Tag: belagavi

  • ದೇವ್ರೇ ಸಿಎಂಗೆ ಒಳ್ಳೆಯ ಬುದ್ಧಿ ಕೊಡು: ರೈತರಿಂದ ದೀರ್ಘದಂಡ ನಮಸ್ಕಾರ

    ದೇವ್ರೇ ಸಿಎಂಗೆ ಒಳ್ಳೆಯ ಬುದ್ಧಿ ಕೊಡು: ರೈತರಿಂದ ದೀರ್ಘದಂಡ ನಮಸ್ಕಾರ

    ಬೆಳಗಾವಿ: ಕಬ್ಬಿನ ಬಾಕಿ ಬೆಲೆಗೆ ಆಗ್ರಹಿಸಿ ರೈತರ ಹೊರಾಟ ತಾರಕಕ್ಕೆ ಏರಿದ ಬೆನ್ನಲ್ಲೇ ಮುಖ್ಯಮಂತ್ರಿ ಕುಮಾರಸ್ವಾಮಿ ಇಂದು ರೈತರ ಸಭೆ ಕರೆದಿದ್ದಾರೆ. ಇತ್ತ ಚಿಕ್ಕೋಡಿಯಲ್ಲಿ ರೈತರು ಸಿಎಂಗೆ ಒಳ್ಳೆಯ ಬುದ್ಧಿ ಕೊಡು ಅಂತ ದೇವರ ಮೊರೆ ಹೋಗಿದ್ದಾರೆ.

    ಕುಮಾರಸ್ವಾಮಿ ರೈತರ ಹದಿನೈದು ವಿವಿಧ ಬೇಡಿಕೆಗಳು ಮತ್ತು ಸಮಸ್ಯೆ ಬಗೆಹರಿಸಲು ಹದಿನೈದು ದಿನಗಳ ಕಾಲ ಸಮಯಾವಕಾಶ ಕೇಳಿದ ಹಿನ್ನೆಲೆಯಲ್ಲಿ ಪ್ರತಿಭಟನಾ ನಿರತ ರೈತರು ದೀರ್ಘ ದಂಡ ನಮಸ್ಕಾರ ಹಾಕಿದ್ದಾರೆ.

    ದೇವರೇ ಸಿಎಂ ಕುಮಾರಸ್ವಾಮಿಗೆ ಒಳ್ಳೆಯ ಬುದ್ಧಿ ಕೊಟ್ಟು ರೈತರ ಸಂಕಷ್ಟ ಬಗೆಹರಿಸಲಿ ಎಂದು ನಮಸ್ಕಾರ ಹಾಕಿದ್ದಾರೆ. ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಮುರಗುಂಡಿ ಗ್ರಾಮದಲ್ಲಿ ಪ್ರತಿಭಟನೆ ನಡೆಸುತ್ತಿರುವ ಇಂದು ಗ್ರಾಮದ ದೇವರಾದ ಮುರಸಿದ್ದೇಶ್ವರ ದೇವಸ್ಥಾನವರೆಗೆ ದೀರ್ಘದಂಡ ನಮಸ್ಕಾರ ಹಾಕಿ ಹರಕೆ ಹೊತ್ತಿದ್ದಾರೆ.

    ಕಳೆದ ನಾಲ್ಕು ದಿನಗಳಿಂದ ಅಹೋರಾತ್ರಿ ಧರಣಿ ನಡೆಸುತ್ತಿರುವ ರೈತರು, ಕಬ್ಬಿನ ಬಾಕಿ ಬಿಲ್ ಗಾಗಿ ಪ್ರತಿಭಟನೆ ನಡೆಸುತ್ತಿದ್ದಾರೆ. ರೈತರ ಪ್ರತಿಭಟನೆ ಇಂದು ಐದನೆ ದಿನಕ್ಕೆ ಮುಂದುವರಿದಿದ್ದು, ಸಿಎಂ ಸಭೆಯಲ್ಲಿ ಈ ಬಗ್ಗೆ ನಿರ್ಧಾರ ಪ್ರಕಟವಾದ ಬಳಿಕವಷ್ಟೆ ಹೋರಾಟದ ರೂಪು ರೇಷೆಗಳು ಏನು ಅನ್ನುವುದು ತಿಳಿದು ಬರಬೇಕಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv
    ಪಬ್ಲಿಕ್ ಟಿವಿ ಆಪ್ ಡೌನ್ ಲೋಡ್ ಮಾಡಿ: play.google.com/publictv
    ಯೂ ಟ್ಯೂಬ್‍ನಲ್ಲಿ ಪಬ್ಲಿಕ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿ: youtube.com/publictvnewskannada
    ಫೇಸ್‍ಬುಕ್‍ನಲ್ಲಿ ಪಬ್ಲಿಕ್ ಟಿವಿಯನ್ನು ಲೈಕ್ ಮಾಡಿ: facebook.com/publictv
    ಟ್ವಿಟ್ಟರ್‌ನಲ್ಲಿ ಪಬ್ಲಿಕ್ ಟಿವಿಯನ್ನು ಫಾಲೋ ಮಾಡಿ: twitter.com/publictvnews

  • ಕಬ್ಬು ಬಾಕಿ ಪಾವತಿ, ಸಾಲಮನ್ನಾಗೆ ಆಗ್ರಹ- ಬೆಂಗಳೂರಿಗೆ ಬಂದಿಳಿದ ಅನ್ನದಾತರು

    ಕಬ್ಬು ಬಾಕಿ ಪಾವತಿ, ಸಾಲಮನ್ನಾಗೆ ಆಗ್ರಹ- ಬೆಂಗಳೂರಿಗೆ ಬಂದಿಳಿದ ಅನ್ನದಾತರು

    – ಬೆಳಗಾವಿಯ ಖಾನಾಪುರ, ಐನಾಪುರದಲ್ಲಿ ಬಂದ್
    – ಇಂದು ಸಚಿವ ಸಂಪುಟ ಸಭೆ

    ಬೆಂಗಳೂರು: ಕಬ್ಬು ಬಾಕಿ ಪಾವತಿ, ಸಾಲಮನ್ನಾಕ್ಕೆ ಆಗ್ರಹಿಸಿ ಹೋರಾಟಕ್ಕಾಗಿ ವಿವಿಧ ಜಿಲ್ಲೆಗಳಿಂದ ರೈತರು ಬೆಂಗಳೂರಿಗೆ ಬಂದಿಳಿದಿದ್ದು, ರೈತಸಂಘದ ನೇತೃತ್ವದಲ್ಲಿ ಇಂದು ವಿಧಾನಸೌಧ ಮುತ್ತಿಗೆ ಹಾಕಲು ನಿರ್ಧರಿಸಿದ್ದಾರೆ.

    ಹೀಗಾಗಿ ಇಂದು ಬೆಂಗಳೂರಲ್ಲಿ ರೈತರ ಹಸಿರು ಹೋರಾಟ ಜೋರಾಗೋ ಸಾಧ್ಯತೆಗಳಿವೆ. ಪ್ರತಿಭಟನೆಯಲ್ಲಿ ಸುಮಾರು 4 ಸಾವಿರಕ್ಕೂ ಹೆಚ್ಚು ರೈತರು ಸೇರುವ ಸಾಧ್ಯತೆ ಇದೆ. ರೈಲ್ವೆ ನಿಲ್ದಾಣದಿಂದ ನೇರವಾಗಿ ವಿಧಾನಸೌಧದತ್ತ ಹೊರಡಲಿದ್ದಾರೆ. ಈ ವೇಳೆ ಪೊಲೀಸರು ರೈತರನ್ನು ತಡೆದು ಫ್ರೀಂಡಂಪಾರ್ಕ್ ನತ್ತ ಕರೆದೊಯ್ಯವ ಸಾಧ್ಯತೆ ಹೆಚ್ಚಾಗಿದೆ. ಹೋರಾಟದ ಬಗ್ಗೆ ಹಗುರವಾಗಿ ಮಾತನಾಡಿದ ಸಿಎಂಗೆ ಬಿಸಿ ಮುಟ್ಟಿಸಲು ಪ್ಲಾನ್ ಮಾಡಿದ್ದಾರೆ.

