Tag: bathroom

  • ಕ್ವಾರಂಟೈನ್‍ನಲ್ಲಿದ್ದ ವ್ಯಕ್ತಿ ಆಸ್ಪತ್ರೆ ಬಾತ್ ರೂಂನಲ್ಲಿ ನೇಣಿಗೆ ಶರಣು

    ಕ್ವಾರಂಟೈನ್‍ನಲ್ಲಿದ್ದ ವ್ಯಕ್ತಿ ಆಸ್ಪತ್ರೆ ಬಾತ್ ರೂಂನಲ್ಲಿ ನೇಣಿಗೆ ಶರಣು

    ದಾವಣಗೆರೆ: ಕ್ವಾರಂಟೈನ್‍ನಲ್ಲಿದ್ದ ವ್ಯಕ್ತಿ ಆಸ್ಪತ್ರೆಯ ಬಾತ್ ರೂಮಿನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ದಾವಣಗೆರೆ ಜಿಲ್ಲಾಸ್ಪತ್ರೆಯಲ್ಲಿ ನಡೆದಿದೆ.

    ಆತ್ಮಹತ್ಯೆ ಮಾಡಿಕೊಂಡ ದಾವಣಗೆರೆಯ ಬಸಾಪುರ ನಿವಾಸಿ ಕಂಟೈನ್ಮೆಂಟ್ ಏರಿಯಾದಲ್ಲಿ ವಾಸಿಸುತ್ತಿದ್ದರು. ಇವರಿಗೆ ಕೆಮ್ಮು ಜ್ವರದಂತಹ ಲಘು ಕೊರೊನಾ ಲಕ್ಷಣಗಳು ಕಾಣಿಸಿಕೊಂಡಿದ್ದವು.

    ಕೊರೊನಾ ಲಕ್ಷಣ ಕಾಣಿಸಿಕೊಂಡ ವ್ಯಕ್ತಿಯನ್ನು ಮುನ್ನೆಚ್ಚರಿಕಾ ಕ್ರಮವಾಗಿ ದಾವಣಗೆರೆಯ ಜಿಲ್ಲಾಸ್ಪತ್ರೆಯಲ್ಲಿ ಕ್ವಾರಂಟೈನ್ ಮಾಡಲಾಗಿತ್ತು. ಜೊತೆಗೆ ಮೇ 20ರಂದು ಗಂಟಲು ದ್ರವವನ್ನು ಸಂಗ್ರಹಿಸಿ ಪ್ರಯೋಗಾಲಯಕ್ಕೆ ಕಳುಹಿಸಲಾಗಿತ್ತು. ಆದರೆ ವರದಿ ಬರವುದಕ್ಕೂ ಮುನ್ನವೇ ಇಂದು ಬೆಳಗ್ಗೆ 7.30ರ ಸುಮಾರಿಗೆ ಆಸ್ಪತ್ರೆಯ ಬಾತ್ ರೊಂನಲ್ಲಿ ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡು ಸಾವನ್ನಪ್ಪಿದ್ದಾರೆ.

    ಈ ಸಂಬಂಧ ದಾವಣಗೆರೆ ಬಡಾವಣೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹನುಮಂತರಾಯ ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ. ಆತ ಕೊರೊನಾ ಬಂದರೆ ನನ್ನ ಕ್ವಾರಂಟೈನ್ ಮಾಡುತ್ತಾರೆ ಎಂಬ ಭಯದಿಂದ ಈ ರೀತಿ ಮಾಡಿಕೊಂಡಿರಬಹುದು ಎಂದು ಶಂಕಿಸಲಾಗಿದೆ.

  • 2 ದಿನದ ಹಿಂದೆ ಮದ್ವೆಯಾಗಿದ್ದ ನವವಿವಾಹಿತೆ ಆತ್ಮಹತ್ಯೆ

    2 ದಿನದ ಹಿಂದೆ ಮದ್ವೆಯಾಗಿದ್ದ ನವವಿವಾಹಿತೆ ಆತ್ಮಹತ್ಯೆ

    ಗದಗ: ಎರಡು ದಿನಗಳ ಹಿಂದೆಯಷ್ಟೇ ಮದುವೆಯಾಗಿದ್ದ ನವ ವಿವಾಹಿತೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಿಲ್ಲೆಯಲ್ಲಿ ನಡೆದಿದೆ.

    ನಗರದ ಮಸಾರಿ ಭಾಗದ ನಂದೀಶ್ವರಮಠ ಬಳಿ ಇರುವ ಮನೆಯಲ್ಲಿ ಈ ಘಟನೆ ನಡೆದಿದೆ. 21 ವರ್ಷದ ಧನಲಕ್ಷ್ಮೀ ನವಲಿ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

    ಲಾಕ್‍ಡೌನ್ ಮುನ್ನವೇ ಧನಲಕ್ಷೀ ಮದುವೆ ನಿಶ್ಚಯವಾಗಿತ್ತು. ಆದರೆ ಕುಟುಂಬದವರು ಮದುವೆ ಮುಂದೂಡುವುದು ಬೇಡ ಎಂದು ಲಕ್ಷ್ಮೇಶ್ವರ ಪಟ್ಟಣದಲ್ಲಿ ಸರಳವಾಗಿ ಮದುವೆ ಮಾಡಿದ್ದಾರೆ.

