Tag: Belagavai

  • 2ಎ ಮೀಸಲಾತಿಗಾಗಿ ಪಂಚಮಸಾಲಿಗಳ ಒತ್ತಾಯ ಸಂವಿಧಾನ ವಿರೋಧಿ: ಸಿಎಂ

    2ಎ ಮೀಸಲಾತಿಗಾಗಿ ಪಂಚಮಸಾಲಿಗಳ ಒತ್ತಾಯ ಸಂವಿಧಾನ ವಿರೋಧಿ: ಸಿಎಂ

    ಬೆಳಗಾವಿ: 2ಎ ಮೀಸಲಾತಿಗಾಗಿ ಪಂಚಮಸಾಲಿ (Panchamasali Reservation) ಸಮುದಾಯದವರು ಒತ್ತಾಯ ಮಾಡುತ್ತಿರುವುದು ಸಂವಿಧಾನ ವಿರೋಧವಾಗಿದೆ ಎಂದು ಸಿಎಂ ಸಿದ್ದರಾಮಯ್ಯ (Siddaramaiah) ತಿಳಿಸಿದ್ದಾರೆ. ಈ ಮೂಲಕ ಪಂಚಮಸಾಲಿಗಳಿಗೆ ಮೀಸಲಾತಿ ಕೊಡಲು ಸಾಧ್ಯವಿಲ್ಲ ಎಂದು ಪರೋಕ್ಷವಾಗಿ ಸಂದೇಶ ರವಾನೆ ಮಾಡಿದ್ದಾರೆ.

    ವಿಧಾನ ಪರಿಷತ್ ಕಲಾಪದಲ್ಲಿ ಶೂನ್ಯವೇಳೆಯಲ್ಲಿ ಪ್ರಸ್ತಾಪವಾದ ಪಂಚಮಸಾಲಿ ಮೀಸಲಾತಿ ಹೋರಾಟಗಾರರ ಮೇಲೆ ಲಾಠಿ ಚಾರ್ಜ್ ಮಾಡಿದ ಪ್ರಕರಣದ ಬಗ್ಗೆ ಉತ್ತರ ನೀಡುವ ವೇಳೆ ಸಿಎಂ ಸಿದ್ದರಾಮಯ್ಯ ಮೀಸಲಾತಿ ಸಂಬಂಧ ಉತ್ತರ ನೀಡಿದರು. ಈ ವೇಳೆ ಮಾತಾನಾಡಿದ ಸಿಎಂ, ಪಂಚಮಸಾಲಿ ಮೀಸಲಾತಿ ಸಾಧ್ಯವಿಲ್ಲ ಎಂದು ಸಂದೇಶ ಕೊಟ್ಟರು. ಇದನ್ನೂ ಓದಿ: 2024-25ರಲ್ಲಿ 1.4 ಲಕ್ಷ ಕೋಟಿ ಸಾಲ ಮಾಡಿದ್ದೇವೆ, ಬೇರೆ ರಾಜ್ಯಗಳಿಂದ ನಮ್ಮದು ಕಡಿಮೆ: ಸಿದ್ದರಾಮಯ್ಯ

    ನಮ್ಮ ರಾಜ್ಯದಲ್ಲಿ 2002ರಲ್ಲಿ ಮೀಸಲಾತಿ ವಿಭಾಗ ಆಯಿತು. ಆಗ ಯಾಕೆ ಪಂಚಮಸಾಲಿ ಮೀಸಲಾತಿ ಬೇಕು ಎಂದು ಒತ್ತಾಯ ಹಾಕಲಿಲ್ಲ? 2021-22ರಲ್ಲಿ ಪಂಚಮಸಾಲಿಗಳಿಗೆ ಮೀಸಲಾತಿ ಬೇಕು ಎಂದು ಚಳುವಳಿ ಪ್ರಾರಂಭವಾಯಿತು. ಅಂದಿನ ಸರ್ಕಾರದಲ್ಲಿ ಮುರುಗೇಶ್ ನಿರಾಣಿಗೆ ಮಂತ್ರಿ ಸ್ಥಾನ ಸಿಗಲಿಲ್ಲ ಎಂದು ಈ ಹೋರಾಟ ಪ್ರಾರಂಭ ಮಾಡಿದ್ದು ಎಂದು ಸಿಎಂ ಸಿದ್ದರಾಮಯ್ಯ ಆರೋಪಿಸಿದರು. ಇದನ್ನೂ ಓದಿ: ಸೋನಿಯಾ ಗಾಂಧಿ ಮನವೊಲಿಸಲು ವಯನಾಡಿಗೆ ನೂರು ಮನೆ: ಈಶ್ವರಪ್ಪ ವ್ಯಂಗ್ಯ

    ಬೊಮ್ಮಾಯಿ ಸರ್ಕಾರ 2ಸಿ ಮತ್ತು 2ಡಿ ಎಂದು ಹೊಸ ಮೀಸಲಾತಿ ವ್ಯವಸ್ಥೆ ಜಾರಿ ಮಾಡಿ ಒಕ್ಕಲಿಗರಿಗೂ ಮತ್ತು ಲಿಂಗಾಯತರಿಗೂ ಮುಸ್ಲಿಮರ 4% ಮೀಸಲಾತಿ ಕಡಿತ ಮಾಡಿ ತಲಾ 2% ಮೀಸಲಾತಿ ಕೊಟ್ಟಿದ್ದರು. ಇದನ್ನ ವಿರೋಧಿಸಿ ರಾಘವೇಂದ್ರ ಎಂಬವರು ಕೋರ್ಟ್‌ನಲ್ಲಿ ಕೇಸ್ ಹಾಕಿದರು. ಆಗ ಬೊಮ್ಮಾಯಿ ಸರ್ಕಾರದಲ್ಲಿ ಅಧಿಕಾರಿಯಾಗಿದ್ದ ತುಳಿಸಿ ಮದ್ದನೇನಿ ನಾವು 2002ರಲ್ಲಿ ಆಗಿರುವ ಜಾತಿ ವಿಭಾಗಗಳ ಮೀಸಲಾತಿ ವಿಂಗಡನೆಯನ್ನು ಯಾವುದೇ ಕಾರಣಕ್ಕೂ ಬದಲಾವಣೆ ಮಾಡೋದಿಲ್ಲ ಎಂದು ಅಫಿಡವಿಟ್ ಕೊಟ್ಟರು ಎಂದು ಸಿಎಂ ಅಫಿಡವಿಟ್ ಓದಿ ಹೇಳಿದರು. ಇದನ್ನೂ ಓದಿ: Ramanagara| ರೈಲಿಗೆ ತಲೆಕೊಟ್ಟು ಬಿ.ಇ ಪದವೀಧರ ಆತ್ಮಹತ್ಯೆ

    ಬೊಮ್ಮಾಯಿ ಸರ್ಕಾರ ಮಾಡಿದ 2ಸಿ ಮತ್ತು 2ಡಿ ಯಾವ ಸಂವಿಧಾನ ಎಂದು ಗೊತ್ತಿಲ್ಲ. ಮುಸ್ಲಿಮರ 4% ಮೀಸಲಾತಿ ತೆಗೆದು ಒಕ್ಕಲಿಗ ಮತ್ತು ಲಿಂಗಾಯತರಿಗೆ ನೀಡಿದರು. ಮುಸ್ಲಿಮರ 4% ಬೊಮ್ಮಾಯಿ ಸರ್ಕಾರ ರದ್ದು ಯಾಕೆ ಮಾಡಿದರು? ಬೊಮ್ಮಾಯಿ ಸರ್ಕಾರದ 2ಸಿ ಮತ್ತು 2ಡಿ ವರ್ಗ ಮೀಸಲಾತಿ ವಿರೋಧಿಸಿ ಗುಲಾಂ ರಸೂಲ್ ಸುಪ್ರೀಂಕೋರ್ಟ್‌ಗೆ ಹೋದರು. ಅಲ್ಲಿ ಬೊಮ್ಮಾಯಿ ಸರ್ಕಾರ ಮುಂದಿನ ಆದೇಶದವರೆಗೂ 2ಸಿ ಮತ್ತು 2ಡಿ ಮೀಸಲಾತಿ ಜಾರಿ ಮಾಡಲ್ಲ ಎಂದು ಅಫಿಡವಿಟ್ ಕೊಟ್ಟಿದ್ದಾರೆ ಎಂದು ತಿಳಿಸಿದರು. ಇದನ್ನೂ ಓದಿ: ಉಕ್ಕು ಕ್ಷೇತ್ರದಲ್ಲಿ ಹಸಿರು ಕ್ರಾಂತಿ – ಪ್ರಧಾನಿ ಮೋದಿ ಕನಸು ಅನಾವರಣಗೊಳಿಸಿದ ಹೆಚ್‌ಡಿಕೆ

    ಸಿಎಂ ಮಾತಿಗೆ ವಿಪಕ್ಷಗಳು ವಿರೋಧ ವ್ಯಕ್ತಪಡಿಸಿದವು. ಮುಸ್ಲಿಮರಿಗೆ ಧರ್ಮದ ಆಧಾರದಲ್ಲಿ ಮೀಸಲಾತಿ ಕೊಟ್ಟಿದ್ದು ಸರಿಯಲ್ಲ. ಪಂಚಮಸಾಲಿಗಳಿಗೆ ಮೀಸಲಾತಿ ಕೊಡಿ ಎಂದು ಪಟ್ಟು ಹಿಡಿದರು. ಈ ವೇಳೆ ಸದನದಲ್ಲಿ ಗದ್ದಲ ಗಲಾಟೆ ಆಯಿತು. ಆಡಳಿತ-ವಿಪಕ್ಷಗಳ ನಡುವೆ ಪರಸ್ಪರ ಘೋಷಣೆಗಳು ಕೂಗಿದರು. ವಿಪಕ್ಷಗಳ ನಾಯಕರು ಸದನದ ಬಾವಿಗಳಿದು ಪ್ರತಿಭಟನೆ ಮಾಡಿದರು. ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿದರು. ಇದನ್ನೂ ಓದಿ: ಒಂದು ದೇಶ, ಒಂದು ಚುನಾವಣೆ ಮಸೂದೆಗೆ ಮೋದಿ ಸಂಪುಟ ಅನುಮೋದನೆ

  • ಪರಿಸ್ಥಿತಿ ಕಾದು ನೋಡಬೇಕು, ಕರ್ಫ್ಯೂ, ಲಾಕ್‍ಡೌನ್ ಹೇರಬಾರದು: ಸಿ.ಟಿ ರವಿ

    ಪರಿಸ್ಥಿತಿ ಕಾದು ನೋಡಬೇಕು, ಕರ್ಫ್ಯೂ, ಲಾಕ್‍ಡೌನ್ ಹೇರಬಾರದು: ಸಿ.ಟಿ ರವಿ

    ಬೆಳಗಾವಿ: ಪರಿಸ್ಥಿತಿ ಕಾದು ನೋಡಬೇಕು, ಕರ್ಫ್ಯೂ, ಲಾಕ್‍ಡೌನ್ ಹೇರಬಾರದು. ಇದು ನನ್ನ ಅಭಿಪ್ರಾಯ ಸಲಹೆ. ವೈದ್ಯರು ಅಭಿಪ್ರಾಯ ಇದೇ ರೀತಿಯಿದೆ. ವೇಗವಾಗಿ ಸ್ಪ್ರೆಡ್ ಆಗುತ್ತೆ ಆದ್ರೆ ಹಾನಿ ಹೆಚ್ಚು ಮಾಡಲ್ಲ ಅಂತಾ ತಜ್ಞರು ಹೇಳಿದ್ದಾರೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ ರವಿ ಹೇಳಿದ್ದಾರೆ.

    ಗೋವಾದ ಪಣಜಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತಾ ವೀಕೆಂಡ್ ಕರ್ಫ್ಯೂ, ಲಾಕ್‍ಡೌನ್‍ಗೆ ವಿರೋಧ ವ್ಯಕ್ತಪಡಿಸಿದರು. ಕರ್ನಾಟಕ ಅಷ್ಟೇ ಅಲ್ಲ ಮಹಾರಾಷ್ಟ್ರ, ದೆಹಲಿಯಲ್ಲಿ ಹೆಚ್ಚಾಗುತ್ತಿದೆ. ಕರ್ನಾಟಕದಲ್ಲಿಯೂ ದಿನೇದಿನೇ ಕೋವಿಡ್ ಜಾಸ್ತಿಯಾಗ್ತಿದೆ. ಸುದೈವವಶಾತ್ ಮೂರನೇ ಅಲೆಯಲ್ಲಿ ಪ್ರಾಣಾಪಾಯ ಕಡಿಮೆ ಇದೆ. ಐಸಿಯು ವೆಂಟಿಲೇಟರ್ ಗೆ ಹೋಗುವ ರೋಗಿಗಳ ಸಂಖ್ಯೆ ಕಡಿಮೆ ಇದೆ. ವೇಗವಾಗಿ ಹಬ್ಬುತ್ತಿದೆ. ಆದರೆ ಯಾವುದೇ ಪ್ರಾಣಾಪಾಯ ಆಗಿಲ್ಲ ಎಂದರು.

    ಬಹಳ ಆತಂಕ ಪಡುವ ಅಗತ್ಯವಿಲ್ಲ ಎಚ್ಚರದಿಂದ ಇರಬೇಕು. ಲಾಕ್‍ಡೌನ್‍ನಂತ ನಿಯಮ ತಗೆದುಕೊಳ್ಳುವುದಕ್ಕಿಂತ ಕರ್ಫ್ಯೂ ಹೇರುವುದಕ್ಕಿಂತ ಕೆಲವು ನಿಯಮ ಹಾಕಬೇಕು. ಜನರನ್ನ ಎಚ್ಚರ ವಹಿಸುವಂತೆ ನೋಡಿಕೊಂಡು ಇದನ್ನು ನಿಯಂತ್ರಿಸಬಹುದು. ಮೂರನೇ ಅಲೆ ಹಾನಿ ಪ್ರಮಾಣ ಕಡಿಮೆ ಇರೋದ್ರಿಂದ ತುಂಬಾ ಆತಂಕ ಪಡುವ ಅಗತ್ಯವಿಲ್ಲ. ಕೋವಿಡ್ ಮೂರನೇ ಅಲೆ ಎಫೆಕ್ಟ್ ಬಹಳ ಕಡಿಮೆ ಇದೆ. ಲಾಕ್‍ಡೌನ್ ಮಾಡಿ ಜೀವನ ಏಕೆ ಸಂಕಷ್ಟಕ್ಕೆ ದೂಡಬೇಕು ಎಂದು ಪ್ರಶ್ನಿಸಿದರು. ಇದನ್ನೂ ಓದಿ: ಆಮ್ ಆದ್ಮಿ ಪಕ್ಷಕ್ಕೆ ರಾಜೀನಾಮೆ ಕೊಟ್ಟ ಮಹೇಶ್ ಸವಾನಿ

    CORONA-VIRUS.

    ಜೀವಕ್ಕೆ ಹಾನಿ ಆಗುತ್ತೆ ಅಂತಾ ಪ್ರಶ್ನೆ ಇದ್ರೆ ಮಾಡಬೇಕು, ಜೀವನಕ್ಕಿಂತ ಜೀವ ಮುಖ್ಯ. 3ನೇ ಅಲೆ ಕೇಸ್ ರೆಕಾರ್ಡ್ ತೆರೆದು ನೋಡಿದಾಗ ಜೀವಕ್ಕೆ ಹಾನಿ ಪರ್ಸೆಂಟೇಜ್ ಕಡಿಮೆಯಿದೆ. ಹೀಗಿರುವಾಗ ಆತಂಕ ಪಡುವುದು ಏಕೆ..? ಯಾರು ಎರಡು ಡೋಸ್ ಲಸಿಕೆ ಪಡೆದಿದ್ದಾರೆ ಅವರಿಗೆ ಕಡಿಮೆ ಹಾನಿ ಆಗಿದೆ. ಯಾರಿಗೂ ಜೀವಹಾನಿ ಏನೂ ಆಗಿಲ್ಲ. ಐಸಿಯುಗೆ ಹೋಗುವಂತಹ ಗಂಭೀರ ಸ್ಥಿತಿ ಬಂದಿಲ್ಲ. ಎರಡು ವರ್ಷ ಸಂಕಷ್ಟದಲ್ಲಿದ್ದು ಜೀವನ ಕಟ್ಟಿಕೊಂಡಿದ್ದಾರೆ. ಅವರನ್ನೇಕೆ ಸಂಕಷ್ಟಕ್ಕೆ ದೂಡಬೇಕು ಎಂದು ಹೇಳಿದರು.

    ಅನಗತ್ಯವಾಗಿ ಭಯಕ್ಕೆ ದೂಡುವ ಅವಶ್ಯಕತೆ ಇಲ್ಲ, ಆದರೆ ಎಚ್ಚರ ವಹಿಸಬೇಕು. ಕಠಿಣ ನಿಯಮ ಹೇರಬೇಕು. ಕರ್ಫ್ಯೂ, ಲಾಕ್‍ಡೌನ್ ನಿಂದ ಜೀವನ ಕಟ್ಟಿಕೊಂಡವರನ್ನು ಮತ್ತಷ್ಟು ದುಸ್ತರಗೊಳಿಸುತ್ತೆ. ಎಚ್ಚರ ವಹಿಸುವಂತೆ ನೋಡಿಕೊಳ್ಳಬೇಕು ಎಂದು ಸಲಹೆ ನೀಡಿದರು.

  • ಇಂದು 3 ಪಕ್ಷಗಳಿಂದ ಎಂಎಲ್‍ಸಿ ಟಿಕೆಟ್ ಬಹುತೇಕ ಪ್ರಕಟ- ಇತ್ತ ಬಿಜೆಪಿಯಿಂದ ಜನಸ್ವರಾಜ್ ಯಾತ್ರೆ

    ಇಂದು 3 ಪಕ್ಷಗಳಿಂದ ಎಂಎಲ್‍ಸಿ ಟಿಕೆಟ್ ಬಹುತೇಕ ಪ್ರಕಟ- ಇತ್ತ ಬಿಜೆಪಿಯಿಂದ ಜನಸ್ವರಾಜ್ ಯಾತ್ರೆ

    ಬೆಳಗಾವಿ: ರಾಜ್ಯ ಪರಿಷತ್ ಚುನಾವಣೆಯ ಫೈಟ್ ಜೋರಾಗಿದೆ. ಬೆಳಗಾವಿಯಲ್ಲಿ ಲಕ್ಷ್ಮೀ ಹೆಬ್ಬಾಳ್ಕರ್ ಫ್ಯಾಮಿಲಿ ಹಾಗೂ ಜಾರಕಿಹೊಳಿ ಬ್ರದರ್ಸ್ ಆಪ್ತರ ನಡ್ವೆ ಟಿಕೆಟ್ ಹಗ್ಗಜಗ್ಗಾಟ ನಡೆಯುತ್ತಿದೆ. ಅಭ್ಯರ್ಥಿಗಳ ಪಟ್ಟಿ ಫೈನಲ್ ಮಾಡಲು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಇಂದು ದೆಹಲಿಗೆ ತೆರಳ್ತಿದ್ದಾರೆ.

    ಅತ್ತ ಮಂಡ್ಯ ಬಿಜೆಪಿಯಲ್ಲಿ ಹಾಲಿ-ಮಾಜಿ ಸಿಎಂಗಳ ಆಪ್ತರ ಫೈಟ್ ಜೋರಾಗಿದೆ. ಬೊಮ್ಮಾಯಿ ಆಪ್ತ ಎಲೆಚಾಕನಹಳ್ಳಿ ಬಸವರಾಜು, ಬಿಎಸ್‍ವೈ ಸಂಬಂಧಿ ಬೂಕಳ್ಳಿ ಮಂಜುಗೆ ಟಿಕೆಟ್ ರೇಸ್‍ನಲ್ಲಿದ್ದಾರೆ. ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಇಂದು ಪ್ರಕಟವಾಗುವ ಸಂಭವ ಇದೆ. ಜೆಡಿಎಸ್ ಅಭ್ಯರ್ಥಿಗಳ ಪಟ್ಟಿ ಇಂದು ಅಥವಾ ನಾಳೆ ಪ್ರಕಟವಾಗಲಿದೆ. ಹಾಸನ ಕ್ಷೇತ್ರಕ್ಕೆ ಜೆಡಿಎಸ್‍ನಿಂದ ಸೂರಜ್ ರೇವಣ್ಣ ಅಭ್ಯರ್ಥಿ ಆಗೋದು ಬಹುತೇಕ ಖಚಿತ ಎನ್ನಲಾಗಿದೆ. ಇದನ್ನೂ ಓದಿ: ಚೀನಾ ಗಡಿ ಕ್ಯಾತೆ ನಡುವೆ ಭಾರತೀಯ ಸೇನೆಯಿಂದ ಆಪರೇಷನ್ ಹರ್ಕ್ಯುಲಸ್

    ಬಿಜೆಪಿ ನಾಯಕರು ಇಂದಿನಿಂದ 4 ತಂಡಗಳ ಮೂಲಕ ರಾಜ್ಯ ಪ್ರವಾಸ ಕೈಗೊಳ್ತಿದ್ದಾರೆ. ಉತ್ತರ ಕನ್ನಡದಿಂದ ಯಡಿಯೂರಪ್ಪ, ದಾವಣಗೆರೆಯಿಂದ ಜಗದೀಶ್ ಶೆಟ್ಟರ್, ಕೊಪ್ಪಳದಿಂದ ನಳಿನ್ ಕುಮಾರ್ ಕಟೀಲ್, ಶಿವಮೊಗ್ಗದಿಂದ ಕೆ.ಎಸ್ ಈಶ್ವರಪ್ಪ ಜನಸ್ವರಾಜ್ ಯಾತ್ರೆ ನಡೆಸಲಿದ್ದಾರೆ.

  • ಪತ್ನಿ ಸಾವಿನಿಂದ ಮನನೊಂದು ಒಂದೇ ಕುಟುಂಬದ ಐವರು ಆತ್ಮಹತ್ಯೆ

    ಪತ್ನಿ ಸಾವಿನಿಂದ ಮನನೊಂದು ಒಂದೇ ಕುಟುಂಬದ ಐವರು ಆತ್ಮಹತ್ಯೆ

    ಚಿಕ್ಕೋಡಿ(ಬೆಳಗಾವಿ): ಪತ್ನಿ ಸಾವಿನಿಂದ ಮನನೊಂದಿದ್ದ ವ್ಯಕ್ತಿಯೊಬ್ಬ ತನ್ನ ನಾಲ್ವರು ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಹೃದಯವಿದ್ರಾವಕ ಘಟನೆ ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಬೋರಗಲ್ ಗ್ರಾಮದಲ್ಲಿ ನಡೆದಿದೆ.

    ಬೋರಗಲ್ ಗ್ರಾಮದ ಗೋಪಾಲ ಹಾದಿಮನಿ (46) ಹಾಗೂ ಅವರ ಮಕ್ಕಳಾದ ಸೌಮ್ಯಾ ಹಾದಿಮನಿ (19), ಶ್ವೇತಾ ಹಾದಿಮನಿ (16), ಸಾಕ್ಷಿ ಹಾದಿಮನಿ (11), ಸೃಜನಾ ಹಾದಿಮನಿ (8) ಆತ್ಮಹತ್ಯೆಗೆ ಶರಣಾದವರು. ಇದನ್ನೂ ಓದಿ: ಬಿರಿಯಾನಿ ತಿನ್ನಲು ಹೋಗಿ 2 ಲಕ್ಷ ರೂ. ಕಳೆದುಕೊಂಡ ಆಟೋ ಚಾಲಕ

    ಜುಲೈ 6 ರಂದು ಗೋಪಾಲ್ ಅವರ ಪತ್ನಿ ಜಯಾ ಬ್ಲ್ಯಾಕ್ ಫಂಗಸ್ ಸೋಂಕಿನಿಂದ ಮೃತಪಟ್ಟಿದ್ದರು. ಇದರಿಂದ ನೊಂದಿದ್ದ ಗೋಪಾಲ್ ಅವರು ಆತ್ಯಹತ್ಯೆ ಮಾಡಿಕೊಂಡಿದ್ದಾರೆ ಎಂದು ಹೇಳಲಾಗುತ್ತಿದೆ. ಇದನ್ನೂ ಓದಿ: ಫ್ರೀಯಾಗಿ ಕೋಳಿ ಕೊಡಲಿಲ್ಲ- ಹಿಗ್ಗಾಮುಗ್ಗ ಥಳಿಸಿದ್ರು

    ಸಂಕೇಶ್ವರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ. ಇದನ್ನೂ ಓದಿ: ಪರ್ವತದ ನೀರು ಕುಡಿದು, ದೇವಾಲಯದ ಪ್ರಸಾದ ಸೇವಿಸಿ ಬದುಕುಳಿದೆವು: ಉತ್ತರಾಖಂಡ್ ಪ್ರವಾಹ ಭೀಕರತೆ ಬಿಚ್ಚಿಟ್ಟ ಕನ್ನಡಿಗರು

  • ಕ್ರಿಕೆಟ್ ಆಡಿ ಯುವಕರನ್ನು ಪ್ರೋತ್ಸಾಹಿಸಿದ ಶಾಸಕಿ ಅಂಜಲಿ ನಿಂಬಾಳ್ಕರ್

    ಕ್ರಿಕೆಟ್ ಆಡಿ ಯುವಕರನ್ನು ಪ್ರೋತ್ಸಾಹಿಸಿದ ಶಾಸಕಿ ಅಂಜಲಿ ನಿಂಬಾಳ್ಕರ್

    ಖಾನಾಪುರ(ಬೆಳಗಾವಿ): ತಂತ್ರಜ್ಞಾನದ ಈ ಯುಗದಲ್ಲಿ ಯುವ ಜನತೆ ಮೊಬೈಲ್‍ನಲ್ಲಿ ಗೇಮ್, ಚಾಟಿಂಗ್ ಇನ್ನಿತರ ಚಟುವಟಿಕೆಗಳನ್ನು ಮಾಡುವುದನ್ನು ಬಿಟ್ಟು ಹೊರಾಂಗಣದಲ್ಲಿ ಶರೀರವನ್ನು ವ್ಯಾಯಾಮ ಮತ್ತು ಆಟ ಆಡುವ ಮೂಲಕ ಸದೃಢವಾಗಿಟ್ಟುಕೊಂಡರೆ ಮಾತ್ರ ಆರೋಗ್ಯ ಚೆನ್ನಾಗಿರುತ್ತದೆ ಎಂದು ಖಾನಾಪುರ ಶಾಸಕಿ ಅಂಜಲಿ ನಿಂಬಾಳ್ಕರ್ ಹೇಳಿದರು.

    ತಾಲೂಕಿನ ಕಣಕುಂಬಿ ಗ್ರಾಮದಲ್ಲಿ ಶನಿವಾರದಂದು ಯುವಕರು ಹಮ್ಮಿಕೊಂಡಂತಹ ಓಪನ್ ಕ್ರಿಕೆಟ್ ಟೂರ್ನಮೆಂಟ್ ಪಂದ್ಯಾವಳಿಯನ್ನು ಉದ್ಘಾಟಿಸಿ ಮಾತನಾಡಿದರು.

    ಪ್ರತಿಯೊಬ್ಬರು ಆರೋಗ್ಯವಾಗಿರಬೇಕು ಎಂದು ಊಹಿಸುತ್ತಾರೆ. ಆದರೆ ಶರೀರಕ್ಕೆ ಯಾವುದೇ ತರಹದ ಕೆಲಸ ನೀಡದ ಕಾರಣ ಇತ್ತೀಚಿನ ದಿನಗಳಲ್ಲಿ ಶುಗರ್, ಬಿಪಿ ಹೀಗೆ ಹತ್ತು ಹಲವಾರು ರೋಗಗಳಿಗೆ ಬಲಿಯಾಗಿ ತಮ್ಮ ಜೀವ ಬೆಲೆಯಿಲ್ಲದ ಹಾಗೇ ಬೇಜವಾಬ್ದಾರಿ ತೋರುತ್ತಿದ್ದಾರೆ. ಆದ್ದರಿಂದ ಯುವಜನತೆಗೆ ಮದ್ಯಪಾನ, ಧೂಮಪಾನ ಹಾಗೂ ಅಕ್ರಮ ಚಟುವಟಿಕೆಗಳಿಂದ ದೂರವಿದ್ದು ಹೊರಾಂಗಣ ಆಟ ಆಡಿ, ವ್ಯಾಯಾಮ ಮಾಡಿ ತಮ್ಮ ಆರೋಗ್ಯ ಸದೃಢವಾಗಿಟ್ಟುಕೊಳ್ಳಬೇಕೆಂದು ಸಲಹೆ ನೀಡಿದರು.

    ಈ ಸಂಧರ್ಭದಲ್ಲಿ ಪಂದ್ಯಾವಳಿಯನ್ನು ಶಾಸಕಿ ಅಂಜಲಿಯವರು ಬ್ಯಾಟ್ ಹಿಡಿದು ಚೆಂಡನ್ನು ಹೊಡೆದು ಉದ್ಘಾಟಿಸಿ ಅಲ್ಲಿದ್ದ ಪ್ರೇಕ್ಷಕರ ಮನರಂಜಿಸಿದರು. ಇದರ ಜೊತೆಗೆ ಈ ಪಂದ್ಯಾವಳಿಯಲ್ಲಿ ಪ್ರಥಮ ಮತ್ತು ದ್ವೀತಿಯ ಬಹುಮಾನದ 50,000 ನಗದು ಮೊತ್ತವನ್ನು ನೀಡಿ ಪ್ರೋತ್ಸಾಹಿಸಿದರು.

    ಈ ಸಂಧರ್ಭದಲ್ಲಿ ಕ್ರಿಕೇಟ್ ಟೂರ್ನಮೆಂಟ್ ಆಯೋಜಿತ ಯುವಕರು, ಜನಪ್ರತಿನಿಧಿಗಳು, ಗ್ರಾಮಸ್ಥರು ಹಾಗೂ ಕ್ರೀಡಾ ಪ್ರೇಮಿಗಳು ಹಾಜರಿದ್ದರು.

  • ಹಣ ಕೊಡದ ಸಮ್ಮಿಶ್ರ ಸರ್ಕಾರ – ಸದ್ಯದಲ್ಲೇ ಇಂದಿರಾ ಕ್ಯಾಂಟೀನ್‍ಗೆ ಬೀಳುತ್ತಾ ಬೀಗ?

    ಹಣ ಕೊಡದ ಸಮ್ಮಿಶ್ರ ಸರ್ಕಾರ – ಸದ್ಯದಲ್ಲೇ ಇಂದಿರಾ ಕ್ಯಾಂಟೀನ್‍ಗೆ ಬೀಳುತ್ತಾ ಬೀಗ?

    ಬೆಳಗಾವಿ: ನಗರದಲ್ಲಿನ ಬಡವರ್ಗದ ಕೂಲಿ ಕಾರ್ಮಿಕರ ಹೊಟ್ಟೆ ತುಂಬಿಸುವ ನಿಟ್ಟಿನಲ್ಲಿ ಹಿಂದಿನ ಕಾಂಗ್ರೆಸ್ ಸರ್ಕಾರ ಇಂದಿರಾ ಕ್ಯಾಂಟೀನ್ ಜಾರಿಗೆ ತಂದಿತ್ತು. ಸದ್ಯ ರಾಜ್ಯದಲ್ಲಿ ಕಾಂಗ್ರೆಸ್-ಜೆಡಿಎಸ್ ನೇತೃತ್ವದ ಸಮ್ಮಿಶ್ರ ಸರ್ಕಾರ ಆಡಳಿತದಲ್ಲಿದೆ. ಆದರೆ ಸಿದ್ದರಾಮಯ್ಯನವರ ಮಹತ್ವಾಕಾಂಕ್ಷಿ ಯೋಜನೆಯನ್ನು ಈಗಿನ ಸರ್ಕಾರ ಕಡೆಗಣಿಸುತ್ತಿದ್ದು, ಕಳೆದ ನಾಲ್ಕು ತಿಂಗಳಿನಿಂದ ಇಂದಿರಾ ಕ್ಯಾಂಟಿನ್ ಗಳಿಗೆ ಒಂದು ಪೈಸೆ ಹಣವನ್ನೂ ಸರ್ಕಾರದಿಂದ ಬಿಡುಗಡೆ ಮಾಡಿಲ್ಲ. ಈ ಹಣವನ್ನೆಲ್ಲಾ ಪಾಲಿಕೆಯವರೇ ಭರಿಸಬೇಕೆಂದು ಹೇಳಿದ್ದು, ಲಾಸ್ ನಲ್ಲಿರುವ ಪಾಲಿಕೆ ಹಣ ನೀಡುತ್ತಿಲ್ಲ ಎಂಬ ಮಾಹಿತಿಯೊಂದು ಪಬ್ಲಿಕ್ ಟಿವಿಗೆ ಲಭ್ಯವಾಗಿದೆ.

    ಅತೀ ಕಡಿಮೆ ದರದಲ್ಲಿ ಹಸಿದ ಬಡ ಕೂಲಿ ಕಾರ್ಮಿಕರಿಗೆ ಹೊಟ್ಟೆ ತುಂಬಿಸುತ್ತಿದ್ದ ಇಂದಿರಾ ಕ್ಯಾಂಟಿನ್ ಸದ್ಯ ಬಂದ್ ಆಗುವ ಹಂತಕ್ಕೆ ಬಂದು ನಿಂತಿವೆ. ಸಮ್ಮಿಶ್ರ ಸರ್ಕಾರದಲ್ಲಿ ಅನುದಾನ ನೀಡಲು ಆಗದೆ ಆ ಹೊಣೆಯನ್ನ ಆಯಾ ಜಿಲ್ಲಾ ಮಹಾನಗರ ಪಾಲಿಕೆಯವರ ಹೆಗಲ ಮೇಲೆ ಹಾಕಿದ್ದಕ್ಕೆ ಅನುದಾನ ಕೊರತೆಯಿಂದಾಗಿ ನಾಲ್ಕರಿಂದ ಆರು ತಿಂಗಳವರೆಗಿನ ಹಣ ಬಾಕಿ ಉಳಿಸಿಕೊಂಡಿವೆ. ಸದ್ಯ ಬೆಳಗಾವಿ ನಗರವೊಂದರಲ್ಲೇ 6 ಇಂದಿರಾ ಕ್ಯಾಂಟೀನ್‍ಗಳಿದ್ದು ಒಂದೂವರೆ ವರ್ಷದಿಂದ ಆರಂಭವಾಗಿರುವ ಈ ಕ್ಯಾಂಟೀನ್ ಗಳಿಗೆ ಆಗಾಗ ಮೂರ್ನಾಲ್ಕು ತಿಂಗಳು ಹಣ ನೀಡಿದ್ದನ್ನ ಬಿಟ್ಟರೆ ಇಲ್ಲಿವರೆಗೂ ಒಂದು ಪೈಸೆಯೂ ಬಿಡುಗಡೆ ಮಾಡಿಲ್ಲ.

    ಈ ಸ್ಥಿತಿ ಕೇವಲ ಬೆಳಗಾವಿ ಜಿಲ್ಲೆಯಲ್ಲಿ ಮಾತ್ರ ನಿರ್ಮಾಣವಾಗಿಲ್ಲ, ಇಡೀ ರಾಜ್ಯಾದ್ಯಂತ ಇಂದಿರಾ ಕ್ಯಾಂಟೀನ್ ಗಳಿಗೆ ಹಣ ಬಿಡುಗಡೆಯಾಗಿಲ್ಲ ಎಂಬುದು ವಿಶೇಷ. ಬಡ ಕೂಲಿ ಕಾರ್ಮಿಕರ ಹೊಟ್ಟೆ ತುಂಬಿಸುತ್ತಿದ್ದ ಇಂದಿರಾ ಕ್ಯಾಂಟೀನ್ ಗಳು ಸದ್ಯ ಆರ್ಥಿಕ ಮುಗ್ಗಟ್ಟಿನಿಂದ ಬಳಲುತ್ತಿದ್ದು ಹೀಗೆ ಮುಂದುವರಿದಿದ್ದೇ ಆದರೆ ಇನ್ನೆರಡು ತಿಂಗಳಲ್ಲಿ ಕದ ಹಾಕುವ ಸ್ಥಿತಿಗೆ ಇಂದಿರಾ ಕ್ಯಾಂಟೀನ್ ಗಳು ಬರಬಹುದು. ಸರ್ಕಾರ ಇನ್ನಾದರೂ ಎಚ್ಚೆತ್ತುಕೊಂಡು ನೇರವಾಗಿ ಸರ್ಕಾರವೇ ಇಂದಿರಾ ಕ್ಯಾಂಟೀನ್ ಗಳಿಗೆ ಅನುದಾನ ಬಿಡುಗಡೆ ಮಾಡಿ ರೈತರ ಹೊಟ್ಟೆ ತುಂಬಿಸುತ್ತಿರುವ ಕ್ಯಾಂಟೀನ್ ಗಳನ್ನ ಉಳಿಸುವ ಕೆಲಸ ಮಾಡಬೇಕೆಂದು ಸಾರ್ವಜನಿಕರ ಆಗ್ರಹಿಸುತ್ತಿದ್ದಾರೆ.

    ಇಂದಿರಾ ಕ್ಯಾಂಟೀನ್ ನಲ್ಲಿ ಬೆಳಗ್ಗೆ ತಿಂಡಿ, ಮಧ್ಯಾಹ್ನದ ಊಟ, ರಾತ್ರಿ ಊಟ ನೀಡಲಾಗುತ್ತಿದ್ದು ಒಂದು ಬಾರಿಗೆ ಸುಮಾರು 500 ಪ್ಲೇಟ್ ಗಳನ್ನ ನೀಡಲಾಗುತ್ತದೆ. ಪ್ರತಿ ದಿನ ಒಂದು ಇಂದಿರಾ ಕ್ಯಾಂಟೀನ್ ಗೆ 97 ಸಾವಿರ ರೂಪಾಯಿ ಖರ್ಚಾಗುತ್ತಿದ್ದು ಇದರ ಹಣವನ್ನ ಪಾಲಿಕೆಯವರೇ ಭರಿಸಬೇಕೆಂದು ಸರ್ಕಾರ ಸೂಚನೆ ನೀಡಿದೆ.

    ಬೆಳಗಾವಿಯಲ್ಲಿ ಆರು ಇಂದಿರಾ ಕ್ಯಾಂಟೀನ್ ಗಳಿದ್ದು ತಿಂಗಳಿಗೆ 30 ಲಕ್ಷ ರೂ. ಕ್ಯಾಂಟೀನ್ ನಡೆಸಲು ಬೇಕಾಗುತ್ತದೆ. ಅನುದಾನ ಕೊರತೆ ಹಿನ್ನೆಲೆಯಲ್ಲಿ ನಾಲ್ಕರಿಂದ ಆರು ತಿಂಗಳಿನಿಂದ ಪಾಲಿಕೆಯವರು ಪೇಮೆಂಟ್ ನೀಡಿಲ್ಲ. ಆದರೂ ಕ್ಯಾಂಟೀನ್ ಬಂದ್ ಮಾಡದೇ ಇನ್ನೂ ಕೂಡ ನಡೆಸುವ ಪ್ರಯತ್ನ ಗುತ್ತಿಗೆದಾರರು ಮಾಡುತ್ತಿದ್ದಾರೆ. ಇತ್ತ ಬೆಳಗಾವಿ ಮಹಾನಗರ ಪಾಲಿಕೆ ಕೂಡ ನಷ್ಟದಲ್ಲಿದ್ದೂ ಅಂದಾಜು ಒಂದೂವರೆ ಕೋಟಿ ಹಣ ಪಾಲಿಕೆ ಬಾಕಿ ಉಳಿಸಿಕೊಂಡಿದೆ.

    ಒಂದು ವರ್ಷಕ್ಕೆ ಸುಮಾರು 3ಕೋಟಿಗೂ ಅಧಿಕ ಹಣ ಈ ಇಂದಿರಾ ಕ್ಯಾಂಟೀನ್ ಗೆ ಹೊರೆಯಾಗುತ್ತಿದ್ದು ಇದರಿಂದ ನಗರದಲ್ಲಿ ಮಹತ್ತರ ಕಾಮಗಾರಿಗಳನ್ನ ಕೈಗೆತ್ತಿಕೊಳ್ಳಲು ಕೂಡ ಪಾಲಿಕೆ ಯೋಚಿಸಬೇಕಾಗದ ಸ್ಥಿತಿ ನಿರ್ಮಾಣವಾಗಿದೆ. ಈ ಕುರಿತು ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಅವರನ್ನ ಕೇಳಿದರೆ, ರಾಜ್ಯಾದ್ಯಂತ ಇಂದಿರಾ ಕ್ಯಾಂಟೀನ್ ಗಳಿಗೆ ಹಣ ಬಿಡುಗಡೆ ಆಗಿಲ್ಲ ಎಂಬುದು ಗೊತ್ತಾಗಿದೆ. ಈ ಕೂಡಲೇ ಸಿಎಂ ಕುಮಾರಸ್ವಾಮಿ ಮತ್ತು ಸಂಬಂಧ ಪಟ್ಟ ಇಲಾಖೆಯ ಸಚಿವರ ಜೊತೆಗೆ ಚರ್ಚೆ ಮಾಡಿ ಅನುದಾನ ಬಿಡುಗಡೆ ಮಾಡುವಂತೆ ಹೇಳುತ್ತೆನೆ ಎಂದು ಭರವಸೆ ನೀಡಿದ್ದಾರೆ.

    ಒಟ್ಟಿನಲ್ಲಿ ರಾಜ್ಯಾದ್ಯಾಂತ ಹಣದ ಕೊರತೆಯಿಂದ ಇಂದಿರಾ ಕ್ಯಾಂಟೀನ್ ಗಳು ಬಳಲುತ್ತಿವೆ. ಇತ್ತ ಲಾಸ್ ನಲ್ಲಿರುವ ಪಾಲಿಕೆಗಳು ನಾಲ್ಕು ದಿನ ಹಣ ಕೊಟ್ಟ ಹಾಗೇ ಮಾಡಿ ಈಗ ತಮ್ಮ ಖಜಾನೆಯಲ್ಲಿ ಹಣ ಇಲ್ಲ ಎಂದು ಹೇಳಿ ಸೈಲೆಂಟ್ ಆಗಿದ್ದಾರೆ. ಹಣ ಬಿಡುಗಡೆಗೊಳಿಸಬೇಕಿದ್ದ ಸರ್ಕಾರ ಇನ್ನಾದರೂ ಎಚ್ಚೆತ್ತುಕೊಂಡು ಕ್ಯಾಂಟೀನ್ ಗಳಿಗೆ ಜೀವ ತುಂಬುತ್ತಾ ಅಥವಾ ಇದರಲ್ಲೂ ರಾಜಕೀಯ ಮಾಡಿ ಬಂದ್ ಮಾಡಿಸುತ್ತಾ ಎಂಬುದನ್ನ ಕಾದುನೋಡಬೇಕಿದೆ.

  • ಬೆಳಗಾವಿ ಅಧಿವೇಶನಕ್ಕೆ ಪ್ರತಿಭಟನೆ ಬಿಸಿ – ಸ್ವಾಮೀಜಿಗಳ ನೇತೃತ್ವದಲ್ಲಿ ಅಹೋರಾತ್ರಿ ಧರಣಿ ಆರಂಭ

    ಬೆಳಗಾವಿ ಅಧಿವೇಶನಕ್ಕೆ ಪ್ರತಿಭಟನೆ ಬಿಸಿ – ಸ್ವಾಮೀಜಿಗಳ ನೇತೃತ್ವದಲ್ಲಿ ಅಹೋರಾತ್ರಿ ಧರಣಿ ಆರಂಭ

    ಬೆಳಗಾವಿ: ಚಳಿಗಾಲದ ಬೆಳಗಾವಿ ಅಧಿವೇಶನಕ್ಕೆ ಪ್ರತಿಭಟನೆ ಬಿಸಿ ತಟ್ಟಲಿದ್ದು, ಉತ್ತರ ಕರ್ನಾಟಕದ ಅಭಿವೃದ್ಧಿಗೆ ಪಕ್ಷಾತೀತವಾಗಿ ಸ್ವಾಮೀಜಿಗಳ ನೇತೃತ್ವದಲ್ಲಿ ಅಹೋರಾತ್ರಿ ಧರಣಿ ಶುರುವಾಗಿದೆ.

    ನಗರದ ಸಾಹಿತ್ಯ ಭವನದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಹುಕ್ಕೇರಿ ಮಠದ ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ ಅವರು, ಹತ್ತು ದಿನಗಳ ಒಳಗೆ 10 ಇಲಾಖೆ ಸುವರ್ಣ ಸೌಧಕ್ಕೆ ಸ್ಥಳಾಂತರ ಮಾಡಬೇಕು. ಇಲ್ಲವಾದರೆ ಪ್ರತ್ಯೇಕ ಉತ್ತರ ಕರ್ನಾಟಕದ ಕೂಗು ಎಳಲಿದೆ. ಉತ್ತರ ಕರ್ನಾಟಕದ ಯಾವ ಶಾಸಕರು ಅಧಿವೇಶನಕ್ಕೆ ಗೈರಾಗಬಾರದು. ಪಕ್ಷಭೇದ ಮರೆತು ಎಲ್ಲರೂ ಉತ್ತರ ಕರ್ನಾಟಕ ಅಭಿವೃದ್ಧಿಗೆ ಧ್ವನಿಯಾಗಬೇಕು ಎಂದು ಹೇಳಿದರು.

    ಇದೇ ವೇಳೆ ಉತ್ತರ ಕರ್ನಾಟಕ ಹೋರಾಟ ಅಭಿವೃದ್ಧಿ ಪರ ಧ್ವನಿ ಎತ್ತುವಂತೆ ಎಲ್ಲ ಶಾಸಕರಿಗೂ ಪತ್ರ ಬರೆಯುವುದರಾಗಿ ಹೇಳಿದರು. ಅಲ್ಲದೇ ಹತ್ತು ದಿನಗಳ ಒಳಗಾಗಿ ಬೇಡಿಕೆ ಈಡೇರಿಸದಿದ್ದರೆ ಮತ್ತೆ ಹೋರಾಟಕ್ಕೆ ಸಿದ್ಧವಾಗುತ್ತೇವೆ. ಒಂದೊಮ್ಮೆ ಸರ್ಕಾರ ನಮ್ಮ ಬೇಡಿಕೆ ನಿರ್ಲಕ್ಷಿಸಿದರೆ ಹೋರಾಟಗಾರು ತೆಗೆದುಕೊಳ್ಳುವ ನಿರ್ಧಾರಕ್ಕೆ ಬದ್ಧರಾಗಿತ್ತೇವೆ. ಅಲ್ಲದೇ ಪ್ರತ್ಯೇಕ ಉತ್ತರ ಕರ್ನಾಟಕ ಹೋರಾಟ ಮಾಡಲು ಎಲ್ಲಾ ಸ್ವಾಮೀಜಿಗಳ ಬೆಂಬಲವಿದ್ದು, ಪ್ರತ್ಯೇಕ ರಾಜ್ಯ ಹೋರಾಟ ತೀವ್ರಗೊಂಡರೆ ಅದಕ್ಕೆ ರಾಜ್ಯ ಸರ್ಕಾರವೇ ನೇರ ಹೊಣೆ ಆಗುತ್ತದೆ ಎಚ್ಚರಿಕೆ ನೀಡಿದರು.

    ಹೋರಾಟಗಾರರ ನಿರ್ಣಯಗಳು:
    1. ಬೆಳಗಾವಿ 2ನೇ ರಾಜಧಾನಿಯಾಗಿ ಘೋಷಣೆ, ಕನ್ನಡ ಸೌಧಕ್ಕೆ ಕಚೇರಿಗಳ ಸ್ಥಳಾಂತರ.
    2. 10 ದಿನ ಬದಲಿಗೆ 21 ದಿನ ಅಧಿವೇಶನ ನಡೆಯಬೇಕು.
    3. ಬೇಡಿಕೆಗಳ ಕುರಿತು ಸ್ವಾಮೀಜಿಗಳು, ಹೋರಾಟಗಾರರ ಜೊತೆ ಸಿಎಂ ಸಭೆ ಮಾಡಬೇಕು.
    4. ಉತ್ತರ ಕರ್ನಾಟಕ ಭಾಗದ ಶಾಸಕರು, ಸಚಿವರು ಅಧಿವೇಶನದಲ್ಲಿ ಅಭಿವೃದ್ಧಿ ಕುರಿತು ಹೋರಾಟ ಮಾಡಬೇಕು.
    5. ಸರ್ಕಾರ ಬೇಡಿಕೆಗಳನ್ನ ಈಡೇರಿಸದಿದ್ದರೆ ಜನರ ಬಳಿ ಹೋಗಿ ಜನಾಗ್ರಹ ಸಂಗ್ರಹಣೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಬೆಳಗ್ಗೆ ಮುದುಡಿದ್ದ ಮುಖ, ಮಧ್ಯಾಹ್ನವಾಗುತ್ತಲೇ ಅರಳುವ ಮೂಲಕ ನನಗ್ಯಾವ ಚಿಂತೆ ಇಲ್ಲರೀ ಎಂದ ಸಿಎಂ

    ಬೆಳಗ್ಗೆ ಮುದುಡಿದ್ದ ಮುಖ, ಮಧ್ಯಾಹ್ನವಾಗುತ್ತಲೇ ಅರಳುವ ಮೂಲಕ ನನಗ್ಯಾವ ಚಿಂತೆ ಇಲ್ಲರೀ ಎಂದ ಸಿಎಂ

    ಉಡುಪಿ: ಬೆಳಗಾವಿಯಲ್ಲಿನ ಪಿಎಲ್‍ಡಿ ಬ್ಯಾಂಕಿನ ಚುನಾವಣೆಯ ವಿಚಾರದಲ್ಲೇ ಸಿಎಂ ಕುಮಾರಸ್ವಾಮಿಯವರ ಮುಖ ಬೆಳಗ್ಗೆ ಮುದುಡಿದ್ದರೆ, ಮಧ್ಯಾಹ್ನದ ಹೊತ್ತಿಗೆ ಚುನಾವಣೆಯ ಫಲಿತಾಂಶ ಹೊರಬೀಳುತ್ತಲೇ ಅರಳುವ ಹಾಗೆ ಮಾಡಿತ್ತು.

    ಬೆಳಗ್ಗೆ 10 ಕ್ಕೆ ಉಡುಪಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ಜಿಲ್ಲಾ ಮಟ್ಟದ ಪ್ರಗತಿ ಪರಿಶೀಲನಾ ಸಭೆಗೆ ಸಮಯ ನಿಗದಿಯಾಗಿತ್ತು. ಎಲ್ಲಾ ಅಧಿಕಾರಿಗಳು, ಪರಿಷತ್ ವಿಪಕ್ಷದ ನಾಯಕರು, ಐದು ಶಾಸಕರು ಅರ್ಧಗಂಟೆ ಮೊದಲೇ ಬಂದಿದ್ದರು. ಆದರೆ ಕೊನೆ ಕ್ಷಣದಲ್ಲಿ ಸಿಎಂ ತಮ್ಮ ನಿರ್ಧಾರ ಬದಲಿಸಿ, ಮಣಿಪಾಲಕ್ಕೆ ಬಾರದೆ ನೇರವಾಗಿ ಕೃಷ್ಣಮಠಕ್ಕೆ ಭೇಟಿ ನೀಡಿದರು. ಕೃಷ್ಣ ಒಬ್ಬ ಚಾಣಾಕ್ಷ್ಯ ರಾಜಕಾರಣಿ. ಬೆಳಗಾವಿ ಬೆಳವಣಿಗೆಯ ಸಂದರ್ಭ ಕೃಷ್ಣನ ದರ್ಶನದಿಂದ ಯಶಸ್ಸು ಸಿಗುತ್ತದೆ ಎನ್ನುವ ಮಾತು ಇಂದು ಮಹತ್ವ ಪಡೆದಿತ್ತು.

    ಕೃಷ್ಣನ ದರ್ಶನದ ನಂತರ ದೇಗುಲದಿಂದ 5 ಕಿಲೋ ಮೀಟರ್ ದೂರದ ಮಣಿಪಾಲಕ್ಕೆ ಸಿಎಂ ಆಗಮಿಸಿದರು. ಅಷ್ಟರಲ್ಲೇ ಬೆಳಗಾವಿ ಬೆಳವಣಿಗೆ ಎಲ್ಲಾ ಸುಖಾಂತ್ಯ ಎಂಬ ಮಾಹಿತಿ ಮಾಧ್ಯಮಗಳಲ್ಲಿ ಭಿತ್ತರವಾಗಿತ್ತು, ಇದನ್ನು ಕೇಳಿದ ಬಳಿಕ ನಿರಾಳರಾದ ಸಿಎಂ ತಮ್ಮ ಸಭೆಯನ್ನು ಮುಂದುವರಿಸಿದರು. ಮೂರೂವರೆ ಗಂಟೆಗಳ ಕಾಲ ನಡೆದ ಸುಧೀರ್ಘ ಕೆಡಿಪಿ ಸಭೆಯಲ್ಲಿ ಜಿಲ್ಲೆಯ ಸಮಸ್ಯೆಗಳು, ಐದು ವಿಧಾನಸಭಾ ಕ್ಷೇತ್ರದ ಸಮಸ್ಯೆಗಳು, ಸರ್ಕಾರದ ಅನುದಾನದ ಬಳಕೆ ಹಾಗೂ ಹೊಸ ಆಶ್ವಾಸನೆಗಳನ್ನು ಘೋಷಣೆ ಮಾಡಿದರು. ಬೆಳಗೆ ಇದ್ದ ಗೊಂದಲ ಸಿಎಂ ಮುಖದಲ್ಲಿ ಸಂಜೆ ಕಾಣಿಸಲಿಲ್ಲ. ಕೊನೆದಾಗಿ ಹೊರಡುವ ಮುನ್ನ ನಾನು ಟೆನ್ಶನ್ ಮಾಡಿಕೊಳ್ಳುವ ಆಸಾಮಿಯೇ ಅಲ್ಲ, ನನಗ್ಯಾಕೆ ಚಿಂತೆ ಎಂದು ಹೇಳಿ ಹೊರಟರು.

    ಸೆಪ್ಟೆಂಬರ್ 7 ರಾಜ್ಯ ಸಮ್ಮಿಶ್ರ ಸರ್ಕಾರಕ್ಕೆ ದೊಡ್ಡ ತಲೆನೋವು ನೀಡಿದ ದಿನ. ಬೆಳಗಾವಿಯ ಒಂದು ಗ್ರಾಮೀಣ ಬ್ಯಾಂಕ್ ಚುನಾವಣೆ ರಾಜಕೀಯ ವಲಯದಲ್ಲೇ ಸಂಚಲನ ಮೂಡಿಸಿತ್ತು. ದೋಸ್ತಿ ಸರ್ಕಾರ ಬಿದ್ದೇ ಹೋಗುತ್ತೆ ಅನ್ನುವ ರಾಜಕೀಯ ಪಂಡಿತರು ಲೆಕ್ಕ ಹಾಕುತ್ತಿರುವಾಗ, ಸಿಎಂ ಕುಮಾರಸ್ವಾಮಿ ಉಡುಪಿ ಶ್ರೀ ಕೃಷ್ಣನ ದರ್ಶನಗೈದು ವಿಶೇಷ ಪೂಜೆ ಸಲ್ಲಿಸಿದರು. ಮಧ್ವ ಸರೋವರದ ಪವಿತ್ರ ತೀರ್ಥ ಜಲ ಪ್ರೋಕ್ಷಣೆ ಮಾಡಿಕೊಂಡು, ಮಠದೊಳಗೆ ಬಂದು ಕನಕನ ಕಿಂಡಿಯ ಮೂಲಕ ದೇವರ ದರ್ಶನ ಮಾಡಿದರು.

    ಶ್ರೀ ಕೃಷ್ಣನನ್ನು ಆಶೀರ್ವಾದ ಪಡೆದ ಬಳಿಕ ಪರ್ಯಾಯ ಪಲಿಮಾರು ವಿದ್ಯಾಧೀಶ ಸ್ವಾಮೀಜಿಯನ್ನು ಭೇಟಿಯಾಗಿ ಸರ್ಕಾರ ಸುಭದ್ರವಾಗಿ ನಡೆಯುವಂತೆ ಪ್ರಾರ್ಥನೆ ಮಾಡಲು ಕೋರಿದರು. ನಾಡಿಗೂ, ನೆರೆಪೀಡಿತ ಕೊಡಗಿಗೂ ಭಗವಂತ ಶ್ರೇಯಸ್ಸು ಕೊಡಲಿ ಎಂದು ಪ್ರಾರ್ಥಿಸಿಕೊಂಡರು. ನಮ್ಮ ಕುಟುಂಬಕ್ಕೆ ದೇವರ ಮೇಲೆ ಭಕ್ತಿ ಜಾಸ್ತಿ. ಉಡುಪಿ ಕೃಷ್ಣನಲ್ಲಿ ನಾಡಿಗಾಗಿ ಪ್ರಾರ್ಥನೆ ಮಾಡಿದ್ದೇನೆ. ರಾಜ್ಯ ಸಮೃದ್ಧವಾಗುವಂತೆ ದೇವರಲ್ಲಿ ಕೋರಿದ್ದೇನೆ ಎಂದು ಹೇಳಿದ್ದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv