ಬೆಳಗಾವಿ: ಮಹಾತ್ಮಾ ಗಾಂಧೀಜಿಯವರ ಅಧ್ಯಕ್ಷತೆಯಲ್ಲಿ 1924ರಲ್ಲಿ ಬೆಳಗಾವಿಯಲ್ಲಿ ಜರುಗಿದ ಕಾಂಗ್ರೆಸ್ ಅಧೀವೇಶನದ ಶತಮಾನೋತ್ಸವದ ಸವಿನೆನಪಿಗಾಗಿ ಇಲ್ಲಿನ ಸುವರ್ಣ ವಿಧಾನಸೌಧದ ಆವರಣದಲ್ಲಿ ಮಹಾತ್ಮಾ ಗಾಂಧೀಜಿಯವರ ಬೃಹತ್ ಪ್ರತಿಮೆಯನ್ನಿಂದು (Gandhi Statue) ಮಂಗಳವಾರ ರಾಜ್ಯಸಭೆಯ ಪ್ರತಿಪಕ್ಷದ ನಾಯಕ ಹಾಗೂ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಚರಕ ತಿರುಗಿಸುವ ಮೂಲಕ ಲೋಕಾರ್ಪಣೆಗೊಳಿಸಿದರು.
ಸಮಾರಂಭದಲ್ಲಿ ಕಾಂಗ್ರೆಸ್ ನಾಯಕಿ, ಲೋಕಸಭೆ ಸದಸ್ಯೆ ಪ್ರಿಯಾಂಕಾ ಗಾಂಧಿ, ಮುಖ್ಯಮಂತ್ರಿ ಸಿದ್ಧರಾಮಯ್ಯ (Siddaramaiah) ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದು, ಮುಖ್ಯ ಅತಿಥಿಗಳಾಗಿ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ (DK Shivakumar), ಕರ್ನಾಟಕ ವಿಧಾನಸಭೆ ಸಭಾಧ್ಯಕ್ಷ ಯು.ಟಿ ಖಾದರ್, ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರು ಪಾಲ್ಗೊಂಡಿದ್ದರು.
ಶ್ರೀರಾಮನಂತ ಮಗ ಇರಬೇಕು:
ಪ್ರತಿಮೆ ಅನಾವರಣಗೊಳಿಸಿದ ಬಳಿಕ ಮಾತನಾಡಿದ ಮಲ್ಲಿಕಾರ್ಜುನ ಖರ್ಗೆ ಅವರು, ಗಾಂಧೀಜಿ ಹೇಳಿದ ಹೇಳಿದ ರಾಮರಾಜ್ಯ ಹಾಗೂ ಗ್ರಾಮ ರಾಜ್ಯ ಆಗಬೇಕಾದರೆ, ಪ್ರತಿ ಮನೆಯಲ್ಲಿ ತಂದೆಯ ಮಾತಿಗೆ ಕಟ್ಟು ಬಿದ್ದು ಎಲ್ಲಾ ಸೌಕರ್ಯ ಬಿಟ್ಟು ಕಾಡಿಗೆ ಹೊರಟ ಶ್ರೀ ರಾಮನಂತ ಮಗ ಇರಬೇಕು. ಎಲ್ಲ ಸುಖ ತೊರೆದು ಅಣ್ಣನ ಜೊತೆ ಕಾಡಿಗೆ ಹೊರಟ ಲಕ್ಷ್ಮಣ ನಂತ ಸಹೋದರ ಇರಬೇಕು. ಕಷ್ಟವಾದರೂ ನನ್ನ ಪತಿಯ ಜೊತೆ ಹೋಗುತ್ತೇನೆ ಎಂದು ಹೊರಟ ಸೀತಾ ಮಾತೆಯಂತ ಮಡದಿ ಇರಬೇಕು. ರಾಮನ ಪಾದುಕೆ ಇಟ್ಟು ಪೂಜಿಸಿದ ಭರತನಂತ ಸಹೋದರನಿರಬೇಕು. ಆಗ ದೇಶ ʻಗ್ರಾಮ ರಾಜ್ಯ – ರಾಮ ರಾಜ್ಯʼ ಎರಡೂ ಆಗಲಿದೆ ಎಂದು ನುಡಿದರು.
ಬೆಳಗಾವಿ: ಐತಿಹಾಸಿಕ ಕಾರ್ಯಕ್ರಮಕ್ಕೆ ಕುಂದಾನಗರಿ ಬೆಳಗಾವಿ (Belagavi) ಸಜ್ಜಾಗಿದೆ. ಗಾಂಧಿ, ಅಂಬೇಡ್ಕರ್ ವಿಚಾರಧಾರೆಗಳನ್ನ ಮುಂದಿಟ್ಟುಕೊಂಡು ರಣಕಹಳೆ ಮೊಳಗಿಸಲು ಕಾಂಗ್ರೆಸ್ (Congress) ಸಜ್ಜಾಗಿದೆ. ರಾಜಕೀಯ ಮತ್ತು ಸಂವಿಧಾನ ರಕ್ಷಣೆ ವಿಷಯವಾಗಿ ದೇಶಕ್ಕೆ ಹೊಸ ಸಂದೇಶ ನೀಡಲು ಇಲ್ಲಿ ಮಂಗಳವಾರ (ಜ.21) ಅಯೋಜಿಸಲಾಗಿರುವ ‘ಜೈ ಬಾಪು, ಜೈ ಭೀಮ್ ಮತ್ತು ಜೈ ಸಂವಿಧಾನ’ ಸಮಾವೇಶ ಹಲವು ನಿರೀಕ್ಷೆ ಮತ್ತು ಕುತೂಹಲಗಳಿಗೆ ಎಡೆ ಮಾಡಿಕೊಟ್ಟಿದೆ.
1924ರಲ್ಲಿ ಮಹಾತ್ಮ ಗಾಂಧೀಜಿ ಅಧ್ಯಕ್ಷತೆಯಲ್ಲಿ ನಡೆದ ಕಾಂಗ್ರೆಸ್ ಅಧಿವೇಶನಕ್ಕೆ ಬೆಳಗಾವಿ ಸಾಕ್ಷಿಯಾಗಿತ್ತು. ಈಗ ಅಧಿವೇಶನದ ಶತಮಾನೋತ್ಸವದ ಭಾಗವಾಗಿ ಸಮಾವೇಶ ನಡೆಯುತ್ತಿದೆ. ‘ಕೈ’ ಪಡೆಯ ಘಟಾನುಘಟಿ ನಾಯಕರ ದಂಡೇ ಬೆಳಗಾವಿಯತ್ತ ಮುಖ ಮಾಡಿದೆ. ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಡಿ.ಕೆ ಶಿವಕುಮಾರ್ (DK Shivakumar) ಸಮಾವೇಶದ ಉಸ್ತುವಾರಿ ನೋಡಿಕೊಳ್ಳುತ್ತಿದ್ದಾರೆ.
ಕೆಲ ಆಂತರಿಕ ತಿಕ್ಕಾಟದ ವಿದ್ಯಮಾನಗಳ ಮಧ್ಯೆಯೂ, ನಾಯಕರು ಮತ್ತು ಕಾರ್ಯಕರ್ತರು ಸಮಾವೇಶದ ಯಶಸ್ಸಿಗೆ ಶ್ರಮಿಸುತ್ತಿದ್ದಾರೆ. ಪಕ್ಷ ಸಂಘಟನೆ ಬಲವರ್ಧನೆಯ ವಿಶ್ವಾಸದಲ್ಲಿ ವರಿಷ್ಠರಿದ್ದಾರೆ. ಕಾಂಗ್ರೆಸ್ ನಾಯಕರ ಕಟೌಟು, ಪಕ್ಷದ ಧ್ವಜಗಳಿಂದ ನಗರದ ಪ್ರಮುಖ ರಸ್ತೆಗಳು ರಾರಾಜಿಸುತ್ತಿವೆ. ಇದನ್ನೂ ಓದಿ: ʻಟಿಪ್ಪು ಸುಲ್ತಾನ್ – ದಿ ಸಾಗಾ ಆಫ್ ಮೈಸೂರು’ ಪುಸ್ತಕ ಬಿಡುಗಡೆ ಮಾಡಿದ ಸಂಸದ ಯದುವೀರ್
ಕಾಂಗ್ರೆಸ್ ಅಧಿವೇಶನದ ಶತಮಾನೋತ್ಸವ ಪ್ರಯುಕ್ತ ಬೆಳಗಾವಿಯಲ್ಲಿ ಕಳೆದ ವರ್ಷ ಡಿಸೆಂಬರ್ 26, 27ರಂದು ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಡಿ.26ರಂದು ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆ ನಡೆದಿತ್ತು. ಆದರೆ, 27ರಂದು ನಡೆಯಬೇಕಿದ್ದ ಸಮಾವೇಶವನ್ನು ಮಾಜಿ ಪ್ರಧಾನಿ ಮನಮೋಹನ ಸಿಂಗ್ ಅವರ ನಿಧನದ ಕಾರಣ ಮುಂದೂಡಲಾಗಿತ್ತು.
ರಾಹುಲ್ ಗಾಂಧಿ ಗೈರು:
ಕಾಂಗ್ರೆಸ್ ಅಧಿವೇಶನದ ಶತಮಾನೋತ್ಸವ ಸವಿನೆನಪಿಗೆ ಸುವರ್ಣ ವಿಧಾನಸೌಧ ಆವರಣದಲ್ಲಿ ಮಹಾತ್ಮ ಗಾಂಧೀಜಿಯವರ ಪ್ರತಿಮೆಯನ್ನು ಬೆಳಿಗ್ಗೆ 10.30ಕ್ಕೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ (Rahul Gandhi) ಉಪಸ್ಥಿತಿಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅನಾವರಣ ಮಾಡುವುದರಲ್ಲಿದ್ದರು. ಆದ್ರೆ ಅನಾರೋಗ್ಯ ರಾಹುಲ್ ಗಾಂಧಿ ಬೆಳಗಾವಿ ಪ್ರವಾಸ ರದ್ದುಗೊಳಿಸಿದ್ದಾರೆ. ಪ್ರಿಯಾಂಕಾ ಗಾಂಧಿ, ಮಲ್ಲಿಕಾರ್ಜುನ ಖರ್ಗೆ ಸೇರಿ ಇನ್ನಿತರ ನಾಯಕರು ಪಾಲ್ಗೊಳ್ಳಲಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸೇರಿದಂತೆ ಸಚಿವರು ಉಪಸ್ಥಿತರಿರಲಿದ್ದಾರೆ. ಇದೇ ವೇಳೆ ಶತಮಾನದ ಹಿಂದೆ ನಡೆದ ಅಧಿವೇಶನದಲ್ಲಿ ಗಾಂಧೀಜಿ ಮಾಡಿದ್ದ ಅಧ್ಯಕ್ಷೀಯ ಭಾಷಣದ ಸಂದೇಶ ಮತ್ತು ‘ಗಾಂಧಿ ಭಾರತ’ ಪುಸ್ತಕ ಬಿಡುಗಡೆ ಆಗಲಿದೆ.
3,500 ಮಂದಿ ಪೊಲೀಸ್ ಭದ್ರತೆ:
ಬೆಳಗಾವಿಯಲ್ಲಿ ಶಕ್ತಿ ಪ್ರದರ್ಶನಕ್ಕೆ ಮುಂದಾಗಿರುವ ಕಾಂಗ್ರೆಸ್ 2 ಲಕ್ಷ ಜನರನ್ನು ಸೇರಿಸಿ ರಣಕಹಳೆ ಮೊಳಗಿಸಲಿದೆ. ದೇಶ್ಯಾದ್ಯಂತ ಬಿಜೆಪಿ ವಿರುದ್ಧ ಜನಾಂದೋಲನಕ್ಕೆ ಬೆಳಗಾವಿಯಿಂದಲೇ ರಣಕಹಳೆ ಮೊಳಗಿಸುವುದಕ್ಕೂ ಕೈ ನಾಯಕರು ಸಜ್ಜಾಗಿದೆ. ಐತಿಹಾಸಿಕ ಕಾರ್ಯಕ್ರಮದಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಬಿಗಿ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ನಿಯೋಜಿಸಲಾಗಿದೆ. ನಗರ ಪೊಲೀಸ್ ಆಯುಕ್ತ ಯಡಾ ಮಾರ್ಟಿನ್ ನೇತೃತ್ವದಲ್ಲಿ ಸುಮಾರು 3,500 ಜನ ಪೊಲೀಸ್ ಸಿಬ್ಬಂದಿಯನ್ನ ಭದ್ರತೆಗೆ ನಿಯೋಜನೆ ಮಾಡಲಾಗಿದೆ.
ಬೆಂಗಳೂರು: ವಕ್ಫ್ ಆಸ್ತಿ ಒತ್ತುವರಿ ಸಮಸ್ಯೆ (Waqf Property Row) ವಿರುದ್ಧ ‘ನಮ್ಮ ಭೂಮಿ ನಮ್ಮ ಹಕ್ಕು’ ಶೀರ್ಷಿಕೆಯ ಅಡಿಯಲ್ಲಿ ಜನಾಂದೋಲನ ಮಾಡಲು ನಿರ್ಧರಿಸಿದ್ದೇವೆ. ನವೆಂಬರ್ 21 ಮತ್ತು 22ರಂದು ರಾಜ್ಯದ ಎಲ್ಲ ಜಿಲ್ಲಾಧಿಕಾರಿ ಕಚೇರಿ ಮತ್ತು ತಾಲ್ಲೂಕು ತಹಶೀಲ್ದಾರರ ಕಚೇರಿಗಳ ಮುಂದೆ ದಿನವಿಡೀ ಪ್ರತಿಭಟನೆ ನಡೆಸಲಿದ್ದೇವೆ ಎಂದು ಮಾಜಿ ಉಪ ಮುಖ್ಯಮಂತ್ರಿ ಡಾ.ಸಿ.ಎನ್ ಅಶ್ವಥ್ ನಾರಾಯಣ್ (Ashwath Narayan) ಅವರು ತಿಳಿಸಿದ್ದಾರೆ.
ಡಿಸೆಂಬರ್ ಮೊದಲ ವಾರದಲ್ಲಿ ರಾಜ್ಯಾದ್ಯಂತ ಪ್ರವಾಸ:
ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ (Bangalore Freedom Park) ಪ್ರತಿಭಟನೆ ನಡೆಸಲಿದ್ದೇವೆ. ಜೊತೆಗೆ 3 ತಂಡಗಳನ್ನು ರಚಿಸಿದ್ದೇವೆ. ಕೇಂದ್ರದ ಸಚಿವರು, ಮಾಜಿ ಮುಖ್ಯಮಂತ್ರಿಗಳು, ಹಿರಿಯರು, ವರಿಷ್ಠರು ಸೇರಿ 3 ತಂಡಗಳು ಕಾರ್ಯ ನಿರ್ವಹಿಸುತ್ತಿವೆ. ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ, ಪ್ರತಿಪಕ್ಷದ ನಾಯಕ ಆರ್.ಅಶೋಕ್ (R Ashoka), ವಿಧಾನ ಪರಿಷತ್ತಿನ ಪ್ರತಿಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ಈ 3 ತಂಡಗಳ ನೇತೃತ್ವ ವಹಿಸುತ್ತಿದ್ದಾರೆ ಎಂದು ಅಶ್ವಥ್ ನಾರಾಯಣ್ ವಿವರಿಸಿದರು.
ಈ ತಂಡಗಳು ಡಿಸೆಂಬರ್ ಮೊದಲ ವಾರದಲ್ಲಿ ರಾಜ್ಯಾದ್ಯಂತ ಪ್ರವಾಸ ಮಾಡಲಿವೆ. ರೈತರು, ಮಠಾಧೀಶರು ಸೇರಿ ತೊಂದರೆಗೆ ಒಳಗಾದವರಿಂದ ಮಾಹಿತಿ ಪಡೆಯಲಿವೆ. ಚಳಿಗಾಲದ ಅಧಿವೇಶನದಲ್ಲಿ ವಿವರ ಮಂಡಿಸಿ, ಜನರ ಸಮಸ್ಯೆ ಪರಿಹಾರಕ್ಕೆ ಪ್ರಾಮಾಣಿಕ ಪ್ರಯತ್ನ ಮಾಡಲಿದ್ದೇವೆ ಎಂದು ತಿಳಿಸಿದರು. ಇದನ್ನೂ ಓದಿ: ಕೊಲೆ ಯತ್ನ ಕೇಸ್; ನಟ ತಾಂಡವೇಶ್ವರ್ ಅರೆಸ್ಟ್- ಕಮಿಷನರ್ ದಯಾನಂದ್ ಹೇಳೋದೇನು?
ಬೆಳಗಾವಿಯಲ್ಲಿ ಬೃಹತ್ ಸಮಾವೇಶ:
ಅಧಿವೇಶನಕ್ಕೂ ಮೊದಲು ಬೆಳಗಾವಿಯಲ್ಲಿ ವಕ್ಫ್ ವಿಚಾರವಾಗಿ ಬೃಹತ್ ಸಮಾವೇಶ ಏರ್ಪಡಿಸಲಾಗುವುದು. ಅಧಿಕಾರ ದುರ್ಬಳಕೆ ಕೈಬಿಡುವಂತೆ ಕಾಂಗ್ರೆಸ್ ಸರ್ಕಾರ ಮತ್ತು ವಕ್ಫ್ ಮಂಡಳಿಗೆ ಸ್ಪಷ್ಟ ಸಂದೇಶ ನೀಡಲಿದ್ದೇವೆ ಎಂದು ಪ್ರಕಟಿಸಿದರು. ಅಹವಾಲು, ಮಾಹಿತಿ ಸಂಗ್ರಹಕ್ಕಾಗಿ ಪ್ರತಿ ಜಿಲ್ಲೆಯಲ್ಲಿ ರೈತರು, ವಕೀಲರು ಸೇರಿ ಪ್ರಮುಖರುಳ್ಳ 5 ಜನರ ತಂಡ ರಚಿಸಿದ್ದೇವೆ ಎಂದರು.
ಬಿಜೆಪಿ ಒತ್ತಾಯ ಮತ್ತು ಹೋರಾಟದ ಬಳಿಕ ರಾಜ್ಯದ ಕಾಂಗ್ರೆಸ್ ಸರ್ಕಾರವು ವಕ್ಫ್ ಸಂಬಂಧ ಹೊರಡಿಸಿದ್ದ ನೋಟಿಸ್ ಹಿಂಪಡೆಯಲು ಸೂಚನೆ ನೀಡಿದೆ. ಆರ್ಟಿಸಿಯಲ್ಲಿ ವಕ್ಫ್ ಹೆಸರು ನೋಂದಣಿ ಹಿಂಪಡೆಯಬೇಕು ಮತ್ತು 1974ರ ಗೆಜೆಟ್ ಹಿಂಪಡೆಯಲು ನಾವು ಒತ್ತಾಯಿಸುತ್ತಿದ್ದೇವೆ ಎಂದು ತಿಳಿಸಿದರಲ್ಲದೇ ಜಯನಗರ ವಿಧಾನಸಭಾ ಕ್ಷೇತ್ರದಲ್ಲಿ 1,700ಕ್ಕೂ ಹೆಚ್ಚು ಆಸ್ತಿಗಳನ್ನು ವಶಪಡಿಸಿಕೊಳ್ಳಲು ಮುಂದಾದ ಕುರಿತು ಗಮನ ಸೆಳೆದರು.
ವಕ್ಫ್ ಮೂಲಕ ಆಸ್ತಿ ವಶಪಡಿಸಿಕೊಳ್ಳುವ ವಿಚಾರದಲ್ಲಿ ಜನಜಾಗೃತಿ ಆಗಿದೆ. ವಕ್ಫ್, ಕಾಂಗ್ರೆಸ್ ಸರ್ಕಾರದ ಅಧಿಕಾರ ದುರ್ಬಳಕೆ, ಜಮೀರ್ ಅಹ್ಮದ್ ಖಾನ್ ಅವರು ಮುಖ್ಯಮಂತ್ರಿಗಳ ಆದೇಶ ಎಂದು ತಿಳಿಸಿ ತ್ವರಿತವಾಗಿ ಕಾಲಂ ನಂಬರ್ 9 ಹಾಗೂ 11ರಲ್ಲಿ ಇಂಡೀಕರಣ, ಆಸ್ತಿ ಬದಲಾವಣೆ ಪ್ರಯತ್ನ ಮಾಡಿದ್ದರು ಎಂದು ಆಕ್ಷೇಪಿಸಿದರು.
ಮಠ, ಮಂದಿರಗಳಿಗೂ ನ್ಯಾಯ ಸಿಗಬೇಕು:
ಮಠ, ಮಂದಿರಗಳಿಗೂ ನ್ಯಾಯ ಲಭಿಸಬೇಕಿದೆ ಎಂದ ಅವರು, ವಕ್ಫ್ ವಿಚಾರದಲ್ಲಿ ಆದ ದುರ್ಬಳಕೆ ಸಂಬಂಧ ಮಾಹಿತಿ ಕಲೆಹಾಕುವ ಕೆಲಸ ನಡೆದಿದೆ. ಸಾರ್ವಜನಿಕರು, ರೈತರು ಪಹಣಿಗಳ ಕುರಿತು ಪರಿಶೀಲಿಸಬೇಕು; ವಕ್ಫ್ ಎಂಟ್ರಿ ಬಗ್ಗೆ ಎಚ್ಚರಿಕೆ ವಹಿಸಬೇಕು ಎಂದು ಮನವಿ ಮಾಡಿದರು. 3 ತಂಡದಲ್ಲಿ ಯತ್ನಾಳ್ ಅವರೂ ಇದ್ದಾರೆ. ಅವರೂ ಪ್ರವಾಸ ಮಾಡಲಿದ್ದಾರೆ ಎಂದು ಪ್ರಶ್ನೆಗೆ ಉತ್ತರ ಕೊಟ್ಟರು.
ಕರ್ನಾಟಕದ ಕಾಂಗ್ರೆಸ್ ಸರ್ಕಾರವು ಮುಸ್ಲಿಮರ ಓಲೈಕೆಯಲ್ಲಿ ತೊಡಗಿದೆ. ವಕ್ಫ್ ಹೊಸ ಕಾನೂನು ಬರುವ ಹಿನ್ನೆಲೆಯಲ್ಲಿ ತ್ವರಿತವಾಗಿ ಎಲ್ಲೆಲ್ಲಿ ರೈತರ ಆಸ್ತಿ, ಮಠ, ಮಂದಿರಗಳ ಜಮೀನು, ಶಾಲೆಗಳನ್ನು ವಕ್ಫ್ ಆಸ್ತಿಯಾಗಿ ವಶಪಡಿಸಲು ಮಾಡಿದ ಪ್ರಯತ್ನ ನಾಡಿನ ಜನತೆಗೆ ಗೊತ್ತಿದೆ ಎಂದರು. ಇದನ್ನೂ ಓದಿ: ರೈತರ ಕೃಷಿ ಪಂಪ್ಸೆಟ್ಗಳಿಗೆ ಉಚಿತ ವಿದ್ಯುತ್ ಕೊಡ್ತೀವಿ: ಸಚಿವ ಕೆ.ಜೆ.ಜಾರ್ಜ್
ಕಾಂಗ್ರೆಸ್ ಆಡಳಿತದಲ್ಲಿ ಆಸ್ತಿ ತೆರಿಗೆ, ಪೆಟ್ರೋಲ್, ತೆರಿಗೆಗಳು ಗಗನಕ್ಕೇರಿವೆ. ಜಯನಗರದ ಬಿಜೆಪಿ ಶಾಸಕರಿಗೆ ಅನುದಾನ ನೀಡದೆ ಇರುವುದು, ಅವರನ್ನು ಅವಮಾನ ಮಾಡಿದ್ದನ್ನು ಖಂಡಿಸುತ್ತೇವೆ. ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ ಸೇರಿ ಸರ್ಕಾರದ ಈ ನಡವಳಿಕೆಯನ್ನು ಖಂಡಿಸುತ್ತೇವೆ. ಅವರು ಕ್ಷಮೆ ಯಾಚಿಸಬೇಕು ಎಂದು ಅವರು ಪ್ರಶ್ನೆಗೆ ಉತ್ತರ ನೀಡಿದರು. ಅಧಿಕಾರ ದುರ್ಬಳಕೆ ಮಾಡದಿರಿ, ದುರಹಂಕಾರದ ಮಾತನಾಡದಿರಿ ಎಂದು ಎಚ್ಚರಿಸಿದರು.
ಕಾಂಗ್ರೆಸ್ ಶಾಸಕರೊಬ್ಬರು ಅನುದಾನ ಸಿಗದೇ ಇರುವ ಕುರಿತು ಅಸಮಾಧಾನ ವ್ಯಕ್ತಪಡಿಸಿದ ಕುರಿತ ಪ್ರಶ್ನೆಗೆ ಉತ್ತರಿಸಿದ ಅವರು, ಸರ್ಕಾರ ದಿವಾಳಿಯಾಗಿದೆ. ವೇತನ ನೀಡಲು ದುಡ್ಡಿಲ್ಲ, ರಾಜು ಕಾಗೆಯವರು ಅನುದಾನ ಸಿಗದ ಬಗ್ಗೆ ತಿಳಿಸಿ ಆತ್ಮಹತ್ಯೆಯ ಮಾತನಾಡಿದ್ದಾರೆ. ಗವಿಯಪ್ಪ, ರಾಯರೆಡ್ಡಿ, ಬಿ.ಆರ್ ಪಾಟೀಲ್ ಮತ್ತಿತರರು ಮಾತನಾಡಿದ್ದಾರೆ ಎಂದು ವಿವರಿಸಿದರು.
ಅರ್ಹ ಬಿಪಿಎಲ್ ಕಾರ್ಡ್ದಾರರಿಗೆ ಸರ್ಕಾರ ಅನ್ಯಾಯ ಮಾಡಲು ಮುಂದಾಗಿದೆ. ನೀವೇ ಗ್ಯಾರಂಟಿ ಘೋಷಿಸಿದವರು. ಎಲ್ಲರಿಗೂ ಇದೀಗ ನಿರ್ಬಂಧ ಹಾಕುತ್ತಿದ್ದೀರಿ. ಮೋದಿಯವರು ಕೊಡುವ ರೇಷನ್, ಆಯುಷ್ಮಾನ್, ನರೇಗಾ ಯೋಜನೆ, ಶಿಕ್ಷಣ ಮತ್ತಿತರ ಸೌಲಭ್ಯಗಳು ಸಿಗದಂತೆ ಮಾಡಲು ಮುಂದಾಗಿದ್ದಾರೆ ಎಂದು ಮಾಜಿ ಮಂತ್ರಿಗಳು ಟೀಕಿಸಿದರು. ಇದನ್ನೂ ಓದಿ: Naxal Encounter| 3 ರಾಜ್ಯಕ್ಕೆ ಬೇಕಾಗಿದ್ದ ಮೋಸ್ಟ್ ವಾಟೆಂಡ್ ನಕ್ಸಲ್ ನಾಯಕ ವಿಕ್ರಂ ಗೌಡ ಯಾರು?