Tag: belagavi

  • ಪ್ರೇಮಿಗಳ ಮದ್ವೆಗೆ ಪೋಷಕರ ಅಡ್ಡಿ- ವಧುವಿನ ಗೆಳತಿಯನ್ನು ಅರೆಸ್ಟ್ ಮಾಡಿದ ಪೊಲೀಸರು

    ಪ್ರೇಮಿಗಳ ಮದ್ವೆಗೆ ಪೋಷಕರ ಅಡ್ಡಿ- ವಧುವಿನ ಗೆಳತಿಯನ್ನು ಅರೆಸ್ಟ್ ಮಾಡಿದ ಪೊಲೀಸರು

    ಬೆಳಗಾವಿ: ಮದುವೆಯಾಗಲು ಬಂದ ಪ್ರೇಮಿಗಳಿಗೆ ಯುವತಿ ಪೋಷಕರು ಅಡ್ಡಿಪಡಿಸಿ ರಂಪಾಟ ಮಾಡಿದ ಘಟನೆ ಬೆಳಗಾವಿ ವಿವಾಹ ನೋಂದಣಿ ಕಚೇರಿ ಬಳಿ ನಡೆದಿದೆ.

    ಪ್ರೇಮಿಗಳಾದ ಪೂಜಾ ಮಾನೆ ಮತ್ತು ಶುಭಂ ಲೋಹಾರ್ ಮದುವೆ ಮಾಡಿಕೊಳ್ಳಲು ಬಂದಾಗ ಹೈಡ್ರಾಮಾ ನಡೆದಿದೆ. ಪೂಜಾ ಪೋಷಕರು ಮದುವೆಗೆ ಅಡ್ಡಿಪಡಿಸಿ ಸಬ್ ರಜಿಸ್ಟಾರ್ ಕಚೇರಿ ಮುಂದೆ ರಂಪಾಟ ಮಾಡಿದ್ದು, ಮಗಳ ಜೊತೆ ಬಂದಿದ್ದ ಆಕೆಯ ಅಪ್ರಾಪ್ತ ಗೆಳತಿಯನ್ನ ಪೊಲೀಸರಿಗೊಪ್ಪಿಸಿ, ಮಗಳನ್ನ ಕರೆದೊಯ್ದಿದ್ದಾರೆ.

    ಯುವತಿ ಪೋಷಕರ ರಂಪಾಟ ಕಂಡು ಯುವಕ ಪರಾರಿಯಾಗಿದ್ದಾನೆ. ಪೂಜಾಳ ಗೆಳತಿಯಾದ ಅಪ್ರಾಪ್ತ ಯುವತಿಯನ್ನ ಮಾರ್ಕೆಟ್ ಪೊಲೀಸರು ಪೊಲೀಸ್ ಠಾಣೆಗೆ ತಂದು ಕೂರಿಸಿದ್ದಾರೆ. ಕಳೆದ ಮೂರು ಗಂಟೆಯಿಂದ ಪೊಲೀಸ್ ಠಾಣೆಯಲ್ಲಿಯೇ ಅಪ್ರಾಪ್ತ ಬಾಲಕಿ ಕುಳಿತಿದ್ದಾಳೆ.

    ಯುವತಿ ಪೂಜಾ ಮಾನೆ ಕಾಣೆಯಾದ ಬಗ್ಗೆ ಮಾರ್ಕೆಟ್ ಪೊಲೀಸ್ ಠಾಣೆಯಲ್ಲಿ ಇಂದು ಪ್ರಕರಣ ದಾಖಲಾಗಿತ್ತು.

  • ಲಾರಿ ಪಲ್ಟಿ: ರಾತ್ರಿ ಬೆಳಗಾಗೋದ್ರೊಳಗೆ ಅಕ್ಕಿ ಚೀಲ ಹೊತ್ತೊಯ್ದ ಗ್ರಾಮಸ್ಥರು!

    ಲಾರಿ ಪಲ್ಟಿ: ರಾತ್ರಿ ಬೆಳಗಾಗೋದ್ರೊಳಗೆ ಅಕ್ಕಿ ಚೀಲ ಹೊತ್ತೊಯ್ದ ಗ್ರಾಮಸ್ಥರು!

    ಬೆಳಗಾವಿ: ಅಕ್ಕಿ ಚೀಲ ಹೊತ್ತೊಯ್ಯುತ್ತಿದ್ದ ಲಾರಿಯೊಂದು ಪಲ್ಟಿಯಾದ ಘಟನೆ ಬೆಳಗಾವಿ ಜಿಲ್ಲೆ ಖಾನಾಪುರ ತಾಲೂಕಿನ ಗುಂಡೊಳ್ಳಿ ಬಳಿ ಶುಕ್ರವಾರ ಮಧ್ಯರಾತ್ರಿ ನಡೆದಿದೆ.

    ಸುಮಾರು 695 ಅಕ್ಕಿ ಚೀಲಗಳನ್ನು ತುಂಬಿದ್ದ ಲಾರಿ ಸೇತುವೆ ಬಳಿಯಿರುವ ಮರಕ್ಕೆ ಡಿಕ್ಕಿ ಹೊಡೆದಿದೆ. ಪರಿಣಾಮ ಲಾರಿ ಪಲ್ಟಿಯಾಗಿದೆ. ಘಟನೆಯ ನಂತರ ಲಾರಿ ಚಾಲಕ ಪಾರಾಗಿದ್ದಾನೆ.

    ಘಟನೆ ಬಗ್ಗೆ ಮಾಹಿತಿ ತಿಳಿದು ಸುತ್ತಮುತ್ತಲನ ಗ್ರಾಮಸ್ಥರು ರಾತ್ರಿ ಬೆಳಗಾಗುವಷ್ಟರಲ್ಲಿ ಒಂದು ಅಕ್ಕಿ ಚೀಲವನ್ನೂ ಬಿಡದೆ ಹೊತ್ತೊಯ್ದಿದ್ದಾರೆ.

    ಈ ಸಂಬಂಧ ಖಾನಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

  • ವಿಶೇಷಚೇತನ ಮಕ್ಕಳಿಗೆ ಅನ್ನಭಾಗ್ಯದ ಜೊತೆ ಉಚಿತ ಅಕ್ಷರ ದಾಸೋಹ ನೀಡ್ತಿರೋ ಬೆಳಗಾವಿಯ ಶಾಂತಾ ಶಿಂಧೆ

    ವಿಶೇಷಚೇತನ ಮಕ್ಕಳಿಗೆ ಅನ್ನಭಾಗ್ಯದ ಜೊತೆ ಉಚಿತ ಅಕ್ಷರ ದಾಸೋಹ ನೀಡ್ತಿರೋ ಬೆಳಗಾವಿಯ ಶಾಂತಾ ಶಿಂಧೆ

    ಬೆಳಗಾವಿ: ಬುದ್ಧಿಮಾಂದ್ಯ ಮಕ್ಕಳು ಹುಟ್ಟಿದ್ರೆ ತಿರಸ್ಕಾರ ಮಾಡೋ ಜನ ಇನ್ನೂ ನಮ್ಮ ನಡುವೆ ಇದ್ದಾರೆ. ಅವರನ್ನ ಆಶ್ರಮಕ್ಕೋ ಅಥವಾ ವಿಶೇಷ ಶಾಲೆಗೆ ಸೇರಿಸೋ ಜನರಿದ್ದಾರೆ. ಆದರೆ ನಮ್ಮ ಹೀರೋ ಇಂತ ಬುದ್ಧಿಮಾಂದ್ಯ ಮಕ್ಕಳ ಪಾಲಿಗೆ ಆಶಾಕಿರಣವಾಗಿದ್ದಾರೆ. ಹೆತ್ತ ತಾಯಿಯಂತೆ ಸಾಕಿ ಸಲಹುತ್ತಿದ್ದಾರೆ.

    ಹೌದು. ಬುದ್ಧಿಮಾಂದ್ಯ ಮಕ್ಕಳನ್ನು ಹೆತ್ತ ತಾಯಿಯಂತೆ ಪೋಷಣೆ ಮಾಡುತ್ತಿರುವ ಮಹಿಳೆಯ ಹೆಸರು ಶಾಂತಾ ಶಿಂಧೆ. ಇವರು ಬೆಳಗಾವಿ ಜಿಲ್ಲೆಯ ಅಥಣಿಯವರು. ಕಳೆದ 3 ವರ್ಷಗಳಿಂದ ಶಾರದಾದೇವಿ ಅನ್ನೋ ಬುದ್ಧಿಮಾಂದ್ಯ ಮಕ್ಕಳ ವಸತಿ ಮತ್ತು ತರಬೇತಿ ಶಾಲೆ ನಡೆಸುತ್ತಿದ್ದಾರೆ. ಮನೆಯವರಿಗೆ ಭಾರವಾದ ಬುದ್ಧಿಮಾಂದ್ಯ ಮಕ್ಕಳನ್ನು ಹೆತ್ತ ತಾಯಿಯಂತೆ ಸಾಕುತ್ತಿದ್ದಾರೆ. ಸಮಾಜದಲ್ಲಿ ತಿರಸ್ಕಾರಗೊಂಡ 100ಕ್ಕೂ ಹೆಚ್ಚು ಮಕ್ಕಳಿಗೆ ಆಶ್ರಯ ನೀಡಿದ್ದಾರೆ. ಶಾಂತಾ ಅವರ ಈ ಕಾರ್ಯಕ್ಕೆ ಮಕ್ಕಳು ಹಾಗೂ ಗಂಡ ಸಾಥ್ ನೀಡಿದ್ದಾರೆ. ಸರ್ಕಾರದಿಂದ ಬರೋ ಅನುದಾನದ ಜೊತೆ ಕೆಲ ಹೃದಯವಂತರು ಕೈ ಜೋಡಿಸಿದ್ದಾರೆ.

    ಹೆತ್ತ ಮಕ್ಕಳನ್ನೇ ಸರಿಯಾಗಿ ನೋಡಿಕೊಳ್ಳದೇ ಇರೋ ಪೋಷಕರ ನಡುವೆ ಶಾಂತಾ ಶಿಂಧೆ ನಿಜಕ್ಕೂ ಅಮ್ಮನಂತೆ ಕಾಣ್ತಾರೆ. ಇವರ ಸಮಾಜಸೇವೆಗೆ ಇನ್ನೊಂದಿಷ್ಟು ಮಂದಿ ಕೈ ಜೋಡಿಸಲಿ ಅಂತಾ ಹಾರೈಸೋಣ.

    https://www.youtube.com/watch?v=2mZMx6vR6OY

  • ರೋಷನ್ ಬೇಗ್ ಎದೆಯ ಮೇಲೆ `ಜೈ ಮಹಾರಾಷ್ಟ್ರ’ ಅಂತಾ ಬರೀತಿವಿ: ಶಿವಸೇನೆ

    ರೋಷನ್ ಬೇಗ್ ಎದೆಯ ಮೇಲೆ `ಜೈ ಮಹಾರಾಷ್ಟ್ರ’ ಅಂತಾ ಬರೀತಿವಿ: ಶಿವಸೇನೆ

    ಬೆಳಗಾವಿ: ಸಚಿವ ರೋಷನ್ ಬೇಗ್ ಎದೆ ಮೇಲೆ ಕುಳಿತು `ಜೈ ಮಹಾರಾಷ್ಟ್ರ’ ಎಂದು ಬರೆಯುತ್ತೇವೆ ಎಂದು ಶಿವಸೇನೆ ತನ್ನ ಮುಖವಾಣಿ ಸಾಮ್ನಾ ಪತ್ರಿಕೆಯಲ್ಲಿ ಬರೆದು ಮತ್ತೆ ತಮ್ಮ ಪುಂಡಾಟಿಕೆಯನ್ನು ಮೆರೆದಿದೆ.

    ರೋಷನ್ ಬೇಗ್ ಡಿಎನ್‍ಎ ಪರೀಕ್ಷೆ ಅವಶ್ಯಕತೆ ಇದೆ. ಬೇಗ್ ಮೈಯಲ್ಲಿ ದೇಶಿಯ ರಕ್ತ ಹರಿಯುತ್ತಿಲ್ಲ ಇದು ದೇಶಕ್ಕೆ ಅಪಾಯಕಾರಿಯಾಗಿದೆ. ತಕ್ಷಣ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನಾವಿಸ್ ಬೆಳಗಾವಿಗೆ ತೆರಳಿ ಅಲ್ಲಿನ ಜನರ ಸಮಸ್ಯೆ ಆಲಿಸಬೇಕು. ಗಡಿ ಭಾಗದ ಮರಾಠಿಗರ ಮೇಲೆ ನಿರಂತರ ದಬ್ಬಾಳಿಕೆ, ದೌರ್ಜನ್ಯ ನಡೆಯುತ್ತಿದೆ ಎಂದು ಸಾಮ್ನಾದಲ್ಲಿ ಬರೆಯಲಾಗಿದೆ.

    ಇತ್ತ ಬೆಳಗಾವಿಯಲ್ಲಿ ಎಂಇಎಸ್ ಪ್ರತಿಭಟನಾ ಸಮಾವೇಶವನ್ನು ಹಮ್ಮಿಕೊಂಡಿದ್ದು, ಯಾವುದೇ ಕಾರಣಕ್ಕೂ ಘೋಷಣೆಗಳನ್ನು ಕೂಗುವ ಹಾಗಿಲ್ಲ. ಶಾಂತಿ ಮತ್ತು ಸುವ್ಯವಸ್ಥಿತ ರೀತಿಯಲ್ಲಿ ಪ್ರತಿಭಟನೆ ನಡೆಸಲು ಬೆಳಗಾವಿ ಕ್ರೈಂ ಡಿಸಿಪಿ ಅಮರನಾಥ್ ರೆಡ್ಡಿ ಎಂಇಎಸ್‍ಗೆ ಸೂಚಿಸಿದ್ದಾರೆ.

    ಇದನ್ನೂ ಓದಿ: ಕರ್ನಾಟಕ ಸರ್ಕಾರವನ್ನು ತಲೆ ಕೆಳಗೆ ಕಾಲು ಮೇಲೆ ಮಾಡ್ತೀವಿ: ಕೊಲ್ಲಾಪುರದಲ್ಲಿ ಶಿವಸೇನೆಯಿಂದ ಧಮ್ಕಿ

    ಪ್ರತಿಭಟನೆಯಲ್ಲಿ ಭಿತ್ತಿ ಪತ್ರಗಳನ್ನು ಪ್ರದರ್ಶಿಸುವಂತಿಲ್ಲ. ಶಾಂತ ರೀತಿಯಲ್ಲಿ ಮನವಿ ಪತ್ರ ಸಲ್ಲಿಸಲು ಎಂಇಎಸ್‍ಗೆ ಅವಕಾಶ ನೀಡಲಾಗಿದೆ. ನಗರದ ಸಂಬಾಜಿ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿವರೆಗೂ ನಡೆಯಲಿದೆ. ಮುಂಜಾಗೃತ ಕ್ರಮವಾಗಿ ಮಹಾರಾಷ್ಟ್ರ ಗಡಿಯವರೆಗೂ ಚೆಕ್ ಪೋಸ್ಟ್ ಗಳನ್ನು ನಿರ್ಮಿಸಲಾಗಿದೆ.

    ಬೇಗ್ ವಿರುದ್ಧ ಆಕ್ರೋಶ ಯಾಕೆ?
    ಕೆಲವು ದಿನಗಳ ಹಿಂದೆ ಸಚಿವ ರೋಷನ್ ಬೇಗ್, ಎಂಇಎಸ್ ಸಂಘಟನೆಯ ಜಿಲ್ಲಾಪಂಚಾಯತ್ ಸದಸ್ಯರು ನಾಡವಿರೋಧಿ ಚಟುವಟಿಕೆಯಲ್ಲಿ ಭಾಗಿಯಾದ್ರೆ ಅವರ ಸದಸ್ಯತ್ವವನ್ನು ರದ್ದು ಮಾಡಲಾಗುವುದು ಎಂದು ಖಡಕ್ ಎಚ್ಚರಿಕೆ ನೀಡಿದ್ದರು. ಈ ಎಚ್ಚರಿಕೆಗೆ ಶಿವಸೇನೆ ಮತ್ತು ಎಂಇಎಸ್ ರೋಷನ್ ಬೇಗ್ ವಿರುದ್ಧ ತಿರುಗಿ ಬಿದ್ದಿವೆ.

    https://www.youtube.com/watch?v=fCXaf8bO3Os

     

  • ಬಿರುಗಾಳಿಗೆ ಸಿಲುಕಿದ `ದಿ ವಿಲನ್’ ಚಿತ್ರತಂಡ- ವಿಡಿಯೋ ನೋಡಿ

    ಬಿರುಗಾಳಿಗೆ ಸಿಲುಕಿದ `ದಿ ವಿಲನ್’ ಚಿತ್ರತಂಡ- ವಿಡಿಯೋ ನೋಡಿ

    ಬೆಳಗಾವಿ: ಕಿಚ್ಚ ಸುದೀಪ್ ಅಭಿನಯದ ‘ದಿ ವಿಲನ್’ ಸಿನಿಮಾದ ಚಿತ್ರೀಕರಣದ ವೇಳೆ ಅವಘಡ ಸಂಭವಿಸಿದ್ದು, ಅದೃಷ್ಟವಷಾತ್ ಚಿತ್ರತಂಡ ಅಪಾಯದಿಂದ ಪಾರಾಗಿದೆ.

    ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ರಾಮತೀರ್ಥ ಎಂಬಲ್ಲಿ ದಿ ವಿಲನ್ ಚಿತ್ರತಂಡ ಕೆಲ ದಿನಗಳಿಂದ ಚಿತ್ರೀಕರಣಕ್ಕಾಗಿ ಬೀಡು ಬಿಟ್ಟಿತ್ತು. ಮಂಗಳವಾರ ಸಂಜೆ ಸುಮಾರು 4 ಗಂಟೆಯ ಸಮಯದಲ್ಲಿ ಏಕಾಏಕಿ ಬಿರುಗಾಳಿ ಎದ್ದಿತ್ತು. ಸುಮಾರು 15 ರಿಂದ 20 ನಿಮಿಷಗಳ ಕಾಲ ಚಿತ್ರತಂಡ ಬಿರುಗಾಳಿ ರಭಸಕ್ಕೆ ನಲುಗಿ ಹೋಗಿತ್ತು. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯವಾಗಿಲ್ಲ.

    ಶಿವಣ್ಣ- ಸುದೀಪ್ ಕಾಂಬಿನೇಷನ್‍ನ ಪ್ರೇಮ್ ನಿರ್ದೇಶನದ ‘ದಿ ವಿಲನ್’ ಚಿತ್ರಕ್ಕಾಗಿ ಕಿಚ್ಚ ಸುದೀಪ್ ಅಭಿನಯದ ಸ್ಟಂಟ್ ಭಾಗವನ್ನ ಚಿತ್ರೀಕರಿಸಲಾಗುತ್ತಿತ್ತು. ಬಿರುಗಾಳಿ ಬೀಸಿದಾಗ ಅಭಿಮಾನಿಗಳು ರಕ್ಷಣೆಗೆ ಮುಂದಾದ್ರು. ಈ ವೇಳೆ ಗಾಳಿಯಲ್ಲಿ ತೂರಿ ಬಂದ ಕಲ್ಲುಗಳಿಂದ ಕೆಲವರಿಗೆ ಸಣ್ಣ ಗಾಯಗಳಾಗಿವೆ ಎಂದು ಹೇಳಲಾಗಿದೆ.

    ಬಿರುಗಾಳಿಯಿಂದ ಚಿತ್ರದ ಸೆಟ್ ಗೆ ಹಾನಿಯುಂಟಾಗಿದೆ. ಶೂಟಿಂಗ್ ಗೆ ಬಳಸಲಾಗಿದ್ದ ಅನೇಕ ಉಪಕರಣಗಳು ಹಾಗೂ ವಸ್ತುಗಳು ಬಿರುಗಾಳಿಯಲ್ಲಿ ಹಾರಿ ಹೋಗಿವೆ. ಆದರೂ ಇಂದು ಪುನಃ ಅದೇ ಜಾಗದಲ್ಲಿ ಚಿತ್ರತಂಡ ಶೂಟಿಂಗ್ ಮಾಡಲಿದೆ.

    https://youtu.be/pjabMChe2sU

     

  • ಕರ್ನಾಟಕ ಸರ್ಕಾರವನ್ನು ತಲೆ ಕೆಳಗೆ ಕಾಲು ಮೇಲೆ ಮಾಡ್ತೀವಿ: ಕೊಲ್ಲಾಪುರದಲ್ಲಿ ಶಿವಸೇನೆಯಿಂದ ಧಮ್ಕಿ

    ಕರ್ನಾಟಕ ಸರ್ಕಾರವನ್ನು ತಲೆ ಕೆಳಗೆ ಕಾಲು ಮೇಲೆ ಮಾಡ್ತೀವಿ: ಕೊಲ್ಲಾಪುರದಲ್ಲಿ ಶಿವಸೇನೆಯಿಂದ ಧಮ್ಕಿ

    ಬೆಳಗಾವಿ: ಮಹಾರಾಷ್ಟ್ರದ ಕೊಲ್ಲಾಪುರದಲ್ಲಿ ಶಿವಸೇನೆ ಕಾರ್ಯಕರ್ತರು ಕರ್ನಾಟಕ ಸಾರಿಗೆ ಬಸ್‍ಗಳನ್ನ ತಡೆದು ಮಹಾರಾಷ್ಟ್ರ ಎಂದು ನಾಮಫಲಕ ಹಾಕಿ ಚಾಲಕರಿಗೆ ಧಮ್ಕಿ ಹಾಕಿದ್ದಾರೆ.

    ಈ ಘಟನೆಯಿಂದ ಬೆಳಗಾವಿ ಮಹಾರಾಷ್ಟ್ರ ಸಂಚಾರ ಸಾರಿಗೆಯಲ್ಲಿ ವ್ಯತ್ಯಯ ಉಂಟಾಗಿದೆ. ಮಹಾರಾಷ್ಟ್ರ ಪೊಲೀಸರ ಎದುರೇ ಶಿವಸೇನಾ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದು, ಕರ್ನಾಟಕ ಸರ್ಕಾರವನ್ನು ತಲೆ ಕೆಳಗೆ ಕಾಲು ಮೇಲೆ ಮಾಡುತ್ತೇವೆ. ಮಹಾರಾಷ್ಟ್ರದಲ್ಲಿ ಎಂದಾದ್ರೂ ಶಾಂತಿಭಂಗವಾದರೆ ಅದಕ್ಕೆ ಕರ್ನಾಟಕ ಸರ್ಕಾರವೇ ಕಾರಣ ಎಂದು ಘೋಷಣೆ ಕೂಗಿದ್ದಾರೆ.

    ಗಡಿ ಜಿಲ್ಲೆ ಬೆಳಗಾವಿಯಲ್ಲಿ ಮತ್ತೆ ಎಂಇಎಸ್ ಸಂಘಟನೆಯವರು ಕರ್ನಾಟಕ ವಿರೋಧಿ ಹೇಳಿಕೆ ನೀಡಿದ್ದಾರೆ. ಮಾಜಿ ಮೇಯರ್ ಸರೀತಾ ಪಾಟೀಲ್ ಮತ್ತು ಜಿಲ್ಲಾ ಪಂಚಾಯ್ತಿ ಸದಸ್ಯೆ ಸರಸ್ವತಿ ಮತ್ತೆ ನಾಡ ವಿರೋಧಿ ಹೇಳಿಕೆಗಳನ್ನು ನೀಡಿದ್ದಾರೆ.

    ಕೆಲವು ದಿನಗಳ ಹಿಂದೆ ಸಚಿವ ರೋಷನ್ ಬೇಗ್ ಪಾಲಿಕೆಯಲ್ಲಿ ನಾಡವಿರೋಧಿ ಚಟುವಟಿಕೆ ನಡೆಸಿದರೆ ಸದಸ್ಯತ್ವ ರದ್ದು ಮಾಡುವುದಾಗಿ ಎಚ್ಚರಿಸಿದ್ದರು. ಈ ಹಿನ್ನೆಲೆಯಲ್ಲಿ ಇಬ್ಬರೂ ನಾಯಕಿಯರು ರಾಜ್ಯ ಸರ್ಕಾರ ಸದಸ್ಯತ್ವ ರದ್ದು ಮಾಡಿದ್ರೂ ನಾವು ಜೈ ಮಹಾರಾಷ್ಟ್ರ ಅಂತಲೇ ಹೇಳುತ್ತೇವೆ. ನಾವು ಮಹಾರಾಷ್ಟ್ರದವರು ನಮ್ಮ ರಕ್ತ ಹರಿದರೂ ಚಿಂತೆಯಿಲ್ಲ ಜೈ ಮಹಾರಾಷ್ಟ್ರ ಅಂತಲೇ ಹೇಳುತ್ತೇವೆ ಅನ್ನುವ ಮೂಲಕ ಪುಂಡಾಟಿಕೆ ಮೆರೆದಿದ್ದಾರೆ. ಈ ವಿಡಿಯೋವನ್ನ ಸಾಮಾಜಿಕ ಜಾಲತಾಣಗಳಲ್ಲಿ ಹರಿದು ಬಿಟ್ಟಿದ್ದು, ಈಗ ಇದು ವೈರಲ್ ಆಗಿದೆ.

    https://youtu.be/fCXaf8bO3Os

  • ಬಾರ್‍ಗೆ ನುಗ್ಗಿ ಸಿಬ್ಬಂದಿಗೆ ಹಿಗ್ಗಾಮುಗ್ಗಾ ಥಳಿಸಿದ್ದ ಕುಡಚಿ ಪಿಎಸ್‍ಐಗೆ ಕ್ಲೀನ್ ಚೀಟ್

    ಬಾರ್‍ಗೆ ನುಗ್ಗಿ ಸಿಬ್ಬಂದಿಗೆ ಹಿಗ್ಗಾಮುಗ್ಗಾ ಥಳಿಸಿದ್ದ ಕುಡಚಿ ಪಿಎಸ್‍ಐಗೆ ಕ್ಲೀನ್ ಚೀಟ್

    ಬೆಳಗಾವಿ: ಬಾರ್‍ಗೆ ನುಗ್ಗಿ ಸಿಬ್ಬಂದಿಗೆ ಹಿಗ್ಗಾಮುಗ್ಗಾ ಥಳಿಸಿದ್ದ ಜಿಲ್ಲೆಯ ಕುಡಚಿ ಠಾಣೆಯ ಪಿಎಸ್‍ಐ ಶಿವಶಂಕರ ಮುಕ್ರಿ ಅವರಿಗೆ ಇಲಾಖೆಯ ವಿಚಾರಣೆಯಲ್ಲಿ ಕ್ಲೀನ್ ಚೀಟ್ ನೀಡಲಾಗಿದೆ.

    ಕುಡಚಿ ಪೊಲೀಸ್ ಠಾಣೆ ಪಿಎಸ್‍ಐ ಶಿವಶಂಕರ ಮುಕರಿ ಮಾರ್ಚ್ 13 ರಂದು ಕುಡಚಿ ಪಟ್ಟಣದ ಶಿವಶಕ್ತಿ ಬಾರ್‍ಗೆ ನುಗ್ಗಿ ಅಲ್ಲಿನ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿದ್ರು. ಹಲ್ಲೆಯ ದೃಶ್ಯಗಳು ಬಾರ್‍ನಲ್ಲಿದ್ದ ಸಿಸಿಟಿವಿಯಲ್ಲಿ ಸೆರೆಯಾಗಿತ್ತು.

    ತನಿಖೆಯಲ್ಲಿ ಸಾಕ್ಷಿಗಳನ್ನ ಪರಿಗಣಿಸದ ತನಿಖಾಧಿಕಾರಿಗಳು, 15 ಪುಟಗಳ ಸಂಪೂರ್ಣ ತನಿಖಾ ವರದಿಯನ್ನ ಪಿಎಸ್‍ಐ ಪರವಾಗಿಯೇ ತಯಾರಿಸಿದ್ದಾರೆ. ದೂರುದಾರ ಬಾರ್ ಮಾಲೀಕರ ವಿರುದ್ಧವೇ ಇಡೀ ವರದಿಯಲ್ಲಿ ಉಲ್ಲೇಖಿಸಲಾಗಿದೆ. ಮಾ.18ರಂದು ಐಜಿಪಿ ತನಿಖೆ ನಡೆಸಿ ವರದಿ ನೀಡುವಂತೆ ಆದೇಶಿಸಿದ್ದರು. ಡಿಸಿಆರ್‍ಬಿ ಘಟಕದ ಡಿವೈಎಸ್ಪಿ ಎಸ್.ಎಂ.ನಾಗರಾಜ್ ಅವರಿಗೆ ತನಿಖೆ ನಡೆಸಲು ಸೂಚಿಸಲಾಗಿತ್ತು. ಈ ಬಗ್ಗೆ ತನಿಖೆ ನಡೆಸಿದ ಡಿವೈಎಸ್ಪಿ ನಾಗರಾಜ್ ಮಾರ್ಚ್ 27ರಂದೇ ವರದಿ ನೀಡಿದ್ದಾರೆ.

    ಹಲ್ಲೆಗೊಳಗಾದ ಅಜೀತ್

    ಇದನ್ನೂ ಓದಿ: ಮಾಮೂಲಿ ಕೊಡದಕ್ಕೆ ಬಾರ್ ಸಿಬ್ಬಂದಿಯನ್ನ ಮನಬಂದಂತೆ ಥಳಿಸಿದ ಪಿಎಸ್‍ಐ!
    ವರದಿಯಲ್ಲಿನ ಅಂಶಗಳೇನು?:
    1. ಪಿಎಸ್‍ಐ ಹಲ್ಲೆ ನಡೆಸಿದ ಸಿಸಿಟಿವಿ ದೃಶ್ಯಾವಳಿಗಳ ಬಗ್ಗೆಯೇ ಅನುಮಾನವಿದೆ. ಬಾರ್ ನಲ್ಲಿ ಸಿಕ್ಕಿರುವ ಸಿಸಿಟಿವಿ ದೃಶ್ಯಾವಳಿಗಳಲ್ಲಿ ಸ್ಪಷ್ಟತೆ ಕೊರತೆಯಿದೆ ಎಂದು ಹೇಳಲಾಗಿದ್ದು, ಸಿಸಿಟಿವಿ ದೃಶ್ಯಾವಳಿಗಳು ನಿಜವೆಂದು ನಂಬಲು ಸಾಧ್ಯವಿಲ್ಲ ಅಂತಾ ವರದಿಯಲ್ಲಿ ಉಲ್ಲೇಖಿಸಲಾಗಿದೆ.

    2. ಬಾರ್ ಸಿಬ್ಬಂದಿಯಿಂದ ಉದ್ದೇಶಪೂರ್ವಕ ಘಟನೆಯ ಅತಿಯಾದ ರಂಜಿಸಿದ್ದು, ಇದಕ್ಕಾಗಿಯೇ ಹಲ್ಲೆಗೊಳಗಾದ ವ್ಯಕ್ತಿ ಎನ್ನಲಾದ ಅಜಿತ್ ಎಂಬಾತನನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸದೇ ಬೆಳಗಾವಿ ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತು. ಪಿಎಸ್‍ಐ ಉದ್ದೇಶಪೂರ್ವಕವಾಗಿ ಹಲ್ಲೆ ಮಾಡಿಲ್ಲ, ಹಿಗ್ಗಾಮುಗ್ಗಾ ಥಳಿಸಿದ್ದಾರೆಂಬುದು ಸುಳ್ಳು ಎಂದು ವರದಿಯಲ್ಲಿ ತಿಳಿಸಲಾಗಿದೆ.

    3. ಘಟನೆ ದಿನ ಮದ್ಯ ಮಾರಾಟ ನಿಷೇಧವಿದ್ದರೂ ಬಾರ್ ನಲ್ಲಿ ಮದ್ಯ ಮಾರಾಟ ಮಾಡಲಾಗುತಿತ್ತು. ಪೊಲೀಸ್ ಅಧಿಕಾರಿಗಳಲ್ಲಿ ಭಯ ಹುಟ್ಟಿಸಲು ಹಲ್ಲೆಯ ಆಪಾದನೆ ಮಾಡಲಾಗಿದೆ. ಇನ್ನೂ ಪಿಎಸ್‍ಐ ಪ್ರತಿ ತಿಂಗಳು 30ಸಾವಿರ ರೂ. ಮಾಮೂಲಿ ಪಡೆಯುತ್ತಾರೆಂಬ ಆರೋಪ ಶುದ್ಧ ಸುಳ್ಳು ಎಂದು ಸಾಬೀತಾಗಿದೆ. ಪಿಎಸ್‍ಐ ಶಿವಶಂಕರ ಮುಕರಿ ಬಾರ್‍ನಲ್ಲಿದ್ದ ಯಾವುದೇ ನೀರಿನ ಬಾಟಲ್, ತಂಪು ಪಾನೀಯ ದೋಚಿಲ್ಲ. ಬಾರ್ ಮಾಲೀಕ ಶಿವರಾಜ್ ನೀಡಿದ ದೂರು ಸತ್ಯಕ್ಕೆ ದೂರವಾದದ್ದು ಎಂದು ತನಿಖಾ ವರದಿಯಲ್ಲಿ ಉಲ್ಲೇಖಿಸಲಾಗಿದೆ.

    ಇದನ್ನೂ ಓದಿ: ತನ್ನ ಜೀಪಿಗೆ ದಾರಿ ಬಿಡದವನ ಮೇಲೆ ಕುಡಚಿ ಪಿಎಸ್‍ಐ ಗೂಂಡಾಗಿರಿ

     

    https://www.youtube.com/watch?v=jTySUe5I_j4

    https://www.youtube.com/watch?v=V83ANKNDdaQ

  • 3 ವರ್ಷಗಳಿಂದ ಬೆಳಗಾವಿಯಲ್ಲಿದ್ದ ಛೋಟಾ ಶಕೀಲನ ಬಂಟ ರಶೀದ್ ಮಲಬಾರಿ

    3 ವರ್ಷಗಳಿಂದ ಬೆಳಗಾವಿಯಲ್ಲಿದ್ದ ಛೋಟಾ ಶಕೀಲನ ಬಂಟ ರಶೀದ್ ಮಲಬಾರಿ

    – ಮಲಬಾರಿಯ 6 ಮಂದಿ ಸಹಚರರು ಪೊಲೀಸರ ವಶಕ್ಕೆ

    ಬೆಳಗಾವಿ: ಭೂಗತ ಪಾತಕಿ ಛೋಟಾ ಶಕೀಲನ ಬಂಟ ರಶೀದ್ ಮಲಬಾರಿ ಮೂರು ವರ್ಷಗಳಿಂದ ಯಾರಿಗೂ ಗೊತ್ತಿಲ್ಲದಂತೆ ಬೆಳಗಾವಿಯಲ್ಲಿ ಠಿಕಾಣಿ ಹೂಡಿದ್ದ ಅನ್ನೋ ಸ್ಫೋಟಕ ಮಾಹಿತಿ ಬಯಲಾಗಿದೆ.

    2014ರಲ್ಲಿ ಜೈಲಿನಿಂದ ಬಿಡುಗಡೆಯಾದ ಬಳಿಕ ರಷೀದ್ ದುಬೈನಲ್ಲಿ ಭೂಗತಾಗಿದ್ದ ಎಂದು ಎಲ್ಲರು ಭಾವಿಸಿದ್ದರು. ಆದರೆ ಆತ ಮಾಮು ಎಂದು ಹೆಸರು ಬದಲಿಸಿಕೊಂಡು ಬೆಳಗಾವಿ, ಮುಂಬೈನಲ್ಲಿ ಓಡಾಡಿಕೊಂಡಿದ್ದ. ಈತನಿಗೆ ಬೆಳಗಾವಿ ಜಿಪಂ ಮಾಜಿ ಅಧ್ಯಕ್ಷರೊಬ್ಬರು ಫಾರ್ಮ್ ಹೌಸ್‍ನಲ್ಲಿ ಆಶ್ರಯ ನೀಡಿರುವುದು ಬೆಳಕಿಗೆ ಬಂದಿದೆ. ರಷೀದ್ ಮಲಬಾರಿಗೆ ಸಹಕರಿಸಿದ ಆರೋಪದ ಮೇಲೆ 6 ಜನರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

    ರಶೀದ್ ಮಲಬಾರಿಯ ಸಹಚರರಾದ ಮಾಜಿ ಜಿಲ್ಲಾ ಪಂಚಾಯತ್ ಸದಸ್ಯ ನಜೀರ್ ನದಾಫ್, ಸರ್ಫರಾಜ್, ಇಮ್ತಿಯಾಜ್ ಸೇರಿ 6 ಮಂದಿಯನ್ನು ಬೆಳಗಾವಿ ಅಪರಾಧ ದಳದ ಪೊಲೀಸರು ವಶಕ್ಕೆ ಪಡೆದಿದ್ದಾರೆ.

    2014ರ ಮಾರ್ಚ್ 14ರಂದು ಬೆಳಗಾವಿಗೆ ಬಂದು ಅಡಗಿ ಕುಳಿತಿದ್ದ ರಶೀದ್, ಪಾತಕ ಕೃತ್ಯಗಳಿಗೆ ಸ್ಥಳೀಯ ಯುವಕರನ್ನು ಪ್ರಚೋದಿಸುತ್ತಿದ್ದ. ಹುಣಸೆಹಣ್ಣು ವ್ಯಾಪಾರಿ ಸುರೇಶ ರೇಡೆಕರ್ ಪುತ್ರ ರೋಹನ ರೇಡೆಕರ್, ಬ್ಯಾಂಕ್ ಅಕೌಂಟ್ ಹ್ಯಾಕರ್ ಆಶಿಷ್ ರಂಜನ್, ಅಯಾಜ್ ಅಹ್ಮದ್ ಕೊಲೆ ಪ್ರಕರಣದಲ್ಲಿ ಭಾಗಿಯಾಗಿರುವುದು ಬಯಲಾಗಿದೆ.

    2015ರ ಫೆಬ್ರವರಿ 18ರಂದು ರೋಹನ್ ಹತ್ಯೆ ನಡೆದಿತ್ತು. ಬೆಳಗಾವಿ ಉದ್ಯಮಿ ಮಗನಾದ ರೋಹನ್‍ನನ್ನು ಅಪಹರಿಸಿ ಹಣ ನೀಡುವುದಾಗಿ ಹೇಳಿದ್ರೂ ಬಿಡದೇ ಕೊಚ್ಚಿ ಕೊಂದಿದ್ರು. ರೋಹನ್ ಮೃತದೇಹ ಇನ್ನೂ ಪತ್ತೆಯಾಗಿಲ್ಲ.

    ಮುಂಬೈ ಮೂಲದ ಆಶಿಷ್ ಉದ್ಯಮಿಗಳಿಗೆ ಹೆದರಿಸಿ ಸುಲಿಗೆ ಮಾಡ್ತಿದ್ದ. ಇದಕ್ಕೆ ರಶೀದ್ ಮಲಬಾರಿ ಬೆಂಬಲವಿತ್ತು. ಆದ್ರೆ ಸುಳ್ಳು ಹೇಳಲು ಆರಂಭಿಸಿ ಮುಂಬೈ ಬಿಲ್ಡರ್‍ಗಳನ್ನೇ ಕೊಲ್ಲುವ ಬೆದರಿಕೆ ಹಾಕಿದ್ರಿಂದ ಮಲಬಾರಿ ಗ್ಯಾಂಗ್ ಆಶೀಷ್ ಮತ್ತು ಅವನ ಗೆಳೆಯ ಅಯಾಜ್ ಅಹ್ಮದ್‍ನನ್ನು ಉಸಿರುಗಟ್ಟಿಸಿ ಕೊಲೆ ಮಾಡಿತ್ತು. ಬಳಿಕ ಅಂಕೋಲಾ ಮತ್ತು ಯಲ್ಲಾಪೂರ ಘಾಟಿನಲ್ಲಿ ಶವವನ್ನು ಬಿಸಾಡಿ ಹೋಗಿದ್ದರು ಎಂದು ತಿಳಿದುಬಂದಿದೆ.

    ಇತ್ತೀಚಿಗೆ ಒರ್ವ ಉದ್ಯಮಿಯನ್ನ ಅಪಹರಿಸಿ ಹಲ್ಲೆ ನಡೆಸಿದ್ದು, ಹಲ್ಲೆಗೆ ಸಂಬಂಧಿಸಿದಂತೆ ಕೆಲವರನ್ನ ಬಂಧಿಸಿ ತನಿಖೆ ನಡೆಸುತ್ತಿದ್ದ ವೇಳೆ ಆಘಾತಕಾರಿ ವಿಚಾರಗಳು ಬಯಲಾಗಿದೆ. ವಿಷಯ ತಿಳಿದು ರಷೀದ್ ಬೆಳಗಾವಿಯಿಂದ ಕಾಲ್ತಿತ್ತಿದ್ದಾನೆ.

  • ಬಾಗಲಕೋಟೆ: ರಸ್ತೆಬದಿಯ ಡಸ್ಟ್ ಬಿನ್ ನಲ್ಲಿ ಹಸುಗೂಸಿನ ಶವ ಪತ್ತೆ

    ಬಾಗಲಕೋಟೆ: ರಸ್ತೆಬದಿಯ ಡಸ್ಟ್ ಬಿನ್ ನಲ್ಲಿ ಹಸುಗೂಸಿನ ಶವ ಪತ್ತೆ

    – ಕಲಬುರಗಿಯಲ್ಲಿ ರಸ್ತೆ ಬದಿ ಸಿಕ್ತು ನವಜಾತ ಶಿಶು
    – ಬೆಳಗಾವಿ ದೇವಸ್ಥಾನದಲ್ಲಿ 3 ದಿನದ ಮಗು ಪತ್ತೆ

    ಬಾಗಲಕೋಟೆ: ರಸ್ತೆ ಬದಿಯ ಡಸ್ಟಬಿನ್ ನಲ್ಲಿ ಆಗತಾನೇ ಜನಿಸಿರುವ ಹಸುಗೂಸಿನ ಶವವೊಂದು ಪತ್ತೆಯಾಗಿದೆ.

    ನಗರದ ವಾಸವಿ ಥೇಟರ್ ಬಳಿ ಐಡಿಬಿಐ ಬ್ಯಾಂಕ್ ಎದುರಿನ ಡಸ್ಟ್ ಬಿನ್ ನಲ್ಲಿ ಅಪರಿಚಿತ ಹಸುಗೂಸಿನ ಶವ ಪತ್ತೆಯಾಗಿದ್ದು, ಯಾರು ಎಸೆದು ಹೋಗಿದ್ದಾರೆಂದು ಮಾಹಿತಿ ಇಲ್ಲ. ಪೋಷಕರೇ ಶನಿವಾರ ತಡರಾತ್ರಿ ಹಸುಗೂಸಿನ ಶವವನ್ನ ಡಸ್ಟ್ ಬಿನ್ ನಲ್ಲಿ ಎಸೆದು ಹೋಗಿರಬಹುದು ಎಂಬುದು ಸ್ಥಳೀಯರ ಮಾತಾಗಿದೆ.

    ಶವವನ್ನ ಒಂದು ರಟ್ಟಿನ ಬಾಕ್ಸ್ ನಲ್ಲಿ ಇಟ್ಟು ಪರಾರಾರಿಯಾಗಿದ್ದಾರೆ. ಸದ್ಯ ಶವಕ್ಕೆ ಇರುವೆಗಳು ಮುತ್ತಿಕ್ಕಿಕೊಂಡಿದ್ದು, ಸ್ಥಳಕ್ಕೆ ಬಾಗಲಕೋಟೆ ಶಹರ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ. ಈ ಕುರಿತು ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    ಎರಡು ದಿನದ ಹೆಣ್ಣು ನವಜಾತ ಶಿಶುವನ್ನು ರಸ್ತೆಯ ಬದಿಯಲ್ಲಿ ಪೋಷಕರು ಬಿಟ್ಟು ಹೋಗಿರುವ ಘಟನೆ ಕಲಬುರಗಿ ನಗರದ ಕಾಳನೂರ ಗ್ರಾಮದ ಹೊರವಲಯದಲ್ಲಿ ನಡೆದಿದೆ.

    ಮಗು ಅಳುವ ಶಬ್ದ ಕೇಳಿದ ಸ್ಥಳೀಯರು ಮಗುವಿನ ರಕ್ಷಣೆ ಮಾಡಿ ಮಕ್ಕಳ ಸಹಾಯವಾಣಿಗೆ ಕರೆ ಮಾಡಿದ್ದಾರೆ. ಸದ್ಯ ಮಗುವಿನ ಆರೋಗ್ಯ ತಪಾಸಣೆ ಮಾಡಿ ಅಮೂಲ್ಯ ಶಿಶು ಗೃಹದಲ್ಲಿ ಆಶ್ರಯ ನೀಡಲಾಗಿದೆ. ಮಗುವನ್ನು ಹೀಗೆ ರಸ್ತೆ ಬದಿ ಬಿಟ್ಟು ಹೋದ ಪೊಷಕರ ವಿರುದ್ಧ ಜನ ಹಿಡಿ ಶಾಪ ಹಾಕುತ್ತಿದ್ದಾರೆ. ಈ ಕುರಿತು ವಿವಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    ಬೆಳಗಾವಿ ಜಿಲ್ಲೆಯ ರಾಯಭಾಗ ತಾಲೂಕಿನ ಕಂಕಣವಾಡಿ ಗ್ರಾಮದ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಕಳೆದ ರಾತ್ರಿ 3 ದಿನದ ಹೆಣ್ಣು ಮಗುವನ್ನು ದೇವಸ್ಥಾನ ದಲ್ಲಿ ಬಿಟ್ಟು ಹೋದ ಘಟನೆ ಬೆಳಕಿಗೆ ಬಂದಿದೆ. ದೇವಸ್ಥಾನದಲ್ಲಿ ಅಳುತ್ತಿದ್ದ ಮಗುವನ್ನ ಕಂಡ ಸ್ಥಳೀಯರು ಮಗುವಿನ ರಕ್ಷಣೆ ಮಾಡಿದ್ದಾರೆ. ಸದ್ಯ ರಾಯಭಾಗ ತಾಲೂಕು ಆಸ್ಪತ್ರೆಯಲ್ಲಿ ಮಗುವಿನ ಆರೈಕೆ ಮಾಡಲಾಗುತ್ತಿದೆ. ಮಗುವಿನ ತಾಯಿಗಾಗಿ ಪೊಲೀಸರಿಂದ ಶೋಧ ಕಾರ್ಯ ನಡೆಯುತ್ತಿದೆ. ರಾಯಭಾಗ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

  • ಅಕ್ರಮವಾಗಿ ವಲಸೆ ಬಂದ ಬಾಂಗ್ಲಾ ಪ್ರಜೆಗಳಿಗೂ ಸಿಗುತ್ತೆ ಆಧಾರ್ ಕಾರ್ಡ್, 2200 ರೂ. ಕೊಟ್ರೆ ಪಾಸ್‍ಪೋರ್ಟ್

    ಅಕ್ರಮವಾಗಿ ವಲಸೆ ಬಂದ ಬಾಂಗ್ಲಾ ಪ್ರಜೆಗಳಿಗೂ ಸಿಗುತ್ತೆ ಆಧಾರ್ ಕಾರ್ಡ್, 2200 ರೂ. ಕೊಟ್ರೆ ಪಾಸ್‍ಪೋರ್ಟ್

    ಬೆಳಗಾವಿ: ಆಧಾರ್ ಕಾರ್ಡ್, ಪಾಸ್‍ಪೋರ್ಟ್, ವೋಟರ್ ಐಡಿ ಇವೆಲ್ಲ ನಮ್ಮ ಅಧಿಕೃತ ಗುರುತಿನ ದಾಖಲೆಗಳು. ನಾವು ಭಾರತೀಯರು ಅನ್ನೋದನ್ನು ಖಾತ್ರಿಪಡಿಸುವುದಕ್ಕೆ ಇರೋ ದಾಖಲೆಗಳು. ಆದ್ರೆ ಗಡಿ ನಾಡು ಬೆಳಗಾವಿಯಲ್ಲಿ ಬಾಂಗ್ಲಾದಿಂದ ಅಕ್ರಮವಾಗಿ ವಲಸೆ ಬಂದಿರುವ ಮಂದಿಗೆಲ್ಲಾ ಆಧಾರ್ ಕಾರ್ಡ್, ಪಾಸ್‍ಪೋರ್ಟ್, ವೋಟರ್ ಐಡಿ ಮಾಡಿಸಿಕೊಡುವ ದಂಧೆ ನಡೆಯುತ್ತಿದೆ.

    ಅದ್ರಲ್ಲೂ ಪಾಸ್‍ಪೋರ್ಟ್ ಪಡೆಯುವುದು ಇನ್ನೂ ಸುಲಭ. ಕೇವಲ 2200 ರೂಪಾಯಿ ಖರ್ಚು ಮಾಡಿದ್ರೆ ಸಾಕು ವಿದೇಶಿಯರಿಗೆ ನಮ್ಮ ದೇಶದ ಪಾಸ್ ಪೋರ್ಟ್ ಸಿಗುತ್ತೆ. ಇಂತಹದ್ದೊಂದು ದೊಡ್ಡ ದಂದೆ ಬೆಳಗಾವಿಯಲ್ಲಿ ತಲೆ ಎತ್ತಿದೆ. ಸ್ವತಃ ಪಾಸ್‍ಪೋರ್ಟ್ ಪಡೆದ ಬಾಂಗ್ಲಾದೇಶದ ಪ್ರಜೆಯೇ ಈ ಭಯಾನಕ ಸತ್ಯವನ್ನ ಬಾಯಿಬಿಟ್ಟಿದ್ದಾನೆ.

    ಕೆಲ ದಿನಗಳ ಹಿಂದೆಯಷ್ಟೇ ಪೊಲೀಸರು ನಕಲಿ ಪಾಸ್‍ಪೋರ್ಟ್ ಮೂಲಕ ಪುಣೆಯ ಮಾರ್ಗವಾಗಿ ದುಬೈಗೆ ಹಾರಲು ಯತ್ನಿಸಿದ್ದ 11 ಮಂದಿ ಬಾಂಗ್ಲಾ ಪ್ರಜೆಗಳನ್ನು ಬಂಧಿಸಿದ್ದರು. ಅಂಜುಬೇಗಂ (37), ಹಫೀಜುಲ್ಲಾ ಇಸ್ಲಾಂ(20), ಅಕೀಬ (20), ಅನ್ನನ್ ಸದ್ದಾರ್ (21), ರೋಹನ್ ಸೆಕ್ (21), ಅಬ್ದುಲ್ ಹಾಯ್ ನಿಹಾರ ಅಲಿ ಗಾಜಿ (60), ಮೊಹಮ್ಮದ್ ಅಲಮಿನ್ ಶೌಪಿ ಉದ್ದಿನ್ ಬೇಪಾರಿ (26) ಸೇರಿದಂತೆ 11 ಆರೋಪಿಗಳನ್ನ ಬೆಳಗಾವಿ ಪೊಲೀಸರು ಬಂಧಿಸಿದ್ದರು. ಈ ಆರೋಪಿಗಳ ಮಾಹಿತಿ ಜಾಡು ಹಿಡಿದ ಬೆಳಗಾವಿ ಪೊಲೀಸರು, ನಗರದಲ್ಲಿ ನಡೆಯುತ್ತಿರುವ ನಕಲಿ ದಾಖಲಾತಿಯ ಮಾಫಿಯ ಬಗ್ಗೆ ತನಿಖೆ ಶುರು ಮಾಡಿದ್ದಾರೆ.

    ಸ್ವತಃ ಹಬಿಬುಲ್ ಶೇಖ್ ಅನ್ನೋ ಬಾಂಗ್ಲಾದೇಶಿ ಪ್ರಜೆ ಅಕ್ರಮವಾಗಿ ಪಾಸ್‍ಪೋರ್ಟ್ ಪಡೆದು ಆರೇಳು ವರ್ಷಗಳಿಂದ ಬೆಳಗಾವಿಯಲ್ಲಿ ವಾಸಿಸುತ್ತಿರುವ ಬಗ್ಗೆ ಪಬ್ಲಿಕ್ ಟಿವಿ ಕ್ಯಾಮೆರಾ ಮುಂದೆ ಬಾಯ್ಬಿಟ್ಟಿದ್ದಾನೆ. ಈ ಪ್ರಕರಣ ಸಂಪೂರ್ಣ ತನಿಖೆಯಾದರೆ ಇನ್ನಷ್ಟು ಜನ ಬಾಂಗ್ಲಾದೇಶದ ನುಸುಳುಕೊರರು ಬಂಧಿತರಾಗಲಿದ್ದಾರೆ.

    https://www.youtube.com/watch?v=x_uURstQ6uk