Tag: bbk 11

  • BBK 11: ದೊಡ್ಮನೆಗೆ ಹನುಮಂತ ವೈಲ್ಡ್ ಕಾರ್ಡ್ ಎಂಟ್ರಿ

    BBK 11: ದೊಡ್ಮನೆಗೆ ಹನುಮಂತ ವೈಲ್ಡ್ ಕಾರ್ಡ್ ಎಂಟ್ರಿ

    ಬಿಗ್ ಬಾಸ್ ಮನೆಯ (Bigg Boss Kannada 11) ಆಟ ರೋಚಕ ತಿರುವು ಪಡೆದು ಮುನ್ನುಗ್ಗುತ್ತಿದೆ. ಆಟ ಶುರುವಾಗಿ ಕೆಲವೇ ದಿನಕ್ಕೆ ಸ್ಪರ್ಧಿಯೊಬ್ಬರು ಮನೆಗೆ ವೈಲ್ಡ್ ಕಾರ್ಡ್ (Wild Card Entry) ಎಂಟ್ರಿ ಕೊಟ್ಟಿದ್ದಾರೆ. ಅದು ಬೇರೆ ಯಾರು ಅಲ್ಲ. ಸಂಗೀತದ ಮೂಲಕ ರಂಜಿಸಿದ್ದ ಗಾಯಕ ಹನುಮಂತ (Hanumantha) ಈಗ ಬಿಗ್ ಬಾಸ್ ಮನೆಗೆ ಎಂಟ್ರಿ ಕೊಟ್ಟಿದ್ದಾರೆ. ಈ ಕುರಿತ ಪ್ರೋಮೋವೊಂದನ್ನು ವಾಹಿನಿ ಹಂಚಿಕೊಂಡಿದೆ. ಇದನ್ನೂ ಓದಿ:ನಟ ಕಿಚ್ಚ ಸುದೀಪ್ ತಾಯಿ ನಿಧನ

    ಹದಿನಾಲ್ಕು ಮಂದಿ ಇರುವ ಆಟದಲ್ಲಿ 15ನೇ ಸ್ಪರ್ಧಿಯ ಆಗಮನವಾಗಿದೆ. ಸಿಂಗರ್ ಆಗಿ ಗೆದ್ದು ಬೀಗಿದ್ದ ಜವಾರಿ ಹುಡುಗ ಹನುಮಂತ ಬೆಳ್ಳಿ ಮೂಡಿತೋ ಕೋಳಿ ಕೂಗಿತೋ ಎಂಬ ಹಾಡಿನ ಮೂಲಕ ಎಂಟ್ರಿ ಕೊಟ್ಟಿದ್ದಾರೆ. ಅವರ ಆಗಮನ ಕೆಲವರಿಗೆ ಖುಷಿ ಕೊಟ್ಟಿದ್ದರೆ, ಇನ್ನೂ ಕೆಲವರಿಗೆ ಅಚ್ಚರಿ ಮೂಡಿಸಿದೆ.

    ಇನ್ನೂ ಹನುಮಂತ ಊಟ ಮಾಡುವಾಗ, ಬಿಗ್ ಬಾಸ್ ಮಾತನಾಡಿಸಿದ್ದಾರೆ. ಇರಿ ಊಟ ಮಾಡಬೇಕಾದ್ರೆ, ನನಗೆ ತಲೆ ಓಡಲ್ಲ. ಆಮೇಲೆ ಮಾತನಾಡುತ್ತೇನೆ ಎಂದು ಬಿಗ್ ಬಾಸ್ ಗೆ ಹೇಳುತ್ತಾರೆ. ಅವರ ಮುಗ್ಧತೆ ನೋಡಿ ಮನೆಮಂದಿ ನಗುತ್ತಾರೆ. ಇನ್ನೂ ದೊಡ್ಮನೆಗೆ ಬಂದ ಮೊದಲ ದಿನವೇ ಹನುಮಂತ ಕ್ಯಾಪ್ಟನ್ ಆಗಿದ್ದಾರೆ. ಇನ್ನೂ ಅವರು ಕ್ಯಾಪ್ಟನ್ ಎಂದು ಘೋಷಿಸಿದ್ದೇ ಬಿಗ್ ಬಾಸ್. ಹಾಗಾಗಿ ಮನೆಮಂದಿ ದಂಗಾಗಿದ್ದಾರೆ. ಬಿಗ್ ಬಾಸ್ ಆದೇಶಕ್ಕೆ ಸ್ಪರ್ಧಿಗಳು ಸೈಲೆಂಟ್ ಆಗಿದ್ದಾರೆ. ಇನ್ನೂ ಸದಾ ಜಗಳಗಳ ಮೂಲಕ ಸುದ್ದಿ ಆಗೋ ಸ್ಪರ್ಧಿಗಳ ನಡುವೆ ಹನುಮಂತ ಸೆಡ್ಡು ಹೊಡೆಯುತ್ತಾರಾ? ಎಂದು ಕಾದುನೋಡಬೇಕಿದೆ.

