Tag: belagavi protest

  • MES ಗಲಾಟೆ ಮಾಡಿದೆ ಅಂತ ನಾನು ಹೇಳಲ್ಲ: ಡಿ.ಕೆ ಶಿವಕುಮಾರ್

    MES ಗಲಾಟೆ ಮಾಡಿದೆ ಅಂತ ನಾನು ಹೇಳಲ್ಲ: ಡಿ.ಕೆ ಶಿವಕುಮಾರ್

    ಬೆಳಗಾವಿ: ಎಂಇಎಸ್ ಗಲಾಟೆ ಮಾಡಿದೆ ಅಂತ ನಾನು ಹೇಳಲ್ಲ ಎಂದು ಕಾಂಗ್ರೆಸ್ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಹೇಳಿದ್ದಾರೆ.

    ಶುಕ್ರವಾರ ತಡರಾತ್ರಿ ಅನಗೋಳದ ಕನಕದಾಸ ಕಾಲೋನಿಯಲ್ಲಿ ನಗರದಲ್ಲಿ ಎಂಇಎಸ್ ಕಾರ್ಯಕರ್ತರು ನಡೆಸಿದ ಧಾಂದಲೆ ಕುರಿತಂತೆ ಇದೀಗ ಕನ್ನಡ ಪರ ಸಂಘಟನೆಗಳು ರೊಚ್ಚಿಗೆದ್ದಿದ್ದು, ಇದೀಗ ಬೆಳಗಾವಿಯಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ. ಇನ್ನೂ ಪರಿಸ್ಥಿತಿ ನಿಯಂತ್ರಿಸಲು ಪೊಲೀಸರು ಹರಸಹಾಸ ಪಡುತ್ತಿದ್ದಾರೆ. ಇದನ್ನೂ ಓದಿ: ಬೆಳಗಾವಿಯಲ್ಲಿ MES ಪುಂಡರ ಅಟ್ಟಹಾಸ – ಸಂಗೊಳ್ಳಿ ರಾಯಣ್ಣ ಪ್ರತಿಮೆಗೆ ಹಾನಿ, ಬಸ್ ಮೇಲೆ ಕಲ್ಲು ತೂರಾಟ

    ಸದ್ಯ ಈ ಕುರಿತಂತೆ ಬೆಳಗಾವಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಡಿ.ಕೆ. ಶಿವಕುಮಾರ್ ಅವರು, ರಾಜ್ಯದಲ್ಲಿ ಶಾಂತಿ ಕಾಪಾಡುವುದು ಕಾಂಗ್ರೆಸ್ ಪಕ್ಷದ ಸಂಕಲ್ಪವಾಗಿದೆ. ನಾನು ಯಾವುದೋ ಸಂಘನೆ ಈ ಕೆಲಸ ಮಾಡಿದೆ ಎಂದು ಹೆಸರು ಹೇಳುವುದಿಲ್ಲ. ಅದು ಎಂಇಎಸ್ ಇದ್ದರೂ ಇರಬಹುದು. ಆದರೆ ಯಾರೋ ಕಿಡಿಗೇಡಿಗಳು ಶಾಂತಿ ಕದಡುವ ಕೆಲಸವನ್ನು ಮಾಡುತ್ತಿದ್ದಾರೆ. ಮೊದಲಿನಿಂದಲೂ ಬಿಜೆಪಿ ಸರ್ಕಾರ ನೈತಿಕ ಪೊಲೀಸ್ ಗಿರಿಗೆ ಬೆಂಬಲ ನೀಡಿತು. ಇದು ಈ ಘಟನೆಗೆ ಪ್ರಮುಖ ಕಾರಣವಾಗಿದೆ. ಆರೋಪಿಗಳು ಯಾರೇ ಆಗಿದ್ದರೂ ಸರ್ಕಾರ ಕೂಡಲೇ ಈ ಕುರಿತಂತೆ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ. ಇದನ್ನೂ ಓದಿ:  ಬೆಳಗಾವಿ ಪ್ರಕರಣದಲ್ಲಿ MESನ ಪ್ರಮುಖರನ್ನು ಬಂಧಿಸಲಾಗಿದೆ: ಬೊಮ್ಮಾಯಿ

    ಕನ್ನಡ ಸಂಘಟನೆಗಳು ಕಾನೂನನ್ನು ಕೈಗೆತೆಗೆದುಕೊಳ್ಳಬಾರದು, ಕಾಂಗ್ರೆಸ್ ಪಕ್ಷದ ಕಾರ್ಯಕರ್ತರಾಗಲಿ, ಬೇರೆ ಪಕ್ಷದ ಕಾರ್ಯಕರ್ತರಾಗಲಿ ಯಾರು ಸಹ ಕಾನೂನನನು ಕೈಗೆ ತೆಗೆದುಕೊಳ್ಳಬಾರದು. ಪೊಲೀಸರು ನಿರ್ಧಾಕ್ಷಿಣ್ಯಾವಾಗಿ ರಾಜಕಾರಣಿಗಳ ಮಾತನ್ನು ಬಿಟ್ಟು ಅವರ ಕರ್ತವ್ಯವನ್ನು ನಿಭಾಯಿಸಬೇಕು.

    ಅಧಿವೇಶನದಲಿ ಕಾನೂನು ವ್ಯವಸ್ಥೆ ಹದಗೆಟ್ಟಿರುವ ಬಗ್ಗೆ ಮಾಧ್ಯಮದವರ ಪ್ರಶ್ನೆಗೆ ರಾಜ್ಯದಲ್ಲಿಯೇ ಕಾನೂನು ವ್ಯವಸ್ಥೆ ಹದಗೆಟ್ಟಿದೆ. ಪೊಲೀಸ್ ಸ್ಟೇಷನ್ ಮುಂದೆ ಕಾಕಿ ಬಟ್ಟೆಯನ್ನು ಕಿತ್ತು ಹಾಕಿ, ಕಾವಿ ಬಟ್ಟೆ ಹಾಕಿಕೊಂಡು ಕುಳಿತುಕೊಂಡರೆ ಹೇಗಪ್ಪಾ? ಎಂದಿದ್ದಾರೆ.

  • ಕೈಮುಗಿದು ಮನವಿ ಮಾಡಿದ್ದೇವೆಯೇ ಹೊರತು, ರೈತರ ಮೇಲೆ ದೌರ್ಜನ್ಯ ಮಾಡಿಲ್ಲ: ಬೆಳಗಾವಿ ಡಿಸಿ

    ಕೈಮುಗಿದು ಮನವಿ ಮಾಡಿದ್ದೇವೆಯೇ ಹೊರತು, ರೈತರ ಮೇಲೆ ದೌರ್ಜನ್ಯ ಮಾಡಿಲ್ಲ: ಬೆಳಗಾವಿ ಡಿಸಿ

    ಬೆಳಗಾವಿ: ರೈತರ ವಿರೋಧದ ನಡುವೆಯೂ ನಡೆದ ಮಚ್ಚೆ – ಹಲಗಾ ಬೈಪಾಸ್ ರಸ್ತೆ ಕಾಮಗಾರಿ ಪ್ರಕರಣಕ್ಕೆ ಸಂಬಂಧಿಸಿದಂತೆ ಜಿಲ್ಲಾಡಳಿತ ರೈತರ ಮನವೊಲಿಸಲು ಮುಂದಾಗಿದೆ. ಈ ಸಂದರ್ಭದಲ್ಲಿ ಮಾತನಾಡಿದ ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಅವರು, ನಾನು ರೈತರಿಗೆ ಕೈಮುಗಿದು ಕೇಳಿದ್ದೇನೆಯೇ ಹೊರತು ಯಾರ ಮೇಲೂ ದೌರ್ಜನ್ಯ ಮಾಡಿಲ್ಲ ಎಂದು ಹೇಳಿದ್ದಾರೆ.

    ಜಿಲ್ಲಾಡಳಿತ ಮತ್ತು ಸರ್ಕಾರ ಯಾವಾಗಲೂ ರೈತರ ಜೊತೆಗಿದೆ. ಅಭಿವೃದ್ಧಿಗೆ ಕೈಜೋಡಿಸಬೇಕು. ಯಾರಿಗಾದರೂ ರೈತರಿಗೆ ತೊಂದರೆಯಾಗಿದ್ದರೆ ಜಿಲ್ಲಾಡಳಿತ ಅದನ್ನು ನಿವಾರಿಸುವ ನಿಟ್ಟಿನಲ್ಲಿ ಕೆಲಸ ಮಾಡುತ್ತದೆ. ಅಭಿವೃದ್ಧಿಗೆ ಸಹಕಾರ ನೀಡಬೇಕು ಎಂದು ಡಿಸಿ ಮನವಿ ಮಾಡಿದರು. ಇದನ್ನೂ ಓದಿ: ಮಹಿಳಾ ಪೊಲೀಸ್ ಇನ್ಸ್‌ಪೆಕ್ಟರ್‌ ರಕ್ಷಿಸಿದ ವ್ಯಕ್ತಿ ಆಸ್ಪತ್ರೆಯಲ್ಲಿ ಸಾವು

    ರೈತರ ವಿರೋಧದ ನಡುವೆಯೂ ಮಚ್ಚೆ-ಹಲಗಾ ಬೈಪಾಸ್‌ ರಸ್ತೆ ಕಾಮಗಾರಿಗೆ ಜಿಲ್ಲಾಡಳಿತ ಮುಂದಾಗಿತ್ತು. ರೈತರನ್ನು ನಿಯಂತ್ರಿಸಲು ನೂರಾರು ಸಂಖ್ಯೆಯಲ್ಲಿ ಪೊಲೀಸ್‌ ಬಂದೋಬಸ್ತ್‌ ನಿಯೋಜಿಸಲಾಗಿತ್ತು. ಈ ವೇಳೆ ರೈತರು ಕಾಮಗಾರಿ ವಿರೋಧಿಸಿ ಸ್ಥಳದಲ್ಲಿ ಪ್ರತಿಭಟನೆ ನಡೆಸಿದರು. ಆಗ ರೈತರನ್ನು ಪೊಲೀಸರು ಬಂಧಿಸಲು ಮುಂದಾದರು. ಇದನ್ನೂ ಓದಿ: ಬಿಟ್‍ಕಾಯಿನ್ ಬಗ್ಗೆ ಸುಳ್ಳಿನ ಪ್ರಚಾರ, ಬೇಜವಾಬ್ದಾರಿ ಹೇಳಿಕೆ ನೀಡಿದ್ರೆ ದೂರು: ಟೆಂಗಿನಕಾಯಿ ಮಹೇಶ್

    ಯಾವುದೇ ಕಾರಣಕ್ಕೂ ಫಲವತ್ತಾದ ಜಮೀನನ್ನು ಕಾಮಗಾರಿಗೆ ಬಿಡುವುದಿಲ್ಲ ಎಂದು ಪಟ್ಟು ಹಿಡಿದಿದ್ದ ರೈತರು ಅಧಿಕಾರಿಗಳ ವಿರುದ್ಧ ಅಸಮಾಧಾನ ಹೊರಹಾಕಿದರು. ಇದೇ ವೇಳೆ ಪ್ರತಿಭಟನಾನಿರತ ರೈತ, ಕುಡುಗೋಲಿನಿಂದ ಕೊಯ್ದುಕೊಂಡು ಆತ್ಮಹತ್ಯೆಗೆ ಯತ್ನಿಸಲು ಮುಂದಾದರು. ಅಲ್ಲದೇ ಮತ್ತೊಬ್ಬ ರೈತ, ಪೆಟ್ರೋಲ್‌ ಸುರಿದುಕೊಂಡು ಬೆಂಕಿ ಹಚ್ಚಿಕೊಂಡಿದ್ದರು. ಅವರನ್ನು ನಿಯಂತ್ರಿಸಲು ಪೊಲೀಸರು ಹರಸಾಹಸಪಟ್ಟ ಘಟನೆ ಗುರುವಾರ ನಡೆದಿತ್ತು. ವಿರೋಧದ ಗಂಭೀರತೆ ಅರಿತ ಜಿಲ್ಲಾಡಳಿತ ಈಗ ರೈತರ ಮನವೊಲಿಸಲು ಮುಂದಾಗಿದೆ.