Tag: belagavi

  • ಈ ಭೂಮಿ ಮೇಲಿರಲು ನನಗೆ ಇಷ್ಟವಿಲ್ಲ, ಒಂದು ವಿಷದ ಇಂಜೆಕ್ಷನ್ ಕೊಡಿಸಿ: ಬೆಳಗಾವಿಯ ಹಿರಿಯಜ್ಜಿಯ ಮೊರೆ

    ಈ ಭೂಮಿ ಮೇಲಿರಲು ನನಗೆ ಇಷ್ಟವಿಲ್ಲ, ಒಂದು ವಿಷದ ಇಂಜೆಕ್ಷನ್ ಕೊಡಿಸಿ: ಬೆಳಗಾವಿಯ ಹಿರಿಯಜ್ಜಿಯ ಮೊರೆ

    ಬೆಳಗಾವಿ: ನನಗೆ ಯಾರೂ ಇಲ್ಲ, ಈ ಭೂಮಿ ಮೇಲಿರಲು ನನಗೆ ಇಷ್ಟವಿಲ್ಲ, ನಿಮ್ಮ ಕಾಲಿಗೆ ಬೀಳ್ತಿನಿ, ಒಂದು ವಿಷದ ಇಂಜೆಕ್ಷನ್ ಕೊಡಿಸಿ. ಹೀಗೆ ಕಣ್ಣೀರಿಡುತ್ತಾ ವಿನಂತಿ ಮಾಡ್ತಿರೋ ಈ ಹಿರಿಯಜ್ಜಿಯ ಹೆಸ್ರು ಚನ್ನವ್ವ. ಬೆಳಗಾವಿಯ ವಕ್ಕುಂದ ಗ್ರಾಮದಾಕೆ.

    ಎಲ್ಲವೂ ಸರಿಯಾಗಿದ್ದರೆ ಚನ್ನವ್ವ, ಮರಿಮಕ್ಕಳ ಜೊತೆ ಆಟವಾಡುತ್ತಾ ಮಕ್ಕಳ ಆರೈಕೆಯಲ್ಲಿ ಸುಖವಾಗಿ ಕಾಲ ಕಳೆಯಬೇಕಾಗಿತ್ತು. ಆದರೆ ವಿಧಿ ಅವರನ್ನು ಬೆಳಗಾವಿಯ ಜಿಲ್ಲಾಸ್ಪತ್ರೆಯ ಮಹಿಳಾ ವಾರ್ಡ್‍ನ ನೆಲದ ಮೇಲಿನ ಬೆಡ್ ಮೇಲೆ ದಿನದೂಡುವಂತೆ ಮಾಡಿದೆ.

    ಆರೋಗ್ಯದಲ್ಲಿ ಏರುಪೇರಾಗಿದ್ದ ಚನ್ನವ್ವರನ್ನು ಎರಡು ತಿಂಗಳ ಹಿಂದೆ ಯಾರೋ ಜಿಲ್ಲಾಸ್ಪತ್ರೆಗೆ ಸೇರಿಸಿದ್ದರು. ಬಳಿಕ ಅತ್ತ ಕಡೆ ಯಾರೂ ತಿರುಗಿ ನೋಡಿಲ್ಲ. ಆಸ್ಪತ್ರೆಯಲ್ಲಿರುವ ಇತರ ರೋಗಿಗಳ ಸಂಬಂಧಿಕರು ಅಜ್ಜಿಗೆ ಊಟ, ತಿಂಡಿ ನೀಡುತ್ತಿದ್ದಾರೆ.

    ಈ ಹಿರಿಯಜ್ಜಿ ಎದ್ದು ನಡಿಯುವ ಸ್ಥಿತಿಯಲ್ಲಿಲ್ಲ. ಕಣ್ಣುಗಳು ಸರಿಯಾಗಿ ಕಾಣಿಸುತ್ತಿಲ್ಲ. ತನ್ನ ಮಕ್ಕಳು, ಕುಟುಂಬದ ಬಗ್ಗೆ ನೆನಪಿಲ್ಲ. ಎಲ್ಲಿಗೆ ಹೋಗ್ಬೇಕು ಅನ್ನೋದ್ರ ಅರಿವಿಲ್ಲ. ಆದ್ರೆ ಈ ಇಳಿ ವಯಸ್ಸಿನಲ್ಲಿ ತನ್ನ ಸ್ಥಿತಿಯ ಬಗ್ಗೆ ಚನ್ನವ್ವಗೆ ಅಸಹನೆಯಿದೆ. ಹೀಗಾಗಿಯೇ ದಯಾಮರಣಕ್ಕಾಗಿ ವಿನಂತಿ ಮಾಡ್ತಿದ್ದಾರೆ.

    ಚನ್ನವ್ವನ ಈ ಸ್ಥಿತಿ ಬೇರಾರಿಗೂ ಬಾರದಿರಲಿ. ಈ ಸುದ್ದಿ ನೋಡಿದ ಬಳಿಕವಾದರೂ ಈ ಹಿರಿಯಜ್ಜಿಯ ಸಂಬಂಧಿಕರು ಜಿಲ್ಲಾಸ್ಪತ್ರೆಯತ್ತ ಮುಖ ಮಾಡ್ಲಿ ಅನ್ನೋದೇ ನಮ್ಮ ಆಶಯ.

  • ಮೀಡಿಯಾ ಗ್ರೂಪ್‍ನಲ್ಲಿ ಅಶ್ಲೀಲ ಚಿತ್ರಗಳನ್ನು ಹರಿಬಿಟ್ಟ ಬಿಜೆಪಿ ಎಂಎಲ್‍ಸಿ ಮಹಾಂತೇಶ ಕವಟಗಿಮಠ

    ಮೀಡಿಯಾ ಗ್ರೂಪ್‍ನಲ್ಲಿ ಅಶ್ಲೀಲ ಚಿತ್ರಗಳನ್ನು ಹರಿಬಿಟ್ಟ ಬಿಜೆಪಿ ಎಂಎಲ್‍ಸಿ ಮಹಾಂತೇಶ ಕವಟಗಿಮಠ

    ಬೆಳಗಾವಿ: ಬಿಜೆಪಿ ಎಂಎಲ್‍ಸಿ ಮಹಾಂತೇಶ ಕವಟಗಿಮಠ ಮಾಧ್ಯಮಗಳಿರುವ ವಾಟ್ಸಪ್ ಗ್ರೂಪಿಗೆ ಅಶ್ಲೀಲ ಫೋಟೋಗಳನ್ನು ಹಾಕಿದ್ದಾರೆ.

    ಇಂದು ಸಂಜೆ ಮಹಾಂತೇಶ ಕವಟಗಿಮಠ ಬೆಳಗಾವಿ ಮೀಡಿಯಾ ಫೋರ್ಸ್ ಗ್ರೂಪ್‍ನಲ್ಲಿ ಫೋಟೋ ಹಾಕಿ ಗ್ರೂಪಿನಲ್ಲಿರುವ ಸದಸ್ಯರಿಗೆ ಮುಜುಗರವನ್ನು ಉಂಟು ಮಾಡಿದ್ದಾರೆ.

    ಈ ಗ್ರೂಪಿನಲ್ಲಿ ರಾಜಕಾರಣಿಗಳು, ಮಾಧ್ಯಮದ ವ್ಯಕ್ತಿಗಳು, ಅಧಿಕಾರಿಗಳು ಸೇರಿ ಸುಮಾರು 50ಕ್ಕೂ ಹೆಚ್ಚು ಮಂದಿ ಸದಸ್ಯರಿದ್ದು ಸಂಜೆ ಕವಟಗಿಮಠ ಅವರ ವಾಟ್ಸಪ್ ನಂಬರ್ ನಿಂದ ಫೋಟೋಗಳು ಬಂದಿವೆ. ಈ ಫೋಟೋಗಳನ್ನು ನೋಡಿದ ಕೂಡಲೇ 30ಕ್ಕೂ ಹೆಚ್ಚು ಸದಸ್ಯರು  ಕವಟಗಿಮಠ ಅವರನ್ನು ತರಾಟೆಗೆ ತೆಗೆದುಕೊಂಡು ಗ್ರೂಪ್‍ನಿಂದ  ಲೆಫ್ಟ್ ಆಗಿದ್ದಾರೆ.

    ಈ ವಿಚಾರದ ಬಗ್ಗೆ ಪಬ್ಲಿಕ್ ಟಿವಿಗೆ ಪ್ರತಿಕ್ರಿಯಿಸಿದ ಮಹಾಂತೇಶ ಕವಟಗಿಮಠ, ಅಚಾತುರ್ಯವಾಗಿ ಈ ಘಟನೆ ನಡೆದಿದೆ. ನಾನು ಉದ್ದೇಶ ಪೂರ್ವಕವಾಗಿ ಪೋಟೋ ಹಾಕಿಲ್ಲ. ಈ ಘಟನೆಯಿಂದ ಯಾರಿಗಾದರೂ ನೋವಾದರೆ ಕ್ಷಮೆಕೇಳುತ್ತೇನೆ ಎಂದು  ತಿಳಿಸಿದ್ದಾರೆ.

    ಇದನ್ನೂ ಓದಿ: ಕರ್ನಾಟಕದಲ್ಲಿ ಫಸ್ಟ್: ಅವಹೇಳನಕಾರಿ ಪೋಸ್ಟ್ ಪ್ರಕಟವಾಗಿದ್ದಕ್ಕೆ ವಾಟ್ಸಪ್ ಅಡ್ಮಿನ್ ಅರೆಸ್ಟ್

  • ಕುಡಿದ ಮತ್ತಿನಲ್ಲಿ ಸಿಬ್ಬಂದಿಯೊಂದಿಗೆ ಜಗಳ- ಕಲ್ಲುತೂರಾಟಕ್ಕೆ ಬಾರ್ ಪುಡಿ-ಪುಡಿ

    ಕುಡಿದ ಮತ್ತಿನಲ್ಲಿ ಸಿಬ್ಬಂದಿಯೊಂದಿಗೆ ಜಗಳ- ಕಲ್ಲುತೂರಾಟಕ್ಕೆ ಬಾರ್ ಪುಡಿ-ಪುಡಿ

    ಬೆಳಗಾವಿ: ಕುಡಿಯುವ ವಿಚಾರಕ್ಕೆ ಸಂಬಂಧಿಸಿದಂತೆ ಬಾರ್ ಮಾಲೀಕ ಹಾಗೂ ಗ್ರಾಮಸ್ಥರ ನಡುವಿನ ಜಗಳ ತಾರಕಕ್ಕೇರಿದ ಘಟನೆ ಜಿಲ್ಲೆಯ ಸವದತ್ತಿ ತಾಲೂಕಿನ ತಲ್ಲೂರು ಗ್ರಾಮದಲ್ಲಿ ನಡೆದಿದೆ.

