Tag: basavarj bommai

  • ಶಬರಿಮಲೆಯಲ್ಲಿ ಕರ್ನಾಟಕ ಛತ್ರ ನಿರ್ಮಾಣ – ಮಂತ್ರಾಲಯ ಛತ್ರ ಅಭಿವೃದ್ದಿಗೆ ವಿಶೇಷ ಅನುದಾನ ಬಿಡುಗಡೆ

    ಶಬರಿಮಲೆಯಲ್ಲಿ ಕರ್ನಾಟಕ ಛತ್ರ ನಿರ್ಮಾಣ – ಮಂತ್ರಾಲಯ ಛತ್ರ ಅಭಿವೃದ್ದಿಗೆ ವಿಶೇಷ ಅನುದಾನ ಬಿಡುಗಡೆ

    – ಮಂತ್ರಾಯಲದ ಕರ್ನಾಟಕ ಛತ್ರದ ಅಭಿವೃದ್ದಿಗೆ 4 ಕೋಟಿ ರೂ. ಅನುದಾನ
    – ಮಹಾರಾಷ್ಟ್ರ ರಾಜ್ಯದ ಪಂಡರಾಪುರದಲ್ಲಿರುವ ಕರ್ನಾಟಕ ಛತ್ರಕ್ಕಾಗಿ 3 ಕೋಟಿ

    ಬೆಂಗಳೂರು: ಹೊರ ರಾಜ್ಯದ ಯಾತ್ರಾಸ್ಥಳಗಳಿಗೆ ರಾಜ್ಯದಿಂದ ತೆರಳುವ ಯಾತ್ರಾರ್ಥಿಗಳ ಅನುಕೂಲಕ್ಕಾಗಿ ಕರ್ನಾಟಕ ಛತ್ರ ನಿರ್ಮಾಣ ಮಾಡಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಿಶೇಷ ಅನುದಾನವನ್ನು ಬಿಡುಗಡೆಗೊಳಿಸಿದ್ದಾರೆ.

    ಈ ಬಗ್ಗೆ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಮುಜರಾಯಿ, ಹಜ್ ಮತ್ತು ವಕ್ಫ್ ಸಚಿವರಾದ ಶಶಿಕಲಾ ಜೊಲ್ಲೆ, ರಾಜ್ಯದ ಯಾತ್ರಾರ್ಥಿಗಳಿಗೆ ಅನುಕೂಲ ಮಾಡಿಕೊಡುವ ನಿಟ್ಟಿನಲ್ಲಿ ಸೌಕರ್ಯಗಳನ್ನು ಅಭಿವೃದ್ದಿಪಡಿಸಲಾಗುವುದು ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ನ್ಯಾಷನಲ್‌ ಹೆರಾಲ್ಡ್‌ ಪ್ರಕರಣ – ಯಂಗ್‌ ಇಂಡಿಯಾ ಕಚೇರಿ ಸೀಲ್‌ ಮಾಡಿದ ED

    ಬಸವರಾಜ ಬೊಮ್ಮಾಯಿ ನೇತೃತ್ವದ ಸರ್ಕಾರ ರಾಜ್ಯದಲ್ಲಿನ ವಿವಿಧ ದೇವಸ್ಥಾನಗಳು, ಮಠಗಳು ಹಾಗೂ ಹೊರ ರಾಜ್ಯಗಳಲ್ಲಿರುವ ಕರ್ನಾಟಕ ಛತ್ರಗಳ ಅಭಿವೃದ್ದಿಗಾಗಿ ಕಳೆದ 10 ವರ್ಷಗಳಲ್ಲೇ ಅತಿ ಹೆಚ್ಚು ಅನುದಾನವನ್ನು ನೀಡಿದ್ದಾರೆ. ಹೆಚ್ಚಿನ ಸಂಖ್ಯೆಯಲ್ಲಿ ಭೇಟಿ ನೀಡುವ ಹೊರ ರಾಜ್ಯದ ಪ್ರಸಿದ್ದ ಧಾರ್ಮಿಕ ಯಾತ್ರಾ ಸ್ಥಳಗಳಲ್ಲಿ ಯಾತ್ರಾರ್ಥಿಗಳ ಅನುಕೂಲಕ್ಕಾಗಿ ಕರ್ನಾಟಕ ಛತ್ರಗಳ ನಿರ್ಮಾಣ ಹಾಗೂ ಅಭಿವೃದ್ದಿಗೂ ವಿಶೇಷ ಆದ್ಯತೆಯನ್ನು ನೀಡಿದ್ದಾರೆ ಎಂದು ಮಾಹಿತಿ ಹಂಚಿಕೊಂಡಿದ್ದಾರೆ.

    ಬಸವರಾಜ ಬೊಮ್ಮಾಯಿ ಶಬರಿಮಲೆ, ಮಂತ್ರಾಲಯ ಹಾಗೂ ಪಂಡರಾಪುರದ ಕರ್ನಾಟಕ ಛತ್ರಗಳ ನಿರ್ಮಾಣ ಮತ್ತು ಅಭಿವೃದ್ದಿಗೆ ವಿಶೇಷ ಅನುದಾನವನ್ನು ಬಿಡುಗಡೆ ಮಾಡಲು ಆರ್ಥಿಕ ಇಲಾಖೆಗೆ ಸೂಚನೆ ನೀಡಿದ್ದರು. ಈ ಸಂಬಂಧ ಅಧಿಕೃತ ಆದೇಶವನ್ನು ಹೊರಡಿಸಲಾಗಿದೆ. ಅತಿ ಹೆಚ್ಚು ಅನುದಾನ ನೀಡುವ ಮೂಲಕ ಇಲಾಖೆಯ ಅಭಿವೃದ್ದಿಗೆ ಹೆಚ್ಚಿನ ಸಹಕಾರ ನೀಡುತ್ತಿರುವುದಕ್ಕೆ ನಾನು ಮುಖ್ಯಮಂತ್ರಿಗಳಿಗೆ ಅಭಿನಂದನೆ ಸಲ್ಲಿಸಿದ್ದೇನೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಆ.5 ರಿಂದ 15 ರವರೆಗೆ ASI ಪ್ರವಾಸಿ ತಾಣಗಳ ಪ್ರವೇಶ ಉಚಿತ

    ತಿರುಮಲದಲ್ಲಿ ಕರ್ನಾಟಕ ಭವನ ನಿರ್ಮಾಣಕ್ಕೆ 232 ಕೋಟಿ ರೂ. ಬೃಹತ್ ಅನುದಾನವನ್ನು ಕಳೆದ ವರ್ಷ ನೀಡಲಾಗಿತ್ತು. ಕರ್ನಾಟಕ ಭವನದ ನಿರ್ಮಾಣ ಕಾರ್ಯ ಭರದಿಂದ ಸಾಗಿದೆ. ಆಂಧ್ರಪದ್ರೆಶದ ಶ್ರೀಶೈಲದಲ್ಲಿರುವ ನೂತನ ಕರ್ನಾಟಕ ಛತ್ರದ ನಿರ್ಮಾಣಕ್ಕಾಗಿ 85 ಕೋಟಿ ರೂ. ಅನುದಾನವನ್ನು ಮುಖ್ಯಮಂತ್ರಿಗಳು ಈಗಾಗಲೇ ಮಂಜೂರು ಮಾಡಿದ್ದು, ಸದ್ಯದಲ್ಲಿಯೇ ನಿರ್ಮಾಣ ಕಾರ್ಯ ಪ್ರಾರಂಭವಾಗಲಿದೆ ಎಂದು ಸಚಿವರು ತಿಳಿಸಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ದೇಶದ ಕ್ರೀಡಾ ಇತಿಹಾಸದಲ್ಲಿ ಇದೊಂದು ವಿಶೇಷ ಕ್ಷಣ – ನೀರಜ್ ಚೋಪ್ರಾಗೆ ಮೋದಿ ಸಹಿತ ಗಣ್ಯರಿಂದ ಅಭಿನಂದನೆ

    ದೇಶದ ಕ್ರೀಡಾ ಇತಿಹಾಸದಲ್ಲಿ ಇದೊಂದು ವಿಶೇಷ ಕ್ಷಣ – ನೀರಜ್ ಚೋಪ್ರಾಗೆ ಮೋದಿ ಸಹಿತ ಗಣ್ಯರಿಂದ ಅಭಿನಂದನೆ

    ನವದೆಹಲಿ: ವಿಶ್ವ ಅಥ್ಲೇಟಿಕ್ಸ್ ಚಾಂಪಿಯನ್‍ಶಿಪ್‍ನ ಪುರುಷರ ಜಾವೆಲಿನ್ ಥ್ರೋನಲ್ಲಿ ಬೆಳ್ಳಿ ಪದಕ ಗೆದ್ದ ನೀರಜ್ ಚೋಪ್ರಾಗೆ ಪ್ರಧಾನಿ ನರೇಂದ್ರ ಮೋದಿ ಸಹಿತ ಗಣ್ಯರು ಟ್ವಿಟ್ಟರ್ ಮೂಲಕ ಅಭಿನಂದನೆ ಸಲ್ಲಿಸಿದ್ದಾರೆ.

