ಹೆರಿಗೆಯಾದ ಸಂದರ್ಭದಲ್ಲಿ ಕ್ಷೇಮವಾಗಿಯೇ ಇದ್ದ ಅಂಜಲಿ ಮಧ್ಯರಾತ್ರಿ ಮೃತಪಟ್ಟಿದ್ದಾರೆ. ವೈದ್ಯರು ಲೋ ಬಿಪಿಯಿಂದ ಮೃತಪಟ್ಟಿದ್ದಾರೆ ಎಂದು ಹೇಳಿದರೆ ವೈದ್ಯರ ನಿರ್ಲಕ್ಷದಿಂದಲೇ ಅಂಜಲಿ ಸಾವಾಗಿದೆ ಎಂದು ಕುಟುಂಬಸ್ಥರು ಆರೋಪಿಸುತ್ತಿದ್ದಾರೆ.
ಆಸ್ಪತ್ರೆಯ ಮುಂಭಾಗದಲ್ಲಿ ಕುಟುಂಬಸ್ಥರ ಅಕ್ರಂದನ ಮುಗಿಲು ಮುಟ್ಟಿದೆ. ಎಪಿಎಂಸಿ ಪೊಲೀಸರು ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಬೆಳಗಾವಿ: ಗಡಿ ಜಿಲ್ಲೆ ಬೆಳಗಾವಿಯಲ್ಲಿ (Belagavi) ಸದ್ದಿಲ್ಲದೇ ಮಕ್ಕಳ ಮಾರಾಟ ಜಾಲ (Child Sale Gang) ಆಕ್ಟೀವ್ ಆಗಿದೆ. ನೇರವಾಗಿ ಫೀಲ್ಡಿಗಿಳಿಯದ ಈ ಗ್ಯಾಂಗ್ ಗಂಡ ಇಲ್ಲದ ಮಹಿಳೆಯರನ್ನೇ ಟಾರ್ಗೆಟ್ ಮಾಡ್ತಿತ್ತು. ಅವರಿಗೆ 2ನೇ ಮದುವೆ ಮಾಡಿಸಿ ಬಳಿಕ ಅವರ ಮಕ್ಕಳನ್ನ ಗಯಾಬ್ ಮಾಡುತ್ತಿತ್ತು ಈ ಗ್ಯಾಂಗ್.
ಕಳೆದ 1 ತಿಂಗಳಲ್ಲಿ ಬೆಳಗಾವಿ ಜಿಲ್ಲೆಯಲ್ಲಿ ಎಷ್ಟು ಮಕ್ಕಳ ಮಾರಾಟ ಆಗಿವೆ? ಮಹಾರಾಷ್ಟ್ರ ಬೆಳಗಾವಿ ಗಡಿಯಲ್ಲಿ ಮಕ್ಕಳ ಮಾರಾಟ ಗ್ಯಾಂಗ್ ಯಾವ ರೀತಿ ಕೆಲಸ ಮಾಡ್ತಿದೆ. ಮೂರು ಪ್ರಕರಣದಲ್ಲಿ ಖೆಡ್ಡಾಗೆ ಬಿದ್ದ ಖದೀಮರು ಎಷ್ಟು? ಮಕ್ಕಳ ಮಾರಾಟ ಜಾಲದ ಕಂಪ್ಲೀಟ್ ರಿಪೋರ್ಟ್ ಇಲ್ಲಿದೆ ನೋಡಿ…
ಹೌದು. ಗಡಿ ಜಿಲ್ಲೆಯ ಬೆಳಗಾವಿಯಲ್ಲಿ ಮಕ್ಕಳ ಮಾರಾಟ ಜಾಲ ಮತ್ತೆ ಆಕ್ಟೀವ್ ಆಗಿದೆ. ಸದ್ದಿಲ್ಲದೇ ಲಕ್ಷ ಲಕ್ಷ ಹಣಕ್ಕೆ ಮಕ್ಕಳನ್ನ ಮಾರಿ ದುಡ್ಡು ಮಾಡ್ತಿರುವ ಕತರ್ನಾಕ್ ಗ್ಯಾಂಗ್ ಇದೀಗ ಪೊಲೀಸರ ಖೆಡ್ಡಾಗೆ ಬಿದ್ದಿದೆ. ಕಳೆದ 1 ತಿಂಗಳಲ್ಲಿ ಮೂರು ಪ್ರಕರಣಗಳು ಬೆಳಕಿಗೆ ಬಂದಿದ್ದು ಈ ವರೆಗೂ ಮಹಾರಾಷ್ಟ್ರ, ಕರ್ನಾಟಕ, ಗೋವಾ ಸೇರಿ 13 ಜನ ಆರೋಪಿಗಳನ್ನ ವಿವಿಧ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಅಷ್ಟಕ್ಕೂ ಈ ಗ್ಯಾಂಗ್ ಗಳು ಹೇಗೆಲ್ಲಾ ಕೆಲಸ ಮಾಡುತ್ತವೆ ಅಂತಾ ಕೇಳಿದ್ರೇ ನೀವು ಕೂಡ ಶಾಕ್ ಆಗ್ತಿರಿ. ಮದುವೆಯಾಗಿ ಮಕ್ಕಳಿದ್ದು ಗಂಡ ಇಲ್ಲದಿರುವ ಮಹಿಳೆಯರನ್ನ ಟಾರ್ಗೆಟ್ ಮಾಡ್ತಾರೆ. ಜೀವನ ನಡೆಸಲು ಹರಸಾಹಸ ಪಡುವ ಮಹಿಳೆಯರಿಗೆ ಮತ್ತೊಂದು ಮದುವೆ ಆಸೆ ಹಚ್ಚುತ್ತಾರೆ. ಇದಾದ ಬಳಿಕ 2ನೇ ಮದುವೆ ಕೂಡ ಮಾಡಿಸುತ್ತಾರೆ. ಮದುವೆಯಾದ ಬಳಿಕ ಮಗುವನ್ನ ನಾವು ನೋಡಿಕೊಳ್ತೇವಿ ಗಂಡ-ಹೆಂಡತಿ ಸ್ವಲ್ಪ ದಿನ ಅರಾಮಾಗಿ ಇರೀ ಅಂತಾ ಆ ಮಗುವನ್ನ ತಮ್ಮೊಟ್ಟಿಗೆ ಕರೆದುಕೊಂಡು ಹೋಗ್ತಾರೆ. ಹೀಗೆ ಹೋದವರು ಮಹಾರಾಷ್ಟ್ರದಲ್ಲಿರುವ ತಮ್ಮ ಟೀಮ್ ಜೊತೆಗೆ ಸೇರಿಕೊಂಡು ಅಲ್ಲಿ ಮೂರು, ನಾಲ್ಕು ಲಕ್ಷಕ್ಕೆ ಮಗುವನ್ನ ಮಾರಾಟ ಮಾಡ್ತಾರೆ. ಹೀಗೆ ಮಾರಿದ ಬಳಿಕ ಸ್ವಂತ ತಾಯಿ ಸಂಪರ್ಕಕ್ಕೆ ಇವರು ಸಿಗುವುದಿಲ್ಲ. ಈ ರೀತಿ ಮಕ್ಕಳನ್ನ ಮಾರಾಟ ಮಾಡಿ ಬಿಂದಾಸ್ ಜೀವನ ಮಾಡ್ತಿದ್ದ ಗ್ಯಾಂಗ್ ಕಡೆಗೂ ಪೊಲೀಸರ ಖೆಡ್ಡಾಗೆ ಬಿದ್ದಿವೆ.
ಅಷ್ಟಕ್ಕೂ ಮೂರು ಕೇಸ್ಗಳಲ್ಲಿ ಹೇಗೆಲ್ಲಾ ಮಕ್ಕಳ ಮಾರಾಟ ಆಗಿತ್ತು ಅನ್ನೋದನ್ನ ನೋಡೊದಾದ್ರೇ.. ಈ ಎರಡನೇ ಮದುವೆ ಮಾಡಿಸಿ ಹೇಗೆ ಮಕ್ಕಳನ್ನ ಮಾರಾಟ ಮಾಡಿದ್ರೂ ಅನ್ನೋದನ್ನ ಮೊದಲು ಹೇಳ್ತೇವೆ ನೋಡಿ.
ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಸುಲ್ತಾನಪುರ್ ಅನ್ನೋ ಈ ಗ್ರಾಮದಲ್ಲೇ ಇಬ್ಬರು ಮಹಿಳೆಯರಿಗೆ ಬೇರೆ ಬೇರೆ ಸಮಯದಲ್ಲಿ ಎರಡನೇ ಮದುವೆ ಮಾಡಿಸಿ ಎರಡು ಮಕ್ಕಳನ್ನ ಮಾರಾಟ ಮಾಡಿದ್ದರು. ಸಂಗೀತಾ ಅನ್ನೋ ಮಹಿಳೆ ಸದಾಶಿವ ಅನ್ನೋನಿಗೆ ಎರಡನೇ ಮದುವೆಯಾಗಿದ್ದ, ಮದುವೆ ಮಾಡಿಸಿದ್ದ ಲಕ್ಷ್ಮೀ ಗೋಲಬಾಂವಿ ಹೊಸದಾಗಿ ಮದುವೆ ಮಾಡಿಕೊಂಡಿದೀರಿ ಮಗುವನ್ನ ತಾನೇ ಸಾಕುವುದಾಗಿ ಹೇಳಿ ಸಂಗೀತಾ ಕಡೆಯಿಂದ ಮಗು ತೆಗೆದುಕೊಳ್ತಾಳೆ. ಇದಾದ ಬಳಿಕ ಸಂಗೀತಾಳನ್ನ ಮದುವೆಯಾಗಿದ್ದ ಸದಾಶಿವ ಮಗದುಮ್ ಹಾಗೂ ಸಂಗೀತಾ ಸಾವಂತ್, ಅನುಸೂಯಾ ದೊಡ್ಡಮನಿ ಮೂರು ಜನ ಸೇರಿ ಬೆಳಗಾವಿ ನಗರದ ದಿಲ್ ಶಾದ್ ಎಂಬಾಕೆಗೆ 4 ಲಕ್ಷ ಹಣಕ್ಕೆ ಮಗು ಮಾರಿರುತ್ತಾರೆ. ಮೂರು ತಿಂಗಳ ಬಳಿಕ ಸಂಗೀತಾ ಸ್ಪಂದನಾ ಎಂಬ ಎನ್ಜಿಒ ಸುಶೀಲಾ ಅವರಿಗೆ ಹೇಳ್ತಾಳೆ. ಸುಶೀಲಾ ಕೂಡಲೇ ಹುಕ್ಕೇರಿ ಠಾಣೆಗೆ ಸಂಗೀತಾಗೆ ಕರೆದುಕೊಂಡು ಹೋಗಿ ದೂರು ದಾಖಲಿಸಿದ ಬಳಿಕ ಪ್ರಕರಣ ಭೇದಿಸಿದ ಪೊಲೀಸರು ಈ ಕೇಸ್ನಲ್ಲಿ 6 ಆರೋಪಿಗಳ ಪೈಕಿ ನಾಲ್ಕು ಜನ ಆರೋಪಿಗಳನ್ನ ಬಂಧಿಸುತ್ತಾರೆ. ಈ ವೇಳೆ ಅರ್ಚನಾ ಎಂಬಾಕೆ ಕೂಡ ಸುಶೀಲಾ ಅವರಿಗೆ ತನ್ನ ಮಗಳು ಕೂಡ ಮಾರಾಟ ಮಾಡಿದ್ದಾರೆ ಅನ್ನೋದನ್ನ ಹೇಳ್ತಾರೆ, ಈ ಕಾರಣಕ್ಕೆ ವಾರದ ಹಿಂದೆ ಮತ್ತೊಂದು ಕೇಸ್ ದಾಖಲಿಸಿದ್ದಾರೆ. ಇಲ್ಲಿ ಕೂಡ ಅರ್ಚನಾ ಅನ್ನೋ ಮಹಿಳೆಗೆ ಎರಡನೇ ಮದುವೆ ಮಾಡಿಸಿ ಬಳಿಕ ತನ್ನ ಮಗುವನ್ನ ನೋಡಿಕೊಳ್ತೇತಿ ಅಂತಾ ಹೇಳಿ ಸಂಗೀತಾ ಗೌಳಿ ತನ್ನೊಟ್ಟಿಗೆ ಮಗುವನ್ನ ತೆಗೆದುಕೊಂಡು ಹೋಗಿ ಮಹಾರಾಷ್ಟ್ರದ ಗಡಹಿಂಗ್ಲಜ್ ನ ಮೋಹನ್ ತಾವಡೆ, ಸಂಗೀತಾ ತಾವಡೆ ಮೂಲಕ ಬೇರೆ ಅವರಿಗೆ ಮೂರು ಲಕ್ಷಕ್ಕೆ ಮಗು ಮಾರಾಟ ಮಾಡಿರುತ್ತಾರೆ.
ಕೇಸ್ ದಾಖಲಿಸಿಕೊಂಡ ಹುಕ್ಕೇರಿ ಪೊಲೀಸರು ಈ ಕೇಸ್ ನಲ್ಲಿ ಕೂಡ ಮೂರು ಜನ ಆರೋಪಿಗಳನ್ನ ಬಂಧಿಸಿದ್ದು ಇಬ್ಬರು ತಾಯಂದಿರಿಗೂ ಎರಡು ಮಕ್ಕಳನ್ನ ವಾಪಾಸ್ ಮಡಿಲು ಸೇರಿಸಿದ್ದಾರೆ. ಇತ್ತ ಜ.8ರಂದು ಬೆಳಗಾವಿ ನಗರದಲ್ಲಿ ಮತ್ತೊಂದು ಹೆಣ್ಣು ಮಗು ಮಾರಾಟ ಆಗಿದ್ದನ್ನ ರಕ್ಷಣೆ ಮಾಡಿ ತಾಯಿ ಮಡಿಲು ಸೇರಿಸಿದ್ದ ಪ್ರಕರಣ ಕೂಡ ನಡೆದಿತ್ತು. ನಾಲ್ಕು ಲಕ್ಷ ರೂಪಾಯಿಗೆ ಗೋವಾ ಮೂಲದ ಮಹಿಳೆಗೆ ಮಗು ಮಾರಾಟ ಮಾಡಿದ್ದು ಮಾರ್ಕೆಟ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ಪ್ರಕರಣ ಬೆನ್ನು ಹತ್ತಿದ್ದ ಪೊಲೀಸರು ಈ ಕೇಸ್ ನಲ್ಲಿ ಮಧ್ಯವರ್ತಿಗಳು ಸೇರಿ ಆರು ಜನರನ್ನ ಬಂಧಿಸಿ ಜೈಲಿಗೆ ಕಳುಹಿಸುವ ಕೆಲಸ ಮಾಡಿ ಬಳಿಕ ಮಗುವನ್ನ ಹೆತ್ತವರಿಗೆ ಮರಳಿಸಿದ್ದರು.
ಸದ್ಯ 1 ತಿಂಗಳ ಅವಧಿಯಲ್ಲಿ ಮೂರು ಕೇಸ್ಗಳಲ್ಲಿ ಮೂರು ಮಕ್ಕಳನ್ನ ರಕ್ಷಣೆ ಮಾಡಿ ಆಯಾ ತಾಯಂದಿರಿಗೆ ಪೊಲೀಸರು ಮರಳಿಸಿದ್ದಾರೆ. ಆದ್ರೆ ಇಲ್ಲಿ ಹಣದ ಆಸೆಗೆ ಇಲ್ಲಾ ಅನಿವಾರ್ಯತೆಗೆ ತಮ್ಮ ಮಕ್ಕಳನ್ನ ಹೆತ್ತವರು ಮಾರಾಟ ಮಾಡ್ತಿದ್ದಾರಾ? ಅಥವಾ ಅವರ ದಿಕ್ಕು ತಪ್ಪಿಸಿ ಗ್ಯಾಂಗ್ಗಳು ಮಕ್ಕಳ ಮಾರಾಟ ಮಾಡ್ತಿವೆಯಾ ಅನ್ನೋದು ಕೂಡ ಪೊಲೀಸರು ತನಿಖೆಯಿಂದ ಹೊರ ಬರಬೇಕಿದೆ. ಅದೇನೆ ಇರಲಿ ಈ ರೀತಿ ಬಡ ಹೆಣ್ಣು ಮಕ್ಕಳ ಮುದ್ಧತೆ ದುರ್ಬಳಕೆ ಮಾಡಿಕೊಳ್ತಿರುವ ಖದೀಮರಿಗೆ ತಕ್ಕ ಶಿಕ್ಷೆ ಆಗಲಿ.