    ಖಾನಾಪುರ ಬಂದ್ ಗೆ ಕರೆ:
    ಇತ್ತ ಬೆಳಗಾವಿಯ ಖಾನಾಪುರದ ರೈತ ಮಹಿಳೆ ಜಯಶ್ರೀ ಬಗ್ಗೆ ಸಿಎಂ ಹಗುರ ಮಾತಿಗೆ ಖಂಡನೆ ಹಾಗೂ ರೈತ ಅಶೋಕ್ ಯಮಕನಮರಡಿ ಮೇಲೆ ಪೊಲೀಸರ ಹಲ್ಲೆಗೆ ಆಕ್ರೋಶ ವ್ಯಕ್ತವಾಗುತ್ತಿದೆ. ಈ ಹಿನ್ನೆಲೆಯಲ್ಲಿ ಇಂದು ಬೆಳಗಾವಿ ಜಿಲ್ಲೆಯ ಖಾನಾಪುರ ಪಟ್ಟಣ ಬಂದ್‍ಗೆ ಕರೆ ನೀಡಲಾಗಿದೆ. ಮಹಾರಾಷ್ಟ್ರದಿಂದ ಕೈ ಶಾಸಕ ಶ್ರೀಮಂತಪಾಟೀಲ್ ಕಾರ್ಖಾನೆಗೆ ಕಬ್ಬು ಸಾಗಾಟ ತಡೆಯಲು ಹೋದ ರೈತರ ಮೇಲೆ 20 ಜನರಿಂದ ಕಲ್ಲು ತೂರಾಟ ನಡೆದಿದೆ. ರೊಚ್ಚಿಗೆದ್ದ ರೈತರಿಂದ ಕೃಷ್ಣಾ ಕೋ ಆಪರೇಟಿವ್ ಬ್ಯಾಂಕ್‍ನ ಬೋರ್ಡ್‍ಗೆ ಬೆಂಕಿ ಹಂಚಲಾಗಿದೆ. ಒಟ್ಟಿನಲ್ಲಿ ರೈತರ ಕೋಪ ಹೆಚ್ಚಾಗಿದ್ದು, ಖಾನಾಪುರದ ಜೊತೆಗೆ ಅಥಣಿಯ ಐನಾಪುರ ಬಂದ್‍ಗೆ ಕರೆ ಕೊಟ್ಟಿದ್ದಾರೆ.

    ನಾಳೆ ಸಿಎಂ ಮೀಟಿಂಗ್:
    ಬೆಳಗಾವಿಯ ಕಬ್ಬು ಹೋರಾಟಗಾರರ ಪ್ರತಿಭಟನೆಗೆ ಕೊನೆಗೂ ಸಿಎಂ ಕುಮಾರಸ್ವಾಮಿ ಮಣಿದಿದ್ದಾರೆ. ಹೋರಾಟದ ಫಲವಾಗಿ ಸಿಎಂ ಕುಮಾರಸ್ವಾಮಿ ಸಕ್ಕರೆ ಕಾರ್ಖಾನೆ ಮಾಲೀಕರು ಹಾಗೂ ರೈತ ಮುಖಂಡರ ಸಭೆ ಕರೆದಿದ್ದಾರೆ. ನಾಳೆ ವಿಧಾನಸೌಧದಲ್ಲಿ ಮಧ್ಯಾಹ್ನ 3 ಗಂಟೆಗೆ ಸಭೆ ನಡೆಯಲಿದೆ. ಈ ಹಿಂದೆ ಬೆಳಗಾವಿಗೆ ಬಂದು ಸಮಸ್ಯೆ ಆಲಿಸೋದಾಗಿ ಹೇಳಿದ್ದ ಸಿಎಂ, ಕೊನೆ ಕ್ಷಣದಲ್ಲಿ ಪ್ರವಾಸ ರದ್ದು ಮಾಡಿದ್ರು. ಇದ್ರಿಂದ ರೈತರು ರೊಚ್ಚಿಗೆದ್ದ ಹಿನ್ನೆಲೆಯಲ್ಲಿ ನಾಳೆ ಸಭೆ ಕರೆದಿದ್ದಾರೆ. ಬೆಳಗಾವಿಯಲ್ಲಿ ಭಾನುವಾರ ಪ್ರತಿಭಟನೆ ವೇಳೆ ರೈತರ ಮೇಲೆ ದೊಂಬಿ ಕೇಸ್ ಹಾಕಲು ಪೊಲೀಸರು ಮುಂದಾಗಿದ್ರು. ಆದ್ರೆ ನಂತ್ರ ಹಿರೇಬಾಗೇವಾರಿ ಠಾಣೆಯಲ್ಲಿ ನಡೆದ ಸಂಧಾನಸಭೆ ಯಶಸ್ವಿಯಾಗಿದ್ದು, ಕೇಸ್ ಹಾಕದಿರಲು ನಿರ್ಧಾರ ಕೈಗೊಳ್ಳಾಗಿದೆ. ಅದರಂತೆ ರೈತರು ನಾಳೆ ಸಿಎಂ ಕುಮಾರಸ್ವಾಮಿ ಕರೆದಿರುವ ಸಭೆಯಲ್ಲಿ ಭಾಗಿಯಾಗಲು ಸಮ್ಮತಿಸಿದ್ದಾರೆ.

    ಇಂದು ಸಚಿವ ಸಂಪುಟ ಸಭೆ:
    ರೈತರ ತೀವ್ರ ಹೋರಾಟದ ನಡುವೆಯೇ ಇಂದು ಮಹತ್ವದ ಸಚಿವ ಸಂಪುಟ ಸಭೆ ನಡೆಯಲಿದೆ. ವಿಧಾನಸೌಧದಲ್ಲಿ ಮಧ್ಯಾಹ್ನ 12.30ಕ್ಕೆ ಸಿಎಂ ಕುಮಾರಸ್ವಾಮಿ ನೇತೃತ್ವದಲ್ಲಿ ನಡೆಯಲಿರುವ ಸಭೆಯಲ್ಲಿ ಬೆಳಗಾವಿ ರೈತ ಹೋರಾಟವೇ ಪ್ರಮುಖವಾಗಿ ಚರ್ಚೆಯಾಗುವ ಸಾಧ್ಯತೆ ಇದೆ. ಇದಲ್ಲದೆ ರೈತರ ಹಾಗೂ ಹೋರಾಟನಿರತ ರೈತ ಮಹಿಳೆಗೆ ಸಿಎಂ ಬಳಸಿದ ಪದ ಬಳಕೆ ಬಗ್ಗೆ ಚರ್ಚೆ ನಡೆಯುವ ಸಾಧ್ಯತೆ ಇದೆ. ಇತ್ತ ಕಬ್ಬು ಬಾಕಿ ಬೆಲೆಗಾಗಿ ಹೋರಾಡ್ತಿರೋ ರೈತರಿಗೆ ಬಾಕಿ ಕೊಡಿಸುವ ಕುರಿತು ಸಭೆಯಲ್ಲಿ ಮಹತ್ವ ನಿರ್ಧಾರವನ್ನ ಸರ್ಕಾರ ತೆಗೆದುಕೊಳ್ಳುವ ಸಾಧ್ಯತೆ ಇದೆ. ಈಗಾಗಲೇ ಹೋರಾಟನಿರತರನ್ನ ಪೊಲೀಸ್ ಬಂಧಿಸಿದ್ದು, ಕೇಸ್ ಹಾಕುವ ಅಥವಾ ವಾಪಸ್ ಪಡೆಯುವ ವಿಷಯ ಕೂಡಾ ಕ್ಯಾಬಿನೆಟ್‍ನಲ್ಲಿ ಚರ್ಚೆಗೆ ಬರಲಿದೆ. ಇದಲ್ಲದೆ ಮಹದಾಯಿ ನೀರು ಹಂಚಿಕೆ ಕುರಿತು ಪುನರ್ ಪರಿಶೀಲನೆ ಅರ್ಜಿಯಲ್ಲಿ ಮಾರ್ಪಾಡು ಮಾಡುವ ಬಗ್ಗೆಯೂ ಚರ್ಚೆ ನಡೆಯಲಿದೆ ಎಂಬುದಾಗಿ ಮಾಹಿತಿಯೊಂದು ಪಬ್ಲಿಕ್ ಟಿವಿಗೆ ಲಭ್ಯವಾಗಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv
    ಪಬ್ಲಿಕ್ ಟಿವಿ ಆಪ್ ಡೌನ್ ಲೋಡ್ ಮಾಡಿ: play.google.com/publictv
    ಯೂ ಟ್ಯೂಬ್‍ನಲ್ಲಿ ಪಬ್ಲಿಕ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿ: youtube.com/publictvnewskannada
    ಫೇಸ್‍ಬುಕ್‍ನಲ್ಲಿ ಪಬ್ಲಿಕ್ ಟಿವಿಯನ್ನು ಲೈಕ್ ಮಾಡಿ: facebook.com/publictv
    ಟ್ವಿಟ್ಟರ್‌ನಲ್ಲಿ ಪಬ್ಲಿಕ್ ಟಿವಿಯನ್ನು ಫಾಲೋ ಮಾಡಿ: twitter.com/publictvnews

  • ನಾಲ್ಕು ವರ್ಷದಿಂದ ಎಲ್ಲಿ ಮಲಗಿದ್ದೆ- ಪ್ರತಿಭಟನಾ ನಿರತ ಮಹಿಳೆಗೆ ಏಕವಚನದಲ್ಲಿ ಸಿಎಂ ಕಿಡಿ

    ನಾಲ್ಕು ವರ್ಷದಿಂದ ಎಲ್ಲಿ ಮಲಗಿದ್ದೆ- ಪ್ರತಿಭಟನಾ ನಿರತ ಮಹಿಳೆಗೆ ಏಕವಚನದಲ್ಲಿ ಸಿಎಂ ಕಿಡಿ

    ಬೆಂಗಳೂರು: ನಾಲ್ಕು ವರ್ಷದಿಂದ ಎಲ್ಲಿ ಮಲಗಿದ್ದೆ ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಕಬ್ಬಿಗೆ ಬೆಂಬಲ ಬೆಲೆ ನಿಗದಿಪಡಿಸುವ ವಿಚಾರಕ್ಕೆ ಪ್ರತಿಭಟನೆ ನಡೆಸುತ್ತಿದ್ದ ಮಹಿಳೆಯನ್ನು ಖಾರವಾಗಿ ಪ್ರಶ್ನಿಸಿದ್ದಾರೆ.

    ಕಬ್ಬಿಗೆ ಬೆಂಬಲ ಬೆಲೆ ನೀಡುವಂತೆ ಬೆಳಗಾವಿಯಲ್ಲಿ ನಡೆಯುತ್ತಿರುವ ಪ್ರತಿಭಟನೆಗೆ ಪ್ರತಿಕ್ರಿಯಿಸಿದ ಅವರು, ಮತ ಹಾಕುವಾಗ ಕುಮಾರಸ್ವಾಮಿ ನೆನಪಿಗೆ ಬಂದಿರಲಿಲ್ಲ. ಈಗ ಹಣ ಕೊಡಿ ಎಂದು ಪ್ರತಿಭಟನೆ ಮಾಡುವುದಕ್ಕೆ ಬಂದಿದ್ದೀಯಾ. ಹಾಗಾದರೆ ನಾಲ್ಕು ವರ್ಷ ಎಲ್ಲಿ ಮಲಗಿದ್ದೆ? ಈವಾಗ ಇದರ ಬಗ್ಗೆ ಅರಿವು ಬಂದಿದ್ಯಾ ಎಂದು ರೈತ ಮಹಿಳೆಗೆ ಏಕ ವಚನದಲ್ಲೇ ಕಿಡಿಕಾರಿದರು.

    ಸುವರ್ಣಸೌಧಕ್ಕೆ ರೈತರ ಮುತ್ತಿಗೆ ಹಾಕಿದ ವಿಚಾರಕ್ಕೆ ಪ್ರತಿಕ್ರಿಯಿಸಿ, ಸುವರ್ಣಸೌಧಕ್ಕೆ ಲಾರಿ ನುಗ್ಗಿಸಿದವರು ರೈತರಲ್ಲ. ರೈತರು ಸಹನಾ ಮೂರ್ತಿಗಳು. ಅವರುಗಳು ಇಂತಹ ಕೆಲಸವನ್ನು ಮಾಡುವುದಿಲ್ಲ. ರೈತರು ಕೃಷಿಯನ್ನು ದೇವರೆಂದು ಆರಾಧಿಸುವವರು. ಅಲ್ಲಿ ಹೋರಾಟ ಮಾಡುತ್ತಿರುವವರು ರೈತ ಎಂಬ ಪದಕ್ಕೆ ಅವಮಾನ ಮಾಡುತ್ತಿದ್ದಾರೆ. ದರೋಡೆ ಮಾಡುವವರು ಬೀಗ ಒಡೆಯುತ್ತಾರೆ. ಅಲ್ಲಿ ಬೀಗ ಒಡೆದವರು ರೈತರಲ್ಲ. ನನ್ನ ತಾಳ್ಮೆಗೂ ಒಂದು ಮಿತಿ ಇದೆ. ನನ್ನ ಸರ್ಕಾರ ಇದಕ್ಕೆ ಅವಕಾಶ ನೀಡುವುದಿಲ್ಲವೆಂದು ಗುಡುಗಿದರು.

    ಸುವರ್ಣಸೌಧದ ಗೇಟ್ ಮುರಿದವರ ಮೇಲೆ ಕ್ರಮ ಕೈಗೊಳ್ಳುತ್ತೇನೆ. ರೈತರ ಹೆಸರು ಬಳಸಿ ಹೀಗೆ ಮಾಡಿದರೆ ನಾನು ಸಹಿಸುವುದಿಲ್ಲ. ಇಂತಹ ಪ್ರತಿಭಟನೆಗಳನ್ನು ಮಾಡಿಸುತ್ತಿರುವವರು ಮಾಧ್ಯಮದವರು. ಅವರಿಗೆ ಸದಾ ಸುದ್ದಿ ಬೇಕು ಅಂತಾ ಪ್ರತಿಭಟನೆ ಮಾಡುತ್ತಿದ್ದಾರೆಂದು ಮಾಧ್ಯಮಗಳ ವಿರುದ್ಧ ಕಿಡಿಕಾರಿದರು.

