Tag: Basavaraj S Bommai

  • ಯುವ ನಾಯಕರಿಗೆ ಕೆ.ಸಿ.ರೆಡ್ಡಿಯವರ ಬದುಕು ಮಾರ್ಗದರ್ಶಕ: ಬೊಮ್ಮಾಯಿ

    ಯುವ ನಾಯಕರಿಗೆ ಕೆ.ಸಿ.ರೆಡ್ಡಿಯವರ ಬದುಕು ಮಾರ್ಗದರ್ಶಕ: ಬೊಮ್ಮಾಯಿ

    ಬೆಂಗಳೂರು : ಇಂದಿನ ಯುವನಾಯಕರಿಗೆ ಕೆ.ಸಿ.ರೆಡ್ಡಿಯವರ ಬದುಕು ಮಾರ್ಗದರ್ಶಕವಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಿಳಿಸಿದರು.

    ಮಾಜಿ ಮುಖ್ಯಮಂತ್ರಿ ದಿವಂಗತ ಕೆ.ಸಿ.ರೆಡ್ಡಿ ಅವರ ಪುಣ್ಯತಿಥಿಯ ಅಂಗವಾಗಿ ಅವರ ಪ್ರತಿಮೆಗೆ ಪುಷ್ಪನಮನ ಸಲ್ಲಿಸಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು ಅವರು, ಪ್ರಥಮ ಮುಖ್ಯಮಂತ್ರಿಯಾಗಿದ್ದ ಕೆ.ಸಿ.ರೆಡ್ಡಿಯವರ ದೂರದೃಷ್ಟಿಯಿರುವ ಹಿರಿಯ ನಾಯಕರು. ಕೆ.ಸಿ.ರೆಡ್ಡಿಯವರು ಹಾಕಿರುವ ಆಡಳಿತದ ಅಡಿಪಾಯದಿಂದ ಮೈಸೂರು ಸಂಸ್ಥಾನ ಹಾಗೂ ಕರ್ನಾಟಕ ರಾಜ್ಯವನ್ನು ಕಟ್ಟಲು ಸಾಧ್ಯವಾಯಿತು ಎಂದರು. ಇದನ್ನೂ ಓದಿ:  ಶುಭ ಭಾನುವಾರ, ಶುಭ ಗಳಿಗೆಯಲ್ಲಿ ಇಂದು ಪಾದಯಾತ್ರೆಗೆ ಚಾಲನೆ: ಡಿಕೆಶಿ

    ಉತ್ತಮ ಆಡಳಿತಗಾರರಾದ ಕೆ.ಸಿ.ರೆಡ್ಡಿಯವರ ಆದರ್ಶಗಳು, ತತ್ವಗಳು, ಸಾರ್ವಜನಿಕ ಬದುಕಿನ ರೀತಿ, ಜನರ ಸಮಸ್ಯೆಗಳನ್ನು ಒಟ್ಟಾಗಿ ಬಗೆಹರಿಸುವ ಬಗೆ ಎಲ್ಲರಿಗೂ ಸ್ಪೂರ್ತಿಯಾಗಿದೆ. ಅವರ ಆಡಳಿತಾವಧಿಯಲ್ಲಿ ಪ್ರಾದೇಶಿಕ, ಸಾಮಾಜಿಕ ಅಸಮತೋಲನ ನಿವಾರಣೆಗೆ ಆದ್ಯತೆ ನೀಡಲಾಗುತ್ತಿತ್ತು ಎಂದು ತಿಳಿಸಿದರು. ಇದನ್ನೂ ಓದಿ: ಸಹಾಯಕ ಪ್ರಾಧ್ಯಾಪಕರ ಹುದ್ದೆ ಪರೀಕ್ಷೆಗೆ ಡ್ರೆಸ್ ಕೋಡ್ ಕಡ್ಡಾಯ!

    ಕೋಲಾರ ಜಿಲ್ಲೆಯ ಕೆ.ಸಿ.ರೆಡ್ಡಿಯವರು ವೈಜ್ಞಾನಿಕ ಚಿಂತನೆಯ ವ್ಯಕ್ತಿ.ಕರ್ನಾಟಕ ರಾಜ್ಯಕ್ಕೆ ಕೇಂದ್ರ ಹಾಗೂ ರಾಜ್ಯ ಸರ್ಕಾರ ಸ್ವಾಮ್ಯದ ಬಿಹೆಚ್ಇಎಲ್, ಬಿಎಂಎಲ್ ಹೆಚ್ ಎ ಎಲ್ ಸೇರಿದಂತೆ ಹಲವಾರು ಕೈಗಾರಿಕೆಗಳನ್ನು ಸ್ಥಾಪಿಸಲು ಕಾರಣರಾದರು. ಹೊಸ ತಂತ್ರಜ್ಞಾನದಿಂದ ಹೊಸ ಚಿಂತನೆಗೆ ನಾಂದಿ ಹಾಡಿದ್ದರು. ಇದರಿಂದಾಗಿ ನಮ್ಮ ರಾಜ್ಯ ಐಟಿಬಿಟಿ ಕ್ಷೇತ್ರದಲ್ಲಿ ಉತ್ತಮ ಬೆಳವಣಿಗೆ ಕಾಣಲು ಸಹಕಾರಿಯಾಯಿತು ಎಂದರು. ಇದನ್ನೂ ಓದಿ: ಕನ್ನಡಿಗರ ರಕ್ಷಣೆಯ ಸಂಪೂರ್ಣ ವೆಚ್ಚ ಸರ್ಕಾರ ಭರಿಸಲಿದೆ: ಬೊಮ್ಮಾಯಿ

    ಉದ್ಯಮಗಳಲ್ಲಿದ್ದ ಆರ್ ಎಂಡ್ ಡಿ, ರಾಜ್ಯದಲ್ಲಿ ಇಂದಿನ ತಂತ್ರಜ್ಞಾನದ ಬೆಳವಣಿಗೆಗೆ ಭದ್ರ ಬುನಾದಿ ಹಾಕಿದೆ. ಸದಾ ಸ್ಮರಣೀಯರಾದ ಕೆ.ಸಿ.ರೆಡ್ಡಿಯವರ ಜೀವನಾದರ್ಶಗಳು ಸದಾಕಾಲ ಪ್ರೇರಣಾದಾಯಕ ಎಂದು ತಿಳಿಸಿದರು. ಕೆ.ಸಿ.ರೆಡ್ಡಿ ಪ್ರತಿಮೆಯ ಬಗ್ಗೆ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿ ಅವರು, ಕೆ.ಸಿ.ರೆಡ್ಡಿಯವರ ಕಂಚಿನ ಪ್ರತಿಮೆ ಪ್ರತಿಷ್ಠಾಪಿಸಲು ಶೀಘ್ರ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

  • ಮಕ್ಕಳ ದಿನಾಚರಣೆಗೆ ಶುಭ ಕೋರಿದ ಗಣ್ಯರು

    ಮಕ್ಕಳ ದಿನಾಚರಣೆಗೆ ಶುಭ ಕೋರಿದ ಗಣ್ಯರು

    ಬೆಂಗಳೂರು: ಸ್ವತಂತ್ರ ಭಾರತದ ಮೊದಲ, ಮಾಜಿ ಪ್ರಧಾನಿ ಜವಾಹರ್ ಲಾಲ್ ನೆಹರು ಅವರ ಜನ್ಮದಿನದ ನಿಮಿತ್ತ ರಾಷ್ಟ್ರಾದ್ಯಂತ ಮಕ್ಕಳ ದಿನಾಚರಣೆ ಆಚರಿಸಲಾಗುತ್ತಿದೆ. ಗಣ್ಯರು ಸೋಶಿಯಲ್ ಮೀಡಿಯಾ ಮೂಲಕವಾಗಿ ಶುಭ ಕೋರುತ್ತಿದ್ದಾರೆ.

    ಇಂದು ನವೆಂಬರ್ 14 ನೆಹರೂ ಅವರನ್ನು ಮಕ್ಕಳು ಪ್ರೀತಿಯಿಂದ ಚಾಚಾ ನೆಹರು ಎಂದೇ ಕರೆಯುತ್ತಿದ್ದರು. ಅವರಿಗೂ ಮಕ್ಕಳೆಂದರೆ ತುಂಬ ಅಚ್ಚುಮೆಚ್ಚಾಗಿತ್ತು. ಇದೇ ಕಾರಣಕ್ಕೆ ಅವರ ಜನ್ಮದಿನವನ್ನು ಭಾರತದಲ್ಲಿ ಬಾಲ ದಿವಸ್ ಅಥವಾ ಮಕ್ಕಳ ದಿನವೆಂದು ಆಚರಿಸಿಕೊಂಡು ಬರಲಾಗುತ್ತಿದೆ. ಈ ಬಾರಿ ಜವಾಹರ್ ಲಾಲ್ ನೆಹರು ಅವರ 132ನೇ ಜನ್ಮಜಯಂತಿ ಆಚರಿಸಲಾಗುತ್ತಿದ್ದು ಮಕ್ಕಳ ದಿನಾಚರಣೆಯ ಅಂಗವಾಗಿ ಗಣ್ಯರು ಶುಭಕೋರಿ ಟ್ವೀಟ್ ಮಾಡಿದ್ದಾರೆ. ಇದನ್ನೂ ಓದಿ: 11 ವರ್ಷದ ಬಳಿಕ ಮೈದುಂಬಿದ ಸುವರ್ಣಾವತಿ ಜಲಾಶಯ- ನದಿ ಪಾತ್ರದ ಜನರಿಗೆ ಎಚ್ಚರಿಕೆ

    ದೇಶದ ಪ್ರಥಮ ಪ್ರಧಾನಮಂತ್ರಿ ಜವಾಹರಲಾಲ್ ನೆಹರು ಅವರ ಜಯಂತಿಯಂದು ಅವರಿಗೆ ಗೌರವಪೂರ್ವಕ ಪ್ರಣಾಮಗಳು. ಅವರ ಸಂಸ್ಮರಣೆಗಳ ಜೊತೆಗೆ ನಾಡಿನ ಎಲ್ಲ ಮಕ್ಕಳಿಗೂ ಮಕ್ಕಳ ದಿನಾಚರಣೆಯ ಪ್ರೀತಿಪೂರ್ವಕ ಶುಭಕಾಮನೆಗಳು ಎಂದು ಬಸವರಾಜ ಬೊಮ್ಮಾಯಿ ಅವರು ಟ್ವೀಟ್ ಮಾಡುವ ಮೂಲಕವಾಗಿ ಮಕ್ಕಳ ದಿನಾಚರಣೆಯ ಶುಭ ಕೋರಿದ್ದಾರೆ.

    ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಒಂದೇ ಸಾಲಿನಲ್ಲಿ ಪಂಡಿತ್ ಜವಾಹರ್​ ಲಾಲ್​ ನೆಹರೂ ಜನ್ಮದಿನದಂದು ಅವರಿಗೆ ನಮನಗಳು ಎಂದು ಹೇಳಿ ಟ್ವೀಟ್ ಮಾಡಿದ್ದಾರೆ. ಇದನ್ನೂ ಓದಿ:  ಹೆಣ್ಣು ಮಗು ಮಾರಾಟ ಮಾಡಿದ್ರಾ ಭಿಕ್ಷುಕ ದಂಪತಿ?

    Koo App

    ಸ್ವಾತಂತ್ರ್ಯ ಚಳವಳಿಯ ಮುಂಚೂಣಿ ನಾಯಕ, ಪ್ರಥಮ ಪ್ರಧಾನಮಂತ್ರಿ, ಭಾರತರತ್ನ ಪಂಡಿತ್ ಜವಾಹರ್ ಲಾಲ್ ನೆಹರು ಅವರ ಜಯಂತಿಯಂದು, ಅವರ ಸಂಸ್ಮರಣೆಗಳ ಜೊತೆಗೆ ಎಲ್ಲ ಮಕ್ಕಳಿಗೆ ಮಕ್ಕಳ ದಿನಾಚರಣೆಯ ಹಾರ್ದಿಕ ಶುಭಾಶಯಗಳು. ಇಂದಿನ ಮಕ್ಕಳೇ ಮುಂದಿನ ಪ್ರಜೆಗಳು. ಸದೃಢ, ಸಶಕ್ತ, ಸಮೃದ್ಧ ಭಾರತಕ್ಕಾಗಿ ಮಕ್ಕಳ ಸರ್ವತೋಮುಖ ಬೆಳವಣಿಗೆ ನಮ್ಮೆಲ್ಲರ ಹೊಣೆಗಾರಿಕೆ.

    BS Yediyurappa (@bsybjp) 14 Nov 2021

    ಸ್ವಾತಂತ್ರ್ಯ ಚಳವಳಿಯ ಮುಂಚೂಣಿ ನಾಯಕ, ಪ್ರಥಮ ಪ್ರಧಾನಮಂತ್ರಿ, ಭಾರತರತ್ನ ಪಂಡಿತ್ ಜವಾಹರ್ ಲಾಲ್ ನೆಹರು ಅವರ ಜಯಂತಿಯಂದು, ಅವರ ಸಂಸ್ಮರಣೆಗಳ ಜೊತೆಗೆ ಎಲ್ಲ ಮಕ್ಕಳಿಗೆ ಮಕ್ಕಳ ದಿನಾಚರಣೆಯ ಹಾರ್ದಿಕ ಶುಭಾಶಯಗಳು. ಇಂದಿನ ಮಕ್ಕಳೇ ಮುಂದಿನ ಪ್ರಜೆಗಳು. ಸದೃಢ, ಸಶಕ್ತ, ಸಮೃದ್ಧ ಭಾರತಕ್ಕಾಗಿ ಮಕ್ಕಳ ಸರ್ವತೋಮುಖ ಬೆಳವಣಿಗೆ ನಮ್ಮೆಲ್ಲರ ಹೊಣೆಗಾರಿಕೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರ ಹೇಳಿದ್ದಾರೆ.

    ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ನಾಡಿನ ಎಲ್ಲ ನಲ್ಮೆಯ ಮಕ್ಕಳಿಗೆ ಮಕ್ಕಳ ದಿನಾಚರಣೆಯ ಶುಭಾಶಯಗಳು. ಭವ್ಯಭಾರತದ ನಿರ್ಮಾಣಕಾರರಾದ ಮಕ್ಕಳ ಬೌದ್ಧಿಕ, ಶೈಕ್ಷಣಿಕ ಪ್ರಗತಿಗೆ ನೆರವಾಗುವ ಮೂಲಕ ಮಕ್ಕಳ ಬಾಳು ಬೆಳಗೋಣ. ಮಾಜಿ ಪ್ರಧಾನಿ ಪಂಡಿತ್ ಜವಹರಲಾಲ್ ನೆಹರು ಜಯಂತಿಯ ನಮನಗಳನ್ನು ತಿಳಿಸಿದ್ದಾರೆ.

    ಸಚಿವ ಎಸ್ ಟಿ ಸೋಮಶೇಖರ್ ಅವರು ನಾವು ನೋಡದ ಭವಿಷ್ಯದ ಸಮಯಕ್ಕೆ ನಾವು ಕಳುಹಿಸುವ ಜೀವಂತ ಸಂದೇಶಗಳೆಂದರೆ ಮಕ್ಕಳು. ಮಕ್ಕಳ ದಿನಾಚರಣೆಯ ಶುಭಾಶಯಗಳು ಎಂದು ಸೋಶಿಯಲ್ ಮೀಡಿಯಾದಲ್ಲಿ ಶುಭಾಷಯ ತಿಳಿಸಿದ್ದಾರೆ.

  • ಆಲಮಟ್ಟಿ ಎತ್ತರದಿಂದ ಮುಳುಗಲಿರುವ ಜಮೀನುಗಳ ಮಾರ್ಗಸೂಚಿ ದರ ಪರಿಷ್ಕರಿಸಲು ಸಿಎಂಗೆ ಒತ್ತಾಯ

    ಆಲಮಟ್ಟಿ ಎತ್ತರದಿಂದ ಮುಳುಗಲಿರುವ ಜಮೀನುಗಳ ಮಾರ್ಗಸೂಚಿ ದರ ಪರಿಷ್ಕರಿಸಲು ಸಿಎಂಗೆ ಒತ್ತಾಯ

    ಬೆಂಗಳೂರು: ಆಲಮಟ್ಟಿ ಎತ್ತರದಿಂದ ಮುಳುಗಲಿರುವ ಜಮೀನುಗಳ ಮಾರ್ಗಸೂಚಿ ದರ ಪರಿಷ್ಕರಿಸಲು ಸಿಎಂಗೆ ರೈತರು ಒತ್ತಾಯ ಮಾಡಿದ್ದಾರೆ. ಈ ವಿಚಾರವಾಗಿ ರೈತರ ನಿಯೋಗಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಸಕಾರಾತ್ಮಕವಾಗಿ ಸ್ಪಂದನೆ ನೀಡಿದ್ದಾರೆ.

    ಯುಕೆಪಿ 3ನೇ ಹಂತದಲ್ಲಿ ಮುಳುಗಡೆಯಾಗುವ ಬಬಲೇಶ್ವರ ತಾಲೂಕಿನ ಎಲ್ಲಾ ಜಮೀನುಗಳಿಗೆ ಏಕರೂಪ ಪರಿಹಾರ ಒದಗಿಸಲು ಕೋರಿ ರೈತರ ನಿಯೋಗ ಇಂದು ಮುಖ್ಯಮಂತ್ರಿಗಳನ್ನು ಬೆಂಗಳೂರಿನಲ್ಲಿ ಭೇಟಿ ಮಾಡಿತು. ಈ ವೇಳೆ ರೈತರ ನಿಯೋಗಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಸಕಾರಾತ್ಮಕವಾಗಿ ಸ್ಪಂದನೆ ನೀಡಿದ್ದು, ನಮ್ಮ ಬೇಡಿಕೆ ಈಡೇರಿಸುವ ಭರವಸೆ ದೊರೆತಿದೆ ಎಂದು ರಾಜ್ಯ ಬಾರ್ ಕೌನ್ಸಿಲ್ ಅಧ್ಯಕ್ಷ ರಾಜೇಂದ್ರ ದೇಸಾಯಿ ತಿಳಿಸಿದ್ದಾರೆ. ಇದನ್ನೂ ಓದಿ:  5 ಮುಖ್ಯ ನ್ಯಾಯಮೂರ್ತಿಗಳ ವರ್ಗಾವಣೆ, 8 ನ್ಯಾಯಮೂರ್ತಿಗಳ ಪದೋನ್ನತಿಗೆ ಕೊಲಿಜಿಯಂ ಶಿಫಾರಸು