ಬೆಳಗಾವಿ: ಕಾರು ಅಪಘಾತಕ್ಕೀಡಾಗಿ ಬೆಳಗಾವಿಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ (Lakshmi Hebbalkar) ಅವರಿಂದು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಕಳೆದ 13 ದಿನಗಳಿಂದ ಚಿಕಿತ್ಸೆ ಪಡೆಯುತ್ತಿದ್ದ ಹೆಬ್ಬಾಳ್ಕರ್ ಗುಣಮುಖರಾಗಿ ಹೊರಬಂದಿದ್ದಾರೆ.
ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿರುವ ಅವರು, ಇದೊಂದು ಆಗಬಾರದ ದುರ್ಘಟನೆ. ಇವತ್ತು ಬದುಕಿನ ಕೊನೆಯ ಹಂತವನ್ನ ನೋಡಿ ಹೋರಾಟ ಮಾಡಿ ಬದುಕಿ ಬಂದಿದ್ದೇನೆ. ಇದಕ್ಕೆಲ್ಲ ಹಿರಿಯರ ಆಶೀರ್ವಾದ, ತಂದೆ ತಾಯಿ ಆಶೀರ್ವಾದ ಕಾರಣ. ಬಹಳಷ್ಟು ಜನರಿಗೆ ಧನ್ಯವಾದ ಹೇಳ್ತೀನಿ. ಏಕೆಂದರೆ ರಾಜ್ಯದ ಮಠಾಧೀಶರು, ಪೂಜ್ಯರು ಶೀಘ್ರ ಗುಣಮುಖರಾಗಿ ಅಂತಾ ಆಶೀರ್ವಾದ ಮಾಡಿದರು. ಇದು ನನಗೆ ಬಹಳಷ್ಟು ಶಕ್ತಿ, ಧೈರ್ಯ ತಂದುಕೊಟ್ಟಿತು ಎಂದರು.
ಅಲ್ಲದೇ ರಾಜ್ಯದ ಸಿಎಂ, ಡಿಸಿಎಂ, ಹಾಲಿ ಮತ್ತು ಮಾಜಿ ಶಾಸಕರು, ಸಚಿವರು ಬಂದು ನನ್ನ ಅರೋಗ್ಯ ವಿಚಾರಿಸಿದ್ರು, ಶೀಘ್ರ ಚೇತರಿಕೆಯಾಗುವಂತೆ ಹಾರೈಸಿದ್ರು. ಸುರ್ಜೇವಾಲಾ ಅವರು ಆರೋಗ್ಯ ವಿಚಾರಿಸಿ ಧೈರ್ಯ ಹೇಳಿದ್ರು. ಅವರೆಲ್ಲರಿಗೂ ಧನ್ಯವಾದ ತಿಳಿಸುತ್ತೇನೆ. ಮುಖ್ಯವಾಗಿ ಡಾ.ರವಿ ಪಾಟೀಲ್ ಅವರ ವೈದ್ಯರ ತಂಡಕ್ಕೆ ಧನ್ಯವಾದ ಹೇಳ್ತೀನಿ. ಇದರೊಂದಿಗೆ ಕ್ಷೇತ್ರದ ಎಲ್ಲ ಮತದಾರರು, ನನಗಾಗಿ ಪೂಜೆ ಸಲ್ಲಿಸಿದ ಎಲ್ಲರಿಗೂ ಧನ್ಯವಾದ ಅರ್ಪಿಸುತ್ತೇನೆ. ಆ ಕ್ಷಣ ಪುನರ್ಜನ್ಮ ಅನಿಸುತ್ತೆ ಎಂದು ಭಾವುಕರಾದರು.
ನನಗೆ ಜವಾಬ್ದಾರಿ ಬಹಳ ಇದೆ, ಮಾರ್ಚ್ ನಲ್ಲಿ ಬಜೆಟ್ ಮಂಡನೆ ಮಾಡಬೇಕು. ವಿಡಿಯೋ ಕಾನ್ಫರೆನ್ಸ್ ಮೂಲಕ ಕೆಲಸ ಮಾಡ್ತಿದ್ದೇನೆ. ವೈದ್ಯರು ಇನ್ನೂ ಮೂರು ವಾರಗಳ ಕಾಲ ರೆಸ್ಟ್ ಹೇಳಿದ್ದಾರೆ ಎಂದು ತಿಳಿಸಿದರು.
ಇದೇ ವೇಳೆ ಛಲವಾದಿ ನಾರಾಯಣಸ್ವಾಮಿ ಹೇಳಿಕೆ ವಿಚಾರಕ್ಕೆ ಪ್ರತಿಕ್ರಿಯಿಸಿ, ಕಲ್ಲು ಹೃದಯ ಅಥವಾ ಹೃದಯ ಇಲ್ಲದ ಜನ ಅಂತಲೇ ಹೇಳಬಹುದು. ಅವರ ಆರೋಪಕ್ಕೆ ನಾನು ಉತ್ತರ ಕೊಡಲ್ಲ. ಅವರ ಬುದ್ಧಿ ಹುಡಕಬೇಕಾಗುತ್ತೆ ಎಂದು ಛಲವಾದಿ ನಾರಾಯಣಸ್ವಾಮಿಗೆ ತಿರುಗೇಟು ನೀಡಿದರು.
ಸಂಕ್ರಾಂತಿ ಹಬ್ಬದಂದು ಹಟ್ಟಿಹೊಳಿ ವೀರಭದ್ರೇಶ್ವರ ದೇವಸ್ಥಾನ ಹಾಗೂ ಮಲಪ್ರಭಾ ನದಿ ದಂಡೆಯಲ್ಲಿ ಪುಣ್ಯ ಸ್ಥಾನಕ್ಕೆ ಹೋಬೇಕಿತ್ತು. ಹಾಗಾಗಿ ಪ್ಲ್ಯಾನ್ ಮಾಡಿ ಹೊರಟಿದ್ದೆವು. ತುರ್ತಾಗಿ ಹೊರಟ ಕಾರಣ ಎಸ್ಕಾರ್ಟ್ ಹೇಳಲಿಲ್ಲ ಎಂದು ಲಕ್ಷ್ಮಿ ಹೆಬ್ಬಾಳ್ಕರ್ ತಿಳಿಸಿದರು.
ಹೆಬ್ಬಾಳ್ಕರ್ ಅವರಿಗೆ ಏನಾಗಿತ್ತು?
ಇದೇ ತಿಂಗಳ ಜ.14ರಂದು ಬೆಳಗಾವಿ ಜಿಲ್ಲೆಯ ಕಿತ್ತೂರು ತಾಲೂಕಿನ ಅಂಬಡಗಟ್ಟಿ ಬಳಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ತೆರಳುತ್ತಿದ್ದ ಕಾರು ಅಪಘಾತಕ್ಕೀಡಾಗಿತ್ತು. ಸಚಿವೆ ಪ್ರಾಣಾಪಾಯದಿಂದ ಪಾರಾಗಿ ಆಸ್ಪತ್ರೆಗೆ ದಾಖಲಾಗಿದ್ದರು.
– 30 ವರ್ಷದ ಬಳಿಕ ಕತ್ತಿ ಕುಟುಂಬವನ್ನು ಕೈ ಬಿಟ್ಟ ಕಾರ್ಖಾನೆ
ಬೆಳಗಾವಿ: ದಿಢೀರ್ ಬೆಳವಣಿಗೆಯಲ್ಲಿ ಹೀರಣ್ಯಕೇಶಿ ಸಕ್ಕರೆ ಕಾರ್ಖಾನೆ (Hiranyakeshi Sakkare Karkhane) ಅಧ್ಯಕ್ಷ ಸ್ಥಾನಕ್ಕೆ ಹುಕ್ಕೇರಿ ಶಾಸಕ ನಿಖಿಲ್ ಕತ್ತಿ (Nikhil Katti) ರಾಜೀನಾಮೆ ನೀಡಿದ್ದಾರೆ.
ಹೀರಣ್ಯಕೇಶಿ ಸಹಕಾರಿ ಸಕ್ಕರೆ ಕಾರ್ಖಾನೆಯನ್ನು ಲೀಸ್ ನೀಡುವ ನಿರ್ಧಾರಕ್ಕೆ ಆಡಳಿತ ಮಂಡಳಿಯಲ್ಲಿ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಅಧ್ಯಕ್ಷ ಸ್ಥಾನಕ್ಕೆ ಶಾಸಕ ನಿಖಿಲ್ ಕತ್ತಿ ರಾಜೀನಾಮೆ ನೀಡಿದ್ದಾರೆ ಎನ್ನಲಾಗುತ್ತಿದೆ.
ಕಳೆದ ಸೆಪ್ಟೆಂಬರ್ನಲ್ಲಿ ಹಿರಣ್ಯಕೇಶಿ ಸಕ್ಕರೆ ಕಾರ್ಖಾನೆ ವಾರ್ಷಿಕ ಸರ್ವ ಸಾಧಾರಣ ಸಭೆಯಲ್ಲಿ ಲೀಸ್ ಆಧಾರದಲ್ಲಿ ಖಾಸಗಿಯವರಿಗೆ ನಡೆಸಲು ಕೊಡುವ ಬಗ್ಗೆ ನಿರ್ಧಾರ ಕೈಗೊಳ್ಳಲಾಗಿತ್ತು. ಆದರೆ ಈ ನಿರ್ಧಾರಕ್ಕೆ ಹೆಚ್ಚಿನ ಸಂಖ್ಯೆಯ ಆಡಳಿತ ಮಂಡಳಿ ಸದಸ್ಯರಿಂದ ವಿರೋಧ ವ್ಯಕ್ತವಾಗಿತ್ತು. ಅಂದಿನಿಂದ ಇಲ್ಲಿಯವರೆಗೆ ಲೀಸ್ ನೀಡುವ ಬಗ್ಗೆ ಸಾರ್ವಜನಿಕವಾಗಿ ಹಲವಾರು ಚರ್ಚೆಗಳು ನಡೆದಿದ್ದವು. ರೈತರು ಕಟ್ಟಿರುವ ಸಹಕಾರಿ ಸಕ್ಕರೆ ಕಾರ್ಖಾನೆಯನ್ನು ಲೀಸ್ ನೀಡಬೇಡಿ ಎಂದು ಆಡಳಿತ ಮಂಡಳಿಯ ಸದಸ್ಯರು ಒತ್ತಾಯಿಸಿದ್ದರು.
ಇಷ್ಟು ದಿನಗಳ ಕಾಲ ಕತ್ತಿ ಕುಟುಂಬದಲ್ಲಿ ಹಿಡಿತದಲ್ಲಿದ್ದ ಅಧಿಕಾರದ ಚುಕ್ಕಾಣಿಯನ್ನು ಆಡಳಿತ ಮಂಡಳಿಯವರು ಸದ್ಯ ಟೇಕ್ ಓವರ್ ಮಾಡಿದ್ದು ಸಕ್ಕರೆ ಕಾರ್ಖಾನೆಯಲ್ಲಿನ ದುಂದು ವೆಚ್ಚಗಳ ಕಡಿವಾಣ ಸೇರಿದಂತೆ ಅನವಶ್ಯಕ ಕೆಲಸಗಳಿಗೆ ಬ್ರೇಕ್ ಹಾಕಿ ವ್ಯವಸ್ಥಿತವಾಗಿ ಕಾರ್ಖಾನೆ ನಡೆಸಲು ತೀರ್ಮಾನಿಸಿದ್ದಾರೆ. ಇದನ್ನೂ ಓದಿ: ನಕಲಿ ಫೈನಾನ್ಸ್ ರಿಕವರಿ ಟೀಂನಿಂದ ವಸೂಲಿ ದಂಧೆ – ನಾಲ್ವರು ಆರೋಪಿಗಳ ಬಂಧನ
ಮಾಜಿ ಸಂಸದ ಅಣ್ಣಾಸಾಹೇಬ ಜೊಲ್ಲೆ ಹಾಗೂ ಶಾಸಕ ಬಾಲಚಂದ್ರ ಜಾರಕಿಹೊಳಿ ಮಾರ್ಗದರ್ಶನದಲ್ಲಿ ಕಾರ್ಖಾನೆ ನಡೆಸಲು ಆಡಳಿತ ಮಂಡಳಿ ಸದಸ್ಯರು ತೀರ್ಮಾನಿಸಿದ್ದಾರೆ. ಆಡಳಿತ ಮಂಡಳಿ ಸದಸ್ಯರೆಲ್ಲರೂ ನಿಖಿಲ್ ಕತ್ತಿ ಅವರಿಗೆ ಚುನಾವಣಾ ಸಂದರ್ಭದಲ್ಲಿ ಬೆಂಬಲ ಕೊಡಲು ತೀರ್ಮಾನಿಸಿದ್ದಾರೆ.
ಹೀರಣ್ಯಕೇಶಿ ಸಕ್ಕರೆ ಕಾರ್ಖಾನೆಯ ಮುಂದಿನ ಅಧ್ಯಕ್ಷರಾಗಿ ಮುಖಂಡ ಹುಕ್ಕೇರಿ ಪಟ್ಟಣದ ಅಶೋಕ ಪಟ್ಟಣಶೆಟ್ಟಿ, ಉಪಾಧ್ಯಕ್ಷರಾಗಿ ನೊಗನಿಹಾಳ ಗ್ರಾಮದ ಅಜ್ಜಪ್ಪ ಕಲ್ಲಟ್ಟಿ ಆಯ್ಕೆಯಾಗುವ ಕುರಿತು ಚರ್ಚೆ ನಡೆಯುತ್ತಿದೆ.
ಬೆಳಗಾವಿ: ಸಾಲ ಕಟ್ಟದ್ದಕ್ಕೆ ಖಾಸಗಿ ಫೈನಾನ್ಸ್ ಸಿಬ್ಬಂದಿಯಿಂದ ಒಂದು ತಿಂಗಳು ಮಗು ಸಮೇತ ಬಾಣಂತಿ ಹಾಗೂ ಕುಟಂಬಸ್ಥರನ್ನ ಮನೆಯಿಂದ ಹೊರಕ್ಕೆ ಹಾಕಿ ಮನೆ ಸೀಜ್ ಮಾಡಿರುವ ಅಮಾನವೀಯ ಘಟನೆ ಬೆಳಗಾವಿ ತಾಲೂಕಿನ ತಾರಿಹಾರ ಗ್ರಾಮದಲ್ಲಿ ನಡೆದಿತ್ತು. ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಮತಕ್ಷೇತ್ರದ ತಾರೀಹಾಳ ಗ್ರಾಮದ ಗಣಪತಿ ಲೋಹಾರ ಕುಟುಂಬ ಬೀದಿಗೆ ಬಂದಿತ್ತು. ಇದೀಗ ಎಲ್ಲರೂ ಮತ್ತೆ ಮನೆ ಸೇರಿದ್ದಾರೆ.
ಹೆರಿಗೆಗೆ ಬಂದಿದ್ದ ಗಣಪತಿ ಪುತ್ರಿ ಮಾಧುರಿ ತಂದೆ, ತಾಯಿ, ಮಗಳು ಮೊಮ್ಮಕ್ಕಳನ್ನ ಮನೆಯಿಂದ ನಿರ್ಧಯಿಯಾಗಿ ಫೈನಾನ್ಸ್ ಸಿಬ್ಬಂದಿ ಹೊರಹಾಕಿದ್ದರು. ಮನೆ ಕಟ್ಟಲು ಬೆಳಗಾವಿಯ ಅಪ್ಟುಸ್ ಫೈನಾನ್ಸ್ನಲ್ಲಿ 5 ಲಕ್ಷ ಸಾಲ ಪಡೆದಿದ್ದ ಗಣಪತಿ ಲೋಹಾರ 3.50 ಲಕ್ಷ ರೂ. ಸಾಲ ಮರುಪಾವತಿ ಮಾಡಿದ್ದರು. ಅನಾರೋಗ್ಯ, ಮಗಳ ಹೆರಿಗೆ ಕಾರಣದಿಂದ ಕಂತು ಕಟ್ಟಿರಲಿಲ್ಲ. 7 ಲಕ್ಷಕ್ಕೂ ಅಧಿಕ ಹಣ ಕಟ್ಟು ಅಂತಾ ಹೇಳಿ ಕೋರ್ಟ್ನಿಂದ ಆದೇಶ ತಂದು ಮನೆಗೆ ಬೀಗ ಜಡಿದು ಗೋಡೆ ಮೇಲೆ ಜಪ್ತಿ ನೋಟಿಸ್ ಬರೆದು ಹೋಗಲಾಗಿತ್ತು. ಇದನ್ನೂ ಓದಿ: ಮೈಕ್ರೋ ಫೈನಾನ್ಸ್ ಕಿರುಕುಳ| ಸರ್ಕಾರ ಬದುಕಿದ್ಯಾ.. ಸತ್ತಿದ್ಯಾ?: ಛಲವಾದಿ ನಾರಾಯಣಸ್ವಾಮಿ ಆಕ್ರೋಶ
ಈ ಕುರಿತು ‘ಪಬ್ಲಿಕ್ ಟಿವಿ’ ಬೆಳಗ್ಗಿನಿಂದ ವಿಸ್ತೃತ ವರದಿ ಪ್ರಸಾರ ಮಾಡಿತ್ತು. ವರದಿ ಬೆನ್ನಲ್ಲೇ ಜಿಲ್ಲಾಡಳಿತ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರು ಸಂಬಂಧಿಸಿದವರ ವಿರುದ್ಧ ಕ್ರಮಕ್ಕೆ ಸೂಚಿಸಿದ್ದರು. ಪಬ್ಲಿಕ್ ಟಿವಿ ವರದಿಗೆ ಸ್ಪಂದಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ತನ್ನ ಖಾಸಗಿ ಆಪ್ತ ಸಹಾಯಕರನ್ನ ಕರೆಸಿ ಲೋಹಾರ ಕುಟುಂಬಕ್ಕೆ ಧನ ಸಹಾಯದ ಜೊತೆಗೆ ದಿನಸಿ ಸಹಾಯ ಮಾಡಿದ್ದರು.
ಸಂಬಂಧಿಕರ ಮನೆಗೆ ತೆರಳಿದ್ದ ಕುಟುಂಬಸ್ಥರನ್ನ ಮರಳಿ ಬೆಳಗಾವಿ ತಾಲೂಕಿನ ತಾರಿಹಾಳ ಗ್ರಾಮದ ನಿವಾಸಕ್ಕೆ ಹೆಬ್ಬಾಳ್ಕರ್ ಆಪ್ತರು ಕರೆ ತಂದರು. ‘ಪಬ್ಲಿಕ್ ಟಿವಿ’ ವರದಿ ಬೆನ್ನಲ್ಲೇ ಗಂಭೀರವಾಗಿ ಪರಿಗಣಿಸಿದ್ದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಆಸ್ಪತ್ರೆಯಲ್ಲಿದ್ದರೂ ಘಟನೆ ಕುರಿತು ಮಾಹಿತಿ ಪಡೆದು ಲೋಹಾರ ಕುಟುಂಬಕ್ಕೆ ಸಹಾಯ ಮಾಡಿದ್ದಾರೆ. ಬೀದಿಗೆ ಬಂದ ಕುಟುಂಬಕ್ಕೆ ಸಹಾಯಹಸ್ತ ಚಾಚಿದ ಎಲ್ಲರಿಗೂ ಲೋಹಾರ ಕುಟುಂಬ ಧನ್ಯವಾದ ತಿಳಿಸಿದೆ.
ಬೆಳಗಾವಿ: ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ (Micro Finance) ಕಿರುಕುಳಕ್ಕೆ ಆತ್ಮಹತ್ಯೆ ಸರಣಿ ಮುಂದುವರೆದಿದೆ. ಕಿರುಕುಳ ತಾಳಲಾರದೆ ಬಾವಿಗೆ ಹಾರಿ ಮಹಿಳೆಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಗಾವಿ (Belagavi) ತಾಲೂಕಿನ ಯಮನಾಪುರ ಗ್ರಾಮದ ಹೊರ ವಲಯದಲ್ಲಿ ನಡೆದಿದೆ.
ಹುಕ್ಕೇರಿ (Hukkeri) ತಾಲೂಕಿನ ಶಿರೂರ ಗ್ರಾಮದ ಸರೋಜಾ ಕಿರಬಿ (52) ಆತ್ಮಹತ್ಯೆ ಮಾಡಿಕೊಂಡ ಮಹಿಳೆ. ಫೈನಾನ್ಸ್ನಲ್ಲಿ ಸಬ್ಸಿಡಿ ಎಂದು ಹೇಳಿ ಹೊಳೆಪ್ಪ ದಡ್ಡಿ 2.30 ಲಕ್ಷ ರೂ. ಕೊಡಿಸಿದ್ದ. ಕೊಡಿಸಿದ ಅರ್ಧದಷ್ಟು ಸಾಲ ತನಗೆ ಕೊಟ್ಟರೆ ತಾನೇ ಸಾಲ ಕಟ್ಟುವುದಾಗಿ ಹೇಳಿದ್ದ. ಆದರೆ ಆತನ ನಂಬಿ ಸಾಲ ಪಡೆದು ಅರ್ಧದಷ್ಟು ಹಣವನ್ನು ಸರೋಜಾ ಹೊಳೆಪ್ಪಗೆ ನೀಡಿದ್ದರು. ಅರ್ಧ ಸಾಲ ಕಟ್ಟಿದ ಬಳಿಕ ಫೈನಾನ್ಸ್ನಿಂದ ಪೂರ್ತಿ ಸಾಲ ಕಟ್ಟಲು ಸೂಚನೆ ನೀಡಿದ್ದಾರೆ. ಈ ವೇಳೆ ತಾನೂ ಹಣ ಕಟ್ಟುವುದಿಲ್ಲ, ಸಬ್ಸಿಡಿಯಾಗಿ ಸಾಲ ಪಡೆದಿದ್ದೇನೆ ಎಂದು ಸರೋಜ ಹೇಳಿದ್ದಾರೆ. ತಾವು ಸಬ್ಸಿಡಿ ಸಾಲ ಕೊಟ್ಟಿಲ್ಲ ಪೂರ್ತಿ ಹಣ ಕಟ್ಟಿ ಎಂದು ಫೈನಾನ್ಸ್ ಸಿಬ್ಬಂದಿ ನಿತ್ಯ ಕಿರುಕುಳ ನೀಡಿದ್ದಾರೆ. ಈ ವೇಳೆ ಅರ್ಧ ಸಾಲ ಪಡೆದ ಹೊಳೆಪ್ಪ ಸಹ ಸಾಲ ಕಟ್ಟುವುದಿಲ್ಲವೆಂದು ಕೈ ಎತ್ತಿದ್ದಾನೆ. ಇದನ್ನೂ ಓದಿ: ತುಮುಲ್ ಚುನಾವಣೆಯಲ್ಲಿ ಸಿಎಂ ಬಣ ಮೇಲುಗೈ – ಗುಬ್ಬಿ ಶಾಸಕ ಬಹಿರಂಗ ಅಸಮಾಧಾನ
ಬೆಳಗಾವಿ: ಮಗಳ ಹೊಟ್ಟೆಗೆ ಹೊಡೆದು ಹತ್ಯೆ ಮಾಡಿದ್ದ ಮಲತಾಯಿಯನ್ನು 8 ತಿಂಗಳ ಬಳಿಕ ಬೆಳಗಾವಿ (Belagavi) ಪೊಲೀಸರು (Police) ಬಂಧಿಸಿದ್ದಾರೆ.
ಬಂಧಿತ ಆರೋಪಿಯನ್ನು ಸಪ್ನಾ ನಾವಿ ಎಂದು ಗುರುತಿಸಲಾಗಿದೆ. ಆರೋಪಿ, 4 ವರ್ಷದ ಮಗಳ ಮೇಲೆ ಹಲ್ಲೆ ಮಾಡಿ ಹತ್ಯೆಗೈದು ತಾನೇನೂ ಮಾಡಿಲ್ಲ ಎಂಬಂತೆ ಇದ್ದಳು. ಮರಣೋತ್ತರ ಪರೀಕ್ಷೆಯಲ್ಲಿ ಮಹಿಳೆಯ ಕ್ರೌರ್ಯ ಬೆಳಕಿಗೆ ಬಂದಿದ್ದು, ಮಲತಾಯಿಯ ಅಸಲಿ ಬಣ್ಣ ಬಯಲಾಗಿದೆ. ಇದನ್ನೂ ಓದಿ: ಸರ್ಕಾರಿ ಬಸ್, ಟ್ರ್ಯಾಕ್ಟರ್ ಡಿಕ್ಕಿ – ಓರ್ವ ಯುವತಿ ಸಾವು, 18 ಜನರಿಗೆ ಗಾಯ
2024ರ ಮೇ ತಿಂಗಳಲ್ಲಿ ಸಮೃದ್ಧಿ ರಾಯಣ್ಣ ನಾವಿ (4) ಸಾವನ್ನಪ್ಪಿದ್ದಳು. ಮಗುವಿನ ಅಜ್ಜ ಹಾಗೂ ಅಜ್ಜಿ ಸಪ್ನಾ ನಾವಿ ವಿರುದ್ಧ ಕೊಲೆ ಆರೋಪ ಮಾಡಿದ್ದರು. ಈ ಸಂಬಂಧ ಅಸಹಜ ಸಾವು ಪ್ರಕರಣ ದಾಖಲಾಗಿತ್ತು. ಬಳಿಕ ಮೃತಪಟ್ಟ ಮಗುವಿನ ಶವವನ್ನು ಬಿಮ್ಸ್ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಲಾಗಿತ್ತು. ಇದಾದ ಬೆನ್ನಲ್ಲೇ ಸಪ್ನಾ ನಾವಿ ನಿರೀಕ್ಷಣಾ ಜಾಮೀನು ಪಡೆದಿದ್ದಳು.
ಸದ್ಯ ಮರಣೋತ್ತರ ಪರೀಕ್ಷೆ ವರದಿಯಲ್ಲಿ ಮಗುವಿನ ಹೊಟ್ಟೆಗೆ ಹೊಡೆದು, ಅಥವಾ ಒದ್ದು ಗಾಯಗೊಳಿಸಿ ಕೊಲೆ ಎಂದು ಸಾಬೀತಾಗಿದೆ. ಈ ಹಿನ್ನೆಲೆ ನಿರೀಕ್ಷಣಾ ಜಾಮೀನನ್ನು ರದ್ದು ಮಾಡುವಂತೆ ಪೊಲೀಸರು ನ್ಯಾಯಾಲಯಕ್ಕೆ ಮೇಲ್ಮನವಿ ಸಲ್ಲಿಸಿದ್ದರು. ಜಾಮೀನು ರದ್ದಾಗುತ್ತಿದ್ದಂತೆ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
– ಬಿಜೆಪಿ, ಆರ್ಎಸ್ಎಸ್ ವಿರುದ್ಧ ಹೋರಾಟ ಮಾಡಬೇಕು – ಅಂಬೇಡ್ಕರ್, ಬಾಪೂಜಿ ಆರ್ಎಸ್ಎಸ್ ವಿರೋಧಿಸುತ್ತಿದ್ದರು
ಬೆಳಗಾವಿ: ಬಿಜೆಪಿ (BJP) ಕಾಲದಲ್ಲಿ ಯಾವುದೇ ಅತ್ಯಾಚಾರ ಆಗಿಲ್ವಾ ಎಂದು ಸಿಎಂ ಸಿದ್ದರಾಮಯ್ಯ (Siddaramaiah) ಪ್ರಶ್ನಿಸಿದ್ದಾರೆ.
ಬೆಂಗಳೂರಿನಲ್ಲಿ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿದೆ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ ಎಂಬ ಆರೋಪಕ್ಕೆ ಪ್ರತಿಕ್ರಿಯಿಸಿದ ಅವರು, ಬಿಜೆಪಿ ಅವರ ಕಾಲದಲ್ಲಿ ಅತ್ಯಾಚಾರ ಆಗಿಲ್ವಾ? ಈ ರೀತಿ ಆಗಬಾರದು. ಮಹಿಳೆಯರಿಗೆ ರಕ್ಷಣೆ ಸಿಗಬೇಕು. ಸಮಾಜದಲ್ಲಿ ಸಮಾಜಘಾತುಕ ಶಕ್ತಿಗಳು ಇಂಥ ಕೆಲಸ ಮಾಡುತ್ತವೆ. ಇದರ ಬಗ್ಗೆ ಕಠಿಣ ಕ್ರಮ ಕೈಗೊಳ್ಳುತ್ತೇವೆ ಎಂದರು. ಇದನ್ನೂ ಓದಿ: ಭೂ ಕಬಳಿಸುತ್ತಾ ಬರುತ್ತಿದೆ ಸಮುದ್ರ; ಕಡಲಿನ ಮುಂದೆ ತಾಪಃಹಾರ ಮಂತ್ರ ಪಠಣಕ್ಕೆ ವೇದಿಕೆ ಸಜ್ಜು
ಇನ್ನು ಬೆಳಗಾವಿ ಕಾಂಗ್ರೆಸ್ ಸಮಾವೇಶದಲ್ಲಿ ಮಾತನಾಡಿದ ಅವರು, ಬಿಜೆಪಿ ಮತ್ತು ಆರ್ಎಸ್ಎಸ್ (RSS) ಸಿದ್ಧಾಂತದ ವಿರುದ್ಧ ಹೋರಾಟ ಮಾಡುವ ಕರ್ತವ್ಯ ಪ್ರತಿಯೊಂದು ಕಾಂಗ್ರೆಸ್ ಕಾರ್ಯಕರ್ತರ ಮೇಲಿದೆ. ಆರ್ಎಸ್ಎಸ್ ಸಿದ್ಧಾಂತವೇ ಬಿಜೆಪಿ ಸಿದ್ಧಾಂತ. ಆರ್ಎಸ್ಎಸ್ ಕೈಗೊಂಬೆಯಾಗಿ ಬಿಜೆಪಿ ಕೆಲಸ ಮಾಡುತ್ತಿದೆ. ಒಡಕು ಮತ್ತು ತಾರತಮ್ಯ ಮಾಡುವುದುನ್ನು ಬಿಜೆಪಿ ವ್ಯವಸ್ಥಿತವಾಗಿ ಮಾಡುತ್ತಿದೆ. ಆರ್ಎಸ್ಎಸ್ ಅನ್ನು ಅಂಬೇಡ್ಕರ್, ಬಾಪೂಜಿ, ವಿರೋಧ ಮಾಡುತ್ತಿದ್ದರು. ನಮ್ಮ ದೇಶ ಬಹುತ್ವದ ದೇಶ. ಅನೇಕ ಜಾತಿ, ಧರ್ಮ, ಸಂಸ್ಕೃತಿಗಳಿವೆ. ಎಲ್ಲರನ್ನೂ ಮನುಷ್ಯರಾಗಿ ಕಾಣುವುದು ಅವಶ್ಯ. ಬಿಜೆಪಿ ಅಂಬೇಡ್ಕರ್, ಬಾಪು, ಸಂವಿಧಾನವನ್ನು ವಿರೋಧ ಮಾಡುತ್ತದೆ. ಹೀಗಾಗಿ ಈ ಸಮಾವೇಶ ಆಯೋಜನೆ ಮಾಡಲಾಗಿದೆ. ಸಂವಿಧಾನ, ಬಾಪು, ಅಂಬೇಡ್ಕರ್ ತತ್ವಗಳನ್ನು ಮುಂದಿನ ಪೀಳಿಗೆಗೆ ಉಳಿಸಿಕೊಂಡು ಹೋಗಲು ಈ ಸಮಾವೇಶ ಎಂದು ತಿಳಿಸಿದರು. ಇದನ್ನೂ ಓದಿ: ಹಾವೇರಿ| ಟ್ರ್ಯಾಕ್ಟರ್ಗೆ ಲಾರಿ ಡಿಕ್ಕಿ – ರಸ್ತೆಗೆ ಬಿದ್ದ ಕ್ರೂಡ್ ಆಯಿಲ್ ತುಂಬಿಕೊಳ್ಳಲು ಮುಗಿಬಿದ್ದ ಜನ
ಬಿಜೆಪಿ ಸಂವಿಧಾನ, ಅಂಬೇಡ್ಕರ್ ಬಗ್ಗೆ ಬಹಳಷ್ಟು ಪ್ರೀತಿ ತೋರುತ್ತಿದ್ದಾರೆ. ಆದರೆ ಬಿಜೆಪಿ ಯಾವತ್ತೂ ಅಂಬೇಡ್ಕರ್ ಮತ್ತು ವಿಚಾರಗಳಿಗೆ ವಿರುದ್ಧ. ಬಾಪು ಮತ್ತು ಅಂಬೇಡ್ಕರ್ ವಿಚಾರ ರಕ್ಷಣೆ ಮಾಡಬೇಕು, ಸಂವಿಧಾನ ರಕ್ಷಣೆ ಮಾಡಬೇಕು. ಸಂವಿಧಾನ ಜಾರಿಗೆ ಬಂದಾಗ ಬಿಜೆಪಿ ವಿರೋಧ ಮಾಡಿದೆ. ಬಾಪು, ಅಂಬೇಡ್ಕರ್ ಪ್ರತಿಕೃತಿ ದಹನ ಮಾಡಿದವರು ಬಿಜೆಪಿಯವರು. ಸಂವಿಧಾನ ಜಾರಿ ಮಾಡೋದೆ ನಮ್ಮ ಸಿದ್ಧಾಂತ. ಸಂವಿಧಾನವೇ ನಮ್ಮ ಸಿದ್ಧಾಂತ ಎಂದರು. ಇದನ್ನೂ ಓದಿ: ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಬಂಧನ
ನಮ್ಮ ಅಧಿಕಾರ ಅವಧಿಯಲ್ಲಿ ಬಡವರಿಗೆ, ಎಲ್ಲಾ ಧರ್ಮ, ಜಾತಿಯವರಿಗೆ ಬಲ ನೀಡುವ ಕಾರ್ಯಕ್ರಮ ನೀಡಿದ್ದೇವೆ. ಈಗ 56,000 ಕೋಟಿ ರೂಪಾಯಿಗಳಲ್ಲಿ ಐದು ಗ್ಯಾರಂಟಿ ನೀಡಿದ್ದೇವೆ. ಇದರ ಜೊತೆಗೆ ಅಭಿವೃದ್ಧಿ ಕಾರ್ಯ ಮಾಡುತ್ತಿದ್ದೇವೆ. ಕಾಂಗ್ರೆಸ್ ಮಾತ್ರ ಎಲ್ಲರನ್ನೂ ಒಟ್ಟಿಗೆ ತೆಗೆದುಕೊಂಡು ಹೋಗುತ್ತದೆ. ನಾವು ಯಾರನ್ನೂ ದ್ವೇಷ ಮಾಡಿಲ್ಲ. ಬಿಜೆಪಿ ಮತ್ತು ಆರ್ಎಸ್ಎಸ್ ಸಿದ್ಧಾಂತ ಜನರ ಮನಸ್ಥಿತಿ ಛಿಧ್ರಛಿದ್ರ ಮಾಡುತ್ತದೆ. ಜನರನ್ನು ಹೊಡೆದಾಡುವಂತೆ ಮಾಡುತ್ತದೆ. ಪ್ರಜಾಪ್ರಭುತ್ವದಲ್ಲಿ ಬಿಜೆಪಿಗೆ ನಂಬಿಕೆ ಇಲ್ಲ. ಇಂತಹ ಬಿಜೆಪಿಯನ್ನು ನಾವು ಸೋಲಿಸಬೇಕು. ನಮ್ಮ ಸಿದ್ಧಾಂತ ಗೆದ್ದರೆ ಸಮಾಜದಲ್ಲಿ ಸಮಾನತೆ ಉಳಿಯುತ್ತದೆ. ಆಗ ಮಾತ್ರ ಸಮ ಸಮಾಜ ಕಟ್ಟಬಹುದು ಎಂದು ನುಡಿದರು. ಇದನ್ನೂ ಓದಿ: ವಾಣಿ ವಿಲಾಸ ಸಾಗರ ಜಲಾಶಯ ಭರ್ತಿ – ಯದುವೀರ್ ಒಡೆಯರ್ ಬಾಗಿನ ಅರ್ಪಣೆ
– ಮೋದಿ ಪೂಜಿಸೋದು ಗಾಂಧಿ ಕೊಂದ ಗೋಡ್ಸೆಯನ್ನೇ
– ನಾವು ಬೆಂಕಿ ಇದ್ದಂತೆ, ನಮ್ಮನ್ನ ಕೆಣಕ್ಕಿದ್ರೆ ಸುಟ್ಟು ಹೋಗ್ತೀರಿ
– ಬಿಜೆಪಿ, ಆರ್ಎಸ್ಎಸ್ ವಿರುದ್ಧ ಖರ್ಗೆ ತೀವ್ರ ವಾಗ್ದಾಳಿ
ಬೆಳಗಾವಿ: ಬಿಜೆಪಿ, ಆರ್ಎಸ್ಎಸ್ (BJP, RSS) ವಿರುದ್ಧ ಹೋರಾಡುವ ಶಕ್ತಿ ಇರುವ ಹೆಣ್ಣು ಪ್ರಿಯಾಂಕಾ ಗಾಂಧಿ. ಅವರು ನೋಡಲು ಮೆತ್ತಗೆ ಕಾಣಬಹುದು, ಸ್ವಲ್ಪ ಮುಟ್ಟಿ ನೋಡಿದ್ರೆ ಗೊತ್ತಾಗುತ್ತೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ (Mallikarjun Kharge) ಅವರು ಕಾಂಗ್ರೆಸ್ ಸಂಸದೆಯ ಗುಣಗಾನ ಮಾಡಿದರು.
1924ರಲ್ಲಿ ಮಹಾತ್ಮ ಗಾಂಧೀಜಿ ಅಧ್ಯಕ್ಷತೆಯಲ್ಲಿ ನಡೆದ ಕಾಂಗ್ರೆಸ್ ಅಧಿವೇಶನಕ್ಕೆ ಬೆಳಗಾವಿ ಸಾಕ್ಷಿಯಾಗಿತ್ತು. ಈಗ ಅಧಿವೇಶನದ ಶತಮಾನೋತ್ಸವದ ಭಾಗವಾಗಿ ಸಮಾವೇಶ ನಡೆಯುತ್ತಿದ್ದು, ಇದರ ವೇದಿಕೆ ಕಾರ್ಯಕ್ರಮದಲ್ಲಿ ಖರ್ಗೆ ಅವರು ಮಾತನಾಡಿದರು. ಇದನ್ನೂ ಓದಿ: ಐತಿಹಾಸಿಕ ಸಮಾವೇಶ – ಬೆಳಗಾವಿ ಸುವರ್ಣಸೌಧದ ಎದುರು ಗಾಂಧಿ ಪ್ರತಿಮೆ ಲೋಕಾರ್ಪಣೆ
ಬಿಜೆಪಿ, ಆರ್ಎಸ್ಎಸ್ ವಿರುದ್ಧ ಹೋರಾಡುವ ಶಕ್ತಿ ಇರುವ ಹೆಣ್ಣು ಪ್ರಿಯಾಂಕಾ ಗಾಂಧಿ (Priyanka Gandhi ). ಅವರು ನೋಡಲು ಮೆತ್ತಗೆ ಕಾಣಬಹುದು, ಸ್ವಲ್ಪ ಮುಟ್ಟಿನೋಡಿದ್ರೆ ಗೊತ್ತಾಗುತ್ತೆ. ತಂದೆ ಕಳೆದುಕೊಂಡು ಬೆಳೆದು ಬಂದವರು ಪ್ರಿಯಾಂಕಾ, ಎಂದಿಗೂ ತಮ್ಮ ಕೊರತೆ ತೋರಿಸಲಿಲ್ಲ. ಆದ್ರೆ ಮೋದಿ ಅಮಿತ್ ಶಾ ಅವರ ಚಮಚಾಗಳು ಪ್ರಿಯಾಂಕಾಗೆ ಬೈತಾರೆ. ಹಾಗೆ ಮಾತನಾಡೋದಕ್ಕೆ ಮುಂಚೆ, ನಾವು ಮಾಡಿದ್ದನ್ನು ಅವರು ಮಾಡಿತೋರಿಸಲಿ ಎಂದು ಸವಾಲು ಹಾಕಿದರು. ಇದನ್ನೂ ಓದಿ: ರಾಜ್ಯದಲ್ಲಿ ತೆಂಗು ಬೆಳೆಗಾರರ ಸಮಾವೇಶ – ಅಡಿಕೆ, ಕೊಬ್ಬರಿ ಬೆಳೆಗಾರರ ಸಮಸ್ಯೆ ಪರಿಹಾರದ ಬಗ್ಗೆ ಸಚಿವರ ಚರ್ಚೆ
ಸೋನಿಯಾ ಗಾಂಧಿ ಅವ್ರ ಕೃಪೆಯಿಂದ ಅಧ್ಯಕ್ಷನಾಗಿದ್ದೇನೆ:
ಹೊಸ ವರ್ಷದ ʻಜೈ ಬಾಪು, ಜೈ ಭೀಮ್, ಜೈ ಸಂವಿಧಾನʼ ಕಾರ್ಯಕ್ರಮ ಬೆಳಗಾವಿಯಲ್ಲಿ ನಡೆಯುತ್ತಿದೆ. ವಿರೋಧಿ ಬಣದವರು ಕಾಂಗ್ರೆಸ್ ವಿರುದ್ಧ ಟೀಕೆ ಮಾಡ್ತಿದ್ದಾರೆ. 2004 ರಲ್ಲಿ ಸೋನಿಯಾ ಗಾಂಧಿ ದೇಶದ ಪ್ರಧಾನಿಯಾಗಬೇಕಿತ್ತು. ಆದರೆ ಅವರು ಅಧಿಕಾರ ಸ್ವೀಕರಿಸಿದೇ ಮನಮೋಹನ್ ಸಿಂಗ್ಗೆ ತ್ಯಾಗ ಮಾಡಿದರು. ಸೋನಿಯಾ ಗಾಂಧಿ ಅವರ ಕೃಪೆಯಿಂದ ನಾನು ಎಐಸಿಸಿ ಅಧ್ಯಕ್ಷನಾಗಿದ್ದೇನೆ. ಈಗ ನಾವು ಅಂತಹ ತ್ಯಾಗ ಮಾಡಲು ಸಿದ್ಧರಿದ್ದೀವಾ? ಅಂತ ಪ್ರಶ್ನೆ ಮಾಡಿದರು. ಇದನ್ನೂ ಓದಿ: Kotekar Bank Robbery | ಬ್ಯಾಂಕ್ನಲ್ಲಿ ಚಿನ್ನ ದೋಚಲು ನಮಾಜ್ ಟೈಂ ಸೂಚಿಸಿದ್ದೇ ಆ ಸ್ಥಳೀಯ ವ್ಯಕ್ತಿ – ರಹಸ್ಯ ಸ್ಫೋಟ
ಇಂದಿರಾ ಗಾಂಧಿ, ಸೋನಿಯಾ ಗಾಂಧಿ, ರಾಜೀವ್ ಗಾಂಧಿ, ಮನಮೋಹನ್ ಸಿಂಗ್ ದೇಶಕ್ಕಾಗಿ ಬಹಳಷ್ಟು ತ್ಯಾಗ ಮಾಡಿದ್ದಾರೆ. ಆದ್ರೂ ಬಿಜೆಪಿ ನಾವು ಕೊಟ್ಟ ಕಾರ್ಯಕ್ರಮಗಳನ್ನ ಟೀಕೆ ಮಾಡಿ, ನಮನ್ನ ಹೀಯಾಳಿಸಿ ಅಧಿಕಾರಕ್ಕೆ ಬಂದಿದೆ. ಬಿಜೆಪಿ ಅಧಿಕಾರದಲ್ಲೇ ಇದ್ದರೂ ಸುಮ್ಮನೆ ಮಾತನಾಡುತ್ತಾರೆ ಹೊರತು ಯಾರಿಗೆ ಏನೂ ಮಾಡಿಲ್ಲ. ಏಕೆಂದರೆ ಈ ದೇಶದ ಬಡವರ ಬಗ್ಗೆ ಬಿಜೆಪಿ ಅವರಿಗೆ ಚಿಂತೆ ಇಲ್ಲ, ರೈತರ ಬಗ್ಗೆ ಚಿಂತೆ ಇಲ್ಲ. ಮೋದಿ ಈ ಬಗ್ಗೆ ಎಂದಿಗೂ ಗಮನ ಕೊಟ್ಟಿಲ್ಲ, ಕೋಡೋದೂ ಇಲ್ಲ. ಬಿಜೆಪಿ, ಆರ್ಎಸ್ಎಸ್, ಹಿಂದೂಮಹಾಸಭಾ ಯಾವಾಗಲೂ ದಲಿತ ವಿರೋಧಿಗಳು. ಆದ್ರೆ ಕಾಂಗ್ರೆಸ್ ಯಾವತ್ತಿಗೂ ಬಡವರ ಪರ ಇರುತ್ತದೆ ಎಂದು ನುಡಿದರು.
ಗಾಂಧಿಗೆ ಗುಂಡು ಹಾರಿಸಿ ಕೊಂದಿದ್ದು ಯಾರು?
ಮಹಾತ್ಮ ಗಾಂಧೀಜಿಗೆ ಗುಂಡು ಹಾರಿಸಿ ಕೊಂದದ್ದು ಯಾರು? ಆ ಗೋಡ್ಸೆ ಸಾರ್ವಕರ್ ಶಿಷ್ಯ. ಗಾಂಧಿ ಗುಜರಾತ್ನವರೇ ಆದರೂ ಮೋದಿಗೆ ಗೌರವ ಇಲ್ಲ. ಏಕೆಂದರೆ ಮೋದಿ ಪೂಜೆ ಮಾಡೋದು ಗಾಂಧಿಗೆ ಗುಂಡು ಹಾರಿಸಿದ ಗೋಡ್ಸೆಯನ್ನೇ ಎಂದು ಕುಟುಕಿದರು.
ಅಂಬೇಡ್ಕರ್ ಅವರನ್ನು ಆಯ್ಕೆ ಮಾಡಿದ್ದು ಕಾಂಗ್ರೆಸ್, ಆದ್ರೆ ಸಂವಿಧಾನ ಸುಟ್ಟವರು, ಅಂಬೇಡ್ಕರ್ ಪೋಟೋ ಸುಟ್ಟವರು ಬಿಜೆಪಿಯವರು. ನಮ್ಮನ್ನ ಕೆಣಕಲು ಹೋಗಬೇಡಿ, ನಾವು ಬೆಂಕಿ ಇದ್ದಂತೆ, ನಮ್ಮನ್ನ ಕೆಣಕ್ಕಿದ್ರೆ ನೀವು ಸುಟ್ಟು ಹೋಗ್ತೀರಿ ಎಂದು ಎಚ್ಚರಿಕೆ ಕೊಟ್ಟ ಖರ್ಗೆ ಅವರು, ಈ ದೇಶದ ತಿರಂಗಾ ಆರ್ಎಸ್ಎಸ್ ಕಚೇರಿ ಮೇಲೆ ಇಂದಿಗೂ ಹಾರಿಸಿಲ್ಲ. ಈಗ ಸಂವಿಧಾನ ಅಂತಾರೆ. ಸಂವಿಧಾನ ಸುಟ್ಟೋರು, ಮುಗಿಸೋರು ಬಿಜೆಪಿಯವರಾದ್ರೆ, ಸಂವಿಧಾನವನ್ನ ಎಂದಿಗೂ ಕಾಪಾಡುವವರು ಕಾಂಗ್ರೆಸ್ನವರು ಎಂದು ಹೇಳಿದರು.