ರಾಮನಗರ: ಬಂಡೇಮಠದ ಬಸವಲಿಂಗ ಸ್ವಾಮೀಜಿ (BasavalingaSwamiji) ಆತ್ಮಹತ್ಯೆ ಪ್ರಕರಣದಲ್ಲಿ ಆರೋಪಿಗಳಾಗಿರುವ ನೀಲಾಂಬಿಕೆ (Nilambike), ಕಣ್ಣೂರು ಮಠದ ಡಾ. ಮೃತ್ಯುಂಜಯಶ್ರೀ, ವಕೀಲ ಮಹದೇವಯ್ಯ ಹಾಗೂ ಸುರೇಶ್ ಎಂಬುವರ ಜಾಮೀನು ಅರ್ಜಿ ಮತ್ತೊಮ್ಮೆ ವಜಾ ಆಗಿದೆ.
ಆರೋಪಿಗಳು ಕೆಲ ದಿನಗಳ ಹಿಂದೆ ಮಾಗಡಿ (Magadi) ತಾಲೂಕು ನ್ಯಾಯಾಲಯದಲ್ಲಿ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು. ಆದರೆ, ಅಲ್ಲಿ ಅವರ ಅರ್ಜಿ ವಜಾ ಆಗಿದ್ದರಿಂದ ಜಿಲ್ಲಾ ನ್ಯಾಯಾಲಯದ ಮೊರೆ ಹೋಗಿದ್ದರು. ಇಂದು ನಾಲ್ವರು ಆರೋಪಿಗಳು ಪ್ರತ್ಯೇಕವಾಗಿ ಸಲ್ಲಿಸಿದ್ದ ಜಾಮೀನು ಅರ್ಜಿಗಳ ವಿಚಾರಣೆ ಮಾಡಿದ ರಾಮನಗರ ಜಿಲ್ಲಾ ನ್ಯಾಯಾಲಯದ ನ್ಯಾಯಪೀಠವು ವಾದ-ಪ್ರತಿವಾದಗಳನ್ನು ಆಲಿಸಿತು. ಇದನ್ನೂ ಓದಿ: ಸಿದ್ದರಾಮಯ್ಯ ಯಾವತ್ತು ಕೂಡ ಸತ್ಯ ಒಪ್ಪಿಕೊಳ್ಳಲ್ಲ : ಆರಗ ಜ್ಞಾನೇಂದ್ರ
ರಾಮನಗರ: ಕಂಚುಗಲ್ ಬಂಡೆಮಠದ ಬಸವಲಿಂಗ ಸ್ವಾಮೀಜಿ (Basavalinga Swamiji) ಆತ್ಮಹತ್ಯೆ ಪ್ರಕರಣದಲ್ಲಿ ಮೂವರೂ ಆರೋಪಿಗಳನ್ನು ನವೆಂಬರ್ 15 ರವರೆಗೂ ನ್ಯಾಯಾಂಗ ಬಂಧನಕ್ಕೆ (Judicial Custody) ಒಪ್ಪಿಸಲಾಗಿದೆ.
ಪೊಲೀಸ್ ಕಸ್ಟಡಿಯಲ್ಲಿದ್ದ ಆರೋಪಿಗಳನ್ನು ಮಾಗಡಿ ಪೊಲೀಸರು ಇಂದು ನ್ಯಾಯಾಧೀಶರ ಮುಂದೆ ಹಾಜರು ಪಡಿಸಿದ್ದರು. ಈ ವೇಳೆ ವಿಚಾರಣೆ ನಡೆಸಿದ ಒಂದನೇ ಹೆಚ್ಚುವರಿ ನ್ಯಾಯಾಧೀಶೆ ಎಂ. ಧನಲಕ್ಷ್ಮಿ ಮೂವರು ಆರೋಪಿಗಳಿಗೆ ನ.15ರ ವರೆಗೆ ನ್ಯಾಯಾಂಗ ಬಂಧನ ವಿಧಿಸಿದ್ದಾರೆ. ಇದನ್ನೂ ಓದಿ: ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣ – NIA ದಾಳಿ, ಮೂವರ ಬಂಧನ
ಪ್ರಕರಣದ ಎ1 ಆರೋಪಿ ಕಣ್ಣೂರು ಮಠದ ಡಾ. ಮೃತ್ಯುಂಜಯಶ್ರೀ, ಎ3 ಆರೋಪಿ ಮಹದೇವಯ್ಯನನ್ನು ರಾಮನಗರ ಜಿಲ್ಲಾ ಕಾರಾಗೃಹಕ್ಕೆ ರವಾನೆ ಮಾಡಲಾಗಿದ್ದು, ಎ2 ಆರೋಪಿ ನೀಲಾಂಬಿಕೆಯನ್ನು ಪರಪ್ಪನ ಅಗ್ರಹಾರ ಜೈಲಿಗೆ ಶಿಫ್ಟ್ ಮಾಡಲಾಗಿದೆ. ಅಲ್ಲದೇ ಪ್ರಕರಣದಲ್ಲಿ ಮತ್ತಷ್ಟು ಮಂದಿ ಭಾಗಿ ಶಂಕೆ ಇದ್ದು ಪೊಲೀಸರ ತನಿಖೆ ಮುಂದುವರಿದಿದೆ. ಇದನ್ನೂ ಓದಿ: ಹಿಂದೂ ಭಾವನೆಗೆ ಧಕ್ಕೆ: ಮ್ಯೂಸಿಕ್ ಡೈರೆಕ್ಟರ್ ದೇವಿ ಶ್ರೀ ಪ್ರಸಾದ್ ವಿರುದ್ಧ ಪ್ರಕರಣ
Live Tv
[brid partner=56869869 player=32851 video=960834 autoplay=true]
ರಾಮನಗರ: ಮಾಗಡಿ ತಾಲೂಕಿನ ಕಂಚುಗಲ್ ಬಂಡೇಮಠದ (Bande Mutt) ಬಸವಲಿಂಗ ಸ್ವಾಮೀಜಿ (Basavalinga Swamiji) ಆತ್ಮಹತ್ಯೆ ಪ್ರಕರಣ ಸಂಬಂಧ ಮೂವರು ಆರೋಪಿಗಳ ಪೊಲೀಸ್ (Police) ಕಸ್ಟಡಿ ನಾಳೆ ಅಂತ್ಯಗೊಳ್ಳಲಿದೆ.
ನ.5 ಶನಿವಾರ ನಾಳೆ ಮತ್ತೆ ಮಾಗಡಿ ಕೋರ್ಟ್ಗೆ (Court) ಮೃತ್ಯುಂಜಯ ಸ್ವಾಮೀಜಿ, ನೀಲಾಂಬಿಕೆ ಹಾಗೂ ಮಹದೇವಯ್ಯರನ್ನು ಪೊಲೀಸರು ಹಾಜರು ಪಡಿಸಲಿದ್ದಾರೆ. ಕಳೆದ ಅಕ್ಟೋಬರ್ 30 ರಂದು ಬಂಧನವಾಗಿದ್ದ ಮೂವರು ಆರೋಪಿಗಳನ್ನು ಸೋಮವಾರ ಕೋರ್ಟ್ಗೆ ಹಾಜರು ಪಡಿಸಲಾಗಿತ್ತು ಬಳಿಕ ಹೆಚ್ಚಿನ ತನಿಖೆಗಾಗಿ ಪೊಲೀಸ್ ಕಸ್ಟಡಿಗೆ ಪಡೆಯಲಾಗಿತ್ತು. ಸದ್ಯ ನಾಳೆಗೆ ಪೊಲೀಸ್ ಕಸ್ಟಡಿ ಅಂತ್ಯಗೊಳ್ಳಲಿದ್ದು ಈ ಬಗ್ಗೆ ಮತ್ತೆ ಮಾಗಡಿ ಜೆಎಂಎಫ್ಸಿ ಕೋರ್ಟ್ ನಾಳೆ ವಿಚಾರಣೆ ನಡೆಸಲಿದೆ. ಇದನ್ನೂ ಓದಿ: 4 ಕ್ಷೇತ್ರಗಳ ಪೈಕಿ ಸಿದ್ದು ಎಲ್ಲಿಂದ ಸ್ಪರ್ಧೆ – ನ.13ಕ್ಕೆ ಪ್ರಕಟ ಸಾಧ್ಯತೆ
ಪ್ರಕರಣ ಸಂಬಂಧ ಮತ್ತಷ್ಟು ಸಾಕ್ಷಿ ಕಲೆಹಾಕುವ ನಿಟ್ಟಿನಲ್ಲಿ ಮತ್ತೆ ಪೊಲೀಸರು ಕಸ್ಟಡಿಗೆ ಕೇಳ್ತಾರಾ ಅಥವಾ ಆರೋಪಿಗಳಿಗೆ ನ್ಯಾಯಾಂಗ ಬಂಧನಕ್ಕೆ ನೀಡುತ್ತಾರಾ ಎನ್ನುವುದನ್ನು ಕಾದುನೋಡಬೇಕಿದೆ. ಈಗಾಗಲೇ ಪೊಲೀಸ್ ತನಿಖೆ ವೇಳೆ ಕಣ್ಣೂರು ಮಠ ಸ್ವಾಮೀಜಿ ತಪ್ಪೊಪ್ಪಿಕೊಂಡಿದ್ದಾರೆ ಎನ್ನಲಾಗಿದ್ದು, ಪ್ರಕರಣದ ತನಿಖೆ ಮುಂದುವರಿದಿದೆ. ಇದನ್ನೂ ಓದಿ: ಬಂಡೇಮಠ ಶ್ರೀಗಳ ಆತ್ಮಹತ್ಯೆ ಕೇಸ್- ವೀರಶೈವ ಲಿಂಗಾಯತ ಮುಖಂಡನಿಗೆ ನೋಟಿಸ್
Live Tv
[brid partner=56869869 player=32851 video=960834 autoplay=true]
– ಡೆತ್ ನೋಟ್ನಲ್ಲಿ ಇಬ್ಬರು ಶ್ರೀ ಎಂದು ಉಲ್ಲೇಖ – ಹಾಗಾದ್ರೆ ಆ ಮತ್ತೊಬ್ಬ ಶ್ರೀ ಯಾರು?
ರಾಮನಗರ: ಬಂಡೇಮಠದ (BandeMutt) ಬಸವಲಿಂಗ ಸ್ವಾಮೀಜಿ (BasavalingaSwamiji) ಆತ್ಮಹತ್ಯೆ ಪ್ರಕರಣ ದಿನಕ್ಕೊಂದು ಮೇಜರ್ ಟ್ವಿಸ್ಟ್ ಪಡೆದುಕೊಳ್ಳುತ್ತಿದೆ. ಪೊಲೀಸ್ ಕಸ್ಟಡಿಯಲ್ಲಿರುವ ಮೂವರು ಆರೋಪಿಗಳು ವಿಚಾರ ವೇಳೆ ಮಹತ್ವದ ವಿಚಾರಗಳನ್ನು ಬಾಯ್ಬಿಟ್ಟಿದ್ದಾರೆ ಎನ್ನಲಾಗಿದೆ.
ಶ್ರೀಗಳ ಆತ್ಮಹತ್ಯೆ ಹಿಂದೆ ಮತ್ತೊಬ್ಬ ಪ್ರತಿಷ್ಠಿತ ಮಠವೊಂದರ ಪ್ರಭಾವಿ ಸ್ವಾಮೀಜಿಯ ಕೈವಾಡವಿದೆ ಎಂಬ ಶಂಕೆ ವ್ಯಕ್ತವಾಗಿದೆ. ಬಂಡೆ ಮಠದ ಬಸವಲಿಂಗ ಶ್ರೀ ಆತ್ಮಹತ್ಯೆ ಸಂಬಂಧ ಮೂವರು ಆರೋಪಿಗಳನ್ನು ಕಸ್ಟಡಿಗೆ ಪಡೆದಿರುವ ಪೊಲೀಸರು ವಿಚಾರಣೆ ಮುಂದುವರೆಸಿದ್ದಾರೆ. ಡೆತ್ನೋಟ್ನಲ್ಲಿ ಇಬ್ಬರು ಶ್ರೀಗಳಿಂದ ತೊಂದರೆ ಆಗುತ್ತಿದೆ ಎಂದು ಬಸವಲಿಂಗ ಶ್ರೀ ಉಲ್ಲೇಖಿಸಿದ್ದಾರೆ. ಇದನ್ನು ಬೆನ್ನತ್ತಿರುವ ಪೊಲೀಸರು ಆ ಮತ್ತೊಬ್ಬ ಶ್ರೀಗೂ ಗಾಳ ಹಾಕಿದ್ದಾರೆ. ಬಂಧಿತ ಮೂವರು ಆರೋಪಿಗಳ ವಿಚಾರಣೆ ನಡೆಸಿದ ಪೊಲೀಸರಿಗೆ ಮತ್ತಷ್ಟು ಆಶ್ಚರ್ಯಕರ ವಿಚಾರಗಳನ್ನು ಆರೋಪಿಗಳು ಬಾಯ್ಬಿಟ್ಟಿದ್ದಾರೆ ಎಂದು ಹೇಳಲಾಗುತ್ತಿದೆ. ಇದನ್ನೂ ಓದಿ: 2ನೇ ಬಾರಿಗೆ ದಾಖಲೆ GST ಸಂಗ್ರಹ – 1.52 ಲಕ್ಷ ಕೋಟಿಯಲ್ಲಿ ಯಾವ ರಾಜ್ಯದ ಪಾಲು ಎಷ್ಟು?
ಬಸವಲಿಂಗ ಶ್ರೀಗೆ ಕಿರುಕುಳ ನೀಡಿದ್ದ ಆ ಮತ್ತೊಂದು ಮಠದ ಶ್ರೀ ಯಾರು? ಬಂಡೇ ಮಠಕ್ಕೂ ಆ ಮತ್ತೊಬ್ಬ ಶ್ರೀಗೂ ಏನು ಸಂಬಂಧ ಎಂಬ ಪ್ರಶ್ನೆಗಳು ಉದ್ಭವಿಸಿವೆ. ಸದ್ಯ ವಿವಿಧ ಆಯಾಮಗಳಲ್ಲಿ ತನಿಖೆ ನಡೆಸುತ್ತಿರುವ ಪೊಲೀಸರು ಆ ಮತ್ತೊಬ್ಬ ಶ್ರೀಗಳನ್ನು ವಿಚಾರಣೆ ನಡೆಸಿದ್ದಾರೆ. ಅದು ಕುಣಿಗಲ್ ತಾಲೂಕಿನ ಪ್ರತಿಷ್ಠಿತ ಮಠವೊಂದರ ಸ್ವಾಮೀಜಿ ಎಂಬ ಮಾತುಗಳು ಸಹ ಹರಿದಾಡುತ್ತಿವೆ. ಆದರೆ ಈ ಕುರಿತು ಮತ್ಯಾವ ಸ್ವಾಮೀಜಿಯನ್ನೂ ವಿಚಾರಣೆ ನಡೆಸಿಲ್ಲ ಎಂದು ಪೊಲೀಸರು ಹೇಳಿತ್ತಿದ್ದಾರೆ. ಇನ್ನೂ ಆತ್ಮಹತ್ಯೆ ಕೇಸ್ನಲ್ಲಿ ಬಗೆದಷ್ಟು ಟ್ವಿಸ್ಟ್ ಮೇಲೆ ಟ್ವಿಸ್ಟ್ ದೊರೆಯುತ್ತಿದೆ. ಸದ್ಯ ವಿಚಾರಣೆಯಲ್ಲಿರುವ ಆರೋಪಿಗಳು ಮತ್ತಷ್ಟು ಜನರ ಹೆಸರುಗಳನ್ನು ಬಾಯ್ಬಿಡ್ತಾರಾ? ಆ ಮತ್ತೊಬ್ಬ ಸ್ವಾಮೀಜಿಯ ಬಂಧನವೂ ಆಗುತ್ತಾ ಎಂಬುದನ್ನು ಕಾದುನೋಡಬೇಕಿದೆ. ಇದನ್ನೂ ಓದಿ: ಮುರಿದು ಬಿದ್ದ ಪುರಾತನ ವೀರಭದ್ರೇಶ್ವರ ಸ್ವಾಮಿಯ ರಥದ ಚಕ್ರ – ಅದೃಷ್ಟವಶಾತ್ ಭಕ್ತರು ಪಾರು
Live Tv
[brid partner=56869869 player=32851 video=960834 autoplay=true]
ರಾಮನಗರ: ಬಂಡೇಮಠದ (Bande Mutt) ಬಸವಲಿಂಗ ಸ್ವಾಮೀಜಿ (Basavalinga Swamiji) ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದ ಮೂವರು ಆರೋಪಿಗಳನ್ನು ಆರು ದಿನಗಳ ಕಾಲ ಪೊಲೀಸರ (Police) ವಶಕ್ಕೆ ನೀಡಲಾಗಿದೆ.
ಇಂದು ಮಾಗಡಿ 1ನೇ ಜೆಎಂಎಫ್ಸಿ ನ್ಯಾಯಾಲಯದ (JMFC Court) ನ್ಯಾಯಾಧೀಶರಾದ ಧನಲಕ್ಷ್ಮೀ ಎದುರು ಆರೋಪಿಗಳನ್ನು ಹಾಜರುಪಡಿಸಲಾಗಿತ್ತು. ಹೆಚ್ಚಿನ ವಿಚಾರಣೆಗಾಗಿ ಪೊಲೀಸರು ಕಸ್ಟಡಿಗೆ ಕೇಳಿದ್ದರು. ಪೊಲೀಸರ ಬೇಡಿಕೆಯನ್ನು ಪುರಸ್ಕರಿಸಿದ ನ್ಯಾಯಾಧೀಶರು ಆರೋಪಿಗಳನ್ನು ಪೊಲೀಸರ ವಶಕ್ಕೆ ಒಪ್ಪಿಸಲು ಸಮ್ಮತಿ ನೀಡಿದ್ದಾರೆ. ನವೆಂಬರ್ 5 ರವರೆಗೂ ಆರೋಪಿಗಳು ಪೊಲೀಸರ ವಶದಲ್ಲಿದ್ದು ನಂತರ ಅವರನ್ನು ಮತ್ತೊಮ್ಮೆ ನ್ಯಾಯಾಲಯಕ್ಕೆ ಹಾಜರುಪಡಿಸುವಂತೆ ಕೋರ್ಟ್ ಸೂಚಿಸಿದೆ. ಇದನ್ನೂ ಓದಿ: ಬಂಡೆಮಠ ಶ್ರೀ ಆತ್ಮಹತ್ಯೆ ಪ್ರಕರಣ- ನೀಲಾಂಬಿಕೆ ಮೊಬೈಲ್ನಿಂದ ನಿತ್ಯ ಮೆಸೇಜ್!
ವಿಚಾರಣೆ ಅಗತ್ಯವಿದೆ ಎಂದಾದರೆ ಪೊಲೀಸರು ಅವರನ್ನು ನವೆಂಬರ್ 5 ರ ಬಳಿಕ ಮತ್ತೆ ವಶಕ್ಕೆ ಕೇಳುವ ಸಾಧ್ಯತೆ ಇದೆ. ಸದ್ಯ ಮೃತ ಬಸವಲಿಂಗ ಸ್ವಾಮೀಜಿ ತಮ್ಮ ಡೆತ್ನೋಟ್ನಲ್ಲಿ ಉಲ್ಲೇಖಿಸಿರುವ ಇತರರಿಗಾಗಿ ಪೊಲೀಸರು ಹುಡುಕಾಟ ನಡೆಸಿದ್ದಾರೆ. ಇದನ್ನೂ ಓದಿ: ಇಸ್ಪೀಟ್ ಆಡುವಾಗ ಕುಸಿದು ಬಿದ್ದು ವ್ಯಕ್ತಿ ಸಾವು
Live Tv
[brid partner=56869869 player=32851 video=960834 autoplay=true]
ರಾಮನಗರ: ಬಂಡೆ ಮಠ (Bande Mutt) ದ ಬಸವಲಿಂಗ ಶ್ರೀಗಳ ಆತ್ಮಹತ್ಯೆ ಪ್ರಕರಣ ತನಿಖೆ ಮುಂದುವರಿದಿದ್ದು, ದಿನಕ್ಕೊಂದು ತಿರುವು ಪಡೆದುಕೊಳ್ಳುತ್ತಿದೆ. ಬಸವಲಿಂಗ ಶ್ರೀ (Basavalinga Shree) ಗಳನ್ನು ಖೆಡ್ಡಾಗೆ ಕೆಡವಲು ಮತ್ತೊಂದು ಮಠದ ಸ್ವಾಮೀಜಿ ಕೂಡ ಕೈ ಜೋಡಿಸಿದ್ದರು ಎಂಬ ಮಾತುಗಳು ಕೇಳಿಬರುತ್ತಿದ್ದಂತೆ. ಆ ಸ್ವಾಮೀಜಿ ನಿರೀಕ್ಷಣಾ ಜಾಮೀನು ಪಡೆಯಲು ಮುಂದಾಗಿದ್ದಾರೆ ಎಂಬ ವಿಚಾರಗಳು ಹರಿದಾಡುತ್ತಿದೆ.
ದಿನ ಕಳೆದಂತೆ ಬಸವಲಿಂಗ ಶ್ರೀಗಳ ಆತ್ಮಹತ್ಯೆ ಕೇಸ್ ಬಗ್ಗೆ ಊಹಾಪೋಹಗಳ ಜೊತೆ ವದಂತಿಗಳೂ ಹೆಚ್ಚುತ್ತಿವೆ. ಒಂದೆಡೆ ಪೊಲೀಸರ ವಿಚಾರಣೆ ತೀವ್ರಗೊಂಡರೆ ಮತ್ತೊಂದೆಡೆ ಶ್ರೀಗಳನ್ನು ಖೆಡ್ಡಾಗೆ ಕೆಡವಿದ ಟೀಂ ಬಗ್ಗೆ ಸಾಕಷ್ಟು ವಿಚಾರಗಳು ಮುನ್ನೆಲೆಗೆ ಬರ್ತಿವೆ. ಇಡೀ ಪ್ರಕರಣದ ಮಾಸ್ಟರ್ ಮೈಂಡ್ ಮತ್ತೊಂದು ಮಠದ ಸ್ವಾಮೀಜಿ ಎಂಬ ವಿಚಾರ ಇದೀಗ ಚರ್ಚೆಗೆ ಬಂದಿರೋದು ಮತ್ತಷ್ಟು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ. ಈಗಾಗಲೇ ಪ್ರಕರಣದಲ್ಲಿ ಓರ್ವ ಸ್ವಾಮೀಜಿಯನ್ನೂ ಪೊಲೀಸರು ವಿಚಾರಣೆ ನಡೆಸಿದ್ದಾರೆ ಎನ್ನಲಾಗಿದೆ. ಇದನ್ನೂ ಓದಿ: ಬಂಡೇ ಮಠದ ಸ್ವಾಮೀಜಿ ಆತ್ಮಹತ್ಯೆ ಹಿಂದೆ ಲೋಕಲ್ ಸ್ವಾಮೀಜಿ ಕೈವಾಡ!
ಇತ್ತ ಪೊಲೀಸರ ವಿಚಾರಣೆ ತೀವ್ರಗೊಳ್ತಿದ್ದಂತೆಯೇ ಆ ಸ್ವಾಮೀಜಿಗೆ ನಡುಕ ಉಂಟಾಗಿದೆ. ಬಸವಲಿಂಗ ಶ್ರೀ ಮೇಲಿನ ದ್ವೇಷಕ್ಕೆ ಹನಿಟ್ರ್ಯಾಪ್ ಅಸ್ತ್ರವನ್ನ ಬಳಸಿದವರಲ್ಲಿ ಪ್ರಮುಖ ಪಾತ್ರ ವಹಿಸಿರೋದು ಮತ್ತೊಂದು ಮಠದ ಶ್ರೀಗಳು ಎಂದು ಹೇಳಲಾಗ್ತಿದೆ. ಆದರೆ ಆ ಮತ್ತೊಂದು ಮಠದ ಸ್ವಾಮೀಜಿ ಯಾರು.? ಬಂಡೇ ಮಠಕ್ಕೂ ಮತ್ತೊಬ್ಬ ಸ್ವಾಮೀಜಿಗೂ ಏನು ಸಂಬಂಧ ಅನ್ನೊದು ನಿಗೂಢವಾಗಿದೆ. ಇನ್ನು ವಿಚಾರಣೆ ಎದುರಿಸುತ್ತಿರುವಾಗಲೇ ಆ ಮತ್ತೊಬ್ಬ ಶ್ರೀ ನಿರೀಕ್ಷಣಾ ಜಾಮೀನಿಗೆ ಅರ್ಜಿ ಸಲ್ಲಿಸಿದ್ದಾರೆ ಅಂತಲೂ ಹೇಳಲಾಗ್ತಿದೆ. ಇದನ್ನೂ ಓದಿ: ಬಂಡೇ ಮಠದ ಶ್ರೀ ಬರೆದಿದ್ದು ಒಟ್ಟು 6 ಪುಟಗಳ ಡೆತ್ನೋಟ್ – ಈಗಾಗಲೇ 20 ಮಂದಿಯ ವಿಚಾರಣೆ
ಅಲ್ಲದೇ ಶ್ರೀಗಳು ಆತ್ಮಹತ್ಯೆ ಮಾಡಿಕೊಳ್ಳುವ ಮುನ್ನ ಓರ್ವ ಶಾಸಕನಿಗೂ ಕರೆ ಮಾಡಿ ತಮ್ಮನ್ನು ಟ್ರ್ಯಾಪ್ ನಲ್ಲಿ ಸಿಲುಕಿಸಿರುವ ಬಗ್ಗೆ ಹೇಳಿಕೊಂಡಿದ್ದಾರೆ ಎಂದು ಹೇಳಲಾಗಿದೆ. ಈ ಬಗ್ಗೆ ಸಹಾಯ ಮಾಡಿ ಅಂತಲೂ ಕೇಳಿಕೊಂಡಿದ್ದಾರೆ ಎಂದು ಶ್ರೀಗಳು ಮನವಿ ಮಾಡಿದ್ದರಂತೆ. ಅಷ್ಟಕ್ಕೂ ಆ ಶಾಸಕರಾದ್ರೂ ಯಾರು.? ಶಾಸಕರಿಗೂ ಹಾಗೂ ಶ್ರೀಗಳಿಗೂ ಏನು ಸಂಬಂಧ ಆನ್ನೋ ಹೊಸ ಚರ್ಚೆ ಕೂಡಾ ಮಠದ ಸುತ್ತಮುತ್ತ ನಡೆಯುತ್ತಿದೆ. ಒಟ್ಟಾರೆ ಶ್ರೀಗಳ ಆತ್ಮಹತ್ಯೆ ಕುರಿತು ಹಲವು ಪ್ರಶ್ನೆಗೆ ಪೊಲೀಸರೇ ಉತ್ತರಿಸಬೇಕಿದೆ. ಶ್ರೀಗಳಿಗೆ ಖೆಡ್ಡಾ ತೋಡಿದ ಆ ಗ್ಯಾಂಗ್ ಯಾವುದು, ಅದರಲ್ಲಿ ಯಾರೆಲ್ಲಾ ಇದ್ದಾರೆ.? ಇಡೀ ಪ್ರಕರಣದ ಮಾಸ್ಟರ್ ಮೈಂಡ್ ಯಾರು ಎಂಬುದು ತನಿಖೆ ಬಳಿಕವಷ್ಟೇ ಬಯಲಾಗಬೇಕಿದೆ.
Live Tv
[brid partner=56869869 player=32851 video=960834 autoplay=true]
ರಾಮನಗರ: ಮಾಗಡಿ ತಾಲೂಕಿನ ಬಂಡೇ ಮಠದ (Bande Mutt) ಬಸವಲಿಂಗ ಶ್ರೀಗಳ (Basavalinga Swamiji) ಆತ್ಮಹತ್ಯೆ ಪ್ರಕರಣ ದಿನಕ್ಕೊಂದು ತಿರುವು ಪಡೆದುಕೊಳ್ಳುತ್ತಿದ್ದು, ಮತ್ತೊಂದು ಸ್ಫೋಟಕ ಮಾಹಿತಿ ಬಹಿರಂಗವಾಗಿದೆ.
ಹೌದು. ಸ್ಥಳೀಯ ಸ್ವಾಮೀಜಿ ಹಾಗೂ ಇತರ ಏಳೆಂಟು ಮಂದಿಯಿಂದ ಕಿರುಕುಳ ಎದುರಾಗ್ತಿದೆ. ಮಠದ ವಿಚಾರದಲ್ಲಿ ಆಗ್ಗಾಗ್ಗೆ ತೊಂದರೆ ಉಂಟು ಮಾಡ್ತಿದ್ದಾರೆ. ನನ್ನ ಸಾವಿಗೆ ಗೊತ್ತಿಲ್ಲದಿರುವ ಆ ಮಹಿಳೆಯೇ ಕಾರಣ ಎಂದು ಸಾವಿಗೂ ಮುನ್ನ ಡೆತ್ ನೋಟ್ನಲ್ಲಿ (Death Note) ಬರೆದಿದ್ದಾರೆ. ಈ ಹಿನ್ನೆಲೆಯಲ್ಲಿ ಶ್ರೀಗಳ ಆತ್ಮಹತ್ಯೆ ಹಿಂದೆ ಲೋಕಲ್ ಸ್ವಾಮೀಜಿಯೊಬ್ಬರ ಕೈವಾಡ ಇರೋದು ತನಿಖೆ (Investigation) ವೇಳೆ ಕನ್ಫರ್ಮ್ ಆಗಿದೆ. ಅಲ್ಲದೇ ಸ್ಥಳೀಯ ಸ್ವಾಮೀಜಿಯೊಂದಿಗೆ ಏಳೆಂಟು ಮಂದಿ ಸಹ ಕೈ ಜೋಡಿಸಿರುವ ಮಾಹಿತಿ ಇದೆ ಅನ್ನೋದು ಪೊಲೀಸರ ಗುಮಾನಿ. ಇದನ್ನೂ ಓದಿ: ಬಂಡೇ ಮಠದ ಶ್ರೀ ಬರೆದಿದ್ದು ಒಟ್ಟು 6 ಪುಟಗಳ ಡೆತ್ನೋಟ್ – ಈಗಾಗಲೇ 20 ಮಂದಿಯ ವಿಚಾರಣೆ
ಮಹಿಳೆ ಮೊಬೈಲ್ ಸಂಖ್ಯೆ ಪತ್ತೆ: ಆತ್ಮಹತ್ಯೆ (Suicide) ದಿನ ಶ್ರೀಗಳ ಮೊಬೈಲ್ (Mobile) ಸೀಜ್ ಮಾಡಿ ಎಫ್ಎಸ್ಎಲ್ಗೆ ಕಳಿಸಿದ್ದ ಪೊಲೀಸರು ಇದೀಗ ಮೊಬೈಲ್ನ ಸಂಪೂರ್ಣ ಡೀಟೈಲ್ಸ್ ಕಲೆಹಾಕಿದ್ದಾರೆ. ಒಟ್ಟು ಮೂರು ವೀಡಿಯೋಗಳನ್ನ ಸ್ವಾಮೀಜಿಗೆ ಮೊಬೈಲ್ನಲ್ಲಿ ಕಳುಹಿಸಲಾಗಿದೆ. ಅದರಲ್ಲಿ ಮಹಿಳೆಯ ಮುಖ ಕಾಣದಂತೆ ಎಡಿಟ್ ಮಾಡಲಾಗಿದೆ. ಇದೀಗ ಸ್ವಾಮೀಜಿಗೆ ವೀಡಿಯೊ ಕಾಲ್ ರೆಕಾರ್ಡ್ ಕಳಿಸಿರೊ ಆ ಮಹಿಳೆಯ ಮೊಬೈಲ್ ನಂಬರ್ ಪತ್ತೆ ಮಾಡಲಾಗಿದೆ. ಮಹಿಳೆಯ ಬಂಧನಕ್ಕೆ ಬಲೆ ಬೀಸಿರುವ ಪೊಲೀಸರು ಇಂದು ಅಥವಾ ನಾಳೆ ಒಳಗಾಗಿ ಅರೆಸ್ಟ್ ಮಾಡುವ ಸಾಧ್ಯತೆ ಇದೆ. ಮಹಿಳೆ ವಿಚಾರಣೆ ಬಳಿಕ ಮಹಿಳೆ ಹಿಂದಿರುವ ಕಾಣದ ಕೈಗಳು ಸಹ ಹೊರಗೆ ಬರುವ ಸಾಧ್ಯತೆ ಎಂದು ತನಿಖಾಧಿಕಾರಿಗಳು ತಿಳಿಸಿದ್ದಾರೆ.
Live Tv
[brid partner=56869869 player=32851 video=960834 autoplay=true]
ರಾಮನಗರ: ಮಾಗಡಿ (Magadi) ತಾಲೂಕಿನ ಬಂಡೆಮಠದ ಶ್ರೀಗಳ (Kanchugal Bande Mutt) ಆತ್ಮಹತ್ಯೆ ಪ್ರಕರಣ ದಿನಕ್ಕೊಂದು ತಿರುವು ಪಡೆದುಕೊಳ್ಳುತ್ತಿದೆ. ಪ್ರಕರಣ ಸಂಬಂಧ ಪೊಲೀಸ್ ತನಿಖೆ ಚುರುಕುಗೊಂಡಿದ್ದು, ಶ್ರೀಗಳ ಆಪ್ತ ಚಾಲಕ, ಮಠದ ಸಿಬ್ಬಂದಿಯನ್ನು ವಿಚಾರಣೆ ನಡೆಸಲಾಗಿದೆ. ಈ ನಡುವೆ ಶ್ರೀಗಳ ಬಳಿ 10 ಕೋಟಿ ಹಣಕ್ಕೆ ಡಿಮ್ಯಾಂಡ್ ಮಾಡಲಾಗಿತ್ತು ಎನ್ನುವ ಮಾಹಿತಿ ಬಹಿರಂಗವಾಗ್ತಿದ್ದು ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್ ಸಿಕ್ಕಿದೆ.
ಕಂಚುಗಲ್ ಬಂಡೆಮಠದ ಶ್ರೀಗಳು ಆತ್ಮಹತ್ಯೆ ಮಾಡಿಕೊಂಡು ಇಂದಿಗೆ ನಾಲ್ಕು ದಿನ ಕಳೆದಿದೆ. ಶ್ರೀಗಳ ಆತ್ಮಹತ್ಯೆ ಪ್ರಕರಣದ ತನಿಖೆ ದಿನಕ್ಕೊಂದು ತಿರುವು ಪಡೆದುಕೊಳ್ಳುತ್ತಿರುವುದು ಮತ್ತಷ್ಟು ಅನುಮಾನಗಳನ್ನು ಹೆಚ್ಚಿಸಿದೆ. ಇದರ ಜೊತೆಗೆ ಮತ್ತೊಂದು ಸ್ಫೋಟಕ ಮಾಹಿತಿ ಬಹಿರಂಗವಾಗಿದ್ದು, ಶ್ರೀಗಳ ಆಪ್ತವಲಯದಲ್ಲೇ ಗುರುತಿಸಿಕೊಂಡಿದ್ದ ಪ್ರಭಾವಿಗಳೇ ಸಂಚು ರೂಪಿಸಿ ಖೆಡ್ಡಾಕ್ಕೆ ಕೆಡವಿದ್ದಾರೆ ಎನ್ನಲಾಗುತ್ತಿದೆ. ಶ್ರೀಗಳ ಜೊತೆ ನಿಕಟ ಸಂಪರ್ಕ ಹೊಂದಿದ್ದ ಕೆಲ ವ್ಯಕ್ತಿಗಳೇ ಮಹಿಳೆಯನ್ನು ಶ್ರೀಗಳಿಗೆ ಪರಿಚಯ ಮಾಡಿಕೊಟ್ಟಿದ್ದರು ಎನ್ನಲಾಗ್ತಿದೆ. ಈ ಕುರಿತಾಗಿ ಈಗಾಗಲೇ 7 ಜನರ ವಿಚಾರಣೆ ನಡೆಸಿರುವ ಬಗ್ಗೆ ಪೊಲೀಸ್ ಮೂಲಗಳು ತಿಳಿಸಿವೆ.
ಬಸವಲಿಂಗ ಶ್ರೀಗಳ (Basavalinga Swamiji) ವೀಡಿಯೋವೊಂದು (Video) ವೈರಲ್ ಆಗಿರುವ ಹಿನ್ನೆಲೆಯಲ್ಲಿ ವೀಡಿಯೋ ವೈರಲ್ ಮಾಡಿರುವ ಬಗ್ಗೆಯೂ ಪೊಲೀಸರು ತನಿಖೆ ಮಾಡ್ತಿದ್ದಾರೆ. ಅಲ್ಲದೇ ವೀಡಿಯೋ ಮಾಡಿಕೊಂಡಿದ್ದ ಟೀಮ್ ಶ್ರೀಗಳ ಬಳಿ 10 ಕೋಟಿಗೆ ಹಣಕ್ಕೆ ಬೇಡಿಕೆ ಇಟ್ಟಿದ್ದರು ಎನ್ನಲಾಗುತ್ತಿದೆ. ವೀಡಿಯೋವನ್ನು ಸ್ವಾಮೀಜಿ ಮೊಬೈಲ್ಗೆ ಕಳುಹಿಸಿ ಬೆದರಿಕೆ ಹಾಕಿ ಅವರಿಗೆ ಮಾನಸಿಕ ಕಿರುಕುಳ ನೀಡಲಾಗಿದೆ. ಹತ್ತು ದಿನದ ಹಿಂದೆಯೇ ಬಸವಲಿಂಗ ಸ್ವಾಮೀಜಿ ಮೊಬೈಲ್ಗೆ ಮಠದ ಆಪ್ತನೇ ವೀಡಿಯೋ ಕಳುಹಿಸಿರುವ ಶಂಕೆ ವ್ಯಕ್ತವಾಗಿದೆ. ದೊಡ್ಡ ಮೊತ್ತದ ಹಣವನ್ನು ಹೊಂದಿಸುವಲ್ಲಿ ಸ್ವಾಮೀಜಿ ವಿಫಲರಾಗಿ ಡೆತ್ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ಮಠದ ಮೂಲಗಳು ತಿಳಿಸಿವೆ.
ಇನ್ನೂ ಬಸವಲಿಂಗ ಸ್ವಾಮೀಜಿಯ ಆಪ್ತ ಚಾಲಕ ಸೇರಿದಂತೆ ನಾಲ್ವರ ಮೊಬೈಲ್ ಫೋನನ್ನು ವಶಕ್ಕೆ ಪಡೆದಿರುವ ಪೊಲೀಸರು ಮೊಬೈಲ್ಗಳ ಪರಿಶೀಲನೆ ನಡೆಸಿದ್ದಾರೆ. ಮತ್ತೆ ವಿಚಾರಣೆಗೆ ಕರೆದಾಗ ಬರುವಂತೆ ಸೂಚನೆ ನೀಡಿ ಊರು ಬಿಟ್ಟು ಹೋಗದಂತೆ ಎಚ್ಚರಿಕೆ ನೀಡಿದ್ದಾರೆ. ಅಲ್ಲದೇ ಆಪ್ತಚಾಲಕ ಮತ್ತು ಸಿಬ್ಬಂದಿಯಿಂದ ಸ್ವಾಮೀಜಿಯ ಚಲನಾವಲನದ ಬಗ್ಗೆ ಮಾಹಿತಿ ಸಂಗ್ರಹಿಸಿ ಮಠಕ್ಕೆ ಬಂದು ಹೋಗ್ತಿದ್ದವರ ಬಗ್ಗೆಯೂ ಸಂಪೂರ್ಣ ಮಾಹಿತಿ ಕಲೆಹಾಕಲಾಗ್ತಿದೆ. ಇದನ್ನೂ ಓದಿ: ಬಸವಲಿಂಗ ಸ್ವಾಮೀಜಿ ಆತ್ಮಹತ್ಯೆ ಪ್ರಕರಣ – 10 ಕೋಟಿಗೆ ಬೇಡಿಕೆ ಇಟ್ಟಿತ್ತಾ ಮಹಿಳೆ ಆ್ಯಂಡ್ ಟೀಂ?
ಒಟ್ಟಾರೆ ದಿನ ಕಳೆದಂತೆ ಶ್ರೀಗಳ ಆತ್ಮಹತ್ಯೆ ಪ್ರಕರಣಕ್ಕೆ ರೆಕ್ಕೆಪುಕ್ಕಗಳು ಹೆಚ್ಚಾಗುತ್ತಿವೆ. ತನಿಖೆ ಬಗ್ಗೆ ಸಾಕಷ್ಟು ಊಹಾಪೋಹಗಳು ವ್ಯಕ್ತವಾಗುತ್ತಿರುವ ಹಿನ್ನೆಲೆ ಮಠದ ಕೆಲ ಮುಖಂಡರು ಸಿಎಂ ಭೇಟಿಯಾಗಿ ಪ್ರಕರಣವನ್ನು ಶೀಘ್ರವಾಗಿ ತನಿಖೆ ಮುಗಿಸುವಂತೆ ಮನವಿ ಮಾಡುವ ಬಗ್ಗೆ ಮಾಹಿತಿ ದೊರೆತಿದೆ. ಇನ್ನಾದರೂ ತನಿಖೆ ಮತ್ತಷ್ಟು ತೀವ್ರಗೊಳ್ಳಲಿದ್ಯಾ ಎಂದು ಕಾದುನೋಡಬೇಕಿದೆ. ಇದನ್ನೂ ಓದಿ: ಬಸವಲಿಂಗ ಶ್ರೀ ವೀಡಿಯೋ ಕಾಲ್ ವೈರಲ್- ಮೂವರು ಮಹಿಳೆಯರ ಪ್ರತ್ಯೇಕ ವಿಚಾರಣೆ
Live Tv
[brid partner=56869869 player=32851 video=960834 autoplay=true]
ಬೆಂಗಳೂರು/ನೆಲಮಂಗಲ: ಮಾಗಡಿ ಬಂಡೆ ಮಠದ (Bande Math) ಬಸವಲಿಂಗ ಸ್ವಾಮೀಜಿ (Basavalinga Swamiji) ಆತ್ಮಹತ್ಯೆ ಪ್ರಕರಣದ ಸುತ್ತ ದಿನ ಕಳೆದಂತೆ ಅನುಮಾನ ಹುತ್ತ ಸೃಷ್ಠಿಯಾಗುತ್ತಿದೆ.
ಮಂಗಳವಾರ ಶ್ರೀಗಳು ಬರೆದಿದ್ದಾರೆ ಎನ್ನಲಾದ ಡೆತ್ನೋತ್ನ ಒಂದು ಪುಟ ವೈರಲ್ ಆದ ಬೆನ್ನಲ್ಲೆ, ಬುಧವಾರ ಶ್ರೀಗಳ ವೀಡಿಯೋ ಕಾಲ್ ತುಣುಕೊಂದು ವೈರಲ್ ಆಗಿದ್ದು, ಇದೀಗ ಈ ಬಗ್ಗೆ ಸಾಕಷ್ಟು ಅನುಮಾನ ಹುಟ್ಟುಕೊಂಡಿದೆ. ಮಹಿಳೆಯೊಬ್ಬಳ ಜೊತೆ ಸ್ವಾಮೀಜಿ ವೀಡಿಯೋ ಕಾಲ್ನಲ್ಲಿ ಮಾತನಾಡುತ್ತಿರುವ ವೀಡಿಯೋ ದೊರೆತಿದ್ದು, ಇದರ ಹಿಂದಿರುವ ಕಾಣದ ಕೈಗಳ ಹುಡುಕಾಟ ಶುರುವಾಗಿದೆ.
ಬಸವಲಿಂಗ ಸ್ವಾಮೀಜಿ ಮಹಿಳೆ ಜೊತೆಗೆ ಮಾತನಾಡಿದ ವೀಡಿಯೋವನ್ನು ರೆಕಾರ್ಡ್ ಮಾಡಿಕೊಂಡು, ನಂತರ ವೀಡಿಯೋವನ್ನು ಸ್ವಾಮೀಜಿ ಮೊಬೈಲ್ಗೆ ಕಳುಹಿಸಿ ಮಹಿಳೆಯ ಗ್ಯಾಂಗ್ ಬೆದರಿಕೆ ಹಾಕಿತ್ತಾ? ಹತ್ತು ದಿನದ ಹಿಂದೆ ಬಸವಲಿಂಗ ಸ್ವಾಮೀಜಿ ಮೊಬೈಲ್ಗೆ ದುಷ್ಕರ್ಮಿಗಳು ವೀಡಿಯೋ ಕಳುಹಿಸಿದ್ದು, ಈ ಬಗ್ಗೆ ಯಾರ ಬಳಿನೂ ಹೇಳಿಕೊಳ್ಳಲಾಗದೇ ಬಂಡೆ ಮಠದ ಬಸವಲಿಂಗ ಸ್ವಾಮೀಜಿ ಮಾನಸಿಕ ಖಿನ್ನತೆಗೆ ಒಳಗಾಗಿದ್ದರು ಎನ್ನಲಾಗುತ್ತಿದೆ. ಇದನ್ನೂ ಓದಿ:ಬಂಡೆಮಠ ಸ್ವಾಮೀಜಿ ಆತ್ಮಹತ್ಯೆಗೆ ಟ್ವಿಸ್ಟ್- ಮಹಿಳೆಯ ಜೊತೆಗಿನ ವೀಡಿಯೋ ಕಾಲ್ ವೈರಲ್
ವೀಡಿಯೋ ಮಾಡಿದ ಮಹಿಳೆ ಆ್ಯಂಡ್ ಟೀಂ ಬಸವಲಿಂಗ ಸ್ವಾಮೀಜಿಗೆ ಬರೋಬ್ಬರಿ 10 ಕೋಟಿ ರೂಪಾಯಿ ನೀಡುವಂತೆ ಬೇಡಿಕೆ ಇಟ್ಟಿತ್ತಾ? ಟೀಂನಲ್ಲಿದ್ದ ಮುಖಂಡನೇ ಸ್ವಾಮೀಜಿ ಬಳಿ ಡೀಲ್ ನೆಪದಲ್ಲಿ ಬಂದಿದ್ದನಾ ಎಂಬ ಅನುಮಾನ ವ್ಯಕ್ತವಾಗುತ್ತಿದೆ. ಸ್ವಾಮೀಜಿ ಮಠದ ಅಭಿವೃದ್ಧಿ ಜೊತೆಗೆ ಅಂತಹ ದೊಡ್ಡ ಮೊತ್ತದ ಹಣ ಕೂಡ ಇರಲಿಲ್ಲ. ಹೀಗಾಗಿ ದೊಡ್ಡ ಮೊತ್ತದ ಹಣವನ್ನು ಹೊಂದಿಸುವಲ್ಲಿ ಸ್ವಾಮೀಜಿ ವಿಫಲರಾಗಿದರು ಎಂಬ ಮಾಹಿತಿ ತಿಳಿದುಬಂದಿದೆ.
ಬೇಕಂತಾಲೇ ನಾಲ್ವರು ಹೆಣೆದ ಖೆಡ್ಡಾಗೆ ಸ್ವಾಮೀಜಿ ತಗಲಾಕಿಕೊಂಡು ಒದ್ದಾಡಿದ್ರಾ? ಸ್ವಾಮೀಜಿ ಬರೆದಿರುವ ಮೂರು ಪುಟಗಳ ಡೆತ್ನೋಟ್ನಲ್ಲಿ ಎಲ್ಲವೂ ಅಡಗಿದ್ಯ? ಪೊಲೀಸರ ತನಿಖೆಯಿಂದ ಸತ್ಯಸತ್ಯೆ ಹೊರಬರುತ್ತ ಎಂಬ ಪ್ರಶ್ನೆ ಮಠದ ಭಕ್ತರಲ್ಲಿ ಮೂಡಿದೆ. ಇದನ್ನೂ ಓದಿ: ಬಸವಲಿಂಗ ಶ್ರೀ ವೀಡಿಯೋ ಕಾಲ್ ವೈರಲ್- ಮೂವರು ಮಹಿಳೆಯರ ಪ್ರತ್ಯೇಕ ವಿಚಾರಣೆ
ಬುಧವಾರ ವೈರಲ್ ಆದ ವೀಡಿಯೋ ಬಗ್ಗೆ ಇದೀಗ ಸಾಕಷ್ಟು ಸಂಶಯಗಳು ಮೂಡುತ್ತಿದ್ದು, ಪೊಲೀಸರ ತನಿಖೆಗೆ ದಾರಿ ತಪ್ಪಿಸಲು ಹುನ್ನಾರ ನಡೆಯುತ್ತಿದ್ಯಾ? ವೀಡಿಯೋ ವೈರಲ್ ಮಾಡಿದ ವ್ಯಕ್ತಿ ಯಾರು? ಯಾವ ನಂಬರ್ನಿಂದ ವೀಡಿಯೋ ಲೀಕ್ ಆಯಿತು? ವೀಡಿಯೋ ಲೀಕ್ ಮಾಡಿದ ಹಿಂದೆ ಇನ್ನೂ ಷಡ್ಯಂತ್ರ ನಡೆದಿದ್ಯಾ? ಈ ಎಲ್ಲಾ ಪ್ರಶ್ನೆಗಳಿಗೆ ಸದ್ಯ ಉತ್ತರ ಸಿಗಬೇಕಾಗಿದೆ.
Live Tv
[brid partner=56869869 player=32851 video=960834 autoplay=true]
ರಾಮನಗರ: ಮಾಗಡಿಯ (Magadi) ಬಂಡೆ ಮಠದ ಬಸವಲಿಂಗ ಸ್ವಾಮೀಜಿ ಆತ್ಮಹತ್ಯೆ ಪ್ರಕರಣಕ್ಕೆ ಹೊಸ ಟ್ವಿಸ್ಟ್ ಸಿಕ್ಕಿದೆ. ಮಹಿಳೆಯೊಬ್ಬರ ಜೊತೆ ಸ್ವಾಮೀಜಿ ವೀಡಿಯೋ ಕಾಲ್ (Video Call) ಮಾಡಿ ಮಾತನಾಡಿದ್ದಾರೆ ಎನ್ನಲಾದ ವೀಡಿಯೋ ಈಗಾಗಲೇ ವೈರಲ್ (Video Viral) ಆಗಿದ್ದು, ಈ ವೀಡಿಯೋ ಆಧರಿಸಿ ಅನುಮಾನಿತ ಮೂವರು ಮಹಿಳೆಯರನ್ನು (Woman) ಪೊಲೀಸರು ಅಜ್ಞಾತ ಸ್ಥಳದಲ್ಲಿ ವಿಚಾರಣೆ ನಡೆಸಿದ್ದಾರೆ ಎನ್ನಲಾಗಿದೆ.
ಬಂಡೆಮಠದ (Bande Mutt) ಬಸವಲಿಂಗ ಶ್ರೀಗಳ (Basavalinga Swamiji) ಆತ್ಮಹತ್ಯೆ ಪ್ರಕರಣ ಇದೀಗ ಮೇಜರ್ ಟ್ವಿಸ್ಟ್ ಪಡೆದುಕೊಂಡಿದೆ. ನಿನ್ನೆ ಶ್ರೀಗಳು ಬರೆದಿದ್ದಾರೆ ಎನ್ನಲಾದ ಡೆತ್ನೋಟ್ನ ಒಂದು ಪುಟ ವೈರಲ್ ಆದ ಬೆನ್ನಲ್ಲೆ ಇದೀಗ ಶ್ರೀಗಳ ವೀಡಿಯೋ ಕಾಲ್ ತುಣುಕೊಂದು ವೈರಲ್ ಆಗಿದ್ದು, ಸಾಕಷ್ಟು ಅನುಮಾನಕ್ಕೆ ಕಾರಣವಾಗಿದೆ. ಮಹಿಳೆಯೊಬ್ಬಳ ಜೊತೆ ಸ್ವಾಮೀಜಿ ವೀಡಿಯೋ ಕಾಲ್ನಲ್ಲಿ ಮಾತನಾಡುತ್ತಿರುವ ವೀಡಿಯೋ ದೊರೆತಿದ್ದು, ಇದರ ಹಿಂದಿರುವ ಕಾಣದ ಕೈಗಳ ಹುಡುಕಾಟ ಶುರುವಾಗಿದೆ.
ಆದರೆ ಸ್ವಾಮಿಗಳ ಆತ್ಮಹತ್ಯೆಗೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಕೇಸು ದಾಖಲಾಗಿದ್ದು, ಎಫ್ಐಆರ್ನಲ್ಲಿ ಅನಾಮಧೇಯ ಹೆಸರಿನಲ್ಲಿ 1 ಆರೋಪಿ ಎಂದು ಹೇಳಲಾಗಿದೆ. ಸ್ವಾಮೀಜಿಯ ಡೆತ್ ನೋಟ್ನಲ್ಲಿ ಹಲವರ ಹೆಸರು ಉಲ್ಲೇಖವಾಗಿದ್ದರೂ ಯಾರ ಹೆಸರೂ ಸಹ ಎಫ್ಐಆರ್ನಲ್ಲಿ ದಾಖಲಾಗದೆ ಇರೋದು ಪ್ರಕರಣ ಮುಚ್ಚಿಹಾಕುವ ಪ್ರಯತ್ನ ಮಾಡಲಾಗ್ತಿದ್ಯಾ ಎನ್ನುವ ಅನುಮಾನ ವ್ಯಕ್ತವಾಗಿದೆ. ಇನ್ನು ಶ್ರೀಗಳನ್ನು ಖೆಡ್ಡಾಗೆ ಕೆಡವಲು 6 ತಿಂಗಳಿನಿಂದ ಕೆಲ ವ್ಯಕ್ತಿಗಳು ಕುತಂತ್ರ ಹೆಣೆಯಲಾಗಿತ್ತಂತೆ. ಮಹಿಳೆಯೊಂದಿಗೆ ಮಾತನಾಡುತ್ತಿದ್ದ ವೀಡಿಯೋ ಇರುವುದನ್ನು 1 ತಿಂಗಳ ಹಿಂದೆ ಶ್ರೀಗಳ ಗಮನಕ್ಕೆ ತರಲಾಗಿದ್ದು, ಈ ವಿಚಾರ ಗೊತ್ತಾಗುತ್ತಿದ್ದಂತೆ ಬಸವಲಿಂಗ ಸ್ವಾಮೀಜಿ ಖಿನ್ನತೆಗೆ ಒಳಗಾಗಿದ್ದರಂತೆ. ಸದ್ಯ ಶ್ರೀಗಳು ಬಳಸುತ್ತಿದ್ದ 2 ಮೊಬೈಲ್ ವಶಕ್ಕೆ ಪಡೆದಿರುವ ಪೊಲೀಸರು ಒಂದು ವರ್ಷದ ಕಾಲ್ ಡಿಟೇಲ್ಸ್ ತೆಗೆದು ತನಿಖೆ ನಡೆಸುತ್ತಿದ್ದಾರೆ.
ಅಲ್ಲದೇ ಬಸವಲಿಂಗ ಸ್ವಾಮಿ ಶ್ರೀಗಳ ವೈರಲ್ ಆಗಿರುವ ವೀಡಿಯೋ ಆಧರಿಸಿ ಅನುಮಾನಿತ ಮೂವರು ಮಹಿಳೆಯರನ್ನು ಪೊಲೀಸರು ಅಜ್ಞಾತ ಸ್ಥಳದಲ್ಲಿ ವಿಚಾರಣೆ ನಡೆಸಿದ್ದಾರೆ ಎನ್ನಲಾಗಿದೆ. ಪ್ರಕರಣ ಒಟ್ಟು 7 ಮಂದಿಯನ್ನು ಈಗಾಗಲೇ ವಿಚಾರಣೆಗೆ ಒಳಪಡಿಸಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಮತ್ತೊಂದೆಡೆ ಬಸವಲಿಂಗ ಶ್ರೀಗಳ ಆರಾಧನಾ ಕಾರ್ಯಕ್ರಮ ನಡೆಸುವ ಸಂಬಂಧ ಇಂದು ಮಠದ ಆವರಣದಲ್ಲಿ ಲಿಂಗಾಯತ ಮುಖಂಡರು ಸಭೆ ನಡೆಸಿದ್ದಾರೆ. ನ. 3 ರಂದು ಶ್ರೀಗಳ 11ನೇ ದಿನದ ಪುಣ್ಯತಿಥಿ ನಡೆಯಲಿದ್ದು, ಕಾರ್ಯಕ್ರಮದ ಉಸ್ತುವಾರಿಯನ್ನು ಬೆಂಗಳೂರಿನ ಬಿನ್ನಿಮಿಲ್ ಗುರುವಣ್ಣದೇವರ ಮಠದ ಶ್ರೀ ನಂಜುಂಡ ಸ್ವಾಮೀಜಿಗೆ ವಹಿಸಲಾಗಿದೆ. ಪುಣ್ಯತಿಥಿ ಬಳಿಕ ಮಠದ ಮುಂದಿನ ಉತ್ತರಾಧಿಕಾರಿ ನೇಮಕ ಮಾಡುವ ಸಾಧ್ಯತೆ ಇದೆ. ಇದನ್ನೂ ಓದಿ:ಬಂಡೆಮಠ ಸ್ವಾಮೀಜಿ ಆತ್ಮಹತ್ಯೆಗೆ ಟ್ವಿಸ್ಟ್- ಮಹಿಳೆಯ ಜೊತೆಗಿನ ವೀಡಿಯೋ ಕಾಲ್ ವೈರಲ್
ಒಟ್ಟಾರೆ ಷಡ್ಯಂತ್ರಕ್ಕೆ ಹೆದರಿ ಡೆತ್ ನೋಟ್ ಬರೆದು ಬಸವಲಿಂಗ ಶ್ರೀಗಳು ಸೂಸೈಡ್ ಮಾಡಿಕೊಂಡಿರೋದು ಬಹಿರಂಗವಾಗಿದೆ. ಶ್ರೀಗಳ ಡೆತ್ನೋಟ್ 2 ಮೊಬೈಲ್, ಬರವಣಿಗೆ ಸ್ಯಾಂಪಲ್ ಹಾಗೂ ಡೈರಿ ಜಪ್ತಿ ಮಾಡಿರುವ ಪೊಲೀಸರು ನಿಷ್ಪಕ್ಷಪಾತವಾಗಿ ತನಿಖೆ ನಡೆಸಿ ಆತ್ಮಹತ್ಯೆಗೆ ಸ್ಪಷ್ಟ ಕಾರಣ ಏನು ಎಂಬದನ್ನು ಬಯಲು ಮಾಡ್ತಾರಾ ಎಂದು ಕಾದು ನೋಡಬೇಕಿದೆ. ಇದನ್ನೂ ಓದಿ:ಬಂಡೆಮಠದ ಸ್ವಾಮೀಜಿಗೆ ಮಹಿಳೆಯಿಂದ ಬರುತ್ತಿತ್ತು ದೂರವಾಣಿ ಕರೆ- ಡೆತ್ನೋಟ್ನಲ್ಲಿ ರಹಸ್ಯ ಬಯಲು
Live Tv
[brid partner=56869869 player=32851 video=960834 autoplay=true]