    ಮನೆಯಲ್ಲಿ ಸಂಬಂಧಿಗಳು ಇದ್ದರೂ ಸಹ ಸ್ನಾನಮಾಡಿ ಬರುವುದಾಗಿ ಹೇಳಿ ಬಾತ್‍ರೂಮ್ ಹೋಗಿದ್ದಾಳೆ. ಸುಮಾರು ಎರಡು ಗಂಟೆಯಾದರೂ ಧನಲಕ್ಷೀ ಬಂದಿಲ್ಲ. ನಂತರ ಮನೆಯವರು ಹೋಗಿ ನೋಡಿದ್ದಾರೆ. ಅಷ್ಟರಲ್ಲಿ ಧನಲಕ್ಷೀ ಬಾತ್‍ರೂಮ್ ಲಾಕ್‍ಮಾಡಿಕೊಂಡು ಒಳಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಕುಟುಂಬದವರ ಆಕ್ರಂದನ ಮುಗಿಲು ಮುಟ್ಟಿದೆ.

    ಸ್ಥಳಕ್ಕೆ ಬಡಾವಣೆ ಪೊಲೀಸರು ಹಾಗೂ ಗದಗ ತಹಶೀಲ್ದಾರ್ ಶ್ರೀನಿವಾಸ ಭೇಟಿ ಪರಿಶೀಲನೆ ನಡೆಸಿದ್ದಾರೆ. ಈ ಕುರಿತು ಗದಗನ ಬೆಟಗೇರಿ ಬಡಾವಣೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಧನಲಕ್ಷ್ಮೀ ಸಾವಿಗೆ ಇನ್ನೂ ನಿಖರ ಕಾರಣ ತಿಳಿದುಬಂದಿಲ್ಲ. ಪೊಲೀಸರ ತನಿಖೆ ನಂತರವಷ್ಟೇ ಸತ್ಯಾಸತ್ಯತೆ ಹೊರಬಿಳ್ಳಲಿದೆ.

  • ಕೊರೊನಾ ಎಫೆಕ್ಟ್- ಪತ್ನಿಯನ್ನ ಬಾತ್‍ರೂಮಿನಲ್ಲಿ ಲಾಕ್ ಮಾಡಿದ ಪತಿ

    ಕೊರೊನಾ ಎಫೆಕ್ಟ್- ಪತ್ನಿಯನ್ನ ಬಾತ್‍ರೂಮಿನಲ್ಲಿ ಲಾಕ್ ಮಾಡಿದ ಪತಿ

    – ಪೊಲೀಸರಿಗೆ ಫೋನ್ ಮಾಡಿದ ಹೆಂಡ್ತಿ

    ವಿಲ್ನಿಯಸ್: ದೇಶಾದ್ಯಂತ ಕೊರೊನಾ ವೈರಸ್ ಭೀತಿ ಶುರುವಾಗಿದ್ದು, ಇದೇ ಭಯದಿಂದ ಪತಿಯೊಬ್ಬ ತನ್ನ ಪತ್ನಿಗೆ ಕೊರೊನಾ ವೈರಸ್ ಬಂದಿರಬಹುದು ಎಂಬ ಅನುಮಾನದಿಂದ ಬಾತ್‍ರೂಮಿನಲ್ಲಿ ಕೂಡಿ ಹಾಕಿ ಬೀಗ ಹಾಕಿದ್ದ ಘಟನೆ ಯೂರೋಪ್‍ನ ಲಿಥುವೇನಿಯದಲ್ಲಿ ನಡೆದಿದೆ.

    ಪತ್ನಿ ಚೀನಾದ ಮಹಿಳೆಯೊಬ್ಬರನ್ನು ಭೇಟಿಯಾಗಿ ಇಟಲಿಯಿಂದ ಆಗಮಿಸಿದ್ದಳು. ಹೀಗಾಗಿ ಪತ್ನಿಗೆ ಕೊರೊನಾ ವೈರಸ್ ಬಂದಿರಬಹುದು ಎಂದು ಆಕೆಯನ್ನು ಬಾತ್‍ರೂಮಿನಲ್ಲಿ ಕೂಡಿ ಹಾಕಿದ್ದನು. ಇತ್ತ ಪತ್ನಿ ಪೊಲೀಸರಿಗೆ ಫೋನ್ ಮಾಡಿ ಮಾಹಿತಿ ತಿಳಿಸಿದ್ದಾಳೆ. ಮಾಹಿತಿ ತಿಳಿದು ಪೊಲೀಸರು ಅವರಿದ್ದ ಅಪಾರ್ಟ್ ಮೆಂಟ್‍ಗೆ ಬಂದು ಮಹಿಳೆಯನ್ನು ರಕ್ಷಿಸಿದ್ದಾರೆ.

    ಕೊರೊನಾ ವೈರಸ್ ಸೋಂಕನ್ನು ಹೇಗೆ ತಪ್ಪಿಸಬೇಕು ಎಂಬ ಬಗ್ಗೆ ವೈದ್ಯರೊಂದಿಗೆ ಫೋನ್‍ನಲ್ಲಿ ಮಾತನಾಡಿದ ನಂತರ ಪತ್ನಿಯನ್ನು ಬಾತ್‍ರೂಮಿನಲ್ಲಿ ಕೂಡಿಹಾಕಿದ್ದಾನೆ. ಬಾತ್‍ರೂಮಿನಲ್ಲಿ ಕೂಡಿ ಹಾಕಿದ್ದರೂ ಪತ್ನಿ ದೂರು ನೀಡಲಿಲ್ಲ. ಹೀಗಾಗಿ ಆತನನ್ನು ಬಂಧಿಸಿಲ್ಲ ಎಂದು ಸ್ಥಳೀಯ ಪೊಲೀಸರು ತಿಳಿಸಿದ್ದಾರೆ.

    ಮಹಿಳೆಯನ್ನ ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗಿದ್ದು, ವರದಿಯಲ್ಲಿ ಕೊರೊನಾ ವೈರಸ್ ಇಲ್ಲ ಎಂಬುದು ತಿಳಿದುಬಂದಿದೆ. ಚೀನಾದ ನಗರವಾದ ವುಹಾನ್‍ನಲ್ಲಿ ಜನವರಿಯಲ್ಲಿ ಈ ವೈರಸ್ ಪತ್ತೆಯಾಗಿತ್ತು. ಇದರಿಂದ ಚೀನಾದಲ್ಲಿ ಸಾವಿರಾರು ಬಂದಿ ಮೃತಪಟ್ಟಿದ್ದಾರೆ. ನಂತರ ಚೀನಾದಿಂದ ಬೇರೆ ಬೇರೆ ದೇಶಗಳಿಗೂ ಕೊರೊನಾ ವೈರಸ್ ಹಬ್ಬಿದೆ. ಈ ಭಯಂಕರ ವೈರಸ್ ನಿಂದ ದೇಶಾದ್ಯಂತ ಜನರು ಭಯಭೀತರಾಗಿದ್ದಾರೆ.

  • 6 ವರ್ಷದ ಬಾಲಕಿಯನ್ನು ಬಾತ್‍ರೂಮಿನಲ್ಲಿ ಅತ್ಯಾಚಾರಗೈದ 19ರ ಯುವಕ

    6 ವರ್ಷದ ಬಾಲಕಿಯನ್ನು ಬಾತ್‍ರೂಮಿನಲ್ಲಿ ಅತ್ಯಾಚಾರಗೈದ 19ರ ಯುವಕ

    ಕೋಲ್ಕತ್ತಾ: 6 ವರ್ಷದ ಬಾಲಕಿಯನ್ನು 19 ವರ್ಷದ ಯುವಕನೋರ್ವ ಬಾತ್‍ರೂಮಿನಲ್ಲಿ ಕೂಡಿಹಾಕಿ ಅತ್ಯಾಚಾರ ಮಾಡಿರುವ ಘಟನೆ ಕೋಲ್ಕತ್ತಾದಲ್ಲಿ ನಡೆದಿದೆ.

    ಈ ಘಟನೆ ಗುರುವಾರ ನಡೆದಿದ್ದು, ಕೋಲ್ಕತ್ತಾದ ತಾರತಾಲ ರಸ್ತೆಯಲ್ಲಿರುವ ಕಟ್ಟಡದ ಮೊದಲ ಮಹಡಿಯಲ್ಲಿ ಬಾತ್‍ರೂಮ್ ಒಳಗೆ ಕೂಡಿಹಾಕಿಕೊಂಡು ಬಾಲಕಿಯ ಮೇಲೆ ಅತ್ಯಾಚಾರ ಮಾಡಿದ್ದಾನೆ. ಅತ್ಯಾಚಾರ ಮಾಡಿದ 19 ವರ್ಷದ ಯುವಕನನ್ನು ಅರೆಸ್ಟ್ ಮಾಡಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.

    ಯುವಕ ಬಾಲಕಿಯ ನೆರೆ ಮನೆಯವನಾಗಿದ್ದು, ಬಾಲಕಿಯನ್ನು ಕರೆದುಕೊಂಡು ಹೋಗಿ ಈ ರೀತಿ ಅತ್ಯಾಚಾರ ಮಾಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಬಾಲಕಿಯು ಮನೆಗೆ ಬಂದು ಈ ವಿಚಾರವನ್ನು ತನ್ನ ತಾಯಿಗೆ ಹೇಳಿದೆ ನಂತರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ತಾಯಿ ನೀಡಿದ ದೂರಿನ ಮೇರೆಗೆ ನಾವು ಆರೋಪಿಯನ್ನು ಅರೆಸ್ಟ್ ಮಾಡಿದ್ದೇವೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಹೇಳಿದ್ದಾರೆ.

