Tag: belagavi

  • ತರಬೇತಿ ವೇಳೆ ಬೋಟ್ ಮುಳುಗಿ ಇಬ್ಬರು ಕಮಾಂಡೋಗಳ ದುರ್ಮರಣ

    ತರಬೇತಿ ವೇಳೆ ಬೋಟ್ ಮುಳುಗಿ ಇಬ್ಬರು ಕಮಾಂಡೋಗಳ ದುರ್ಮರಣ

    ಬೆಳಗಾವಿ: ನೆರೆಯ ಮಹಾರಾಷ್ಟ್ರದ (Maharashtra) ತಿಲಾರಿ ಡ್ಯಾಂನಲ್ಲಿ ರಿವರ್ ಕ್ರಾಸಿಂಗ್ (River Crossing) ತರಬೇತಿಗೆ ಹೋಗಿದ್ದ ಬೆಳಗಾವಿ ಕಮಾಂಡೋ ಸೆಂಟರ್‌ನ ಇಬ್ಬರು ಕಮಾಂಡೋಗಳು (Commando) ಬೋಟ್ (Boat) ಮುಳುಗಿ ಮೃತಪಟ್ಟ ಘಟನೆ ನಡೆದಿದೆ.

    ಬೆಳಗಾವಿಯ (Belagavi) ಜೆಎಲ್ ವಿಂಗ್ ಕಮಾಂಡೋ ತರಬೇತಿ ಕೇಂದ್ರದ ರಾಜಸ್ಥಾನ ಮೂಲದ ವಿಜಯ್ ಕುಮಾರ್ ದಿನವಾಲ್ (28) ಹಾಗೂ ಪಶ್ಚಿಮ ಬಂಗಾಳದ ದಿವಾಕರ್ ರಾಯ್(26) ಮೃತಪಟ್ಟಿದ್ದಾರೆ. ಇಬ್ಬರು ಜವಾನರು ಕಮಾಂಡೋ ಸೆಂಟರ್‌ನ ಸೈನಿಕರಿಗೆ ರಿವರ್ ಕ್ರಾಸಿಂಗ್ ತರಬೇತಿ ನೀಡುತ್ತಿದ್ದರು. ಬೋಟ್‌ನಲ್ಲಿ ರಿವರ್ ಕ್ರಾಸಿಂಗ್ ಮಾಡುತ್ತಿದ್ದ ಆರು ಜನ ಸೈನಿಕರ ಪೈಕಿ ಇಬ್ಬರು ಮೃತಪಟ್ಟಿದ್ದು, ನಾಲ್ವರು ಬದುಕುಳಿದಿದ್ದಾರೆ. ಇದನ್ನೂ ಓದಿ: ರಸ್ತೆ ಬದಿ ನಿಂತಿದ್ದ ಬಾಲಕನ ಮೇಲೆ ಹರಿದ ಸರ್ಕಾರಿ ಬಸ್ – ಬಾಲಕ ಸ್ಥಳದಲ್ಲೇ ಸಾವು!

    ಬೆಳಗಾವಿಯ ಕಮಾಂಡೋ ತರಬೇತಿ ವಿಭಾಗದ ಇಬ್ಬರು ಸೈನಿಕರು ರಿವರ್ ಕ್ರಾಸಿಂಗ್ ತರಬೇತಿ ಪಡೆಯಲು ತಿಲ್ಲಾರಿ ಡ್ಯಾಂ ಹಿನ್ನೀರಿನ ಜಲಪ್ರದೇಶಕ್ಕೆ ತೆರಳಿದ್ದರು. ಹಿನ್ನೀರಿನ ಒಂದು ದಡದಿಂದ ಇನ್ನೊಂದು ದಡಕ್ಕೆ ಬೋಟ್‌ನಲ್ಲಿ ಆರು ಜನ ಸೈನಿಕರು ತೆರಳಿದ್ದರು. ಮಧ್ಯದಲ್ಲಿಯೇ ಬೋಟ್ ಮುಳುಗಿದ್ದರಿಂದ ಇಬ್ಬರು ಮೃತಪಟ್ಟಿದ್ದಾರೆ. ಇದನ್ನೂ ಓದಿ: ಸಾವಿನ ಮನೆಯಲ್ಲಿ ಚಿನ್ನಾಭರಣ ಕಳವು ಮಾಡಿ ಎಸ್ಕೇಪ್ ಆಗಿದ್ದ ಸಂಬಂಧಿಕರು ಅರೆಸ್ಟ್

  • 2028 ರವರೆಗೆ ಅಭಿಮಾನಿಗಳು ಕಾಯಬೇಕು: ಸಿಎಂ ಸ್ಥಾನದ ಬಗ್ಗೆ ಸತೀಶ್ ಜಾರಕಿಹೊಳಿ ಮಾತು

    2028 ರವರೆಗೆ ಅಭಿಮಾನಿಗಳು ಕಾಯಬೇಕು: ಸಿಎಂ ಸ್ಥಾನದ ಬಗ್ಗೆ ಸತೀಶ್ ಜಾರಕಿಹೊಳಿ ಮಾತು

    ಬೆಳಗಾವಿ: 2028 ರವರೆಗೆ ಅಭಿಮಾನಿಗಳು ಕಾಯಬೇಕು ಎಂದು ಸಿಎಂ ಸ್ಥಾನದ ವಿಚಾರವಾಗಿ ಸಚಿವ ಸತೀಶ್ ಜಾರಕಿಹೊಳಿ (Satish Jarkiholi) ಪ್ರತಿಕ್ರಿಯೆ ನೀಡಿದರು.

    ಬೆಳಗಾವಿಯಲ್ಲಿ ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯ (Siddaramaiah) ಇದ್ದಾರೆ ಅವರೇ ಮುಂದುವರೆಯುತ್ತಾರೆ. ನಾವೆಲ್ಲೂ ಸಿಎಂ ಸ್ಥಾನವನ್ನು ಕ್ಲೆಮ್ ಮಾಡಿಲ್ಲ. ಇದರಲ್ಲಿ ಗುದ್ದಾಟ, ಕುಸ್ತಿ ಮಾಡೋ ಅವಶ್ಯಕತೆ ಇಲ್ಲ. ಅನೇಕರು ಈಗಾಗಲೇ ಸಿಎಂ ಆಗುವ ಆಸೆಯನ್ನು ವ್ಯಕ್ತಪಡಿಸಿದ್ದಾರೆ ಎಂದು ಸ್ಪಷ್ಟಪಡಿಸಿದರು. ಇದನ್ನೂ ಓದಿ: ಸಿದ್ದರಾಮಯ್ಯ ರಾಜೀನಾಮೆ ಕೊಟ್ಟರೆ ಸತೀಶ್ ಜಾರಕಿಹೊಳಿ ಸಿಎಂ ಆಗಲಿ – ಅಭಿಮಾನಿಗಳ ಅಭಿಯಾನ

    ಮುಂದಿನ ಸಿಎಂ ಸತೀಶ್ ಜಾರಕಿಹೊಳಿ ಅಂತಾ ಅಭಿಯಾನ ವಿಚಾರವಾಗಿ ಮಾತನಾಡಿ, ಯಾರೋ ಒಬ್ಬರು ಹಾಕಿದ್ರೆ ರಾಜ್ಯದ ಅಭಿಪ್ರಾಯ ಆಗಲ್ಲ. ಎಲ್ಲಾ ಕಡೆ ಆರಂಭವಾಗಿದ್ದಾಗ ನಮ್ಮವರು ಹಾಕಿದ್ದಾರೆ. ರಾಜ್ಯದಲ್ಲಿ ಅಂತಹ ಸನ್ನಿವೇಶ ಇಲ್ಲ ಎಂದು ತಿಳಿಸಿದರು.

    ಸಿಎಂ ಸಿದ್ದರಾಮಯ್ಯ ಮುಂದುವರೆಯುತ್ತಾರೆ ಎನ್ನುವ ನಂಬಿಕೆ ಇದೆ. ದೆಹಲಿಗೆ ಬೇರೆ ಕೆಲಸ ಇರುತ್ತೆ ಹೋಗಿರ್ತೀವಿ. ಎಂ.ಬಿ.ಪಾಟೀಲ್, ಶಿವಾನಂದ, ದೇಶಪಾಂಡೆ ಅನೇಕರು ತಮ್ಮ ಅಭಿಪ್ರಾಯ ಹೇಳಿದ್ದಾರೆ. ಸಿದ್ದರಾಮಯ್ಯ ಪರ ನ್ಯಾಯ ಸಿಗುತ್ತೆ ಎನ್ನುವ ನಂಬಿಕೆ ಇದೆ. ಸಿಎಂ ಬದಲಾವಣೆ ಪ್ರಶ್ನೆ ಬರಲ್ಲ ಎನ್ನುವ ವಿಶ್ವಾಸ ಇದೆ ಎಂದರು. ಇದನ್ನೂ ಓದಿ: ರಾಹುಲ್‌ ಗಾಂಧಿ ಅಮೆರಿಕ ಪ್ರವಾಸ – ಏರ್‌ಪೋರ್ಟ್‌ನಲ್ಲಿ ಸ್ವಾಗತಿಸಿದ ಸ್ಯಾಮ್‌ ಪಿತ್ರೋಡಾ

    ಈಗ ಸಿಎಂ ಕನಸು ಕಂಡಿಲ್ಲ. ಈಗಾಗಲೇ ಸಿಎಂ ಸಿದ್ದರಾಮಯ್ಯಗೆ ಬೆಂಬಲ ನೀಡಿದ್ದೇನೆ. ಯಾವುದೋ ಸಂದರ್ಭದಲ್ಲಿ ಅಭಿಮಾನಿಗಳು ಹೇಳಿಕೆ ಕೊಟ್ಟಿರುತ್ತಾರೆ. ಎಲ್ಲಿಯೂ ನಾನೇ ಸಿಎಂ ಆಗ್ತೇನಿ ಅಂತಾ ಯಾರು ಹೇಳಿಲ್ಲ. ಈ ರೀತಿ ಹೇಳಿಕೆ ಎಪೆಕ್ಟ್ ಆಗುವುದಿಲ್ಲ. 2028ಕ್ಕೆ ಸಿಎಂ ಆಗುವ ತಯಾರಿ ಇದೆ ನಮ್ಮದು. ಅಲ್ಲಿಯವರೆಗೆ ಅಭಿಮಾನಿಗಳು ಕಾಯಬೇಕು ಎಂದು ಸಲಹೆ ನೀಡಿದರು.

  • Digital Arrest | ಮಹಿಳೆಯರ ನಗ್ನ ವೀಡಿಯೋ ರೆಕಾರ್ಡ್ ಮಾಡಿ ಹಣಕ್ಕಾಗಿ ಬ್ಲ್ಯಾಕ್​ ಮೇಲ್!

    Digital Arrest | ಮಹಿಳೆಯರ ನಗ್ನ ವೀಡಿಯೋ ರೆಕಾರ್ಡ್ ಮಾಡಿ ಹಣಕ್ಕಾಗಿ ಬ್ಲ್ಯಾಕ್​ ಮೇಲ್!

    – ಬೆಳಗಾವಿ ಸೈಬರ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

    ಬೆಳಗಾವಿ: ಮುಂಬೈ ಕ್ರೈಂ ಬ್ರ್ಯಾಂಚ್, ಗುಪ್ತಚರ ಇಲಾಖೆ ಅಧಿಕಾರಿಗಳು ಅಂತ ಹೇಳಿಕೊಂಡು ಮಹಿಳೆಯರಿಗೆ ವಿಡಿಯೋ ಕಾಲ್​ ಮಾಡಿ, ಅವರ ನಗ್ನ ದೇಹವನ್ನು ವಿಡಿಯೋ ರೆಕಾರ್ಡ್​ ಮಾಡಿಕೊಂಡು ಹಣಕ್ಕಾಗಿ ಬ್ಲ್ಯಾಕ್​ ಮೇಲ್​ ಮಾಡುತ್ತಿರುವ ಪ್ರಕರಣ ಬೆಳಗಾವಿಯಲ್ಲಿ (Belagavi) ಬೆಳಕಿಗೆ ಬಂದಿದೆ. ಇದನ್ನು ಡಿಜಿಟಲ್‌ ಅರೆಸ್ಟ್‌ (Digital Arrest) ಎಂದೂ ಸಹ ಕರೆಯುತ್ತಾರೆ. ಈ ಕುರಿತು ಇಲ್ಲಿನ ಸೈಬರ್ ಎಕನಾಮಿಕ್ಸ್ ಮತ್ತು ನಾರ್ಕೋಟಿಕ್ಸ್ (CEN) ಠಾಣೆಯಲ್ಲಿ ದೂರು ದಾಖಲಾಗಿದೆ.

    ಪ್ರಕರಣ ಸಂಬಂಧ ಮಾಧ್ಯಮಗಳ ಜೊತೆ ಮಾತನಾಡಿರುವ ನಗರ ಪೊಲೀಸ್ ಆಯುಕ್ತ ಯಡಾ ಮಾರ್ಟಿನ್ ಮಾರ್ಬನ್ಯಾಂಗ್, ಸೈಬರ್‌ ಕಳ್ಳರು ಹೊಸ ಮಾರ್ಗಗಳಲ್ಲಿ ಅಪರಾಧ ಕೃತ್ಯಗಳಿಗೆ ಮುಂದಾಗುತ್ತಿದ್ದಾರೆ. ಮೊದಲಿಗೆ ಇ-ಮೇಲ್‌, ಮೆಸೇಜ್, ಕಾಲ್ಸ್ ಅಥವಾ ವಾಟ್ಸಪ್‌ ಮೂಲಕ ಒಂದು ಮೆಸೇಜ್ ಬರುತ್ತದೆ. ಕ್ರೈಮ್‌ ಬ್ರ್ಯಾಂಚ್‌ನಿಂದ ಕರೆ ಮಾಡುತ್ತಿದ್ದೇವೆ. ನಿಮ್ಮ ಹೆಸರು ಕ್ರಿಮಿನಲ್ ಕೇಸ್‌ನಲ್ಲಿದೆ. ನೀವು ನಮ್ಮ ಹತ್ತಿರ ಬರಬೇಕು ರಿಪೋರ್ಟ್ ಕೊಡಬೇಕು ಯಾಕೆ ನೀವು ಈ ರೀತಿ ಮಾಡಿದೀರಿ ಅಂತ ಹೇಳ್ತಾರೆ. ಈ ರೀತಿ ಮಾಡಿ ಸಂತ್ರಸ್ತರಿಗೆ ಭಯ ಹುಟ್ಟಿಸುತ್ತಿದ್ದಾರೆ ಎಂದು ವಿವರಿಸಿದ್ದಾರೆ. ಇದನ್ನೂ ಓದಿ: ಸದ್ದು ಮಾಡುತ್ತಿದೆ ಅನೀಶ್, ಮಿಲನಾ ನಾಗರಾಜ್ ನಟನೆಯ ‘ಆರಾಮ್ ಅರವಿಂದ ಸ್ವಾಮಿ’ ಚಿತ್ರದ ಪೋಸ್ಟರ್

    ಈಗ ನಾವು ನಿಮ್ಮನ್ನು ವಿಚಾರಣೆ ಮಾಡಬೇಕು. ಕ್ಯಾಮೆರಾ ಮುಂದೆ ನೀವು ಬರಬೇಕು. ಬೇರೆ ಕಡೆ ನೀವು ಹೋದರೆ ನಿಮ್ಮ ಕ್ರೈಮ್ ಬಗ್ಗೆ ಫ್ಯಾಮಿಲಿ ಅವರಿಗೆ ಹೇಳುತ್ತೇವೆ. ಹೇಗೆ ಕ್ರೈಮ್ ಮಾಡಿದೀರಿ ಅಂತಾ ನಿಮ್ಮ ಬಾಡಿ ವೆರಿಫಿಕೇಶನ್ ಆಗಬೇಕು ಬಟ್ಟೆ ಬಿಚ್ಚಬೇಕು ಅಂತಾ ಹೇಳ್ತಾರೆ. ಬಳಿಕ ಆ ವಿಡಿಯೋ ಇಟ್ಟುಕೊಂಡು ಹಣಕ್ಕಾಗಿ ಬ್ಲ್ಯಾಕ್ ಮೇಲ್ ಮಾಡುತ್ತಾರೆ. ಈ ರೀತಿ ಸುಳ್ಳು ಹೇಳಿ ನಂಬಿಸಿ ಹಣ ದೋಚುವ ಕೆಲಸ ಮಾಡುತ್ತಿದ್ದಾರೆ. ಈ ರೀತಿ ಮೂರು ಪ್ರಕರಣಗಳು ಸೆನ್‌ ಪೊಲೀಸ್‌ ಠಾಣೆಯಲ್ಲಿ ದಾಖಲಾಗಿವೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ವಿಜಯ್ ನೇತೃತ್ವದ ‘ತಮಿಳಗ ವೆಟ್ರಿ ಕಳಗಂ’ ಪಕ್ಷವನ್ನು ಅಧಿಕೃತಗೊಳಿಸಿದ ಚುನಾವಣಾ ಆಯೋಗ

    ಈ ರೀತಿ ದೂರವಾಣಿ ಕರೆಗಳು ಬಂದು ಬ್ಲ್ಯಾಕ್ ಮೇಲ್ ಮಾಡಿದರೆ ಕೂಡಲೇ ಪೊಲೀಸರ ಗಮನಕ್ಕೆ ತರಬೇಕು ಎಂದು ಕರೆ ಎಚ್ಚರಿಸಿದ್ದಾರೆ. ಇದನ್ನೂ ಓದಿ: ಒಂದೇ ದಿನದಲ್ಲಿ ತನಗೆ ಸೇರಿದ ಜಾಗದ 848 ಖಾತೆ ಮಾಡಿಸಿಕೊಂಡ ಮುಡಾ ಮಾಜಿ ಅಧ್ಯಕ್ಷ

  • ಮಸೀದಿ ಆವರಣದಲ್ಲಿ ಗಣೇಶ ಮೂರ್ತಿ ಪ್ರತಿಷ್ಠಾಪನೆ; ಹಿಂದೂ-ಮುಸ್ಲಿಂ ಭಾವೈಕ್ಯತೆ ಸಾರಿದ ಹಬ್ಬ

    ಮಸೀದಿ ಆವರಣದಲ್ಲಿ ಗಣೇಶ ಮೂರ್ತಿ ಪ್ರತಿಷ್ಠಾಪನೆ; ಹಿಂದೂ-ಮುಸ್ಲಿಂ ಭಾವೈಕ್ಯತೆ ಸಾರಿದ ಹಬ್ಬ

    ಕೊಪ್ಪಳ: ರಾಜ್ಯದಲ್ಲಿ ಗಣೇಶ ಹಬ್ಬದ (Ganesha Festival) ಸಂಭ್ರಮ ಮನೆ ಮಾಡಿದೆ. ಈ ನಡುವೆ ಕೊಪ್ಪಳದಲ್ಲಿ ಮಸೀದಿ ಆವರಣದಲ್ಲೇ ಗಣೇಶ ಮೂರ್ತಿ ಪ್ರತಿಷ್ಠಾಪನೆ ಮಾಡುವ ಮೂಲಕ ಸಾರ್ವಜನಿಕರು ಭಾವೈಕ್ಯತೆ ಸಂದೇಶ ಸಾರಿದ್ದಾರೆ.

    ಕೊಪ್ಪಳ (Koppala) ಜಿಲ್ಲೆಯ ಕುಷ್ಟಗಿ ತಾಲೂಕಿನ ಹನುಮಸಾಗರ ಗ್ರಾಮದಲ್ಲಿ ಹಿಂದೂ-ಮುಸ್ಲಿಮರು (Hindu Muslim) ಗಣೇಶ ಹಬ್ಬವನ್ನು ಸಂಭ್ರಮದಿಂದ ಆಚರಣೆ ಮಾಡಿದ್ದಾರೆ. ಮಸೀದಿ ಆವರಣದಲ್ಲಿ ಮೂರ್ತಿ ಪ್ರತಿಷ್ಠಾಪನೆ ಮಾಡುವ ಮೂಲಕ ಭಾವೈಕ್ಯತೆ ಸಾರಿದ್ದಾರೆ. ಇದನ್ನೂ ಓದಿ: Manipur Violence | ಎರಡು ಸಮುದಾಯಗಳ ಗುಂಪಿನ ನಡುವೆ ಗುಂಡಿನ ಚಕಮಕಿ – ಐವರು ಸಾವು

    ಕಳೆದ ಮೂರು ವರ್ಷಗಳಿಂದ ಇಲ್ಲಿ ಹಿಂದೂ-ಮುಸ್ಲಿಂ ಸಮುದಾಯದ ಜನ ಒಟ್ಟಿಗೆ ಸೇರಿ ಮಸೀದಿ ಆವರಣದಲ್ಲಿ ಮೂರ್ತಿ ಪ್ರತಿಷ್ಠಾಪಿಸಿ ಹಬ್ಬ ಆಚರಿಸುತ್ತಾ ಬರುತ್ತಿದ್ದಾರೆ. ಮುಸ್ಲಿಂ ಬಾಂಧವರೇ 5 ದಿನಗಳ ಕಾಲ ಪೂಜಾ ಕೈಂಕರ್ಯವನ್ನು ನೆರವೇರಿಸಲಿದ್ದಾರೆ. ಗಣೇಶ ವಿಸರ್ಜನೆಗೂ ಮುನ್ನಾ ದಿನ ಅನ್ನಸಂತರ್ಪಣೆ ನಡೆಯಲಿದ್ದು, ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳೂ ನೆರವೇರಲಿವೆ ಎಂದು ಆಯೋಜಕರು ತಿಳಿಸಿದ್ದಾರೆ. ಇದನ್ನೂ ಓದಿ: ಬೆಳಗಾವಿಯಲ್ಲಿ ಗಣೇಶೋತ್ಸವದ ದಿನ ನಡೆಯಬೇಕಿದ್ದ ಈದ್ ಮಿಲಾದ್ ಮೆರವಣಿಗೆ ಮೂಂದೂಡಿಕೆ!

    ಬೆಳಗಾವಿ: 2.21 ಲಕ್ಷ ಹುಣಸೆ ಬೀಜ ಬಳಸಿ ಮೂರ್ತಿ ತಯಾರು
    ಪರಿಸರ ಸ್ನೇಹಿ ಗಣೇಶ ಮೂರ್ತಿಗಳ ತಯಾರಿಕೆಯಲ್ಲಿ ಹೆಸರುವಾಸಿಯಾಗಿರುವ ಬೆಳಗಾವಿ ಹಳೇ ಗಾಂಧಿನಗರದ ಸೃಜನಶೀಲ ಶಿಲ್ಪಿ ಸುನೀಲ್ ಸಿದ್ದಪ್ಪ ಆನಂದಚೆ ಈ ವರ್ಷ 2,21,111 ಹುಣಸೆ ಬೀಜಗಳನ್ನು ಬಳಸಿ ಭವ್ಯ ಪರಿಸರ ಸ್ನೇಹಿ ಗಣೇಶ ಮೂರ್ತಿ ರಚಿಸಿದ್ದು ವಿಶೇಷ ಆಕರ್ಷಣೆಗೆ ಕಾರಣವಾಗಿದೆ. ಸುನೀಲ್‌, ಕಳೆದ ಅನೇಕ ವರ್ಷಗಳಿಂದ ಜೇಡಿ ಮಣ್ಣು, ಹುಲ್ಲಿನಿಂದ ಗಣೇಶನ ವಿಗ್ರಹಗಳನ್ನು ತಯಾರಿಸುವಲ್ಲಿ ಹೆಸರುವಾಸಿಯಾಗಿದ್ದಾರೆ. ಈ ವರ್ಷ ಮತ್ತೊಂದು ಹೆಜ್ಜೆ ಮುಂದಿಟ್ಟು ಮರುಬಳಕೆಯ ದಿನಪತ್ರಿಕೆಗಳು ಮತ್ತು ಕಾರ್ಡ್ಬೋರ್ಡ್, ಹುಲ್ಲಿನ ಸಹಾಯದಿಂದ ಹೆರಳವಾದ ಹುಣಸೆ ಬೀಜಗಳನ್ನು ಉಪಯೋಗಿಸಿ 8 ಅಡಿ ಎತ್ತರದ ಗಣೇಶ ಮುರ್ತಿ ನಿರ್ಮಿಸಿದ್ದಾರೆ.

    ದಿನ ನಿತ್ಯದ ತನ್ನ ಇತರೆ ಕೆಲಸಗಳ ಮಧ್ಯ ಒಂದೆರಡು ಗಂಟೆ ಬಿಡುವ ಮಾಡಿಕೊಂಡು ಮನೆಯವರ ಹಾಗೂ ಇತರರ ಸಹಕಾರಿಂದ ಒಂದು ತಿಂಗಳು ಕಾಲಾವಧಿಯಲ್ಲಿ ಸಾರ್ವಜನಿಕ ವೇದಿಕೆಯ ಭವ್ಯ ಮೂರ್ತಿ‌ ನಿರ್ಮಿಸಿದ್ದಾರೆ. ಇಂತಹ ಮೂರ್ತಿಗಳ ಬೇಡಿಕೆ ಹೆಚ್ಚಿದ್ದರೂ ಬಿಡುವಿಲ್ಲದ ಕಾರಣ ಪ್ರತಿವರ್ಷ ಒಂದು ಮಾತ್ರ ಮೂರ್ತಿ ರಚಿಸುತ್ತಿದ್ದಾರೆ. ಪರಿಸರ ಸ್ನೇಹಿ ಈ ವರ್ಷದ ಸುಂದರ ಮೂರ್ತಿಯನ್ನು ಬೆಳಗಾವಿ ಮಾಳಿಗಲ್ಲಿ ಪರಿಸರ ಸ್ನೇಹಿ ಯುವಕರು ಸೇರಿ ತಮ್ಮ ಓಣಿಯಲ್ಲಿ ಪ್ರತಿಷ್ಠಾಣೆ ಮಾಡಿ ಪರಿಸರ ಕಾಳಜಿ ಸಂದೇಶ ರವಾನಿಸಿದ್ದಾರೆ. ಇದನ್ನೂ ಓದಿ: ಗಣೇಶ ಹಬ್ಬದ ಪ್ರಯುಕ್ತ ಮೈಸೂರಿನಲ್ಲಿ ದಸರಾ ಆನೆಗಳಿಗೆ ವಿಶೇಷ ಪೂಜೆ

  • ಬೆಳಗಾವಿಯಲ್ಲಿ ಗಣೇಶೋತ್ಸವದ ದಿನ ನಡೆಯಬೇಕಿದ್ದ ಈದ್ ಮಿಲಾದ್ ಮೆರವಣಿಗೆ ಮೂಂದೂಡಿಕೆ!

    ಬೆಳಗಾವಿಯಲ್ಲಿ ಗಣೇಶೋತ್ಸವದ ದಿನ ನಡೆಯಬೇಕಿದ್ದ ಈದ್ ಮಿಲಾದ್ ಮೆರವಣಿಗೆ ಮೂಂದೂಡಿಕೆ!

    ಬೆಳಗಾವಿ: ಜಿಲ್ಲೆಯಲ್ಲಿ ಸೆ.16ರಂದು ನಡೆಯಬೇಕಿದ್ದ ಈದ್ ಮಿಲಾದ್ (Eid Milad) ಮೆರವಣಿಗೆಯನ್ನು ಗಣೇಶೋತ್ಸವ ಹಿನ್ನೆಲೆಯಲ್ಲಿ ಸೆ.22ಕ್ಕೆ ಮುಂದೂಡುವ ಮೂಲಕ ಮುಸ್ಲೀಂ ಮುಖಂಡರು, ಧರ್ಮಗುರುಗಳು ಮತ್ತೊಮ್ಮೆ ಸಾಮರಸ್ಯದ ಹೆಜ್ಜೆ ಇಟ್ಟಿದ್ದಾರೆ. ಅಲ್ಲದೇ ಮುಸ್ಲಿಂ ಹಬ್ಬದ ಮೆರವಣಿಗೆಗಳಲ್ಲಿ ಡಾಲ್ಬಿ, ಡಿಜೆ ಬಳಸದಂತೆ ದಿಟ್ಟ ನಿರ್ಧಾರ ಕೈಗೊಳ್ಳಲಾಗಿದೆ.

    ಕ್ಯಾಲೆಂಡರ್ ಪ್ರಕಾರ ಈದ್ ಮಿಲಾದ್ ಮೆರವಣಿಗೆ ಸೆ.16ಕ್ಕೆ, ಗಣೇಶನ ವಿಸರ್ಜನಾ ಮೆರವಣಿಗೆ ಸೆ.17ಕ್ಕೆ ನಡೆಯಬೇಕಿದೆ. ಆದರೆ, ಬೆಳಗಾವಿಯಲ್ಲಿ (Belagavi) ಗಣೇಶ ಮೂರ್ತಿಗಳ ವಿಸರ್ಜನಾ ಮೆರವಣಿಗೆ ಬಹಳ ಅದ್ದೂರಿಯಾಗಿ ನಡೆಯಲಿದ್ದು, ಲಕ್ಷಾಂತರ ಜನ ಸೇರುತ್ತಾರೆ. ಈ ವೇಳೆ ಯಾವುದೇ ರೀತಿ ಅಹಿತಕರ ಘಟನೆಗಳು ಸಂಭವಿಸಬಾರದು ಎಂಬ ಉದ್ದೇಶದಿಂದ ಶುಕ್ರವಾರ ಸಭೆ ಸೇರಿದ್ದ ಮುಸ್ಲಿಂ ಸಮಾಜದ ಹಿರಿಯರು, ವಿವಿಧ ಕಮಿಟಿಗಳ ಪದಾಧಿಕಾರಿಗಳು ಹಾಗೂ ಧರ್ಮಗುರುಗಳು ಈದ್ ಮಿಲಾದ್ ಮೆರವಣಿಗೆ ಮುಂದೂಡುವ ಒಮ್ಮತದ ನಿರ್ಣಯ ಕೈಗೊಂಡರು.ಇದನ್ನೂ ಓದಿ: ಕಲಬುರಗಿಯಲ್ಲಿ ಹನಿಟ್ರ್ಯಾಪ್‌ ಗ್ಯಾಂಗ್‌ ಸಕ್ರಿಯ – ಸರ್ಕಾರಿ ಅಧಿಕಾರಿಗಳು, ಉದ್ಯಮಿಗಳೇ ಟಾರ್ಗೆಟ್

    ಸಭೆಯಲ್ಲಿ ಶಾಸಕ ಆಸೀಫ್ ಸೇಠ್, ಇಸ್ಲಾಂ ಧರ್ಮಗುರುಗಳಾದ ಮುಫ್ತಿ ಮಂಜೂರ್ ಅಹ್ಮದ್ ರಿಜ್ವಿ, ಹಫೀಜ್ ನಜೀರುಲ್ಲಾ ಖಾದ್ರಿ, ಸರ್ದಾರ್ ಅಹ್ಮದ್, ಮುಷ್ಕಾಕ್ ನಯೀಮ್ ಅಹ್ಮದ್ ಸೇರಿ ಮತ್ತಿತರರು ಇದ್ದರು. ಈ ನಿರ್ಧಾರವನ್ನು ಸಾರ್ವಜನಿಕ ಗಣೇಶ ಮಂಡಳಿಗಳು ಸ್ವಾಗತಿಸಿವೆ.

    ಹಿಂದಿನ ವರ್ಷವೂ ಈದ್ ಮಿಲಾದ್ ಮತ್ತು ಗಣೇಶೋತ್ಸವ (Ganesh Festival) ಮೆರವಣಿಗೆ ಎರಡೂ ಕೂಡಿಯೇ ಬಂದಿದ್ದವು. ಆಗಲೂ ಮುಸ್ಲಿಂ ಮುಖಂಡರು ಈದ್ ಮಿಲಾದ್ ಮೆರವಣಿಗೆ ಮುಂದೂಡಿ ಇಡೀ ರಾಜ್ಯಕ್ಕೆ ಕೋಮು ಸಾಮರಸ್ಯದ ಸಂದೇಶ ಸಾರಿದ್ದರು. ಈ ವರ್ಷವೂ ಕೂಡ ಅದೇ ನಿರ್ಧಾರ ಕೈಗೊಳ್ಳುವ ಮೂಲಕ ಎಲ್ಲರ ಪ್ರಶಂಸೆಗೆ ಪಾತ್ರರಾಗಿದ್ದಾರೆ. ಇನ್ನು ಸೆ.16ರಂದು ಪದ್ಧತಿ ಪ್ರಕಾರ ಎಲ್ಲ ಮಸೀದಿ ಹಾಗೂ ಮನೆಗಳಲ್ಲಿ ಈದ್ ಆಚರಣೆಗಳು ನಡೆಯಲಿವೆ. ಮೆರವಣಿಗೆ ಮಾತ್ರ 22ಕ್ಕೆ ನಡೆಯಲಿದೆ.ಇದನ್ನೂ ಓದಿ: Manipur Violence | ಎರಡು ಸಮುದಾಯಗಳ ಗುಂಪಿನ ನಡುವೆ ಗುಂಡಿನ ಚಕಮಕಿ – ಐವರು ಸಾವು

  • ಬೆಳಗಾವಿ: ಸಾಲಗಾರ ಪತಿಯನ್ನು ಹತ್ಯೆಗೈದು ಸಹಜ ಸಾವು ಎಂದು ಬಿಂಬಿಸಿದ್ದ ಪತ್ನಿ, ಅತ್ತೆ ಅರೆಸ್ಟ್

    ಬೆಳಗಾವಿ: ಸಾಲಗಾರ ಪತಿಯನ್ನು ಹತ್ಯೆಗೈದು ಸಹಜ ಸಾವು ಎಂದು ಬಿಂಬಿಸಿದ್ದ ಪತ್ನಿ, ಅತ್ತೆ ಅರೆಸ್ಟ್

    – ಪೋಸ್ಟ್ ಮಾರ್ಟಮ್ ರಿಪೋರ್ಟ್‌ನಿಂದ ಕೊಲೆ ರಹಸ್ಯ ಬಯಲು

    ಬೆಳಗಾವಿ: ಪತ್ನಿ ಹಾಗೂ ಅತ್ತೆ ಸೇರಿಕೊಂಡು ಸಾಲಗಾರ ಪತಿಯನ್ನು (Husband) ಹತ್ಯೆಗೈದು ಸಹಜ ಸಾವು ಎಂದು ಬಿಂಬಿಸಿದ ಘಟನೆ ಬೆಳಗಾವಿಯಲ್ಲಿ (Belagavi) ನಡೆದಿದೆ.

    ಬೆಳಗಾವಿಯ ಪೀರವನಾಡಿ ನಿವಾಸಿ ವಿನಾಯಕ್ ಜಾಧವ್ (48) ಕೊಲೆಯಾದ ಪತಿ. ಜುಲೈ 29ರಂದು ರಾತ್ರಿ ಅಮ್ಮ-ಮಗಳು ಸೇರಿಕೊಂಡು ಸಾಲಗಾರ ಪತಿಯನ್ನು ಹತ್ಯೆ ಮಾಡಿದ್ದಾರೆ. ವಿನಾಯಕ್ ಜಾಧವ್ ಉದ್ಯಮಬಾಗದಲ್ಲಿ ಸ್ವಂತ ಉದ್ಯಮ ಹೊಂದಿದ್ದ. ಉದ್ಯಮದಲ್ಲಿ ನಷ್ಟವಾದ ಹಿನ್ನೆಲೆ ವಿಪರೀತ ಸಾಲ ಮಾಡಿಕೊಂಡಿದ್ದ. ಬಳಿಕ ಸಾಲಗಾರರ ಕಾಟಕ್ಕೆ ಬೇಸತ್ತು ಮನೆಯನ್ನು ಸಾಲಕ್ಕೆ ಅಡಮಾನವಾಗಿ ಇಟ್ಟು ಜನರ ಕಿರುಕುಳಕ್ಕೆ ನೊಂದು ಬೆಳಗಾವಿ ಬಿಟ್ಟು ಮೂರು ವರ್ಷಗಳಿಂದ ಪರಾರಿಯಾಗಿದ್ದ. ಇದನ್ನೂ ಓದಿ: ಹಗರಣಗಳಿಂದಾಗಿ ಕಾಂಗ್ರೆಸ್ ಸರ್ಕಾರ ಕೋಮಾಗೆ ಜಾರಿದೆ, ಅಭಿವೃದ್ಧಿ ನಡೆಯುತ್ತಿಲ್ಲ: ಅಶೋಕ್

    ಜುಲೈ 29ರಂದು ವಿನಾಯಕ್ ಜಾಧವ್ ರಾತ್ರಿ ಮದ್ಯಪಾನ ಮಾಡಿ ಮನೆಗೆ ಬಂದಿದ್ದ. ಮನೆಯಲ್ಲಿ ಪತ್ನಿ ರೇಣುಕಾ ಜೊತೆಗೆ ವಿಪರೀತ ಜಗಳ ಮಾಡಿದ್ದ. ಬಳಿಕ ಪತಿಯನ್ನು ಹಗ್ಗದಿಂದ ಕುತ್ತಿಗೆ ಕಟ್ಟಿ, ದಿಂಬಿನಿಂದ ಉಸಿರುಗಟ್ಟಿಸಿ ಕೊಲೆ ಮಾಡಿದ್ದಾರೆ. ಹತ್ಯೆಗೆ ಪತ್ನಿ ರೇಣುಕಾಗೆ ಆಕೆಯ ತಾಯಿ ಶೋಭಾ ಸಾಥ್ ನೀಡಿದ್ದರು. ಹತ್ಯೆ ಬಳಿಕ ಶವವನ್ನು ಮನೆಯ ಮುಂಭಾಗದಲ್ಲಿ ಬಿಸಾಡಿದ್ದರು. ಬೆಳಗ್ಗೆ ಅಕ್ಕಪಕ್ಕದ ಮನೆಯವರನ್ನು ಕರೆದು ಪತಿ ಮದ್ಯಪಾನ ಮಾಡಿ ಬಿದ್ದಿದ್ದಾನೆ. ಇದು ಕೊಲೆಯಲ್ಲ, ಸಹಜ ಸಾವು ಎಂದು ತಾಯಿ, ಮಗಳು ಬಿಂಬಿಸಿದ್ದರು. ಆದರೆ ವಿನಾಯಕ್ ಜಾಧವ್ ಸಹೋದರ ಅರುಣ್ ಸಾವಿನಲ್ಲಿ ಶಂಕೆ ಇದೆ ಎಂದು ದೂರು ನೀಡಿದ್ದರು. ಪೋಸ್ಟ್ ಮಾರ್ಟಮ್ ರಿಪೋರ್ಟ್‌ನಿಂದ ಕೊಲೆ ರಹಸ್ಯ ಬಯಲಾಗಿದೆ. ಬೆಳಗಾವಿ ಗ್ರಾಮೀಣ ಪೊಲೀಸರು ಕೊಲೆಯ ರಹಸ್ಯ ಬಯಲು ಮಾಡಿದ್ದಾರೆ. ಪ್ರಕರಣ ಸಂಬಂಧ ಪತ್ನಿ ರೇಣುಕಾ ಹಾಗೂ ಆಕೆಯ ತಾಯಿ ಶೋಭಾಳನ್ನು ಪೊಲೀಸರು ಬಂಧಿಸಿದ್ದಾರೆ. ಇದನ್ನೂ ಓದಿ: Shivamogga Airport| 20 ದಿನಕ್ಕಷ್ಟೇ ಲೈಸೆನ್ಸ್‌- ಷರತ್ತು ಪೂರೈಸದಿದ್ದರೆ ವಿಮಾನ ಹಾರಾಟಕ್ಕೆ ತೊಡಕು

  • ಮದುವೆಗೆ ಒಂದು ದಿನ ಬಾಕಿಯಿರುವಾಗಲೇ ಕುಸಿದು ಬಿದ್ದ ವರ, ಹೃದಯಾಘಾತದಿಂದ ಸಾವು

    ಮದುವೆಗೆ ಒಂದು ದಿನ ಬಾಕಿಯಿರುವಾಗಲೇ ಕುಸಿದು ಬಿದ್ದ ವರ, ಹೃದಯಾಘಾತದಿಂದ ಸಾವು

    ಚಿಕ್ಕೋಡಿ: ಮದುವೆಗೆ ಒಂದು ದಿನ ಬಾಕಿಯಿರುವಾಗಲೇ ಹೃದಯಾಘಾತದಿಂದ ಯುವಕ ಸಾವನ್ನಪ್ಪಿರುವ ಘಟನೆ ಬೆಳಗಾವಿ (Belagavi) ಜಿಲ್ಲೆಯ ಅಥಣಿ ತಾಲೂಕಿನ ಜುಂಜರವಾಡ ಗ್ರಾಮದಲ್ಲಿ ನಡೆದಿದೆ.

    ಜುಂಜರವಾಡ ಆರ್‌ಸಿ ಗ್ರಾಮದ ನಿವಾಸಿ ಸದಾಶಿವ ರಾಮಪ್ಪ (31) ಹೋಸಲ್ಕಾರ ಮೃತ ವ್ಯಕ್ತಿ.ಇದನ್ನೂ ಓದಿ: ರಜನಿಕಾಂತ್‌ ಜೊತೆ ‌’ಜೈಲರ್‌ 2′ ಬರೋದು ಫಿಕ್ಸ್‌ ಎಂದ ನಿರ್ದೇಶಕ ನೆಲ್ಸನ್

    ಸಂಬAಧಿಕರು ಹಾಗೂ ಕುಟುಂಬಸ್ಥರು ಸೆಪ್ಟೆಂಬರ್ 5ರಂದು ಮದುವೆಗೆ ದಿನಾಂಕ ನಿಗದಿಪಡಿಸಿದ್ದರು. ಮಂಗಳವಾರ ರಾತ್ರಿ ಎಂಟು ಗಂಟೆ ಆಸುಪಾಸಿನಲ್ಲಿ ಮನೆ ಮುಂದೆ ಮದುವೆ ಪೂರ್ವ ಸಿದ್ಧತೆ ಮಾಡಿಕೊಳ್ಳುತ್ತಿದ್ದರು. ನಾಳೆ ನಡೆಯಲಿದ್ದ ಮದುವೆ ಸಿದ್ಧತೆಗಾಗಿ ದೂರವಾಣಿಯಲ್ಲಿ ಮಾತನಾಡುವ ವೇಳೆ ಈ ಅವಘಡ ಸಂಭವಿಸಿದ್ದು, ತೀವ್ರ ಹೃದಯಾಘಾತದಿಂದ ಸ್ಥಳದಲ್ಲೇ ಕುಸಿದು ಬಿದ್ದು ಸಾವನ್ನಪ್ಪಿದ್ದಾನೆ. ತಕ್ಷಣವೇ ಅಥಣಿ ಪಟ್ಟಣದ ಖಾಸಗಿ ಆಸ್ಪತ್ರೆಗೆ ರವಾನಿಸಿದರೂ ಬದುಕುಳಿಯಲಿಲ್ಲ.

