Tag: Bcom

  • ಇನ್‍ಸ್ಟಾಗ್ರಾಂನಲ್ಲಿ Sorry ಅಂತಾ ಬರೆದು ಬಿಕಾಂ ವಿದ್ಯಾರ್ಥಿ ಆತ್ಮಹತ್ಯೆ

    ಇನ್‍ಸ್ಟಾಗ್ರಾಂನಲ್ಲಿ Sorry ಅಂತಾ ಬರೆದು ಬಿಕಾಂ ವಿದ್ಯಾರ್ಥಿ ಆತ್ಮಹತ್ಯೆ

    ಬೆಂಗಳೂರು: ಇನ್ ಸ್ಟಾ ದಲ್ಲಿ Sorry ಎಂದು ಬರೆದು ಬಿಕಾಂ ಓದುತ್ತಿರುವ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆಗೆ ಶರಣಾದ ಘಟನೆ ನಾಗದೇನಹಳ್ಳಿಯಲ್ಲಿ ನಡೆದಿದೆ.

    ಮನೋಜ್(19) ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿ. ಮಂಡ್ಯ ಮೂಲದವನಾಗಿರುವ ಈತ ಖಾಸಗಿ ಕಾಲೇಜಿನಲ್ಲಿ ಬಿಕಾಂ ಓದುತ್ತಿದ್ದ. ಅಜ್ಜಿ ಮನೆಯಲ್ಲಿ ಇದ್ದುಕೊಂಡು ಕಾಲೇಜ್‍ಗೆ ಹೋಗ್ತಿದ್ದ. ಆದರೆ ಕೆಲ ದಿನಗಳಿಂದ ಕಾಲೇಜ್‍ಗೆ ಹೋಗದೆ ಒಬ್ಬನೇ ಇರ್ತಿದ್ದನಂತೆ. ಕಳೆದ ಒಂದು ವಾರದಿಂದ ವಾಟ್ಸಪ್ ಸ್ಟೇಟಸ್‍ನಲ್ಲಿ ಸ್ಯಾಡ್ ಸ್ಟೋರಿ ಟೆಕ್ಸ್ಟ್ ಹಾಕಿಕೊಳ್ತಿದ್ನಂತೆ. ಮನೆಯವರು ಸ್ನೇಹಿತರು ಇದ್ಯಾವುದನ್ನು ಗಂಭೀರವಾಗಿ ತಗೊಂಡಿಲ್ಲ. ನಿನ್ನೆ ರಾತ್ರಿ ತನ್ನ ಇನ್ಸ್ಟಾಗ್ರಾಂನಲ್ಲಿ ಸಾರಿ ಅಂತಾ ಬರೆದುಕೊಂಡು ನೇಣಿಗೆ ಕೊರಳೊಡ್ಡಿದ್ದಾನೆ. ಇದನ್ನೂ ಓದಿ: ಸ್ಕೂಲ್ ಮೆಟ್ಟಿಲು, ಕಾಂಪೌಂಡ್, ರಸ್ತೆಯಲ್ಲೆಲ್ಲಾ Sorry- ವ್ಯಕ್ತಿಗಾಗಿ ಪೊಲೀಸರು ಹುಡುಕಾಟ

    ಮನೋಜ್ ಸಾವಿನ ಸುತ್ತ ನೂರೆಂಟು ಅನುಮಾನ: ಮನೋಜ್ ಮನೆಯಲ್ಲಷ್ಟೇ ಅಲ್ಲ, ಕಾಲೇಜಿನಲ್ಲೂ ಒಳ್ಳೆ ವಿದ್ಯಾರ್ಥಿ ಎನಿಸಿಕೊಂಡಿದ್ದ. ಚೆನ್ನಾಗಿ ಓದುತ್ತಿದ್ದ ಮನೋಜ್‍ಗೆ ಏಕಾಏಕಿ ಏನಾಯಿತೋ ಏನೋ ಆತ್ಮಹತ್ಯೆಗೆ ಶರಣಾಗಿದ್ದಾನೆ. ಮನೋಜ್ ಯಾರೊಂದಿಗಾದ್ರು ಪ್ರೀತಿಯಲ್ಲಿ ಬಿದ್ದಿದ್ನಾ..? ಅಥವಾ ಯಾರ ಜೊತೆಗಾದ್ರು ಗಲಾಟೆ ಮಾಡಿಕೊಂಡಿದ್ನಾ ಅನ್ನೋ ಬಗ್ಗೆ ಪೊಲೀಸರು ತನಿಖೆ ನಡೆಸಿದ್ದಾರೆ. ಇದನ್ನೂ ಓದಿ: ಕಾಲೇಜು ಗೋಡೆ, ರಸ್ತೆ ಮೇಲೆ Sorry ಬರಹ ಪ್ರಕರಣ- ಕೆಟಿಎಂ ಡ್ಯೂಕ್‍ನಲ್ಲಿ ಬಂದ ಇಬ್ಬರಿಂದ ಕೃತ್ಯ?

    ಕೆಲ ದಿನಗಳ ಹಿಂದೆಯಷ್ಟೇ ಕಾಮಾಕ್ಷಿಪಾಳ್ಯದ ಖಾಸಗಿ ಕಾಲೇಜು ಬಳಿ ಗೋಡೆ, ರಸ್ತೆಗಳ ತುಂಬೆ ಸಾರಿ ಸಾರಿ ಅಂತ ಬರೆಯಲಾಗಿತ್ತು. ಈ ಪ್ರಕರಣ ಮಾಸುವ ಮುನ್ನವೇ ಮತ್ತೊಂದು ಸಾರಿ ಪ್ರಕರಣ ಬೆಳಕಿಗೆ ಬಂದಿದೆ. ಮನೋಜ್ ಸಾವಿಗೆ ಅಸಲಿ ಕಾರಣ ಏನು ಅಂತ ಪೊಲೀಸರು ತನಿಖೆ ನಡೆಸ್ತಿದ್ದಾರೆ.

  • ಗುಲ್ಬರ್ಗಾ ವಿವಿಯಿಂದ ಮತ್ತೆ ಯಡವಟ್ಟು- ಬಿಕಾಂ ಪ್ರಶ್ನೆ ಪ್ರತಿಕೆ ಸೋರಿಕೆ

    ಗುಲ್ಬರ್ಗಾ ವಿವಿಯಿಂದ ಮತ್ತೆ ಯಡವಟ್ಟು- ಬಿಕಾಂ ಪ್ರಶ್ನೆ ಪ್ರತಿಕೆ ಸೋರಿಕೆ

    ರಾಯಚೂರು: ಗುಲ್ಬರ್ಗಾ ವಿಶ್ವವಿದ್ಯಾಲಯ ಯಡವಟ್ಟುಗಳ ಮೇಲೆ ಯಡವಟ್ಟುಗಳನ್ನ ಮಾಡುತ್ತಿದೆ. ವಿವಿಯ ಪದವಿ ಪರೀಕ್ಷೆಯಲ್ಲಿ ಪ್ರಶ್ನೆ ಪತ್ರಿಕೆಗಳು ಪದೇ ಪದೇ ಸೊರಿಕೆಯಾಗುತ್ತಿವೆ. ಎರಡು ದಿನಗಳ ಹಿಂದೆಯಷ್ಟೇ ಬಿ.ಕಾಂ 3ನೇ ಸೇಮಿಸ್ಟರ್ ನ ಸಂಖ್ಯಾಶಾಸ್ತ್ರ ಪತ್ರಿಕೆ ಲೀಕ್ ಆಗಿತ್ತು. ಈಗ ಪುನಃ ಬಿ.ಕಾಂ. ಮೂರನೇ ಸೆಮಿಸ್ಟರ್ ಪ್ರಶ್ನೆ ಪತ್ರಿಕೆ ಬಹಿರಂಗವಾಗಿದೆ.

    ಇಂದು ಮಧ್ಯಾಹ್ನ 2 ಗಂಟೆಗೆ ನಡೆಯಬೇಕಾಗಿದ್ದ `ಸ್ಮಾಲ್ ಬಿಸಿನೆಸ್ ಮ್ಯಾನೇಜ್‍ಮೆಂಟ್’ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ. ಸೋರಿಕೆಯಾದ ಪ್ರಶ್ನೆ ಪತ್ರಿಕೆ ರಾಯಚೂರು ಸೇರಿದಂತೆ ವಿವಿ ವಿದ್ಯಾರ್ಥಿಗಳ ವಾಟ್ಸಪ್‍ನಲ್ಲಿ ಹರಿದಾಡುತ್ತಿದೆ. ಈ ಹಿಂದೆ ಸ್ಟಾಟಿಸ್ಟಿಕ್ಸ್ ಪ್ರಶ್ನೆಪತ್ರಿಕೆ ಸೋರಿಕೆಯಾದ ಹಿನ್ನೆಲೆಯಲ್ಲಿ ಪರೀಕ್ಷೆಯನ್ನು ಮುಂದೂಡಲಾಗಿತ್ತು.

    ಇಂದು ನಡೆಯಬೇಕಾಗಿದ್ದ ಪರೀಕ್ಷೆ ಪ್ರಶ್ನೆಪತ್ರಿಕೆ ಲೀಕ್ ಆಗಿದ್ದರಿಂದ ಸ್ಮಾಲ್ ಬಿಸಿನೆಸ್ ಮ್ಯಾನೇಜ್‍ಮೆಂಟ್ ಪರೀಕ್ಷೆಯನ್ನು ಮುಂದೂಡಲಾಗಿದೆ ಎಂದು ಗುಲ್ಬರ್ಗಾ ವಿವಿ ಕುಲಪತಿ ಎಸ್.ನಿರಂಜನ್ ಆದೇಶ ಹೊರಡಿಸಿದ್ದಾರೆ.

     

  • ಭಿಕ್ಷಾಟನೆ ಮಾಡಿ ಮಕ್ಕಳನ್ನ ಸಾಕ್ತಿರೋ ತಂದೆ, ಸ್ಲಮ್‍ನಲ್ಲಿದ್ರೂ ಕೆಎಎಸ್ ಮಾಡ್ಬೇಕೆಂಬ ಬಿಕಾಂ ವಿದ್ಯಾರ್ಥಿಗೆ ಬೇಕಿದೆ ಸಹಾಯ

    ಭಿಕ್ಷಾಟನೆ ಮಾಡಿ ಮಕ್ಕಳನ್ನ ಸಾಕ್ತಿರೋ ತಂದೆ, ಸ್ಲಮ್‍ನಲ್ಲಿದ್ರೂ ಕೆಎಎಸ್ ಮಾಡ್ಬೇಕೆಂಬ ಬಿಕಾಂ ವಿದ್ಯಾರ್ಥಿಗೆ ಬೇಕಿದೆ ಸಹಾಯ

    ಬೆಳಗಾವಿ: ಜಿಲ್ಲೆಯ ಸ್ಲಂವೊಂದರ ಯುವಕ ಕೆಎಎಸ್ ಅಧಿಕಾರಿ ಆಗಬೇಕೆಂಬ ಗುರಿ ಹೊಂದಿದ್ದಾರೆ. ಆದರೂ ಕಿತ್ತು ತಿನ್ನುವ ಬಡತನ ವಿದ್ಯಾಭ್ಯಾಸಕ್ಕೆ ಅಡ್ಡಗಾಲು ಹಾಕುತ್ತಿದೆ.

    ಬಿಕಾಂ ವಿದ್ಯಾರ್ಥಿಯಾದ ಗಣೇಶ್ ವಿಭೂತಿ ಬೆಳಗಾವಿ ಮಹಾನಗರದ ಕಣಬರ್ಗಿ ಸ್ಲಂನಲ್ಲಿ ಹರಿದು ಹೋದ ಗುಡಿಸಲಿನಲ್ಲಿ ವಾಸವಿದ್ದಾರೆ. ಇವರ ತಂದೆ ಮನೆ ಮನೆಗೆ ತೆರಳಿ ಹಾಡು ಹೇಳಿ ಭಿಕ್ಷೆ ಬೇಡಿ ಬಂದ ಹಣದಿಂದ 5 ಮಕ್ಕಳನ್ನು ಸಾಕುತ್ತಿದ್ದಾರೆ. ತಾಯಿ ಬೇರೆಯವರ ಮನೆಗೆಲಸ, ಪಾತ್ರೆ ತೊಳೆಯುವ ಕೆಲಸ ಮಾಡುವುದರ ಜೊತೆಗೆ ಪೊರಕೆ ಮಾರಲು ಹೋಗುತ್ತಾರೆ. ಕಿತ್ತು ತಿನ್ನುವ ಬಡತನ, ಓದಲು ಆಸಕ್ತಿಯಿದ್ದರೂ ಹಣದ ಕೊರತೆ ಗಣೇಶ್‍ರನ್ನು ಕಾಡುತ್ತಿದೆ. ಆದರೂ ಛಲ ಬಿಡದ ತ್ರಿವಿಕ್ರಮನಂತೆ ಅವರಿವರ ಸಹಾಯ ಪಡೆದು ಬಿಕಾಂ ಓದುತ್ತಿದ್ದಾರೆ.

    ಐದು ಮಕ್ಕಳಿಗೂ ಊಟ ಕೊಡಿಸುವುದೇ ದೊಡ್ಡ ಸವಾಲಾಗಿರುವಾಗ ನಿನಗೆ ಓದಲು ಹಣ ಎಲ್ಲಿಂದ ತರಲಿ ಎಂದು ಪಾಲಕರು ಅಸಹಾಯಕರಾಗಿದ್ದಾರೆ. ಆದರೆ ನಾನು ಕಷ್ಟಪಟ್ಟು ಓದಿ ಮುಂದೆ ಬರಬೇಕು ಎಂದು ಗಣೇಶ್ ತನ್ನ ಕೆಎಎಸ್ ಗುರಿ ಬಗ್ಗೆ ಹೇಳಿಕೊಳ್ಳುತ್ತಾರೆ.

    ನಮ್ಮ ತಂದೆ ನಮಗೆ ವಿದ್ಯಾಭ್ಯಾಸ ನೀಡಲಿಲ್ಲ. ಅದರ ಬದಲು ತಬಲಾ ,ಹಾರ್ಮೊನಿಯಂ ನೀಡಿದರು. ಆದರೆ ಮಗ ಗಣೇಶ್ ಓದುವಲ್ಲಿ ಆಸಕ್ತಿ ತೋರಿದ್ದಾನೆ ಎಂದು ಗಣೇಶ್ ಅವರ ತಂದೆ ಹೇಳುತ್ತಾರೆ. ಕಂದೀಲು ಬೆಳಕಿನಲ್ಲಿ ಓದಿದ ಗಣೇಶ್ ಹಠ ಮಾತ್ರ ಬಿಟ್ಟಿಲ್ಲ. ಕೆಎಎಸ್ ಮಾಡಿ ತಮ್ಮ ಜನರ ಬದುಕಿಗೆ ಆಸರೆಯಾಗಬೇಕೆಂಬುದೇ ಗಣೇಶ್ ಅವರ ಜೀವನದ ಮುಖ್ಯ ಗುರಿ.

    https://www.youtube.com/watch?v=QMEWBdErnLE