Tag: Basavaraj Horati

  • ಸಿಬಿಐ ತನಿಖೆ ಬಗ್ಗೆ ಅನುಮಾನವಿದೆ – ಹೊರಟ್ಟಿ

    ಸಿಬಿಐ ತನಿಖೆ ಬಗ್ಗೆ ಅನುಮಾನವಿದೆ – ಹೊರಟ್ಟಿ

    ಹುಬ್ಬಳ್ಳಿ: ಫೋನ್ ಕದ್ದಾಲಿಕೆ ವಿಚಾರವನ್ನು ಸಿಬಿಐಗೆ ಒಪ್ಪಿಸಿದ್ದನ್ನು ಸ್ವಾಗತಿಸುತ್ತೇನೆ. ಆದರೆ, ಕೇಂದ್ರ ಮತ್ತು ರಾಜ್ಯದಲ್ಲಿ ಬಿಜೆಪಿ ಪಕ್ಷದ ಅಧಿಕಾರವಿದೆ. ಈ ಹಿನ್ನೆಲೆಯಲ್ಲಿ ಸಿಬಿಐ ತನಿಖೆಯ ಬಗ್ಗೆ ಅನುಮಾನ ಮೂಡುತ್ತಿದೆ ಎಂದು ಜೆಡಿಎಸ್ ಮುಖಂಡ ಹಾಗೂ ಮಾಜಿ ಸಭಾಪತಿ ಬಸವರಾಜ್ ಹೊರಟ್ಟಿ ಕಳವಳ ವ್ಯಕ್ತಪಡಿಸಿದ್ದಾರೆ.

    ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೇಂದ್ರ ಮತ್ತು ರಾಜ್ಯದಲ್ಲಿ ಬಿಜೆಪಿ ಅಧಿಕಾರದಲ್ಲಿರುವುದರಿಂದ ಸಿಬಿಐ ಕೇಂದ್ರ ಸರ್ಕಾರದ ಮುಖ ನೋಡಿ ತನಿಖೆ ಮಾಡದೇ ಪ್ರಮಾಣಿಕವಾಗಿ ತನಖೆ ಮಾಡಬೇಕು. ಕೇಂದ್ರ ಮತ್ತು ರಾಜ್ಯದಲ್ಲಿ ಅವರದ್ದೇ ಅಧಿಕಾರವಿದೆ ಎಂಬ ಉದ್ದೇಶದಿಂದ ಫೋನ್ ಕದ್ದಾಲಿಕೆ ಪ್ರಕರಣವನ್ನು ರಾಜ್ಯ ಸರ್ಕಾರ ಸಿಬಿಐಗೆ ಒಪ್ಪಿಸಿದೆ ಎಂದು ಸರ್ಕಾರದ ವಿರುದ್ಧ ಹರಿಹಾಯ್ದಿದ್ದಾರೆ.

    ಯಾವುದೇ ಸರ್ಕಾರ ಅಧಿಕಾರದಲ್ಲಿರಲಿ ಸಿಬಿಐ ಕೇಂದ್ರ ಸರ್ಕಾರದ ಮುಖ ನೋಡಿ ತನಿಖೆ ನಡೆಸಬಾರದು. ಒಂದು ವೇಳೆ ಏಕಪಕ್ಷೀಯ ತನಿಖೆ ನಡೆದಲ್ಲಿ ಸಿಬಿಐಗೆ ಕೊಡಬಾರದು. ರಾಜ್ಯದಲ್ಲಿ ಹಲವಾರು ತನಿಖಾ ತಂಡಗಳಿವೆ ಅವುಗಳಿಂದ ತನಿಖೆ ಮಾಡಿಸಬೇಕು. ಇದೀಗ ರಾಜ್ಯ ಸರ್ಕಾರ ಈ ಪ್ರಕರಣವನ್ನು ಸಿಬಿಐ ಒಪ್ಪಿಸಿದೆ ಅದು ತನಿಖೆ ಪೂರ್ಣಗೊಳಿಸಿ ಫಲಿತಾಂಶ ಹೇಳುವವರೆಗೂ ಕಾದು ನೋಡೋಣ ಎಂದರು.

