Tag: bbk 11

  • BBK 11: ಹನುಮಂತನ ಪ್ರಪೋಸ್‌ಗೆ ನಾಚಿ ನೀರಾದ ಚಾರು

    BBK 11: ಹನುಮಂತನ ಪ್ರಪೋಸ್‌ಗೆ ನಾಚಿ ನೀರಾದ ಚಾರು

    ದೊಡ್ಮನೆಗೆ ವಿಶೇಷ ಅತಿಥಿಗಳ ಎಂಟ್ರಿಯಾಗಿದೆ. ಕಲರ್ಸ್ ಕನ್ನಡದ ಜನಪ್ರಿಯ ಧಾರಾವಾಹಿ ‘ರಾಮಚಾರಿ’ (Ramachari) ಖ್ಯಾತಿಯ ಜೋಡಿ ರಿತ್ವಿಕ್ ಕೃಪಾಕರ್ (Rithvik Krupakar) ಮತ್ತು ಚಾರು ಅಲಿಯಾಸ್ ಮೌನ ಗುಡ್ಡೆಮನೆ (Mouna Guddemane) ಬಿಗ್ ಬಾಸ್‌ಗೆ ಅತಿಥಿಗಳಾಗಿ ಭಾಗವಹಿಸಿ ಮನರಂಜನೆ ಡಬಲ್ ಮಾಡಿದ್ದಾರೆ. ಇದನ್ನೂ ಓದಿ:ಮೊದಲ ಬಾರಿಗೆ ಮಗಳ ಫೋಟೋ ಹಂಚಿಕೊಂಡ ‘ಬಿಗ್ ಬಾಸ್’ ಖ್ಯಾತಿಯ ನೇಹಾ ಗೌಡ

    ಈ ಜೋಡಿ ಮನೆಗೆ ಎಂಟ್ರಿ ನೀಡುತ್ತಿದ್ದಂತೆಯೇ ಸ್ಪರ್ಧಿಗಳು ಒಂದು ಕ್ಷಣ ಅಚ್ಚರಿಗೆ ಒಳಗಾಗಿದ್ದಾರೆ. ನಂತರ ಆತ್ಮೀಯವಾಗಿ ಬರಮಾಡಿಕೊಂಡ ಸ್ಪರ್ಧಿಗಳು, ಬಿಗ್ ಬಾಸ್ ಮನೆಯನ್ನು ಪರಿಚಯಿಸಿದ್ದಾರೆ. ವಿಶೇಷ ಅಂದ್ರೆ ಮನೆಗೆ ಎಂಟ್ರಿ ಆಗ್ತಿದ್ದಂತೆ ‘ಬಿಗ್ ಬಾಸ್’ ಇಬ್ಬರಿಗೂ ಟಾಸ್ಕ್ ಒಂದನ್ನು ನೀಡಿದ್ದಾರೆ.

    ಅದೇನೆಂದರೆ, ಸದ್ಯ ಬಿಗ್ ಬಾಸ್ ಮನೆಯಲ್ಲಿ ಜೋಡಿಗಳ ಟಾಸ್ಕ್ ನಡೆಯುತ್ತಿದೆ. ಹೀಗಾಗಿ ತಾವಿಬ್ಬರು ಜೋಡಿಯಾಗಿ ಇರುವಂತೆ ಒಬ್ಬರನ್ನೊಬ್ಬರು ಬಿಟ್ಟು ಹೋಗದಂತೆ ಜೊತೆಯಾಗಿರಲು ಹಗ್ಗವನ್ನು ನೀಡಿದ್ದಾರೆ. ಸ್ಪರ್ಧಿಗಳಂತೆ ರಾಮಚಾರಿ ಮತ್ತು ಚಾರು ಕೂಡ ಹಗ್ಗವನ್ನು ಕಟ್ಟಿಕೊಂಡಿದ್ದಾರೆ.

    ದೊಡ್ಮನೆಯಲ್ಲಿ ಮನರಂಜನೆ ನೀಡಲು ‘ರಾಮಾಚಾರಿ’ ಸೀರಿಯಲ್ (Ramachari) ಜೋಡಿ ಸ್ಪರ್ಧಿಗಳಿಗೆ ಟಾಸ್ಕ್ ನೀಡಿದ್ದಾರೆ. ಬಿಗ್ ಬಾಸ್ ಶೇರ್ ಮಾಡಿರುವ ವಿಡಿಯೋದಲ್ಲಿ, ಚಾರು ಅವರು ಹನುಮಂತಗೆ ತಮ್ಮನ್ನು ಇಂಪ್ರೆಸ್ ಮಾಡುವಂತೆ ಗುಲಾಬಿ ಹೂ ನೀಡಿದ್ದಾರೆ. ಹನುಮಂತ ಅವರು ತಮ್ಮ ಶೈಲಿಯಲ್ಲಿ ಹಾಡನ್ನು ಹೇಳಿ, ಮಂಡಿಯೂರಿ ಚಾರುಗೆ ಇಂಪ್ರೆಸ್ ಮಾಡಲು ಪ್ರಯತ್ನಿಸಿದ್ದಾರೆ. ನನ್ನ ಕಣ್ಣು ನಿನ್ನ ಮೇಲೆ ಎಂದು ಹಾಡುತ್ತಾ ಗುಲಾಬಿ ಹೂ ಕೊಟ್ಟು ಮಂಡಿಯೂರಿ ಪ್ರಪ್ರೋಸ್ ಮಾಡಿದ್ದಾರೆ. ಹನುಮಂತನ ಪ್ರೇಮ ನಿವೇದನೆಗೆ ಚಾರು ನಾಚಿ ನೀರಾಗಿದ್ದಾರೆ. ಹನುಮಂತನ ನಡೆಗೆ ಸಹಸ್ಪರ್ಧಿಗಳು ಅಚ್ಚರಿಗೊಂಡಿದ್ದಾರೆ.

  • BBK 11: ಬೆನ್ನಿಗೆ ಚೂರಿ ಹಾಕಿದ ಚೈತ್ರಾ ವಿರುದ್ಧ ಗುಡುಗಿದ ಶಿಶಿರ್

    BBK 11: ಬೆನ್ನಿಗೆ ಚೂರಿ ಹಾಕಿದ ಚೈತ್ರಾ ವಿರುದ್ಧ ಗುಡುಗಿದ ಶಿಶಿರ್

    ಬಿಗ್ ಬಾಸ್ ಕನ್ನಡ ಸೀಸನ್ 11ರ (Bigg Boss Kannada 11) ಆಟ ದಿನದಿಂದ ದಿನಕ್ಕೆ ರೋಚಕ ತಿರುವು ಪಡೆದುಕೊಂಡು ಮುನ್ನುಗ್ಗುತ್ತಿದೆ. ಇನ್ನೂ ಈ ವಾರ ಹೊಸ ಟಾಸ್ಕ್‌ನಲ್ಲಿ ಚೈತ್ರಾ ವರಸೆ ಬದಲಿಸಿದ್ದಾರೆ. ಅಣ್ಣ ಅಂತಲೇ ಶಿಶಿರ್‌ ಬೆನ್ನಿಗೆ ಚೂರಿ ಹಾಕುವ ಕೆಲಸ ಮಾಡಿದ್ದಾರೆ. ಚೈತ್ರಾ ಆಡಿದ ಆಟಕ್ಕೆ ಈ ವಾರ ಟಾಸ್ಕ್‌ನಿಂದಲೇ ಶಿಶಿರ್‌ (Shishir) ಹೊರಗೆ ನಿಲ್ಲುವ ಪರಿಸ್ಥಿತಿ ಎದುರಾಗಿದೆ. ಇದನ್ನೂ ಓದಿ:ಪರಶುರಾಮನ ಅವತಾರದಲ್ಲಿ ವಿಕ್ಕಿ ಕೌಶಲ್- ಫಸ್ಟ್ ಲುಕ್ ಔಟ್

