ್ಪಾದಕರನ್ನು ಶರಣಾಗುವಂತೆ ಭದ್ರತಾ ಪಡೆಗಳು ಕೇಳಿದಾಗ ಭಯೋತ್ಪಾದಕರು ಗುಂಡಿನ ದಾಳಿ ನಡೆಸಿದ್ದಾರೆ. ಇದನ್ನೂ ಓದಿ: ಸೇನಾ ವಾಹನದ ಮೇಲೆ ದಾಳಿ ಪ್ರಕರಣ – ಉಗ್ರರನ್ನು ಸುತ್ತುವರಿದ ಸೇನೆ, ಐವರು ಯೋಧರು ಸಾವು

    ಬಾರಾಮುಲ್ಲಾ ಎನ್‌ಕೌಂಟರ್‌ನ ಬಗ್ಗೆ ಮಾಹಿತಿ ನೀಡಿದ ಎಸ್‌ಎಸ್‌ಪಿ ಅಮೋದ್ ಅಶೋಕ್ ನಾಗ್‌ಪುರೆ, ಹತ್ಯೆಯಾದ ಭಯೋತ್ಪಾದಕ ದಕ್ಷಿಣ ಕಾಶ್ಮೀರದ ಕುಲ್ಗಾಮ್ ಜಿಲ್ಲೆಯವನಾಗಿದ್ದು, ಲಷ್ಕರ್-ಎ-ತೈಬಾದೊಂದಿಗೆ ಸಂಬಂಧ ಹೊಂದಿದ್ದಾನೆ ಎಂದು ಹೇಳಿದ್ದಾರೆ. ಅಲ್ಲದೇ ಮುಂಬರುವ ಜಿ 20 ಸಭೆಯ ದೃಷ್ಟಿಯಿಂದ ಭದ್ರತಾ ಪಡೆಗಳು ಭಯೋತ್ಪಾದನಾ ವಿರೋಧಿ ಕಾರ್ಯಾಚರಣೆಯನ್ನು ತೀವ್ರಗೊಳಿಸಿವೆ. ಹತ್ಯೆಗೀಡಾದ ಭಯೋತ್ಪಾದಕನಿಗೆ ಜಿ 20 ಸಭೆಯ ಮೊದಲು ದೊಡ್ಡ ಭಯೋತ್ಪಾದಕ ದಾಳಿಯನ್ನು ನಡೆಸುವಂತೆ ಹೇಳಿದ್ದರು ಎಂದು ತಿಳಿಸಿದರು. ಇದನ್ನೂ ಓದಿ: ಭಯೋತ್ಪಾದನೆಗೆ ಹಣಕಾಸು ನೆರವು ನಿಲ್ಲಿಸಬೇಕು – ಬಹಿರಂಗ ಸಭೆಯಲ್ಲೇ ಪಾಕ್‌ ಸಚಿವನಿಗೆ ಪಂಚ್‌ಕೊಟ್ಟ ಜೈಶಂಕರ್‌

    ಮೇ 5 ರಂದು ಜಮ್ಮು ಮತ್ತು ಕಾಶ್ಮೀರದ (Jammu And Kashmir) ರಜೌರಿ (Rajouri) ಜಿಲ್ಲೆಯ ಅರಣ್ಯದ ಕಂಡಿ ಪ್ರದೇಶದಲ್ಲಿ ಭಯೋತ್ಪಾದಕರು ನಡೆಸಿದ ಸ್ಫೋಟದಲ್ಲಿ ಐವರು ಸೇನಾ ಸಿಬ್ಬಂದಿ ಸಾವನ್ನಪ್ಪಿದ್ದರು ಮತ್ತು ಮೇಜರ್ ಗಾಯಗೊಂಡಿದ್ದರು. ಪೀಪಲ್ಸ್ ಆ್ಯಂಟಿ ಫ್ಯಾಸಿಸ್ಟ್ ಫ್ರಂಟ್ (PAFF) ದಾಳಿಯ ಹೊಣೆ ಹೊತ್ತುಕೊಂಡಿದೆ. ಪಿಎಎಫ್‌ಎಫ್ ಜೈಶ್-ಎ-ಮೊಹಮ್ಮದ್ ಭಯೋತ್ಪಾದಕ ಸಂಘಟನೆಗೆ ಸಂಯೋಜಿತವಾಗಿದೆ. ಇತ್ತೀಚಿಗಷ್ಟೆ ಸೇನೆಯ ವಾಹನದ ಮೇಲೆ ದಾಳಿ ನಡೆಸಿ ಐವರು ಯೋಧರ ಸಾವಿಗೆ ಕಾರಣರಾಗಿದ್ದ ಭಯೋತ್ಪಾದಕರನ್ನು ಹೊಡೆದುರುಳಿಸಲು ಸೇನೆ ಕಾರ್ಯಾಚರಣೆ ನಡೆಸಿದೆ. ಈ ವೇಳೆ ಉಗ್ರರು ಸ್ಫೋಟಕಗಳನ್ನು ಸಿಡಿಸಿದ್ದಾರೆ. ಪರಿಣಾಮ ಐವರು ಯೋಧರು ಮೃತಪಟ್ಟಿದ್ದು, ಓರ್ವ ಯೋಧ ಗಾಯಗೊಂಡಿದ್ದಾರೆ. ಇದನ್ನೂ ಓದಿ: ಪಾಕಿಸ್ತಾನಕ್ಕೆ ಗುಪ್ತ ಮಾಹಿತಿ ರವಾನೆ – ರಕ್ಷಣಾ ಸಂಸ್ಥೆಯ ವಿಜ್ಞಾನಿ ಅರೆಸ್ಟ್

  • ಬಾರಾಮುಲ್ಲಾದಲ್ಲಿ ಎನ್‌ಕೌಂಟರ್‌ಗೆ ಇಬ್ಬರು ಉಗ್ರರ ಹತ್ಯೆ – ಜಮ್ಮುವಿನಲ್ಲಿ ಹೈ ಅಲರ್ಟ್

    ಬಾರಾಮುಲ್ಲಾದಲ್ಲಿ ಎನ್‌ಕೌಂಟರ್‌ಗೆ ಇಬ್ಬರು ಉಗ್ರರ ಹತ್ಯೆ – ಜಮ್ಮುವಿನಲ್ಲಿ ಹೈ ಅಲರ್ಟ್

    ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ (Jammu and Kashmir) ಬಾರಾಮುಲ್ಲಾ (Baramulla) ಜಿಲ್ಲೆಯಲ್ಲಿ ಭದ್ರತಾ ಪಡೆಗಳು ನಡೆಸಿದ ಎನ್‌ಕೌಂಟರ್‌ನಲ್ಲಿ ಇಬ್ಬರು ಭಯೋತ್ಪಾದಕರು (Terrorists) ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

    ಕಳೆದ 24 ಗಂಟೆಗಳಲ್ಲಿ ಇದು 2ನೇ ಎನ್‌ಕೌಂಟರ್ ಆಗಿದೆ. ಮುಂದಿನ ಕೆಲವು ದಿನಗಳಲ್ಲಿ ಭಯೋತ್ಪಾದಕರು ದೊಡ್ಡ ಮಟ್ಟದ ದಾಳಿಗೆ ತಯಾರಿ ನಡೆಸುತ್ತಿದ್ದಾರೆ ಎಂದು ಗುಪ್ತಚರ ಇಲಾಖೆ ಮಾಹಿತಿ ನೀಡಿದ್ದು, ಈ ಹಿನ್ನೆಲೆಯಲ್ಲಿ ಭದ್ರತಾ ಪಡೆಗಳು ಹೈ ಅಲರ್ಟ್ ಆಗಿದ್ದಾರೆ.

    ವನಿಗಮ್ ಗ್ರಾಮದಲ್ಲಿ ಭಯೋತ್ಪಾದಕರು ಇರುವ ಬಗ್ಗೆ ಖಚಿತ ಮಾಹಿತಿಯನ್ನು ಪಡೆದು ಭದ್ರತಾ ಪಡೆಗಳು ಕಾರ್ಯಾಚರಣೆಯನ್ನು ಪ್ರಾರಂಭಿಸಿದ್ದರು. ಬಳಿಕ ಬಾರಾಮುಲ್ಲಾ ಜಿಲ್ಲೆಯ ಕ್ರೀರಿ ಪ್ರದೇಶದಲ್ಲಿ ಇಬ್ಬರು ಭಯೋತ್ಪಾದಕರ ಮೇಲೆ ಗುಂಡಿನ ದಾಳಿ ನಡೆಸಿ ಹತ್ಯೆ ಮಾಡಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ. ಇದನ್ನೂ ಓದಿ: ಕಾಂಗ್ರೆಸ್‌ ಬಜರಂಗಿ ಸಂಘರ್ಷ – ಬೆಳಗ್ಗೆಯಿಂದಲೇ ದೇವಸ್ಥಾನಗಳಲ್ಲಿ ಮೊಳಗಲಿದೆ ಹನುಮಾನ್ ಚಾಲೀಸಾ

