Tag: beheaded

  • ಅಮೆರಿಕದಲ್ಲಿ ಪತ್ನಿ, ಮಗನ ಮುಂದೆ ಕರ್ನಾಟಕದ ವ್ಯಕ್ತಿಯ ಶಿರಚ್ಛೇದ – ಮೈ ನಡುಗಿಸುವ ವಿಡಿಯೋ ವೈರಲ್‌

    ಅಮೆರಿಕದಲ್ಲಿ ಪತ್ನಿ, ಮಗನ ಮುಂದೆ ಕರ್ನಾಟಕದ ವ್ಯಕ್ತಿಯ ಶಿರಚ್ಛೇದ – ಮೈ ನಡುಗಿಸುವ ವಿಡಿಯೋ ವೈರಲ್‌

    ವಾಷಿಂಗ್ಟನ್‌: ಇತ್ತೀಚಿನ ದಿನಗಳಲ್ಲಿ ಕ್ಷುಲ್ಲಕ ಕಾರಣಗಳಿಗೆ ದೊಡ್ಡ ದೊಡ್ಡ ಕೃತ್ಯ ನಡೆಯುತ್ತಿರುವುದು ಸಹಜವಾಗಿಬಿಟ್ಟಿದೆ. ವಿದೇಶಗಳೂ ಇದರಿಂದ ಹೊರತಾಗಿಲ್ಲ. ಅಮೆರಿಕದ ಡಲ್ಲಾಸ್‌ ನಗರದಲ್ಲಿ (Dallas City) ನಡೆದಿರುವ ಘಟನೆಯೇ ಇದಕ್ಕೆ ನಿದರ್ಶನ.

    ಹೌದು. ಕೇವಲ ಕೆಟ್ಟುಹೋದ ವಾಷಿಂಗ್‌ ಮಿಷನ್‌ (Washing Machine) ವಿಚಾರಕ್ಕೆ ನಡೆದ ಜಗಳ ಕೊಲೆಯಲ್ಲಿ ಅಂತ್ಯವಾಗಿದ್ದು, ಅಮೆರಿಕದಲ್ಲಿ ಪತ್ನಿ, ಮಗನ ಮುಂದೆಯೇ ಕರ್ನಾಟಕ ಮೂಲದ ಮೋಟೆಲ್‌ (US Motel) ಮ್ಯಾನೇಜರ್‌ನ ಶಿರಚ್ಛೇದ ಮಾಡಲಾಗಿದೆ. ಮೋಟೆಲ್ ಎಂಬ ಪದ ಮೋಟರ್ ಲಾಡ್ಜ್ ಅನ್ನೋದನ್ನ ಸೂಚಿಸುತ್ತೆ. ಅಂದ್ರೆ ಸರಳವಾದ ಬಜೆಟ್ ಸ್ನೇಹಿ ವಾಸ್ತವ್ಯಕ್ಕೆ ಯೋಗ್ಯವಾದ ಹೋಟೆಲ್‌ ಮಾದರಿಯ ಸ್ಥಳ.

    ಟೆಕ್ಸಾಸ್‌ನ (Texas) ಪ್ರಮುಖ ನಗರವಾದ ಡಲ್ಲಾಸ್‌ ಮೋಟೆಲ್‌ನಲ್ಲಿ ಸಹೋದ್ಯೋಗಿಯೇ ಈ ಕೃತ್ಯ ಎಸಗಿರುವುದು ಕಂಡುಬಂದಿದೆ. ಘಟನೆಯ ನಂತರ ಸಹೋದ್ಯೋಗಿಯನ್ನ ಕೊಲೆ ಆರೋಪದ ಮೇಲೆ ಬಂಧಿಸಲಾಗಿದೆ. ಇದನ್ನೂ ಓದಿ: ರೋಗಿ ಜೊತೆ ಸೆಕ್ಸ್ – ಕೆನಡಾದಲ್ಲಿ ಭಾರತ ಮೂಲದ ವೈದ್ಯೆಯ ಮೆಡಿಕಲ್ ಲೈಸೆನ್ಸ್ ಅಮಾನತು

    ಮೋಟೆಲ್‌ನಲ್ಲಿ ಏನಾಯ್ತು?
    ಮೋಟೆಲ್‌ ಮ್ಯಾನೇಜರ್‌ ಆಗಿರುವ ಕರ್ನಾಟಕ ಮೂಲದ ಚಂದ್ರ ನಾಗಮಲ್ಲಯ್ಯ (50), 37 ವರ್ಷದ ತನ್ನ ಸಹೋದ್ಯೋಗಿ ಕೊಬೋಸ್ ಮಾರ್ಟಿನೆಜ್‌ ಮತ್ತು ಮತ್ತೊಬ್ಬ ಮಹಿಳಾ ಸಹೋದ್ಯೋಗಿಗೆ ಕೆಟ್ಟುಹೋಗಿರುವ ವಾಷಿಂಗ್‌ ಮಿಷಿನ್‌ ಬಳಸದಂತೆ ಹೇಳಿದ್ದಾರೆ. ಅವರು ನೇರವಾಗಿ ಹೇಳದೇ ಮತ್ತೊಬ್ಬರಿಂದ ಅನುವಾದಿಸುವಂತೆ ಸೂಚನೆ ನೀಡಿದ್ದಾರೆ. ಅಷ್ಟಕ್ಕೇ ಅಸಮಾಧಾನಗೊಂಡ ಕೊಬೋಸ್ ಮಾರ್ಟಿನೆಜ್ ಅಸಮಾಧಾನಗೊಂಡಿದ್ದಾನೆ ಎಂದು ಹೇಳಲಾಗಿದೆ. ಇದನ್ನೂ ಓದಿ: ನೇಪಾಳ ದಂಗೆ | Gen-Z ನಲ್ಲಿ ಬಿರುಕು – ಮಧ್ಯಂತರ ಪ್ರಧಾನಿ ಹುದ್ದೆಗೆ ಸುಶೀಲಾ ಕರ್ಕಿ Vs ಕುಲ್ಮನ್ ನಡ್ವೆ ಫೈಟ್‌

    ಅಸಮಾಧಾನಗೊಂದ ಕೊಬೋಸ್ ‌ಮಚ್ಚು ತೆಗೆದುಕೊಂಡು ನಾಗಮಲ್ಲಯ್ಯನಿಗೆ ಇರಿದಿದ್ದಾನೆ. ಆಗ ನಾಗಮಲ್ಲಯ್ಯ ಅಲ್ಲಿಂದ ತಪ್ಪಿಸಿಕೊಂಡು ಪಾರ್ಕಿಂಗ್‌ ಮುಂಭಾಗದಲ್ಲಿದ್ದ ಕಚೇರಿ ಕಡೆಗೆ ದೌಡುಕಿತ್ತಿದ್ದಾನೆ. ಈ ವೇಳೆ ಹೆಂಡತಿ ಮತ್ತು ಮಗ ಮಧ್ಯಪ್ರವೇಶಿಸಲು ಓಡಿಹೋಗಿದ್ದಾರೆ. ಆದ್ರೂ ಆತನ ಬೆನ್ನಟ್ಟಿದ್ದ ಕೊಬೋಸ್‌ ನಾಗಮಲ್ಲಯ್ಯನ ಪತ್ನಿ, ಮಗನ ಮುಂದೆಯೇ ಶಿರಚ್ಛೇದ ಮಾಡಿದ್ದಾನೆ. ಬಳಿಕ ಕತ್ತರಿಸಿದ ತಲೆಯನ್ನ ಕಸದ ತೊಟ್ಟಿಗೆ ಎಸೆದಿದ್ದಾನೆ. ಈ ವಿಡಿಯೋ ಕೂಡ ಸಿಸಿಟಿವಿಯಲ್ಲಿ ಸೆರೆಯಾಗಿದೆ. ತಲೆಯನ್ನು ಕಸದ ತೊಟ್ಟಿಗೆ ಎಸೆದು ರಕ್ತ ಹರಿಯುತ್ತಿದ್ದ ಮಚ್ಚು ಹಿಡಿದು ಒಯ್ಯುವಾಗ ಆತನನ್ನ ಪೊಲೀಸರು ಬಂಧಿಸಿದ್ದಾರೆ.

    ನಾಗಮಲ್ಲಯ್ಯ ಅವರ ದುರಂತ ಸಾವಿಗೆ ಭಾರತೀಯ ಕಾನ್ಸುಲೇಟ್ ಸಂತಾಪ ಸೂಚಿಸಿದೆ. ನಾವು ಅವರ ಕುಟುಂಬದೊಂದಿಗೆ ಸಂಪರ್ಕದಲ್ಲಿದ್ದೇವೆ ಮತ್ತು ಸಾಧ್ಯವಿರುವ ಎಲ್ಲ ಸಹಾಯವನ್ನು ನೀಡುತ್ತಿದ್ದೇವೆ. ಆರೋಪಿ ಡಲ್ಲಾಸ್ ಪೊಲೀಸರ ವಶದಲ್ಲಿದ್ದಾನೆ. ಈ ಪ್ರಕರಣದ ಮೇಲೆ ಗಂಭೀರವಾಗಿ ನಿಗಾ ಇಡುತ್ತೇವೆ ಎಂದು ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಹಂಚಿಕೊಂಡಿದೆ. ಇದನ್ನೂ ಓದಿ: ʻತುಂಬಾ ಅಪಾಯಕಾರಿʼ ದೂರವಿರಿ – ರಷ್ಯಾ ಸೇನೆ ಸೇರುತ್ತಿರುವ ಭಾರತೀಯರಿಗೆ MEA ವಾರ್ನಿಂಗ್‌

  • ಸರ್ಕಲ್‍ಗೆ ಮೋದಿ ಹೆಸರು ಇಟ್ಟಿದ್ದಕ್ಕೆ ತಕರಾರು- 70ರ ವ್ಯಕ್ತಿಯ ಶಿರಚ್ಛೇದನ

    ಸರ್ಕಲ್‍ಗೆ ಮೋದಿ ಹೆಸರು ಇಟ್ಟಿದ್ದಕ್ಕೆ ತಕರಾರು- 70ರ ವ್ಯಕ್ತಿಯ ಶಿರಚ್ಛೇದನ

    ಪಾಟ್ನಾ: 70 ವರ್ಷದ ವ್ಯಕ್ತಿಯ ಶಿರಚ್ಛೇದನ ಮಾಡಿರುವ ಆಘಾತಕಾರಿ ಘಟನೆ ಬಿಹಾರದಲ್ಲಿ ನಡೆದಿದೆ. ನಗರದ ಚೌಕಕ್ಕೆ ನರೇಂದ್ರ ಮೋದಿ ಚೌಕ್ ಎಂದು ಹೆಸರಿಟ್ಟ ಕಾರಣ ಕೊಲೆ ಮಾಡಲಾಗಿದೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ.

    ಬಿಜೆಪಿ ಬೆಂಬಲಿಗರಾಗಿದ್ದ ರಾಮಚಂದ್ರ ಯಾದವ್ ಮೃತ ದುರ್ದೈವಿ. ಇಲ್ಲಿನ ದರ್ಭಂಗಾ ಜಿಲ್ಲೆಯಲ್ಲಿ ಗುರುವಾರದಂದು 40-50 ಜನರ ಗುಂಪು ಯಾದವ್ ಅವರ ಮೇಲೆ ದಾಳಿ ಮಾಡಿ ಕೊಲೆ ಮಾಡಿದ್ದಾರೆ. ಸುಮಾರು 25-30 ಬೈಕ್‍ಗಳಲ್ಲಿ ಬಂದಿದ್ದ ತಂಡ ಹಾಕಿ ಸ್ಟಿಕ್ ಹಾಗೂ ಕತ್ತಿಗಳಿಂದ ದಾಳಿ ನಡೆಸಿದ್ದಾರೆ ಎಂದು ವರದಿಯಾಗಿದೆ.

    ನನ್ನ ತಂದೆ ಈ ವಿಚಾರಕ್ಕೆ ಸಂಬಂಧಿಸಿದಂತೆ ಚರ್ಚೆ ನಡೆಸಿ, ಇದಕ್ಕೆ ಅಂತ್ಯ ಹಾಡಬೇಕೆಂದಿದ್ದರು. ಆದ್ರೆ ಹಾಕಿ ಸ್ಟಿಕ್ ಹಾಗೂ ಕತ್ತಿಗಳನ್ನ ಹಿಡಿದು ಬಂದ ತಂಡ ಅವರ ಮೇಲೆ ದಾಳಿ ಮಾಡಿತು. ನನ್ನ ಸಹೋದgನÀನ್ನೂ ಅವರು ಕೊಲೆ ಮಾಡಲು ಯತ್ನಿಸಿದರು ಎಂದು ರಾಮಚಂದ್ರ ಯಾದವ್ ಅವರ ಮಗ ತೇಜ್ ನಾರಾಯಣ್ ಮಾಧ್ಯಮಗಳಿಗೆ ಹೇಳಿದ್ದಾರೆ.

    2 ವರ್ಷಗಳ ಹಿಂದೆ ತನ್ನ ಸಹೋದರ ಚೌಕದಲ್ಲಿ ಪ್ರಧಾನಿ ಮೋದಿಯ ಫೋಟೋ ಹಾಕಿದ್ದಕ್ಕೆ ಅವರನ್ನೂ ಕೊಲೆ ಮಾಡಲಾಗಿತ್ತು ಎಂದು ತೇಜ್ ನಾರಾಯಣ್ ಹೇಳಿದ್ದಾರೆ. ದಾಳಿ ಮಾಡಿದವರು RJD(ರಾಷ್ಟ್ರೀಯ ಜನತಾ ದಳ) ಪಕ್ಷದ ಬೆಂಬಲಿಗರು ಎಂದು ಅವರು ತಿಳಿಸಿದ್ದಾರೆ.

    ದಾಳಿಗೆ ಪ್ರಚೋದನೆಯಾದ ಅಂಶವೇನು ಎಂಬುದಕ್ಕೆ ಉತ್ತರಿಸಿದ ಅವರು, RJDಯ ಭದ್ರಕೋಟೆಯಲ್ಲಿ ಮೋದಿ ಚೌಕವಿರುವ ಬಗ್ಗೆ ಅವರಿಗೆ ಅಸಮಾಧಾನವಿತ್ತು. ಉಪಚುನಾವಣೆಯಲ್ಲಿ ಆರ್‍ಜೆಡಿ ಗೆಲುವು ಸಾಧಿಸಿದ್ದು ಪ್ರಚೋದನೆಯಾಗಿದೆ ಎಂದು ಆರೋಪಿಸಿದ್ದಾರೆ.

    ಪ್ರಕರಣಕ್ಕೆ ಸಂಬಂಧಿಸಿದಂತೆ ದರ್ಭಂಗಾ ಪೊಲೀಸರು ಶುಕ್ರವಾರದಂದು ನಾಲ್ವರನ್ನ ಬಂಧಿಸಿದ್ದಾರೆ. 2016ರ ಡಿಸೆಂಬರ್ ನಲ್ಲಿ ರಾಮಚಂದ್ರ ಯಾದವ್ ಜಿಲ್ಲೆಯ ಬುಧಾಲಾ ಗ್ರಾಮದ ಚೌಕಕ್ಕೆ ಪ್ರಧಾನಿ ನರೇಂದ್ರ ಮೋದಿಯ ಹೆಸರನ್ನ ಇಟ್ಟಿದ್ದರು. ಆದ್ರೆ ಗುರುವಾರದಂದು ಆಯುಧಗಳನ್ನ ಹೊಂದಿದ್ದ ತಂಡ ಯಾದವ್ ಅವರಿಗೆ ಹೆಸರು ಬದಲಾಯಿಸುವಂತೆ ಹೇಳಿದ್ದಾಗಿ ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.

    ಆದ್ರೆ ಪೊಲೀಸರು ಈ ಬಗ್ಗೆ ಪ್ರತಿಕ್ರಿಯಿಸಿ, ಇದೊಂದು ಹಳೇ ಭೂವಿವಾದ. ಎಲ್ಲಾ ರೀತಿಯಿಂದ ಪ್ರಕರಣದ ತನಿಖೆ ಮಾಡುತ್ತಿದ್ದೇವೆ. ಈವರೆಗಿನ ತನಿಖೆಯ ಪ್ರಕಾರ ಉಪಚುನಾವಣೆ ಗೆಲುವಿಗೂ ಇದಕ್ಕೂ ಸಂಬಂಧ ಕಂಡುಬಂದಿಲ್ಲ ಎಂದು ಹೇಳಿದ್ದಾರೆ.

    ಇದಕ್ಕೆ ಯಾದವ್ ಒಪ್ಪದ್ದಕ್ಕೆ ಆಕ್ರೋಶಗೊಂಡ ತಂಡ ಅವರ ಶಿರಚ್ಛೇದನ ಮಾಡಿದೆ. ಈ ವೇಳೆ ತಂದೆಯನ್ನ ರಕ್ಷಿಸಲು ಬಂದ ಯಾದವ್ ಅವರ ಮಗ ಕಮಲ್ ದೇವ್ ಗೂ ಗಂಭೀರ ಗಾಯಗಳಾಗಿದ್ದು, ಅವರನ್ನು ಸ್ಥಳೀಯ ಆಸ್ಪತ್ರಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.

    ಘಟನೆಯಿಂದಾಗಿ ಜಿಲ್ಲೆಯಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ. ಕೃತ್ಯದಲ್ಲಿ ಭಾಗಿಯಾದ ಇನ್ನಿತರ ಆರೋಪಿಗಳಿಗಾಗಿ ಪೊಲೀಸರು ಹುಡುಕಾಟ ಆರಂಭಿಸಿದ್ದಾರೆ.