    ಬಿಜೆಪಿಯದ್ದು ನೀಡಲಿ
    ಫೋನ್ ಕದ್ದಾಲಿಕೆ ಮಾಜಿ ಸಿಎಂ ಕುಮಾರಸ್ವಾಮಿ ಸರ್ಕಾರದಲ್ಲಿ ಅಷ್ಟೇ ಅಲ್ಲ ಕಳೆದ ಬಿಜೆಪಿ ಸರ್ಕಾರದಲ್ಲಿಯೂ ಅಗಿದೆ. ಅವುಗಳನ್ನು ಸಿಬಿಐಗೆ ಒಪ್ಪಿಸಬೇಕು. ಅಲ್ಲದೆ, ಈ ಪ್ರಕರಣಗಳಾದಾಗ ಮಾಜಿ ಸಿಎಂ ಜಗದೀಶ್ ಶೆಟ್ಟರ್, ಆರ್.ಅಶೋಕ್ ಸುಮ್ಮನೆ ಕುಳಿತಿದ್ದರು. ಬಿಜೆಪಿ ನಾಯಕರ ಫೋನ್ ಕದ್ದಾಲಿಕೆ ಮಾಡಿದರೆ ಆಪರೇಷನ್ ಕಮಲದ ವಿಷಯ ಹೊರಗೆ ಬರುತ್ತದೆ. ಇತ್ತಿಚೆಗೆ ರಾಜಕಾರಣ ಹೊಲಸಾಗಿದೆ. ಒಮ್ಮೆ ಯಾದರೂ ಸತ್ಯ ಹೊರಗೆ ಬರಬೇಕು ಎಂದರು.

    ಸಿಎಂಗೆ ಅಧಿಕಾರವಿದೆ
    ದೇಶಕ್ಕೆ ಮತ್ತು ರಾಜ್ಯಕ್ಕೆ ಗಂಡಾಂತರ ಎದುರಾದಾಗ ಫೋನ್ ಟ್ಯಾಪಿಂಗ್ ಮಾಡಲು ಸಿಎಂಗೆ ಅಧಿಕಾರವಿದೆ. ಈ ರೀತಿ ಮಾಡಿದ್ರೆ ಸಿಬಿಐ ಜೈಲಿಗೆ ಹಾಕುತ್ತಾ ಎಂದು ಪ್ರಶ್ನೆ ಮಾಡಿದರು. ರಾಜ್ಯದಲ್ಲಿ ಪ್ರತಿಧ್ವನಿಸುತ್ತಿರುವ ಫೋನ್ ಟ್ಯಾಪ್ ಪ್ರಕರಣದ ತನಿಖೆ ತೋಳ ಬಂತು ತೋಳ ಆಗಬಾರದು. ಅಲ್ಲದೇ ಪ್ರಧಾನಿ ನರೇಂದ್ರ ಮೋದಿ ದೇಶದ ಹಲವಾರು ವ್ಯವಸ್ಥೆ ಬಗ್ಗೆ ಮಾತನಾಡುತ್ತಾರೆ ಅವರು ಈ ಬಗ್ಗೆ ಗಮನಹರಿಸಿ ಇದನ್ನು ಸ್ವಚ್ಛ ಮಾಡಲಿ. ಅದನ್ನು ಬಿಟ್ಟು ಸುಖಾ ಸುಮ್ಮನೆ ಮಾಜಿ ಸಿಎಂ ಕುಮಾರಸ್ವಾಮಿ ಮೇಲೆ ಗೂಬೆ ಕುರಿಸುವುದು ಸರಿಯಲ್ಲ ಎಂದು ಟೀಕಿಸಿದರು.

  • ನನಗೆ ಶಿಕ್ಷಣ ಸಚಿವನಾಗುವ ಬಯಕೆಯಿತ್ತು, ಕೈಕಟ್ಟಿ ಕೂರೋ ಸಭಾಪತಿ ಸ್ಥಾನ ಬೇಡ- ಹೊರಟ್ಟಿ

    ನನಗೆ ಶಿಕ್ಷಣ ಸಚಿವನಾಗುವ ಬಯಕೆಯಿತ್ತು, ಕೈಕಟ್ಟಿ ಕೂರೋ ಸಭಾಪತಿ ಸ್ಥಾನ ಬೇಡ- ಹೊರಟ್ಟಿ

    ಬೆಳಗಾವಿ: ಉತ್ತರ ಕರ್ನಾಟಕದಲ್ಲಿ ಬೆಳಗಾವಿ ಬಿಟ್ಟು ಹುಬ್ಬಳ್ಳಿ, ಧಾರವಾಡ ದೊಡ್ಡ ಜಿಲ್ಲೆಯಲ್ಲಿ ಸಮ್ಮಿಶ್ರ ಸರ್ಕಾರದ ಸಂಪುಟದಲ್ಲಿ ನನಗೆ ಸಚಿವನಾಗುವ ಭರವಸೆ ಇತ್ತು. ವಿಧಾನಸಭೆ ಪರಿಷತ್ತಿನಲ್ಲಿ ನಾನೇ ಹಿರಿಯ ಸದಸ್ಯ. ಆದರೆ ಕೊನೆ ಘಳಿಗೆಯಲ್ಲಿ ಸಚಿವ ಸ್ಥಾನ ಕೈಬಿಟ್ಟಿದ್ದು ಯಾಕೆ ಅಂತ ಗೊತ್ತಿಲ್ಲ. ಪಕ್ಷದ ತೀರ್ಮಾನವೇ ಅಂತಿಮ ಎಂದು ಭಾವಿಸಿ ಸುಮ್ಮನಿದ್ದೇನೆ ಎಂದು ಜೆಡಿಎಸ್ ಮುಖಂಡ ಬಸವರಾಜ್ ಹೊರಟ್ಟಿ ಹೇಳಿದ್ದಾರೆ.

    ನನಗೆ ವಿಧಾನ ಪರಿಷತ್ ಸಭಾಪತಿ ಹುದ್ದೆ ನೀಡುವ ವಿಚಾರಕ್ಕೆ ಸಂಬಂಧಪಟ್ಟಂತೆ ಪತ್ರಿಕೆ, ಟಿವಿಯಲ್ಲಿ ನೋಡಿದ್ದೇನೆ. ನನಗೆ ಯಾರು ಈ ಬಗ್ಗೆ ಸ್ಟಷ್ಟವಾಗಿ ಹೇಳಿಲ್ಲ. ದೇವೇಗೌಡರು ಕಾರ್ಯಕರ್ತರ ಮುಂದೆ ಈ ಸಭಾಪತಿ ಹುದ್ದೆ ನೀಡುವ ಬಗ್ಗೆ ಹೇಳಿದ್ದಾರೆ. ರಾಜ್ಯದಲ್ಲಿ ಶಿಕ್ಷಕರ ಅನೇಕ ಸಮಸ್ಯೆಗಳು ಇಂದಿಗೂ ಜೀವಂತವಾಗಿವೆ. ನನಗೆ ಶಿಕ್ಷಣ ಸಚಿವನಾಗುವ ಬಯಕೆ ಇತ್ತು, ಕೈಕಟ್ಟಿ ಕುರುವ ಸಭಾಪತಿ ಸ್ಥಾನ ಬೇಡ ಎಂದು ಹೇಳಿದರು.

    ಸಮ್ಮಿಶ್ರ ಸರ್ಕಾರದಲ್ಲಿ ಉತ್ತರ ಕರ್ನಾಟಕದ ಶಾಸಕರಿಗೆ ಅನ್ಯಾಯ ಆಗಿರುವ ವಿಚಾರದ ಬಗ್ಗೆ ಪ್ರತಿಕ್ರಿಯಿಸಿದ ಅವರು, ಜನರ ಮನಸ್ಸಿನಲ್ಲಿ ಈ ರೀತಿಯ ಭಾವನೆ ಮೂಡುತ್ತಿದೆ. ನನ್ನನ್ನು ಮಂತ್ರಿ ಮಾಡುವಂತೆ ಯಾರಲ್ಲೂ ನಾನು ಭಿಕ್ಷೆ ಕೇಳಲ್ಲ. 38 ವರ್ಷದ ರಾಜಕೀಯ ಜೀವನದಲ್ಲಿ ಯಾವುದೇ ಕಪ್ಪು ಚುಕ್ಕೆ ಇಲ್ಲ. ನನಗೆ ಸಚಿವ ಸಂಪುಟದಲ್ಲಿ ಅವಕಾಶ ಕೊಡುವುದು ವರಿಷ್ಠರಿಗೆ ಬಿಟ್ಟ ವಿಚಾರ ಎಂದರು.

    ರಾಜ್ಯದಲ್ಲಿ ಲಿಂಗಾಯತ ಪ್ರತ್ಯೇಕ ಧರ್ಮ ವಿಚಾರದ ಹೋರಾಟದಲ್ಲಿ ಪಾಲ್ಗೊಂಡವರನ್ನು ಸಚಿವ ಸಂಪುಟದಿಂದ ಹೊರ ಹಾಕಿದ್ದಾರೆ. ನನ್ನನ್ನು ಹಾಗೂ ಎಂ.ಬಿ. ಪಾಟೀಲ್, ಶಾಮನೂರು ಶಿವಶಂಕರಪ್ಪ, ಈಶ್ವರ ಖಂಡ್ರೆ ಇದೆಲ್ಲ ನೋಡಿದ್ರೆ ಇದಕ್ಕೆ ಪುಷ್ಠಿ ನೀಡುತ್ತದೆ. ಲಿಂಗಾಯತ ಧರ್ಮ ಪರ ಹೋರಾಟ ಮಾಡಿದ್ರಿಂದ ಕೆಲ ಸ್ವಾಮೀಜಿಗಳಿಂದ ಅಪಪ್ರಚಾರ ನಡೆಯಿತು. ಸಮಾಜದ ಜನರಿಗೆ ಒಳ್ಳೆಯದಾಗಲಿ ಎಂಬ ಕಾರಣಕ್ಕೆ ಹೋರಾಟದಲ್ಲಿ ನಾವು ಭಾಗಿಯಾಗಿದ್ದೇವೆ ಎಂದು ತಿಳಿಸಿದರು.

    ನಾವು ಎಂದು ಜಾತಿ ಮಾಡಿದವರಲ್ಲ. ಸಮುದಾಯಕ್ಕೆ ಅನ್ಯಾಯವಾಗಿದೆ ಎಂಬ ಕಾರಣಕ್ಕೆ ಹೋರಾಟ ಮಾಡಿದ್ದು ನಿಜ. ಎಲ್ಲರೂ ಮಾಡುವುದನ್ನು ನಾವು ಮಾಡಿದ್ದೇವೆ ನಾವೇನು ಕೊಲೆ, ದರೋಡೆ ಮಾಡಿಲ್ಲ. ಇದನ್ನೇ ತಪ್ಪು ಎಂದು ಭಾವಿಸಿದ್ದರೆ, ನಾವೇನು ಮಾಡೋಕೆ ಆಗಲ್ಲ. ಲಿಂಗಾಯತ ಧರ್ಮದ ಶಿಫಾರಸ್ಸು ಕೇಂದ್ರದಿಂದ ವಾಪಸ್ ಬಂದ ವಿಚಾರ. ಈ ಬಗ್ಗೆ ಸಮುದಾಯದ ಮುಖಂಡರ ಜೊತೆ ಚರ್ಚಿಸಿ ತೀರ್ಮಾನ ಕೈಗೊಳ್ಳುತ್ತೇವೆ ಎಂದರು.