Tag: beg

  • 10 ಸಾವಿರ ಮನೆಗಳಲ್ಲಿ ಭಿಕ್ಷೆ ಬೇಡಿ ನಾಮಪತ್ರ ಸಲ್ಲಿಕೆ – ನಾಣ್ಯ ಎಣಿಸಿ ಸುಸ್ತಾದ ಅಧಿಕಾರಿಗಳು

    10 ಸಾವಿರ ಮನೆಗಳಲ್ಲಿ ಭಿಕ್ಷೆ ಬೇಡಿ ನಾಮಪತ್ರ ಸಲ್ಲಿಕೆ – ನಾಣ್ಯ ಎಣಿಸಿ ಸುಸ್ತಾದ ಅಧಿಕಾರಿಗಳು

    ಯಾದಗಿರಿ: ಯಾದಗಿರಿ (Yadgiri) ಜಿಲ್ಲೆಯಲ್ಲಿ ಸ್ವತಂತ್ರ ಅಭ್ಯರ್ಥಿಯೊಬ್ಬರು  ತಮ್ಮ ಠೇವಣಿ (Deposite) ಹಣ 10,000 ರೂ.ಗಳನ್ನು ಸಂಪೂರ್ಣವಾಗಿ ಒಂದು ರೂಪಾಯಿ ನಾಣ್ಯಗಳಲ್ಲಿ ಪಾವತಿಸಿದ್ದು, ಹತ್ತು ಸಾವಿರ ನಾಣ್ಯಗಳನ್ನು ಎಣಿಸುವಲ್ಲಿ ಅಧಿಕಾರಿಗಳು ಸುಸ್ತಾಗಿದ್ದಾರೆ.

    ಒಂದೊಂದು ರೂ. ನಾಣ್ಯಗಳನ್ನು ನೀಡಿ ಹತ್ತು ಸಾವಿರ ಠೇವಣಿ ಭರಿಸಿರುವ ಪಕ್ಷೇತರ ಅಭ್ಯರ್ಥಿ (Independent Candidate) ಹೆಸರು ಯಂಕಪ್ಪ. ಇವರು ಕಳೆದ ಒಂದು ವರ್ಷದಿಂದ ಯಾದಗಿರಿ ವಿಧಾನಸಭಾ ಕ್ಷೇತ್ರದ 10 ಸಾವಿರ ಮನೆಗಳಲ್ಲಿ ಭಿಕ್ಷೆ (Beg) ಬೇಡಿ, ಪ್ರತೀ ಮನೆಯಲ್ಲಿ ಒಂದು ರೂ.ಗಳಂತೆ ಹತ್ತು ಸಾವಿರ ಸಂಗ್ರಹಿಸಿದ್ದಾರೆ. ಒಂದು ವರ್ಷ ಮನೆಬಿಟ್ಟು ಠೇವಣಿ ಸಂಗ್ರಹಿಸಿರುವ ಇವರು, ಯಾವುದೇ ಗ್ರಾಮದಲ್ಲಿ ವಾಸ್ತವ್ಯ ಹೂಡಬೇಕಿದ್ದರೂ ಅಲ್ಲಿನ ದೇವಸ್ಥಾನಗಳಲ್ಲೇ ಇರುತ್ತಿದ್ದರು. ಅದೇ ಊರಿನ ಮನೆಗಳಲ್ಲಿ ಭಿಕ್ಷೆ ಬೇಡಿ ಊಟವನ್ನೂ ಮಾಡುತ್ತಿದ್ದರು. ಇದನ್ನೂ ಓದಿ: ಮತ್ತೊಂದು ವಿಕೆಟ್ ಪತನ – ಆಯನೂರು ಮಂಜುನಾಥ್ ಬಿಜೆಪಿಗೆ ಗುಡ್ ಬೈ 

    ಯಂಕಪ್ಪ ತಮ್ಮ ಕೊರಳಿಗೆ ಹಾಕಿಕೊಂಡಿದ್ದ ಪೋಸ್ಟರ್‌ನಲ್ಲಿ 12ನೇ ಶತಮಾನದ ಸಮಾಜ ಸುಧಾರಕರಾದ ಜ್ಞಾನಜ್ಯೋತಿ ಬಸವೇಶ್ವರ, ಸಂತ ಕವಿ ಕನಕದಾಸ, ಸ್ವಾಮಿ ವಿವೇಕಾನಂದ, ಸಂವಿಧಾನ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್ ಅವರ ಚಿತ್ರಗಳು ಮತ್ತು ಸಂವಿಧಾನದ ಪೀಠಿಕೆ ಹಾಕಿಕೊಂಡು ಊರೂರು ಸುತ್ತಾಡಿ ಹಣ ಸಂಗ್ರಹಿಸಿದ್ದಾರೆ. ಇದು ಜನರನ್ನು ಆಕರ್ಷಿಸಿದೆ. ಈ ಚಿತ್ರಗಳ ಕೆಳಗೆ ಕನ್ನಡದಲ್ಲಿ ಕೇವಲ ಒಂದು ರೂಪಾಯಿ ಅಲ್ಲ, ನಿಮ್ಮ ಒಂದು ಮತ, ನೀವು ಒಂದು ದಿನ ನನಗೆ ಮತ ನೀಡಿ, ನಾನು ನಿಮಗೆ ಬಡತನದಿಂದ ಮುಕ್ತಿ ನೀಡುತ್ತೇನೆ ಎಂಬ ಘೋಷವಾಕ್ಯದೊಂದಿಗೆ ಚುನಾವಣಾ ಅಖಾಡಕ್ಕೆ ಧುಮುಕಿದ್ದಾರೆ. ಇದನ್ನೂ ಓದಿ: ಬಿಜೆಪಿ ಜಿಲ್ಲಾ ಯುವ ಮೋರ್ಚಾ ಉಪಾಧ್ಯಕ್ಷನ ಬರ್ಬರ ಹತ್ಯೆ 

    ಕಲಬುರಗಿ (Kalaburagi) ಜಿಲ್ಲೆಯ ಗುಲ್ಬರ್ಗ (Gulbarga) ವಿಶ್ವವಿದ್ಯಾನಿಲಯದಿಂದ ಕಲಾ ಪದವೀಧರರಾಗಿರುವ ಇವರು, 60 ಸಾವಿರ ರೂ ಆಸ್ತಿ ಹೊಂದಿರುವುದಾಗಿ ಘೋಷಿಸಿಕೊಂಡಿದ್ದಾರೆ. ಅವರ ತಂದೆ ದೇವಿಂದ್ರಪ್ಪ ಒಂದು ಎಕರೆ 16 ಗುಂಟೆ ಜಮೀನು ಹೊಂದಿದ್ದಾರೆ. ಇದನ್ನೂ ಓದಿ: ಬೊಮ್ಮಾಯಿ ಪರ ಕಿಚ್ಚ ಸುದೀಪ್ ಕ್ಯಾಂಪೇನ್ – ಶಿಗ್ಗಾಂವಿ ಕ್ಷೇತ್ರದಲ್ಲಿ ಇಂದು ಮಿಂಚಿನ ಸಂಚಾರ 

    ಒಟ್ಟಿನಲ್ಲಿ ಈ ಬಾರಿಯ ವಿಧಾನಸಭಾ ಚುನಾವಣೆಗೆ (Election) ನಾಮಪತ್ರ (Nomination Papers) ಸಲ್ಲಿಸುವ ವೇಳೆ ಹಲವು ಕುತೂಹಲಕಾರಿ ವಿಷಯಗಳು ಹೊರಬರುತ್ತಿವೆ. ಕೆಲವೆಡೆ ಅಭ್ಯರ್ಥಿಗಳ ಆಸ್ತಿ ಘೋಷಣೆ ಕೇಳಿ ಜನಸಾಮಾನ್ಯರು ತಲೆ ಕೆಡಿಸಿಕೊಂಡರೆ ಮತ್ತೆ ಕೆಲವು ಅಭ್ಯರ್ಥಿಗಳು ಚುನಾವಣಾ ಠೇವಣಿ ಹಣ ಕಟ್ಟುವ ಸಮಯದಲ್ಲಿ ವಿಭಿನ್ನ ಪ್ರಯೋಗಗಳ ಮೂಲಕ ಜನರ ಮನಸ್ಸನ್ನು ಗೆದ್ದಿದ್ದಾರೆ. ಇದನ್ನೂ ಓದಿ: ಕೈ ಅಭ್ಯರ್ಥಿಯ ಬಿ ಫಾರಂಗೆ ತಡೆ – ಪದ್ಮನಾಭನಗರದಲ್ಲಿ ಅಶೋಕ್‌ ವಿರುದ್ಧ ಡಿಕೆ ಸುರೇಶ್‌ ಕಣಕ್ಕೆ?

  • ಬೆಂಗಳೂರಿನ ಸಿಗ್ನಲ್‍ಗಳಲ್ಲಿ ಬಾಡಿಗೆ ಮಕ್ಕಳ ದಂಧೆ – ಭಿಕ್ಷೆ ಬೇಡುವವರ ಸಂಪಾದನೆ ಎಷ್ಟು ಗೊತ್ತಾ?

    ಬೆಂಗಳೂರಿನ ಸಿಗ್ನಲ್‍ಗಳಲ್ಲಿ ಬಾಡಿಗೆ ಮಕ್ಕಳ ದಂಧೆ – ಭಿಕ್ಷೆ ಬೇಡುವವರ ಸಂಪಾದನೆ ಎಷ್ಟು ಗೊತ್ತಾ?

    ಬೆಂಗಳೂರು: ನಗರದಲ್ಲಿ ದಿನೇ, ದಿನೇ ಭಿಕ್ಷೆ ಬೇಡುವವರ ಸಂಖ್ಯೆ ಹೆಚ್ಚಾಗುತ್ತಿದೆ. ಭಿಕ್ಷೆ ಬೇಡುವ ನೆಪದಲ್ಲಿ ಹಣ ಮಾಡುವ ಹೊಸ ದಂಧೆ ಶುರುವಾಗಿದೆ.

    ಯಲಹಂಕ, ಜಾಲಹಳ್ಳಿ, ಗೊರಗುಂಟೆಪಾಳ್ಯ, ನಾಗವಾರ ಸೇರಿದಂತೆ ಹಲವೆಡೆ ಮಕ್ಕಳನ್ನು ಸೆರಗಿನಲ್ಲಿ ಹಾಕಿಕೊಂಡು ಭಿಕ್ಷೆ ಬೇಡುವವರ ಸಂಖ್ಯೆ ಹೆಚ್ಚಾಗುತ್ತಿದೆ. ಇವು ಅವರದ್ದೇ ಮಕ್ಕಳಾ? ಬೇರೆಯವರದ್ದಾ ಎನ್ನುವುದು ಗೊತ್ತಿಲ್ಲ. ಕೇಳಿದರೆ ನಮ್ಮದೇ ಮಗು ಎಂದು ಹೇಳುತ್ತಾರೆ. ಇದನ್ನೂ ಓದಿ: ದೆಹಲಿ ಇಡಿ ಕಚೇರಿಗೆ ರಾಹುಲ್ ಹಾಜರಿ ಸಾಧ್ಯತೆ – ರ್‍ಯಾಲಿ, ಧರಣಿಗೆ ಕಾಂಗ್ರೆಸ್ ಸಿದ್ಧತೆ

    ನೀನು ಭಿಕ್ಷೆ ಯಾಕೆ ಬೇಡುತ್ತಿದ್ಯಾ ಗಂಡ ಇಲ್ವಾ ಎಂದು ಕೇಳಿದರೆ, ಅವರು ನನ್ನ ಗಂಡ ಗಾರೆ ಕೆಲಸಕ್ಕೆ ಹೋಗುತ್ತಾರೆ ಎಂದು ನೆಪ ಹೇಳುತ್ತಾರೆ. ಹೀಗೆ ಭಿಕ್ಷೆ ಬೇಡುವವರು ಬಾಡಿಗೆಗೆ ಮಗುವನ್ನು ತರುತ್ತಿದ್ದಾರಾ ಎಂದು ವಿಚಾರಿಸಿದಾಗ ಜಾಲಹಳ್ಳಿ ಸಿಗ್ನಲ್ ಬಳಿ ಮಹಿಳೆಯೊಬ್ಬರು ಒಂದು ಮಗುವನ್ನು ತಂದು ಭಿಕ್ಷೆ ಬೇಡುವ ಮಹಿಳೆಗೆ ಕೊಟ್ಟಿರುವುದು ಕಂಡು ಬಂದಿದೆ. ಇದನ್ನೂ ಓದಿ: ರಾಷ್ಟ್ರಪತಿ ಚುನಾವಣೆಗೆ ಲಾಲೂ ಪ್ರಸಾದ್ ಯಾದವ್ ಸ್ಪರ್ಧೆ

    ಭಿಕ್ಷಾಟನೆ ಮುಕ್ತ ಬೆಂಗಳೂರು ಮಾಡುವುದಕ್ಕೆ ಅಭಿಯಾನ ಮಾಡಿದ್ದ ಬೆಂಗಳೂರು ಹುಡುಗರ ತಂಡದವರು ಈ ಪುಟ್ಟ ಕಂದಮ್ಮಗಳನ್ನು ಬಳಸಿಕೊಂಡು ಭಿಕ್ಷಾಟನೆ ಮಾಡುತ್ತಿರುವ ಕರಾಳ ಸತ್ಯವನ್ನು ಬಯಲಿಗೆಳೆದಿದ್ದಾರೆ. ಪ್ರತಿನಿತ್ಯ ಭಿಕ್ಷೆ ಬೇಡುವವರು ಕನಿಷ್ಠ 2 ಸಾವಿರ ಸಂಪಾದನೆ ಮಾಡುತ್ತಾರೆ. ಬೆಂಗಳೂರಿನಲ್ಲಿ ಕನಿಷ್ಠ 20 ಸಾವಿರ ಭಿಕ್ಷುಕರಿದ್ದಾರೆ. ಸರ್ಕಾರ ಭಿಕ್ಷಾಟನೆ ಅಪರಾಧದ ವಿರುದ್ಧ ಯಾವ ಕ್ರಮ ಕೈಗೊಳ್ಳುತ್ತಿದೆ ಅಂತ ಕೇಳುತ್ತಿದ್ದಾರೆ.

  • ವ್ಹೀಲ್‍ಚೇರ್‌ನಲ್ಲಿ ಭಿಕ್ಷೆ ಬೇಡ್ತಿದ್ದ ಅಂಗವಿಕಲ ತಾಯಿ-ಮಗನಿಗೆ ಕ್ರೇನ್ ಡಿಕ್ಕಿ

    ವ್ಹೀಲ್‍ಚೇರ್‌ನಲ್ಲಿ ಭಿಕ್ಷೆ ಬೇಡ್ತಿದ್ದ ಅಂಗವಿಕಲ ತಾಯಿ-ಮಗನಿಗೆ ಕ್ರೇನ್ ಡಿಕ್ಕಿ

    ದಾವಣಗೆರೆ: ಭಿಕ್ಷೆ ಬೇಡುತ್ತಿದ್ದ ಅಂಗವಿಕಲ ತಾಯಿ-ಮಗುವಿಗೆ ಕ್ರೇನ್ ಡಿಕ್ಕಿಯಾಗಿ ಇಬ್ಬರೂ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನ ನಲ್ಲೂರು ಗ್ರಾಮದ ಬಳಿ ನಡೆದಿದೆ.

    ಮೃತ ದುರ್ದೈವಿಗಳನ್ನು ಸಲೀಂ(10) ಮತ್ತು ರುಕ್ಸಾನ (40) ಎಂದು ಗುರುತಿಸಲಾಗಿದೆ. ತಾಯಿ- ಮಗ ವ್ಹೀಲ್ ಚೇರ್ ನಲ್ಲಿ ಕುಳಿತು ಭಿಕ್ಷೆ ಬೇಡುತ್ತಿದ್ದಾಗ ಈ ದುರ್ಘಟನೆ ನಡೆದಿದೆ.

    ಚನ್ನಗಿರಿಯಿಂದ ನಲ್ಲೂರಿಗೆ ಕ್ರೇನ್ ಬರುತ್ತಿತ್ತು. ಹೀಗೆ ಬಂದ ಕ್ರೇನ್ ಏಕಾಏಕಿ ವ್ಹೀಲ್ ಚೇರ್‍ಗೆ ಡಿಕ್ಕಿ ಹೊಡದಿದೆ. ಪರಿಣಾಮ ತಾಯಿ-ಮಗ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

    ಈ ಸಂಬಂಧ ಚನ್ನಗಿರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.