Tag: belaku

  • ಕಿವುಡ-ಮೂಕ ಮಕ್ಕಳೊಂದಿಗೆ ಸಂಸಾರದ ಬಂಡಿ ಎಳೆಯುತ್ತಿರೋ ಲಕ್ಷ್ಮಮ್ಮರಿಗೆ ಬೇಕಿದೆ ಮನೆ

    ಕಿವುಡ-ಮೂಕ ಮಕ್ಕಳೊಂದಿಗೆ ಸಂಸಾರದ ಬಂಡಿ ಎಳೆಯುತ್ತಿರೋ ಲಕ್ಷ್ಮಮ್ಮರಿಗೆ ಬೇಕಿದೆ ಮನೆ

    ತುಮಕೂರು: ಪ್ರಾಣಿಗಳು ಕೂಡಾ ವಾಸವಿರಲು ಸಾಧ್ಯವಿಲ್ಲದ ಗುಡಿಸಲು. ಮಳೆ ಬಂದರಂತೂ ಜಾಗರಣೆ ಮಾಡದೇ ವಿಧಿ ಇಲ್ಲ. ಒಟ್ಟು ಮೂವರು ಇದೇ ಮನೆಯಲ್ಲಿ ವಾಸಿಸಬೇಕಾದ ದುಃಸ್ಥಿತಿ. ಇದೀಗ ಕುಟುಂಬವೊಂದು ಸಹಾಯ ಕೇಳಿಕೊಂಡು ಪಬ್ಲಿಕ್ ಟಿವಿಯ ಬೆಳಕು ಕಾರ್ಯಕ್ರಮಕ್ಕೆ ಬಂದಿದೆ.

    ಜಿಲ್ಲೆಯ ಕೊರಟಗೆರೆ ಪಟ್ಟಣದ 6 ನೇ ವಾರ್ಡನಲ್ಲಿ ವಾಸವಿರುವ ಲಕ್ಷ್ಮಮ್ಮ ಕುಟುಂಬದ ಕತೆ ಇದಾಗಿದೆ. ಸುಮಾರು 20 ವರ್ಷಗಳಿಂದ ಲಕ್ಷ್ಮಮ್ಮ ಅವರು ತನ್ನಿಬ್ಬರು ಕಿವುಡ-ಮೂಕ ಮಕ್ಕಳೊಂದಿಗೆ ಸಂಸಾರದ ಬಂಡಿ ಎಳೆಯುತ್ತಿದ್ದಾರೆ. ಆಶ್ರಯ ಯೋಜನೆಯಡಿ ಮನೆ ನೀಡಿ, ಸೈಟು ನೀಡಿ ಎಂದು ಅದೆಷ್ಟೋ ಬಾರಿ ಪಟ್ಟಣ ಪಂಚಾಯತಿಗೆ ಅರ್ಜಿ ಹಾಕಿದ್ದರು. ಆದರೂ ಇವರಿಗೆ ಮನೆ ಭಾಗ್ಯ ಸಿಕ್ಕಿಲ್ಲ. ಅಷ್ಟೇ ಅಲ್ಲದೇ ಪಡಿತರ ಚೀಟಿ ಕೂಡಾ ಇವರಿಗೆ ಸಿಕ್ಕಿಲ್ಲ.

    ಇಬ್ಬರು ಮಕ್ಕಳೂ ಕಿವುಡ ಮತ್ತು ಮೂಕರಾಗಿದ್ದಾರೆ. ಈ ಇಬ್ಬರಿಗೂ ಸರ್ಕಾರದಿಂದ ನೀಡಬೇಕಿದ್ದ ಅಂಗವಿಕಲ ಭತ್ಯೆ ಕೂಡ ಸಿಗುತ್ತಿಲ್ಲ. ಎಲ್ಲದಕ್ಕೂ ಅಧಿಕಾರಿಗಳು ಸ್ವಂತ ವಿಳಾಸ ಇಲ್ಲ ಎಂದು ಸಬೂಬು ನೀಡುತ್ತಿದ್ದಾರೆ ಎಂದು ನೊಂದ ಮಹಿಳೆ ಲಕ್ಷ್ಮಮ್ಮ ಅವರು ತಿಳಿಸಿದ್ದಾರೆ.

    ಲಕ್ಷ್ಮಮ್ಮ ಕೂಲಿನಾಲಿ ಮಾಡಿ ಇಬ್ಬರು ಮಕ್ಕಳನ್ನು ಸಾಕುತ್ತಿದ್ದಾರೆ. ಇಬ್ಬರು ವಿಕಲಾಂಗ ಮಕ್ಕಳು ದೊಡ್ಡವರಾದರೂ ಎಲ್ಲಿಯೂ ಕೆಲಸ ಮಾಡಲು ಹೋಗುತ್ತಿಲ್ಲ. ಮಾನಸಿಕವಾಗಿ ಅಷ್ಟೊಂದು ಪ್ರಭುದ್ಧತೆ ಇಲ್ಲದೆ ಇದ್ದುದರಿಂದ ಯಾರೂ ಇಬ್ಬರು ಮಕ್ಕಳನ್ನು ಕೆಲಸಕ್ಕೆ ತೆಗೆದುಕೊಳ್ಳುತ್ತಿಲ್ಲ. ಹಾಗಾಗಿ ಸಂಸಾರದ ನೊಗ ವೃದ್ಧೆ ಲಕ್ಷ್ಮಮ್ಮಳ ಮೇಲಿದೆ. ಇನ್ನೂ ಸಂಬಂಧಿಕರ್ಯಾರು ಸಹಾಯಕ್ಕೆ ಬರುತ್ತಿಲ್ಲ ಎಂದು ಪಟ್ಟಣ ಪಂಚಾಯತ್ ಸದಸ್ಯ ನಯಾಜ್ ಹೇಳಿದ್ದಾರೆ.

    ಲಭ್ಯವಿರುವ ಎಲ್ಲಾ ಸರ್ಕಾರಿ ಮೂಲಭೂತ ಸೌಲಭ್ಯಗಳಿಗೂ ಲಕ್ಷ್ಮಮ್ಮ ಅಕ್ಷರಷಃ ಅರ್ಹರಿದ್ದರೂ ಅಧಿಕಾರಿಗಳು ಸಬೂಬು ಹೇಳುತ್ತಿದ್ದಾರೆ. ಅಧಿಕಾರ ಶಾಹಿಯ ಕಣ್ತೆರಸಿ ನಮಗೆ ಬೆಳಕು ಕೊಡಿ ಎಂದು ಈ ಕುಟುಂಬ ಅಂಗಲಾಚುತ್ತಿದೆ.

    https://www.youtube.com/watch?v=ryAdxwIMFvI

  • ಹೆಚ್‍ಐವಿ ಯಿಂದ ಬಳಲುತ್ತಿರೋ ದಂಪತಿಯ 6 ವರ್ಷದ ಮಗನಿಗೆ ಬೇಕಿದೆ ಸಹಾಯ

    ಹೆಚ್‍ಐವಿ ಯಿಂದ ಬಳಲುತ್ತಿರೋ ದಂಪತಿಯ 6 ವರ್ಷದ ಮಗನಿಗೆ ಬೇಕಿದೆ ಸಹಾಯ

    ಬಾಗಲಕೋಟೆ: ಪೋಷಕರಿಂದ ಬಳವಳಿಯಾಗಿ ಬಂದ ಆ ಕಾಯಿಲೆ ಇಡೀ ಕುಟಂಬವನ್ನೇ ಸಾವಿನಂಚಿಗೆ ತಂದು ನಿಲ್ಲಿಸಿದೆ. ದುಡಿಯಲು ಮೈಯಲ್ಲಿ ಶಕ್ತಿಯಿಲ್ಲ, ಕುಳಿತು ತಿನ್ನಲು ಸ್ಥಿತಿವಂತರಲ್ಲ, ಬೆಂಬಿಡದೇ ಕಾಡ್ತಿರೋ ಬಡತನದ ಮಧ್ಯೆ ಮಹಾಮಾರಿ ಖಾಯಿಲೆಯ ಕಾಟ. ಈ ಕುಟುಂಬವು ಸಹಾಯ ಕೇಳಿಕೊಂಡು ಇದೀಗ ಬೆಳಕು ಕಾರ್ಯಕ್ರಮಕ್ಕೆ ಬಂದಿದೆ.

