Tag: bbk 11

  • BBK 11: ಟಾಸ್ಕ್ ವೇಳೆ ವೈಲ್ಡ್ ಕಾರ್ಡ್ ಸ್ಪರ್ಧಿ ಶೋಭಾ ಶೆಟ್ಟಿಗೆ ಪೆಟ್ಟು

    BBK 11: ಟಾಸ್ಕ್ ವೇಳೆ ವೈಲ್ಡ್ ಕಾರ್ಡ್ ಸ್ಪರ್ಧಿ ಶೋಭಾ ಶೆಟ್ಟಿಗೆ ಪೆಟ್ಟು

    ದೊಡ್ಮನೆಯಲ್ಲಿ (BBK 11) ವೈಲ್ಡ್ ಕಾರ್ಡ್ ಸ್ಪರ್ಧಿ ಶೋಭಾ (Shobha Shetty) ಮತ್ತು ರಜತ್ (Rajath) ಎಂಟ್ರಿ ಕೊಟ್ಮೇಲೆ ಉಳಿವಿಕೆಗಾಗಿ ಸ್ಪರ್ಧಿಗಳ ಸೆಣಸಾಟ ಜೋರಾಗಿದೆ. ಇನ್ನೂ ಬಿಗ್ ಬಾಸ್ ಕೊಟ್ಟ ಟಾಸ್ಕ್‌ವೊಂದರಲ್ಲಿ ಎತ್ತರದಿಂದ ಶೋಭಾ ಶೆಟ್ಟಿ ಬಿದ್ದಿದ್ದಾರೆ. ಪೆಟ್ಟು ಮಾಡಿಕೊಂಡ ಶೋಭಾರನ್ನು ನೋಡಿ ಸ್ಪರ್ಧಿಗಳು ಗಾಬರಿಯಾಗಿದ್ದಾರೆ. ಇದನ್ನೂ ಓದಿ:‘ಜೀಬ್ರಾ’ಗೆ ‘ಭೀಮ’ ಬೆಂಬಲ- ಡಾಲಿ, ಸತ್ಯದೇವ್ ಚಿತ್ರಕ್ಕೆ ದುನಿಯಾ ವಿಜಯ್ ಸಾಥ್

    ‘ಬಿಗ್ ಬಾಸ್’ ಮನೆಯ ಆಟಕ್ಕೆ 50 ದಿನ ಪೂರೈಸಿದೆ. ರೋಚಕ ತಿರುವು ಪಡೆದು ಮುನ್ನುಗ್ಗತ್ತಿದೆ. ಇನ್ನೂ ವೈಲ್ಡ್ ಕಾರ್ಡ್ ಸ್ಪರ್ಧಿ ಶೋಭಾ ಅವರು ಉಗ್ರಂ ಮಂಜುಗೆ ತಿರುಗೇಟು ಕೊಟ್ಟಿರುವ ರೀತಿ ನೋಡಿ ಅವರು ಎಂತಹ ಗಟ್ಟಿ ಸ್ಪರ್ಧಿ ಎಂಬುದು ಮನೆ ಮಂದಿ ಗೊತ್ತಾಗಿದೆ. ಇದನ್ನೂ ಓದಿ:‘ಲಕ್ಷ್ಮಿ ಬಾರಮ್ಮ’ ಸೀರಿಯಲ್‌ನಲ್ಲಿ ಮಹಾ ತಿರುವು- ಕಾವೇರಿ ಅಟ್ಟಹಾಸಕ್ಕೆ ಬ್ರೇಕ್‌ ಹಾಕಲು ಬಂದ ಕೀರ್ತಿ

    ಇಂದಿನ ಸಂಚಿಕೆಯಲ್ಲಿನ ಪ್ರೋಮೋವೊಂದನ್ನು ವಾಹಿನಿ ಹಂಚಿಕೊಂಡಿದೆ. ಅದರಲ್ಲಿ ಶೋಭಾ ಮತ್ತು ಭವ್ಯಾ ಗೌಡ ನೇತೃತ್ವದಲ್ಲಿ ಎರಡು ಟೀಮ್‌ಗಳಾಗಿ ವಿಂಗಡಿಸಿದ್ದಾರೆ. ಎದುರಾಳಿ ತಂಡ ಭವ್ಯಾಗಿಂತ (Bhavya Gowda) ವೇಗವಾಗಿ ಟಾಸ್ಕ್ ಪೂರ್ಣಗೊಳಿಸಬೇಕು ಎಂಬ ಆತುರದಲ್ಲಿ ಶೋಭಾ ಆಟ ಆಡುವಾಗ ಎತ್ತರದಿಂದ ಬಿದ್ದು ಪೆಟ್ಟು ಮಾಡಿಕೊಂಡಿದ್ದಾರೆ. ಇದನ್ನು ನೋಡಿ ಸಹಸ್ಪರ್ಧಿಗಳು ಒಂದು ಕ್ಷಣ ಶಾಕ್ ಆಗಿದ್ದಾರೆ.

    ಶೋಭಾಗೆ ತೀವ್ರವಾಗಿ ಪೆಟ್ಟು ಆಗಿದ್ಯಾ? ಎಂಬುದು ಇಂದಿನ ಸಂಚಿಕೆಯಲ್ಲಿ ತಿಳಿದು ಬರಲಿದೆ. ನಟಿಗೆ ಏನಾಗಿದೆ ಎಂಬುದನ್ನು ಕಾದುನೋಡಬೇಕಿದೆ.

  • ದೊಡ್ಮನೆಯಲ್ಲಿ ಯಾರು ಸ್ಟ್ರಾಂಗ್, ಯಾರು ವೀಕ್?- ಮಂಜು, ರಜತ್ ನಡುವೆ ಬಿಗ್ ಫೈಟ್

    ದೊಡ್ಮನೆಯಲ್ಲಿ ಯಾರು ಸ್ಟ್ರಾಂಗ್, ಯಾರು ವೀಕ್?- ಮಂಜು, ರಜತ್ ನಡುವೆ ಬಿಗ್ ಫೈಟ್

    ದೊಡ್ಮನೆ ಆಟ 50 ದಿನಗಳನ್ನು ಪೂರೈಸಿ ಮುನ್ನುಗ್ಗುತ್ತಿದೆ. ವೈಲ್ಡ್ ಕಾರ್ಡ್ ಸ್ಪರ್ಧಿಗಳಾಗಿ ಶೋಭಾ ಶೆಟ್ಟಿ, ರಜತ್ ಎಂಟ್ರಿ ಕೊಟ್ಟಿದ್ದಾರೆ. ಇದೀಗ ದೊಡ್ಮನೆಯಲ್ಲಿ ರಜತ್ (Rajath Kishen) ರಾಂಗ್ ಆಗಿದ್ದಾರೆ. ಉಗ್ರಂ ಮಂಜು ಅವರು ರಜತ್ ಮೇಲೆ ಸಿಡಿದೆದ್ದಿದ್ದಾರೆ.‌ ಬಿಗ್‌ ಬಾಸ್‌ಯಲ್ಲಿ ಯಾರು ಸ್ಟ್ರಾಂಗ್‌, ಯಾರು ವೀಕ್?‌ ಎಂಬ ವಿಚಾರಕ್ಕೆ ಮಂಜು (Ugramm Manju) ಮತ್ತು ರಜತ್‌ ನಡುವೆ ಕಿತ್ತಾಟ ನಡೆದಿದೆ. ಇದನ್ನೂ ಓದಿ:ಸಲ್ಮಾನ್ ಖಾನ್ ಜೊತೆ ಈದ್, ಹೋಳಿ ಹಾಡಿಗೆ ಹೆಜ್ಜೆ ಹಾಕಲಿದ್ದಾರೆ ರಶ್ಮಿಕಾ

    ವೈಲ್ಡ್ ಕಾರ್ಡ್ ಸ್ಪರ್ಧಿಗಳು ಎಂಟ್ರಿ ಆದ ಮೇಲೆ ‘ಬಿಗ್ ಬಾಸ್’ ಮನೆಯ ಅಸಲಿ ಆಟ ಶುರುವಾಗಿದೆ. ಈ ವಾರ ಬಿಗ್ ಬಾಸ್ ಮನೆಯ ಸದಸ್ಯರಿಗೆ ಫಿಸಿಕಲ್ ಟಾಸ್ಕ್ ಕೊಟ್ಟಿದ್ದು, ಗೆಲ್ಲೋ ಕಿಚ್ಚು ಹೆಚ್ಚಾಗಿದೆ. ಕೊಳವೆ ಮೂಲಕ ಬರುವ ಚೆಂಡನ್ನು ತೆಗೆದುಕೊಂಡು ಹೋಗುವ ಟಾಸ್ಕ್‌ನಲ್ಲಿ ಗೋಲ್ಡ್ ಸುರೇಶ್ ಹಾಗೂ ರಜತ್ ಅವರ ಮಧ್ಯೆ ಜಗಳ ನಡೆದಿತ್ತು. ರಜತ್ ಮೇಲೆ ಕೂಗಾಡಿದ ಸುರೇಶ್ (Gold Suresh) ಅವರು ಬಿಗ್ ಬಾಸ್ ಮನೆ ಬಿಟ್ಟು ಹೋಗಲು ನಿರ್ಧಾರ ಮಾಡಿದ್ದರು.

    ಸುರೇಶ್ ಅವರ ಬಳಿಕ ರಜತ್ ಮತ್ತು ಮಂಜು ನಡುವೆ ವಾಕ್ಸಮರ ನಡೆದಿದೆ. ಟಾಸ್ಕ್‌ ಮಧ್ಯೆ ರಜತ್ ಅವರು ನಾನು, ತ್ರಿವಿಕ್ರಮ್ (Trivikram) ಒಂದೇ ಟೀಮ್‌ನಲ್ಲಿ ಇದ್ದರೆ ಎದುರಾಳಿ ತಂಡ ಸ್ವಲ್ಪ ವೀಕ್ ಆಗುತ್ತೆ ಎಂದಿದ್ದಾರೆ. ರಜತ್ ಅವರ ಈ ಮಾತು ಮಂಜು ಅವರನ್ನು ಕೆರಳುವಂತೆ ಮಾಡಿದೆ. ಯಾವ ನನ್ಮಗ ಇಲ್ಲ ಅಂತಾನೆ. ಫಿಸಿಕಲ್ ಕೊಟ್ಟರೆ ನಾವು ಸ್ಟ್ರಾಂಗ್. ನಾವು ಮಾತನಾಡಿದ್ರೆ, ಉರಿ ಕಿತ್ತುಕೊಂಡು ಬಿಟ್ಟಿತು ಎಂದು ಮಂಜುಗೆ ರಜತ್ ತಿರುಗೇಟು ನೀಡಿದ್ದಾರೆ.

    ನೀವು, ತ್ರಿವಿಕ್ರಮ್ ಇಬ್ಬರು ಒಂದೇ ಟೀಮ್‌ನಲ್ಲಿ ಇದ್ದರೆ ನಾವೆಲ್ಲಾ ವೀಕ್ ಅಂತಾನ ಎಂದು ರಜತ್‌ಗೆ ಮಂಜು ಪ್ರಶ್ನಿಸಿದ್ದಾರೆ. ಹಾಗಾದ್ರೆ ಇಬ್ಬರು ಒಂದೇ ಟೀಮ್‌ಗೆ ಹೋಗಿ ಗುರು. ಜೋರಾಗಿ ಮಾತಾಡಬೇಡ, ನನಗೂ ಬರುತ್ತದೆ ಎಂದು ನೇರವಾಗಿ ಯುದ್ಧಕ್ಕೆ ನಿಂತಿದ್ದಾರೆ ರಜತ್. ಬಿಗ್ ಬಾಸ್ ಮನೆಯಲ್ಲಿ ತ್ರಿವಿಕ್ರಮ್, ಮಂಜು ಮಧ್ಯೆ ನಡೆಯುತ್ತಿದ್ದ ಫೈಟ್‌ನಲ್ಲಿ ರಜತ್ ಅವರು ಎಂಟ್ರಿಯಾಗಿದ್ದಾರೆ. ಒಟ್ನಲ್ಲಿ ವಾರಾಂತ್ಯದ ನಾಮಿನೇಷನ್‌ನಲ್ಲಿ ಯಾರು ವೀಕ್, ಯಾರು ಸ್ಟ್ರಾಂಗ್? ಎಂಬುದಕ್ಕೆ ಉತ್ತರ ಸಿಗಲಿದೆ.

  • ‘ಗುಗ್ಗು ನನ್ನ ಮಗ’ ಎಂದ ರಜತ್- Bigg Boss ಡೋರ್ ಓಪನ್ ಮಾಡಿ ಎಂದು ಪಟ್ಟು ಹಿಡಿದ ಸುರೇಶ್

    ‘ಗುಗ್ಗು ನನ್ನ ಮಗ’ ಎಂದ ರಜತ್- Bigg Boss ಡೋರ್ ಓಪನ್ ಮಾಡಿ ಎಂದು ಪಟ್ಟು ಹಿಡಿದ ಸುರೇಶ್

    ಬಿಗ್ ಬಾಸ್‌ಗೆ (Bigg Boss Kannada 11)  ಶೋಭಾ (Shobha Shetty) ಮತ್ತು ರಜತ್ (Rajath) ವೈಲ್ಡ್ ಕಾರ್ಡ್ ಎಂಟ್ರಿ ಬೆನ್ನಲ್ಲೇ ಸ್ಪರ್ಧಿಗಳ ನಡುವಿನ ಫೈಟ್ ಇನ್ನೊಂದು ಹಂತಕ್ಕೆ ತಲುಪಿದೆ. ವೈಲ್ಡ್ ಕಾರ್ಡ್ ಸ್ಪರ್ಧಿ ರಜತ್ ಟಾಸ್ಕ್ ಆಡುವಾಗ ಗೋಲ್ಡ್ ಸುರೇಶ್‌ಗೆ ಅವಮಾನಿಸಿದ್ದಾರೆ. ಅದಕ್ಕೆ ತಾವು ಆಟ ಆಡಲ್ಲ. ಬಾಗಿಲು ತೆಗಿಯಿರಿ ಎಂದು ಬಿಗ್ ಬಾಸ್ ಬಳಿ ಸುರೇಶ್ ಮನವಿ ಮಾಡಿಕೊಂಡಿದ್ದಾರೆ.

    ಇಂದಿನ ಸಂಚಿಕೆಯಲ್ಲಿ ‘ಬಿಗ್ ಬಾಸ್’ ಟಾಸ್ಕ್ ಒಂದನ್ನು ನೀಡಿದ್ದಾರೆ. ಕೊಳವೆ ಮೂಲಕ ಬರುವ ಚೆಂಡನ್ನು ಎತ್ತಿಕೊಂಡು ತಮ್ಮ ತಂಡಕ್ಕೆ ಇರುವ ಮೀಸಲಿರುವ ಚೌಕಟ್ಟಿನಲ್ಲಿ ಇಡಬೇಕು ಎಂದು ‘ಬಿಗ್ ಬಾಸ್’ ಆಟದ ನಿಯಮದಲ್ಲಿತ್ತು. ಈ ಟಾಸ್ಕ್‌ನಲ್ಲಿ ರಜತ್ ಮತ್ತು ಗೋಲ್ಡ್ ಸುರೇಶ್ (Gold Suresh) ನಡುವೆ ಬಿಗ್ ಫೈಟ್ ನಡೆದಿದೆ. ಇದನ್ನೂ ಓದಿ:ಮುರಿದ ಹೃದಯಗಳ ಭಾರಕ್ಕೆ ದೇವರ ಸಿಂಹಾಸನವೂ ನಡುಗಬಹುದು: ಡಿವೋರ್ಸ್ ಬಗ್ಗೆ ಎ.ಆರ್. ರೆಹಮಾನ್ ರಿಯಾಕ್ಷನ್

    ಅಂತೆಯೇ ಆಟ ಆರಂಭವಾಗಿದೆ. ಈ ವೇಳೆ, ಗೋಲ್ಡ್ ಸುರೇಶ್ ಜೊತೆ ಉಗ್ರಂ ಮಂಜು (Ugramm Manju) ಮಾತುಕತೆ ನಡೆಸುತ್ತಿರುತ್ತಾರೆ. ಇಬ್ಬರ ನಡುವಿನ ವಾಗ್ವಾದಕ್ಕೆ ರಜತ್ ಎಂಟ್ರಿಯಾಗಿ ಕೆಲವು ಪದಗಳನ್ನು ಗೋಲ್ಡ್ ಸುರೇಶ್‌ಗೆ ಬಳಸಿದ್ದಾರೆ. ಗುಗ್ಗು ನನ್ನ ಮಗ, ವೇಸ್ಟ್ ನನ್ನ ಮಗ ಎಂಬ ಪದಗಳನ್ನು ರಜತ್ ಬಳಸಿ ಸುರೇಶ್‌ಗೆ ಕೌಂಟರ್ ಕೊಟ್ಟಿದ್ದಾರೆ. ತಮ್ಮ ಮೇಲೆ ಬಳಕೆ ಆಗಿರುವ ಪದಗಳು ನಿಂದಿಸಿರುವ ರೀತಿ ನನಗೆ ಬೇಸರ ಆಗಿದೆ. ಬಿಗ್ ಬಾಸ್ ಅವರು ನನಗೆ ಮಗನೆ, ಗಿಗನೆ ಎಂದೆಲ್ಲ ಹೇಳ್ತಾರೆ. ಇವನು ನನ್ನ ಅಪ್ಪ ಅಲ್ಲ. ಬಿಗ್ ಬಾಸ್ ನಾನು ಆಟ ಆಡಲ್ಲ. ಬಿಗ್ ಬಾಸ್ ಬಾಗಿಲು ಓಪನ್ ಮಾಡಿ ಎಂದು ಡೋರ್ ತಟ್ಟಿದ್ದಾರೆ. ಸುರೇಶ್‌ಗೆ ಶಿಶಿರ್‌, ಮೋಕ್ಷಿತಾ ಅದೆಷ್ಟೇ ಸಮಾಧಾನ ಮಾಡಿದರು ಕೇಳೋ ಪರಿಸ್ಥತಿಯಲ್ಲಿ ಅವರಿಲ್ಲ.

    ಈ ಪ್ರೋಮೋ ನೋಡಿ ವೀಕ್ಷಕರಲ್ಲಿ ಕುತೂಹಲ ಮೂಡಿಸಿದೆ. ಎಪಿಸೋಡ್‌ಗಾಗಿ ಅಭಿಮಾನಿಗಳು ಎದುರು ನೋಡಿದ್ದಾರೆ. ದೊಡ್ಮನೆಗೆ ಬರುತ್ತಿದ್ದಂತೆಯೇ ವೈಲ್ಡ್ ಕಾರ್ಡ್ ಸ್ಪರ್ಧಿಗಳು ವೈಲ್ಡ್ ಆಗಿ ಆಟ ಆಡುತ್ತಿದ್ದಾರೆ.

  • BBK 11: ನಿಮ್ಮಲ್ಲಿ ಪಾಸಿಟಿವಿಟಿ ಇಲ್ಲ, ಇರೋದೆಲ್ಲ ನೆಗೆಟಿವ್‌: ಗೌತಮಿ ವಿರುದ್ಧ ಶೋಭಾ ರಾಂಗ್

    BBK 11: ನಿಮ್ಮಲ್ಲಿ ಪಾಸಿಟಿವಿಟಿ ಇಲ್ಲ, ಇರೋದೆಲ್ಲ ನೆಗೆಟಿವ್‌: ಗೌತಮಿ ವಿರುದ್ಧ ಶೋಭಾ ರಾಂಗ್

    ದೊಡ್ಮನೆಯ (BBK 11) ಆಟಕ್ಕೆ ವೈಲ್ಡ್ ಕಾರ್ಡ್ ಸ್ಪರ್ಧಿಗಳಾಗಿ ಶೋಭಾ ಶೆಟ್ಟಿ (Shobha Shetty) ಮತ್ತು ರಜತ್ (Rajath) ಎಂಟ್ರಿ ಕೊಟ್ಟಿದ್ದಾರೆ. ಮನೆಗೆ ಬರುತ್ತಿದ್ದಂತೆ ಶೋಭಾ ಸಖತ್ ವೈಲ್ಡ್ ಆಗಿ ಆಟ ಆಡುತ್ತಿದ್ದಾರೆ. ಇದೀಗ ನಿಮ್ಮ ಮುಖವಾಡ ಕಳಚುತ್ತೇನೆ ಅಂತ ಭಯನಾ? ಎಂದು ಗೌತಮಿಗೆ ಶೋಭಾ ಅವಾಜ್ ಹಾಕಿದ್ದಾರೆ.

    ಉಗ್ರಂ ಮಂಜು ನಂತರ ಗೌತಮಿ ಜಾಧವ್ ಕೂಡ ಶೋಭಾರನ್ನು ಕ್ಯಾಪ್ಟನ್ಸಿ ರೇಸ್‌ನಿಂದ ಹೊರಗಿಡಲು ಹೆಸರು ಸೂಚಿಸಿದ್ದಾರೆ. ‘ಬಿಗ್ ಬಾಸ್’ ನೀಡಿದ ಟಾಸ್ಕ್‌ನಲ್ಲಿ ರಜತ್ ಮತ್ತು ಶೋಭಾ ಇವರಲ್ಲಿ ಕ್ಯಾಪ್ಟನ್ ಆಗಲು ಯಾರು ಅರ್ಹ? ಅನರ್ಹ ಎಂದು ಮನೆ ಮಂದಿ ಹೇಳಬೇಕಿತ್ತು. ಗೌತಮಿ ಅವರು ಶೋಭಾರನ್ನು ಕ್ಯಾಪ್ಟನ್ ಆಗಲು ಅನರ್ಹ ಎಂದಿದ್ದಾರೆ. ಗೌತಮಿ ಅವರು ಶೋಭಾ ಶೆಟ್ಟಿ ಅವರನ್ನು ಹೊರಗೆ ಇಟ್ಟಿದ್ದಾರೆ. ಅವರು ಕೊಟ್ಟ ಕಾರಣಕ್ಕೆ, ನಿಮ್ಮಲ್ಲಿ ಪಾಸಿಟಿವ್ ಇಲ್ವೇ ಇಲ್ಲ, ಇರೋದೆಲ್ಲ ನೆಗೆಟಿವ್ ಎಂದು ಗೌತಮಿಗೆ ನೇರವಾಗಿ ಚಾಟಿ ಬೀಸಿದ್ದಾರೆ ಶೋಭಾ. ಇದನ್ನೂ ಓದಿ:ಕೊಲೆ ಯತ್ನದ ಕೇಸ್‌ನಲ್ಲಿ ನಟ ತಾಂಡವ್ ರಾಮ್ ಅರೆಸ್ಟ್

    ಶೋಭಾ ಅವರು ಅನರ್ಹ ಅಂತ ಯಾಕೆ ಹೇಳುತ್ತಿದ್ದೇನೆ ಎಂದರೆ, ಮೊದಲಿಗೆ ನನ್ನ ಮುಖವಾಡ ಕಳಚಬೇಕು ಎನ್ನುವುದು ಶೋಭಾ ಅವರ ಗುರಿ. ನಿಮ್ಮ ಟೀಮ್‌ಗೆ ನಾನು ಬಂದರೆ ನೀವು ಅದೇ ಗುಂಗಿನಲ್ಲಿ ಇರುತ್ತೀರಾ ಹೊರತು, ನನ್ನ ಪಾಸಿಟಿವ್ ಕಡೆ ನೀವು ನೋಡೋದೆ ಇಲ್ಲ. ನೆಗೆಟಿವ್ ಫಸ್ಟ್ ನೋಡುತ್ತೀರಾ ಅಂದರೆ ತಂಡದ ನಾಯಕನಿಗೆ ಇರಬೇಕಾದ ಲಕ್ಷಣ ಅಲ್ಲ ಎಂದಿದ್ದಾರೆ. ಅದಕ್ಕೆ ನಾನು ನಿಮ್ಮ ಮುಖವಾಡ ಕಳಚುತ್ತೀನಿ ಅಂತ ಭಯ ಪಡುತ್ತಿದ್ದೀರಾ? ಎಂದು ನೇರವಾಗಿ ಗೌತಮಿಗೆ ಶೋಭಾ ಪ್ರಶ್ನಿಸಿದ್ದಾರೆ. 200 ದಿನ ಇದ್ದರೂ ಅದು ಸಾಧ್ಯವಿಲ್ಲ ಎಂದು ಶೋಭಾಗೆ ಗೌತಮಿ ತಿರುಗೇಟು ನೀಡಿದ್ದಾರೆ.

    ಅದಕ್ಕೆ ಶೋಭಾ ಶೆಟ್ಟಿ ಮಾತನಾಡಿ, ಆಡಿಯನ್ಸ್ ಆಗಿ ನಾನು ನಿಮ್ಮನ್ನು ಹೊರಗೆ ನೋಡಿದಾಗ ಪಾಸಿಟಿವ್ ಅಂತ ಹೇಳುತ್ತೀರಾ. ಆದರೆ ನಿಮ್ಮಲ್ಲಿ ಇರೋದೆಲ್ಲ ನೆಗೆಟಿವ್. ಪಾಸಿಟಿವಿಟಿ ನಿಮಗೆ ಇಲ್ವೇ ಇಲ್ಲ. ಇರೋದೆಲ್ಲ ನೆಗೆಟಿವ್ ಎಂದಿದ್ದಾರೆ. ಅದಕ್ಕೆ ಗೌತಮಿ ಅವರು ಪಾಸಿಟಿವಿಟಿ ನನಗೆ ಅಂತ ಇಟ್ಟುಕೊಂಡಿದ್ದೇನೆ ಎಂದಿದ್ದಾರೆ. ಇವರ ವಾಗ್ವಾದಕ್ಕೆ ಮನೆಮಂದಿ ಗಪ್‌ಚುಪ್‌ ಎಂದಿದ್ದಾರೆ. ಇನ್ಮೇಲೆ ಮನೆಯಲ್ಲಿ ವೈಲ್ಡ್ ಕಾರ್ಡ್ ಸ್ಪರ್ಧಿಗಳ ಹಾವಳಿ ಹೇಗಿರುತ್ತದೆ? ಎಂದು ಕಾದು ನೋಡಬೇಕಿದೆ.

  • BBK 11: ಫೈರ್‌ ಲೇಡಿ ಶೋಭಾ ಶೆಟ್ಟಿ ಅಬ್ಬರಕ್ಕೆ ದಂಗಾದ ಉಗ್ರಂ ಮಂಜು

    BBK 11: ಫೈರ್‌ ಲೇಡಿ ಶೋಭಾ ಶೆಟ್ಟಿ ಅಬ್ಬರಕ್ಕೆ ದಂಗಾದ ಉಗ್ರಂ ಮಂಜು

    ‘ಬಿಗ್ ಬಾಸ್ ಕನ್ನಡ 11’ರ (Bigg Boss Kannada 11) ಆಟ ಇದೀಗ 50 ದಿನ ಪೂರೈಸಿ ಮುನ್ನುಗ್ಗುತ್ತಿದೆ. ಈ ಸಂದರ್ಭದಲ್ಲಿ ವೈಲ್ಡ್ ಕಾರ್ಡ್ ಸ್ಪರ್ಧಿಗಳಾಗಿ ಶೋಭಾ ಶೆಟ್ಟಿ (Shobha Shetty) ಮತ್ತು ರಜತ್ (Rajath) ಎಂಟ್ರಿ ಕೊಟ್ಟಿದ್ದಾರೆ. ಮನೆಯಲ್ಲಿ ಈಗ ಅಸಲಿ ಆಟ ಶುರುವಾಗಿದೆ. ಇದರ ನಡುವೆ ಕ್ಯಾಪ್ಟನ್ಸಿ ರೇಸ್‌ನಲ್ಲಿ ನಿಲ್ಲಲು ಶೋಭಾ ಅನರ್ಹ ಎಂಬ ವಿಚಾರಕ್ಕೆ ನಟಿ ಮತ್ತು ಮಂಜು ನಡುವೆ ವಾಕ್ಸಮರ ನಡೆದಿದೆ. ಈ ವೇಳೆ, ಶೋಭಾ ಅರ್ಭಟಕ್ಕೆ ಉಗ್ರಂ ಮಂಜು ಸೈಲೆಂಟ್ ಆಗಿದ್ದಾರೆ.

    ವೈಲ್ಡ್ ಕಾರ್ಡ್ ಎಂಟ್ರಿಯಾದ ರಜತ್ ಹಾಗೂ ಶೋಭಾ ಅವರ ಪೈಕಿ ಈ ಮನೆಯ ಕ್ಯಾಪ್ಟನ್ ಆಗಲು ಯಾರು ಅನರ್ಹರು ಎಂದು ಹೇಳುವ ಟಾಸ್ಕ್ ಅನ್ನು ಬಿಗ್ ಬಾಸ್ ನೀಡಿದ್ದರು. ಇಂದು ಬಿಗ್ ಬಾಸ್ ಮನೆಯ ಸದಸ್ಯರು ಶೋಭಾ ಹಾಗೂ ರಜತ್ ಅವರ ಪೈಕಿ ತಂಡದ ನಾಯಕರಾಗಲು ಯಾರು ಅನರ್ಹರು ಎಂದು ಸ್ಪರ್ಧಿಗಳು ಆಯ್ಕೆ ಮಾಡಬೇಕಿತ್ತು. ಇದನ್ನೂ ಓದಿ:ಬೇಬಿ ಬಂಪ್ ಫೋಟೋಶೂಟ್ ಹಂಚಿಕೊಂಡ ಹರಿಪ್ರಿಯಾ

    ಆಗ ರೂಲ್ಸ್ ಅಂಡ್ ರೆಗ್ಯೂಲೇಷನ್ ಏನು ಇರುತ್ತೋ ಅದನ್ನ ಎಲ್ಲೋ ಅಲ್ಲಾಡ್ಸಿದ್ದು ಶೋಭಾ ಅವರು ಎಂದು ಉಗ್ರಂ ಮಂಜು ರಾಂಗ್ ಆಗಿದ್ದಾರೆ. ಮಂಜು ಆಡಿದ ಮಾತಿಗೆ ಶೋಭಾ ಕೆರಳಿ ಕೆಂಡವಾಗಿದ್ದಾರೆ. ಅಲ್ಲಾಡ್ಸೋದು ಗಿಲ್ಲಾಡ್ಸೋದು ಅಂದ್ರೆ ಏನು? ಇವರಿಗೆ ಕ್ಲ್ಯಾರಿಟಿಯೇ ಇಲ್ಲ ಎಂದು ಶೋಭಾ ಗುಡುಗಿದ್ದಾರೆ. ಸೂಕ್ತ ಕಾರಣ ಕೊಡುತ್ತಾ ಇಲ್ಲ. ಆಡುವ ಮಾತಿನಲ್ಲಿ ಕ್ಲ್ಯಾರಿಟಿ ಇಲ್ಲ ಎಂದಿದ್ದಾರೆ ಶೋಭಾ.

    ಕ್ಲ್ಯಾರಿಟಿಯಿಂದಲೇ ಹೇಳುತ್ತಾ ಇದ್ದೀನಿ ಕಿರುಚಬೇಡಿ ಎಂದು ಮಂಜು ತಿರುಗೇಟು ನೀಡಿದ್ದಾರೆ. ನನ್ನ ಮಾತು ಕೇಳಿಸಿಕೊಳ್ಳಿ, ಮರ್ಯಾದೆ ಕಳೆದುಕೊಳ್ಳಬೇಡಿ ಎಂದು ಮಂಜು ಮೇಲೆ ಶೋಭಾ ಗುಡುಗಿದ್ದಾರೆ. ಶೋಭಾ ಅವರ ಕೂಗಾಟಕ್ಕೆ ಉಗ್ರಂ ಮಂಜು ಕೂಡ ಒಂದು ಕ್ಷಣ ಸೈಲೆಂಟ್ ಆಗಿದ್ದಾರೆ. ಇವರ ವಾಕ್ಸಮರ ನೋಡಿ ಮನೆ ಮಂದಿ ಸೈಲೆಂಟ್‌ ಆಗಿದ್ದಾರೆ. ದೊಡ್ಮನೆಯಲ್ಲಿ ಸದ್ಯ ವೈಲ್ಡ್‌ ಕಾರ್ಡ್‌ ಸ್ಪರ್ಧಿ ಶೋಭಾ ಹವಾ ಜೋರಾಗಿದೆ. ಇನ್ಮೇಲೆ ಅವರ ಆಟ ಹೇಗಿರುತ್ತದೆ ಎಂದು ಕಾದುನೋಡಬೇಕಿದೆ.

  • BBK 11: ನಾಮಿನೇಷನ್‌ನಲ್ಲಿ ಒಡೆದ ಒಗ್ಗಟ್ಟು- ತ್ರಿವಿಕ್ರಮ್‌ ಮೇಲೆ ಉಗ್ರಂ ಮಂಜು ಕೆಂಡ

    BBK 11: ನಾಮಿನೇಷನ್‌ನಲ್ಲಿ ಒಡೆದ ಒಗ್ಗಟ್ಟು- ತ್ರಿವಿಕ್ರಮ್‌ ಮೇಲೆ ಉಗ್ರಂ ಮಂಜು ಕೆಂಡ

    ‘ಬಿಗ್ ಬಾಸ್ ಕನ್ನಡ 11’ರ (Bigg Boss Kannada 11) ಆಟ 8ನೇ ವಾರಕ್ಕೆ ಕಾಲಿಟ್ಟಿದೆ. ಈಗಾಗಲೇ ಹನುಮಂತ ವೈಲ್ಡ್ ಕಾರ್ಡ್ ಸ್ಪರ್ಧಿಯಾಗಿ ಎಂಟ್ರಿ ಕೊಟ್ಟು ಸ್ಪರ್ಧಿಗಳು ಮತ್ತು ಜನರ ಮನೆಗೆದ್ದಿದ್ದಾರೆ. ಈ ವಾರಾಂತ್ಯ ಕಿಚ್ಚನ ಪಂಚಾಯಿತಿಯಲ್ಲಿ ರಜತ್ ಕಿಶನ್ ಮತ್ತು ಶೋಭಾ ಶೆಟ್ಟಿ ದೊಡ್ಮನೆ ವೈಲ್ಡ್ ಕಾರ್ಡ್ ಸ್ಪರ್ಧಿಯಾಗಿ ಎಂಟ್ರಿ ಕೊಟ್ಟಿದ್ದಾರೆ. ಇವರ ಖಡಕ್ ಎಂಟ್ರಿಯ ನಡುವೆ ನಾಮಿನೇಷನ್ ಪ್ರಕ್ರಿಯೆ ಜರುಗಿದೆ. ಈ ವೇಳೆ, ತ್ರಿವಿಕ್ರಮ್ ಮತ್ತು ಉಗ್ರಂ ಮಂಜು (Ugramm Manju) ನಡುವೆ ವಾಕ್ಸಮರ ನಡೆದಿದೆ. ತ್ರಿವಿಕ್ರಮ್‌ ಮೇಲೆ ಮಂಜು ಕೆಂಡಕಾರಿದ್ದಾರೆ.

    ಇಂದಿನ ಸಂಚಿಕೆಯ ಬಿಗ್ ಬಾಸ್ ಪ್ರೋಮೋದಲ್ಲಿ 50ನೇ ವಾರಕ್ಕೆ ಕಾಲಿಟ್ಟ ಮನೆ ಮಂದಿಗೆ ನಾಮಿನೇಷನ್ ಬಿಸಿ ಮುಟ್ಟಿಸಲಾಗಿದೆ. ಮಡಿಕೆಯನ್ನು ಕೋಲಿನಿಂದ ಹೊಡೆದು ನಾಮಿನೇಟ್ ಮಾಡಬೇಕಿತ್ತು. ಅದರಂತೆ ಸ್ಪರ್ಧಿಗಳು ಒಬ್ಬೊಬ್ಬರಾಗಿ ಬಂದು ನಾಮಿನೇಷನ್‌ಗೆ ಹೆಸರನ್ನು ತೆಗೆದುಕೊಂಡು ಮಡಿಕೆಯನ್ನು ಹೊಡೆದು ಹಾಕಿದ್ದಾರೆ. ಇದನ್ನೂ ಓದಿ:‘ಎಮರ್ಜೆನ್ಸಿ’ ರಿಲೀಸ್‌ಗೆ ಮುಹೂರ್ತ ಫಿಕ್ಸ್- ಜ.17ಕ್ಕೆ ಕಂಗನಾ ಸಿನಿಮಾ ರಿಲೀಸ್

    ಇದೇ ನಾಮಿನೇಷನ್ ಪ್ರಕ್ರಿಯೆಯಲ್ಲಿ ಮೋಕ್ಷಿತಾ (Mokshitha Pai) ಅವರು ಮಂಜುರನ್ನು ನಾಮಿನೇಟ್ ಮಾಡಿದ್ದಾರೆ. ಮಂಜಣ್ಣನ ಕೆಲವು ಮಾತುಗಳು ನನಗೆ ಕುಗ್ಗಿಸುತ್ತದೆ ಅಂತ ಹೇಳಿದ್ದಾರೆ. ಅದಕ್ಕೆ ಉಗ್ರಂ ಮಂಜು ಅವರು ಮೋಕ್ಷಿತಾಗೆ ತಿರುಗೇಟು ನೋಡಿದ್ದಾರೆ. ಇನ್ಮುಂದೆ ನನಗೆ ಅಣ್ಣ ಅಂತ ಕರೆಯಬೇಡ ಎಂದು ಹೇಳಿ ಮೋಕ್ಷಿತಾಗೆ ನಾಮಿನೇಟ್ ಮಾಡಿದ್ದಾರೆ. ಇದಲ್ಲದೇ, ತ್ರಿವಿಕ್ರಮ್ (Trivikram) ಹಾಗೂ ಉಗ್ರಂ ಮಂಜು ನಡುವೆಯೂ ವಾದ ವಿವಾದ ನಡೆದಿದೆ. ಉಗ್ರಂ ಮಂಜು ಹಾಗೂ ತ್ರಿವಿಕ್ರಮ್ ಒಬ್ಬರಿಗೊಬ್ಬರು ನಾಮಿನೇಟ್ ಮಾಡಿಕೊಂಡಿದ್ದಾರೆ. ಇದೇ ವೇಳೆ ಈ ಇಬ್ಬರು ಜೋರು ಧ್ವನಿಯಲ್ಲಿ ಮಾತಾಡಿದ್ದಾರೆ.

    ಪರ್ಸನಲ್ ಆಗಿ ಟಾರ್ಗೆಟ್ ಮಾಡುತ್ತಾರೆ ಎಂದು ಹೇಳುತ್ತಾ ಮಂಜುರನ್ನು ತ್ರಿವಿಕ್ರಮ್ ನಾಮಿನೇಟ್ ಮಾಡಿದ್ದಾರೆ. ಎಲ್ಲರನ್ನೂ ತುಳಿದು ಮೇಲಕ್ಕೆ ಬರಬೇಕು ಅನ್ನೋ ಮನೋಭಾವ ನಿನಗಿದೆ ಎಂದು ತ್ರಿವಿಕ್ರಮ್‌ಗೆ ಮಂಜು ತಿರುಗೇಟು ನೀಡಿದ್ದಾರೆ. ಕೆಲಸ ಆಗೋ ತನಕ ಮಾತ್ರ ಇರುತ್ತಾರೆ. ಆಮೇಲೆ ಇರಲ್ಲ ಎಂದು ಮಂಜು ಗುಡುಗಿದ್ದಾರೆ. ಜೋರಾಗಿ ಮಾತನಾಡಲು ನಮಗೂ ಬರುತ್ತ ಎಂದು ತ್ರಿವಿಕ್ರಮ್ ಕೂಡ ಕೆಂಡಕಾರಿದ್ದಾರೆ. ಇಬ್ಬರ ವಾಗ್ವಾದಕ್ಕೆ ಮನೆ ಮಂದಿ ಸೈಲೆಂಟ್ ಆಗಿದ್ದಾರೆ.

    ಇನ್ನೂ ಮನೆಗೆ ಇಬ್ಬರು ಖಡಕ್ ಆಗಿರುವ ವೈಲ್ಡ್ ಕಾರ್ಡ್ ಸ್ಪರ್ಧಿಗಳ ಆಗಮನವಾಗಿದೆ. ಹಾಗಾಗಿ ಇನ್ಮುಂದೆ ಆಟದಲ್ಲಿ ಏನೆಲ್ಲಾ ತಿರುವು ಸಿಗಲಿದೆ ಎಂಬುದನ್ನು ಕಾದುನೋಡಬೇಕಿದೆ.

  • BBK 11: ಮಂಜು ನಂಬಿಕೆಗೆ ಅರ್ಹರಲ್ಲ: ವೈಲ್ಡ್ ಕಾರ್ಡ್ ಸ್ಪರ್ಧಿ ಶೋಭಾ ಶೆಟ್ಟಿ ಕಿಡಿ

    BBK 11: ಮಂಜು ನಂಬಿಕೆಗೆ ಅರ್ಹರಲ್ಲ: ವೈಲ್ಡ್ ಕಾರ್ಡ್ ಸ್ಪರ್ಧಿ ಶೋಭಾ ಶೆಟ್ಟಿ ಕಿಡಿ

    ‘ಬಿಗ್ ಬಾಸ್ ಕನ್ನಡ 11’ರ (Bigg Boss Kannada 11) ಆಟ 50ನೇ ದಿನಕ್ಕೆ ಕಾಲಿಟ್ಟಿದೆ. ಅನುಷಾ ರೈ (Anusha Rai) ದೊಡ್ಮನೆ ಆಟದಿಂದ ಎಲಿಮಿನೇಷನ್ ಆಗುತ್ತಿದ್ದಂತೆ ಡಬಲ್ ವೈಲ್ಡ್ ಕಾರ್ಡ್ ಸ್ಪರ್ಧಿಗಳ ಎಂಟ್ರಿಗೆ ಮನೆ ಶೇಕ್ ಆಗಿದೆ. ದೊಡ್ಮನೆಯ ಪ್ರಬಲ ಸ್ಪರ್ಧಿಗಳನ್ನೇ ಶೋಭಾ ಶೆಟ್ಟಿ (Shobha Shetty) ಮತ್ತು ರಜತ್ (Rajath) ಟಾರ್ಗೆಟ್ ಮಾಡಿದ್ದಾರೆ.

    ವಾಹಿನಿಯು ರಿಲೀಸ್ ಮಾಡಿರುವ ಹೊಸ ಪ್ರೋಮೋದಲ್ಲಿ ಬಿಗ್ ಬಾಸ್ ಮನೆಯೊಳಗೆ ಶೋಭಾ ಶೆಟ್ಟಿ ಮತ್ತು ರಜತ್ ಆಗಮಿಸಿದ್ದಾರೆ. ಇವರಿಬ್ಬರ ಎಂಟ್ರಿ ಕಂಡು ಮನೆಯವರು ಕೊಂಚ ಶಾಕ್ ಆಗಿರುವುದಂತೂ ನಿಜ. ಮನೆಯೊಳಗೆ ಬರುತ್ತಿದ್ದಂತೆಯೇ ಅವರಿಬ್ಬರಿಗೂ ಬಿಗ್ ಬಾಸ್ ಒಂದು ಟಾಸ್ಕ್ ನೀಡಿದ್ದಾರೆ. ಅದೇನೆಂದರೆ, ಈಗಾಗಲೇ ಒಳಗಿರುವ ಸ್ಪರ್ಧಿಗಳ ಬಗ್ಗೆ ಅಭಿಪ್ರಾಯ ತಿಳಿಸುತ್ತಾ, ಒಂದೊಂದು ತೆಂಗಿನಕಾಯಿಯನ್ನು ಒಡೆದು ಹಾಕಬೇಕು.

    ಈ ವೇಳೆ, ನೀವು ಸ್ಟಾರ್ಟಿಂಗ್‌ನಿಂದ ಕಿತ್ತು ದಬಾಕಾದೇ ಇರೋದನ್ನು ನಾನು ವೈಲ್ಡ್ ಕಾರ್ಡ್ ಎಂಟ್ರಿಯಿಂದ ಕಿತ್ತು ದಬಾಕ್ತಿನಿ ಎಂದು ರಜತ್ ಅವರು ಸಖತ್ ಅಟಿಟ್ಯೂಡ್‌ನಲ್ಲಿ ಹೇಳುತ್ತಾ ತೆಂಗಿನಕಾಯಿ ಒಡೆದು ಹಾಕಿದ್ದಾರೆ.

    ಶೋಭಾ ಶೆಟ್ಟಿ ಅವರು, ಉಗ್ರಂ ಮಂಜು (Urgam Manju) ಸ್ನೇಹಕ್ಕೆ ನಂಬಲರ್ಹವಲ್ಲದ ವ್ಯಕ್ತಿ. ಅವರು ಬಗ್ಗೆ ಇವರು ಮಾತಾಡ್ತಾರೆ, ಇವರ ಬಗ್ಗೆ ಅವರು ಮಾತಾಡ್ತಾರೆ ಅತ್ತ ಗೌತಮಿ ಅವರು ಮುಖವಾಡವನ್ನು ಇನ್ನೂ ಹಾಕಿಕೊಂಡಿದ್ದಾರೆ. ಆ ಒಂದು ಮುಖವಾಡವನ್ನು ನಾನು ಬಯಲು ಮಾಡಬಹುದು ಎಂದು ಹೇಳಿದ್ದಾರೆ. ಹೀಗೆ ಗೌತಮಿ ಹೆಸರು ಹೇಳಿ ಶೋಭಾ ತೆಂಗಿನಕಾಯಿ ಒಡೆದರು. ಆದರೆ ಅದು ಒಡೆಯಲಿಲ್ಲ. ಆಗ ಗೌತಮಿಗೆ ನಗುವನ್ನು ತಡೆಯಲಾಗಲಿಲ್ಲ.

    ಅಂದಹಾಗೆ, ಕನ್ನಡತಿ ಶೋಭಾ ಶೆಟ್ಟಿ ಅವರು ಕಳೆದ ತೆಲುಗಿನ ‘ಬಿಗ್ ಬಾಸ್ 7’ಕ್ಕೆ ಸ್ಪರ್ಧಿಯಾಗಿ ಆಟ ಆಡಿ ಪ್ರೇಕ್ಷಕರ ಗಮನ ಸೆಳದಿದ್ದರು. ಅಗ್ನಿಸಾಕ್ಷಿ, ನಮ್ಮ ರುಕ್ಕು ಸೇರಿದಂತೆ ಹಲವು ಸೀರಿಯಲ್ ಗಳಲ್ಲಿ ನಟಿಸಿದ್ದಾರೆ.

    ಇನ್ನೂ 2013ರಲ್ಲಿ ಕನ್ನಡ ಕಿರುತೆರೆಯ ರಿಯಾಲಿಟಿ ಶೋ ಮೂಲಕ ಜನರಿಗೆ ಪರಿಚಯವಾದ ರಜತ್ ಅವರು ಬಿಗ್ ಬಾಸ್ ಮನೆಗೆ ಎಂಟ್ರಿ ಕೊಟ್ಟಿದ್ದಾರೆ. ರಜತ್ ಬುಜ್ಜಿ ಅವರು ಸೋಷಿಯಲ್ ಮೀಡಿಯಾದಲ್ಲಿ ಸೆನ್ಸೇಷನ್ ಕ್ರಿಯೇಟ್ ಮಾಡಿದ್ದಾರೆ.

  • BBK 11: ಕಿಚ್ಚನ ಕೋಪಕ್ಕೆ ಚೈತ್ರಾ ಕುಂದಾಪುರ ಗಪ್‌ ಚುಪ್‌- ಅಷ್ಟಕ್ಕೂ ಆಗಿದ್ದೇನು?

    BBK 11: ಕಿಚ್ಚನ ಕೋಪಕ್ಕೆ ಚೈತ್ರಾ ಕುಂದಾಪುರ ಗಪ್‌ ಚುಪ್‌- ಅಷ್ಟಕ್ಕೂ ಆಗಿದ್ದೇನು?

    ಕನ್ನಡದ ‘ಬಿಗ್ ಬಾಸ್ 11’ರ (Bigg Boss Kannada 11) ಶೋ 8ನೇ ವಾರಕ್ಕೆ ಕಾಲಿಟ್ಟಿದೆ. ಇನ್ನೂ ಸಾಮಾನ್ಯವಾಗಿ ಯಾರ ಮೇಲೂ ಕೋಪ ಮಾಡಿಕೊಳ್ಳದ ಸುದೀಪ್ ಇದೀಗ ಚೈತ್ರಾ ಕುಂದಾಪುರ (Chaithra Kundapura) ಮೇಲೆ ಸಿಟ್ಟಾಗಿದ್ದಾರೆ. ಚೈತ್ರಾಗೆ ಸಖತ್ ಆಗಿ ಸುದೀಪ್ (Sudeep) ವಾರಾಂತ್ಯದ ಎಪಿಸೋಡ್‌ನಲ್ಲಿ ಕ್ಲಾಸ್ ತೆಗೆದುಕೊಂಡಿದ್ದಾರೆ.

    ನಿನ್ನೆಯ ಸಂಚಿಕೆಯಲ್ಲಿ ಬಿಗ್ ಬಾಸ್ ಮನೆಯ ಬಾತ್‌ರೂಮ್‌ನಲ್ಲಿ ಚೈತ್ರಾ ಕುಂದಾಪುರ ಅವರು ಕುಸಿದು ಬಿದ್ದಿದ್ದರು. ಆ ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಿದ್ದರು. ಚಿಕಿತ್ಸೆಯ ಬಳಿಕ ಬಿಗ್‌ಬಾಸ್‌ಗೆ ವಾಪಸ್ ಆದ್ಮೇಲೆ ಉಳಿದ ಸ್ಪರ್ಧಿಗಳ ಬಗ್ಗೆ ಹೊರಗಡೆ ಏನೆಲ್ಲಾ ನಡೆಯುತ್ತಿದೆ? ಸ್ಪರ್ಧಿಗಳ ಮೇಲೆ ಯಾವ ರೀತಿಯ ಬ್ಲಾಡ್ ಇಂಪ್ಯಾಕ್ಟ್ ಆಗಿದೆ ಅಂತ ಚೈತ್ರಾ ಸೂಚಿಸಿದರು.

    ಇದೇ ವಿಚಾರವಾಗಿ ಇಂದಿನ ಕಿಚ್ಚನ ಪಂಚಾಯ್ತಿಯಲ್ಲಿ ಸುದೀಪ್ ಅವರು ಚೈತ್ರಾ ಮೇಲೆ ಕೆಂಡಕಾರಿದ್ದಾರೆ. ಮನೆ ಬಿಟ್ಟು ಆಸ್ಪತ್ರೆಯಲ್ಲಿ ಕಾಲ ಕಳೆಯುತ್ತೀರಿ, ಬೆಳಗ್ಗೆ ಬಂದು ಅದನ್ನು ಸ್ಪರ್ಧಿಗಳಿಗೆ ಹೇಳುವ ಉದ್ದೇಶವೇನು ಅಂತ ಸುದೀಪ್ ಪ್ರಶ್ನೆ ಮಾಡಿದ್ದಾರೆ. ಇದನ್ನೂ ಓದಿ:ಹಿರಿಯ ನಟ ಟಿ.ತಿಮ್ಮಯ್ಯ ಹೃದಯಾಘಾತದಿಂದ ನಿಧನ

    ಆಗ ಚೈತ್ರಾ, ನಾನೇ ಡಾಕ್ಟರ್ ಹತ್ತಿರ ಕೆಲವೊಂದು ಕೇಳಿದ್ದೇ, ಅಲ್ಲಿದ್ದ ನರ್ಸ್ ಹೀಗೆ ಹೇಳಿದರು. ಪ್ರತಿಯೊಬ್ಬರ ಮೇಲಿನ ಅಭಿಪ್ರಾಯ ತಿಳಿಸಿದರು. ಅದು ನನ್ನ ಅಭಿಪ್ರಾಯ ಅಲ್ಲ ಎಂದರು. ತಪ್ಪು ಮಾಡಿ ಮಾತಿನಲ್ಲೇ ಸಮರ್ಥನೆ ಮಾಡಿಕೊಳ್ತಿದ್ದ ಚೈತ್ರಾ ಮೇಲೆ ಸುದೀಪ್ ರಾಂಗ್ ಆದರು. ಬಾಯಿ ಮುಚ್ಚುವಂತೆ ಚೈತ್ರಾಗೆ ಶ್.. ಎಂದು ಸನ್ನೆ ಮಾಡಿದರು. ಸುದೀಪ್ ಕೋಪ ಕಂಡು ಚೈತ್ರಾ ಕುಂದಾಪುರ ಗಪ್ ಚುಪ್ ಆದರು. ಮಾತು ನಿಲ್ಲಿಸಿ ಚೈತ್ರಾ ಕಣ್ಣೀರು ಹಾಕಿದರು. ಆ ನಂತರ ಉಸಿರು ಕಟ್ಟಿಸುವ ವಾತಾವರಣದಲ್ಲಿ ನನಗೆ ಇರೋಕೆ ಆಗಲ್ಲ. ಮನೆಗೆ ಕಳುಹಿಸಿ ಎಂದು ಚೈತ್ರಾ ಬಿಗ್ ಬಾಸ್ ಮನವಿ ಮಾಡಿದ್ದಾರೆ.

    ಇನ್ನೂ ಹೊರಗಿನ ವಿಚಾರವನ್ನು ಸ್ಪರ್ಧಿಗಳು ಮನೆಯೊಳಗೆ ಚರ್ಚಿಸುವಂತಿಲ್ಲ ಎಂದು ಮನೆಯ ಮೂಲ ನಿಯಮವಾಗಿದೆ. ಅದಕ್ಕೆ ಅದನ್ನು ಸುದೀಪ್ ಚೈತ್ರಾಗೆ ಪ್ರಶ್ನೆ ಮಾಡಿದ್ದಾರೆ. ಸದ್ಯ ವಾಹಿನಿ ರಿವೀಲ್ ಮಾಡಿರುವ ಪ್ರೋಮೋ ನೋಡಿ ಫ್ಯಾನ್ಸ್ ಕ್ಯೂರಿಯಸ್ ಆಗಿದ್ದಾರೆ. ಕಿಚ್ಚನ ಪಂಚಾಯಿತಿಗಾಗಿ ಕಾಯುತ್ತಿದ್ದಾರೆ.

  • BBK 11: ಕಳಪೆ ಎಂದ ಮೋಕ್ಷಿತಾಗೆ ಅಸಲಿ ಆಟ ಈಗ ಶುರು ಎಂದು ಸವಾಲೆಸೆದ ಧನರಾಜ್

    BBK 11: ಕಳಪೆ ಎಂದ ಮೋಕ್ಷಿತಾಗೆ ಅಸಲಿ ಆಟ ಈಗ ಶುರು ಎಂದು ಸವಾಲೆಸೆದ ಧನರಾಜ್

    ಕಿರುತೆರೆಯ ಅತೀ ದೊಡ್ಡ ಶೋ ‘ಬಿಗ್ ಬಾಸ್ ಸೀಸನ್ 11’ (Bigg Boss Kannada 11) ಇದೀಗ 8ನೇ ವಾರಕ್ಕೆ ಕಾಲಿಡುವ ಹೊಸ್ತಿಲಲ್ಲಿದೆ. ಹೀಗಿರುವಾಗ ದೊಡ್ಮನೆಯಲ್ಲಿ ರಂಪಾಟ ನಡೆದಿದೆ. ವಾಹಿನಿಯು ಇದೀಗ ಸೋಷಿಯಲ್ ಮೀಡಿಯಾದಲ್ಲಿ ಹೊಸ ಪ್ರೋಮೋವೊಂದನ್ನು ಶೇರ್ ಮಾಡಿಕೊಂಡಿದೆ. ಮೋಕ್ಷಿತಾಗೆ (Mokshitha Pai) ಅಹಂಕಾರ ಇದೆ ಎಂದು ಧನರಾಜ್ ತಿವಿದಿದ್ದಾರೆ.‌ ಇದನ್ನೂ ಓದಿ:ನ.28ಕ್ಕೆ ಚಂದನಾ ಅನಂತಕೃಷ್ಣ ಮದುವೆ- ಭಾವಿ ಪತಿ ಜೊತೆಗಿನ ಫೋಟೋ ರಿವೀಲ್

    ಹೊಸ ಪ್ರೋಮೋದಲ್ಲಿ ಎಂದಿನಂತೆ ವಾರಾಂತ್ಯದಲ್ಲಿ ಈ ವಾರದ ಕಳಪೆ ಪ್ರದರ್ಶನ ಪ್ರಕ್ರಿಯೆ ನಡೆದಿದೆ. ಮನೆಯ ಸದಸ್ಯರು ಒಬ್ಬಬ್ಬರಾಗಿ ಬಂದು ಈ ವಾರದ ಕಳಪೆ ಪ್ರದರ್ಶನ ನೀಡಿದ್ದು, ಯಾರು ಅಂತ ಹೇಳಬೇಕು. ಆದರೆ ಈ ವಾರದ ಜೋಡಿ ಟಾಸ್ಕ್‌ನಲ್ಲಿ ತಮ್ಮ ಜೊತೆಯಾಗಿದ್ದ ಧನರಾಜ್ ಅವರನ್ನೇ ಮೋಕ್ಷಿತಾ ಕಳಪೆ ಎಂದಿದ್ದಾರೆ. ಇದು ಧನರಾಜ್ (Dhanraj Achar) ಕೋಪಕ್ಕೆ ಕಾರಣವಾಗಿದೆ.

    ಈ ವಾರದ ಕಳಪೆ ಪಟ್ಟವನ್ನು ಧನರಾಜ್‌ಗೆ ಮನೆಯ ಇತರೆ ನೀಡಿದ್ದಾರೆ. ಇದರ ಪೈಕಿ ಮೋಕ್ಷಿತಾ ಅವರು, ಟಾಸ್ಕ್ ವಿಚಾರ ಅಂತ ಬಂದಾಗ ಸ್ಮಾರ್ಟ್ ಆಗಿ ನೀವು ಯೋಚನೆ ಮಾಡ್ತಾ ಇರಲಿಲ್ಲ. ಜೋಡಿಯಾಗಿದ್ದಕ್ಕೆ ನೀವು ಎಷ್ಟು ಸಪೋರ್ಟಿವ್ ಆಗಿದ್ರಿ ಎಂದು ಪ್ರಶ್ನೆ ಮಾಡಿದ್ದಾರೆ. ಈ ವೇಳೆ ಇಬ್ಬರ ನಡುವೆ ವಾಗ್ವಾದ ನಡೆದಿದೆ.

    ಆಗ ಧನರಾಜ್ ಅಹಂಕಾರ ಇದೆ ನಿಮಗೆ ಅಂತ ಹೇಳಿ ಆ ಕಳಪೆ ಪಟ್ಟವನ್ನು ಮೋಕ್ಷಿತಾ ಅವರಿಗೆ ಕಟ್ಟಿದ್ದಾರೆ. ಮೋಕ್ಷಿತಾ ಅಹಂಕಾರಿ ಎಂದು ಧನರಾಜ್ ತಿವಿದಿದ್ದಾರೆ. ಮೋಕ್ಷಿತಾಗೆ ಇನ್ಮೇಲೆ ಅಸಲಿ ಆಟ ತೋರಿಸುತ್ತೇನೆ ಎಂದು ಧನರಾಜ್ ಸವಾಲು ಹಾಕುತ್ತಾ ಬಿಗ್ ಬಾಸ್‌ನಲ್ಲಿರುವ ಜೈಲಿಗೆ ಹೋಗಿದ್ದಾರೆ. ಬಿಗ್ ಬಾಸ್ ಮನೆಯಲ್ಲಿ ಅಳಿವು ಮತ್ತು ಉಳಿವಿಗಾಗಿ ಇಬ್ಬರ ನಡುವಿನ ಫ್ರೆಂಡ್‌ಶಿಪ್ ಕಟ್ ಆಯ್ತಾ? ಎಂಬು ಅನುಮಾನ ನೋಡುಗರಲ್ಲಿ ಮೂಡಿದೆ.

  • BBK 11: ಧರ್ಮ ಜೊತೆ ‘ರಾ ರಾ ರಕ್ಕಮ್ಮ’ ಹಾಡಿಗೆ ಸೊಂಟ ಬಳುಕಿಸಿದ ಐಶ್ವರ್ಯಾ

    BBK 11: ಧರ್ಮ ಜೊತೆ ‘ರಾ ರಾ ರಕ್ಕಮ್ಮ’ ಹಾಡಿಗೆ ಸೊಂಟ ಬಳುಕಿಸಿದ ಐಶ್ವರ್ಯಾ

    ನ್ನಡದ ‘ಬಿಗ್ ಬಾಸ್ ಸೀಸನ್ 11’ಕ್ಕೆ ‘ರಾಮಾಚಾರಿ’ (Ramachari) ಸೀರಿಯಲ್ ಖ್ಯಾತಿಯ ಜೋಡಿ ಮೌನ ಗುಡ್ಡೆಮನೆ (Mouna Guddemane) ಮತ್ತು ರಿತ್ವಿಕ್ ಗೆಸ್ಟ್ ಆಗಿ ಎಂಟ್ರಿ ಕೊಟ್ಟಿದ್ದಾರೆ. ಇದೀಗ ‘ಬಿಗ್ ಬಾಸ್’ನಲ್ಲಿ ಮನರಂಜನೆ ದುಪ್ಪಟ್ಟಾಗಿದೆ. ರಾಮಾಚಾರಿ ಸೀರಿಯಲ್ ಜೋಡಿಯ ಮುಂದೆ ‘ರಾ ರಾ ರಕ್ಕಮ್ಮ’ ಹಾಡಿಗೆ ಐಶ್ವರ್ಯಾ (Aishwarya Shindogi) ಮತ್ತು ಧರ್ಮ ಹೆಜ್ಜೆ ಹಾಕಿದ್ದಾರೆ.

    ಕಿರುತೆರೆ ಅತೀ ದೊಡ್ಡ ರಿಯಾಲಿಟಿ ಶೋ ‘ಬಿಗ್ ಬಾಸ್’ನಲ್ಲಿ ಹನುಮಂತನ ಎಂಟ್ರಿ ಆದ್ಮೇಲೆ ಕಾರ್ಯಕ್ರಮ ಮತ್ತಷ್ಟು ರಂಗೇರಿದೆ. ಇಂದಿನ ಸಂಚಿಕೆಯಲ್ಲಿ ಜನಪ್ರಿಯ ರಾಮಾಚಾರಿ ಮತ್ತು ಚಾರು ಜೋಡಿ ದೊಡ್ಮನೆಗೆ ಆಗಮಿಸಿದ್ದಾರೆ. ಇವರನ್ನು ಇಂಪ್ರೆಸ್ ಮಾಡೋದೆ ಸ್ಪರ್ಧಿಗಳು ಟಾಸ್ಕ್ ಆಗಿದೆ. ಇದನ್ನೂ ಓದಿ:ಯಶ್ ಜೊತೆಗಿನ ಫೋಟೋ ಹಂಚಿಕೊಂಡ ಹಾಲಿವುಡ್ ನಟಿ

    ಅದರಂತೆ ‘ರಾ ರಾ ರಕ್ಕಮ್ಮ’ ಹಾಡಿಗೆ ಭರ್ಜರಿಯಾಗಿ ಧರ್ಮ ಕೀರ್ತಿರಾಜ್ ಮತ್ತು ಐಶ್ವರ್ಯಾ ಸಿಂಧೋಗಿ ಹೆಜ್ಜೆ ಹಾಕಿದ್ದಾರೆ. ಇವರಿಗೆ ಶಿಶಿರ್ ಕೂಡ ಸಾಥ್ ನೀಡಿದ್ದಾರೆ. ‘ವಿಕ್ರಾಂತ್ ರೋಣ’ ಚಿತ್ರದಲ್ಲಿನ ಸುದೀಪ್ ಸ್ಟೈಲ್‌ ಅನ್ನೇ ಧರ್ಮ (Dharma Kirthiraj) ಅನುಕರಣೆ ಮಾಡಿದ್ದಾರೆ. ಜೀನ್ಸ್‌ ಪ್ಯಾಂಟ್‌ಗೆ ರವಿಕೆ ಮತ್ತು ಕೆಂಪು ಶಾಲ್ ಹಾಕಿ ಐಶ್ವರ್ಯಾ ಸ್ಟೈಲೀಶ್ ಆಗಿ ಕಾಣಿಸಿಕೊಂಡಿದ್ದಾರೆ.

    ಧರ್ಮ ಮತ್ತು ಐಶ್ವರ್ಯಾ ರಕ್ಕಮ್ಮ ಹಾಡಿಗೆ ಭರ್ಜರಿಯಾಗಿ ಕುಣಿದು ಕುಪ್ಪಳಿಸಿದ್ದಾರೆ. ಇಬ್ಬರ ಡ್ಯಾನ್ಸ್‌ಗೆ ‘ರಾಮಾಚಾರಿ’ ಸೀರಿಯಲ್ ಜೋಡಿ ಇಂಪ್ರೆಸ್ ಆದ್ರಾ? ಕಾದುನೋಡಬೇಕಿದೆ. ಇಂದಿನ ಎಪಿಸೋಡ್ ರಾತ್ರಿ 9:30ಕ್ಕೆ ಉತ್ತರ ಸಿಗಲಿದೆ. ಒಟ್ನಲ್ಲಿ ಇಂದಿನ ಸಂಚಿಕೆ ನೋಡಲು ಅಭಿಮಾನಿಗಳು ಎದುರು ನೋಡ್ತಿದ್ದಾರೆ.