    ಆಲಮಟ್ಟಿ ಆಣೆಕಟ್ಟು 524.256ಮೀ ಎತ್ತರಿಸಿ, ನೀರು ನಿಲ್ಲಿಸಿದಾಗ ಅಂದಾಜು 75 ಸಾವಿರ ಎಕರೆ ಪ್ರದೇಶದಷ್ಟು ಜಮೀನು ಮುಳುಗಡೆಯಾಗಲಿದೆ. ವಿಜಯಪುರ ಜಿಲ್ಲೆ ಬಬಲೇಶ್ವರ ತಾಲೂಕಿನ 14 ಗ್ರಾಮಗಳು ಮುಳುಗಡೆಯಾಗಲಿವೆ. ಈ ಹಿಂದೆ 2015-16ರಲ್ಲಿ ಮಾರ್ಗಸೂಚಿ ಬೆಲೆಯನ್ನು ವಿಜಯಪುರ ಮತ್ತು ಬಾಗಲಕೋಟೆ ಜಿಲ್ಲೆಯ ಗ್ರಾಮಗಳಿಗೆ ನಿಗದಿಪಡಿಸಿರುತ್ತಾರೆ. ಆದರೆ ಬಾಗಲಕೋಟೆಯ ಜಮಖಂಡಿ ಮತ್ತು ಬೀಳಗಿ ತಾಲೂಕಿನ ಮಾರ್ಗಸೂಚಿ ದರ ಪರಿಷ್ಕರಣೆ ಮಾಡಿರುತ್ತಾರೆ. ಅದರಂತೆ ವಿಜಯಪುರ ಜಿಲ್ಲೆ ಬಬಲೇಶ್ವರ ತಾಲೂಕಿನ 14 ಗ್ರಾಮಗಳ ಜಮೀನುಗಳ ಮಾರ್ಗಸೂಚಿ ಪರಿಷ್ಕರಣೆ ಮಾಡಿ ಎಲ್ಲಾ ರೈತರಿಗೆ ನ್ಯಾಯ ದೊರಕಿಸಲು ಕೋರಿ ಮಾಜಿ ಸಚಿವ, ಬಬಲೇಶ್ವರ ಶಾಸಕ ಎಂ.ಬಿ.ಪಾಟೀಲ್ ಅವರ ನೇತೃತದಲ್ಲಿ ಮುಖ್ಯಮಂತ್ರಿಗಳನ್ನು ಇಂದು ಭೇಟಿ ಮಾಡಿದ್ದಾಗ ಅವರಿಂದ ಸಕಾರಾತ್ಮಕ ಭರವಸೆ ದೊರೆತಿದೆ ಎಂದರು. ಇದನ್ನೂ ಓದಿ:  ಮಕ್ಕಳ ನಿರ್ಲಕ್ಷ್ಯ- ಬೇಸತ್ತ ವೃದ್ಧ ತಂದೆ, ತಾಯಿ ಆತ್ಮಹತ್ಯೆ

    ಈ ಸಂದರ್ಭದಲ್ಲಿ ಎಂ.ಬಿ.ಪಾಟೀಲ್ ಅವರು ರೈತರ ಬೇಡಿಕೆಯನ್ನು ಮುಖ್ಯಮಂತ್ರಿಗಳಿಗೆ ವಿವರಿಸಿದರು. ಈ ಸಂದರ್ಭದಲ್ಲಿ ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ, ಜಿಲ್ಲಾ ಉಸ್ತುವಾರಿ ಸಚಿವೆ ಶಶಿಕಲಾ ಜೊಲ್ಲೆ ಅವರು ಉಪಸ್ಥಿತರಿದ್ದು, ರೈತರ ಮನವಿಯನ್ನು ಆಲಿಸಿದರು.

    ಈ ಸಂದರ್ಭದಲ್ಲಿ ನಂದಿ ಸಹಕಾರಿ ಸಕ್ಕರೆ ಕಾರ್ಖಾನೆ ಅಧ್ಯಕ್ಷ ಶಶಿಕಾಂತಗೌಡ ಪಾಟೀಲ್, ಉಪಾಧ್ಯಕ್ಷ ಎಚ್.ಆರ್.ಬಿರಾದಾರ, ಜಿ.ಪಂ ಮಾಜಿ ಅಧ್ಯಕ್ಷ ಬಸವರಾಜ್ ದೇಸಾಯಿ, ತಾಲೂಕು ಪಂಚಾಯತ ಮಾಜಿ ಅಧ್ಯಕ್ಷ ಶ್ರೀಶೈಲ ಸುಳ್ಳದ, ಭೀಮನಗೌಡ ಪಾಟೀಲ್, ರಾಮನಗೌಡ ಪಾಟೀಲ್, ವೆಂಕಟೇಶ ನಿಡೋಣಿ, ಸುಭಾಸ ಪಾಟೀಲ್, ಸಂಗನಗೌಡ ಪಾಟೀಲ್, ಸಂಗಣ್ಣ ಹುಣಸಿಕಟ್ಟಿ, ಶಿವಾನಂದ ಕಳ್ಳಿಗುದ್ದಿ, ಹಣಮಂತ ಮುದಕರೆಡ್ಡಿ, ವೆಂಕಣ್ಣ ಬಿರಾದಾರ, ರಮೇಶ ಗಡದಾನಿ, ವಿಠ್ಠಲ ಶೇಬಾನಿ, ಸುರೇಶ ಪೂಜಾರಿ, ಗೋವಿಂದಪ್ಪ ಶಿರಬೂರ, ಮಹೇಶ್ ಯರಗಟ್ಟಿ, ಸುರೇಶ್ ಬಿರಾದಾರ, ಸುರೇಶ್ ಕೊಡಬಾಗಿ, ಸುನೀಲ್‍ಗೌಡ ಪಾಟೀಲ್, ಮಹಾದೇವ ಮಾಸರೆಡ್ಡಿ, ವಿಜಯ್ ಸುತಗುಂಡಿ, ವೆಂಕಪ್ಪ ಚಿಕ್ಕಗಲಗಲಿ, ಅರವಿಂದ್ ಗುರಡ್ಡಿ, ವಿಠ್ಠಲ ಪೋತರೆಡ್ಡಿ, ಗಿರೀಶ್ ಪಾಟೀಲ್ ಸೇರಿದಂತೆ ಚಿಕ್ಕಗಲಗಲಿ, ಜೈನಾಪುರ, ಲಿಂಗದಳ್ಳಿ, ಹಂಗರಗಿ, ಬೆಳ್ಳುಬ್ಬಿ, ಬಬಲಾದ, ದೇವರಗೆಣ್ಣೂರ, ಕಣಬೂರ, ಹೊಸೂರ, ಸುತಗುಂಡಿ, ಜಂಬಗಿ, ಶಿರಬೂರ, ಮಂಗಳೂರ, ತಾಜಪೂರ ಗ್ರಾಮದ ರೈತರು ಉಪಸ್ಥಿತರಿದ್ದರು.