    ಜಿಲ್ಲೆಯ ಜಮಖಂಡಿ ತಾಲೂಕಿನ ಬನಹಟ್ಟಿ ಪಟ್ಟಣದ ನಿವಾಸಿಗಳಾದ ದಂಪತಿಯ ಹೆಸರು ಈರಪ್ಪ ಸೈದಾಪುರ ಮತ್ತು ಪತ್ನಿ ಕವಿತಾ ಸೈದಾಪುರ. ಇವರ 9 ವರ್ಷದ ದಾಂಪತ್ಯಕ್ಕೆ ಸಾಕ್ಷಿಯಂತೆ ಇಬ್ಬರೂ ಮಕ್ಕಳಿದ್ದಾರೆ. 6 ವರ್ಷದ ಮಗಳು ಭಾಗ್ಯಶ್ರೀ ಹಾಗೂ 3 ವರ್ಷದ ಮಗ ವಿಶಾಲ್. ದುರಂತ ಅಂದರೆ ಅಪ್ಪ-ಅಮ್ಮ ಇಬ್ಬರಿಗೂ ಎಚ್‍ಐವಿ ಕಾಯಿಲೆ ಇದ್ದು, ಇವರ ಜೊತೆಗೆ 3 ವರ್ಷದ ಪುಟಾಣಿಗೂ ಸೊಂಕು ತಗುಲಿದೆ. ಅದೃಷ್ಟವಶಾತ್ ಮಗಳು ಭಾಗ್ಯಶ್ರೀಗೆ ಯಾವುದೇ ರೀತಿಯ ಸೊಂಕು ತಗುಲಿಲ್ಲ. ಕೊನೆ ದಿನಗಳನ್ನು ಎಣಿಸುತ್ತಿರುವ ಈ ದಂಪತಿ ಕಾಯಿಲೆಯ ಚಿಕಿತ್ಸೆಗಾಗಿ ಹಲವೆಡೆ ಸುತ್ತಾಡಿ 5 ಲಕ್ಷದವರೆಗೂ ಸಾಲ ಮಾಡಿಕೊಂಡಿದ್ದಾರೆ.

    ಬೆಂಬಿಡದೇ ಕಾಡ್ತಿರೋ ಎಚ್‍ಐವಿ ಸೊಂಕಿನಿಂದಾಗಿ ನನ್ನ ಪತಿಗೆ ಕೆಲಸ ಮಾಡಲು ಆಗುತ್ತಿಲ್ಲ. ದಿನದಿಂದ ದಿನಕ್ಕೆ ಆರೋಗ್ಯ ಹದಗೆಡುತ್ತಿದೆ. ಇತ್ತ ನಾನು ಕೂಡ ಅದೇ ಕಾಯಿಲೆಯಿಂದ ಹಾಸಿಗೆ ಹಿಡಿದಿದ್ದೇನೆ. ಜೊತೆಗೆ ಸೊಂಕಿನಿಂದ ನನ್ನ ಮಗ ಪುಟಾಣಿ ವಿಶಾಲ್‍ನ ಮಾತನ್ನೂ ಕಸಿದುಕೊಂಡು ಮೂಕನನ್ನಾಗಿಸಿದೆ. ಮತ್ತೊಂದು ಕಡೆ ಸಾಲ ಕೊಟ್ಟವರ ಕಾಟ. ಚಿಕಿತ್ಸೆಗೆ ದುಡ್ಡಿಲ್ಲ, ಮಕ್ಕಳನ್ನ ಸಾಕಲು ಶಕ್ತಿ ಇಲ್ಲ, ಮಾಡಿದ ಸಾಲ ತೀರಿಸಲು ದಾರಿ ಕಾಣುತ್ತಿಲ್ಲ. ಆರೋಗ್ಯವಾಗಿರುವ ನನ್ನ ಮಗಳನ್ನು ಯಾರಾದರೂ ದತ್ತು ಪಡೆಯಿರಿ, ಇಲ್ಲವೇ ಬಾಲಮಂದಿರಕ್ಕೆ ಸೇರಿಸಿ ಎಂದು ತಾಯಿ ಕವಿತಾ ಅಂಗಲಾಚಿಕೊಂಡು ನೋವಿನಲ್ಲಿ ಹೇಳಿದ್ದಾರೆ.

    ಬದುಕಬೇಕೆಂಬ ಕನಸಿದ್ದರೂ ಸಾವಿನ ಆಟವಾಡುವ ಕಾಯಿಲೆ ಈ ಕುಟುಂಬವನ್ನು ಬೆಂಬಿಡುತ್ತಿಲ್ಲ. ಏನೇ ಆಗಲಿ ಎನೂ ಅರಿಯದ ಈ ಪುಟಾಣಿಗಳ ಬದುಕಿನಲ್ಲಿ ಬೆಳಕು ಹಚ್ಚುವವರು ಬೇಕಾಗಿದೆ.

    https://www.youtube.com/watch?v=FvXddLSAMKw

  • ಬಡ ದಂಪತಿಯ ಮಕ್ಕಳ ಎಂಜಿನಿಯರಿಂಗ್ ವಿದ್ಯಾಭ್ಯಾಸಕ್ಕೆ ಬೇಕಿದೆ ಸಹಾಯ

    ಬಡ ದಂಪತಿಯ ಮಕ್ಕಳ ಎಂಜಿನಿಯರಿಂಗ್ ವಿದ್ಯಾಭ್ಯಾಸಕ್ಕೆ ಬೇಕಿದೆ ಸಹಾಯ

    ಹಾವೇರಿ: ಮೀನು ಹಿಡಿಯುವ ತಂದೆ, ತಾಯಿ ಅಂಗನವಾಡಿ ಕೇಂದ್ರದಲ್ಲಿ ಅಡುಗೆ ಸಹಾಯಕಿಯಾಗಿ ಕೆಲಸ ಮಾಡಿಕೊಂಡು ಮಕ್ಕಳನ್ನು ಎಂಜಿನಿಯರಿಂಗ್ ಓದಿಸುತ್ತಿದ್ದಾರೆ. ಈ ಬಡದಂಪತಿಗೆ ಮಕ್ಕಳ ಮುಂದಿನ ವಿದ್ಯಾಭ್ಯಾಸಕ್ಕೆ ಅರ್ಥಿಕ ಸಹಾಯ ಬೇಕಿದೆ.

    ಹೌದು. ಹಾವೇರಿ ಜಿಲ್ಲೆ ಹಾನಗಲ್ ತಾಲೂಕಿನ ಶ್ಯಾಡಗುಪ್ಪಿ ಗ್ರಾಮದಲ್ಲಿ ಇಬ್ಬರು ಪ್ರತಿಭಾವಂತ ಮಕ್ಕಳಿರುವ ಪುಟ್ಟ ಕುಟುಂಬ. ತಂದೆ ಮಾರುತಿ ಕಿಳ್ಳಿಕ್ಯಾತರ್ ಮೀನು ಹಿಡಿದು ಮಾರಾಟ ಮಾಡಿ ಬಂದ ಹಣದಲ್ಲಿ ಜೀವನ ನಡೆಸುತ್ತಿದ್ದಾರೆ. ತಾಯಿ ಪುಷ್ಪಾ ಕಿಳ್ಳಿಕ್ಯಾತರ್ ಅಂಗನಾಡಿ ಕೇಂದ್ರದಲ್ಲಿ ಅಡುಗೆ ಸಹಾಯಕಿ. ಮನೆಯಲ್ಲಿ ಬಡತನವಿದ್ದರೂ ಇಬ್ಬರೂ ಮಕ್ಕಳನ್ನ ಶಾಲೆಗೆ ಕಳುಹಿಸಿ ಈಗ ಎಂಜಿನಿಯರಿಂಗ್ ವರೆಗೂ ಓದಿಸುತ್ತಿದ್ದಾರೆ.

    ಅವಿನಾಶ್ ಮತ್ತು ಆಕಾಶ್ ಇಬ್ಬರೂ ಬೆಂಗಳೂರಿನ ವೈಟ್‍ಪೀಲ್ಡ್ ನಲ್ಲಿರೋ ಜೈರಾಮ್ ಇಂಜಿನಿಯರಿಂಗ್ ಕಾಲೇಜ್‍ನಲ್ಲಿ ಬಿಇ ಓದುತ್ತಿದ್ದಾರೆ. ಅವಿನಾಶ್ 7ನೇ ಸೆಮಿಸ್ಟರ್ ನಲ್ಲಿದ್ದರೆ. ಆಕಾಶ ಮೂರನೇ ಸೆಮಿಸ್ಟರ್‍ನಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದಾರೆ. ಈ ಬಡ ಕುಟುಂಬಕ್ಕೆ ಈಗ ಮಕ್ಕಳ ಶಿಕ್ಷಣದ ಖರ್ಚು ಭರಿಸುವುದು ಕಷ್ಟವಾಗಿದೆ. ಸರ್ಕಾರಿ ಶುಲ್ಕವನ್ನ ಕಟ್ಟಲೂ ಆಗುತ್ತಿಲ್ಲ. ಜೊತೆಗೆ ತಾಯಿ ಪುಷ್ಪಾಗೆ ಅನಾರೋಗ್ಯ, ಹಾಗಾಗಿ ಮಕ್ಕಳ ವಿದ್ಯಾಭ್ಯಾಸಕ್ಕೆ ಸಹಾಯ ಬೇಕಿದೆ ಎಂದು ಹೇಳುತ್ತಿದ್ದಾರೆ.

    ಈ ಬಡದಂಪತಿ ಇಬ್ಬರ ಮಕ್ಕಳ ಶಿಕ್ಷಣಕ್ಕಾಗಿ ನಿತ್ಯವೂ ಕಷ್ಟಪಟ್ಟು ಕೆಲಸ ಮಾಡುತ್ತಿದ್ದಾರೆ. ಶಿಕ್ಷಣದ ಮಹತ್ವ ಅರಿತಿರುವ ಈ ಪೋಷಕರಿಗೆ ಆರ್ಥಿಕ ಸಹಾಯದ ಸಾಥ್ ನೀಡುವುದು ನಮ್ಮ ಉದ್ದೇಶ. ಈ ಬಡ ದಂಪತಿಯು ನಮ್ಮ ಮಕ್ಕಳ ಶಿಕ್ಷಣಕ್ಕೆ ಸಹಾಯ ಮಾಡಿ ಎಂದು ಮನವಿ ಮಾಡಿಕೊಳ್ಳುತ್ತಿದ್ದಾರೆ.

  • ತಾಯಿ ಇಲ್ಲ, ತಂದೆ ಬಿಟ್ಟು ಹೋದ, ಇರೋ ಅಜ್ಜಿಗೆ ದೃಷ್ಟಿ ಸರಿಯಿಲ್ಲ- ಅಜ್ಜಿಯ ಆರೈಕೆಯಲ್ಲಿ ಬೆಳೆಯುವ ಬಾಲಕನಿಗೆ ಬೇಕಿದ ಶಿಕ್ಷಣ

    ತಾಯಿ ಇಲ್ಲ, ತಂದೆ ಬಿಟ್ಟು ಹೋದ, ಇರೋ ಅಜ್ಜಿಗೆ ದೃಷ್ಟಿ ಸರಿಯಿಲ್ಲ- ಅಜ್ಜಿಯ ಆರೈಕೆಯಲ್ಲಿ ಬೆಳೆಯುವ ಬಾಲಕನಿಗೆ ಬೇಕಿದ ಶಿಕ್ಷಣ

    ಹುಬ್ಬಳ್ಳಿ: ತಾಯಿ ಸಾವನ್ನಿಪ್ಪಿದ್ದಾರೆ. ತಂದೆ ಒಂಟಿಯಾಗಿ ಬಿಟ್ಟು ಹೋಗಿದ್ದಾರೆ. ಇರೋದು ಅಜ್ಜಿ ಮಾತ್ರ. ಆದರೆ ಅವರಿಗೆ ಸರಿಯಾಗಿ ದೃಷ್ಟಿ ಕಾಣುವುದಿಲ್ಲ. ಅಜ್ಜಿಗೆ ಆಪರೇಷನ್ ಮಾಡಿಸಿ ಮೈತುಂಬಾ ಸಾಲ, ತುತ್ತು ಅನ್ನಕ್ಕೂ ಪರದಾಡುತ್ತಿರುವ ಈ ಕುಟುಂಬ ಸಹಾಯ ಕೇಳಿಕೊಂಡು ಬೆಳಕು ಕಾರ್ಯಕ್ರಮಕ್ಕೆ ಬಂದಿದೆ.

    ಅಜ್ಜಿಯ ಕೈ ತುತ್ತು ತಿಂದು ಬೆಳೆಯುತ್ತಿರುವ ಬಾಲಕನ ಹೆಸರು ಮಂಜುನಾಥ್ ಠಾಕೋಲಿ. ಮೂಲತಃ ಧಾರವಾಡ ಜಿಲ್ಲೆಯ ಕುಂದಗೋಳದವರು. ಕಳೆದ 15 ವರ್ಷಗಳ ಹಿಂದೆ ಈ ಬಾಲಕನ ತಾಯಿ ಸಾವನ್ನಪ್ಪಿದ್ದಾರೆ. ತಾಯಿ ಸಾವಿನ ಬಳಿಕ ತಂದೆ ಕೂಡ ಮಗನನ್ನು ಬಿಟ್ಟು ಹೋದವರು ಮತ್ತೆ ಇಲ್ಲಿವರೆಗೂ ಹಿಂದಿರುಗಿ ಬಂದಿಲ್ಲ.

    ಹುಟ್ಟುತ್ತಲೇ ತಾಯಿಯನ್ನು ಕಳೆದುಕೊಂಡು, ತಂದೆಗೆ ಬೇಡವಾದ ಮಗನಾಗಿ ಮಂಜುನಾಥ್ ಠಾಕೋಲಿ ಅನಾಥನಾಗಿ ಬಿಟ್ಟಿದ್ದನು. ಆದರೆ ಅಜ್ಜಿ ಸರೋಜಮ್ಮ ಅವರು ಮೊಮ್ಮಗನಿಗೆ ಆಸರೆಯಾದರೂ. ಅವರಿವರ ಮನೆ ಕೆಲಸಗಳನ್ನು ಮಾಡಿಕೊಂಡು ಮೊಮ್ಮಗನಿಗೆ ವಿದ್ಯಾಭ್ಯಾಸ ಕೊಡಿಸಿ ಆತನ ಆರೈಕೆ ಮಾಡಿಕೊಂಡು ತಮ್ಮ ಪ್ರತಿನಿತ್ಯದ ಜೀವನವನ್ನು ಸವೆಸುತ್ತಿದ್ದಾರೆ.

    ಅಜ್ಜಿಯ ಆಸರೆಯಲ್ಲಿ ಬೆಳೆಯುತ್ತಿರುವ ಮಂಜುನಾಥ್ ಠಾಕೋಲಿ ಕುಂದಗೋಳದ ಸರ್ಕಾರಿ ಶಾಲೆಯಲ್ಲಿ ಹತ್ತನೇ ತರಗತಿಯಲ್ಲಿ ಓದುತ್ತಿದ್ದಾನೆ. ಓದಿನಲ್ಲಿ ಸದಾ ಮುಂದಿದ್ದು, ಎಲ್ಲಾ ಶಿಕ್ಷಕರಿಗೂ ನೆಚ್ಚಿನ ವಿದ್ಯಾರ್ಥಿಯಾಗಿದ್ದಾನೆ. ಆದರೆ ಅಜ್ಜಿ ಸರೋಜಮ್ಮ ಅವರು ದೃಷ್ಠಿ ದೋಷದಿಂದ ಬಳಲುತ್ತಿದ್ದರು. ಆದ್ದರಿಂದ ಸಾಲ ಮಾಡಿ ಕಣ್ಣಿನ ಆಪರೇಷನ್ ಮಾಡಿಸಿಕೊಂಡಿದ್ದಾರೆ. ಕಣ್ಣಿನ ಚಿಕಿತ್ಸೆಗೆ ಮಾಡಿದ ಸಾಲವನ್ನು ತೀರಿಸಲಾಗದೇ ಈಗ ಹೊಟ್ಟೆಗೆ ಅನ್ನ ನೀರು ಇಲ್ಲದೇ ಕಡುಬಡತನದಲ್ಲಿ ಜೀವನ ಸಾಗಿಸುತ್ತಿದ್ದಾರೆ.

    ಅಜ್ಜಿ ತಮ್ಮ ಕೈಯಲ್ಲಿ ಆದಷ್ಟು ಇಲ್ಲಿಯವರೆಗೂ ಮೊಮ್ಮಗನಿಗೆ ವಿದ್ಯಾಭ್ಯಾಸ ಮಾಡಿಸಿದ್ದು, ಮುಂದಿನ ಓದಿಗೆ ಯಾರಾದರೂ ದಾನಿಗಳು ಸಹಾಯ ಮಾಡಿ ಎಂದು ನೊಂದ ಹೃಯದ ನಮ್ಮ ಪಬ್ಲಿಕ್ ಟಿವಿಯ ಬೆಳಕು ಕಾರ್ಯಕ್ರಮಕ್ಕೆ ಕೇಳಿಕೊಂಡು ಬಂದಿದ್ದಾರೆ.

  • ಗ್ರಾಮೀಣ ಕಲಾವಿದನ ಮನೆ ನಿರ್ಮಾಣಕ್ಕೆ ಬೇಕಿದೆ ಸಹಾಯ

    ಗ್ರಾಮೀಣ ಕಲಾವಿದನ ಮನೆ ನಿರ್ಮಾಣಕ್ಕೆ ಬೇಕಿದೆ ಸಹಾಯ

    ಮಡಿಕೇರಿ: ಗ್ರಾಮದಲ್ಲಿ ಹಬ್ಬ, ಸಾವು, ತಿಥಿ, ಹುತ್ತರಿ ಹಾಗೂ ಕೋಲಾಟ ಹಬ್ಬಗಳ ಸಂದರ್ಭದಲ್ಲಿ ಡೋಲು ಬಾರಿಸುವುದು ವೃತ್ತಿಯನ್ನು ಮಾಡಿಕೊಂಡಿರುವವರು ಮೆದರ ಅಚ್ಚಪ್ಪ. ಇವರ ಕುಟುಂಬಕ್ಕೆ ಊರಿನ ಜನರು ನೀಡುತ್ತಿರುವ ವಾರ್ಷಿಕ ವಂತಿಕೆಯೇ ಬದುಕಿಗೆ ಆಧಾರ. ಇದರೊಂದಿಗೆ ಕೂಲಿ ಕೆಲಸದಿಂದ ತಮ್ಮ ಜೀವನ ಸಾಗಿಸುತ್ತಿದ್ದಾರೆ. ಅದರೆ ಇವರಿಗೆ ವಾಸಿಸಲು ಮನೆ ಇಲ್ಲ ಎಂಬುವುದು ಗ್ರಾಮ ಪಂಚಾಯತಿ ನಿರ್ಲಕ್ಷ್ಯಕ್ಕೆ ಹಿಡಿದ ಕೈಗನ್ನಡಿಯಾಗಿದೆ.

    ಇನ್ನು ಅಚ್ಚಪ್ಪ ಅವರ ಅಣ್ಣನ ಪತ್ನಿ ಈ ಹಿಂದೆ ಗ್ರಾಮ ಪಂಚಾಯತಿ ಸದಸ್ಯೆಯಾಗಿದ್ದರೂ ಸರಕಾರದ ಮನೆ ಪಡೆಯಲು ಸಾದ್ಯವಾಗಿಲ್ಲ. ಅಚ್ಚಪ್ಪ ಅವರು ಮನೆ ಮನೆಗೆ ತೆರಳಿ ಭತ್ತದ ಹುಲ್ಲು, ಬಿದಿರು ಪ್ಲಾಸ್ಟಿಕ್ ಹಾಳೆಗಳನ್ನು ಸಂಗ್ರಹಿಸಿ ಮಳೆ ಗಾಳಿಯಿಂದ ರಕ್ಷಿಸಲು ಒಂದು ಸೂರು ನಿರ್ಮಿಸಿಕೊಂಡಿದ್ದಾರೆ. ಕೆಲವು ವರ್ಷಗಳ ಹಿಂದೆ ಅಚ್ಚಪ್ಪನವರು ಪತ್ನಿಯನ್ನು ಕಳೆದುಕೊಂಡಿದ್ದು ಒಂಟಿ ಜೀವನ ಸಾಗಿಸುತ್ತಿದ್ದಾರೆ. ಮನೆಯೇ ಇಲ್ಲದ ಮೇಲೆ ಶೌಚಾಲಯದ ಮಾತೇ ಇಲ್ಲ. ವಿಪರ್ಯಾಸ ಅಂದರೆ ಇವರು ವಾಸಿಸುವ ನಾಪೋಕ್ಲ್ ಗ್ರಾಮ ಪಂಚಾಯತಿಗೆ ಶೌಚಮುಕ್ತ ಗ್ರಾಮ ಎಂಬ ಹೆಗ್ಗಳಿಕೆ ಲಭಿಸಿರುವುದು ವ್ಯವಸ್ಥೆಯಲ್ಲಿನ ಲೋಪಕ್ಕೆ ಸಾಕ್ಷಿಯಾಗಿದೆ.

    ಗ್ರಾಮೀಣ ಕಲಾವಿದ ಅಚ್ಚಪ್ಪ ಅವರು ಅನೇಕ ಬಾರಿ ಅಶ್ರಮ ಮನೆ ನಿರ್ಮಿಸಲು ಗ್ರಾಮ ಪಂಚಾಯತಿಗೆ ಅರ್ಜಿ ಸಲ್ಲಿಸಿದರೂ ಇದುವರೆಗೂ ದೊರೆತಿಲ್ಲ. ಸೂರಿನ ಕನಸನ್ನು ನನಸು ಮಾಡಿಕೊಳ್ಳಲು ಈ ಬಡ ಕಲಾವಿದ ಬೆಳಕು ಕಾರ್ಯಕ್ರಮಕ್ಕೆ ಬಂದು ಸಹಾಯ ಕೋರಿದ್ದಾರೆ.

    https://www.youtube.com/watch?v=XxGHSO3TWhs

  • ಸ್ವಾವಲಂಬಿಯಾಗಿ ಬದುಕಲು ಪಣ ತೊಟ್ಟ ಈ ವಿಕಲಚೇತನ ಯುವಕನಿಗೆ ಬೇಕಿದೆ `ಪಾನ್ ಶಾಪ್’

    ಸ್ವಾವಲಂಬಿಯಾಗಿ ಬದುಕಲು ಪಣ ತೊಟ್ಟ ಈ ವಿಕಲಚೇತನ ಯುವಕನಿಗೆ ಬೇಕಿದೆ `ಪಾನ್ ಶಾಪ್’

    ಬೀದರ್: ಎಲ್ಲಾ ಸರಿ ಇದ್ರು ಏನು ಮಾಡದೆ ಇರುವ ಮನುಷ್ಯರ ಮಧ್ಯೆ ವಿಕಚೇತನನಾಗಿದ್ರು ನಾನು ಯಾರಿಗೂ ಭಾರವಾಗಬಾರದು ಎಂದು ಪಣ ತೊಟ್ಟಿದ್ದಾರೆ ಈ ವಿಕಲಚೇತನ ಯುವಕ.

    ಹೌದು, ಬೀದರ್ ಜಿಲ್ಲೆಯ ಭಾಲ್ಕಿ ತಾಲೂಕಿನ ಸಿದ್ದೇಶ್ವರ್ ಗ್ರಾಮದಲ್ಲಿರುವ ಪ್ರದೀಪ್ ತಳವಾಡೆ ಎಂಬ ಯುವಕ ಹುಟ್ಟಿನಿಂದಲೇ ಅಂಧನಾಗಿದ್ದಾರೆ. ಆದರೂ ಎದೆಗುಂದದೆ ಮನೆಯ ಮುಂದಿನ ಶೆಡ್‍ನಲ್ಲಿ ಮೋಬೈಲ್‍ಗೆ ಕರೆನ್ಸಿ ರಿಚಾರ್ಜ್ ಮಾಡಿಕೊಂಡು ಸ್ವಾವಲಂಬಿಯಾಗಿ ಬದುಕುತ್ತಿದ್ದಾರೆ. ಅಷ್ಟೇ ಅಲ್ಲ ಇವರು ಕ್ರಿಕೆಟ್ ಕಾಮೇಂಟ್ರಿ, ನ್ಯೂಸ್ ಆಂಕರಿಂಗ್ ಹೀಗೆ ಹಲವರ ಮಿಮಿಕ್ರಿ ಮಾಡಿ ಅಷ್ಟೋ ಇಷ್ಟೋ ಗಳಿಸುತ್ತಾರೆ.

    ಆದ್ರೆ ಕರೆನ್ಸಿ ರಿಚಾರ್ಜ್‍ನಲ್ಲಿ ನಿಯಮಿತ ಆದಾಯವಿಲ್ಲ ಹಾಗಾಗಿ ಭಾಲ್ಕಿ ಮುಖ್ಯರಸ್ತೆಯಲ್ಲಿ ಯಾರಾದ್ರೂ ಒಂದು ಪಾನ್ ಶಾಪ್ ಹಾಕಿಕೊಟ್ರೆ ಕಷ್ಟಪಟ್ಟು ದುಡಿದು ಹೆತ್ತವರನ್ನ ಸಾಕುತ್ತೇನೆ ಅಂತ ಇದೀಗ ಈ ಯುವಕ ಸಹಾಯ ಹಸ್ತ ಚಾಚಿದ್ದಾರೆ.

    ಇವರ ಕುಟುಂಬದಲ್ಲಿ ಒಟ್ಟು 5 ಜನವಿದ್ದು, ಪೋಷಕರು ಕೂಲಿ ಕೆಲಸ ಮಾಡಿ ಪ್ರತಿದಿನ 100 ರಿಂದ 200 ರೂ ಸಂಪಾದನೆ ಮಾಡುತ್ತಿದ್ದಾರೆ. ಆದ್ರೆ ಅದು ಒಂದು ಹೊತ್ತಿನ ಊಟಕ್ಕೆ ಸಾಕಾಗುತ್ತದೆ. ಸ್ವಾಭಿಮಾನಿ ಪ್ರದೀಪರಿಗೆ ಬೆಳಕು ಮೂಲಕ ಸಹಾಯ ಸಿಕ್ಕಿ ಅವರ ಕಷ್ಟಗಳು ದೂರಾಗಿ ಅವನ ಕಲೆ ಇನ್ನಷ್ಟು ಜನರಿಗೆ ಮಾದರಿಯಾಗಲಿ ಅಂತ ಪ್ರದೀಪ್ ಗೆಳೆಯರ ಹಾರೈಕೆ.

    ಒಟ್ಟಿನಲ್ಲಿ ಮನಸು ಮಾಡಿದ್ರೆ ಯಾರು ಬೇಕಾದ್ರು ಸಾಧನೆ ಮಾಡಬಹುದು ಎಂದು ತನ್ನ ಕಲೆ ಮತ್ತು ಸಾಹಸಿ ಧೋರಣೆಯ ಮೂಲಕ ತೋರಿಸಿಕೊಟ್ಟಿರುವ ಈ ವಿಕಚೇತನನ ಬಾಳಲ್ಲಿ ಬೆಳಕು ಮೂಡಲಿ ಎಂಬುದೇ ನಮ್ಮ ಆಶಯ.

    https://www.youtube.com/watch?v=I1trT37voYI

  • ಒಂಟಿಯಾಗಿ ಜೀವಿಸ್ತಿರೋ 75 ವರ್ಷದ ಅಜ್ಜಿಗೆ ಬೇಕಿದೆ ವಿದ್ಯುತ್ತಿನ ಬೆಳಕು

    ಒಂಟಿಯಾಗಿ ಜೀವಿಸ್ತಿರೋ 75 ವರ್ಷದ ಅಜ್ಜಿಗೆ ಬೇಕಿದೆ ವಿದ್ಯುತ್ತಿನ ಬೆಳಕು

    ನೆಲಮಂಗಲ: ತನ್ನ ಇಳಿ ವಯಸ್ಸಿನಲ್ಲಿ ಯಾರ ಹಂಗಿಲ್ಲದೆ, ಸ್ವಾವಲಂಬಿಯಾಗಿ ಜೀವನವನ್ನ ನಡೆಸುತ್ತಿರುವ ವೃದ್ಧೆಯ ಹೆಸರು ಅರಸಮ್ಮ. ಸುಮಾರು 75 ವರ್ಷ ವಯಸ್ಸು. ಇವರು ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲ ತಾಲೂಕಿನ ಮಣ್ಣೆ ಗ್ರಾಮದ ನಿವಾಸಿ.

    ಒಂದು ಕಾಲದಲ್ಲಿ ಈ ಗ್ರಾಮ ರಾಜಮಹಾರಾಜರು ಆಳ್ವಿಕೆ ಮಾಡಿದ್ದ ಗಂಗರಸರ ರಾಜಧಾನಿಯಾಗಿ ಬಡವರ ಏಳಿಗೆಗಾಗಿ ಶ್ರಮಿಸುತ್ತಿದ್ದ ಕೇಂದ್ರ ಸ್ಥಾನವಾಗಿತ್ತು. ಮದುವೆಯಾದ ಕೆಲವೇ ತಿಂಗಳಲ್ಲಿ ಪತಿಯನ್ನು ಕಳೆದುಕೊಂಡ ಇವರಿಗೆ ಮಕ್ಕಳು ಕೂಡ ಇಲ್ಲ. ಆದರೆ ಗಂಡನ ನೆನಪಿನಲ್ಲಿರುವುದು ಒಂದು ಹಳೆಯ ಸೂರು ಮಾತ್ರ. ಅಜ್ಜಿ ಗಟ್ಟಿಮುಟ್ಟಾಗಿದ್ದಾಗ ಕೂಲಿನಾಲಿ ಮಾಡಿ ಜೀವನ ನಡೆಸುತಿದ್ದರು. ಆದ್ರೆ ಇದೀಗ ವಯಸ್ಸಾಗಿದ್ರು ಅವರಿವರ ಮನೆಕೆಲಸ ಮಾಡಿ ಬದುಕಿನ ಬಂಡಿ ದೂಡುತ್ತಿದ್ದಾರೆ.

     

    ದುರಂತ ಅಂದ್ರೆ ಸ್ವಾತಂತ್ರ್ಯ ಬಂದು ದಶಕಗಳೇ ಕಳೆದ್ರೂ, ಈ ವೃದ್ಧೆಯ ಮನೆಗೆ ಮಾತ್ರ ವಿದ್ಯುತ್ ಸಂಪರ್ಕವಿಲ್ಲದೆ ಪ್ರತಿನಿತ್ಯ ದೀಪದ ಬೆಳಕಿನಲ್ಲಿ ಜೀವನ ಸಾಗಿಸುತ್ತಿದ್ದಾರೆ. ಈಗಾಗಲೇ ಸಾಕಷ್ಟು ಬಾರಿ ನೆಲಮಂಗಲ ಬೆಸ್ಕಾಂ ಅಧಿಕಾರಿಗಳು, ಸ್ಥಳೀಯ ಪಂಚಾಯಿತಿ, ಸೇರಿದಂತೆ ಹಲವರಿಗೆ ಮನವಿ ಮಾಡಿದ್ರೂ ಯಾವುದೇ ಪ್ರಯೋಜನವಾಗಿಲ್ಲ. ಇನ್ನು ಈ ವೃದ್ಧೆಯ ಮನೆಗೂ ವಿದ್ಯುತ್ ಕಂಬಕ್ಕೂ ಕೇವಲ 200 ಮೀಟರ್ ಇದ್ದು, ಸರ್ಕಾರದ ಯಾವುದಾದರೂ ಒಂದು ಯೋಜನೆಯ ಮೂಲಕ ಉಚಿತವಾಗಿ ಸಂಪರ್ಕವನ್ನ ನೀಡಬಹುದಾಗಿದೆ. ಆದ್ರೆ ಜಡ್ಡು ಗಟ್ಟಿರುವ ನಮ್ಮ ವ್ಯವಸ್ಥೆ ಕುರುಡಾಗಿದೆ.

    ಒಟ್ಟಾರೆ ಈ ವೃದ್ಧ ಮಹಿಳೆಯ ಮನೆಗೆ ಇನ್ನಾದರೂ ವಿದ್ಯುತ್ ಸಂಪರ್ಕದ ವ್ಯವಸ್ಥೆಯಾಗಬೇಕಿದೆ. ಬೆಸ್ಕಾಂ ಅಧಿಕಾರಿಗಳಿಗೆ ಹೇಳಿ ನನಗೆ ಬೆಳಕು ಕೊಡಿ ಅಂತ ಈ ಅಜ್ಜಿ ಇದೀಗ ಬೆಳಕು ಕಾರ್ಯಕ್ರಮದ ಮೊರೆ ಬಂದಿದ್ದಾರೆ.

  • ಕಿತ್ತು ತಿನ್ನುವ ಬಡತನ ಜೊತೆಗೆ ಇಬ್ರು ಹೆಣ್ಮಕ್ಕಳ ಕಟ್ಟಿಕೊಂಡು ಸ್ವಾಭಿಮಾನದ ಬದುಕು ಸಾಗಿಸುತ್ತಿರುವ ತಂದೆಗೆ ಬೇಕಿದೆ ನೆರವು

    ಕಿತ್ತು ತಿನ್ನುವ ಬಡತನ ಜೊತೆಗೆ ಇಬ್ರು ಹೆಣ್ಮಕ್ಕಳ ಕಟ್ಟಿಕೊಂಡು ಸ್ವಾಭಿಮಾನದ ಬದುಕು ಸಾಗಿಸುತ್ತಿರುವ ತಂದೆಗೆ ಬೇಕಿದೆ ನೆರವು

    ಮಂಡ್ಯ: ಕಿತ್ತು ತಿನ್ನುವ ಬಡತನ ಜೊತೆಗೆ ಇಬ್ಬರು ಪುಟಾಣಿ ಮಕ್ಕಳನ್ನು ಕಟ್ಟಿಕೊಂಡು ಊರೂರು ಸುತ್ತುತ್ತಾ ಬದುಕು ಕಟ್ಟಿಕೊಳ್ಳಲು ಪರದಾಡುತ್ತಿದ್ದಾರೆ. ಇವರು ಬೆಳಕು ಕಾರ್ಯಕ್ರಮಕ್ಕೆ ಬಂದು ಸಹಾಯವನ್ನು ಕೇಳಿಕೊಳ್ಳುತ್ತಿದ್ದಾರೆ.

    ಶಿವಕುಮಾರ್ ಅಸಹಾಯಕರಾಗಿ ತಮ್ಮ ಇಬ್ಬರು ಹೆಣ್ಣು ಮಕ್ಕಳೊಂದಿಗೆ ಬೀದಿ ಬೀದಿ ಅಲೆಯುತ್ತಾ ಬದುಕುತ್ತಿದ್ದಾರೆ. ಇವರು ಬೆಂಗಳೂರಿನ ಸ್ವತಂತ್ರ್ಯಪಾಳ್ಯ ನಿವಾಸಿ ಲಕ್ಷ್ಮಿದೇವಿ ಎಂಬವರೊಡನೆ ಮದುವೆಯಾಗಿತ್ತು. ಅವರ ದಾಂಪತ್ಯಕ್ಕೆ ಸಾಕ್ಷಿ ಎಂಬಂತೆ ಸ್ವಾತಿ ಮತ್ತು ಸಂಗೀತ ಎಂಬ ಇಬ್ಬರು ಹೆಣ್ಣು ಮಕ್ಕಳು. ಈಗ ಸ್ವಾತಿಗೆ ಆರು ವರ್ಷ ಸಂಗೀತಾಗೆ ಐದು ವರ್ಷ. ಶಿವಕುಮಾರ್ ಫಾಸ್ಟ್ ಫುಡ್ ಅಂಗಡಿ ಹಾಕಿಕೊಂಡು ಜೀವನಕ್ಕೆ ಬೇಕಾದ ದುಡಿಮೆ ಮಾಡುತ್ತಿದ್ದರು. ಸಿನಿಮಾ ಆಸಕ್ತಿಯೂ ಇದ್ದುದ್ದರಿಂದ ಸಹ ಕಲಾವಿದನಾಗಿ, ನಿರ್ದೇಶಕರ ಜೊತೆ ಅಸಿಸ್ಟೆಂಟ್ ಆಗಿ ಕೆಲಸ ಮಾಡಿಕೊಂಡು ಜೀವನ ಸಾಗಿಸುತ್ತಿದ್ದರು.