    ಮನೆಗೆ ಆಸರೆಯಾಗಿದ್ದ ಒಬ್ಬನೇ ಮಗನನ್ನು ಕಳೆದುಕೊಂಡು ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಐಗಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.ಇದನ್ನೂ ಓದಿ: 19ನೇ ವಯಸ್ಸಿಗೆ ಬ್ರೆಜಿಲಿಯನ್ ಬಾಡಿಬಿಲ್ಡರ್ ಹೃದಯಾಘಾತದಿಂದ ಸಾವು

  • ಹಲಾಲ್ ಮುಕ್ತ ಗಣೇಶ ಹಬ್ಬ ಆಚರಿಸಿ: ಪ್ರಮೋದ್ ಮುತಾಲಿಕ್ ಮನವಿ

    ಹಲಾಲ್ ಮುಕ್ತ ಗಣೇಶ ಹಬ್ಬ ಆಚರಿಸಿ: ಪ್ರಮೋದ್ ಮುತಾಲಿಕ್ ಮನವಿ

    ಚಿಕ್ಕೋಡಿ: ದೇಶಾದ್ಯಂತ ಗಣೇಶೋತ್ಸವ (Ganeshotsava) ಸಂಭ್ರಮಕ್ಕೆ ದಿನಗಣನೆ ಆರಂಭವಾಗಿದ್ದು, ಪ್ರತಿ ವರ್ಷದಂತೆ ಈ ವರ್ಷವೂ ಹಲಾಲ್ ಮುಕ್ತ ಗಣೇಶ ಹಬ್ಬ ಆಚರಣೆ ಮಾಡುವಂತೆ ಶ್ರೀ ರಾಮ ಸೇನೆ (Sri Rama Sene) ಅಧ್ಯಕ್ಷ ಪ್ರಮೋದ್ ಮುತಾಲಿಕ್ (Pramod Muthalik) ಮನವಿ ಮಾಡಿದ್ದಾರೆ.

    ಬೆಳಗಾವಿ (Belagavi) ಜಿಲ್ಲೆಯ ಹುಕ್ಕೇರಿ ಪಟ್ಟಣದಲ್ಲಿ ಮಾತನಾಡಿದ ಅವರು, ಗೋಭಕ್ಷಕರು, ಗೋಹಂತಕರಿಂದ ಯಾವುದೇ ವಸ್ತು ಖರೀದಿ ಮಾಡಬೇಡಿ. ಯಾರೂ ಕೂಡ ಈ ಅಪರಾಧ, ತಪ್ಪನ್ನು, ಅಪವಿತ್ರತೆ ಮಾಡಬಾರದು. ಶಾಸ್ತ್ರಬದ್ಧವಾಗಿ ಮಣ್ಣಿನ ಗಣಪತಿಯನ್ನೇ ಪೂಜೆ ಮಾಡಬೇಕು. ಪಿಒಪಿ ಗಣಪತಿ ಉಪಯೋಗ ಬೇಡ. ಇದು ಅಪವಿತ್ರವಾದದ್ದು. ಸಾರ್ವಜನಿಕ ಗಣೇಶೋತ್ಸವ ಮಂಡಳಿಗಳಲ್ಲಿ ಸಿನಿಮಾ, ಅಶ್ಲೀಲ ಗೀತೆ ಹಾಕಬೇಡಿ ಎಂದರು. ಇದನ್ನೂ ಓದಿ: 5 ವರ್ಷದ ಬಾಲಕಿ ಮೇಲೆ ನೆರೆಮನೆಯವನಿಂದ ಅತ್ಯಾಚಾರ – 14ರ ಹುಡುಗ ಅರೆಸ್ಟ್

    ಭಕ್ತಿ ಗೀತೆ ಹಾಕಿ ಗಣೇಶೋತ್ಸವ ಆಚರಿಸಿ ಪಟಾಕಿ, ಹೂವು ಹಣ್ಣು, ತರಕಾರಿ, ಎಲೆಕ್ಟ್ರಾನಿಕ, ಎಲೆಕ್ಟ್ರಿಕ್ ಸಾಮಗ್ರಿ ಪವಿತ್ರವಾದದ್ದನ್ನು ಪಡೆಯಬೇಕು. ಅಪವಿತ್ರವಾದ ವಸ್ತು ಖರೀದಿ ಮಾಡಿದರೆ ಶಾಸ್ತ್ರಕ್ಕೆ ವಿರೋಧ ಆಗುತ್ತದೆ. ಗಣೇಶೋತ್ಸವ ಮೆರವಣಿಗೆಯಲ್ಲಿ ಮದ್ಯಪಾನ, ಗುಟ್ಕಾ ತಿನ್ನದಂತೆ ಕರೆ ನೀಡಿದ್ದಾರೆ. ಇದನ್ನೂ ಓದಿ: Haryana Polls Dates | ಹರಿಯಾಣ ಚುನಾವಣೆ ದಿನಾಂಕ ಬದಲು – ಅಕ್ಟೋಬರ್‌ 5ಕ್ಕೆ ಮತದಾನ

  • ದುಬೈನಲ್ಲಿ ಕಾರು-ಲಾರಿ ಡಿಕ್ಕಿ: ಬೆಳಗಾವಿ ಮೂಲದ ಒಂದೇ ಕುಟುಂಬದ ನಾಲ್ವರ ಸಜೀವ ದಹನ

    ದುಬೈನಲ್ಲಿ ಕಾರು-ಲಾರಿ ಡಿಕ್ಕಿ: ಬೆಳಗಾವಿ ಮೂಲದ ಒಂದೇ ಕುಟುಂಬದ ನಾಲ್ವರ ಸಜೀವ ದಹನ

    ಬೆಳಗಾವಿ: ಒಂದು ಕುಟುಂಬದ ನಾಲ್ವರು ಭೀಕರ ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿರುವ ಘಟನೆ ದುಬೈನ (Dubai) ಓಮಾನ್‌ನಲ್ಲಿ (Oman) ನಡೆದಿದೆ.

    ಬೆಳಗಾವಿ (Belagavi) ಜಿಲ್ಲೆಯ ಗೋಕಾಕ್ (Gokak) ತಾಲೂಕಿನ ನಿವಾಸಿಗಳಾದ ಪವನಕುಮಾರ್ ತಹಶಿಲ್ದಾರ, ಪೂಜಾ, ವಿಜಯಾ, ಆದಿಶೇಷ ಮೃತಪಟ್ಟವರು.ಇದನ್ನೂ ಓದಿ: ಶೋಭಿತಾ ಜೊತೆ ಮದುವೆ ಹೇಗಿರಬೇಕು?- ರಿವೀಲ್ ಮಾಡಿದ ನಾಗಚೈತನ್ಯ


    ದುಬೈಗೆ ತಾಯಿ, ಇಬ್ಬರು ಮಕ್ಕಳು ಹಾಗೂ ಅಳಿಯನೊಂದಿಗೆ ಪ್ರವಾಸಕ್ಕೆ ತೆರಳಿದ್ದರು. ಆ ಸಂದರ್ಭದಲ್ಲಿ ಹೈಮಾ ಪ್ರದೇಶದಲ್ಲಿ ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ. ಕಾರು ಮತ್ತು ಲಾರಿ ಮುಖಾಮುಖಿ ಡಿಕ್ಕಿಯಾಗಿ ಬೆಂಕಿ ಹೊತ್ತಿಕೊಂಡಿದೆ. ಸ್ಥಳದಲ್ಲೇ ನಾಲ್ವರು ಸಜೀವ ದಹನಗೊಂಡಿದ್ದಾರೆ.

    ಮೃತದೇಹಗಳನ್ನು ಭಾರತಕ್ಕೆ ತರಲು ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಮಾತುಕತೆ ನಡೆಸುತ್ತಿದ್ದು, ವಿದೇಶಾಂಗ ಸಚಿವ ಎಸ್.ಜೈಶಂಕರ್ (S. Jaishankar) ಹಾಗೂ ಪ್ರಹ್ಲಾದ್ ಜೋಶಿಗೆ (Pralhad Joshi) ಮನವಿ ಸಲ್ಲಿಸಿದ್ದಾರೆ.ಇದನ್ನೂ ಓದಿ: ಪೊಲೀಸರ ಮೇಲೆ ಮಚ್ಚಿನಿಂದ ಹಲ್ಲೆ- ರೌಡಿಶೀಟರ್ ಕಾಲಿಗೆ ಪಿಎಸ್‌ಐ ಗುಂಡೇಟು

  • ಹಿಂಡಲಗಾ ಜೈಲಿನ ಅತಿ ಭದ್ರತಾ ವಿಭಾಗಕ್ಕೆ ಪ್ರದೂಷ್ ಶಿಫ್ಟ್: ವಿ.ಕೃಷ್ಣಮೂರ್ತಿ

    ಹಿಂಡಲಗಾ ಜೈಲಿನ ಅತಿ ಭದ್ರತಾ ವಿಭಾಗಕ್ಕೆ ಪ್ರದೂಷ್ ಶಿಫ್ಟ್: ವಿ.ಕೃಷ್ಣಮೂರ್ತಿ

    ಬೆಳಗಾವಿ: ಜೈಲಿನ ಎಲ್ಲಾ ಪ್ರಕಿಯೆ ಮುಗಿಯುತ್ತಿದ್ದಂತೆ ರೇಣುಕಾಸ್ವಾಮಿ ಕೊಲೆ (Renukaswamy Murder Case) ಆರೋಪಿ ಪ್ರದೂಷ್‌ನನ್ನು ಹಿಂಡಲಗಾ ಜೈಲಿನ (Hindalaga Jail) ಅತಿ ಭದ್ರತಾ ವಿಭಾಗದಲ್ಲಿ (High Security Department) (ಅಂಧೇರಿ ಸೆಲ್) ಇಡಲಾಗುವುದು ಮತ್ತು ಏಳು ಸಿಬ್ಬಂದಿಯನ್ನು ನಿಯೋಜನೆ ಮಾಡಲಾಗುವುದು ಎಂದು ಹಿಂಡಲಗಾ ಜೈಲಿನ ಸಹಾಯಕ ಅಧೀಕ್ಷಕ ವಿ.ಕೃಷ್ಣಮೂರ್ತಿ (V. Krishnamurthy) ತಿಳಿಸಿದ್ದಾರೆ.

    ಪರಪ್ಪನ ಅಗ್ರಹಾರದಲ್ಲಿ (Parappana Agrahara) ರಾಜಾತಿಥ್ಯದ ಫೋಟೋ ವೈರಲ್ ಆದ ಬಳಿಕ ನಟ ದರ್ಶನ್ ಗ್ಯಾಂಗ್‌ನ (Actor Darshan Gang) 12 ಆರೋಪಿಗಳನ್ನು ದಿಕ್ಕಾಪಾಲು ಮಾಡಿದ್ದಾರೆ. ಆರೋಪಿಗಳ ಪೈಕಿ ಪ್ರದೂಷ್‌ನನ್ನು ಬೆಳಗಾವಿಯ (Belagavi) ಹಿಂಡಲಗಾ ಜೈಲಿಗೆ ವರ್ಗಾವಣೆ ಮಾಡಲಾಗಿದೆ. ವರ್ಗಾವಣೆ ಮಾಡಿದ ನಂತರ ಜೈಲಿನ ಭದ್ರತೆಗೆ ಸಂಬಂಧಿಸಿದಂತೆ ಮಾಹಿತಿ ನೀಡಿದ್ದಾರೆ.ಇದನ್ನೂ ಓದಿ: ಅವ್ನೇನ್ ದೊಡ್ಡ ರೋಲ್ ಮಾಡೆಲ್ಲಾ? – ದರ್ಶನ್ ಬಗ್ಗೆ ಕೇಳಿದ್ದಕ್ಕೆ ಕೆ.ಎನ್ ರಾಜಣ್ಣ ಗರಂ

    ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಜೈಲಿನಲ್ಲಿ ಸಿಸಿಟಿವಿ ಅಳವಡಿಸುವ ಕಾರ್ಯ ನಡೆಯುತ್ತಿದೆ. ಮಳೆಯಿಂದಾಗಿ ಕೆಲಸದಲ್ಲಿ ವ್ಯತ್ಯಯ ಉಂಟಾಗಿದೆ. ಹೆಚಿನ ಭದ್ರತೆಗಾಗಿ ಕ್ರಮ ವಹಿಸುತ್ತೇವೆ ಎಂದರು.

    ಹಿರಿಯ ಅಧಿಕಾರಿಗಳ ಮಾರ್ಗದರ್ಶನದಂತೆ ಭದ್ರತಾ ಕಾರ್ಯ ನಡೆಯುತ್ತಿದೆ. ಪ್ರದೂಷ್ ಭದ್ರತೆಗೆ ಸಹಾಯಕ ಜೈಲರ್ ಹಾಗೂ ಏಳು ಜನ ಸಿಬ್ಬಂದಿ ಕಾರ್ಯನಿರ್ವಹಿಸಲಿದ್ದಾರೆ. ಜೈಲಿನಲ್ಲಿ 2G ಜಾಮರ್ ಇದ್ದು, 5U ಜಾಮರ್ ಅಳಡಿಸಲು ಸಿದ್ಧತೆ ನಡೆಸಲಾಗಿದೆ. ಟೆಂಡರ್ ಪಡೆದವರಿಗೆ ಬೇಗ ಮುಗಿಸಿಕೊಡುವಂತೆ ಆಗ್ರಹಿಸಿದ್ದೇವೆ ಎಂದು ತಿಳಿಸಿದರು.ಇದನ್ನೂ ಓದಿ: ರಾಜ ಎಲ್ಲಿದ್ದರೂ ರಾಜನೇ ಅಂತ ಘೋಷಣೆ- ದರ್ಶನ್‌ ನೋಡಲು ಮುಗಿಬಿದ್ದ ಫ್ಯಾನ್ಸ್‌

    ಜೈಲಿನಲ್ಲಿ ಊಟ, ಬಿಡಿ, ಸಿಗರೆಟ್ ಎಲ್ಲಾ ವಸ್ತುಗಳಿಗೆ ನಿಷೇಧ ಹೇರಲಾಗಿದೆ. ನಮ್ಮ ಸಿಬ್ಬಂದಿಗಳನ್ನು ತಪಾಸಣೆಗೆ ಒಳಪಡಿಸಲಾಗಿದೆ. ಯಾರೇ ಬಂದರೂ ಭದ್ರತಾ ದೃಷ್ಟಿಯಿಂದ ಅಂಧೇರಿ ಸೆಲ್‌ನಲ್ಲಿ ಇಡುತ್ತೇವೆ. ನಿಯಮಗಳ ಪ್ರಕಾರ ಸಂಬAಧಿಗಳು ಬಂದರೆ ಮಾತ್ರ ಅವಕಾಶ ಕೊಡಲಾಗುವುದು ಎಂದು ತಿಳಿಸಿದ್ದಾರೆ.