  • ಕೇಂದ್ರ ಪುರಸ್ಕೃತ ಯೋಜನೆಗಳ ಆರ್ಥಿಕ ನೆರವಿಗೆ ನಿರ್ಮಲಾ ಸೀತಾರಾಮನ್ ಒಪ್ಪಿಗೆ: ಬೊಮ್ಮಾಯಿ

    ಕೇಂದ್ರ ಪುರಸ್ಕೃತ ಯೋಜನೆಗಳ ಆರ್ಥಿಕ ನೆರವಿಗೆ ನಿರ್ಮಲಾ ಸೀತಾರಾಮನ್ ಒಪ್ಪಿಗೆ: ಬೊಮ್ಮಾಯಿ

    ಬೆಂಗಳೂರು: ಕೇಂದ್ರ ಪುರಸ್ಕೃತ ಯೋಜನೆಗಳಿಗೆ ತನ್ನ ಪಾಲಿನ ಹಣ ಬಿಡುಗಡೆ ಮಾಡಲು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಒಪ್ಪಿಗೆ ಕೊಟ್ಟಿದ್ದಾರೆ ಎಂದು ಗೃಹ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಖಾತೆ ಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದರು. ಇದನ್ನೂ ಓದಿ:  5 ಲಕ್ಷ ಬೆಲೆಬಾಳುವ ಚಿನ್ನದ ಮಾಸ್ಕ್ ತೊಟ್ಟ ಬಾಬಾ

    ಮಾಧ್ಯಮಗಳಜೊತೆಗೆ ಮಾತನಾಡಿದ ಅವರು, ಬೆಂಗಳೂರಿನಲ್ಲಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಇಂದು ಭೇಟಿ ಮಾಡಿ ಮಾತುಕತೆ ನಡೆಸಿದ ಸಂದರ್ಭದಲ್ಲಿ ಈ ಭರವಸೆ ನೀಡಿದ್ದಾರೆಂದು ಬೊಮ್ಮಾಯಿ ತಿಳಿಸಿದರು. ರಾಜ್ಯದಲ್ಲಿನ ಆರ್ಥಿಕ ಪರಿಸ್ಥಿತಿ, ಕೇಂದ್ರ ಸರ್ಕಾರದ ವಿವಿಧ ಯೋಜನೆಗಳ ಕುರಿತು ನಿರ್ಮಲಾ ಸೀತಾರಾಮನ್ ಜತೆ ಚರ್ಚೆ ನಡೆಸಲಾಯಿತು.

    ಕೇಂದ್ರ ಸರ್ಕಾರದಿಂದ ವಿವಿಧ ಯೋಜನೆಗಳಡಿ ರಾಜ್ಯಸರ್ಕಾರಕ್ಕೆ ಬಿಡುಗಡೆಯಾಗಬೇಕಿರುವ ಹಣಕಾಸಿನ ನೆರವು ನೀಡುವಂತೆ ಮನವಿ ಮಾಡಿಕೊಳ್ಳಲಾಯಿತು. ಇದಕ್ಕೆ ಸಕಾರಾತ್ಮಕವಾಗಿ ಸ್ಪಂದಿಸಿದ ನಿರ್ಮಲಾ ಸೀತಾರಾಮನ್, ತ್ವರಿತ ಗತಿಯಲ್ಲಿ ಕೇಂದ್ರ ಪ್ರಾಯೋಜಿತ ಯೋಜನೆಗಳಿಗೆ ತನ್ನ ಪಾಲಿನ ಆರ್ಥಿಕ ನೆರವು ನೀಡುವುದಾಗಿ ತಿಳಿಸಿದರು ಎಂದು ಬೊಮ್ಮಾಯಿ ಹೇಳಿದರು. ಇದನ್ನೂ ಓದಿ:  ನನ್ನ ವಾಟ್ಸಪ್ ಮೆಸೇಜಿಗೆ ಸದಾ ಉತ್ತರಿಸುತ್ತಿದ್ದ ನೀವು ಈ ಬಾರಿ ಉತ್ತರಿಸಲೇ ಇಲ್ಲ ಹಾಲ್ದೊಡ್ಡೇರಿ ಸರ್..!

    ಕಳೆದ ವರ್ಷದ ಜಿಎಸ್‍ಟಿ ಪರಿಹಾರ ಬಾಕಿ 11,800 ಕೋಟಿ ರೂಪಾಯಿ ಹಣವನ್ನು ರಾಜ್ಯಕ್ಕೆ ನೀಡಲು ಕ್ರಮಕೈಗೊಳ್ಳಲಾಗುವುದು. ಕಳೆದ ಬಾರಿಯಂತೆ ಜಿಎಸ್ಟಿ ಪರಿಹಾರ 18,000 ಕೋಟಿ ರೂಪಾಯಿ ಹಣವನ್ನು ಕೇಂದ್ರ ಸರ್ಕಾರ ಸಾಲ ಪಡೆದು ರಾಜ್ಯಕ್ಕೆ ಒದಗಿಸುವುದಾಗಿ ನಿರ್ಮಲಾ ಸೀತಾರಾಮನ್ ಭರವಸೆ ನೀಡಿದ್ದರೆಂದು ಬೊಮ್ಮಾಯಿ ವಿವರಿಸಿದರು.

    2021- 22 ನೇ ಸಾಲಿನ ಮೊದಲ ತ್ರೈಮಾಸಿಕ ಅವಧಿಯಲ್ಲಿ ಸಂಗ್ರಹವಾಗಿರುವ ಜಿಎಸ್ಟಿ ಪಾಲಿನ ಮೊದಲ ಕಂತನ್ನು ರಾಜ್ಯಕ್ಕೆ ಬಿಡುಗಡೆ ಮಾಡುವಂತೆ ಮನವಿ ಮಾಡಿದೆ. ಅದಕ್ಕೆ ಸಚಿವರು ಒಪ್ಪಿಗೆ ನೀಡಿದರು. ಕೋವಿಡ್ ನಿರ್ವಹಣೆ ಮತ್ತು ಕೋವಿಡ್ ಮೂರನೇ ಅಲೆ ತಯಾರಿಗೆ ಬೇಕಾದ ಹಣಕಾಸಿನ ವ್ಯವಸ್ಥೆಗಳ ಕುರಿತು ಸಭೆಯಲ್ಲಿ ಚರ್ಚೆಯಾಯಿತು. ಕೋವಿಡ್ ನಿರ್ವಹಣೆಗೆ ಯಾವುದೇ ರೀತಿಯ ಹಣಕಾಸಿನ ಅಭಾವ ಆಗದಂತೆ ನೋಡಿಕೊಳ್ಳುವ ಭರವಸೆಯನ್ನು ಅವರು ನೀಡಿದರು ಎಂದು ಸಚಿವರು ತಿಳಿಸಿದ್ದಾರೆ. ಇದನ್ನೂ ಓದಿ: ರಾಜ್ಯದಲ್ಲಿಂದು 2,984 ಕೊರೊನಾ ಕೇಸ್- 88 ಸಾವು, 14,337 ಡಿಸ್ಚಾರ್ಜ್

    ರಾಜ್ಯ ಸರ್ಕಾರ ಕೋವಿಡ್ ಎರಡನೇ ಅಲೆಯನ್ನು ನಿರ್ವಹಣೆ ಮಾಡಿದ ರೀತಿ, ಬಡವರಿಗೆ ನೀಡಲಾದ ಪ್ಯಾಕೇಜ್, ಕೋವಿಡ್‍ನಿಂದ ಸಾವನ್ನಪ್ಪಿದ ಬಿಪಿಎಲ್ ಕುಟುಂಬಗಳಿಗೆ ತಲಾ ಒಂದು ಲಕ್ಷ ರೂಪಾಯಿ ಪರಿಹಾರ, ಖಾಸಗಿ ಆಸ್ಪತ್ರೆಗಳ ಸಹಕಾರದೊಂದಿಗೆ ಕೋವಿಡ್ ಎರಡನೇ ಅಲೆಯನ್ನು ನಿರ್ವಹಣೆ ಮಾಡಿದ ರಾಜ್ಯ ಸರ್ಕಾರದ ಕ್ರಮಕ್ಕೆ ನಿರ್ಮಲಾ ಸೀತಾರಾಮನ್ ಹರ್ಷ ವ್ಯಕ್ತಪಡಿಸಿದರು.

  • ಎನ್‍ಡಿಪಿಎಸ್ ಕಾಯ್ದೆ ಜಾರಿಗೆ ನಿಯಮ ರೂಪಿಸಲಾಗುವುದು: ಬಸವರಾಜ ಬೊಮ್ಮಾಯಿ

    ಎನ್‍ಡಿಪಿಎಸ್ ಕಾಯ್ದೆ ಜಾರಿಗೆ ನಿಯಮ ರೂಪಿಸಲಾಗುವುದು: ಬಸವರಾಜ ಬೊಮ್ಮಾಯಿ

    ಬೆಂಗಳೂರು: ಮಾದಕ ವಸ್ತುಗಳ ನಿಯಂತ್ರಣಕ್ಕೆ ರೂಪಿಸಲಾಗಿರುವ NDPS (ನಾರ್ಕೋಟಿಕ್ ಡ್ರಗ್ಸ್ ಸೈಕ್ಯಾಟ್ರಿಕ್ ಸಬಸ್ಟನ್ಸ್) ಕಾಯ್ದೆಗೆ ರಾಜ್ಯದಲ್ಲಿ ನಿಯಮಾವಳಿ ರೂಪಿಸುವ ಮೂಲಕ ಆ ಕಾಯಿದೆಯನ್ನು ಮತ್ತಷ್ಟು ಬಲಪಡಿಸಲಾಗುವುದು. ಇದರೊಂದಿಗೆ ಮಾದಕ ವಸ್ತುಗಳ ವಿರುದ್ಧದ ನಮ್ಮ ಹೋರಾಟ ಮತ್ತಷ್ಟು ಪ್ರಬಲವಾಗಲಿದೆ ಎಂದು ಗೃಹ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಖಾತೆ ಸಚಿವರಾದ ಬಸವರಾಜ ಬೊಮ್ಮಾಯಿ ಹೇಳಿದರು.

    ಬೆಂಗಳೂರಿನಲ್ಲಿ ಶನಿವಾರ ಅಂತರಾಷ್ಟ್ರೀಯ ಮಾದಕ ವಸ್ತುಗಳ ರಹಿತ ದಿನಾಚರಣೆ ಅಂಗವಾಗಿ ಬೆಂಗಳೂರು ನಗರ ಪೊಲೀಸ್ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಈ ವೇಳೆ ಮಾತನಾಡಿದ ಅವರು, ಕೇಂದ್ರ ಸರ್ಕಾರ NDPS ಕಾನೂನನ್ನು ರೂಪಿಸಿದೆ. ಈ ಕಾನೂನನ್ನು ರಾಜ್ಯದಲ್ಲಿ ಪರಿಣಾಮಕಾರಿಯಾಗಿ ಹಾಗೂ ಮತ್ತಷ್ಟು ಗಟ್ಟಿಯಾಗಿ ಜಾರಿಗೊಳಿಸಬೇಕೆಂಬುದು ನಮ್ಮ ದೃಢ ನಿರ್ಧಾರ.ಹೀಗಾಗಿ ಈ ಕಾಯ್ದೆಯನ್ನು ರಾಜ್ಯದಲ್ಲಿ ಜಾರಿ ಮಾಡಲು ನಿಯಮಗಳನ್ನು ರೂಪಿಸುವ ಪ್ರಕ್ರಿಯೆ ಆರಂಭವಾಗಿದೆ. ಈ ಸಂಬಂಧ ನ್ಯಾಷನಲ್ ಲಾ ಸ್ಕೂಲ್ ಜತೆ ಸಭೆ ನಡೆದಿದ್ದು ಕಾನೂನಿನನ್ವಯ ನಿಯಮ ರೂಪಿಸಿ ಜಾರಿಗೆ ತರಲು ಅಧ್ಯಯನ ನಡೆಯುತ್ತಿದೆ ಎಂದರು. ಇದನ್ನೂ ಓದಿ: ಹತ್ತು ದಿನಗಳಲ್ಲಿ ನನ್ನ ಮುಂದಿನ ರಾಜಕೀಯ ನಿರ್ಣಯ: ರಮೇಶ್ ಜಾರಕಿಹೊಳಿ

    ಡಾರ್ಕ್ ವೆಬ್ ಮೂಲಕ ಸರಬರಾಜಾಗುತ್ತಿದ್ದ ಮಾದಕ ವಸ್ತುಗಳನ್ನು ನಮ್ಮ ಪೊಲೀಸರು ನಿಯಂತ್ರಿಸಿದ್ದಾರೆ. ಡಾರ್ಕ್ ವೆಬ್ ಅಪರಾಧ ಪತ್ತೆಯಿಂದ ಹಲವಾರು ಹೊಸ ವಿಚಾರಗಳು ಬೆಳಕಿಗೆ ಬಂದಿವೆ. ಅದರ ಆಧಾರದ ಮೇಲೆ ಹಲವಾರು ದಾಳಿಗಳು ನಡೆದಿವೆ. ಅಂತರಾಷ್ಟ್ರೀಯ ಮಟ್ಟದ ಪ್ಲೇಯರ್ ಗಳನ್ನು ಪತ್ತೆ ಮಾಡಿ ಬಂಧಿಸಲಾಗುವುದು ಎಂದು ಬಸವರಾಜ ಬೊಮ್ಮಾಯಿ ವಿಶ್ವಾಸ ವ್ಯಕ್ತಪಡಿಸಿದರು.

    ಕರ್ನಾಟಕ ಪೊಲೀಸರ ಕಾರ್ಯಾಚರಣೆ ಬಗ್ಗೆ ಮೆಚ್ಚುಗೆ:

    ಡ್ರಗ್ಸ್ ವಿರುದ್ಧದ ನಮ್ಮ ಹೋರಾಟದಲ್ಲಿ ಕರ್ನಾಟಕ ಪೊಲೀಸರು ಒಳ್ಳೆಯ ಕೆಲಸ ಮಾಡಿದ್ದಾರೆ. ಕರ್ನಾಟಕ ಪೊಲೀಸರ ಡ್ರಗ್ ವಿರೋಧಿ ಕಾರ್ಯಾಚರಣೆಯಿಂದ ಬೇರೆ ಎಲ್ಲ ತನಿಖಾ ಏಜೆನ್ಸಿಗಳು ಜಾಗೃತವಾದವು ಅನ್ನುವುದು ಬಹಳ ಮುಖ್ಯ. ಸಾಮಾನ್ಯವಾಗಿ ಇದುವರೆಗೆ ಬೇರೆ ಏಜೆನ್ಸಿಗಳು ಅಪರಾಧ ತಡೆ ಕುರಿತು ಜಾಗೃತಿ ಮೂಡಿಸುತ್ತಿದ್ದವು. ಆದರೆ ಈಗ ಕರ್ನಾಟಕ ಪೊಲೀಸರು ಅಪರಾಧ ಪತ್ತೆ ವಿಚಾರದಲ್ಲಿ ಬೇರೆ ಸಂಸ್ಥೆಗಳನ್ನು ಜಾಗೃತಗೊಳಿಸುತ್ತಿವೆ ಎಂದು ಹೇಳಲು ಹೆಮ್ಮೆಯಾಗುತ್ತಿದೆ ಎಂದು ಅವರು ಹೇಳಿದರು. ಇದನ್ನೂ ಓದಿ: ಒಲಿಂಪಿಕ್ಸ್‌ ಆಯ್ಕೆಯಾಗುವ ಕರ್ನಾಟಕದ ಕ್ರೀಡಾಪಟುಗಳಿಗೆ ತಲಾ ರೂ. 10 ಲಕ್ಷ ಪ್ರೋತ್ಸಾಹಧನ: ಡಾ. ನಾರಾಯಣಗೌಡ

    50 ಕೋಟಿ ಮೊತ್ತದ ಮಾದಕವಸ್ತುಗಳ ನಾಶ:
    2020 21 ನೇ ಸಾಲಿನಲ್ಲಿ ರಾಜ್ಯದಲ್ಲಿ ವಶಪಡಿಸಿಕೊಳ್ಳಲಾಗಿ ರುವ 3000 ಕೆಜಿ ಗಿಂತಲೂ ಹೆಚ್ಚು ತೂಕದ 50 ಕೋಟಿ ರೂಪಾಯಿ ಮೌಲ್ಯದ ಮಾದಕ ವಸ್ತುಗಳನ್ನು ನ್ಯಾಯಾಲಯದ ಆದೇಶದ ಪ್ರಕಾರ ನಾಶಪಡಿಸಲಾಗಿದೆ. ಇಷ್ಟು ದೊಡ್ಡ ಪ್ರಮಾಣದ ಮಾದಕ ವಸ್ತುಗಳು ಅಪಾರ ಪ್ರಮಾಣದ ಜನರ ಆರೋಗ್ಯವನ್ನು ಹಾಳು ಮಾಡುತ್ತಿದ್ದವು. ಆ ಅಪಾಯವನ್ನು ನಮ್ಮ ಪೊಲೀಸರು ತಪ್ಪಿಸಿದ್ದಾರೆ ಎಂಬುದು ಹೆಮ್ಮೆಯ ಸಂಗತಿ ಎಂದು ಅವರು ಹೇಳಿದರು. ಇದನ್ನೂ ಓದಿ: 67ನೇ ವಯಸ್ಸಿನಲ್ಲಿ ಪಿಹೆಚ್‍ಡಿ ಪಡೆದ ವೃದ್ಧೆ

    ಅಂತರಾಷ್ಟ್ರೀಯ ಮಾದಕ ವಸ್ತುಗಳ ರಹಿತ ದಿನಾಚರಣೆ ಅಂಗವಾಗಿ ಬೊಮ್ಮಾಯಿ ಪೊಲೀಸರಿಗೆ ಮಾದಕವಸ್ತು ತಡೆ ಮತ್ತು ನಾಶಪಡಿಸುವ ಕುರಿತು ಪ್ರಮಾಣ ವಚನ ಬೋಧಿಸಿದರು. ಇದುವರೆಗಿನ ಡ್ರಗ್ಸ್ ವಿರುದ್ಧದ ಹೋರಾಟದ ಇತಿಹಾಸದಲ್ಲಿ ಅತಿ ಹೆಚ್ಚು ಪ್ರಮಾಣದ ವಿವಿಧ ರೀತಿಯ ಮಾದಕ ವಸ್ತುಗಳನ್ನು ಒಂದೇ ವರ್ಷದಲ್ಲಿ ವಶಪಡಿಸಿಕೊಂಡಿರುವುದು ಐತಿಹಾಸಿಕ. ಇದು ಕರ್ನಾಟಕ ಪೊಲೀಸರ ಸಣ್ಣ ಸಾಧನೆಯೇನಲ್ಲ. ಬೆಂಗಳೂರಿನಲ್ಲಿ ದೊಡ್ಡ ಪ್ರಮಾಣದ ದಾಳಿಗಳು ನಡೆದವು. ಇದರ ಜಾಡು ಹಿಡಿದು ರಾಜ್ಯದ ಇತರ ಜಿಲ್ಲೆಗಳಲ್ಲಿ ಸಕ್ರಿಯವಾಗಿದ್ದ ಮಾದಕ ವಸ್ತುಗಳ ಜಾಲವನ್ನು ನಮ್ಮ ಪೊಲೀಸರು ಭೇದಿಸಿದರು. ಅದೆಷ್ಟೋ ಯುವಕರು, ಕುಟುಂಬಗಳು ಮಾದಕ ವಸ್ತುಗಳಿಂದ ಹಾಳಾಗುವುದನ್ನು ತಪ್ಪಿಸಿದರು ಎಂದು ಬಸರಾಜ್ ಬೊಮ್ಮಾಯಿ ಹೇಳಿದರು

  • ಕನ್ನಡಿಗರ ಮನಗೆದ್ದಿದ್ದ ನಟ- ಬೊಮ್ಮಾಯಿ ಕಂಬನಿ

    ಕನ್ನಡಿಗರ ಮನಗೆದ್ದಿದ್ದ ನಟ- ಬೊಮ್ಮಾಯಿ ಕಂಬನಿ

    ಬೆಂಗಳೂರು: ಕನ್ನಡ ಚಿತ್ರರಂಗದ ಉದಯೋನ್ಮುಖ ನಟ ಹಾಗೂ ಮನೋಜ್ಞ ಅಭಿನಯದ ಮೂಕಲ ಕನ್ನಡಿಗರ ಮನ ಗೆದ್ದಿದ್ದ ಚಲನಚಿತ್ರ ನಟ ಸಂಚಾರಿ ವಿಜಯ್ ನಿಧನಕ್ಕೆ ಗೃಹ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಖಾತೆ ಸಚಿವರಾದ ಬಸವರಾಜ ಬೊಮ್ಮಾಯಿ ಸಂತಾಪ ವ್ಯಕ್ತಪಡಿಸಿದರು.

    ಬೆಂಗಳೂರಿನಲ್ಲಿ ಇಂದು ಸುದ್ದಿಗಾರರ ಜತೆ ಮಾತನಾಡಿದ ಅವರು, ಸಂಚಾರಿ ವಿಜಯ ಒಬ್ಬ ಪರಿಸರ ಪ್ರೇಮಿ. ರಾಷ್ಟ್ರ ಪ್ರಶಸ್ತಿ ವಿಜೇತ ನಟ. ಅವರ ನಿಧನದಿಂದ ಕನ್ನಡ ಚಿತ್ರರಂಗಕ್ಕೆ ನಷ್ಟವಾಗಿದೆ. ಇನ್ನಷ್ಟು ಬಾಳಿ, ಬದುಕಿ ಚಿತ್ರರಂಗದ ಕೀರ್ತಿ ಬೆಳಗಬೇಕಾದ ಯುವ ಕಲಾವಿದ ವಿಜಯ ನಮ್ಮನ್ನು ಅಗಲಿರುವುದು ಬಹಳ ದುಃಖದ ಸಂಗತಿ ಎಂದು ಸಚಿವರು ಕಂಬನಿ ಮಿಡಿದಿದ್ದಾರೆ.

    ಸಂಚಾರಿ ವಿಜಯ ಅವರ ಸಾವಿನ ದುಃಖವನ್ನು ಭರಿಸುವ ಶಕ್ತಿಯನ್ನು ಆ ಭಗವಂತ ಅವರ ಕುಟುಂಬದ ಸದಸ್ಯರಿಗೆ ಕರುಣಿಸಲಿ ಎಂದು ಸಚಿವ ಬೊಮ್ಮಾಯಿ ಪ್ರಾರ್ಥಿಸಿದರು. ಸಂಚಾರಿ ವಿಜಯ್ ನಿಧನಕ್ಕೆ ಇಡೀ ಚಿತ್ರರಂಗ ಕಣ್ಣೀರು ಹಾಕುತ್ತಿದ್ದ, ಸೆಲೆಬ್ರಿಟಿಗಳು ಮಾತ್ರವಲ್ಲದೆ ರಾಜಕೀಯ ನಾಯಕರು ಕೂಡ ಕಂಬನಿ ಮಿಡಿಯುತ್ತಿದ್ದಾರೆ.  ಇದನ್ನೂ ಓದಿ: ಪ್ರತಿಭಾವಂತ ನಟ ಸಂಚಾರಿ ವಿಜಯ್ ನಿಧನಕ್ಕೆ ಡಿ.ಕೆ. ಶಿವಕುಮಾರ್ ಸಂತಾಪ