Tag: Belgaum

  • ವೇಶ್ಯಾವಾಟಿಕೆಯಲ್ಲಿ ಸಿಲುಕಿಕೊಂಡಿದ್ದ ಯುವತಿಯ ರಕ್ಷಣೆ

    ವೇಶ್ಯಾವಾಟಿಕೆಯಲ್ಲಿ ಸಿಲುಕಿಕೊಂಡಿದ್ದ ಯುವತಿಯ ರಕ್ಷಣೆ

    -2017ರಲ್ಲಿ ಅಪಹರಣವಾಗಿದ್ದ ಯುವತಿ ವಿಳಾಸ ಪತ್ತೆ

    ಬೆಳಗಾವಿ: ಕಿಡ್ನಾಪ್ ಆಗಿ ವೇಶ್ಯಾವಾಟಿಕೆಯಲ್ಲಿ ಸಿಲುಕಿಕೊಂಡಿದ್ದ, ಉತ್ತರ ಪ್ರದೇಶ ಯುವತಿಯನ್ನು ಬೆಳಗಾವಿಯ ಎಪಿಎಂಸಿ ಠಾಣೆಯ ಪೊಲೀಸರು ರಕ್ಷಣೆ ಮಾಡಿ ಮರಳಿ ಪಾಲಕರ ಮಡಿಲಿಗೆ ಸೇರಿಸಿದ್ದಾರೆ.

    ಫೆ.7ರಂದು ಬೆಳಗಾವಿಯ ಸದಾಶಿವನಗರದ ಮನೆಯೊಂದರರಲ್ಲಿ ನಡೆಯುತ್ತಿರುವ ಹೈಟೆಕ್ ವೇಶ್ಯಾವಾಟಿಕೆ ಜಾಲದ ಮೇಲೆ ಬೆಳಗಾವಿ ಪೊಲೀಸರು ದಾಳಿ ನಡೆಸಿದ್ದರು. ಎಪಿಎಂಸಿ ಠಾಣೆ ಸಿಪಿಐ ಜಾವೇದ್ ಮುಷಾಪುರೆ ನೇತೃತ್ವದಲ್ಲಿ ವೇಶ್ಯಾವಾಟಿಕೆ ಮೇಲೆ ದಾಳಿ ನಡೆದಿದೆ. ಈ ವೇಳೆ ಇಬ್ಬರು ಯುವತಿಯರನ್ನು ಎಪಿಎಂಸಿ ಠಾಣೆ ಪೊಲೀಸರು ರಕ್ಷಣೆ ಮಾಡಿದ್ದಾರೆ.

    ವೇಶ್ಯಾವಾಟಿಕೆಯಲ್ಲಿ ಸಿಲುಕಿಕೊಂಡಿದ್ದ ಇಬ್ಬರು ಯುವತಿಯರನ್ನು ಮಹಿಳಾ ಸಾಂತ್ವನ ಕೇಂದ್ರಕ್ಕೆ ಶಿಫ್ಟ್ ಮಾಡಲಾಗಿತ್ತು. ವಿಚಾರಣೆ ವೇಳೆ ಓರ್ವ ಯುವತಿಯ ವಿಳಾಸವನ್ನು ಪೊಲೀಸರು ಪತ್ತೆ ಹಚ್ಚಿದ್ದಾರೆ. 2017ರಲ್ಲಿ ಈ ಯುವತಿ ಅಪಹರಣವಾಗಿದ್ದ ಬಗ್ಗೆ ಕೇಸ್ ದಾಖಲಾಗಿದ್ದ ಮಾಹಿತಿ ದೊರಕಿದೆ. ಉತ್ತರಪ್ರದೇಶದ ಗಾಜಿಯಾಬಾದ್ ಠಾಣೆಯಲ್ಲಿ ಕಿಡ್ನಾಪ್ ಕೇಸ್ ದಾಖಲಾಗಿತ್ತು.

    ಯುವತಿ ತಂದೆ ಉತ್ತರಪ್ರದೇಶ ಪೊಲೀಸರೊಂದಿಗೆ ಬೆಳಗಾವಿಗೆ ಬಂದು ಅವರ ಮಗಳನ್ನು ಕರೆದುಕೊಂಡು ಹೋಗಿದ್ದಾರೆ. ಎಪಿಎಂಸಿ ಪೊಲೀಸರು, ಮಹಿಳಾ ಸಾಂತ್ವನ ಕೇಂದ್ರದ ಕಾರ್ಯಕ್ಕೆ ಸಾರ್ವಜನಿಕರ ಮೆಚ್ಚುಗೆ ವ್ಯಕ್ತವಾಗುತ್ತಿದೆ.

  • ಪಾನ್‍ಶಾಪ್‍ನಲ್ಲಿ ಅಫೀಮು ಮಾರಾಟ- ಮೂವರ ಬಂಧನ

    ಪಾನ್‍ಶಾಪ್‍ನಲ್ಲಿ ಅಫೀಮು ಮಾರಾಟ- ಮೂವರ ಬಂಧನ

    – 1.15 ಕೆ.ಜಿ.ಅಫೀಮು ವಶಕ್ಕೆ

    ಬೆಳಗಾವಿ: ಸಿಇಎನ್ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಅಫೀಮು ಮಾರಾಟ ಮಾಡ್ತಿದ್ದ ಮೂವರನ್ನು ಬಂಧಿಸಿದ್ದಾರೆ.

    ನಗರದ ಪಾನ್‍ಶಾಪ್‍ನಲ್ಲಿ ಅಫೀಮು ಸಂಗ್ರಹಿಸಿಟ್ಟುಕೊಂಡು ಮಾರಾಟ ಮಾಡುತ್ತಿದ್ದ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಸಿಇಎನ್ ಪೊಲೀಸರು, ಆರೋಪಿಗಳಾದ ಬರಖತ್‍ಖಾನ್, ಕಮಲೇಶ್ ಬೇನಿವಾಲಾ, ಸರವನ್ ಅಸನೋಯಿಯವರನ್ನು ಬಂಧಿಸಿದ್ದಾರೆ.

    ರಾಷ್ಟ್ರೀಯ ಹೆದ್ದಾರಿ 4ರ ಪಕ್ಕದ ರಾಜಸ್ಥಾನ ದಾಬಾ ಬಳಿ ಪಾನ್‍ಶಾಪ್‍ನಲ್ಲಿ ಮಾರಾಟ ಮಾಡುತ್ತಿದ್ದರು. ಒಟ್ಟು 20 ಲಕ್ಷ ರೂಪಾಯಿ ಮೌಲ್ಯದ 1.15 ಕೆ.ಜಿ. ಅಫೀಮನ್ನು ಪೊಲೀಸರು ಜಪ್ತಿ ಮಾಡಿದ್ದಾರೆ. ಬಂಧಿತ ಮೂವರು ಆರೋಪಿಗಳು ರಾಜಸ್ಥಾನ ಮೂಲದವರಾಗಿದ್ದು, ಬೆಳಗಾವಿಯಲ್ಲಿ ವಾಸವಿದ್ದರು. ರಾಜಸ್ಥಾನ ಮೂಲದ ವ್ಯಕ್ತಿಗಳನ್ನು ಟಾರ್ಗೆಟ್ ಮಾಡಿಕೊಂಡು ಆರೋಪಿಗಳು ಅಫೀಮು ಸಪ್ಲೈ ಮಾಡುತ್ತಿದ್ದರು.

    ಈ ಗ್ಯಾಂಗ್ ಲಾರಿಗಳ ಮೂಲಕ ರಾಜಸ್ಥಾನದಿಂದ ಬೆಳಗಾವಿಗೆ ಅಫೀಮು ತರುತ್ತಿತ್ತು. ಬೆಳಗಾವಿಯ ಸಿಇಎನ್ ಪೊಲೀಸ್ ಠಾಣೆಯಲ್ಲಿ ಮೊಕದ್ದಮೆ ದಾಖಲಾಗಿದ್ದು, ಪೊಲೀಸರು ತನಿಖೆಯನ್ನು ಮುಂದುವರಿಸಿದ್ದಾರೆ.

