Tag: belagavi winter session

  • ಸಿಟಿ ರವಿ ಆಕ್ಷೇಪಾರ್ಹ ಹೇಳಿಕೆ ಕೇಸ್ – ಸಿಎಂ ಪುತ್ರ ಯತೀಂದ್ರಗೆ ಸಿಐಡಿ ನೋಟಿಸ್

    ಸಿಟಿ ರವಿ ಆಕ್ಷೇಪಾರ್ಹ ಹೇಳಿಕೆ ಕೇಸ್ – ಸಿಎಂ ಪುತ್ರ ಯತೀಂದ್ರಗೆ ಸಿಐಡಿ ನೋಟಿಸ್

    ಬೆಂಗಳೂರು: ಲಕ್ಷ್ಮೀ ಹೆಬ್ಬಾಳ್ಕರ್ (Lakshmi Hebbalkar) ವಿರುದ್ಧ ಆಕ್ಷೇಪಾರ್ಹ ಪದಬಳಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎಂಎಲ್‌ಸಿ ಯತೀಂದ್ರ ಸಿದ್ದರಾಮಯ್ಯಗೆ (Yathindra Siddaramaiah) ಸಿಐಡಿ ನೋಟಿಸ್ ನೀಡಲಾಗಿದೆ.ಇದನ್ನೂ ಓದಿ: ರಮೇಶ್ ಕುಮಾರ್ ಅರಣ್ಯ ಭೂಮಿ ವಿವಾದ| ಜಂಟಿ ಸರ್ವೆ ಮುಕ್ತಾಯ – ಒಮ್ಮತಕ್ಕೆ ಬಾರದ ಅರಣ್ಯ, ಕಂದಾಯ ಇಲಾಖೆ

    ಬೆಳಗಾವಿ ಚಳಿಗಾಲ ಅಧಿವೇಶನದಲ್ಲಿ (Belagavi Winter Session) ನಡೆದ ಗಲಾಟೆ ಸಂದರ್ಭದಲ್ಲಿ ಸದನದ ಒಳಗೆ ಯತೀಂದ್ರ ಸಿದ್ದರಾಮಯ್ಯ ಇದ್ದರು ಅನ್ನೋ ಕಾರಣಕ್ಕೆ ನೋಟಿಸ್ ನೀಡಲಾಗಿದೆ.

    ಸಿಐಡಿ (CID) ವಿಚಾರಣೆಗೆ ಹಾಜರಾಗಿ ಹೇಳಿಕೆ ನೀಡುವಂತೆ ತಿಳಿಸಿದ್ದಾರೆ. ಇನ್ನೂ ಯತೀಂದ್ರ ಅವರ ಜೊತೆಗೆ ಎಂಎಲ್‌ಸಿ ಡಿಬಿ ಶ್ರೀನಿವಾಸ್ ಅವರು ಇದ್ದ ಕಾರಣಕ್ಕಾಗಿ ಅವರಿಗೂ ಕೂಡ ನೋಟಿಸ್ ನೀಡಿ, ಶುಕ್ರವಾರ (ಜ.17) ವಿಚಾರಣೆಗೆ ಹಾಜರಾಗುವಂತೆ ತಿಳಿಸಿದ್ದಾರೆ.ಇದನ್ನೂ ಓದಿ: ಬೀದರ್‌ನಲ್ಲಿ ಎಟಿಎಂ ಹಣ ದರೋಡೆ ಕೇಸ್‌ – ಹೈದರಾಬಾದ್‌ನಲ್ಲೂ ಫೈರಿಂಗ್‌, ದರೋಡೆಕೋರರು ಎಸ್ಕೇಪ್‌

  • ಬೆಳಗಾವಿಯಲ್ಲಿ ಅಧಿವೇಶನ ನಡೆಸುವ ಬಗ್ಗೆ ಚರ್ಚೆಯಾಗಿದೆ – ಸ್ಪೀಕರ್ ಕಾಗೇರಿ

    ಬೆಳಗಾವಿಯಲ್ಲಿ ಅಧಿವೇಶನ ನಡೆಸುವ ಬಗ್ಗೆ ಚರ್ಚೆಯಾಗಿದೆ – ಸ್ಪೀಕರ್ ಕಾಗೇರಿ

    ಧಾರವಾಡ: ಬೆಳಗಾವಿಯಲ್ಲೇ 10 ದಿನ ಚಳಿಗಾಲದ ಅಧಿವೇಶನ (Belagavi Winter Session) ನಡೆಸುವ ಬಗ್ಗೆ ಚರ್ಚೆ ಮಾಡಲಾಗಿದ್ದು, ಅಂತಿಮವಾಗಿ ಕ್ಯಾಬಿನೆಟ್ ನಿಗದಿಪಡಿಸಿದ ದಿನಗಳವರೆಗೆ ಅಧಿವೇಶನ ನಡೆಸಲಾಗುವುದು ಎಂದು ಸ್ಪೀಕರ್‌ ವಿಶ್ವೇಶ್ವರ ಹೆಗಡೆ ಕಾಗೇರಿ (Vishweshwar Hegde Kageri) ತಿಳಿಸಿದ್ದಾರೆ.

    ಧಾರವಾಡದಲ್ಲಿ (Dharawada) ಮಾತನಾಡಿದ ಅವರು, ಅಧಿವೇಶನದ ದಿನಾಂಕದ ಬಗ್ಗೆ ಚರ್ಚೆಯಾಗಿದೆ. ಕ್ಯಾಬಿನೆಟ್‌ನಲ್ಲಿ ಸಿಎಂ ನಿರ್ಧರಿಸಿ ಹೇಳಬೇಕಿದೆ. ಅದಕ್ಕಾಗಿ ನಾವೂ ಕಾಯುತ್ತಿದ್ದೇವೆ. 10 ದಿನ ಅಧಿವೇಶನ ಮಾಡಬಹುದು ಎಂದು ಚರ್ಚೆ ಮಾಡಲಾಗಿದೆ ಎಂದಿದ್ದಾರೆ. ಇದನ್ನೂ ಓದಿ: ಮೈಸೂರು, ಮಂಗಳೂರು ಸೇರಿ ರಾಜ್ಯದ 6 ಕಡೆ ಹೊಸ ನಗರಗಳ ನಿರ್ಮಾಣ – ಬೊಮ್ಮಾಯಿ

    ಅಧಿವೇಶನಕ್ಕೆ 10 ದಿನ ಸಾಕಾಗುವುದಿಲ್ಲ. ಚರ್ಚೆ ಮಾಡಲು ಸಮಯ ಸಾಕಾಗುವುದಿಲ್ಲ ಎಂಬ ಸಲಹೆಗೆ ಪ್ರತಿಕ್ರಿಯಿಸಿದ ಅವರು, ಪತ್ರಕರ್ತರು ಅಧಿವೇಶನ ಹೆಚ್ಚು ದಿನ ನಡೆಸಲು ಮನವಿ ಮಾಡಿದ್ದಾರೆಂದು ಸರ್ಕಾರಕ್ಕೆ ಹೇಳುತ್ತೇನೆ. ಕೊನೆಗೆ ಸರ್ಕಾರ ಕ್ಯಾಬಿನೆಟ್‌ನಲ್ಲಿ ಏನು ನಿರ್ಧಾರ ತೆಗೆದುಕೊಳ್ಳುತ್ತದೆಯೋ ಅದರಂತೆ ಮಾಡುತ್ತೇವೆ. ಈ ಬಾರಿಯ ಅಧಿವೇಶನವನ್ನು ಒಳ್ಳೆಯದಾಗಿ ಮಾಡೋಣ ಎಂದು ಹೇಳಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಬೆಳಗಾವಿಯಿಂದ ‘ಸುಶಾಸನ ಸಂಗಮ’ಕ್ಕೆ ವಾರಾಣಸಿಗೆ ಹೊರಟ ಸಿಎಂ ಬೊಮ್ಮಾಯಿ

    ಬೆಳಗಾವಿಯಿಂದ ‘ಸುಶಾಸನ ಸಂಗಮ’ಕ್ಕೆ ವಾರಾಣಸಿಗೆ ಹೊರಟ ಸಿಎಂ ಬೊಮ್ಮಾಯಿ

    ಬೆಳಗಾವಿ: ಚಳಿಗಾಲದ ಅಧಿವೇಶನಕ್ಕೆ ಬೆಳಗಾವಿಗೆ ಆಗಮಿಸಿದ್ದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ವಿಶೇಷ ವಿಮಾನದಲ್ಲಿ ವಾರಾಣಸಿಗೆ ತೆರಳಿದ್ದಾರೆ. ವಾರಾಣಸಿಯಲ್ಲಿ ನಾಳೆ ನಡೆಯಲಿರುವ ಸುಶಾಸನ ಸಂಗಮ್ ಸಭೆಯಲ್ಲಿ ಸಿಎಂ ಭಾಗಿಯಾಗಲಿದ್ದಾರೆ.

    ಇದಕ್ಕೂ ಮುನ್ನ ಬೆಳಗಾವಿಯ ಸುವರ್ಣಸೌಧದಲ್ಲಿ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಬೊಮ್ಮಾಯಿ, ನಾನು ಇವತ್ತು ವಾರಾಣಸಿಗೆ ಹೋಗ್ತಿದ್ದೇನೆ. ವಾರಾಣಸಿಯಲ್ಲಿ ಎಲ್ಲಾ ಬಿಜೆಪಿ ಮುಖ್ಯಮಂತ್ರಿಗಳ ಸಮ್ಮೇಳನ ಇದೆ. ಅಲ್ಲಿ ಕೇಂದ್ರ ಮತ್ತು ರಾಜ್ಯ ಯೋಜನೆಗಳ ಬಗ್ಗೆ ಚರ್ಚೆಯಾಗಲಿದೆ. ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ನಡೆಯುತ್ತಿರುವ ಈ ಸಮ್ಮೇಳನದಲ್ಲಿ ಹಲವಾರು ಯೋಜನೆಗಳ ಬಗ್ಗೆ ಚರ್ಚೆ ಮಾಡುತ್ತೇನೆ. ಬಳಿಕ ನಾಳೆ ವಾಪಸ್ ಆಗುತ್ತೇನೆ ಎಂದು ಹೇಳಿದರು.

    ಸಂಜೆ 4.45ಕ್ಕೆ ವಾರಾಣಸಿಯ ಬಬತ್‍ಪುರದಲ್ಲಿರುವ ಲಾಲ್ ಬಹಾದುರ್ ಶಾಸ್ತ್ರಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ತಲುಪುವ ಅವರು ಬಳಿಕ ರಸ್ತೆ ಮಾರ್ಗವಾಗಿ ತೆರಳಿ ಸಂಜೆ 5.15ಕ್ಕೆ ವಾರಾಣಸಿಯನ್ನು ತಲುಪಲಿದ್ದಾರೆ. ಇಂದು ವಾರಾಣಸಿಯ ತಾಜ್ ಗಂಗೇಸ್ ಹೋಟೆಲ್‍ನಲ್ಲಿ ವಾಸ್ತವ್ಯ ಹೂಡಲಿದ್ದಾರೆ.

    ನಾಳೆ ಬೆಳಗ್ಗೆ 9.30ಕ್ಕೆ ವಾರಾಣಸಿಯ ಬನಾರಸ್ ಲೋಕೋಮೋಟಿವ್ ವಕ್ರ್ಸ್‍ಗೆ ಆಗಮಿಸುವ ಅವರು 10ರಿಂದ 2 ಗಂಟೆಯವರೆಗೆ ಸುಶಾಸನ್ ಸಂಗಮ್ ಸಭೆಯಲ್ಲಿ ಭಾಗವಹಿಸಲಿದ್ದಾರೆ. ಇದನ್ನೂ ಓದಿ: ನಾಳೆ ಬೆಳಗಾವಿ ಬಂದ್‍ಗೆ MES ಕರೆ – ಬಂದ್‍ಗೆ ಅವಕಾಶ ಕೊಡಲ್ಲ ಎಂದ ಕರ್ನಾಟಕ ಪೊಲೀಸ್

    ಮಂಗಳವಾರ ಮಧ್ಯಾಹ್ನ 3 ಗಂಟೆಗೆ ವಾರಾಣಸಿಯಿಂದ ಹೊರಡುವ ಅವರು 3.25ಕ್ಕೆ ಬಬತ್‍ಪುರದಲ್ಲಿರುವ ಲಾಲ್ ಬಹಾದುರ್ ಶಾಸ್ತ್ರಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಹೊರಟು ಸಂಜೆ 5.45ಕ್ಕೆ ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣಕ್ಕೆ ಆಗಮಿಸಲಿದ್ದಾರೆ. ಇದನ್ನೂ ಓದಿ: ಬೇಲಿ ಹಾರಿಯಾದರೂ ಸುವರ್ಣಸೌಧ ಮುತ್ತಿಗೆ – ಸರ್ಕಾರಕ್ಕೆ ಕೋಡಿಹಳ್ಳಿ ಗಡುವು