  • BBK 11:’ಬಿಗ್‌ ಬಾಸ್‌’ಗೆ ನೀವು ನೀಡಿರುವ ಕೊಡುಗೆಯ ಬಗ್ಗೆ ಹೆಮ್ಮೆಯಿದೆ: ಸಾನ್ವಿ ಸುದೀಪ್‌

    BBK 11:’ಬಿಗ್‌ ಬಾಸ್‌’ಗೆ ನೀವು ನೀಡಿರುವ ಕೊಡುಗೆಯ ಬಗ್ಗೆ ಹೆಮ್ಮೆಯಿದೆ: ಸಾನ್ವಿ ಸುದೀಪ್‌

    ‘ಬಿಗ್ ಬಾಸ್ ಕನ್ನಡ 11’ರ (Bigg Boss Kannada 11) ಬಳಿಕ ಕಿಚ್ಚ ಸುದೀಪ್ ನಿರೂಪಣೆ ಮಾಡಲ್ಲ ಅಂತ ವಿದಾಯ ಘೋಷಿಸಿದ್ದಾರೆ. ಸುದೀಪ್ ಈ ನಿರ್ಧಾರ ಇದೀಗ ಅಭಿಮಾನಿಗಳ ಪಾಲಿಗೆ ನುಂಗಲಾರದ ತುತ್ತಾಗಿದೆ. ಹೀಗಿರುವಾಗ ತಂದೆಯ ನಿರ್ಧಾರದ ಬಗ್ಗೆ ಪುತ್ರಿ ಸಾನ್ವಿ ಸುದೀಪ್ ರಿಯಾಕ್ಷನ್ ಕೊಟ್ಟಿದ್ದಾರೆ. ಬಿಗ್ ಬಾಸ್ ಶೋಗಾಗಿ ನೀವು ಹಾಕಿದ ಶ್ರಮಕ್ಕೆ ಸರಿಸಾಟಿಯೇ ಇಲ್ಲ ಎಂದು ಸಾನ್ವಿ (Saanvi Sudeep) ಸೋಶಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ.

    ಅಪ್ಪ ನಿಮ್ಮ ಬಿಗ್ ಬಾಸ್ ಜರ್ನಿ ಅತ್ಯಂತ ಹೆಮ್ಮೆ ಪಡುವಂತದ್ದು, ಬೇರೆ ಯಾರು ನಿಮ್ಮ ರೀತಿ ಮಾಡಲು ಸಾಧ್ಯವಿಲ್ಲ. ಬಿಗ್ ಬಾಸ್ ವೇದಿಕೆ ಮೇಲೆ ನಿಮ್ಮನ್ನು ನಾವು ನೋಡಲು ಮಿಸ್ ಮಾಡಿಕೊಳ್ಳುತ್ತಿದ್ದೇವೆ. ಆದರೆ ಬಿಗ್ ಬಾಸ್ ಜರ್ನಿಯಲ್ಲಿ ನಿಮ್ಮನ್ನು ನೋಡಿದ್ದು ನನಗೆ ಅತ್ಯಂತ ಸಂತೋಷವನ್ನು ತಂದಿದೆ. ‘ಬಿಗ್ ಬಾಸ್’ ಶೋಗಾಗಿ ನೀವು ಹಾಕಿದ ಶ್ರಮಕ್ಕೆ ಸರಿಸಾಟಿಯೇ ಇಲ್ಲ. ಇಲ್ಲಿವರೆಗೂ ಬಿಗ್ ಬಾಸ್ ಶೋಗೆ ನೀವು ನೀಡಿರುವ ಕೊಡುಗೆಗೆ ನಾನು ಹೆಮ್ಮೆ ಪಡುತ್ತೇನೆ ಎಂದು ಸಾನ್ವಿ ಸುದೀಪ್ ಬರೆದುಕೊಂಡಿದ್ದಾರೆ.

    ಕಿಚ್ಚನ ಎಕ್ಸ್ ಪೋಸ್ಟ್‌ನಲ್ಲಿ ಏನಿದೆ?

    ನೀವೆಲ್ಲರೂ BBK11 ರಲ್ಲಿ ತೋರಿಸಿರುವ ಪ್ರತಿಕ್ರಿಯೆಗೆ ಧನ್ಯವಾದಗಳು. ಶೋ ಮತ್ತು ನನ್ನ ಮೇಲೆ ತೋರಿಸಿದ ಪ್ರೀತಿಯ ಬಗ್ಗೆ ಹಲವರು ಹೇಳುತ್ತಾರೆ. ಇದು ನಮ್ಮೊಂದಿಗೆ ಪ್ರಯಾಣಿಸಿದ 10+1 ವರ್ಷದ ಶ್ರೇಷ್ಠ ಅನುಭವವಾಗಿತ್ತು, ಮತ್ತು ಈಗ ನಾನು ನನ್ನ ಮುಂದಿನ ಹೆಜ್ಜೆಗೆ ಸಾಗುವ ಸಮಯವಾಗಿದೆ.

    ಇದು BBK ಯಲ್ಲಿನ ನನ್ನ ಕೊನೆಯ ಆವೃತ್ತಿಯಾಗಲಿದೆ. ನನ್ನ ನಿರ್ಧಾರವನ್ನು ನನ್ನ ಅಭಿಮಾನಿಗಳು ಮತ್ತು ಈ ವರ್ಷಗಳಲ್ಲಿ BB ಅನ್ನು ಅನುಸರಿಸಿದ ಎಲ್ಲರೂ ಗೌರವಿಸುತ್ತಾರೆ ಎಂಬುದರಲ್ಲಿ ನನಗೆ ಸಂಪೂರ್ಣ ನಂಬಿಕೆ ಇದೆ. ಈ ಆವೃತ್ತಿಯನ್ನು ಅತ್ಯುತ್ತಮವಾಗಿ ಮಾಡಲು ಪ್ರಯತ್ನಿಸೋಣ. ಎಂದು ಕಿಚ್ಚ ಸುದೀಪ್ ತಮ್ಮ ಎಕ್ಸ್ ಖಾತೆಯಲ್ಲಿ ಪೋಸ್ಟ್ ಹಾಕಿದ್ದಾರೆ. ಇತ್ತೀಚೆಗೆ ಸುದೀಪ್ ಅವರು ದೊಡ್ಮನೆ ಆಟ ಸೀಸನ್ 11 ನಡೆಸಿಕೊಡಲ್ಲ ಅಂತಾ ನೇರವಾಗಿ ತಿಳಿಸಿದ್ದರು. ಆದರೆ ವಾಹಿನಿಯ, ಅಭಿಮಾನಿಗಳ ಒತ್ತಾಯಕ್ಕೆ ಸುದೀಪ್ ಸಾಥ್ ನೀಡಿದ್ದರು. ಈಗ ಮುಂದಿನ ಸೀಸನ್ ನಡೆಸಿಕೊಡಲ್ಲ ಎಂದು ಅಧಿಕೃತವಾಗಿ ಘೋಷಿಸಿದ್ದಾರೆ.

  • ದಿಢೀರ್‌ ‘ಬಿಗ್‌ ಬಾಸ್‌’ಗೆ ಕಿಚ್ಚ ವಿದಾಯ ಹೇಳಿದ್ಯಾಕೆ?: ಸುಳಿವು ಕೊಟ್ಟ ರೂಪೇಶ್‌ ರಾಜಣ್ಣ

    ದಿಢೀರ್‌ ‘ಬಿಗ್‌ ಬಾಸ್‌’ಗೆ ಕಿಚ್ಚ ವಿದಾಯ ಹೇಳಿದ್ಯಾಕೆ?: ಸುಳಿವು ಕೊಟ್ಟ ರೂಪೇಶ್‌ ರಾಜಣ್ಣ

    ಕಿಚ್ಚ ಸುದೀಪ್ (Kichcha Sudeep) ನಿನ್ನೆ (ಅ.13) ಬಿಗ್ ಬಾಸ್ ಶೋಗೆ ವಿದಾಯ ಘೋಷಿಸಿದ ಬೆನ್ನಲ್ಲೇ ಈ ಕುರಿತು ರೂಪೇಶ್ ರಾಜಣ್ಣ (Rupesh Rajanna) ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್‌ವೊಂದು ಹಂಚಿಕೊಂಡಿದ್ದಾರೆ. ದಿಢೀರ್‌ ಬಿಗ್‌ ಬಾಸ್‌ಗೆ ಸುದೀಪ್‌ ಯಾಕೆ ವಿದಾಯ ಹೇಳ್ತಿದ್ದಾರೆ ಎಂದು ಮಹತ್ವದ ಸುಳಿವೊಂದನ್ನು ಬಿಟ್ಟು ಕೊಟ್ಟಿದ್ದಾರೆ. ಕಿಚ್ಚ ಸುದೀಪ್ ಮಾಡಿದ ಅವಮಾನ ಸಹಿಸೋಲ್ಲ ಅಂತ ರೂಪೇಶ್ ರಾಜಣ್ಣ ಸೋಶಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ.

    ‘ಬಿಗ್ ಬಾಸ್’ ಎಂಬ ಕಾರ್ಯಕ್ರಮ ನಡೆಸುವ ಕೆಲ ಕನ್ನಡ ದ್ರೋಹಿಗಳ ನಿಮ್ಮ ಕಿತ್ತೋದ್ ಆಟಕ್ಕೆ, ಸುದೀಪ್ ಬಿಗ್ ಬಾಸ್ ನಿರೂಪಕರಾಗಿ ನಿಲ್ಲಿಸಬೇಕಾಗಿದೆ. ಅವರಿಗೆ ಮಾಡಿದ ಅವಮಾನವನ್ನು ಸಹಿಸಲ್ಲ. ಎ ಮುಂಬೈ ಮರಾಠಿ ಹಾಗೂ ತಮಿಳು ನಿರ್ದೇಶಕ ಮೊದಲು ಬಿಗ್ ಬಾಸ್ ಬಿಡಿ, ಇಲ್ಲ ಬಿಗ್ ಬಾಸ್ ನಿಲ್ಲಬೇಕು. ಅಸಲಿ ವಿಷಯ ಮಾತಾಡ್ತೀನಿ ಎಂದು ಮಾಜಿ ಬಿಗ್‌ ಬಾಸ್‌ ಸ್ಪರ್ಧಿ ರೂಪೇಶ್ ರಾಜಣ್ಣ ಸೋಶಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ. ಅವರ ಈ ಪೋಸ್ಟ್ ಕುರಿತು ಪರ ಮತ್ತು ವಿರೋಧದ ಚರ್ಚೆ ನಡೆಯುತ್ತಿದೆ. ಸುದೀಪ್ ಅವರ ಈ ನಿರ್ಣಯ ಹಿಂದೆ ಬೇರೆ ಏನಾದರೂ ಕಥೆ ಇದ್ಯಾ? ಅಂತ ಅಭಿಮಾನಿಗಳು ತಲೆ ಕೆಡಿಸಿಕೊಂಡಿದ್ದಾರೆ. ಸದ್ಯದಲ್ಲೇ ಇದಕ್ಕೆಲ್ಲಾ ಉತ್ತರ ಸಿಗುತ್ತಾ? ಕಾದುನೋಡಬೇಕಿದೆ.

    ಕಿಚ್ಚನ ಎಕ್ಸ್ ಪೋಸ್ಟ್‌ನಲ್ಲಿ ಏನಿದೆ?

    ನೀವೆಲ್ಲರೂ BBK 11ರಲ್ಲಿ ತೋರಿಸಿರುವ ಪ್ರತಿಕ್ರಿಯೆಗೆ ಧನ್ಯವಾದಗಳು. ಶೋ ಮತ್ತು ನನ್ನ ಮೇಲೆ ತೋರಿಸಿದ ಪ್ರೀತಿಯ ಬಗ್ಗೆ ಹಲವರು ಹೇಳುತ್ತಾರೆ. ಇದು ನಮ್ಮೊಂದಿಗೆ ಪ್ರಯಾಣಿಸಿದ 10+1 ವರ್ಷದ ಶ್ರೇಷ್ಠ ಅನುಭವವಾಗಿತ್ತು. ಮತ್ತು ಈಗ ನಾನು ನನ್ನ ಮುಂದಿನ ಹೆಜ್ಜೆಗೆ ಸಾಗುವ ಸಮಯವಾಗಿದೆ. ಇದು BBK ಯಲ್ಲಿನ ನನ್ನ ಕೊನೆಯ ಆವೃತ್ತಿಯಾಗಲಿದೆ. ನನ್ನ ನಿರ್ಧಾರವನ್ನು ನನ್ನ ಅಭಿಮಾನಿಗಳು ಮತ್ತು ಈ ವರ್ಷಗಳಲ್ಲಿ BB ಅನ್ನು ಅನುಸರಿಸಿದ ಎಲ್ಲರೂ ಗೌರವಿಸುತ್ತಾರೆ ಎಂಬುದರಲ್ಲಿ ನನಗೆ ಸಂಪೂರ್ಣ ನಂಬಿಕೆ ಇದೆ.

    ಈ ಆವೃತ್ತಿಯನ್ನು ಅತ್ಯುತ್ತಮವಾಗಿ ಮಾಡಲು ಪ್ರಯತ್ನಿಸೋಣ ಎಂದು ಕಿಚ್ಚ ಸುದೀಪ್ ತಮ್ಮ ಎಕ್ಸ್ ಖಾತೆಯಲ್ಲಿ ಪೋಸ್ಟ್ ಹಾಕಿದ್ದಾರೆ. ಇತ್ತೀಚೆಗೆ ಸುದೀಪ್ ಅವರು ದೊಡ್ಮನೆ ಆಟ ಸೀಸನ್ 11 ನಡೆಸಿಕೊಡಲ್ಲ ಅಂತಾ ನೇರವಾಗಿ ತಿಳಿಸಿದ್ದರು. ಆದರೆ ವಾಹಿನಿಯ, ಅಭಿಮಾನಿಗಳ ಒತ್ತಾಯಕ್ಕೆ ಸುದೀಪ್ ಸಾಥ್ ನೀಡಿದ್ದರು. ಈಗ ಮುಂದಿನ ಸೀಸನ್ ನಡೆಸಿಕೊಡಲ್ಲ ಎಂದು ಅಧಿಕೃತವಾಗಿ ಘೋಷಿಸಿದ್ದರು.

  • ‘ಬಿಗ್ ಬಾಸ್’ನೇ ಟ್ರೋಲ್ ಮಾಡಿದ್ದ ಧನರಾಜ್ ದೊಡ್ಮನೆ ಸ್ವರ್ಗಕ್ಕೆ ಎಂಟ್ರಿ

    ‘ಬಿಗ್ ಬಾಸ್’ನೇ ಟ್ರೋಲ್ ಮಾಡಿದ್ದ ಧನರಾಜ್ ದೊಡ್ಮನೆ ಸ್ವರ್ಗಕ್ಕೆ ಎಂಟ್ರಿ

    ‘ಗಿಚ್ಚಿ ಗಿಲಿಗಿಲಿ’ ಖ್ಯಾತಿಯ ಧನರಾಜ್ ಆಚಾರ್ (Dhanraj Achar)  ಬಿಗ್ ಬಾಸ್ ಮನೆಗೆ (Bigg Boss Kannada 11) 3ನೇ ಸ್ಪರ್ಧಿಯಾಗಿ ಕಾಲಿಟ್ಟಿದ್ದಾರೆ. ಬಿಗ್ ಬಾಸ್‌ನೇ ಟ್ರೋಲ್ ಮಾಡಿ ಸೋಶಿಯಲ್ ಮೀಡಿಯಾದಲ್ಲಿ ಹೈಲೆಟ್ ಆಗಿದ್ದ ಧನರಾಜ್ ದೊಡ್ಮನೆಗೆ ಎಂಟ್ರಿ ಕೊಟ್ಟಿದ್ದಾರೆ.

    ಬಿಗ್ ಬಾಸ್ ಅನ್ನೇ ಅನುಕರಣೆ ಮಾಡುವಂತ ಕಾಮಿಡಿ ವಿಡಿಯೋವನ್ನು ಮಾಡಿ ಸೋಶಿಯಲ್ ಮೀಡಿಯಾದಲ್ಲಿ ಧನರಾಜ್ ಹಂಚಿಕೊಂಡಿದ್ದರು. ಈ ವಿಡಿಯೋ ಭಾರೀ ಲೈಕ್ಸ್ ಮತ್ತು ವಿವ್ಸ್ ಗಿಟ್ಟಿಸಿಕೊಂಡಿತ್ತು. ಇದನ್ನೇ ದೊಡ್ಮನೆಗೆ ನಟ ಕಾಲಿಟ್ಟ ವೇಳೆ, ಸುದೀಪ್ ತೋರಿಸಿ ಕ್ಲಾಸ್ ತೆಗೆದುಕೊಂಡಿದ್ದಾರೆ. ಟ್ರೋಲ್ ಮಾಡಿದ ನಟನಿಗೆ ಪ್ರಶ್ನಿಸಿ ಮಾತನಾಡಿದ ಸುದೀಪ್, ಆ ನಂತರ ಇದು ತಮಾಷೆಗಾಗಿ ಎಂದು ಧನರಾಜ್ ಕಾಲೆಳೆದಿದ್ದಾರೆ.

    ನೀವು ಬಿಗ್ ಬಾಸ್‌ನ ಟ್ರೋಲ್ ಮಾಡಬೋದಾ ನಾನು ಚಮಕ್ ಕೊಡ್ತೀನಿ ಎಂದು ಸುದೀಪ್ ಸ್ಪರ್ಧಿಗೆ ತಮಾಷೆ ಮಾಡಿದ್ದಾರೆ. ಆ ನಂತರ ವಿಶೇಷ ಅಧಿಕಾರ ಪಡೆದಿದ್ದ ಭವ್ಯಾ ಮತ್ತು ಯಮುನಾ ನಿರ್ಧಾರ ಮೇರೆಗೆ ಧನರಾಜ್ ಸ್ವರ್ಗಕ್ಕೆ ಕಾಲಿಟ್ಟಿದ್ದಾರೆ.

    ಅಂದಹಾಗೆ, ಮೋಕ್ಷಿತಾ ಪೈ, ಚೈತ್ರಾ ಕುಂದಾಪುರ, ಅನುಷಾ ರೈ, ಧರ್ಮ ಕೀರ್ತಿರಾಜ್, ಉಗ್ರಂ ಮಂಜು, ಐಶ್ವರ್ಯಾ ಸಿಂದೋಗಿ, ತ್ರಿವಿಕ್ರಮ್, ಶಿಶಿರ್ ಶಾಸ್ತಿç, ಗೋಲ್ಡ್ ಸುರೇಶ್, ಗೌತಮಿ, ಮಾನಸಾ, ರಂಜಿತ್ ಬಿಗ್ ಬಾಸ್‌ಗೆ ಎಂಟ್ರಿ ಕೊಟ್ಟಾಗಿದೆ.

  • ದೊಡ್ಮನೆ ಶೋಗೂ ಮೊದಲೇ ಸ್ವರ್ಗ, ನರಕದ ಲುಕ್ ರಿವೀಲ್- ಸ್ಪರ್ಧಿಗಳು ಶಾಕ್

    ದೊಡ್ಮನೆ ಶೋಗೂ ಮೊದಲೇ ಸ್ವರ್ಗ, ನರಕದ ಲುಕ್ ರಿವೀಲ್- ಸ್ಪರ್ಧಿಗಳು ಶಾಕ್

    ಕಿರುತೆರೆಯ ಅತೀ ದೊಡ್ಡ ರಿಯಾಲಿಟಿ ಶೋ ಬಿಗ್ ಬಾಸ್ ಕನ್ನಡ 11ರ ಶೋಗೆ (Bigg Boss Kannada 11) ಇಂದು (ಸೆ.29) ಸಂಜೆ ಪ್ರಾರಂಭಕ್ಕೆ ಕೌಂಟ್ ಡೌನ್ ಶುರುವಾಗಿದೆ. ಈಗಾಗಲೇ ದೊಡ್ಮನೆಗೆ 17 ಸ್ಪರ್ಧಿಗಳು ಕಾಲಿಟ್ಟಿದ್ದಾರೆ. ಬಿಗ್ ಬಾಸ್ ಶೋ ಪ್ರಸಾರಕ್ಕೂ ಮೊದಲೇ ದೊಡ್ಮನೆಯ ಸ್ಬರ್ಗ ಮತ್ತು ನರಕ ಝಲಕ್ ಅನ್ನು ವಾಹಿನಿ ರಿವೀಲ್ ಮಾಡಿದೆ.

    ಕಳೆದ 10 ಸೀಸನ್‌ಗಳಿಂದ ಬಿಗ್ ಬಾಸ್ ಮನೆ ಒಂದರಕ್ಕಿಂತ ಒಂದು ಅದ್ಧೂರಿಯಾಗಿ ತೋರಿಸಲಾಗಿತ್ತು. ಈ ಬಾರಿಯು ಮತ್ತಷ್ಟು ವಿಜೃಂಭಣೆಯಿಂದ ಬಿಗ್ ಬಾಸ್ ಮನೆಯನ್ನು ರೆಡಿ ಮಾಡಲಾಗಿದೆ. ಹೊಸ ಸಮಾಚಾರ ಏನೆಂದರೆ, ಈ ಬಾರಿ ಸ್ವರ್ಗ ಮತ್ತು ನರಕ ಎಂದು 2 ಕಾನ್ಸೆಸ್ಟ್‌ಗಳು ಇರುತ್ತವೆ.

    ಈ ಬಾರಿ ಕೂಡ ಹೊಸ ಥೀಮ್‌ನೊಂದಿಗೆ ದೊಡ್ಮನೆಯನ್ನು ವಾಹಿನಿ ಸ್ವರ್ಗ ಮತ್ತು ನರಕದಂತೆಯೇ ಸಿದ್ಧಪಡಿಸಿದ್ದಾರೆ. ಸ್ವರ್ಗದ ಮನೆ ಐಷರಾಮಿಯಾಗಿದ್ರೆ, ಇತ್ತ ನರಕದ ಮನೆ ಭಯಾನಕವಾಗಿದೆ. ಸದ್ಯದ ಕುತೂಹಲ ಏನಪ್ಪಾ ಅಂದರೆ, ಬಂದಿರುವ 17 ಸ್ಪರ್ಧಿಗಳು ಸ್ವರ್ಗಕ್ಕೆ ಯಾರು? ನರಕಕ್ಕೆ ಯಾರು ಎಂದು ಕಾದುನೋಡಬೇಕಿದೆ.

    ಇದೆಲ್ಲದರ ನಡುವೆ ಸುದೀಪ್ (Sudeep) ಸನ್‌ಗ್ಲಾಸ್ ಧರಿಸಿ `ಬಿಗ್ ಬಾಸ್’ ವೇದಿಕೆ ಸ್ಟೈಲೀಶ್ ಎಂಟ್ರಿ ಕೊಟ್ಟಿದ್ದಾರೆ. ಸ್ಪರ್ಧಿಗಳ ಡ್ಯಾನ್ಸ್‌ನ ಸಣ್ಣ ಝಲಕ್ ಶೇರ್ ಮಾಡಿದ್ದಾರೆ. ಮುಖ ತೋರಿಸದೇ ಇದ್ದರೂ ಡ್ಯಾನ್ಸ್ ಸಣ್ಣ ತುಣುಕು ಎಲ್ಲರ ಗಮನ ಸೆಳೆಯುತ್ತಿದೆ.

    ಮೋಕ್ಷಿತಾ ಪೈ, ಭವ್ಯಾ ಗೌಡ, ಚೈತ್ರಾ ಕುಂದಾಪುರ, ಅನುಷಾ ರೈ, ಧರ್ಮ ಕೀರ್ತಿರಾಜ್, ಉಗ್ರಂ ಮಂಜು, ಧನರಾಜ್ ಆಚಾರ್, ಐಶ್ವರ್ಯಾ ಸಿಂದೋಗಿ, ಯಮುನಾ ಶ್ರೀನಿಧಿ, ತ್ರಿವಿಕ್ರಮ್, ಶೀಶಿರ್, ಗೋಲ್ಡ್ ಸುರೇಶ್, ಗೌತಮಿ, ಮಾನಸಾ, ರಂಜಿತ್ ಬಿಗ್ ಬಾಸ್‌ಗೆ ಎಂಟ್ರಿ ಕೊಟ್ಟಾಗಿದೆ. ಇಂದು ಸಂಜೆ ಅಧಿಕೃತವಾಗಿ ವಾಹಿನಿ ಮೂಲಕ ಅನಾವರಣ ಆಗಬೇಕಿದೆ.

    ಇನ್ನೂ ಬಿಗ್ ಬಾಸ್ ಕಾರ್ಯಕ್ರಮವು ಪ್ರತಿದಿನ ರಾತ್ರಿ 9:30ಕ್ಕೆ ಪ್ರಸಾರವಾಗಲಿದ್ದು, ಈ ಬಾರಿ ವಿವಾದಿತ ಸ್ಪರ್ಧಿಗಳು ಕೂಡ ದೊಡ್ಮನೆಯಲ್ಲಿದ್ದಾರೆ. ಕಳೆದ ಬಾರಿ ಸೀಸನ್ 10 ಹೊಸ ಕ್ರಾಂತಿ ಹುಟ್ಟುಹಾಕಿತ್ತು. ಅದರಂತೆ ಬಿಗ್ ಬಾಸ್ ಸೀಸನ್ 11 ಯಾವ ಮಟ್ಟದಲ್ಲಿ ಸದ್ದು ಮಾಡಲಿದೆ ಕಾದುನೋಡಬೇಕಿದೆ.

  • BBK 11:ಹೊಸ ಸೀಸನ್, ಹೊಸ ಮನೆಗೆ 17 ಹೊಸ ಕಂಟೆಸ್ಟೆಂಟ್ಸ್- ಯಾರಿಗೆ ಸ್ವರ್ಗ, ನರಕ?

    BBK 11:ಹೊಸ ಸೀಸನ್, ಹೊಸ ಮನೆಗೆ 17 ಹೊಸ ಕಂಟೆಸ್ಟೆಂಟ್ಸ್- ಯಾರಿಗೆ ಸ್ವರ್ಗ, ನರಕ?

    ಟಿವಿ ಲೋಕದ ಅತಿ ದೊಡ್ಡ ರಿಯಾಲಿಟಿ ಶೋ ಬಿಗ್ ಬಾಸ್ ಸೀಸನ್ 11ರ ಶುಭಾರಂಭಕ್ಕೆ ಕೆಲವೇ ಗಂಟೆಗಳು ಬಾಕಿ ಉಳಿದಿದೆ. ಇಂದು ಸಂಜೆ 6 ಗಂಟೆಗೆ ‘ಬಿಗ್ ಬಾಸ್ ಕನ್ನಡ ಸೀಸನ್ 11’ರ (Bigg Boss Kannada 11) ಗ್ರ‍್ಯಾಂಡ್ ಓಪನಿಂಗ್ ಆರಂಭವಾಗುತ್ತಿದೆ. ಸದ್ಯ ಸುದೀಪ್ (Kichcha Sudeep) ಸ್ಟೈಲೀಶ್ ಆಗಿ ಎಂಟ್ರಿ ಕೊಟ್ಟಿರುವ ಪ್ರೋಮೋವನ್ನು ವಾಹಿನಿ ರಿವೀಲ್ ಮಾಡಿದೆ.

    ಈಗಾಗಲೇ ಬಿಗ್ ಬಾಸ್ ಮನೆಗೆ ಹೋಗುವ ಎಲ್ಲಾ ಕಂಟೆಸ್ಟೆಂಟ್ಸ್‌ಗಳು ಗ್ರ‍್ಯಾಂಡ್ ಫಿನಾಲೆ ವೇದಿಕೆಗೆ ಎಂಟ್ರಿ ಕೊಟ್ಟಿದ್ದಾರೆ. ಹೊಸ ಸೀಸನ್, ಹೊಸ ಮನೆ, ಹೊಸ ಕಂಟೆಸ್ಟೆಂಟ್ಸ್, ಹೊಸ ಆಟ ಇನ್ನೇನು ಆರಂಭಕ್ಕೆ ಕೌಂಟ್ ಡೌನ್ ಶುರುವಾಗಿದೆ. ಇದನ್ನೂ ಓದಿ:BBK 11: ದೊಡ್ಮನೆ ಆಟಕ್ಕೆ ಎಂಟ್ರಿ ಕೊಟ್ಟಿರುವ ಸ್ಪರ್ಧಿಗಳ ಪಕ್ಕಾ ಲಿಸ್ಟ್

    ಇದೆಲ್ಲದರ ನಡುವೆ ಸುದೀಪ್ ಸನ್‌ಗ್ಲಾಸ್ ಧರಿಸಿ ‘ಬಿಗ್ ಬಾಸ್’ ವೇದಿಕೆ ಸ್ಟೈಲೀಶ್ ಎಂಟ್ರಿ ಕೊಟ್ಟಿದ್ದಾರೆ. ಸ್ಪರ್ಧಿಗಳ ಡ್ಯಾನ್ಸ್‌ನ ಸಣ್ಣ ಝಲಕ್ ಶೇರ್ ಮಾಡಿದ್ದಾರೆ. ಮುಖ ತೋರಿಸದೇ ಇದ್ದರೂ ಡ್ಯಾನ್ಸ್ ಸಣ್ಣ ತುಣುಕು ಎಲ್ಲರ ಗಮನ ಸೆಳೆಯುತ್ತಿದೆ.

    ಇನ್ನೂ ನಿನ್ನೆ ಬಿಗ್ ಬಾಸ್ ಶೋಗೆ ಅದ್ಧೂರಿಯಾಗಿ ಚಾಲನೆ ಸಿಕ್ಕಿದೆ. ಅದರ ಪ್ರಸಾರ ಇಂದು (ಸೆ.29) ಸಂಜೆ 6 ಗಂಟೆಗೆ ವಾಹಿನಿಯಲ್ಲಿ ಮೂಡಿ ಬರಲಿದೆ. ಇನ್ನೂ ಸ್ಪರ್ಧಿಗಳ ಪಕ್ಕಾ ಲಿಸ್ಟ್ ಕೂಡ ಸಿಕ್ಕಿದೆ.

    ಮೋಕ್ಷಿತಾ ಪೈ(Mokshitha Pai), ಭವ್ಯಾ ಗೌಡ (Bhavya Gowda), ಚೈತ್ರಾ ಕುಂದಾಪುರ, ಅನುಷಾ ರೈ, ಧರ್ಮ ಕೀರ್ತಿರಾಜ್, ಉಗ್ರಂ ಮಂಜು, ಧನರಾಜ್ ಆಚಾರ್, ಐಶ್ವರ್ಯಾ ಸಿಂದೋಗಿ, ಯಮುನಾ ಶ್ರೀನಿಧಿ, ತ್ರಿವಿಕ್ರಮ್, ಶೀಶಿರ್, ಗೋಲ್ಡ್ ಸುರೇಶ್, ಗೌತಮಿ, ಮಾನಸಾ, ರಂಜಿತ್ ಬಿಗ್ ಬಾಸ್‌ಗೆ ಎಂಟ್ರಿ ಕೊಟ್ಟಾಗಿದೆ. ಇನ್ನೇನಿದ್ರೂ ಥೀಮ್ ಪ್ರಕಾರ, ಸ್ವರ್ಗಕ್ಕೆ ಹೋಗ್ತಾರಾ? ಅಥವಾ ನರಕಕ್ಕೆ ಹೋಗ್ತಾರಾ ಕಾದುನೋಡಬೇಕಿದೆ.