    ಟ್ವೀಟ್‍ನಲ್ಲಿ ಏನಿದೆ?:
    ನಮ್ಮ ಅತ್ಯಂತ ಪ್ರತಿಷ್ಠಿತ ಕ್ರೀಡಾಪಟುಗಳಲ್ಲಿ ಒಬ್ಬರಾಗಿರುವ ನೀರಜ್ ಚೋಪ್ರಾ ಉತ್ತಮ ಸಾಧನೆ ಮಾಡಿದ್ದಾರೆ. ವಿಶ್ವ ಅಥ್ಲೇಟಿಕ್ಸ್ ಚಾಂಪಿಯನ್‍ಶಿಪ್‍ನಲ್ಲಿ ಐತಿಹಾಸಿಕ ಬೆಳ್ಳಿ ಪದಕವನ್ನು ಗೆದ್ದ ಮೇಲೆ. ಭಾರತೀಯ ಕ್ರೀಡೆಗೆ ಇದೊಂದು ವಿಶೇಷ ಕ್ಷಣ. ನೀರಜ್ ಅವರ ಮುಂಬರುವ ಪ್ರಯತ್ನಗಳಿಗೆ ಶುಭಾಶಯಗಳನ್ನು ಕೋರುತ್ತಿದ್ದೇನೆ ಎಂದು ಮೋದಿ ಟ್ವೀಟ್ ಮಾಡಿದ್ದಾರೆ. ಇದನ್ನೂ ಓದಿ: World Athletics Championship 2022 – ಬೆಳ್ಳಿ ಪದಕ ಗೆದ್ದ ನೀರಜ್ ಚೋಪ್ರಾ

    ಸಾಮಾಜಿಕ ಜಾಲತಾಣದಲ್ಲಿ ನೀರಜ್ ಚೋಪ್ರಾಗೆ ಅಭಿನಂದನೆಗಳ ಮಹಾಪೂರವೇ ಹರಿದು ಬಂದಿದೆ. ಗೃಹ ಸಚಿವ ಅಮಿತ್ ಶಾ, ಕ್ರೀಡಾ ಸಚಿವ  ಅನುರಾಗ್ ಠಾಕೂರ್, ರಕ್ಷಣಾ ಸಚಿವ ರಜನಾಥ್‌ ಸಿಂಗ್, ಬಸವರಾಜ ಬೊಮ್ಮಾಯಿ, ಕೆ ಸುಧಾಕರ್ ಸೇರಿದಂತೆ ಹಲವು ಗಣ್ಯರು ಅಭಿನಂದನೆ ಸಲ್ಲಿಸಿದ್ದಾರೆ. ಇದನ್ನೂ ಓದಿ: ಗಾಯಗೊಂಡ ರವೀಂದ್ರ ಜಡೇಜಾ – ನೆಟ್ಸ್‌ನಲ್ಲಿ ಬೌಲಿಂಗ್ ಮಾಡಿದ ಅಮಿರ್ ಅಲಿ

    ಫೈನಲ್‍ನಲ್ಲಿ ನೀರಜ್ ಚೋಪ್ರಾ 88.13 ಮೀ. ದೂರ ಎಸೆದು ಬೆಳ್ಳಿ ಪದಕ ಪಡೆದರು. ಈ ಮೂಲಕ 19 ವರ್ಷಗಳ ಬಳಿಕ ಭಾರತಕ್ಕೆ ಮತ್ತೊಂದು ವಿಶ್ವ ಅಥ್ಲೇಟಿಕ್ಸ್ ಚಾಂಪಿಯನ್‍ಶಿಪ್ ಪದಕ ತಂದುಕೊಟ್ಟು ಇತಿಹಾಸ ನಿರ್ಮಿಸಿದರು. ನೀರಜ್ ಚೋಪ್ರಾ ಬೆಳ್ಳಿ ಪದಕದೊಂದಿಗೆ ವಿಶ್ವ ಅಥ್ಲೇಟಿಕ್ಸ್ ಚಾಂಪಿಯನ್‍ಶಿಪ್‍ನಲ್ಲಿ ಪದಕ ಗೆದ್ದ ಮೊದಲ ಪುರುಷ ಸ್ಪರ್ಧಿ, ದೇಶದ ಎರಡನೇ ಕ್ರೀಡಾಪಟು ಎಂಬ ಹಗ್ಗಳಿಕೆ ಪಾತ್ರರಾಗಿದ್ದಾರೆ.

    ಒಲಿಂಪಿಕ್ಸ್‌ನಲ್ಲಿ ಚಿನ್ನದ ಪದಕ ಪಡೆದು ಇತಿಹಾಸ ನಿರ್ಮಿಸಿದ್ದ ನೀರಜ್ ಚೋಪ್ರಾ, ವಿಶ್ವ ಅಥ್ಲೇಟಿಕ್ಸ್ ಚಾಂಪಿಯನ್‍ಶಿಪ್‍ನಲ್ಲಿ 88.39 ಮೀ. ಎಸೆದು ಫೈನಲ್‍ಗೆ ಎಂಟ್ರಿಕೊಟ್ಟಿದ್ದರು. ಫೈನಲ್‍ನಲ್ಲಿ ಬೆಳ್ಳಿಗೆದ್ದು 39 ವರ್ಷಗಳ ಇತಿಹಾಸ ಹೊಂದಿರುವ ವಿಶ್ವ ಅಥ್ಲೇಟಿಕ್ಸ್ ಚಾಂಪಿಯನ್‍ಶಿಪ್‍ನಲ್ಲಿ ಭಾರತಕ್ಕೆ 2ನೇ ಪದಕ ತಂದುಕೊಟ್ಟರು. 2003ರಲ್ಲಿ ಪ್ಯಾರಿಸ್‍ನಲ್ಲಿ ನಡೆದ ಕ್ರೀಡಾಕೂಟದಲ್ಲಿ ಲಾಂಗ್ ಜಂಪರ್ ಅಂಜು ಬಾಬಿ ಜಾರ್ಜ್ ಕಂಚಿನ ಪದಕ ಗೆದ್ದು ಇತಿಹಾಸ ನಿರ್ಮಿಸಿದ್ದರು. ಆ ಬಳಿಕ ಇದೀಗ ನೀರಜ್ ಚೋಪ್ರಾ ಪದಕ ಗೆದ್ದು ಐತಿಹಾಸಿಕ ಸಾಧನೆ ಮಾಡಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಅಗ್ಗದ ಹೋಟೆಲ್ ರೂಂ, ಆಸ್ಪತ್ರೆ ಸೇವೆ ಇನ್ನಷ್ಟು ದುಬಾರಿ

    ಅಗ್ಗದ ಹೋಟೆಲ್ ರೂಂ, ಆಸ್ಪತ್ರೆ ಸೇವೆ ಇನ್ನಷ್ಟು ದುಬಾರಿ

    ಬೆಂಗಳೂರು: ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ನೇತೃತ್ವದ ಹಣಕಾಸು ಸಮಿತಿ ಮಾಡಿದ್ದ ಶಿಫಾರಸ್ಸನ್ನು ಕೇಂದ್ರೀಯ ಜಿಎಸ್‍ಟಿ ಮಂಡಳಿ ಅನುಮೋದಿಸಿದೆ. ಹೀಗಾಗಿ ಮುಂಬರುವ ದಿನಗಳಲ್ಲಿ ಅಗ್ಗದ ದರದ ಹೋಟೆಲ್ ರೂಂ, ಆಸ್ಪತ್ರೆ ಬಿಲ್, ಅಂಚೆ ಸೇವೆ ಮತ್ತಷ್ಟು ದುಬಾರಿ ಆಗಲಿದೆ.

    ದಿನದ ಬಾಡಿಗೆ ಸಾವಿರ ರೂ.ಗಿಂತ ಕಡಿಮೆ ಇರುವ ಹೋಟೆಲ್ ಕೊಠಡಿಗಳಿಗಿದ್ದ ವಿನಾಯ್ತಿ ರದ್ದು ಮಾಡಿ ಇವುಗಳಿಗೆ ಶೇ.12ರಷ್ಟು ತೆರಿಗೆ ಜಾರಿ ಆಗಲಿದೆ. 5 ಸಾವಿರಕ್ಕಿಂತ ಹೆಚ್ಚಿನ ಶುಲ್ಕ ಇರುವ ಐಸಿಯು ಹೊರತುಪಡಿಸಿದ ಆಸ್ಪತ್ರೆ ಕೊಠಡಿಗಳಿಗೆ ಶೇ.5ರಷ್ಟು ಜಿಎಸ್‍ಟಿ ಜಾರಿ ಆಗಲಿದೆ. ಅಂಚೆ ಇಲಾಖೆ ಬುಕ್ ಪೋಸ್ಟ್, 10ಗ್ರಾಂಗಿಂತ, ಕಡಿಮೆ ಇರುವ ಲಕೋಟೆ, ಚೆಕ್‍ಬುಕ್‍ಗೆ ಶೇ.18ರಷ್ಟು ತೆರಿಗೆ ಹೊರೆ ಬೀಳಲಿದೆ. ಇದನ್ನೂ ಓದಿ: ಟೈಲರ್ ಹತ್ಯೆ ಬೆನ್ನಲ್ಲೆ ನವೀನ್ ಕುಮಾರ್ ಜಿಂದಾಲ್‌ಗೆ ಕೊಲೆ ಬೆದರಿಕೆ

    ಉದ್ಯಮ ಸಮೂಹಗಳು ತನ್ನ ವಸತಿ ಕಟ್ಟಡಗಳನ್ನು ಬಾಡಿಗೆಗೆ ಕೊಟ್ಟಿದ್ದರೆ ಅದಕ್ಕಿದ್ದ ವಿನಾಯ್ತಿ ರದ್ದಾಗಲಿದೆ. ಪ್ಯಾಕ್ ಮಾಡಿದ ಮೀನು, ಮಾಂಸ, ಮೊಸರು, ಪನ್ನೀರ್, ಜೇನು, ಬೆಲ್ಲ, ಗೋಧಿಗೆ ಶೇ.5ರಷ್ಟು ತೆರಿಗೆ ಬೀಳಲಿದೆ.

    Live Tv

  • ವಿಶ್ವ ಆರ್ಥಿಕ ಶೃಂಗ ಸಭೆಯಲ್ಲಿ ಪಾಲ್ಗೊಳ್ಳಲು ದಾವೋಸ್ ತೆರಳಿದ ಬೊಮ್ಮಾಯಿ ನಿಯೋಗ – ರೂಟ್‌ ಮ್ಯಾಪ್‌ ಹೀಗಿದೆ

    ವಿಶ್ವ ಆರ್ಥಿಕ ಶೃಂಗ ಸಭೆಯಲ್ಲಿ ಪಾಲ್ಗೊಳ್ಳಲು ದಾವೋಸ್ ತೆರಳಿದ ಬೊಮ್ಮಾಯಿ ನಿಯೋಗ – ರೂಟ್‌ ಮ್ಯಾಪ್‌ ಹೀಗಿದೆ

    ಬೆಂಗಳೂರು: ಸ್ವಿಟ್ಜರ್ಲೆಂಡಿನ ದಾವೋಸ್‍ನಲ್ಲಿ ಇಂದಿನಿಂದ ಆರಂಭವಾಗಿರುವ ವಿಶ್ವ ಆರ್ಥಿಕ ಶೃಂಗ ಸಭೆಯಲ್ಲಿ ಪಾಲ್ಗೊಳ್ಳಲು ಸಿಎಂ ಬೊಮ್ಮಾಯಿ ನೇತೃತ್ವದ ನಿಯೋಗ ಇಂದು ರಾಜ್ಯದಿಂದ ಹೊರಟಿದೆ.

    ವಿಶ್ವ ಆರ್ಥಿಕ ಶೃಂಗ ಸಭೆಯಲ್ಲಿ ಭಾರತವನ್ನೂ ಪ್ರತಿನಿಧಿಸಲಿರುವ ಸಿಎಂ ಬೊಮ್ಮಾಯಿಗೆ ಐಟಿಬಿಟಿ ಸಚಿವ ಡಾ.ಅಶ್ವಥ್ ನಾರಾಯಣ ಮತ್ತು ಬೃಹತ್ ಮತ್ತು ಮಧ್ಯಮ ಕೈಗಾರಿಕೆಗಳ ಸಚಿವ ಮುರುಗೇಶ್ ನಿರಾಣಿ ಸಾತ್ ಕೊಟ್ಟಿದ್ದಾರೆ. ಬೊಮ್ಮಾಯಿಯವರಿಗೆ ಸಿಎಂ ಆದ ಬಳಿಕ ಮೊದಲ ವಿದೇಶ ಪ್ರವಾಸ ಇದಾಗಿದೆ. ಇಂದು ಬೆಳಗ್ಗೆ 8:30ಕ್ಕೆ ತಮ್ಮ ಆರ್.ಟಿ.ನಗರದ ನಿವಾಸದಿಂದ ಪ್ಯಾಂಟ್, ಶರ್ಟ್ ಧರಿಸಿ ಸಾಮಾನ್ಯ ಉಡುಪಿನಲ್ಲೇ ದಾವೋಸ್‍ಗೆ ತೆರಳಿದರು. ಸಿಎಂ ಜೊತೆಗೆ ಅದ್ಧೂರಿ ಸೂಟ್ ಧರಿಸಿದ ಮುರುಗೇಶ್ ನಿರಾಣಿ ಹೊರಟರು. ಇಂದು ಸಿಎಂ ಜೊತೆಗೆ ಒಟ್ಟು 8 ಜನರ ತಂಡ ದಾವೋಸ್‍ಗೆ ಪ್ರಯಾಣಿಸಿದೆ. ಸಿಎಂ ಅವರೊಂದಿಗೆ ಧರ್ಮಪತ್ನಿ ಚೆನ್ನಮ್ಮ, ಮುರುಗೇಶ್ ನಿರಾಣಿ ಮತ್ತು ನಿರಾಣಿಯವರ ಪತ್ನಿ, ನಿರಾಣಿ ಪಿಎ ಶರಣಬಸಪ್ಪ, ಸಿಎಂ ಪ್ರಧಾನ ಕಾರ್ಯದರ್ಶಿ ಮಂಜುನಾಥ್ ಪ್ರಸಾದ್ ಮತ್ತು ಅವರ ಪಿಎ, ಸಿಎಂ ಒಎಸ್‍ಡಿ ರೋಹನ್ ಬಿರಾದಾರ್ ದಾವೋಸ್‍ಗೆ ತೆರಳಿದರು. ಇದನ್ನೂ ಓದಿ: ರಾಜ್ಯದಲ್ಲೂ ಪೆಟ್ರೋಲ್‌, ಡೀಸೆಲ್‌ ದರ ಇಳಿಕೆಗೆ ಕ್ರಮವಹಿಸಿ: ಸಿಎಂಗೆ ಬಿಎಸ್‌ವೈ ಮನವಿ

    ದಾವೋಸ್‍ಗೆ ಹೋಗುವ ಮುನ್ನ ಆರ್‍ಟಿ ನಗರದ ನಿವಾಸದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಸಿಎಂ, ಕಳೆದ ನಾಲ್ಕು ತ್ರೈಮಾಸಿಕಕ್ಕೆ ಹೋಲಿಕೆ ಮಾಡಿದರೆ ದೇಶಕ್ಕೆ ವಿದೇಶಿ ನೇರ ಬಂಡವಾಳ ಅತಿ ಹೆಚ್ಚು ಬಂದಿದೆ. ಇದರಲ್ಲಿ ನಂಬರ್ ಒನ್ ಪಾಲು ಕರ್ನಾಟಕಕ್ಕೆ ಹರಿದು ಬಂದಿದೆ. ನಾಳೆ ಮತ್ತು ನಾಡಿದ್ದು ದಾವೋಸ್ ವಿಶ್ವ ಆರ್ಥಿಕ ಒಕ್ಕೂಟದ ಸಮ್ಮೇಳನದಲ್ಲಿ ಭಾಗವಹಿಸುತ್ತಿದ್ದೇವೆ. ಸಮ್ಮೇಳನದಲ್ಲಿ ವಿಶ್ವದ ಹೆಸರಾಂತ ಪ್ರಮುಖರನ್ನು ಮತ್ತು ಕೈಗಾರಿಕೋದ್ಯಮಿಗಳನ್ನು ಭೇಟಿ ಮಾಡಲಾಗುವುದು. ಹಲವಾರು ಜನ ರಾಜ್ಯದಲ್ಲಿ ಬಂಡವಾಳ ಹೂಡಲು ಮುಂದೆ ಬಂದಿದ್ದಾರೆ. ವಿಶೇಷವಾಗಿ ನವೆಂಬರ್‌ನಲ್ಲಿ ರಾಜ್ಯದಲ್ಲಿ ನಡೆಯಲಿರುವ ಗ್ಲೋಬಲ್ ಇನ್ವೆಸ್ಟ್ ಮೀಟ್‍ಗೆ ಬಹುದೊಡ್ಡ ಪ್ರತಿಕ್ರಿಯೆ ಸಿಗುವ ವಿಶ್ವಾಸವಿದೆ ಎಂದು ಹೇಳಿದರು.

    ಇದೇ ವೇಳೆ ಸಿಎಂ ಭೇಟಿ ಮಾಡಿದ ಸಚಿವರಾದ ಮುನಿರತ್ನ, ಗೋಪಾಲಯ್ಯ, ಸಿ.ಸಿ ಪಾಟೀಲ್, ಬೈರತಿ ಬಸವರಾಜು ಮುಂತಾದವರು ದಾವೋಸ್ ಪ್ರವಾಸಕ್ಕೆ ಅಭಿನಂದಿಸಿ ಶುಭ ಕೋರಿದರು. ಇದನ್ನೂ ಓದಿ: ಸಾಧಿಸುವ ಛಲವಿದ್ದರೆ ಯಾವುದೂ ಕಷ್ಟವಲ್ಲ ಅನ್ನೋದಕ್ಕೆ ಮೂವರು ವಿದ್ಯಾರ್ಥಿನಿಯರೇ ಸಾಕ್ಷಿ!

    ಬಸವರಾಜ ಬೊಮ್ಮಾಯಿಯವರು ಎರಡನೇ ಬಾರಿಗೆ ದಾವೋಸ್ ಶೃಂಗ ಸಭೆಯಲ್ಲಿ ಭಾಗವಹಿಸುತ್ತಿದ್ದಾರೆ. ಈ ಹಿಂದೆ ಜಲಸಂಪನ್ಮೂಲ ಖಾತೆ ಸಚಿವರಾಗಿದ್ದಾಗ ದಾವೋಸ್ ಪ್ರವಾಸ ಕೈಗೊಂಡಿದ್ದರು. ಸಿಎಂ ಆದ ಬಳಿಕ ಈಗ ಎರಡನೇ ಬಾರಿಗೆ ದಾವೋಸ್ ಸಮ್ಮೇಳನದಲ್ಲಿ ಭಾಗವಹಿಸಿದ್ದಾರೆ.

    ದಾವೋಸ್ ರೂಟ್ ಮ್ಯಾಪ್ ಹೀಗಿದೆ:
    ಬೆಂಗಳೂರಿಂದ ಇಂದು ಬೆಳಗ್ಗೆ 10:35ರ ವಿಮಾನದ ಮೂಲಕ ದುಬೈಗೆ ಪ್ರಯಾಣ. ಇಂದು ಮಧ್ಯಾಹ್ನ 12:45 ಕ್ಕೆ ದುಬೈಗೆ ತಲುಪಲಿರುವ ಸಿಎಂ. ದುಬೈನಿಂದ ಮಧ್ಯಾಹ್ನ 3:35ಕ್ಕೆ ಸ್ವಿಟ್ಜರ್ಲೆಂಡ್‍ನ ಜ್ಯೂರಿಚ್‍ಗೆ ಪ್ರಯಾಣ. ರಾತ್ರಿ 8:20 ರಿಂದ ಜ್ಯೂರಿಚ್‍ನಿಂದ ದಾವೋಸ್ ರಸ್ತೆ ಮಾರ್ಗದ ಮೂಲಕ ಪ್ರಯಾಣ. ರಾತ್ರಿ 12ಕ್ಕೆ ದಾವೋಸ್ ತಲುಪಲಿರುವ ಸಿಎಂ ನೇತೃತ್ವದ ನಿಯೋಗ. ನಾಳೆಯಿಂದ ದಾವೋಸ್ ವಿಶ್ವ ಆರ್ಥಿಕ ಶೃಂಗ ಸಭೆಯಲ್ಲಿ ಭಾಗಿ. ಎರಡು ದಿನಗಳ ಕಾಲ ದಾವೋಸ್ ಶೃಂಗ ಸಭೆಯಲ್ಲಿ ಭಾಗವಹಿಸಲಿರುವ ಸಿಎಂ. ಎರಡು ವೇದಿಕೆಗಳಲ್ಲಿ ಭಾರತ ಪ್ರತಿನಿಧಿಸಿ ಭಾಷಣ ಮಾಡಲಿರುವ ಸಿಎಂ. ಮೇ 25ರ ಬೆಳಗ್ಗೆ 11 ಗಂಟೆಗೆ ದಾವೋಸ್‍ನಿಂದ ತಾಯ್ನಾಡಿಗೆ ಪ್ರಯಾಣ. ಮೇ 26ರ ಬೆಳಗ್ಗೆ 9ಕ್ಕೆ ಬೆಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿಯಲಿರುವ ಸಿಎಂ ನಿಯೋಗ.

  • ಮಂತ್ರಿ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ ಈಶ್ವರಪ್ಪ

    ಮಂತ್ರಿ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ ಈಶ್ವರಪ್ಪ

    ಬೆಂಗಳೂರು: ಸಂತೋಷ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಪಕ್ಷಗಳ ಒತ್ತಾಯಕ್ಕೆ ಮಣಿದು ಹೈಕಮಾಂಡ್ ತೀರ್ಮಾನದಂತೆ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್ ಈಶ್ವರಪ್ಪ ಇಂದು ರಾತ್ರಿ ಸಚಿವ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ.

    ನಿನ್ನೆ ನೀಡಿದ್ದ ಹೇಳಿಕೆಯಂತೆ ಇಂದು ಸಂಜೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭೇಟಿಯಾದ ಈಶ್ವರಪ್ಪ ಸಚಿವ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದರು. ಸಂತೋಷ್ ಆತ್ಮಹತ್ಯೆ ಪ್ರಕರಣದಲ್ಲಿ ಆರೋಪಿ ನಾನಲ್ಲ ಅಪರಾಧ ಎಸಗಿಲ್ಲ ಎನ್ನುವ ಮಾತನ್ನು ಪುನರುಚ್ಚರಿಸುತ್ತಿರುವ ಈಶ್ವರಪ್ಪ ಹೈಕಮಾಂಡ್ ಸೂಚನೆಯ ಮೇರೆಗೆ ಮಂತ್ರಿ ಸ್ಥಾನದಿಂದ ಕೆಳಗಿಳಿದಿದ್ದಾರೆ.

    ಮಂತ್ರಿ ಸ್ಥಾನದಿಂದ ಕೆಳಗಿಳಿಯುವ ಮುನ್ನ, ಈಶ್ವರಪ್ಪ ಸಚಿವರಾಗಿ ಶಿವಮೊಗ್ಗದ ಶುಭಶ್ರೀ ಸಮುದಾಯ ಭವನವನ್ನು ಉದ್ಘಾಟಿಸಿದರು. ಈ ವೇಳೆ ಈಶ್ವರಪ್ಪ ಬೆಂಬಲಿಗರು, ಯಾವುದೇ ಕಾರಣಕ್ಕೂ ನೀವು ರಾಜೀನಾಮೆ ಕೊಡಬಾರದು ಎಂದು ಒತ್ತಾಯಿಸಿದರು. ಕೆಲವರು ಕಣ್ಣೀರು ಇಟ್ಟರು. ಬಳಿಕ ಶಿವಮೊಗ್ಗದಿಂದ ಬೆಂಬಲಿಗರೊಂದಿಗೆ ಬೆಂಗಳೂರಿಗೆ ಹೊರಟ ಈಶ್ವರಪ್ಪ ಸಂಚರಿಸಿದ ಮಾರ್ಗ ಮಧ್ಯೆ ಅಪಾರ ಪ್ರಮಾಣದಲ್ಲಿ ಬೆಂಬಲಿಗರು ಸೇರಿದ್ದರು. ಶಿವಮೊಗ್ಗದಿಂದ ಕಡೂರು – ಅರಸೀಕೆರೆ – ತುಮಕೂರು ಮಾರ್ಗವಾಗಿ ಬೆಂಗಳೂರಿಗೆ ಆಗಿಮಿಸಿದ ಈಶ್ವರಪ್ಪ ಜೊತೆ ರಾಜೀನಾಮೆ ಪಡೀಬೇಡಿ ಎಂದು ಸಿಎಂಗೆ ಒತ್ತಾಯ ಮಾಡಲು ಶಿವಮೊಗ್ಗದಿಂದ ನೂರಾರು ಕಾರುಗಳಲ್ಲಿ ಬೆಂಬಲಿಗರು ಆಗಮಿಸಿದ್ದರು. ಬಳಿಕ ಸಿಎಂ ಭೇಟಿಯಾಗಿ ರಾಜೀನಾಮೆ ಸಲ್ಲಿಸಿ ಸರ್ಕಾರದ ನೀಡಿದ ಕಾರನ್ನು ಬಿಟ್ಟು ಶಿವಮೊಗ್ಗಕ್ಕೆ ಹೊರಟರು.

    ಈ ಮೂಲಕ 40% ಕಮಿಷನ್ ಆರೋಪಕ್ಕೆ ಈಶ್ವರಪ್ಪ ತಲೆದಂಡವಾಗಿದ್ದು, ವಿಪಕ್ಷಗಳ ಒತ್ತಡದ ನಡುವೆ ಬಿಜೆಪಿ ಹೈಕಮಾಂಡ್ ಗಟ್ಟಿ ನಿರ್ಧಾರದ ಮೂಲಕ ವಾತಾವರಣವನ್ನು ತಿಳಿಗೊಳಿಸುವ ಕೆಲಸಕ್ಕೆ ಕೈ ಹಾಕಿದೆ. ಇದೆಲ್ಲದರ ಜೊತೆ ಸಂತೋಷ್ ಆತ್ಮಹತ್ಯೆ ಪ್ರಕರಣದ ತನಿಖೆ ಸರಿಯಾದ ದಿಕ್ಕಿನಲ್ಲಿ ನಡೆದು ಸತ್ಯಾಸತ್ಯತೆ ಹೊರ ಬರುವ ವರೆಗೆ ಈ ಪ್ರಕರಣ ಸದ್ದು ಮಾಡುವ ಸಾಧ್ಯತೆ ಹೆಚ್ಚಿದೆ.

     

  • ಚಂದ್ರು ಕೊಲೆ ಪ್ರಕರಣವನ್ನು ಸಿಐಡಿಗೆ ವಹಿಸಿದ ಸರ್ಕಾರ

    ಚಂದ್ರು ಕೊಲೆ ಪ್ರಕರಣವನ್ನು ಸಿಐಡಿಗೆ ವಹಿಸಿದ ಸರ್ಕಾರ

    ಬೆಂಗಳೂರು: ಶಿವಮೊಗ್ಗ ಹರ್ಷ ಕೊಲೆ ಪ್ರಕರಣವನ್ನು ಎನ್‍ಐಎಗೆ ವಹಿಸಿದ್ದ ಬಸವರಾಜ ಬೊಮ್ಮಾಯಿ ನೇತೃತ್ವದ ಸರ್ಕಾರ, ಈಗ ಚಂದ್ರು ಕೊಲೆ ಪ್ರಕರಣವನ್ನು ಸಿಐಡಿಗೆ ವಹಿಸಿದೆ.

    ಚಂದ್ರು ಕೊಲೆಗೆ ಕಾರಣವೇನು ಎಂಬ ವಿಚಾರದಲ್ಲಿ ಬೆಂಗಳೂರು ಪೊಲೀಸ್ ಆಯುಕ್ತರು ಮತ್ತು ರಾಜ್ಯ ಬಿಜೆಪಿ ನಾಯಕರ ನಡುವೆ ದೊಡ್ಡ ಸಂಘರ್ಷವೇ ನಡೆದಿದೆ. ಯಾರ ಮಾತು ಸರಿ. ಯಾರ ಮಾತು ತಪ್ಪು ಎಂಬ ಪ್ರಶ್ನೆ ಎದ್ದಿದೆ. ಜೊತೆಗೆ ಬಿಜೆಪಿ ನಾಯಕರು, ಚಂದ್ರು ಕೊಲೆ ಪ್ರಕರಣದ ಕ್ರಿಮಿನಲ್ ಇನ್ವೆಸ್ಟಿಗೇಷನ್ ತಿರುಚಲು ಯತ್ನಿಸಿದ್ರಾ ಎಂಬ ಪ್ರಶ್ನೆ ಎದ್ದಿದೆ. ಚಂದ್ರು ಕೊಲೆ ನಡೆದ ಬೆಳಗ್ಗೆ ಜೆಜೆ ನಗರ ಠಾಣೆಯಲ್ಲಿ ದೂರುದಾರ ಮತ್ತು ಸಾಕ್ಷಿ ಸೈಮನ್‍ ರಾಜ್, ಬೈಕ್ ಟಚ್ ಆಗಿದ್ದಕ್ಕೆ ಈ ಕೊಲೆ ನಡೆದಿದೆ ಎಂದು ವೀಡಿಯೋ ಹೇಳಿಕೆ ನೀಡಿದ್ದ. ಆದ್ರೇ, ನಿನ್ನೆ ಇದ್ದಕ್ಕಿದ್ದಂತೆ ಉರ್ದು ಮಾತನಾಡಿಲ್ಲ ಅಂತಾ ಕೊಲೆ ಮಾಡಿದ್ರು ಎಂದು ಆರೋಪಿಸಿದ್ದ. ಇದನ್ನೂ ಓದಿ: ಚಂದ್ರು ಕೊಲೆ ಪ್ರಕರಣ- ಜಮೀರ್ ಹೇಳಿಕೆ ಬೆನ್ನಲ್ಲೇ ಸೈಮನ್ ರಾಜ್ ಕಣ್ಮರೆ

    ಇದು ಪೊಲೀಸ್ ಇಲಾಖೆ ಮತ್ತು ಬಿಜೆಪಿ ನಾಯಕರ ನಡುವೆ ಸಂಘರ್ಷಕ್ಕೆ ಎಡೆ ಮಾಡಿಕೊಟ್ಟಿದೆ. ಇಷ್ಟೆಲ್ಲಾ ಗೊಂದಲ, ಗೋಜಲು, ಮುಜುಗರ ಆದ ಮೇಲೆ ಸರ್ಕಾರ ಎಚ್ಚೆತ್ತಿದೆ. ಪೊಲೀಸ್ ಆಯುಕ್ತ ಕಮಲ್ ಪಂಥ್ ಮತ್ತು ಬಿಜೆಪಿ ನಡುವೆ ಸಂಘರ್ಷಕ್ಕೆ ತೆರೆ ಎಳೆಯಲು ಮುಖ್ಯಮಂತ್ರಿಗಳು ಪ್ರಕರಣವನ್ನು ಸಿಐಡಿಗೆ ವಹಿಸಿದ್ದಾರೆ. ಆದ್ರೇ, ಗೊಂದಲ ಅನ್ನೋ ಕಾರಣಕ್ಕೆ ತನಿಖೆಯನ್ನು ಸಿಐಡಿಗೆ ವಹಿಸಿಲ್ಲ. ಅಲ್ಲಿರೋದು ನಮ್ಮದೇ ಪೊಲೀಸರಲ್ವಾ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಸಮರ್ಥನೆ ಮಾಡಿಕೊಂಡಿದ್ದಾರೆ. ಇದನ್ನೂ ಓದಿ: ಚಂದ್ರು ಹತ್ಯೆ ಕೇಸ್‌ಗೆ ಬಿಗ್ ಟ್ವಿಸ್ಟ್- ಘಟನೆಯ ಇಂಚಿಂಚು ಮಾಹಿತಿ ನೀಡಿದ ಸ್ನೇಹಿತ ಸೈಮನ್ ರಾಜ್

  • ರಾಜ್ಯಕ್ಕೆ ಕೇಂದ್ರ ಸಚಿವೆ ಸ್ಮೃತಿ ಇರಾನಿ ಭೇಟಿ – ಸಿಎಂ ಪತ್ನಿಯಿಂದ ಸಾಂಪ್ರದಾಯಿಕ ಸ್ವಾಗತ

    ರಾಜ್ಯಕ್ಕೆ ಕೇಂದ್ರ ಸಚಿವೆ ಸ್ಮೃತಿ ಇರಾನಿ ಭೇಟಿ – ಸಿಎಂ ಪತ್ನಿಯಿಂದ ಸಾಂಪ್ರದಾಯಿಕ ಸ್ವಾಗತ

    ಬೆಂಗಳೂರು: ಕೇಂದ್ರದ ಗೃಹ ಸಚಿವ ಅಮಿತ್ ಶಾ ಭೇಟಿ ಬೆನ್ನಲ್ಲೇ ಕೇಂದ್ರದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಸ್ಮೃತಿ ಇರಾನಿ ರಾಜ್ಯಕ್ಕೆ ಭೇಟಿ ಕೊಟ್ಟಿದ್ದಾರೆ. ಇಂದು ಮಧ್ಯಾಹ್ನ ಬೆಂಗಳೂರಿಗೆ ಆಗಮಿಸಿದ ಸ್ಮೃತಿ ಇರಾನಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ರೇಸ್‍ವೀವ್ ಸರ್ಕಾರಿ ನಿವಾಸದಲ್ಲಿ ಔಪಚಾರಿಕವಾಗಿ ಭೇಟಿಯಾಗಿ ಮಾತುಕತೆ ನಡೆಸಿದರು.

    ಈ ಸಂದರ್ಭದಲ್ಲಿ ಕೇಂದ್ರ ಸಚಿವೆ ಸ್ಮೃತಿ ಇರಾನಿ ಅವರನ್ನು ಮುಖ್ಯಮಂತ್ರಿಯವರ ಪತ್ನಿ ಚೆನ್ನಮ್ಮ ಅವರು ಸಂಪ್ರದಾಯದಂತೆ ಅರಿಶಿನ ಕುಂಕುಮ ಹಾಗೂ ಉಡುಗೊರೆ ನೀಡಿ ಸತ್ಕರಿಸಿದರು. ಈ ವೇಳೆ ಕಂದಾಯ ಸಚಿವ ಆರ್. ಅಶೋಕ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವ ಹಾಲಪ್ಪ ಆಚಾರ್, ಕೇಂದ್ರ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಖಾತೆ ರಾಜ್ಯ ಸಚಿವ ಡಾ. ಮುಂಜ್ಪಾರಾ ಮಹೇಂದ್ರಭಾಯಿ ಕಾಲುಭಾಯಿ ಉಪಸ್ಥಿತರಿದ್ದರು.

    ಬಳಿಕ ಸ್ಮೃತಿ ಇರಾನಿಯವರು ಖಾಸಗಿ ಹೊಟೇಲಿನಲ್ಲಿ ದಕ್ಷಿಣ ರಾಜ್ಯಗಳ ಮಹಿಳಾ ಮತ್ತುಮಕ್ಕಳ ಅಭಿವೃದ್ಧಿ ಇಲಾಖೆಗಳ ಸಚಿವರು, ಇಲಾಖೆ ಹಿರಿಯ ಅಧಿಕಾರಿಗಳು, ವಿವಿಧ ಎನ್‍ಜಿಒಗಳ ಜತೆ ಸಭೆ ನಡೆಸಿದರು. ಸಭೆ ಬಳಿಕ ಸುದ್ದಿಗೋಷ್ಟಿ ನಡೆಸಿದ ಸ್ಮೃತಿ ಇರಾನಿ, ಮಹಿಳೆಯರು ಮತ್ತು ಮಕ್ಕಳ ಅಭಿವೃದ್ಧಿಗೆ ಕೇಂದ್ರ ಸರ್ಕಾರ ಕೈಗೊಂಡ ಕ್ರಮಗಳ ಬಗ್ಗೆ ವಿವರಿಸಿದರು. ಇದನ್ನೂ ಓದಿ: ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಮಧ್ಯೆ ವಿದ್ಯುತ್ ಶಾಕ್ – ಯೂನಿಟ್‍ಗೆ 35 ಪೈಸೆ ಹೆಚ್ಚಳ

    ಅಂಗನವಾಡಿ ಕಾರ್ಯಕರ್ತೆಯರ ವೇತನ ಸಮಸ್ಯೆ ಬಗ್ಗೆ ಮಾತಾಡಿದ ಸಚಿವೆ, ಕೇಂದ್ರದಿಂದ ಅಂಗಗನವಾಡಿ ಕಾರ್ಯಕರ್ತೆಯರಿಗೆ 4500 ಗೌರವ ಧನ ನೀಡಲಾಗ್ತಿದೆ. 180 ದಿನ ಮೆಟರ್ನಿಟಿ ರಜೆ, 20 ದಿನ ವೇತನ ಸಹಿತ ರಜೆ, ಇತರೆ ಸೌಕರ್ಯ ನೀಡಲಾಗ್ತಿದೆ. ಈ ಸಂಬಂಧ ಅನುದಾನವನ್ನು ಕೇಂದ್ರದಿಂದ ರಾಜ್ಯಗಳಿಗೆ ತಲುಪಿಸಲಾಗುತ್ತದೆ. ಅಂಗನವಾಡಿ ಕಾರ್ಯಕರ್ತೆಯರಿಗೆ ಸಮರ್ಥ ಆರ್ಥಿಕ ವ್ಯವಸ್ಥೆ ಮೂಲಕ ಗೌರವ ಧನ ಕೊಡಲಾಗ್ತಿದೆ. ಇದರಲ್ಲಿ ಯಾವುದೇ ರೀತಿಯ ವಿಳಂಬ ಮಾಡ್ತಿಲ್ಲ ಎಂದು ಸ್ಪಷ್ಟಪಡಿಸಿದರು. ಅಲ್ಲದೆ ದೇಶದ ಅಂಗನವಾಡಿಗಳಿಗೆ ಸ್ಮಾರ್ಟ್ ಉಕಪರಣಗಳನ್ನ ಕೊಡಲಾಗ್ತಿದೆ. ಸದ್ಯ 11 ಲಕ್ಷ ಸ್ಮಾರ್ಟ್ ಉಪಕರಣಗಳನ್ನು ಒದಗಿಸಲಾಗಿದೆ. ಮಹಿಳೆಯರು ಮತ್ತು ಮಕ್ಕಳ ಅಪೌಷ್ಟಿಕತೆ ತೊಲಗಿಸಲು ಹಲವು ಕ್ರಮಗಳನ್ನು ಕೈಗೊಳ್ಳಲಾಗಿದೆ. ದೇಶದ ಲಿಂಗಾನುಪಾತದಲ್ಲಿ ಮಹಿಳೆಯರ ಸಂಖ್ಯೆ ಹೆಚ್ಚಳವಾಗಿದೆ. ಹೆಣ್ಣಿನ ಲಿಂಗಾನುಪಾತ 918 ರಿಂದ 937 ಕ್ಕೆ ಲಿಂಗಾನುಪಾತ ಹೆಚ್ಚಿದೆ ಎಂದು ತಿಳಿಸಿದರು. ಇದನ್ನೂ ಓದಿ: ಪೋಸ್ಟ್ ವೆಡ್ಡಿಂಗ್ ಫೋಟೋಶೂಟ್ ವೇಳೆ ಅವಘಡ- ವರ ಸಾವು, ವಧು ಗಂಭೀರ

    ಪ್ರತೀ ಜಿಲ್ಲೆಯಲ್ಲೂ ಮಹಿಳಾ ಸಹಾಯ ಕೇಂದ್ರ ತೆರೆಯಲಾಗಿದೆ. ಮಹಿಳೆಯರ ವಿರುದ್ಧದ ಎಲ್ಲ ದೌರ್ಜನ್ಯಗಳಿಗೆ ಪರಿಹಾರ ಒದಗಿಸಲು ಮಹಿಳಾ ಸಹಾಯ ಕೇಂದ್ರ ತೆರೆಯಲಾಗಿದೆ. ಸದ್ಯ 704 ಇಂತಹ ಮಹಿಳಾ ಸಹಾಯ ಕೇಂದ್ರಗಳು ಕೆಲಸ ಮಾಡ್ತಿವೆ. 70 ಲಕ್ಷ ಮಹಿಳೆಯರಿಗೆ ಈ ಸಹಾಯ ಕೇಂದ್ರಗಳಿಂದ ನೆರವು ದೊರೆತಿದೆ. ಮಕ್ಕಳ ಮೇಲಿನ ದೌರ್ಜನ್ಯ ತಡೆಯುವ ಸಂಬಂಧ ನಿಯಮಗಳನ್ನು ಮತ್ತಷ್ಟು ಕಠಿಣ ಮಾಡಿದ್ದೇವೆ. ಜನಧನ ಯೋಜನೆಯಡಿ 24 ಕೋಟಿ ಮಹಿಳೆಯರಿಗೆ ಬ್ಯಾಂಕ್ ಖಾತೆ ಹೊಂದಿದ್ದಾರೆ. 32 ಕೋಟಿ ಲೋನ್ ಅನ್ನು ಮುದ್ರಾ ಯೋಜನೆಯಡಿ ನೀಡಲಾಗಿದೆ.ಈ ಸಾಲ ಸೌಲಭ್ಯದಲ್ಲಿ 68% ಮಹಿಳೆಯರ ಪಾಲಿದೆ. ಬ್ಯಾಂಕ್ ಸಖೀ ಯೋಜನೆಯಡಿ 8 ಕೋಟಿ ಮಹಿಳೆಯರ ಆರ್ಥಿಕ ಸ್ವಾವಲಂಬನೆಗೆ ನೆರವು ನೀಡಲಾಗಿದೆ ಎಂದು ಕೇಂದ್ರ ಸಚಿವೆ ಸ್ಮೃತಿ ಇರಾನಿ ಹೇಳಿದರು. ಇದನ್ನೂ ಓದಿ: ಪ್ರಾಣ ಪಣಕ್ಕಿಟ್ಟು ಮಗುವನ್ನು ರಕ್ಷಿಸಿದ ಪೊಲೀಸ್ ಪೇದೆ: ಫೋಟೋ ವೈರಲ್

  • ರಾಜ್ಯದ ಕೋಮು ಸಂಘರ್ಷ ದೇಶದ ಐಟಿ ಹಬ್‍ಗೆ ಮಾರಕ ಬೊಮ್ಮಾಯಿ ಬಗೆಹರಿಸುವ ಭರವಸೆ ನೀಡಿದ್ದಾರೆ: ಕಿರಣ್ ಮಜುಂದಾರ್

    ರಾಜ್ಯದ ಕೋಮು ಸಂಘರ್ಷ ದೇಶದ ಐಟಿ ಹಬ್‍ಗೆ ಮಾರಕ ಬೊಮ್ಮಾಯಿ ಬಗೆಹರಿಸುವ ಭರವಸೆ ನೀಡಿದ್ದಾರೆ: ಕಿರಣ್ ಮಜುಂದಾರ್

    ಬೆಂಗಳೂರು: ಪಟ್ಟಭದ್ರಾ ಹಿತಾಸಕ್ತಿಗಳು ವಿಷಯವನ್ನು ರಾಜಕೀಯವಾಗಿ ಹೈಜಾಕ್ ಮಾಡುತ್ತಿವೆ. ರಾಜ್ಯದ ಕೋಮು ಸಂಘರ್ಷ ದೇಶದ ಐಟಿ ಹಬ್‍ಗೆ ಮಾರಕವಾಗಲಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇದನ್ನು ಶಾಂತಿಯುತವಾಗಿ ಬಗೆಹರಿಸುವ ವಿಶ್ವಾಸ ನನ್ನದು ಎಂದಿದ್ದಾರೆ ಎಂದು ಬಯೋಕಾನ್ ಮುಖ್ಯಸ್ಥೆ ಕಿರಣ್ ಮಜುಂದಾರ್ -ಶಾ ಟ್ವಿಟ್ಟರ್ ಮೂಲಕ ತಿಳಿಸಿದ್ದಾರೆ.

    ಇಂದು ಬೆಳಗ್ಗೆ ಜಾತ್ರೆ, ಉತ್ಸವ ಸಂದರ್ಭದಲ್ಲಿ ದೇವಸ್ಥಾನಗಳಲ್ಲಿ ಮುಸ್ಲಿಂ ವ್ಯಾಪಾರಿಗಳನ್ನು ನಿಷೇಧಿಸುವಂತೆ ಬಲಪಂಥೀಯ ಗುಂಪುಗಳ ನೀಡಿರುವ ಕರೆಗೆ ಸಂಬಂಧಿಸಿದಂತೆ ಕಿರಣ್ ಮಜುಂದಾರ್-ಶಾ ಟ್ವಿಟ್ಟರ್ ಮೂಲಕ ಪ್ರತಿಕ್ರಿಯಿಸಿದ್ದರು. ತಂತ್ರಜ್ಞಾನ ಕ್ಷೇತ್ರವು ಕೋಮುವಾದಿಯಾದರೆ ಅದು ಭಾರತದ ಜಾಗತಿಕ ನಾಯಕತ್ವವನ್ನು ನಾಶ ಮಾಡುತ್ತದೆ ಎಂದು ಕಳವಳ ವ್ಯಕ್ತಪಡಿಸಿದ್ದರು. ಇದನ್ನೂ ಓದಿ: ಮುಖ್ಯಮಂತ್ರಿಗಳೇ, ಕೋಮುಗಳ ನಡುವಿನ ವಿಭಜನೆ ತಡೆಯಿರಿ: ಕಿರಣ್‌ ಮಜುಂದಾರ್‌ ಶಾ ಒತ್ತಾಯ

    ಟ್ವೀಟ್‍ನಲ್ಲೇನಿದೆ?
    ಎಲ್ಲಾ ಸಮುದಾಯಗಳನ್ನೂ ಒಳಗೊಂಡ ಆರ್ಥಿಕ ಅಭಿವೃದ್ಧಿಯನ್ನು ಕರ್ನಾಟಕ ರೂಪಿಸಿದೆ. ಇಲ್ಲಿ ಕೋಮುವಾದಕ್ಕೆ ಅನುಮತಿ ನೀಡಬಾರದು. ಐಟಿಬಿಟಿ ಯಂತಹ ಕ್ಷೇತ್ರಗಳಲ್ಲಿ ಕೋಮುವಾದ ಬೆಳೆದರೆ, ಅದು ನಮ್ಮ ಜಾಗತಿಕ ನಾಯಕತ್ವವನ್ನು ನಾಶಪಡಿಸುತ್ತದೆ. ಬಸವರಾಜ ಬೊಮ್ಮಾಯಿ ಅವರೇ, ದಯವಿಟ್ಟು ಕೋಮುಗಳ ನಡುವಿನ ವಿಭಜನೆಯನ್ನು ತಡೆಯಿರಿ. ಇದನ್ನೂ ಓದಿ: ರತನ್‌ ಟಾಟಾಗೆ ಭಾರತ ರತ್ನ ನೀಡುವಂತೆ ಮನವಿ ಮಾಡಿದ್ದ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

    ನಾನು ಬಸವರಾಜ ಬೊಮ್ಮಾಯಿ ಅವರನ್ನು ಅಭಿನಂದಿಸುತ್ತೇನೆ. ರಾಜ್ಯದ ಪರಿಸ್ಥಿತಿಯನ್ನು ಶಾಂತಿಯುತವಾಗಿ ಬಗೆಹರಿಸುವುದಾಗಿ ತಿಳಿಸಿದ್ದಾರೆ. ಈ ಬಗ್ಗೆ ಚರ್ಚೆ ನಡೆಸುವ ಕುರಿತು ಸಿಎಂ ತಿಳಿಸಿರುವುದು ಅಭಿನಂದನಾರ್ಹ.

  • ರಾಜ್ಯದಲ್ಲಿರೋದು ಬಿಜೆಪಿ ಸರ್ಕಾರ, RSS, VHP, ಬಜರಂಗದಳವಲ್ಲ: ಹೆಚ್.ವಿಶ್ವನಾಥ್ ಕಿಡಿ

    ರಾಜ್ಯದಲ್ಲಿರೋದು ಬಿಜೆಪಿ ಸರ್ಕಾರ, RSS, VHP, ಬಜರಂಗದಳವಲ್ಲ: ಹೆಚ್.ವಿಶ್ವನಾಥ್ ಕಿಡಿ

    ನವದೆಹಲಿ: ರಾಜ್ಯದಲ್ಲಿ ಸರ್ಕಾರ ಇರುವುದು ಬಿಜೆಪಿಯದ್ದು, RSS, VHP ಬಜರಂಗದಳದಲ್ಲ, ಸಂವಿಧಾನ ಮೀರಿ ವರ್ತಿಸುತ್ತಿರುವ ಕೆಲವು ಸಂಘಟನೆಗಳ ವಿರುದ್ಧ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಕ್ರಮ ತೆಗೆದುಕೊಳ್ಳಬೇಕು ಎಂದು ಪರಿಷತ್ ಸದಸ್ಯ ಹೆಚ್.ವಿಶ್ವನಾಥ್ ಆಗ್ರಹಿಸಿದ್ದಾರೆ.

    ನವದೆಹಲಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಸಾಮಾಜಿಕ ನ್ಯಾಯ ಪರಿಕಲ್ಪನೆಯಲ್ಲಿ ನಾನು ರಾಜಕೀಯ ಮಾಡಿಕೊಂಡು ಬಂದಿದ್ದೇನೆ. ಆದರೆ ಇಂದು ಕರ್ನಾಟಕದಲ್ಲಿ ನಡೆಯುತ್ತಿರುವ ವಿದ್ಯಮಾನಗಳಿಂದ ಬೇಸರವಾಗಿದೆ. ನಾನು ಬಿಜೆಪಿಯನ್ನು ಪ್ರತಿನಿಧಿಸುತ್ತೇನೆ. ಹಾಗಂತ ಎಲ್ಲವನ್ನೂ ನೋಡಿಕೊಂಡು ಸುಮ್ಮನೆ ಕೂರಲು ಸಾಧ್ಯವಿಲ್ಲ ಎಂದರು.

    ಹಿಜಬ್‍ನಿಂದ ಆರಂಭವಾಗಿ ಈಗ ಪಠ್ಯಪುಸ್ತಕವನ್ನೇ ತಿರುಚಲಾಗುತ್ತಿದೆ. ರೋಹಿತ್ ಚಕ್ರತೀರ್ಥ ಹಿನ್ನೆಲೆ ಏನು?, ಎಷ್ಟು ವರ್ಷ ಪಾಠ ಮಾಡಿದ್ದಾರೆ? ಅವರಿಗೆ ಇತಿಹಾಸ ಎಷ್ಟು ಗೊತ್ತಿದೆ..? ಕೇವಲ ಕೆಲವು ನಾಯಕರ ಪರ ಕೆಲಸ ಮಾಡಿದರು ಎನ್ನುವ ಕಾರಣಕ್ಕೆ ಅವರನ್ನು ಪಠ್ಯಪುಸ್ತಕ ಪರಿಷ್ಕರಣೆ ಸಮಿತಿ ಅಧ್ಯಕ್ಷರಾಗಿ ನೇಮಿಸಿದ್ದಾರೆ. ಅವರು ಇಂದು ಟಿಪ್ಪು ಸುಲ್ತಾನ್ ಒಂದು ಇತಿಹಾಸ ಬದಲಿಸಲು ಹೊರಟಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಇದನ್ನೂ ಓದಿ: ಹಲಾಲ್ ಧಾರ್ಮಿಕ ಆಚರಣೆ, ಇದರಲ್ಲಿ ಸರ್ಕಾರ ಮೂಗು ತೂರಿಸುವುದಿಲ್ಲ: ಬಿ.ಸಿ ನಾಗೇಶ್

    tippu

    ಟಿಪ್ಪು ಸುಲ್ತಾನ್ ವೀರ ಸೇನಾನಿ, ಸೂರ್ಯ – ಚಂದ್ರ ಇರುವವರೆಗೂ ಟಿಪ್ಪು ಸುಲ್ತಾನ್ ಇರ್ತಾರೆ, ಇತಿಹಾಸ ಬದಲಿಸಲು ಯಾರಿಂದಲು ಸಾಧ್ಯವಿಲ್ಲ. ಟಿಪ್ಪು, ಕಿತ್ತೂರು ರಾಣಿ ಚೆನ್ನಮ್ಮ ಬ್ರಿಟಿಷ್ ವಿರುದ್ಧ ಮೊದಲು ಧ್ವನಿ ಎತ್ತಿದ್ದವರು. ಅವರ ಬಗ್ಗೆ ಬೇಕಾಬಿಟ್ಟಿ ಮಾತನಾಡುವುದು ಸರಿಯಲ್ಲ. ಇತಿಹಾಸ ತಿರುಚುವುದು ಒಳ್ಳೆ ಬೆಳವಣಿಗೆಯಲ್ಲ ಎಂದು ಹಳ್ಳಿಹಕ್ಕಿ ವಾಗ್ದಾಳಿ ನಡೆಸಿದರು. ಇದನ್ನೂ ಓದಿ: ನಿಮಗೆ ಗಂಡಸ್ತನ ಇದ್ದರೆ, ಏನು ಗೊತ್ತಿಲ್ಲದಂತೆ ಮೌನವಾಗಿರಬೇಡಿ: ಸಿಎಂಗೆ ಹೆಚ್‍ಡಿಕೆ ಸವಾಲ್

    ಬೊಮ್ಮಾಯಿ ಕ್ರಮ ತೆಗೆದುಕೊಳ್ಳಬೇಕು: ಈ ನಡುವೆ ಸಮುದಾಯದ ಒಂದಕ್ಕೆ ದೇವಸ್ಥಾನ ಬಳಿ ವ್ಯಾಪಾರ ಮಾಡಬೇಡಿ. ಹಲಾಲ್ ಮಾಡಬೇಡಿ ಎನ್ನುವುದು ಸರಿಯಲ್ಲ. ಸಮಾಜದಲ್ಲಿ ಇದು ಘಾಸಿ ಮಾಡುತ್ತದೆ. ಕೆಲವು ಸಂಘಟನೆಗಳು ಹದ್ದು ಮೀರಿ ವರ್ತಿಸುತ್ತಿವೆ. ಜನರಿಂದ ಆಯ್ಕೆಯಾದ ಸರ್ಕಾರ ಮಧ್ಯಪ್ರವೇಶ ಮಾಡಬೇಕು. ನಾನು ಸರ್ಕಾರಕ್ಕೆ ಆಗ್ರಹಕ್ಕೆ ಮಾಡುತ್ತೇನೆ, ಬೊಮ್ಮಾಯಿ ಅವರು ಕ್ರಮ ತೆಗೆದುಕೊಳ್ಳಬೇಕು ಶಾಂತಿಯನ್ನು ಕಾಪಡಬೇಕು. ಬಿ.ಎಸ್ ಯಡಿಯೂರಪ್ಪ ಅವರು ಕೂಡಾ ಈ ವಿಚಾರದಲ್ಲಿ ಮಧ್ಯಪ್ರವೇಶ ಮಾಡಬೇಕು ಇದೇ ವೇಳೆ ವಿಶ್ವನಾಥ್ ಒತ್ತಾಯಿಸಿದರು. ಇದನ್ನೂ ಓದಿ: ಚಪ್ಪಲಿ ಏಟು ತಿನ್ನಬಹುದು ಆದರೆ, ದುಡ್ಡೇಟು ತಿನ್ನೋಕೆ ಆಗಲ್ಲ: ಡಿ.ಕೆ ಶಿವಕುಮಾರ್

    SIDDARAMAIAH

    ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ: ದೊಡ್ಡ ದೊಡ್ಡ ಹಿರಿಯ ನಾಯಕರು ಧರ್ಮ ಜಾತಿ ಆಧರದ ಮೇಲೆ ಮಾತನಾಡುತ್ತಿದ್ದಾರೆ. ನಾವು ಹೀಗೆ ಮಾತನಾಡಿದರೆ ಯುವ ಪೀಳಿಗೆಗೆ ಯಾರು ಪಾಠ ಹೇಳಿಕೊಡುತ್ತಾರೆ. ನಿನ್ನೆ ಸದನದಲ್ಲೂ ಬ್ರಾಹ್ಮಣರು ಏನು ಮಾಡಿದ್ದಾರೆ ಎಂದು ನಾಯಕರೊಬ್ಬರು ಕೇಳಿದ್ದಾರೆ. 43 ವರ್ಷಗಳ ಬ್ರಾಹ್ಮಣ ಸಮುದಾಯದ ಹೊಸ ರೂಪ, ಹೊಸ ಮೆರೆಗು ನೀಡಿದ್ದಾರೆ. ಹೊಸ ಕಾರ್ಯಕ್ರಮಗಳ ಮೂಲಕ ಅಭಿವೃದ್ಧಿ ಪೂರಕ ಕೆಲಸ ಮಾಡಿದ್ದಾರೆ ಲಘುವಾಗಿ ಮಾತನಾಡಬಾರದು ಎಂದು ಸಿದ್ದರಾಮಯ್ಯ ವಿರುದ್ಧ ಪರೋಕ್ಷ ವಾಗ್ದಾಳಿ ನಡೆಸಿದರು.

  • ಸಿದ್ದರಾಮಯ್ಯ ಶ್ರೀಕೃಷ್ಣ ಎಂದ ರಮೇಶ್‍ಕುಮಾರ್ – ಪಟೇಲರ ಕಚ್ಚೆ ನೆನಪಿಸಿಕೊಂಡ ಸಿದ್ದು

    ಸಿದ್ದರಾಮಯ್ಯ ಶ್ರೀಕೃಷ್ಣ ಎಂದ ರಮೇಶ್‍ಕುಮಾರ್ – ಪಟೇಲರ ಕಚ್ಚೆ ನೆನಪಿಸಿಕೊಂಡ ಸಿದ್ದು

    ಬೆಂಗಳೂರು: ಸಿದ್ದರಾಮಯ್ಯ ಅವರನ್ನು ಶ್ರೀಕೃಷ್ಣ ಎಂದ ಶಾಸಕ ರಮೇಶ್ ಕುಮಾರ್ ಪ್ರಸ್ತಾಪ ಪಟೇಲರು, ರಾಮಕೃಷ್ಣ ಹೆಗಡೆ ಅವರನ್ನು ಇಂದು ವಿಧಾನಸಭೆಯಲ್ಲಿ ನೆನಪಿಸಿಕೊಳ್ಳುವಂತೆ ಮಾಡಿತು.

    ವಿಧಾನಸಭೆಯಲ್ಲಿ ಚುನಾವಣೆ ಸುಧಾರಣೆ ಅಗತ್ಯತೆ ಕುರಿತ ಚರ್ಚೆ ವೇಳೆ ಸಿದ್ದರಾಮಯ್ಯ ಮಾತನಾಡುವಾಗ ರಾಮನ ಲೆಕ್ಕ – ಕೃಷ್ಣನ ಲೆಕ್ಕದ ಬಗ್ಗೆ ಪ್ರಸ್ತಾಪಿಸಿದ್ರು. ಚುನಾವಣೆ ಮುಗಿದ ಬಳಿಕ ಒಂದು ತಿಂಗಳಲ್ಲಿ ಖರ್ಚು ವೆಚ್ಚ ಕೊಡಬೇಕು ಅಂತ ಚುನಾವಣಾ ಆಯೋಗ ಹೇಳುತ್ತದೆ. ಆದರೆ ನಾವು ಆತ್ಮವಂಚನೆ ಮಾಡಿಕೊಂಡು ಲೆಕ್ಕ ಹೇಳ್ತೇವೆ. ಆಯೋಗಕ್ಕೆ ಕೊಡುವಾಗ ರಾಮನ ಲೆಕ್ಕ – ಭೀಮನ ಲೆಕ್ಕ ಅಂತ ಕೊಡ್ತೇವೆ ಎಂದು ಸಿದ್ದರಾಮಯ್ಯ ಹೇಳಿದ್ರು. ಆಗ ಸಿದ್ದರಾಮಯ್ಯ ಮಾತಿಗೆ ಸಿದ್ದು ಸವದಿ ಆಕ್ಷೇಪ ಅದು ರಾಮನ ಲೆಕ್ಕ – ಕೃಷ್ಣನ ಲೆಕ್ಕ ಎಂದ್ರು. ಆಗ ಸಿದ್ದರಾಮಯ್ಯ ಮಾತನಾಡಿ ಯಾಕೇ ಭೀಮನ ಲೆಕ್ಕ ಅಲ್ವಾ? ಯಾಕೆ ಭೀಮ ಬೇಡ್ವಾ? ಕೃಷ್ಣನ ಲೆಕ್ವಾ? ಓಕೆ ರಾಮನ ಲೆಕ್ಕ – ಕೃಷ್ಣನ ಲೆಕ್ಕ ಬಿಡಿ ಎಂದರು. ಇದನ್ನೂ ಓದಿ: ಚುನಾವಣಾ ವ್ಯವಸ್ಥೆ ಬದಲಾಗದಿದ್ರೆ ಪ್ರಜಾಪ್ರಭುತ್ವ ದುರ್ಬಲವಾಗುತ್ತೆ: ಸಿದ್ದರಾಮಯ್ಯ

    ಈ ವೇಳೆ ಮಧ್ಯೆ ಪ್ರವೇಶ ಮಾಡಿದ ಶಾಸಕ ರಮೇಶ್ ಕುಮಾರ್, ಅದು ರಾಮನ ಲೆಕ್ಕ – ಕೃಷ್ಣನ ಲೆಕ್ಕ ಅಂತ ಮಾಮೂಲು ಹೇಳೋದು. ರಾಮನಿಗೆ ಒಬ್ಬ ಪತ್ನಿ – ಕೃಷ್ಣನಿಗೆ ಲೆಕ್ಕ ಇಲ್ಲ. ನೀವು ಹೇಗಿದ್ದರೂ ಕೃಷ್ಣ ಅಲ್ವಾ ಅಂತಾ ರಮೇಶ್ ಕುಮಾರ್ ಸಿದ್ದರಾಮಯ್ಯ ಕಾಲೆಳೆದ್ರು. ಅದಕ್ಕೆ ಜೆ.ಹೆಚ್.ಪಟೇಲ್ ಹೇಳಿಕೆ ಪ್ರಸ್ತಾಪಿಸಿದ ಸಿದ್ದರಾಮಯ್ಯ, ಹಿಂದೆ ಜೆ ಹೆಚ್ ಪಟೇಲ್ ಹೇಳ್ತಾ ಇದ್ರು. ನಾನು ಮೊದಲು ಕಚ್ಚೆ ಹಾಕ್ತಿದೆ, ಅಮೇಲೆ ಪಂಚೆ ಹಾಕಲು ಶುರು ಮಾಡಿದೆ, ಏಕೆಂದರೆ ನನ್ನ ಕಚ್ಚೆ ಹರಕ ಅಂತಿದ್ರು ಅಂತಾ ಪಟೇಲರು ಹೇಳ್ತಿದ್ರು. ಈ ಸಮಾಜದಲ್ಲಿ ಎರಡು ವರ್ಗ ಇರುತ್ತದೆ – ಒಂದು ರಾಮನ ವರ್ಗ – ಇನ್ನೊಂದು ಕೃಷ್ಣನ ವರ್ಗ. ನಾನು ಕೃಷ್ಣನ ವರ್ಗದವನು ಅಂತ ಪಟೇಲ್ ಹೇಳ್ತಾ ಇದ್ರು ಎಂದು ಸಿದ್ದರಾಮಯ್ಯ ನೆನಪಿಸಿಕೊಂಡರು. ಇದನ್ನೂ ಓದಿ: ಡಿಕೆಶಿ ವಿದೇಶಕ್ಕೆ ತೆರಳಲು ಅನುಮತಿ ನೀಡಿದ ದೆಹಲಿ ಹೈಕೋರ್ಟ್

    ಈ ನಡುವೆ ಸಿಎಂ ಬಸವರಾಜ ಬೊಮ್ಮಾಯಿ ಮಧ್ಯಪ್ರವೇಶ ಮಾಡಿ, ರಾಮಕೃಷ್ಣ ಹೆಗಡೆ ಅವರ ಬರ್ತ್ ಡೇ ದಿನ ಕಾರ್ಯಕ್ರಮದಲ್ಲೇ ಪಟೇಲರು ಬಹಿರಂಗವಾಗಿ ಹೇಳಿಕೆ ನೀಡಿದ್ರು. ಹೆಗಡೆ ಅವರೇ ಇಷ್ಟು ವರ್ಷ ಆಯ್ತು. ಇಷ್ಟು ದಿನ ಕೃಷ್ಣನ ಥರಾ ಇದ್ರಿ, ಇನ್ನು ಮುಂದೆಯಾದ್ರೂ ರಾಮನ ಥರಾ ಇರಿ ಎಂದು ಪಟೇಲರು ಅಂದಿದ್ದರು ಎಂದು ಸಿಎಂ ನೆನಪಿಸಿಕೊಂಡ್ರು. ಇಬ್ಬರು ಮಾಜಿ ಸಿಎಂಗಳ ಅಂದಿನ ಮಾತುಕತೆ ಪ್ರಸಂಗ ಹೇಳಿದಾಗ ಇಡೀ ಸದನ ನಗೆಗಡಲಲ್ಲಿ ತೇಲಿತು.