    ಏನಿದು ಪ್ರತಿಭಟನೆ?
    ಕಬ್ಬು ಬೆಳೆಗಾರರ ಜೊತೆ ಬೆಳಗಾವಿಯಲ್ಲಿ ಸೋಮವಾರ ನಿಗದಿಯಾಗಿದ್ದ ಸಭೆಯನ್ನು ಏಕಾಏಕಿ ರದ್ದುಗೊಳಿಸಲಾಗಿತ್ತು. ಇದರಿಂದ ರೊಚ್ಚಿಗೆದ್ದ ರೈತರು ಕಬ್ಬು ತುಂಬಿದ್ದ ಲಾರಿಗಳ ಸಮೇತ ಸುವರ್ಣ ಸೌಧದ ಬಳಿ ಹಾಜರಾಗಿದ್ದರು. ರೈತರ ದಿಢೀರ್ ಹೋರಾಟದಿಂದ ಕೆಲವೇ ಸಂಖ್ಯೆಯಲ್ಲಿದ್ದ ಪೊಲೀಸರು, ಸಾಕಷ್ಟು ಸಂಖ್ಯೆಯಲ್ಲಿದ್ದ ರೈತರನ್ನ ತಡೆಯಲು ಹರಸಾಹಸ ಪಟ್ಟರು. ಸುವರ್ಣಸೌಧದ ಗೇಟ್ ಬಂದ್ ಮಾಡಿದ ಬಳಿಕವೂ ಶಾಂತರಾಗದ ರೈತರು ಕಲ್ಲಿನಿಂದ ಗೇಟ್ ಬಾಗಿಲು ಮುರಿಯಲು ಯತ್ನಿಸಿದ್ದರು. ಅಲ್ಲದೇ ಗೇಟ್ ಕೀ ಯನ್ನು ಪೊಲೀಸರಿಂದ ಕಿತ್ತುಕೊಳ್ಳುವ ಪ್ರಯತ್ನವೂ ನಡೆಸಿದ್ದರು. ಈ ಕುರಿತು ಮಾಹಿತಿ ಪಡೆದು ಸ್ಥಳಕ್ಕೆ ಆಗಮಿಸಿದ ಹೆಚ್ಚುವರಿ ಪೊಲೀಸರು ಕೂಡ ರೈತರನ್ನು ನಿಯಂತ್ರಣ ಮಾಡಲು ವಿಫಲರಾಗಿದ್ದರು. ಸುವರ್ಣ ಸೌಧದ ಗೇಟ್ ಮುಂಭಾಗದಲ್ಲೂ ಲಾರಿಗಳನ್ನು ನಿಲ್ಲಿಸಿ, ಕಬ್ಬನ್ನು ರಸ್ತೆಗೆ ಸುರಿದು ಆಕ್ರೋಶ ವ್ಯಕ್ತಪಡಿಸಿದ್ದರು.

    ಈ ವೇಳೆ ಪಬ್ಲಿಕ್ ಟಿವಿಯೊಂದಿಗೆ ಮಾತನಾಡಿದ ರೈತ ಮಹಿಳೆಯೊಬ್ಬರು, ಸಿಎಂ ಕುಮಾರಸ್ವಾಮಿ ಅವರು ಸಕ್ಕರೆ ಕಾರ್ಖಾನೆ ಮಾಲೀಕರ ಒತ್ತಡಕ್ಕೆ ಮಣಿದಿದ್ದರಾ? ಸುಮಾರು 200 ವಾಹನಗಳ ಮೂಲಕ ಸುವರ್ಣ ಸೌಧಕ್ಕೆ ಮುತ್ತಿಗೆ ಹಾಕಲಾಗುವುದು. ಸಿಎಂ ನಾಳೆ ಸುವರ್ಣಸೌಧಕ್ಕೆ ಆಗಮಿಸಬೇಕು. ಇಲ್ಲವಾದರೆ ನಮ್ಮ ಹೋರಾಟ ತೀವ್ರವಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.

     

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv
    ಪಬ್ಲಿಕ್ ಟಿವಿ ಆಪ್ ಡೌನ್ ಲೋಡ್ ಮಾಡಿ: play.google.com/publictv
    ಯೂ ಟ್ಯೂಬ್‍ನಲ್ಲಿ ಪಬ್ಲಿಕ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿ: youtube.com/publictvnewskannada
    ಫೇಸ್‍ಬುಕ್‍ನಲ್ಲಿ ಪಬ್ಲಿಕ್ ಟಿವಿಯನ್ನು ಲೈಕ್ ಮಾಡಿ: facebook.com/publictv
    ಟ್ವಿಟ್ಟರ್‌ನಲ್ಲಿ ಪಬ್ಲಿಕ್ ಟಿವಿಯನ್ನು ಫಾಲೋ ಮಾಡಿ: twitter.com/publictvnews

  • ಬೆಳಗಾವಿ ಡಿಸಿ ಕಚೇರಿ ಎದುರು ರೈತರಿಂದ ಅಹೋರಾತ್ರಿ ಧರಣಿ – ಇತ್ತ ಮುಧೋಳ ಬಂದ್‍ಗೆ ಕರೆ

    ಬೆಳಗಾವಿ ಡಿಸಿ ಕಚೇರಿ ಎದುರು ರೈತರಿಂದ ಅಹೋರಾತ್ರಿ ಧರಣಿ – ಇತ್ತ ಮುಧೋಳ ಬಂದ್‍ಗೆ ಕರೆ

    ಬೆಳಗಾವಿ: ಕಬ್ಬಿನ ಬಾಕಿ ಪಾವತಿ, ದರ ನಿಗದಿಗೆ ಆಗ್ರಹಿಸಿ ಬೆಳಗಾವಿ ಜಿಲ್ಲಾಧಿಕಾರಿ ಕಚೇರಿ ಎದುರು ರೈತರಿಂದ ಅಹೋರಾತ್ರಿ ಧರಣಿ ತೀವ್ರವಾಗಿದೆ.

    ರೈತರ ಸಮಸ್ಯೆಗಳಿಗೆ ಜಿಲ್ಲಾಡಳಿತ ಸರಿಯಾಗಿ ಸ್ಪಂದಿಸದ ಹಿನ್ನೆಲೆಯಲ್ಲಿ ಹೋರಾಟ ತೀವ್ರವಾಗಿದೆ. ಅಲ್ಲದೇ ಉತ್ತರ ಕರ್ನಾಟಕ ಭಾಗದ ಎಲ್ಲಾ ರೈತರನ್ನು ಸೇರಿಸಿಕೊಂಡು ಬೃಹತ್ ಪ್ರತಿಭಟನೆ ನಡೆಸಲಾಗುತ್ತಿದೆ.

    ಕಾರ್ಖಾನೆಗಳಿಂದ ಕಬ್ಬಿನ ಬಾಕಿ ಕೊಡಿಸುವಲ್ಲಿ ಜಿಲ್ಲಾಡಳಿತ ವಿಫಲವಾಗಿದೆ. ಈ ಹಿನ್ನೆಲೆಯಲ್ಲಿ ತಡರಾತ್ರಿ ಸಕ್ಕರೆ ಕಾರ್ಖಾನೆಗೆ ಕಬ್ಬು ತುಂಬಿಕೊಂಡು ಹೋಗ್ತಿದ್ದ ಟ್ರ್ಯಾಕ್ಟ ರನ್ನೂ ಕೂಡ ರೈತರು ತಡೆದಿದ್ದಾರೆ. ಇದಕ್ಕೆ ಸಂಬಂಧಿಸಿದಂತೆ ಕಬ್ಬಿನ ಬಾಕಿ ಪಾವತಿಗೆ ಆಗ್ರಹಿಸಿ ಇಂದು ಬಾಗಲಕೋಟೆಯ ಮುಧೋಳ ಬಂದ್‍ಗೆ ಕರೆ ನೀಡಲಾಗಿದೆ.

    ಈ ಬಗ್ಗೆ ಪಬ್ಲಿಕ್ ಟಿವಿ ಜೊತೆ ರೈತರೊಬ್ಬರು ಮಾತನಾಡಿ, ಯಾವುದೂ ಗೊತ್ತಿಲ್ಲದ ಒಬ್ಬ ಜಿಲ್ಲಾಧಿಕಾರಿಯನ್ನು ಇಲ್ಲಿ ತಂದು ಹಾಕಿದ್ದಾರೆ. ಈ ಹಿಂದೆ ಸುವರ್ಣ ಸೌಧದಲ್ಲಿಯೂ ಪ್ರತಿಭಟನೆ ನಡೆಸಿದ್ದೆವು. ಈ ವೇಳೆ ಒಂದು ವಾರದೊಳಗೆ ಬಾಗಲಕೋಟೆ, ಬೆಳಗಾವಿಯ ಕಬ್ಬು ಬೆಳೆಗಾರರಿಗೆ ಬೆಲೆ ನಿಗದಿ ಮಾಡುತ್ತೇನೆ ಅಂತ ಭರವಸೆ ಕೊಟ್ಟಿದ್ದರು. ಆದ್ರೆ ಇದೀಗ ಸಿಎಂ ಭರವಸೆ ನೀಡಿ 2 ತಿಂಗಳಾದ್ರೂ ಎಲ್ಲಿ ಯಾವ ರೈತರಿಗೆ ತೊಂದ್ರೆಯಾಗುತ್ತದೆ ಎಂಬುದನ್ನು ನೋಡಿಲ್ಲ. ಹೀಗಾಗಿ ದಯವಿಟ್ಟು ರೈತರ ಕಷ್ಟವನ್ನು ಅರ್ಥ ಮಾಡಿಕೊಳ್ಳಿ ಅಂತ ಮನವಿ ಮಾಡಿಕೊಂಡರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv
    ಪಬ್ಲಿಕ್ ಟಿವಿ ಆಪ್ ಡೌನ್ ಲೋಡ್ ಮಾಡಿ: play.google.com/publictv
    ಯೂ ಟ್ಯೂಬ್‍ನಲ್ಲಿ ಪಬ್ಲಿಕ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿ: youtube.com/publictvnewskannada
    ಫೇಸ್‍ಬುಕ್‍ನಲ್ಲಿ ಪಬ್ಲಿಕ್ ಟಿವಿಯನ್ನು ಲೈಕ್ ಮಾಡಿ: facebook.com/publictv
    ಟ್ವಿಟ್ಟರ್‌ನಲ್ಲಿ ಪಬ್ಲಿಕ್ ಟಿವಿಯನ್ನು ಫಾಲೋ ಮಾಡಿ: twitter.com/publictvnews

  • ಟಿಪ್ಪು ಸುಲ್ತಾನ್‍ರಿಂದ ಮೈಸೂರಿನ ಮಹಾರಾಜರಿಗೆ ಭಾರೀ ಕೆಡುಕಾಗಿದೆ: ಮೈಸೂರು ರಾಜಮಾತೆ

    ಟಿಪ್ಪು ಸುಲ್ತಾನ್‍ರಿಂದ ಮೈಸೂರಿನ ಮಹಾರಾಜರಿಗೆ ಭಾರೀ ಕೆಡುಕಾಗಿದೆ: ಮೈಸೂರು ರಾಜಮಾತೆ

    ಬೆಳಗಾವಿ: ಟಿಪ್ಪು ಸುಲ್ತಾನ್ ಕಾಲಾವಧಿಯಲ್ಲಿ ಮೈಸೂರಿನ ಮಹಾರಾಜರಿಗೆ ಭಾರಿ ಕೆಡುಕಾಗಿತ್ತೆಂದು ರಾಜಮಾತೆ ಪ್ರಮೋದಾ ದೇವಿ ಹೇಳಿದ್ದಾರೆ.

    ಟಿಪ್ಪು ಜಯಂತಿ ಆಚರಣೆ ಕುರಿತು ಇದೇ ಮೊದಲ ಬಾರಿಗೆ ಪಬ್ಲಿಕ್ ಟಿವಿಯೊಂದಿಗೆ ಮಾತನಾಡಿದ ಅವರು, ಟಿಪ್ಪು ಸುಲ್ತಾನನ ಆಕ್ರಮಣಗಳ ಕುರಿತು ಇತಿಹಾಸದಲ್ಲೇ ಉಲ್ಲೇಖವಾಗಿದೆ. ಅವರ ಕಾಲದಲ್ಲಿ ರಾಣಿ ಲಕ್ಷ್ಮಮ್ಮಣ್ಣಿ ದೇವಿಯವರನ್ನು ಶ್ರೀರಂಗಪಟ್ಟಣದ ಜನನ ಮಂಟಪದಲ್ಲಿ ನಿರ್ಬಂಧ ರೂಪದಲ್ಲಿ ಇಟ್ಟಿದ್ದರು. ಟಿಪ್ಪು ಸುಲ್ತಾನ್ ರಿಂದ ಮೈಸೂರಿನ ಮಹಾಜರಿಗೆ ಭಾರಿ ಕೆಡುಕಾಗಿದೆ ಎಂದು ನಮ್ಮ ಹಿರಿಯರಿಂದ ಕೇಳಿ ತಿಳಿದಿದ್ದೇನೆ ಎಂದು ಹೇಳಿದ್ದಾರೆ.

    ಟಿಪ್ಪು ದಾಳಿಯಿಂದ ಮೈಸೂರು ಮಹಾರಾಜರಿಗೆ ಭಾರಿ ದುಃಖವಾಗಿತ್ತು. ಅಲ್ಲದೇ ದೀಪಾವಳಿ ದಿನದಂದೇ ಟಿಪ್ಪು ಐಯ್ಯಂಗಾರ್ ಸಮುದಾಯದ ಮೇಲೆ ಸಾಮೂಹಿಕ ನರಮೇಧ ನಡೆಸಿದ್ದ, ಹೀಗಾಗಿ ಇಂದಿಗೂ ಮೈಸೂರಿನ ಭಾಗದಲ್ಲಿ ಈ ಪಂಗಡದವರು ದೀಪಾವಳಿಯನ್ನು ಆಚರಣೆಯನ್ನು ಮಾಡುವುದಿಲ್ಲ. ಮುಮ್ಮಡಿ ಚಿಕ್ಕರಾಜ ಒಡೆಯರ್ ಕಾಲದಲ್ಲಿ ಟಿಪ್ಪು ರಾಜಮನೆತನದವರನ್ನು ಬಂಧನ ಮಾಡಿದ್ದರು. ಹೀಗಿದ್ದರೂ ನೋವುಂಟು ಮಾಡಿದವರ ಬಗ್ಗೆ ಮಾತನಾಡಬಾರದೆಂದು ನಮ್ಮ ಹಿರಿಯರು ನಮಗೆ ಹೇಳಿಕೊಟ್ಟಿದ್ದಾರೆ. ಹೀಗಾಗಿ ಟಿಪ್ಪು ವಿರುದ್ಧ ಯಾವುದೇ ಹೇಳಿಕೆ ನೀಡುವುದಿಲ್ಲವೆಂದು ತಿಳಿಸಿದರು.

    ಇದೇ ವೇಳೆ ರಾಜ್ಯ ಸರ್ಕಾರದ ಟಿಪ್ಪು ಆಚರಣೆ ಕುರಿತು ಮಾತನಾಡಿ, ಒಬ್ಬ ನಾಗರೀಕಳಾಗಿ ನಾನು ಈ ಬಗ್ಗೆ ಸರ್ಕಾರವನ್ನು ಪ್ರಶ್ನಿಸುವುದಿಲ್ಲ. ಜಯಂತಿ ವಿಚಾರದ ಬಗ್ಗೆ ಏನನ್ನು ಮಾತನಾಡುವುದಿಲ್ಲ. ಟಿಪ್ಪುವಿನ ವಿರುದ್ಧ ಯಾವುದೇ ಮಾತುಗಳನ್ನಾಡಲು ಇಷ್ಟಪಡುವುದಿಲ್ಲವೆಂದು ಸ್ಪಷ್ಟಪಡಿಸಿದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv
    ಪಬ್ಲಿಕ್ ಟಿವಿ ಆಪ್ ಡೌನ್ ಲೋಡ್ ಮಾಡಿ: play.google.com/publictv
    ಯೂ ಟ್ಯೂಬ್‍ನಲ್ಲಿ ಪಬ್ಲಿಕ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿ: youtube.com/publictvnewskannada
    ಫೇಸ್‍ಬುಕ್‍ನಲ್ಲಿ ಪಬ್ಲಿಕ್ ಟಿವಿಯನ್ನು ಲೈಕ್ ಮಾಡಿ: facebook.com/publictv
    ಟ್ವಿಟ್ಟರ್‌ನಲ್ಲಿ ಪಬ್ಲಿಕ್ ಟಿವಿಯನ್ನು ಫಾಲೋ ಮಾಡಿ: twitter.com/publictvnews

  • ಯುವತಿ ಜೊತೆ ಒಡನಾಟ – ಸೆಲ್ಫಿ ವಿಡಿಯೋ ಮಾಡಿ ಯುವಕ ಆತ್ಮಹತ್ಯೆ

    ಯುವತಿ ಜೊತೆ ಒಡನಾಟ – ಸೆಲ್ಫಿ ವಿಡಿಯೋ ಮಾಡಿ ಯುವಕ ಆತ್ಮಹತ್ಯೆ

    ಬೆಳಗಾವಿ: ಯುವತಿ ಜೊತೆ ಒಡನಾಟ ಹೊಂದಿದ್ದಕ್ಕೆ ಆಕೆಯ ಸಂಬಂಧಿಕರು ಹಣದ ಬೇಡಿಕೆಯಿಟ್ಟು ಯುವಕನಿಗೆ ಕಿರುಕುಳ ನೀಡಿದ್ದಕ್ಕೆ ಆತ ಸೆಲ್ಫಿ ವಿಡಿಯೋ ಮಾಡಿ ಕೀಟನಾಶಕ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೈಲಹೊಂಗಲ ತಾಲೂಕಿನಲ್ಲಿ ನಡೆದಿದೆ.

    ತಾಲೂಕಿನ ಕೊರಿಕೊಪ್ಪ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಯುವಕ ಸಾವಿನ ನಂತರ ಈ ಸೆಲ್ಫಿ ವಿಡಿಯೋ ವೈರಲ್ ಆಗಿದೆ. ಮೃತ ಯುವಕ ಮಹಾಂತೇಶ್ ಏಣಗಿ ಅದೇ ಗ್ರಾಮದ ಯುವತಿ ಜೊತೆ ಒಡನಾಟ ಹೊಂದಿದ್ದನು.

    ನಮ್ಮ ಮಗಳ ಜೊತೆ ಹೇಗೆ ಮಾತನಾಡಿದೆ ಎಂದು ಆರೋಪಿಗಳಾದ ಗುಳಪ್ಪಾ, ವೀರಭದ್ರ ಹಾಗೂ ನಾಗಪ್ಪ ಹೊಳಿ ಮೂವರು ಸೇರಿ ಮಹಾಂತೇಶ್ ಮೇಲೆ ಹಲ್ಲೆ ಮಾಡಿದ್ದಾರೆ. ಯುವತಿಯ ಸಂಬಂಧಿಕರಿಂದ 7 ಲಕ್ಷ ರೂ. ದಂಡ ರೂಪವಾಗಿ ವಸೂಲಿ ಮಾಡಿದ್ದಾರೆ. ಆದಾದ ಮೇಲೆ ಮತ್ತೆ 3 ಲಕ್ಷ ರೂ. ಕೊಡುವಂತೆ ಬೆದರಿಕೆ ಹಾಕಿದ್ದಾರೆ.

    ಮಹಾಂತೇಶ್ ಬೆಳೆದ ಹತ್ತಿಯನ್ನು ಮಾರಾಟ ಮಾಡಿ ಹಣವನ್ನು ಯುವತಿಯ ಸಂಬಂಧಿಕರಿಗೆ ನೀಡಿದ್ದನು. ಇದೀಗ ಯುವತಿ ಮನೆಯವರು ಮತ್ತಷ್ಟು ಹಣದ ಬೇಡಿಕೆ ಇಟ್ಟಿದ್ದು, ಇದರಿಂದ ಬೇಸತ್ತ ಮಹಾಂತೇಶ್ ತನಗಾದ ಅನ್ಯಾಯ ಹೇಳಿಕೊಂಡು ಕ್ರಿಮಿನಾಶಕ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

    ಸದ್ಯ ಈ ಬಗ್ಗೆ ಬೈಲಹೊಂಗಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಳು ತಲೆ ಮರೆಸಿಕೊಂಡಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv
    ಪಬ್ಲಿಕ್ ಟಿವಿ ಆಪ್ ಡೌನ್ ಲೋಡ್ ಮಾಡಿ: play.google.com/publictv
    ಯೂ ಟ್ಯೂಬ್‍ನಲ್ಲಿ ಪಬ್ಲಿಕ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿ: youtube.com/publictvnewskannada
    ಫೇಸ್‍ಬುಕ್‍ನಲ್ಲಿ ಪಬ್ಲಿಕ್ ಟಿವಿಯನ್ನು ಲೈಕ್ ಮಾಡಿ: facebook.com/publictv
    ಟ್ವಿಟ್ಟರ್‌ನಲ್ಲಿ ಪಬ್ಲಿಕ್ ಟಿವಿಯನ್ನು ಫಾಲೋ ಮಾಡಿ: twitter.com/publictvnews

  • ಪಕ್ಷ ಯಾವುದಿದ್ರೂ ಅನಂತಕುಮಾರ್ ಸ್ನೇಹ ಅಜರಾಮರ : ಉಮೇಶ್ ಕತ್ತಿ

    ಪಕ್ಷ ಯಾವುದಿದ್ರೂ ಅನಂತಕುಮಾರ್ ಸ್ನೇಹ ಅಜರಾಮರ : ಉಮೇಶ್ ಕತ್ತಿ

    ಬೆಳಗಾವಿ: ಕೇಂದ್ರ ಸಚಿವ ಅನಂತಕುಮಾರ್ ನಿಧನಕ್ಕೆ ಬಿಜೆಪಿ ಮುಖಂಡ ಹಾಗೂ ಹುಕ್ಕೇರಿ ಕ್ಷೇತ್ರದ ಬಿಜೆಪಿ ಶಾಸಕ ಉಮೇಶ ಕತ್ತಿ ಸಂತಾಪ ಸೂಚಿಸಿದ್ದಾರೆ. ಬೆಳಗಾವಿ ಜಿಲ್ಲೆಯ ಹುಕ್ಕೇರಿ ಪಟ್ಟಣದಲ್ಲಿ ಅನಂತಕುಮಾರ್ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದರು.

    ಈ ವೇಳೆ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ನಾನು ಅನಂತಕುಮಾರ್ ತುಂಬಾ ಆತ್ಮೀಯರಾಗಿದ್ದೇವು. ಸಾಕಷ್ಟು ಬಾರಿ ರೈಲಿನಲ್ಲಿ ಇಬ್ಬರು ಕುಳಿತು ಜೋಳದ ರೊಟ್ಟಿ ಊಟ ಸವಿಯುತ್ತಿದ್ದೇವು. ಉತ್ತರ ಕರ್ನಾಟಕದ ಬಗ್ಗೆ ಅವರು ಆತ್ಮವಿಶ್ವಾಸದ ಮಾತನಾಡುತ್ತಿದ್ದರು. ಮೊದಲು ನಮ್ಮ ಪಕ್ಷಗಳು ಬೇರೆ ಇದ್ದರು ನನ್ನ ಹಾಗೂ ಅವರ ಸ್ನೇಹ ಅಜರಾಮರ. ಅನಂತಕುಮಾರ್ ಅವರ ಅಗಲಿಕೆ ಬಿಜೆಪಿ ಪಕ್ಷಕ್ಕೆ ತುಂಬಲಾರದ ಹಾನಿಯಾಗಿದೆ ಎಂದರು.

    ರಾಜ್ಯದಲ್ಲಿ ಬಿಜೆಪಿ ಪಕ್ಷವನ್ನ ಒಳ್ಳೆಯ ರೀತಿಯಲ್ಲಿ ಕಟ್ಟಿದ್ದರು. ರಾಜ್ಯದ ಹೆಸರನ್ನ ರಾಷ್ಟ್ರಮಟ್ಟದಲ್ಲಿ ತಂದರು. ತನ್ನ ತಂದೆ ತಾಯಿಗೆ ಆದಂತ ಕಷ್ಟ ಬೇರೆ ಯಾರಿಗೂ ಆಗದಿರಲಿ ಎಂದು ಜೆನೆರಿಕ್ ಔಷಧಿ ಯೋಜನೆ ತಂದರು. ಆದರೆ ಅವರು ಕ್ಯಾನ್ಸರ್ ರೋಗಕ್ಕೆ ಬಲಿಯಾಗಿದ್ದು ಮಾತ್ರ ಅತೀವ ನೋವು ತಂದಿದೆ. ಅವರ ಕುಟುಂಬದ ದುಃಖದಲ್ಲಿ ನಾನು ಪಾಲ್ಗೊಳ್ಳುತ್ತೇನೆ ಎಂದರು. ಇದೇ ವೇಳೆ ಮಾಜಿ ಸಚಿವ ಶಶಿಕಾಂತ ನಾಯಕ ಕೂಡ ಅಗಲಿದ ಅನಂತಕುಮಾರ್ ಅವರಿಗೆ ಸಂತಾಪ ಸೂಚಿಸಿದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv
    ಪಬ್ಲಿಕ್ ಟಿವಿ ಆಪ್ ಡೌನ್ ಲೋಡ್ ಮಾಡಿ: play.google.com/publictv
    ಯೂ ಟ್ಯೂಬ್‍ನಲ್ಲಿ ಪಬ್ಲಿಕ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿ: youtube.com/publictvnewskannada
    ಫೇಸ್‍ಬುಕ್‍ನಲ್ಲಿ ಪಬ್ಲಿಕ್ ಟಿವಿಯನ್ನು ಲೈಕ್ ಮಾಡಿ: facebook.com/publictv
    ಟ್ವಿಟ್ಟರ್‌ನಲ್ಲಿ ಪಬ್ಲಿಕ್ ಟಿವಿಯನ್ನು ಫಾಲೋ ಮಾಡಿ: twitter.com/publictvnews

  • ಮನೆ ಮುಂದೆ ಬಂದ ಕೋತಿಯ ಕುತ್ತಿಗೆಗೆ ಗುಂಡಿಕ್ಕಿದ ಮಾಜಿ ಸೈನಿಕ

    ಮನೆ ಮುಂದೆ ಬಂದ ಕೋತಿಯ ಕುತ್ತಿಗೆಗೆ ಗುಂಡಿಕ್ಕಿದ ಮಾಜಿ ಸೈನಿಕ

    ಬೆಳಗಾವಿ: ಜಿಲ್ಲೆಯ ಪಂತ ಬಾಳೆಕುಂದ್ರಿಯಲ್ಲಿ ಮಾಜಿ ಸೈನಿಕ ತನ್ನ ಮನೆಯ ಮುಂದೆ ನಾಯಿ, ಬೆಕ್ಕು ಮತ್ತು ಹಂದಿ ಅಷ್ಟೇ ಏಕೆ ಯಾವ ಪ್ರಾಣಿಯು ಬಂದರೂ ಅದಕ್ಕೆ ಗುಂಡು ಹೊಡೆದು ಉರುಳಿಸುತ್ತಾನೆ. ಅದೇ ರೀತಿ ಮಂಗವೊಂದು ಮನೆಯ ಮಂದೆ ಬಂತು ಎಂದು ಗನ್ ಎತ್ತಿಕೊಂಡು ಮಂಗನ ಕುತ್ತಿಗೆಗೆ ಗುಂಡಿಕ್ಕಿದ್ದಾನೆ.

    ಪಂತ ಬಾಳೆಕುಂದ್ರಿಯ ನಿವೃತ್ತ ಯೋಧ ಮಹ್ಮದಹುಸೇನ್ ಶೇಖ್ ಮಂಗನಿಗೆ ಗುಂಡು ಹೊಡೆದಿದ್ದಾನೆ. ಶುಕ್ರವಾರ ಮಧ್ಯಾಹ್ನ ಪಂತ ನಗರದಲ್ಲಿರುವ ಆರೋಪಿ ಶೇಖ್ ಮನೆಯ ಮುಂದೆ ಕರಿಮಂಗ ಬಂದು ಪ್ರಾಣ ಕಳೆದುಕೊಂಡಿದೆ. ಇದರಿಂದ ಆಕ್ರೋಶಗೊಂಡ ಸ್ಥಳಿಯರು ಪೊಲೀಸರಿಗೆ ದೂರು ಸಲ್ಲಿಸಿದ್ದಾರೆ.

    ಈ ಹಿಂದೆ ನವಿಲು, ನಾಯಿ, ಬೆಕ್ಕು, ಮೊಲ ಬೇಟೆಯಾಡಿದ ಆರೋಪ ಶೇಖ್ ಮೇಲಿದೆ. ಕಾಡುಪ್ರಾಣಿ ಹತ್ಯೆ ನಿಷೇಧ ಕಾಯ್ದೆಯಡಿ ಬೆಳಗಾವಿ ನೆಸರಗಿ ವಲಯದ ಅರಣ್ಯ ಕಚೇರಿಯಲ್ಲಿ ಶೇಖ್ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.

    ಸದ್ಯಕ್ಕೆ ಸಾಂಬ್ರಾ ಗ್ರಾಮದ ಪಶು ಚಿಕಿತ್ಸಾಲಯದಲ್ಲಿ ಮೃತ ಮಂಗನ ಮರಣೋತ್ತರ ಪರೀಕ್ಷೆ ನಡೆಸಲಾಗಿದೆ. ಕೋತಿ ಸುತ್ತು ಹೋದ ಮೇಲೆ ಊರಿನ ಜನರೆಲ್ಲಾ ಸೇರಿ ಪೂಜೆ ಮಾಡಿ ಮಣ್ಣು ಮಾಡಿದ್ದಾರೆ. ಇತ್ತ ಅರಣ್ಯ ಅಧಿಕಾರಿಗಳು ಆರೋಪಿ ಶೇಖ್‍ ಗಾಗಿ ಶೋಧನೆ ಕಾರ್ಯ ನಡೆಸುತ್ತಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv
    ಪಬ್ಲಿಕ್ ಟಿವಿ ಆಪ್ ಡೌನ್ ಲೋಡ್ ಮಾಡಿ: play.google.com/publictv
    ಯೂ ಟ್ಯೂಬ್‍ನಲ್ಲಿ ಪಬ್ಲಿಕ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿ: youtube.com/publictvnewskannada
    ಫೇಸ್‍ಬುಕ್‍ನಲ್ಲಿ ಪಬ್ಲಿಕ್ ಟಿವಿಯನ್ನು ಲೈಕ್ ಮಾಡಿ: facebook.com/publictv
    ಟ್ವಿಟ್ಟರ್‌ನಲ್ಲಿ ಪಬ್ಲಿಕ್ ಟಿವಿಯನ್ನು ಫಾಲೋ ಮಾಡಿ: twitter.com/publictvnews

  • ಹಳಿ ಮೇಲೆ ನಿಂತ ಸರ್ಕಾರಿ ಬಸ್ – ಗೇಟ್ ಮನ್ ಸಮಯ ಪ್ರಜ್ಞೆಯಿಂದ ತಪ್ಪಿದ ಭಾರೀ ಅನಾಹುತ

    ಹಳಿ ಮೇಲೆ ನಿಂತ ಸರ್ಕಾರಿ ಬಸ್ – ಗೇಟ್ ಮನ್ ಸಮಯ ಪ್ರಜ್ಞೆಯಿಂದ ತಪ್ಪಿದ ಭಾರೀ ಅನಾಹುತ

    ಬೆಳಗಾವಿ: ವಾಯುವ್ಯ ಕರ್ನಾಟಕ ಸಾರಿಗೆ ಸಂಸ್ಥೆಗೆ ಸೇರಿದ ಬಸ್ಸೊಂದು ಬ್ರೇಕ್ ಫೇಲ್ ಆದ ಪರಿಣಾಮ ರೈಲ್ವೇ ಹಳಿ ಮೇಲೆ ನಿಂತಿದ್ದು, ಈ ವೇಳೆ ಗೇಟ್‍ಮನ್ ಸಮಯಪ್ರಜ್ಞೆಯಿಂದಾಗಿ ನಡೆಯಬಹುದಾದ ಭಾರೀ ಅನಾಹುತ ತಪ್ಪಿದೆ.

    ಜಿಲ್ಲೆಯ ಖಾನಾಪುರ ತಾಲೂಕಿನ ಗೋದಗೇರಿ ಗ್ರಾಮದಲ್ಲಿ ಘಟನೆ ನಡೆದಿದ್ದು, ರೈಲು ಬರುವ ವೇಳೆ ಮುಚ್ಚಲಾಗಿತ್ತು. ಇದೇ ಮಾರ್ಗದಲ್ಲಿ ಬಂದ 40 ಹೆಚ್ಚು ಮಂದಿ ಪ್ರಯಾಣಿಸುತ್ತಿದ್ದ ಬಸ್ಸು ಬ್ರೇಕ್ ಫೇಲ್ ಆಗಿ ರೈಲ್ವೇ ಗೇಟಿಗೆ ಡಿಕ್ಕಿ ಹೊಡೆದು ಬಳಿಕ ಹಳಿ ಮೇಲೆ ನಿಂತಿದೆ. ಇದೇ ವೇಳೆ ರೈಲು ಬರುತ್ತಿರುವುದನ್ನು ಕಂಡ ಗೇಟ್‍ಮನ್ ತಕ್ಷಣ ರೈಲ್ವೇ ಪೈಲಟ್‍ಗೆ ಕೆಂಪು ಬಾವುಟ ತೋರಿಸಿ ತಡೆದಿದ್ದಾರೆ. ಇದರಿಂದ ಬಸ್ಸಿನಲ್ಲಿದ್ದ ಅಷ್ಟು ಪ್ರಯಾಣಿಕರ ಜೀವ ಉಳಿದಿದೆ.

    ರೈಲು ಬರುವುದನ್ನು ಕಂಡು ಕರ್ತವ್ಯ ಪ್ರಜ್ಞೆಯನ್ನು ತೋರಿದ ರೈಲ್ವೇ ಗೇಟ್‍ಮನ್ ಕಾರ್ಯಕ್ಕೆ ಸದ್ಯ ಮೆಚ್ಚುಗೆ ವ್ಯಕ್ತವಾಗಿದೆ. ಆದರೆ ಸರಿಯಾಗಿ ಬಸ್ ನಿರ್ವಹಣೆ ಮಾಡದೇ ಅವಘಡಕ್ಕೆ ಕಾರಣವಾಗುತ್ತಿದ್ದ ಸಾರಿಗೆ ಇಲಾಖೆಯ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ರಾತ್ರೋರಾತ್ರಿ ಸಂಗೊಳ್ಳಿ ರಾಯಣ್ಣ ಚಿತ್ರ ನಿರ್ಮಾಪಕ ಬಂಧನ

    ರಾತ್ರೋರಾತ್ರಿ ಸಂಗೊಳ್ಳಿ ರಾಯಣ್ಣ ಚಿತ್ರ ನಿರ್ಮಾಪಕ ಬಂಧನ

    ಬೆಳಗಾವಿ: `ಕಾಂತ್ರಿವೀರ ಸಂಗೊಳ್ಳಿ ರಾಯಣ್ಣ’ ಸಿನಿಮಾ ನಿರ್ಮಾಪಕ ಆನಂದ್ ಅಪ್ಪುಗೋಳ್ ಮತ್ತೆ ಬಂಧನವಾಗಿದ್ದಾರೆ.

    ಬೆಳಗಾವಿಯ ಸಂಗೊಳ್ಳಿ ರಾಯಣ್ಣ ಸೊಸೈಟಿಯಿಂದ ಬಹುಕೋಟಿ ಠೇವಣಿ ವಂಚನೆ ಮಾಡಿದ್ದರು. ಈ ಹಿನ್ನೆಲೆಯಲ್ಲಿ ಕುರಿತು ಖಡೇಬಜಾರ್ ಪೊಲೀಸರು ಕಾರ್ಯಚರಣೆ ನಡೆಸಿದ್ದಾರೆ. ಬಳಿಕ ಸೊಸೈಟಿ ಅಧ್ಯಕ್ಷನಾಗಿದ್ದ ಆನಂದ್ ಅಪ್ಪುಗೋಳ್ ರನ್ನು ತಡರಾತ್ರಿ ಬಂಧಿಸಲಾಗಿದೆ.

    ಸಂಗೊಳ್ಳಿ ರಾಯಣ್ಣ ಸೊಸೈಟಿಯಲ್ಲಿ ನಾವು ಹಣ ಠೇವಣಿ ಮಾಡಿದ್ದೆವು. ಆದರೆ ಅಪ್ಪುಗೋಳ್ ವಂಚನೆ ಮಾಡಿದ್ದಾರೆ ಎಂದು ಗ್ರಾಹಕರು ಆರೋಪಿಸಿದ್ದು, ಸೋಮವಾರ ನೂರಾರು ಗ್ರಾಹಕರಿಂದ ಡಿಸಿ ಕಚೇರಿ ಎದುರು ಪ್ರತಿಭಟನೆ ನಡೆಸಿದ್ದರು. ನಮ್ಮ ಹಣ ನಮಗೆ ಕೊಡಿಸುವಂತೆ ಗ್ರಾಹಕರು ತಮ್ಮ ಅಳಲು ತೋಡಿಕೊಂಡಿದ್ದರು. ಆದ್ದರಿಂದ ಪೊಲೀಸರು ಕಾರ್ಯಚರಣೆ ನಡೆಸಿ ತಡರಾತ್ರಿ ಅಪ್ಪುಗೋಳ್ ಅವರನ್ನು ಬಂಧಿಸಿದ್ದಾರೆ.

    ಈ ಹಿಂದೆಯೂ ಕೂಡ ಸಂಗೊಳ್ಳಿ ರಾಯಣ್ಣ ಕೋ ಆಪರೇಟಿವ್ ಕ್ರೆಡಿಟ್ ಸೊಸೈಟಿ ಅಧ್ಯಕ್ಷರಾಗಿದ್ದ ಅಪ್ಪುಗೋಳ್ ಅವರು ಸಾರ್ವಜನಿಕರ ಠೇವಣಿ ಹಣವನ್ನು ಸಕಾಲಕ್ಕೆ ಪಾವತಿಸದೆ ಗ್ರಾಹಕರಿಗೆ ವಂಚನೆ ಮಾಡಿರುವ ಕುರಿತು ಬೆಳಗಾವಿಯ ಖಡೇಬಜಾರ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ರಾಯಣ್ಣ ಸೊಸೈಟಿಯ ಠೇವಣಿದಾರರಿಗೆ ನಂಬಿಕೆ ದ್ರೋಹ, ಮೋಸ, ವಂಚನೆ ಮಾಡಿದ ಆರೋಪದಲ್ಲಿ ಸೆ. 4ರಂದು ಸಹಕಾರಿ ಸಂಘಗಳ ಸಹಾಯಕ ನಿಬಂಧಕರಿಂದ ಬ್ಯಾಂಕ್ ಅಧ್ಯಕ್ಷರು, ಚಿತ್ರ ನಿರ್ಮಾಪಕ ಆನಂದ ಅಪ್ಪುಗೋಳ್ ಸೇರಿ ಆಡಳಿತ ಮಂಡಳಿ ಸದಸ್ಯರು ತಲೆ ಮರೆಸಿಕೊಂಡಿದ್ದಾರೆ ಅಂತಾ ದೂರು ದಾಖಲಿಸಿದ್ದರು.

    ಕೆಲ ಕಾಲ ತಲೆಮರೆಸಿಕೊಂಡಿದ್ದ ಅಪ್ಪುಗೋಳ್ ಅವರನ್ನು ಸೆ.17 ರಂದು ಪೊಲೀಸರು ಮುಂಬೈನಲ್ಲಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದರು. ಬಳಿಕ ಅಪ್ಪುಗೋಳ್ ಅವರಿಗೆ ಧಾರವಾಡ ಸಂಚಾರಿ ಹೈಕೋರ್ಟ್ ಜಾಮೀನಿನ ಮೇಲೆ ಬಿಡುಗಡೆ ಮಾಡಿತ್ತು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv