Tag: bealagavi

  • 70 ವರ್ಷದ ಮಾವ, ನಿವೃತ್ತ ಸೈನಿಕನ ‘ಸ್ವಾಭಿಮಾನ’ದ ಕಥೆ ಹಂಚಿಕೊಂಡ ಬಿಲಿಯನೇರ್ ನಿತಿನ್ ಕಾಮತ್

    70 ವರ್ಷದ ಮಾವ, ನಿವೃತ್ತ ಸೈನಿಕನ ‘ಸ್ವಾಭಿಮಾನ’ದ ಕಥೆ ಹಂಚಿಕೊಂಡ ಬಿಲಿಯನೇರ್ ನಿತಿನ್ ಕಾಮತ್

    ಬೆಂಗಳೂರು: ಝಿರೋಧ (Zerodha) ಕಂಪನಿಯ ಸಹ ಸಂಸ್ಥಾಪಕ ಹಾಗೂ ಸಿಇಒ (CEO) ಆಗಿರುವ ನಿತಿನ್ ಕಾಮತ್ (Nithin Kamath) ತಮ್ಮ ಮಾವ ಶಿವಾಜಿ ಪಾಟೀಲ್ ಅವರೊಂದಿಗಿನ ಫೋಟೋವನ್ನು ಟ್ವಿಟ್ಟರ್‌ನಲ್ಲಿ (Twitter) ಹಂಚಿಕೊಂಡು ಅವರ ಸ್ಫೂರ್ತಿದಾಯಕ ಜೀವನ ಶೈಲಿಯ ಬಗ್ಗೆ ಎಲ್ಲರೊಂದಿಗೆ ಹಂಚಿಕೊಂಡಿದ್ದಾರೆ.

    ಮಾವನಿಗೆ 70 ವರ್ಷ ವಯಸ್ಸಾಗಿದ್ದು, ಭಾರತೀಯ ಸೇನೇಯಲ್ಲಿ (Indian Army) ಹವಾಲ್ದಾರ್ (Hawaldar) ಆಗಿ ಕೆಲಸ ಮಾಡುತ್ತಿದ್ದರು. ತಮ್ಮ ಹುಟ್ಟೂರಾದ ಬೆಳಗಾವಿಯಲ್ಲಿ (Bealagavi) ಸ್ವಂತ ಕಿರಾಣಿ ಅಂಗಡಿಯನ್ನು ಪ್ರಾರಂಭಿಸುವ ಸಲುವಾಗಿ ಭಾರತೀಯ ಸೇನೆಯಿಂದ ನಿವೃತ್ತಿ ಪಡೆದರು. ಅವರು ಭಾರತೀಯ ಸೇನೆಯಲ್ಲಿದ್ದಾಗ ಕಾರ್ಗಿಲ್ ಯುದ್ಧದ ಸಂದರ್ಭದಲ್ಲಿ ಹಿಮಪಾತದಿಂದಾಗಿ ತಮ್ಮ ಬೆರಳುಗಳನ್ನು ಕಳೆದುಕೊಂಡ ನಂತರ ಹವಾಲ್ದಾರ್ ಹುದ್ದೆಯಿಂದೆ ಸ್ವಯಂ ನಿವೃತ್ತಿ ಪಡೆದರು ಎಂದು ಪಾಟೀಲ್ ಅವರ ಕಿರಾಣಿ ಅಂಗಡಿಯಲ್ಲಿ ಒಟ್ಟಿಗೆ ತೆಗೆದ ಚಿತ್ರದ ಜೊತೆ ಕಾಮತ್ ಟ್ವೀಟ್ ಮಾಡಿದ್ದಾರೆ. ಇದನ್ನೂ ಓದಿ: ಪಶ್ಚಿಮ ಬಂಗಾಳದಲ್ಲಿ ‘ದಿ ಕೇರಳ ಸ್ಟೋರಿ’ ಪ್ರದರ್ಶನಕ್ಕೆ ನಿಷೇಧ

    ಮಾವನ ಜೀವನಶೈಲಿಯ ಬಗ್ಗೆ ಮಾತನಾಡುತ್ತಾ, ಅವರಿಗೆ 70 ವರ್ಷ ಆಗಿದ್ದು ದಶಕಗಳ ಹಳೇಯ ವಿಶೇಷ ಚೇತನರ ಸ್ಕೂಟರ್‌ನಲ್ಲಿ ಮಾರ್ಕೆಟ್‌ಗೆ ಹೋಗಿ ತಮ್ಮ ಅಂಗಡಿಗೆ ಬೇಕಾದ ದಿನಸಿಗಳನ್ನು ತರುತ್ತಾರೆ. ಇವರ ಸಹಾಯಕ್ಕಿರುವ ಒಂದೇ ಒಂದು ಕೈಯೆಂದರೆ ಅದು ನಮ್ಮ ಅತ್ತೆ. ಅವರು ಅಂಗಡಿ ಮತ್ತು ಮನೆಯನ್ನು ನಿರ್ವಹಿಸುವಲ್ಲಿ ಸಹಾಯ ಮಾಡುತ್ತಾರೆ. ಇದನ್ನೂ ಓದಿ: ಚುನಾವಣಾ ದಿನ ನಂದಿಗಿರಿಧಾಮ ಸಂಪೂರ್ಣ ಬಂದ್‌

    ಜೀವನದಲ್ಲಿ ಹೇಗೆ ತೃಪ್ತರಾಗಿರಬೇಕು ಎಂಬುದಕ್ಕೆ ಮಾವ ಪರಿಪೂರ್ಣ ಉದಾಹರಣೆಯಾಗಿದ್ದಾರೆ. ಇದರಿಂದ ನಿಜವಾದ ಸ್ವಾತಂತ್ರ್ಯವನ್ನು ಸಾಧಿಸಲು ಸಹಾಯ ಮಾಡುತ್ತದೆ. ನಾನು ಕಷ್ಟದಲ್ಲಿದ್ದ ಸಂದರ್ಭದಲ್ಲಿ ಅವರ ಮಗಳನ್ನು ಮದುವೆ ಮಾಡಿಕೊಡುವಂತೆ ಅನುಮತಿ ಕೇಳಿದಾಗ ಅವರು ನನಗೆ ಸರ್ಕಾರಿ ಉದ್ಯೋಗವನ್ನು ಪಡೆಯುವಂತೆ ಮನವೊಲಿಸಲು ಪ್ರಯತ್ನಿಸಿದರು ಎಂದು ಬರೆದುಕೊಂಡಿದ್ದಾರೆ. ಇದನ್ನೂ ಓದಿ: ಚುನಾವಣಾ ಬಹಿರಂಗ ಪ್ರಚಾರಕ್ಕೆ ತೆರೆ – ಇನ್ನೇನಿದ್ದರೂ ಮನೆಮನೆ ಪ್ರಚಾರ

    ಅಲ್ಲದೇ ನಾನು ಕೊನೆಯವರೆಗೂ ಆರೋಗ್ಯವನ್ನು ಹೆಚ್ಚಿಸುವುದರ ಬಗ್ಗೆ ಅಥವಾ ಉತ್ತಮ ಜೀವನವನ್ನು ಹೇಗೆ ನಡೆಸುವುದು ಎಂಬುದರ ಬಗ್ಗೆ ನಾವು ಮಾತನಾಡುತ್ತೇವೆ. ಮಾನಸಿಕವಾಗಿ ಮತ್ತು ದೈಹಿಕವಾಗಿ ಸಕ್ರಿಯವಾಗಿ ಇರುವುದನ್ನು ಎಂದಿಗೂ ನಿಲ್ಲಿಸಬಾರದು ಹಾಗೂ ತೃಪ್ತಿಯನ್ನು ಹೊಂದುವುದು ಇದಕ್ಕೆ ಉತ್ತರವಾಗಿದೆ. ಹಣದಿಂದ ಇದನ್ನು ಖರೀದಿಸಲು ಸಾಧ್ಯವಿಲ್ಲ. ನನ್ನ ಮಾವ ಇದಕ್ಕೆ ಉತ್ತಮ ಉದಾಹರಣೆಯಾಗಿದ್ದು, ತಮ್ಮ ಆರೋಗ್ಯವನ್ನು ಸುಧಾರಿಸುವತ್ತ ಗಮನಹರಿಸುವ ಬಿಲಿಯನೇರ್ ಎಂದು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಐಎಎಸ್ ಅಧಿಕಾರಿ ಕೊಲೆ ಅಪರಾಧಿ ರಿಲೀಸ್ – ಬಿಹಾರ ಸರ್ಕಾರಕ್ಕೆ ಸುಪ್ರೀಂ ನೋಟಿಸ್

     

     

  • ರಾತ್ರಿ ರಾಜಕಾರಣ ಗೊತ್ತಿರೋದಕ್ಕೆ ಹೆಬ್ಬಾಳ್ಕರ್ ಶಾಸಕಿ ಆಗಿರೋದು: ಸಂಜಯ್ ಪಾಟೀಲ್

    ರಾತ್ರಿ ರಾಜಕಾರಣ ಗೊತ್ತಿರೋದಕ್ಕೆ ಹೆಬ್ಬಾಳ್ಕರ್ ಶಾಸಕಿ ಆಗಿರೋದು: ಸಂಜಯ್ ಪಾಟೀಲ್

    ಬೆಳಗಾವಿ: ರಾತ್ರಿ ರಾಜಕಾರಣ ಸಂಸ್ಕೃತಿ ಗೊತ್ತಿರೋದಕ್ಕೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಸಕಿ ಆಗಿದ್ದಾರೆ ಎಂದು ಬಿಜೆಪಿ ಮಾಜಿ ಶಾಸಕ ಸಂಜಯ್ ಪಾಟೀಲ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

    ಬೆಳಗಾವಿ ಗ್ರಾಮೀಣ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಕಾಂಗ್ರೆಸ್ ರೋಡ್ ಪಾಲಿಟಿಕ್ಸ್ ವೇಳೆ ಮಾತಿನ ಭರದಲ್ಲಿ ಮಾಜಿ ಶಾಸಕರು ನಾಲಿಗೆ ಹರಿಬಿಟ್ಟಿದ್ದಾರೆ. ರಾತ್ರಿ ರಾಜಕಾರಣ ಸಂಸ್ಕೃತಿ ಗೊತ್ತಿದ್ದಕ್ಕೆ ನೀವು ಎಂಎಲ್‍ಎ ಆಗಿರೋದು. ಲಕ್ಷ್ಮೀ ಹೆಬ್ಬಾಳ್ಕರ್‍ಗೆ ಸತ್ಯ ಎದುರಿಸುವ ಶಕ್ತಿ ಇನ್ನೂ ಬರ್ತಿಲ್ಲ ಎಂದು ವಾಗ್ದಾಳಿ ನಡೆಸಿದರು.

    ಎಂಎಲ್‍ಎ ಆಗುವ ಮೊದಲು ನಾನು ನಿಮ್ಮ ಮಗಳು ಎಂದ್ರು. ಚಾಂದ್ ತಾರೇ ತೋಡ್ ಕೇ ಲಾವೂಂಗಿ ಅಂತಾ ದೊಡ್ಡ ದೊಡ್ಡ ಕನಸು ತೋರಿಸಿದ್ರು. ಆ ಕನಸು ನನಸು ಮಾಡಿಲ್ಲದ್ದಕ್ಕೆ ಜನ ರಿಯ್ಯಾಕ್ಷನ್ ಕೊಡುತ್ತಿದ್ದಾರೆ. ಆ ರಿಯ್ಯಾಕ್ಷನ್‍ಗೆ ಭಾರತೀಯ ಜನತಾ ಪಾರ್ಟಿ ಹೆಸರು ಕೊಡುತ್ತಿದ್ದಾರೆ. ರಾತ್ರಿ ರಾಜಕಾರಣ ಮಾಡುವ ಸಂಸ್ಕೃತಿ ಬಿಜೆಪಿಯದ್ದಲ್ಲ ಕಾಂಗ್ರೆಸ್‍ದ್ದಾಗಿದೆ. ರಾತ್ರಿ ರಾಜಕೀಯ ಸಂಸ್ಕೃತಿ ಗೊತ್ತಿದೆಯಂತೆ ನೀವು ಎಂಎಲ್‍ಎ ಆಗಿದ್ದೀರಿ ಎಂದರು. ಇದನ್ನೂ ಓದಿ: ಕಿರುತೆರೆ ನಟಿ ಆತ್ಮಹತ್ಯೆ ಪ್ರಕರಣಕ್ಕೆ ಟ್ವಿಸ್ಟ್- ಓರ್ವ ನಟ, ಸವಿ ಪಿಎ ವಿರುದ್ಧ ತಂದೆ ದೂರು

    ನೀವು ಕೆಲಸ ಮಾಡಿಲ್ಲ ಅಂತಾ ನಾನು ಹೇಳ್ತಿಲ್ಲ. ಪ್ರತಿಯೊಬ್ಬ ಶಾಸಕರು ಸಂಸದರಿಗೆ ಕೆಲವೊಂದು ಸ್ಕೀಮ್‍ಗಳಿದ್ದಾವೆ. ಏನೂ ಕೆಲಸ ಮಾಡಿಲ್ಲ ಅಂತಾ ಹೇಳೋಕೆ ಸಾಧ್ಯವಿಲ್ಲ. ಅಭಿವೃದ್ಧಿ ಹೊಳೆ ಹರಿದಿದ್ರೆ ಈ ರೀತಿ ಬ್ಯಾನರ್ ಹಾಕುತ್ತಿರಲಿಲ್ಲ. ಬಿಜೆಪಿ ಈ ರೀತಿ ಹೊಲಸ್ಸು ರಾಜಕೀಯ ಮಾಡಿಲ್ಲ, ಮಾಡೋದಿಲ್ಲ. ಜನರು ಟೀಕೆ ಮಾಡೋದನ್ನು ಲಕ್ಷ್ಮೀ ಹೆಬ್ಬಾಳ್ಕರ್ ಗೆ ಸಹಿಸಲಾಗುತ್ತಿಲ್ಲ. ಹೀಗಾಗಿ ಬಿಜೆಪಿ ಮೇಲೆ ಸಿಟ್ಟು ತಗೆಯುತ್ತಿದ್ದಾರೆ ಎಂದು ಕಿಡಿಕಾರಿದರು.

    ಡೆವಲಪ್ಮೆಂಟ್ ಕ್ವೀನ್, ಮಹಾರಾಣಿ ಅಂತಾ ಸೆಲ್ಫ್ ಡಿಕ್ಲೇರ್ ಏನೇನೋ ಅನ್ನಲಿ ನಾನು ಮಾತನಾಡಲಿಕ್ಕೆ ಆಗಲ್ಲ. ಟೀಕೆ ಸಹಿಸಿಕೊಳ್ಳುವ ಶಕ್ತಿ ದೇವರ ಹತ್ತಿರ ಲಕ್ಷ್ಮೀ ಬೇಡಿಕೊಳ್ಳಬೇಕು ಎಂದು ಸಂಜಯ್ ಪಾಟೀಲ್ ಟಾಂಗ್ ನೀಡಿದರು.