Tag: BC Patel

  • ಕಾಂಗ್ರೆಸ್ ಅಗ್ನಿಪಥವನ್ನು ರಾಜಕೀಯಮಯ ಮಾಡುತ್ತಿದೆ: ಬಿ.ಸಿ.ಪಾಟೀಲ್

    ಕಾಂಗ್ರೆಸ್ ಅಗ್ನಿಪಥವನ್ನು ರಾಜಕೀಯಮಯ ಮಾಡುತ್ತಿದೆ: ಬಿ.ಸಿ.ಪಾಟೀಲ್

    ಹಾವೇರಿ: ಕೊರೊನಾ ಇದ್ದರೂ ಈಗ ಸರ್ಕಾರ ಎಲ್ಲೂ ಕೂಡ ಕಾರ್ಯಕ್ರಮಗಳನ್ನು ನಿಷೇಧ ಮಾಡಿಲ್ಲ. ಕಾರ್ಯಕ್ರಮಗಳು ನಡೆಯುತ್ತಿವೆ. ಕಾಂಗ್ರೆಸ್‍ನವರು ಬಿಜೆಪಿ ಕಾರ್ಯಕ್ರಮಗಳನ್ನು, ಅಭಿವೃದ್ಧಿ ಕಾರ್ಯಗಳನ್ನು ಸಹಿಸಲಾರದವರು. ಹೀಗಾಗಿ ಪ್ರತಿದಿನಾ ಏನಾದರೂ ಹೇಳಿತ್ತಾರೆ ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ್ ಕಾಂಗ್ರೆಸ್ ವಿರುದ್ಧ ಕಿಡಿಕಾರಿದ್ದಾರೆ.

    ಹಾವೇರಿ ತಾಲೂಕಿನ ನೆಗಳೂರು ಗ್ರಾಮದಲ್ಲಿ ಮಾತನಾಡಿದ ಅವರು, ಮೈಸೂರಿನಲ್ಲಿ ಕಾಲೇಜುಗಳನ್ನು ಬಂದ್ ಮಾಡಿದ್ದಕ್ಕೆ ಕೆಪಿಸಿಸಿ ಅಧ್ಯಕ್ಷ ಡಿಕೆಶಿ ಆಕ್ಷೇಪ ವ್ಯಕ್ತಪಡಿಸಿರುವ ಹೇಳಿಕೆ ತಿರಗೇಟು ನೀಡಿದ್ದಾರೆ. ಆ ರಸ್ತೆಗಳಲ್ಲಿ ಸಂಪೂರ್ಣ ಸಂಚಾರ ಬಂದ್ ಮಾಡಿರುತ್ತೇವೆ. ಸಂಚಾರ ಬಂದ್ ಇದ್ದಾಗ ಯಾರೂ ಓಡಾಡಲು ಆಗುವುದಿಲ್ಲ. ಕಾಲೇಜು ಇದ್ದರೂ ಅಷ್ಟೆ, ಇರದಿದ್ದರೂ ಅಷ್ಟೆ. ಮುಂಜಾಗ್ರತಾ ಕ್ರಮವಾಗಿ ಆ ವ್ಯವಸ್ಥೆ ಮಾಡಿದ್ದಾರೆ. ಯಡಿಯೂರಪ್ಪ ಜೊತೆ ಮಾತ್ರ ಹೆಚ್ಚು ಮಾತನಾಡಿದ ಮೋದಿ

    ಸಿದ್ದರಾಮಯ್ಯನವರು ಬೆಳಗ್ಗೆಯಿಂದ ಸಂಜೆವರೆಗೆ ಟಿವಿಯಲ್ಲಿ ಕಾಣಿಸಿಕೊಳ್ಳಬೇಕು ಅಂತಾ ಏನೋ ಹೇಳಿಕೊಂಡು ಹೋಗುತ್ತಾರೆ. ಅವಕ್ಕೆಲ್ಲ ಉತ್ತರ ಕೊಡಬೇಕಾ? ಅಗ್ನಿಪಥವನ್ನು ರಾಜಕೀಯಮಯ ಮಾಡಲಾಗುತ್ತಿದೆ. ಯುವಕರಿಗೆ ನಾಲ್ಕು ವರ್ಷದ ನಂತರ ಇಪ್ಪತ್ತು ಮೂರು ಲಕ್ಷ ರೂಪಾಯಿ ಸಿಗುತ್ತದೆ. ಯುವಶಕ್ತಿಯನ್ನು ದೇಶದ ರಕ್ಷಣೆಗಾಗಿ ಬಳಸಿಕೊಂಡರೆ ತಪ್ಪೇನು? ಇದು ಉತ್ತಮವಾದ ಕೆಲಸ. ಇದನ್ನು ಸಹಿಸಲಾರದೇ ಕಾಂಗ್ರೆಸ್‍ನವರು ಈ ಬಗ್ಗೆ ಅಪಪ್ರಚಾರ ಮಾಡುತ್ತಿದ್ದಾರೆ.

    ದೇಶ ಕಾಯಬೇಕು, ದೇಶ ರಕ್ಷಣೆ ಮಾಡಬೇಕು. ಮಿಲಿಟರಿಗೆ ಸೇರಬೇಕು ಎನ್ನುವುದು ಯುವಕರ ಉದ್ದೇಶ. ದೇಶ ಕಾಯಬೇಕು ಎಂದು ಹೇಳುವವರು ಯಾರಾದರೂ ಬಸ್ಸಿಗೆ, ಟ್ರೈನ್ ಗೆ ಬೆಂಕಿ ಹಚ್ಚುತ್ತಾರಾ? ಇದೆಲ್ಲ ದುರುದ್ದೇಶದಿಂದ ಕಾಂಗ್ರೆಸ್ ಪಿತೂರಿಯಿಂದ ಈ ಕೆಲಸ ನಡೆಯುತ್ತಿದೆ. ನಾವು ರಿಯಾಯಿತಿ ದರದಲ್ಲಿ ಪ್ರಮಾಣೀಕೃತ ಬಿತ್ತನೆ ಬೀಜಗಳನ್ನು ಕೊಡುತ್ತಿದ್ದೇವೆ. ಪ್ರಮಾಣೀಕೃತವಲ್ಲದ ಬಿತ್ತನೆ ಬೀಜಗಳಿಗೆ ಗ್ಯಾರಂಟಿ ಇರುವುದಿಲ್ಲ. ಹೀಗಾಗಿ ರೈತರು ಸಂಕಷ್ಟಕ್ಕೆ ಸಿಲುಕುತ್ತಾರೆ. ರೈತರು ಪ್ರಮಾಣೀಕೃತ ಬಿತ್ತನೆ ಬೀಜವನ್ನು ಬಳಕೆ ಮಾಡಬೇಕು ಎಂದು ಹೇಳಿದ್ದಾರೆ.

    Live Tv

  • ಸಿದ್ದರಾಮಯ್ಯ ಸಿಎಂ ಆದ್ರೆ ತಾನೇ ಕೊಟ್ಟ ಭರವಸೆ ಈಡೇರಿಸುವುದು: ಬಿ.ಸಿ.ಪಾಟೀಲ್

    ಸಿದ್ದರಾಮಯ್ಯ ಸಿಎಂ ಆದ್ರೆ ತಾನೇ ಕೊಟ್ಟ ಭರವಸೆ ಈಡೇರಿಸುವುದು: ಬಿ.ಸಿ.ಪಾಟೀಲ್

    ಮೈಸೂರು: ಸಿದ್ದರಾಮಯ್ಯ ಅವರು ಸಿಎಂ ಆದ್ರೆ ತಾನೇ ಅವರು ಕೊಟ್ಟ ಭರವಸೆಯನ್ನು ಈಡೇರಿಸುವುದು ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ್ ವಿಪಕ್ಷ ನಾಯಕರಿಗೆ ಟಾಂಗ್ ಕೊಟ್ಟರು.