    ನಡೆದಿದ್ದೇನು?: ಐಎಸ್ ಇರಕಾರ ಮಾಲೀಕತ್ವದ ಬಾರ್ ಗೆ ಭಾನುವಾರ ರಾತ್ರಿ ತಲ್ಲೂರು ಗ್ರಾಮದ ನಾಲ್ವರು ಬಂದಿದ್ದು, ಕುಡಿದ ಮತ್ತಿನಲ್ಲಿ ಬಾರ್ ಸಿಬ್ಬಂದಿಯೊಂದಿಗೆ ಜಗಳ ಮಾಡಿಕೊಂಡಿದ್ದರು. ಇಂದು ಬೆಳಗ್ಗೆ ಗ್ರಾಮಕ್ಕೆ ಬಂದ ಬಾರ್ ಸಿಬ್ಬಂದಿ ನಾಲ್ವರ ಮನೆಗೆ ಹೋಗಿ ಅವರ ಮೇಲೆ ಹಲ್ಲೆ ನಡೆಸಿದ್ದಾರೆ. ಇದರಿಂದ ಕೋಪಗೊಂಡ ಗ್ರಾಮಸ್ಥರು ಬಾರ್‍ಗೆ ಬಂದು ಕಲ್ಲು ತೂರಾಟ ನಡೆಸಿದ್ದಾರೆ. ಗ್ರಾಮಸ್ಥರು ಕಲ್ಲು ತೂರಾಟ ಮಾಡುವುದರ ಜೊತೆಗೆ ಬಾರ್‍ನಲ್ಲಿದ್ದ ಮದ್ಯದ ಬಾಟಲಿಗಳನ್ನು ಒಡೆದು ಹಾಕಿದ್ದಾರೆ.

    ಗ್ರಾಮಸ್ಥರ ಆಕ್ರೋಶದ ಕಲ್ಲು ತೂರಾಟಕ್ಕೆ ಬಾರ್ ಅಂಗಡಿ ಸಂಪೂರ್ಣ ನಜ್ಜುಗುಜ್ಜಾಗಿದೆ. ಗಲಾಟೆಯಲ್ಲಿ ನೂರಾರು ಸಂಂಖ್ಯೆಯಲ್ಲಿ ಗ್ರಾಮಸ್ಥರು ಸೇರಿದ್ದರಿಂದ ಗ್ರಾಮದಲ್ಲಿ ಇದೀಗ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ.

    ಸವದತ್ತಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

    https://www.youtube.com/watch?v=Ocie8qPInnE

     

     

  • ಬೆಳಗಾವಿ: ಲಕ್ಷ್ಮಣ ರೇಖೆ ತಿಂದು 3 ವರ್ಷದ ಕಂದಮ್ಮ ತೀವ್ರ ಅಸ್ವಸ್ಥ!

    ಬೆಳಗಾವಿ: ಲಕ್ಷ್ಮಣ ರೇಖೆ ತಿಂದು 3 ವರ್ಷದ ಕಂದಮ್ಮ ತೀವ್ರ ಅಸ್ವಸ್ಥ!

    ಬೆಳಗಾವಿ: ಮನೆಯಲ್ಲಿ ಮಕ್ಕಳಿದ್ರೆ ತುಂಬಾ ಹುಷಾರಾಗಿರ್ಬೇಕು. ತಂದೆ ತಾಯಂದಿರು ಸ್ವಲ್ಪ ಯಾಮಾರಿದ್ರೂ ಮಕ್ಕಳ ಜೀವಕ್ಕೆ ಕುತ್ತು ಬರುತ್ತೆ ಅನ್ನೋದಕ್ಕೆ ಬೆಳಗಾವಿಯಿಂದ ಬಂದಿರೋ ಈ ಸ್ಟೋರಿನೇ ಸಾಕ್ಷಿ.

    ಲಕ್ಷ್ಮಣ ರೇಖೆ ತಿಂದು 3 ವರ್ಷದ ಮಗುವೊಂದು ಅಸ್ವಸ್ಥಗೊಂಡ ಘಟನೆ ಬೆಳಗಾವಿಯ ಖಾನಾಪುರ ತಾಲೂಕಿನ ನಂದಗಢ ಗ್ರಾಮದಲ್ಲಿ ನಡೆದಿದೆ. ಹರೀಶ್ ತಳವಾರ ಅಸ್ವಸ್ಥಗೊಂಡ ಮಗು.

    ನಡೆದಿದ್ದೇನು?: ಮೂರು ವರ್ಷದ ಹರೀಶ್ ಆಟವಾಡುತ್ತಾ ಪಕ್ಕದಲ್ಲಿದ್ದ ಜಿರಲೆ ಸಾಯಲು ಬಳಸುವ ಲಕ್ಷ್ಮಣ ರೇಖೆಯನ್ನು ತಿಂದಿದ್ದಾನೆ. ಪರಿಣಾಮ ಆತನಿಗೆ ವಾಂತಿಭೇದಿ ಆರಂಭವಾಗಿ ತೀವ್ರ ಅಸ್ವಸ್ಥಗೊಂಡಿದ್ದನು. ಮಗ ಅಸ್ವಸ್ಥಗೊಂಡ ಕೂಡಲೇ ಪೋಷಕರು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿದ್ದಾರೆ. ಸದ್ಯ ಹರೀಶ್ ಪಿಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ.

  • ಭೀಕರ ಅಗ್ನಿ ದುರಂತ: 25ಕ್ಕೂ ಹೆಚ್ಚು ಮನೆಗಳು, 25ಕ್ಕೂ ಹೆಚ್ಚು ಬಣವೆ, 14 ಜಾನುವಾರುಗಳು ಭಸ್ಮ

    ಭೀಕರ ಅಗ್ನಿ ದುರಂತ: 25ಕ್ಕೂ ಹೆಚ್ಚು ಮನೆಗಳು, 25ಕ್ಕೂ ಹೆಚ್ಚು ಬಣವೆ, 14 ಜಾನುವಾರುಗಳು ಭಸ್ಮ

    ಬೆಳಗಾವಿ: ಜಿಲ್ಲೆಯ ಸವದತ್ತಿ ತಾಲೂಕಿನ ಹಂಚಿನಾಳ ಗ್ರಾಮದಲ್ಲಿ ಭೀಕರ ಅಗ್ನಿ ದುರಂತ ಸಂಭವಿಸಿದ್ದು, 25ಕ್ಕೂ ಹೆಚ್ಚು ಮನೆಗಳು, 25ಕ್ಕೂ ಹೆಚ್ಚು ಮೇವಿನ ಬಣವೆ, 14 ಜಾನುವಾರುಗಳು ಬೆಂಕಿಯ ಕೆನ್ನಾಲಿಗೆಗೆ ಸುಟ್ಟು ಕರಕಲಾಗಿವೆ.

    ಶನಿವಾರ ಸಂಜೆ ಸುಮಾರು 4.30ರ ವೇಳೆಗೆ ಗ್ರಾಮದಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಮೊದಲು ಊರ ಹೊರಗಡೆ ಬೆಂಕಿ ಕಾಣಿಸಿಕೊಂಡಿತ್ತು. ನಂತರ ಬೆಂಕಿಯ ಕೆನ್ನಾಲಿಗೆ ಗ್ರಾಮಕ್ಕೂ ಸಹ ಆವರಿಸಿ ಶೇ.70 ರಷ್ಟು ಗ್ರಾಮ ಬೆಂಕಿಗಾಹುತಿಯಾಗಿದೆ. ಮನೆಗಳಿಗೆ ಬೆಂಕಿ ಬಿದ್ದಿದ್ದರಿಂದ 25ಕ್ಕೂ ಹೆಚ್ಚು ಕುಟುಂಬಗಳು ಬೀದಿಪಾಲಾಗಿವೆ.

    ಬೆಳಗಾವಿ, ಧಾರವಾಡ, ಬಾಗಲಕೋಟೆ ಜಿಲ್ಲೆಗಳಿಂದ ಆಗಮಿಸಿರುವ 10ಕ್ಕೂ ಹೆಚ್ಚು ಅಗ್ನಿ ಶಾಮಕದಳದ ವಾಹನಗಳಿಂದ ಬೆಂಕಿ ನಂದಿಸುವ ಕಾರ್ಯಾಚರಣೆ ನಡೆಯುತ್ತಿದೆ. ಆದರೂ ಬೆಂಕಿ ಹತೋಟಿಗೆ ಬರುತ್ತಿಲ್ಲ. ಬೆಂಕಿ ನಂದಿಸುವ ಕಾರ್ಯ ಭರದಿಂದ ಸಾಗಿದೆ.

    ಶನಿವಾರ ರಾತ್ರಿ ಮನೆಗಳಲ್ಲಿ ಬೆಂಕಿ ಕಾಣಿಸಿಕೊಂಡಿದ್ದರಿಂದ ಗ್ರಾಮಸ್ಥರು ಹೊರಬಂದು ರಸ್ತೆಬದಿಯಲ್ಲಿ ಕುಳಿತಿದ್ದರು. ಸದ್ಯ ಗ್ರಾಮದ ಪ್ರಾಥಮಿಕ ಶಾಲೆಯಲ್ಲಿ ಈ ಕುಟುಂಬಗಳಿಗೆ ತಾತ್ಕಾಲಿಕ ಊಟ, ವಸತಿ ವ್ಯವಸ್ಥೆ ಮಾಡಲಾಗಿದೆ.

    https://youtu.be/p6_BxagEP_g

     

  • ರಾಜ್ಯದ ಹಲವೆಡೆ ತಂಪೆರೆದ ಮಳೆರಾಯ – ರೈತರ ಮುಖದಲ್ಲಿ ನಗು

    ರಾಜ್ಯದ ಹಲವೆಡೆ ತಂಪೆರೆದ ಮಳೆರಾಯ – ರೈತರ ಮುಖದಲ್ಲಿ ನಗು

    ಬೆಂಗಳೂರು: ರಾಜ್ಯದ ಬಹುತೇಕ ಕಡೆಗಳಲ್ಲಿ ಇಂದು ಸಂಜೆ ಮಳೆಯಾಗಿದ್ದು, ಜನಜೀವನ ಅಸ್ತವ್ಯಸ್ಥಗೊಂಡಿದೆ.

    ಸಿಲಿಕಾನ್ ಸಿಟಿಯಲ್ಲಿ ಆಲಿಕಲ್ಲು ಸಹಿತ ಭಾರೀ ಮಳೆಯಾಗಿದ್ದು, ಕೆಂಗೇರಿ, ವಿಜಯನಗರ, ಆರ್‍ಆರ್ ನಗರ, ಶ್ರೀನಗರ ಸೇರಿ ಹಲವೆಡೆ ವರುಣನ ದರ್ಶನವಾಗಿದೆ. ಗುಡುಗು ಹಾಗೂ ಅಲಿಕಲ್ಲು ಸಹಿತ ಮಳೆಗೆ ವಾಹನ ಸವಾರರ ಪರದಾಟ ನಡೆಸುತ್ತಿದ್ದಾರೆ. ಕೆಂಗೇರಿ ಉಪನಗರದಲ್ಲಿ ಮರ ಉರುಳಿ ಇಂಡಿಕಾ ಕಾರು ಸಂಪೂರ್ಣ ಜಖಂಗೊಂಡಿದ್ದು, ಕೂದಲೆಳೆ ಅಂತರದಲ್ಲಿ ಕಾರು ಚಾಲಕ ಪ್ರಾಣಪಾಯದಿಂದ ಪಾರಾಗಿದ್ದಾರೆ.

    ಹಾಸನ, ರಾಮನಗರ, ತುಮಕೂರು, ಬೆಳಗಾವಿ, ವಿಜಯಪುರ, ಚಿತ್ರದುರ್ಗ ಸೇರಿ ಹಲವೆಡೆ ಭಾರೀ ಮಳೆಯಾಗಿದ್ದು, ವಾಹನ ಸಂಚಾರಕ್ಕೆ ತೊಡಕಾಗಿದೆ. ಹಾಸನದಲ್ಲಿ ಆಲಿಕಲ್ಲು ಸಹಿತ ಭಾರಿ ಮಳೆಯಾಗಿದೆ. ರಸ್ತೆಗಳಲ್ಲಿ ನೀರು ನಿಂತು ವಾಹನ ಸವಾರರು ಪರದಾಡಬೇಕಾಯ್ತು.

    ಇನ್ನು ಬಿಸಿಲು ನಾಡು ಖ್ಯಾತಿಯ ವಿಜಯಪುರದಲ್ಲಿ ಗುಡುಗು ಸಿಡಿಲು ಸಹಿತ ಮಳೆಯಾಗಿದ್ದು, ಅಲ್ಲಿನ ಜನರಲ್ಲಿ ಸಂತಸ ಮೂಡಿದೆ. ವಿಜಯಪುರ ನಗರದ ಸುತ್ತಮುತ್ತ ಭಾರಿ ಗಾಳಿ, ಸಿಡಿಲು ಸಮೇತ ಮಳೆಯಾಗಿದೆ.

    ಬೆಳಗಾವಿ ನಗರದಲ್ಲಿ ಕೂಡ ಆಲಿಕಲ್ಲು ಸಹಿತ ಭಾರೀ ಮಳೆಯಾಗಿದೆ. ಸತತ ಒಂದು ಗಂಟೆಯಿಂದ ಮಳೆರಾಯ ಸುರಿಯುತ್ತಿದ್ದು, ಮಳೆಯಿಂದ ವೀಕೆಂಡ್ ಆಗಿದ್ದರಿಂದ ಜನ ಜೀವನ ಅಸ್ತವ್ಯಸ್ಥಗೊಂಡಿದೆ. ಇಲ್ಲಿನ ಚಾವಟ್ ಗಲ್ಲಿಯ ತಗ್ಗು ಪ್ರದೇಶಕ್ಕೆ ನೀರು ನುಗ್ಗಿದೆ. ಕಟ್ಟಡ ಕಾಮಗಾರಿ ಸ್ಥಳದಲ್ಲಿ ನಿಲ್ಲಿಸಿದ ಜೆಸಿಬಿ ಸಂಪೂರ್ಣ ಜಲಾವೃತಗೊಂಡಿದೆ. ಒಟ್ಟಿನಲ್ಲಿ ಬಿಸಿಲಿನ ಬೇಗೆಯಿಂದ ಬಳಲಿದ ಗಡಿನಾಡು ಜನರಿಗೆ ವರುಣ ತಂಪೆರೇದಿದ್ದಾನೆ. ಈ ಮೂಲಕ ಭೀಕರ ಬರಗಾಲದಿಂದ ಕಂಗೆಟ್ಟ ರೈತರಲ್ಲಿ ಸಂತಸ ಮೂಡಿದೆ.

                                                                                               ಆಲಿಕಲ್ಲು

  • ಕಾವೇರಿಯನ್ನು ಬಲಿ ಪಡೆದ ಕೊಳವೆ ಬಾವಿ – ಜಮೀನು ಮಾಲೀಕನ ಮಗ ಅರೆಸ್ಟ್

    ಕಾವೇರಿಯನ್ನು ಬಲಿ ಪಡೆದ ಕೊಳವೆ ಬಾವಿ – ಜಮೀನು ಮಾಲೀಕನ ಮಗ ಅರೆಸ್ಟ್

    ಬೆಳಗಾವಿ: ಜಿಲ್ಲೆಯ ಅಥಣಿ ತಾಲೂಕಿನ ಝುಂಜರವಾಡ ಗ್ರಾಮದಲ್ಲಿ ತೆರೆದ ಕೊಳುವೆ ಬಾವಿಯನ್ನು ಮುಚ್ಚಿಸದೆ 6 ವರ್ಷದ ಕಂದಮ್ಮ ಕಾವೇರಿ ಸಾವಿಗೆ ಕಾರಣವಾಗಿದ್ದ ಜಮೀನಿನ ಮಾಲೀಕನ ಮಗನನ್ನ ಬೆಳಗಾವಿ ಪೊಲೀಸರು ಬಂಧಿಸಿದ್ದಾರೆ.

    ಬಾಗಲಕೋಟೆಯಲ್ಲಿ ತಲೆ ಮರಿಸಿಕೊಂಡಿದ್ದ ಶಂಕರ ಹಿಪ್ಪರಗಿಯ ಮಗ ಮುತ್ತಪ್ಪ ಶಂಕರ ಹಿಪ್ಪರಗಿಯನ್ನು ಐಗಳಿ ಪೆÇಲೀಸರು ಬಂಧಿಸಿದ್ದಾರೆ. ಇನ್ನು ಈತನ ತಂದೆ ಶಂಕರ ಹಿಪ್ಪರಗಿ ಇನ್ನೂ ತಲೆಮರೆಸಿಕೊಂಡಿದ್ದು ಪೊಲೀಸರು ತೀವ್ರ ಶೋಧ ನಡೆಸಿದ್ದಾರೆ. ತನ್ನ ಜಮೀನಿನ ಕೊಳವೆ ಬಾವಿಯಲ್ಲಿ ಕಾವೇರಿ ಬಿದ್ದ ಸುದ್ದಿ ತಿಳಿದ ತಕ್ಷಣವೇ ಶಂಕರ ಹಿಪ್ಪರಗಿ ಹಾಗೂ ಕುಟುಂಬ ಸದಸ್ಯರು ಪರಾರಿಯಾಗಿದ್ದರು.

    ಸತತ 53 ಗಂಟೆಗಳ ಕಾಲ ಕಾವೇರಿಯ ರಕ್ಷಣೆಗಾಗಿ ಎನ್‍ಆರ್‍ಡಿಎಫ್ ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿ ನಡೆಸಿದ ರಕ್ಷಣಾ ಕಾರ್ಯಚರಣೆ ಫಲಿಸದ ಪರಿಣಾಮ ಕಾವೇರಿ ಶವವನ್ನು ಹೊರ ತೆಗೆಯಲಾಗಿತ್ತು. ಕಾವೇರಿಗಾಗಿ ರಾಜ್ಯದ ಜನತೆ ನಡೆಸಿದ ಪ್ರಾರ್ಥನೆ ಈಡೇರಿರಲಿಲ್ಲ.

  • ಮರ್ಯಾದಾ ಹತ್ಯೆ: ಮಗಳು, ಆಕೆಯ ಪ್ರಿಯಕರನನ್ನ ಕೊಚ್ಚಿ ಕೊಂದ ತಂದೆ

    ಮರ್ಯಾದಾ ಹತ್ಯೆ: ಮಗಳು, ಆಕೆಯ ಪ್ರಿಯಕರನನ್ನ ಕೊಚ್ಚಿ ಕೊಂದ ತಂದೆ

    ಬೆಳಗಾವಿ: ರಾಜ್ಯದಲ್ಲಿ ಮತ್ತೊಂದು ಮರ್ಯಾದೆ ಘಟನೆ ಬೆಳಕಿಗೆ ಬಂದಿದೆ. ಪೋಷಕರ ವಿರುದ್ಧವಾಗಿ ಅನ್ಯಜಾತಿಯ ಯುವಕನನ್ನು ಪ್ರೀತಿಸಿದ್ದಕ್ಕೆ ಯುವತಿಯ ತಂದೆಯೆ ಮನೆಯಲ್ಲೇ ಕೊಚ್ಚಿ ಕೊಲೆ ಮಾಡಿ ಬಳಿಕ ಪೊಲೀಸರಿಗೆ ಶರಣಾಗಿದ್ದಾನೆ.

    ಕೊಲೆ ನಡೆದ ಸ್ಥಳ

    ಜಿಲ್ಲೆಯ ಸವದತ್ತಿ ತಾಲೂಕಿನ ಬೆಡಸೂರ ಗ್ರಾಮದಲ್ಲಿಯೆ ಮರ್ಯಾದೆ ಹತ್ಯೆ ನಡೆದಿದೆ. 45 ವರ್ಷದ ಯಲ್ಲಪ್ಪ ಭೀಮಪ್ಪ ಆಡೀನ್ ಎಂಬ ತಂದೆಯೆ ತನ್ನ ಸ್ವಂತ ಮಗಳನ್ನೇ ಹತ್ಯೆ ಮಾಡಿದ್ದಾನೆ. ರುಕ್ಮವ್ವ ಯಲ್ಲಪ್ಪ ಆಡೀನ್ (16) ಮತ್ತು ಮಂಜುನಾಥ್ ಪಡೇಶ್ವರ್ (21) ಕೊಲೆಯಾದ ಜೋಡಿಗಳು.

    ರುಕ್ಮವ್ವ ಅದೇ ಗ್ರಾಮದ ಮಂಜುನಾಥ್ ಎಂಬವರನ್ನು ಪ್ರೀತಿ ಮಾಡುತ್ತಿದ್ದರು. ರುಕ್ಮವ್ವ ಮತ್ತು ಮಂಜುನಾಥ್ ಇಬ್ಬರದೂ ಜಾತಿ ಬೇರೆಯಾಗಿದ್ದರಿಂದ ಪೋಷಕರ ವಿರೋಧವಿತ್ತು. ಮನೆಯಲ್ಲಿ ಯಾರು ಇಲ್ಲದ ವೇಳೆಯಲ್ಲಿ ರುಕ್ಮವ್ವಳನ್ನು ಭೇಟಿಯಾಗಲು ಮಂಜುನಾಥ್ ಹೋಗಿದ್ದಾರೆ. ಆದರೆ ಅದೇ ವೇಳೆಗೆ ಮನೆಗೆ ಬಂದ ಯಲ್ಲಪ್ಪ ಇಬ್ಬರನ್ನು ಕಂಡು ಕೋಪದಿಂದ ಕೊಚ್ಚಿ ಕೊಲೆ ಮಾಡಿದ್ದಾನೆ. ಕೊಲೆ ನಂತರ ನೇರವಾಗಿ ಪೊಲೀಸರಿಗೆ ಶರಣಾಗಿದ್ದಾನೆ. ಈ ಸಂಬಂಧ ಸವದತ್ತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

     

  • ಮಣ್ಣಲ್ಲಿ ಮಣ್ಣಾದ ಕಾವೇರಿ – ಮಧ್ಯರಾತ್ರಿ ಅಂತ್ಯಸಂಸ್ಕಾರ

    ಮಣ್ಣಲ್ಲಿ ಮಣ್ಣಾದ ಕಾವೇರಿ – ಮಧ್ಯರಾತ್ರಿ ಅಂತ್ಯಸಂಸ್ಕಾರ

    ಬೆಳಗಾವಿ: ಜಿಲ್ಲೆಯ ಅಥಣಿ ತಾಲೂಕಿನ ಝುಂಜರವಾಡ ಗ್ರಾಮದ ಮೃತ್ಯುಕೂಪ ಕೊಳವೆಬಾವಿಗೆ ಬಿದ್ದಿದ್ದ 6 ವರ್ಷದ ಕಾವೇರಿ ಕೊನೆಗೂ ಬದುಕಲೇ ಇಲ್ಲ.

    ಅಥಣಿಯ ಕೊಕಟನೂರು ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಕಾವೇರಿಯ ಮರಣೋತ್ತರ ಪರೀಕ್ಷೆ ನಡೆಸಲಾಯ್ತು. ಈ ವೇಳೆ ಅಥಣಿ ತಹಸೀಲ್ದಾರ್ ಉಮಾದೇವಿ ಹಾಜರಿದ್ದರು. ಇನ್ನು ಮರಣೋತ್ತರ ಪರೀಕ್ಷೆ ನಡೆಸಿದ ಬಳಿಕ ಕುಟುಂಬಕ್ಕೆ ಶವ ಹಸ್ತಾಂತರಿಸಲಾಯ್ತು. ಈ ವೇಳೆ ಹೆತ್ತವ್ವ ಸವಿತಾ ಮತ್ತು ತಂದೆ ಅಜಿತ್ ಗೋಳಾಟ ಎಂಥವರ ಕರಳು ಕಿವುಚುವಂತಿತ್ತು. ಸಂಬಂಧಿಕರಂತೂ ಎದೆ ಎದೆ ಹೊಡೆದುಕೊಂಡ್ರು. ಗ್ರಾಮಸ್ಥರೆಲ್ಲರೂ ಗೋಳಾಡಿದರು. ಬಳಿಕ ಝುಂಜರವಾಡ ಗ್ರಾಮದಲ್ಲಿ ಮಧ್ಯರಾತ್ರಿ 2 ಗಂಟೆ ಸುಮಾರಿಗೆ ಅಂತ್ಯಕ್ರಿಯೆ ಮಾಡಲಾಯ್ತು.

    ಏಪ್ರಿಲ್ 22ರಂದು ಅಮ್ಮನ ಜೊತೆ ಕಟ್ಟಿಗೆ ಆರಿಸಲು ಹೋಗಿದ್ದ ಕಾವೇರಿ ಸಂಜೆ 5 ಗಂಟೆ ಸುಮಾರಿಗೆ ಶಂಕರಪ್ಪ ಹಿಪ್ಪರಗಿ ಅವ್ರ ತೋಟದ ಕೊಳವೆ ಬಾವಿಯಲ್ಲಿ ಬಿದ್ದಿದ್ದಳು. ಸುದ್ದಿ ತಿಳಿದು ರಾತ್ರಿ 8 ಗಂಟೆ ಸುಮಾರಿಗೆ ಕಾರ್ಯಾಚರಣೆ ಆರಂಭಿಸಿದ್ದ ರಕ್ಷಣಾ ಪಡೆಗಳು ಸತತ 54 ಗಂಟೆ ಕಾರ್ಯಾಚರಣೆ ಬಳಿಕ ಸೋಮವಾರ ರಾತ್ರಿ 11.33ರ ಸುಮಾರಿಗೆ ಕಾವೇರಿಯ ಮೃತದೇಹವನ್ನ ಹೊರ ತೆಗೆದರು.

    28 ಅಡಿಯಲ್ಲಿ ಸಿಲುಕಿದ್ದ ಕಾವೇರಿಯನ್ನ ಸುರಂಗ ಕೊರೆದು ನಿನ್ನೆ ರಾತ್ರಿ ರಕ್ಷಣಾ ಸಿಬ್ಬಂದಿ ಹೊರ ತೆಗೆದ್ರು. ಆದಾಗಲೇ ಸಾವನ್ನಪ್ಪಿದ್ದ ಕಾವೇರಿ ಬಾಯಲ್ಲಿ ರಕ್ತ ಬಂದಿತ್ತು. ಲವಲವಿಕೆಯಿಂದ ಚೂಟಿಯಾಗಿದ್ದ ಮಗಳನ್ನ ಶವವಾಗಿ ಕಂಡ ಪೋಷಕರ ಆಕ್ರಂದನ ಮುಗಿಲುಮುಟ್ಟಿತ್ತು.

  • ಕೊನೇ ಹಂತ ತಲುಪಿದ ಕಾವೇರಿ ರಕ್ಷಣೆ- ಸುರಂಗ ಕೊರೆಯಲು ಒಂದೂವರೆ ಅಡಿ ಬಾಕಿ

    ಕೊನೇ ಹಂತ ತಲುಪಿದ ಕಾವೇರಿ ರಕ್ಷಣೆ- ಸುರಂಗ ಕೊರೆಯಲು ಒಂದೂವರೆ ಅಡಿ ಬಾಕಿ

    ಬೆಳಗಾವಿ: ಝುಂಜರವಾಡದಲ್ಲಿ ಕೊಳವೆ ಬಾವಿಗೆ ಬಿದ್ದು 27 ಅಡಿಯಲ್ಲಿ ಸಿಲುಕಿರುವ ಕಾವೇರಿಯನ್ನು ಮೇಲೆತ್ತಲು ರಕ್ಷಣಾ ಪಡೆಗಳು ಈಗಾಗಲೇ 24 ಅಡಿ ಆಳ ತೆಗೆದಿದ್ದಾರೆ. 2 ಹಿಟಾಚಿ, 2 ಜೆಸಿಬಿ ಬಳಸಿ ಅಡ್ಡಲಾಗಿ ಸುರಂಗ ಕೊರೆಯಲು ಕಾರ್ಯಾಚರಣೆ ಆರಂಭಿಸಿದ್ದಾರೆ. 4 ಎನ್‍ಡಿಆರ್‍ಎಫ್, ರಾಯಚೂರಿನ 6 ಹಟ್ಟಿ ಚಿನ್ನದ ಗಣಿ ಟೀಂಗಳಿಂದ ಅಹೋರಾತ್ರಿ ಆಪರೇಷನ್ ನಡೆಯುತ್ತಿದೆ.

    ಶನಿವಾರ ಸಂಜೆ ಕಾವೇರಿ ತನ್ನ ತಾಯಿಯ ಜೊತೆ ಕಟ್ಟಿಗೆ ಆರಿಸುವಾಗ ಕೊಳವೆ ಬಾವಿಯಲ್ಲಿ ಬಿದ್ದಿದ್ದಳು. 27 ಅಡಿ ಆಳದಲ್ಲಿ ಕಾವೇರಿಯ ಕೈಗಳು ಕ್ಯಾಮೆರಾಗೆ ಕಾಣಿಸಿದ್ದವು. ಹುಕ್ ಮೂಲಕ ಬಾಲಕಿಯನ್ನು ಐದಾರು ಬಾರಿ ಮೇಲೆತ್ತುವ ಪ್ರಯತ್ನ ಮಾಡಿದ್ರೂ ಯಶಸ್ವಿಯಾಗಲಿಲ್ಲ. ದೊಡ್ಡ ಗಾತ್ರದ ಬಂಡೆಗಳು ಸಿಕ್ಕಿರುವ ಕಾರಣ ಕಾರ್ಯಾಚರಣೆಗೆ ತೊಡಕಾಗಿದೆ. ಕೊಳವೆ ಬಾವಿ ಸುತ್ತ 20 ಬೋರ್‍ವೆಲ್ ಕೊರೆದು ಸಕ್ಕಿಂಗ್ ಮಷಿನ್ ಮೂಲಕ ಮಣ್ಣು ತೆಗೆಯುವ ಕಾರ್ಯ ನಡೆಯುತ್ತಿದೆ. ಆದರೆ ಈವರೆಗೂ ಇದ್ಯಾವುದೂ ಫಲ ನೀಡಿಲ್ಲ. ಸ್ಥಳದಲ್ಲಿ ಇಡೀ ಜಿಲ್ಲಾಡಳಿತ ಬೀಡುಬಿಟ್ಟು ರಕ್ಷಣಾ ಕಾರ್ಯದಲ್ಲಿ ತೊಡಗಿದೆ.

    ಕಾವೇರಿಯ ಹೆತ್ತವರಾದ ಅಜಿತ್ ಮತ್ತು ಸವಿತಾ ಸ್ಥಿತಿ ಯಾರಿಗೂ ಬೇಡವಾಗಿದೆ. ಮಗಳು ಸಿಗೋವರೆಗೂ ಆಹಾರ ಸೇವಿಸುವುದಿಲ್ಲ ಎಂದು ಸವಿತಾ ಪಟ್ಟು ಹಿಡಿದಿದ್ದಾರೆ. ಇನ್ನು ಅವಘಡಕ್ಕೆ ಕಾರಣರಾದ ಜಮೀನು ಮಾಲೀಕ ಶಂಕರಪ್ಪ ಹಿಪ್ಪರಗಿ ನಾಪತ್ತೆಯಾಗಿದ್ದಾರೆ. ಸ್ಥಳೀಯ ಠಾಣೆಯಲ್ಲಿ ಜಮೀನು ಮಾಲೀಕ ಶಂಕರಪ್ಪ ವಿರುದ್ಧ ಐಪಿಸಿ ಸೆಕ್ಷನ್ 371ರಡಿ ನಿರ್ಲಕ್ಷ್ಯದ ಆರೋಪದ ಮೇಲೆ ದೂರು ದಾಖಲಿಸಲಾಗಿದೆ.

    ಕಾವೇರಿ ರಕ್ಷಣೆಗೆ ಇನ್ನೂ 15 ಗಂಟೆ ಬೇಕು. ಬಾಲಕಿಯ ಕೈಕಾಲುಗಳ ಚಲನವಲನ ಆಗ್ತಿಲ್ಲ. ನಮ್ಮ ಪ್ರಯತ್ನ ನಡೆಯುತ್ತಿದೆ. ನಾವು ನಿರಂತರವಾಗಿ ರಕ್ಷಣಾ ಕಾರ್ಯ ನಡೆಸುತ್ತಿದ್ದೇವೆ ಅಂತಾ ರಕ್ಷಣಾ ಕಾರ್ಯಾಚರಣೆ ಅಧಿಕಾರಿಗಳು ಹೇಳಿದ್ದಾರೆ. ಈ ನಡುವೆ ಝಂಜರವಾಡದಲ್ಲಿ ತಾಪಮಾನ 45 ಡಿಗ್ರಿ ಸೆಲ್ಸಿಯಸ್ ಇರೋದ್ರಿಂದ ರಕ್ಷಣಾ ತಂಡದ ಸದಸ್ಯರು ಬಳಲಿದ್ದಾರೆ.