Tag: BC Patil

  • ಎಮ್ಮೆ ಚರ್ಮದ ಸರ್ಕಾರವಲ್ಲ, ಘೇಂಡಾಮೃಗದ ಸರ್ಕಾರ: ಸಿದ್ದರಾಮಯ್ಯ

    ಎಮ್ಮೆ ಚರ್ಮದ ಸರ್ಕಾರವಲ್ಲ, ಘೇಂಡಾಮೃಗದ ಸರ್ಕಾರ: ಸಿದ್ದರಾಮಯ್ಯ

    – ಗ್ರಾಮ ಸ್ವರಾಜ್ಯ ಕಾಂಗ್ರೆಸ್ ಕೂಸು

    ಹಾವೇರಿ/ಹುಬ್ಬಳ್ಳಿ: ಉತ್ತರ ಕರ್ನಾಟಕದ ಪ್ರವಾಸದಲ್ಲಿರುವ ವಿಪಕ್ಷ ನಾಯಕ ಸಿದ್ದರಾಮಯ್ಯ ಬಿಜೆಪಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆದ್ದಾರೆ. ಬಿಜೆಪಿ ಸರ್ಕಾರ ಜನರ ಸಮಸ್ಯೆಗಳಿಗೆ ಸ್ಪಂದಿಸುತ್ತಿಲ್ಲ. ಇದು ಎಮ್ಮೆ ಚರ್ಮದ ಸರ್ಕಾರವಲ್ಲ. ಇದೊಂದು ಘೇಂಡಾಮೃಗ ಚರ್ಮದ ಸರ್ಕಾರ ಎಂದು ಕಿಡಿಕಾರಿದ್ದಾರೆ.

    ನೀರಾವರಿ ಯೋಜನೆಗಾಗಿ ರೈತರ ಭೂಮಿ ಸ್ವಾಧೀನ ಮಾಡಿಕೊಳ್ಳೋದನ್ನ ವಿರೋಧಿಸಿ ಹಾವೇರಿ ಜಿಲ್ಲೆ ರಟ್ಟಿಹಳ್ಳಿ ಪಟ್ಟಣದಲ್ಲಿ ಧಾರವಾಡ ಹೈಕೋರ್ಟ್ ನ ಹಿರಿಯ ವಕೀಲ ಬಿ.ಡಿ.ಹಿರೇಮಠ ನಡೆಸುತ್ತಿರೋ ಉಪವಾಸ ಸತ್ಯಾಗ್ರಹ ಒಂಬತ್ತನೇ ದಿನಕ್ಕೆ ಕಾಲಿಟ್ಟಿದೆ. ಪಟ್ಟಣದ ಭಗತ್ ಸಿಂಗ್ ವೃತ್ತದಲ್ಲಿ ನಡೆಸುತ್ತಿರೋ ಸತ್ಯಾಗ್ರಹಕ್ಕೆ ಮಾಜಿ ಸಿ.ಎಂ.ಸಿದ್ದರಾಮಯ್ಯ ಭೇಟಿ ನೀಡಿ ಬೆಂಬಲ ವ್ಯಕ್ತಪಡಿಸಿದ್ದಾರೆ. ಉಪವಾಸ ಸತ್ಯಾಗ್ರಹವನ್ನ ಬಿಡುವಂತೆ ಮನವಿ ಮಾಡಿಕೊಂಡರು.

    ಈ ಸರ್ಕಾರಕ್ಕೆ ಎಲ್ಲ ಇಂದ್ರಿಯಗಳು ಹೋಗಿ ಬಿಟ್ಟಿವೆ. ಜನರ ಸಮಸ್ಯೆಗಳಿಗೆ ಸ್ಪಂದಿಸುತ್ತಿಲ್ಲ. ಸರ್ಕಾರ ನಿರ್ಲಕ್ಷ್ಯ ಧೋರಣೆ ತಾಳಬಾರದು. ಈ ಕ್ಷೇತ್ರದವರೆ ಸಚಿವರಿದ್ದಾರೆ. ಸಚಿವರು ಬಂದು ಕೇಳಬಹುದಿತ್ತು. ಈವರೆಗೂ ಇಲ್ಲಿನ ಮಂತ್ರಿ ಬಿ.ಸಿ.ಪಾಟೀಲ ರೈತರನ್ನ ಭೇಟಿ ಆಗಿಲ್ಲ ಎಂದು ಕೃಷಿ ಸಚಿವರ ವಿರುದ್ಧ ವಾಗ್ದಾಳಿ ನಡೆಸಿದರು.

    ಬಿ.ಸಿ.ಪಾಟೀಲ ಪೊಲೀಸ್ ಅಧಿಕಾರಿ ಆಗಿದ್ದವ. ಈಗ ಹಸಿರು ಶಾಲು ಹಾಕ್ಕೊಂಡು ತಿರುಗಾಡ್ತಿದ್ದಾನೆ ಗಿರಾಕಿ. ನಾನು ನಿಮ್ಮ ಕ್ಷೇತ್ರದಲ್ಲಿ ಐದು ಯೋಜನೆ ಜಾರಿ ಮಾಡಿದ್ದೇನೆ. ಆಗ ನಾನು ಎಂದಾದ್ರೂ ಹಸಿರು ಶಾಲು ಹಾಕ್ಕೊಂಡು ಬಂದಿದ್ದನಾ? ರೈತರು ಹೆಚ್ಚು ಹೆಚ್ಚು ಭಾಗವಹಿಸಬೇಕು, ಹೋರಾಟ ತೀವ್ರಗೊಳ್ಳಬೇಕು. ನಾನೂ ಈ ಬಗ್ಗೆ ಯಡಿಯೂರಪ್ಪ ಜೊತೆ ಚರ್ಚಿಸ್ತೇನೆ. ರೈತರಿಗೆ ಮೋಸ ಮಾಡುವಂತಹ ಇಂಥಾ ಯೋಜನೆ ಕೈಬಿಡಿ ಎಂದು ಸಿಎಂಗೆ ಒತ್ತಾಯಿಸುತ್ತೆನೆ ಎಂದು ಸತ್ಯಾಗ್ರಹ ಹೋರಾಟಗಾರಿಗೆ ತಿಳಿಸಿದರು.

    ಗ್ರಾಮ ಸ್ವರಾಜ್ಯ ಕಾಂಗ್ರೆಸ್ ಕೂಸು: ಗ್ರಾಮ ಸ್ವರಾಜ್ಯ ಅಭಿಯಾನ ಕಾಂಗ್ರೆಸ್ಸಿನ ಕೂಸು. ಮಹಾತ್ಮ ಗಾಂಧಿಯವರು ಜಾರಿಗೆ ತಂದಿರುವ ಗ್ರಾಮ ಸ್ವರಾಜ್ಯವನ್ನು ಈಗ ರಾಜಕೀಯ ಲಾಭಕ್ಕಾಗಿ ನಾವು ಜಾರಿಗೆ ತಂದಿದ್ದೇವೆ ಎಂದು ಬಿಜೆಪಿ ಗ್ರಾಮ ಸ್ವರಾಜ್ಯ ಅಭಿಯಾನವನ್ನು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಲೇವಡಿ ಮಾಡಿದ್ದಾರೆ.

    ಹುಬ್ಬಳ್ಳಿಯ ಕಾಂಗ್ರೆಸ್ ಕಚೇರಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, ಗ್ರಾಮ ಪಂಚಾಯತ ವ್ಯವಸ್ಥೆ ಜಾರಿಗೆ ತಂದಿದ್ದು ಕಾಂಗ್ರೆಸ್ ಪಕ್ಷ. ಗ್ರಾಮದ ಆಡಳಿತ ಜನರ ಕೈಯಲ್ಲಿ ಇರಬೇಕೆಂದು ಜಾರಿಗೆ ತಂದಿದ್ದು ಕಾಂಗ್ರೆಸ್ ಆದರೇ ಬಿಜೆಪಿಯವರು ಯಾವತ್ತು ರಾಜಕೀಯ ಮೀಸಲಾತಿ ಪರವಾಗಿದ್ದವರಲ್ಲ ಎಂದು ಬಿಜೆಪಿ ವಿರುದ್ಧ ಕಿಡಿ ಕಾರಿದರು.

