Tag: Basava Sagara Reservoir

  • ಬಸವಸಾಗರ ಜಲಾಶಯದಿಂದ ಬರೋಬ್ಬರಿ 1 ಲಕ್ಷ ಕ್ಯೂಸೆಕ್ ನೀರು ಬಿಡುಗಡೆ

    ಬಸವಸಾಗರ ಜಲಾಶಯದಿಂದ ಬರೋಬ್ಬರಿ 1 ಲಕ್ಷ ಕ್ಯೂಸೆಕ್ ನೀರು ಬಿಡುಗಡೆ

    ಯಾದಗಿರಿ: ಕಳೆದ ಒಂದು ತಿಂಗಳ ಹಿಂದೆಯಷ್ಟೇ ಪ್ರವಾಹ ಪರಿಸ್ಥಿತಿಯನ್ನು ಎದುರಿಸಿದ್ದ ಜಿಲ್ಲೆಯ ಜನತೆಗೆ ಮತ್ತೊಮ್ಮೆ ಪ್ರವಾಹ ಎದುರಾಗುವ ಆತಂಕ ಎದುರಾಗಿದ್ದು, ಮಹಾರಾಷ್ಟ್ರದಲ್ಲಿ ಸುರಿಯುತ್ತಿರುವ ಭಾರೀ ಮಳೆಗೆ ಬಸವಸಾಗರ ಜಲಾಶಯಕ್ಕೆ ಹರಿಯುವ ಒಳ ಹರಿವಿನ ಪ್ರಮಾಣ ಹೆಚ್ಚಾಗಿದ್ದು, ಪರಿಣಾಮ ಕೃಷ್ಣಾ ನದಿಗೆ 1,13,280 ಕ್ಯೂಸೆಕ್ ನೀಡು ಬಿಡುಗಡೆ ಮಾಡಲಾಗಿದೆ.

    ಜಲಾಶಯ 33 ಗೇಟ್‍ಗಳಲ್ಲಿ ಸದ್ಯ 12 ಗೇಟ್ ಮೂಲಕ ನೀರು ಬಿಡುಗಡೆ ಮಾಡಲಾಗುತ್ತಿದೆ. ನೀರು ಬಿಡುಗಡೆಯಾಗಿರುವುದರಿಂದ ನಾಳೆ ಮುಂಜಾನೆ ವೇಳೆಗೆ ನದಿ ನೀರಿನ ಪ್ರಮಾಣ ಜಾಸ್ತಿಯಾಗುವ ಸಾಧ್ಯತೆ ಇದೆ. ನದಿಪಾತ್ರದ ಗ್ರಾಮಗಳಿಗೆ ಜಿಲ್ಲಾಡಳಿತದಿಂದ ಈಗಾಗಲೇ ಎಚ್ಚರಿಕೆ ಸಂದೇಶ ರವಾನೆ ಮಾಡಿದೆ.

    ಕಳೆದ ತಿಂಗಳಷ್ಟೇ ಕೃಷ್ಣಾ ಪ್ರವಾಹಕ್ಕೆ ಜಿಲ್ಲೆ ತತ್ತರಿಸಿತ್ತು, ನದಿಪಾತ್ರ ಗ್ರಾಮಗಳು ಜಲಾವೃತಗೊಂಡಿದ್ದವು. ಅಲ್ಲದೇ ಈ ಭಾಗದ ಸಾವಿರಾರು ಎಕರೆ ಬೆಳೆ ನಾಶವಾಗಿತ್ತು. ಕೊಳ್ಳೂರು ಬ್ರಿಡ್ಜ್ ಮುಳುಗಡೆಯಾಗಿ ಕೆಲ ದಿನ ಸಂಪರ್ಕಕಡಿತವಾದರೆ, ನೀಲಕಂಠರಾಯನ ಗಡ್ಡಿ ಸೇತುವೆ ನದಿಯ ನೀರಿನ ರಭಸಕ್ಕೆ ಕೊಚ್ಚಿಹೋಗಿತ್ತು. ಕಳೆದ ಬಾರಿ ಸಂಭವಿಸಿದ ಪ್ರವಾಹ ನಷ್ಟಕ್ಕೆ ಪರಿಹಾರ ನೀಡಲು ಸರ್ವೆ ಕಾರ್ಯವನ್ನು ಜಿಲ್ಲಾಡಳಿದ ಆರಂಭಿಸಿತ್ತು. ಆದರೆ ಸದ್ಯ ನದಿಯಲ್ಲಿ ನೀರಿನ ಪ್ರಮಾಣ ಜಾಸ್ತಿಯಾದ ಹಿನ್ನೆಲೆ ಮತ್ತೊಂದು ಪ್ರವಾಹ ಎದುರಿಸಲು ಜಿಲ್ಲಾಡಳಿತ ಸಜ್ಜಾಗುತ್ತಿದೆ.

  • ಮಧ್ಯರಾತ್ರಿ ಬಂತು ಬಸವಸಾಗರ ನೀರು – ರೈತರ ಮೊಗದಲ್ಲಿ ಮಂದಹಾಸ

    ಮಧ್ಯರಾತ್ರಿ ಬಂತು ಬಸವಸಾಗರ ನೀರು – ರೈತರ ಮೊಗದಲ್ಲಿ ಮಂದಹಾಸ

    ಯಾದಗಿರಿ: ಜಿಲ್ಲೆಯ ಬಸವಸಾಗರ ಜಲಾಶಯದಿಂದ ಶನಿವಾರ ತಡರಾತ್ರಿಯಿಂದಲೇ ಕುಡಿಯಲು ನೀರು ಬಿಡಲಾಗಿದ್ದು, ಜಿಲ್ಲೆಯ ಜನ ಮತ್ತು ರೈತರ ಮೊಗದಲ್ಲಿ ಮಂದಹಾಸ ಮೂಡಿದೆ.

    ಜಿಲ್ಲೆಯ ಹುಣಸಗಿ ತಾಲೂಕಿನ ನಾರಾಯಣಪುರದ ಬಸವಸಾಗರ ಜಲಾಶಯ 33 ಟಿಎಂಸಿ ನೀರು ಸಂಗ್ರಹ ಸಾಮರ್ಥ್ಯ ಹೊಂದಿದ್ದು, ಸತತ ಬರಗಾಲ ಆವರಿಸಿದ್ದರಿಂದ ಜಲಾಶಯದಲ್ಲಿ ನೀರಿನ ಪ್ರಮಾಣ ಕಡಿಮೆಯಾಗಿತ್ತು. ಆದರೆ 16 ಟಿಎಂಸಿ ನೀರನ್ನು ಕುಡಿಯುವ ಸಲುವಾಗಿ ಸಂಗ್ರಹಿಸಲಾಗಿತ್ತು. ಹೀಗಾಗಿ ಇಂದಿನಿಂದ ಐದು ದಿನಗಳ ಕಾಲ ನಿತ್ಯವು 2 ಸಾವಿರ ಕ್ಯುಸೆಕ್ ನೀರು ಹರಿಸಲು ತೀರ್ಮಾನಿಸಲಾಗಿದೆ. ಶನಿವಾರ ಮಧ್ಯ ರಾತ್ರಿಯಿಂದಲೇ ಕಾಲುವೆಗೆ ನೀರು ಹರಿಸಲಾಗುತ್ತಿದೆ.

    ಜಿಲ್ಲೆಯಲ್ಲಿ ಸತತ ಬರಗಾಲ ಆವರಿಸಿ ಜನ, ಜಾನುವಾರುಗಳು ಕುಡಿಯುಲು ಹನಿ ಹನಿ ನೀರಿಗೂ ಹಾಹಕಾರ ಪಡುವಂತಾಗಿತ್ತು. ಕೊನೆಗೆ ಜಿಲ್ಲೆಯ ಜನರು ಮತ್ತು ಸುರಪುರ ಶಾಸಕ ರಾಜುಗೌಡ ಸೇರಿದಂತೆ ಹುಣಸಗಿಯ ಸ್ಥಳೀಯ ಜನಪ್ರತಿನಿಧಿಗಳು ಕುಡಿಯುವ ನೀರು ಬಿಡುವಂತೆ ರಾಜ್ಯ ಸರ್ಕಾರಕ್ಕೆ ಮತ್ತು ಜಿಲ್ಲಾಡಳಿತಕ್ಕೆ ಒತ್ತಡ ಹಾಕಿದ್ದರು. ಜನರ ಹೋರಾಟಕ್ಕೆ ಮಣಿದ ಕೃಷ್ಣಾ ಭಾಗ್ಯ ಜಲ ನಿಗಮದ ಅಧಿಕಾರಿಗಳು, ಜಲಾಶಯದಿಂದ ನಿನ್ನೆ ಮಧ್ಯ ರಾತ್ರಿಯಿಂದಲೇ ಎಡದಂಡೆ ಕಾಲುವೆ ನೀರು ಬಿಡುಗಡೆ ಮಾಡಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv