Tag: Basaveshwara Statue

  • ವಿರೋಧದ ನಡುವೆಯೂ ರಾತ್ರೋರಾತ್ರಿ ಬಸವೇಶ್ವರ ಪುತ್ಥಳಿ ತೆರವು

    ವಿರೋಧದ ನಡುವೆಯೂ ರಾತ್ರೋರಾತ್ರಿ ಬಸವೇಶ್ವರ ಪುತ್ಥಳಿ ತೆರವು

    ಹುಬ್ಬಳ್ಳಿ: ಸಾಕಷ್ಟು ವಿರೋಧಗಳ ನಡುವೆಯೂ ಫ್ಲೈಓವರ್ (Flyover) ನಿರ್ಮಾಣಕ್ಕಾಗಿ ರಾತ್ರೋರಾತ್ರಿ ಬಸವೇಶ್ವರ ಪುತ್ಥಳಿ (Basaveshwara Statue) ತೆರವು ಮಾಡಲಾಗಿದೆ.

    ನಗರದಲ್ಲಿ (Hubballi) ಸುಗಮ ಸಂಚಾರಕ್ಕಾಗಿ ಹಲವು ಕಡೆ ಫ್ಲೈಓವರ್ ನಿರ್ಮಾಣ ಮಾಡಲಾಗುತ್ತಿದ್ದು, ಇದರಲ್ಲಿ ಒಂದು ಫ್ಲೈಓವರ್ ಬಸವವನದಲ್ಲಿರುವ ಬಸವೇಶ್ವರರ ಪುತ್ಥಳಿ ಮೇಲೆ ಹಾದುಹೋಗಲಿದೆ. ಆದರೆ ಇದಕ್ಕೆ ಲಿಂಗಾಯತ ಸಮುದಾಯದಿಂದ ತೀವ್ರ ವಿರೋಧವಿದೆ. ಹೀಗಾಗಿ ವಾಣಿಜ್ಯನಗರಿ ಹುಬ್ಬಳ್ಳಿಯ ಮಹತ್ವದ ಯೋಜನೆಯಲ್ಲಿ ಒಂದಾಗಿರುವ ಫ್ಲೈಓವರ್ ಈಗಾಗಲೇ ಜಿಲ್ಲಾಡಳಿತ, ಮಹಾನಗರ ಪಾಲಿಕೆ ವತಿಯಿಂದ ಸಾಕಷ್ಟು ಬಾರಿ ಲಿಂಗಾಯತ ಮುಖಂಡರ ಜೊತೆಗೆ ಸಭೆ ನಡೆಸಲಾಗಿತ್ತು.

    ಸಭೆಗಳಲ್ಲಿ ಸಾಕಷ್ಟು ವಿರೋಧಗಳು ವ್ಯಕ್ತವಾಗಿದ್ದವು ಜೊತೆಗೆ ಒಮ್ಮತವು ಬಂದಿರಲಿಲ್ಲ. ಹೀಗಾಗಿ ಪುತ್ಥಳಿ ತೆರವು ಕಾರ್ಯವನ್ನು ಇಷ್ಟು ದಿನ ನಿಲ್ಲಿಸಲಾಗಿತ್ತು. ಆದರೆ ಸೋಮವಾರ ತಡರಾತ್ರಿ ಏಕಾಏಕಿ ತಾಂತ್ರಿಕ ಉಪಕರಣಗಳ ಮೂಲಕ ಬಸವೇಶ್ವರರ ಮೂರ್ತಿಯನ್ನು ತೆರವು ಮಾಡಲಾಗಿದೆ. ಇದನ್ನೂ ಓದಿ: ಕೇಂದ್ರ ಬಜೆಟ್ ಮೇಲೆ ಜಗತ್ತು ಕಣ್ಣಿಟ್ಟಿದೆ: ಮೋದಿ

    ಫ್ಲೈಓವರ್ ಕಾಮಗಾರಿ ಪೂರ್ಣಗೊಂಡ ಬಳಿಕ ಮತ್ತೆ ಬಸವೇಶ್ವರರ ಮೂರ್ತಿಯನ್ನು ಪ್ರತಿಷ್ಠಾಪಿಸುವ ಭರವಸೆಯನ್ನು ಅಧಿಕಾರಿಗಳು ನೀಡಿದ್ದಾರೆ. ಆದರೆ ಇದಕ್ಕೆ ಲಿಂಗಾಯತ ಸಮುದಾಯ ಯಾವ ರೀತಿ ಪ್ರತಿಕ್ರಿಯೆ ನೀಡುತ್ತದೆ ಎಂಬ ಕುತೂಹಲ ಎಲ್ಲರಲ್ಲೂ ಮೂಡಿದೆ. ಇದನ್ನೂ ಓದಿ: ಅರವಿಂದ್ ಕೇಜ್ರಿವಾಲ್‍ಗೆ ಜೀವ ಬೆದರಿಕೆ- ವ್ಯಕ್ತಿ ಅರೆಸ್ಟ್

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಬಸವೇಶ್ವರ ಮೂರ್ತಿಗೆ ಮುಸ್ಲಿಮರಿಂದ ಸ್ವಾಗತ

    ಬಸವೇಶ್ವರ ಮೂರ್ತಿಗೆ ಮುಸ್ಲಿಮರಿಂದ ಸ್ವಾಗತ

    ಬೆಳಗಾವಿ: ಖಾನಾಪುರ ಗ್ರಾಮದ ಲಿಂಗನಮಠದಲ್ಲಿ ವಿಶ್ವಗುರು ಜಗಜ್ಯೋತಿ ಬಸವೇಶ್ವರರ ನೂತನ ಮೂರ್ತಿ ಗ್ರಾಮದಲ್ಲಿ ಮೆರವಣಿಗೆ ಮಾಡುತ್ತಿದ್ದ ವೇಳೆ ಮುಸ್ಲಿಮರು ಮಾಲಾರ್ಪಣೆ ಮಾಡಿ ಭವ್ಯ ಮೂರ್ತಿಯನ್ನು ಸ್ವಾಗತಿಸಿದರು.

    ಬೆಳಗಾವಿ ಜಿಲ್ಲೆಯ ಖಾನಾಪುರ್ ತಾಲೂಕಿನ ಗಡಿಭಾಗದ ಲಿಂಗನಮಠ ಗ್ರಾಮದಲ್ಲಿ ಜಗಜ್ಯೋತಿ ವಿಶ್ವಗುರು ಬಸವೇಶ್ವರ ನೂತನ ಮೂರ್ತಿ ಮೆರವಣಿಗೆಯ ಮೂಲಕ ಗ್ರಾಮದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ನಡೆಸಲಾಯಿತು. ಈ ವೇಳೆ ಗ್ರಾಮದಲ್ಲಿ ಮುಸ್ಲಿಮರು ಭವ್ಯವಾಗಿ ಸ್ವಾಗತಿಸಿದ್ದಾರೆ. ಇದನ್ನೂ ಓದಿ: ಭಾರತದಲ್ಲಿ ಶೇ.50ರಷ್ಟು ಪ್ರವಾಸೋದ್ಯಮ ಕ್ಷೇತ್ರಕ್ಕೆ ಮೊಘಲರೇ ಕಾರಣ: ಮುಫ್ತಿ

    ಗ್ರಾಮದ ಮಸೀದಿಯ ಮುಂಭಾಗದಲ್ಲಿ ಆಗಮಿಸುತ್ತಿದ್ದಂತೆಯೇ ಲಿಂಗನಮಠ ಗ್ರಾಪಂ ಉಪಾಧ್ಯಕ್ಷ ಮುಸ್ಲಿಮ ಸಮುದಾಯದ ಯುವ ನಾಯಕ ಕಾಶೀಮ ಹಟ್ಟಿಹೊಳಿ ನೇತೃತ್ವದಲ್ಲಿ ಮುಸ್ಲಿಮ ಸಮುದಾಯದವರು ಸೇರಿಕೊಂಡು ಮಾಲಾರ್ಪಣೆ ಮಾಡಿ ಪುಷ್ಪ ನಮನ ಸಲ್ಲಿಸಿದರು. ಈ ಸಂದರ್ಭದಲ್ಲಿ ವಿಶ್ವಗುರು ಬಸವಣ್ಣನಿಗೆ ಘೋಷಣೆಯನ್ನು ಕೂಗುವ ಮೂಲಕ ಭಾವೈಕ್ಯತೆಯ ಸಂದೇಶ ಸಾರಿದರು. ಇದನ್ನೂ ಓದಿ: ಚಿಕ್ಕಬಳ್ಳಾಪುರದಲ್ಲಿ ಪದೇ ಪದೇ ಭೂಕಂಪನ – ಬಾಗೇಪಲ್ಲಿ ತಾಲೂಕಿನ ಹಲವೆಡೆ ಭೀಕರ ಶಬ್ದ