  • ಸಿದ್ದರಾಮಯ್ಯ ನಮ್ಮ ನಾಯಕ – ರಮೇಶ್ ಜಾರಕಿಹೊಳಿ

    ಸಿದ್ದರಾಮಯ್ಯ ನಮ್ಮ ನಾಯಕ – ರಮೇಶ್ ಜಾರಕಿಹೊಳಿ

    – ದಿನಕ್ಕೆ 2 ಬಾರಿ ಸಿದ್ದರಾಮಯ್ಯ ಜೊತೆ ಮಾತನಾಡುತ್ತೇನೆ
    – ಮನಸ್ಸು ಮಾಡಿದ್ರೆ 5 ಕೈ ಶಾಸಕರು ರಾಜೀನಾಮೆ ನೀಡ್ತಾರೆ

    ಬೆಳಗಾವಿ: ದಿನಕ್ಕೆ ಎರಡು ಬಾರಿ ಸಿದ್ದರಾಮಯ್ಯ ಜತೆಗೆ ಮಾತಾಡುತ್ತೇನೆ. ಇಂದಿಗೂ ಮಾತನಾಡುತ್ತೇನೆ ಸಿದ್ದರಾಮಯ್ಯ ನಮ್ಮ ನಾಯಕ ಎಂದು ಹೇಳುವ ಮೂಲಕವಾಗಿ ಜಿಲ್ಲಾ ಉಸ್ತುವಾರಿ ಸಚಿವ ರಮೇಶ್ ಜಾರಕಿಹೊಳಿ ಶಾಕಿಂಗ್ ಹೇಳಿಕೆಯನ್ನು ನೀಡಿದ್ದಾರೆ.

    ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ ಗ್ರಾ.ಪಂ ಸದಸ್ಯರಿಗೆ ಸತ್ಕಾರ ಕಾರ್ಯಕ್ರಮದಲ್ಲಿ ಭಾಗವಿಸಿದ ಮಾತನಾಡಿದ ಅವರು ನಾನು ಮನಸ್ಸು ಮಾಡಿದ್ರೇ 24 ಗಂಟೆಯಲ್ಲಿ ಐದು ಜನ ಕಾಂಗ್ರೆಸ್ ಶಾಸಕರನ್ನ ರಾಜೀನಾಮೆ ಕೊಡಿಸುತ್ತೇನೆ. ನೀವು ನಂಬಲು ಆಗಲ್ಲಾ. ಅಂತ ದೊಡ್ಡ ನಾಯಕರು ಬಿಜೆಪಿ ಬರಲು ತಯಾರಿದ್ದಾರೆ. ಟಾಪ್ 1 ರಿಂದ ಐದರ ವರೆಗಿನ ಕಾಂಗ್ರೆಸ್ ನಾಯಕರನ್ನ ಕರೆತರುತ್ತೇನೆ. ಅವರ ಹೆಸರನ್ನ ಕೇಳಿದ್ರೇ ನೀವು ಕೂಡ ಗಾಬರಿಯಾಗುತ್ತೀರಿ. ಕಾಂಗ್ರೆಸ್‍ನ ಮಹಾನ್ ನಾಯಕರನ್ನ ಬಿಜೆಪಿಗೆ ತರುತ್ತೇನೆ ಎಂದು ಹೇಳಿದ್ದಾರೆ

    ನಾವು ಬಿಜೆಪಿಯಲ್ಲಿ ಆನಂದದಿಂದ ಕೆಲಸ ಮಾಡುತ್ತಿದ್ದೇವೆ. ಹದಿನೇಳು ಜನರು ಶಾಸಕರು ಬಿಜೆಪಿಯಲ್ಲಿ ಗಟ್ಟಿಯಾಗಿರುತ್ತೇವೆ. ಕಾಂಗ್ರೆಸ್ ನಲ್ಲಿ ನಮ್ಮನ್ನ ಮೂಲೆಯಲ್ಲಿ ಕುಡಿಸಿದ್ದರು. ನಾವು ಮತ್ತೆ ಕಾಂಗ್ರೆಸ್‍ಗೆ ಹೋಗುವುದಿಲ್ಲ ಎಂದಿದ್ದಾರೆ.

    ಒಬ್ಬ ಹೆಣ್ಣು ಮಗಳಿದ್ದಾಳೆ ಅವರಿಗೆ ದೇವರು ಒಳ್ಳೆಯದು ಮಾಡಲಿ. ತಲೆ ಕೆಡಿಸಿಕೊಂಡು ಮಾತಾಡಿದ್ರೇ ಬಹಳ ಕಷ್ಟ ಆಗುತ್ತೆ. ಅವರ ಬಗ್ಗೆ ನಾವು ಕೆಟ್ಟದು ಮಾತಾಡುವುದಿಲ್ಲ. ನೀವು ಮಾತಾಡಬೇಡಿ ಎಂದು ಹೇಳು ಮೂಲಕವಾಗಿ ಅಧಿಕಾರದ ದುರುಪಯೋಗ ಮಾಡಿಕೊಂಡು ಕೆಲಸ ಮಾಡ್ತಿದ್ದಾರೆ ಎಂಬ ಹೆಬ್ಬಾಳ್ಕರ್ ಹೇಳಿಕೆ ವಿಚಾರವಾಗಿ ಮಾತನಾಡಿದ್ದಾರೆ.

    ಬೆಳಗಾವಿ ಜಿಲ್ಲೆಯಲ್ಲಿ ಎಲ್ಲೆಲ್ಲಿ ಬಿಜೆಪಿ ಅಧಿಕಾರಕ್ಕೆ ಇಲ್ಲ ಅದನ್ನ ತರುವ ಕೆಲಸ ಮಾಡುತ್ತೇವೆ. ಮುಂದಿನ ಭಾರಿ ಗ್ರಾಮೀಣ ಕ್ಷೇತ್ರದಲ್ಲಿ ಬಿಜೆಪಿ ಧ್ವಜ ಹಾರಿಸುವ ನಿರ್ಧಾರ ಮಾಡಿ ಸಂಕಲ್ಪ ಮಾಡಿದ್ದೇವೆ. ಇಂದಿನ ಕಾರ್ಯಕ್ರಮದಲ್ಲಿ 23 ಗ್ರಾಮ ಪಂಚಾಯತಿ ಸದಸ್ಯರು ಹಾಜರಿದ್ದಾರೆ. ಚುನಾವಣೆ ಫಲಿತಾಂಶ ಪೂರ್ತಿ ಬರುವ ಮುನ್ನ ರಮೇಶ್ ಜಾರಕಿಹೊಳಿಗೆ ಮುಖಭಂಗ ಅಂತಾ ಬಂತೂ. ಅತೀ ಶೀಘ್ರದಲ್ಲಿ ಗ್ರಾಮೀಣ ಕ್ಷೇತ್ರದಲ್ಲಿ ಬಿಜೆಪಿ ಸದಸ್ಯರು ಎಷ್ಟಿದ್ದಾರೆ ಅಂತಾ ತೋರಿಸುತ್ತೇನೆ ಅಂತಾ ಮಾತುಕೊಟ್ಟಿದ್ದೆನೆ ಎಂದರು.

    ಮುಂದಿನ ಚುನಾವಣೆಯಲ್ಲಿ ಅರವತ್ತು ಸಾವಿರ ಅಂತರದಿಂದ ಬಿಜೆಪಿ ಅಭ್ಯರ್ಥಿ ಗೆಲ್ಲಿಸಬೇಕು. ಐವತ್ತು ಸಾವಿರಕ್ಕಿಂತ ಕಡಿಮೆ ಅಂತರದಲ್ಲಿ ಬಿಜೆಪಿ ಗೆದ್ದರೆ ಅದು ಸೋಲು ಅಂದುಕೊಳ್ಳುತ್ತೇನೆ. ನನ್ನನ್ನು ನಂಬಿ ಗ್ರಾಮೀಣ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆ ಜನರು ಹೋಗಿದ್ದಾರೆ. ಗ್ರಾಮೀಣ ಕ್ಷೇತ್ರದ ಕಾಂಗ್ರೆಸ್ ಜನರು ನನ್ನ ಜನರು. ಗ್ರಾಮೀಣ ಕ್ಷೇತ್ರದಲ್ಲಿನ ಕಾಂಗ್ರೆಸ್ ಕಾರ್ಯಕರ್ತರನ್ನ ಮುಂದಿನ ದಿನಗಳಲ್ಲಿ ಬಿಜೆಪಿಗೆ ಕರೆದುಕೊಂಡು ಬರುವ ಜವಾಬ್ದಾರಿ ನನ್ನದು. ಗ್ರಾಮೀಣ ಕ್ಷೇತ್ರದಲ್ಲಿ ಮತ್ತೆ ಆಪರೇಷನ್ ಕಮಲ ಮಾಡುತ್ತೇವೆ ಎಂದು ಹೇಳಿದ್ದಾರೆ.