    ಎನ್‌ಕೌಂಟರ್ ನಡೆಸಿದ ಪ್ರದೇಶದಿಂದ ಒಂದು ಎಕೆ ರೈಫಲ್ ಮತ್ತು ಪಿಸ್ತೂಲ್ ಅನ್ನು ವಶಪಡಿಸಿಕೊಳ್ಳಲಾಗಿದೆ. ಹತ್ಯೆಯಾದ ಭಯೋತ್ಪಾದಕರ ಗುರುತು ಪತ್ತೆ ಮಾಡಲಾಗುತ್ತಿದೆ ಎಂದು ಹೇಳಿದ್ದಾರೆ.

    ಬುಧವಾರ ಕುಪ್ವಾರ ಜಿಲ್ಲೆಯ ಮಚಿಲ್ ಸೆಕ್ಟರ್‌ನ ಗಡಿ ನಿಯಂತ್ರಣ ರೇಖೆಯಲ್ಲಿ ಒಳ ನುಸುಳಲು ಪ್ರಯತ್ನಿಸುತ್ತಿದ್ದ ಇಬ್ಬರು ಅಪರಿಚಿತ ಭಯೋತ್ಪಾದಕರನ್ನು ಸೇನೆ ಹಾಗೂ ಪೊಲೀಸರು ಜಂಟಿ ಕಾರ್ಯಾಚರಣೆಯಲ್ಲಿ ಹತ್ಯೆ ನಡೆಸಿದ್ದಾರೆ. ಭಯೋತ್ಪಾದಕರು ಈ ಪ್ರದೇಶದಲ್ಲಿ ಕೆಲವು ಪ್ರಮುಖ ದಾಳಿಗೆ ತಯಾರಿ ನಡೆಸುತ್ತಿದ್ದಾರೆ ಎಂಬ ಗುಪ್ತಚರ ಮಾಹಿತಿಯ ಹಿನ್ನೆಲೆ ಜಮ್ಮುವಿನಲ್ಲಿ ಹೈ ಅಲರ್ಟ್ ಘೋಷಿಸಲಾಗಿದೆ. ಇದನ್ನೂ ಓದಿ: ಯತ್ನಾಳ್‌, ಪ್ರಿಯಾಂಕ್‌ ಖರ್ಗೆಗೆ ಶೋಕಾಸ್‌ ನೋಟಿಸ್‌ ಜಾರಿ

  • ಬರಾಮುಲ್ಲಾದಲ್ಲಿ ಎನ್‌ಕೌಂಟರ್ – 3 ಭಯೋತ್ಪಾದಕರ ಹತ್ಯೆ, ಪೊಲೀಸ್ ಹುತಾತ್ಮ,

    ಶ್ರೀನಗರ: ಕಾಶ್ಮೀರದ ಬರಾಮುಲ್ಲಾದಲ್ಲಿ ಬುಧವಾರ ನಡೆದ ಗುಂಡಿನ ದಾಳಿಯಲ್ಲಿ ಪಾಕಿಸ್ತಾನ ಮೂಲದ ಭಯೋತ್ಪಾದನಾ ಸಂಘಟನೆ ಜೈಶ್-ಎ-ಮೊಹಮ್ಮದ್(ಜೆಇಎಂ)ನ ಮೂವರು ಭಯೋತ್ಪಾದಕರು ಸಾವನ್ನಪ್ಪಿದ್ದಾರೆ. ಸಂಘರ್ಷದಲ್ಲಿ ಜಮ್ಮು ಹಾಗೂ ಕಾಶ್ಮೀರದ ಒಬ್ಬ ಪೊಲೀಸ್ ಸಿಬ್ಬಂದಿಯೂ ಪ್ರಾಣ ಕಳೆದುಕೊಂಡಿದ್ದಾರೆ.