    ಶಿವಕುಮಾರ್ ಒಂದು ದಿನ ಬೈಕ್‍ನಿಂದ ಬಿದ್ದು ಕೋಮ ಸ್ಥಿತಿಗೆ ತಲುಪುತ್ತಾರೆ. ಜೊತೆಗೆ ಟಿಬಿ ಖಾಯಿಲೆಯು ಬರುತ್ತದೆ. ಆದರೆ ಪತ್ನಿ ಲಕ್ಷ್ಮಿದೇವಿ ಗಂಡನ ಅನಾರೋಗ್ಯ ನೋಡಿ ಕರುಣೆ ಇಲ್ಲದೇ ತನ್ನ ಇಬ್ಬರು ಹೆಣ್ಣು ಮಕ್ಕಳನ್ನು ಬಿಟ್ಟು ಹೊರಟು ಹೋಗಿದ್ದಾಳೆ. ಇತ್ತ ಶಿವಕುಮಾರ್ ತಂದೆ ತಾಯಿಯೂ ಕೂಡ ಅವರನ್ನು ದೂರ ಮಾಡಿದ್ದಾರೆ. ಇದರಿಂದ ಕಂಗಾಲಾಗಿರುವ ಶಿವಕುಮಾರ್ ಇಬ್ಬರು ಹೆಣ್ಣು ಮಕ್ಕಳೊಂದಿಗೆ ಬದುಕು ಕಟ್ಟಿಕೊಳ್ಳಲು ಊರೂರು ಅಲೆಯುತ್ತಿದ್ದಾರೆ ಎಂದು ಬಪ್ಪನಪುರ ಗ್ರಾಮಸ್ಥರು ಕಾಂತರಾಜು ತಿಳಿಸಿದ್ದಾರೆ.

    ಸದ್ಯಕ್ಕೆ ನಾನು ಜಿಲ್ಲೆಯ ಮಳವಳ್ಳಿ ತಾಲೂಕಿನ ಬಪ್ಪನಪುರದಲ್ಲಿರುವ ಮಠದಲ್ಲಿ ಆಶ್ರಯ ಪಡೆದಿದ್ದೇನೆ. ಒಂದಷ್ಟು ಗಾರೆ ಕೆಲಸ ಮಾಡಿ ಬರುವ ಹಣದಲ್ಲಿ ಮಕ್ಕಳಿಗೆ ಬಟ್ಟೆ, ಆಹಾರ ಒದಗಿಸುತ್ತಿದ್ದೇನೆ. ನನಗೆ ಪಾಸ್ಟ್ ಫುಡ್ ತಯಾರಿಸಲು ಬರುತ್ತದೆ, ಆದರೆ ನನ್ನ ಬಳಿ ನಯಾ ಪೈಸೆ ಹಣವಿಲ್ಲ. ಯಾರಾದ್ರು ಸಹಾಯ ಮಾಡಿ ಫಾಸ್ಟ್ ಫುಡ್ ಅಂಗಡಿಗೆ ಬೇಕಾದ ವಸ್ತುಗಳನ್ನು ಒದಗಿಸಿದರೆ. ನಾನು ವ್ಯಾಪಾರದಿಂದ ಬರುವ ಹಣದಿಂದ ತನ್ನಿಬ್ಬರು ಹೆಣ್ಣುಮಕ್ಕಳಿಗೆ ಉತ್ತಮ ಶಿಕ್ಷಣ ಕೊಡಿಸುತ್ತೇನೆ. ಜೊತೆಗೆ ನಾನು ಸ್ವಾಭಿಮಾನದ ಬದುಕು ಕಟ್ಟಿಕೊಳ್ಳುತ್ತೇನೆ ಎಂದು ಶಿವಕುಮಾರ್ ಸಹಾಯ ಕೇಳುತ್ತಿದ್ದಾರೆ.

  • ಆತ್ಮಹತ್ಯೆ ಮಾಡಲೆತ್ನಿಸಿದ ಅಂಗವಿಕಲನಿಗೆ ತಂದೆ-ತಾಯಿಗಾಗಿ ಬದುಕುವಾಸೆ..!

    ಆತ್ಮಹತ್ಯೆ ಮಾಡಲೆತ್ನಿಸಿದ ಅಂಗವಿಕಲನಿಗೆ ತಂದೆ-ತಾಯಿಗಾಗಿ ಬದುಕುವಾಸೆ..!

    ಗದಗ: ಎದ್ದು ನಿಲ್ಲಲಾಗದಂತಹ ಸ್ಥಿತಿ, ಕಿತ್ತು ತಿನ್ನುವ ಬಡತನ, ವಯಸ್ಸಾದ ತಂದೆ ತಾಯಿ. ಈ ಎಲ್ಲದರ ಮಧ್ಯೆ ನರರೋಗ ಹಾಗೂ ಸಂದು ನೋವು. ಹೌದು ನಾವು ಹೇಳಲು ಹೊರಟಿರುವುದು ಗದಗ ಜಿಲ್ಲೆಯ ಮುಂಡರಗಿ ತಾಲೂಕಿನ ಬರದೂರು ಗ್ರಾಮದ ವಾಸಿ 23 ವರ್ಷದ ಮೌನೇಶ್ ಎಂಬ ಅಸಹಾಯಕ ಯುವಕನ ಕಥೆ.

    ಸದಾ ಹುಮ್ಮಸ್ಸಿನಿಂದ ಕೆಲಸ ಮಾಡಿಕೊಳ್ಳುತ್ತಾ, ಹಿರಿಯರಿಗೆ ಗೌರವಿಸುತ್ತಾ, ಓದುತ್ತಾ. ತಂದೆ ತಾಯಿಯನ್ನು ಸಾಕುತ್ತಿದ್ದರು. ಇರುವ ಅಲ್ಪ ಜಮೀನಿನಲ್ಲಿ ಸಣ್ಣ ಬೆಳೆ ಬೆಳದು ಜೀವನ ನಡೆಸುತ್ತಿದ್ದರು. ಕಳೆದ ನಾಲ್ಕು ವರ್ಷಗಳ ಹಿಂದೆ ಆಟವಾಡುವ ವೇಳೆ ಬಿದ್ದು ತೊಡೆ ಭಾಗ ಪೆಟ್ಟಾಗಿತ್ತು. ಗಾಯಾಳುವಾಗಿದ್ದು ಮೌನೇಶ್‍ರನ್ನು ಆಸ್ಪತ್ರೆಗೆ ಕರೆದುಕೊಂಡು ಹೋದ ಮೇಲೆ ನರರೋಗ, ಸಂದು ನೋವು ಸಮಸ್ಯೆ ಇದೆ ಎಂದು ವೈದ್ಯರು ಖಚಿತಪಡಿಸಿದ್ದಾರೆ.

    ಕಿತ್ತು ತಿನ್ನುವ ಬಡತನವಿದ್ದರೂ ಸ್ವಾಭಿಮಾನದಿಂದ ಬದುಕುತ್ತಿದ್ದ ಮೌನೇಶ್‍ನ ತಂದೆ ತಾಯಿ ಮಗನಿಗಾಗಿ ಸಾಲ ಮಾಡಿ ಚಿಕಿತ್ಸೆ ಕೊಡಿಸಿದ್ದಾರೆ. ಮಗನ ಚಿಕಿತ್ಸೆಗಾಗಿ ಹುಬ್ಬಳ್ಳಿ, ಧಾರವಾಡ ಸೇರಿದಂತೆ ಎಲ್ಲ ನಗರಗಳಲ್ಲೂ ಚಿಕಿತ್ಸೆ ಕೊಡಿಸಿದ್ದಾರೆ. ಆದರೂ ಮಗನಲ್ಲಿ ಯಾವುದೇ ಚೇತರಿಕೆಯಾಗಿಲ್ಲ.

    ವಯಸ್ಸಾದ ತಂದೆ ತಾಯಿಗಳನ್ನು ನಾನು ನೋಡಿಕೊಳ್ಳಬೇಕಾಗಿತ್ತು. ಆದರೆ ನನ್ನನ್ನು ನೋಡಿಕೊಳ್ಳುವದಕ್ಕಾಗಿ ತಮ್ಮ ಜೀವನವನ್ನೇ ಮುಡಿಪಿಟ್ಟಿದ್ದಾರೆ ಎಂದು ಮೌನೇಶ್ ಕೊರಗುತ್ತಿದ್ದಾರೆ. ಈ ಎಲ್ಲಾ ಸಮಸ್ಯೆಗಳಿಂದ ಹೊರ ಬರಲು ಹಾಗೂ ತಂದೆ ತಾಯಿಗೆ ಹೊರೆ ಕಡಿಮೆ ಮಾಡಲು ಮೌನೇಶ್ ಆತ್ಮಹತ್ಯೆಗೆ ಯತ್ನಿಸಿದ್ದರು.

    ಛಲ ಬಿಡದ ತಂದೆ ತಾಯಿ ಮಗ ಮೌನೇಶ್‍ನನ್ನು ದೊಡ್ಡ ದೊಡ್ಡ ಆಸ್ಪತ್ರೆಗೆಲ್ಲಾ ತೋರಿಸಿದ್ದಾರೆ. ನೋಡಿದ ವೈದ್ಯರಲ್ಲಿ ಕೆಲವರು ಸಾಧ್ಯವಿಲ್ಲ ಎಂದರೆ ಇನ್ನು ಕೆಲವರು ತುಂಬಾ ಹಣ ಖರ್ಚಾಗುತ್ತದೆ ಎಂದು ಹೇಳುತ್ತಾರೆ. ಇದ್ದ ಹಣವನ್ನೆಲ್ಲ ಅಲ್ಲಿ ಇಲ್ಲಿ ಅಂತ ಬರೀ ಔಷಧಿಗೆ ಖರ್ಚಾಗಿದೆ.

    ನಿತ್ಯ ಕರ್ಮಕ್ಕೂ ಇನ್ನೊಬ್ಬರನ್ನ ಆಶ್ರಯಿಸಬೇಕಾದ ಅನಿವಾರ್ಯತೆ ಮೌನೇಶನದ್ದು ಜೊತೆಗೆ ವೃದ್ಧ ತಂದೆ-ತಾಯಿ. ಬಡತನ ಈ ಕುಟುಂಬದ ಅಸಹಾಯಕತೆಯನ್ನ ಮತ್ತಷ್ಟು ಹೆಚ್ಚಿಸಿದೆ. ಇನ್ನೂ ಮೌನೇಶನ ನೋವು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಕುಟುಂಬ ದಿಕ್ಕು ತೋಚದಂತಾಗಿ ಕುಳಿತಿದೆ.

    https://www.youtube.com/watch?v=hsSmHabjUhE

  • ಸ್ವಾಭಿಮಾನಿ ಜೀವನವನ್ನು ನಡೆಸುತ್ತಿರುವ ಮಹಿಳೆಗೆ ಬೇಕಿದೆ ಸಹಾಯ

    ಸ್ವಾಭಿಮಾನಿ ಜೀವನವನ್ನು ನಡೆಸುತ್ತಿರುವ ಮಹಿಳೆಗೆ ಬೇಕಿದೆ ಸಹಾಯ

    ಬಾಗಲಕೋಟೆ: ಒಂದು ಕಡೆ ಬೆಂಬಿಡದೇ ಕಾಡ್ತಿರೋ ಬಡತನ, ಮತ್ತೊಂದೆಡೆ ಗಂಡನನ್ನ ಕಳೆದುಕೊಂಡು, ರಸ್ತೆ ಬದಿ ಅಂಗಡಿ ವ್ಯಾಪಾರ ಮಾಡಿಕೊಂಡು ಮನೆ ಸಾಗಿಸುತ್ತಿರುವ ದಿಟ್ಟ ಮಹಿಳೆ. ಆದರೆ ಇಬ್ಬರು ಗಂಡು ಮಕ್ಕಳ ತಾಯಿಯಾಗಿರುವ ಮಹಿಳೆಗೆ ರಸ್ತೆ ಬದಿ ತಿಂಡಿ ತಿನಿಸುಗಳ ವ್ಯಾಪಾರ ಮಾಡಿ ಜೀವನ ಸಾಗಿಸಲು ಕಷ್ಟವಾಗತ್ತಿದೆ. ಅಂದ ಹಾಗೆ ಇದು ಬಾಗಲಕೋಟೆ ಪಟ್ಟಣದ ಬಿಲಾಲ್ ಮಸೀದಿ ಹತ್ತಿರ ಇರುವ ಫಾತೀಮಾ ಮುಲ್ಲಾ ಎಂಬುವರ ಕರುಣಾಜನಕ ಕಥೆ.

    ಫಾತೀಮಾ ಮುಲ್ಲಾ ಬಾಗಲಕೋಟೆಯ ವಾರ್ಡ ನಂಬರ್ 10ರ ನಿವಾಸಿ. ಈ ದಿಟ್ಟ ಮಹಿಳೆಗೆ ಇಬ್ಬರು ಗಂಡು ಮಕ್ಕಳಿದ್ದಾರೆ. ಒಬ್ಬ ಸಾದಿಕ್ ಪೆಂಡಲ್ ಹಾಕೋ ಕೆಲಸ ಮಾಡ್ತಾನೆ, ಇನ್ನೊಬ್ಬ ಸಮೀರ್ ವ್ಯಾಸಂಗ ಮಾಡುತ್ತಿದ್ದಾನೆ. ಕುಟುಂಬಕ್ಕೆ ಆಧಾರ ಸ್ತಂಭವಾಗಿದ್ದ ಗಂಡ ತೀರಿಹೋಗಿ 15 ವರ್ಷಗಳಾಯ್ತು. ಗಂಡ ತೀರಿಹೋಗಿದ್ದಾಗಿನಿಂದ ಮನೆಯ ಜವಾಬ್ದಾರಿಯನ್ನ ತಾವೇ ನಿರ್ವಹಿಸುತ್ತಿದ್ದಾರೆ. ಈ ಮಹಿಳೆಗೆ ಕಾಲೋನಿ ಜನರೆಲ್ಲ ಸೇರಿ ಒಂದು ಒತ್ತುವ ಗಾಡಿ ಕೊಡಿಸಿಕೊಟ್ಟರು. ಆದರೆ ಸದ್ಯ ಆ ಒತ್ತುವ ಗಾಡಿ ದುರಸ್ತಿ ಅಂಚಿಗೆ ತಲುಪಿದ್ದು, ಮಳೆ ಗಾಳಿ ಬಂದರೆ ವ್ಯಾಪಾರ ಬಂದ್ ಆಗುತ್ತದೆ.

    ಒಂದು ದಿನ ವ್ಯಾಪಾರ ನಡಿಲಿಲ್ಲ ಎಂದರೆ ಮನೆಯ ಎಲ್ಲರಿಗೂ ಉಪವಾಸವೇ ಗತೀ. ಆದರೆ ರಸ್ತೆ ಬದಿ ಸಣ್ಣ ಅಂಗಡಿ ಹಾಕಿಕೊಂಡಿರೆ ಮಹಿಳೆಗೆ ಸ್ವಂತ ಮನೆ ಇಲ್ಲ. ಇರುವ ಬಾಡಿಗೆ ಶೆಡ್ ಗೆ ಬಾಡಿಕೆ ನೀಡಲು ಆಗುತ್ತಿಲ್ಲ. ಮಕ್ಕಳಿಗೆ ಒಂದು ಒಳ್ಳೆ ಶಿಕ್ಷಣ ಕೊಡಿಸಬೇಕು ಎನ್ನುವ ಕನಸು ಹೊಂದಿರುವ ಫಾತೀಮಾ ಅವರಿಗೆ ಒಂದು ಆಶ್ರಯ ಮನೆ ಹಾಗೂ ಕಬ್ಬಿಣದಿಂದ ತಯಾರಿಸಲ್ಪಟ್ಟ ಕಪಾಟ್ ಅಂಗಡಿ ಕೊಡಿಸಿದ್ರೆ ಸ್ವಾಭಿಮಾನಿ ಜೀವನಕ್ಕೆ ಅಧಾರವಾಗುತ್ತದೆ.