    ರಾಜಕೀಯ ಮೀಸಲಾತಿ ಕಾಂಗ್ರೆಸ್ ನ ಕೊಡುಗೆಯಾಗಿದೆ. ಬಿಜೆಪಿಯವರಿಗೆ ಅಧಿಕಾರ ವಿಕೇಂದ್ರಿಕರಣ, ಸಾಮಾಜಿಕ ನ್ಯಾಯದಲ್ಲಿ ನಂಬಿಕೆಯಿಲ್ಲ. ಗ್ರಾಮಸ್ವರಾಜ್ಯ ಕಾಂಗ್ರೆಸ್ ನ ಕೂಸು, ಅದು ಬಿಜೆಪಿಗೆ ಸಂಬಂಧವಿಲ್ಲ ಎಂದ ಅವರು, ಗ್ರಾಮ ಪಂಚಾಯತಿ ಚುನಾವಣೆಯಲ್ಲಿ ಕಾಂಗ್ರೆಸ್ ಬಹುಮತ ಪಡೆಯುತ್ತದೆ. ಹಣ ಚೆಲ್ಲಿ, ಅಧಿಕಾರ ದುರುಪಯೋಗಪಡಿಸಿಕೊಂಡು ಬಿಜೆಪಿಯವರು ತಿಪ್ಪರಲಾಗ ಹಾಕಿದರು ಬಹುಮತ ಪಡೆಯಲು ಸಾಧ್ಯವಿಲ್ಲ ಎಂದು ವಿಶ್ವಾಸ ವ್ಯಕ್ತಪಡಿಸಿದರು.

    ತಳಮಟ್ಟದಲ್ಲಿ ಕಾಂಗ್ರೆಸ್ ಪಕ್ಷ ಗಟ್ಟಿಯಾಗಿದೆ. ಆದರೆ ಕಾಂಗ್ರೆಸ್ ಜಾರಿಗೊಳಿಸಿದ ಬಹುತೇಕ ಯೋಜನೆಯನ್ನು ಬಿಜೆಪಿ ನಿಲ್ಲಿಸುತ್ತಿದೆ. ಇದರಿಂದ ಸಾರ್ವಜನಿಕರಿಗೆ ಕಾಂಗ್ರೇಸ್ ಅಭಿವೃದ್ಧಿ ಕಾರ್ಯದ ಬಗ್ಗೆ ಗೊತ್ತಿದೆ ಎಂದರು.

    ಗ್ರಾಮ ಪಂಚಾಯತಿಯಲ್ಲಿ ಸೀಟ್ ಹರಾಜು ವಿಷಯದ ಕುರಿತು ಮಾತನಾಡಿದ ಅವರು, ಗ್ರಾಮ ಪಂಚಾಯತಿಯಲ್ಲಿ ಸೀಟ್ ಹರಾಜು ಹಾಕಬಾರದು. ಅದು ಕಾನೂನು ಬಾಹಿರ, ಮಾಡಿದವರ ಮೇಲೆ ಕ್ರಿಮಿನಲ್ ಮೊಕದ್ದಮೆ ಹಾಕಬೇಕು, ಇದಕ್ಕೆ ಬಿಜೆಪಿ ಕಾರಣ ಎಂದು ಆರೋಪಿಸಿದರು.

  • ಸಚಿವ ಬಿಸಿ ಪಾಟೀಲ್ ವಿರುದ್ಧ ಬಿಜೆಪಿಯಲ್ಲೇ ಅಸಮಾಧಾನ

    ಸಚಿವ ಬಿಸಿ ಪಾಟೀಲ್ ವಿರುದ್ಧ ಬಿಜೆಪಿಯಲ್ಲೇ ಅಸಮಾಧಾನ

    ಬೆಳಗಾವಿ: ಕೃಷಿ ಸಚಿವ ಬಿ.ಸಿ ಪಾಟೀಲ್ ಹೇಳಿಕೆಗೆ ಬಿಜೆಪಿಯಲ್ಲೇ ಅಸಮಾಧಾನ ಭುಗಿಲೆದ್ದಿದೆ. ಆತ್ಮಹತ್ಯೆ ಮಾಡಿಕೊಳ್ಳುವ ರೈತರು ಹೇಡಿಗಳು ಎಂಬ ಹೇಳಿಕೆಯನ್ನು ಬಿ.ಸಿ.ಪಾಟೀಲ್ ಹಿಂಪಡೆಯಬೇಕು ಎಂದು ರಾಜ್ಯಸಭಾ ಸದಸ್ಯ, ಬಿಜೆಪಿ ರೈತ ಮೋರ್ಚಾ ರಾಜ್ಯ ಘಟಕದ ಅಧ್ಯಕ್ಷ ಈರಣ್ಣಾ ಕಡಾಡಿ ಆಗ್ರಹಿಸಿದ್ದಾರೆ.

    ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರೈತರು ಸ್ವಾಭಿಮಾನಿಗಳು, ಎಂದಿಗೂ ರೈತರು ಹೇಡಿಗಳಾಗಿಲ್ಲ. ಮಾತಿನ ಭರದಲ್ಲಿ ಕೃಷಿ ಸಚಿವ ಬಿ.ಸಿ.ಪಾಟೀಲ್ ಹೇಳಿರಬಹುದು. ಕೃಷಿ ಸಚಿವರಿಗೆ ತಮ್ಮ ಹೇಳಿಕೆ ವಾಪಸ್ ಪಡೆಯಲು ಮನವಿ ಮಾಡುತ್ತೇವೆ ಎಂದರು.

    ರೈತರು ಆತ್ಮಹತ್ಯೆ ಮಾಡಿಕೊಳ್ಳಬಾರದೆಂಬ ಅರ್ಥದಲ್ಲಿ ಹೇಳಲು ಹೋಗಿ ಅಪಾರ್ಥ ಸೃಷ್ಟಿಯಾಗಿದೆ. ಕೃಷಿ ನಂಬಿದ ರೈತ ಸ್ವಾಭಿಮಾನಿ, ಯಾರ ಬಳಿಯೂ ಕೈಯೊಡ್ಡಿ ಬದುಕಲ್ಲ. ಇನ್ನೊಬ್ಬರಿಗೆ ಅನ್ನ ಕೊಟ್ಟು ತಾನು ಸಹ ಬದುಕಿದಂತಹ ಸ್ವಾಭಿಮಾನಿ. ರೈತರು ಯಾವತ್ತೂ ಹೇಡಿಗಳು ಆಗುವುದಿಲ್ಲ ಎಂದು ತಿಳಿಸಿದ್ದಾರೆ. ಕೃಷಿ ಸಚಿವರು ರೈತರು ಆತ್ಮಹತ್ಯೆ ಮಾಡಿಕೊಳ್ಳಬಾರದೆಂಬ ಕಳಕಳಿ ಇಟ್ಟುಕೊಂಡು ಹೇಳಲು ಹೋಗಿದ್ದಾರೆ. ಈ ವೇಳೆ ಎಡವಟ್ಟಿನ ಮಾತನ್ನಾಡಿದ್ದಾರೆ ಎನಿಸುತ್ತದೆ.

    ಬಿಸಿ ಪಾಟೀಲ್ ಹೇಳಿದ್ದೇನು?
    ಕೊಡಗು ಜಿಲ್ಲೆಯ ಪೋನ್ನಂಪೇಟೆಯಲ್ಲಿ ಮಾತಾನಾಡಿದ್ದ ಬಿಸಿ ಪಾಟೀಲ್, ರೈತರ ಆತ್ಮಹತ್ಯೆಗೆ ನೀರಾವರಿ ಕಾರಣವಲ್ಲ, ಮಂಡ್ಯದಲ್ಲಿ ನೀರಾವರಿ ಸೌಲಭ್ಯವಿದ್ದರೂ ಅತೀ ಹೆಚ್ಚು ರೈತ ಆತ್ಮಹತ್ಯೆ ಪ್ರಕರಣ ವರದಿಯಾಗಿದೆ. ನೀರಾವರಿ ಸೌಲಭ್ಯವಿಲ್ಲದ ಕೋಲಾರದಲ್ಲಿ ಆತ್ಮಹತ್ಯೆ ಪ್ರಕರಣ ಕಡಿಮೆ ಇದೆ ಎಂದಿದ್ದರು.

    ಆತ್ಮಹತ್ಯೆ ಮಾಡಿಕೊಳ್ಳುವುದು ಹೇಡಿಗಳು ಮಾಡುವ ಕೆಲಸ. ಯಾರು ಆತ್ಮಹತ್ಯೆಗೆ ಶರಣಾಗಬಾರದು. ಸಾವಯವ ಗೊಬ್ಬರ ಬಳಸಿ, ಸಮಗ್ರ ಕೃಷಿ ಪದ್ಧತಿಯಡಿ ಕೆಲಸ ಮಾಡಿದರೆ ಉತ್ತಮ ಲಾಭ ಸಾಧ್ಯ. ಇಸ್ರೇಲ್ ಮಾದರಿಯಲ್ಲ ಕೋಲಾರ ಮಾದರಿಯಲ್ಲಿ ಕೃಷಿ ಮಾಡುವುದನ್ನು ರಾಜ್ಯಕ್ಕೆ ಹೇಳಿ ಕೊಡವ ಕೆಲಸ ಮಾಡುತ್ತೇವೆ ಎಂದು ಹೇಳಿದ್ದರು.

  • ಎಲುಬಿಲ್ಲದ ನಾಲಿಗೆಯ ಹರಿಬಿಡಬೇಡಿ – ಕೃಷಿ ಸಚಿವರಿಗೆ ಹೆಚ್‍ಡಿಕೆ ಕ್ಲಾಸ್

    ಎಲುಬಿಲ್ಲದ ನಾಲಿಗೆಯ ಹರಿಬಿಡಬೇಡಿ – ಕೃಷಿ ಸಚಿವರಿಗೆ ಹೆಚ್‍ಡಿಕೆ ಕ್ಲಾಸ್

    ಬೆಂಗಳೂರು: ಆತ್ಮಹತ್ಯೆ ಮಾಡಿಕೊಳ್ಳೊವ ರೈತರು ಹೇಡಿಗಳು ಅನ್ನೋ ಸಚಿವ ಬಿ.ಸಿ ಪಾಟೀಲ್ ಹೇಳಿಕೆಗೆ ಮಾಜಿ ಸಿಎಂ ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

    ಟ್ವಿಟ್ಟರ್ ನಲ್ಲಿ ಪ್ರತಿಕ್ರಿಯೆ ನೀಡಿರುವ ಅವರು ಸಚಿವರಿಗೆ ತರಾಟೆಗೆ ತೆಗೆದುಕೊಂಡಿದ್ದಾರೆ. ರೈತ ಹುಟ್ಟು ಸ್ವಾಭಿಮಾನಿ ಹಾಗೂ ಮರ್ಯಾದಸ್ತ. ಸಾಲ ಕೊಟ್ಟವರು ಬಂದು ಕಿಬ್ಬದಿಯ ಕೀಲು ಮುರಿದಂತೆ ಪೀಡಿಸುವಾಗ ಮರ್ಯಾದೆಗೆ ಅಂಜಿ ದಿಕ್ಕು ತೋಚದಂತಾಗಿ ಆತ್ಮಹತ್ಯೆಗೆ ಶರಣಾಗುತ್ತಾನೆ. ಕೃಷಿ ಸಚಿವರು ಹೇಳಿದಂತೆ ರೈತ ಹೇಡಿಯಲ್ಲ ಅಂತ ಕಿಡಿಕಾರಿದ್ದಾರೆ.

    https://twitter.com/hd_kumaraswamy/status/1334458801370460160

    ಹೆಂಡತಿ, ಮಕ್ಕಳು, ನೆಂಟರು, ಊರಿನವರ ಮುಂದೆ ಮರ್ಯಾದೆ ಹೋಯಿತಲ್ಲ ಎಂದು ಸಾವಿಗೆ ಶರಣಾಗುತ್ತಾನೆ. ಹೇಡಿತನದ ಪಟ್ಟ ಕಟ್ಟಿಕೊಳ್ಳಲು ಅಲ್ಲ. ಕೃಷಿ ಸಚಿವರ ಹೇಳಿಕೆ ರೈತ ಸಮುದಾಯಕ್ಕೆ ಮಾಡಿದ ಅಪಮಾನ. ರೈತ ರಾಜಕಾರಣಿಗಳಂತೆ ಅಧಿಕಾರಕ್ಕಾಗಿ ಬಣ್ಣ ಬದಲಿಸುವ ಗೋಸುಂಬೆ ವ್ಯಕ್ತಿತ್ವದವನಲ್ಲ. ನೆಲವನ್ನೇ ನಂಬಿ ಬದುಕುವ ಕಡು ಕಷ್ಟ ಜೀವಿ ಎಂದು ರೈತರ ಪರವಾಗಿ ನಿಂತಿದ್ದಾರೆ.

    ರೈತ ಸಮುದಾಯಕ್ಕೆ ಕೇಂದ್ರ-ರಾಜ್ಯ ಸರ್ಕಾರಗಳು ರಟ್ಟೆಗೆ ಬಲ ತುಂಬುವ ಯೋಜನೆಗಳನ್ನು ರೂಪಿಸಿ ಅನುಷ್ಠಾನಗೊಳಿಸಬೇಕು. ಅದು ಬಿಟ್ಟು ಹೇಡಿ ಎಂಬ ಪಟ್ಟ ಕಟ್ಟಿ ಹೊಣೆಗೇಡಿತನ ಪ್ರದರ್ಶಿಸಬಾರದು. ಕೃಷಿ ಸಚಿವರೇ ರೈತ ಸಮುದಾಯದ ವಿರುದ್ಧ ಎಲುಬಿಲ್ಲದ ನಾಲಿಗೆ ಹರಿ ಬಿಟ್ಟಿರುವುದು ಖಂಡನೀಯ. ರೈತ ಸಮುದಾಯಕ್ಕೆ ಬಹಿರಂಗವಾಗಿ ಕ್ಷಮೆಯಾಚಿಸುವಂತೆ ಆಗ್ರಹಿಸಿದ್ದಾರೆ.

  • ಆತ್ಮಹತ್ಯೆ ಮಾಡಿಕೊಳ್ಳುವ ರೈತರು ಹೇಡಿಗಳು: ಬಿ.ಸಿ ಪಾಟೀಲ್

    ಆತ್ಮಹತ್ಯೆ ಮಾಡಿಕೊಳ್ಳುವ ರೈತರು ಹೇಡಿಗಳು: ಬಿ.ಸಿ ಪಾಟೀಲ್

    ಮಡಿಕೇರಿ: ಆತ್ಮಹತ್ಯೆ ಮಾಡಿಕೊಳ್ಳುವ ರೈತರು ಹೇಡಿಗಳು. ಅವರು ಸಾಯುವಾಗ ತನ್ನ ಕುಟುಂಬದ ಬಗ್ಗೆ ಚಿಂತೆ ಮಾಡುವುದಿಲ್ಲ ಎಂದು ಕೃಷಿ ಸಚಿವ ಬಿ.ಸಿ ಪಾಟೀಲ್ ಹೇಳಿದ್ದಾರೆ.

    ಕೊಡಗು ಜಿಲ್ಲೆಯ ಪೋನ್ನಂಪೇಟೆಯಲ್ಲಿ ಮಾತಾನಾಡಿದ ಅವರು ರೈತರ ಆತ್ಮಹತ್ಯೆಗೆ ನೀರಾವರಿ ಕಾರಣವಲ್ಲ, ಮಂಡ್ಯದಲ್ಲಿ ನೀರಾವರಿ ಸೌಲಭ್ಯವಿದ್ದರೂ ಅತೀ ಹೆಚ್ಚು ರೈತ ಆತ್ಮಹತ್ಯೆ ಪ್ರಕರಣ ವರದಿಯಾಗಿದೆ. ನೀರಾವರಿ ಸೌಲಭ್ಯವಿಲ್ಲದ ಕೋಲಾರದಲ್ಲಿ ಆತ್ಮಹತ್ಯೆ ಪ್ರಕರಣ ಕಡಿಮೆ ಇದೆ ಎಂದರು.

    ಆತ್ಮಹತ್ಯೆ ಮಾಡಿಕೊಳ್ಳುವುದು ಹೇಡಿಗಳು ಮಾಡುವ ಕೆಲಸ. ಯಾರು ಆತ್ಮಹತ್ಯೆಗೆ ಶರಣಾಗಬಾರದು. ಸಾವಯವ ಗೊಬ್ಬರ ಬಳಸಿ, ಸಮಗ್ರ ಕೃಷಿ ಪದ್ಧತಿಯಡಿ ಕೆಲಸ ಮಾಡಿದರೆ ಉತ್ತಮ ಲಾಭ ಸಾಧ್ಯ. ಇಸ್ರೇಲ್ ಮಾದರಿಯಲ್ಲ ಕೋಲಾರ ಮಾದರಿಯಲ್ಲಿ ಕೃಷಿ ಮಾಡುವುದನ್ನು ರಾಜ್ಯಕ್ಕೆ ಹೇಳಿ ಕೊಡುವ ಕೆಲಸ ಮಾಡುತ್ತೇವೆ ಎಂದು ತಿಳಿಸಿದರು.

  • ಡಿಕೆಶಿ ಬಾಂಬ್ ಸಿಡಿಸಿಯೇ ಶಿರಾ, ಆರ್.ಆರ್.ನಗರದಲ್ಲಿ ಸೋತು ಅಡ್ರೆಸ್ ಇಲ್ಲದಂತಾಗಿದ್ದಾರೆ: ಬಿ.ಸಿ.ಪಾಟೀಲ್

    ಡಿಕೆಶಿ ಬಾಂಬ್ ಸಿಡಿಸಿಯೇ ಶಿರಾ, ಆರ್.ಆರ್.ನಗರದಲ್ಲಿ ಸೋತು ಅಡ್ರೆಸ್ ಇಲ್ಲದಂತಾಗಿದ್ದಾರೆ: ಬಿ.ಸಿ.ಪಾಟೀಲ್

    ಹಾವೇರಿ: ಡಿ.ಕೆ.ಶಿವಕುಮಾರ್ ಬಾಂಬ್ ಸಿಡಿಸಿಯೇ ಶಿರಾ ಮತ್ತು ಆರ್.ಆರ್.ನಗರದಲ್ಲಿ ಉಪಚುನಾವಣೆಗಳಲ್ಲಿ ನೆಲಕಚ್ಚಿದ್ದಾರೆ. ಡಿಕೆಶಿ ಅಡ್ರೆಸ್ ಇಲ್ಲದೆ ಹೋಗಿದ್ದಾರೆ. ಈಗ ಅವರು ಅಭ್ಯರ್ಥಿ ಹಾಕೋಕು ಯೋಚಿಸುವಂತಾಗಿದೆ ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ್ ಕಿಡಿ ಕಾರಿದರು.

    ಜಿಲ್ಲೆಯ ಹಿರೇಕೆರೂರಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ರಾಷ್ಟ್ರಮಟ್ಟದಲ್ಲಿ ನೆಲಕಚ್ಚಿ ಹೋಗಿದೆ. ಬೇರೆಯವರ ಬಗ್ಗೆ ಮಾತನಾಡುವುದನ್ನು ಬಿಟ್ಟು, ಅವರ ಪಕ್ಷದ್ದು ನೋಡಿಕೊಳ್ಳಲಿ. ಬಿಜೆಪಿಗೆ ಬಂದವರು ವಾಪಸ್ ಕಾಂಗ್ರೆಸ್ ಗೆ ಹೋಗುವ ಪ್ರಶ್ನೆಯೇ ಇಲ್ಲ. ಶಿರಾ ಮತ್ತು ಆರ್.ಆರ್.ನಗರ ಚುನಾವಣೆಯಲ್ಲಿ ಡಿಕೆಶಿ ಗೆಲ್ಲುತ್ತೇವೆ ಎಂದೇ ಹೇಳಿದ್ದರು. ಬಿದ್ದರೂ ಮೀಸೆ ಮಣ್ಣಾಗಲಿಲ್ಲ ಎನ್ನುವ ಮನೋಭಾವ ಡಿ.ಕೆ.ಶಿವಕುಮಾರ್ ಅವರದ್ದು. ಇದೀಗ ಸಿಬಿಐ ವಿಚಾರಣೆಗೆ ಹಾಜರಾಗುವಂತೆ ತಿಳಿಸಿದೆ. ತಪ್ಪು ಮಾಡಿದವರು ಕೋರ್ಟ್ ಕೇಸಲ್ಲಿ ಸಿಕ್ಕಿ ಹಾಕಿಕೊಂಡಿದ್ದಾರೆ. ಸಿಬಿಐ ಸ್ವತಂತ್ರ ಸಂಸ್ಥೆ. ತಪ್ಪು ಮಾಡಿದವರನ್ನು ವಿಚಾರಣೆ ನಡೆಸಿದರೆ ಬಿಜೆಪಿ ಮೇಲೆ ಗೂಬೆ ಕೂರಿಸೋದು ಸರಿಯಲ್ಲ ಎಂದರು.

    ಕೋಡಿಹಳ್ಳಿ ಶ್ರೀ ಭವಿಷ್ಯದ ಬಗ್ಗೆ ಮಾತನಾಡಿದ ಅವರು, ಕೋಡಿಹಳ್ಳಿ ಶ್ರೀಗಳು ರಾಜಕೀಯಕ್ಕೆ ಬರಬೇಡಿ ಭವಿಷ್ಯವಿಲ್ಲ ಎಂದು ನನಗೂ ಹೇಳಿದ್ದರು. ಇವತ್ತು ನನ್ನ ಭವಿಷ್ಯ ಏನಾಗಿದೆ. ನಾಲ್ಕು ಬಾರಿ ಶಾಸಕನಾಗಿದ್ದೇನೆ, ಸಚಿವನಾಗಿದ್ದೇನೆ. ಎಲ್ಲವೂ ಭವಿಷ್ಯದ ಮೇಲೆ ನಿರ್ಧಾರ ಆಗಲ್ಲ. ಎಲ್ಲ ಭವಿಷ್ಯದ ಮೇಲೆಯೇ ನಿರ್ಧಾರ ಆಗಿದ್ದರೆ ಯಾರೂ ಚುನಾವಣೆಗೆ ನಿಲ್ಲುತ್ತಿರಲಿಲ್ಲ. ಮಾಟ ಮಂತ್ರ ಮಾಡಿಸ್ಕೊಂಡು ಚುನಾವಣೆಲಿ ಗೆಲ್ಲಬಹುದಿತ್ತು. ಜನರ ಸೇವೆ, ಜನರ ಸಂಪರ್ಕ ಇಟ್ಟುಕೊಂಡವರಿಗೆ ರಾಜಕೀಯದಲ್ಲಿ ನೆಲೆಯಿದೆ. ಆಡಳಿತಾತ್ಮಕ ದೃಷ್ಟಿಯಿಂದ ವಿಜಯನಗರ ಜಿಲ್ಲೆ ಆಗಿದ್ದು ಒಳ್ಳೆಯದು. ಸಿಎಂ ಎಲ್ಲ ಶಾಸಕರನ್ನ ಗಮನದಲ್ಲಿಟ್ಟುಕೊಂಡು, ಜನರ ಅನುಕೂಲದ ದೃಷ್ಟಿಯಿಂದ ಜಿಲ್ಲೆ ಮಾಡಿದ್ದಾರೆ ಎಂದರು.

  • ಮರಾಠಿಗರಲ್ಲಿಯೂ ಕಡುಬಡವರಿದ್ದು, ಅಭಿವೃದ್ಧಿ ನಿಗಮ ಮಾಡಿರುವುದು ತಪ್ಪಿಲ್ಲ: ಬಿ.ಸಿ ಪಾಟೀಲ್

    ಮರಾಠಿಗರಲ್ಲಿಯೂ ಕಡುಬಡವರಿದ್ದು, ಅಭಿವೃದ್ಧಿ ನಿಗಮ ಮಾಡಿರುವುದು ತಪ್ಪಿಲ್ಲ: ಬಿ.ಸಿ ಪಾಟೀಲ್

    – ಮರಾಠಿ ಮಾತನಾಡಿದ ತಕ್ಷಣ ಅವರು ನಮಗೆ ವೈರಿಗಳಾಗುವುದಿಲ್ಲ

    ಕೋಲಾರ: ಸಿಎಂ ಯಡಿಯೂರಪ್ಪ ಅವರು ಮರಾಠರ ಅಭಿವೃದ್ಧಿ ನಿಗಮ ಮಾಡಿರುವುದು ತಪ್ಪಿಲ್ಲ ಎಂದು ಕೋಲಾರದಲ್ಲಿ ಕೃಷಿ ಸಚಿವ ಬಿ.ಸಿ.ಪಾಟಿಲ್ ಹೇಳಿದ್ದಾರೆ.

    ಕೋಲಾರದ ಕೃಷಿ ಇಲಾಖೆ ನೂತನ ಕಟ್ಟಡ ಉದ್ಘಾಟನೆಗೆ ಆಗಮಿಸಿದ ವೇಳೆ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕರ್ನಾಟಕ ರಾಜ್ಯದಲ್ಲಿಯೇ ಹುಟ್ಟಿ ಬೆಳೆದಿರುವ ಎಲ್ಲಾ ಜನಾಂಗದವರು ಇದ್ದಾರೆ. ಹೀಗಾಗಿ ಮರಾಠಿಗರ ಅಭಿವೃದ್ಧಿ ನಿಗಮ ಸ್ಥಾಪನೆ ಮಾಡುವುದರಲ್ಲಿ ತಪ್ಪಿಲ್ಲ ಎಂದು ಸಿಎಂ ನಿರ್ಧಾರವನ್ನು ಸಮರ್ಥಿಸಿಕೊಂಡರು.

    ಕುವೆಂಪು ಅವರು ಹೇಳಿದ ಹಾಗೆ ಸರ್ವಜನಾಂಗದ ಬೀಡು ಕರ್ನಾಟಕವಾಗಿದ್ದು, ಮರಾಠ ಅಭಿವೃದ್ದಿ ನಿಗಮ ಸ್ಥಾಪನೆ ವಿಚಾರವಾಗಿ ತಪ್ಪು ಗ್ರಹಿಕೆ ಬೇಡ. ಅಲ್ಲದೆ ಮರಾಠಿಗರಲ್ಲಿಯೂ ಸಹ ಕಡುಬಡವರಿದ್ದು, ಅವರು ಸಹ ಬದುಕಬೇಕು. ಮರಾಠಿ ಮಾತನಾಡಿದ ತಕ್ಷಣ ಅವರು ನಮಗೆ ವೈರಿಗಳಾಗುವುದಿಲ್ಲ. ಅವರು ನಮ್ಮ ಜೊತೆಯಲ್ಲಿಯೇ ಇರುವಂತಹವರು, ನಮ್ಮಲ್ಲೇ ಹುಟ್ಟಿರುವಂತಹವರು, ಇದರಿಂದ ಅವರನ್ನು ಕಡೆಗಣಿಸಲು ಆಗುವುದಿಲ್ಲ ಎಂದು ಹೇಳಿದರು.

    ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮ ಸ್ಥಾಪನೆ ವಿಚಾರದಲ್ಲೂ ತಪ್ಪು ಗ್ರಹಿಕೆ ಮಾಡುವುದು ಬೇಡ, ಎಲ್ಲರನ್ನೂ ಸಮಾನವಾಗಿ ನೋಡಬೇಕೆಂದು ಬಸವಣ್ಣನವರು ಹೇಳಿದ್ದು, ಅವರ ದೊಡ್ಡತನವಾಗಿದೆ. ಅಲ್ಲದೆ ವೀರಶೈವ ಲಿಂಗಾಯತರಲ್ಲಿಯೂ ಬಿಕ್ಷೆ ಬೇಡುವಂತಹವರು ಇದ್ದಾರೆ. ಕೂಲಿ ಕಾರ್ಮಿಕರು ಇದ್ದಾರೆ. ಎಲ್ಲದರಲ್ಲೂ ಮುಂದುವರೆದವರು ಇಲ್ಲ. ಹೀಗಾಗಿ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮ ಸ್ಥಾಪನೆಗೆ ಹಿಂದಿನಿಂದಲೂ ಬೇಡಿಕೆ ಇತ್ತು. ಹೀಗಾಗಿ ನಿಗಮ ಸ್ಥಾಪನೆ ಮಾಡಿರುವುದಕ್ಕೆ ಸಿಎಂ ಅವರಿಗೆ ಅಭಿನಂದೆನೆಗಳು ಎಂದರು.

  • ಸಿಎಂ ಬಿಎಸ್‍ವೈರನ್ನ ಅಲ್ಲಾಡಿಸೋಕೆ ಯಾರಿಗೂ ಆಗೋದಿಲ್ಲ: ಬಿಸಿ ಪಾಟೀಲ್

    ಸಿಎಂ ಬಿಎಸ್‍ವೈರನ್ನ ಅಲ್ಲಾಡಿಸೋಕೆ ಯಾರಿಗೂ ಆಗೋದಿಲ್ಲ: ಬಿಸಿ ಪಾಟೀಲ್

    ಹಾವೇರಿ: ಸಿಎಂ ಯಡಿಯೂರಪ್ಪ ಅವರನ್ನ ಅಲ್ಲಾಡಿಸೋಕೆ ಯಾರಿಗೂ ಆಗೋದಿಲ್ಲ. ಬಿಎಸ್‍ವೈ ನೇತೃತ್ವದಲ್ಲಿ ಸರ್ಕಾರದ ಅಧಿಕಾರದ ಅವಧಿ ಪೂರ್ಣಗೊಳ್ಳುತ್ತದೆ ಎಂದು ಕೃಷಿ ಸಚಿವ ಬಿಸಿ ಪಾಟೀಲ್ ಹೇಳಿದ್ದಾರೆ.

    ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮುಂದಿನ ವಿಧಾನಸಭೆ ಮತ್ತು ಲೋಕಸಭಾ ಚುನಾವಣೆ ಯಡಿಯೂರಪ್ಪ ಅವರ ನೇತೃತ್ವದಲ್ಲೇ ನಡೆಯುತ್ತೆ. ಬಾಯಿ ಚಟಕ್ಕೆ, ನಾಲಿಗೆ ಚಟಕ್ಕೆ ಯಾರು ಯಾರೋ ಏನೇನೋ ಹೇಳ್ತಾರೆ. ಪ್ರಚಾರಕ್ಕಾಗಿ ಹೇಳೋರ ಬಗ್ಗೆ ತಲೆಕೆಡಿಸಿಕೊಳ್ಳಬಾರದು ಎಂದರು.

    ಪಕ್ಷದ ವಿರುದ್ಧ ಮಾತನಾಡಿರುವ ಬಗ್ಗೆ ಕ್ರಮಕೈಗೊಳ್ಳವುದು ಈಗ ಚುನಾವಣೆ ಇರುವುದರಿಂದ ಸ್ವಲ್ಪ ತಡವಾಗಿದೆ. ಈ ರೀತಿ ಮಾತನಾಡೋರ ಮೇಲೆ ಹೈ ಕಮಾಂಡ್ ಅವರು ಕ್ರಮ ಕೈಗೊಳ್ಳುತ್ತಾರೆ ಎಂದು ಸ್ಪಷ್ಟಪಡಿಸಿದರು.

    ಬಿಜೆಪಿಗೆ ಸೇರಿರುವ ಶಾಸಕರು ನಾಯಿ ಪಾಡಾಗ್ತಾರೆ ಎಂಬ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ವಿರುದ್ಧ ಗರಂ ಆದ ಸಚಿವರು, ಮನುಷ್ಯರನ್ನ ನಾಯಿ, ಬಂಡೆ, ಹುಲಿ, ಟಗರಿಗೆ ಹೋಲಿಸೋದು ಯಾವ ಸಂಸ್ಕೃತಿ. ಇದು ಸಿದ್ದರಾಮಯ್ಯನವರ ಸಂಸ್ಕೃತಿ ತೋರಿಸುತ್ತದೆ. ಯಡಿಯೂರಪ್ಪ ಸಿಎಂ ಆಗಿದ್ದಕ್ಕೆ ಸಿದ್ದರಾಮಯ್ಯ ವಿರೋಧ ಪಕ್ಷದ ಸ್ಥಾನದಲ್ಲಿದ್ದಾರೆ. ಸಿದ್ದರಾಮಯ್ಯ ಯಾರದೋ ಹೆಸರಲ್ಲಿ ಮನೆ ತಗೊಂಡು, ಬೇನಾಮಿ ಹೆಸರಿನ ಮನೆಯಲ್ಲಿದ್ದರು. ವಿರೋಧ ಪಕ್ಷದ ಸ್ಥಾನ ಅಲ್ಲಾಡುತ್ತೆ ಅನ್ನೋ ಭಯದಿಂದ ಸಿದ್ದರಾಮಯ್ಯ ಈ ರೀತಿ ಮಾತನಾಡ್ತಿದ್ದಾರೆ. ಇಂಥಾ ಹೇಳಿಕೆಗಳು ಅವರ ಘನತೆಗೆ ತಕ್ಕುದಲ್ಲ. ನಾಯಿಗಳಿಗೆ ನಿಯತ್ತು ಇರುತ್ತೆ. ಅದು ಅವರಿಗೆ ಗೊತ್ತಿರಬೇಕು. ಸಿದ್ದರಾಮಯ್ಯ ಅವರಿಗೆ ಆ ಭಾಷೆ ಬಳಸಲು ನನ್ನ ಮನಸ್ಸು ಒಪ್ಪುತ್ತಿಲ್ಲ. ಡಿಕೆಶಿ ನಮಗೆ ರಾಜಕೀಯ ಸಮಾಧಿ ಆಗ್ತಾರೆ ಅಂದ್ರು. ಸಿದ್ದರಾಮಯ್ಯ ಹಾಗೂ ಡಿಕೆಶಿ ತಿರುಕನ ಕನಸು, ಹಗಲುಕನಸು ಕಾಣೋದನ್ನ ಬಿಡಬೇಕು ಎಂದು ಪಾಟೀಲ್ ಕಿಡಿ ಕಾರಿದರು.

  • ಸಿನಿಮಾ ರಂಗದಲ್ಲಿ ಮಾತ್ರವಲ್ಲ, ರಾಜಕೀಯದಲ್ಲೂ ಡ್ರಗ್ಸ್ ದಂಧೆ ಇದೆ: ಬಿ.ಸಿ.ಪಾಟೀಲ್

    ಸಿನಿಮಾ ರಂಗದಲ್ಲಿ ಮಾತ್ರವಲ್ಲ, ರಾಜಕೀಯದಲ್ಲೂ ಡ್ರಗ್ಸ್ ದಂಧೆ ಇದೆ: ಬಿ.ಸಿ.ಪಾಟೀಲ್

    ಚಿಕ್ಕಬಳ್ಳಾಪುರ: ಡ್ರಗ್ಸ್ ದಂಧೆ ಕೇವಲ ಸಿನಿಮಾ ರಂಗದಲ್ಲಿ ಮಾತ್ರ ಇಲ್ಲ. ರಾಜಕೀಯ, ವ್ಯಾಪಾರಸ್ಥರ ರಂಗ, ಅಧಿಕಾರಿ ವಲಯ ಹಾಗೂ ಐಟಿ-ಬಿಟಿ ಯಲ್ಲೂ ಡ್ರಗ್ಸ್ ದಂಧೆ ಇದೆ ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ್ ಹೇಳಿದ್ದಾರೆ.

    ಜಿಲ್ಲೆಯ ಚಿಂತಾಮಣಿಯಲ್ಲಿ ಮಾತನಾಡಿ, ಸಿನಿಮಾದವರು ಗಾಜಿನ ಮನೆಯಲ್ಲಿರುವುದರಿಂದ ಬೇಗ ತೋರಿಸುತ್ತೀದ್ದೀರಿ. ಸಮಾಜ ಹುಟ್ಟಿದಾಗಿಂದಲೂ ಈ ಸಾಮಾಜಿಕ ದಾಸ್ಯಗಳಿವೆ. ಅವುಗಳಿಗೆ ಕಡಿವಾಣ ಹಾಕುವಂತಹ ಕೆಲಸವನ್ನು ನಮ್ಮ ಸರ್ಕಾರ ಮಾಡಲಿದೆ ಎಂದರು.

    ಸಿಎಂ ಯಡಿಯೂರಪ್ಪ ದೆಹಲಿ ಭೇಟಿ ವಿಚಾರಕ್ಕೆ ವಿಶೇಷ ಅರ್ಥ ಕಲ್ಪಿಸುವುದು ಬೇಡ. ಕೋವಿಡ್-19 ಲಾಕ್‍ಡೌನ್ ನಿಂದ 6 ತಿಂಗಳಿಂದ ಸಿಎಂ ದೆಹಲಿಗೆ ಹೋಗಲಾಗಲಿಲ್ಲ. ಪ್ರಧಾನಿ ಮೋದಿಯವರನ್ನು ಭೇಟಿ ಮಾಡಿರಲಿಲ್ಲ. ಈ ಮಧ್ಯೆ ರಾಜ್ಯದಲ್ಲಿ ನೆರೆ ಪ್ರವಾಹ ಬಂದಿದೆ. ಹೀಗಾಗಿ ಆರ್ಥಿಕ ಪರಿಸ್ಥಿತಿ, ಹಣಕಾಸಿನ ವಿಚಾರ ಮಾತನಾಡಲು ತೆರಳಿದ್ದು, ಕೇಂದ್ರ ಸಚಿವರ ಜೊತೆ ಮಾತನಾಡಿ ಅಭಿವೃದ್ಧಿ ವಿಚಾರಗಳ ಬಗ್ಗೆ ಚರ್ಚೆ ನಡೆಸಿದ್ದಾರೆ ಎಂದು ತಿಳಿಸಿದರು.

    ಸಿಎಂ ಯಡಿಯೂರಪ್ಪ ಪುತ್ರ ವಿಜಯೇಂದ್ರ ಸೂಪರ್ ಸಿಎಂ ಎಂಬ ಸಿದ್ದರಾಮಯ್ಯ ಹೇಳಿಕೆ ಕುರಿತು ಪ್ರತಿಕ್ರಿಯಿಸಿ, ಸಿದ್ದರಾಮಯ್ಯ ವಿರೋಧ ಪಕ್ಷದ ನಾಯಕರು ವಿರೋಧ ಮಾಡುವುದು ಅವರ ಕರ್ತವ್ಯ. ಎಲ್ಲರ ಕಾಲದಲ್ಲೂ ಅಪಾದನೆ ಅನ್ನೋದು ಇರೋದೆ. ಆದರೆ ಸಿದ್ದರಾಮಯ್ಯನವರ ಅಪಾದನೆಗಳೆಲ್ಲವೂ ಸುಳ್ಳು. ವಿಜಯೇಂದ್ರ ಸರ್ಕಾರದ ಆಡಳಿತವನ್ನ ದುರುಪಯೋಗ ಮಾಡಿಕೊಳ್ಳಲ್ಲ. ಅವರು ರಾಜ್ಯ ಬಿಜೆಪಿ ಉಪಾಧ್ಯಕ್ಷರಾಗಿದ್ದಾರೆ. ಪಕ್ಷದ ನಿಟ್ಟಿನಲ್ಲಿ ಸರ್ಕಾರಕ್ಕೆ ಸಲಹೆ ಸೂಚನೆಗಳನ್ನು ಕೊಟ್ಟರೆ ತಪ್ಪೇನಿಲ್ಲ. ಇದರಿಂದ ಸರ್ಕಾರದ ಮೇಲೆ ಪ್ರಭಾವ ಬೀರುತ್ತಾರೆ ಎಂಬುದು ಸುಳ್ಳು ಎಂದರು.

  • ಡ್ರಗ್‍ನಲ್ಲಿ ಎಲ್ಲರೂ ಪವಿತ್ರರು, ಪತಿವ್ರತೆಯರು ಎಂದು ಹೇಳಕ್ಕಾಗಲ್ಲ: ಬಿ.ಸಿ ಪಾಟೀಲ್

    ಡ್ರಗ್‍ನಲ್ಲಿ ಎಲ್ಲರೂ ಪವಿತ್ರರು, ಪತಿವ್ರತೆಯರು ಎಂದು ಹೇಳಕ್ಕಾಗಲ್ಲ: ಬಿ.ಸಿ ಪಾಟೀಲ್

    – ನಾನು ನಟನೆಯಲ್ಲಿದ್ದ ಕಾಲದಲ್ಲಿ ಇದೆಲ್ಲ ಇರಲಿಲ್ಲ

    ಕೊಪ್ಪಳ: ಡ್ರಗ್‍ಗೆ ಭೂ ಮಾಫಿಯಾ, ಟೆರರಿಸ್ಟ್, ಐಎಸ್‍ಐ ಕೈವಾಡ ಇದೆ ಎನ್ನುವುದು ತನಿಖೆ ವೇಳೆ ಗೊತ್ತಾಗಲಿದೆ. ಡ್ರಗ್ಸ್ ನಲ್ಲಿ ಎಲ್ಲರೂ ಪವಿತ್ರರು, ಪತಿವ್ರತೆಯರು ಎಂದು ಹೇಳಕ್ಕಾಗಲ್ಲ. ಇದೆಲ್ಲ ತನಿಖೆ ವೇಳೆ ಗೊತ್ತಾಗಲಿದೆ ಎಂದು ಕೃಷಿ ಸಚಿವ ಬಿ.ಸಿ. ಪಾಟೀಲ್ ಅವರು ಹೇಳಿದರು.

    ಕೊಪ್ಪಳದ ಯಲಬುರ್ಗಾದಲ್ಲಿ ಡ್ರಗ್ಸ್ ಮಾಫಿಯಾದಲ್ಲಿ ಯಾರ ಕೈವಾಡ ಇದೆ ಎನ್ನುವುದು ತನಿಖೆಯಿಂದ ಬಯಲಿಗೆ ಬರಲಿದೆ. ಆದರೆ ಡ್ರಗ್ಸ್ ಮಾಫಿಯಾ ಎಂಬುದು ಕೆಟ್ಟ ಪರಿಣಾಮ ಬೀರುತ್ತದೆ. ಇದರ ನಿರ್ಮೂಲನೆಗೆ ಬಿಜೆಪಿ ಸರ್ಕಾರ ಕ್ರಮ ಕೈಗೊಳ್ಳಲಿದೆ. ನಾನೂ ಸಿನಿಮಾ ನಟನಾಗಿ ಕೆಲಸ ಮಾಡಿದ್ದೇನೆ. ನಮ್ಮ ಅವಧಿಯಲ್ಲಿ ಇಂತಹ ಯಾವುದೇ ಡ್ರಗ್ಸ್ ಇರಲಿಲ್ಲ. ಈಗ ಅದು ಬೆಳಕಿಗೆ ಬರುತ್ತಿದೆ ಎಂದರು.

    ಇತ್ತೀಚೆಗೆ ಯುವ ಜನಾಂಗವು ಇದಕ್ಕೆ ಬಲಿಯಾಗುತ್ತಿದೆ. ಚಿತ್ರರಂಗದಲ್ಲಿ ಇದ್ದವರು ಗಾಜಿನ ಮನೆಯಲ್ಲಿ ಇದ್ದಂತೆ ನಮ್ಮನ್ನ ಲಕ್ಷಾಂತರ ಜನ ನೋಡುತ್ತಿರುತ್ತಾರೆ. ಫಾಲೋವರ್ಸ್ ಇರುತ್ತಾರೆ. ನಮ್ಮಂತೆ ಅವರು ಅನುಕರಣೆ ಮಾಡುತ್ತಾರೆ. ಅದು ಒಳ್ಳೆಯದನ್ನು ಅನುಕರಣೆ ಮಾಡಿದರೆ ತೊಂದರೆ ಇಲ್ಲ. ಆದರೆ ಇಂತದ್ದನ್ನು ಅನುಕರಣೆ ಮಾಡಿದರೆ ದೊಡ್ಡ ದುರಂತ ಆಗುತ್ತದೆ ಎಂದು ಕಳವಳ ವ್ಯಕ್ತಪಡಿಸಿದರು.

    ಸಿನಿಮಾದಲ್ಲಿ ಇರುವವರು ಇನ್ನೊಬ್ಬರಿಗೆ ರೋಲ್ ಮಾಡಲ್ ಆಗಿ ಇರಬೇಕು. ಡ್ರಗ್ಸ್ ವಿಚಾರದಲ್ಲಿ ಜಮೀರ್ ಅಹ್ಮದ್ ಸೇರಿ ಯಾರದ್ದೇ ಹೆಸರು ಕೇಳಿ ಬಂದರೂ ಯಾರನ್ನೂ ಬಿಡಲ್ಲ. ಎಲ್ಲರೂ ಪವಿತ್ರರು, ಪತಿವ್ರತೆಯರು ಎಂದು ಹೇಳಕ್ಕಾಗಲ್ಲ. ಡ್ರಗ್ಸ್ ಮಾಡೋರು ರಾಜಕೀಯದವರು, ಸಿನಿಮಾದವರು ಅಂತಾ ಅಲ್ಲ ಎಲ್ಲದರಲ್ಲೂ ಇರುತ್ತಾರೆ. ಯಾರ ಮಾಡಿದರೂ ತಪ್ಪು ತಪ್ಪೇ ಎಂದು ಹೇಳಿದ್ದಾರೆ.

    ಗಾಂಜಾ ಕಾನೂನು ಬದ್ಧ ಮಾಡೋದು ತಪ್ಪು. ಅದನ್ನು ಮಾಡಬಾರದು. ಇಂದು ತಂಬಾಕು ಮಾರಾಟ ಮಾಡುವುದು ತಪ್ಪೇ? ಒಂದು ಸಿಗರೇಟಿನಲ್ಲಿ ತಂಬಾಕು ಇದ್ದರೂ ಜನ ಅದನ್ನು ಸೇವನೆ ಮಾಡುತ್ತಾರೆ. ಆದರೆ ಡ್ರಗ್ಸ್ ಎಂಬುದು ಅತಿರೇಕಕ್ಕೆ ಹೋಗುವಂತದ್ದು, ಮನುಷ್ಯನ ಜೀವನವನ್ನೇ ಬಲಿ ಪಡೆಯುತ್ತದೆ ಎಂದು ತಿಳಿಸಿದರು.

    ಕೃಷಿ ಪದವಿ ರದ್ದತಿ ವಿಚಾರಕ್ಕೆ ಸಂಬಂಧಿಸಿದಂತೆ ಕೋಡಿಹಳ್ಳಿ ಚಂದ್ರಶೇಖರ್ ಹೇಳಿಕೆ ವಿಚಾರಕ್ಕೆ ಪ್ರತಿಕ್ರಿಯಿಸಿ, ಕೋಡಿಹಳ್ಳಿ ಅವರಿಗೆ ಈ ಬಗ್ಗೆ ಜ್ಞಾನ ಇಲ್ಲ ಅಂತ ನಾನು ಭಾವಿಸುತ್ತೇನೆ. ಪದವಿಯಲ್ಲಿ ಶೇ.40 ರಷ್ಟು ರೈತರ ಮಕ್ಕಳಿಗೆ ಅವಕಾಶ ಇದ್ದೆ ಇರುತ್ತದೆ. ನಾನೂ ರೈತನ ಮಗ ನಾವೂ ಕೃಷಿ ಮಾಡಿದ್ದೇನೆ. ನಮ್ಮ ಮುತ್ತಾತನ ಕಾಲದಿಂದಲೂ ಕೃಷಿಯಲ್ಲಿ ತೊಡಗಿದ್ದೇವೆ. ಕೋಡಿಹಳ್ಳಿ ಅವರು ಪ್ರಚಾರಕ್ಕಾಗಿ ಹೀಗೆ ಹೇಳಿದ್ದಾರೆ ಎಂದು ಟಾಂಗ್ ಕೊಟ್ಟರು.

    ಇನ್ನೂ ಸಿನಿಮಾ ನಟನನ್ನು ಕೃಷಿ ಸಚಿವನನ್ನಾಗಿ ಮಾಡಿದ್ದಾರೆ ಎಂದಿದ್ದಾರೆ. ರೈತ ಪರವಾಗಿ ಹೋರಾಟ ಮಾಡಿ 20 ದಿನಗಳ ಕಾಲ ಹಿಂಡಲಗಾ ಜೈಲಿಗೆ ಹೋಗಿ ಬಂದಿದ್ದೇನೆ. ಆದರೆ ಕೋಡಿಹಳ್ಳಿ ಅವರು ಏಕೆ ಹೀಗೆ ಹೇಳಿದ್ದಾರೋ ಗೊತ್ತಿಲ್ಲ. ನಾವು ಕಳಪೆ ಬೀಜ ಪತ್ತೆ ಮಾಡಿದಾಗ ಯಾರೊಬ್ಬರೂ ನಮ್ಮ ಬಗ್ಗೆ ಮಾತನಾಡಲಿಲ್ಲ. ನಾವು ಒಳ್ಳೆ ಕೆಲಸ ಮಾಡುತ್ತಿದ್ದೇವೆ. ಯಾವ ಕೃಷಿ ಮಂತ್ರಿಯ ಕಾಲದಲ್ಲೂ ಕಳಪೆ ಬೀಜ ಹಿಡಿದಿಲ್ಲ. ನಾವು 12 ಕೋಟಿ ಕಳಪೆ ಬೀಜ ಹಿಡಿದಿದ್ದೇವೆ ಎಂದು ತಿರುಗೇಟು ನೀಡಿದರು.

    ವಿಧಾನ ಸೌಧಕ್ಕೆ ರೈತರ ಮುತ್ತಿಗೆ ವಿಚಾರವಾಗಿ ಮಾತನಾಡಿ, ಕಾಯ್ದೆಗಳ ತಿದ್ದುಪಡಿ ಕುರಿತು ಸರ್ಕಾರವು ಸದನಲ್ಲಿ ಸಮರ್ಪಕ ಉತ್ತರ ಕೊಡಲಿದೆ. ಮೆಕ್ಕೆಜೋಳ ಖರೀದಿ ಮಾಡುವಂತೆ ಉಪ ಸಮಿತಿಯಲ್ಲಿ ಒತ್ತಾಯ ಮಾಡಿದ್ದೀವಿ. ಇದನ್ನು ನಾನು ಗ್ಯಾರಂಟಿ ಕೊಡಲ್ಲ. ಈವರೆಗೂ ಖರೀದಿ ಬಗ್ಗೆ ಕೇಂದ್ರ ಸರ್ಕಾರದಿಂದ ಯಾವುದೇ ಮಾಹಿತಿ ಬಂದಿಲ್ಲ ಎಂದು ಬಿಸಿ ಪಾಟೀಲ್ ಮಾಹಿತಿ ನೀಡಿದ್ದಾರೆ.

  • ರಾಜ್ಯದಲ್ಲಿ ಯೂರಿಯಾ ಕೊರತೆ – ರಸಗೊಬ್ಬರ ಒದಗಿಸುವಂತೆ ಡಿವಿಎಸ್‍ಗೆ ಬಿ.ಸಿ ಪಾಟೀಲ್ ಮನವಿ

    ರಾಜ್ಯದಲ್ಲಿ ಯೂರಿಯಾ ಕೊರತೆ – ರಸಗೊಬ್ಬರ ಒದಗಿಸುವಂತೆ ಡಿವಿಎಸ್‍ಗೆ ಬಿ.ಸಿ ಪಾಟೀಲ್ ಮನವಿ

    ನವದೆಹಲಿ: ರಾಜ್ಯಕ್ಕೆ ಅಗತ್ಯ ಪ್ರಮಾಣ ರಸಗೊಬ್ಬರ ಒದಗಿಸುವಂತೆ ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಖಾತೆ ಸಚಿವ ಡಿ.ವಿ ಸದಾನಂದಗೌಡ ಅವರಿಗೆ ಕೃಷಿ ಸಚಿವ ಬಿ.ಸಿ ಪಾಟೀಲ್ ಮನವಿ ಮಾಡಿದ್ದಾರೆ.

    ರಾಜ್ಯದಲ್ಲಿ ಯೂರಿಯಾ ಗೊಬ್ಬರ ಕೊರತೆ ಹಿನ್ನೆಲೆ ದೆಹಲಿಯ ಶಾಸ್ತ್ರೀ ಭವನದಲ್ಲಿರುವ ಕಚೇರಿಯಲ್ಲಿ ಭೇಟಿಯಾದ ಬಿ.ಸಿ ಪಾಟೀಲ್, ರಾಜ್ಯದಲ್ಲಿ ಸೃಷ್ಟಿಯಾಗಿರುವ ಯೂರಿಯಾ ಗೊಬ್ಬರ ಅಭಾವದ ಬಗ್ಗೆ ಮಾಹಿತಿ ನೀಡಿದರು. ಮುಂಗಾರು ಮಳೆ ಉತ್ತಮವಾಗುತ್ತಿದ್ದು ಕೃಷಿ ಚಟುವಟಿಕೆಗಳು ಭರದಿಂದ ಸಾಗಿವೆ. ಹೀಗಾಗಿ ರಾಜ್ಯದಲ್ಲಿ ರಸಗೊಬ್ಬರಕ್ಕೆ ಹೆಚ್ಚಿನ ಬೇಡಿಕೆ ಬಂದಿದ್ದು, ಕೇಂದ್ರ ಸರ್ಕಾರ ರೈತರ ನೆರವಿಗೆ ಬರಬೇಕು ಎಂದು ಮನವಿ ಮಾಡಿದರು.

    ಬಿ.ಸಿ ಪಾಟೀಲ್ ಅವರಿಂದ ಮಾಹಿತಿ ಪಡೆದುಕೊಂಡ ಡಿ.ವಿ ಸದಾನಂದಗೌಡ ಅಧಿಕಾರಗಳ ಸಭೆ ನಡೆಸಿ ಸೂಕ್ತ ಕ್ರಮ ತೆಗೆದುಕೊಳ್ಳುವಂತೆ ಸೂಚನೆ ನೀಡಿದರು. ಈಗಾಗಲೇ ರಾಜ್ಯ ಸರ್ಕಾರ ಅಗತ್ಯತೆಗೆ ಅನುಸಾರ ರಸಗೊಬ್ಬರ ಪೂರೈಕೆ ಮಾಡಿದ್ದು, ರಸಗೊಬ್ಬರದ ಕೊರತೆಯಾಗದಂತೆ ನೋಡಿಕೊಳ್ಳುವ ಭರವಸೆ ನೀಡಿದರು.