    ಈಗ ಆರೋಪಿಯನ್ನು ನಾವು ವಶಕ್ಕೆ ಪಡೆದಿದ್ದು, ಬಾಲಕಿಯ ವೈದ್ಯಕೀಯ ವರದಿಗಾಗಿ ಕಾಯುತ್ತಿದ್ದೇವೆ. ವರದಿ ಬಂದ ನಂತರ ಮುಂದಿನ ತನಿಖೆಯನ್ನು ಆರಂಭ ಮಾಡುತ್ತೇವೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

  • ಬಾತ್ ರೂಂನಲ್ಲಿ ಮೊಸಳೆ ಕಂಡು ದಂಗಾದ ಮನೆ ಮಾಲೀಕ- ವಿಡಿಯೋ ನೋಡಿ

    ಬಾತ್ ರೂಂನಲ್ಲಿ ಮೊಸಳೆ ಕಂಡು ದಂಗಾದ ಮನೆ ಮಾಲೀಕ- ವಿಡಿಯೋ ನೋಡಿ

    ಗಾಂಧಿನಗರ: ಆಸ್ಟ್ರೇಲಿಯಾದ ಅನೇಕ ಕಡೆಯ ಮನೆಗಳಲ್ಲಿ ಅಪಾಯಕಾರಿ ಸರಿಸೃಪಗಳು ಬರುವುದು ಹೊಸದೆನಲ್ಲ. ಆದರೆ ನಮ್ಮ ದೇಶದಲ್ಲಿ ಮನೆಯ ಒಳಗೆ ಮೊಸಳೆಗಳು ಕಾಣಿಸಿಕೊಳ್ಳವುದು ಅಪರೂಪ. ಆದರೆ ಗುಜರಾತ್‌ನಲ್ಲಿ ಮನೆಯ ಬಾತ್ ರೂಂನಲ್ಲೇ ಮೊಸಳೆ ಕಾಣಿಸಿಕೊಳ್ಳುವ ಮೂಲಕ ಮಾಲೀಕನನ್ನು ಹೌಹಾರಿಸಿದೆ.

    ಗುಜರಾತಿನ ವಡೋದರಾ ನಿವಾಸಿ ಮಹೇಂದ್ರ ಪಡಿಯಾರ್ ಮಧ್ಯರಾತ್ರಿ ನಂತರ ತನ್ನ ಸ್ನಾನ ಗೃಹದಲ್ಲಿ ದೊಡ್ಡ ಶಬ್ದವಾಗಿದ್ದಕ್ಕೆ ಎಚ್ಚರವಾಗಿದ್ದಾರೆ. ಬೆಕ್ಕು ಇರಬಹುದು ಎಂದು ಬಾತ್ ರೂಂ ಬಾಗಿಲು ತೆರೆದಿದ್ದಾರೆ. ಬಾತ್ ರೂಂ ತೆರೆದ ತಕ್ಷಣ ಮೊಸಳೆ ಅವರನ್ನು ದಿಟ್ಟಿಸಿ ನೋಡುತ್ತಿರುವುದನ್ನು ಕಂಡು ಒಂದು ಕ್ಷಣ ನಿಬ್ಬೆರಗಾಗಿದ್ದಾರೆ.

    ಮಹೇಂದ್ರ ಅವರು ಈ ಕುರಿತು ಪ್ರತಿಕ್ರಿಯಿಸಿ, ಮೊಸಳೆ ನಾಲ್ಕು ಅಡಿ ಇತ್ತು, ಬಾತ್ ರೂಂ ಬಾಗಿಲು ತೆರೆಯುತ್ತಿದ್ದಂತೆ ಬಾಯಿ ತೆರೆದು ನನ್ನತ್ತ ನೋಡಿತು. ಆಗ ನನಗೆ ಆಘಾತವಾಯಿತು. ತಕ್ಷಣವೇ ವನ್ಯಜೀವಿ ರಕ್ಷಣಾ ಸಂಸ್ಥೆಗೆ ಕರೆ ಮಾಡಿದೆ. ಅವರು ನಸುಕಿನ ಜಾವ 2.45ಕ್ಕೆ ನಮ್ಮ ಮನೆಗೆ ಆಗಮಿಸಿದರು. ನಂತರ ಮೊಸಳೆಯನ್ನು ಹಿಡಿದುಕೊಂಡು ತೆರಳಿದರು ಎಂದು ವಿವರಿಸಿದ್ದಾರೆ. ಮೊಸಳೆಯನ್ನು ರಕ್ಷಿಸಿದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

    ವ್ಯನ್ಯಜೀವಿ ರಕ್ಷಣಾ ಸಂಸ್ಥೆಯ ಸದಸ್ಯ ಮಾತನಾಡಿ, ನಮಗೆ ಪಡಿಯಾರ್‌ನಿಂದ ಕರೆ ಬಂತು. ನಂತರ 2.45ಕ್ಕೆ ಸ್ಥಳ ತಲುಪಿದೆವು. ಕತ್ತಲಾಗಿದ್ದರಿಂದ ಸರಿಸೃಪವನ್ನು ರಕ್ಷಿಸುವುದು ಸ್ವಲ್ಪ ಕಷ್ಟವಾಯಿತು. ಅಲ್ಲದೆ ಮೊಸಳೆ ಆಕ್ರಮಣಕಾರಿಯಾಗಿತ್ತು ಎಂದು ತಿಳಿಸಿದರು.

    ಸತತ ಒಂದು ಗಂಟೆ ಕಾಲ ಕಾರ್ಯಾಚರಣೆ ನಡೆಸಿ, ಮೊಸಳೆಯನ್ನು ಮಹೇಂದ್ರ ಮನೆಯಿಂದ ರಕ್ಷಿಸಲಾಗಿದೆ. ವಿಶ್ವಮಿತ್ರಿ ನದಿಯಿಂದ ಈ ಮೊಸಳೆ ಬಂದಿರಬಹುದು ಎಂದು ಶಂಕಿಸಿದರು. ವಿಶ್ವಮಿತ್ರಿ ನದಿಯು ನೂರಾರು ಸರೀಸೃಪಗಳ ನೆಲೆಯಾಗಿದೆ. ಅವು ಆಗಾಗ ವಸತಿ ಪ್ರದೇಶಗಳಿಗೆ ನುಗ್ಗುತ್ತಿರುತ್ತವೆ.

    ಆಗಸ್ಟ್ ತಿಂಗಳಲ್ಲಿ ವಡೋದರಾದಲ್ಲಿ ಪ್ರವಾಹ ಸಂಭವಿಸಿದಾಗ, ಜಲಾವೃತವಾಗಿದ್ದ ಬೀದಿಯಲ್ಲಿ ಮೊಸಳೆಯೊಂದು ನಾಯಿಯ ಮೇಲೆ ದಾಳಿ ನಡೆಸಿತ್ತು. ಈ ವಿಡಿಯೋ ಸಾಮಾಜಿಕ ಜಾತಾಣಗಳಲ್ಲಿ ವೈರಲ್ ಆಗಿತ್ತು.

  • ವಿದ್ಯಾರ್ಥಿಗಳಿಂದಲೇ ಶೌಚಾಲಯ ಕ್ಲೀನ್- ಗ್ರಾಮಸ್ಥರ ಆಕ್ರೋಶ

    ವಿದ್ಯಾರ್ಥಿಗಳಿಂದಲೇ ಶೌಚಾಲಯ ಕ್ಲೀನ್- ಗ್ರಾಮಸ್ಥರ ಆಕ್ರೋಶ

    ಚಿಕ್ಕಬಳ್ಳಾಪುರ: ವಿದ್ಯಾರ್ಥಿಗಳು ಶಾಲೆಗೆ ಬರೋದು ಪಾಠ ಪ್ರವಚನ ಕೇಳೋಕಾ ಅಥವಾ ಶೌಚಾಲಯ ಕ್ಲೀನ್ ಮಾಡೋಕಾ ಎನ್ನುವ ಅನುಮಾನ ಶುರುವಾಗಿದೆ. ಯಾವುದೇ ಕ್ರಮ ಕೈಗೊಳ್ಳದೇ ವಿದ್ಯಾರ್ಥಿಗಳಿಂದಲೇ ಗಬ್ಬುನಾರುತ್ತಿರುವ ಶೌಚಾಲಯಗಳನ್ನು ಸ್ವಚ್ಛತೆ ಮಾಡಿಸಲಾಗಿದೆ.

    ಗಬ್ಬುನಾರುತ್ತಿದ್ದ ಶೌಚಾಲಯಗಳನ್ನು ವಿದ್ಯಾರ್ಥಿಗಳಿಂದಲೇ ಕ್ಲೀನ್ ಮಾಡಿಸಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆ ಗೌರಿಬಿದನೂರು ತಾಲೂಕು ನಗರಗೆರೆ ಸರ್ಕಾರಿ ಪ್ರೌಢಶಾಲೆಯಲ್ಲಿ ನಡೆದಿದೆ. ಶಾಲಾ ವಿದ್ಯಾರ್ಥಿಗಳಿದಂಲೇ ಶಿಕ್ಷಕರು ಕಸ ಕಡ್ಡಿಯಿಂದ ಗಬ್ಬು ನಾರುತ್ತಿರುವ ಶೌಚಾಲಯಗಳ ಸ್ವಚ್ಚತೆ ಮಾಡಿಸಿದ್ದು, ಇದನ್ನ ಸ್ಥಳೀಯರೊಬ್ಬರು ತಮ್ಮ ಮೊಬೈಲ್ ನಲ್ಲಿ ಸೆರೆ ಹಿಡಿದಿದ್ದಾರೆ.

    ಪೆನ್ನು ಪುಸ್ತಕ ಹಿಡಿಯಬೇಕಾದ ವಿದ್ಯಾರ್ಥಿಗಳು ಪೊರಕೆ ಹಿಡಿದು ಟಾಯ್ಲೆಟ್ ಕ್ಲೀನ್ ಮಾಡುತ್ತಿರುವ ವಿಡಿಯೋ ಸೋಶಿಯಲ್ ಮಿಡಿಯಾದಲ್ಲಿ ವೈರಲ್ ಆಗಿದ್ದು, ಶಿಕ್ಷಕರ ನಡೆ ವಿರುದ್ಧ ನೆಟ್ಟಿಗರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

    ವಿದ್ಯಾರ್ಥಿಗಳಿಂದ ಶೌಚಾಲಯಗಳನ್ನು ಕ್ಲೀನ್ ಮಾಡಿಸಿರೋದಲ್ಲದೆ ಯಾವುದೇ ಮುಂಜಾಗ್ರತ ಕ್ರಮಗಳನ್ನು ಕೈಗೊಂಡಿಲ್ಲ. ಸ್ವಚ್ಚತೆಗೆ ಬಳಸಬೇಕಾದ ಪರಿಕರಗಳನ್ನು ಬಳಸದೆ ಶಿಕ್ಷಕರ ವಿದ್ಯಾರ್ಥಿಗಳ ಆರೋಗ್ಯದ ಜೊತೆ ಚೆಲ್ಲಾಟ ಆಡಿದ್ದಾರೆ ಎಂದು ಅಕ್ರೋಶ ವ್ಯಕ್ತವಾಗಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಸಿಲಿಕಾನ್ ಸಿಟಿ ಮಹಿಳೆಯರೇ ಹುಷಾರ್- ಬಾತ್‍ರೂಂ ನಲ್ಲಿ ಕ್ಯಾಮೆರಾ ಇಟ್ಟ ಪಕ್ಕದ್ಮನೆ ಅಂಕಲ್

    ಸಿಲಿಕಾನ್ ಸಿಟಿ ಮಹಿಳೆಯರೇ ಹುಷಾರ್- ಬಾತ್‍ರೂಂ ನಲ್ಲಿ ಕ್ಯಾಮೆರಾ ಇಟ್ಟ ಪಕ್ಕದ್ಮನೆ ಅಂಕಲ್

    ಬೆಂಗಳೂರು: ಬಾತ್ ರೂಂನಲ್ಲಿ ಪಕ್ಕದ ಮನೆಯವನು ಸಿಕ್ರೇಟ್ ಕ್ಯಾಮೆರಾ ಇಟ್ಟು ರೆಕಾರ್ಡ್ ಮಾಡಿದ ಘಟನೆ ಬೆಂಗಳೂರಿನ ಮೈಕೋ ಲೇಔಟ್‍ನಲ್ಲಿ ನಡೆದಿದೆ.

    ಜೀವನ್ ಸೇಠ್ ಕ್ಯಾಮೆರಾ ಇಟ್ಟ ಆರೋಪಿ. ಜೀವನ್ ಸ್ವಲವೂ ಅನುಮಾನ ಬಾರದಂತೆ ಸ್ನಾನದ ಕೋಣೆಯಲ್ಲಿ ಕ್ಯಾಮೆರಾ ಫಿಕ್ಸ್ ಮಾಡಿ ರೆಕಾರ್ಡ್ ಮಾಡಿದ್ದಾನೆ. ಸ್ನಾನದ ವೇಳೆ ಮಹಿಳೆ ಕಣ್ಣಿಗೆ ಕ್ಯಾಮೆರಾ ಕಂಡುಬಂದಿದೆ. ಈ ಬಗ್ಗೆ ವಿಚಾರಿಸಿದಾಗ ಪಕ್ಕದ ಮನೆಯ ವ್ಯಕ್ತಿಯೇ ಬಾತ್ ರೂಮ್ ಕಿಟಕಿಗೆ ಕ್ಯಾಮೆರಾ ಫಿಕ್ಸ್ ಮಾಡಿರೋದು ಬೆಳಕಿಗೆ ಬಂದಿದೆ.

    ನಂತರ ಮಹಿಳೆ ಪಕ್ಕದ ಮನೆಯ ಆರೋಪಿ ಜೀವನ್ ಸೇಠ್ ವಿರುದ್ಧ ದೂರು ನೀಡಿದ್ದು, ಮೈಕೋ ಲೇಔಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು ಕೂಡಲೇ ಆರೋಪಿಯನ್ನ ಬಂಧಿಸಿದ್ದಾರೆ.

    ಆರೋಪಿ ಜೀವನ್ ಸೇಠ್ ಗೆ ಈಗಾಗಲೇ ಮದುವೆಯಾಗಿ, ಒಂದು ಮಗು ಕೂಡ ಇದೆ ಎಂದು ತಿಳಿದು ಬಂದಿದೆ.

  • ಮನೆಯೊಳಗೆ ಚಿರತೆ ನುಗಿದ್ದ ವೇಳೆ ಶೌಚಾಲಯದಲ್ಲಿ ಬಂಧಿಯಾಗಿದ್ದ ಅತ್ತೆ-ಸೊಸೆಗೆ ಸನ್ಮಾನ!

    ಮನೆಯೊಳಗೆ ಚಿರತೆ ನುಗಿದ್ದ ವೇಳೆ ಶೌಚಾಲಯದಲ್ಲಿ ಬಂಧಿಯಾಗಿದ್ದ ಅತ್ತೆ-ಸೊಸೆಗೆ ಸನ್ಮಾನ!

    ತುಮಕೂರು: ಮನೆಯೊಳಗೆ ಇದ್ದ ಚಿರತೆಗೆ ಸೆಡ್ಡುಹೊಡೆದು ಸತತ 7 ಗಂಟೆ ಕಾಲ ಶೌಚಾಲಯದಲ್ಲಿ ಬಂಧಿಯಾಗಿ ಸುರಕ್ಷಿತವಾಗಿ ಹೊರಕ್ಕೆ ಬಂದ ತುಮಕೂರಿನ ಗಟ್ಟಿಗಿತ್ತಿ ಅತ್ತೆ-ಸೊಸೆಗೆ ಅಭಿನಂದನೆಯ ಮಾಹಾಪೂರ ಹರಿದು ಬರುತಿದೆ.

    ಅತ್ತೆ ವನಜಾಕ್ಷಿ ಸೊಸೆ ವಿನುತಾ ಹಾಗೂ ಮಾವ ರಂಗನಾಥ್ ಅವರು ತೋರಿದ ಧೈರ್ಯಕ್ಕೆ ಮೆಚ್ಚಿ ನಗರದ ಜನತೆ ಸನ್ಮಾನಿಸಿದ್ದಾರೆ. ಜಯನಗರ ಬಡಾವಣೆ ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ ಗಟ್ಟಿಗಿತ್ತಿ ಅತ್ತೆ ಮತ್ತು ಸೊಸೆಗೆ ಭಾನುವಾರ ಸನ್ಮಾನಿಸಲಾಯಿತು. ಇದನ್ನೂ ಓದಿ: ಮನೆಗೆ ನುಗ್ಗಿದ ಚಿರತೆ – ಭಯಗೊಂಡು ಶೌಚಾಲಯದಲ್ಲಿ ಅಡಗಿಕೊಂಡ್ರು ಅತ್ತೆ, ಸೊಸೆ

    ಯಾವುದೇ ಸಂಕಷ್ಟ ಬಂದರೂ ಧೃತಿಗೆಡದೇ ಧೈರ್ಯದಿಂದ ಇದ್ದರೆ ಆ ಸಂಕಷ್ಟದಿಂದ ಸುಲಭವಾಗಿ ಪಾರಾಗಬಹುದು ಇದಕ್ಕೆ ಈ ಅತ್ತೆ-ಸೊಸೆಯೆ ಸಾಕ್ಷಿ ಎಂದು ಅಭಿನಂದಿಸಿ ಪ್ರಮಾಣ ಪತ್ರ ನೀಡಲಾಗಿದೆ. ಶಾಸಕ ರಫೀಕ್ ಅಹಮದ್ ಈ ಅಭಿನಂದನಾ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಚಿರತೆ ಸಂಕಷ್ಟದಿಂದ ಪಾರಾದ ರಂಗನಾಥ್ ಅವರ ಕುಟುಂಬದ ಧೈರ್ಯವನ್ನು ಕೊಂಡಾಡಿದರು.

    ಅಂದಹಾಗೆ ಜನವರಿ 20 ರಂದು ಇವರ ಮನೆಗೆ ಚಿರತೆ ನುಗ್ಗಿತ್ತು. ಭಯಗೊಂಡು ಮನೆಯವರು ಶೌಚಾಲಯದಲ್ಲಿ ಅಡಗಿಕೊಂಡಿದ್ದರು. ಸತತ 11 ಗಂಟೆಯ ಕಾರ್ಯಚರಣೆ ಮೂಲಕ ಚಿರತೆಯನ್ನು ಮನೆಯಲ್ಲೇ ಸೆರೆಹಿಡಿಯಲಾಗಿತ್ತು. ಇದನ್ನೂ ಓದಿ: ಆಪರೇಷನ್ ಚೀತಾ ಸಕ್ಸಸ್-ಅಡುಗೆ ಮನೆಯ ಅಟ್ಟದ ಮೇಲೆ ಕುಳಿತಿದ್ದ ಚಿರತೆ

  • ಉಪನ್ಯಾಸಕಿ ಸ್ನಾನ ಮಾಡುತ್ತಿದ್ದ ವೀಡಿಯೋ ಶೂಟ್ ಮಾಡುತ್ತಿದ್ದ ವಿಕೃತ ಕಾಮಿ!

    ಉಪನ್ಯಾಸಕಿ ಸ್ನಾನ ಮಾಡುತ್ತಿದ್ದ ವೀಡಿಯೋ ಶೂಟ್ ಮಾಡುತ್ತಿದ್ದ ವಿಕೃತ ಕಾಮಿ!

    ಹೈದರಾಬಾದ್: ಉಪನ್ಯಾಸಕಿಯೊಬ್ಬರು ಸ್ನಾನ ಮಾಡುತ್ತಿದ್ದ ವೇಳೆ ವೀಡಿಯೋ ಚಿತ್ರೀಕರಣ ಮಾಡುತ್ತಿದ್ದ 25 ವರ್ಷದ ಯುವಕನೊಬ್ಬನನ್ನು ಹೈದರಾಬಾದ್ ಪೊಲೀಸರು ಶನಿವಾರ ಬಂಧಿಸಿದ್ದಾರೆ.

    ಆಗಿದ್ದೇನು?: ಇಲ್ಲಿನ ಕೆಪಿಎಚ್‍ಬಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿರುವ ಪಿಜಿ ಹಾಸ್ಟೆಲ್ ನಲ್ಲಿ ಉಪನ್ಯಾಸಕಿಯೊಬ್ಬರು ವಾಸ್ತವ್ಯ ಹೂಡಿದ್ದರು. ಕಳೆದ ಗುರುವಾರ ಇವರು ಸ್ನಾನ ಮಾಡುತ್ತಿದ್ದಾಗ ಬಾತ್ ರೂಂ ಕಿಟಕಿಯಿಂದ ಮೊಬೈಲ್ ಫೋನೊಂದು ಕಾಣಿಸಿದೆ. ವೆಂಟಿಲೇಟರ್ ಮೂಲಕ ಮೊಬೈಲ್ ಕಾಣಿಸುತ್ತಿದ್ದಂತೆಯೇ ಉಪನ್ಯಾಸಕಿ ಕಿರುಚಾಡಲು ಆರಂಭಿಸಿದ್ದಾರೆ. ತಕ್ಷಣ ಆರೋಪಿ ಅಲ್ಲಿಂದ ಕಾಲ್ಕಿತ್ತಿದ್ದಾನೆ.

    ಬಳಿಕ ಉಪನ್ಯಾಸಕಿ ಕೆಪಿಎಚ್‍ಬಿ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ನಾನು ಸ್ನಾನ ಮಾಡುವಾಗ ಯಾರೋ ಬಾತ್ ರೂಂ ವೆಂಟಿಲೇಟರ್ ಮೂಲಕ ಮೊಬೈಲ್ ನಲ್ಲಿ ವೀಡಿಯೋ ಶೂಟ್ ಮಾಡಿದ್ದಾರೆ. ಆ ವ್ಯಕ್ತಿಯ ಕೈಯಲ್ಲಿದ್ದ ಮೊಬೈಲ್ ಗೋಲ್ಡ್ ಕಲರ್ ನಲ್ಲಿತ್ತು ಎಂದು ದೂರಿನಲ್ಲಿ ತಿಳಿಸಿದ್ದರು.

    ದೂರು ಸ್ವೀಕರಿಸಿದ ಪೊಲೀಸರು ಪಿಜಿ ಹಾಸ್ಟೆಲ್ ಗೆ ಆಗಮಿಸಿ, ಗೋಲ್ಡನ್ ಬಣ್ಣದ ಮೊಬೈಲ್ ಇರುವವರ ಹುಡುಕಾಟ ಶುರು ಮಾಡಿದ್ದಾರೆ. ಈ ವೇಳೆ ಇದೇ ಹಾಸ್ಟೆಲ್ ಮಾಲೀಕನ ಪುತ್ರ ಚಂದ್ರಹಾಸ್ ಎಂಬಾತನ ಬಳಿ ಚಿನ್ನದ ಬಣ್ಣದ ಮೊಬೈಲ್ ಪತ್ತೆಯಾಗಿದೆ.

    ಇದನ್ನು ಪರಿಶೀಲನೆ ಮಾಡಿದಾಗ ಮೊಬೈಲ್ ನಲ್ಲಿ ಯಾವುದೇ ವೀಡಿಯೋ ಇರಲಿಲ್ಲ. ಇದರಿಂದ ಅನುಮಾನಗೊಂಡು ಪೊಲೀಸರು ಆತನನ್ನು ವಶಕ್ಕೆ ಪಡೆದು ವಿಚಾರಣೆ ಶುರು ಮಾಡಿದ್ದಾರೆ. ಯಾವಾಗ ತಾನಿನ್ನು ತಪ್ಪಿಸಿಕೊಳ್ಳಲು ಸಾಧ್ಯವೇ ಇಲ್ಲ ಎಂದು ಗೊತ್ತಾಗುತ್ತೋ ಚಂದ್ರಹಾಸ್ ತಪ್ಪೊಪ್ಪಿಕೊಳ್ಳುತ್ತಾನೆ. ‘ನಾನೇ ವೀಡಿಯೋ ಶೂಟ್ ಮಾಡಿದ್ದೆ. ಕೇವಲ 10 ಸೆಕೆಂಡ್ ಮಾತ್ರ ವೀಡಿಯೋ ಶೂಟ್ ಮಾಡಿದ್ದೆ. ಅಷ್ಟರಲ್ಲಿ ಉಪನ್ಯಾಸಕಿಗೆ ವಿಚಾರ ಗೊತ್ತಾಗಿ ಗದ್ದಲ ಶುರು ಮಾಡಿದರು. ಇದರಿಂದಾಗಿ ನಾನು ಸಿಕ್ಕಿಹಾಕಿಕೊಳ್ಳುತ್ತೇನೆ ಎಂಬ ಭಯದಲ್ಲಿ ನಾನು ಆ ವಿಡಿಯೋ ಡಿಲೀಟ್ ಮಾಡಿದೆ’ ಎಂದು ಹೇಳಿದ್ದಾನೆ. ಪೊಲೀಸರು ಆರೋಪಿ ಚಂದ್ರಹಾಸನನ್ನು ಕೋರ್ಟ್ ಗೆ ಹಾಜರುಪಡಿಸಿದ್ದಾರೆ. ಕೋರ್ಟ್ ಚಂದ್ರಹಾಸನಿಗೆ ನ್ಯಾಯಾಂಗ ಬಂಧನ ವಿಧಿಸಿದೆ.