Tag: bbk 11

  • BBK 11: ದೊಡ್ಮನೆಯಲ್ಲಿ ನಾಮಿನೇಷನ್‌ ಕಿಡಿ- ಮಂಜು ತಲೆ ಮೇಲೆ ಬಾಟಲಿ ಹೊಡೆದ ಮೋಕ್ಷಿತಾ

    BBK 11: ದೊಡ್ಮನೆಯಲ್ಲಿ ನಾಮಿನೇಷನ್‌ ಕಿಡಿ- ಮಂಜು ತಲೆ ಮೇಲೆ ಬಾಟಲಿ ಹೊಡೆದ ಮೋಕ್ಷಿತಾ

    ಬಿಗ್ ಬಾಸ್ ಮನೆಯಲ್ಲಿ (Bigg Boss Kannada 11) ನಾಮಿನೇಷನ್ ಕಿಡಿ ಹೊತ್ತುಕೊಂಡಿದೆ. ಪ್ರತಿವಾರದಂತೆ ಈ ವಾರವೂ ವಿಭಿನ್ನವಾಗಿ ನೇರವಾಗಿ ನಾಮಿನೇಷನ್ ಟಾಸ್ಕ್ ನೀಡಲಾಗಿದೆ. ಈ ವೇಳೆ, ಬಾಟಲಿ ತೆಗೆದು ಮಂಜು ತಲೆಗೆ ಹೊಡೆದು ವಿಭಿನ್ನವಾಗಿ ಮೋಕ್ಷಿತಾ ನಾಮಿನೇಟ್ ಮಾಡಿದ್ದಾರೆ. ಇದನ್ನೂ ಓದಿ:ಚಿತ್ರರಂಗದ ವರ್ತನೆಗೆ ಆಕ್ಷೇಪ- ತೆಲುಗು ನಟರ ಕಿವಿ ಹಿಂಡಿದ ಸಿಎಂ ರೇವಂತ್ ರೆಡ್ಡಿ

    ಸ್ಪರ್ಧಿಗಳು ಮನೆಯಿಂದ ಆಚೆ ಕಳುಹಿಸಲು ಇಷ್ಟ ಪಡುವ ಸ್ಪರ್ಧಿಗಳ ತಲೆ ಮೇಲೆ ಬಾಟಲಿಯಿಂದ ಹೊಡೆದು ನಾಮಿನೇಟ್ ಮಾಡಬೇಕು ಎಂದು ‘ಬಿಗ್‌ ಬಾಸ್‌’ ಸೂಚಿಸಿದರು. ಅದರಂತೆಯೇ ಭವ್ಯಾ ಅವರು, ಐಶ್ವರ್ಯಾ (Aishwarya) ತಲೆಗೆ ಬಾಟಲಿಯಲ್ಲಿ ಹೊಡೆದಿದ್ದಾರೆ. ಬಳಿಕ ಮೋಕ್ಷಿತಾ ಉಗ್ರಂ ಮಂಜು (Ugramm Manju) ತಲೆಗೆ ಬಾಟಲಿಯಿಂದ ಹೊಡೆದಿದ್ದಾರೆ. ಈ ವೇಳೆ, ಇಬ್ಬರ ನಡುವೆ ವಾಕ್ಸಮರ ನಡೆದಿದೆ.

    ನೀವು ಮನೆಯಲ್ಲಿ ಕಾಣಿಸಿಕೊಂಡಿಲ್ಲ ಎಂದು ಕಾರಣ ನೀಡಿ ನಾಮಿನೇಟ್‌ ಮಾಡಿದ್ದಾರೆ. ಇದಕ್ಕೆ ರೊಚ್ಚಿಗೇಳುವ ಮಂಜು, ನಾಳೆಯಿಂದ ಈ ಮನೆಯಲ್ಲಿ ಹೇಗೆ ಕಾಣಿಸಿಕೊಳ್ಳಬೇಕು ಎಂದು ನಿಮ್ಮ ಬಳಿ ಟ್ಯೂಷನ್‌ಗೆ ಬರುತ್ತೇನೆ ಎಂದಿದ್ದಾರೆ. ನಿಮಗೆ ನಾನು ಕಾಣಿಸಿಕೊಳ್ಳಲು ಏನಾದರೂ ತಂದುಕೊಡಬೇಕಾ ಎಂದು ಮೋಕ್ಷಿತಾ ಮೇಲೆ ಕೆಂಡ ಕಾರಿದ್ದಾರೆ.

    ಆಗ ಕೆರಳಿದ ಮೋಕ್ಷಿತಾ, ನನಗೆ ಅನಿಸಿದ್ದನ್ನು ನಾನು ಹೇಳಿದ್ದೀನಿ. ನೀವು ಯಾರು ನನಗೆ ವೈಸ್ ರೈಸ್ ಮಾಡೋಕೆ ಎಂದು ತಿರುಗೇಟು ನೀಡಿದ್ದಾರೆ. ಕ್ಷುಲ್ಲಕ ಕಾರಣಗಳಿಗೆ ನಾನು ನಾಮಿನೇಟ್ ಆಗಲ್ಲ ಎಂದ ಮಂಜುಗೆ, ನಿಮ್ಮನ್ನು ನಾಮಿನೇಟ್ ಮಾಡೋದು ನನ್ನಿಷ್ಟ. ಇದು  ನನ್ನ ನಿರ್ಧಾರ ಎಂದು ಬಾಟಲಿಯಿಂದ ಮಂಜು ತಲೆಗೆ ಮೋಕ್ಷಿತಾ (Mokshitha Pai) ಹೊಡೆದಿದ್ದಾರೆ. ಇಬ್ಬರ ಕಿರಿಕ್‌ ನೋಡಿ ಮನೆ ಮಂದಿ ಸೈಲೆಂಟ್‌ ಆಗಿದ್ದಾರೆ.

  • BBK 11: ರಜತ್ ರಂಪಾಟಕ್ಕೆ ಚೈತ್ರಾ ಕುಂದಾಪುರ ಗಪ್‌ಚುಪ್‌

    BBK 11: ರಜತ್ ರಂಪಾಟಕ್ಕೆ ಚೈತ್ರಾ ಕುಂದಾಪುರ ಗಪ್‌ಚುಪ್‌

    ನ್ನಡದ ಬಿಗ್ ಬಾಸ್ ಮನೆಯ (Bigg Boss Kannada 11) ಆಟ ದಿನದಿಂದ ದಿನಕ್ಕೆ ರಂಗೇರುತ್ತಿದೆ. ದೊಡ್ಮನೆಯ ಆಟ 90ನೇ ದಿನದತ್ತ ಮುನ್ನುಗ್ಗುತ್ತಿದೆ. ಇದರ ನಡುವೆ ಬಿಗ್ ಬಾಸ್‌ನಲ್ಲಿ ರಜತ್ (Rajath) ರಂಪಾಟ ಜೋರಾಗಿದೆ. ಸಿಕ್ಕಿದ್ದೇ ಚಾನ್ಸ್ ಅಂತ ಮಂಜು ಮತ್ತು ಚೈತ್ರಾಗೆ ಸಖತ್ ಆಗಿ ಆಟ ಆಡಿಸಿದ್ದಾರೆ. ಇದನ್ನೂ ಓದಿ:ಕಾಲ್ತುಳಿತ ಪ್ರಕರಣ: ಮೃತ ಮಹಿಳೆ ಕುಟುಂಬಕ್ಕೆ 2 ಕೋಟಿ ಪರಿಹಾರ ಘೋಷಿಸಿದ ಅಲ್ಲು ಅರ್ಜುನ್ ತಂದೆ

    ದೊಡ್ಮನೆಯಲ್ಲಿ ಈ ವಾರ ಎರಡು ತಂಡವಾಗಿ ವಿಂಗಡಣೆಯಾಗಿದೆ. ಒಂದು ತಂಡದಲ್ಲಿ ಚೈತ್ರಾ ಕುಂದಾಪುರ, ಐಶ್ವರ್ಯಾ, ಮಂಜು, ಗೌತಮಿ, ಹನುಮಂತ ಒಂದು ಟೀಮ್‌ನಲ್ಲಿದ್ದಾರೆ. ಮತ್ತೊಂದು ಟೀಮ್‌ನಲ್ಲಿ ತ್ರಿವಿಕ್ರಮ್, ಭವ್ಯಾ, ಧನರಾಜ್, ರಜತ್ ಹಾಗೂ ಮೋಕ್ಷಿತಾ ಇದ್ದಾರೆ. ನಿನ್ನೆಯ ಸಂಚಿಕೆಯಲ್ಲಿ ತ್ರಿವಿಕ್ರಮ್ ತಂಡದವರು ಬಿಗ್ ಬಾಸ್ ರೆಸಾರ್ಟ್‌ನಲ್ಲಿ ಕೆಲಸ ಮಾಡುವವರಾಗಿದ್ದರು. ಉಗ್ರಂ ಮಂಜು ಟೀಮ್ ರೆಸಾರ್ಟ್‌ಗೆ ಅತಿಥಿಗಳಾಗಿ ಎಂಟ್ರಿ ಕೊಟ್ಟಿದ್ದರು. ಈಗ ಅದು ಉಲ್ಟಾ ಆಗಿದೆ.

    ನಿನ್ನೆ ಮಂಜು ತಂಡ ಬೇಕಾ ಬಿಟ್ಟಿಯಾಗಿ ರೆಸಾರ್ಟ್ ಕೆಲಸಗಾರರ ಮೇಲೆ ದರ್ಪ ತೋರಿಸಿದ್ದರು. ಚೈತ್ರಾ ಕುಂದಾಪುರ (Chaithra Kundapura) ಅಂತೂ ಸಿಕ್ಕಿದ್ದೇ ಚಾನ್ಸ್ ಅಂತ ರಜತ್‌ಗೆ ಕೆಲಸ ಕೊಟ್ಟಿದ್ದರು. ಈಗ ಆಟದಲ್ಲಿ ‘ಬಿಗ್ ಬಾಸ್’ ಟ್ವಿಸ್ಟ್ ಕೊಟ್ಟಿದ್ದಾರೆ. ನಿನ್ನೆ ಕೆಲಸಗಾರರಾಗಿದ್ದ ತ್ರಿವಿಕ್ರಮ್ ಟೀಮ್ ಈಗ ಅತಿಥಿಗಳಾಗಿದ್ದಾರೆ. ಮಂಜು ಟೀಮ್ ಬಿಗ್ ಬಾಸ್ ರೆಸಾರ್ಟ್‌ನಲ್ಲಿ ಕೆಲಸ ಮಾಡುವವರಾಗಿದ್ದಾರೆ.

    ಈಗ ಬಿಗ್ ಬಾಸ್ ಮನೆಯಲ್ಲಿ ಅಸಲಿ ಆಟ ಶುರುವಾಗಿದೆ. ತ್ರಿವಿಕ್ರಮ್ ತಂಡ ತಮ್ಮ ಆಟವನ್ನು ಸ್ಟಾರ್ಟ್ ಮಾಡಿದ್ದಾರೆ. ಬೇಕು ಬೇಕು ಅಂತಾನೇ ಬಿಗ್ ಬಾಸ್ ರೆಸಾರ್ಟ್‌ನಲ್ಲಿ ಕೆಲಸ ಮಾಡುವವರಿಗೆ ಹೆಚ್ಚಾಗಿ ವರ್ಕ್ ಕೊಟ್ಟಿದ್ದಾರೆ. ರಜತ್ ಅಂತೂ ಸಿಕ್ಕಿದ್ದೇ ಚಾನ್ಸ್ ಚೈತ್ರಾ ಮೇಲೆ ಸೇಡು ತೀರಿಸಿಕೊಂಡಿದ್ದಾರೆ. ಎದುರಾಳಿ ತಂಡಕ್ಕೆ ಸಖತ್ ಆಗಿ ಕ್ವಾಟ್ಲೆ ಕೊಟ್ಟಿದ್ದಾರೆ. ಆಗ ಮೋಕ್ಷಿತಾ ತೊಡೆ ಮೇಲೆ ಕುಳಿತುಕೊಂಡಿದ್ದಾರೆ. ಆಗ ರಜತ್ ಮೇಲೆ ಮೋಕ್ಷಿತಾ ರೇಗಾಡಿದ್ದಾರೆ. ಇದು ವಾಹಿನಿ ಹಂಚಿಕೊಂಡ ಪ್ರೋಮೋದಲ್ಲಿ ಹೈಲೆಟ್ ಆಗಿದೆ.

  • ಉಗ್ರಂ ಮಂಜು ಅಬ್ಬರಕ್ಕೆ ಹಣ್ಣುಗಾಯಿ ನೀರುಗಾಯಿ ಮಾಡುವ ಶಪಥ ಮಾಡಿದ ರಜತ್

    ಉಗ್ರಂ ಮಂಜು ಅಬ್ಬರಕ್ಕೆ ಹಣ್ಣುಗಾಯಿ ನೀರುಗಾಯಿ ಮಾಡುವ ಶಪಥ ಮಾಡಿದ ರಜತ್

    ದೊಡ್ಮನೆಯ ಆಟ 90ನೇ ದಿನದತ್ತ ಮುನ್ನುಗ್ಗುತ್ತಿದೆ. ಪ್ರತಿವಾರ ವಿಭಿನ್ನ ಟಾಸ್ಕ್‌ಗಳನ್ನೇ ಕೊಡೋ ‌ʻಬಿಗ್‌ ಬಾಸ್’ (Bigg Boss Kannada 11) ಈ ಬಾರಿ ದೊಡ್ಮನೆಯನ್ನು ರೆಸಾರ್ಟ್ ಆಗಿ ಬದಲಿಸಿದ್ದಾರೆ. ಈ ರೆಸಾರ್ಟ್‌ನಲ್ಲಿ ಮೋಜು, ಮಸ್ತಿ ಮಾಡಲು ಭವ್ಯಾ ಗೌಡ (Bhavya Gowda) ಹಾಗೂ ಚೈತ್ರಾ ಕುಂದಾಪುರ (Chaithra Kundapura) ನೇತೃತ್ವದಲ್ಲಿ ಎರಡು ತಂಡಗಳಾಗಿ ವಿಂಗಡಿಸಲಾಗಿದೆ. ಇದನ್ನೂ ಓದಿ:ಸ್ಯಾಂಡಲ್‌ವುಡ್‌ನ ಶಿವಣ್ಣನಿಗೆ ಯಶಸ್ವಿ ಶಸ್ತ್ರಚಿಕಿತ್ಸೆ

    ಭವ್ಯಾ ಟೀಮ್‌, ರೆಸಾರ್ಟ್‌ನಲ್ಲಿ ಕೆಲಸ ಮಾಡುವ ಉದ್ಯೋಗಿಗಳಾಗಿದ್ದು, ಚೈತ್ರಾ ಟೀಮ್ ಗೆಸ್ಟ್‌ಗಳಾಗಿದ್ದಾರೆ. ಅತಿಥಿಗಳು ತಮಗೆ ಬೇಕಾದ ರೀತಿಯಲ್ಲಿ ಕೆಲಸಗಾರರನ್ನು ನಡೆಸಿಕೊಳ್ತಿದ್ದಾರೆ. ಚೈತ್ರಾ ತಂಡದಲ್ಲಿರುವ ಉಗ್ರಂ ಮಂಜು ಕೊಡ್ತಿರುವ ಕಾಟಕ್ಕೆ, ಟಾರ್ಚರ್‌ಗೆ ಸೇವೆ ಮಾಡುವ ಸಿಬ್ಬಂದಿ ಸುಸ್ತಾಗಿದ್ದಾರೆ. ಇವರ ಕಾಟ ತಾಳಲಾರದೇ ರಜತ್‌ ಅವರು ಎದುರಾಳಿಗಳನ್ನು ಹಣ್ಣುಗಾಯಿ ನೀರುಗಾಯಿ ಮಾಡುವ ಶಪಥ ಮಾಡಿದ್ದಾರೆ.

    ಇತ್ತ ಎದುರಾಳಿ ತಂಡದ ವಿಪರಿತ ಕಾಟ ತಾಳಲಾರದೇ ರೆಸಾರ್ಟ್ ಮ್ಯಾನೇಜರ್ ಭವ್ಯಾ ಕಣ್ಣೀರಿಟ್ಟಿದ್ದಾರೆ. ಮಧ್ಯರಾತ್ರಿ ಏನೇ ಕೇಳಿದ್ರೂ ಮಾಡಿಕೊಡಬೇಕು ಎದುರಾಳಿ ತಂಡ ಹೇಳಿದ್ದಕ್ಕೆ ಭವ್ಯಾ ಅತ್ತಿದ್ದಾರೆ. ಇತ್ತ ಚೈತ್ರಾ ತಮ್ಮ ದರ್ಬಾರ್ ನಡೆಸಿದ್ದಾರೆ. ರಾತ್ರಿ ಲೈಟ್ಸ್ ಆಫ್ ಆದರೂ ನೀವು ನಮ್ಮ ಸೇವೆ ಮಾಡಬೇಕು. ಇನ್ನೂ ಐಶ್ವರ್ಯಾ ನನ್ನ ತಲೆ ಒತ್ತಬೇಕು ಎಂದು ಪಟ್ಟು ಹಿಡಿದಿದ್ದಾರೆ.

    ಮಂಜು ನನಗೆ ಇವತ್ತು ಮ್ಯೂಜಿಕಲ್ ನೈಟ್ ಬೇಕು ಎಂದಿದ್ದಾರೆ. ಇತ್ತ ರೊಚ್ಚಿಗೆದ್ದಿರುವ ರಜತ್, ನಮಗೂ ಅವಕಾಶ ಸಿಗುತ್ತದೆ. ನಿಮ್ಮನ್ನು ಹಣ್ಣುಗಾಯಿ, ನೀರುಗಾಯಿ ಮಾಡಿಲ್ಲ ಅಂದ್ರೆ ನನ್ನ ಹೆಸರು ಬುಜ್ಜಿ ಅಲ್ಲ ನೋಡಿಕೋ ಎಂದು ಉಗ್ರಂ ಮಂಜುಗೆ ಖಡಕ್‌ ಆಗಿ ವಾರ್ನಿಂಗ್‌ ಕೊಟ್ಟಿದ್ದಾರೆ. ಒಟ್ನಲ್ಲಿ ಅಧಿಕಾರದ ದರ್ಪದಿಂದ ಮರೆಯುತ್ತಿರುವ ಚೈತ್ರಾ ಟೀಮ್ ಎದುರು ಭವ್ಯಾ ತಂಡ ಸೋತು ಸುಣ್ಣವಾಗಿರೋದಂತೂ ಗ್ಯಾರಂಟಿ.

  • ಎಲಿಮಿನೇಷನ್ ಹೈಡ್ರಾಮಾ: ಬಿಗ್ ಬಾಸ್‌ನಿಂದ ಹೊರಬಂದ ತ್ರಿವಿಕ್ರಮ್!

    ಎಲಿಮಿನೇಷನ್ ಹೈಡ್ರಾಮಾ: ಬಿಗ್ ಬಾಸ್‌ನಿಂದ ಹೊರಬಂದ ತ್ರಿವಿಕ್ರಮ್!

    ‘ಬಿಗ್ ಬಾಸ್ ಕನ್ನಡ 11’ರ (Bigg Boss Kannada 11) ಆಟದಲ್ಲಿ ಬಿಗ್ ಟ್ವಿಸ್ಟ್ ಕೊಟ್ಟಿದ್ದಾರೆ ಬಿಗ್ ಬಾಸ್. ಮನೆಯ ಸ್ಟ್ರಾಂಗ್ ಸ್ಪರ್ಧಿ ತ್ರಿವಿಕ್ರಮ್ ಹೊರನಡೆದಿರುವ ಹೈಡ್ರಾಮಾ ನಡೆದಿದೆ. ತ್ರಿವಿಕ್ರಮ್ (Trivikram) ನಿಜಕ್ಕೂ ಎಲಿಮಿನೇಟ್ ಆದರು ಎಂದು ಭಾವಿಸಿದ ಭವ್ಯಾ (Bhavya Gowda) ಅವರು ಕಣ್ಣೀರಿಟ್ಟಿದ್ದಾರೆ. ಇದನ್ನೂ ಓದಿ:ಕನ್ನಡ ಚಿತ್ರರಂಗದಲ್ಲಿ ಒಗ್ಗಟ್ಟಿನ ಮಂತ್ರ ಜಪಿಸಿದ ಕಿಚ್ಚ

    ಈ ವಾರ ಯಾವುದೇ ವೋಟಿಂಗ್ ಲೈನ್ ತೆರೆದಿರಲಿಲ್ಲ. ಆದರೂ ಎಲಿಮಿನೇಷನ್ ಪ್ರಕ್ರಿಯೆ ನಡೆಸಲಾಯಿತು. ಅಂತಿಮವಾಗಿ ತ್ರಿವಿಕ್ರಮ್ ಅವರು ದೊಡ್ಮನೆಯಿಂದ ಹೊರ ಹೋಗುತ್ತಿದ್ದಾರೆ ಎಂದು ಸುದೀಪ್ ಘೋಷಣೆ ಮಾಡಿದರು. ನಿಮಗೆ ನನ್ನ ಜೊತೆ ಬಂದು ಸೇರಲು ಐದು ನಿಮಿಷ ಕಾಲಾವಕಾಶ ಇದೆ ಎಂದರು. ಎಲ್ಲರೂ ಇದು ಪ್ರ‍್ಯಾಂಕ್ ಇರಬಹುದು ಎಂದುಕೊಂಡಿದ್ದರು. ತ್ರಿವಿಕ್ರಮ್ ಕೂಡ ಹಾಗೆಯೇ ಅಂದುಕೊಂಡಂತೆ ಇತ್ತು. ಆದರೆ, ಹಾಗಾಗಲಿಲ್ಲ.

    ಮನೆಯ ಗಾರ್ಡನ್ ಏರಿಯಾಗೆ ಬರುತ್ತಿದ್ದಂತೆ ಮುಖ್ಯದ್ವಾರ ಓಪನ್ ಆಯಿತು. ಆದರಿಂದ ಹೊರಕ್ಕೆ ಹೋದರು. ಆಗ ಭವ್ಯಾ ಗೌಡ ಅವರು ಅಳೋಕೆ ಆರಂಭಿಸಿದರು. ತ್ರಿವಿಕ್ರಮ್‌ ಎಲಿಮಿನೇಷನ್‌ ಶಾಕ್‌ ಆಗಿದೆ. ಗೆಲ್ಲಬೇಕಿದ್ದ ಸ್ಪರ್ಧಿ ಈ ರೀತಿ ಎಲಿಮಿನೇಟ್ ಆದರಲ್ಲ ಎಂದು ಎಲ್ಲರೂ ಶಾಕ್ ಆದರು. ಈ ಬಗ್ಗೆ ದೊಡ್ಮನೆ ಒಳಗೆ ಸಾಕಷ್ಟು ಚರ್ಚೆಗಳು ನಡೆದಿವೆ. ಇಂದಿನ ಸಂಚಿಕೆಯಲ್ಲಿ ತ್ರಿವಿಕ್ರಮ್ ಮರಳಿ ದೊಡ್ಮನೆ ಸೇರಲಿದ್ದಾರೆ.

    ಈ ವಾರ ತ್ರಿವಿಕ್ರಮ್‌ರನ್ನು ತಮ್ಮನ್ನು ತಾವೇ ನಾಮಿನೇಟ್ ಮಾಡಿಕೊಂಡಿದ್ದರು. ತಮ್ಮ ತಂಡದವರನ್ನು ಉಳಿಸಲು ಹೋಗಿ ಅವರು ಈ ರೀತಿ ಮಾಡಿದ್ದರು. ಈ ಬಗ್ಗೆ ಸುದೀಪ್ ವಾರ್ನಿಂಗ್ ಕೊಟ್ಟಿದ್ದಾರೆ. ಆದರೆ, ತ್ರಿವಿಕ್ರಮ್‌ಗೆ ತಾವು ಇದ್ದೇ ಇರುತ್ತೇವೆ ಎನ್ನುವ ಓವರ್ ಕಾನ್ಫಿಡೆನ್ಸ್ ಇತ್ತು. ಅದನ್ನು ಬ್ರೇಕ್ ಮಾಡಬೇಕು ಎನ್ನುವ ಕಾರಣಕ್ಕೆ ಈ ವಾರ ಎಲಿಮಿನೇಷನ್ ಡ್ರಾಮಾ ಮಾಡಲಾಗಿದೆ.

    ಭಾನುವಾರದ ಸಂಚಿಕೆಯನ್ನು ಸೋಮವಾರದವರೆಗೂ ಮುಂದುವರಿದೆ. ಅದರ ಪ್ರೋಮೋವನ್ನು ಕೂಡ ತೋರಿಸಲಾಗಿದೆ. ಸುದೀಪ್ ಅವರು, ಎಷ್ಟು ಮಂದಿಗೆ ತ್ರಿವಿಕ್ರಮ್ ಅವರು ಹೋಗಿದ್ದು ಅಚ್ಚರಿ ಮೂಡಿಸಿದೆ ಎಂದೆಲ್ಲಾ ಪ್ರಶ್ನೆ ಮಾಡಿದ್ದಾರೆ. ಅದರರ್ಥ ಸೋಮವಾರದ ಸಂಚಿಕೆಯಲ್ಲಿ ಸುದೀಪ್ ಅವರು ಒಂದಷ್ಟು ಕ್ಲಾಸ್ ತೆಗೆದುಕೊಂಡ ಬಳಿಕ, ಪುನಃ ತ್ರಿವಿಕ್ರಮ್‌ರನ್ನು ವಾಪಸ್ ಮನೆಯೊಳಗೆ ಕಳಿಸುವ ಸಾಧ್ಯತೆ ಇದೆ. ಅಲ್ಲಿವರೆಗೂ ಕಾದುನೋಡಬೇಕು.

  • BBK 11: ವರಸೆ ಬದಲಿಸಿದ ಸ್ಪರ್ಧಿ: ಐಶ್ವರ್ಯಾ ಮುಖಕ್ಕೆ ಟೀ ಚೆಲ್ಲಿದ ಭವ್ಯಾ

    BBK 11: ವರಸೆ ಬದಲಿಸಿದ ಸ್ಪರ್ಧಿ: ಐಶ್ವರ್ಯಾ ಮುಖಕ್ಕೆ ಟೀ ಚೆಲ್ಲಿದ ಭವ್ಯಾ

    ‘ಬಿಗ್‌ ಬಾಸ್‌ ಕನ್ನಡ 11’ರ (Bigg Boss Kannada 11)  ಆಟ 90ನೇ ದಿನದತ್ತ ಮುನ್ನುಗ್ಗುತ್ತಿದೆ. ದೊಡ್ಮನೆಯಾಟ ಕೊನೆ ಹಂತಕ್ಕೆ ಬರುವುದರಿಂದ ಸ್ಪರ್ಧಿಗಳಲ್ಲಿ ಪೈಪೋಟಿ ಹೆಚ್ಚಾಗಿ ನಡೆದಿದೆ. ಇನ್ನೂ ಭಾನುವಾರ ಸಂಚಿಕೆಯಲ್ಲಿ ಸುದೀಪ್‌ ಅವರಿಂದ ಭವ್ಯಾ ಕಿಚ್ಚ ಚಪ್ಪಾಳೆ ಗಿಟ್ಟಿಸಿಕೊಂಡಿದ್ದರು. ಇದರ ಬೆನ್ನಲ್ಲೇ ಐಶ್ವರ್ಯಾ (Aishwarya) ಮುಖಕ್ಕೆ ಭವ್ಯಾ (Bhavya Gowda) ಟೀ ಚೆಲ್ಲಿದ್ದಾರೆ. ಇದನ್ನೂ ಓದಿ:ಕನ್ನಡ ಚಿತ್ರರಂಗದಲ್ಲಿ ಒಗ್ಗಟ್ಟಿನ ಮಂತ್ರ ಜಪಿಸಿದ ಕಿಚ್ಚ

    ಬಿಗ್ ಬಾಸ್ ಮನೆಯಲ್ಲಿ ಎಚ್ಚೆತ್ತಿಕೊಳ್ಳಿ ಎಂದು ಟಾಸ್ಕ್ ಶುರುವಾಗಿದ್ದು, ಸ್ಪರ್ಧಿಗಳ ಮುಖಕ್ಕೆ ಟೀ ಅನ್ನು ಹಾಕಲಾಗಿದೆ. ಇದರಲ್ಲಿ ಕೇವಲ ಐಶ್ವರ್ಯ ಮುಖಕ್ಕೆ ಭವ್ಯಾ ಮಾತ್ರ ಟೀ ಚೆಲ್ಲಿಲ್ಲ. ಇದೇ ರೀತಿ ಎಚ್ಚೆತ್ತುಕೊಳ್ಳಿ ಎಂದು ಹನುಮಂತು ಮುಖಕ್ಕೆ ಧನರಾಜ್, ಗೌತಮಿ ಮುಖಕ್ಕೆ ರಜತ್, ಚೈತ್ರಾ ಮುಖಕ್ಕೆ ಮಂಜು, ಮಂಜು ಮುಖಕ್ಕೆ ಗೌತಮಿ, ಮೋಕ್ಷಿತಾ ಮುಖಕ್ಕೂ ಚಹಾ ಚೆಲ್ಲಲಾಗಿದೆ. ಅಂದರೆ ಇವರೆಲ್ಲಾ ಮನೆಯಲ್ಲಿ ಎಚ್ಚೆತ್ತುಕೊಳ್ಳಬೇಕಿದೆ ಎಂದು ಹೇಳಲಾಗಿದೆ.

    ಬಿಗ್‌ ಬಾಸ್‌ ಅಣತಿಯಂತೆ ಮನೆಯಲ್ಲಿ ಸದಸ್ಯರ ಪೈಕಿ ಎಚ್ಚೆತ್ತುಕೊಳ್ಳಬೇಕಿರುವ ಸದಸ್ಯ ಯಾರು ಎಂದು ಘೋಷಿಸಬೇಕಿದೆ.  ಈ ಹಿನ್ನೆಲೆಯಲ್ಲಿ ಗೌತಮಿ, ಹನುಮಂತು, ಚೈತ್ರಾ, ಮೋಕ್ಷಿತಾ, ಮಂಜು ಇವರು ಇನ್ನಷ್ಟು ಎಚ್ಚೆತ್ತುಕೊಂಡು ಸ್ಪರ್ಧೆ ಮಾಡಬೇಕಿದೆ. ನೀವು ಟಾಸ್ಕ್‌ನಲ್ಲಿ ಇನ್ನಷ್ಟು ಸುಧಾರಿಸಿಕೊಳ್ಳಬೇಕು ಎಂದು ಟೀ ಚೆಲ್ಲಲಾಗಿದೆ. ಗೌತಮಿಗೆ ಹೆದರಿಕೊಂಡು ಮಂಜು ಮಾತನಾಡಲ್ಲ ಎಂಬ ಆರೋಪಕ್ಕೆ ಸ್ನೇಹಿತನ ಮೇಲೆ ಟೀ ಎರಚಿ ಎಚ್ಚೆತ್ತುಕೊಳ್ಳಿ ಎಂದು ವಾರ್ನಿಂಗ್‌ ಕೊಟ್ಟಿದ್ದಾರೆ.

    ಚೈತ್ರಾ ಕುಂದಾಪುರ ಹಾಗೂ ಐಶ್ವರ್ಯಾ ನಡುವೆ ಮಾತಿನ ಸಮರ ನಡೆದಿದೆ. ನಿಮ್ಮ ಆಟಗಳಿಗೆ ಈ ವಾರ ನಾನು ಬಲಿಪಶು ಆದೆ ಎಂದು ಚೈತ್ರಾಗೆ ಐಶ್ವರ್ಯಾ ಗುಡುಗಿದ್ದಾರೆ. ಇಬ್ಬರ ನಡುವೆ ಸೇಡಿನ ಕಿಡಿ ಹತ್ತಿಕೊಂಡಿದೆ. ನೀನು ಯಾವಳೇ ಎ.. ಅನ್ನೋಕೆ ಎಂದು ಚೈತ್ರಾ ಏಕವಚನದಲ್ಲೇ ಮಾತನಾಡಿದ್ದಾರೆ. ಬಾಯಿ ಮುಚ್ಚೆ ಸಾಕು ಎಂದು ಐಶ್ವರ್ಯಾ ವಿರುದ್ಧ ರಾಂಗ್‌ ಆಗಿದ್ದಾರೆ ಫೈರ್‌ ಬ್ರ್ಯಾಂಡ್‌ ಚೈತ್ರಾ.

  • ಈ ಡೌವ್‌ಗಳನ್ನು ಬಿಟ್ಟು ಮನೆ ಕಡೆ ಹೋಗೋದು ಒಳ್ಳೆಯದು: ಚೈತ್ರಾಗೆ ರಜತ್ ಟಾಂಗ್

    ಈ ಡೌವ್‌ಗಳನ್ನು ಬಿಟ್ಟು ಮನೆ ಕಡೆ ಹೋಗೋದು ಒಳ್ಳೆಯದು: ಚೈತ್ರಾಗೆ ರಜತ್ ಟಾಂಗ್

    ಬಿಗ್ ಬಾಸ್ ಸೀಸನ್ 11ರ (Bigg Boss Kannada 11)  ಸೂಪರ್ ಸಂಡೇ ಕಾರ್ಯಕ್ರಮಕ್ಕೆ ಸುದೀಪ್ ಎಂದಿನಂತೆ ಸ್ಟೈಲೀಶ್ ಆಗಿ ಎಂಟ್ರಿ ಕೊಟ್ಟಿದ್ದಾರೆ. ಆದರೆ ಬಿಗ್ ಬಾಸ್ ಮನೆಯಲ್ಲಿರುವ ಸ್ಪರ್ಧಿಗಳಿಗೆ ಇವತ್ತು ಟ್ವಿಸ್ಟ್ ಮೇಲೆ ಟ್ವಿಸ್ಟ್‌ಗಳು ಎದುರಾಗುತ್ತಿವೆ. ಈಗಾಗಲೇ 80 ದಿನಗಳನ್ನು ಪೂರೈಸಿರುವ ಬಿಗ್ ಬಾಸ್ ಸೀಸನ್ 11 ಈಗ ಕೆಲವೇ ಕೆಲವು ವಾರಗಳಷ್ಟೇ ಬಾಕಿ ಉಳಿದಿದೆ.

    ಬಿಗ್ ಬಾಸ್ ಮನೆಯಲ್ಲಿ ಈ ವಾರದ ಎಲಿಮಿನೇಷನ್ ಕೂಡ ರೋಚಕವಾಗಿದೆ. ಈ ವಾರ ಮನೆಯಿಂದ ಯಾರು ಹೊರಗೆ ಬರುತ್ತಾರೆ ಅನ್ನೋದು ಸಸ್ಪೆನ್ಸ್ ಆಗಿ ಉಳಿದಿದೆ. ಇದೀಗ ಸುದೀಪ್ ಮನೆಯ ಸದಸ್ಯರಿಗೆ ಸ್ಪೆಷಲ್ ಟಾಸ್ಕ್‌ವೊಂದು ನೀಡಿದ್ದಾರೆ. ನಿಮ್ಮ ಪ್ರಕಾರ, ಬಿಗ್ ಬಾಸ್ ಮನೆಯಲ್ಲಿ ಇವರ ಇಂಪಾರ್ಟೆನ್ಸ್ ಇಲ್ಲ ಎನ್ನುವವರು ಅವರ ಫೋಟೋವನ್ನು ಮೂಟೆಗೆ ಅಂಟಿಸಿ ಕಸದ ಬುಟ್ಟಿಗೆ ಹಾಕಬೇಕು ಎಂದರು. ಆಗ ಈ ಟಾಸ್ಕ್‌ನಲ್ಲಿ ಬಹುತೇಕ ಸ್ಪರ್ಧಿಗಳು ಎಲ್ಲರೂ ಚೈತ್ರಾ (Chaithra Kundapura) ಮೇಲೆ ತಿರುಗಿ ಬಿದ್ದಿದ್ದಾರೆ.

    ಭವ್ಯಾ, ಮೋಕ್ಷಿತಾ, ರಜತ್, ಐಶ್ವರ್ಯಾ, ಗೌತಮಿ, ಹನುಮಂತ ಎಲ್ಲರೂ ಚೈತ್ರಾರನ್ನೇ ಕಸದ ಬುಟ್ಟಿಗೆ ಹಾಕಿದ್ದಾರೆ. ಇದಕ್ಕೆ ಪ್ರತಿಯೊಬ್ಬರು ಸೂಕ್ತವಾದ ಕಾರಣಗಳನ್ನ ನೀಡಿದ್ದು, ಚೈತ್ರಾರವರು ಗರಂ ಆಗಿದ್ದಾರೆ. ಇದನ್ನೂ ಓದಿ:ನನ್ನ ವ್ಯಕ್ತಿತ್ವಕ್ಕೆ ಧಕ್ಕೆ ತರುವ ಕೆಲಸ ನಡೆಯುತ್ತಿದೆ: ತೆಲಂಗಾಣ ಸಿಎಂ ಆರೋಪಕ್ಕೆ ಅಲ್ಲು ಅರ್ಜುನ್‌ ಬೇಸರ

    ಐಶ್ವರ್ಯಾ ಅವರು ಚೈತ್ರಾ ಅವರಿಗೆ ನೀವು ಮುಖವಾಡ ಕಳಚುತ್ತೇನೆ ಎಂದಿದ್ದೀರಿ. ಆದರೆ ಅವರೇ ಒಂದು ವೇಷ ತೊಟ್ಟುಕೊಂಡು ಆಟ ಆಡುತ್ತಿದ್ದಾರೆ ಎಂದಿದ್ದಾರೆ. ಹನುಮಂತ ಕೂಡ ಮಾತು ಮನೆ ಕೆಡಿಸಿತು ತೂತು ಒಲೆ ಕೆಡಿಸಿತು ಅನ್ನೋ ಹಂಗೆ ಚೈತ್ರಕ್ಕ ಈ ಮನೆಯನ್ನೇ ಕೆಡಿಸಿ ಬಿಟ್ಟಿದ್ದಾಳೆ ಎಂದು ಖಡಕ್ ಡೈಲಾಗ್ ಹೇಳಿದ್ದಾನೆ.

    ಕಳಪೆ ಬಂತು ಅಂದರೆ ಚೈತ್ರಾ ಫುಲ್ ಹುಷಾರು ತಪ್ಪುತ್ತಾರೆ. ವೀಕೆಂಡ್‌ನಲ್ಲಿ ಫುಲ್ ಡಲ್ ಆಗಿರುತ್ತಾರೆ. ಮತ್ತೆ ರಾತ್ರಿ ಇಮಿಡಿಯೇಟ್ ಆಗಿ ಚಾರ್ಜ್ ಆಗ್ತಾರೆ. ಫೈರ್ ಬ್ರಾಂಡ್ ಈಸ್ ಬ್ಯಾಕ್ ಅಂತಾರೆ ಇದು ಹೇಗೆ ಅನ್ನೋದು ಗೊತ್ತಿಲ್ಲ ಎಂದು ಮೋಕ್ಷಿತಾ ರಾಂಗ್‌ ಆಗಿದ್ದಾರೆ. ಬಳಿಕ ಈ ಡೌವ್‌ಗಳನ್ನ ಬಿಟ್ಟು ಮನೆ ಕಡೆ ಹೋಗೋದು ಒಳ್ಳೆಯದು ಎಂದು ಚೈತ್ರಾಗೆ ರಜತ್ (Rajath) ಟಾಂಗ್ ಕೊಟ್ಟಿದ್ದಾರೆ.

  • BBK 11: ಕತ್ತಲೆ ಬೆಳಕಿನ ಆಟದಲ್ಲಿ ಗೆಲ್ಲೋದು ಯಾರು?- ಐಶ್ವರ್ಯಾ, ಭವ್ಯಾಗೆ ಬಿಗ್ ಟಾಸ್ಕ್

    BBK 11: ಕತ್ತಲೆ ಬೆಳಕಿನ ಆಟದಲ್ಲಿ ಗೆಲ್ಲೋದು ಯಾರು?- ಐಶ್ವರ್ಯಾ, ಭವ್ಯಾಗೆ ಬಿಗ್ ಟಾಸ್ಕ್

    ನ್ನಡದ ‘ಬಿಗ್ ಬಾಸ್ 11’ರ (Bigg Boss Kannada 11) ಆಟ ರೋಚಕವಾಗಿದೆ. ಕ್ಯಾಪ್ಟನ್ ಪಟ್ಟ ಏರಲು ಐಶ್ವರ್ಯಾ, ಭವ್ಯಾ (Bhavya Gowda) ನಡುವೆ ಪೈಪೋಟಿ ನಡೆದಿದೆ. ಬಿಗ್ ಬಾಸ್ ಕೊಟ್ಟ ಕತ್ತಲೆ ಬೆಳಕಿನ ಆಟದಲ್ಲಿ ಟ್ವಿಸ್ಟ್ ಕೊಡಲಾಗಿದೆ. ಸದ್ಯ ಕುತೂಹಲ ಮೂಡಿಸುವಂತಹ ಪ್ರೋಮೋವೊಂದನ್ನು ವಾಹಿನಿ ಹಂಚಿಕೊಂಡಿದೆ. ಇದನ್ನೂ ಓದಿ:ಸ್ಪೆಷಲ್ ಸಾಂಗ್‌ಗೆ ನೇಹಾ ಶೆಟ್ಟಿ ಗ್ರೀನ್ ಸಿಗ್ನಲ್

    ನಿನ್ನೆ ನಡೆದ ಕ್ಯಾಪ್ಟನ್ಸಿ ಟಾಸ್ಕ್‌ನಲ್ಲಿ ಕಡೆಯದಾಗಿ ಸಹ ಸ್ಪರ್ಧಿಗಳನ್ನು ಸೋಲಿಸಿ ಐಶ್ವರ್ಯಾ ಮತ್ತು ಭವ್ಯಾ ಉಳಿದುಕೊಂಡಿದ್ದರು. ಇದೀಗ ಇವರಿಬ್ಬರ ನಡುವೆ ಕ್ಯಾಪ್ಟನ್ಸಿಗಾಗಿ ಟಫ್ ಫೈಟ್ ನಡೆದಿದೆ. ಆ್ಯಕ್ಟಿವಿಟಿ ರೂಮ್‌ನಲ್ಲಿ ಕಾಲ ಕಾಲಕ್ಕೆ ಲೈಟ್ ಆನ್ ಮತ್ತು ಆಫ್ ಆಗುತ್ತದೆ. ಆಗ ಒಂದೊಂದೇ ಬಣ್ಣಗಳನ್ನು ಆಯಾ ಬಣ್ಣವನ್ನು ಸೂಚಿಸುವ ಪೆಡಾಸ್ಟಲ್‌ಗಳ ಮೇಲೆ ಇಡಬೇಕು. ಈ ಕತ್ತಲೆ ಬೆಳಕಿನ ಆಟದಲ್ಲಿ ಭವ್ಯಾ, ಐಶ್ವರ್ಯಾ (Aishwarya) ಇವರಲ್ಲಿ ಯಾರು ಗೆಲ್ತಾರೆ ಎಂಬುದು ಕ್ಯೂರಿಯಸ್ ಆಗಿದೆ.

    ಗೆದ್ದವರು ಮನೆಯ ಕ್ಯಾಪ್ಟನ್ ಪಟ್ಟವನ್ನು ಅಲಂಕರಿಸಲಿದ್ದಾರೆ. ಇನ್ನೂ ಭವ್ಯಾ ಈಗಾಗಲೇ ಮನೆಯ ಕ್ಯಾಪ್ಟನ್ ಆಗಿದ್ದಾರೆ. ಐಶ್ವರ್ಯಾ ಒಮ್ಮೆ ತ್ರಿವಿಕ್ರಮ್ ಜೊತೆ ಜೋಡಿ ಕ್ಯಾಪ್ಟನ್ ಆಗಿದ್ದರು. ಈ ಬಾರಿ ಸಿಂಗಲ್ ಕ್ಯಾಪ್ಟನ್ ಆಗಿ ದರ್ಬಾರ್ ಮಾಡಬೇಕು ಎಂಬುದು ಅಭಿಮಾನಿಗಳ ಆಶಯ. ಆದರೆ ಈ ಬಾರಿ ಭವ್ಯಾ ಕ್ಯಾಪ್ಟನ್ ಪಟ್ಟ ಏರಿದ್ದಾರೆ ಎಂಬುದು ಸದ್ಯ ಹರಿದಾಡುತ್ತಿರುವ ಸುದ್ದಿ. ಎಲ್ಲದ್ದಕ್ಕೂ ಇಂದಿನ ಸಂಚಿಕೆಯಲ್ಲಿ ಉತ್ತರ ಸಿಗಲಿದೆ.

  • BBK 11: ಚೈತ್ರಾ ಹ್ಯಾಟ್ರಿಕ್‌ ಕಳಪೆ- ಮತ್ತೆ ಕಂಬಿ ಹಿಂದೆ ಫೈರ್‌ ಬ್ರ್ಯಾಂಡ್‌

    BBK 11: ಚೈತ್ರಾ ಹ್ಯಾಟ್ರಿಕ್‌ ಕಳಪೆ- ಮತ್ತೆ ಕಂಬಿ ಹಿಂದೆ ಫೈರ್‌ ಬ್ರ್ಯಾಂಡ್‌

    ಬಿಗ್ ಬಾಸ್ ಮನೆಯ ಆಟ (Bigg Boss Kannada 11)  ಇದೀಗ 90ನೇ ದಿನದತ್ತ ಮುನ್ನಗ್ಗುತ್ತಿದೆ. ಅಸಲಿ ಆಟ ಶುರುವಾಗಿರೋ ಮನೆಯಲ್ಲಿ ಚೈತ್ರಾರನ್ನು ಕಳಪೆ ಎಂದು ಮನೆ ಮಂದಿ ಜೈಲಿಗಟ್ಟಿದ್ದಾರೆ. ಎಂದಿನಂತೆ ಉತ್ತಮ ಮತ್ತು ಕಳಪೆ ಚಟುವಟಿಕೆಗಳು ನಡೆದಿವೆ. ಈಗಾಗಲೇ ಅನೇಕ ಬಾರಿ ಬಿಗ್ ಬಾಸ್ ಮನೆಯ ಜೈಲು ಸೇರಿದ್ದ ಚೈತ್ರಾ ಕುಂದಾಪುರ (Chaithra Kundapura) ಮತ್ತೆ ಕಂಬಿ ಹಿಂದೆ ಹೋಗಿದ್ದಾರೆ.

    ಬಹುತೇಕ ಸ್ಪರ್ಧಿಗಳು ಕಳಪೆಗೆ ಚೈತ್ರಾ ಕುಂದಾಪುರ ಹೆಸರನ್ನೇ ತೆಗೆದುಕೊಂಡಿದ್ದಾರೆ. ಹೀಗಾಗಿ ಚೈತ್ರಾ ಕುಂದಾಪುರ ಮತ್ತೆ ಜೈಲು ಸೇರಿದ್ದಾರೆ. ಇನ್ನು ಕಳಪೆ (Kalape) ನೀಡುವ ವೇಳೆ ಎಂದಿನಂತೆ ಮಾತಿನ ಸಮರಗಳು ನಡೆದಿವೆ. ವಿಶೇಷವಾಗಿ ಚೈತ್ರಾ ಕುಂದಾಪುರಗೆ ಹನಮಂತು ಟಾಂಗ್ ನೀಡಿದ್ದಾರೆ. ಇದನ್ನೂ ಓದಿ:UI ಅಬ್ಬರ: ಉಪ್ಪಿ ನಟನೆ, ನಿರ್ದೇಶನಕ್ಕೆ ಫುಲ್ ಮಾರ್ಕ್ಸ್ ಕೊಟ್ಟ ಪ್ರೇಕ್ಷಕರು

    ಟಾಸ್ಕ್‌ವೊಂದರಲ್ಲಿ ಚೈತ್ರಾ ಸರಿಯಾಗಿ ಉಸ್ತುವಾರಿ ಮಾಡದೇ ಬೇಕಂತಲೇ ಫೌಲ್ ಕೊಟ್ಟರೂ ಎಂಬ ಕಾರಣಕ್ಕೆ ಮೋಕ್ಷಿತಾ, ಧನರಾಜ್ ಸೇರಿದಂತೆ ಅನೇಕರು ಕಳಪೆ ಪಟ್ಟ ನೀಡಿದರು. ಬಳಿಕ ಕಳಪೆ ಪ್ರದರ್ಶನ ಎಂದ ಹನುಮಂತ ನಡುವೆ ವಾಕ್ಸಮರ ನಡೆದಿದೆ. ಕಳಪೆ ಕೊಡಲು ನಾನು ಇಲ್ಲಿ ಯಾರನ್ನೂ ಟಾರ್ಗೆಟ್ ಮಾಡಿಲ್ಲ. ನೀನು ನನ್ನ ದೊಡ್ಡಪ್ಪನ ಮಗಳು, ಅತ್ತೆ ಮಗಳು ಅಲ್ಲ ಎಂದು ಡೈಲಾಗ್ ಹೊಡೆದಿದ್ದಾರೆ. ಇನ್ನೂ ಮುಂದಿನ ವಾರಕ್ಕೆ ಯಾರು ನಾಯಕರಾಗುತ್ತಾರೆ ಅನ್ನೋದು ಕೂಡ ರಿವೀಲ್ ಆಗಿದೆ. ಆದರೆ ಬಿಗ್ ಬಾಸ್ ಅಧಿಕೃತವಾಗಿ ಇನ್ನೂ ಘೋಷಣೆ ಮಾಡಿಲ್ಲ. ಐಶ್ವರ್ಯಾಗೆ ಠಕ್ಕರ್ ಕೊಟ್ಟು ಭವ್ಯಾ ಬಿಗ್ ಬಾಸ್ ಮನೆಗೆ ಕ್ಯಾಪ್ಟನ್ ಆಗಿದ್ದಾರೆ.

  • ವ್ಯವಹಾರದಲ್ಲಿ ಲಾಸ್‌ ಆಗಿದ್ದಕ್ಕೆ ಬಿಗ್‌ ಬಾಸ್‌ನಿಂದ ನಿರ್ಗಮಿಸಿದ್ರಾ?: ಗೋಲ್ಡ್‌ ಸುರೇಶ್ ಸ್ಪಷ್ಟನೆ

    ವ್ಯವಹಾರದಲ್ಲಿ ಲಾಸ್‌ ಆಗಿದ್ದಕ್ಕೆ ಬಿಗ್‌ ಬಾಸ್‌ನಿಂದ ನಿರ್ಗಮಿಸಿದ್ರಾ?: ಗೋಲ್ಡ್‌ ಸುರೇಶ್ ಸ್ಪಷ್ಟನೆ

    ಬಿಗ್ ಬಾಸ್ ಕನ್ನಡ 11ರ (Bigg Boss Kannada 11)  ಆಟ ರಂಗೇರಿದೆ. ಕಳೆದ ವಾರಂತ್ಯದಲ್ಲಿ ಶಿಶಿರ್ ಶಾಸ್ತ್ರಿ ಎಲಿಮಿನೇಷನ್ ಬಳಿಕ ಕುಟುಂಬದಲ್ಲಿನ ತುರ್ತು ಪರಿಸ್ಥಿತಿ ಹಿನ್ನೆಲೆ ಗೋಲ್ಡ್ ಸುರೇಶ್ (Gold Suresh) ಸಡನ್ ಆಗಿ ಮನೆಯಿಂದ ನಿರ್ಗಮಿಸಿದ್ದರು. ಆದರೆ ಯಾವ ಕಾರಣಕ್ಕೆ ಅವರು ಹೊರಬಂದರು ಎಂಬುದಕ್ಕೆ ಕ್ಲ್ಯಾರಿಟಿ ಸಿಕ್ಕಿರಲಿಲ್ಲ. ಇದೀಗ ಅವರು ಈ ಕುರಿತು ಸ್ಪಷ್ಟನೆ ನೀಡಿದ್ದಾರೆ.‌

    ನನಗೆ ಬಿಗ್ ಬಾಸ್ ಕಡೆಯಿಂದ ಅವಕಾಶ ಬಂದಾಗ ಮೊದಲೇ ಯೋಚನೆ ನನಗೆ ಶುರುವಾಗಿತ್ತು. ನಾನು ಒಳಗೆ ಹೋದ್ರೆ ನನ್ನ ಬ್ಯುಸಿನೆಸ್ ಯಾರಿಗೆ ಬಿಟ್ಟು ಹೋಗಲಿ ಅಂತ. ಆಗ ನನ್ನ ವ್ಯವಹಾರವನ್ನು ನನ್ನ ಪತ್ನಿಗೆ ಬಿಟ್ಟು ಹೋಗಿದ್ದೆ, ಆದರೆ ಬ್ಯುಸಿನೆಸ್ ಅನ್ನು ಹ್ಯಾಂಡಲ್ ಮಾಡೋಕೆ ಬರಲಿಲ್ಲ. ಅದರ ಬಗ್ಗೆ ಜ್ಞಾನನೇ ಇಲ್ಲದಿರೋ ವ್ಯಕ್ತಿಗೆ ನಾನು ವಹಿಸಿ ಬಂದಿದ್ದೆ, ಅದಕ್ಕೆ ಪತ್ನಿಗೆ ನಿರ್ವಹಿಸಲು ಆಗಿಲ್ಲ. ನನ್ನ ಕಂಪನಿಯಲ್ಲಿ ಕೆಲ ನಿರ್ಧಾರಗಳನ್ನು ನಾನೇ ತೆಗೆದುಕೊಳ್ಳಬೇಕಾಗುತ್ತದೆ. ಹಾಗಾಗಿ ನಾನೇ ಹೊರಗೆ ಬರಬೇಕಾಯಿತು. ಅದು ಬಿಟ್ಟು ಆತಂಕ ಪಡುವಂತಹದ್ದು ಏನು ಆಗಿಲ್ಲ ಎಂದಿದ್ದಾರೆ. ಇದನ್ನೂ ಓದಿ:ಮಾಡ್ರನ್ ಡ್ರೆಸ್ ಹಾಕಿದ್ರು ಮಾಂಗಲ್ಯ ಧರಿಸಿ ಸಿನಿಮಾ ಪ್ರಚಾರಕ್ಕೆ ಬಂದ ಕೀರ್ತಿ ಸುರೇಶ್

    ಈ ವೇಳೆ, ತಂದೆ ಆರೋಗ್ಯದ ಬಗ್ಗೆ ಕೂಡ ಸುರೇಶ್ ಸ್ಪಷ್ಟನೆ ನೀಡಿದರು. ಅಪ್ಪ ಆರೋಗ್ಯವಾಗಿದ್ದಾರೆ. ಅವರಿಗೇನು ಆಗಿಲ್ಲ. ಅವರ ಬಗ್ಗೆ ತಪ್ಪು ಸಂದೇಶ ಯಾರಿಗೂ ಹೋಗಬಾರದು ಅನ್ನೋದು ನನ್ನ ಅಭಿಪ್ರಾಯ. ಯಾರೇ ವ್ಯಕ್ತಿಯ ಸಾವಿನ ಸುದ್ದಿ ಹರಡುತ್ತಿದೆ ಎಂದರೆ ಸತ್ಯ ಯಾವುದು ಸುಳ್ಳು ಯಾವುದು ಎಂದು ಸ್ಪಷ್ಟನೆ ತೆಗೆದುಕೊಳ್ಳಬೇಕು ಎಂದು ಮಾತನಾಡಿದ್ದಾರೆ. ಈ ಮೂಲಕ ತಂದೆ ಆರೋಗ್ಯದ ಬಗ್ಗೆ ಕ್ಲ್ಯಾರಿಟಿ ನೀಡಿದ್ದಾರೆ.

  • BBK 11: ತ್ರಿವಿಕ್ರಮ್‌ ಮೇಲೆ ಡಿಪೆಂಡ್‌ ಆಗ್ತೀರಾ ಎಂದ ಮೋಕ್ಷಿತಾ ಮೇಲೆ ಭವ್ಯಾ ಕೆಂಡ

    BBK 11: ತ್ರಿವಿಕ್ರಮ್‌ ಮೇಲೆ ಡಿಪೆಂಡ್‌ ಆಗ್ತೀರಾ ಎಂದ ಮೋಕ್ಷಿತಾ ಮೇಲೆ ಭವ್ಯಾ ಕೆಂಡ

    ದೊಡ್ಮನೆಯ (Bigg Boss Kannada 11)  ಆಟ ದಿನದಿಂದ ದಿನಕ್ಕೆ ಸಾಕಷ್ಟು ತಿರುವುಗಳನ್ನು ಪಡೆದು ಮುನ್ನುಗ್ಗುತ್ತಿದೆ. ಮನೆಯ ಪಕ್ಷಪಾತಿ, ಅಶಕ್ತ ಎಂಬ ವಿಚಾರಕ್ಕೆ ಸ್ಪರ್ಧಿಗಳ ನಡುವೆ ಕಿತ್ತಾಟ ಶುರುವಾಗಿದೆ. ಈ ವೇಳೆ, ಉಗ್ರಂ ಮಂಜುಗೆ (Ugramm Manju) ರಜತ್ (Rajath) ಚೀಪ್ ಎಂದು ಕುಟುಕಿದ್ದಾರೆ. ಇತ್ತ ಮೋಕ್ಷಿತಾ (Mokshitha) ಕೂಡ ಭವ್ಯಾ ಮೇಲೆ ಎಗರಾಡಿದ್ದಾರೆ. ಇದನ್ನೂ ಓದಿ:ಸಿನಿಮಾ ಚಾನ್ಸ್‌ಗಾಗಿ ಸೆಕ್ಸ್ ಮಾಡಿದ್ದೀರಾ? ಎಂದವನಿಗೆ ಚೈತ್ರಾ ಆಚಾರ್ ತಿರುಗೇಟು

    ಸದ್ಯ ವಾಹಿನಿ ಹಂಚಿಕೊಂಡಿರುವ ಪ್ರೋಮೋದಲ್ಲಿ ನನ್ನಿಂದಲೇ ಈ ಟಾಸ್ಕ್ ಗೆಲ್ತು. ನನ್ನಿಂದಲೇ ಈ ಆಟ ಗೆದ್ದರು ಅಂದುಕೊಳ್ಳುವ ಚೀಪ್ ಮೆಂಟಾಲಿಟಿ ಮಂಜಣ್ಣನದ್ದು ಎಂದು ರಜತ್ ಹೇಳಿದ್ದಾರೆ. ರಜತ್ ಮಾತು ಕೇಳಿ, ಮಂಜು ಗರಂ ಆಗಿದ್ದಾರೆ. ನಾನು ಮಾಡಿರೋ ಕೆಲಸನಾ ನಾನೇ ಹೇಳಿಕೊಳ್ಳೋದ್ರಲ್ಲಿ ತಪ್ಪೇನಿದೆ ಎಂದು ಪ್ರಶ್ನೆ ಮಾಡಿದ್ದಾರೆ. ಬಳಿಕ ಬಿಗ್ ಬಾಸ್‌ನ ಟಾಸ್ಕ್ ರೂಲ್ಸ್‌ನಂತೆಯೇ ಸ್ಪರ್ಧಿ ಮಂಜುರನ್ನು ರಜತ್ ನೀರಿಗೆ ತಳ್ಳಿದ್ದಾರೆ.

    ಭವ್ಯಾ ಎಲ್ಲರ ಜೊತೆ ಮಿಂಗಲ್ ಆಗೋದಿಲ್ಲ. ನೀವು ತ್ರಿವಿಕ್ರಮ್ ಜೊತೆ ಡಿಪೆಂಡ್ ಆಗ್ತೀರಾ. ತುಂಬಾ ನಿಷ್ಠುರವಾಗಿ ಮಾತಾಡ್ತೀರಾ ಎಂದು ಮೋಕ್ಷಿತಾ ಹೇಳಿದರು. ಮೋಕ್ಷಿತಾರ ಪ್ರತಿ ಮಾತಿಗೂ ಭವ್ಯಾ ತಿರುಗೇಟು ನೀಡಿದ್ದಾರೆ. ನಾನು ಎಲ್ಲರ ಬಳಿ ಹೋಗಿ ಕಷ್ಟ ಸುಖ ಹೇಳಬೇಕಾಗಿಲ್ಲ. ತ್ರಿವಿಕ್ರಮ್ ನನ್ನ ಆಟವನ್ನ ಆಡುತ್ತಿಲ್ಲ. ನಾನು ಈ ಮನೆಗೆ ಸಂಬಂಧಗಳನ್ನು ಬೆಳೆಸಲು ಬಂದಿಲ್ಲ. ಯಾರ ಬಳಿ ಕೂಡ ಸರ್ಟಿಫಿಕೇಟ್ ಬೇಕಿಲ್ಲ ಎಂದು ಭವ್ಯಾ ಕೆಂಡಕಾರಿದ್ದಾರೆ. ಆ ನಂತರ ಭವ್ಯಾರನ್ನು (Bhavya Gowda) ಮೋಕ್ಷಿತಾ ನೀರಿಗೆ ತಳ್ಳಿದ್ದಾರೆ.

    ಇನ್ನೂ ಶಿಶಿರ್ ಎಲಿಮಿನೇಷನ್ ಮತ್ತು ಗೋಲ್ಡ್ ಸುರೇಶ್ ನಿರ್ಗಮನದ ನಂತರ ಈ ವಾರಾಂತ್ಯ ಯಾರು ಮನೆಯಿಂದ ಹೊರಬರುತ್ತಾರೆ ಎಂಬುದರ ಬಗ್ಗೆ ಫ್ಯಾನ್ಸ್‌ಗೆ ಕುತೂಹಲವಿದೆ. ಈ ವಾರ ಡಬಲ್ ಎಲಿಮಿನೇಷನ್ ಆಗುವ ಸಾಧ್ಯತೆಯಿದೆ.