Tag: bbk 11

  • ಹೆತ್ತ ಮಗಳನ್ನು ಸಾಕಲಿಲ್ಲ, ಮದುವೆ ಜವಾಬ್ದಾರಿ ತೆಗೆದುಕೊಳ್ಳಲಿಲ್ಲ: ತಂದೆಯ ಆರೋಪಕ್ಕೆ ಚೈತ್ರಾ ಕಿಡಿ

    ಹೆತ್ತ ಮಗಳನ್ನು ಸಾಕಲಿಲ್ಲ, ಮದುವೆ ಜವಾಬ್ದಾರಿ ತೆಗೆದುಕೊಳ್ಳಲಿಲ್ಲ: ತಂದೆಯ ಆರೋಪಕ್ಕೆ ಚೈತ್ರಾ ಕಿಡಿ

    ಕುಡುಕ ತಂದೆಯ ಚಿತ್ರ ಹಿಂಸೆ ಅನುಭವಿಸಿದವರಿಗಷ್ಟೇ ಗೊತ್ತು ಎಂದ ಚೈತ್ರಾ ಕುಂದಾಪುರ

    ‘ಬಿಗ್ ಬಾಸ್’ ಖ್ಯಾತಿಯ ಚೈತ್ರಾ ಕುಂದಾಪುರ (Chaithra Kundapura) ಮದುವೆ ಬಗ್ಗೆ ತಂದೆ ಬಾಲಕೃಷ್ಣ ನಾಯ್ಕ್ ಚಕಾರವೆತ್ತಿದ್ದಾರೆ. ಮದುವೆಗೆ ತನ್ನನ್ನು ಕರೆದಿಲ್ಲ ಮಾಧ್ಯಮದ ಮುಂದೆ ತಂದೆ ಕಿಡಿಕಾರಿದ್ದರು. ತಂದೆಯ ಆರೋಪಕ್ಕೆಲ್ಲಾ ಚೈತ್ರಾ ತಿರುಗೇಟು ನೀಡಿದ್ದಾರೆ. ಹೆಣ್ಣು ಮಕ್ಕಳ ಜವಾಬ್ದಾರಿ ಹೊತ್ತು ಮದುವೆಯೂ ಮಾಡಲಿಲ್ಲ ಎಂದು ಕುಡುಕ ತಂದೆಯ ಚಿತ್ರ ಹಿಂಸೆ ಎಂದು ಫೈರ್ ಬ್ರ್ಯಾಂಡ್ ಚೈತ್ರಾ ಕುಂದಾಪುರ ರಿಯಾಕ್ಟ್ ಮಾಡಿದ್ದಾರೆ. ಇದನ್ನೂ ಓದಿ:ನನ್ನನ್ನು ಜಗಲಿಯಲ್ಲಿ ಬಿಟ್ಟು ಮನೆಗೆ ಬೀಗ ಹಾಕ್ಕೊಂಡು ಬಿಗ್ ಬಾಸ್‌ಗೆ ಹೋಗಿದ್ದಳು- ಚೈತ್ರಾ ಕುಂದಾಪುರ ತಂದೆ ಕಿಡಿ

    ಚೈತ್ರಾ ಇನ್ಸ್ಟಾಗ್ರಾಂ ಸ್ಟೋರಿಯಲ್ಲಿ, ಕುಡುಕ ತಂದೆಯ ಚಿತ್ರ ಹಿಂಸೆ ಅನುಭವಿಸಿದವರಿಗಷ್ಟೇ ಗೊತ್ತು. ಎಂತಹ ಮಕ್ಕಳಿಗೂ ಕುಡುಕ ತಂದೆ ಸಿಗಬಾರದು. ಎರಡು ಕ್ವಾಟರ್ ನಾನು ಕೊಟ್ರೆ ನನ್ನ ಮಕ್ಕಳು ದೇವರು ಅನ್ನುವವರ ಮಾತಿಗೆ ಬೆಲೆ ಕೊಡುವವರು ಮೂರ್ಖರಾಗ್ತಾರೆ ಅಂತ ಬರೆದುಕೊಳ್ಳುವ ಮೂಲಕ ತಿರುಗೇಟು ಕೊಟ್ಟಿದ್ದಾರೆ. ಇದನ್ನೂ ಓದಿ:ಚೈತ್ರ & ಆಕೆಯ ಪತಿ ಇಬ್ಬರೂ ಕಳ್ಳರು- ಮಗಳ ಮದುವೆಗೆ ತಂದೆ ಆಕ್ಷೇಪ

    ಹೆತ್ತ ಮಗಳನ್ನು ಸಾಕಲಿಲ್ಲ, ಫೀಸು ಕಟ್ಟಿ ಓದಿಸಲಿಲ್ಲ. ಹೆಣ್ಣು ಮಕ್ಕಳ ಜವಾಬ್ದಾರಿ ಹೊತ್ತು ಮದುವೆಯೂ ಮಾಡಲಿಲ್ಲ. ಕಟ್ಟಿಕೊಂಡ ಹೆಂಡ್ತಿಗೆ ಹೊಡೆದು ಚಿತ್ರಹಿಂಸೆ ಮಾಡಿದ್ದು ಬಿಟ್ಟರೆ ಬೇರೆ ಏನು ಇಲ್ಲ. ಎಲ್ಲಾ ಮುಗಿದ್ಮೇಲೆ ಅಪವಾದ ಹಾಕೋಕೆ ಮಾತ್ರ ತಂದೆ ಎನ್ನುವ ಹೆಸರು ವಾವ್ ಎಂದು ತಂದೆಯ ವಾಗ್ದಾಳಿಗೆ ಚೈತ್ರಾ ಕುಂದಾಪುರ ಪ್ರತ್ಯುತ್ತರ ನೀಡಿದ್ದಾರೆ.

    ಮೇ 9ರಂದು ಶ್ರೀಕಾಂತ್ ಜೊತೆ ಚೈತ್ರಾ ಅವರು ಕುಂದಾಪುರದಲ್ಲಿ ಹಸೆಮಣೆ ಏರಿದರು. 12 ವರ್ಷಗಳ ಪ್ರೀತಿಗೆ ಮದುವೆಯ ಮುದ್ರೆ ಒತ್ತಿದ್ದಾರೆ.

  • ನನ್ನನ್ನು ಜಗಲಿಯಲ್ಲಿ ಬಿಟ್ಟು ಮನೆಗೆ ಬೀಗ ಹಾಕ್ಕೊಂಡು ಬಿಗ್ ಬಾಸ್‌ಗೆ ಹೋಗಿದ್ದಳು- ಚೈತ್ರಾ ಕುಂದಾಪುರ ತಂದೆ ಕಿಡಿ

    ನನ್ನನ್ನು ಜಗಲಿಯಲ್ಲಿ ಬಿಟ್ಟು ಮನೆಗೆ ಬೀಗ ಹಾಕ್ಕೊಂಡು ಬಿಗ್ ಬಾಸ್‌ಗೆ ಹೋಗಿದ್ದಳು- ಚೈತ್ರಾ ಕುಂದಾಪುರ ತಂದೆ ಕಿಡಿ

    ತಂದೆಗೆ ಅನ್ನ ಹಾಕದವಳು ಏನು ದೇಶ ಸೇವೆ ಮಾಡ್ತಾಳೆ?- ತಂದೆ ಬಾಲಕೃಷ್ಣ ನಾಯ್ಕ್

    ನ್ನನ್ನು ಮನೆಯ ಜಗಲಿಯಲ್ಲಿ ಬಿಟ್ಟು ಬೀಗ ಹಾಕಿಕೊಂಡು ಬಿಗ್ ಬಾಸ್‌ಗೆ (Bigg Boss Kannada 11) ಹೋಗಿದ್ದಳು ಎಂದು ಚೈತ್ರಾ (Chaithra Kundapura) ಮತ್ತು ಪತ್ನಿಯ ವಿರುದ್ಧ ಬಾಲಕೃಷ್ಣ ನಾಯ್ಕ್ ಕಿಡಿಕಾರಿದ್ದಾರೆ. ತಂದೆಗೆ ಅನ್ನ ಹಾಕದವಳು ದೇಶ ಸೇವೆ ಏನು ಮಾಡುತ್ತಾಳೆ ಎಂದು ಚೈತ್ರಾ ತಂದೆ ತಿರುಗಿಬಿದ್ದಿದ್ದಾರೆ. ಇದನ್ನೂ ಓದಿ:ಚೈತ್ರ & ಆಕೆಯ ಪತಿ ಇಬ್ಬರೂ ಕಳ್ಳರು- ಮಗಳ ಮದುವೆಗೆ ತಂದೆ ಆಕ್ಷೇಪ