    ಈ ವಾರ ಬಿಗ್ ಬಾಸ್ ಹೊಸದೊಂದು ಟಾಸ್ಕ್ ಕೊಟ್ಟಿದ್ದು, ಮನೆಯ ಕ್ಯಾಪ್ಟನ್ ತ್ರಿವಿಕ್ರಮ್‌ನ ಹೊರತುಪಡಿಸಿ ಒಟ್ಟು 6 ಜೋಡಿಗಳಾಗಿ ವಿಂಗಡಣೆ ಮಾಡಿದ್ದರು. ಇದೀಗ ತ್ರಿವಿಕ್ರಮ್‌ಗಾಗಿ ಶಿಶಿರ್ ಅನ್ನೇ ಚೈತ್ರಾ ಕೈಬಿಟ್ಟಿದ್ದಾರೆ. ನಿನ್ನೆಯ ಸಂಚಿಕೆಯಲ್ಲಿ ಜೋಡಿಗಳ ಪೈಕಿ ಒಬ್ಬರು ಮಾತ್ರ ನಾಮಿನೇಟ್ ಆಗಬೇಕಿರುತ್ತೆ. ಅದನ್ನು ಖುದ್ದು ಆಯಾ ಜೋಡಿಗಳೇ ನಿರ್ಧಾರ ಮಾಡಲು ಬಿಗ್‌ ಬಾಸ್‌ ಆದೇಶ ನೀಡಿರುತ್ತಾರೆ. ಈ ಪ್ರಕ್ರಿಯೆಯಲ್ಲಿ ಚೈತ್ರಾ (Chaithra Kundapura) ಹಾಗೂ ಶಿಶಿರ್ ಜೋಡಿ ಪರಸ್ಪರ ಚರ್ಚೆ ನಡೆಸುವಾಗ, ನಾನು ಏನೆಂದು ಪ್ರೂವ್ ಮಾಡಿಕೊಳ್ಳಬೇಕು. ನನ್ನ ತಾಯಿ ಬಿಗ್ ಬಾಸ್ ಮನೆಗೆ ಬರಬೇಕು ಅವರು ತಲೆ ಎತ್ತಿ ನಿಲ್ಲಬೇಕು. ಇದನ್ನೂ ನಾನು ನೋಡಬೇಕು. ಹಾಗಾಗಿ ನಾನು ಈ ವಾರ ನಾಮಿನೇಟ್ ಆಗಬಾರದು ಎಂದು ಶಿಶಿರ್ ಬಳಿ ಚೈತ್ರಾ ಕೇಳಿಕೊಳ್ತಾರೆ. ಆಗ ಶಿಶಿರ್ ಇದಕ್ಕೆ ಒಪ್ಪಿಗೆ ಸೂಚಿಸಿ ತಾವೇ ನಾಮಿನೇಟ್ ಆಗುತ್ತಾರೆ. ಈ ಮೂಲಕ ಅವರು ಚೈತ್ರಾ ಬೆಂಬಲಕ್ಕೆ ನಿಲ್ಲುತ್ತಾರೆ.

    ಆದರೆ ಇದೀಗ ರಿಲೀಸ್ ಆದ ಇಂದಿನ ಪ್ರೋಮೋದಲ್ಲಿ ಶಿಶಿರ್ ಹಾಗೂ ಚೈತ್ರಾ ನಡುವೆ ಕಿರಿಕ್‌ ಆಗಿದೆ. ಶಿಶಿರ್ ವೆನ್ನಿಗೆ ಚೂರಿ ಹಾಕುವ ಕೆಲಸ ಮಾಡಿದ್ದಾರೆ. ಇದಕ್ಕೆ ಕಾರಣ ಬಿಗ್ ಬಾಸ್ ಕೊಟ್ಟ ಆಫರ್. ಕನ್ಫೆಷನ್ ರೂಂಗೆ ಸ್ಪರ್ಧಿಗಳನ್ನು ಕರೆದಿರೋ ಬಿಗ್ ಬಾಸ್, ತ್ರಿವಿಕ್ರಮ್ ಜೊತೆ ಯಾರಾದ್ರೂ ಜೋಡಿಯಾಗಲು ಇಚ್ಛೆ ಇದ್ದವರು ತಮ್ಮ ಜೋಡಿಯನ್ನು ಬದಲಿಸಿಕೊಳ್ಳಬೇಕು ಎಂದು ಹೇಳಿದ್ದಾರೆ. ಇದಕ್ಕೆ ಒಪ್ಪಿಕೊಂಡಿರೋ ಚೈತ್ರಾ ಶಿಶಿರ್‌ ಬಿಟ್ಟು ತ್ರಿವಿಕ್ರಮ್‌ ಪರ ಬ್ಯಾಟ್‌ ಬೀಸಿದ್ದಾರೆ. ತ್ರಿವಿಕ್ರಮ್‌ ಬೆಸ್ಟ್‌ ಎಂದು ಹೇಳಿರುವ ಚೈತ್ರಾ ಮಾತು ಕೇಳಿ ಶಿಶಿರ್‌ ಕೆಂಡಕಾರಿದ್ದಾರೆ.

    ಕೃತಜ್ಞತೆಯೂ ಇಲ್ಲದ ಚೈತ್ರಾ ನಡವಳಿಕೆ ಕಂಡು ಶಿಶಿರ್ ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದಾರೆ. ನಟನೆಯಲ್ಲಿ 12 ವರ್ಷ ಅನುಭವ ಇರುವ ನಾನಲ್ಲ ನಟ, ಚೈತ್ರಾ ಕುಂದಾಪುರ ರಿಯಲ್ ನಟಿ ಅಂತ ಕಿರುಚಾಡಿದ್ದಾರೆ. ಇನ್ನೂ ಪ್ರೋಮೋ ನೋಡಿದ ವೀಕ್ಷಕರು ಕೂಡ ಚೈತ್ರಾ ನಿರ್ಧಾರವನ್ನ ತೀವ್ರವಾಗಿ ಖಂಡಿಸಿದ್ದಾರೆ.

  • ಎಲಿಮಿನೇಷನ್‌ ಹಾಟ್‌ ಸೀಟ್-‌ ಯಾರಿಗೆ ಈ ವಾರಾಂತ್ಯ ‘ಬಿಗ್ ಬಾಸ್’ನಿಂದ ಗೇಟ್ ಪಾಸ್?

    ಎಲಿಮಿನೇಷನ್‌ ಹಾಟ್‌ ಸೀಟ್-‌ ಯಾರಿಗೆ ಈ ವಾರಾಂತ್ಯ ‘ಬಿಗ್ ಬಾಸ್’ನಿಂದ ಗೇಟ್ ಪಾಸ್?

    ನ್ನಡದ ‘ಬಿಗ್ ಬಾಸ್ ಸೀಸನ್ 11’ರ (Bigg Boss Kannada 11) ಕಾರ್ಯಕ್ರಮದಲ್ಲಿ ಕಳೆದ ವಾರ ಎಲಿಮಿನೇಷನ್ ಪ್ರಕ್ರಿಯೆ ನಡೆದಿಲ್ಲ. ಹಾಗಾಗಿ ಈ ವಾರ ದೊಡ್ಮನೆಯ ಆಟದಲ್ಲಿ ‘ಬಿಗ್ ಬಾಸ್’ ಟ್ವಿಸ್ಟ್ ಕೊಟ್ಟಿದ್ದಾರೆ. ಡಬಲ್ ನಾಮಿನೇಷನ್ ನಡೆಯುವ ಸಾಧ್ಯತೆಯಿದೆ. ಈ ವಾರ 10 ಮಂದಿ ನಾಮಿನೇಟ್ ಆಗಿದ್ದಾರೆ. ಇದನ್ನೂ ಓದಿ:BBK 11: ಹನುಮಂತನ ಬಟ್ಟೆ ಧರಿಸಿ ಕ್ವಾಟ್ಲೆ ಕೊಟ್ಟ ಗೌತಮಿ

    ಹೌದು..ಬಿಗ್ ಬಾಸ್ ಮನೆಯ ಆಟಕ್ಕೆ ಅಂತ್ಯ ಹಾಡಲು 10 ಸ್ಪರ್ಧಿಗಳ ಮೇಲೆ ನಾಮಿನೇಷನ್ ಕತ್ತಿ ತೂಗುತ್ತಿದೆ. ಈ ಪೈಕಿ ಅನುಷಾ ರೈ, ಮೋಕ್ಷಿತಾ ಪೈ, ಧನರಾಜ್ ಆಚಾರ್, ಭವ್ಯಾ ಗೌಡ, ಧರ್ಮ ಕೀರ್ತಿರಾಜ್, ಗೋಲ್ಡ್ ಸುರೇಶ್, ಗೌತಮಿ ಜಾದವ್, ಹನುಮಂತ, ಶಿಶಿರ್ ಶಾಸ್ತಿç, ಉಗ್ರಂ ಮಂಜು ನಾಮಿನೇಟ್ ಆಗಿದ್ದಾರೆ. ಇದರಲ್ಲಿ ಯಾರ ಆಟ ಮನೆಯಲ್ಲಿ ಅಂತ್ಯವಾಗಲಿದೆ ಎಂದು ಕಾದುನೋಡಬೇಕಿದೆ.

    ಕಳೆದ ವಾರ ಭವ್ಯಾ ಎಲಿಮಿನೇಟ್ ಎಂದು ಬಿಗ್ ಬಾಸ್ ಪ್ರ್ಯಾಂಕ್ ಮಾಡಿದರು. ಕಳೆದ ವೀಕೆಂಡ್‌ನಲ್ಲಿ ಎಲಿಮಿನೇಷನ್ ಪ್ರಕ್ರಿಯೆ ನಡೆದಿಲ್ಲ. ಹಾಗಾಗಿ ಈ ವಾರ ಜೋಡಿ ಎಲಿಮಿನೇಷನ್ ನಡೆಯಬಹುದು ಎಂಬುದು ಪ್ರೇಕ್ಷಕರ ಲೆಕ್ಕಾಚಾರ.

    ಇನ್ನೂ ಈಗಾಗಲೇ ಯಮುನಾ, ರಂಜಿತ್, ಹಂಸ, ಮಾನಸಾ ಅವರ ಆಟ ದೊಡ್ಮನೆಯಲ್ಲಿ ಅಂತ್ಯವಾಗಿದೆ. ಹಾಗಾದ್ರೆ ಈ ವಾರಾಂತ್ಯ ಆಟಕ್ಕೆ ಬ್ರೇಕ್ ಬೀಳಲಿದೆ ಎಂಬುದರ ಬಗ್ಗೆ ಪ್ರೇಕ್ಷಕರು ಕೌತುಕದಿಂದ ಎದುರು ನೋಡುತ್ತಿದ್ದಾರೆ.

  • BBK 11: ಲವ್ ಬರ್ಡ್ಸ್ ಆಗಿದ್ದ ಧರ್ಮ, ಅನುಷಾ ನಡುವೆ ವಾರ್

    BBK 11: ಲವ್ ಬರ್ಡ್ಸ್ ಆಗಿದ್ದ ಧರ್ಮ, ಅನುಷಾ ನಡುವೆ ವಾರ್

    ‘ಬಿಗ್ ಬಾಸ್’ ಮನೆಯಲ್ಲಿ (Bigg Boss Kannada 11) ಲವ್ ಬರ್ಡ್ಸ್ ಆಗಿದ್ದ ಧರ್ಮ ಮತ್ತು ಅನುಷಾ ನಡುವೆ ಕಿರಿಕ್ ಆಗಿದೆ. ಇದೀಗ ದೊಡ್ಮನೆಯಲ್ಲಿ ಕೊಟ್ಟ ಜೋಡಿ ಟಾಸ್ಕ್‌ನಿಂದಲೇ ಇಬ್ಬರ ಸಂಬಂಧಕ್ಕೆ ಹುಳಿ ಹಿಂಡಿದಂತೆ ಆಗಿದೆ. ನಾಮಿನೇಷನ್ ಪ್ರಕ್ರಿಯೆ ವೇಳೆ, ಧರ್ಮನ (Dharma) ವಿರುದ್ಧ ಅನುಷಾ (Anusha Rai) ತಿರುಗಿ ಬಿದ್ದಿದ್ದಾರೆ. ಇದನ್ನೂ ಓದಿ:ತಾಯಿಯಾಗುವ ಹಂಬಲದಲ್ಲಿ ಸ್ಯಾಮ್- 2ನೇ ಮದುವೆ ಬಗ್ಗೆ ಸುಳಿವು ನೀಡಿದ್ರಾ ನಟಿ?

    ಬಿಗ್ ಬಾಸ್ ನೀಡಿದ ಟಾಸ್ಕ್‌ನಂತೆ ಮನೆಯಲ್ಲಿ ನೇರ ನಾಮಿನೇಷನ್ ಪ್ರಕ್ರಿಯೆ ನಡೆಯುತ್ತಿದೆ. ಮೊದಲು ಧನರಾಜ್ ಅವರು, ಗೋಲ್ಡ್ ಸುರೇಶ್ ಹಾಗೂ ಅನುಷಾ ಹೆಸರನ್ನು ತೆಗೆದುಕೊಳ್ತಾರೆ. ಐಶ್ವರ್ಯಾ, ಗೌತಮಿ, ಚೈತ್ರಾ, ಧರ್ಮ, ಮೋಕ್ಷಿತಾ ಸೇರಿದಂತೆ ಬಹುತೇಕ ಸ್ಪರ್ಧಿಗಳು ಅನುಷಾ ಮತ್ತು ಸುರೇಶ್‌ರನ್ನು ನಾಮಿನೇಟ್ ಮಾಡುತ್ತಾರೆ.

    ಇದಕ್ಕೆ ಅನುಷಾ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಪ್ರತಿಯೊಬ್ಬರಿಗೂ ಪ್ರಶ್ನೆಗಳನ್ನು ಕೇಳುತ್ತಾರೆ. ಮೋಕ್ಷಿತಾ ಅವರೇ ನೀವು ಎಷ್ಟು ಮನರಂಜನೆ ನೀಡಿದ್ದೀರಾ ಎಂದು ತರಾಟೆಗೆ ತೆಗೆದುಕೊಳ್ತಾರೆ. ನಂತರ ಧರ್ಮ ವಿಚಾರಕ್ಕೆ ಬರುತ್ತಾರೆ. ಅಗ್ರೇಷನ್ ಕಮ್ಮಿ ಆಯ್ತು ಎಂದು ನನಗೆ ಕೇಳ್ತೀರಿ. ನಿಮಗೆ ಎಷ್ಟು ಅಗ್ರೇಷನ್ ಇದೆ ಧರ್ಮ ನೀವು ಏನೂ ಆಟ ಆಡಿಯೇ ಇಲ್ಲ. ನೀವು ಆಟದಲ್ಲಿ ಎಷ್ಟು ಇನ್ವಾಲ್ ಆಗಿದ್ದೀರಾ ಎಂದು ತೀವ್ರವಾಗಿ ವಾದ ಮಂಡಿಸುತ್ತಾರೆ. ಈ ವೇಳೆ, ಸಮರ್ಥನೆ ಮಾಡಿಕೊಳ್ಳಲು ಹೋದ ಧರ್ಮ ಅವರು ನಾನೇ ಹೇಳ್ತಿದ್ದೀನಲ್ಲ, ಕಳೆದ ಎಪಿಸೋಡ್‌ನಲ್ಲಿ ಎಲ್ಲರೂ ನಾಲಾಯಕ್ ಎಂದು ಕ್ಯಾಕರಿಸಿ ಉಗಿದಿದ್ದಾರಲ್ಲ ಎಂದು ಮಾತನಾಡುತ್ತಾರೆ.

    ಅನುಷಾ ಮತ್ತು ಧರ್ಮ ಬಿಗ್ ಬಾಸ್ ಮನೆಯಲ್ಲಿ ಈ ಜೋಡಿ ಚೆನ್ನಾಗಿಯೇ ಇದ್ದರು. ನಾಮಿನೇಷನ್‌ನಲ್ಲಿ ಧರ್ಮ ಆಡಿದ ಮಾತು ಅನುಷಾಗೆ ನೋವಾಗಿದೆ. ಅವರ ಮುನಿಸಿಗೆ ಕಾರಣವಾಗಿದೆ. ಹಾಗಾಗಿ ಧರ್ಮನ ವಿರುದ್ಧ ಅವರು ತಿರುಗಿ ಬಿದ್ದಿದ್ದಾರೆ. ಚೆನ್ನಾಗಿದ್ದ ಅನುಷಾ- ಧರ್ಮ ಜಗಳ ಅಕ್ಷರಶಃ ಮನೆ ಮಂದಿಗೂ ಶಾಕ್ ಕೊಟ್ಟಿದೆ.

    ಇನ್ನೂ ಅಂತಿಮವಾಗಿ ಸ್ಪರ್ಧಿಗಳ ಬಹುಮತದ ಮೇರೆಗೆ ಈ ವಾರ ಮನೆಯಿಂದ ಹೊರ ಹೋಗಲು ಅನುಷಾ ಮತ್ತು ಗೋಲ್ಡ್ ಸುರೇಶ್ ನೇರವಾಗಿ ನಾಮಿನೇಟ್ ಆಗಿದ್ದಾರೆ.

  • BBK 11 – ದೊಡ್ಮನೆಯಿಂದ ಹಂಸ ಔಟ್

    BBK 11 – ದೊಡ್ಮನೆಯಿಂದ ಹಂಸ ಔಟ್

    ಬಿಗ್ ಬಾಸ್ (BBK 11) ಮನೆಯ ಆಟ ರಂಗೇರಿದೆ. ಯಮುನಾ ಬಳಿಕ ಬಿಗ್ ಬಾಸ್ ಮನೆಯಿಂದ ಹಂಸ (Hamsa) ಔಟ್ ಆಗಿದ್ದಾರೆ. ಹಂಸ ಅವರ ದೊಡ್ಮನೆಯ ಆಟಕ್ಕೆ ಬ್ರೇಕ್ ಹಾಕಿದ್ದಾರೆ.

    ಕಿರುತೆರೆಯಲ್ಲಿ ಹಲವಾರು ವರ್ಷಗಳಿಂದ ಆಕ್ಟೀವ್ ಆಗಿದ್ದ ನಟಿ ಹಂಸ ಅವರು ನರಕವಾಸಿ ರಂಜಿತ್ ಆಟದಿಂದ ಮನೆಯ ಕ್ಯಾಪ್ಟನ್ ಆಗಿದ್ದರು. ಈಗ ಅವರ ಆಟಕ್ಕೆ ಬ್ರೇಕ್ ಬಿದ್ದಿದೆ.

    ವಿಭಿನ್ನ ರೀತಿಯಲ್ಲಿ ಎಲಿಮಿನೇಷನ್ ಪ್ರಕ್ರಿಯೆ ನಡೆದಿದೆ. ಎರಡು ಕಾರ್ ಗಳು ಮನೆಗೆ ಎಂಟ್ರಿ ಕೊಟ್ಟಿದ್ದು, ಬಾಟಮ್ ಎರಡಲ್ಲಿ ಕಡೆಯದಾಗಿ ಹಂಸ, ಮೋಕ್ಷಿತಾ ಪೈ ಉಳಿದುಕೊಂಡಿದ್ದರು. 9 ಸ್ಪರ್ಧಿಗಳಲ್ಲಿ ಕಡೆಯದಾಗಿ ಇವರಿಬ್ಬರೂ ಉಳಿದುಕೊಂಡಿದ್ದರು. ಎಲಿಮಿನೇಷನ್ ಪ್ರಕ್ರಿಯೆಯಲ್ಲಿ ಒಂದು ಕಾರಿನಲ್ಲಿ ಹಂಸ, ಮತ್ತೊಂದು ಕಾರಿನಲ್ಲಿ ಮೋಕ್ಷಿತಾ ಪೈ ಅವರನ್ನು ಕೂರಿಸಿಕೊಂಡು ಮನೆಯಿಂದ ಹೊರಗೆ ಹೋಯಿತು. ಸ್ವಲ್ಪ ಸಮಯ ಬಳಿಕ ಎಂಟ್ರಿ ಕೊಟ್ಟ ಕಾರಿನಲ್ಲಿ ಮೋಕ್ಷಿತಾ ಇದ್ದರು. ಅಲ್ಲಿಗೆ ಈ ವಿಭಿನ್ನ ಎಲಿಮಿನೇಷನ್ ನಲ್ಲಿ‌ ಹಂಸ ಔಟ್ ಆಗಿದ್ದಾರೆ ಅನ್ನೋದು ಅಧಿಕೃತವಾಯಿತು.

    ಈ ಎಲಿಮಿನೇಷನ್ ನಂತರ ಅಸಲಿ ಆಟ ಶುರು ಅಂತ ಮೋಕ್ಷಿತಾ ಸವಾಲು ಹಾಕಿದ್ದಾರೆ. ತನ್ನನ್ನು ಟಾರ್ಗೆಟ್ ಮಾಡೋರಿಗೆ ನಟಿ ಎಚ್ಚರಿಕೆ ನೀಡಿದ್ದಾರೆ.

  • BBK 11: ಕಿಚ್ಚನ ಶೋನಲ್ಲಿ ದರ್ಶನ್ ನಟನೆಯ ‘ನವಗ್ರಹ’ ರೀ ರಿಲೀಸ್ ವಿಚಾರ ಚರ್ಚೆ

    BBK 11: ಕಿಚ್ಚನ ಶೋನಲ್ಲಿ ದರ್ಶನ್ ನಟನೆಯ ‘ನವಗ್ರಹ’ ರೀ ರಿಲೀಸ್ ವಿಚಾರ ಚರ್ಚೆ

    ಬಿಗ್ ಬಾಸ್ ಮನೆಯಲ್ಲಿ (Bigg Boss Kannada 11) ಸಾಮಾನ್ಯವಾಗಿ ಹೊರಗಿನ ವಿಚಾರ ಸ್ಪರ್ಧಿಗಳಿಗೆ ಸಿಗುವುದಿಲ್ಲ. ಇದೀಗ ಸುದೀಪ್ (Sudeep) ತಾಯಿಯ ನಿಧನದ ಸುದ್ದಿ ಸಿಕ್ಕ ಬೆನ್ನಲ್ಲೇ ದರ್ಶನ್ (Darshan) ನಟನೆಯ ‘ನವಗ್ರಹ’ (Navagraha) ಮರುಬಿಡುಗಡೆಯ ಬಗ್ಗೆ ಶೋನಲ್ಲಿ ಚರ್ಚೆ ಶುರುವಾಗಿದೆ. ಇದನ್ನೂ ಓದಿ:ನನ್ನ ವೃತ್ತಿ, ಸಂಭಾವನೆ ಎಲ್ಲ ಬಿಟ್ಟು ಬಂದಿದ್ದೇನೆ: ವಿಜಯ್ ಪವರ್‌ಫುಲ್ ಸ್ಪೀಚ್

    ಸುದೀಪ್ (Sudeep) ಅನುಪಸ್ಥಿತಿಯಲ್ಲಿ ಈ ವಾರಾಂತ್ಯ ಯೋಗರಾಜ್ ಭಟ್ ಮತ್ತು ಸೃಜನ್ ಲೋಕೇಶ್ (Srujan Lokesh) ಅತಿಥಿಗಳಾಗಿ ಬಿಗ್ ಬಾಸ್‌ಗೆ ಆಗಮಿಸಿದ್ದರು. ಸೃಜನ್ ಆಗಮಿಸಿದ್ದು, ಧರ್ಮಗೆ ಖುಷಿಯಾಗಿದೆ. ಈ ಹಿಂದೆ ಇಬ್ಬರೂ ಜೊತೆಯಾಗಿ ಸಿನಿಮಾ ಮಾಡಿದ್ದಾರೆ.

    ದೊಡ್ಮನೆಗೆ ಅತಿಥಿಯಾಗಿ ಬರುತ್ತಿದ್ದಂತೆ ಯಾರ ಪರಿಚಯ ತಮಗೆ ಮೊದಲೇ ಇದೆ ಎಂಬುದನ್ನು ಹೇಳಿದರು. ಆಗ ಧರ್ಮ (Dharma Keerthiraj) ಬಳಿ ನಿಮಗೆ ಒಂದು ಗುಡ್ ನ್ಯೂಸ್ ಇದೆ ಎಂದರು ಸೃಜನ್. ‘ನವಗ್ರಹ’ ಸಿನಿಮಾ ಮತ್ತೆ ರೀ-ರಿಲೀಸ್ ಆಗುತ್ತಿದೆ. ಇದನ್ನು ಕೇಳಿ ಯಾವಾಗ ಎಂದು ಪ್ರಶ್ನೆ ಮಾಡಿದರು. ನವೆಂಬರ್ 8ಕ್ಕೆ ಎಂದು ಸೃಜನ್ (Srujan Lokesh) ಉತ್ತರ ಕೊಟ್ಟರು. ಇದನ್ನು ಕೇಳಿ ಧರ್ಮ ಖುಷಿಪಟ್ಟರು. ಈ ಮೂಲಕ ಬಿಗ್ ಬಾಸ್ ಮನೆಯೊಳಗೂ ನವಗ್ರಹ ಚಿತ್ರದ್ದೇ ಚರ್ಚೆಯಾಗಿದೆ.

    ಅಂದಹಾಗೆ, ದರ್ಶನ್ ನಟನೆಯ ‘ನವಗ್ರಹ’ ಸಿನಿಮಾ 16 ವರ್ಷಗಳ ಹಿಂದೆ 2008ರ ನವೆಂಬರ್ 7ರಂದು ರಿಲೀಸ್ ಆಗಿತ್ತು. ದರ್ಶನ್ ಜೊತೆ ಸೃಜನ್ ಲೋಕೇಶ್, ಧರ್ಮ ಕೀರ್ತಿರಾಜ್, ಶರ್ಮಿಳಾ ಮಾಂಡ್ರೆ, ವರ್ಷಾ, ತರುಣ್ ಸುಧೀರ್, ವಿನೋದ್ ಪ್ರಭಾಕರ್ ನಟಿಸಿದರು. ದಿನಕರ್ ತೂಗುದೀಪ ನಿರ್ದೇಶನ ಮಾಡಿದ್ದರು. ಇದೀಗ ಇದೇ ನ.8ಕ್ಕೆ ಸಿನಿಮಾ ಮರುಬಿಡುಗಡೆ ಆಗುತ್ತಿದೆ.

  • ತ್ರಿವಿಕ್ರಮ್ ಗೋಮುಖ ವ್ಯಾಘ್ರ: ಕೆರಳಿದ ಮೋಕ್ಷಿತಾ

    ತ್ರಿವಿಕ್ರಮ್ ಗೋಮುಖ ವ್ಯಾಘ್ರ: ಕೆರಳಿದ ಮೋಕ್ಷಿತಾ

    ಬಿಗ್ ಬಾಸ್ ಮನೆ (Bigg Boss Kannada 11) ಇದೀಗ ಮತ್ತೆ ರಣರಂಗವಾಗಿದೆ. ಸ್ಪರ್ಧಿಗಳಿಬ್ಬರ ನಡುವೆ ಕಿಚ್ಚು ಹೊತ್ತಿಕೊಂಡಿದೆ. ನಟ ತ್ರಿವಿಕ್ರಮ್ ಮತ್ತು ಮೋಕ್ಷಿತಾ ಪೈ ನಡುವೆ ವಾಕ್ಸಮರ ಶುರುವಾಗಿದೆ. ಮಾತಿನ ಚಕಮಕಿಯ ನಡುವೆ ಮೋಕ್ಷಿತಾ (Mokshitha Pai) ಅವರು ತ್ರಿವಿಕ್ರಮ್ (Trivikram) ಗೋಮುಖ ವ್ಯಾಘ್ರ ಎಂದು ಕರೆದಿದ್ದಾರೆ. ತ್ರಿವಿಕ್ರಮ್ ವಿರುದ್ಧ ನಟಿ ಕೆರಳಿದ್ದಾರೆ. ಇದನ್ನೂ ಓದಿ:ಕೇರಳದ ಹೇಮಾ ಕಮಿಟಿ ಮೂಲಕ ದಾಖಲಾಗಿದ್ದ ಕೇಸ್ ಬೆಂಗಳೂರಿಗೆ ವರ್ಗಾವಣೆ

    ತ್ರಿವಿಕ್ರಮ್ ಮತ್ತು ಮೋಕ್ಷಿತಾ ಈಗ ಮನೆಯಲ್ಲಿ ಹಾವು ಮುಂಗುಸಿಯಾಗಿದ್ದಾರೆ. ಅದರಲ್ಲೂ ತ್ರಿವಿಕ್ರಮ್ ಆಡಿರುವ ಮಾತು ಮೋಕ್ಷಿತಾ ಪೈ ಕಿವಿಗೆ ಬಿದ್ದಿದ್ದು, ಇದೇ ವಿಚಾರವಾಗಿ ವಾಗ್ವಾದಕ್ಕಿಳಿದ್ದಿದ್ದಾರೆ ಮೋಕ್ಷಿತಾ. ಉಗ್ರಂ ಮಂಜು (Ugramm Manju) ಜೊತೆಗೆ ತ್ರಿವಿಕ್ರಮ್ ಮಾತನಾಡುತ್ತಾ, ಅವರು 10 ವಾರಕ್ಕೆ ಬಂದಿರೋರು. 10 ವಾರದ ಬಳಿಕ ಅವರ ಅವಶ್ಯಕತೆ ಇಲ್ಲ ಅಣ್ಣ ಎಂದು ಹೇಳಿದ್ದರು. ಇದೇ ಮಾತು ಈಗ ಮೋಕ್ಷಿತಾ ಕಿವಿಗೆ ಬಿದ್ದಿದೆ. ನಾನು 10 ವಾರ ಇರುತ್ತೇನೆ ಅಂತ ಡಿಸೈಡ್ ಮಾಡೋಕೆ ನೀವು ಯಾರು ಎಂದು ಪ್ರಶ್ನಿಸಿದ್ದಾರೆ ಮೋಕ್ಷಿತಾ. ಅದಕ್ಕೆ ತ್ರಿವಿಕ್ರಮ್, ಆಯ್ತಮ್ಮಾ ನೀನು ಫಿನಾಲೆಗೆ ಹೋಗಮ್ಮ ಎಂದು ತಿರುಗೇಟು ನೀಡಿದ್ದಾರೆ.

    ರೊಚ್ಚಿಗೆದ್ದ ಮೋಕ್ಷಿತಾ ಇಷ್ಟಕ್ಕೆ ಸುಮ್ಮನಾಗದೆ, ನಾವೆಲ್ಲಾ ಇಲ್ಲಿ ಏನು ಅಲ್ಲ. ಯಾವುದೋ ಒಂದು ಸೀರಿಯಲ್ ಐದುವರೆ ವರ್ಷ ಮಾಡಿಕೊಂಡು ಬಂದಿದ್ದೀವಿ ಸುಮ್ನೆ. ನೀವು ಏನು ಅಲ್ಲ ತಿಳಿದುಕೊಂಡುಬಿಟ್ಟಿದ್ದೀರಿ. ನೀವು ಗೋಮುಖ ವ್ಯಾಘ್ರ ತರಹ ಆಟ ಆಡ್ತಾ ಇದ್ದೀರಾ. ಇವತ್ತಿಂದ ಆಟ ಶುರು ಎಂದು ಮೋಕ್ಷಿತಾ ಖಡಕ್ ಆಗಿ ವಾರ್ನಿಂಗ್ ಕೊಟ್ಟಿದ್ದಾರೆ. ನೀವು ಏನು ತಿಳಿದುಕೊಂಡಿದ್ದೀರಾ ಅದನ್ನು ಸಾಬೀತುಪಡಿಸುತ್ತೇನೆ ಎಂದು ಮೋಕ್ಷಿತಾಗೆ ತ್ರಿವಿಕ್ರಮ್ ಸವಾಲು ಹಾಕಿದ್ದಾರೆ.

    ಬಿಗ್ ಬಾಸ್‌ಗೆ ಬಂದ ದಿನದಿಂದ ಸೈಲೆಂಟ್ ಆಗಿದ್ದ ಪಾರು ಇದೀಗ ತ್ರಿವಿಕ್ರಮ್ ವಿರುದ್ಧ ವೈಲೆಂಟ್ ಆಗಿ ಸಮರ ಸಾರಿರೋದನ್ನು ನೋಡಿ ಸ್ಪರ್ಧಿಗಳು,ಪ್ರೇಕ್ಷಕರು ದಂಗಾಗಿದ್ದಾರೆ. ಮೋಕ್ಷಿತಾ ಇನ್ ಫೈರ್ ಅಂತ ಅಭಿಮಾನಿಗಳು ಸೋಶಿಯಲ್ ಮೀಡಿಯಾದಲ್ಲಿ ಕಾಮೆಂಟ್ ಮಾಡುತ್ತಿದ್ದಾರೆ.

  • BBK 11: ತ್ರಿವಿಕ್ರಂ, ಉಗ್ರಂ ಮಂಜು ಕ್ರೌರ್ಯ- ಸ್ಪರ್ಧಿಗಳಿಗೆ ತಕ್ಕ ಪಾಠ ಕಲಿಸಿದ ಬಿಗ್ ಬಾಸ್

    BBK 11: ತ್ರಿವಿಕ್ರಂ, ಉಗ್ರಂ ಮಂಜು ಕ್ರೌರ್ಯ- ಸ್ಪರ್ಧಿಗಳಿಗೆ ತಕ್ಕ ಪಾಠ ಕಲಿಸಿದ ಬಿಗ್ ಬಾಸ್

    ದೊಡ್ಮನೆಯಲ್ಲಿ (Bigg Boss Kannada 11) ಈಗ ಪಾಲಿಟಿಕ್ಸ್ ಆಟ ನಡೆಯುತ್ತಿದೆ. ಧರ್ಮಪರ ಸೇನಾ ಪಕ್ಷ ಮತ್ತು ಪ್ರಾಮಾಣಿಕ ಸಮರ್ಥರ ನ್ಯಾಯವಾದಿ ಪಕ್ಷ ಎಂಬ ಎರಡು ರಾಜಕೀಯ ಪಾರ್ಟಿಗಳನ್ನು ರಚನೆ ಮಾಡಲಾಗಿದೆ. ಒಂದಕ್ಕೆ ತ್ರಿವಿಕ್ರಂ ಲೀಡರ್ ಆಗಿದ್ದರೆ, ಮತ್ತೊಂದಕ್ಕೆ ಐಶ್ವರ್ಯಾ ಲೀಡರ್ ಆಗಿದ್ದಾರೆ. 2 ತಂಡಕ್ಕೂ ‘ಬಿಗ್ ಬಾಸ್’ ಟಾಸ್ಕ್ ಅನ್ನು ನೀಡಿದರು. ಎರಡು ತಂಡದವರು, ಕಿತ್ತಾಟ ಮಾಡಿ ಟಾಸ್ಕ್ ರದ್ದಾಗುವಂತೆ ಮಾಡಿದ ಪರಿಣಾಮ, ಸ್ಪರ್ಧಿಗಳಿಗೆ ಬಿಗ್ ಬಾಸ್ ತಕ್ಕ ಶಾಸ್ತಿ ಮಾಡಿದ್ದಾರೆ. ಇದನ್ನೂ ಓದಿ:BBK 11: ಮೈ ಮುಟ್ಟಬೇಡಿ, ಕಾಲು ನೆಟ್ಟಗಿದೆ: ಐಶ್ವರ್ಯಾಗೆ ಚೈತ್ರಾ ಆವಾಜ್

    ಕೊಟ್ಟಿರುವ ಬೋರ್ಡ್‌ಗೆ ಎರಡು ತಂಡಗಳು ಬಿಗ್ ಬಾಸ್ ಕಳುಹಿಸುವ ವಸ್ತುಗಳನ್ನು ತೆಗೆದುಕೊಂಡು ತಮ್ಮ ತಮ್ಮ ಪಕ್ಷಗಳ ಪೋಸ್ಟರ್ ಅನ್ನು ರಚಿಸಿ, ಅದನ್ನು ಗೋಡೆ ಮೇಲೆ ಅಂಟಿಸಬೇಕು. ಒಂದು ಪಕ್ಷದವರು ಪೋಸ್ಟರ್ ಅಂಟಿಸಿದರೆ, ಮತ್ತೊಂದು ಪಕ್ಷದವರು ಅದನ್ನು ಕಿತ್ತುಹಾಕಬೇಕು. ಪಕ್ಷಗಳ ಸದಸ್ಯರು ತಮ್ಮ ಪಕ್ಷಗಳ ಪೋಸ್ಟರ್‌ಗಳನ್ನು ಯಾರೂ ಕೀಳದಂತೆ ಕಾಯಬೇಕು. ಇದು ಟಾಸ್ಕ್ ಆಗಿತ್ತು.

    ಕೊಟ್ಟ ಆಟವನ್ನು ಕ್ರೀಡಾ ಮನೋಭಾವದಿಂದ ಸ್ಪರ್ಧಿಗಳು ತೆಗೆದುಕೊಳ್ಳಲಿಲ್ಲ. ಅದರಲ್ಲೂ ತ್ರಿವಿಕ್ರಂ, ಚೈತ್ರಾ ಕುಂದಾಪುರ, ಗೋಲ್ಡ್ ಸುರೇಶ್, ಮಂಜು ಅವರ ಆರ್ಭಟ ಜೋರಾಗಿತ್ತು. ಇವರೆಲ್ಲರ ರೌದ್ರವತಾರಕ್ಕೆ ಹನುಮಂತ ಸುಸ್ತಾಗಿ ಬಿದ್ದು ಬಿಟ್ಟರು. ಟಾಸ್ಕ್ನಲ್ಲಿ ಮಂಜು ಅವರನ್ನು ತಡೆಯಲು ಹೋದ ತ್ರಿವಿಕ್ರಂ (Trivikram) ಜೋರಾಗಿ ಗುದ್ದಿದರು. ಅದರ ಪರಿಣಾಮ, ಮಂಜು ಬಾಯಿಗೆ ಪೆಟ್ಟಾಯಿತು. ಎರಡು ಬಾರಿ ಟಾಸ್ಕ್ ಆಡಿಸಿದರೂ ಯಾವುದೇ ಫಲಿತಾಂಶ ಬರಲಿಲ್ಲ. ಪ್ರತಿಬಾರಿಯೂ ಮಂಜು (Ugramm Manju) ಮತ್ತು ತ್ರಿವಿಕ್ರಂ ಬಹಳ ಆರ್ಭಟದಿಂದಲೇ ಅಖಾಡಕ್ಕೆ ಇಳಿಯುತ್ತಿದ್ದರು. ಉಸ್ತುವಾರಿ ಆಗಿದ್ದ ಮೋಕ್ಷಿತಾ (Mokshitha Pai) ಅವರು ತುಂಬಾ ಸಲ ಇದನ್ನು ತಪ್ಪಿಸಲು ಪ್ರಯತ್ನಿಸಿದರು. ಆದರೆ ಏನು ಪ್ರಯೋಜನ ಆಗಲಿಲ್ಲ.

    ಯಾವಾಗ ತಾವು ನೀಡಿದ ಟಾಸ್ಕ್ ಅನ್ನು ಸ್ಪರ್ಧಿಗಳು ಸರಿಯಾಗಿ ಆಡಲಿಲ್ಲವೋ, ಆಗ ಸ್ಪರ್ಧಿಗಳ ಮೇಲೆ ಬಿಗ್ ಬಾಸ್ ಕೆಂಡವಾದರು. ರಾಜಕೀಯ ಮಾಡಲು ಬೇಕಿರುವುದು ತಂತ್ರಗಳು ಮತ್ತು ಯುಕ್ತಿ. ಹೆಚ್ಚಾಗಿ ದೈಹಿಕ ಬಲದ ಪ್ರದರ್ಶನಕ್ಕೆ ಒತ್ತು ನೀಡಿದ್ದೀರಿ ಎಂದು ಬಿಗ್ ಬಾಸ್ ಆಕ್ರೋಶ ವ್ಯಕ್ತಪಡಿಸಿದರು. ಈ ಟಾಸ್ಕ್ ವಿಚಾರಕ್ಕೆ ಬಂದರೆ, ಎರಡು ಸುತ್ತು ನಡೆದರೂ, ಫಲಿತಾಂಶ ಘೋಷಣೆ ಮಾಡಲು ಸಾಧ್ಯವಾಗದಂತೆ ಆಗಿದೆ. ಹಾಗಾಗಿ ಈ ಟಾಸ್ಕ್ ಅನ್ನು ರದ್ದು ಮಾಡಿದರು ಬಿಗ್ ಬಾಸ್. ಇಂದಿನ ತಪ್ಪು ಮುಂದಿನ ಪಾಠವಾಗುತ್ತದೆ ಮರೆಯದಿರಿ ಎಂದು ಬಿಗ್ ಬಾಸ್ ಸ್ಪರ್ಧಿಗಳಿಗೆ ಕಿವಿಹಿಂಡಿದರು. ಇನ್ನಾದರೂ ಬಲ ಪ್ರದರ್ಶನ ಬಿಟ್ಟು ಯುಕ್ತಿಯಿಂದ ಸ್ಪರ್ಧಿಗಳು ಆಟ ಆಡುತ್ತಾರಾ? ಕಾದುನೋಡಬೇಕಿದೆ.

  • ‘ಮನಸಾರೆ ನಿನ್ನ’ ಎನ್ನುತ್ತಾ ರೊಮ್ಯಾಂಟಿಕ್ ಮೂಡ್‌ಗೆ ಜಾರಿದ ನಿವೇದಿತಾ ಗೌಡ

    ‘ಮನಸಾರೆ ನಿನ್ನ’ ಎನ್ನುತ್ತಾ ರೊಮ್ಯಾಂಟಿಕ್ ಮೂಡ್‌ಗೆ ಜಾರಿದ ನಿವೇದಿತಾ ಗೌಡ

    ‘ಬಿಗ್ ಬಾಸ್’ ಖ್ಯಾತಿಯ ನಿವೇದಿತಾ ಗೌಡ (Niveditha Gowda) ಅವರು ಚಂದನ್ ಶೆಟ್ಟಿ (Chandan Shetty) ಜೊತೆಗಿನ ದಾಂಪತ್ಯಕ್ಕೆ ಅಂತ್ಯ ಹಾಡಿದ ಮೇಲೆ ಸಿನಿಮಾ ರಂಗದಲ್ಲಿ ಬ್ಯುಸಿಯಾಗಿದ್ದಾರೆ. ಇದೀಗ ತೆಲುಗಿನತ್ತ ಮುಖ ಮಾಡಿರುವ ನಿವೇದಿತಾ ಸಿನಿಮಾ ಬದಲು ಆಲ್ಬಂ ಸಾಂಗ್ ಮೂಲಕ ಸದ್ದು ಮಾಡುತ್ತಿದ್ದಾರೆ.

    ತೆಲುಗಿನ ‘ವಾಲು ಕಳ್ಳತಾ’ ಎಂಬ ಆಲ್ಬಂ ಸಾಂಗ್‌ನಲ್ಲಿ ಗೌರಿ ನಾಯ್ಡು ಜೊತೆ ನಿವೇದಿತಾ ನಟಿಸಿದ್ದು, ಇದು ಕನ್ನಡದಲ್ಲೂ ರಿಲೀಸ್ ಆಗುತ್ತಿದೆ. ‘ಮನಸಾರೆ ನಿನ್ನ’ ಎಂದು ಕನ್ನಡದಲ್ಲೂ ಸಾಂಗ್ ಮಾಡಲಾಗಿದೆ. ಆದರೆ ಸಾಂಗ್ ರಿಲೀಸ್ ಆಗೋದು ಯಾವಾಗ? ಎಂದು ಕಾದುನೋಡಬೇಕಿದೆ. ಇದನ್ನೂ ಓದಿ:ಕಿಶನ್ ಜೊತೆ ಹಸೆಮಣೆ ಮೇಲೆ ಕುಳಿತ ದಿವ್ಯಾ ಉರುಡುಗ

    ತೆಲುಗಿನಲ್ಲಿ ನಟ, ಬರಹಗಾರ, ಸಂಕಲನಕಾರ, ಛಾಯಾಗ್ರಾಹಕನಾಗಿ ಗುರುತಿಸಿಕೊಂಡಿರುವ ಗೌರಿ ನಾಯ್ಡು ಜೊತೆ ಹಾಡಿನಲ್ಲಿ ನಿವೇದಿತಾ ರೊಮ್ಯಾನ್ಸ್ ಮಾಡಿದ್ದಾರೆ. ಸದ್ಯ ರಿಲೀಸ್ ಮಾಡಿರುವ ಪೋಸ್ಟರ್‌ಗೆ ಬಗೆ ಬಗೆಯ ಕಾಮೆಂಟ್‌ಗಳು ಬರುತ್ತಿವೆ.

    ಇನ್ನೂ ಮಾಜಿ ಪತಿ ಚಂದನ್ ಶೆಟ್ಟಿ ಜೊತೆ ‘ಮುದ್ದು ರಾಕ್ಷಸಿ’ (Muddu Rakshasi) ಸಿನಿಮಾದಲ್ಲಿ ನಿವೇದಿತಾ ನಾಯಕಿಯಾಗಿ ನಟಿಸಿದ್ದಾರೆ. ಸೃಜನ್ ಲೋಕೇಶ್ ನಟನೆಯ ‘ಜಿಎಸ್‌ಟಿ’ ಸಿನಿಮಾದಲ್ಲಿ ನಿವೇದಿತಾ ನಟಿಸಿದ್ದಾರೆ.

  • ಲವ್ ಸ್ಟೋರಿ ಶುರು ಮಾಡಿದ್ರೆ, ಮೆಟ್ಟು ತೆಗೆದುಕೊಂಡು ಹೊಡೆಯುತ್ತೇನೆ: ಚೈತ್ರಾ

    ಲವ್ ಸ್ಟೋರಿ ಶುರು ಮಾಡಿದ್ರೆ, ಮೆಟ್ಟು ತೆಗೆದುಕೊಂಡು ಹೊಡೆಯುತ್ತೇನೆ: ಚೈತ್ರಾ

    ಬಿಗ್ ಬಾಸ್ ಮನೆಯ (Bigg Boss Kannada 11) ಆಟ 4ನೇ ವಾರಕ್ಕೆ ಕಾಲಿಟ್ಟ ಇಟ್ಟಿದೆ. ದೊಡ್ಮನೆಯಲ್ಲಿ ಈ ಬಾರಿಯೂ ಕೆಲ ಲವ್ ಸ್ಟೋರಿಗಳು ಸದ್ದು ಮಾಡುತ್ತಿವೆ. ಇನ್ನೂ ಚೈತ್ರಾ ಕುಂದಾಪುರ ಸಹ ಸ್ಪರ್ಧಿಗಳ ಮೇಲೆ ಗರಂ ಆಗಿದ್ದಾರೆ. ಲವ್ ಸ್ಟೋರಿ ಶುರು ಮಾಡಿದ್ರೆ, ಬೇರೆ ಅವರೊಂದಿಗೆ ಸಂಬಂಧ ಕಟ್ಟಿದ್ರೆ ಮೆಟ್ಟು ತೆಗೆದುಕೊಂಡು ಬಾರಿಸುತ್ತೇನೆ ಎಂದು ಚೈತ್ರಾ (Chaithra Kundapura) ವಾರ್ನಿಂಗ್ ಕೊಟ್ಟಿದ್ದಾರೆ. ಇದನ್ನೂ ಓದಿ:ಮದುವೆ ಸಂಭ್ರಮದಲ್ಲಿ ನಾಗಚೈತನ್ಯ, ಶೋಭಿತಾ

    ಬಿಗ್ ಬಾಸ್ ಮನೆಯ ಬೆಡ್ ರೂಮ್ ಏರಿಯಾದಲ್ಲಿ ಚೈತ್ರಾ ಕುಂದಾಪುರ, ಹಂಸ ಮತ್ತು ಮಾನಸಾ ಇದ್ದರು. ಈ ವೇಳೆ, ಬಿಗ್ ಬಾಸ್ ಮನೆಯಲ್ಲಿ ಹುಟ್ಟಿಕೊಳ್ಳುವ ಲವ್ ಸ್ಟೋರಿಗಳ ಬಗ್ಗೆ ಚರ್ಚೆ ಶುರುವಾಯಿತು. ಆಗ ತ್ರಿವಿಕ್ರಮ್ (Trivikram) ಮತ್ತು ರಂಜಿತ್ (Ranjith) ಜೊತೆ ಲವ್ ಸ್ಟೋರಿ ಇದೆ ಎಂದು ಹಂಸ ಕುರಿತು ಸುರೇಶ್ ನೀಡಿರುವ ಹೇಳಿಕೆ ಬಗ್ಗೆ ಬೇಸರ ವ್ಯಕ್ತಪಡಿಸಿದರು.

    ಆಗ ಮಾತಿನ ಮಧ್ಯೆ ಚೈತ್ರಾ, ನನ್ನ ವಿಚಾರದಲ್ಲಿ ಲವ್ ಸ್ಟೋರಿ ಶುರು ಮಾಡಿದರೆ, ಮೆಟ್ಟು ತಗೊಂಡು ಬಾರಿಸುತ್ತೇನೆ. ಹೊರಗೆ ಹೋದರೂ ತೊಂದರೆ ಇಲ್ಲ. ನಾನು ಮದುವೆ ಫಿಕ್ಸ್ ಮಾಡಿಕೊಂಡು ಇಲ್ಲಿಗೆ ಬಂದಿದ್ದೇನೆ. ನನಗೆ ಯಾರ ಹತ್ತಿರವೂ ಸಂಬಂಧ ಕಟ್ಟಬೇಡಿ ಅಂತ ನಾನು ಮೊದಲೇ ಹೇಳಿದ್ದೇನೆ ಖಡಕ್ ಆಗಿ ಮಾತನಾಡಿದ್ದಾರೆ.

    ಈ ಮೂಲಕ ತಮಗೆ ಮದುವೆ ಫಿಕ್ಸ್ ಆಗಿರುವ ಬಗ್ಗೆ ಚೈತ್ರಾ ತಿಳಿಸಿದ್ದಾರೆ. ಹಾಗಾದ್ರೆ ಅವರು ಮದುವೆಯಾಗುವ ಆ ಹುಡುಗ ಯಾರು? ಮುಂದಿನ ದಿನಗಳಲ್ಲಿ ತಿಳಿಸುತ್ತಾರಾ? ಕಾದುನೋಡಬೇಕಿದೆ.