Tag: basavaraj

  • ಭಾರತೀಯ ಮಕ್ಕಳ ಸರ್ವಾಂಗಿಣ ಅಭಿವೃದ್ಧಿಗಾಗಿ ನೂತನ ಶಿಕ್ಷಣ ನೀತಿ ಜಾರಿ: ಬೊಮ್ಮಾಯಿ

    ಭಾರತೀಯ ಮಕ್ಕಳ ಸರ್ವಾಂಗಿಣ ಅಭಿವೃದ್ಧಿಗಾಗಿ ನೂತನ ಶಿಕ್ಷಣ ನೀತಿ ಜಾರಿ: ಬೊಮ್ಮಾಯಿ

    ಹುಬ್ಬಳ್ಳಿ: ಭಾರತೀಯ ಮಕ್ಕಳ ಸರ್ವಾಂಗೀಣ ಅಭಿವೃದ್ಧಿಗಾಗಿ ನೂತನ ಶಿಕ್ಷಣ ನೀತಿ ಜಾರಿಗೊಳಿಸಲಾಗುತ್ತಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

    ಜಿಲ್ಲೆಯ ಪ್ರವಾಸ ಕೈಗೊಂಡಿರುವ ಅವರು ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ನೂತನ ಶಿಕ್ಷಣ ನೀತಿ ಕುರಿತು ಶಿಕ್ಷಣ ತಜ್ಞರು, ಶಿಕ್ಷಕರು ಹಾಗೂ ವಿದ್ಯಾರ್ಥಿಗಳ ವಲಯದ ಮೂರು ವರ್ಷಗಳ ಕಾಲ ಚರ್ಚಿಸಿ ಸಮಗ್ರವಾಗಿ ರೂಪಿಸಲಾಗಿದೆ. 21 ಶತಮಾನಕ್ಕೆ ತಕ್ಕಂತೆ, ದೇಶದ ಗ್ರಾಮೀಣ ಭಾಗದ ವಿದ್ಯಾರ್ಥಿಗಳನ್ನು ಅಂತರಾಷ್ಟ್ರೀಯ ಮಟ್ಟದ ಪೈಪೋಟಿಗೆ ಸಿದ್ದಪಡಿಸುವುದು, ಕೌಶಲ್ಯವನ್ನು ಹೆಚ್ಚಿಸವುದು ಶಿಕ್ಷಣ ನೀತಿಯ ಉದ್ದೇಶವಾಗಿದೆ ಎಂದು ತಿಳಿಸಿದರು. ಇದನ್ನೂ ಓದಿ: ಗದಗಿಗೆ ಸಿಎಂ ಬಾರ್ತಾರೆಂದು ತರಾತುರಿಯಲ್ಲಿ ರಸ್ತೆ ದುರಸ್ತಿ

    ಪ್ರಾಥಮಿಕ ಹಾಗೂ ಉನ್ನತ ಶಿಕ್ಷಣ ವ್ಯವಸ್ಥೆಯಲ್ಲಿ ಅಮೂಲಾಗ್ರ ಬದಲಾವಣೆ ತರುವ ಪ್ರಯತ್ನವನ್ನು ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಕೈಗೊಂಡಿದ್ದಾರೆ. ಭಾರತೀಯರಿಂದ ಭಾರತೀಯ ಮಕ್ಕಳಿಗಾಗಿ ರೂಪಿಸಿರುವ ಶಿಕ್ಷಣ ವ್ಯವಸ್ಥೆ ಇದಾಗಿದೆ ಎಂದರು.

    ಕೋವಿಡ್ ಲಾಕ್‍ಡೌನ್ ತೆರವಿನ ನಂತರ, ಜನರು ಸಾಮಾನ್ಯ ಜೀವನಕ್ಕೆ ಮರಳುತ್ತಿದ್ದಾರೆ. ವ್ಯಾಪಾರ ವಹಿವಾಟುಗಳು ಸಹಜವಾಗಿ ನಡೆಯುತ್ತಿವೆ ಈ ಸಂದರ್ಭದಲ್ಲಿ ಬಂದ್ ಕರೆ ನೀಡುವುದು ಸರಿಯಲ್ಲ. ಪಂಚಮಸಾಲಿ ಮೀಸಲಾತಿಗೆ ಕುರಿತು ಸದನದಲ್ಲಿ ಉತ್ತರಿಸಿದ್ದೇನೆ ಎಂದರು.

    ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ, ನಗರಾಭಿವೃದ್ಧಿ ಸಚಿವ ಭೈರತಿ ಬಸವರಾಜ, ಬೃಹತ್ ಮಧ್ಯಮ ಕೈಗಾರಿಕೆ ಸಚಿವ ಮುರಗೇಶ್ ನಿರಾಣಿ, ಜಿಲ್ಲಾಧಿಕಾರಿ ನಿತೇಶ್ ಪಾಟೀಲ್, ಪೊಲೀಸ್ ಆಯುಕ್ತ ಲಾಭುರಾಮ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

  • ಕಲಬುರಗಿಯಲ್ಲಿ ಹಳದಿ ಕಲ್ಲಂಗಡಿ ಫುಲ್ ಫೇಮಸ್- ಯಲ್ಲೋ ವಾಟರ್‌ಮೆಲನ್‌ಗೆ ಭರ್ಜರಿ ಡಿಮ್ಯಾಂಡ್

    ಕಲಬುರಗಿಯಲ್ಲಿ ಹಳದಿ ಕಲ್ಲಂಗಡಿ ಫುಲ್ ಫೇಮಸ್- ಯಲ್ಲೋ ವಾಟರ್‌ಮೆಲನ್‌ಗೆ ಭರ್ಜರಿ ಡಿಮ್ಯಾಂಡ್

    ಕಲಬುರಗಿ: ಬೇಸಿಗೆ ಕಾಲ ಬಂದ್ರೆ ಸಾಕು ನಾವು ನೀವೆಲ್ಲ ಕೆಂಪ್ಪು ಬಣ್ಣದ ಕಲ್ಲಂಗಡಿಯ ಮೊರೆ ಹೋಗುತ್ತೇವೆ. ಆದರೆ ಕಲಬುರಗಿಯ ಓರ್ವ ಯುವಕ ವಿದೇಶಿ ತಳಿಯ ಹಳದಿ ಕಲ್ಲಂಗಡಿ ಬೆಳೆದು ಸೈ ಎನ್ನಿಸಿಕೊಂಡಿದ್ದಾನೆ.

    ಹೌದು. ಬೇಸಿಗೆ ಕಾವು ಹೆಚ್ಚಾಗ್ತಿದೆ. ಬೆಳಗ್ಗಿನಿಂದಲೇ ಸೂರ್ಯ ಶಿಕಾರಿ ಶುರುವಾಗುತ್ತೆ. ಬೇಸಿಗೆಯಲ್ಲಿ ದಾಹ ನೀಗಿಸೋದ್ರಲ್ಲಿ ಕಲ್ಲಂಗಡಿ ಹಣ್ಣಿಗೆ ಮೊದಲ ಸ್ಥಾನ. ಕಲ್ಲಂಗಡಿ ಅಂದ್ರೆ ಹಸಿರು- ಕೆಂಪು ಇರತ್ತೆ. ಆದರೆ ಹಳದಿ ಬಣ್ಣದ ಕಲ್ಲಂಗಡಿ ಅಂದ್ರೆ ನಂಬಲೇಬೇಕು. ಕಲಬುರಗಿಯ ಯುವಕ ಬೆಳೆದಿರೋ ಹಳದಿ ಬಣ್ಣದ ಕಲ್ಲಂಗಡಿ ಹಣ್ಣು ಫುಲ್ ಫೇಮಸ್ ಆಗಿದೆ.

    ಕಲಬುರಗಿ ಜಿಲ್ಲೆ ಆಳಂದ ತಾಲೂಕಿನ ಕೊರಳ್ಳಿ ಗ್ರಾಮದ ನಿವಾಸಿ ಬಸವರಾಜ್ ಪಾಟೀಲ್ ಬಿ.ಕಾಂ ಪದವೀಧರ. ಆದರೂ ಕೃಷಿಯಲ್ಲಿ ಹೆಚ್ಚು ಉತ್ಸಾಹ ಇರೋದ್ರಿಂದ 2 ಎಕರೆ ಪ್ರದೇಶದಲ್ಲಿ ಮಲೇಷಿಯಾದಲ್ಲಿ ಬೆಳೆಯುವ ಹಳದಿ ಕಲ್ಲಂಗಡಿ ತಳಿಯ ಹಣ್ಣನ್ನು ಬೆಳೆದಿದ್ದಾರೆ. ಇದಕ್ಕೀಗ ಮಾರ್ಕೆಟ್‍ನಲ್ಲಿ ಈ ಹಣ್ಣಿಗೆ ಫುಲ್ ಡಿಮ್ಯಾಂಡ್ ಬಂದಿದೆ.

    ಹಳದಿ ಕಲ್ಲಂಗಡಿ ಹಣ್ಣು ತುಂಬಾ ರುಚಿಕರವಾಗಿದೆ. ಹೆಚ್ಚು ಇಳುವರಿ ಸಹ ಬರುತ್ತದೆ. ಕೆಂಪು ಕಲ್ಲಂಗಡಿ ಹೋಲ್‍ಸೆಲ್ ಪ್ರತಿ ಕೆ.ಜಿಗೆ 6 ರಿಂದ 8 ರೂಪಾಯಿವರೆಗೆ ಮಾರಾಟವಾದ್ರೆ, ಮಲೇಷಿಯಾ ತಳಿಯ ಈ ಹಳದಿ ಕಲ್ಲಂಗಡಿ ಕೆಜಿಗೇ 15 ರೂಪಾಯಿಗೆ ಮಾರಾಟವಾಗುತ್ತಿದೆ.

    ಸದ್ಯ ಕಲಬುರಗಿಯ ಈ ವಾಟರ್‍ಮೆಲನ್ ಹೈದಾರಾಬಾದ್, ಮುಂಬೈಯ ಮಾಲ್‍ಗಳಿಗೆ ಮಾರಾಟವಾಗುತ್ತಿದೆ. ಕೃಷಿಯಲ್ಲಿಯೇ ಮನಸ್ಸು ಮಾಡಿದ್ರೆ ಲಕ್ಷಾಂತರ ರೂಪಾಯಿ ಹೇಗೆ ಸಂಪಾದಿಸಬಹುದು ಎಂಬುದನ್ನ ಬಸವರಾಜ್ ತೋರಿಸಿಕೊಟ್ಟಿದ್ದಾರೆ.

  • ಡೈನಾಮಿಕ್ ಪ್ರಿನ್ಸ್ ‘ಅಬ್ಬರ’ಕ್ಕೆ ಹ್ಯಾಟ್ರಿಕ್ ಹೀರೋ ಸಾಥ್ – ಟೈಟಲ್ ಲಾಂಚ್ ಮಾಡಿದ ಶಿವಣ್ಣ

    ಡೈನಾಮಿಕ್ ಪ್ರಿನ್ಸ್ ‘ಅಬ್ಬರ’ಕ್ಕೆ ಹ್ಯಾಟ್ರಿಕ್ ಹೀರೋ ಸಾಥ್ – ಟೈಟಲ್ ಲಾಂಚ್ ಮಾಡಿದ ಶಿವಣ್ಣ

    ಬೆಂಗಳೂರು: ಚಂದನವನದ ಹ್ಯಾಂಡ್‌ಸಮ್‌ ನಟ, ಡೈನಾಮಿಕ್ ಪ್ರಿನ್ಸ್ ಪ್ರಜ್ವಲ್ ದೇವರಾಜ್ ಇನ್ಮುಂದೆ ತಮ್ಮ ‘ಅಬ್ಬರ’ ತೋರಿಸಲು ಸಜ್ಜಾಗಿದ್ದಾರೆ.

    ಬ್ಯಾಕ್ ಟು ಬ್ಯಾಕ್ ಸಿನಿಮಾಗಳಲ್ಲಿ ನಟಿಸುತ್ತಾ ಸದಾ ಬ್ಯುಸಿಯಾಗಿರುವ ಪ್ರಜ್ವಲ್ ದೇವರಾಜ್ ಹೊಸ ಸಿನಿಮಾಕ್ಕೆ ಸಹಿ ಹಾಕಿದ್ದಾರೆ. ಕೆ. ರಾಮ್ ನಾರಾಯಣ್ ನಿರ್ದೇಶನದ ಅಬ್ಬರ ಸಿನಿಮಾದಲ್ಲಿ ಡೈನಾಮಿಕ್ ಪ್ರಿನ್ಸ್ ನಟಿಸುತ್ತಿದ್ದು, ಮೂರು ಶೇಡ್‌ನಲ್ಲಿ ತಮ್ಮ ಅಭಿಮಾನಿ ಬಳಗಕ್ಕೆ ಕಿಕ್ ಕೊಡಲಿದ್ದಾರೆ

    ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ‘ಅಬ್ಬರ’ ಟೈಟಲ್ ಹಾಗೂ ಫಸ್ಟ್ ಲುಕ್ ಮೋಷನ್ ಪೋಸ್ಟರ್ ಬಿಡುಗಡೆ ಮಾಡುವ ಮೂಲಕ ಚಿತ್ರತಂಡಕ್ಕೆ ಶುಭ ಹಾರೈಸಿದ್ದಾರೆ.

    ರಾಜಾ ಮಾರ್ತಾಂಡ ಸಿನಿಮಾ ನಿರ್ದೇಶಕ ಕೆ.ರಾಮ್ ನಾರಾಯಣ್ ‘ಅಬ್ಬರ’ ಸಿನಿಮಾ ನಿರ್ದೇಶನ ಮಾಡುತ್ತಿದ್ದು, ಬಸವರಾಜ್ ಮಂಚಯ್ಯ ಹಿತ್ಲಾಪುರ್ ಚಿತ್ರಕ್ಕೆ ಬಂಡವಾಳ ಹೂಡಿದ್ದಾರೆ. ರವಿ ಬಸ್ರೂರು ಪವರ್‌ಫುಲ್‌ ಮ್ಯೂಸಿಕ್, ಜೆ.ಕೆ.ಗಣೇಶ್ ಸಿನಿಮಾಟೋಗ್ರಫಿ, ವಿಕಟ ಕವಿ ಯೋಗರಾಜ್ ಭಟ್ ಸಾಹಿತ್ಯ ಕೃಷಿ ಅಬ್ಬರ ಸಿನಿಮಾಗಿದೆ. ಹೀಗೆ ಪವರ್ ಫುಲ್ ಟಿಂ ಕಟ್ಟಿಕೊಂಡಿರುವ ರಾಮ್‌ ನಾರಾಯಣ್‌ ‘ಅಬ್ಬರ’ ಚಿತ್ರದ ಬಗ್ಗೆ ಸಿಕ್ಕಾಪಟ್ಟೆ ನಿರೀಕ್ಷೆಯನ್ನು ಪ್ರಜ್ವಲ್ ಅಭಿಮಾನಿ ಬಳಗದಲ್ಲಿ ಹುಟ್ಟುಹಾಕಿದ್ದಾರೆ.

    ಸಾಹಸ ದೃಶ್ಯಗಳಲ್ಲಿ ಕಿಕ್ ನೀಡಲು ಡಿಫರೆಂಟ್ ಡ್ಯಾನಿ, ಪಳನಿರಾಜ್, ಮಾಸ್ ಮಾದ ಈ ಮೂವರ ಸಾಹಸ ನಿರ್ದೇಶನ ಅಬ್ಬರ ಚಿತ್ರಕ್ಕಿದೆ. ಸಿ ಅಂಡ್ ಎಂ ಮೂವೀಸ್ ಬ್ಯಾನರ್‌ನಲ್ಲಿ ನಿರ್ಮಾಣವಾಗುತ್ತಿರುವ ಈ ಚಿತ್ರ ಲಾಕ್‌ಡೌನ್‌ ಇಲ್ಲದಿದ್ದರೆ ಇಷ್ಟೊತ್ತಿಗಾಗಲೇ ಅರ್ಧದಷ್ಟು ಚಿತ್ರೀಕರಣ ಕಂಪ್ಲೀಟ್ ಮಾಡಿರಬೇಕಿತ್ತು. ಅನ್‌ಲಾಕ್‌ ಬಳಿಕ ಚಿತ್ರೀಕರಣಕ್ಕೆ ಸಜ್ಜಾಗಿರೋ ‘ಅಬ್ಬರ’ ಸಿನಿಮಾ ತಂಡ ಸದ್ಯದಲ್ಲೇ ಚಿತ್ರದ ಬಗ್ಗೆ ಇನ್ನಷ್ಟು ಮಾಹಿತಿಯನ್ನು ನೀಡಲಿದೆ.

  • ಪೀರನವಾಡಿ ಪುತ್ಥಳಿ ಗಲಾಟೆ – ವಿಚಾರಣೆಗೆ ಬೊಮ್ಮಾಯಿ ಸೂಚನೆ

    ಪೀರನವಾಡಿ ಪುತ್ಥಳಿ ಗಲಾಟೆ – ವಿಚಾರಣೆಗೆ ಬೊಮ್ಮಾಯಿ ಸೂಚನೆ

    ಬೆಂಗಳೂರು: ಬೆಳಗಾವಿಯ ಪೀರನವಾಡಿನಲ್ಲಿ ಸಂಗೊಳ್ಳಿ ರಾಯಣ್ಣ ಪುತ್ಥಳಿ ಗಲಾಟೆ ವಿಚಾರ ಸಂಬಂಧ ಪೊಲೀಸರು ದಾಖಲಿಸಿಕೊಂಡಿರುವ ಎಫ್‍ಐಆರ್ ಬಗ್ಗೆ ವಿಚಾರಣೆ ನಡೆಸಲು ಸೂಚಿಸಿರುವುದಾಗಿ ಗೃಹ ಸಚಿವ ಬೊಮ್ಮಾಯಿ ತಿಳಿಸಿದ್ದಾರೆ.

    ಈ ಸಂಬಂಧ ಟ್ವೀಟ್ ಮಾಡಿರುವ ಸಚಿವರು, ರಾಜ್ಯ ಸರ್ಕಾರ ಕನ್ನಡಿಗರ ಪರವಾಗಿದೆ ಅವರ ಹಿತರಕ್ಷಣೆಯನ್ನು ಕಾಪಾಡಲು ಬದ್ಧವಾಗಿದೆ. ಬೆಳಗಾವಿಯ ಪೀರನವಾಡಿನಲ್ಲಿ ಪೋಲಿಸರು ದಾಖಲು ಮಾಡಿಕೊಂಡಿರುವ ಎಫ್‍ಐಆರ್ ಬಗ್ಗೆ ಎಡಿಜಿಪಿ (L&O) ಅವರಿಗೆ ವಿಚಾರಣೆ ಮಾಡಲು ಸೂಚಿಸಿದ್ದೇನೆ. ಅವರು ಈಗಾಗಲೇ ಘಟನಾ ಸ್ಥಳದಲ್ಲಿದ್ದು, ಶಾಂತಿ ಸಭೆಯನ್ನು ನಡೆಸಿ ಸಮಸ್ಯೆಯನ್ನು ಸೌಹಾರ್ದತೆಯಾಗಿ ಬಗೆಹರಿಸುವಂತೆ ಸೂಚಿಸಿದ್ದೇನೆ ಎಂದು ಬರೆದುಕೊಂಡಿದ್ದಾರೆ.

    ಕನ್ನಡಪರ ಹೋರಾಟಗಾರರು ಮತ್ತು ರಾಯಣ್ಣನ ಅಭಿಮಾನಿಗಳು ಪೀರನವಾಡಿಗೆ ತೆರಳಿ ರಾತ್ರೋರಾತ್ರಿ ಸಂಗೊಳ್ಳಿ ರಾಯಣ್ಣ ಪ್ರತಿಮೆ ಸ್ಥಾಪನೆ ಮಾಡಿ, ರಾಯಣ್ಣನಿಗೆ ಜೈಕಾರ ಹಾಕಿದ್ದಾರೆ. ಈ ಹಿನ್ನೆಲೆಯಲ್ಲಿ ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣ ಆಗಿದ್ದು, ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ದೌಡಾಯಿಸಿದ್ದರು.

  • ಸಂಸದ ಬಸವರಾಜ್ ಜೊತೆಗೆ ಮುದ್ದೆ ಊಟ ಸವಿದ ಪ್ರಜ್ವಲ್ ರೇವಣ್ಣ

    ಸಂಸದ ಬಸವರಾಜ್ ಜೊತೆಗೆ ಮುದ್ದೆ ಊಟ ಸವಿದ ಪ್ರಜ್ವಲ್ ರೇವಣ್ಣ

    ಹಾಸನ: ತುಮಕೂರು ಸಂಸದ ಬಸವರಾಜ್ ಜೊತೆಗೆ ಮುದ್ದೆ ಊಟ ಮಾಡಿದ ಹಾಸನದ ನೂತನ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ನೆಟ್ಟಿಗರು ಕಾಲೆಳೆಯುತ್ತಿದ್ದಾರೆ.

    ಸಂಸದ ಪ್ರಜ್ವಲ್ ರೇವಣ್ಣ, ಬಸವರಾಜ್ ಅವರು ಜೊತೆ ಕುಳಿತು ಊಟ ಮಾಡುತ್ತಿರುವ ಫೋಟೋವನ್ನು ಪ್ರಜ್ವಲ್ ರೇವಣ್ಣ ಅಭಿಮಾನಿಗಳು ಟ್ವಿಟ್ಟರ್ ಮತ್ತು ಫೇಸ್‍ಬುಕ್ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದು, “ಡೆಲ್ಲಿ ಅಲ್ಲ ಅಮೆರಿಕಕ್ಕೆ ಹೋದ್ರೂ ನಮಗೆ ರಾಗಿ ಮುದ್ದೆ ಇರ್ಬೇಕ್” ಎಂದು ಬರೆದುಕೊಂಡಿದ್ದರು.

    https://twitter.com/NammaMP_Prajwal/status/1146099514907873280

    ಈ ಫೋಟೋ ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಕೆಲವರು ಇದಕ್ಕೆ ವಿರೋಧ ವ್ಯಕ್ತಪಡಿಸಿದ್ದರೆ ಕೆಲವರು ಮೆಚ್ಚುಗೆ ಸೂಚಿಸಿದ್ದಾರೆ. ದೇವೇಗೌಡರು ತಮ್ಮ ಸ್ವಕ್ಷೇತ್ರ ಹಾಸನವನ್ನು ಮೊಮ್ಮಗನಿಗೆ ಬಿಟ್ಟುಕೊಟ್ಟು ತುಮಕೂರಿನಲ್ಲಿ ಸ್ಪರ್ಧಿಸಿ ಪರಾಭವಗೊಂಡಿದ್ದರು. ಈಗ ದೇವೇಗೌಡರನ್ನು ಸೋಲಿಸಿದ ಬಿಜೆಪಿ ಸಂಸದರ ಜೊತೆ ಊಟಮಾಡಿದ ಪ್ರಜ್ವಲ್ ಅವರನ್ನು ಕೆಲವರು ಟೀಕಿಸಿ ಕಾಮೆಂಟ್ ಮಾಡಿದ್ದಾರೆ.

    ಕೆಲವರು ನೀವು ದೇವೇಗೌಡರ ಮೊಮ್ಮಗನಾಗಿದ್ದರೆ ಬಸವರಾಜು ಅವರ ಜೊತೆ ಕುಳಿತು ಊಟ ಮಾಡುತ್ತಿರಲಿಲ್ಲ ಎಂದು ಹೇಳಿದ್ದಾರೆ. ಇನ್ನೂ ಕೆಲವರು ಯಾವುದೇ ಕಾರಣಕ್ಕೂ ತುಮಕೂರು ಸಂಸದರ ಜೊತೆ ಕುಳಿತುಕೊಳ್ಳಬಾರದು ಎಂದು ಕಾಮೆಂಟ್ ಮಾಡಿದ್ದಾರೆ.

  • ಅಂಧನಾದ್ರೂ ಒಳಗಣ್ಣಿಂದ ಚಮತ್ಕಾರ- ಥಟ್ ಅಂತ ಲೆಕ್ಕಕ್ಕೆ ಉತ್ತರ ಹೇಳ್ತಾರೆ ಅಥಣಿಯ ಬಸವರಾಜ್

    ಅಂಧನಾದ್ರೂ ಒಳಗಣ್ಣಿಂದ ಚಮತ್ಕಾರ- ಥಟ್ ಅಂತ ಲೆಕ್ಕಕ್ಕೆ ಉತ್ತರ ಹೇಳ್ತಾರೆ ಅಥಣಿಯ ಬಸವರಾಜ್

    ಚಿಕ್ಕೋಡಿ(ಬೆಳಗಾವಿ): ಯಪ್ಪಾ.. ಏನ್ ಕಷ್ಟನಪ್ಪಾ.. ಈ ಗಣಿತ. ಅಂತ ಬಹುಪಾಲು ಜನ ಹೇಳ್ತಿರ್ತಾರೆ. ಆದ್ರೆ, ಕಣ್ಣು ಕಾಣದಿದ್ದರೂ ಯಾವುದೇ ಲೆಕ್ಕವನ್ನ ಬಿಡಿಸಿ ಥಟ್ ಅಂತ ಉತ್ತರ ಹೇಳ್ತಾರೆ ಇವತ್ತಿನ ನಮ್ಮ ಪಬ್ಲಿಕ್‍ಹೀರೋ ಅಥಣಿಯ ಬಸವರಾಜ್.

    ಜನ್ಮ ದಿನಾಂಕ ಹೇಳಿದ ತಕ್ಷಣ ಹುಟ್ಟಿದ ವಾರ ಹೇಳ್ತಿರೋ ಬಸವರಾಜ್, ಬೆಳಗಾವಿ ಜಿಲ್ಲೆಯ ಅಥಣಿ ಪಟ್ಟಣದವರು. ಹುಟ್ಟಿನಿಂದಲೇ ಅಂಧರಾಗಿರೋ ಬಸವರಾಜ ಅವರಿಗೆ ಸ್ಮರಣಶಕ್ತಿ ಜಾಸ್ತಿ. ಎಷ್ಟರ ಮಟ್ಟಿಗೆ ಅಂದರೆ ಕ್ಷಣಮಾತ್ರದಲ್ಲಿ ಗುಣಾಕಾರ, ಭಾಗಾಕಾರ, ಕೂಡಿಸೋದು, ಕಳೆಯೋದರ ಜೊತೆಗೆ ಗಣಿತದ ಅನೇಕ ಫಾರ್ಮುಲಾಗಳನ್ನ ಹೇಳ್ತಾರೆ.

    ಅಂಧನಾಗಿದ್ದರೂ ದಿನದ ಯಾವುದೇ ಸಮಯದಲ್ಲಿ ಟೈಮ್ ಕೇಳಿದ್ರೆ ನಿಖರವಾಗಿ ಹೇಳ್ತಾರೆ. ನೋಟ್‍ಗಳನ್ನ ಮುಟ್ಟಿ ಇದು ಇಷ್ಟೇ ಮೌಲ್ಯದ್ದು ಅಂತಾರೆ. ಕುಟುಂಬದ ನಿರ್ವಹಣೆಗಾಗಿ ಬೇರೆ ಬೇರೆ ಶಾಲಾ ಕಾಲೇಜುಗಳಿಗೆ ತೆರಳಿ ಉಪನ್ಯಾಸ ನೀಡ್ತಿದ್ದಾರೆ.

    ಬಸವರಾಜ್ ಅವರ ಈ ಅದಮ್ಯ ಶಕ್ತಿಗೆ ಪ್ರತಿಷ್ಠಿತ ಅಬ್ದುಲ್ ಕಲಾಂ ಪ್ರಶಸ್ತಿ, ವಿಶ್ವೇಶ್ವರಯ್ಯ ಪ್ರಶಸ್ತಿ ಸೇರಿದಂತೆ ಸಾಕಷ್ಟು ಪ್ರಶಸ್ತಿಗಳು ಸಂದಿವೆ. ಪ್ರಧಾನಿ ಮೋದಿ ಸಹ ಶಹಬ್ಬಾಷ್ ಹೇಳಿದ್ದಾರೆ. ಅಷ್ಟೇ ಅಲ್ಲ, ದುಬೈನ ಸಂಘ ಸಂಸ್ಥೆಗಳೂ ಬೆರಗಾಗಿ ಸನ್ಮಾನ ಮಾಡಿವೆ ಅಂತ ಸ್ಥಳೀಯ ನಿವಾಸಿ ಸಂತೋಷ್ ತಿಳಿಸಿದ್ದಾರೆ.

    ಬಸವರಾಜ್ ಅವರು ಇಂಗ್ಲಿಷ್ ಹಾಗೂ ಹಿಂದಿ ಭಾಷೆಯಲ್ಲಿ ಕ್ರಿಕೆಟ್ ಕಾಮೆಂಟರಿ ಹೇಳ್ತಾರೆ.

    https://www.youtube.com/watch?v=hJjnI-RA890