Tag: begur police

  • ವಿಲಾಸಿ ಜೀವನದ ಗೀಳಿಗಾಗಿ ಕಾಲೇಜು ವಿದ್ಯಾರ್ಥಿಗಳಿಗೆ ಮಾದಕವಸ್ತು ಮಾರಾಟ: ವಿದೇಶಿ ಪ್ರಜೆ ಅರೆಸ್ಟ್

    ವಿಲಾಸಿ ಜೀವನದ ಗೀಳಿಗಾಗಿ ಕಾಲೇಜು ವಿದ್ಯಾರ್ಥಿಗಳಿಗೆ ಮಾದಕವಸ್ತು ಮಾರಾಟ: ವಿದೇಶಿ ಪ್ರಜೆ ಅರೆಸ್ಟ್

    ಬೆಂಗಳೂರು: ಶಾಲಾ-ಕಾಲೇಜು ವಿದ್ಯಾರ್ಥಿಗಳನ್ನು ಟಾರ್ಗೆಟ್ ಮಾಡಿಕೊಂಡು ಮಾದಕವಸ್ತುಗಳನ್ನ ಮಾರಾಟ ಮಾಡುತ್ತಿದ್ದ ವಿದೇಶಿ ಪ್ರಜೆಯನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

    ಇಜಾಕ್ ನ್ಯೂಜಿಗೂವ್ (40) ಬಂಧಿತ ವಿದೇಶಿ ಪ್ರಜೆ. ಆರೋಪಿಯು ನೈಜೀರಿಯಾ ಮೂಲದವನಾಗಿದ್ದು, ವಿದ್ಯಾರ್ಥಿ ವೀಸಾದ ಅಡಿ ಬೆಂಗಳೂರಿಗೆ ಬಂದಿದ್ದಾನೆ. ಪೊಲೀಸರು ಬಂಧಿತ ಆರೋಪಿಯಿಂದ ಒಂದು ಕೆಜಿ ಗಾಂಜಾ, 19 ಗ್ರಾಂ ಕೊಕೇನ್ ಹಾಗೂ ಎರಡು ಮೊಬೈಲ್ ವಶಕ್ಕೆ ಪಡೆದಿದ್ದಾರೆ. ಇದನ್ನೂ ಓದಿ: ಎಟಿಎಂ ದೋಚಿ ಐಶಾರಾಮಿ ಜೀವನ ನಡೆಸುತ್ತಿದ್ದ 3 ವಿದೇಶಿಯರು ಸೇರಿ ಐವರು ಅರೆಸ್ಟ್

    ವಿಲಾಸಿ ಜೀವನದ ಗೀಳು ಹೊಂದಿದ್ದ ಇಜಾಕ್ ನ್ಯೂಜಿಗೂವ್ ಕಡಿಮೆ ಬೆಲೆಗೆ ಗಾಂಜಾ, ಕೊಕೇನ್ ತಂದು ಪ್ರತಿಷ್ಠಿತ ಕಾಲೇಜು ಹಾಗೂ ಶಾಲೆಗಳ ವಿದ್ಯಾರ್ಥಿಗಳಿಗೆ ಮಾರಾಟ ಮಾಡಿ ಹಣ ಸಂಪಾದಿಸುತ್ತಿದ್ದ. ಇಜಾಕ್ ಬೆಂಗಳೂರು ಹೊರವಲಯದ ಬಾಗಲೂರು ಸುತ್ತಮುತ್ತ ಮಾದಕವಸ್ತು ಮಾರಾಟ ಮಾಡುತ್ತಿರುವ ಬಗ್ಗೆ ಸಿಸಿಬಿ ಪೊಲೀಸರಿಗೆ ಖಚಿತ ಮಾಹಿತಿ ಸಿಕ್ಕಿತ್ತು. ತಕ್ಷಣವೇ ಇಜಾಕ್ ನ್ಯೂಜಿಗೂವ್ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದರು. ಭರ್ಜರಿ ಕಾರ್ಯಾಚರಣೆ ಮೂಲಕ ಶುಕ್ರವಾರ ಆರೋಪಿಯನ್ನು ಬಂಧಿಸಿದ್ದಾರೆ.

    ಇಜಾಕ್ ನ್ಯೂಜಿಗೂವ್ ವಿರುದ್ಧ ಬಾಗಲೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿಯನ್ನು ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.

  • ಕೆಲಸದಿಂದ ತೆಗೆದಿದ್ದಕ್ಕೆ ಮಾಲೀಕನ ಮೇಲೆ ಹಲ್ಲೆಗೈದ ಆರೋಪಿ ಅರೆಸ್ಟ್

    ಕೆಲಸದಿಂದ ತೆಗೆದಿದ್ದಕ್ಕೆ ಮಾಲೀಕನ ಮೇಲೆ ಹಲ್ಲೆಗೈದ ಆರೋಪಿ ಅರೆಸ್ಟ್

    ಬೆಂಗಳೂರು: ಕೆಲಸದಿಂದ ತೆಗೆದು ಹಾಕಿದ್ದಕ್ಕೆ ಮಾಲೀಕನ ಮೇಲೆ ಲಾಂಗ್‍ನಿಂದ ಹಲ್ಲೆ ಮಾಡಿ ಪರಾರಿಯಾಗಿದ್ದ ಆರೋಪಿ ಹಾಗೂ ಆತನಿಗೆ ಸಾಥ್ ನೀಡಿದ್ದವನನ್ನು ಬೇಗೂರು ಠಾಣಾ ಪೊಲೀಸರು ಬಂಧಿಸಿದ್ದಾರೆ.

    ಬೊಮ್ಮನಹಳ್ಳಿಯ ರೌಡಿಶೀಟರ್ ಮದನ್ ಹಾಗೂ ಕಿರಣ್ ಬಂಧಿತ ಆರೋಪಿಗಳು. ಆನಂದ್ ಹಲ್ಲೆಗೊಳಗಾದ ಮಾಲೀಕ. ಹಲ್ಲೆ ಮಾಡಿದ ಬಳಿಕ ಮದನ್ ಹಾಗೂ ಕಿರಣ್ ಪಾಂಡಿಚೇರಿಗೆ ಪರಾರಿಯಾಗಿದ್ದರು. ಆರೋಪಿಗಳು ಇರುವ ಜಾಗವನ್ನು ಪತ್ತೆ ಹಚ್ಚಿದ ಪೊಲೀಸರು ಅಲ್ಲಿಯೇ ಅವರನ್ನು ಬಂಧಿಸಿ ಕರೆತಂದಿದ್ದಾರೆ.

    ಆಗಿದ್ದೇನು?:
    ಬೇಗೂರಿನ ಗಾರ್ವೆಬಾವಿಪಾಳ್ಯದಲ್ಲಿ ಆನಂದ್ ಕಳೆದ 15 ವರ್ಷಗಳಿಂದ ತಿರುಮಲ ವಾಟರ್ ಫ್ಯಾಕ್ಟರಿ ನಡೆಸುತ್ತಿದ್ದಾರೆ. ಅವರ ಕೈ ಕೆಳಗೆ ಸುಮಾರು 40 ಮಂದಿ ಕೆಲಸ ಮಾಡುತ್ತಿದ್ದಾರೆ. ಮದನ್ ತಾನು ರೌಡಿಶೀಟರ್ ಎಂದು ತಿಳಿಸದೆ ಆನಂದ್ ಬಳಿ ಕೆಲಸ ಕೇಳಿಕೊಂಡು ಬಂದಿದ್ದ. ಆತನ ಪರಿಸ್ಥಿತಿ ಅರಿತ ಆನಂದ್ ತನ್ನ ಕಾರು ಚಾಲಕನಾಗಿ ಕೆಲಸ ಮಾಡುವಂತೆ ತಿಳಿಸಿದ್ದ.

    ಮದನ್ ಕೆಲಸಕ್ಕೆ ಸೇರಿದ ಕೆಲವು ದಿನಗಳ ಬಳಿಕ ಹೆಣ್ಣಮಕ್ಕಳನ್ನು ಚುಡಾಯಿಸುವುದು, ಫ್ಯಾಕ್ಟರಿಯಲ್ಲೇ ಗಾಂಜಾ ಸೇದುತ್ತಿದ್ದ. ಈ ವಿಚಾರವಾಗಿ ಮಾಲೀಕ ಆನಂದ್‍ಗೆ ತಿಳಿದಿದ್ದರಿಂದ ವೇತನ ನೀಡಿ ಮದನ್‍ನನ್ನು ಕೆಲಸದಿಂದ ತೆಗೆದು ಹಾಕಿದ್ದರು. ಇದರಿಂದ ಕೋಪಗೊಂಡ ಮದನ್ ಸಹಚರರೊಂದಿಗೆ ಲಾಂಗ್ ಹಿಡಿದು ಫ್ಯಾಕ್ಟರಿಗೆ ನುಗ್ಗಿ ಆನಂದ್ ಮೇಲೆ ಜನವರಿ 30ರಂದು ಹಲ್ಲೆ ಮಾಡಿದ್ದ. ಅಷ್ಟೇ ಅಲ್ಲದೆ ವಾಟರ್ ಫ್ಯಾಕ್ಟರಿಯಲ್ಲಿದ್ದ ವಸ್ತುಗಳನ್ನು ಒಡೆದು, ಆನಂದ್‍ಗೆ ಜೀವ ಬೆದರಿಕೆ ಹಾಕಿ ಸ್ಥಳದಿಂದ ಪರಾರಿಯಾಗಿದ್ದ. ಘಟನಾ ಸ್ಥಳದಲ್ಲಿದ್ದ ಸಿಸಿಟಿವಿ ಕ್ಯಾಮೆರಾದಲ್ಲಿ ಮದನ್ ಹಾಗೂ ಆತನ ಸಹಚರರ ಕೃತ್ಯ ಸೆರೆಯಾಗಿತ್ತು.

    ಈ ಕುರಿತು ಆನಂದ್ ಬೇಗೂರು ಠಾಣೆಗೆ ದೂರು ನೀಡಿದ್ದರು. ಪ್ರಕರಣ ದಾಖಲಿಸಿಕೊಂಡಿದ್ದ ಪೊಲೀಸರು ತನಿಖೆ ಚುರುಕುಗೊಳಿಸಿ ಆರೋಪಿಗಳನ್ನು ಬಂಧಿಸಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv, ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv