Tag: Belagavi By Election

  • ಬಿಜೆಪಿ ಗೆಲುವಿನ ಅಂತರಕ್ಕಿಂತ ನೋಟಾಗೆ ಹೆಚ್ಚು ಮತಗಳು – ಶೇ.42.56ರಷ್ಟು ಮತ ಪಡೆದ ಕಾಂಗ್ರೆಸ್

    ಬಿಜೆಪಿ ಗೆಲುವಿನ ಅಂತರಕ್ಕಿಂತ ನೋಟಾಗೆ ಹೆಚ್ಚು ಮತಗಳು – ಶೇ.42.56ರಷ್ಟು ಮತ ಪಡೆದ ಕಾಂಗ್ರೆಸ್

    ಬೆಳಗಾವಿ: ಕುಂದಾ ನಗರಿ ಬೆಳಗಾವಿಯನ್ನ ತನ್ನಲ್ಲೇ ಉಳಿಸಿಕೊಳ್ಳಲು ಬಿಜೆಪಿ ಯಶಸ್ವಿಯಾದ್ರೆ, ಕಾಂಗ್ರೆಸ್ ವೀರೋಚಿತ ಸೋಲು ಕಂಡಿದೆ. ಬಿಜೆಪಿ ಗೆಲುವಿನ ಅಂತರ ನೋಟಾಗೆ ಬಿದ್ದ ಮತಗಳಿಂತ ಕಡಿಮೆ. ಬಿಜೆಪಿ ಅಭ್ಯರ್ಥಿ ಮಂಗಳಾ ಅಂಗಡಿ 5,240 ಮತಗಳ ಅಂತರದಿಂದ ಕಾಂಗ್ರೆಸ್ಸಿನ ಸತೀಶ್ ಜಾರಕಿಹೊಳಿ ವಿರುದ್ಧ ಗೆದ್ದಿದ್ದಾರೆ. ಆದ್ರೆ ಬೆಳಗಾವಿ ಲೋಕಸಭಾ ಕ್ಷೇತ್ರದ 10,631 ಜನರು ನೋಟಾಗೆ ಮತ ಚಲಾಯಿಸಿದ್ದಾರೆ.

    ಸತೀಶ್ ಜಾರಕಿಹೊಳಿ ಶೇ.42.56 ಮತ್ತು ಮಂಗಳಾ ಅಂಗಡಿ ಶೇ.43.07ರಷ್ಟು ಮತ ಗಳಿಸಿದ್ದಾರೆ. ಬಿಜೆಪಿ ಭದ್ರಕೋಟೆಯಲ್ಲಿ ಕಾಂಗ್ರೆಸ್ ತನ್ನ ಮತಗಳನ್ನ ಗಟ್ಟಿ ಮಾಡಿಕೊಳ್ಳುವಲ್ಲಿ ಮೇಲ್ನೋಟಕ್ಕೆ ಯಶಸ್ವಿಯಾಗಿದ್ದು, ಇಂದು ಮುಂದಿನ ಚುನಾವಣೆಗೆ ಸ್ಫೂರ್ತಿ ಮತ್ತಿ ಹುಮ್ಮಸ್ಸು ನೀಡಲಿದೆ ಎಂದು ವಿಶ್ಲೇಷಣೆ ಮಾಡಲಾಗುತ್ತಿದೆ.

    ಸಾರ್ವತ್ರಿಕ ಚುನಾವಣೆಯಲ್ಲಿ ಮೂರು ಲಕ್ಷಕ್ಕೂ ಅಧಿಕ ಮತಗಳ ಅಂತರದಿಂದ ಸುರೇಶ್ ಅಂಗಡಿ ಗೆದ್ದಿದ್ದರು. ಆದ್ರೆ ಈ ಬಾರಿ ಅತ್ಯಲ್ಪ ಮತಗಳಿಂದ ಅಂತರದಿಂದ ಗೆಲ್ಲುವ ಮೂಲಕ ಬಿಜೆಪಿ ಸೇಫ್ ಆಗಿದೆ. ಬೆಳಗಾವಿ ಚುನಾವಣೆಯಲ್ಲಿ ಸಿಎಂ ಯಡಿಯೂರಪ್ಪ, ಮಾಜಿ ಸಿಎಂ, ಜಗದೀಶ್ ಶೆಟ್ಟರ್ ಸೇರಿದಂತೆ ಇಡೀ ಕಮಲ ನಾಯಕರೇ ಪ್ರಚಾರ ನಡೆಸಿದ್ದರು. ಅದ್ಯಾಗಿಯೂ ಬಿಜೆಪಿಗೆ ದೊಡ್ಡ ಹೊಡೆತವನ್ನ ಬೆಳಗಾವಿ ಉಪ ಚುನಾವಣೆ ನೀಡಿದೆ.

    ಇನ್ನೂ ಎಂಇಎಸ್ ನಿಂದ ಕಣಕ್ಕಿಳಿದಿದ್ದ ಶುಭಮ್ ವಿಕ್ರಾಂತ್ ಶೆಲ್ಕೆ 1,16,923 ಮತಗಳನ್ನ ಪಡೆದಿದ್ದಾರೆ. ಪ್ರತಿ ಬಾರಿ ಎಂಇಎಸ್ ನ ಪರೋಕ್ಷ ಬೆಂಬಲವನ್ನ ಬಿಜೆಪಿ ಪಡೆದುಕೊಳ್ಳುತ್ತಿತ್ತು. ಇದೇ ಕಾರಣದಿಂದ ಬಿಜೆಪಿಯ ಅತ್ಯಲ್ಪ ಮತಗಳ ಗೆಲುವಿಗೆ ಪ್ರಮುಖ ಕಾರಣ ಅಂತಾನೂ ಹೇಳಲಾಗುತ್ತಿದೆ.

    ಯಾರಿಗೆ ಎಷ್ಟು ಮತ?
    * ಮಂಗಳಾ ಅಂಗಡಿ (ಬಿಜೆಪಿ): 4,40,327 (ಇವಿಎಂ 4,36,868+ ಪೋಸ್ಟಲ್ 3,459) – ಶೇ.43.07
    * ಸತೀಶ್ ಜಾರಕಿಹೊಳಿ (ಕಾಂಗ್ರೆಸ್): 4,35,087 (ಇವಿಎಂ 4,32,882+ಪೋಸ್ಟಲ್ 2,205) – ಶೇ.42.56
    * ನೋಟಾ: 10,631 (ಇವಿಎಂ 10,563 + ಪೋಸ್ಟಲ್ 68) – ಶೇ.1.04

  • ಬಿಜೆಪಿಗೆ ಬೆಳಗಾವಿಯ ಕುಂದಾ – ಮಂಗಳಾ ಅಂಗಡಿ ಗೆಲುವು

    ಬಿಜೆಪಿಗೆ ಬೆಳಗಾವಿಯ ಕುಂದಾ – ಮಂಗಳಾ ಅಂಗಡಿ ಗೆಲುವು

    – ಕೊನೆ ಎರಡು ಸುತ್ತಿನಲ್ಲಿ ಕಾಂಗ್ರೆಸ್‍ಗೆ ಬಿಗ್ ಶಾಕ್

    ಬೆಳಗಾವಿ: ಕುಂದಾ ನಗರಿ ಬೆಳಗಾವಿಯನ್ನ ಬಿಜೆಪಿ ತನ್ನಲ್ಲೇ ಉಳಿಸಿಕೊಂಡಿದ್ದು, ಮಂಗಳಾ ಅಂಗಡಿ 2,903 ಮತಗಳ ಅಂತರದಲ್ಲಿ ಗೆಲುವಿನ ಮಾಲೆ ಧರಿಸಿದ್ದಾರೆ.

    ಒಟ್ಟು 81 ಸುತ್ತಿನ ಮತ ಎಣಿಕೆ ಕ್ಷಣ ಕ್ಷಣಕ್ಕೂ ಕುತೂಹಲವುನ್ನುಂಟು ಮಾಡಿತ್ತು. ಆರಂಭದಲ್ಲಿ ಸುಮಾರು 40 ಸುತ್ತುಗಳಲ್ಲಿ ಬಿಜೆಪಿ ಮುನ್ನಡೆ ಕಾಯ್ದುಕೊಂಡಿತ್ತು. ನಂತರ ಕಾಂಗ್ರೆಸ್ ನ ಸತೀಶ್ ಜಾರಕಿಹೊಳಿ ಮುನ್ನಡೆ ಕಾಯ್ದುಕೊಂಡಿದ್ದರು. 75ನೇ ಸುತ್ತಿನ ಬಳಿಕ ಸತೀಶ್ ಜಾರಕಿಹೊಳಿ ಅವರ ಮುನ್ನಡೆಯ ಅಂತರ ಕಡಿಮೆಯಾಗುತ್ತಾ ಬಂತು. 80ನೇ ಸುತ್ತಿನಲ್ಲಿ ಮಂಗಳಾ ಅಂಗಡಿ 3101 ಮತಗಳ ಭಾರೀ ಮುನ್ನಡೆ ಕಾಯ್ದುಕೊಳ್ಳುವ ಮೂಲಕ ಕಾಂಗ್ರೆಸ್‍ಗೆ ಶಾಕ್ ನೀಡಿದರು.

    79ನೇ ಸುತ್ತಿನಲ್ಲಿ ಬಿಜೆಪಿಗೆ ಮುನ್ನಡೆ ಸಿಕ್ಕಿತ್ತು. ಕೊನೆಯ 4 ಸುತ್ತಿನಲ್ಲಿ ಮುನ್ನಡೆಯನ್ನು ಉಳಿಸಿಕೊಂಡ ಬಂದ ಮಂಗಳಾ ಅಂಗಡಿ ಕೊನೆಗೆ ಗೆಲುವಿನ ನಗೆ ಬೀರಿದರು.

    88 ಸುತ್ತಿನಲ್ಲಿ ಬಿಜೆಪಿ 4,123 ಮತಗಳಿಂದ ಮುಂದಿದ್ದರೆ 89 ಸುತ್ತಿನಲ್ಲಿ ಈ ಅಂತರ 2,941 ಕುಸಿದಿತ್ತು. ಎಂಇಎಸ್ ಪರ 1 ಲಕ್ಷಕ್ಕೂ ಹೆಚ್ಚು ಮತಗಳು ಬಿದ್ದ ಬಿಜೆಪಿಗೆ ಭಾರೀ ಹೊಡೆತ ನೀಡಿತ್ತು.

    2019ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ 3,91,304 ಮತಗಳಿಂದ ಗೆದ್ದುಕೊಂಡಿತ್ತು. ಸುರೇಶ್ ಅಂಗಡಿಗೆ 7,61,991 ಮತಗಳು ಸಿಕ್ಕಿದ್ದರೆ ಕಾಂಗ್ರೆಸ್ಸಿನಿಂದ ಸ್ಪರ್ಧಿಸಿದ್ದ ಸಾಧುನವರ್ ಅವರಿಗೆ 3,70,687 ಮತಗಳು ಸಿಕ್ಕಿತ್ತು.

    ಬೆಳಗಾವಿಯ ಆರ್ ಪಿಡಿ ಕಾಲೇಜಿನಲ್ಲಿ ನಡೆಯುತ್ತಿರುವ ಮತ ಎಣಿಕೆ ನಡೆಯುತ್ತಿದೆ. ಈ ಮಧ್ಯೆ ಮಧ್ಯಾಹ್ನದ ವೇಳೆ ಸರ್ವರ್ ಸಮಸ್ಯೆಯಾದ ಹಿನ್ನೆಲೆಯಲ್ಲಿ 20 ನಿಮಿಷ ಎಣಿಕೆಯಾದ ಮತಗಳ ವಿವರವನ್ನು ಅಪ್ಲೋಡ್ ಮಾಡಲು ಸಾಧ್ಯವಾಗದೇ ಸಿಬ್ಬಂದಿ ಸುಮ್ಮನೆ ಕುಳಿತ ಪ್ರಸಂಗ ನಡೆಯಿತು.

    ಸುರೇಶ್ ಅಂಗಡಿ ಅವರ ನಿಧನದಿಂದ ತೆರವಾದ ಬೆಳಗಾವಿ ಲೋಕಸಭಾ ಕ್ಷೇತ್ರಕ್ಕೆ ಉಪ ಚುನಾವಣೆ ನಡೆದಿತ್ತು. ಕಾಂಗ್ರೆಸ್ ನಿಂದ ಸತೀಶ್ ಜಾರಕಿಹೊಳಿ ಮತ್ತು ಬಿಜೆಪಿಯಿಂದಸುರೇಶ್ ಅಂಗಡಿ ಅವರ ಪತ್ನಿ ಮಂಗಳಾ ಅಂಗಡಿ ಸ್ಪರ್ಧಿಸಿದ್ದರು.

  • ಟಿಕೆಟ್ ಸಿಗದಿದ್ರೆ ಬಿಜೆಪಿ ಪರ ಪ್ರಚಾರ: ಪ್ರಮೋದ್ ಮುತಾಲಿಕ್

    ಟಿಕೆಟ್ ಸಿಗದಿದ್ರೆ ಬಿಜೆಪಿ ಪರ ಪ್ರಚಾರ: ಪ್ರಮೋದ್ ಮುತಾಲಿಕ್

    – ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧೆ ಇಲ್ಲ

    ಹುಬ್ಬಳ್ಳಿ: ಬೆಳಗಾವಿ ಲೋಕಸಭಾ ಕ್ಷೇತ್ರದ ಉಪಚುನಾವಣೆಯ ಬಿಜೆಪಿ ಟಿಕೆಟ್ ಆಕಾಂಕ್ಷಿ. ಬೈ ಎಲೆಕ್ಷನ್ ನಲ್ಲಿ ಟಿಕೆಟ್ ಸಿಗದಿದ್ರೆ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸುವುದಿಲ್ಲ. ಬೆಳಗಾವಿ ಕ್ಷೇತ್ರದಲ್ಲಿ ಯಾರಿಗೆ ಟಿಕೆಟ್ ಸಿಗುತ್ತೋ ಅವರ ಪರವಾಗಿ ನಾನು ಪ್ರಚಾರಕ್ಕೆ ಹೋಗುತ್ತೇನೆ. ನನಗೆ ದೇಶ ಮುಖ್ಯ ಹೀಗಾಗಿ ಬಿಜೆಪಿ ಪರ ಪ್ರಚಾರ ಮಾಡುವೆ ಎಂದು ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಹೇಳಿದ್ದಾರೆ.

    ಹುಬ್ಬಳ್ಳಿಯಲ್ಲಿಂದು ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಪ್ರಮೋದ್ ಮುತಾಲಿಕ್, ಬೆಳಗಾವಿ ಲೋಕಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಬಿಜೆಪಿಯಿಂದ ಸ್ಪರ್ಧಿಸಲು ಈಗಾಗಲೇ ಹಲವರು ಟಿಕೆಟ್ ಗಾಗಿ ಪೈಪೋಟಿ ನಡೆಸಿದ್ದಾರೆ. ಚುನಾವಣೆ ಘೋಷಣೆಯಾಗಿ ಮೂರು ದಿನ ಕಳೆದ್ರು ಬಿಜೆಪಿ ಅಭ್ಯರ್ಥಿ ಹೆಸರನ್ನ ಇನ್ನೂ ಘೋಷಣೆ ಮಾಡಿಲ್ಲ. ಆದ್ರೆ ನಾನು ಉಪಚುನಾವಣೆಯಲ್ಲಿ ಸ್ಪರ್ಧಿಸಲು ಟಿಕೆಟ್ ಆಕ್ಷಾಂಕಿಯಾಗಿರುವೆ. ನನಗೆ ಟಿಕೆಟ್ ಸಿಗುವ ಭರವಸೆ ಇದೆ ಎಂದರು.

    ಟಿಕೆಟ್ ವಿಚಾರವಾಗಿ ಬಿಜೆಪಿಯ ಎಲ್ಲಾ ಪ್ರಮುಖರನ್ನ ಭೇಟಿ ಮಾಡಿದ್ದೇನೆ. ಎಲ್ಲರೂ ಸಹ ಕೋರ್ ಕಮಿಟಿ ಯಲ್ಲಿ ಚರ್ಚಿಸುವುದಾಗಿ ಹೇಳಿದ್ದಾರೆ. ಶೇಕಡ 90ರಷ್ಟು ನನಗೆ ಟಿಕೆಟ್ ಸಿಗುವ ಸಾಧ್ಯತೆ ಇದೆ. ಟಿಕೆಟ್ ವಿಚಾರವಾಗಿ ರಾಜಕೀಯ ಬೆಳವಣಿಗೆ ಆಗಬಹುದು ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

  • ಬೆಳಗಾವಿ ಬೈ ಎಲೆಕ್ಷನ್ – ಟಿಕೆಟ್ ಬೇಕೆಂದ ‘ಕೈ’ ಕಾರ್ಯಕರ್ತ

    ಬೆಳಗಾವಿ ಬೈ ಎಲೆಕ್ಷನ್ – ಟಿಕೆಟ್ ಬೇಕೆಂದ ‘ಕೈ’ ಕಾರ್ಯಕರ್ತ

    – ಬಿಜೆಪಿ ಟಿಕೆಟ್‍ಗಾಗಿ ಖ್ಯಾತ ವೈದ್ಯನ ಲಾಬಿ

    ಬೆಳಗಾವಿ: ಕುಂದಾನಗರಿ ಬೆಳಗಾವಿ ಲೋಕಸಭಾ ಕ್ಷೇತ್ರದ ಉಪಚುನಾವಣೆ ಯಾವುದೇ ಕ್ಷಣದಲ್ಲಿ ಘೋಷಣೆ ಆಗುವ ಸಾಧ್ಯತೆ ಇದ್ದು ಟಿಕೆಟ್ ಯಾರಿಗೆ ಸಿಗುತ್ತೆ ಎಂಬ ಚರ್ಚೆ ರಾಷ್ಟ್ರೀಯ ಪಕ್ಷಗಳಾದ ಕಾಂಗ್ರೆಸ್ ಮತ್ತು ಬಿಜೆಪಿಯಲ್ಲಿ ಜೋರಾಗಿಯೇ ಇದೆ. ವಿಶೇಷ ಅಂದರೆ ಇದೇ ಮೊದಲ ಬಾರಿ ಕಾಂಗ್ರೆಸ್ ಕಾರ್ಯಕರ್ತರೊಬ್ಬರು ನಾನೂ ಟಿಕೆಟ್ ಆಕಾಂಕ್ಷಿ ಅಂತಾ ಬಹಿರಂಗವಾಗಿ ಹೇಳಿದ್ದಾರೆ. ಮತ್ತೊಂದೆಡೆ ಬಿಜೆಪಿ ಟಿಕೆಟ್ ಪಡೆಯಲು ಖ್ಯಾತ ವೈದ್ಯನೋರ್ವ ಇನ್ನಿಲ್ಲದ ಕಸರತ್ತು ನಡೆಸಿದ್ದಾರೆ.

    ಬೆಳಗಾವಿ ಲೋಕಸಭಾ ಕ್ಷೇತ್ರಕ್ಕೆ ಯಾವುದೇ ಕ್ಷಣದಲ್ಲೂ ಉಪಚುನಾವಣೆ ದಿನಾಂಕ ನಿಗದಿಯಾಗಬಹುದು. ಇದೇ ಮೊದಲ ಬಾರಿಗೆ ಬೆಳಗಾವಿ ಲೋಕಸಭಾ ಉಪಚುನಾವಣೆ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿ ಅಂತಾ ಬಹಿರಂಗವಾಗಿ ಜಿಲ್ಲಾ ನಾಯಕರೊಬ್ಬರು ಹೇಳಿದ್ದಾರೆ. ಅವರೇ ಲಕ್ಕಣ್ಣ ಸವಸುದ್ದಿ. ಕಳೆದ 20 ವರ್ಷಗಳಿಂದ ಬೆಳಗಾವಿ ಜಿಲ್ಲಾ ಕಾಂಗ್ರೆಸ್ ಕಾರ್ಯಕರ್ತರಾಗಿ ಸೇವೆ ಸಲ್ಲಿಸುತ್ತಿರುವ ಲಕ್ಕಣ್ಣ ಸವಸುದ್ದಿ ಜಾರಕಿಹೊಳಿ ಬ್ರದರ್ಸ್ ಬದ್ಧವೈರಿ ಅಂತಾನೇ ಜಿಲ್ಲಾ ರಾಜಕಾರಣದಲ್ಲಿ ಗುರುತಿಸಿಕೊಂಡಿದ್ದಾರೆ.

    ಸದ್ಯ ಬೆಳಗಾವಿ ಲೋಕಸಭೆ ಕಾಂಗ್ರೆಸ್ ಟಿಕೆಟ್ ತಮಗೆ ನೀಡುವಂತೆ ರಾಜ್ಯ ನಾಯಕರಿಗೆ ಮನವಿ ಮಾಡಿದ್ದಾಗಿ ಲಕ್ಕಣ್ಣ ತಿಳಿಸಿದ್ದಾರೆ. ತಾವು ಕಳೆದ 20 ವರ್ಷಗಳಿಂದ ಕಾಂಗ್ರೆಸ್ ಪಕ್ಷದಲ್ಲಿ ಸಕ್ರಿಯನಾಗಿದ್ದು, ಪಕ್ಷ ಸಂಘಟನೆಯಲ್ಲಿ ಭಾಗಿಯಾಗಿದ್ದೇನೆ. ಸಿದ್ದರಾಮಯ್ಯ ಸರ್ಕಾರ ಅವಧಿಯಲ್ಲಿ ನನ್ನ ಕಿತ್ತೂರು ಅಭಿವೃದ್ಧಿ ಪ್ರಾಧಿಕಾರದ ನಿರ್ದೇಶಕರನ್ನಾಗಿ ಮಾಡಿದ್ರು. ಸಾಮಾನ್ಯ ಕಾರ್ಯಕರ್ತನಿಗೆ ಟಿಕೆಟ್ ನೀಡಿದ್ರೆ ಕಾಂಗ್ರೆಸ್ ಪಕ್ಷ ಸಹ ಕೇಡರ್ ಬೇಸ್ ಪಾರ್ಟಿ ಎಂಬ ಸಂದೇಶ ಸಾರಿದ ಹಾಗೇ ಆಗುತ್ತೆ. ಈಗಾಗಲೇ ಬೆಳಗಾವಿ ಲೋಕಸಭಾ ಕ್ಷೇತ್ರ ವ್ಯಾಪ್ತಿಗೆ ಬರುವ 8 ವಿಧಾನಸಭಾ ಕ್ಷೇತ್ರದ ಪ್ರಭಾವಿ ನಾಯಕರ ಭೇಟಿಯಾಗಿ ಚರ್ಚೆ ಮಾಡಿದ್ದು ತಮಗೆ ಟಿಕೆಟ್ ನೀಡಬೇಕು ಎಂದು ಮನವಿ ಮಾಡಿದ್ದಾಗಿ ಲಕ್ಕಣ್ಣ ಸವಸುದ್ದಿ ತಿಳಿಸಿದ್ದಾರೆ.

    ಇನ್ನು ಬೆಳಗಾವಿ ಲೋಕಸಭಾ ಬಿಜೆಪಿ ಟಿಕೆಟ್ ವಿಚಾರಕ್ಕೆ ಬಂದ್ರೆ ನಾಯಕರು, ನಾಯಕರ ಸಂಬಂಧಿಕರು, ಕಾರ್ಯಕರ್ತರು, ವೈದ್ಯರು, ವಕೀಲರು, ಅನಿವಾಸಿ ಭಾರತೀಯರು ಹೀಗೆ ಒಟ್ಟು ಬರೋಬ್ಬರಿ ಶತಕದ ಸನಿಹಕ್ಕೆ ಆಕಾಂಕ್ಷಿಗಳ ಪಟ್ಟಿ ಬಂದು ತಲುಪಿದೆ. ಇದೆಲ್ಲದರ ಮಧ್ಯೆ ಬೆಳಗಾವಿಯ ಖ್ಯಾತ ವೈದ್ಯ ಎಲುಬು ಕೀಲು ತಜ್ಞ ಡಾ.ರವಿ ಪಾಟೀಲ್ ಸಹ ತಮಗೆ ಟಿಕೆಟ್ ನೀಡುವಂತೆ ನಾಯಕರಲ್ಲಿ ಮನವಿ ಮಾಡಿದ್ದಾರೆ. ಬಯೋಡೇಟಾ ಕೈಯಲ್ಲಿ ಹಿಡಿದುಕೊಂಡು ಬೆಂಗಳೂರು ಅಷ್ಟೇ ಅಲ್ಲಾ ದೆಹಲಿ ದಂಡಯಾತ್ರೆ ಮಾಡಿ ಬಂದಿದ್ದಾರೆ. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಬೆಳಗಾವಿ ಉತ್ತರ ಕ್ಷೇತ್ರದ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದವರು ಡಾ.ರವಿ ಪಾಟೀಲ್. ಆದರೆ ಆ ವೇಳೆ ಅನಿಲ್ ಬೆನಕೆಗೆ ಟಿಕೆಟ್ ನೀಡಿದ್ದರಿಂದ ಟಿಕೆಟ್ ವಂಚಿತರಾಗಿ ಪಕ್ಷದಿಂದ ಅಂತರ ಕಾಯ್ದುಕೊಂಡಿದ್ರು. ಈಗ ಲೋಕಸಭಾ ಉಪಚುನಾವಣೆ ಸಮೀಪಿಸುತ್ತಿದ್ದಂತೆ ಬಿಜೆಪಿಯಲ್ಲಿ ಆಕ್ಟೀವ್ ಆಗಿರುವ ಡಾ.ರವಿ ಪಾಟೀಲ್ ತಮಗೆ ಟಿಕೆಟ್ ಸಿಗುತ್ತೆ ಎಂಬ ಭರವಸೆಯಲ್ಲಿದ್ದಾರೆ.

    ಒಟ್ಟಾರೆಯಾಗಿ ಬೆಳಗಾವಿ ಲೋಕಸಭಾ ಕ್ಷೇತ್ರದ ಟಿಕೆಟ್‍ಗಾಗಿ ಬಿಜೆಪಿಯಲ್ಲಿ ಹಲವು ಜನರು ಆಕಾಂಕ್ಷಿಗಳಿದ್ದರೆ, ಕಾಂಗ್ರೆಸ್ ಪಕ್ಷದಲ್ಲಿ ಇದೇ ಮೊದಲ ಬಾರಿ ಕಾರ್ಯಕರ್ತರೊಬ್ಬರು ನಾನೂ ಟಿಕೆಟ್ ಆಕಾಂಕ್ಷಿ ಅಂತಾ ಬಹಿರಂಗವಾಗಿ ಹೇಳಿದ್ದಾರೆ. ಸಾಮಾನ್ಯ ಕಾರ್ಯಕರ್ತನಿಗೆ ಟಿಕೆಟ್ ನೀಡುವ ಮೂಲಕ ತಮ್ಮದು ಕೇಡರ್ ಬೇಸ್ ಪಾರ್ಟಿ ಎಂಬುದನ್ನು ಕಾಂಗ್ರೆಸ್ ಸಂದೇಶ ರವಾನಿಸುತ್ತಾ ಅಥವಾ ಪ್ರಭಾವಿ ನಾಯಕರನ್ನೇ ಕಣಕ್ಕೀಳಿಸುತ್ತಾ ಅಂತಾ ಕಾದು ನೋಡಬೇಕು.