Tag: bathroom

  • ಚಿತ್ರದುರ್ಗ | ಬಾತ್‌ರೂಮಲ್ಲಿ ವ್ಯಕ್ತಿಯ ಬರ್ಬರ ಹತ್ಯೆ – 7 ಆರೋಪಿಗಳ ಬಂಧನ

    ಚಿತ್ರದುರ್ಗ | ಬಾತ್‌ರೂಮಲ್ಲಿ ವ್ಯಕ್ತಿಯ ಬರ್ಬರ ಹತ್ಯೆ – 7 ಆರೋಪಿಗಳ ಬಂಧನ

    ಚಿತ್ರದುರ್ಗ: ಬಾತ್‌ರೂಮಲ್ಲಿ ನಡೆದಿದ್ದ ರಾಜೇಂದ್ರ ಶ್ರೀನಿವಾಸ್ (30) ಕೊಲೆ ಕೇಸನ್ನು ಭೇದಿಸುವಲ್ಲಿ ಹೊಸದುರ್ಗ ಪೊಲೀಸರು ಯಶಸ್ವಿಯಾಗಿದ್ದಾರೆ.

    ಚಿತ್ರದುರ್ಗ ಜಿಲ್ಲೆ ಹೊಸದುರ್ಗ ತಾಲೂಕಿನ ಹುಣವಿನಡು ಗ್ರಾಮದಲ್ಲಿ ಬಾತ್‌ರೂಮಲ್ಲಿ ಸ್ನಾನ ಮಾಡುತ್ತಿದ್ದ ರಾಜೇಂದ್ರನನ್ನು ಬರ್ಬರವಾಗಿ ಕೊಂದು, ಆ ರಕ್ತಸಿಕ್ತ ಫೋಟೊವನ್ನು ಇನ್ಸ್ಟಾದಲ್ಲಿ ಹಾಕಿ ವಿಕೃತಿ ಮೆರೆದಿದ್ದ. ಹೊಳಲ್ಕೆರೆಯ ಸಾಗರ್, ಸಹೋದರ ಅಭಿಷೇಕ್ ಸೇರಿದಂತೆ ಸಂಬಂಧಿಕರಾದ ಕಿರಣ್ ಕುಮಾರ್, ಕೃಷ್ಣಮೂರ್ತಿ ಹಾಗೂ ಕೊಲೆಗೆ ಸಹಕರಿಸಿದ ಸಂಜು, ಕರಿಯಪ್ಪ, ಯಶವಂತ್ ಸೇರಿ ಒಟ್ಟು 7 ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಇದನ್ನೂ ಓದಿ: ವಾರಕ್ಕೆ 3 ದಿನ ಕಾವೇರಿ ಆರತಿ – 10,000 ಆಸನಗಳ ವ್ಯವಸ್ಥೆ, 70% ಉಚಿತ, 30% ಟಿಕೆಟ್: ಡಿಕೆಶಿ

    ಅಲ್ಲದೇ ಈ ಕೃತ್ಯಕ್ಕೆ ಬಳಸಿದ ಸ್ಕೂಟಿ, ಎರ್ಟಿಗಾ ಕಾರು, ಎರಡು ಮಚ್ಚುಗಳನ್ನು ವಶಕ್ಕೆ ಪಡೆದಿರುವ ಪೊಲೀಸರು ಕೊಲೆ ಕೇಸನ್ನು 24 ಗಂಟೆಯೊಳಗೆ ಭೇದಿಸಿದ್ದಾರೆ. ಈ ಪ್ರಕರಣದ ಬಗ್ಗೆ ಪ್ರತಿಕ್ರಿಯಿಸಿದ ಚಿತ್ರದುರ್ಗ ಎಸ್ಪಿ ರಂಜಿತ್ ಬಂಡಾರು, ಹೊಳಲ್ಕೆರೆ ಮೂಲದ ಕಿರಣಾ ಜೊತೆ ರಾಜೇಂದ್ರ ಲಿವಿಂಗ್ ರಿಲೇಷನ್‌ನಲ್ಲಿದ್ದು, ಕೆಲ ತಿಂಗಳ ಬಳಿಕ ಭಿನ್ನಾಭಿಪ್ರಾಯದಿಂದ ರಾಜೇಂದ್ರ ಹಾಗೂ ಕಿರಣಾ ದೂರವಾಗಿದ್ದರು. ಹೀಗಾಗಿ ದೂರಾದ ಬಳಿಕವೂ ಕಿರಣಾಗೆ ರಾಜೇಂದ್ರ ಕರೆ ಮಾಡಿ, ಕಿರುಕುಳ ನೀಡುತ್ತಿದ್ದ. ಹೀಗಾಗಿ ಕಿರಣಾ ಸಹೋದರ ಸಾಗರ್ ಮತ್ತು ಅಭಿಷೇಕ್ ಒಮ್ಮೆ ರಾಜೇಂದ್ರಗೆ ಕರೆ ಮಾಡಿ ಎಚ್ಚರಿಸಿದ್ದು, ಕಿರಣಾಳನ್ನು ಬಳಸಿಕೊಂಡು ಮೋಸ ಮಾಡಿದ ಎಂಬ ಆಕ್ರೋಶದಿಂದ ಬರ್ಬರವಾಗಿ ಕೊಲೆಗೈದಿದ್ದಾರೆ. ಕೊಲೆ ಬಳಿಕ ಇನ್ಸ್ಟಾಗ್ರಾಮ್‌ನಲ್ಲಿ ಆರೋಪಿಯಾದ ಸಾಗರ್ ಸ್ಟೇಟಸ್ ಹಾಕಿದ್ದು, ಕೊಲೆಯಾದ ಶವದ ಫೋಟೋ ಶೇರ್ ಮಾಡಿದ್ದನ್ನು ಪ್ರಕರಣದ ಸಾಕ್ಷಿಯಾಗಿ ಪರಿಗಣಿಸಲಾಗುವುದು ಎಂದು ತಿಳಿಸಿದರು. ಇದನ್ನೂ ಓದಿ: ಶಿವಮೊಗ್ಗ | ಕುಡಿದು ಅಂಬುಲೆನ್ಸ್ ಚಾಲನೆ – ಚಾಲಕನಿಗೆ 13,000 ದಂಡ!

  • ತಿಂಗಳ ಹಿಂದೆಯಷ್ಟೇ ಮದುವೆಯಾಗಿದ್ದ ವೈದ್ಯ ದಂಪತಿ ಶವವಾಗಿ ಪತ್ತೆ

    ತಿಂಗಳ ಹಿಂದೆಯಷ್ಟೇ ಮದುವೆಯಾಗಿದ್ದ ವೈದ್ಯ ದಂಪತಿ ಶವವಾಗಿ ಪತ್ತೆ

    ಹೈದರಾಬಾದ್: ಕಳೆದೆರಡು ತಿಂಗಳ ಹಿಂದೆಯಷ್ಟೇ ಮದುವೆಯಾಗಿದ್ದ ವೈದ್ಯ ದಂಪತಿ ಗುರುವಾರ ಹೈದರಾಬಾದ್‍ನಲ್ಲಿರುವ (Hyderabad) ತಮ್ಮ ನಿವಾಸದ ಸ್ನಾನಗೃಹದಲ್ಲಿ ಶವವಾಗಿ ಪತ್ತೆಯಾಗಿದ್ದಾರೆ.

    ಸ್ನಾನಗೃಹದ ಗೀಸರ್ ವೈಯರ್‌ನ ಕರೆಂಟ್ ಶಾಕ್‍ನಿಂದ ದಂಪತಿ ಸಾವನ್ನಪ್ಪಿರಬಹುದು ಎಂದು ಶಂಕಿಸಲಾಗಿದೆ. ಮೃತರನ್ನು ಡಾ. ಸೈಯದ್ ನಿಸಾರುದ್ದೀನ್(26) ಮತ್ತು ಅವರ ಪತ್ನಿ ಉಮ್ಮೆ ಮೊಹಿಮೀನ್ ಸೈಮಾ (22) ಎಂದು ಗುರುತಿಸಲಾಗಿದ್ದು, ಈ ದಂಪತಿ ಖಾದರ್‍ಬಾಗ್ ಪ್ರದೇಶದ (Khaderbagh locality) ನಿವಾಸಿಯಾಗಿದ್ದಾರೆ. ಇದನ್ನೂ ಓದಿ: ನಿಮ್ಮ ಬಳಿ ಬಟ್ಟೆ ಹಾವಿದ್ರೆ, ನನ್ನ ಬಳಿ ನಿಜವಾದ ಹಾವಿದೆ: ಬಿಜೆಪಿ ನಾಯಕರಿಗೇ ಯತ್ನಾಳ್ ಟಾಂಗ್

    ಮನೆಯೊಳಗೆ ಪ್ರವೇಶಿಸಿದ ನಮಗೆ ಏನೋ ಅನಾಹುತ ಸಂಭವಿಸಿರಬಹುದು ಎಂದು ಶಂಕಿಸಿ ವಿದ್ಯುತ್ ಸಂಪರ್ಕವನ್ನು ಸ್ಥಗಿತಗೊಳಿಸಿದೆವು. ನಂತರ ಕಿಟಕಿಯ ಮೂಲಕ ನೋಡಿದಾಗ ದಂಪತಿ ಸಾವನ್ನಪ್ಪಿರುವುದು ಕಂಡುಬಂದಿದೆ ಎಂದು ಉಮ್ಮೆ ಮೊಹಿಮೀನ್ ಸೈಮಾ ಅವರ ತಂದೆ ಹೇಳಿದ್ದಾರೆ.

    ಬುಧವಾರ ರಾತ್ರಿ ಸೂರ್ಯಪೇಟೆಯಿಂದ ದಂಪತಿ ಮರಳಿದ್ದರು. ಗುರುವಾರ ಬೆಳಗ್ಗೆ ಈ ಘಟನೆ ನಡೆದಿರಬಹುದು. ಆದರೆ ಸಂಜೆವರೆಗೂ ಈ ಬಗ್ಗೆ ಯಾರಿಗೂ ತಿಳಿದುಬಂದಿಲ್ಲ. ಆದರೆ ರಾತ್ರಿ 11:30ಕ್ಕೆ ನಮಗೆ ಈ ಬಗ್ಗೆ ಮಾಹಿತಿ ದೊರೆಯಿತು. ನಂತರ ಘಟನಾ ಸ್ಥಳಕ್ಕೆ ಹೋದಾಗ ದಂಪತಿ ಶವವಾಗಿ ಪತ್ತೆಯಾಗಿದ್ದಾರೆ. ಪತಿ ಪತ್ನಿಯನ್ನು ಉಳಿಸಲು ಹೋದಾಗ ಪತಿ ಕೂಡ ಸಾವನ್ನಪ್ಪಿದ್ದಾರೆ ಎಂದು ತನಿಖಾಧಿಕಾರಿ ಸಬ್ ಇನ್ಸ್‌ಪೆಕ್ಟರ್ ಎಸ್ ಶೃತಿ ತಿಳಿಸಿದ್ದಾರೆ. ಇದನ್ನೂ ಓದಿ: ದಲಿತ ಯುವಕನ ಮುಖಕ್ಕೆ ಮಸಿ ಬಳಿದು, ಕಂಬಕ್ಕೆ ಕಟ್ಟಿ ಥಳಿತ – ಇಬ್ಬರು ಅರೆಸ್ಟ್

    ಸೈಮಾ ವೈದ್ಯಕೀಯ ಕಾಲೇಜಿನ ಅಂತಿಮ ವರ್ಷದ ವಿದ್ಯಾರ್ಥಿನಿಯಾಗಿದ್ದರೆ, ಆಕೆಯ ಪತಿ ಸೈಯದ್ ನಿಸಾರುದ್ದೀನ್ ಸೂರ್ಯಪೇಟೆಯ ಸರ್ಕಾರಿ ವೈದ್ಯಕೀಯ ಕಾಲೇಜಿನಲ್ಲಿ ಕೆಲಸ ಮಾಡುತ್ತಿದ್ದರು. ಗುರುವಾರ ಬೆಳಗ್ಗೆ ತಂದೆ ಜೊತೆಗೆ ಮಾತನಾಡಿದ್ದ ಸೈಮಾ, ಮತ್ತೆ ಕರೆ ಮಾಡುವುದಾಗಿ ಹೇಳಿದ್ದರು. ಆದರೆ ಪುನಃ ಯಾವುದೇ ಕರೆ ಮಾಡಲಿಲ್ಲ. ಇಬ್ಬರೂ ಕೆಲಸಕ್ಕೆ ಹೋಗಿರಬೇಕು ಎಂದು ಅವರ ತಂದೆ ಅಂದುಕೊಂಡಿದ್ದರು. ಆದರೆ ಸಂಜೆ ಕರೆ ಮಾಡಿದಾಗ ಕರೆ ಸ್ವೀಕರಿಸದೇ ಇದ್ದಿದ್ದರಿಂದ ಅನುಮಾನಗೊಂಡ ಕುಟುಂಬಸ್ಥರು ಅಪಾರ್ಟ್‍ಮೆಂಟ್‍ಗೆ ಬಂದು ನೋಡಿದ್ದಾರೆ. ಈ ವೇಳೆ ಘಟನೆ ಬಗ್ಗೆ ತಿಳಿದುಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಒಂದೇ ಬಾತ್‍ರೂಂನಲ್ಲಿ ಎರಡು ಕಮೋಡ್ – ಸ್ಟಾಲಿನ್ ಉದ್ಘಾಟಿಸಿದ ಕಟ್ಟಡ ಟ್ರೋಲ್

    ಒಂದೇ ಬಾತ್‍ರೂಂನಲ್ಲಿ ಎರಡು ಕಮೋಡ್ – ಸ್ಟಾಲಿನ್ ಉದ್ಘಾಟಿಸಿದ ಕಟ್ಟಡ ಟ್ರೋಲ್

    ಚೆನ್ನೈ: ತಮಿಳುನಾಡು (Tamil Nadu) ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ (MK Stalin) ಅವರು ಸೋಮವಾರವಷ್ಟೇ ಶ್ರೀಪೆರಂಬದೂರಿನಲ್ಲಿರುವ (Sriperumbudur) ಕಚೇರಿಯ ಕಟ್ಟಡವನ್ನು ಉದ್ಘಾಟಿಸಿದ್ದರು. ಈ ಕಟ್ಟಡದಲ್ಲಿ ಒಂದೇ ಬಾತ್‍ರೂಂನಲ್ಲಿ ಎರಡು ಕಮೋಡ್‍ಗಳನ್ನು ನಿರ್ಮಿಸಲಾಗಿದ್ದು, ಇದೀಗ ಈ ವೀಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ.

    ಶ್ರೀಪೆರಂಬದೂರಿನಲ್ಲಿ ತಮಿಳುನಾಡು ರಾಜ್ಯ ಕೈಗಾರಿಕೆಗಳ ಉತ್ತೇಜನ ನಿಗಮ (SIPCOT) 1.80 ಕೋಟಿ ರೂಪಾಯಿ ಬಜೆಟ್‍ನಲ್ಲಿ ಹೊಸದಾಗಿ ನಿರ್ಮಿಸಲಾದ ಕಟ್ಟಡದಲ್ಲಿ ಒಂದೇ ಬಾತ್‍ರೂಂನಲ್ಲಿ ಎರಡು ಕಮೋಡ್‍ಗಳಿರುವ ಫೋಟೋ ಸೋಶಿಯಲ್ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ಟ್ರೋಲ್ ಆಗುತ್ತಿದೆ. ಇದನ್ನೂ ಓದಿ: ಡಿಜೆ ಹಾಕಿ ಹಿಂದೂ ವಿರೋಧಿ ಘೋಷಣೆ- ಮಚ್ಚು, ಲಾಂಗ್, ತಲ್ವಾರ್ ಬೀಸಿ ಪುಂಡಾಟ

    ಸೋಮವಾರ ಸ್ಟಾಲಿನ್ ಅವರು ಇತರ ಯೋಜನೆಗಳೊಂದಿಗೆ ಈ ಕಟ್ಟಡವನ್ನು ಉದ್ಘಾಟಿಸಿದರು. ಒಂದೇ ಬಾತ್‍ರೂಂನಲ್ಲಿ ಎರಡು ಕಮೋಡ್‍ಗಳಿರುವ ಈ ಆಫೀಸ್ ಕಟ್ಟಡ ನಿರ್ಮಾಣ ಪ್ರಾಜೆಕ್ಟ್‌ಗೆ ಸುಮಾರು 1.80 ಕೋಟಿ ರೂಪಾಯಿ ಖರ್ಚಾಗಿದೆ. ಇದನ್ನೂ ಓದಿ: ಅತ್ಯಾಚಾರಕ್ಕೊಳಗಾಗಿ ಗರ್ಭಿಣಿಯಾಗಿದ್ದ ಅಪ್ರಾಪ್ತೆಗೆ ಬೆಂಕಿಯಿಟ್ಟ ಆರೋಪಿ ತಾಯಿ, ಸಹೋದರಿ

    ವೀಡಿಯೋದಲ್ಲಿ ಅರ್ಧಂಬರ್ಧ ಛಾವಣಿಗಳು, ಕಳಪೆ ಸಿಮೆಂಟ್ ಕಾಮಗಾರಿ ಮತ್ತು ಪೀಠೋಪಕರಣಗಳನ್ನು ಹಾಕಿರುವುದನ್ನು ಕಾಣಬಹುದಾಗಿದೆ. ಗಡುವು ಮುಗಿದಿದ್ದರಿಂದ ಕಾಮಗಾರಿಯನ್ನು ಶೀಘ್ರವೇ ಮುಗಿಸಲು ಅಧಿಕಾರಿಗಳು ಯತ್ನಿಸಿದ್ದಾರೆಯೇ ಎಂಬ ಅನುಮಾನ ವ್ಯಕ್ತವಾಗುತ್ತಿದೆ.

    Live Tv
    [brid partner=56869869 player=32851 video=960834 autoplay=true]

  • ಚಂಡೀಗಢ ವಿವಿ ಬಳಿಕ ಐಐಟಿ ಬಾಂಬೆ- ಹಾಸ್ಟೆಲ್ ಸ್ನಾನಗೃಹದಲ್ಲಿ ಇಣುಕಿದ ಕ್ಯಾಂಟೀನ್ ಸಿಬ್ಬಂದಿ ಬಂಧನ

    ಚಂಡೀಗಢ ವಿವಿ ಬಳಿಕ ಐಐಟಿ ಬಾಂಬೆ- ಹಾಸ್ಟೆಲ್ ಸ್ನಾನಗೃಹದಲ್ಲಿ ಇಣುಕಿದ ಕ್ಯಾಂಟೀನ್ ಸಿಬ್ಬಂದಿ ಬಂಧನ

    ಮುಂಬೈ: ಚಂಡೀಗಢ ವಿಶ್ವವಿದ್ಯಾಲಯದ (Chandigarh University) ವಿದ್ಯಾರ್ಥಿನಿಯರ ಬಾತ್‌ರೂಮ್ ವೀಡಿಯೋ (Bathroom Video) ಲೀಕ್ ಪ್ರಕರಣ ಮಾಸುವುದಕ್ಕೂ ಮೊದಲೇ ಇಂತಹುದೇ ಮತ್ತೊಂದು ಆಘಾತಕಾರಿ ಘಟನೆ ಐಐಟಿ ಬಾಂಬೆಯಲ್ಲಿ (IIT Bombay) ನಡೆದಿದೆ. ವಿದ್ಯಾರ್ಥಿನಿಯರ ವಸತಿ ನಿಲಯದ (Hostel) ಸ್ನಾನಗೃಹದಲ್ಲಿ ಕ್ಯಾಂಟೀನ್ ಕೆಲಸಗಾರನೊಬ್ಬ (Canteen Staff) ಇಣುಕಿ ನೋಡಿರುವ ಆರೋಪದಲ್ಲಿ ಪೊಲೀಸರು ಆತನನ್ನು ಬಂಧಿಸಿದ್ದಾರೆ.

    ವರದಿಗಳ ಪ್ರಕಾರ, ವಿದ್ಯಾರ್ಥಿನಿಯೊಬ್ಬಳು ಸ್ನಾನಗೃಹದಲ್ಲಿದ್ದಾಗ ಆರೋಪಿ ಕಿಟಕಿಯ ಸೀಳುಗಳ ಮೂಲಕ ಇಣುಕಿ ನೋಡಿದ್ದಾನೆ. ವಿದ್ಯಾರ್ಥಿನಿಗೆ ತನ್ನನ್ನು ಯಾರೋ ನೋಡುತ್ತಿದ್ದಾರೆ ಎಂದು ತಿಳಿಯುತ್ತಿದ್ದಂತೆ ಕಿರುಚಿಕೊಂಡಿದ್ದಾಳೆ. ಬಳಿಕ ಹಾಸ್ಟೆಲ್‌ನ ಕ್ಯಾಂಟೀನ್ ಉದ್ಯೋಗಿ ವಿದ್ಯಾರ್ಥಿನಿಯರ ಸ್ನಾನ ಗೃಹದಲ್ಲಿ ಇಣುಕಿ ನೋಡಲು ಪ್ರಯತ್ನಿಸಿದ್ದಾನೆ ಎಂದು ಆರೋಪಿಸಲಾಗಿದೆ. ಇದನ್ನೂ ಓದಿ: ಬ್ಯಾಂಕ್‍ಗೆ ರೈಫಲ್ ಹಿಡಿದು ನುಗ್ಗಿದ ಸನ್ಯಾಸಿ – ಸಾಲ ನೀಡದ್ದಕ್ಕೆ ಲೂಟಿ ಮಾಡೋದಾಗಿ ಬೆದರಿಕೆ

    ಇದೀಗ ಆರೋಪಿಯನ್ನು ಹಿಡಿದು ಪೊಲೀಸರಿಗೆ ಒಪ್ಪಿಸಲಾಗಿದೆ. ಸದ್ಯ ಆರೊಪಿ ತನ್ನ ಫೋನ್‌ನಿಂದ ವಿದ್ಯಾರ್ಥಿನಿಯರ ಯಾವುದೇ ಖಾಸಗಿ ದೃಶ್ಯಗಳನ್ನು ಸೆರೆಹಿಡಿದಿಲ್ಲ. ನಾವು ವಿದ್ಯಾರ್ಥಿಗಳ ಪರವಾಗಿದ್ದೇವೆ, ನಮ್ಮ ವಿದ್ಯಾರ್ಥಿಗಳ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಲು ನಾವು ನಮ್ಮಿಂದಾಗುವ ಎಲ್ಲಾ ಪ್ರಯತ್ನವನ್ನು ಮಾಡುತ್ತೇವೆ ಎಂದು ಐಐಟಿ ಬಾಂಬೆ ತಿಳಿಸಿದೆ. ಇದನ್ನೂ ಓದಿ: ನೀರು ಕೇಳಿ ಮನೆಗೆ ನುಗ್ಗಿ ಬಲವಂತವಾಗಿ ಚುಂಬಿಸಿದ – ಫುಡ್ ಡೆಲಿವರಿ ಏಜೆಂಟ್ ಅರೆಸ್ಟ್

    ಇದೀಗ ವಿದ್ಯಾರ್ಥಿನಿಲಯದ ಕ್ಯಾಂಟೀನ್ ಅನ್ನು ಮುಚ್ಚಲಾಗಿದ್ದು, ಮಹಿಳಾ ಸಿಬ್ಬಂದಿಯನ್ನು ಮಾತ್ರವೇ ನೇಮಿಸಿ. ಬಳಿಕ ಮತ್ತೆ ಕ್ಯಾಂಟೀನ್ ಅನ್ನು ತೆರೆಯುತ್ತೇವೆ ಎಂದು ಸಂಸ್ಥೆ ತಿಳಿಸಿದೆ.