    ಮಗಳು ಚೈತ್ರಾ ಬಗ್ಗೆ ತಂದೆ ಮಾತನಾಡಿ, ಚೈತ್ರಾ ಮತ್ತು ಆಕೆಯ ಪತಿ ಇಬ್ಬರೂ ಕಳ್ಳರು. ನನ್ನ ಪತ್ನಿ ಕೂಡ ಚೈತ್ರಾಳ ಬೆಂಬಲಕ್ಕೆ ನಿಂತಿದ್ದಾಳೆ. ಇವರೆಲ್ಲ ಹಣದ ಆಸೆಗಾಗಿ ಹೀಗೆ ಮಾಡುತ್ತಿದ್ದಾರೆ ಎಂದರು. ಉದ್ಯಮಿ ಗೋವಿಂದ ಬಾಬು ಪೂಜಾರಿ ಪ್ರಕರಣದಲ್ಲೂ ಇವರು ಹಣ ಹಂಚಿಕೊಂಡಿದ್ದಾರೆ. ಆಕೆ ಸೈನಿಕರಿಗೆ ಹಣ ಕೊಟ್ಟಿದ್ದೇನೆ ಎಂದು ಹೇಳಿಕೊಂಡಿದ್ದಾಳೆ. ಸ್ವಂತ ಹಣದಲ್ಲಿ ಕೊಟ್ಟಿದ್ದರೆ ಹೆಮ್ಮೆಯ ವಿಷಯವಾಗುತ್ತಿತ್ತು ಎಂದರು. ನನಗೆ ನನ್ನ ದೊಡ್ಡ ಮಗಳು ಮಾತ್ರ ಆಸರೆ. ನನ್ನ ದೊಡ್ಡ ಮಗಳು ಗಾಯತ್ರಿ ನಿರಪರಾಧಿ. ನಾನು ಮತ್ತು ನನ್ನ ದೊಡ್ಡ ಮಗಳು ಮರ್ಯಾದೆಯಿಂದ ಬದುಕುತ್ತಿದ್ದೇವೆ. ಚೈತ್ರಾ ಬಿಗ್ ಬಾಸ್ ಮನೆಗೆ ಹೋಗುವಾಗಲೂ ನನಗೆ ಹೇಳಿಲ್ಲ. ನನ್ನ ಪತ್ನಿ ನನ್ನನ್ನು ಜಗಲಿಯಲ್ಲಿ ಬಿಟ್ಟು ಮನೆಗೆ ಬೀಗ ಹಾಕಿ ಬಿಗ್ ಬಾಸ್‌ಗೆ ಹೋಗಿದ್ದಳು. ನಾನು ಕಟ್ಟಿದ ಮನೆಯಲ್ಲಿ ನಾನೇ ಅನಾಥನಾಗಿದ್ದೇನೆ ಎಂದು ಕಣ್ಣೀರಿಟ್ಟಿದ್ದಾರೆ. ಇದನ್ನೂ ಓದಿ:ಪಾಕ್‌ಗೆ ಬೆಂಬಲಿಸಿದ ಟರ್ಕಿಯಲ್ಲಿ ಸಿನಿಮಾ ಶೂಟಿಂಗ್ ಬೇಡ – ಭಾರತೀಯ ಚಿತ್ರರಂಗ ನಿರ್ಧಾರ

    ಬಿಗ್ ಬಾಸ್ ವೇದಿಕೆಯಲ್ಲಿ ಎಲ್ಲಾ ಸತ್ಯ ಒಪ್ಪಿಕೊಳ್ಳಬಹುದಾಗಿತ್ತು. ನಾನೇ ಮನೆ ನಡೆಸುವವಳು ಎಂದು ಬಿಂಬಿಸಿಕೊಂಡಿದ್ದಾಳೆ. ಗೋವಿಂದ ಬಾಬು ಪೂಜಾರಿ ಪ್ರಕರಣದಲ್ಲೂ ಈಕೆ ಹಣ ಹೊಡೆದಿರುತ್ತಾಳೆ. ಬೇರೆ ಬೇರೆ ಬ್ಯಾಂಕುಗಳಲ್ಲಿ ಡೆಪಾಸಿಟ್ ಇಟ್ಟಿದ್ದಳು. ಪಡ್ಡೆ ಹುಡುಗರ ಹೆಸರಿನಲ್ಲೆಲ್ಲ ಡೆಪಾಸಿಟ್ ಮಾಡಿ ಬಾಂಡ್ ಮೇಲೆ ಸಾಲ ಪಡೆದಿದ್ದಳು. ನನ್ನ ಮಗಳು ಎಂದು ಹೇಳಲು ನಾಚಿಕೆಯಾಗುತ್ತದೆ. ತಂದೆ ಇಲ್ಲದ ಮಗಳು ಎಂದು ಹೇಳಿಕೊಂಡು ಬರುತ್ತಾಳೆ. ನನ್ನ ತಂದೆ ಬಾಲ ನಾಯ್ಕ್ ಗೌರವಾನ್ವಿತ ವ್ಯಕ್ತಿಯಾಗಿದ್ದರು. ತಂದೆಗೆ ಅನ್ನ ಹಾಕದವಳು ಏನು ದೇಶ ಸೇವೆ ಮಾಡುತ್ತಾಳೆ? ನನ್ನ ಹೆಂಡತಿಗೂ ಹಣ ಕೊಟ್ಟಿದ್ದಾಳೆ, ಅವಳಿಗೆ ಗಂಡ ಬೇಡ ಎಂದು ಪತ್ನಿ ವಿರುದ್ಧವು ಮಾತನಾಡಿದ್ದಾರೆ.

  • ಚೈತ್ರ & ಆಕೆಯ ಪತಿ ಇಬ್ಬರೂ ಕಳ್ಳರು- ಮಗಳ ಮದುವೆಗೆ ತಂದೆ ಆಕ್ಷೇಪ

    ಚೈತ್ರ & ಆಕೆಯ ಪತಿ ಇಬ್ಬರೂ ಕಳ್ಳರು- ಮಗಳ ಮದುವೆಗೆ ತಂದೆ ಆಕ್ಷೇಪ

    ಚೈತ್ರಾ ನನ್ನನ್ನು ಮದುವೆಗೆ ಆಹ್ವಾನಿಸಿಲ್ಲ, ನಾನು ಅವರ ವಿವಾಹ ಒಪ್ಪಲ್ಲ- ಬಾಲಕೃಷ್ಣ ನಾಯ್ಕ್

    ‘ಬಿಗ್ ಬಾಸ್’ ಖ್ಯಾತಿಯ ಚೈತ್ರ ಕುಂದಾಪುರ (Chiathra Kundapura)  ಬಹುಕಾಲದ ಗೆಳೆಯ ಶ್ರೀಕಾಂತ್ (Srikanth) ಜೊತೆ ಮೇ 9ರಂದು ಮದುವೆಯಾಗಿದ್ದಾರೆ. ಈ ಬೆನ್ನಲ್ಲೇ ಚೈತ್ರಾ ವಿರುದ್ಧ ತಂದೆ ಬಾಲಕೃಷ್ಣ ನಾಯ್ಕ್ ಹಲವು ಆರೋಪಗಳನ್ನು ಮಾಡಿದ್ದಾರೆ. ಈ ಮದುವೆಯನ್ನು ನಾನು ಒಪ್ಪಲು ಸಾಧ್ಯವಿಲ್ಲ. ನನ್ನನ್ನು ಮದುವೆಗೂ (Wedding) ಆಹ್ವಾನಿಸಿಲ್ಲ. ಆಕೆ ನನ್ನನ್ನು ಕರೆದಿಲ್ಲ ಎಂದು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ:ಪ್ರಭಾಸ್ ಸಿನಿಮಾದಲ್ಲಿ ನಟಿಸಲು ದೀಪಿಕಾ ಪಡುಕೋಣೆಗೆ 20 ಕೋಟಿ ಸಂಭಾವನೆ!

    ಮಗಳು ಚೈತ್ರಾ ಮದುವೆ ಬಗ್ಗೆ ತಂದೆ ಮಾತನಾಡಿ, ಚೈತ್ರಾ ಮತ್ತು ಆಕೆಯ ಪತಿ ಇಬ್ಬರೂ ಕಳ್ಳರು. ನನ್ನ ಪತ್ನಿ ಕೂಡ ಚೈತ್ರಾಳ ಬೆಂಬಲಕ್ಕೆ ನಿಂತಿದ್ದಾಳೆ. ಇವರೆಲ್ಲ ಹಣದ ಆಸೆಗಾಗಿ ಹೀಗೆ ಮಾಡುತ್ತಿದ್ದಾರೆ ಎಂದರು. ಉದ್ಯಮಿ ಗೋವಿಂದ ಬಾಬು ಪೂಜಾರಿ ಪ್ರಕರಣದಲ್ಲೂ ಇವರು ಹಣ ಹಂಚಿಕೊಂಡಿದ್ದಾರೆ. ಆಕೆ ಸೈನಿಕರಿಗೆ ಹಣ ಕೊಟ್ಟಿದ್ದೇನೆ ಎಂದು ಹೇಳಿಕೊಂಡಿದ್ದಾಳೆ. ಸ್ವಂತ ಹಣದಲ್ಲಿ ಕೊಟ್ಟಿದ್ದರೆ ಹೆಮ್ಮೆಯ ವಿಷಯವಾಗುತ್ತಿತ್ತು ಎಂದು ಬೇಸರ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಪಾಕ್‌ಗೆ ಬೆಂಬಲಿಸಿದ ಟರ್ಕಿಯಲ್ಲಿ ಸಿನಿಮಾ ಶೂಟಿಂಗ್ ಬೇಡ – ಭಾರತೀಯ ಚಿತ್ರರಂಗ ನಿರ್ಧಾರ

    ನನಗೆ ನನ್ನ ದೊಡ್ಡ ಮಗಳು ಮಾತ್ರ ಆಸರೆ. ನನ್ನ ದೊಡ್ಡ ಮಗಳು ಗಾಯತ್ರಿ ನಿರಪರಾಧಿ. ನಾನು ಮತ್ತು ನನ್ನ ದೊಡ್ಡ ಮಗಳು ಮರ್ಯಾದೆಯಿಂದ ಬದುಕುತ್ತಿದ್ದೇವೆ. ಚೈತ್ರಾ ಬಿಗ್ ಬಾಸ್ ಮನೆಗೆ ಹೋಗುವಾಗಲೂ ನನಗೆ ಹೇಳಿಲ್ಲ. ನನ್ನ ಪತ್ನಿ ನನ್ನನ್ನು ಜಗಲಿಯಲ್ಲಿ ಬಿಟ್ಟು ಬೀಗ ಹಾಕಿ ಬಿಗ್ ಬಾಸ್‌ಗೆ ಹೋಗಿದ್ದಳು. ನಾನು ಕಟ್ಟಿದ ಮನೆಯಲ್ಲಿ ನಾನೇ ಅನಾಥನಾಗಿದ್ದೇನೆ ಎಂದು ನೊಂದು ನುಡಿದಿದ್ದಾರೆ.

    ಆಕೆಗೆ ಯಾರು ದೊಡ್ಡ ಸ್ಥಾನಮಾನ ಕೊಡಬೇಡಿ. ತಂದೆಯನ್ನು ದೂರವಿಟ್ಟವರು ಸಂಸ್ಕೃತಿಯ ಬಗ್ಗೆ ಮಾತನಾಡುವುದು ಎಷ್ಟು ಸರಿ? ಆಕೆ ಸೈನಿಕರಿಗೆ ಹಣ ಕೊಟ್ಟಿದ್ದೇನೆ ಎಂದು ಹೇಳಿಕೊಂಡಿದ್ದಾಳೆ. ಸ್ವಂತ ಹಣದಲ್ಲಿ ಕೊಟ್ಟಿದ್ದರೆ ಹೆಮ್ಮೆಯ ವಿಷಯ. ಮೋಸದ ಹಣದಲ್ಲಿ ಆಕೆ ಕೊಟ್ಟು ಪ್ರಯೋಜನ ಏನು? ಆಕೆಯ ಮದುವೆಯನ್ನು ನಾನು ಒಪ್ಪುವುದಿಲ್ಲ. ನನಗೆ ಸರಿಯಾಗಿ ಮದುವೆಗೆ ಆಮಂತ್ರಣ ಕೂಡ ನೀಡಿಲ್ಲ. ಚೈತ್ರ ಮದುವೆ ಸಂದರ್ಭ ನನ್ನಲ್ಲಿ ಹಣ ಕೇಳಿದಳು. ನಾನು ಹೋಟೆಲ್‌ನಲ್ಲಿ ಕೆಲಸ ಮಾಡುವ ಸಾಮಾನ್ಯ ನೌಕರ ಎಂದಿದ್ದಾರೆ.

    ಚೈತ್ರ ಮತ್ತು ಆಕೆಯ ತಾಯಿ ಹಣಕ್ಕಾಗಿ ನನ್ನನ್ನು ದೂರವಿಟ್ಟಿದ್ದಾರೆ. ಚೈತ್ರಾ ಪತಿ ನಮ್ಮ ಮನೆಯಲ್ಲಿ ಇದ್ದವ, ಅವನು ಕೂಡ ಕಳ್ಳ. ನನ್ನ ಕುಟುಂಬದ ಮಾನ ಮರ್ಯಾದೆ ತೆಗೆದಿದ್ದಾರೆ. ನಾನು ಸತ್ಯ, ನ್ಯಾಯ, ಧರ್ಮದಲ್ಲಿರುವ ವ್ಯಕ್ತಿ. ನನ್ನ ದೊಡ್ಡ ಮಗಳು ಟೀಚರ್ ಆಗಿ, ಹೊಲಿಗೆ ಮಾಡಿಕೊಂಡು ಗೌರವಾನ್ವಿತ ರೀತಿಯಲ್ಲಿ ಬದುಕುತ್ತಿದ್ದಾಳೆ. ನನ್ನ ದೊಡ್ಡ ಮಗಳ ಮೇಲು ಚೈತ್ರ ಸುಳ್ಳು ಅಪವಾದ ಹಾಕಿದ್ದಳು ಎಂದು ಬೇಸರಿಸಿದ್ದಾರೆ.

    ಬಿಗ್ ಬಾಸ್ ವೇದಿಕೆಯಲ್ಲಿ ಎಲ್ಲಾ ಸತ್ಯ ಒಪ್ಪಿಕೊಳ್ಳಬಹುದಾಗಿತ್ತು. ನಾನೇ ಮನೆ ನಡೆಸುವವಳು ಎಂದು ಬಿಂಬಿಸಿಕೊಂಡಿದ್ದಾಳೆ. ಗೋವಿಂದ ಬಾಬು ಪೂಜಾರಿ ಪ್ರಕರಣದಲ್ಲೂ ಈಕೆ ಹಣ ಹೊಡೆದಿರುತ್ತಾಳೆ. ಬೇರೆ ಬೇರೆ ಬ್ಯಾಂಕುಗಳಲ್ಲಿ ಡೆಪಾಸಿಟ್ ಇಟ್ಟಿದ್ದಳು. ಪಡ್ಡೆ ಹುಡುಗರ ಹೆಸರಿನಲ್ಲೆಲ್ಲ ಡೆಪಾಸಿಟ್ ಮಾಡಿ ಬಾಂಡ್ ಮೇಲೆ ಸಾಲ ಪಡೆದಿದ್ದಳು. ನನ್ನ ಮಗಳು ಎಂದು ಹೇಳಲು ನಾಚಿಕೆಯಾಗುತ್ತದೆ. ತಂದೆ ಇಲ್ಲದ ಮಗಳು ಎಂದು ಹೇಳಿಕೊಂಡು ಬರುತ್ತಾಳೆ. ನನ್ನ ತಂದೆ ಬಾಲ ನಾಯ್ಕ್ ಗೌರವಾನ್ವಿತ ವ್ಯಕ್ತಿಯಾಗಿದ್ದರು. ತಂದೆಗೆ ಅನ್ನ ಹಾಕದವಳು ಏನು ದೇಶ ಸೇವೆ ಮಾಡುತ್ತಾಳೆ? ನನ್ನ ಹೆಂಡತಿಗೂ ಹಣ ಕೊಟ್ಟಿದ್ದಾಳೆ, ಅವಳಿಗೆ ಗಂಡ ಬೇಡ ಎಂದಿದ್ದಾರೆ.

  • ಫ್ಯಾನ್ಸ್‌ಗೆ ಗುಡ್ ನ್ಯೂಸ್- ಮತ್ತೆ ಕಿರುತೆರೆಗೆ ಬಂದ ಗೌತಮಿ

    ಫ್ಯಾನ್ಸ್‌ಗೆ ಗುಡ್ ನ್ಯೂಸ್- ಮತ್ತೆ ಕಿರುತೆರೆಗೆ ಬಂದ ಗೌತಮಿ

    ‘ಬಿಗ್ ಬಾಸ್’ ಬೆಡಗಿ ಗೌತಮಿ ಜಾಧವ್ (Gouthami Jadav) ದೊಡ್ಮನೆ ಆಟ ಮುಗಿದ್ಮೇಲೆ ಅದ್ಯಾವ ಪ್ರಾಜೆಕ್ಟ್ ಮೂಲಕ ಬರುತ್ತಾರೆ ಎಂದು ಕಾಯುತ್ತಿದ್ದ ಫ್ಯಾನ್ಸ್‌ಗೆ ಗುಡ್ ನ್ಯೂಸ್ ಸಿಕ್ಕಿದೆ. ಲೇಡಿ ಪೊಲೀಸ್‌ ಆಫೀಸರ್ ಸಿಂಧೂರಿಯಾಗಿ ನಟಿ ಎಂಟ್ರಿ ಕೊಟ್ಟಿದ್ದಾರೆ. ಇದನ್ನೂ ಓದಿ:RRR ಚಿತ್ರದಂತೆ 3 ವರ್ಷ ಕಾಯಿಸಲ್ಲ: ‘ಕೂಲಿ’ ನಿರ್ದೇಶಕ ಲೋಕೇಶ್ ಕನಗರಾಜ್

    ‘ಸತ್ಯ’ ಸೀರಿಯಲ್, ‘ಬಿಗ್ ಬಾಸ್ ಕನ್ನಡ 11’ರ ಶೋ ಮುಗಿದ ಬಳಿಕ ಸಿನಿಮಾ ಅಥವಾ ಸೀರಿಯಲ್ ಬಗ್ಗೆ ಅಪ್‌ಡೇಟ್ ಸಿಕ್ಕಿರಲಿಲ್ಲ. ಈಗ ‘ಭಾರ್ಗವಿ LLB’ ಸೀರಿಯಲ್ ಮೂಲಕ ಕಿರುತೆರೆಗೆ ರೀ ಎಂಟ್ರಿ ಕೊಟ್ಟಿದ್ದಾರೆ. ಈ ಸೀರಿಯಲ್‌ನಲ್ಲಿ ಕೇಡಿಗಳ ಚಕ್ರವ್ಯೂಹದಲ್ಲಿ ಸಿಕ್ಕಿ ಬಿದ್ದಿರುವ ನಾಯಕಿ ಭಾರ್ಗವಿಯ ರಕ್ಷಣೆಗೆ ಬರುವ ಸಿಂಧೂರಿ ಪಾತ್ರದಲ್ಲಿ ಗೌತಮಿ ಬಣ್ಣ ಹಚ್ಚಿದ್ದಾರೆ. ಇದನ್ನೂ ಓದಿ: ಟಾಲಿವುಡ್‌ನತ್ತ ನಟ- ‘ಪುಷ್ಪ 2’ ನಿರ್ಮಿಸಿದ್ದ ಸಂಸ್ಥೆ ಜೊತೆ ಕೈಜೋಡಿಸಿದ ಉಪೇಂದ್ರ

    ಈ ಸೀರಿಯಲ್‌ನಲ್ಲಿ ಖಡಕ್ ಡೈಲಾಗ್ ಹೊಡೆಯುತ್ತಾ ಎಂಟ್ರಿ ಕೊಟ್ಟಿದ್ದಾರೆ. ನಾನು ಎಲ್ಲಿ ಕಾಲಿಟ್ರೂ ಅಲ್ಲೊಂದು ಸೌಂಡ್ ಇರುತ್ತಮ್ಮ ಎಂದು ಅವರು ವಿಲನ್‌ಗಳಿಗೆ ಸಖತ್ ಮಾಸ್ ಆಗಿ ಪಂಚಿಂಗ್ ಡೈಲಾಗ್ ಹೊಡೆದಿದ್ದಾರೆ. ಡೈಲಾಗ್ ಕೇಳಿದ್ರೆ ಅಭಿಮಾನಿಗಳಿಗೆ ‘ಸತ್ಯ’ ಸೀರಿಯಲ್‌ನ ಸತ್ಯಳ ಪಾತ್ರವನ್ನೇ ನೆನಪಿಸುವಂತೆ ಮಾಡಿದೆ. ಆದರೆ ಈ ಪಾತ್ರದಲ್ಲಿ ಅವರು ಸೀರೆಯಲ್ಲಿ ಮಿಂಚಿದ್ದಾರೆ. ಒಟ್ನಲ್ಲಿ ಗೌತಮಿ ಹೊಸ ಪಾತ್ರ, ಹೊಸ ಅವತಾರ ಫ್ಯಾನ್ಸ್‌ಗೆ ಖುಷಿ ಕೊಟ್ಟಿದೆ.‌

  • ‘ಬಿಗ್ ಬಾಸ್’ ಫ್ರೆಂಡ್ಸ್ ಜೊತೆ ಮೋಕ್ಷಿತಾ ಫಾರಿನ್ ಟ್ರಿಪ್

    ‘ಬಿಗ್ ಬಾಸ್’ ಫ್ರೆಂಡ್ಸ್ ಜೊತೆ ಮೋಕ್ಷಿತಾ ಫಾರಿನ್ ಟ್ರಿಪ್

    ‘ಬಿಗ್ ಬಾಸ್ ಕನ್ನಡ 11’ರಲ್ಲಿ (Bigg Boss Kannada 11) ಮೋಕ್ಷಿತಾ, ಐಶ್ವರ್ಯಾ, ಶಿಶಿರ್ ಶಾಸ್ತ್ರಿ (Shishir Shastry) ನಡುವೆ ಶುರುವಾದ ಸ್ನೇಹ ಕಾರ್ಯಕ್ರಮ ಮುಗಿದ್ಮೇಲೆಯೂ ಮುಂದುವರೆದಿದೆ. ಶೋಗಷ್ಟೇ ಸೀಮಿತವಾಗಿಡದೇ ಮುಗಿದ್ಮೇಲೆಯೂ ಮೂವರ ನಡುವೆ ಗಾಢವಾದ ಸ್ನೇಹ ಬೆಳೆದಿದೆ. ಇದೀಗ ಮೂವರು ವಿದೇಶಕ್ಕೆ ತೆರಳಿದ್ದಾರೆ. ಐಶ್ವರ್ಯಾ, ಶಿಶಿರ್ ಜೊತೆ ಮೋಕ್ಷಿತಾ ಫಾರಿನ್‌ನಲ್ಲಿ ಎಂಜಾಯ್ ಮಾಡ್ತಿದ್ದಾರೆ. ಇದನ್ನೂ ಓದಿ:‘ಕಾಂತಾರ ಚಾಪ್ಟರ್ 1’ರಲ್ಲಿ ನಿನ್ನ ಪಾತ್ರ ಎಂದೆಂದಿಗೂ ಶಾಶ್ವತ: ರಾಕೇಶ್ ನಿಧನಕ್ಕೆ ರಿಷಬ್ ಶೆಟ್ಟಿ ಸಂತಾಪ

     

    View this post on Instagram

     

    A post shared by Mokshitha Pai (@mokshitha22)

    ಮೋಕ್ಷಿತಾಗೆ (Mokshitha Pai) ಟ್ರಾವೆಲಿಂಗ್ ಎಂದರೆ ತುಂಬಾ ಇಷ್ಟ. ಸದಾ ಹೊಸ ಜಾಗಗಳಿಗೆ ಭೇಟಿ ನೀಡೋ ನಟಿ ಈಗ ‘ಬಿಗ್ ಬಾಸ್’ ಫ್ರೆಂಡ್ಸ್ ಐಶ್ವರ್ಯಾ, ಶಿಶಿರ್ ಶಾಸ್ತ್ರಿ ಜೊತೆ ಅಜೆರ್ಬೈಜಾನ್‌ನ ಬಾಕುಗೆ ತೆರಳಿದ್ದಾರೆ. ಅವರೊಂದಿಗೆ ಮೋಕ್ಷಿತಾ ತಂಗಿ ಅಮೃತಾ ಕೂಡ ಸಾಥ್ ನೀಡಿದ್ದಾರೆ. ಇದನ್ನೂ ಓದಿ:ರಾಕೇಶ್ ಸಾವಿನ ಸುದ್ದಿ ಅರಗಿಸಿಕೊಳ್ಳೋಕೆ ಆಗ್ತಿಲ್ಲ: ‘ಬಿಗ್ ಬಾಸ್’ ಲೋಕೇಶ್ ಭಾವುಕ

    ಬಾಕು ಕೊಲ್ಲಿಯ ವಿಶಾಲವಾದ ಪ್ರದೇಶಗಳಲ್ಲಿ ಬಿಗ್ ಬಾಸ್ ಸ್ಪರ್ಧಿಗಳು ಸುತ್ತಾಡಿದ್ದಾರೆ. ಪ್ರಪಂಚದ ಅತಿದೊಡ್ಡ ಒಳನಾಡಿನ ಜಲರಾಶಿಯಾಗಿರೋ ಕ್ಯಾಸ್ಪಿಯನ್ ಸಮುದ್ರಕ್ಕೆ ಭೇಟಿ ಕೊಟ್ಟಿದ್ದಾರೆ. ಇಲ್ಲಿನ ಸುಂದರ ಫೋಟೋಗಳನ್ನು ನಟಿ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಬಿಗ್ ಬಾಸ್ ಕಾರ್ಯಕ್ರಮ ಮುಕ್ತಾಯ ಆದ್ಮೇಲೆಯೂ ಈ ಮೂವರು ಜೊತೆಯಾಗಿರೋದನ್ನು ನೋಡಿ ಫ್ಯಾನ್ಸ್ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

    ಇತ್ತೀಚೆಗೆ ಧರ್ಮಸ್ಥಳ, ಕೊಲ್ಲೂರು ದೇಗುಲಕ್ಕೆ ಐಶ್ವರ್ಯಾ(Aishwarya), ಶಿಶಿರ್ ಶಾಸ್ತ್ರಿ ಜೊತೆ ಮೋಕ್ಷಿತಾ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು.

  • ಫೈರ್ ಬ್ರ್ಯಾಂಡ್‌ ಚೈತ್ರಾ ಮನೆಗೆ ಮಂಜು ಭೇಟಿ- ನವಜೋಡಿಗೆ ವಿಶೇಷ ಉಡುಗೊರೆ ಕೊಟ್ಟ ನಟ

    ಫೈರ್ ಬ್ರ್ಯಾಂಡ್‌ ಚೈತ್ರಾ ಮನೆಗೆ ಮಂಜು ಭೇಟಿ- ನವಜೋಡಿಗೆ ವಿಶೇಷ ಉಡುಗೊರೆ ಕೊಟ್ಟ ನಟ

    ‘ಬಿಗ್ ಬಾಸ್ ಕನ್ನಡ 11’ರ ಸ್ಪರ್ಧಿ ಚೈತ್ರಾ ಕುಂದಾಪುರ (Chaitra Kundapura) ಮೇ 9ರಂದು ಹಸೆಮಣೆ ಏರಿದ್ದಾರೆ. ಈ ಹಿನ್ನೆಲೆ ನವಜೋಡಿಗೆ ಶುಭಹಾರೈಸಲು ಚೈತ್ರಾ ಮನೆಗೆ ಉಗ್ರಂ ಮಂಜು ಭೇಟಿ ನೀಡಿ ವಿಶೇಷ ಉಡುಗೊರೆ ನೀಡಿದ್ದಾರೆ. ಇದನ್ನೂ ಓದಿ:ಭಾರತ-ಪಾಕ್ ಕದನ ವಿರಾಮಕ್ಕೆ ಸಲ್ಮಾನ್ ಖಾನ್ ಖುಷಿ; ಟೀಕೆ ಬೆನ್ನಲ್ಲೇ ಪೋಸ್ಟ್ ಡಿಲೀಟ್

    ಮೇ 9ರಂದು ನಡೆದ ಚೈತ್ರಾ ಮದುವೆಗೆ ಕಾರಣಾಂತರಗಳಿಂದ ಮಂಜು ಬರಲಾಗಿರಲಿಲ್ಲ. ಹೀಗಾಗಿ ನಿನ್ನೆ (ಮೇ 10) ಚೈತ್ರಾ ನಿವಾಸಕ್ಕೆ ಮಂಜು ಭೇಟಿ ನೀಡಿ ನವಜೋಡಿಗೆ ಶುಭಹಾರೈಸಿದ್ದಾರೆ. ಅದಷ್ಟೇ ಅಲ್ಲ, ಈ ಜೋಡಿಗೆ ವಿಶೇಷವಾದ ಗೋವಿನ ಮೂರ್ತಿಯನ್ನು ಉಡುಗೊರೆಯಾಗಿ ನೀಡಿದ್ದಾರೆ. ಇದನ್ನೂ ಓದಿ:‘ಯುದ್ಧ ಬೇಡ’ ಎಂದು ಮನವಿ ಮಾಡಿದ ಐಶ್ವರ್ಯಾ ರಾಜೇಶ್- ನೆಟ್ಟಿಗರಿಂದ ತರಾಟೆ

    ದೊಡ್ಮನೆಯಲ್ಲಿ ಸದಾ ಮಂಜು ಮತ್ತು ಚೈತ್ರಾ ಕಿತ್ತಾಡುತ್ತಿದ್ದರು. ಈಗ ಮುನಿಸೆಲ್ಲಾ ಮರೆತು ಚೈತ್ರಾ ನಿವಾಸಕ್ಕೆ ಮಂಜು ತೆರಳಿರೋದು ಫ್ಯಾನ್ಸ್‌ಗೆ ಖುಷಿ ಕೊಟ್ಟಿದೆ. ಬಿಗ್ ಬಾಸ್ ಶೋ ಮುಗಿದ್ಮೇಲೆಯೂ ಕೋಪವನ್ನು ಮುಂದುವರೆಸದೇ ಸ್ನೇಹದಿಂದ ಇರೋದನ್ನು ನೋಡಿ ಅಭಿಮಾನಿಗಳು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

    ಚೈತ್ರಾ ಮತ್ತು ಶ್ರೀಕಾಂತ್ 12 ವರ್ಷಗಳಿಂದ ಪ್ರೀತಿಸುತ್ತಿದ್ದರು. ಗುರುಹಿರಿಯರ ಸಮ್ಮತಿಯೊಂದಿಗೆ ಪ್ರೀತಿಸಿದ ಹುಡುಗನೊಂದಿಗೆ ಸರಳ ವಿವಾಹವಾಗಿ ಹೊಸ ಜೀವನಕ್ಕೆ ಕಾಲಿಟ್ಟಿದ್ದಾರೆ. ಕುಟುಂಬಕ್ಕೆ ಆಪ್ತರಾದ 100 ಜನರಿಗೆ ಮಾತ್ರ ಮದುವೆಗೆ ಆಹ್ವಾನ ನೀಡಲಾಗಿತ್ತು. ವೈದಿಕ ಶಾಸ್ತçದಂತೆ ಮದುವೆ ಕಾರ್ಯಕ್ರಮ ನಡೆದಿದೆ. ಈ ಸಂಭ್ರಮದಲ್ಲಿ ಬಿಗ್ ಬಾಸ್ ಸ್ಪರ್ಧಿಗಳಾದ ರಜತ್, ಗೋಲ್ಡ್ ಸುರೇಶ್ ಭಾಗಿಯಾಗಿ ನವದಂಪತಿಗೆ ಶುಭಹಾರೈಸಿದ್ದರು.


    ಕಾಲೇಜಿನಲ್ಲಿ ಓದುತ್ತಿದ್ದಾಗ ಚೈತ್ರಾಗೆ ಶ್ರೀಕಾಂತ್ ಕಶ್ಯಪ್ ಪರಿಚಯವಾಗಿತ್ತು. ಬಹುಕಾಲದ ಗೆಳೆಯನ ಜೊತೆ ಚೈತ್ರಾ ಮದುವೆಯಾಗಿದ್ದಾರೆ. ಆ್ಯನಿಮೇಷನ್ ಕೋರ್ಸ್ ಮಾಡಿರುವ ಶ್ರೀಕಾಂತ್ ಕಶ್ಯಪ್ ಸುದ್ದಿವಾಹಿನಿವೊಂದರಲ್ಲಿ ಚೈತ್ರಾ ಜೊತೆ ಕೆಲಸ ಮಾಡಿದ್ದರು. ಇದೀಗ ಜ್ಯೋತಿಷ್ಯ, ವಾಸ್ತು, ಪೌರೋಹಿತ್ಯದ ಕೆಲಸದಲ್ಲಿ ಶ್ರೀಕಾಂತ್ ತೊಡಗಿಸಿಕೊಂಡಿದ್ದಾರೆ.

  • ದಾಂಪತ್ಯ ಜೀವನಕ್ಕೆ ಕಾಲಿಟ್ಟ ‘ಬಿಗ್ ಬಾಸ್’ ಖ್ಯಾತಿಯ ರಂಜಿತ್

    ದಾಂಪತ್ಯ ಜೀವನಕ್ಕೆ ಕಾಲಿಟ್ಟ ‘ಬಿಗ್ ಬಾಸ್’ ಖ್ಯಾತಿಯ ರಂಜಿತ್

    ‘ಬಿಗ್ ಬಾಸ್’ ಖ್ಯಾತಿಯ ರಂಜಿತ್ (Ranjith) ಇಂದು (ಮೇ 11) ದಾಂಪತ್ಯ ಜೀವನಕ್ಕೆ (Wedding) ಕಾಲಿಟ್ಟಿದ್ದಾರೆ. ಬಹುಕಾಲದ ಗೆಳತಿ ಮಾನಸ ಗೌಡ ಜೊತೆ ಇಂದು ಅದ್ಧೂರಿಯಾಗಿ ಹಸೆಮಣೆ ಏರಿದ್ದಾರೆ. ಇದನ್ನೂ ಓದಿ:Mother’s Day 2025: ಅಮ್ಮನ ಬಗ್ಗೆ ಹೃದಯಸ್ಪರ್ಶಿ ಪೋಸ್ಟ್ ಹಂಚಿಕೊಂಡ ರಾಧಿಕಾ ಪಂಡಿತ್

    ಮಾನಸ ಜೊತೆಗಿನ ಹಲವು ವರ್ಷಗಳ ಪ್ರೀತಿಗೆ ಇಂದು ಮದುವೆಯ ಮುದ್ರೆ ಒತ್ತಿದ್ದಾರೆ. ದೊಡ್ಡಬಳ್ಳಾಪುರದ ಮೇನ್ ರೋಡ್, ಹೊನ್ನೇನಹಳ್ಳಿಯಲ್ಲಿ ರಂಜಿತ್ ಮದುವೆ ಜರುಗಿದೆ. ಈ ಜೋಡಿಗೆ ತುಕಾಲಿ ಸಂತೋಷ್ ಮತ್ತು ಮಾನಸಾ ದಂಪತಿ, ಗೋಲ್ಡ್ ಸುರೇಶ್, ಯಮುನಾ, ರಜತ್, ರಂಗಾಯಣ ರಘು, ಶೋಭರಾಜ್ ಸೇರಿದಂತೆ ಅನೇಕರು ಭಾಗಿಯಾಗಿ ಶುಭಹಾರೈಸಿದ್ದಾರೆ.ಇದನ್ನೂ ಓದಿ:‘ಯುದ್ಧ ಬೇಡ’ ಎಂದು ಮನವಿ ಮಾಡಿದ ಐಶ್ವರ್ಯಾ ರಾಜೇಶ್- ನೆಟ್ಟಿಗರಿಂದ ತರಾಟೆ

     

    View this post on Instagram

     

    A post shared by Manasa Gowda (@manasam23)

    ಮಾನಸ ಗೌಡ ಅವರು ಫ್ಯಾಷನ್ ಸ್ಟುಡಿಯೋ ಹೊಂದಿದ್ದಾರೆ. ಫ್ಯಾಷನ್ ಡಿಸೈನರ್ ಆಗಿ ಕೆಲಸ ಮಾಡುತ್ತಿದ್ದಾರೆ. ಇನ್ಸ್ಟಾಗ್ರಾಂನಲ್ಲಿ ಪರಿಚಿತರಾದ ಮಾನಸ ಜೊತೆ ರಂಜಿತ್‌ಗೆ ಲವ್ ಆಗಿತ್ತು. ಇದೀಗ ಇಬ್ಬರ ಪ್ರೀತಿ ಮದುವೆಗೆ ಮುನ್ನುಡಿ ಬರೆದಿದೆ.

  • ದಾಂಪತ್ಯ ಜೀವನಕ್ಕೆ ಕಾಲಿಟ್ಟ ‘ಬಿಗ್ ಬಾಸ್’ ಖ್ಯಾತಿಯ ಚೈತ್ರಾ ಕುಂದಾಪುರ

    ದಾಂಪತ್ಯ ಜೀವನಕ್ಕೆ ಕಾಲಿಟ್ಟ ‘ಬಿಗ್ ಬಾಸ್’ ಖ್ಯಾತಿಯ ಚೈತ್ರಾ ಕುಂದಾಪುರ

    ‘ಬಿಗ್ ಬಾಸ್’ ಖ್ಯಾತಿಯ ಚೈತ್ರಾ ಕುಂದಾಪುರ (Chaithra Kundapura) ಇಂದು (ಮೇ 9) ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಉಡುಪಿಯ ಹಿರಿಯಡ್ಕದ ಶ್ರೀಕಾಂತ್ ಕಶ್ಯಪ್ (Srikanth Kashyap) ಜೊತೆ ಹಸೆಮಣೆ ಏರಿದ್ದಾರೆ.ಇದನ್ನೂ ಓದಿ:Exclusive: ಕೊನೆಗೂ ಭಾವಿ ಪತಿಯನ್ನು ಪರಿಚಯಿಸಿದ ಚೈತ್ರಾ‌ ಕುಂದಾಪುರ

    ಚೈತ್ರಾ ಮತ್ತು ಶ್ರೀಕಾಂತ್ 12 ವರ್ಷಗಳಿಂದ ಪ್ರೀತಿಸುತ್ತಿದ್ದರು. ಗುರುಹಿರಿಯರ ಸಮ್ಮತಿಯೊಂದಿಗೆ ಪ್ರೀತಿಸಿದ ಹುಡುಗನೊಂದಿಗೆ ಸರಳ ವಿವಾಹವಾಗಿ ಹೊಸ ಜೀವನಕ್ಕೆ ಕಾಲಿಟ್ಟಿದ್ದಾರೆ. ಕುಟುಂಬಕ್ಕೆ ಆಪ್ತರಾದ 100 ಜನರಿಗೆ ಮಾತ್ರ ಮದುವೆಗೆ ಆಹ್ವಾನ ನೀಡಲಾಗಿತ್ತು. ವೈದಿಕ ಶಾಸ್ತ್ರದಂತೆ ಮದುವೆ ಕಾರ್ಯಕ್ರಮ ನಡೆದಿದೆ. ಈ ಸಂಭ್ರಮದಲ್ಲಿ ಬಿಗ್ ಬಾಸ್ ಸ್ಪರ್ಧಿಗಳಾದ ರಜತ್ (Rajath), ಗೋಲ್ಡ್ ಸುರೇಶ್ (Gold Suresh) ಭಾಗಿಯಾಗಿ ನವದಂಪತಿಗೆ ಶುಭಹಾರೈಸಿದ್ದಾರೆ. ಇದನ್ನೂ ಓದಿ:12 ವರ್ಷಗಳ ಪ್ರೀತಿ- ಮೇ 9ರಂದು ಚೈತ್ರಾ ಕುಂದಾಪುರ ಮದುವೆ

    ಕಾಲೇಜಿನಲ್ಲಿ ಓದುತ್ತಿದ್ದಾಗ ಚೈತ್ರಾಗೆ ಶ್ರೀಕಾಂತ್ ಕಶ್ಯಪ್ ಪರಿಚಯವಾಗಿತ್ತು. ಜಗಳದಿಂದ ಶುರುವಾದ ಸ್ನೇಹ ಈಗ ಮದುವೆಗೆ ಮುನ್ನುಡಿ ಬರೆದಿದೆ. ಆ್ಯನಿಮೇಷನ್ ಕೋರ್ಸ್ ಮಾಡಿರುವ ಶ್ರೀಕಾಂತ್ ಕಶ್ಯಪ್ ಸುದ್ದಿವಾಹಿನಿವೊಂದರಲ್ಲಿ ಚೈತ್ರಾ ಜೊತೆ ಕೆಲಸ ಮಾಡಿದ್ದರು. ಇದೀಗ ಜ್ಯೋತಿಷ್ಯ, ವಾಸ್ತು, ಪೌರೋಹಿತ್ಯದ ಕೆಲಸದಲ್ಲಿ ಶ್ರೀಕಾಂತ್ ತೊಡಗಿಸಿಕೊಂಡಿದ್ದಾರೆ.

    ಇತ್ತೀಚೆಗೆ ‘ಮಜಾ ಟಾಕೀಸ್’ ಶೋಗೆ ಬಿಗ್ ಬಾಸ್ ಸ್ಪರ್ಧಿಗಳಾದ ಧರ್ಮ ಕೀರ್ತಿರಾಜ್, ಅನುಷಾ ರೈ ಹಾಗೂ ಚೈತ್ರಾ ಎಂಟ್ರಿ ಕೊಟ್ಟಿದ್ದರು. ಚೈತ್ರಾ ಕುಂದಾಪುರ ಅವರಿಗೆ ಮದುವೆ ಫಿಕ್ಸ್ ಅಗಿದೆ ಎನ್ನುತ್ತಲೇ ಸೃಜನ್ ಲೋಕೇಶ್ ಮಾತು ಶುರು ಮಾಡಿದ್ದರು. ಚೈತ್ರಾಗೆ ಸೃಜನ್ ಲವ್ ಅಥವಾ ಅರೇಂಜ್ಡ್ ಮ್ಯಾರೇಜಾ ಎಂಬ ಪ್ರಶ್ನಿಸಿದ್ದರು. ಇದಕ್ಕೆ ಎರಡು ಎಂದು ಚೈತ್ರಾ ಉತ್ತರ ನೀಡಿದ್ದರು. ಈ ಮಧ್ಯೆ ಅವರದ್ದು 12 ವರ್ಷದ ಲವ್ ಸ್ಟೋರಿ ಎಂಬ ಅನುಷಾ ರೈ ಮಾತಿಗೆ, ಚೈತ್ರಾ ಯೆಸ್ ಕಾಲೇಜಿನಲ್ಲಿ ಲವ್ ಶುರುವಾಗಿದ್ದು ಅನ್ನೋ ವಿಚಾರವನ್ನು ರಿವೀಲ್ ಮಾಡಿದ್ದರು.

  • Exclusive: ಕೊನೆಗೂ ಭಾವಿ ಪತಿಯನ್ನು ಪರಿಚಯಿಸಿದ ಚೈತ್ರಾ‌ ಕುಂದಾಪುರ

    Exclusive: ಕೊನೆಗೂ ಭಾವಿ ಪತಿಯನ್ನು ಪರಿಚಯಿಸಿದ ಚೈತ್ರಾ‌ ಕುಂದಾಪುರ

    ಬಿಗ್ ಬಾಸ್ (Bigg Boss) ಖ್ಯಾತಿಯ ಚೈತ್ರಾ ಕುಂದಾಪುರ (Chaitra Kundapura) ಮೇ 9ರಂದು ಹಸೆಮಣೆ ಏರಲು ಸಜ್ಜಾಗಿದ್ದಾರೆ. ಉಡುಪಿಯ ಹಿರಿಯಡ್ಕದ ಶ್ರೀಕಾಂತ್ ಕಶ್ಯಪ್ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಡಲಿದ್ದಾರೆ.

    ಕಾಲೇಜಿನಲ್ಲಿ ಓದುತ್ತಿದ್ದಾಗ ಶ್ರೀಕಾಂತ್ ಕಶ್ಯಪ್ ಪರಿಚಯವಾಗಿತ್ತು. ಜಗಳದಿಂದ ಶುರುವಾದ ಸ್ನೇಹ ಈಗ ಹಸೆಮಣೆ ಏರಲು ಮುನ್ನುಡಿ ಬರೆದಿದೆ. ಆ್ಯನಿಮೇಷನ್ ಕೋರ್ಸ್ ಮಾಡಿದ್ದ ಶ್ರೀಕಾಂತ್ ಕಶ್ಯಪ್ ಸುದ್ದಿವಾಹಿನಿವೊಂದರಲ್ಲಿ ಚೈತ್ರಾ ಜೊತೆ ಕೆಲಸ ಮಾಡಿದ್ದರು. ಇದೀಗ ಜ್ಯೋತಿಷ್ಯ, ವಾಸ್ತು, ಪೌರೋಹಿತ್ಯದ ಕೆಲಸದಲ್ಲಿ ಶ್ರೀಕಾಂತ್ ತೊಡಗಿಸಿಕೊಂಡಿದ್ದಾರೆ. ಸತತ 12 ವರ್ಷಗಳ ಪ್ರೀತಿಗೆ ಮದುವೆ ಮುದ್ರೆ ಒತ್ತಲು ಈ ಜೋಡಿ ಸಜ್ಜಾಗಿದೆ.

    ನಮ್ಮದು 12 ವರ್ಷಗಳ ಪ್ರೀತಿ. ಲವ್ ಕಮ್ ಅರೇಂಜ್ ಮ್ಯಾರೇಜ್ ಆಗಿದೆ. ಗುರುಹಿರಿಯರ ಸಮ್ಮತಿಯ ಮೇರೆಗೆ ಪ್ರೀತಿಸಿದ ಹುಡುಗನೊಂದಿಗೆ ಮೇ 9ರಂದು ಕುಂದಾಪುರದಲ್ಲಿ ಮದುವೆ ಆಗುತ್ತಿದ್ದೇನೆ. ಈಗಾಗಲೇ ಮೆಹಂದಿ ಸೇರಿದಂತೆ ಮದುವೆ ಶಾಸ್ತ್ರಗಳು ಆರಂಭ ಆಗಿದೆ. ಕುಟುಂಬಕ್ಕೆ ಆಪ್ತರಾದ 100 ಜನರಿಗೆ ಮಾತ್ರ ಮದುವೆಗೆ ಆಹ್ವಾನಿಸಿದ್ದೇವೆ. ದೇವಸ್ಥಾನವೊಂದರಲ್ಲಿ ಸರಳವಾಗಿ ಮದುವೆಯಾಗುತ್ತಿದೆ. ವೈದಿಕ ಶಾಸ್ತ್ರದಂತೆ ಮದುವೆ ಕಾರ್ಯಕ್ರಮ ನಡೆಯಲಿದೆ ಎಂದಿದ್ದಾರೆ.

    ಇತ್ತೀಚೆಗೆ ‘ಮಜಾ ಟಾಕೀಸ್’ ಶೋಗೆ ಬಿಗ್ ಬಾಸ್ ಸ್ಪರ್ಧಿಗಳಾದ ಧರ್ಮ ಕೀರ್ತಿರಾಜ್, ಅನುಷಾ ರೈ ಹಾಗೂ ಚೈತ್ರಾ ಎಂಟ್ರಿ ಕೊಟ್ಟಿದ್ದರು. ಚೈತ್ರಾ ಕುಂದಾಪುರ ಅವರಿಗೆ ಮದುವೆ ಫಿಕ್ಸ್ ಅಗಿದೆ ಎನ್ನುತ್ತಲೇ ಸೃಜನ್ ಲೋಕೇಶ್ ಮಾತು ಶುರು ಮಾಡಿದ್ದರು. ಚೈತ್ರಾಗೆ ಸೃಜನ್ ಲವ್ ಅಥವಾ ಅರೇಂಜ್ಡ್ ಮ್ಯಾರೇಜಾ ಎಂಬ ಪ್ರಶ್ನಿಸಿದ್ದರು. ಇದಕ್ಕೆ ಎರಡು ಎಂದು ಚೈತ್ರಾ ಉತ್ತರ ನೀಡಿದ್ದರು. ಈ ಮಧ್ಯೆ ಅವರದ್ದು 12 ವರ್ಷದ ಲವ್ ಸ್ಟೋರಿ ಎಂಬ ಅನುಷಾ ರೈ ಮಾತಿಗೆ, ಚೈತ್ರಾ ಯೆಸ್ ಕಾಲೇಜಿನಲ್ಲಿ ಲವ್ ಶುರುವಾಗಿದ್ದು ಅನ್ನೋ ವಿಚಾರವನ್ನು ರಿವೀಲ್ ಮಾಡಿದ್ದರು.

  • ರಾಗಿಣಿ ಜೊತೆ ‘ಸಿಂಧೂರಿ’ ಕಥೆ ಹೇಳಲು ಬಂದ ಧರ್ಮ ಕೀರ್ತಿರಾಜ್

    ರಾಗಿಣಿ ಜೊತೆ ‘ಸಿಂಧೂರಿ’ ಕಥೆ ಹೇಳಲು ಬಂದ ಧರ್ಮ ಕೀರ್ತಿರಾಜ್

    ಸ್ಯಾಂಡಲ್‌ವುಡ್ ನಟ ಧರ್ಮ ಕೀತೀರಾಜ್ ಅವರು (Dharma Kirthiraj) ‘ಬಿಗ್ ಬಾಸ್ ಕನ್ನಡ 11’ರ ಬಳಿಕ ಸಾಲು ಸಾಲು ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ಸದ್ಯ ಅವರು ತುಪ್ಪದ ಬೆಡಗಿ ರಾಗಿಣಿ (Ragini Dwivedi) ಜೊತೆ ‘ಸಿಂಧೂರಿ’ ಎಂಬ ಕಥೆ ಹೇಳಲು ರೆಡಿಯಾಗಿದ್ದಾರೆ.

    ‘ಸಿಂಧೂರಿ’ (Sindhoori) ಚಿತ್ರದಲ್ಲಿ ಧರ್ಮ ಕೀರ್ತಿರಾಜ್ ಮತ್ತು ರಾಗಿಣಿ ಪ್ರಮುಖ ಪಾತ್ರದಲ್ಲಿ ನಟಿಸುತ್ತಿದ್ದಾರೆ. ಧರ್ಮ ಡಬಲ್ ರೋಲ್‌ನಲ್ಲಿ ಕಾಣಿಸಿಕೊಳ್ಳಲಿದ್ದಾರೆ. ರಾಗಿಣಿ ಪಾತ್ರಕ್ಕೂ ಚಿತ್ರದಲ್ಲಿ ತೂಕವಿದೆ. ಇಬ್ಬರೂ ಇದೀಗ 1990ರ ಕಥೆ ಹೇಳಲು ಸಜ್ಜಾಗಿದ್ದಾರೆ. ಈ ಸಿನಿಮಾಗೆ ಶಂಕರ್ ಕೋನಮಾನಹಳ್ಳಿ ಎಂಬುವವರು ನಿರ್ದೇಶನ ಮಾಡ್ತಿದ್ದಾರೆ. ಇದನ್ನೂ ಓದಿ:ಮತ್ತೆ ಬೆಳ್ಳಿಪರದೆಯಲ್ಲಿ ಮಿಂಚಲು ಸಜ್ಜಾದ ದೀಪಿಕಾ ಪಡುಕೋಣೆ

    ಏ.30ರಂದು ಅಕ್ಷಯ ತೃತೀಯ ಹಿನ್ನೆಲೆ ‘ಸಿಂಧೂರಿ’ ಸಿನಿಮಾದ ಮುಹೂರ್ತ ಕಾರ್ಯಕ್ರಮ ನಡೆಯಲಿದೆ. ನಾಳೆ ಈ ಸಿನಿಮಾ ಬಗ್ಗೆ ಮತ್ತಷ್ಟು ಅಪ್‌ಡೇಟ್ ಹೊರಬೀಳಲಿದೆ. ಇದನ್ನೂ ಓದಿ: ತಪ್ಪು ಮಾಡಿದವರಿಗೆ ಶಿಕ್ಷೆಯಾಗಲಿ: ಉಗ್ರರ ದಾಳಿ ಖಂಡಿಸಿದ ಶ್ರೀನಿಧಿ ಶೆಟ್ಟಿ

    ಟಕೀಲಾ, ಅಮರಾವತಿ ಪೊಲೀಸ್ ಸ್ಟೇಷನ್, ತೆಲುಗು ಬ್ಲಡ್ ರೋಸಸ್, ನಯನ ಮಧುರ, ವಸುಂಧರ ದೇವಿ ಸೇರಿದಂತೆ ಹಲವು ಸಿನಿಮಾಗಳು ಧರ್ಮ ಕೀರ್ತಿರಾಜ್ ಕೈಯಲ್ಲಿವೆ.