Tag: bed block

  • ಬೆಡ್ ಬ್ಲಾಕ್ ದಂಧೆ ಬಯಲಾದ ಎಫೆಕ್ಟ್ – ಇನ್ಮುಂದೆ ಬೆಡ್ ನಿಗದಿ ಆಗೋರಿಗೆ ಎಸ್‍ಎಂಎಸ್

    ಬೆಡ್ ಬ್ಲಾಕ್ ದಂಧೆ ಬಯಲಾದ ಎಫೆಕ್ಟ್ – ಇನ್ಮುಂದೆ ಬೆಡ್ ನಿಗದಿ ಆಗೋರಿಗೆ ಎಸ್‍ಎಂಎಸ್

    – 4 ಗಂಟೆಯೊಳಗೆ ಆಸ್ಪತ್ರೆಗೆ ದಾಖಲಾಗಲು ಅವಕಾಶ

    ಬೆಂಗಳೂರು: ಬೆಡ್ ಬ್ಲಾಕ್ ದಂಧೆ ಬಯಲಾದ ಎಫೆಕ್ಟ್. ಇನ್ಮುಂದೆ ಬೆಡ್ ನಿಗದಿ ಆಗೋರಿಗೆ ಎಸ್‍ಎಂಎಸ್ ಸಂದೇಶ ಕಳಿಸಲು ಸರ್ಕಾರ ತೀರ್ಮಾನಿಸಿದೆ.

    ಎಸ್‍ಎಂಎಸ್ ಬಂದ 4 ಗಂಟೆಯೊಳಗೆ ಆಸ್ಪತ್ರೆಗೆ ದಾಖಲಾಗಲು ಸೋಂಕಿತರಿಗೆ ಅವಕಾಶ ಇರಲಿದೆ ಎಂದು ಸಚಿವ ಅರವಿಂದ ಲಿಂಬಾವಳಿ ತಿಳಿಸಿದ್ದಾರೆ. ಈ ಮೊದಲು 12 ಗಂಟೆಯವರೆಗೂ ಅಡ್ಮಿಟ್ ಆಗಲು ಅವಕಾಶ ಇತ್ತು. ಅಲ್ಲದೆ ಅವ್ಯವಹಾರ ತಡೆಗಾಗಿ ಆಸ್ಪತ್ರೆಗಳಲ್ಲಿ ಆಧಾರ್ ಆಧಾರಿತ ಬಯೋಮೆಟ್ರಿಕ್ ಸಿಸ್ಟಂ ಜಾರಿಗೆ ಸರ್ಕಾರ ಮುಂದಾಗಿದೆ.

    ಬೆಡ್ ಬ್ಲಾಕ್ ದಂಧೆ ಪ್ರಕರಣ ಸಂಬಂಧ ಸಿಸಿಬಿ ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ. ಬೆಂಗಳೂರಿನ ಸುಮಾರು 16 ಆಸ್ಪತ್ರೆಗಳಲ್ಲಿ ಸಿಸಿಬಿ ಪರಿಶೀಲನೆ ನಡೆಸಿದೆ. ಈ ಮಧ್ಯೆ, ಬೆಡ್ ಬ್ಲಾಕ್ ಹಗರಣದ ವಿಚಾರದಲ್ಲಿ ರಾಜಕೀಯ ಮುಂದುವರೆದಿದೆ. ಕರ್ತವ್ಯದಲ್ಲಿದ್ದ ಐಎಎಸ್ ಅಧಿಕಾರಿ ಮೇಲೆ ಹಲ್ಲೆ ಯತ್ನ ನಡೆದ್ರೂ ಶಾಸಕ ಸತೀಶ್ ರೆಡ್ಡಿ ವಿರುದ್ಧ ಕ್ರಮ ಏಕೆ ಆಗಿಲ್ಲ ಎಂದು ಕಾಂಗ್ರೆಸ್ ನಾಯಕರು ಪ್ರಶ್ನೆ ಮಾಡಿದ್ದಾರೆ.

    ನ್ಯಾಯಾಂಗ ತನಿಖೆಗೆ ಮಾಜಿ ಮಂತ್ರಿ ರಾಮಲಿಂಗಾರೆಡ್ಡಿ ಆಗ್ರಹಿಸಿದ್ದಾರೆ. ಆದ್ರೆ, ಸಂಸದ ಪ್ರತಾಪ್ ಸಿಂಹ ಮಾತ್ರ ತೇಜಸ್ವಿ ಒಳ್ಳೆ ಕೆಲಸ ಮಾಡಿದ್ದಾರೆ ಎಂದು ಬೆನ್ನು ತಟ್ಟಿದ್ದಾರೆ. ಇಂದು ಬೆಂಗಳೂರಿನ ವಿವಿಧ ಆಸ್ಪತ್ರೆಗಳಲ್ಲಿ 2036 ಬೆಡ್ ಲಭ್ಯ ಇವೆ.

  • ಸಂಸದ ತೇಜಸ್ವಿ ವಿರುದ್ಧ ಕಂಪ್ಲೆಂಟ್ – ತನಿಖೆಗೆ ಆಗ್ರಹಿಸಿ ಕಾಂಗ್ರೆಸ್‍ನಿಂದಲೂ ದೂರು

    ಸಂಸದ ತೇಜಸ್ವಿ ವಿರುದ್ಧ ಕಂಪ್ಲೆಂಟ್ – ತನಿಖೆಗೆ ಆಗ್ರಹಿಸಿ ಕಾಂಗ್ರೆಸ್‍ನಿಂದಲೂ ದೂರು

    ಬೆಂಗಳೂರು: ಸೌತ್ ಝೋನ್‍ನಲ್ಲಿ ಬೆಡ್‍ಬ್ಲಾಕ್ ದಂಧೆ ಪ್ರಕರಣದಲ್ಲಿ ಕೋಮು ವೈಷಮ್ಯ ಬಿತ್ತುವ ಯತ್ನ ಆರೋಪ ಕೇಳಿ ಬಂದಿದೆ.

    ಐಎಎಸ್ ಅಧಿಕಾರಿ ಮೇಲಿನ ದೌರ್ಜನ್ಯ, ಬೆಡ್‍ಗಳ ಪ್ರಕರಣಕ್ಕೆ ಕೋಮು ಬಣ್ಣ ಹಚ್ಚಿದ ತೇಜಸ್ವಿ ಸೂರ್ಯ ಹಾಗೂ ಸತೀಶ್ ರೆಡ್ಡಿ ವಿರುದ್ಧ ಪೊಲೀಸ್ ಆಯುಕ್ತರು, ಬಿಬಿಎಂಪಿ ಚೀಪ್ ಗೌರವ್ ಗುಪ್ತಾಗೆ ಕಾಂಗ್ರೆಸ್ ನಿಯೋಗ ದೂರು ಕೊಟ್ಟಿದೆ.

    ಇನ್ನೊಂದೆಡೆ ತೇಜಸ್ವಿ ಸೂರ್ಯ ವಿರುದ್ಧ ಎಫ್‍ಐಆರ್‍ಗೆ ಕೋರಿ ಜೆಡಿಎಸ್ ಸ್ಟೇಟ್ ಕಮಿಟಿ ಅಬ್ಸರ್ವರ್ ನಜ್ಮಾ ಜನೀರ್ ಬಾನು ಅವರು ಬೆಂಗಳೂರು ಪೊಲೀಸ್ ಕಮಿಷನರ್ ಕಮಲ್ ಪಂತ್‍ಗೆ ದೂರು ನೀಡಿದ್ದಾರೆ. ಅಲ್ಲದೆ ಬೊಮ್ಮನಹಳ್ಳಿ ಶಾಸಕ ಸತೀಶ್ ರೆಡ್ಡಿ, ಬಸವನಗುಡಿ ಶಾಸಕ ರವಿ ಸುಬ್ರಹ್ಮಣ್ಯ, ಚಿಕ್ಕಪೇಟೆ ಶಾಸಕ ಉದಯ್ ಗರುಡಾಚಾರ್ ವಿರುದ್ಧ ದೂರು ನೀಡಿದ್ದಾರೆ.

    ಬೆಡ್ ಬ್ಲಾಕ್ ದಂಧೆ ಬಯಲಿಗೆಳೆದ ತೇಜಸ್ವಿ ಸೂರ್ಯಗೆ ಶಾಸಕ ರೇಣುಕಾಚಾರ್ಯ, ಎಂಎಲ್‍ಸಿ ವಿಶ್ವನಾಥ್ ಬೆಂಬಲ ನೀಡಿದ್ದಾರೆ. ಈ ಮಧ್ಯೆ ತಮ್ಮನ್ನು ಹೀಗಳೆದ ಜಮೀರ್ ಮತ್ತು ಡಿಕೆಶಿ ವಿರುದ್ಧ ಸಚಿವ ಈಶ್ವರಪ್ಪ ಕಿಡಿಕಾರಿದ್ದಾರೆ. ಇದನ್ನೂ ಓದಿ: ಬೆಡ್ ಬ್ಲಾಕ್ – 17 ಮಂದಿಯನ್ನು ತೆಗೆದು ಹಾಕಿದ್ದು ಯಾಕೆ? ಹೊಸ ಬದಲಾವಣೆ ಏನು? ಗೌರವ್ ಗುಪ್ತಾ ಹೇಳೋದು ಏನು?

  • ಬೆಡ್ ಬ್ಲಾಕ್ ದಂಧೆ ಪ್ರಕರಣ – ಸತೀಶ್ ರೆಡ್ಡಿ ಆಪ್ತನ ಬಂಧನಕ್ಕೆ ಸಿಸಿಬಿ ಸಿದ್ಧತೆ

    ಬೆಡ್ ಬ್ಲಾಕ್ ದಂಧೆ ಪ್ರಕರಣ – ಸತೀಶ್ ರೆಡ್ಡಿ ಆಪ್ತನ ಬಂಧನಕ್ಕೆ ಸಿಸಿಬಿ ಸಿದ್ಧತೆ

    ಬೆಂಗಳೂರು: ಬೆಡ್ ಬ್ಲಾಕಿಂಗ್ ಪ್ರಕರಣದಲ್ಲಿ ಬಿಜೆಪಿ ಶಾಸಕ್ ಸತೀಶ್ ರೆಡ್ಡಿ ಆಪ್ತ ಬಾಬು ಬಂಧನಕ್ಕೆ ಸಿಸಿಬಿ ಸಕಲ ತಯಾರಿ ನಡೆಸಿದೆ.

    ಶಾಸಕ ಸತೀಶ್ ರೆಡ್ಡಿ ಹಾಗೂ ಪಿಎ ಹರೀಶ್‍ಗೆ ಕಿಂಗ್‍ಪಿನ್ ಬಾಬು ಖಾಸಾ ದೋಸ್ತಿ ಹೊಂದಿದ್ದಾನೆ. ಸತೀಶ್ ರೆಡ್ಡಿ ಮಾತಿನಂತೆಯೇ ಬಾಬು ಬೆಡ್ ಬ್ಲಾಕ್ ಮಾಡಿಸುತ್ತಿದ್ದಾಗಿ ತಿಳಿದು ಬಂದಿದೆ. ಜೊತೆಗೆ ಕೆಲವರಲ್ಲಿ ಪ್ರತ್ಯೇಕವಾಗಿ ಹಣ ಪಡೆದು ಬೆಡ್ ಬ್ಲಾಕ್ ಮಾಡಿರುವ ಸಾಧ್ಯತೆಯೂ ಇದೆ. ಬಾಬುಗೆ ಸಿಸಿಬಿ ಡ್ರಿಲ್ ಮಾಡಿದ ಬೆನ್ನಲ್ಲೇ ಈಗ ಬಿಪಿ ಏರುಪೇರಾಗಿ ಆಸ್ಪತ್ರೆ ಪಾಲಾಗಿದ್ದಾನೆ. ಈ ಬೆನ್ನಲ್ಲೇ ಕೊರೋನಾ ಪಾಸಿಟಿವ್ ಆಗಿದ್ಯಂತೆ.

    ತೇಜಸ್ವಿ ಸೂರ್ಯ ರೇಡ್ ಮಾಡಿದ್ದಾಗ ಸತೀಶ್ ರೆಡ್ಡಿ ಜೊತೆಯಲ್ಲೇ ಇದ್ದ ಬಾಬು, ವಾರ್‍ರೂಂ ಸಿಬ್ಬಂದಿಗೆ ಫುಲ್ ಅವಾಜ್ ಹಾಕಿದ್ದರು. ಸತೀಶ್ ರೆಡ್ಡಿ ತಮ್ಮ ಬೆಂಬಲಿಗರೊಂದಿಗೆ ಬೊಮ್ಮನಹಳ್ಳಿ ವಲಯದ ವಾರ್ ರೂಮ್‍ಗೆ ನುಗ್ಗಿ ಕರ್ತವ್ಯ ನಿರತ ವೈದ್ಯೆ ಪಲ್ಲವಿ ಹಾಗೂ ಪ್ರೊಬೇಷನರಿ ಐಎಎಸ್ ಅಧಿಕಾರಿ, ನೊಡೇಲ್ ಆಫೀಸ್ ಯಶವಂತ್ ಅನ್ನೋವ್ರಿಗೆ ಬೆಡ್ ಹಂಚಿಕೆ ವಿಷಯವಾಗಿ ಹಲ್ಲೆಗೆ ಯತ್ನಿಸಿದ್ದಾರೆ. ಇದನ್ನೂ ಓದಿ: ಬೆಡ್ ದಂಧೆ ನಡೆಯೋದು ಹೇಗೆ ಅನ್ನೋದನ್ನ ವಿವರಿಸಿದ ತೇಜಸ್ವಿ ಸೂರ್ಯ

    ಐಎಎಸ್ ಅಧಿಕಾರಿ ಕೈ ಮುಗಿದು ಮಾತನಾಡಲು ಅವಕಾಶ ಕೊಡಿ ಅಂದರೂ ಬಿಟ್ಟಿಲ್ಲ. ಈ ವೇಳೆ ನನಗೇನಾದರೂ ಆದರೆ ನಿಮ್ಮ ಮೇಲೆ ಎಫ್‍ಐಆರ್ ದಾಖಲಿಸ್ತೇನೆ ಅಂತ ಪೊಲೀಸರಿಗೆ ಯಶವಂತ್ ಹೇಳಿದ್ದಾರೆ. ಇದರಿಂದ ರೊಚ್ಚಿಗೆದ್ದ ಸತೀಶ್ ರೆಡ್ಡಿ ಬೆಂಬಲಿಗರು ಮತ್ತಷ್ಟು ರಾದ್ಧಾಂತ ಸೃಷ್ಟಿಸಿದ್ದಾರೆ. ತೇಜಸ್ವಿ ಸೂರ್ಯ ರೇಡ್‍ಗೆ ಮುಂಚೆ ಅಂದರೆ ಏಪ್ರಿಲ್ 30ರಂದು ಈ ಘಟನೆ ನಡೆದಿದ್ದು, ಈಗ ಬೆಳಕಿಗೆ ಬಂದಿದೆ.