    ಬರಾಮುಲ್ಲಾದಲ್ಲಿ ನಡೆದ ಎನ್‌ಕೌಂಟರ್‌ನಲ್ಲಿ ಮೂವರು ಪಾಕಿಸ್ತಾನಿ ಭಯೋತ್ಪಾದಕರನ್ನು ಕೊಲ್ಲಾಗಿದ್ದು, ಒಬ್ಬ ಪೊಲೀಸ್ ಸಿಬ್ಬಂದಿಯೂ ಸಾವನ್ನಪ್ಪಿದ್ದಾರೆ. ಹತರಾದ ಭಯೋತ್ಪಾದಕರಿಂದ ಶಸ್ತ್ರಾಸ್ತ್ರ ಹಾಗೂ ಮದ್ದುಗುಂಡುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಕಾಶ್ಮೀರ ವಲಯ ಪೊಲೀಸ್ ಅಧಿಕೃತ ಟ್ವಿಟ್ಟರ್ ಖಾತೆಯಲ್ಲಿ ತಿಳಿಸಿದೆ. ಇದನ್ನೂ ಓದಿ: ವರದಕ್ಷಿಣೆ ಕಿರುಕುಳ – ಮಗುವನ್ನು ಕೊಲೆಗೈದು ತಾಯಿ ಆತ್ಮಹತ್ಯೆ

    ಈ ವರ್ಷ ಇಲ್ಲಿಯವರೆಗೆ 22 ಪಾಕಿಸ್ತಾನಿ ಭಯೋತ್ಪಾದಕರನ್ನು ಭದ್ರತಾ ಪಡೆಗಳು ಹತ್ಯೆ ಮಾಡಿದ್ದೇವೆ ಎಂದು ಕಾಶ್ಮೀರ ಪೊಲೀಸ್ ಮಹಾನಿರೀಕ್ಷಕ(ಐಜಿಪಿ) ವಿಜಯ್ ಕುಮಾರ್ ಹೇಳಿದ್ದಾರೆ. ಇದನ್ನೂ ಓದಿ: ಉದ್ಯಮಿ ಆದಿಕೇಶವಲು ಮಗ ಶ್ರೀನಿವಾಸ್‍ಗೆ ನ್ಯಾಯಾಂಗ ಬಂಧನ

    ಕಳೆದ 3-4 ತಿಂಗಳುಗಳಿಂದ ಬರಾಮುಲ್ಲಾ ಪ್ರದೇಶದಲ್ಲಿ ಸಕ್ರಿಯರಾಗಿದ್ದ ಮೂವರು ಜೆಇಎಂನ ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿತ್ತು.

  • ಬಾರಾಮುಲ್ಲಾದಲ್ಲಿ ಎನ್‌ಕೌಂಟರ್ – ಟಾಪ್ ಲಷ್ಕರ್ ಕಮಾಂಡರ್ ಹತ್ಯೆ

    ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಬಾರಾಮುಲ್ಲಾದಲ್ಲಿ ಗುರುವಾರ ಭದ್ರತಾ ಪಡೆಗಳು ಎನ್‌ಕೌಂಟರ್ ನಡೆಸಿದ್ದು, ನಿಷೇಧಿತ ಭಯೋತ್ಪಾದಕ ಸಂಘಟನೆ ಲಷ್ಕರ್-ಎ-ತೈಬಾ(ಎಲ್‌ಇಟಿ)ದ ಕಮಾಂಡರ್ ಹತ್ಯೆಯಾಗಿದ್ದಾನೆ.

    ಬಾರಾಮುಲ್ಲಾದಲ್ಲಿ ಭದ್ರತಾ ಪಡೆಗಳು ಎನ್‌ಕೌಂಟರ್ ನಡೆಸಿ, ಎಲ್‌ಇಟಿ ಭಯೋತ್ಪಾದಕ ಕಮಾಂಡರ್ ಯೂಸುಫ್ ಕಾಂಟ್ರೋನನ್ನು ಹತ್ಯೆ ಮಾಡಿದ ಎಂದು ಕಾಶ್ಮೀರ ಪೊಲೀಸ್ ಮಹಾನಿರೀಕ್ಷಕ(ಐಜಿಪಿ) ವಿಜಯ್ ಕುಮಾರ್ ತಿಳಿಸಿದ್ದಾರೆ. ಇದನ್ನೂ ಓದಿ: ಹುಬ್ಬಳ್ಳಿ ಗಲಭೆ – ಮಸೀದಿ ಮೇಲೆ `ಜೈಶ್ರೀರಾಮ್’ ಲೇಸರ್ ಲೈಟ್ ಹಾಕಿದ್ದ ಕಿಡಿಗೇಡಿಗಳು

    ಇತ್ತೀಚೆಗೆ ಭಯೋತ್ಪಾದಕ ಯೂಸುಫ್ ಬಗ್ದಾಮ್ ಜಿಲ್ಲೆಯಲ್ಲಿ ಎಸ್‌ಪಿಒ ಹಾಗೂ ಅವರ ಸಹೋದರ ಸೇರಿದಂತೆ, ನಾಗರಿಕರು ಹಾಗೂ ಭದ್ರತಾ ಪಡೆಗಳ ಹಲವಾರು ಹತ್ಯೆಗಳಲ್ಲಿ ಭಾಗಿಯಾಗಿದ್ದ ಎಂದು ತಿಳಿಸಿದ್ದಾರೆ. ಎನ್‌ಕೌಂಟರ್ ಬಳಿಕ ಭಯೋತ್ಪಾದಕರ ಶಸ್ತ್ರಾಸ್ತ್ರಗಳು, ಮದ್ದುಗುಂಡುಗಳು ವಸ್ತುಗಳನ್ನು ವಶಪಡಿಸಿಕೊಳ್ಳಾಗಿದೆ ಎಂದು ವಿಜಯ್ ಕುಮಾರ್ ತಿಳಿಸಿದರು. ಇದನ್ನೂ ಓದಿ: ದೆಹಲಿ ಕಾರ್ಯಾಚರಣೆ ಅಪರಾಧ ಕೃತ್ಯ: ಶಶಿ ತರೂರ್‌

    ಭದ್ರತಾ ಪಡೆಗಳು ಭಯೋತ್ಪಾದಕರನ್ನು ಪತ್ತೆ ಹಚ್ಚಲು ಮೌಲ್ವಾ ಪ್ರದೇಶದಲ್ಲಿ ಶೋಧ ಕಾರ್ಯ ನಡೆಸುತ್ತಿದ್ದರು. ಈ ವೇಳೆ ಭಯೋತ್ಪಾದಕರನ್ನು ಶರಣಾಗುವಂತೆ ಕೇಳಿದ ಭದ್ರತಾ ಪಡೆಗಳ ಮೇಲೆ ಭಯೋತ್ಪಾದಕರು ಗುಂಡು ಹಾರಿಸಲು ಯತ್ನಿಸಿದ್ದಾರೆ. ಎನ್‌ಕೌಂಟರ್ ವೇಳೆ ಮೂವರು ಸೈನಿಕರು ಹಾಗೂ ಒಬ್ಬ ನಾಗರಿಕನಿಗೆ ಗಾಯಗಳಾಗಿವೆ ಎಂದು ವರದಿಗಳು ತಿಳಿಸಿವೆ.

  • ಕಾಶ್ಮೀರದಲ್ಲಿ ಎಕೆ-47 ರೈಫಲ್‍ನೊಂದಿಗೆ ಯೋಧ ನಾಪತ್ತೆ

    ಕಾಶ್ಮೀರದಲ್ಲಿ ಎಕೆ-47 ರೈಫಲ್‍ನೊಂದಿಗೆ ಯೋಧ ನಾಪತ್ತೆ

    ಶ್ರೀನಗರ: ಶಸ್ತ್ರಾಸ್ತ್ರ ಸಮೇತ ಸೇನಾ ಶಿಬಿರದಿಂದ ಓರ್ವ ಸೈನಿಕ ನಾಪತ್ತೆಯಾಗಿರುವ ಘಟನೆ ಜಮ್ಮು-ಕಾಶ್ಮೀರದ ಬಾರಾಮುಲ್ಲಾದ ಗಂಟ್‍ಮುಲ್ಲಾ ಪ್ರದೇಶದಲ್ಲಿ ನಡೆದಿದೆ.

    ಬುಧವಾರ ತಡರಾತ್ರಿ ಎಕೆ-47 ರೈಫಲ್ ಹಾಗೂ 3 ಮ್ಯಾಗ್ಜಿನ್‍ಗಳೊಂದಿಗೆ ಯೋಧ ಜಹೂರ್ ಅಹಮದ್ ಠಾಕೂರ್ ಪಾರಾರಿಯಾಗಿದ್ದು, ಯೋಧನಿಗಾಗಿ ಶೋಧ ಕಾರ್ಯ ನಡೆಸಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.

    ಪುಲ್ವಾಮಾ ಮೂಲದವರಾದ ತಾಕೂರ್ ಎಕೆ-47 ರೈಫಲ್‍ನೊಂದಿಗೆ ನಾಪತ್ತೆಯಾಗಿರುವುದು ಹಲವು ಅನುಮಾನಗಳಿಗೆ ಎಡೆ ಮಾಡಿಕೊಟ್ಟಿದೆ.

    ಠಾಕೂರ್ ಅವರು ಪ್ರಾದೇಶಿಕ ಸೈನ್ಯದ 173 ಬೆಟಾಲಿಯನ್‍ನಲ್ಲಿ ಎಂಜಿನಿಯರಿಂಗ್ ವಿಭಾದಲ್ಲಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.