ಬೆಂಗಳೂರು: ಬಿಬಿಎಂಪಿ ಕಚೇರಿಯಲ್ಲಿ (BBMP Office) ಕೆಲಸ ಮಾಡುತ್ತಿದ್ದ ಮಹಿಳೆಯೊಬ್ಬರು ಮನೆಯಲ್ಲಿ ಯಾರೂ ಇಲ್ಲದಿದ್ದಾಗ ನೇಣು ಬಿಗಿದುಕೊಂಡು ಅತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಾಮರಾಜಪೇಟೆಯಲ್ಲಿ (Chamarajpet) ನಡೆದಿದೆ.
ನಂದಿನಿ (32) ಆತ್ಮಹತ್ಯೆ ಮಾಡಿಕೊಂಡ ಮಹಿಳೆ. ಫೆ.23ರ ರಾತ್ರಿ 9:30ರ ವೇಳೆಗೆ ಘಟನೆ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ. ಮನೆಯಲ್ಲಿ ಯಾರೂ ಇಲ್ಲದಾಗ ನೇಣು ಬಿಗಿದುಕೊಂಡು ನಂದಿನಿ ಅತ್ಮಹತ್ಯೆ ಮಾಡಿಕೊಂಡಿದ್ದಾರೆ. ಇದನ್ನು ನೋಡಿ ಪೊಲೀಸರು ಬರುವ ಮುನ್ನವೇ ಕುಟುಂಬಸ್ಥರು ಮೃತದೇಹ ಕೆಳಗೆ ಇಳಿಸಿದ್ದಾರೆ.
ಏನು ಕಾರಣ?
ಬಿಬಿಎಂಪಿ ಕಚೇರಿಯಲ್ಲಿ ಕೆಲಸ ಮಾಡಿಕೊಂಡಿದ್ದ ನಂದಿನಿ, 8 ವರ್ಷಗಳ ಹಿಂದೆ ಸೂರ್ಯ ಎಂಬಾತನೊಂದಿಗೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು. ದಂಪತಿಗೆ ಒಂದು ಹೆಣ್ಣು ಮತ್ತು ಒಂದು ಗಂಡು ಮಗು ಇದೆ. ನಂದಿನಿಗೆ ವ್ಯಕ್ತಿಯೊಬ್ಬ ಆಗಾಗ್ಗೆ ಫೋನ್ ಮಾಡಿ ಕಿರಿಕುಳ ನೀಡುತ್ತಿದ್ದ ಎಂಬ ಆರೋಪ ಕೇಳಿಬಂದಿದೆ. ಇದರಿಂದಾಗಿ ಪತಿ-ಪತ್ನಿ ನಡುವೆ ಆಗಾಗ್ಗೆ ಗಲಾಟೆ ನಡೆಯುತ್ತಿತ್ತು. ವ್ಯಕ್ತಿಯ ನಿರಂತರ ಕಿರುಕುಳದಿಂದ ಮನನೊಂದಿದ್ದ ನಂದಿನಿ ಆತ್ಮಹತ್ಯೆ ಮಾಡಿಕೊಂದಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಇದನ್ನೂ ಓದಿ: ಮರಾಠಿ ಪುಂಡರಿಂದ ಕಂಡಕ್ಟರ್ ಮೇಲೆ ಹಲ್ಲೆ – ಇಂದು ಬೆಳಗಾವಿಗೆ ರಾಮಲಿಂಗಾ ರೆಡ್ಡಿ ಭೇಟಿ
ಬೆಂಗಳೂರು: ಹಲವು ದಿನಗಳಿಂದ ಆ ರಾಜಕಾಲುವೆಯ ತಡೆಗೋಡೆ ನಿಧಾನಕ್ಕೆ ಕುಸಿಯುತ್ತಲೇ ಇದೆ. ಇದರಿಂದ ಪಕ್ಕದ ಬಿಬಿಎಂಪಿ ಪಾರ್ಕ್ ಗೋಡೆ (BBMP Park Wall), ರಸ್ತೆಗೂ ಹಾನಿಯಾಗುವ ಭೀತಿ ಶುರುವಾಗಿದೆ. ತಡೆಗೋಡೆ ಬಳಿಯ ಬೃಹತ್ ಮರವು ನೆಲಕ್ಕುರುಳುವ ಸ್ಥಿತಿಗೆ ಬಂದಿದೆ. ಆದ್ರೆ ಅಧಿಕಾರಿಗಳು ಮಾತ್ರ ಕಾಟಾಚಾರದ ಕೆಲಸಕ್ಕೆ ಮುಂದಾಗಿದ್ದಾರೆ.
ಒಮ್ಮೆ ಈ ದೃಶ್ಯಗಳನ್ನ ನೋಡಿ.. ಹಂತ ಹಂತವಾಗಿ ರಾಜಕಾಲುವೆಯ (Rajakaluve) ತಡೆಗೋಡೆ ಕುಸಿಯುತ್ತಿದೆ. ಇದರಿಂದ ಪಕ್ಕದ ಬಿಬಿಎಂಪಿ ಪಾರ್ಕ್ ಗೋಡೆ, ರಸ್ತೆಗೂ ಹಾನಿಯಾಗುವ ಆತಂಕ ಶುರುವಾಗಿದೆ. ಇದು ಹೊಸಹಳ್ಳಿ ಮೆಟ್ರೋ ನಿಲ್ದಾಣ ಮುಂಭಾಗದ ರಸ್ತೆ. ಕುಸಿಯುತ್ತಿರೋ ರಾಜಕಾಲುವೆಗೆ ತಡೆಗೋಡೆ ಕಟ್ಟೋದನ್ನ ಬಿಟ್ಟು ಕಟ್ಟಿಗೆಗಳನ್ನ ಕಟ್ಟಲಾಗಿದೆ. ಇದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದ್ದು, ತಕ್ಷಣಕ್ಕೆ ದುರಸ್ಥಿ ಕಾರ್ಯ ಮಾಡಬೇಕೆಂದು ಒತ್ತಾಯಿಸ್ತಿದ್ದಾರೆ. ಇದನ್ನೂ ಓದಿ: ಪಾಕ್ ವಿರುದ್ಧ ಭಾರತದ ಗೆಲುವುಗಾಗಿ ವಿಶೇಷ ಪೂಜೆ- ಬೆಂಗಳೂರು ಕ್ರೀಡಾಭಿಮಾನಿಗಳಿಂದ ಶುಭ ಹಾರೈಕೆ
ಕಳೆದ 15 ದಿನಗಳ ಹಿಂದೆ ರಾಜಕಾಲುವೆ ಕುಸಿತದ ಬಗ್ಗೆ ʻಪಬ್ಲಿಕ್ ಟಿವಿʼ ವರದಿ ಮಾಡಿತ್ತು. ವರದಿ ಬಳಿಕ ಸ್ಥಳೀಯ ಬಿಬಿಎಂಪಿ ಇಂಜಿನಿಯರ್ಸ್ ರಾಜಕಾಲುವೆ ಸುತ್ತ ಕಟ್ಟಿಗೆಗಳನ್ನ ಕಟ್ಟಿದ್ದಾರೆ. ರಾಜಕಾಲುವೆಯ ತಡೆಗೋಡೆ ದಿನೇ ದಿನೇ ನಿಧಾನಕ್ಕೆ ಕುಸಿಯುತ್ತಿದ್ದು, ಸದ್ಯ ಪಾರ್ಕ್ ಗೋಡೆ ಬಿರುಕು ಬಿಟ್ಟಿದ್ದು, ರಸ್ತೆಗೂ ಹಾನಿಯಾಗುವ ಆತಂಕ ಶುರುವಾಗಿದೆ. ಇದನ್ನೂ ಓದಿ: Champions Trophy | ಇಂಡೋ-ಪಾಕ್ ಕಾದಾಟದ ರೋಚಕ ಇತಿಹಾಸ – ಹೈವೋಲ್ಟೇಜ್ ಕದನದಲ್ಲಿ ಯಾರ ಕೈ ಮೇಲು?
ವಿಜಯನಗರದಿಂದ ವೆಸ್ಟ್ ಹಾಫ್ ಕಾರ್ಡ್ ರಸ್ತೆಯ ಫ್ಲೈ ಓವರ್ಗೆ ಹೋಗುವ ಮಾರ್ಗದಲ್ಲಿ ಈ ರಾಜಕಾಲುವೆ ಇದೆ. ಹಲವು ದಿನಗಳಿಂದ ರಾಜಕಾಲುವೆ ಕುಸಿಯುತ್ತಲೇ ಇದ್ದು, ತಡೆಗೋಡೆ ನಿರ್ಮಾಣ ಮಾಡಬೇಕೆಂದು ಜನ ಒತ್ತಾಯಿಸ್ತಿದ್ದಾರೆ. ಕಟ್ಟಿಗೆಗಳನ್ನ ಕಟ್ಟಿ ದುರಸ್ಥಿ ಕಾರ್ಯಕ್ಕೆ ಬಿಬಿಎಂಪಿ ಅಧಿಕಾರಿಗಳು ಮುಂದಾಗಿದ್ದಾರಾ..? ಅಥವಾ ಇಷ್ಟಕ್ಕೆ ಸೀಮಿತ ಮಾಡ್ತಾರಾ ಅನ್ನೋ ಗೊಂದಲದಲ್ಲಿ ಜನ ಇದ್ದಾರೆ. ದುರಸ್ಥಿ ಕಾರ್ಯ ಮಾಡೋದಾಗಿದ್ರೆ ಕನಿಷ್ಟ ಕಾಮಗಾರಿ ಪ್ರಗತಿಯ ಕುರಿತು ಬೋರ್ಡ್ ಆದ್ರೂ ಹಾಕಬೇಕಿತ್ತು. ಅದು ಕೂಡ ಆಗಿಲ್ಲ. ಬೃಹತ್ ರಾಜಕಾಲುವೆ ಮತ್ತಷ್ಟು ಕುಸಿದ್ರೆ ರಸ್ತೆಗೂ ಹಾನಿಯಾಗುವ ಸಾಧ್ಯತೆಯಿದ್ದು, ಕೂಡಲೇ ದುರಸ್ಥಿ ಕಾರ್ಯ ಮಾಡಬೇಕಿದೆ.
– ಬಿಬಿಎಂಪಿ ಚುನಾವಣೆ ನಡೆಸಲು ಸರ್ಕಾರಕ್ಕೆ ಒತ್ತಾಯಿಸಿದ ವಿಪಕ್ಷ ನಾಯಕ
ಬೆಂಗಳೂರು: ರಸ್ತೆ ಗುಂಡಿಗಳ ಆಕಾರ ಸೊನ್ನೆಯಾಗಿರುವಂತೆಯೇ ಬೆಂಗಳೂರಿನ (Bengaluru) ಅಭಿವೃದ್ಧಿಯೂ ಸೊನ್ನೆಯೇ ಆಗಿದೆ. ಅಭಿವೃದ್ಧಿಗಾಗಿ ಆದಷ್ಟು ಬೇಗ ಬಿಬಿಎಂಪಿ ಚುನಾವಣೆ (BBMP Election) ನಡೆಸಬೇಕು ಎಂದು ಸರ್ಕಾರಕ್ಕೆ ಪ್ರತಿಪಕ್ಷ ನಾಯಕ ಆರ್. ಅಶೋಕ್ (R Ashok) ಒತ್ತಾಯಿಸಿದರು.
ಬಿಬಿಎಂಪಿ ಚುನಾವಣೆ ಹಾಗೂ ಬೆಂಗಳೂರಿನ ಅಭಿವೃದ್ಧಿ ಕುರಿತು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಆದಷ್ಟು ಬೇಗ ಚುನಾವಣೆ ನಡೆಸಬೇಕು ಎಂದು ಸರ್ಕಾರಕ್ಕೆ ಒತ್ತಾಯಿಸುತ್ತೇವೆ. ಈ ಸಂಬಂಧ ನ್ಯಾಯಾಲಯದಲ್ಲಿ ವಾದ ಮಾಡಲು 15 ತಜ್ಞರ ತಂಡವನ್ನು ರಚಿಸಲಾಗಿದೆ. ಕಾಂಗ್ರೆಸ್ ಅಧಿಕಾರಕ್ಕೆ ಬಂದ ನಂತರ ಬೆಂಗಳೂರಿನ ಅಭಿವೃದ್ಧಿ ಸೊನ್ನೆಯಾಗಿದೆ. ರಸ್ತೆ ಗುಂಡಿಗಳ ಆಕಾರ ಸೊನ್ನೆಯಾಗಿರುವಂತೆಯೇ ಅಭಿವೃದ್ಧಿಯೂ ಸೊನ್ನೆಯೇ ಆಗಿದೆ. ರಸ್ತೆ ಗುಂಡಿಗಳಿಂದ ಬಿದ್ದು ಗಾಯಕ್ಕೊಳಗಾಗಿ ಜನರು ಆಸ್ಪತ್ರೆ ಸೇರುತ್ತಿದ್ದಾರೆ. ಎಲ್ಲಾ ಕಡೆ ಕಸದ ರಾಶಿ ಕಂಡುಬರುತ್ತಿದೆ ಎಂದು ಕಿಡಿಕಾರಿದರು. ಇದನ್ನೂ ಓದಿ: ಭಾರತದತ್ತ ಯುರೋಪಿಯನ್ ರಾಷ್ಟ್ರಗಳ ಹೆಜ್ಜೆ – ತಿಂಗಳಾಂತ್ಯಕ್ಕೆ 27 ರಾಷ್ಟ್ರಗಳ ಆಯುಕ್ತರ ತಂಡ ಭೇಟಿ
ಕಾಂಗ್ರೆಸ್ ಅಧಿಕಾರಕ್ಕೆ ಬಂದಾಗ ಹಿಮಾಲಯದ ಶಿಖರದಂತೆ ನಗರದ ಅಭಿವೃದ್ಧಿಯನ್ನು ಬ್ರ್ಯಾಂಡ್ ಮಾಡುತ್ತೇವೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದ್ದರು. ಈಗ ಅವರೇ ಬೆಂಗಳೂರನ್ನು ಉದ್ಧಾರ ಮಾಡಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ. ಇದರ ವಿರುದ್ಧ ಹೋರಾಟ ಮಾಡಲು ಸಭೆ ನಡೆಸಲಾಗಿದೆ ಎಂದರು. ಇದನ್ನೂ ಓದಿ: ಮಲೆ ಮಹದೇಶ್ವರ ಕೋಟಿ ಒಡೆಯ – 1.94 ಕೋಟಿ ಕಾಣಿಕೆ ಸಂಗ್ರಹ
ಸರ್ಕಾರಕ್ಕೆ ಬಿಬಿಎಂಪಿ ಚುನಾವಣೆ ನಡೆಸುವ ಮನಸ್ಸಿಲ್ಲ. ಗ್ರೇಟರ್ ಬೆಂಗಳೂರು ರಚಿಸುತ್ತೇವೆ. ಇನ್ನಷ್ಟು ಪ್ರದೇಶಗಳನ್ನು ಬೆಂಗಳೂರಿಗೆ ಸೇರಿಸುತ್ತೇವೆ ಎಂದು ಹೇಳುತ್ತಿದೆ. ಇರುವ ನಗರವನ್ನೇ ಸುಧಾರಣೆ ಮಾಡಲು ಸರ್ಕಾರಕ್ಕೆ ಸಾಧ್ಯವಾಗುತ್ತಿಲ್ಲ. ಇನ್ನು ಹೊಸ ಪ್ರದೇಶಗಳ ಅಭಿವೃದ್ಧಿ ಹೇಗೆ ಸಾಧ್ಯ. ಬೆಂಗಳೂರನ್ನು ಒಡೆದರೆ ನಾಡಪ್ರಭು ಕೆಂಪೇಗೌಡರಿಗೆ ಅಪಮಾನ ಮಾಡಿದಂತಾಗುತ್ತದೆ. ಕೆಂಪೇಗೌಡರನ್ನು ನಂಬುವ ಜನರ ಮನಸ್ಸಿಗೆ ನೋವಾಗುತ್ತದೆ ಎಂದು ವಾಗ್ದಾಳಿ ನಡೆಸಿದರು. ಇದನ್ನೂ ಓದಿ: ವಿಶ್ವವಿದ್ಯಾಲಯಗಳನ್ನು ಮುಚ್ಚುವುದಕ್ಕೆ ನಾವು ಅವಕಾಶ ಕೊಡುವುದಿಲ್ಲ: ವಿಜಯೇಂದ್ರ
ಈಗ 198 ವಾರ್ಡ್ಗಳಿಗೆ ಚುನಾವಣೆ ನಡೆಸಿದರೆ ಸಾಕು. ರಸ್ತೆ ಮೇಲ್ಭಾಗದಲ್ಲೇ ಸುರಂಗ ನಿರ್ಮಾಣವಾಗುತ್ತಿರುವಾಗ 150 ಅಡಿ ಕೆಳಗೆ ಸುರಂಗ ಕೊರೆಯಲು ಹೊರಟಿದ್ದಾರೆ. ಡಿಸಿಎಂ ಡಿ.ಕೆ.ಶಿವಕುಮಾರ್ ಅವರ ಹೇಳಿಕೆಗಳಿಂದ ಜನರು ರೊಚ್ಚಿಗೆದ್ದಿದ್ದಾರೆ. ಬೆಂಗಳೂರು ಇಂದು ಸರಿ ಹೋಗಲಿದೆ ಎಂದು ಜನರು ಕಾಯುತ್ತಿದ್ದಾರೆ. ಬೆಂಗಳೂರಿಗೆ ಬೆಂಗಳೂರಿನವರೇ ಆದ ಸಚಿವರಿಲ್ಲ. ಬೇರೆ ಜಿಲ್ಲೆಯ ಸಚಿವರಿಗೆ ನಗರದ ಬಗ್ಗೆ ಆಸಕ್ತಿ ಇಲ್ಲ. ಸರ್ಕಾರದಿಂದಾಗಿ ಬೆಂಗಳೂರು ಅನಾಥವಾಗಿದೆ ಎಂದು ದೂರಿದರು. ಇದನ್ನೂ ಓದಿ: ರಾಜ್ಯಾಧ್ಯಕ್ಷ ಸ್ಥಾನಕ್ಕೆ ಯತ್ನಾಳ್ ಸ್ಪರ್ಧೆ ಇಲ್ಲ; ಹೈಕಮಾಂಡ್ ವಾರ್ನ್ ಬಳಿಕ ಭಿನ್ನರ ಶಸ್ತ್ರತ್ಯಾಗ – ಬಿವೈವಿ ಫುಲ್ ಆ್ಯಕ್ಟಿವ್
ಬೆಂಗಳೂರು ಡಾನ್, ಮಾಫಿಯಾಗಳ ಕೈಗೆ ಸಿಲುಕಿದೆ. ಮೈಸೂರು ಗಲಭೆ, ಬೆಂಗಳೂರಿನ ಬಾಂಬ್ ಬ್ಲಾಸ್ಟ್, ಅತ್ಯಾಚಾರ ಮೊದಲಾದ ಅಪರಾಧಿ ಚಟುವಟಿಕೆಗಳು ರಾಜ್ಯದಲ್ಲಿ ನಡೆಯುತ್ತಿವೆ. ಜನರೇ ಸ್ವತಃ ಆತ್ಮರಕ್ಷಣೆ ಮಾಡಿಕೊಳ್ಳುವ ಸ್ಥಿತಿ ಬಂದಿದೆ. ಕಾಂಗ್ರೆಸ್ ನಾಯಕರು ಇನ್ನೂ ಗ್ಯಾರಂಟಿಗಳ ಗುಂಗಿನಲ್ಲೇ ಇದ್ದಾರೆ. ಕೊಲೆ, ಸುಲಿಗೆ ನಿರಂತರವಾಗಿದ್ದು, ಈ ಸರ್ಕಾರ ತೊಲಗಿದರೆ ಸಾಕು ಎಂದು ಜನರು ಹೇಳುತ್ತಿದ್ದಾರೆ ಎಂದರು. ಇದನ್ನೂ ಓದಿ: ಅಪ್ರಾಪ್ತ ಬಾಲಕನಿಂದ ಬೈಕ್ ಚಾಲನೆ: ಪೋಷಕರಿಗೆ ಬಿತ್ತು 25,000 ರೂ. ದಂಡ
ಸಿಎಂ ಸಿದ್ದರಾಮಯ್ಯ ಅವರಿಗೆ ಬೆಂಗಳೂರಿನ ಜವಾಬ್ದಾರಿ ವಹಿಸಿಲ್ಲ. ಡಿಸಿಎಂ ಡಿ.ಕೆ.ಶಿವಕುಮಾರ್ ದೇವರ ಮೊರೆ ಹೋಗಿ, ನಗರವನ್ನು ದೇವರಿಗೆ ಅರ್ಪಣೆ ಮಾಡಿದ್ದಾರೆ. ರಾಜಧಾನಿಯನ್ನು ದೇವರೇ ಕಾಪಾಡಬೇಕಿದೆ. ಬೆಂಗಳೂರಿನ ಉಸ್ತುವಾರಿಯನ್ನು ಯಾರಾದರೂ ವಹಿಸಿಕೊಳ್ಳಲಿ. ಆದರೆ ಬೆಂಗಳೂರನ್ನು ಉದ್ಧಾರ ಮಾಡುವವರು, ನಗರದ ಬಗ್ಗೆ ಜ್ಞಾನ ಇರುವವರು ಸಚಿವರಾಗಲಿ ಎಂದು ಟಾಂಗ್ ಕೊಟ್ಟರು. ಇದನ್ನೂ ಓದಿ: ರೋಹಿಣಿ-ರೂಪಾ ಗಲಾಟೆ ಪ್ರಕರಣ; ಸಿಂಧೂರಿಗೆ ರಿಲೀಫ್ ನೀಡಿದ ಹೈಕೋರ್ಟ್
ಬೆಂಗಳೂರು: ಇಷ್ಟು ದಿನ ಬಿಬಿಎಂಪಿ ವ್ಯಾಪ್ತಿಯಲ್ಲಿದ್ದ ಬಿ-ಖಾತಾ (B Khata) ಅಭಿಯಾನ ಈಗ ರಾಜ್ಯಾದ್ಯಂತ ವಿಸ್ತರಣೆ ಆಗಿದೆ. ಬಿ-ಖಾತಾ ನೀಡಲು, ಪಡೆಯಲು 3 ತಿಂಗಳು ಡೆಡ್ ಲೈನ್ ಕೊಟ್ಟಿದ್ದು, One Time Solution ಅಡಿ 3 ತಿಂಗಳ ಒಳಗೆ ಬಿ-ಖಾತಾ ಮಾಡಿಸಿಕೊಳ್ಳಬಬಹುದು ಎಂದು ಸಿಎಂ ಸಿದ್ದರಾಮಯ್ಯ (Siddaramaiah) ಸೂಚಿಸಿದ್ದಾರೆ. ಆದರೆ ಇನ್ನುಮುಂದೆ ಅನಧಿಕೃತ ಬಡಾವಣೆಗಳಿಗೆ ಅನುಮತಿ ಇಲ್ಲ. ಅನಧಿಕೃತ ಬಡಾವಣೆಗಳು ತಲೆ ಎತ್ತಿದರೆ ಮುಲಾಜಿಲ್ಲದೆ ಕ್ರಮ ತೆಗೆದುಕೊಳ್ಳುವುದಾಗಿ ಸಿಎಂ ಸಿದ್ದರಾಮಯ್ಯ ಎಚ್ಚರಿಸಿದ್ದಾರೆ.
11 ಮಹಾ ನಗರಪಾಲಿಕೆಗಳು ಒಳಗೊಂಡಂತೆ 316 ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಬಿ-ಖಾತಾ ನೀಡಲು ಸರ್ಕಾರ ಮುಂದಾಗಿದೆ. ಸ್ವತ್ತಿಗೆ ಹಾಲಿ ಇರುವ ತೆರಿಗೆಗಿಂತ ದುಪ್ಪಟ್ಟು ತೆರಿಗೆ (Tax) ಕೊಟ್ಟು ಬಿ-ಖಾತಾ ಮಾಡಿಸಿಕೊಳ್ಳಬಹುದು. ಸುಮಾರು 40 ಲಕ್ಷ ಆಸ್ತಿಗಳು ಅನಧಿಕೃತವಾಗಿದ್ದು, 4 ಸಾವಿರ ಕೋಟಿ ಆದಾಯ ನಿರೀಕ್ಷೆ ಇದೆ. ಇದನ್ನೂ ಓದಿ: ಕಳಿಂಗ ವಿವಿ ವಿದ್ಯಾರ್ಥಿನಿ ಆತ್ಮಹತ್ಯೆ – ಲಕ್ನೋದಲ್ಲಿ 21 ವರ್ಷದ ಯುವಕನ ಬಂಧಿಸಿದ ಪೊಲೀಸರು
ಅಂದಹಾಗೆ ಇವತ್ತು ಇ- ಖಾತೆ ನೀಡುವ ವಿಚಾರವಾಗಿ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಾಲ್ಕು ಇಲಾಖೆಗಳ ಸಚಿವರ ಜೊತೆ ವೀಡಿಯೋ ಕಾನ್ಫರೆನ್ಸ್ ಸಭೆ ನಡೆಯಿತು. ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳು, ಸ್ಥಳೀಯ ಸಂಸ್ಥೆಗಳ ಆಯುಕ್ತರು ವೀಡಿಯೋ ಕಾನ್ಫರೆನ್ಸ್ನಲ್ಲಿ ಭಾಗವಹಿಸಿದ್ದರು. ಬಿ-ಖಾತಾ ನೀಡುವ ಸಂಬಂಧ ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ ಡೆಡ್ಲೈನ್ ಫಿಕ್ಸ್ ಮಾಡಿದ್ದಾರೆ. ಇದನ್ನೂ ಓದಿ: ಬಿಜೆಪಿ ಹೈಕಮಾಂಡ್ ನೋಟಿಸ್ಗೆ 9 ಪುಟಗಳ ಉತ್ತರ ನೀಡಿದ ಯತ್ನಾಳ್
ಸಿಎಂ ಸಭೆ ಹೈಲೈಟ್ಸ್:
* ರಾಜ್ಯದ ಇನ್ನು ಮುಂದೆ ಅನಧಿಕೃತ ಬಡಾವಣೆಗಳಿಗೆ ರಾಜ್ಯದಲ್ಲಿ ಕಿಂಚಿತ್ತೂ ಅವಕಾಶ ಇಲ್ಲ.
* ಮಧ್ಯವರ್ತಿಗಳಿಗೆ, ಬ್ರೋಕರ್ ಗಳಿಗೆ ತಕ್ಷಣ ಗೇಟ್ ಪಾಸ್.
* 11 ಮಹಾ ನಗರಪಾಲಿಕೆಗಳು ಒಳಗೊಂಡಂತೆ 316 ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಬಿ-ಖಾತಾ ಯೋಜನೆ.
* ಬಡವರು, ಮಧ್ಯಮ ವರ್ಗದವರಿಗೆ ಅನುಕೂಲ ಮಾಡಿಕೊಡಲು One Time Solution ಯೋಜನೆ.
* 3 ತಿಂಗಳಲ್ಲಿ ಎಲ್ಲರಿಗೂ ಬಿ ಖಾತಾ, ದುಪ್ಪಟ್ಟು ತೆರಿಗೆ ಕಟ್ಟಬೇಕು, ಬಳಿಕ ರೆಗ್ಯುಲೇಟ್ ಮಾಡುವುದು.
* ಸೆಪ್ಟೆಂಬರ್ 10, 2024ರ ಒಳಗೆ ನಿರ್ಮಾಣಗೊಂಡಿರುವ ಅನಧಿಕೃತ ಆಸ್ತಿಗಳಿಗೆ ಮಾತ್ರ ಬಿ-ಖಾತಾ ಕೊಡುವ ಸರ್ಕಾರ.
* ಒಟ್ಟಾರೆ 40 ಲಕ್ಷ ಅನಧಿಕೃತ ಆಸ್ತಿಗಳನ್ನ ಗುರುತಿಸಿರುವ ರಾಜ್ಯ ಸರ್ಕಾರ.
* ಕಾವೇರಿ-2.0 ಇ ತಂತ್ರಾಂಶದ ಮೂಲಕವೇ ಇ ಖಾತೆಗೆ ಅರ್ಜಿ ಸಲ್ಲಿಸಿ ಬಿ ಖಾತಾ ಪಡೆಯಬಹುದು.
* ಸರ್ಕಾರದ ಬಿ-ಖಾತಾ ಯೋಜನೆಯಿಂದ 4,000 ಕೋಟಿ ಹೆಚ್ಚುವರಿ ತೆರಿಗೆ ನಿರೀಕ್ಷೆ ಮಾಡಬಹುದು.
ಬೆಂಗಳೂರು: ನಗರದಲ್ಲಿ ನೀರು ವ್ಯರ್ಥ ಮಾಡಿದ್ರೆ ಜಲಮಂಡಳಿ (Water Board) 5,000 ರೂ. ದಂಡ ವಿಧಿಸಲಿದೆ. ಬೇಸಿಗೆಗೆ ಮುನ್ನವೇ ಜಲಮಂಡಳಿ ಎಚ್ಚೆತ್ತುಕೊಂಡಿದೆ. ಕಳೆದ ಬಾರಿಯಂತೆ ಈ ಬಾರಿಯೂ ನೀರು ವ್ಯರ್ಥ ಮಾಡಿದ್ರೆ 5,000 ರೂ. ದಂಡ ವಿಧಿಸೋದಕ್ಕೆ ಮುಂದಾಗಿದೆ. ಈ ಕುರಿತು ಜಲಮಂಡಳಿ ಆದೇಶ ಹೊರಡಿಸಿದೆ.
ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಕಾಯ್ದೆ-1964ರ ಕಲಂ 33 ಮತ್ತು 34ರ ಅನುಸಾರ ಬೆಂಗಳೂರು ನಗರದಲ್ಲಿ ಕುಡಿಯುವ ನೀರನ್ನು ವಾಹನಗಳ ಸ್ವಚ್ಚತೆಗೆ, ಕೈತೋಟಕ್ಕೆ, ಕಟ್ಟಡ ನಿರ್ಮಾಣಕ್ಕೆ, ಮನರಂಜಕವಾಗಿ ಕಾರಂಜಿಯಂತಹ ಆಕರ್ಷಕ ವ್ಯವಸ್ಥೆಗೆ ಹಾಗೂ ಸಿನಿಮಾ ಮಂದಿರ ಮತ್ತು ಮಾಲುಗಳಲ್ಲಿನ ಕುಡಿಯುವ ನೀರಿನ ಹೊರತು ಇನ್ನಿತರೆ ಬಳಕೆಗೆ ನಿಷೇದಿಸಲಾಗಿದೆ. ಇದರ ಜೊತೆಗೆ ರಸ್ತೆ ನಿರ್ಮಾಣ ಮತ್ತು ಸ್ವಚ್ಚತೆಗೆ ಕುಡಿಯುವ ನೀರನ್ನ ಬಳಸಿದ್ರೆ 5 ಸಾವಿರ ದಂಡ ವಿಧಿಸಲಾಗುವುದು ಎಂದು ಎಚ್ಚರಿಸಲಾಗಿದೆ.
– ಫೆ.10ರಿಂದಲೇ ಗ್ರೇಟರ್ ಬೆಂಗಳೂರು ಪ್ರಾಧಿಕಾರ ರಚನೆ ಸಂಬಂಧ ಸಲಹಾ ಸಭೆ
ಬೆಂಗಳೂರು: ಗ್ರೇಟರ್ ಬೆಂಗಳೂರು (Greater Bengaluru) ಆಡಳಿತ ವಿಧೇಯಕ-2024ರಂತೆ ಗ್ರೇಟರ್ ಬೆಂಗಳೂರು ಪ್ರಾಧಿಕಾರ ರಚನೆ ಕುರಿತು ನಗರದಲ್ಲಿ 3 ದಿನಗಳ ಕಾಲ 5 ಕಡೆ ಎಲ್ಲಾ 8 ವಲಯಗಳನ್ನು ಒಳಗೊಂಡಂತೆ ಸಾರ್ವಜನಿಕರು, ಸಂಘ ಸಂಸ್ಥೆಗಳಿಂದ ಸಲಹೆ ಸ್ವೀಕರಿಸುವ ಸಭೆಗಳನ್ನು ಆಯೋಜನೆ ಮಾಡಲಾಗುತ್ತಿದೆ.
ಗ್ರೇಟರ್ ಬೆಂಗಳೂರು ಆಡಳಿತ ವಿಧೇಯಕ 2024ರ ಪರಿಶೀಲನೆ ಮತ್ತು ವರದಿಗೆ ಸಂಬಂಧಿಸಿದಂತೆ ಕರ್ನಾಟಕ ವಿಧಾನ ಮಂಡಲ ಜಂಟಿ ಪರಿಶೀಲನಾ ಸಮಿತಿಯನ್ನು ರಚಿಸಲಾಗಿದ್ದು, ಆ ಸಮಿತಿಗೆ ಶಿವಾಜಿನಗರ ವಿಧಾನಸಭಾ ಕ್ಷೇತ್ರದ ಶಾಸಕರಾದ ರಿಜ್ವಾನ್ ಹರ್ಷದ್ ಅವರನ್ನು ಅಧ್ಯಕ್ಷರನ್ನಾಗಿ ನಿಯೋಜನೆ ಮಾಡಲಾಗಿದೆ. ಇದನ್ನೂ ಓದಿ: ಬೆಂ-ಮೈ ಎಕ್ಸ್ಪ್ರೆಸ್ವೇನಲ್ಲಿ ಹೊತ್ತಿ ಉರಿದ ಬಸ್ – 18 ಪ್ರಯಾಣಿಕರು ಗ್ರೇಟ್ ಎಸ್ಕೇಪ್
ಗ್ರೇಟರ್ ಬೆಂಗಳೂರು ಪ್ರದೇಶದ ಅಭಿವೃದ್ಧಿಯ ಯೋಜನೆ, ಸಮನ್ವಯ ಮತ್ತು ಮೇಲ್ವಿಚಾರಣೆಗಾಗಿ, ಪರಿಣಾಮಕಾರಿಯಾದ, ಸಹಭಾಗಿತ್ವದ ಮತ್ತು ಸ್ಪಂದನಾಶೀಲ ಆಡಳಿತಕ್ಕಾಗಿ, ನಗರಾಡಳಿತದ ಮೂಲಕ ಘಟಕಗಳನ್ನಾಗಿಸುವುದಕ್ಕೆ ಮತ್ತು ಸಮುದಾಯದ ಪಾಲ್ಗೊಳ್ಳುವಿಕೆಯನ್ನು ಸುಗಮಗೊಳಿಸುವುದಕ್ಕೆ ಹಾಗೂ ಸಹಭಾಗಿ, ದಕ್ಷ ಮತ್ತು ನ್ಯಾಯೋಚಿತ ಆಡಳಿತದ ಚೌಕಟ್ಟನ್ನು ಸ್ಥಾಪಿಸುವ ಸಲುವಾಗಿ ಗ್ರೇಟರ್ ಬೆಂಗಳೂರು ಆಡಳಿತ ವಿಧೇಯಕ-2024 ಜಾರಿಗೆ ತರಲಾಗುತ್ತಿದೆ.
ಮುಂದುವರಿದು, ಮೇಲ್ಕಂಡ ವಿಷಯಗಳನ್ನು ಕೂಲಂಕಷವಾಗಿ ಪರಿಶೀಲಿಸುವ ಸಲುವಾಗಿ ಕರ್ನಾಟಕ ವಿಧಾನಮಂಡಲದ ಜಂಟಿ ಪರಿಶೀಲನಾ ಸಮಿತಿ ರಚಿಸಲಾಗಿದ್ದು, ಸದರಿ ಸಮಿತಿಯು ಗ್ರೇಟರ್ ಬೆಂಗಳೂರು ಪ್ರಾಧಿಕಾರ ರಚನೆ ಕುರಿತು ಸಾರ್ವಜನಿಕರು ಹಾಗೂ ಸಂಘ-ಸಂಸ್ಥೆಗಳಿಂದ ಸಲಹೆಗಳನ್ನು ಸ್ವೀಕರಿಸಲಿದ್ದು, ವಲಯವಾರು ಸಭೆಗಳನ್ನು ಆಯೋಜಿಸಲಾಗಿದೆ. ಅದರ ವಿವರ ಈ ಕೆಳಕಂಡತಿದೆ.
ಮಹದೇವಪುರ ವಲಯ:
ಮಹದೇವಪುರ ವಲಯದಲ್ಲಿ 10ನೇ ಫೆಬ್ರವರಿ 2025 ರಂದು ಕೆ.ಆರ್ ಪುರ ಟಿಸಿ ಪಾಳ್ಯದ ಹತ್ತಿರವಿರುವ ಕೇಂಬ್ರಿಡ್ಜ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯಲ್ಲಿ ಮಧ್ಯಾಹ್ನ 03.00 ರಿಂದ ಸಂಜೆ 05.00 ಗಂಟೆಯವರೆಗೆ ಸಭೆಯನ್ನು ಆಯೋಜಿಸಲಾಗಿದೆ.
ದಕ್ಷಿಣ ಹಾಗೂ ಬೊಮ್ಮನಹಳ್ಳಿ ವಲಯ:
ದಕ್ಷಿಣ ಹಾಗೂ ಬೊಮ್ಮನಹಳ್ಳಿ ವಲಯಗಳು ಸೇರಿದಂತೆ 11ನೇ ಫೆಬ್ರವರಿ 2025 ರಂದು ಜೆ.ಪಿ ನಗರ 1ನೇ ಹಂತದಲ್ಲಿ ಬರುವ ಆರ್.ವಿ ಡೆಂಟಲ್ ಕಾಲೇಜಿನಲ್ಲಿ ಬೆಳಿಗ್ಗೆ 11.00 ರಿಂದ 01.00 ಗಂಟೆಯವರೆಗೆ ಸಭೆಯನ್ನು ಆಯೋಜಿಸಲಾಗಿದೆ.
ರಾಜರಾಜೇಶ್ವರಿ ನಗರ ಹಾಗೂ ಪಶ್ಚಿಮ ವಲಯ:
ರಾಜರಾಜೇಶ್ವರಿ ನಗರ ಹಾಗೂ ಪಶ್ಚಿಮ ವಲಯಗಳು ಸೇರಿದಂತೆ 11ನೇ ಫೆಬ್ರವರಿ 2025 ರಂದು ಬೆಂಗಳೂರು ವಿಶ್ವವಿದ್ಯಾನಿಲಯ ಜ್ಞಾನಭಾರತಿ ಕ್ಯಾಂಪಸ್ ನಲ್ಲಿರುವ ಡಾ.ಹೆಚ್ ನರಸಿಂಹತ್ತ ಸಭಾಂಗಣದಲ್ಲಿ ಮಧ್ಯಾಹ್ನ 03.00 ರಿಂದ ಸಂಜೆ 05.00 ಗಂಟೆಯವರೆಗೆ ಸಭೆಯನ್ನು ಆಯೋಜಿಸಲಾಗಿದೆ. ಇದನ್ನೂ ಓದಿ: ಐಶ್ವರ್ಯ ಕೇಸಲ್ಲೀಗ ಪೊಲೀಸರಿಗೆ ಸಿಡಿಆರ್ ಸಂಕಷ್ಟ – ಎಸಿಪಿ ಚಂದನ್ಗೆ ಹೆಗಲಿಗೆ ತನಿಖೆ ಹೊಣೆ
ಯಲಹಂಕ ಹಾಗೂ ದಾಸರಹಳ್ಳಿ ವಲಯ:
ಯಲಹಂಕ ಹಾಗೂ ದಾಸರಹಳ್ಳಿ ವಲಯ ಸೇರಿದಂತೆ 12ನೇ ಫ್ರೆಬ್ರವರಿ 2025 ರಂದು ಯಲಹಂಕ ನ್ಯೂಟೌನ್ ನಲ್ಲಿ ಬರುವ ಡಾ.ಬಿ.ಆರ್ ಅಂಬೇಡ್ಕರ್ ಸಮುದಾಯ ಭವನದಲ್ಲಿ ಬೆಳಿಗ್ಗೆ 11.00 ರಿಂದ ಮಧ್ಯಾಹ್ನ 01.00 ಗಂಟೆಯವರೆಗೆ ಸಭೆಯನ್ನು ಆಯೋಜಿಸಲಾಗಿದೆ.
ಬಿಬಿಎಂಪಿ ವ್ಯಾಪ್ತಿಯಲ್ಲಿ 3 ದಿನಗಳ ಕಾಲ 5 ಕಡೆ ಪಾಲಿಕೆಯ ಎಲ್ಲಾ ಎಂಟು ವಲಯಗಳಿಗೆ ಸಂಬಂಧಿಸಿಂತೆ ಸಭೆ ನಡೆಯಲಿದ್ದು, ಈ ಸಭೆ ಸ್ಥಳೀಯ ನಾಗರೀಕರು, ಸಂಘ ಸಂಸ್ಥೆಗಳು ಹಾಗು ನಿವಾಸಿಗಳ ಕ್ಷೇಮಾಭಿವೃದ್ಧಿ ಸಂಘಗಳು ಹೆಚ್ಚಿನ ಸಮಖ್ಯೆಯಲ್ಲಿ ಆಗಮಿಸಿ ತಮ್ಮ ಅತ್ಯಮೂಲ್ಯವಾದ ಸಲಹೆಗಳನ್ನು ನೀಡಲು ಕೋರಿದೆ.
ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ (Bengaluru) ಹೊಸ ಇಂದಿರಾ ಕ್ಯಾಂಟೀನ್ಗಳ (Indira Canteens) ನಿರ್ಮಾಣಕ್ಕೆ ಆರಂಭದಲ್ಲೇ ವಿಘ್ನ ಎದುರಾಗಿದೆ. 52 ಹೊಸ ಇಂದಿರಾ ಕ್ಯಾಂಟೀನ್ಗಳು ಓಪನ್ ಆಗುವುದೇ ಡೌಟ್ ಎಂಬ ಪ್ರಶ್ನೆ ಎದ್ದಿದೆ.
ಕಳೆದ ವರ್ಷ ಕಾಂಗ್ರೆಸ್ (Congress) ಸರ್ಕಾರ ಬೆಂಗಳೂರಿನಲ್ಲಿ ಹೊಸ ಇಂದಿರಾ ಕ್ಯಾಂಟೀನ್ ನಿರ್ಮಾಣಕ್ಕೆ ಒಪ್ಪಿಗೆ ನೀಡಿತ್ತು. ಶೀಘ್ರದಲ್ಲೇ ಟೆಂಡರ್ ಕರೆದು ನಿರ್ಮಾಣ ಕಾರ್ಯ ಶುರು ಮಾಡುವಂತೆ ಸಚಿವ ಸಂಪುಟ ತೀರ್ಮಾನಿಸಿತ್ತು. ಕಳೆದ ಅಕ್ಟೋಬರ್ ತಿಂಗಳಲ್ಲಿ 52 ಇಂದಿರಾ ಕ್ಯಾಂಟೀನ್ ನಿರ್ಮಾಣಕ್ಕೆ ಬಿಬಿಎಂಪಿ (BBMP) ಟೆಂಡರ್ ಕೂಡ ಕರೆದಿತ್ತು. ಆದರೆ ಬಿಬಿಎಂಪಿ ಕರೆದಿದ್ದ ಟೆಂಡರ್ಗೆ ಯಾವ ಕಂಪನಿಯಾಗಲೀ, ಯಾರೊಬ್ಬರಾಗಲೀ ಭಾಗವಹಿಸಿಲ್ಲ. ಹೀಗಾಗಿ 52 ವಾರ್ಡ್ಗಳಲ್ಲಿ ಹೊಸ ಇಂದಿರಾ ಕ್ಯಾಂಟೀನ್ ನಿರ್ಮಾಣಕ್ಕೆ ಆರಂಭದಲ್ಲೇ ವಿಘ್ನ ಎದುರಾಗಿದೆ
ಇನ್ನೂ ಟೆಂಡರ್ನಲ್ಲಿರುವ ಇರುವ ಟಫ್ ರೂಲ್ಸ್ ನಿರ್ಮಾಣಕ್ಕೆ ಇರುವ ವೆಚ್ಚದ ಸಮಸ್ಯೆಯೇ ಯಾರೊಬ್ಬರು ಭಾಗವಹಿಸದೇ ಇರಲು ಕಾರಣವಾಗಿದೆ. ಜೊತೆಗೆ ಈಗ ಆಗುತ್ತಿರುವ ಇಂದಿರಾ ಕ್ಯಾಂಟೀನ್ಗಳ ಅವ್ಯವಸ್ಥೆ, ಬಾಕಿ ಬಿಲ್ ಸಮಸ್ಯೆಯೇ ಟೆಂಡರ್ನಲ್ಲಿ ಭಾಗಿವಹಿಸದೇ ಇರೋದಕ್ಕೆ ಕಾರಣ ಅಂತಾ ಹೇಳಲಾಗುತ್ತಿದೆ. ಟೆಂಡರ್ನಲ್ಲಿರೋ ಕಠಿಣ ನಿಯಮಗಳ ರಿಲ್ಯಾಕ್ಸೇಷನ್ಗೆ ಬಿಬಿಎಂಪಿ ಆರೋಗ್ಯ ವಿಭಾಗದ ವಿಶೇಷ ಆಯುಕ್ತರಾದ ವಿಕಾಸ್ ಸುರಳ್ಕರ್ ಮುಖ್ಯ ಆಯುಕ್ತರ ಮುಂದೆ ಪ್ರಸ್ತಾವನೆ ಇಟ್ಟಿದ್ದಾರೆ. ಮುಖ್ಯ ಆಯುಕ್ತರಿಂದ ಟೆಂಡರ್ ರಿಲ್ಯಾಕ್ಸೇಷನ್ ಸಿಕ್ಕಿದರೆ ಮತ್ತೆ ಟೆಂಡರ್ ಕರೆದು ಮುಂದಿನ ಎರಡು ವರ್ಷದ ಒಳಗಡೆ ಇಂದಿರಾ ಕ್ಯಾಂಟಿನ್ ನಿರ್ಮಾಣ ಮಾಡಲಿದ್ದಾರೆ.
ಒಟ್ಟಾರೆ ಈ ವರ್ಷದಲ್ಲೇ 52 ಇಂದಿರಾ ಕ್ಯಾಂಟೀನ್ಗಳ ನಿರ್ಮಾಣ ಕಾರ್ಯ ಮುಕ್ತಾಯ ಆಗಬೇಕಿತ್ತು. ಆದರೆ ಇದಾಗದೇ ಇರುವುದು ಸಿದ್ದರಾಮಯ್ಯ ಅವರ ಕನಸಿನ ಮಹತ್ವಾಕಾಂಕ್ಷೆಯ ಯೋಜನೆಗೆ ಹಿನ್ನಡೆಯಾಗಿದೆ.
– ನಿದ್ದೆ ಮಂಪರಿನಲ್ಲಿದ್ದ ಅಧಿಕಾರಿಗಳಿಗೆ `ಲೋಕಾ’ ರೇಡ್ ಬಿಸಿ
ಬೆಂಗಳೂರು/ಬೆಳಗಾವಿ/ಚಿತ್ರದುರ್ಗ: ಆದಾಯಕ್ಕಿಂತ ಹೆಚ್ಚು ಆಸ್ತಿ ಗಳಿಸಿದ ಆರೋಪದ ಹಿನ್ನೆಲೆ ಶುಕ್ರವಾರ (ಇಂದು) ಬೆಳ್ಳಂಬೆಳಗ್ಗೆ ಲೋಕಾಯುಕ್ತ ಅಧಿಕಾರಿಗಳು ಭ್ರಷ್ಟರ ಮನೆ ಬಾಗಿಲು ಬಡಿದಿದ್ದರು. ಇನ್ನೂ ನಿದ್ದೆ ಮಂಪರಿನಲ್ಲಿದ್ದ ಭ್ರಷ್ಟ ಕುಳಗಳಿಗೆ ಶಾಕ್ ಕೊಟ್ಟಿದ್ದರು. ಬೆಂಗಳೂರು ಸೇರಿದಂತೆ ರಾಜ್ಯದ 7 ಕಡೆಗಳಲ್ಲಿ ಲೋಕಾಯುಕ್ತ ದಾಳಿ (Lokayukta Raid) ನಡೆಸಲಾಯ್ತು. ಬೆಂಗಳೂರಿನಲ್ಲಿ (Bengaluru) ಎರಡು ಕಡೆ, ಬೆಳಗಾವಿಯಲ್ಲಿ (Belagavi) ಎರಡು ಕಡೆ, ಚಿತ್ರದುರ್ಗ, ರಾಯಚೂರು ಮತ್ತು ಬಾಗಕೋಟೆಯಲ್ಲಿ ತಲಾ ಒಂದು ಕಡೆಗಳಲ್ಲಿ ಲೋಕಾಯುಕ್ತ ದಾಳಿ ನಡೆಸಿ ಪರಿಶೀಲನೆಯಲ್ಲಿ ತೊಡಗಿದೆ. ಒಟ್ಟು 7 ಅಧಿಕಾರಿಗಳ ಮನೆ, ಕಚೇರಿ ಮೇಲೆ ದಾಳಿ ನಡೆಸಿ ಕೆಲ ದಾಖಲೆಗಳನ್ನು ವಶಕ್ಕೆ ಪಡೆಯಲಾಗಿದೆ.
ಎಲ್ಲೆಲ್ಲಿ ದಾಳಿ? ಮಾಧವರಾವ್, ಬಿಬಿಎಂಪಿ ಎಇಇ ಸ್ಥಳ – ಬೆಂಗಳೂರು
ಬೆಂಗಳೂರಿನಲ್ಲಿ ಬಿಬಿಎಂಪಿ ಹೆಬ್ಬಾಳ ವ್ಯಾಪ್ತಿಯ ಇಂಜಿನಿಯರಿಂಗ್ ವಿಭಾಗದ ಎಇಇ ಮಾಧವ ರಾವ್ಗೆ ಲೋಕಾ ಬಿಸಿ ತಟ್ಟಿದೆ. ವಿದ್ಯಾರಣ್ಯಪುರಂನ ಎಂಎಸ್ ಪಾಳ್ಯದಲ್ಲಿರುವ ಮಾಧವ್ ರಾವ್ರ ಐಷಾರಾಮಿ ಮನೆ ನಿವಾಸದ ಮೇಲೆ ದಾಳಿ ನಡೆದಿದ್ದು.. ಅಧಿಕಾರಿಗಳು ಪರಿಶೀಲನೆಯಲ್ಲಿ ತೊಡಗಿದ್ದಾರೆ. ಇನ್ನು ಮಾಧವ ರಾವ್ ನಿವಾಸದ ಮೇಲಿನ ದಾಳಿ ಬಗ್ಗೆ ಲೋಕಾಯುಕ್ತ ಎಸ್ಪಿ ವಂಶಿಕೃಷ್ಣ ಕೆಲವೊಂದು ಮಾಹಿತಿ ತಿಳಿಸಿದ್ದಾರೆ. ಬೆಳಗ್ಗೆ 6 ಗಂಟೆಯಿಂದಲೇ ಅಧಿಕಾರಿಗಳು ದಾಖಲೆಗಳ ಪರಿಶೀಲನೆಯಲ್ಲಿ ತೊಡಗಿದ್ದಾರೆ. ಮಾಧವ ರಾವ್ ಮೇಲೆ ಆದಾಯಕ್ಕಿಂತ ಹೆಚ್ಚಿನ ಆಸ್ತಿ ಗಳಿಕೆ ಆರೋಪ ಇತ್ತು. ಅಲ್ಲದೇ ಬೀದರ್ ವರ್ಕ್ ಆರ್ಡರ್ ಸಂಬಂಧ ಕೆಲವೊಂದು ದಾಖಲೆಗಳು ಸಿಕ್ಕಿವೆ. ಸಂಜೆ ವೇಳೆ ಎಲ್ಲ ದಾಖಲೆಗಳ ಖಚಿತ ಮಾಹಿತಿ ಸಿಗಲಿದೆ ಎಂದ್ರು.
ರಮೇಶ್, ಜಿ.ಪಂ ಉಪ ಕಾರ್ಯದರ್ಶಿ ಸ್ಥಳ – ಬೆಂಗಳೂರು
ಇನ್ನೂ ಬೆಂಗಳೂರಿನಲ್ಲಿ ಮತ್ತೊಬ್ಬ ಭ್ರಷ್ಟ ಅಧಿಕಾರಿ ಮೇಲೆ ಲೋಕಾ ದಾಳಿ ನಡೆದಿದೆ. ನಾಗರಬಾವಿಯಲ್ಲಿರುವ ಬೆಂಗಳೂರು ಗ್ರಾಮಾಂತರ ಅಧಿಕಾರಿ ರಮೇಶ್ ನಿವಾಸದ ಮೇಲಿನ ದಾಳಿ ಬಗ್ಗೆ ಲೋಕಾಯುಕ್ತ ಎಸ್ಪಿ ವಂಶಿಕೃಷ್ಣ ಮಾಹಿತಿ ಪಡೆದುಕೊಂಡ್ರು. ಬಳಿಕ ಪ್ರತಿಕ್ರಿಯಿಸಿದ ಎಸ್ಪಿ ವಂಶಿಕೃಷ್ಣ, ಟಿಕೆ ರಮೇಶ್ಗೆ ಸಂಬಂಧಿಸಿದ 4 ಕಡೆ ದಾಳಿಯಾಗಿದೆ. ಹುಲಿಯೂರು ದುರ್ಗ ತೋಟದ ಮನೆ, ಕಚೇರಿ, ಮನೆ, ಸ್ಕೂಲ್ನಲ್ಲೂ ಪರಿಶೀಲನೆ ಮಾಡಲಾಗ್ತಿದೆ. ಆದಾಯಕ್ಕಿಂತ ಜಾಸ್ತಿ ಹಣ ಸಂಪಾದನೆ ಸಂಬಂಧ ಎಫ್ಐಆರ್ ದಾಖಲಿಸಿ ಶೋಧನೆ ಮಾಡಲಾಗುತ್ತಿದೆ. ಪ್ರತಿಯೊಂದು ಜಾಗದಲ್ಲೂ ಒಂದೊಂದು ಟೀಂ ಪರಿಶೀಲನೆ ಮಾಡ್ತಿದ್ದು, ಒಟ್ಟು 9 ತಂಡಗಳು ಬೇರೆ ಬೇರೆ ಸ್ಥಳದಲ್ಲಿ ಶೋಧ ನಡೆಸುತ್ತಿದೆ ಎಂದ್ರು.
ಸಚಿನ್ ಮಂಡೇದ್, ಬೆಳಗಾವಿ ಪ್ರಭಾರಿ ಸಬ್ ರಿಜಿಸ್ಟಾçರ್ ಸ್ಥಳ – ಬೆಳಗಾವಿ
ಇನ್ನೂ ಬೆಳಗಾವಿಯಲ್ಲಿ ಇಬ್ಬರು ಅಧಿಕಾರಿಗಳ ಮನೆ ಮೇಲೆ ಲೋಕಾ ದಾಳಿ ನಡೆದಿದೆ. ಬೆಳಗಾವಿ ಪ್ರಭಾರಿ ಸಬ್ ರಿಜಿಸ್ಟ್ರಾರ್ ಸಚಿನ್ ಮಂಡೇದ್ಗೆ ಸೇರಿದ ಬೆಳಗಾವಿ ನಗರದ ಅನಗೋಳದಲ್ಲಿರುವ ನಿವಾಸ, ಕಚೇರಿ ಸೇರಿ ಒಟ್ಟು ಮೂರು ಕಡೆಗಳಲ್ಲಿ ಲೋಕಾಯುಕ್ತ ಅಧಿಕಾರಿಗಳು ಪರಿಶೀಲನೆಯಲ್ಲಿ ತೊಡಗಿದ್ದಾರೆ.
ಸಂಜಯ್, ಹಾರೂಗೇರಿ ಪಶುವೈದ್ಯ ಸ್ಥಳ – ಬೆಳಗಾವಿ
ಮತ್ತೊಂದ್ಕಡೆ ಹಾರೂಗೇರಿ ಪಶುವೈದ್ಯ ಸಂಜಯ್ಗೆ ಸೇರಿದ ಮನೆ ಮೇಲೂ ದಾಳಿ ನಡೆಸಲಾಗಿದೆ. ಅದಾಯಕ್ಕಿಂತ ಹೆಚ್ಚು ಆಸ್ತಿಗಳಿಕೆ ಹಿನ್ನೆಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದು.. ಅಗತ್ಯ ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ.
ಶಶಿಧರ್, ಬಿಸಿಎಂ ವಿಸ್ತರಣಾಧಿಕಾರಿ ಸ್ಥಳ – ಚಿತ್ರದುರ್ಗ
ಇನ್ನು ಚಿತ್ರದುರ್ಗದ ಬಿಸಿಎಂ ಇಲಾಖೆ ವ್ಯವಸ್ಥಾಪಕ ಶಶಿಧರ್ ಮನೆ ಮೇಲೆ ಲೋಕಾಯಕ್ತ ದಿಢೀರ್ ದಾಳಿ ನಡೆಸಿದ್ದಾರೆ. ಅಪಾರ ಆಸ್ತಿ ಗಳಿಕೆ ಮತ್ತು ಲಂಚದ ಆರೋಪ ಕೇಳಿ ಬಂದ ಹಿನ್ನೆಲೆ ಹೊಳಲ್ಕೆರೆ ತಾಲ್ಲೂಕಿನ ಕಡ್ಲೆಪ್ಪನಹಟ್ಟಿ ಗ್ರಾಮದಲ್ಲಿನ ಶಶಿಧರ್ ನಿವಾಸದ ಮೇಲೆ ದಾಳಿ ನಡೆಸಲಾಗಿದೆ. ಚಿತ್ರದುರ್ಗ ಲೋಕಾಯುಕ್ತ ಎಸ್ಪಿ ವಾಸುದೇವರಾಮ್ ಹಾಗು ಡಿವೈಎಸ್ಪಿ ಮೃತ್ಯುಂಜಯ ನೇತೃತ್ವದಲ್ಲಿ ಏಕಕಾಲದಲ್ಲಿ ನಾಲ್ಕು ಕಡೆ ರೇಡ್ ಮಾಡಲಾಗಿದೆ. ಈ ವೇಳೆ ಕಡ್ಲೆಪ್ಪನಹಟ್ಟಿ ಗ್ರಾಮದಲ್ಲಿರುವ ತೋಟದ ಮನೆ, ಹೊಸದುರ್ಗ ಪಟ್ಟಣದಲ್ಲಿನ ಸಹೋದರನಿಗೆ ಸೇರಿದ ಎಸ್ ಆರ್ ಎಂಟರ್ಪ್ರೈಸಸ್ ಮಳಿಗೆ, ಹೊಸದುರ್ಗದ ವಿದ್ಯಾನಗರದಲ್ಲಿರುವ ಬಾಡಿಗೆ ಮನೆ ಹಾಗು ಶಶಿಧರ್ ಕರ್ತವ್ಯ ನಿರ್ವಹಿಸುವ ಬಿಸಿಎಂ ಕಚೇರಿಯ ಕೊಠಡಿ ಮೇಲೂ ಲೋಕಾಯಕ್ತರು ದಾಳಿ ನಡೆಸಿ ಶೋಧ ಕಾರ್ಯ ಮುಂದುವರೆಸಿದ್ದಾರೆ.
ಹಿರೇಮಠ್, ಹೂಲಗೇರಿ ಗ್ರಾ.ಪಂ ಪಿಡಿಓ ಸ್ಥಳ – ಬಾಗಲಕೋಟೆ
ಅಕ್ರಮ ಆಸ್ತಿ ಗಳಿಕೆ ದೂರು ಹಿನ್ನೆಲೆ ಹೂಲಗೇರಿ ಗ್ರಾಪಂ ಪಿಡಿಓ ಹಿರೇಮಠ್ಗೆ ಲೋಕಾ ಬಿಸಿ ಮುಟ್ಟಿಸಿದೆ. ಬಾಗಲಕೋಟೆಯ ವಿದ್ಯಾಗಿರಿಯ 22ನೇ ಕ್ರಾಸ್ನಲ್ಲಿರುವ ಮನೆ ಮೇಲೆ ಲೋಕಾಯುಕ್ತ ಡಿವೈಎಸ್ಪಿ ಸಿದ್ದೇಶ್ ನೇತೃತ್ವದಲ್ಲಿ ದಾಳಿ ಮಾಡಲಾಗಿದೆ. ಏಕಕಾಲಕ್ಕೆ ಮೂರು ಕಡೆ ದಾಳಿ ನಡೆಸಿದ್ದು.. ದಾಖಲೆಗಳ ಪರಿಶೀಲನೆಯಲ್ಲಿ ಅಧಿಕಾರಿಗಳು ತೊಡಗಿದ್ದಾರೆ.
ನರಸಿಂಗ್ರಾವ್ ಗುಜ್ಜರ್, ಜಿ.ಪಂ ಲೆಕ್ಕಪತ್ರ ಸಹಾಯಕ ಅಧಿಕಾರಿ ಸ್ಥಳ – ರಾಯಚೂರು
ರಾಯಚೂರು ಜಿಲ್ಲಾ ಪಂಚಾಯ್ತಿ ಲೆಕ್ಕಪತ್ರ ಸಹಾಯಕ ಅಧಿಕಾರಿ ನರಸಿಂಗ್ ರಾವ್ ಗುಜ್ಜರ್ ಮನೆ ಹಾಗೂ ಜಿಲ್ಲಾ ಪಂಚಾಯ್ತಿ ಕಚೇರಿ ಮೇಲೆ ದಾಳಿ ಮಾಡಲಾಗಿದೆ. ರಾಯಚೂರು ನಗರದ ದೇವರ ಕಾಲೋನಿಯಲ್ಲಿನ ಮನೆ ಮೇಲೆ ರಾಯಚೂರು ಹಾಗೂ ಕೊಪ್ಪಳ ಲೋಕಾಯುಕ್ತ ಅಧಿಕಾರಿಗಳ ತಂಡದಿಂದ ರೇಡ್ ನಡೆದಿದ್ದು.. ದಾಖಲೆಗಳ ಪರಿಶೀಲನೆ ನಡೆದಿದೆ.
– ವ್ಯಾಪಾರ ಪರವಾನಗಿ ನವೀಕರಣಕ್ಕೆ ಫೆ.28 ಕೊನೆಯ ದಿನ
– 5 ವರ್ಷಗಳ ಅವಧಿಗೆ ನವೀಕರಣ
ಬೆಂಗಳೂರು: 40 ಅಡಿಗಿಂತ ಕಡಿಮೆ ಅಗಲವಿರುವ ರಸ್ತೆಗಳನ್ನು ಹೊಂದಿರುವ ವಸತಿ ಪ್ರದೇಶಗಳಲ್ಲಿರುವ ಅಂಗಡಿಗಳು ಮತ್ತು ವ್ಯಾಪಾರ ಸಂಸ್ಥೆಗಳ (2015 ರ ನಂತರ ತೆರೆದ ಅಂಗಡಿಗಳು) ವ್ಯಾಪಾರ ಪರವಾನಗಿಗಳನ್ನು ಇನ್ನು ಮುಂದೆ ನವೀಕರಿಸಲಾಗುವುದಿಲ್ಲ ಎಂದು ಬಿಬಿಎಂಪಿ (BBMP) ತನ್ನ ಮಾರ್ಗಸೂಚಿಯಲ್ಲಿ ತಿಳಿಸಿದೆ.
ಫೆ.28ರ ಒಳಗಡೆ 2025-26ನೇ ಹಣಕಾಸು ವರ್ಷದ ವ್ಯಾಪಾರ ಪರವಾನಗಿಗಳ ನವೀಕರಣ ಮಾಡಬೇಕೆಂದು ಬಿಬಿಎಂಪಿ ಸೂಚಿಸಿದೆ. ಉದ್ದಿಮೆದಾರರ ಅನುಕೂಲಕ್ಕೆ ತಕ್ಕಂತೆ 1 ರಿಂದ 5 ಆರ್ಥಿಕ ವರ್ಷಗಳ ಅವಧಿಗೆ ನವೀಕರಣ ಮಾಡಬಹುದಾಗಿದೆ.
ಕಳೆದ ಸಾಲಿನಂತೆ ಉದ್ದಿಮೆ ಪರವಾನಿಗೆ ಶುಲ್ಕವನ್ನು ಆನ್ಲೈನ್ ಮುಖಾಂತರ ಮಾಡಬೇಕು. ಫೆ.1 ರಿಂದ ಫೆ. 28ರ ವರೆಗೆ ದಂಡವಿಲ್ಲದೇ ಪರವಾನಿಗೆ ಶುಲ್ಕವನ್ನು ಪಾವತಿಸಬಹುದು.
ದಂಡ ಎಷ್ಟು?
ಫೆ.28 ಗಡವು ಮುಗಿದ ಬಳಿಕ ದಂಡ ವಿಧಿಸಲಾಗುತ್ತದೆ. ಮಾರ್ಚ್ 1 ರಿಂದ 31ರವರೆಗೆ ಪರವಾನಿಗೆ ನವೀಕರಣ ಶುಲ್ಕದ 25% ರಷ್ಟು ದಂಡ ಮೊತ್ತದೊಂದಿಗೆ ಪಾವತಿಸಿಕೊಳ್ಳಬೇಕಾಗುತ್ತದೆ.
ಏಪ್ರಿಲ್ 1 ರಿಂದ ಪರವಾನಿಗೆ ಶುಲ್ಕದ 100% ರಷ್ಟು ದಂಡದ ಮೊತ್ತದೊಂದಿಗೆ ಪರವಾನಿಗೆ ಶುಲ್ಕವನ್ನು ಪಾವತಿಸಿಕೊಳ್ಳಬೇಕಿರುತ್ತದೆ.