    Live Tv
    [brid partner=56869869 player=32851 video=960834 autoplay=true]

  • ಮಕ್ಕಳನ್ನು ನೋಡಿಕೊಳ್ಳಲು ಆಗುತ್ತಿಲ್ಲವೆಂದು ಪತ್ನಿಯನ್ನ ಕೊಂದು ಬಾತ್‍ರೂಮ್‍ನಲ್ಲಿ ಬಚ್ಚಿಟ್ಟ

    ಮಕ್ಕಳನ್ನು ನೋಡಿಕೊಳ್ಳಲು ಆಗುತ್ತಿಲ್ಲವೆಂದು ಪತ್ನಿಯನ್ನ ಕೊಂದು ಬಾತ್‍ರೂಮ್‍ನಲ್ಲಿ ಬಚ್ಚಿಟ್ಟ

    ನವದೆಹಲಿ: ಪತಿಯೋರ್ವ ಮಕ್ಕಳನ್ನು ನೋಡಿಕೊಳ್ಳಲು ಆಗುತ್ತಿಲ್ಲವೆಂದು ಪತ್ನಿಯನ್ನ ಕೊಲೆ ಮಾಡಿ ಶವವನ್ನು ಬಾತ್‍ರೂಮ್‍ನಲ್ಲಿ ಬಚ್ಚಿಟ್ಟ ಘಟನೆ ದೆಹಲಿಯಲ್ಲಿ ನಡೆದಿದೆ.

    ದೆಹಲಿಯ ಕಪಿಲ್ ವಿಹಾರ್ ನಿವಾಸಿ ವಿಜಯ್(38) ಜೂನ್ 18 ರಂದು ಭಾಲ್ಸ್ವಾ ಡೈರಿ ಪೊಲೀಸ್ ಠಾಣೆಯ ಅಧಿಕಾರಿಗಳಿಗೆ ತನ್ನ ಪತ್ನಿಯನ್ನು ಕೊಲೆ ಮಾಡಿರುವುದಾಗಿ ತಪ್ಪೊಪ್ಪಿಕೊಂಡಿದ್ದಾನೆ. ಈ ಹಿನ್ನೆಲೆ ಪೊಲೀಸರು ಸ್ಥಳಕ್ಕೆ ಆಗಮಿಸಿ ಪ್ರಕರಣದ ಕುರಿತು ತನಿಖೆ ಮಾಡಿದ್ದಾರೆ.

    ಪರಿಶೀಲನೆ ವೇಳೆ ಬಾತ್‍ರೂಮ್ ಒಳಗೆ ಬಟ್ಟೆಯಲ್ಲಿ ಸುತ್ತಿದ್ದ ಮೃತ ಸಂತೋಷಿದೇವಿ ದೇಹ ಪತ್ತೆಯಾಗಿದೆ. ಈ ಹಿನ್ನೆಲೆ ಪ್ರಕರಣ ದಾಖಲಾಗಿದ್ದು, ಆರೋಪಿ ವಿಜಯ್‍ನನ್ನು ಬಂಧಿಸಲಾಗಿದೆ. ಇದನ್ನೂ ಓದಿ: ಅಗ್ನಿಪಥ್ ಯೋಜನೆ ವಿರುದ್ಧ ಯುವಕರನ್ನು ಕಾಂಗ್ರೆಸ್‍ ಬೇಕೆಂದು ಪ್ರಚೋದಿಸುತ್ತಿದೆ: ಬಿ.ಸಿ.ಪಾಟೀಲ್

    ತನಿಖೆಯಲ್ಲಿ ತಿಳಿದಿದ್ದೇನು?
    ವಿಜಯ್‍ಗೆ ಈ ಹಿಂದೆ ಬೇರೊಂದು ಮಹಿಳೆ ಜೊತೆ ವಿವಾಹವಾಗಿದ್ದು, ಆತನಿಗೆ 4 ಮಕ್ಕಳಿದ್ದರು. ಆದರೆ ಮೊದಲ ಹೆಂಡತಿ ಅವನಿಂದ ಬೇರೆಯಾಗಿದ್ದಳು. ಈ ವೇಳೆ ಆಸ್ಪತ್ರೆಯಲ್ಲಿ ಕೆಲಸ ಮಾಡುತ್ತಿದ್ದ ಸಂತೋಷಿದೇವಿಯನ್ನು ವಿಜಯ್ ಭೇಟಿಯಾಗಿದ್ದು, ನಂತರ ಅದು ಪ್ರೇಮಕ್ಕೆ ತಿರುಗಿಕೊಂಡಿದೆ.

    ಸಂತೋಷಿಗೂ 4 ಮಕ್ಕಳಿದ್ದು 14, 13 ಮತ್ತು 12 ವರ್ಷದ ಮೂವರು ಹುಡುಗಿಯರು ಮತ್ತು 8 ವರ್ಷದ ಒಬ್ಬ ಗಂಡು ಮಗುವಿದೆ. ಆಕೆಯೂ ಪತಿಯಿಂದ ಬೇರ್ಪಟ್ಟು ಒಂಟಿಯಾಗಿ ಜೀವನ ನಡೆಸುತ್ತಿದ್ದಳು.

    CNG CRIME

    ಈ ಮಧ್ಯೆ ವಿಜಯ್ ಮತ್ತು ಸಂತೋಷಿ ಒಟ್ಟಿಗೆ ವಾಸಿಸಲು ಪ್ರಾರಂಭಿಸಿದರು. ಇವರಿಬ್ಬರು ಒಂದು ಮಗುವನ್ನು ಸಹ ಹೊಂದಿದ್ದರು. ನಂತರ ಎಲ್ಲ ಮಕ್ಕಳ ಆರೈಕೆಗೆ ಸಂಬಂಧಿಸಿದಂತೆ ವಿಜಯ್ ಮತ್ತು ಸಂತೋಷಿ ನಡುವೆ ಕೆಲವು ಸಣ್ಣ-ಪುಟ್ಟ ಸಮಸ್ಯೆಗಳು ಕಾಣಿಸಿಕೊಳ್ಳಲು ಪ್ರಾರಂಭವಾಯಿತು. ಇದನ್ನೂ ಓದಿ: ಪತ್ನಿ, ಐವರು ಮಕ್ಕಳ ಮೇಲೆ ಕೊಡಲಿಯಿಂದ ಹಲ್ಲೆ- ನಾಲ್ವರು ಸಾವು, ಇಬ್ಬರು ಗಂಭೀರ

    CRIME 2

    ಜೂನ್ 17ರ ಸಂಜೆ ಸಂತೋಷಿ ಕೆಲಸ ಮುಗಿಸಿ ವಾಪಸ್ಸಾಗಿದ್ದು, ಎಲ್ಲಾ ಮಕ್ಕಳು ಕೆಳಗೆ ಮಲಗಿಕೊಂಡಿದ್ದರು. ರಾತ್ರಿ 11:30ರ ಸುಮಾರಿಗೆ ಇವರಿಬ್ಬರ ನಡುವೆ ಜಗಳ ನಡೆದಿದೆ. ಇದು ಅತಿರೇಕಕ್ಕೆ ಹೋಗಿ ವಿಜಯ್, ಸಂತೋಷಿಯ ಕತ್ತು ಹಿಸುಕಿ ಕೊಲೆ ಮಾಡಿದ್ದಾನೆ. ನಂತರ ಶವವನ್ನು ಬೇರೆಕಡೆ ಸಾಗಿಸಲು ಬಟ್ಟೆಯಲ್ಲಿ ಸುತ್ತಿದ್ದಾನೆ. ಆದರೆ ಇದನ್ನು ನಿಭಾಯಿಸಲು ಸಾಧ್ಯವಾಗದೆ ಜೂನ್ 18ರಂದು ರಾತ್ರಿ 8.45ರ ಸುಮಾರಿಗೆ ಪೊಲೀಸರ ಮೊರೆ ಹೋಗಿದ್ದು, ಕೃತ್ಯ ಎಸಗಿರುವುದಾಗಿ ಒಪ್ಪಿಕೊಂಡಿದ್ದಾನೆ.

    Live Tv

  • ಸ್ನಾನಕ್ಕೆಂದು ಬಾತ್‍ರೂಮಿಗೆ ಹೋದ ಮಹಿಳೆಯ ಅನುಮಾನಾಸ್ಪದ ಸಾವು

    ಸ್ನಾನಕ್ಕೆಂದು ಬಾತ್‍ರೂಮಿಗೆ ಹೋದ ಮಹಿಳೆಯ ಅನುಮಾನಾಸ್ಪದ ಸಾವು

    ಚಿಕ್ಕಬಳ್ಳಾಪುರ: ಸ್ನಾನ ಮಾಡಲೆಂದು ಬಾತ್ ರೂಮ್ ಗೆ ಹೋದ ಮಹಿಳೆ ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿದ್ದು, ವರದಕ್ಷಿಣೆಗಾಗಿ ಮಹಿಳೆಯನ್ನು ಕೊಲೆ ಮಾಡಿದ್ದರೆಂದು ಮೃತ ಮಹಿಳೆಯ ಕುಟುಂಬದವರು ಆರೋಪಿಸಿದ್ದಾರೆ.

    ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ನಗರದ ಬಸವೇಶ್ವರ ನಗರ ನಿವಾಸಿ ಆಶಾ(30) ಮೃತ ಮಹಿಳೆ. ವರದಕ್ಷಿಣೆ ಹಣಕ್ಕಾಗಿ ಆಶಾಳನ್ನು ಕೊಲೆ ಮಾಡಿದ್ದಾರೆಂದು ಮೃತ ಮಹಿಳೆಯ ಕುಟುಂಬದವರು ಗಂಡನ ಮನೆಯವರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ ಶವಾಗಾರದ ಮುಂದೆ ಪ್ರತಿಭಟನೆ ನಡೆಸಿದರು.

    ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲ ತಾಲೂಕಿನ ಕಳಸೇಗೌಡನಪಾಳ್ಯದ ಆಶಾಳನ್ನು ದೊಡ್ಡಬಳ್ಳಾಪುರ ನಗರದ ಬಸವೇಶ್ವರ ನಗರ ನಿವಾಸಿ ಪೇಂಟರ್ ವೃತ್ತಿಯ ಜಯರಾಮ್‍ರಿಗೆ 2011 ರಲ್ಲಿ ಮದುವೆ ಮಾಡಿಕೊಡಲಾಗಿತ್ತು. ದಂಪತಿಗೆ ಒಂಬತ್ತು ವರ್ಷ ಹಾಗೂ ಮೂರು ವರ್ಷ ವಯಸ್ಸಿನ ಎರಡು ಹೆಣ್ಣು ಮಕ್ಕಳಿದ್ದಾರೆ. ಮದುವೆ ಸಮಯದಲ್ಲಿ ಜಯರಾಮನಿಗೆ ವರದಕ್ಷಿಣೆ ರೂಪದಲ್ಲಿ 140 ಗ್ರಾಂ ಚಿನ್ನ ಹಾಗೂ ಜೊತೆಯಲ್ಲಿ ನಗದು ಸಹ ನೀಡಲಾಗಿತ್ತು. ಆದರೂ ಮದುವೆಯಾದ ಕೆಲವೇ ವರ್ಷಗಳಲ್ಲಿ ಗಂಡನ ಮನೆಯವರು ದೈಹಿಕ ಹಲ್ಲೆ ನಡೆಸಿ ಕಿರುಕುಳ ನೀಡುತ್ತಿದ್ದಾರೆಂದು ಮೃತಳ ಕುಟುಂಬದವರ ಆರೋಪಿಸಿದ್ದಾರೆ. ಇದನ್ನೂ ಓದಿ:ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ್ದ ಯುವಕ ಸಾವು

    ಒಂದು ತಿಂಗಳ ಹಿಂದೆ ಫೋನ್ ಮಾಡಿದ ಆಶಾ ಎರಡು ಲಕ್ಷ ಹಣ ನೀಡುವಂತೆ ಗಂಡ ಜಯರಾಮ್, ಅತ್ತೆ ರತ್ನಮ್ಮ, ಜಯರಾಮ್ ಅಕ್ಕನ ಗಂಡ ನಂದಕುಮಾರ್ ಕಿರುಕುಳ ಕೊಡುತ್ತಿದ್ದರೆಂದು ಹೇಳಿದ್ದಳು. ನಮ್ಮ ಬಳಿ ಈಗ ಹಣ ಇಲ್ಲ ಎಂದಿದ್ದೆವು. ಅಂದಿನಿಂದ ಆಕೆ ನಮಗೆ ಫೋನ್ ಮಾಡಿರಲಿಲ್ಲ. ಆಗಸ್ಟ್ 24ರಂದು ಫೋನ್ ಮಾಡಿದ ಆಶಾಳ ಗಂಡ ಜಯರಾಮ್ ಆಶಾಳಿಗೆ ಫಿಡ್ಸ್ ಬಂದಿತ್ತು, ಖಾಸಗಿ ಆಸ್ಪತ್ರೆಗೆ ಸೇರಿಸಿದ್ದೇವೆ ಎಂದಿದ್ದ. ನಾವು ಆಸ್ಪತ್ರೆಗೆ ಹೋದ ಮೇಲೆ ಮಗಳನ್ನು ನೋಡಲು ಬಿಡಲಿಲ್ಲ. ಬುಧವಾರ ಸಂಜೆ ಮಗಳು ಮೃತಪಟ್ಟಿರುವುದಾಗಿ ತಿಳಿಸಿ ಮೃತದೇಹ ನೋಡಲು ಬಿಟ್ಟರು. ನಮ್ಮ ಮಗಳ ಸಾವಿಗೆ ಜಯರಾಮ್ ಮತ್ತು ಮನೆಯವರೇ ಕಾರಣ ಎಂದು ಆಕ್ರೋಶ ವ್ಯಕ್ತಪಡಿಸಿದರು. ಇದನ್ನೂ ಓದಿ:ತಂತಿ ಉರುಳಿಗೆ ಸಿಲುಕಿ ಶಿರಸಿಯಲ್ಲಿ ಅಪರೂಪದ ಕಪ್ಪು ಚಿರತೆ ಸಾವು

    ಆಶಾಗೆ ಒಂಭತ್ತು ವರ್ಷದ ಮಗಳಿಗೆ ಜಯರಾಮ್ ಮನೆಯವರು ಬರೆ ಹಾಕಿ ಕಿರುಕುಳ ನೀಡಿರುವುದು ಸಹ ತಿಳಿದುಬಂದಿದೆ. ವಿಷಯ ತಿಳಿದ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಹಾಗೂ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿ ಮಾಹಿತಿ ಪಡೆದಿದ್ದು, ಪ್ರಕರಣ ದಾಖಲಿಸುವುದಾಗಿ ತಿಳಿಸಿದ್ದಾರೆ.

    ಮೃತಳ ಪೋಷಕರ ಆರೋಪದ ನಡುವೆ ಪತಿ ಜಯರಾಮ್, ಮಂಗಳವಾರ ಸ್ನಾನಕ್ಕೆಂದು ಹೋದ ಹೆಂಡತಿ ಎರಡು ಗಂಟೆಯಾದರೂ ಹೊರ ಬಾರದಿರುವುದನ್ನು ಕಂಡು ಬಾಗಿಲು ಮುರಿದು ಒಳ ಹೋಗಿ ನೋಡಿದಾಗ, ಗೀಸರ್ ವಾಸನೆಗೆ ಫಿಡ್ಸ್ ಬಂದು ಪ್ರಜ್ಞೆ ತಪ್ಪಿ ಬಿದ್ದಿದ್ದಳು. ಅಲ್ಲಿಂದ ಪತ್ನಿಯನ್ನು ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಬುಧವಾರ ಸಂಜೆ ಪತ್ನಿ ಮೃತಪಟ್ಟಿರುವುದಾಗಿ ಆಸ್ಪತ್ರೆಯವರು ತಿಳಿಸಿದರು. ಮಗಳ ಮೈಮೇಲಿನ ಬರೆಗಳು ಪಠ್ಯದ ಕೆಲಸಗಳನ್ನು ಸರಿಯಾಗಿ ಮಾಡದ ಕಾರಣ ನನ್ನ ಅಕ್ಕನ ಮಗ ಮಾಡಿರುವುದು. ಇದರಲ್ಲಿ ನನ್ನದೇನೂ ತಪ್ಪಿಲ್ಲ ಎಂದು ತಿಳಿಸಿದ್ದಾರೆ. ಸದ್ಯ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ದೊಡ್ಡಬಳ್ಳಾಪುರ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಇದನ್ನೂ ಓದಿ: ದೈಹಿಕ ಹಾಗೂ ಮಾನಸಿಕ ಅತ್ಯಾಚಾರಕ್ಕೆ ಕೊನೆ ಯಾವಾಗ?: ಶ್ರುತಿ

  • 6.5 ಕೋಟಿಗೆ ಮಾರಾಟವಾಯ್ತು ಡೋರ್ ಗಳಿಲ್ಲದ ಬಾತ್‍ರೂಂ ಇರೋ ಮನೆ..!

    6.5 ಕೋಟಿಗೆ ಮಾರಾಟವಾಯ್ತು ಡೋರ್ ಗಳಿಲ್ಲದ ಬಾತ್‍ರೂಂ ಇರೋ ಮನೆ..!

    ವಾಷಿಂಗ್ಟನ್: ನಾವು ಮನೆಗಳನ್ನು ನೋಡುವಾಗ ಶೌಚಾಯಲಯ ಹಾಗೂ ಪ್ರೈವೆಸಿಗೆ ಮೊದಲ ಆದ್ಯತೆ ನೀಡುತ್ತೇವೆ. ಆದರೆ ಇಲ್ಲೊಂದು ಮನೆಯ ಶೌಚಾಲಯಕ್ಕೆ ಬಾಗಿಲೇ ಇಲ್ಲ. ಆದರೂ ಈ ಮನೆ ಬರೋಬ್ಬರಿ 6.5 ಕೋಟಿ ರೂ.ಗೆ ಮಾರಾಟವಾಗಿದೆ.

    ಅಮೆರಿಕದ ಬೋಸ್ಟನ್‍ನಲ್ಲಿರುವ ಈ ಮನೆಯ ಶೌಚಾಲಯಕ್ಕೆ ಬಾಗಿಲು ಹಾಗೂ ಗೋಡೆಗಳೇ ಇಲ್ಲ. ಕೇವಲ ಗಾಜುಗಳನ್ನು ಮಾತ್ರ ಇರಿಸಲಾಗಿದೆ. ಆದರೂ ಈ ಮನೆ ಬರೋಬ್ಬರಿ 6.5 ಕೋಟಿ ರೂ.ಗೆ ಮಾರಾಟವಾಗಿದೆ. 3 ಅಂತಸ್ತಿನ ಮನೆ ಇದಾಗಿದ್ದು, ನಾಲ್ಕು ಬೆಡ್ ರೂಮ್ ಹೊಂದಿದೆ. ಅಲ್ಲದೆ ಮನೆಯಲ್ಲಿ 3 ಬಾತ್‍ರೂಂಗಳಿವೆ. ಹಲವು ಬಾಲ್ಕನಿ, ಕಟ್ಟಿಗೆಯಿಂದ ಮಾಡಿದ ಫ್ಲೋರ್ ಹೊಂದಿದೆ. ಸುಮಾರು 2,001 ಚ.ಅಡಿಯ ದೊಡ್ಡದಾದ ಪಾರ್ಕಿಂಗ್ ಜಾಗವನ್ನು ಹೊಂದಿದೆ.

    ಆರಂಭದಲ್ಲಿ ಹೊರಗಿನಿಂದ ನೋಡಿದಾಗ ಇತರೆ ಮನೆಗಳಂತೇ ಕಾಣುತ್ತದೆ. ಆದರೆ ಮನೆಯೊಳಗೆ ನೋಡಿದರೆ ಶೌಚಾಲಯಗಳಿಗೆ ಬಾಗಿಲು ಹಾಗೂ ಗೋಡೆಗಳೇ ಇಲ್ಲ. ಈ ಶೌಚಾಲಯದ ಮನೆಗೆ ಎಂಟ್ರಿ ಕೊಡುತ್ತಿದ್ದಂತೆ ಓಪನ್ ಸ್ಪೇಸ್‍ನ ಎಡಭಾಗದಲ್ಲೇ ಇದ್ದು, ಬಾಗಿಲು ಮಾತ್ರವಲ್ಲ, ಗೋಡೆಗಳೂ ಇಲ್ಲ. ಕೇವಲ ಗಾಜುಗಳನ್ನು ಮಾತ್ರ ಅಳವಡಿಸಲಾಗಿದೆ. ಬಾತ್‍ಗಳು ಅಧುನಿಕ ವಿನ್ಯಾಸಗಳನ್ನು ಹೊಂದಿದ್ದು, ವಾಕ್ ಇನ್ ಶವರ್, ಟಾಯ್ಲೆಟ್ ಹಾಗೂ ಸಿಂಕ್‍ನ್ನು ಒಳಗೊಂಡಿವೆ.

     

    View this post on Instagram

     

    A post shared by Zillow Gone Wild (@zillowgonewild)

    ಝಿಲ್ಲೋ ಗಾನ್ ವೈಲ್ಡ್ ಇನ್‍ಸ್ಟಾಗ್ರಾಮ್‍ನಲ್ಲಿ ಈ ಚಿತ್ರಗಳನ್ನು ಹಂಚಿಕೊಂಡಿದ್ದು, ರಿಯಲ್ ಎಸ್ಟೇಟ್ ವೆಬ್‍ಸೈಟ್ ಝಿಲ್ಲಾದಲ್ಲಿ ಈ ಫೋಟೋಗಳನ್ನು ಹಾಕಲಾಗಿದೆ. ಇದೀಗ ಈ ಫೋಟೋಗಳು ಸಖತ್ ವೈರಲ್ ಆಗಿವೆ.

  • ಕೊರೊನಾ ಎಫೆಕ್ಟ್ – ಕ್ರಿಸ್‍ಮಸ್ ಆಚರಣೆಗೆ ಸರ್ಕಾರದ ಹೊಸ ರೂಲ್ಸ್

    ಕೊರೊನಾ ಎಫೆಕ್ಟ್ – ಕ್ರಿಸ್‍ಮಸ್ ಆಚರಣೆಗೆ ಸರ್ಕಾರದ ಹೊಸ ರೂಲ್ಸ್

    – ಅತಿಥಿಗಳು ಮನೆಯೊಳಗೆ ಬರುವಂತಿಲ್ಲ

    ಬ್ರಸೆಲ್: ಅತಿಥಿಗಳು ಕ್ರಿಸ್‍ಮಸ್ ಆಚರಣೆಗೆ ಮನೆಗೆ ಬರಬಹುದು. ಆದರೆ ಬಾತ್ ರೂಮ್ ಬಳಸೋಕೆ ಒಬ್ಬರಿಗೆ ಮಾತ್ರ ಅವಕಾಶ ಎಂದು ಬ್ರೆಸೆಲ್ಸ್ ಸರ್ಕಾರ ಹೊಸ ರೂಲ್ಸ್ ಮಾಡಿದೆ.

