Tag: belagavi police

  • 132 ಕೃತ್ಯಗಳಲ್ಲಿ ಭಾಗಿಯಾಗಿದ್ದ ಬೆಳಗಾವಿಯ 12 ಆರೋಪಿಗಳು ಗಡಿಪಾರು

    132 ಕೃತ್ಯಗಳಲ್ಲಿ ಭಾಗಿಯಾಗಿದ್ದ ಬೆಳಗಾವಿಯ 12 ಆರೋಪಿಗಳು ಗಡಿಪಾರು

    ಬೆಳಗಾವಿ: 132 ಸಮಾಜ ಘಾತುಕ ಕೃತ್ಯಗಳಲ್ಲಿ (Crime) ಭಾಗಿಯಾಗಿದ್ದ 12 ಜನ ಆರೋಪಿಗಳನ್ನ (Accused) ಬೆಳಗಾವಿ (Belagavi) ಎಸ್ಪಿ ಡಾ.ಸಂಜೀವ್ ಪಾಟೀಲ್ ಗಡಿಪಾರು ಮಾಡಿದ್ದಾರೆ.

    ಬೆಳಗಾವಿ ಜಿಲ್ಲೆಯ ಅಥಣಿ ಉಪವಿಭಾಗದಲ್ಲಿ ಮದಬಾವಿ ಗ್ರಾಮದ ಮೀರಸಾಬ್ ಬಾಗಡಿ, ರಡ್ಡೇರಹಟ್ಟಿ ಗ್ರಾಮದ ಸದಾಶಿವ ಗೊಡಮಾಲೆ, ಉಗಾರ ಬಿ.ಕೆ.ಗ್ರಾಮದ ಮಹಾದೇವ ಕಾಂಬಳೆ, ಕೋಹಳಿ ಗ್ರಾಮದ ರವಿ ಶಿಂಗೆ, ಹಾಲಳ್ಳಿ ಗ್ರಾಮದ ಕಾಶಪ್ಪ ಕಾರಿಕೊಳ್ಳ, ಕಮರಿ ಗ್ರಾಮದ ಪ್ರದೀಪ್ ಕರಡಿ, ಕುಡಚಿ ಗ್ರಾಮದ ಅಲಿಮುರ್ತುಜಾ ಚಮನಮಲೀಕ್, ಸಾಹೇಬ್‌ಹುಸೇನ್ ಚಮನಮಲೀಕ್, ನಜೀರ್ ಹುಸೇನ್ ತಾಂಬೋಳಿ, ಮೊರಬ ಗ್ರಾಮದ ಬಾಬಾಸಾಬ್ ನದಾಫ್, ಚಿಂಚಲಿ ಗ್ರಾಮದ ಲಕ್ಷ್ಮಣ ಪೋಳ, ಅಲ್ತಾಫ್ ಹುಸೇನ್ ಮೇವಗಾರ ಎಂಬ ಆರೋಪಿಗಳನ್ನು ಗಡಿಪಾರು ಮಾಡಲಾಗಿದೆ. ಇದನ್ನೂ ಓದಿ: ಗೆಹ್ಲೋಟ್‌ ಹೊಗಳಿದ ಮೋದಿ – ಲಘುವಾಗಿ ಪರಿಗಣಿಸಬಾರದು ಎಂದು ಎಚ್ಚರಿಸಿದ ಪೈಲಟ್‌

    ಈ 12 ಜನರು 132 ಕೃತ್ಯಗಳಲ್ಲಿ ಭಾಗಿಯಾಗಿದ್ದರು ಎಂದು ಎಸ್ಪಿ ಮಾಹಿತಿ ನೀಡಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ರೈತರ ಮೇಲೆ ಪೊಲೀಸ್ ದೌರ್ಜನ್ಯ – ಮಹಿಳೆ ಸೀರೆ ಹರಿದುಹಾಕಿದ ಖಾಕಿ

    ರೈತರ ಮೇಲೆ ಪೊಲೀಸ್ ದೌರ್ಜನ್ಯ – ಮಹಿಳೆ ಸೀರೆ ಹರಿದುಹಾಕಿದ ಖಾಕಿ

    – ಬೆಳಗಾವಿಯಲ್ಲಿ ಭೂ ಸ್ವಾಧೀನ ವಿರುದ್ಧ ಹೋರಾಟ
    – ಬೆಂಕಿ ಹಚ್ಚಿಕೊಂಡ ರೈತ

    ಬೆಳಗಾವಿ: ಇಲ್ಲಿನ ಮಚ್ಚೆ-ಹಲಗಾ ಬೈಪಾಸ್‌ ರಸ್ತೆ ಕಾಮಗಾರಿ ವಿರೋಧಿಸಿ ಪ್ರತಿಭಟನೆ ನಡೆಸುತ್ತಿದ್ದ ರೈತರ ವಿರುದ್ಧ ಪೊಲೀಸರು ದಬ್ಬಾಳಿಕೆ ನಡೆಸಿರುವ ಘಟನೆ ನಡೆದಿದೆ.

    ರೈತರ ವಿರೋಧದ ನಡುವೆಯೂ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಪೊಲೀಸ್‌ ಬಂದೋಬಸ್ತ್‌ನೊಂದಿಗೆ ಕಾಮಗಾರಿ ಆರಂಭಿಸಲು ಮುಂದಾಗಿದೆ. ಕಾಮಗಾರಿಗೆ ಸರ್ವೆ ಆದ ಜಮೀನು ಬಿಟ್ಟು ಬೇರೆ ಜಮೀನು ತೆಗೆದುಕೊಂಡಿದ್ದಾರೆಂದು ರೈತರು ವಿರೋಧ ವ್ಯಕ್ತಪಡಿಸಿದ್ದಾರೆ. ಫಲವತ್ತಾದ ಜಮೀನು ಬಿಟ್ಟುಕೊಡುವುದಿಲ್ಲ ಎಂದು ರೈತರ ಪಟ್ಟು ಹಿಡಿದು ಪ್ರತಿಭಟನೆ ನಡೆಸಿದರು. ಇದನ್ನೂ ಓದಿ: ಅಪ್ಪು ನಟನೆಯ ಚಿತ್ರದ ಶೀರ್ಷಿಕೆಗಳಲ್ಲೇ ಗೀತೆ ರಚನೆ ಮಾಡಿದ ತಂದೆ, ಜೀವ ತುಂಬಿದ ಮಗಳು

    ಇದರಿಂದ ಸ್ಥಳದಲ್ಲಿ ಕೆಲಕಾಲ ಬಿಗುವಿನ ವಾತಾವರಣ ಸೃಷ್ಟಿಯಾಯಿತು. ಪೊಲೀಸರ ವಿರುದ್ಧ ರೈತರು, ಮಹಿಳೆಯರು ಆಕ್ರೋಶ ಹೊರಹಾಕಿದರು. ಕಂಕುಳಲ್ಲಿ ಹಸುಗೂಸನ್ನು ಕರೆದುಕೊಂಡು ಬಂದು ರೈತ ಮಹಿಳೆ ಕಣ್ಣೀರು ಹಾಕಿದರು. ಆದರೂ ಪೊಲೀಸರು, ಎರಡು ಪ್ರತ್ಯೇಕ ವಾಹನದಲ್ಲಿ ರೈತರನ್ನು ವಶಕ್ಕೆ ಪಡೆದರು. ಪೊಲೀಸರ ದಬ್ಬಾಳಿಕೆ ವಿರುದ್ಧ ರೈತರು ಕಿಡಿಕಾರಿದರು.

    ಪೊಲೀಸರ ಮುಂದೆಯೇ ಕುಡಗೋಲಿನಿಂದ ಕೊಯ್ದುಕೊಂಡು ರೈತನೊಬ್ಬ ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆಯಿತು. ರೈತನ ಕೈಯಿಂದ ಕುಡಗೋಲು ಕಸಿದುಕೊಳ್ಳಲು ಪೊಲೀಸರು ಹರಸಾಹಸ ಪಟ್ಟರು. ಇತ್ತ ರಸ್ತೆ ಕಾಮಗಾರಿ ವಿರೋಧಿಸಿ ರೈತರ ಪುತ್ರರೊಬ್ಬರು ಮರ ಏರಿ ಕುಳಿತು ಪ್ರತಿಭಟನೆ ನಡೆಸಿದರು. ಇದನ್ನೂ ಓದಿ: ವಿವಾಹ ಮುಗಿಸಿ ವಾಪಸ್ಸಾಗುತ್ತಿದ್ದ ನವಜೋಡಿಗಳಿದ್ದ ವಾಹನ ಪಲ್ಟಿ!

    ಜಮೀನು ಮಾಲೀಕ ಆಕಾಶ್ ಅನಗೋಳಕರ ಅವರು ಪೆಟ್ರೋಲ್‌ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದರು. ಆತ್ಮಹತ್ಯೆಗೆ ಯತ್ನಿಸುತ್ತಿದ್ದಂತೆ ರೈತರು ಪೊಲೀಸರ ವಿರುದ್ಧ ತಿರುಗಿ ಬಿದ್ದರು.