Tag: BC Patil

  • ಯಡಿಯೂರಪ್ಪನವರ ಖುರ್ಚಿ ಭದ್ರವಾಗಿದೆ, ಸಿಎಂ ಖುರ್ಚಿ ಖಾಲಿ ಇಲ್ಲ: ಬಿ.ಸಿ.ಪಾಟೀಲ್

    ಯಡಿಯೂರಪ್ಪನವರ ಖುರ್ಚಿ ಭದ್ರವಾಗಿದೆ, ಸಿಎಂ ಖುರ್ಚಿ ಖಾಲಿ ಇಲ್ಲ: ಬಿ.ಸಿ.ಪಾಟೀಲ್

    ಹಾವೇರಿ: ಯಡಿಯೂರಪ್ಪನವರ ಖುರ್ಚಿ ಭದ್ರವಾಗಿದೆ. ಸಿಎಂ ಖುರ್ಚಿ ಖಾಲಿ ಇಲ್ಲ. ಅವರೆ ಮುಂದುವರಿಯುತ್ತಾರೆ. ಇನ್ನು ಎರಡು ವರ್ಷಗಳ ಕಾಲ ಯಡಿಯೂರಪ್ಪನವರೆ ಸಿಎಂ ಆಗಿರುತ್ತಾರೆ. ಮುಂದಿನ ಚುನಾವಣೆ ಸಹ ಯಡಿಯೂರಪ್ಪನವರ ನಾಯಕತ್ವದಲ್ಲೇ ನಡೆಯಲಿದೆ ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ್ ಹೇಳಿದ್ದಾರೆ. ಇದನ್ನೂ ಓದಿ: ವೃತ್ತಿಪರ ಕೋರ್ಸ್ ಪ್ರವೇಶಕ್ಕೆ ಸಿಇಟಿ ಅಂಕ ಪರಿಗಣಿಸಿ- ಡಿಸಿಎಂಗೆ ಸುರೇಶ್ ಕುಮಾರ್ ಮನವಿ

    ಹಾವೇರಿ ಜಿಲ್ಲೆ ಹಿರೇಕೆರೂರು ತಾಲೂಕಿನ ಸಾತೇನಹಳ್ಳಿ ಗ್ರಾಮದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಾಯಕತ್ವದಲ್ಲಿ ಯಾವುದೇ ಬದಲಾವಣೆ ಇಲ್ಲ. ಯಾರ್ಯಾರೋ ಎಲ್ಲೆಲ್ಲೋ ಮಾತನಾಡುತ್ತಾರೆ ಅಂತಾ ಅದಕ್ಕೆಲ್ಲ ಉತ್ತರ ಕೊಡೋಕೆ ಆಗೋದಿಲ್ಲ. ಸಿ.ಪಿ.ಯೋಗೇಶ್ವರಗೆ ಪರೋಕ್ಷವಾಗಿ  ಟಾಂಗ್ ನೀಡಿದರು. ಈಗ ಅದನ್ನ ಮಾತನಾಡೋ ವಿಚಾರವಲ್ಲ. ಅದನ್ನ ಮಾತಾಡೋಕೆ ರಾಜ್ಯದ, ರಾಷ್ಟ್ರದ ಅಧ್ಯಕ್ಷರಿದ್ದಾರೆ. ಅವರೆ ಮಾತಾಡ್ತಾರೆ, ನಾವು ಕೊರೊನಾ ಬಗ್ಗೆ ಮಾತಾಡೋಣ ಎಂದರು. ಇದನ್ನೂ ಓದಿ: ವೆಂಕಯ್ಯ ನಾಯ್ಡು ಟ್ವಿಟ್ಟರ್ ಖಾತೆಯ ಬ್ಲೂ ಟಿಕ್ ಮಾಯಕ್ಕೆ ಅಸಲಿ ಕಾರಣವೇನು ಗೊತ್ತಾ?

     

    ಮೈಸೂರಿನಲ್ಲಿ IAS ಅಧಿಕಾರಿಗಳು ಬಹಿರಂಗವಾಗಿ ಸಾರ್ವಜನಿಕವಾಗಿ ಕಿತ್ತಾಡೋದು ಸರಿಯಲ್ಲ. ಅಧಿಕಾರಿಗಳು ನಿಯಮಗಳ ಅಡಿ ಕೆಲಸ ಮಾಡಬೇಕು. ಯಾರೂ ಸರ್ಕಾರಕ್ಕಿಂತ, ಇಲಾಖೆಗಿಂತ ದೊಡ್ಡವರಲ್ಲ. ಅವರ ಇತಿಮಿತಿ ಅರಿತು ಕೆಲಸ ಮಾಡಬೇಕು. ಈ ರೀತಿ ಬೀದಿರಂಪ ಮಾಡುವುದರಿಂದ ಸರ್ಕಾರದ ಘನತೆಗೆ ಕುಂದು ಬರುತ್ತದೆ. ನಮ್ಮ ಮುಖ್ಯಮಂತ್ರಿಗಳು ಅಂಥವರ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕ್ರಮ ಜರುಗಿಸುತ್ತಾರೆ ಎಂದು  ಹೇಳಿದ್ದಾರೆ.  ಇದನ್ನೂ ಓದಿ: ಶಿಲ್ಪಾ ನಾಗ್ ರಾಜೀನಾಮೆ ಬೆನ್ನಲ್ಲೇ ಹೊಸ ಟೆನ್ಶನ್ -ಕಠಿಣ ನಿರ್ಧಾರಕ್ಕೆ ಬಂದ್ರಾ ಜಿಲ್ಲಾ ಉಸ್ತುವಾರಿ ಸಚಿವ?

    ರಾಜ್ಯದಲ್ಲಿ ಎಲ್ಲೂ ಬಿತ್ತನೆ ಬೀಜ ಮತ್ತು ರಸಗೊಬ್ಬರದ ಕೊರತೆ ಇಲ್ಲ. ಕೃತಕ ಅಭಾವ ಸೃಷ್ಟಿಸೋರ ಮೇಲೆ ಕಠಿಣ ಕ್ರಮ ಕೈಗೊಳ್ಳಲಾಗುವುದು. ಕೃತಕ ಅಭಾವ ಸೃಷ್ಟಿಸಿದರೆ ಪೊಲೀಸ್ ಕೇಸ್ ಮಾಡಿ ಕ್ರಮ ಕೈಗೊಳ್ಳಲಾಗುವುದು ಎಂದರು.

  • ಆಶಾ ಕಾರ್ಯಕರ್ತೆಯರಿಗೆ ಮಾಸ್ಕ್, ರಕ್ಷಣಾ ಸಾಮಗ್ರಿ ನೀಡದ್ದಕ್ಕೆ ಡಿಸಿಗೆ ಬಿ.ಸಿ.ಪಾಟೀಲ್ ಕ್ಲಾಸ್

    ಆಶಾ ಕಾರ್ಯಕರ್ತೆಯರಿಗೆ ಮಾಸ್ಕ್, ರಕ್ಷಣಾ ಸಾಮಗ್ರಿ ನೀಡದ್ದಕ್ಕೆ ಡಿಸಿಗೆ ಬಿ.ಸಿ.ಪಾಟೀಲ್ ಕ್ಲಾಸ್

    ಹಾವೇರಿ: ಆಶಾ ಕಾರ್ಯಕರ್ತೆಯರಿಗೆ ಮಾಸ್ಕ್, ಸ್ಯಾನಿಟೈಸರ್ ಸೇರಿದಂತೆ ಸೂಕ್ತ ರಕ್ಷಣಾ ಸಾಮಗ್ರಿ ನೀಡದ್ದಕ್ಕೆ ಜಿಲ್ಲಾಧಿಕಾರಿ ವಿರುದ್ಧ ಕೃಷಿ ಸಚಿವ ಬಿ.ಸಿ.ಪಾಟೀಲ್ ಗರಂ ಆಗಿ ಫೋನ್ ನಲ್ಲಿಯೇ ತರಾಟೆಗೆ ತೆಗೆದುಕೊಂಡಿದ್ದಾರೆ.

    ಜಿಲ್ಲೆಯ ಹಿರೆಕೇರೂರು ಪಟ್ಟಣದ ತಹಶೀಲ್ದಾರ ಕಚೇರಿ ಬಳಿ ಆಶಾ ಕಾರ್ಯಕರ್ತೆಯರು ಸಚಿವರ ಬಳಿ ತಮ್ಮ ಸಮಸ್ಯೆ ಹೇಳಿಕೊಂಡಿದ್ದು, ಮಾಸ್ಕ್, ಸ್ಯಾನಿಟೈಸರ್ ಸೇರಿದಂತೆ ಯಾವುದೇ ಸುರಕ್ಷತಾ ಸಾಮಗ್ರಿ ನೀಡಿಲ್ಲ. ಕಣ್ಣೀರು ಒರೆಸಿಕೊಳ್ಳುತ್ತ ಸಚಿವರೆದುರು ತಮ್ಮ ಅಳಲು ತೋಡಿಕೊಂಡರು. ಜಿಲ್ಲಾಧಿಕಾರಿ ಸಂಜಯ್ ಶೆಟ್ಟೆಣ್ಣವರ್ ವಿರುದ್ಧ ಗರಂ ಆಗಿ ದೂರವಾಣಿಯಲ್ಲಿ ಡಿಸಿಯನ್ನ ತರಾಟೆಗೆ ತೆಗೆದುಕೊಂಡು, ಆಶಾ ಕಾರ್ಯಕರ್ತೆಯರಿಗೆ ಒಂದು ಮಾಸ್ಕ್ ಕೊಟ್ಟಿಲ್ಲ, ಸ್ಯಾನಿಟೈಸರ್ ಇಲ್ಲ, ಏನು ಮಾಡುತ್ತಿದ್ದೀರಿ ಎಂದು ಕಿಡಿಕಾರಿದ್ದಾರೆ.

    ಜಿಲ್ಲೆಯಲ್ಲಿ ಏನ್ ವ್ಯವಸ್ಥೆ ನಡೆಯುತ್ತಿದೆ, ಇಲ್ಲದ ಕತೆಗಳನ್ನು ಹೇಳಬೇಡಿ, ನಾನು ಇದನ್ನು ಗಂಭೀರವಾಗಿ ಪರಿಗಣಿಸಿದ್ದೇನೆ. ಟಿಎಚ್‍ಓ ಕೇಳಿದರೆ ಕೊಟ್ಟಿಲ್ಲ ಅಂತಿದ್ದಾರೆ. ಎನ್‍ಡಿಆರ್ ಎಫ್, ಎಸ್ ಡಿಆರ್ ಎಫ್ ಫಂಡ್ ನಲ್ಲಿ ಮಾಸ್ಕ್ ಕೊಳ್ಳೋಕೆ ಏನಾಗಿದೆ ನಿಮಗೆ? ಎಂದು ಪ್ರಶ್ನಿಸಿದ್ದಾರೆ. ಇದಕ್ಕೆ ಉತ್ತರಿಸಿದ ಡಿಸಿ ಸರ್ ವಿತರಣೆ ಆಗಿದೆ ಎಂದು ಫೋನ್ ನಲ್ಲಿ ಸಬೂಬು ನೀಡಿದರು.

    ಬಳಿಕ ಸಚಿವರು ಕೆಂಡಾಮಂಡಲರಾಗಿ ಮತ್ತೆ ಕ್ಲಾಸ್ ತೆಗೆದುಕೊಂಡರು. ಆಶಾ ಕಾರ್ಯಕರ್ತರ ಜೊತೆ ವೀಡಿಯೋ ಕಾಲ್ ನಲ್ಲಿ ಮಾತನಾಡುತ್ತೀರಾ? ಅವರನ್ನೆ ಕೇಳ್ತೀರಾ ಎಂದು ಗರಂ ಆದರು. ಮಾಸ್ಕ್, ಸ್ಯಾನಿಟೈಸರ್ ಇಲ್ಲದೆ ಆಶಾಗಳು ಹಳ್ಳಿಗಳಲ್ಲಿ ಹೇಗೆ ಕೆಲಸ ಮಾಡಬೇಕು. ನಿಮ್ಮ ಮತ್ತು ಅಧಿಕಾರಿಗಳ ನಡುವೆ ಸಮನ್ವಯದ ಕೊರತೆಯಿಂದ ಜನರು ಸಾಯುತ್ತಿದ್ದಾರೆ. ಇದು ಸಾಮಾನ್ಯ ವಿಚಾರವಲ್ಲ, ತುಂಬಾ ಗಂಭೀರವಾದ ವಿಚಾರ ಬೇಗ ಕೊಡುವ ವ್ಯವಸ್ಥೆ ಮಾಡಿ ಎಂದರು.

  • ಮದ್ದಾನೆ ಗುದ್ದಾಡುವಾಗ ಗುಬ್ಬಿ ಹೋಗಿ ಬುದ್ಧಿ ಹೇಳುವುದು ಸರಿ ಅಲ್ಲ: ಬಿ.ಸಿ.ಪಾಟೀಲ್

    ಮದ್ದಾನೆ ಗುದ್ದಾಡುವಾಗ ಗುಬ್ಬಿ ಹೋಗಿ ಬುದ್ಧಿ ಹೇಳುವುದು ಸರಿ ಅಲ್ಲ: ಬಿ.ಸಿ.ಪಾಟೀಲ್

    ಕೊಪ್ಪಳ: ಸಿದ್ದರಾಮಯ್ಯ, ಈಶ್ವರಪ್ಪ ಮದ್ದಾನೆಗಳು. ಹೀಗಾಗಿ ಮದ್ದಾನೆಗಳು ಗುದ್ದಾಡುವಾಗ ಗುಬ್ಬಿ ಹೋಗಿ ಬುದ್ಧಿ ಹೇಳುವುದು ಸರಿಯಲ್ಲ ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ್ ಹೇಳಿದ್ದಾರೆ.

    ಜಿಲ್ಲೆಯ ಗಿಣಗೇರಿಯಲ್ಲಿ ಮಾತನಾಡಿದ ಅವರು, ಅವರ ಬಗ್ಗೆ ನಾನು ಮಾತನಾಡುವುದಿಲ್ಲ. ಎರಡೂ ಮದ್ದಾನೆಗಳು, ಅವರಿಗೆ ಅವರೇ ಉತ್ತರ ಕೊಡುತ್ತಾರೆ. ಅವರ ಬಗ್ಗೆ ನಾನು ಮಾತನಾಡುವುದು ಸರಿಯಲ್ಲ ಎಂದರು.

    ಲಾಕ್‍ಡೌನ್ ಕುರಿತು ಮುಖ್ಯಮಂತ್ರಿ ಯಡಿಯೂರಪ್ಪ ಅವರು ಸ್ಪಷ್ಟಪಡಿಸಿದ್ದು, 18 ರಂದು ಸರ್ವಪಕ್ಷ ಸಭೆ ಕರೆದಿದ್ದಾರೆ. ಲಾಕ್‍ಡೌನ್ ಮಾಡುವುದು ಸರಿಯಲ್ಲ, ಜಾತ್ರೆ ಸೇರಿದಂತೆ ವಿವಿಧ ಕಾರ್ಯಕ್ರಮಗಳಲ್ಲಿ ಜನ ನಿಯಂತ್ರಣ ಹಾಕಿಕೊಳ್ಳಬೇಕು. ಜನತೆ ಸಹಕಾರ ಕೊಡಬೇಕು. ಮಾಹಾರಾಷ್ಟ್ರ, ದೆಹಲಿಯಲ್ಲಿ ಅತೀ ಹೆಚ್ಚು ಕೇಸ್ ಇದ್ದರೂ ಲಾಕ್‍ಡೌನ್ ಘೋಷಣೆಯಾಗಿಲ್ಲ. ಕಳೆದ ಬಾರಿ ಜನರು ಅನುಭವಿಸಿದ್ದು, ಎಚ್ಚೆತ್ತುಕೊಳ್ಳಬೇಕು, ಸಹಕಾರ ಮಾಡದೇ ಹೋದರೆ ಲಾಕ್‍ಡೌನ್ ಮಾಡುವುದು ಅನಿವಾರ್ಯವಾಗುತ್ತದೆ ಎಂದರು.

    ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಚುನಾವಣೆ ಅನಿವಾರ್ಯವಾಗಿದ್ದು, ಚುನಾವಣೆ ಮಾಡುವವರು ಮಾಡುತ್ತಾರೆ. ನಿಯಂತ್ರಣ ಮಾಡೋರು ನಿಯಂತ್ರಣ ಮಾಡುತ್ತಾರೆ. ಉಪ ಚುನಾವಣೆಯ ಮೂರು ಕ್ಷೇತ್ರದಲ್ಲಿ ನಾವೇ ಗೆಲ್ಲುತ್ತೇವೆ ಎಂದರು.

    ಕೊಪ್ಪಳ ಜಿಲ್ಲೆಯಲ್ಲಿ ಕೊರೊನಾ ಕೇಸ್ ಹೆಚ್ಚಳವಾಗುತ್ತಿರುವ ಹಿನ್ನಲೆಯಲ್ಲಿ, ಇಂದು ಕೊರೊನಾ ನಿಯಂತ್ರಣಕ್ಕೆ ಸಭೆ ಕರೆದಿದ್ದು, ನಾವೇ ಅಂತರ ಕಾಯ್ತಿಲ್ಲ. ಚಿತ್ರರಂಗ, ಹೊಟೆಲ್ ಗೆ ಇಷ್ಟು ದಿನ ಅನುಮತಿ ಇತ್ತು. ಈಗ ನಿರ್ಬಂಧ ಹೇರಲಾಗಿದೆ ಎಂದರು.

    ಬೆಳೆಗಳ ಬೆಲೆ ಕುಸಿತಕ್ಕೆ ಸಂಬಂಧಿಸಿದಂತೆ ಪ್ರಶ್ನೆಗೆ ಉತ್ತರಿಸಿದ ಸಚಿವರು, ನೀವು ಕಾಂಟ್ರಾವರ್ಸಿ ಪ್ರಶ್ನೆ ಕೇಳಬೇಡಿ ಎಂದು ಗರಂ ಆದರು. ರೈತರು ಸಂಕಷ್ಟದಲ್ಲಿದ್ದಾರೆ, ಈ ವೇಳೆ ಸರ್ಕಾರ ರೈತರ ನೆರವಿಗೆ ಬರಬೇಕು ಎನ್ನುವುದಕ್ಕೂ ಅವರು ಗರಂ ಆದರು. ಕೊನಗೆ ರೈತರು ಬೆಲೆ ಕುಸಿತದಿಂದ ನಷ್ಟ ಅನುಭವಿಸಿದರೆ ಬೆಳೆ ನಾಶ ಮಾಡದೇ ಸ್ವಲ್ಪ ದಿನ ಕಾಯ್ದು ಮಾರಾಟ ಮಾಡಬೇಕು. ತುಂಗಭದ್ರಾ ಜಲಾಶಯದಿಂದ ಏ.30ರ ವರೆಗೂ ಕಾಲುವೆಗೆ ನೀರು ಹರಿಸಲು ಹಂತ ಹಂತವಾಗಿ ನಿರ್ಧಾರ ಮಾಡಲಾಗುವುದು ಎಂದು ಇದೇ ವೇಳೆ ತಿಳಿಸಿದರು.

  • ಜಾರಕಿಹೊಳಿ ಮೇಲಿನ ಆರೋಪ ಸಾಬೀತಾದ್ರೆ ಖಂಡಿತ ಅರೆಸ್ಟ್ ಮಾಡ್ತಾರೆ: ಬಿ.ಸಿ.ಪಾಟೀಲ್

    ಜಾರಕಿಹೊಳಿ ಮೇಲಿನ ಆರೋಪ ಸಾಬೀತಾದ್ರೆ ಖಂಡಿತ ಅರೆಸ್ಟ್ ಮಾಡ್ತಾರೆ: ಬಿ.ಸಿ.ಪಾಟೀಲ್

    ಹಾವೇರಿ: ಸಿದ್ದರಾಮಯ್ಯ ಹೇಳಿದ ತಕ್ಷಣ ವೇದಾಂತ ಏನಲ್ಲ. ಹಿಂದೆ ಮೇಟಿಯವರ ಕೇಸ್ ನಲ್ಲಿ ಮಹಿಳೆ ಬಂದು ಹೇಳಿಕೆ ಕೊಟ್ಟರೂ ಎಫ್‍ಐಆರ್ ಆಗಿರಲಿಲ್ಲ ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ್ ಹೇಳಿದ್ದಾರೆ.

    ಜಿಲ್ಲೆಯ ಹಿರೇಕೆರೂರು ಪಟ್ಟಣದ ನಿವಾಸದಲ್ಲಿ ಮಾತನಾಡಿದ ಅವರು, ನಮ್ಮ ಸರ್ಕಾರ ಎಸ್‍ಐಟಿ ತನಿಖೆಗೆ ಸೂಚನೆ ಕೊಟ್ಟಿದೆ. ಸಂತ್ರಸ್ತೆ ಸಹ ಪ್ರಕರಣ ದಾಖಲಿಸಿದ್ದಾರೆ. ಅವಶ್ಯಕತೆ ಕಂಡುಬಂದರೆ, ತನಿಖೆಯಲ್ಲಿ ರಮೇಶ್ ಜಾರಕಿಹೊಳಿ ಮೇಲಿನ ಆರೋಪ ಸಾಬೀತಾದರೆ ಖಂಡಿತ ಬಂಧಿಸುತ್ತಾರೆ ಎಂದರು.

    ಚಿತ್ರರಂಗಕ್ಕೆ ಕೊರೊನಾ ನಿಯಮದಲ್ಲಿ ಸಡಿಲಿಕೆ ಕೊಟ್ಟಿರುವುದನ್ನು ಸಮರ್ಥಿಸಿಕೊಂಡ ಸಚಿವರು, ಚಿತ್ರರಂಗಕ್ಕೆ ಸಡಿಲಿಕೆ ಅವಶ್ಯ ಇದೆ. ಎಲ್ಲರೂ ಮಾಸ್ಕ್ ಧರಿಸಬೇಕೆಂದು ಸೂಚನೆ ಕೊಟ್ಟಿದ್ದಾರೆ. ಕಳೆದ ವರ್ಷದಂತೆ ಈ ವರ್ಷವೂ ಜನ ಕೊರೊನಾ ನಿಯಮಗಳನ್ನು ನಿರ್ಲಕ್ಷಿಸುತ್ತಿದ್ದಾರೆ. ಜನರ ಜವಾಬ್ದಾರಿ ಬಹಳಷ್ಟಿದೆ. ಈಗ ಒಂದು ವಾರದ ಮಟ್ಟಿಗೆ ಸಿನಿಮಾ ಮಂದಿರಗಳಲ್ಲಿ ಶೇ.100 ಆಸನ ಭರ್ತಿಗೆ ಅವಕಾಶ ನೀಡಲಾಗಿದೆ. ಆದರೆ ಮುಂಜಾಗ್ರತಾ ಕ್ರಮ ಕೈಗೊಳ್ಳಬೇಕೆಂದು ಸೂಚಿಸಲಾಗಿದೆ. ಜನರೂ ಈ ಬಗ್ಗೆ ಜಾಗೃತರಾಗಿರಬೇಕು ಎಂದರು.

    ಉಪಚುನಾವಣೆ ವೇಳೆ ಬಿಜೆಪಿ ನಾಯಕರ ಮನಸ್ತಾಪದ ಬಗ್ಗೆ ಪ್ರತಿಕ್ರಿಯಿಸಿದ ಅವರು, ಮನೆಯೊಳಗೆ ಸಣ್ಣಪುಟ್ಟ ವ್ಯತ್ಯಾಸಗಳಿರುತ್ತವೆ. ವರಿಷ್ಠರು ಇದನ್ನು ಸರಿಪಡಿಸುವ ಕೆಲಸ ಮಾಡುತ್ತಾರೆ. ಎಲ್ಲ ಪಕ್ಷದಲ್ಲೂ ಸಣ್ಣ, ಪುಟ್ಟ ಭಿನ್ನಾಭಿಪ್ರಾಯ ಇರುತ್ತವೆ ಎಂದರು.

    ವಿಜಯೇಂದ್ರ ದೇವ ಲೋಕದಿಂದ ಬಂದಿದ್ದಾರಾ ಎಂಬ ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಕುರಿತು ಪ್ರತಿಕ್ರಿಯಿಸಿದ ಅವರು, ವಿಜಯೇಂದ್ರ ರಾಜ್ಯ ಬಿಜೆಪಿಯ ಉಪಾಧ್ಯಕ್ಷರು. ಕಾಮಾಲೆ ಕಣ್ಣಿನವರಿಗೆ ಲೋಕವೆಲ್ಲ ಹಳದಿ ಕಾಣುತ್ತದೆ. ಹಾಗೇ ಕಾಂಗ್ರೆಸ್ ನವರಿಗೆ ವಿಜಯೇಂದ್ರ ನೋಡಿದಾಕ್ಷಣ ಬೇರೆ ರೀತಿ ಕಾಣುತ್ತಿದೆ. ವಿಜಯೇಂದ್ರ ಯುವನಾಯಕರು, ಚಾಣಾಕ್ಷರಿದ್ದಾರೆ. ಮಸ್ಕಿ, ಬಸವಕಲ್ಯಾಣ, ಬೆಳಗಾವಿ ಚುನಾವಣೆಯಲ್ಲೂ ಅವರು ಪ್ರಭಾವವನ್ನು ತೋರಿಸುತ್ತಾರೆ. ಕ್ಷುಲ್ಲಕ ವಿಚಾರಗಳಿಗೆ ವಿಜಯೇಂದ್ರರನ್ನು ಟೀಕೆ ಮಾಡುವುದು ಸರಿಯಲ್ಲ ಎಂದರು.

  • ಕೊನೆಗೂ ಎಚ್ಚೆತ್ತು 2ನೇ ಹಂತದ ಲಸಿಕೆಯನ್ನ ಆಸ್ಪತ್ರೆಯಲ್ಲಿ ಹಾಕಿಸಿಕೊಂಡ್ರು ಬಿ.ಸಿ ಪಾಟೀಲ್

    ಕೊನೆಗೂ ಎಚ್ಚೆತ್ತು 2ನೇ ಹಂತದ ಲಸಿಕೆಯನ್ನ ಆಸ್ಪತ್ರೆಯಲ್ಲಿ ಹಾಕಿಸಿಕೊಂಡ್ರು ಬಿ.ಸಿ ಪಾಟೀಲ್

    ಹಾವೇರಿ: ಕೃಷಿ ಸಚಿವ ಬಿ.ಸಿ.ಪಾಟೀಲ್ ಮೊದಲ ಹಂತದ ಕೊರೊನಾ ಲಸಿಕೆಯನ್ನು ಮನೆಯಲ್ಲಿಯೇ ಪಡೆದುಕೊಂಡಿದ್ದಾಗ ವಿವಾದ ಸೃಷ್ಟಿಯಾಗಿತ್ತು. ಇದೀಗ ಎಚ್ಚೆತ್ತು ಬಿ.ಸಿ.ಪಾಟೀಲ್ ಎರಡನೇ ಹಂತದ ಲಸಿಕೆಯನ್ನು ಹಾವೇರಿ ಜಿಲ್ಲೆ ಹಿರೇಕೆರೂರು ತಾಲೂಕಿನ ಸರಕಾರಿ ಆಸ್ಪತ್ರೆಯಲ್ಲಿ ಪಡೆದುಕೊಂಡಿದ್ದಾರೆ.

    ಮಾರ್ಚ್ 2 ರಂದು ಮೊದಲನೇ ಹಂತದ ಲಸಿಕೆಯನ್ನು ಬಿ.ಸಿ.ಪಾಟೀಲ್ ಹಾಗೂ ಪತ್ನಿ ಮನೆಯಲ್ಲಿ ಲಸಿಕೆ ಹಾಕಿಸಿಕೊಂಡು ಸಾಕಷ್ಟು ವಿವಾದಕ್ಕೆ ಕಾರಣವಾಗಿತ್ತು. ಅಲ್ಲದೆ ಮನೆಯಲ್ಲಿಯೇ ವ್ಯಾಕ್ಸಿನ್ ನೀಡಿದ ತಾಲೂಕು ಆರೋಗ್ಯಾಧಿಕಾರಿ ಹಾಗೂ ಆರೋಗ್ಯ ಇಲಾಖೆಯ ಸಿಬ್ಬಂದಿಗೆ ನೋಟೀಸ್ ನೀಡಿದ ಆರೋಗ್ಯ ಇಲಾಖೆ, ಈಗ ವೈದ್ಯಾಧಿಕಾರಿ ಡಾ.ಝಡ್. ಆರ್. ಮಕಾಂದಾರ್ ಅಮಾನತು ಮಾಡಿ ಆದೇಶ ನೀಡಿದೆ.

     

    ಇಂದು ಹಿರೇಕೆರೂರಿನ ಸರ್ಕಾರಿ ಆಸ್ಪತ್ರೆಯಲ್ಲಿ, ಎರಡನೇ ಹಂತದ ಕೋವಿಡ್ ಲಸಿಕೆಯನ್ನು ಪಡೆದೆನು.

    45 ವರ್ಷ ಮೇಲ್ಪಟ್ಟ ಎಲ್ಲ ನಾಗರೀಕರಿಗೂ ಕೊರೊನಾ…

    Posted by B.C.Patil on Friday, April 2, 2021

    ವಿವಾದದ ನಂತರ ಆಸ್ಪತ್ರೆಗೆ ಹೋಗಿ ಆಸ್ಪತ್ರೆಯಲ್ಲಿ ಎರಡನೇ ಹಂತದ ಲಸಿಕೆಯನ್ನು ಸಚಿವ ಬಿ.ಸಿ. ಪಾಟೀಲ್ ಹಾಕಿಸಿಕೊಂಡಿದ್ದಾರೆ. ಎರಡನೇ ಹಂತದ ಲಸಿಕೆ ಹಾಕಿಸಿಕೊಂಡದ್ದನ್ನು ಫೇಸ್ ಬುಕ್‍ನಲ್ಲಿ ಪೋಸ್ಟ್ ಮಾಡಿಕೊಂಡಿದ್ದು, 45 ವರ್ಷ ಮೇಲ್ಪಟ್ಟ ಎಲ್ಲಾ ನಾಗರಿಕರು ಸ್ವಯಂ ಪ್ರೇರಿತವಾಗಿ ಕೋವಿಡ್ ಲಸಿಕೆಯನ್ನು ಪಡೆದುಕೊಳ್ಳಿ, ಲಸಿಕೆ ಪಡೆದುಕೊಂಡು ಕೊರೊನಾ ಸೋಂಕಿನಿಂದ ದೂರವಿರಿ ಎಂದು ಫೇಸ್‍ಬುಕ್‍ನಲ್ಲಿ ಪೋಸ್ಟ್ ಮಾಡಿದ್ದಾರೆ.

  • ಬಿಸಿ ಪಾಟೀಲ್‍ಗೆ ಮನೆಯಲ್ಲಿ ಲಸಿಕೆ ನೀಡಿದ ಆರೋಗ್ಯಾಧಿಕಾರಿ ಅಮಾನತು

    ಬಿಸಿ ಪಾಟೀಲ್‍ಗೆ ಮನೆಯಲ್ಲಿ ಲಸಿಕೆ ನೀಡಿದ ಆರೋಗ್ಯಾಧಿಕಾರಿ ಅಮಾನತು

    ಹಾವೇರಿ: ಕೃಷಿ ಸಚಿವ ಬಿ.ಸಿ.ಪಾಟೀಲ್ ಅವರಿಗೆ ಮನೆಯಲ್ಲಿಯೇ ಕೊರೊನಾ ಲಸಿಕೆಗೆ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಹಿರೇಕೆರೂರು ತಾಲ್ಲೂಕು ವೈದ್ಯಾಧಿಕಾರಿಯನ್ನು ಅಮಾನತು ಮಾಡಲಾಗಿದೆ. ಭಾರತೀಯ ಆರೋಗ್ಯ ಸೇವಾ ಆಯುಕ್ತ ಕೆ.ವಿ.ತ್ರಿಲೋಕಚಂದ್ರ ಟಿಎಚ್‍ಒ ಡಾ.ಝಡ್.ಆರ್.ಮಕಾಂದಾರ್ ಅವರನ್ನು ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ.

    ಮಾರ್ಚ್ 2 ರಂದು ಕೃಷಿ ಸಚಿವ ಬಿ.ಸಿ.ಪಾಟೀಲ್‌ ಮನೆಯಲ್ಲಿಯೇ ದಂಪತಿಗೆ ವಾಕ್ಸಿನ್ ನೀಡಿದ್ದು ದೊಡ್ಡಮಟ್ಟದ ವಿವಾದವಾಗಿತ್ತು. ಅಲ್ಲದೆ ಮನೆಯಲ್ಲಿಯೇ ಲಸಿಕೆ ನೀಡಿದ್ದಕ್ಕೆ ಹಾವೇರಿಯ ಡಿಎಚ್‍ಓ ಕಾರಣ ಕೇಳಿ ನೋಟಿಸ್ ನೀಡಿದ್ದರು. ಈಗ ಭಾರತೀಯ ಆರೋಗ್ಯ ಸೇವಾ ಆಯುಕ್ತ ಕೆ.ವಿ.ತ್ರೀಲೋಕಚಂದ್ರ ಸೇವೆಯಿಂದ ಅಮಾನತು ಮಾಡಿ ಆದೇಶ ಮಾಡಿದ್ದಾರೆ.

    ಕೊರೊನಾ ಲಸಿಕೆ ಹಂಚಿಕೆ ಮಾರ್ಗಸೂಚಿಗಳ ಪ್ರಕಾರ ನಿಗದಿಪಡಿಸಿದ ಆಸ್ಪತ್ರೆಗಳಲ್ಲೇ ಲಸಿಕೆಯನ್ನು ನೀಡಬೇಕು. ಆದರೆ ಇಲ್ಲಿ ನಿಯಮ ಉಲ್ಲಂಘನೆ ಆಗಿತ್ತು. ಮಕಾಂದಾರ ಸೂಚನೆಯಂತೆ ಕಿಟ್ ಹೊರಗೆ ತಂದು ಸಚಿವರ ಮನೆಗೆ ತೆರಳಿ ತಾಲೂಕಾಸ್ಪತ್ರೆಯ ಸಿಬ್ಬಂದಿ ಲಸಿಕೆ ಹಾಕಿದ್ದರು.

    ಸಚಿವರ ಮನೆಗೆ ತೆರಳಿ ಲಸಿಕೆ ನೀಡಿದ್ದ ಸಂಬಂಧ ಡಾ. ಮಕಾಂದಾರ್ ಅವರಿಗೆ ಕಾರಣ ಕೇಳಿ ಡಾ.ರಾಜೇಂದ್ರ ದೊಡ್ಡಮನಿ ಅವರು ಮಾರ್ಚ್ 2 ರಂದು ನೋಟಿಸ್ ಜಾರಿ ಮಾಡಿದ್ದರು. ಸಚಿವರು ತಾಲೂಕಿನ ಪ್ರಥಮ ಪ್ರಜೆಯಾಗಿದ್ದಾರೆ. ಅವರಿಗೆ ಬೈಲ್ಯಾಟರಲ್ ನೀ ಆಸ್ಟಿಯೋ ಆಥ್ರ್ರಿಟಿಸ್ ಹಾಗೂ ಕ್ರಾನಿಕ್ ಲೋಬ್ಯಾಕ್ ಎಖ್‍ಆರೋಗ್ಯ ಸಮಸ್ಯೆ ಇರುವುದರಿಂದ ಸಚಿವರ ಕರೆಯ ಮೇರೆಗೆ ಮುನ್ನೆಚ್ಚರಿಕಾ ಕ್ರಮಗಳೊಂದಿಗೆ ಅವಶ್ಯಕ ತುರ್ತು ಸೇವೆ ಅಂಬುಲೆನ್ಸ್ ಹಾಗೂ ಔಷಧಗಳೊಂದಿಗೆ ಸಚಿವರಿಗೆ ಕೋವಿಡ್-19 ಲಸಿಕೆಯನ್ನು ನೀಡಿ ನಂತರ 30 ನಿಮಿಷಗಳವರೆಗೆ ನಿಗಾವಹಿಸಲಾಗಿತ್ತು. ಇನ್ನು ಮುಂದೆ ಕೋವಿಡ್-19 ಮಾರ್ಗಸೂಚಿ ಪ್ರಕಾರ ಸಾರ್ವಜನಿಕರಿಗೆ ಲಸಿಕೆ ನೀಡುತ್ತೇವೆ ಎಂದು ಉತ್ತರ ನೀಡಿದ್ದರು.

    ಮನೆಯಲ್ಲಿ ಲಸಿಕೆ ಹಾಕಿಸಿಕೊಂಡಿದ್ದನ್ನು ಬಿಸಿ ಪಾಟೀಲ್ ಸಮರ್ಥಿಸಿಕೊಂಡಿದ್ದರು. ದೊಡ್ಡ ವಿಷಯವೇನಲ್ಲ. ಅದರಲ್ಲಿ ತಪ್ಪೇನಿದೆ ಎಂದು ಕೃಷಿ ಸಚಿವ ಬಿ.ಸಿ ಪಾಟೀಲ್ ಪ್ರಶ್ನಿಸಿದ್ದರು. ನಾವೇನು ಅಪರಾಧ ಮಾಡಿದ್ದೇವಾ? ಕಳ್ಳತನ ಮಾಡಿದ್ದೀವಾ.? ನಾನು ಸರ್ಕಾರದ ಒಂದು ಭಾಗ. ನಾನು ಮನೆಯಲ್ಲಿ ಲಸಿಕೆ ಹಾಕಿಸಿಕೊಂಡು ಮಾದರಿಯಾಗಿದ್ದೇನೆ. ಈ ವಿಷಯ ಎಲ್ಲರಿಗೂ ತಿಳಿಯಿತು. ಇದರಿಂದ ಇನ್ನಷ್ಟು ಮಂದಿ ಲಸಿಕೆ ಹಾಕಿಸಿಕೊಳ್ಳಲು ಮುಂದೆ ಬರುತ್ತಾರೆ ಎಂದಿದ್ದರು.

  • ಸಿಡಿ ಭಯದಲ್ಲಿ ಫೋನ್‍ನಲ್ಲಿ ಬ್ಯುಸಿಯಾದ ಬಿ.ಸಿ ಪಾಟೀಲ್, ಸುಧಾಕರ್..!

    ಸಿಡಿ ಭಯದಲ್ಲಿ ಫೋನ್‍ನಲ್ಲಿ ಬ್ಯುಸಿಯಾದ ಬಿ.ಸಿ ಪಾಟೀಲ್, ಸುಧಾಕರ್..!

    ಬೆಂಗಳೂರು: ರಾಜ್ಯದ ಕೃಷಿ ಸಚಿವ ಬಿ.ಸಿ ಪಾಟೀಲ್ ಮತ್ತು ಆರೋಗ್ಯ ಹಾಗೂ ವೈದ್ಯಕೀಯ ಕಲ್ಯಾಣ ಇಲಾಖಾ ಸಚಿವ ಸುಧಾಕರ್ ಸರ್ಕಾರಿ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು ಕೂಡ ವೇದಿಕೆಯ ಮೇಲೆ ಫೋನ್ ನಲ್ಲಿ ಬ್ಯುಸಿಯಾಗಿದ್ದರು.

    ಸಚಿವರೊಬ್ಬರ ರಾಸಲೀಲೆ ಸಿಡಿ ಹೊರ ಬಿದ್ದಂತೆ ಆರು ಮಂದಿ ಸಚಿವರು ತಮ್ಮ ವಿರುದ್ಧ ಮಾಧ್ಯಮಗಳಲ್ಲಿ ವರದಿ ಪ್ರಸಾರ ಮಾಡಬಾರದು ಎಂದು ಕೋರ್ಟಿಗೆ ಮೊರೆ ಹೋಗಿದ್ದಾರೆ. ಈ ಆರು ಮಂದಿ ಸಚಿವರಲ್ಲಿ ಬಿ.ಸಿ ಪಾಟೀಲ್ ಮತ್ತು ಸುಧಾಕರ್ ಕೂಡ ಸೇರಿದ್ದಾರೆ. ಇಂದು ಸರ್ಕಾರಿ ಕಾರ್ಯಕ್ರಮದಲ್ಲಿ ಭಾಗವಿಸಿದ್ದ ಈ ಇಬ್ಬರು ಸಚಿವರುಗಳು ವೇದಿಕೆಯಲ್ಲಿ ಮಾತ್ರ ಫೋನ್ ನಲ್ಲಿ ಬ್ಯುಸಿಯಾಗಿದ್ದರು.

    ಗಂಗಾವತಿಯಲ್ಲಿ ನಡೆಯುತ್ತಿರುವ ನೂತನ ಕೃಷಿ ವಿಶ್ವವಿದ್ಯಾಲಯ ಪ್ರಾರಂಭೋತ್ಸವ ಕಾರ್ಯಕ್ರಮಕ್ಕೆ ಆಗಮಿಸಿದ ಕೃಷಿ ಸಚಿವ ಬಿ.ಸಿ ಪಾಟೀಲ್ ವೇದಿಕೆಯ ಮೇಲೆ ಕುಳಿತಿದ್ದರು ಕೂಡ ಕೋರ್ಟಿನಲ್ಲಿ ನಡೆಯುತ್ತಿರುವ ವಿದ್ಯಮಾನಗಳ ಕುರಿತು ಮೊಬೈಲ್ ನಲ್ಲಿ ಅಪ್ಡೇಡ್ ತಿಳಿದುಕೊಳ್ಳುವುದರಲ್ಲಿ ನಿರತರಾಗಿದ್ದರು. ಮೊಬೈಲ್ ಮೂಲಕ ಬೆಳವಣಿಗೆ ಗಮನಿಸುತ್ತಿದ್ದ ಬಿ.ಸಿ.ಪಾಟೀಲ್, ಬೇಗ ಬೇಗ ಕಾರ್ಯಕ್ರಮ ಮುಗಿಸಿ ಎಂದು ಅಧಿಕಾರಿಗಳಿಗೆ ಹೇಳುತ್ತಿರುವುದು ಬಯಲಾಗಿದೆ.

    ಗಂಗಾವತಿಯಲ್ಲಿ ಬಿಸಿ ಪಾಟೀಲ್ ಮೊಬೈಲ್ ನಲ್ಲಿ ಬ್ಯುಸಿಯಾಗಿದ್ದರೆ. ಇತ್ತ ಚಿಕ್ಕಬಳ್ಳಾಪುರದಲ್ಲಿ ನಡೆದ ಬೃಹತ್ ಕ್ಯಾನ್ಸರ್ ತಪಾಸಣಾ ಹಾಗೂ ಅರಿವು ಕಾರ್ಯಕ್ರಮದಲ್ಲಿ ಭಾಗಿಯಾದ ಸುಧಾಕರ್ ಕೂಡ ಫೋನ್‍ನಲ್ಲಿ ಬ್ಯುಸಿಯಾಗಿ ಕೋರ್ಟ್ ವಿಚಾರಗಳನ್ನು ತಿಳಿದುಕೊಳ್ಳುವಲ್ಲಿ ನಿರತವಾಗಿರುವುದು ಕಂಡುಬಂತು.

  • ಮನೆಯಲ್ಲೇ ಬಿಸಿ ಪಾಟೀಲ್‍ಗೆ ಲಸಿಕೆ ನೀಡಿದ್ದು ಯಾಕೆ – ಕಾರಣ ತಿಳಿಸಿದ ಹಿರೇಕೆರೂರು ಆರೋಗ್ಯ ಕಾರ್ಯಾಲಯ

    ಮನೆಯಲ್ಲೇ ಬಿಸಿ ಪಾಟೀಲ್‍ಗೆ ಲಸಿಕೆ ನೀಡಿದ್ದು ಯಾಕೆ – ಕಾರಣ ತಿಳಿಸಿದ ಹಿರೇಕೆರೂರು ಆರೋಗ್ಯ ಕಾರ್ಯಾಲಯ

    ಬೆಂಗಳೂರು: ಕೃಷಿ ಸಚಿವರಾದ ಬಿಸಿ ಪಾಟೀಲ್ ಮನೆಯಲ್ಲಿಯೇ ಕೊರೊನಾ ಲಸಿಕೆ ಪಡೆದ ವಿಚಾರಕ್ಕೆ ಸಂಬಂಧಿಸಿದಂತೆ ಹಿರೇಕೆರೂರು ತಾಲೂಕು ಆರೋಗ್ಯ ಕಾರ್ಯಾಲಯವು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳಿಗೆ ಕಾರಣ ನೀಡಿದೆ.

    ಪತ್ರದಲ್ಲಿ ಏನಿದೆ?
    ಮಾರ್ಚ್ 2ರಂದು ಮೂರನೇ ಹಂತದ ತಾಲೂಕಿನ ಸಾರ್ವಜನಿಕರಿಗೆ (60 ವರ್ಷ ಮೇಲ್ಪಟ್ಟ ನಾಗರಿಕರಿಗೆ) ಕೋವಿಡ್-19 ಲಸಿಕಾ ಕಾರ್ಯಕ್ರಮ ಚಾಲನೆಯಾಗಿದ್ದು, ಮಾನ್ಯ ಬಿ.ಸಿ ಪಾಟೀಲ್ ಕೃಷಿ ಸಚಿವರು ಕರ್ನಾಟಕ ಸರ್ಕಾರ ಇವರು ತಾಲೂಕಿನ ಪ್ರಥಮ ಪ್ರಜೆಯಾಗಿದ್ದು ಹಾಗೂ ಮಾನ್ಯ ಸಚಿವರಿಗೆ ಆರೋಗ್ಯದಲ್ಲಿ ಬೈಲ್ಯಾಟರಲ್ ನೀಆಸ್ಟಿಯೋ ಆರ್ಥರಿಟಿಸ್ ಹಾಗೂ ಕ್ರಾನಿಕ್ ಲೋಬ್ಯಾಕ್ ಎಖ್ ಆರೋಗ್ಯ ಸಮಸ್ಯೆ ಇರುವುದರಿಂದ ಮಾನ್ಯ ಸಚಿವರ ಕರೆಯ ಮೇರೆಗೆ ಮುನ್ನೆಚ್ಚರಿಕಾ ಕ್ರಮಗಳೊಂದಿಗೆ ಅವಶ್ಯಕ ತುರ್ತು ಸೇವೆ ಅಂಬುಲೆನ್ಸ್ ಹಾಗೂ ಔಷಧಿಗಳೊಂದಿಗೆ ಸಚಿವರಿಗೆ ಕೋವಿಡ್-19 ಲಸಿಕೆಯನ್ನು ನೀಡಿ ನಂತರ 30 ನಿಮಿಷಗಳವರೆಗೆ ನಿಗಾವಹಿಸಲಾಗಿದೆ. ಇನ್ನು ಮುಂದೆ ಕೋವಿಡ್-19 ಮಾರ್ಗಸೂಚಿ ಪ್ರಕಾರ ಸಾರ್ವಜನಿಕರಿಗೆ ಲಸಿಕೆ ನೀಡುತ್ತೇವೆ.

    ಬಿಸಿ ಪಾಟೀಲ್ ಲಿಸಿಕೆ ಪ್ರಕರಣ ಮಾಧ್ಯಮಗಳಲ್ಲಿ ಪ್ರಸಾರ ವಾಗುತ್ತಿದ್ದಂತೆ ಕೇಂದ್ರ ಆರೋಗ್ಯ ಸಚಿವ ಹರ್ಷವರ್ಧನ್ ರಾಜ್ಯ ಆರೋಗ್ಯ ಇಲಾಖೆಗೆ ಪ್ರಕರಣದ ವರದಿ ನೀಡುವಂತೆ ಸೂಚಿಸಿದ್ದರು.

    ಬಿಸಿ ಪಾಟೀಲ್ ಮತ್ತು ಅವರ ಪತ್ನಿ ವನಜಾ ಹಿರೆಕೂರಿನ ತಮ್ಮ ಮನೆಯಲ್ಲಿಯೇ ವೈದ್ಯರನ್ನು ಕರೆಸಿ ಲಸಿಕೆ ಪಡೆದಿದ್ದರು. ಕೊರೊನಾ ಮಾರ್ಗಸೂಚಿಯ ಪ್ರಕಾರ ಮನೆಯಲ್ಲಿಯೇ ಲಸಿಕೆ ಹಾಕಿಸಿಕೊಳ್ಳಲು ಅವಕಾಶವಿಲ್ಲ. ಈ ಕಾರಣಕ್ಕೆ ಬಿಸಿ ಪಾಟೀಲ್ ವಿರುದ್ಧ ಹಲವು ಟೀಕೆಗಳು ಕೇಳಿಬಂದಿತ್ತು. ಮಾಧ್ಯಮಗಳಲ್ಲಿ ವರದಿಯಾದ ಬಳಿಕ ಕೇಂದ್ರ ಆರೋಗ್ಯ ಇಲಾಖೆಯು ಪ್ರಕರಣ ಕುರಿತು ವರದಿ ನೀಡುವಂತೆ ರಾಜ್ಯಕ್ಕೆ ಸೂಚನೆ ನೀಡಿತ್ತು.

    ರಾಜ್ಯ ಸರ್ಕಾರ ನಮ್ಮ ಗಮನಕ್ಕೆ ಈ ವಿಚಾರ ಬಂದಿರಲಿಲ್ಲ. ಇನ್ನು ಮುಂದೆ ಈ ರೀತಿ ಘಟನೆ ಮರುಕಳಿಸದಂತೆ ನೋಡಿಕೊಳ್ಳಲಾಗುವುದು ಎಂದು ಕೇಂದ್ರಕ್ಕೆ ಉತ್ತರ ನೀಡಿತ್ತು.

  • ಬಿಸಿ ಪಾಟೀಲ್‌ ಲಸಿಕೆ ಪ್ರಕರಣ – ಕೇಂದ್ರ ಆರೋಗ್ಯ ಸಚಿವಾಲಯಕ್ಕೆ ವರದಿ ರವಾನೆ

    ಬಿಸಿ ಪಾಟೀಲ್‌ ಲಸಿಕೆ ಪ್ರಕರಣ – ಕೇಂದ್ರ ಆರೋಗ್ಯ ಸಚಿವಾಲಯಕ್ಕೆ ವರದಿ ರವಾನೆ

    ಬೆಂಗಳೂರು: ಕೃಷಿ ಸಚಿವ ಬಿಸಿ ಪಾಟೀಲ್‌ ಮನೆಯಲ್ಲೇ ಲಸಿಕೆ ಪಡೆದ ವಿಚಾರಕ್ಕೆ ಸಂಬಂಧಿಸಿದಂತೆ ಆರೋಗ್ಯ ಇಲಾಖೆ ಕೇಂದ್ರ ಆರೋಗ್ಯ ಸಚಿವಾಲಯಕ್ಕೆ ವರದಿ ಸಲ್ಲಿಸಿದೆ.

    ಮನೆಯಲ್ಲೇ ಲಸಿಕೆ ಹಾಕಿಸಲು ಕಾರಣರಾದ ಅಧಿಕಾರಿಗೆ ಕಾರಣ ಕೇಳಿ ನೋಟಿಸ್‌ ಕೊಟ್ಟಿದ್ದೇವೆ. ಇನ್ಮುಂದೆ ಇಂಥ ಘಟನೆ ಮರುಕಳಿಸಿದಂತೆ ನೋಡಿಕೊಳ್ಳುತ್ತೇವೆ. ಪ್ರಕರಣ ನಮ್ಮ ಅರಿವಿಗೆ ಬಾರದೇ ನಡೆದಿದೆ ಎಂದು ಆರೋಗ್ಯ ಸಚಿವ ಸುಧಾಕರ್ ವರದಿಯಲ್ಲಿ ಸ್ಪಷ್ಟನೆ ನೀಡಿದ್ದಾರೆ.

    ಕೇಂದ್ರ ಆರೋಗ್ಯ ಸಚಿವ ಹರ್ಷವರ್ಧನ್ ಬಿಸಿ ಪಾಟೀಲ್‌ ಪ್ರಕರಣದ ಬಗ್ಗೆ ವರದಿಯನ್ನು ನೀಡುವಂತೆ ರಾಜ್ಯ ಆರೋಗ್ಯ ಇಲಾಖೆಗೆ ಸೂಚಿಸಿದ್ದರು.

    ಬಿಸಿ ಪಾಟೀಲ್ ಮತ್ತು ಅವರ ಪತ್ನಿ ವನಜಾ ಹಿರೆಕೆರೂರಿನ ತಮ್ಮ ಮನೆಯಲ್ಲಿಯೇ ವೈದ್ಯರನ್ನು ಕರೆಸಿ ಲಸಿಕೆ ಪಡೆದಿದ್ದರು. ಮನೆಯಲ್ಲೇ ಲಸಿಕೆ ಹಾಕಿಸಿಕೊಳ್ಳಲು ಕೊರೊನಾ ಲಸಿಕೆ ಮಾರ್ಗಸೂಚಿಯಲ್ಲಿ ಅವಕಾಶವಿಲ್ಲ. ಈ ಕಾರಣಕ್ಕೆ ಬಿಸಿ ಪಾಟೀಲ್‌ ನಡೆ ವಿರುದ್ಧ ಆಕ್ರೋಶ ವ್ಯಕ್ತವಾಗಿತ್ತು. ಮಾಧ್ಯಮಗಳಲ್ಲಿ ವರದಿಯಾದ ಬಳಿಕ ಕೇಂದ್ರ ಆರೋಗ್ಯ ಇಲಾಖೆ ಕಾರಣ ಕೇಳಿ ವರದಿ ನೀಡುವಂತೆ ಸೂಚಿಸಿತ್ತು.

  • ಕೊರೊನಾ ಲಸಿಕೆ ಪಡೆದುಕೊಂಡ ಸಚಿವ ಬಿ.ಸಿ ಪಾಟೀಲ್

    ಕೊರೊನಾ ಲಸಿಕೆ ಪಡೆದುಕೊಂಡ ಸಚಿವ ಬಿ.ಸಿ ಪಾಟೀಲ್

    ಹಾವೇರಿ: ಕೃಷಿ ಸಚಿವ ಬಿ.ಸಿ ಪಾಟೀಲ್ ಅವರು ಹಾವೇರಿ ಜಿಲ್ಲೆಯ ಹಿರೇಕರೂರು ನಿವಾಸದಲ್ಲಿ ಕೊವೀಡ್ ಲಸಿಕೆ ಪಡೆದುಕೊಂಡಿದ್ದಾರೆ. ಹಿರೇಕೆರೂರು ನಿವಾಸದಲ್ಲಿ ತಾಲೂಕು ಆಸ್ಪತ್ರೆಯ ಸಿಬ್ಬಂದಿ ವಾಕ್ಸಿನ್ ನೀಡಿದ್ದಾರೆ.

    ನಂತರ ಮಾತನಾಡಿದ ಸಚಿವರು, ಕೊರೊನಾ ಲಸಿಕೆ ಪಡೆಯಲು ಹಿಂದೇಟು ಹಾಕುವುದು ಸರಿಯಲ್ಲ. ಕೆಲವರು ಈ ಬಗ್ಗೆ ಅಪಪ್ರಚಾರ ಮಾಡುತ್ತಿದ್ದು, ಇದರತ್ತ ಯಾರೂ ಗಮನ ನೀಡಬಾರದು. ಕರ್ನಾಟಕ ಸರ್ಕಾರ ಜನರ ಸುರಕ್ಷತೆಯಿಂದ ಕೊರೊನಾ ಲಸಿಕೆ ನೀಡುತ್ತಿದೆ. ಅದರಲ್ಲಿಯೂ ಪ್ರಧಾನಿ ನರೇಂದ್ರ ಮೋದಿ ಕೊರೊನಾ ಲಸಿಕೆಯನ್ನು ಸರ್ಕಾರಿ ವೈದ್ಯರಿಂದ ಪಡೆದು ಇಡೀ ದೇಶಕ್ಕೆ ಮಾದರಿಯಾಗಿದ್ದಾರೆ. ನಮ್ಮ ಭಾರತದಲ್ಲಿಯೇ ತಯಾರಿಸಿದ ಕೊರೊನಾ ಲಸಿಕೆಗೆ ವಿಶ್ವಾದ್ಯಂತ ಪ್ರಶಂಸೆ ವ್ಯಕ್ತವಾಗಿದೆ ಎಂದರು.

    ಕೊರೊನಾ ಸಂಘರ್ಷದ ಸಮಯದಲ್ಲಿ ಕರ್ನಾಟಕ ಹಾಗೂ ಭಾರತ ಸರ್ಕಾರ ಜನರೊಂದಿಗೆ ನಿಂತು ಅವರ ಆರೋಗ್ಯಕ್ಕೆ ಪ್ರಥಮ ಆದ್ಯತೆ ನೀಡಿದೆ. ವೈದ್ಯರು ಲಸಿಕೆಗೆ ನೀಡಿದ ಬಳಿಕ ಹೇಳಿದ ಕೆಲವು ಸರಳ ನಿಯಮಗಳನ್ನು ಪಾಲಿಸಿದರೆ ಸಾಕು. ಯಾವುದೇ ನಿರ್ಭೀತಿಯಿಂದ ಕೊರೊನಾ ಲಸಿಕೆ ಪಡೆಯಬೇಕೆಂದು ಸಚಿವರು ಕರೆ ನೀಡಿದರು.