    ಬೆಲ್ಜಿಯಂನಲ್ಲಿ ಕೊರೊನಾ ಸೋಂಕು ಪ್ರಮಾಣ ಹೆಚ್ಚುತ್ತಿರುವ ಹಿನ್ನೆಲೆ ಲಾಕ್‍ಡೌನ್ ಜಾರಿಗೊಳಿಸಿದೆ. ಈ ಸಮಯದಲ್ಲಿ ಕ್ರಿಸ್‍ಮಸ್ ಬಂದಿರುವುದರಿಂದ ಹಬ್ಬದ ಆಚರಣೆಗೆ ಅನುಮತಿ ನೀಡಿ ಸರ್ಕಾರ ಇಂತಹ ವಿಚಿತ್ರ ರೂಲ್ಸ್‍ವೊಂದನ್ನು ಹಾಕಿದೆ.

    ಕ್ರಿಸ್‍ಮಸ್ ಆಚರಣೆಗೆ ಬಂದಿರುವ ಅತಿಥಿಗಳು ಯಾರು ಮನೆ ಒಳಗೂ ಬರುವಂತಿಲ್ಲ. ಮನೆಯ ಹೊರಗೆ ಪಾರ್ಟಿ ಮಾಡಬೇಕು. ಪಾರ್ಟಿಯಲ್ಲಿ ನಾಲ್ಕಕ್ಕಿಂತ ಹೆಚ್ಚು ಜನರು ಸೇರುವಂತಿಲ್ಲ. ಬಂದಿರುವ ಅತಿಥಿಗಳಲ್ಲಿ ಒಬ್ಬರಿಗೆ ಮಾತ್ರ ಮನೆ ಒಳಗೆ ಹೋಗಲು ಅವಕಾಶ ಇರುತ್ತದೆ. ಆ ಒಬ್ಬ ಅತಿಥಿಗೆ ಮಾತ್ರ ಮನೆಯ ಬಾತ್‍ರೂಮ್ ಬಳಸಲು ಅವಕಾಶ ಇರುತ್ತದೆ ಎಂದು ವಿಚಿತ್ರ ನಿಯಮವನ್ನು ಹಾಕುವ ಮೂಲಕವಾಗಿ ಹಬ್ಬದ ಸೆಲೆಬ್ರೆಷನ್‍ಗೆ ಅನುಮತಿ ನೀಡಿದೆ.

    ಕ್ರಿಸ್‍ಮಸ್ ಆಚರಣೆಗೆ ಅಗತ್ಯ ಇರುವ ಸರಕು ಅಂಗಡಿಗಳನ್ನು ತೆರೆಯಲು ಅನುಮತಿ ನೀಡಲಾಗಿದೆ. ಮಾಸ್ಕ್, ಸ್ಯಾನಿಟೈಸರ್ ಬಳಕೆ ಕಡ್ಡಾಯವಾಗಿದೆ. ಜನರು ಗುಂಪು ಸೇರುವಂತಿಲ್ಲ.ನೆವೆಂಬರ್ ನಿಂದ ಎರಡನೇ ಹಂತದ ಲಾಕ್‍ಡೌನ್ ಜಾರಿಯಾಗಿದೆ ಇದು ಫೆಬ್ರವರಿವರೆಗೂ ಜಾರಿಯಲ್ಲಿರಲಿದೆ ಎಂದು ಬ್ರಸೆಲ್‍ನ ಸರ್ಕಾರಿ ಅಧಿಕಾರಿಗಳು ತಿಳಿಸಿದ್ದಾರೆ.

  • ಬಾತ್‍ರೂಮಿನಲ್ಲಿ ಕುಸಿದು ಬಿದ್ದು ಆಸ್ಟ್ರೇಲಿಯಾದಲ್ಲಿ ವ್ಯಾಸಂಗ ಮಾಡ್ತಿದ್ದ ವಿದ್ಯಾರ್ಥಿ ಸಾವು

    ಬಾತ್‍ರೂಮಿನಲ್ಲಿ ಕುಸಿದು ಬಿದ್ದು ಆಸ್ಟ್ರೇಲಿಯಾದಲ್ಲಿ ವ್ಯಾಸಂಗ ಮಾಡ್ತಿದ್ದ ವಿದ್ಯಾರ್ಥಿ ಸಾವು

    – ಸಾವಿಗೂ ಒಂದು ದಿನ ಮುನ್ನ ಪೋಷಕರಿಗೆ ಫೋನ್

    ಹೈದರಾಬಾದ್: ಆಸ್ಟ್ರೇಲಿಯಾದಲ್ಲಿ ವ್ಯಾಸಂಗ ಮಾಡುತ್ತಿದ್ದ ತೆಲಂಗಾಣದ ವಿಕರಾಬಾದ್ ಜಿಲ್ಲೆಯ ವಿದ್ಯಾರ್ಥಿಯೊಬ್ಬ ಸೋಮವಾರ ರಾತ್ರಿ ಅನುಮಾನಾಸ್ಪದವಾಗಿ ಬಾತ್‍ರೂಮಿನಲ್ಲಿ ಕುಸಿದು ಬಿದ್ದು ಮೃತಪಟ್ಟಿದ್ದಾನೆ.

    ಮೃತ ವಿದ್ಯಾರ್ಥಿಯನ್ನು ಧಾರೂರು ಮಂಡಲದ ಹರಿದಾಸ್ಪಲ್ಲಿ ಗ್ರಾಮದ ನಿವಾಸಿ ಹರಿ ಶಿವಶಂಕರ್ ರೆಡ್ಡಿ (22) ಎಂದು ಗುರುತಿಸಲಾಗಿದೆ. ಹರಿ ಬಾತ್‍ರೂಮಿನಲ್ಲಿ ಪ್ರಜ್ಞಾಹೀನ ಸ್ಥಿತಿಯಲ್ಲಿ ಬಿದ್ದಿದ್ದು, ಅದನ್ನು ನೋಡಿದ ಆತನ ಸಹಪಾಠಿಗಳು ಆತನನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಿ ದಾಖಲಿಸಿದ್ದಾರೆ. ಆದರೆ ಅಷ್ಟರಲ್ಲಿಯೇ ಹರಿ ಮೃತಪಟ್ಟಿದ್ದನು.

    ಹರಿ ಲಿಸ್ಮೋರ್‌ನ ದಕ್ಷಿಣದ ಕ್ರಾಸ್ ವಿಶ್ವವಿದ್ಯಾಲಯದಲ್ಲಿ ಎಂಎಸ್ ವ್ಯಾಸಂಗ ಮಾಡುತ್ತಿದ್ದನು. ನಾಗೇಂದ್ರಮ್ಮ ಮತ್ತು ಸಾಯಿ ರೆಡ್ಡಿಯ ಪುತ್ರನಾಗಿದ್ದು, ಒಬ್ಬನೇ ಮಗ ಎಂದು ತಿಳಿದುಬಂದಿದೆ.

    ಹರಿ ಸ್ನೇಹಿತರು ಸೋಮವಾರ ರಾತ್ರಿ 10.45ಕ್ಕೆ ಫೋನ್ ಮಾಡಿದ್ದರು. ಆಗ ಹರಿ ಬಾತ್‍ರೂಮಿನಲ್ಲಿ ಕುಸಿದು ಬಿದ್ದಿದ್ದಾನೆ. ಆಸ್ಪತ್ರೆಗೆ ಕರೆದುಕೊಂಡು ಹೋಗುತ್ತಿದ್ದೇವೆ ಅಂತ ಹೇಳಿದ್ದರು. ಆದರೆ ಸ್ವಲ್ಪ ಸಮಯದ ನಂತರ ಆಸ್ಪತ್ರೆಯ ಅಧಿಕಾರಿಗಳು ಫೋನ್ ಮಾಡಿ ಹರಿ ಮೃತಪಟ್ಟಿದ್ದಾನೆ ಅಂತ ಹೇಳಿರುವುದಾಗಿ ಕುಟುಂಬದವರು ತಿಳಿಸಿದ್ದಾರೆ.

    ನಮ್ಮ ಮಗನ ಸ್ನೇಹಿತರು ಫೋನ್ ಮಾಡಿ ಸಾವಿನ ಬಗ್ಗೆ ನಮಗೆ ಮಾಹಿತಿ ನೀಡಿದರು. ಬೆಳಗ್ಗೆಯಿಂದ ಹರಿ ತಲೆನೋವಿನಿಂದ ಬಳಲುತ್ತಿದ್ದನು. ಆದರೆ ಸ್ನಾನ ಮಾಡಲು ಹೋದಾಗ ಕುಸಿದು ಬಿದ್ದಿದ್ದಾನೆ ಎಂದು ಹೇಳಿದರು. ನಂತರ ಅವರು ಅಂಬುಲೆನ್ಸ್‌ಗೆ ಫೋನ್ ಮಾಡಿ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದರು ಎಂದು ಹರಿ ತಂದೆ ಸಾಯಿ ರೆಡ್ಡಿ ತಿಳಿಸಿದರು.

    ಹರಿ ಸಾವಿಗೂ ಒಂದು ದಿನ ಮುಂಚಿತವಾಗಿ ನಮಗೆ ಫೋನ್ ಮಾಡಿ ಮಾತನಾಡಿದ್ದನು. ಈ ವೇಳೆ ನಮ್ಮ ಯೋಗಕ್ಷೇಮದ ಬಗ್ಗೆ ವಿಚಾರಿಸಿದ್ದನು. ಆದರೆ ತನ್ನ ಆರೋಗ್ಯದ ಬಗ್ಗೆ ಏನನ್ನೂ ಹೇಳಿಕೊಂಡಿಲ್ಲ ಎಂದು ತಾಯಿ ನಾಗೇಂದ್ರಮ್ಮ ಹೇಳಿದರು. ಸದ್ಯಕ್ಕೆ ಹರಿ ಮೃತದೇಹವನ್ನು ತಮ್ಮ ನಿವಾಸಕ್ಕೆ ತರಲು ಸಹಾಯ ಮಾಡಬೇಕೆಂದು ಕುಟುಂಬದವರು ತೆಲಂಗಾಣ ಸರ್ಕಾರದ ಬಳಿ ಮನವಿ ಮಾಡಿಕೊಂಡಿದ್ದಾರೆ.

  • ತಮ್ಮ ನಿವಾಸದ ಬಾತ್‍ರೂಮಿನಲ್ಲೇ ಖ್ಯಾತ ಫ್ಯಾಷನ್ ಡಿಸೈನರ್ ಮೃತದೇಹ ಪತ್ತೆ

    ತಮ್ಮ ನಿವಾಸದ ಬಾತ್‍ರೂಮಿನಲ್ಲೇ ಖ್ಯಾತ ಫ್ಯಾಷನ್ ಡಿಸೈನರ್ ಮೃತದೇಹ ಪತ್ತೆ

    – ವಿಶೇಷವಾಗಿ ಪುರುಷರ ಉಡುಪನ್ನು ತಯಾರಿಸುತ್ತಿದ್ರು

    ಕೋಲ್ಕತ್ತಾ: ಖ್ಯಾತ ಫ್ಯಾಷನ್ ಡಿಸೈನರ್ ಶರ್ಬಾರಿ ದತ್ತಾ (63) ಮೃತದೇಹ ಅವರ ಮನೆಯಲ್ಲಿನ ಬಾತ್‍ರೂಮಿನಲ್ಲಿಯೇ ಪತ್ತೆಯಾಗಿದೆ.

    ಕೋಲ್ಕತ್ತಾದ ಬೋರ್ಡ್ ಸ್ಟ್ರೀಟ್‍ನಲ್ಲಿರುವ ನಿವಾಸದ ಬಾತ್‍ರೂಮಿನಲ್ಲಿ ಶರ್ಬಾರಿ ದತ್ತಾ ಶವವಾಗಿ ಪತ್ತೆಯಾಗಿದ್ದಾರೆ. ಇಂದು ಮಧ್ಯಾಹ್ನ ಸುಮಾರು 12.25ಕ್ಕೆ ಪತ್ತೆಯಾಗಿದ್ದು, ಸದ್ಯಕ್ಕೆ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಲಾಗಿದೆ. ಹೀಗಾಗಿ ಮರಣೋತ್ತರ ವರದಿಯ ನಂತರವೇ ಶರ್ಬಾರಿ ದತ್ತಾ ಸಾವಿಗೆ ನಿಖರ ಕಾರಣ ತಿಳಿದು ಬರುತ್ತದೆ.

    ಈ ಬಗ್ಗೆ ಮಾಹಿತಿ ಪಡೆದ ನಂತರ ಕೋಲ್ಕತಾ ಪೊಲೀಸರು ಮತ್ತು ಸ್ಥಳೀಯ ಪೊಲೀಸ್ ಠಾಣೆಯ ಅಧಿಕಾರಿಗಳು ಸ್ಥಳಕ್ಕೆ ಹೋಗಿದ್ದಾರೆ. ಶರ್ಬಾರಿ ದತ್ತಾ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ. ಆದರೆ ಯಾವುದೇ ಕಾಯಿಲೆಗಳಿಂದ ಬಳಲುತ್ತಿರಲಿಲ್ಲ ಎಂದು ಶರ್ಬಾರಿ ದತ್ತಾ ಕುಟುಂಬ ಸದಸ್ಯರು ತಿಳಿಸಿದ್ದಾರೆ.

    ಶರ್ಬಾರಿ ದತ್ತಾ ಬಂಗಾಳಿ ಕವಿ ಅಜಿತ್ ದತ್ತಾ ಅವರ ಪುತ್ರಿಯಾಗಿದ್ದು, ಪ್ರೆಸಿಡೆನ್ಸಿ ಕಾಲೇಜಿನಿಂದ ಪದವಿ ಪಡೆದಿದ್ದರು. ನಂತರ ಕೋಲ್ಕತ್ತಾ ವಿಶ್ವವಿದ್ಯಾಲಯದಿಂದ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಶರ್ಬಾರಿ ದತ್ತಾ ವಿದ್ಯಾರ್ಥಿಯಾಗಿದ್ದಾಗ ಅನೇಕ ನೃತ್ಯ, ನಾಟಕಗಳಲ್ಲಿ ಭಾಗವಹಿಸಿದ್ದರು. ಬಳಿಕ ದತ್ತಾ ಫ್ಯಾಷನ್ ಉದ್ಯಮದಲ್ಲಿ ಅದರಲ್ಲೂ ವಿಶೇಷವಾಗಿ ಪುರುಷರ ಉಡುಪುಗಳ ತಯಾರಿಸುವ ಮೂಲಕ ಜನಪ್ರಿಯತೆ ಗಳಿಸಿದ್ದರು.

    ದತ್ತಾ ಅವರು ಬಣ್ಣ ಬಣ್ಣದ ಬಂಗಾಳಿ ಧೋತಿಗಳು ಮತ್ತು ಡಿಸೈನರ್ ಪಂಜಾಬಿ ಕುರ್ತಾಗಳನ್ನು ಕಸೂತಿಯೊಂದಿಗೆ ತಯಾರಿಸುತ್ತಿದ್ದರು. ಇವರು ತಯಾರಿಸಿದ್ದ ಉಡುಪನ್ನು ಪಾಕಿಸ್ತಾನದ ಪ್ರಧಾನಿ ಇಮ್ರಾನ್ ಖಾನ್, ಸಚಿನ್ ತೆಂಡೂಲ್ಕರ್ ಸೇರಿದಂತೆ ಇನ್ನೂ ಅನೇಕ ಪ್ರಸಿದ್ಧ ವ್ಯಕ್ತಿಗಳನ್ನು ಧರಿಸಿದ್ದರು.

    ಶರ್ಬಾರಿ ದತ್ತಾ ನಿಧನದ ನಂತರ ಸೋಶಿಯಲ್ ಮೀಡಿಯಾದಲ್ಲಿ ಗಾಯಕರು, ನಟ-ನಟಿಯರು, ನಿರ್ದೇಶಕರು ಮತ್ತು ಅಭಿಮಾನಿಗಳು ಸೇರಿದಂತೆ ಅನೇಕರು ಸಂತಾಪ ಸೂಚಿಸುತ್ತಿದ್ದಾರೆ.