    ಇದೇ ವೇಳೆ ಮಾತನಾಡಿದ ಸರ್ಕಾರದ ವಿಧಾನಪರಿಷತ್ ಮುಖ್ಯ ಸಚೇತಕ ಮಹಾಂತೇಶ್ ಕವಟಗಿಮಠ ಉದ್ಯೋಗ ಖಾತ್ರಿ ನಾನೇ ತಂದಿದ್ದೇನೆ ಅಂತಾ ಕೆಲವರು ಹೇಳುತ್ತಿದ್ದಾರೆ. ಉದ್ಯೋಗ ಖಾತ್ರಿ ಯೋಜನೆ ಕೇಂದ್ರ ಸರ್ಕಾರ ತಂದಿರುವುದು ಎಂದು ಹೇಳಿ ಪರೋಕ್ಷವಾಗಿ ಲಕ್ಷ್ಮೀ ಹೆಬ್ಬಾಳ್ಕರ್‍ಗೆ ಟಾಂಗ್ ಕೊಟ್ಟಿದ್ದಾರೆ.

    ಗೋಕಾಕ್ ಗೆ ಕೊಟ್ಟಷ್ಟು ಅನುದಾನ ಬೆಳಗಾವಿ ಗ್ರಾಮೀಣ ಕ್ಷೇತ್ರಕ್ಕೆ ನೀಡಬೇಕು. ಬೆಳಗಾವಿ ಗ್ರಾಮೀಣ ಕ್ಷೇತ್ರ ಹಿಂದುಳಿದ ಕ್ಷೇತ್ರವಾಗಿದೆ. ಗ್ರಾಪಂ ಸದಸ್ಯರು ಒಟ್ಟಾಗಿ ಕೆಲಸ ಮಾಡಿ ಕ್ಷೇತ್ರ ಅಭಿವೃದ್ಧಿ ಪಡಿಸಬೇಕು ಎಂದು ಹೇಳಿದ್ದಾರೆ.

    ರಮೇಶ್ ಜಾರಕಿಹೊಳಿ ಮಾತಾಡಿದರೆ ಆ ಕೆಲಸ ಮಾಡುತ್ತಾರೆ. ನೀವೆಲ್ಲಾ ಹುಲಿ ಜತೆಗೆ ಇರೀ ಕುರಿ ಜತೆಗೆ ಇರಬೇಡಿ ಎಂದು ಹೇಳುವ ಮೂಲಕವಾಗಿ ಮಾಜಿ ಶಾಸಕ ಸಂಜಯ್ ಪಾಟೀಲ್, ಶಾಸಕಿ ಹೆಬ್ಬಾಳ್ಕರ್‍ಗೆ ಪರೋಕ್ಷವಾಗಿ ಟಾಂಗ್ ಕೊಟ್ಟರು.

  • ಬೆಳಗಾವಿಯಲ್ಲಿ ಐ.ಟಿ.ಪಾರ್ಕ್ ನಿರ್ಮಾಣ- ರಾಜನಾಥ್ ಸಿಂಗ್ ಜೊತೆ ಡಿಸಿಎಂ ಚರ್ಚೆ

    ಬೆಳಗಾವಿಯಲ್ಲಿ ಐ.ಟಿ.ಪಾರ್ಕ್ ನಿರ್ಮಾಣ- ರಾಜನಾಥ್ ಸಿಂಗ್ ಜೊತೆ ಡಿಸಿಎಂ ಚರ್ಚೆ

    – ರಕ್ಷಣಾ ಇಲಾಖೆ ಸ್ವಾಧೀನದ 750 ಎಕರೆ ಭೂಮಿ ಹಸ್ತಾಂತರಕ್ಕೆ ಮನವಿ

    ನವದೆಹಲಿ: ಬೆಳಗಾವಿಯಲ್ಲಿ ಮಾಹಿತಿ ತಂತ್ರಜ್ಞಾನ ಪಾರ್ಕ್ ನಿರ್ಮಿಸಲು ರಕ್ಷಣಾ ಇಲಾಖೆ ಸ್ವಾಧೀನದಲ್ಲಿರುವ ಸುಮಾರು 750 ಎಕರೆ ಭೂಮಿಯನ್ನು ಸರ್ಕಾರಕ್ಕೆ ಬಿಟ್ಟುಕೊಡುವಂತೆ ರಾಜ್ಯದ ಐಟಿ/ಬಿಟಿ ಸಚಿವರೂ ಆದ ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥ ನಾರಾಯಣ ಅವರು ಕೇಂದ್ರ ರಕ್ಷಣಾ ಮಂತ್ರಿ ರಾಜನಾಥ್ ಸಿಂಗ್ ಅವರನ್ನು ಕೋರಿದ್ದಾರೆ.

    ರಾಜನಾಥ್ ಸಿಂಗ್ ಅವರನ್ನು ಶನಿವಾರ ನವದೆಹಲಿಯ ಅವರ ಮನೆಯಲ್ಲಿ ಭೇಟಿಯಾಗಿ ಈ ಬಗ್ಗೆ ಪ್ರಸ್ತಾಪಿಸಿದರು. ಈ ಜಾಗವನ್ನು ಕರ್ನಾಟಕ ಸರ್ಕಾರಕ್ಕೆ ಬಿಟ್ಟುಕೊಟ್ಟರೆ ಐಟಿ ಉದ್ಯಮದ ಜೊತೆಗೆ ಎಲೆಕ್ಟ್ರಾನಿಕ್ ಹಾರ್ಡ್ ವೇರ್, ವೈಮಾಂತರಿಕ್ಷ ಹಾಗೂ ಇತರ ತಯಾರಿಕಾ ಉದ್ಯಮಗಳ ಬೆಳವಣಿಗೆಗೆ ಪೂರಕವಾಗುವಂತೆ ಬಳಸಿಕೊಳ್ಳಲಾಗುವುದು ರಾಜನಾಥ್ ಅವರಿಗೆ ತಿಳಿಸಿದರು.

    ದಾಖಲೆಗಳ ಪ್ರಕಾರ ಬೆಳಗಾವಿ ಗ್ರಾಮದ ಆರ್.ಎಸ್. ನಂಬರ್ 1304ರಿಂದ 1397ರವರೆಗಿನ ಜಾಗಗಳಲ್ಲಿರುವ ಈ ಭೂಮಿಯು ರಾಷ್ಟ್ರೀಯ ಹೆದ್ದಾರಿ 4ಕ್ಕೆ ಹೊಂದಿಕೊಂಡಂತೆ ಇದೆ. ಹೀಗಾಗಿ ಉದ್ದೇಶಿತ ಐ.ಟಿ.ಪಾರ್ಕ್ ಸ್ಥಾಪನೆಗೆ ಅನುಕೂಲಕರವಾಗಿದೆ. ಈ ಭೂಮಿಯನ್ನು ರಾಜ್ಯ ಸರ್ಕಾರ ಪುನರ್ ಸ್ವಾಧೀನಕ್ಕೆ ತೆಗೆದುಕೊಳ್ಳಲು 2012ರ ನವೆಂಬರ್ ನಲ್ಲೇ ಆದೇಶ ಹೊರಡಿಸಿದೆ. ಆದರೆ ಇದು ರಕ್ಷಣಾ ಇಲಾಖೆ ಸ್ವಾಧೀನದಲ್ಲೇ ಮುಂದುವರಿದಿದೆ ಎಂಬ ಅಂಶವನ್ನು ಅಶ್ವತ್ಥ ನಾರಾಯಣ ಅವರು ಮನವರಿಕೆ ಮಾಡಿಕೊಟ್ಟರು.

    ಕರ್ನಾಟಕ ರಾಜ್ಯವು ಐ.ಟಿ./ಐಟಿಇಎಸ್ ಉದ್ಯಮದಲ್ಲಿ ದೇಶದಲ್ಲಿಯೇ ಮುಂಚೂಣಿಯಲ್ಲಿದೆ. ಈ ಅಗ್ರಶ್ರೇಯಾಂಕ ಕಾಯ್ದುಕೊಳ್ಳುವ ದಿಸೆಯಲ್ಲಿ ಇತ್ತೀಚೆಗೆ ಹೊಸ ಮಾಹಿತಿ ತಂತ್ರಜ್ಞಾನ ಕಾರ್ಯನೀತಿ ಪ್ರಕಟಿಸಲಾಗಿದೆ. ಜೊತೆಗೆ, ಬೆಂಗಳೂರಿಗೆ ಹೊರತಾದ ಬೇರೆ ಪ್ರದೇಶಗಳಲ್ಲೂ ಐಟಿ/ಐಟಿಇಎಸ್ ಹಾಗೂ ಎಲೆಕ್ಟ್ರಾನಿಕ್ ಉದ್ಯಮಗಳನ್ನು ಬೆಳೆಸಿ, ರಾಜ್ಯದಲ್ಲಿ ಸಮತೋಲನದ ಅಭಿವೃದ್ಧಿ ಸಾಧಿಸುವ ಉದ್ದೇಶದಿಂದ ‘ಬಿಯಾಂಡ್ ಬೆಂಗಳೂರು’ ಯೋಜನೆ ಜಾರಿಗೊಳಿಸಿದೆ. ಹೀಗಾಗಿ, ಈ ಜಾಗ ಬಿಟ್ಟುಕೊಟ್ಟರೆ ಉದ್ಯಮದ ಬೆಳವಣಿಗೆಗೆ ಅನುವು ಮಾಡಿಕೊಟ್ಟಂತೆ ಆಗುತ್ತದೆ ಎಂದರು.

    ಬೆಳಗಾವಿಯು ಉತ್ತಮ ಶೈಕ್ಷಣಿಕ ವಲಯವಾಗಿದೆ. ಪಕ್ಕದ ಧಾರವಾಡದಲ್ಲಿ ಐಐಟಿ-ಧಾರವಾಡ, ಐಐಐಟಿ-ಧಾರವಾಡ, ಕೆ.ಎಲ್.ಇ.ಯಂತಹ ಉನ್ನತ ಶಿಕ್ಷಣ ಸಂಸ್ಥೆಗಳು ಇರುವುದರಿಂದ ಪ್ರತಿವರ್ಷ ಪ್ರತಿಭಾವಂತ ಪದವೀಧರರು ಹೊರಬರುತ್ತಿದ್ದಾರೆ. ಜೊತೆಗೆ ಇಲ್ಲಿ ಐಟಿ/ಐಟಿಇಎಸ್ ಉದ್ಯಮಕ್ಕೆ ಸೂಕ್ತವಾದ ಪರ್ಯಾವರಣವಿದೆ. ಬೆಳಗಾವಿಯಲ್ಲಿ ಐ.ಟಿ.ಪಾರ್ಕ್ ನಿರ್ಮಾಣದಿಂದ ಈ ಕ್ಷೇತ್ರದಲ್ಲಿ ಪ್ರತ್ಯಕ್ಷ ಹಾಗೂ ಪರೋಕ್ಷವಾಗಿ 60 ಲಕ್ಷ ಉದ್ಯೋಗಗಳನ್ನು ಸೃಷ್ಟಿಸುವ ಗುರಿ ಇದೆ. ಈ ಐಟಿ ಪಾರ್ಕ್ ನಿರ್ಮಾಣವು ಭಾರತದ ಟ್ರಿಲಿಯನ್ ಡಾಲರ್ ಡಿಜಿಟಲ್ ಆರ್ಥಿಕತೆ ಗುರಿಯಲ್ಲಿ ಕರ್ನಾಟಕದ ಶೇ 30ರಷ್ಟು ಕೊಡುಗೆಗೆ ಪೂರಕವಾಗಿರಲಿದೆ ಎಂದು ಅಶ್ವತ್ಥ ನಾರಾಯಣ ಮನವರಿಕೆ ಮಾಡಿಕೊಟ್ಟರು.

    ಬೆಳಗಾವಿ ಶಾಸಕ ಅಭಯ್ ಪಾಟೀಲ್ ಅವರೂ ಡಿಸಿಎಂ ಜತೆ ಸಿಂಗ್ ಅವರನ್ನು ಭೇಟಿ ಮಾಡಿದರು.

  • ರೈಲಿಗೆ ತಲೆ ಕೊಟ್ಟು ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆಗೆ ಶರಣು

    ರೈಲಿಗೆ ತಲೆ ಕೊಟ್ಟು ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆಗೆ ಶರಣು

    ಬೆಳಗಾವಿ: ರೈಲಿಗೆ ತಲೆ ಕೊಟ್ಟು ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಗಾವಿಯ ರಾಯಬಾಗ ರೈಲು ನಿಲ್ದಾಣದ ಬಳಿ ನಡೆದಿದೆ.

    ಮೃತ ಕುಟುಂಬಸ್ಥರನ್ನು ಸಾತಪ್ಪ ಸುತಾರ್(60), ಪತ್ನಿ ಮಹಾದೇವಿ(50) ಮಕ್ಕಳಾದ ದತ್ತಾತ್ರೇಯ (28), ಸಂತೋಷ್ (25) ಎಂದು ಗುರುತಿಸಲಾಗಿದೆ. ಇವರು ಮೂಲತಃ ಬೀರಡಿ ಗ್ರಾಮದವರಾಗಿದ್ದಾರೆ. ರೈಲಿಗೆ ತಲೆಕೊಟ್ಟು ನಾಲ್ವರು ಆತ್ಮಹತ್ಯೆಗೆ ಶರಣಾಗಿದ್ದಾರೆ.

    ಒಂದೇ ಕುಟುಂಬದ ದಂಪತಿ ಮತ್ತು ಮಕ್ಕಳು ಒಟ್ಟಿಗೆ ರೈಲಿಗೆ ತಲೆಕೊಟ್ಟು ಸಾವನ್ನಪ್ಪಿದ್ದಾರೆ. ರೈಲಿಗೆ ನಾಲ್ವರು ತಲೆ ಕೊಟ್ಟ ಪರಿಣಾಮ ದೇಹದ ಭಾಗಗಳು ಒಂದೊಂದು ಕಡೆ ಹೋಗಿ ಬಿದ್ದಿವೆ. ರೈಲು ಹಳಿಯ ಮೇಲೆ ನಾಲ್ವರ ದೇಹ ರಕ್ತ ಸಿಕ್ತವಾಗಿ ಬಿದ್ದಿರುವ ಸ್ಥಿತಿಯಲ್ಲಿ ಪತ್ತೆಯಾಗಿವೆ.

    ಮೃತದೇಹಗಳನ್ನ ರಾಯಬಾಗ ತಾಲೂಕು ಆಸ್ಪತ್ರೆಗೆ ಮರಣೋತ್ತರ ಪರೀಕ್ಷೆಗಾಗಿ ರವಾನೆ ಮಾಡಲಾಗಿದೆ. ಸ್ಥಳಕ್ಕೆ ಬೆಳಗಾವಿ ರೈಲ್ವೆ ಪೊಲೀಸರ ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ. ನಾಲ್ವರು ಆತ್ಮಹತ್ಯೆ ಮಾಡಿಕೊಳ್ಳಲು ಕಾರಣವೇನು ಎಂಬುದು ತನಿಖೆಯಿಂದ ತಿಳಿದು ಬರಬೇಕಿದೆ.

  • ಹಸುವಿಗೆ ಸೀಮಂತ ಮಾಡಿ ಗೋಪ್ರೇಮ ಮೆರೆದ ರೈತ ಕುಟುಂಬ

    ಹಸುವಿಗೆ ಸೀಮಂತ ಮಾಡಿ ಗೋಪ್ರೇಮ ಮೆರೆದ ರೈತ ಕುಟುಂಬ

    – ಹಸು ಬಂದ ದಿನದಿಂದ ಮನೆಯಲ್ಲಿ ಸಮಸ್ಯೆ ನಿವಾರಣೆ
    – ಮನೆ ಮಗಳಿಗೆ ಮಾಡುವಂತೆ ನಡೆಯಿತು ಸೀಮಂತ
    – ಗೋವಿಗೆ ಸೀರೆಯುಡಿಸಿ, ಮುತ್ತೈದೆಯರಿಂದ ಆರತಿ

    ಚಿಕ್ಕೋಡಿ(ಬೆಳಗಾವಿ): ಗೋವು ದೇವರ ಸ್ವರೂಪಿ, ರೈತರು ಗೋವಿಗೆ ವಿಶೇಷ ಸ್ಥಾನ ಮಾನಕೊಡುತ್ತಾರೆ. ಆದರೆ ಇಲ್ಲೊಂದು ರೈತ ಕುಟುಂಬ ಗೋವಿಗೆ ಸೀಮಂತ ಕಾರ್ಯವನ್ನು ಮಾಡಿದ್ದಾರೆ. ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ಗ್ರಾಮದ ಯಕ್ಸಂಬಾ ಪಟ್ಟಣದ ಕುಟುಂಬಸ್ಥರು ಗೋವಿಗೆ ಸೀಮಂತ ಮಡುವ ಮೂಲಕವಾಗಿ ಸುದ್ದಿಯಾಗಿದ್ದಾರೆ.

    ತುಕಾರಾಮ್ ಮಾಳಿ ಎಂಬವರ ಕುಟುಂಬ ಒಂದು ವರ್ಷದ ಹಿಂದೆ ಆಕಳನ್ನ ಖರೀದಿ ಮಾಡಿ ಮನೆಗೆ ತಂದಿದ್ದಾರೆ. ಹಸು ಮನೆಗೆ ಬಂದ ದಿನದಿಂದಲೂ ಮನೆಯಲ್ಲಿ ನಡೆಯುತ್ತಿದ್ದ ಸಣ್ಣಪುಟ್ಟ ಜಗಳ ನಿಂತಿದ್ದವು ಹಾಗೂ ಆರ್ಥಿಕ ಸ್ಥಿತಿಗತಿ ಕೂಡ ಸುಧಾರಿಸಿತ್ತು. ಇದನ್ನೆಲ್ಲಾ ನೋಡಿದ ತುಕಾರಾಮ್, ಆಕಳನ್ನ ಮನೆಯ ಮಗಳಂತೆ ನೋಡಿಕೊಳ್ಳಲು ಆರಂಭಿಸಿದ್ದರು. ಅಷ್ಟೇ ಅಲ್ಲದೆ ಇದಕ್ಕೆ ಗೌರಿ ಅಂತ ಹೆಸರಿಟ್ಟು ಪ್ರೀತಿಯಿಂದ ಸಾಕಿದ್ದಾರೆ.

    ಕಳೆದ ಐದು ತಿಂಗಳ ಹಿಂದಷ್ಟೇ ಗೌರಿ ಗರ್ಭ ಧರಿಸಿದ್ದಳು. ಅಂದಿನಿಂದಲೂ ಮನೆಯಲ್ಲಿ ಸಂಭ್ರಮ ಮನೆ ಮಾಡಿತ್ತು. ಐದು ತಿಂಗಳು ಮುಗಿದ ಬಳಿಕ ಮಗಳಿಗೆ ಹೇಗೆ ತವರು ಮನೆಯವರು ಸೀಮಂತ ಮಾಡ್ತಾರೆಯೋ ಅದೇ ಮಾದರಿಯಲ್ಲಿ ಇಂದು ಅದ್ಧೂರಿಯಾಗಿ ಗೌರಿಗೆ ಸೀಮಂತ ಮಾಡಿದ್ದಾರೆ. ಮನೆಯ ಮುಂದೆ ಶಾಮಿಯಾನ, ಮನೆಗೆಲ್ಲಾ ಸಿಂಗಾರ, ಹೂಗಳಿಂದ ಸಿಂಗರಿಸಿ, ಕೊರಳಲ್ಲಿ ಸೀರೆಯುಡಿಸಿ, ಮುತ್ತೈದೆಯರು ಆರತಿ ಮಾಡಿ ಬಗೆ ಬಗೆಯ ಅಡುಗೆ ಮಾಡಿ ಮೊದಲು ಗೌರಿಗೆ ಕೊಟ್ಟು ಮಂಗಳಾರತಿ ಮಾಡಿ ಸೀಮಂತ ಕಾರ್ಯ ಮಾಡಿದ್ದಾರೆ.

    ಸೀಮಂತ ಮಾಡುವ ಎರಡು ದಿನ ಪೂರ್ವದಿಂದಲೂ ತಯಾರಿ ಮಾಡಿಕೊಂಡಿದ್ದ ಕುಟುಂಬಸ್ಥರು, ಊರಲ್ಲಿದ್ದ ಸಂಬಂಧಿಕರನ್ನೂ ಕರೆಸಿದ್ದಾರೆ. ಅಷ್ಟೇ ಅಲ್ಲದೆ ಇಡೀ ಗ್ರಾಮದ ಜನರನ್ನ ಕೂಡ ಕಾರ್ಯಕ್ರಮಕ್ಕೆ ಆಹ್ವಾನಿಸಿದರು. ಬೆಳಗ್ಗೆ ಎಂಟು ಗಂಟೆಗೆ ಗೌರಿಯ ಮೈತೊಳೆದು ನಂತರ ಬಣ್ಣ ಬಳಿದು ಮಲ್ಲಿಗೆ, ಸೇವಂತಿ, ಚೆಂಡು ಹೂಗಳಿಂದ ಅಲಂಕಾರ ಮಾಡಲಾಯಿತು. ಇದಾದ ಬಳಿಕ ಗೌರಿ ಕಣ್ಣಿಗೆ ಕಾಡಿಗೆ ಬಳಿದು ಕೊರಳಲ್ಲಿ ಸೀರೆಯನ್ನ ಹಾಕಿ ಆರತಿ ಬೆಳಗೆ ಮಂಗಳಾರತಿಯನ್ನ ಹೇಳಿ ಪೂಜೆ ಸಲ್ಲಿಸಲಾಯಿತು.

    ಇತ್ತ ಬಗೆ ಬಗೆಯ ಅಡುಗೆಯನ್ನ ಮಾಡಿದ್ದು ಮೊದಲು ಗೌರಿಗೆ ಅದನ್ನ ತಿನ್ನಿಸಿ ನಂತರ ಸಂಬಂಧಿಕರು ಹಾಗೂ ಗ್ರಾಮಸ್ಥರಿಗೆ ಶೀರಾ, ಸಜ್ಜಿಗೆ ರೊಟ್ಟಿ, ಬದನೆಕಾಯಿ ಪಲ್ಯ, ಅನ್ನ ಸಾಂಬಾರ ಬಡಿಸಲಾಯಿತು. ಇನ್ನೂ ಮನೆ ಮಗಳ ಸೀಮಂತ ಕಾರ್ಯ ಕೂಡ ಇಷ್ಟೊಂದು ಅದ್ಧೂರಿಯಾಗಿ ಮಾಡುತ್ತಿರಲಿಲ್ಲ, ಅದಕ್ಕಿಂತ ಹೆಚ್ಚಾಗಿ ಇಂದು ಗೌರಿಗೆ ವಿಶೇಷ ಪೂಜೆ ಸಲ್ಲಿಸುವುದರ ಜೊತೆಗೆ ಸೀಮಂತ ಕಾರ್ಯ ಮಾಡಲಾಯಿತು.

    ಹಸುವನ್ನು ಮಗಳಂತೆ ನೋಡಿಕೊಂಡು ಅದ್ಧೂರಿಯಾಗಿ ಇಂದು ಸೀಮಂತ ಮಾಡಿರುವುದಕ್ಕೆ ಎಲ್ಲರೂ ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ. ರೈತರು ಅಂದ್ರೆ ಹಾಗೇನೆ ಅನ್ಸತ್ತೆ ಮನೆಯಲ್ಲಿ ಸಾಕುವ ಪ್ರತಿಯೊಂದು ಪ್ರಾಣಿಗಳಿಗೂ ಒಂದು ಸ್ಥಾನ ಮಾನ ಕೊಟ್ಟು ಮನಷ್ಯರಿಗಿಂತ ಹೆಚ್ಚಾಗಿ ಅವುಗಳನ್ನ ಸಾಕಿ ಪ್ರೀತಿಸುತ್ತಾರೆ ಎನ್ನುವುದಕ್ಕೆ ಉತ್ತಮ ಉದಾಹರಣೆಯಾಗಿದೆ.

  • ಉದ್ಧವ್ ಠಾಕ್ರೆಯಂತವರು ನೂರು ಮಂದಿ ಬಂದ್ರೂ ಬೆಳಗಾವಿ ನಮ್ಮದೇ: ನಾರಾಯಣ ಗೌಡ

    ಉದ್ಧವ್ ಠಾಕ್ರೆಯಂತವರು ನೂರು ಮಂದಿ ಬಂದ್ರೂ ಬೆಳಗಾವಿ ನಮ್ಮದೇ: ನಾರಾಯಣ ಗೌಡ

    ಬೆಂಗಳೂರು: ಉದ್ಧವ್ ಠಾಕ್ರೆ ಅಂತವರು ನೂರು ಮಂದಿ ಬಂದರೂ ಕರ್ನಾಟಕದಲ್ಲಿರೋ ಪ್ರದೇಶ ನಮ್ಮಲ್ಲೇ ಇರುತ್ತವೆ ಎಂದು ಕರವೇ ನಾರಾಯಣ ಗೌಡ ಹೇಳಿದ್ದಾರೆ. ಬಾಳ್ ಠಾಕ್ರೆ ನಂತರ ಈ ಅಧ್ಯಾಯ ಮುಗಿದಿದೆ ಎಂದುಕೊಂಡಿದ್ದೆ ಆದರೀಗ ಅವರ ಮಗ ಉದ್ಧವ್ ಠಾಕ್ರೆ ಗಡಿ ವಿವಾದವನ್ನು ಪ್ರಾರಂಭಿಸಿದ್ದಾರೆ.

    ಇಂದು ಪಬ್ಲಿಕ್ ಟಿವಿಯೊಂದಿಗೆ ಮಾತನಾಡಿದ ಅವರು, ಮಹಾರಾಷ್ಟ್ರದ ಮುಖ್ಯಮಂತ್ರಿಯಾಗಿ ಮಹಾಜನ್ ವರದಿಯನ್ನು ಸರಿಯಾಗಿ ಓದಿ ತಿಳಿಯದುಕೊಳ್ಳದೇ ಇಂತಹ ಉದ್ಧಾಟತನದ ಹೇಳಿಕೆ ನೀಡುವುದು ಸಿಎಂ ಸ್ಥಾನಕ್ಕೆ ಯೋಗ್ಯತೆ ತರುವಂತಹದಲ್ಲ. ಅವರ ಉದ್ದೇಶ ಏನು ಅಂತ ಗೊತ್ತಿಲ್ಲ. ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧಾವ್ ಠಾಕ್ರೆ ಪದೇ ಪದೇ ಗಡಿ ವಿಚಾರದ ಬಗ್ಗೆ ಮಾತನಾಡುತ್ತಾರೆ. ಮರಾಠಿಗರನ್ನು ಓಲೈಸಿಕೊಳ್ಳುವ ಸಲುವಾಗಿ ಕನ್ನಡಿಗರನ್ನು ಕೆರಳಿಸುವಂತಹ ಹೇಳಿಕೆಗಳನ್ನು ಏಕೆ ನೀಡುತ್ತಾರೆ ಎಂದು ತಿಳಿದಿಲ್ಲ. ಬೆಳಗಾವಿಯಲ್ಲಿ ಒಂದೆಡೆ ಎಂಇಎಸ್ ಗಳಾದರೆ ಇನ್ನೊಂದೆಡೆ ಮಹಾರಾಷ್ಟ್ರದ ರಾಜಕಾರಣಿಗಳು ಇಂತಹ ಹೇಳಿಕೆಗಳನ್ನು ನೀಡುತ್ತಿದ್ದಾರೆ. ಬೆಳಗಾವಿ, ನಿಪ್ಪಾಣಿ, ಕಾರವಾರ ಇವು ಕರ್ನಾಟಕದ ಅವಿಭಾಜ್ಯ ಅಂಗಗಳು ಎಂದು ಮಹಾಜನ್ ವರದಿಯಲ್ಲಿ ಉಲ್ಲೇಖಿಸಲಾಗಿದೆ. ಅಲ್ಲದೆ ಮಹಾಜನ್ ಕೂಡ ಮಹಾರಾಷ್ಟ್ರದವರೇ ಆಗಿದ್ದವರು. ಮಹಾಜನ್ ವರದಿಯನ್ನು ನೀಡಬೇಕೆಂದು ಒತ್ತಾಯಿಸಿದವರು ಕೂಡ ಮಹಾರಾಷ್ಟ್ರದವರೆ. ಮಹಾರಾಷ್ಟ್ರದ ಒತ್ತಾಯದ ಮೇರೆಗೆ ಅಂದು ಮಹಾಜನ್ ವರದಿಯನ್ನು ನೇಮಕ ಮಾಡಲಾಯಿತು. ಅದೇ ಮಹಾಜನ್ ನೀಡಿದ ವರದಿಯನ್ನು ಕರ್ನಾಟಕ ಸ್ವೀಕಾರ ಮಾಡಿದೆ. ಆದ್ರೆ ಮಹಾರಾಷ್ಟ್ರ ಸ್ವೀಕರಿಸಿಲ್ಲ ಎಂದರು.

    ಇಂತಹ ಸಂದರ್ಭದಲ್ಲಿ ಮಹಾರಾಷ್ಟ್ರದ ಮುಖ್ಯಮಂತ್ರಿಗಳಿಗೆ ಮತ್ತು ಜನಪ್ರತಿನಿಧಿಗಳಿಗೆ ನಮ್ಮ ರಾಜ್ಯದ ರಾಜಕಾರಣಿಗಳು ಸರಿಯಾದ ರೀತಿಯಲ್ಲಿ ಉತ್ತರ ಕೊಡದ ಕಾರಣ ಅವರು ಪದೇ ಪದೇ ಕಾಲು ಕೆರೆದುಕೊಂಡು ಗಡಿ ವಿಚಾರಕ್ಕೆ ಬರುತ್ತಿದ್ದಾರೆ. ಬೆಳಗಾವಿಯಂತಹ ಪ್ರದೇಶಗಳಲ್ಲಿ ಜನರು ಗೂಂಡಾಗಿರಿ ಮಾಡುವಂತದ್ದು, ಪುಂಡಾಟಿಕೆ ನಡೆಸುವಂತಹದ್ದು, ಇದು ಕರ್ನಾಟಕದ ಗಡಿಭಾಗದಲ್ಲಿ ಇರುವಂತಹ ರಾಜಕಾರಣಿಗಳ ದೌರ್ಬಲ್ಯಗಳಾಗಿವೆ. ಇಂದು ಅವರನ್ನು ಇಷ್ಟರ ಮಟ್ಟಿಗೆ ಮಾತನಾಡಲು ಕಾರಣವಾಗಿದೆ. ಗಡಿ ಭಾಗದ ರಾಜಕಾರಣಿಗಳಿಗೆ ಒಂದು ಚೂರು ಕೂಡ ನನ್ನ ನಾಡು, ನನ್ನ ಭಾಷೆ, ನನ್ನ ಸಂಸ್ಕøತಿ ಎಂಬ ಸ್ವಾಭಿಮಾನವಿಲ್ಲ. ನಾಡು, ನುಡಿ, ಗಡಿ ವಿಚಾರ ಬಂದಾಗ ನಮ್ಮ ರಾಜ್ಯ ರಾಜಕಾರಣಿಗಳು ಉಗ್ರವಾಗಿ ಖಂಡಿಸುವ ಕೆಲಸ ಮಾಡಬೇಕು ಎಂದರು.

    ಮಹಾರಾಷ್ಟ್ರದ ಮುಖ್ಯಮಂತ್ರಿಗಳು ಅಷ್ಟೆಲ್ಲಾ ಮಾತನಾಡುವಾಗ ಕರ್ನಾಟಕದ ಮುಖ್ಯಮಂತ್ರಿಗಳು ಏಕೆ ಮಾತನಾಡಬಾರದು, ಏಕೆ ಸರಿಯಾದ ರೀತಿಯಲ್ಲಿ ಉತ್ತರ ನೀಡಬಾರದು ಎಂದು ಪ್ರಶ್ನಿಸಿದರು. ನಮ್ಮ ರಾಜಕಾರಣಿಗಳು ಉತ್ತರ ನೀಡದ ಪರಿಣಾಮ ಇಂದು ಅವರು ಹೆಚ್ಚಾಗಿ ಮಾತನಾಡುತ್ತಿದ್ದಾರೆ. ಹಾಗಾಗಿ ಮಾನ್ಯ ಮುಖ್ಯಮಂತ್ರಿಗಳು ಮಾತನಾಡಿ ಮಹಾಜನ್ ವರದಿಯನ್ನು ಓದಿ ಅದನ್ನು ಒಪ್ಪಿಕೊಂಡಿದ್ದೇವೆ. ಮಹಾಜನ್ ವರದಿ ಪ್ರಕಾರ ಬೆಳಗಾವಿ ಕರ್ನಾಟಕಕ್ಕೆ ಸೇರಿದ್ದು, ಅದನ್ನು ಮಹಾರಾಷ್ಟ್ರಕ್ಕೆ ಬಿಟ್ಟುಕೊಡುವ ಪ್ರಶ್ನೆಯೇ ಇಲ್ಲ, ಅದು ಕರ್ನಾಟಕದ ಅವಿಭಾಜ್ಯ ಅಂಗ ಎಂದು ಹೇಳಬೇಕು. ಇಲ್ಲದೇ ಹೋದರೆ ಮತ್ತೆ ಮತ್ತೆ ಕ್ಯಾತೆ ತೆಗೆಯುವ ಕೆಲಸ ಮಾಡುತ್ತಾರೆ ಎಂದು ಹೇಳಿದರು.

    ಉದ್ಧವ್ ಠಾಕ್ರೆ ಅಂತವರು ನೂರು ಮಂದಿ ಬಂದರೂ ಕರ್ನಾಟಕದಲ್ಲಿರುವ ಬೆಳಗಾವಿ ಪ್ರದೇಶ ನಮ್ಮಲ್ಲೆ ಇರುತ್ತವೇ. ಇದೇ ರೀತಿ ಮಹಾರಾಷ್ಟ್ರ ಸರ್ಕಾರದವರು ಖ್ಯಾತೆ ತಗೆಯುತ್ತಿದ್ದರೆ ನಾವು ಹೋರಾಟ ಮಾಡುತ್ತೆವೇ ಎಂಬ ಎಚ್ಚರಿಕೆ ಸಂದೇಶವನ್ನ ಕರವೇ ನಾರಾಯಣ ಗೌಡ ರವಾನಿಸಿದ್ದಾರೆ.

  • ಮಾರಕಾಸ್ತ್ರಗಳಿಂದ ಹೊಡೆದು ಕಾರು ಚಾಲಕನ ಬರ್ಬರ ಹತ್ಯೆ

    ಮಾರಕಾಸ್ತ್ರಗಳಿಂದ ಹೊಡೆದು ಕಾರು ಚಾಲಕನ ಬರ್ಬರ ಹತ್ಯೆ

    – ಅರಿಶಿನ ಕಾರ್ಯಕ್ರಮ ಮುಗಿಸಿ ಮನೆಗೆ ಬಂದಿದ್ದ ವೇಳೆ ಅಟ್ಯಾಕ್
    – ಮನೆಯಿಂದ ಹೊರಗೆ ಬಾ ಎಂದು ಕರೆದು ಮಾರಕಾಸ್ತ್ರಗಳಿಂದ ಹಲ್ಲೆ

    ಬೆಳಗಾವಿ: ಸಂಬಧಿಕರೊಬ್ಬರ ಅರಿಶಿಣ ಕಾರ್ಯಕ್ರಮ ಮುಗಿಸಿ ಮನೆಗೆ ಸೇರಿದ್ದವನನ್ನು, ಹೊರಗೆ ಕರೆದುಕೊಂಡು ಹೋಗಿ ಮಾರಕಾಸ್ತ್ರಗಳಿಂದ ಹೊಡೆದು ಬರ್ಬರ ಹತ್ಯೆ ಮಾಡಿರುವ ಘಟನೆ ಬೆಳಗಾವಿಯ ಅಂಬೇಟ್ಕರ್‍ಗಲ್ಲಿಯಲ್ಲಿ ನಡೆದಿದೆ.

    ಬರ್ಬರವಾಗಿ ಹತ್ಯೆಯಾಗಿರುವ ವ್ಯಕ್ತಿಯನ್ನು ಜಯಪಾಲ್ ಗರಾನೆ (35) ಎಂದು ಗುರುತಿಸಲಾಗಿದೆ. ಕಾರು ಡ್ರೈವರ್ ಆಗಿ ಕೆಲಸ ಮಾಡುತ್ತಿದ್ದರು. ಜಯಪಾಲ್ ಗರಾನೆಯನ್ನು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಹೊಡೆದು ಕೊಲೆಮಾಡಿದ್ದಾರೆ.

    ಪ್ರಕರಣ ಹಿನ್ನೆಲೆ:
    ಜಯಪಾಲ್ ಗರಾನೆ ನಿನ್ನೆ ರಾತ್ರಿ ಸಂಬಂಧಿಕರೊಬ್ಬರ ಮದುವೆಯ ಅರಿಶಿಣ ಕಾರ್ಯಕ್ರಮ ಮುಗಿಸಿಕೊಂಡು ಮನೆಗೆ ಬಂದಿದ್ದಾರೆ. ಸರಿಸುಮಾರು ರಾತ್ರಿ ಹನ್ನೆರಡು ಗಂಟೆಗೆ ಸುಮಾರಿಗೆ ಮತ್ತೆ ಮನೆಗೆ ವಾಪಾಸ್ ಬಂದಿದ್ದರು. ಈ ವೇಳೆ ಮನೆಗೆ ಬರುತ್ತಿದ್ದಂತೆ ವ್ಯಕ್ತಿಯೊಬ್ಬ ಬಂದು ಜಯಪಾಲ್‍ನನ್ನು ಹೊರ ಕರೆದಿದ್ದಾರೆ. ತಕ್ಷಣ ಹೊರ ಹೋದ ಜಯಪಾಲ್ ರಾತ್ರಿ ಕಳೆದರೂ ಮನೆಗೆ ವಾಪಸ್ ಬಂದಿಲ್ಲ. ಬಾಡಿಗೆ ಕಾರು ಓಡಿಸುತ್ತಿದ್ದ ಈತನನ್ನ ಯಾರೋ ಅರ್ಜಂಟ್ ಆಗಿ ಕರೆದುಕೊಂಡು ಹೋಗಿರಬಹುದು ಎಂದು ಕುಟುಂಬಸ್ಥರು ಕೂಡ ಸುಮ್ಮನಾಗಿದ್ದಾರೆ. ಆದರೆ ಬೆಳಗ್ಗಿನ ಜಾವ ವಾಕಿಂಗ್ ಮಾಡಲು ಬಂದಿದ್ದ ಜನರು ಜಯಪಾಲ್ ಮನೆಯಿಂದ ನೂರು ಮೀಟರ್ ನಷ್ಟು ದೂರದಲ್ಲಿ ಶವವಾಗಿ ಬಿದ್ದಿರುವುದನ್ನು ಕಂಡು ಕುಟುಂಬಸ್ಥರು ಹಾಗೂ ಪೊಲೀಸರಿಗೆ ಸುದ್ದಿ ತಿಳಿಸಿದ್ದಾರೆ.

    ಸ್ಥಳಕ್ಕೆ ಬಂದ ಶಹಾಪುರ್ ಪೊಲೀಸರು ಸ್ಥಳ ಪರಿಶೀಲನೆ ಮಾಡಿದ್ದಾರೆ. ಈ ಕುರಿತು ಕೇಸ್‍ನ್ನು ದಾಖಲಿಸಿಕೊಂಡಿದ್ದಾರೆ. ಶವವನ್ನ ಪೋಸ್ಟ್ ಮಾರ್ಟಂ ಮಾಡಿ ಕುಟುಂಬಸ್ಥರಿಗೆ ನೀಡಿ ತನಿಖೆಯನ್ನ ಆರಂಭಿಸಿದ್ದಾರೆ. ಇತ್ತ ಮೂರು ಆಯಾಮದಲ್ಲಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಕುಡಿದ ನಶೆಯಲ್ಲಿ ಗೆಳೆಯರೊಡನೆ ಜಗಳ ಮಾಡಿಕೊಂಡು ಕೊಲೆ ಮಾಡಿರಬಹುದು, ಕುಟುಂಬಸ್ಥರಲ್ಲಿ ಯಾರಾದ್ರೂ ಕೊಲೆ ಮಾಡಿದ್ದಾರಾ ಅಥವಾ ಆಸ್ತಿ, ಹಣಕ್ಕಾಗಿ ಕೊಲೆ ಮಾಡಿರುವ ಶಂಕೆಯಡಿಯಲ್ಲಿ ತನಿಖೆಯನ್ನ ಕೈಗೆತ್ತಿಕೊಂಡಿದ್ದಾರೆ. ಈ ಕುರಿತು ಜಯಪಾಲ್ ಜೊತೆಗೆ ಇದ್ದವರನ್ನ ಮತ್ತು ಗೆಳೆಯರನ್ನ ಈಗಾಗಲೇ ಪೊಲೀಸರು ವಿಚಾರಣೆ ನಡೆಸಿದ್ದಾರೆ. ಆದರೆ ಯಾರು ಕೊಲೆ ಮಾಡಿದ್ದಾರೆ ಎಂಬುದು ಮಾತ್ರ ತಿಳಿದು ಬಂದಿಲ್ಲ.

    ಜಯಪಾಲ್ ಗೆ ಮದುವೆಯಾಗಿದ್ದು, ಮೂರು ಮಕ್ಕಳಿದ್ದಾರೆ. ಜಯಪಾಲ್‍ನ ಕೊಲೆಯಾದ ಸುದ್ದಿ ತಿಳಿಯುತ್ತಿದ್ದಂತೆ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಕೊಲೆ ಮಾಡಿದವರ ವಿರುದ್ಧ ಹಿಡಿಶಾಪ ಹಾಕಿದ್ದಾರೆ. ಆರೋಪಿಗಳನ್ನ ಕೂಡಲೇ ಪತ್ತೆ ಹಚ್ಚಿ ಬಂಧಿಸಿ ಅವರಿಗೆ ತಕ್ಕ ಶಿಕ್ಷೆ ನೀಡಬೇಕು ಅಂತ ಕುಟುಂಬಸ್ಥರು ಆಗ್ರಹಿಸಿದ್ದಾರೆ.

  • ಶಾಸಕ ಸತೀಶ್ ಜಾರಕಿಹೊಳಿ ಆಪ್ತನ ಮೇಲೆ ಗುಂಡಿನ ದಾಳಿ

    ಶಾಸಕ ಸತೀಶ್ ಜಾರಕಿಹೊಳಿ ಆಪ್ತನ ಮೇಲೆ ಗುಂಡಿನ ದಾಳಿ

    ಚಿಕ್ಕೋಡಿ(ಬೆಳಗಾವಿ): ಗ್ರಾಮ ಪಂಚಾಯ್ತಿ ಚುನಾವಣೆ ವೈಷಮ್ಯ ಹಿನ್ನೆಲೆ ಶಾಸಕ ಸತೀಶ್ ಜಾರಕಿಹೊಳಿ ಆಪ್ತ ಕಾರ್ಯದರ್ಶಿ ಸೇರಿದಂತೆ ಕಾಂಗ್ರೆಸ್ ಪಕ್ಷದ ಮುಖಂಡರ ಮೇಲೆ ಫೈರಿಂಗ್ ನಡೆದಿರುವ ಘಟನೆ ಬೆಳಗಾವಿ ಜಿಲ್ಲೆ ಹುಕ್ಕೇರಿ ತಾಲೂಕಿನ ಯಮಕನಮರಡಿ ಗ್ರಾಮದಲ್ಲಿ ನಿನ್ನೆ ತಡರಾತ್ರಿ ನಡೆದಿದೆ.

    ಅಪರಿಚಿತ ವ್ಯಕ್ತಿಯಿಂದ ಇಬ್ಬರ ಮೇಲೆ ಫೈರಿಂಗ್ ನಡೆದಿದೆ. ಗ್ರಾಮ ಪಂಚಾಯ್ತಿ ಚುನಾವಣೆ ವೈಷಮ್ಯ ಹಿನ್ನೆಲೆ ಫೈರಿಂಗ್ ನಡೆದಿರುವ ಶಂಕೆ ವ್ಯಕ್ತವಾಗಿದೆ. ಶಾಸಕರ ಆಪ್ತ ಕಾರ್ಯದರ್ಶಿ ಕಿರಣ್ ರಜಪೂತ್ ಹಾಗೂ ಕಾಂಗ್ರೆಸ್ ಮುಖಂಡ ಭರಮಾ ದೂಪದಾಳೆ ಎಂಬವರ ಮೇಲೆ ಅಪರಿಚಿತ ವ್ಯಕ್ತಿ ಫೈರಿಂಗ್ ನಡೆಸಿದ್ದಾನೆ. ಸತೀಶ್ ಜಾರಕಿಹೊಳಿ ಆಪ್ತ ಕಿರಣ್ ರಜಪೂತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಇನ್ನೋರ್ವ ಕಾಂಗ್ರೆಸ್ ಮುಖಂಡ ಭರಮಾ ದೂಪದಾಳಗೆ ಗಾಯವಾಗಿದೆ.

    ಮಾಸ್ಕ್ ಹಾಕಿಕೊಂಡು 7 ಅಡಿ ಅಂತರದಿಂದ ಫೈರಿಂಗ್ ಮಾಡಿದ ಅಪರಿಚಿತ ಯಾವ ವೆಪನ್ ಬಳಸಿ ಫೈರಿಂಗ್ ಮಾಡಿದ್ದಾರೆ ಎನ್ನುವ ತನಿಖೆಯನ್ನ ಪೊಲೀಸರು ಮಾಡುತ್ತಿದ್ದಾರೆ. ಸ್ಥಳಕ್ಕೆ ಹುಕ್ಕೇರಿ ಸಿಪಿಐ ಗುರುರಾಜ ಕಲ್ಯಾಣ ಶೆಟ್ಟಿ ಹಾಗೂ ಪಿಎಸ್‍ಐ ರಮೇಶ್ ಪಾಟೀಲ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಯಮಕನಮರಡಿ ಪೊಲೀಸ್ ಠಾಣೆಯಲ್ಲಿ ಈ ಪ್ರಕರಣ ದಾಖಲಾಗಿದೆ.

  • ಬೆಂಗಳೂರು, ಕೃಷ್ಣಾ ಬಿಟ್ಟು ಈ ಸರ್ಕಾರ ಎಲ್ಲೂ ಬಂದಿಲ್ಲ – ಡಿಕೆಶಿ

    ಬೆಂಗಳೂರು, ಕೃಷ್ಣಾ ಬಿಟ್ಟು ಈ ಸರ್ಕಾರ ಎಲ್ಲೂ ಬಂದಿಲ್ಲ – ಡಿಕೆಶಿ

    ಬೆಳಗಾವಿ: ಬಿಜೆಪಿ ಸರ್ಕಾರ ಬಂದ ಮೇಲೆ ಬೆಂಗಳೂರು, ವಿಧಾನಸೌಧ, ಕೃಷ್ಣಾ ಬಿಟ್ಟು ಎಲ್ಲೂ ಬರಲಿಲ್ಲ ಎಂದು ಬೆಳಗಾವಿಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಬಿಜೆಪಿ ಸರ್ಕಾರದ ವಿರುದ್ಧ ಚಾಟಿ ಬೀಸಿದ್ದಾರೆ.

    ಸುದ್ದಿಗಾರರೋಂದಿಗೆ ಮಾತನಾಡಿದ ಅವರು, ಬೆಳಗಾವಿ ಭಾಗದಲ್ಲಿನ ಜನರಿಗೆ ಪರಿಹಾರ ಕೊಡೊಕೆ ಆಗಲಿಲ್ಲ. ಕಳೆದ ವರ್ಷ ಬೆಳಗಾವಿಯಲ್ಲಿ ಅಧಿವೇಶನ ಕರೆಯತ್ತೇವೆ ಎಂದಿದ್ದರು. ರಾಜಕಾರಣ ಮತ್ತು ಪಕ್ಷ ಬಿಟ್ಟರೆ ರಾಜ್ಯದ ಜನರಿಗೆ ನ್ಯಾಯ ಕೊಡಬೇಕು ಅಂತೆನಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹೇಳಿಕೆದ್ದಾರೆ.

    ಜನರ ಸೇವೆ ಮಾಡುವುದು ಬಿಜೆಪಿಯವರ ಉದ್ದೇಶ ಅಲ್ಲ. ಬೆಳಗಾವಿಯಲ್ಲಿ ಅಧಿವೇಶನ ಮಾಡದಿದ್ದರೆ ಯಾಕೆ ಅಧಿಕಾರದಲ್ಲಿರಬೇಕು. ಅನ್ಯಾಯ ಆಗುತ್ತೆ ಅಂತಿದ್ದ ಶಾಸಕರು ಯಾಕೆ ಮಾತನಾಡುತ್ತಿಲ್ಲ ಎಂದು ಪರೋಕ್ಷವಾಗಿ ರಮೇಶ್ ಜಾರಕಿಹೊಳಿಗೆ ಡಿಕೆಶಿ ತಿರುಗೇಟು ನೀಡಿದ್ದಾರೆ.

     

    ಕುಮಾರಸ್ವಾಮಿ ಹೇಳಿಕೆ ವಿಚಾರವಾಗಿ ಸುದ್ದಿಗಾರರೊಂದಿಗೆ ಮಾತನಾಡಿದ ಡಿಕೆ ಶಿವಕುಮಾರ್ ಅವರ ಪಾರ್ಟಿ ಅಭಿಪ್ರಾಯ ನಾವೇಕೆ ಮಾತಾಡಬೇಕು. ಅವರವರ ಚಿಂತನೆ, ಪಕ್ಷಗಳನ್ನು ಒಟ್ಟಾಗಿ ಸೇರಿಸಿ ತೀರ್ಮಾನ ಮಾಡಿದ್ದೇವು ಎಂದು ಹೇಳಿದರು.