    ನಾನು ಸಿಎಂ ಆದರೆ ದಲಿತರ ಸಾಲ ಮನ್ನಾ ಮಾಡುತ್ತೇನೆ ಎಂಬ ಸಿದ್ದರಾಮಯ್ಯ ಹೇಳಿಕೆಗೆ ಪ್ರತಿಕ್ರಿಯೆ ಕೊಟ್ಟ ಅವರು, ಸಿದ್ದರಾಮಯ್ಯ ಅವರು ಸಿಎಂ ಆದರೆ ತಾನೇ, ಅವರು ಕೊಡುವ ಭರವಸೆ ಈಡೇರಿಸುವುದು. ಕಾಂಗ್ರೆಸ್‍ನಲ್ಲಿ ಕೂಸು ಹುಟ್ಟುವ ಮುಂಚೆ ಕುಲಾಯಿ ಹೊಲಿಸಲಾಗುತ್ತಿದೆ. ಬಿಜೆಪಿ ಮುಂದಿನ ಭಾರಿಯೂ ಅಧಿಕಾರಕ್ಕೆ ಬರುವುದು ನಿಶ್ಚಿತ. ಸಿದ್ದರಾಮಯ್ಯ ಅವರಿಗೆ ಬಿಜೆಪಿ ಬಗ್ಗೆ ಹೇಳಲು ಏನೂ ಇಲ್ಲ. ನಮ್ಮ ಸರ್ಕಾರದಿಂದ ಸಿದ್ದರಾಮಯ್ಯಗೆ ಪ್ರಯೋಜನವಾಗುತ್ತಿಲ್ಲ. ಜನರಿಗೆ ಪ್ರಯೋಜನ ಆಗುತ್ತಿದೆ ಎಂದು ವ್ಯಂಗ್ಯವಾಡಿದರು.

    siddaramaiah

    ರಾಜ್ಯದಲ್ಲಿ ರಸಗೊಬ್ಬರ ಕೊರತೆ ಇಲ್ಲ. ರಸಗೊಬ್ಬರವನ್ನು ಸಬ್ಸಿಡಿ ದರದಲ್ಲಿ ಮಾರುತ್ತಿದ್ದೇವೆ. ಕೃತಕ ಅಭಾವ ಸೃಷ್ಟಿಸಿದರೆ ಅಂತವರ ಮೇಲೆ ಕಠಿಣ ಕ್ರಮ ತೆಗೆದುಕೊಳ್ಳಲಾಗುತ್ತೆ. ಕಾಳಸಂತೆಕೋರರ ಪತ್ತೆಗೆ ಸ್ಕ್ವಾಡ್ ರಚಿಸಲಾಗಿದೆ. ಮಳೆಹಾನಿ ಬಗ್ಗೆ ವರದಿ ನೀಡುವಂತೆ ಅಧಿಕಾರಿಗಳಿಗೆ ಸೂಚಿಸಿದ್ದೇನೆ ಎಂದು ತಿಳಿಸಿದರು. ಇದನ್ನೂ ಓದಿ: ಜನಸಾಮಾನ್ಯರಿಗೆ ಮತ್ತೆ ಬೆಲೆ ಏರಿಕೆ ಶಾಕ್ – 1,000 ರೂ. ದಾಟಿದ LPG ಸಿಲಿಂಡರ್ ದರ

    ವರದಿಗಳನ್ನು ಮೊದಲು ಪರಿಶೀಲಿಸುತ್ತೇವೆ. ನಂತರ ಅದರ ಆಧಾರದ ಮೇಲೆ ಪರಿಹಾರ ನೀಡಲಾಗುತ್ತೆ. ಮಳೆಹಾನಿಯಾದ ಪ್ರದೇಶಗಳಿಗೆ ಅಧಿಕಾರಿಗಳು ಭೇಟಿ ನೀಡುವಂತೆ ಸೂಚನೆ ನೀಡಿದ್ದೇನೆ ಎಂದರು.

  • ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಕ್ಕೆ ಬಿ.ಸಿ.ಪಾಟೀಲ್ ಕ್ಷಮೆ

    ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಕ್ಕೆ ಬಿ.ಸಿ.ಪಾಟೀಲ್ ಕ್ಷಮೆ

    ಹಾವೇರಿ: ಜಿಲ್ಲೆಯ ಹಿರೇಕೆರೂರಿನ ಕಾಂಗ್ರೆಸ್ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಕ್ಕೆ ಬಿ.ಸಿ.ಪಾಟೀಲ್ ಕ್ಷೇತ್ರದ ಕಾರ್ಯಕರ್ತರಲ್ಲಿ ವಾಟ್ಸಪ್ ಗ್ರೂಪ್ ಮೂಲಕ ಕ್ಷಮೆ ಕೇಳಿದ್ದಾರೆ.

    ಬಿ.ಸಿ.ಪಾಟೀಲ್ ಅವರು ಮಂತ್ರಿ ಸ್ಥಾನ ಕೊಡದೇ ಪಕ್ಷ ತಾಲೂಕಿಗೆ ಅನ್ಯಾಯ ಮಾಡಿದೆ ಎಂಬ ಸಂದೇಶವನ್ನ ಹಾಕಿದ್ದು, ವಾಟ್ಸಪ್ ಗ್ರೂಪ್ ಮೂಲಕ ಕಾರ್ಯಕರ್ತರಲ್ಲಿ ಕ್ಷಮೆ ಕೇಳಿದ್ದಾರೆ. ನಿಮ್ಮ ಸಲಹೆ ಸೂಚನೆ ಪಡೆದು ಮುಂದಿನ ನಿರ್ಧಾರ ತೆಗೆದುಕೊಳ್ಳತ್ತೇನೆ ಎಂಬ ಸಂದೇಶವನ್ನ ತಾಲೂಕಿನ ಕಾರ್ಯಕರ್ತರಿಗೆ ರವಾನಿಸಿದ್ದಾರೆ.

    ಸಂದೇಶ:
    ಆತ್ಮೀಯ ಬಂಧುಗಳೇ ರಾಜಕೀಯ ಗೊತ್ತಿಲ್ಲದ ನನಗೆ ಆಕಸ್ಮಿಕವಾಗಿ ರಾಜಕಾರಣಕ್ಕೆ ಬಂದಾಗ ಮೂರು ಬಾರಿ ನನ್ನನ್ನು ಶಾಸಕನನ್ನಾಗಿ ಆಯ್ಕೆ ಮಾಡಿದ್ದೀರಿ. ಇದುವರೆಗೂ ನಾನು ನನ್ನ ಕೈಲಾದ ಅಭಿವೃದ್ಧಿ ಕೆಲಸವನ್ನು ಸರ್ಕಾರದಿಂದ ಮಾಡಿ ತಾಲೂಕು ಅಭಿವೃದ್ಧಿಯ ಕಡೆಗೆ ದಾಪುಗಾಲಿಟ್ಟಿದೆ. ಈಗ ತಮ್ಮೆಲ್ಲರಿಗೂ ಗೊತ್ತಿರುವ ಹಾಗೆ ನಮ್ಮ ತಾಲೂಕಿಗೆ ಸಾಕಷ್ಟು ಅನ್ಯಾಯವನ್ನು ಮಾಡಿ ಕಾಂಗ್ರೆಸ್ ಪಕ್ಷ ಬೇರೆಯವರಿಗೆ ಮಂತ್ರಿ ಪದವಿಯನ್ನು ಕೊಟ್ಟು ನಮ್ಮ ತಾಲೂಕಿಗೆ ದೊಡ್ಡ ದ್ರೋಹವನ್ನು ಮಾಡಿದೆ. ಇದರಿಂದಾಗಿ ಸರ್ವತೋಮುಖ ಅಭಿವೃದ್ಧಿಗೆ ಕುಂಠಿತವಾಗುತ್ತದೆ.

    ಅಲ್ಲದೆ ಮುಂದಿನ ತಾಲೂಕಿನ ಬೃಹತ್ ಭವಿಷ್ಯವನ್ನು ನೆನೆದು ತಾಲೂಕಿನ ಸರ್ವಾಂಗೀಣ ಅಭಿವೃದ್ಧಿಗಾಗಿ ನಾನು ನನ್ನ ಶಾಸಕ ಸ್ಥಾನಕ್ಕೆ ರಾಜೀನಾಮೆಯನ್ನು ನೀಡಿದ್ದೇನೆ. ತಮ್ಮ ಕ್ಷಮೆ ಇರಲಿ, ಮುಂದಿನ ದಿನಗಳಲ್ಲಿ ತಮ್ಮ ಸಲಹೆ ಸೂಚನೆಗಳನ್ನು ಪಡೆದು ಮುಂದಿನ ನಿರ್ಧಾರವನ್ನು ಕೈಗೊಳ್ಳುತ್ತೇನೆ. ತಾಲೂಕಿನ ಸರ್ವಾಂಗೀಣ ಅಭಿವೃದ್ಧಿಯೇ ನನ್ನ ಗುರಿಯಾಗಿದ್ದು, ಸದಾ ನಿಮ್ಮ ಆಶೀರ್ವಾದ ಬೇಕೆಂದು ಕೇಳಿ ಮತ್ತೊಮ್ಮೆ ತಮ್ಮಲ್ಲಿ ಕ್ಷಮೆಯನ್ನು ಕೇಳಿ ತಮ್ಮ ಆಶೀರ್ವಾದವನ್ನು ಬೇಡುತ್ತಿದ್ದೇನೆ ಇಂತಿ ನಿಮ್ಮ ವಿಶ್ವಾಸಿ ಬಿ.ಸಿ ಪಾಟೀಲ್ ಎಂದು ವಾಟ್ಸಪ್ ಗ್ರೂಪಿಗೆ ಸಂದೇಶ ರವಾನೆ ಮಾಡಿದ್ದಾರೆ.

    ವಾಪಸ್ ಪಡೆಯಲ್ಲ: ಕಳೆದ ದಿನ ರಾಜೀನಾಮೆ ನೀಡಿದ್ದೇನೆ. ಯಾವುದೇ ಕಾರಣಕ್ಕೂ ರಾಜೀನಾಮೆಯನ್ನು ವಾಪಸ್ಸ್ ಪಡೆಯುವುದಿಲ್ಲ. ಮುಂದೆ ಏನಾಗಬೇಕು, ಎನು ಮಾಡಬೇಕು ಅನ್ನೋ ಚರ್ಚೆ ಆಗಿಲ್ಲ. ಮುಂದೆ ಏನಾಗುತ್ತೆ ಕಾದುನೋಡೋಣ. ಕ್ಷೇತ್ರದ ಜನರ ಹಾಗೂ ಕಾರ್ಯಕರ್ತರ ಅಭಿಪ್ರಾಯ ಕೇಳಿದ್ದೇನೆ. ಕ್ಷೇತ್ರಕ್ಕೆ ಅನ್ಯಾಯವಾದ ಬಗ್ಗೆ ಕಾರ್ಯಕರ್ತರಿಗೆ ತಿಳಿಸಿದ್ದೇನೆ. ಅವರು ಸಹ ಸಹಮತ ನೀಡಿದ್ದಾರೆ. ನಾವೆಲ್ಲ ಮುಂಬೈನಲ್ಲಿ ಇದ್ದೇವೆ. ಬಿಜೆಪಿಗೆ ಹೋಗುವ ಬಗ್ಗೆ ಚರ್ಚೆ ಆಗಿಲ್ಲ. ಇನ್ನೂ ಕೆಲವು ಶಾಸಕರು ರಾಜೀನಾಮೆ ನೀಡಲಿದ್ದಾರೆ ಎಂದು ಪಬ್ಲಿಕ್ ಟಿವಿಗೆ ದೂರವಾಣಿ ಮೂಲಕ ಬಿಸಿ ಪಾಟೀಲ್ ಹೇಳಿಕೆ ನೀಡಿದ್ದಾರೆ.