Tag: Belgaum

  • ಕಾಂಗ್ರೆಸ್ ಸಚಿವರ ಮೇಲೆ ಅಸಮಾಧಾನ ಹೊರ ಹಾಕಿದ ಬಸವರಾಜ ಹೊರಟ್ಟಿ

    ಕಾಂಗ್ರೆಸ್ ಸಚಿವರ ಮೇಲೆ ಅಸಮಾಧಾನ ಹೊರ ಹಾಕಿದ ಬಸವರಾಜ ಹೊರಟ್ಟಿ

    ಬೆಳಗಾವಿ: ಕಳೆದ ಸರ್ಕಾರದ ಮಂತ್ರಿಗಳು ಕೇವಲ ಜನರಿಗೆ ಆಶ್ವಾಸನೆ ಕೊಟ್ಟಿದ್ದಾರೆ. ಅದನ್ನು ಬಿಟ್ಟು ಜನರ ಸಮಸ್ಯೆಗಳಿಗೆ ಸ್ಪಂದಿಸಬೇಕು ಎಂದು ಮಾಜಿ ಸಭಾಪತಿ ಬಸವರಾಜ ಹೊರಟ್ಟಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

    ಇಂದು ಬೆಳಗಾವಿಯ ಸುವರ್ಣ ಸೌಧದ ಪ್ರತಿಭಟನೆ ನಡೆಸುತ್ತಿದ್ದ ಸ್ಥಳಕ್ಕೆ ಆಗಮಿಸಿದ ಬಸವರಾಜ್ ಹೊರಟ್ಟಿ ಪ್ರತಿಭಟನಾಕಾರರ ಸಮಸ್ಯೆಗಳನ್ನು ಆಲಿಸಿದರು. ಬಳಿಕ ಸಚಿವೆ ಜಯಮಾಲಾ ಅವರೊಂದಿಗೆ ಚರ್ಚೆ ನಡೆಸುತ್ತೇನೆ. ನಿಮ್ಮ ಪರ 4 ಮುಖಂಡರು ಕೂಡ ಮನವಿಯೊಂದಿಗೆ ಬನ್ನಿ ಸಮಸ್ಯೆ ಬಗ್ಗೆ ಚರ್ಚೆ ನಡೆಸಿ ಪರಿಹಾರ ನೀಡೋಣ ಎಂದು ಆಶ್ವಾಸನೆ ನೀಡಿದರು. ಈ ವೇಳೆ ಮಾಧ್ಯಮಗಳೊಂದಿಗೆ ಮಾತನಾಡಿ, ಸರ್ಕಾರದ ಸಚಿವರು ಜನರ ಸಮಸ್ಯೆಗಳಿಗೆ ಸರಿಯಾಗಿ ಸ್ಪಂದಿಸಬೇಕು. ಆದರೆ ಕಳೆದ ಕಾಂಗ್ರೆಸ್ ಸರ್ಕಾರದ ಮಂತ್ರಿಗಳು ಕೇವಲ ಆಶ್ವಾಸನೆ ಕೊಟ್ಟಿದ್ದಾರೆ ಅಷ್ಟೇ. ಮಾಜಿ ಸಚಿವೆ ಉಮಾಶ್ರೀ ಅವರು ಕೂಡ ಆಶ್ವಾಸನೆ ಕೊಟ್ಟು ಹೋದರು ಎಂದು ಪರೋಕ್ಷವಾಗಿ ಈ ಹಿಂದಿನ ಕಾಂಗ್ರೆಸ್ ಸಚಿವರ ವಿರುದ್ಧ ಅಸಮಾಧಾನ ಹೊರಹಾಕಿದರು.

    ಸಚಿವ ಸ್ಥಾನ ಕುರಿತು ಪ್ರಶ್ನೆಗೆ ಉತ್ತರಿಸಿದ ಅವರು, ಸಚಿವ ಸ್ಥಾನ ಪಡೆಕೊಳ್ಳಲು ನನ್ನ ಬಳಿ ಏನೂ ಇಲ್ಲಾ ಪಕ್ಷದ ವರಿಷ್ಠರಾದ ದೇವಗೌಡ ಹಾಗೂ ಕುಮಾರಸ್ವಾಮಿ ಅವರ ಬಳಿ ಇದೆ. ಅವರ ಕಷ್ಟ ಅವರಿಗೆ ಮಾತ್ರ ಗೊತ್ತು. ಅದ್ದರಿಂದ ನಾನು ಯಾರ ಮೇಲೂ ಆರೋಪ ಮಾಡುವುದಿಲ್ಲ. ಈಗಿನ ರಾಜಕೀಯ ವ್ಯವಸ್ಥೆಯೇ ಸರಿಯಾಗಿಲ್ಲ ಎಂದರು. ಬಳಿಕ ಕುಮಾರಸ್ವಾಮಿ ಮಧ್ಯ ಪ್ರದೇಶ ಸಿಎಂ ಪ್ರಮಾಣ ವಚನ ಕಾರ್ಯಕ್ರಮಕ್ಕೆ ತೆರಳಿರುವ ವಿಚಾರವಾಗಿ ಪ್ರತಿಕ್ರಿಯೆ ನೀಡಿ, ಮಾಜಿ ಸಿಎಂ ಯಡಿಯೂರಪ್ಪ ಅವರು ಕೂಡ ಅನೇಕ ಬಾರಿ ಸದನ ತಪ್ಪಿಸಿ ಹೋಗಿದ್ದಾರೆ. ಅದರಂತೆ ಸಿಎಂ ಕುಮಾರಸ್ವಾಮಿ ಸದನ ತಪ್ಪಿಸಿ ಹೋಗಿದ್ದು ತಪ್ಪೇನಿಲ್ಲ. ಆದರೆ ಪದೇ ಪದೇ ಇದು ಪುನರಾವರ್ತನೆ ಆಗಬಾರದು ಅಷ್ಟೇ ಎಂದರು.

    ಬೆಳಗಾವಿಯಲ್ಲಿ ಅಧಿವೇಶನ ಇನ್ನೂ ಎರಡು ದಿನ ನಡೆಯಬೇಕು ಎಂಬ ಆಸೆ ನನಗೂ ಇದೆ. ಸದನ ಆರಂಭದಲ್ಲೇ ನಾನು ಈ ಕುರಿತು ಚರ್ಚೆ ನಡೆಸಿದ್ದೆ. ಆದರೆ ನನ್ನ ಮಾತು ಯಾರು ಕೇಳುತ್ತಿಲ್ಲ ಎಂದು ತಮ್ಮ ಅಸಹಾಯಕತೆ ಹೊರ ಹಾಕಿದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಕಲಾಪದಲ್ಲಿ ಬರ ಚರ್ಚೆ – ಮೊಬೈಲ್‍ನಲ್ಲಿ ಶ್ರೀರಾಮುಲು ಫುಲ್ ಬ್ಯುಸಿ

    ಕಲಾಪದಲ್ಲಿ ಬರ ಚರ್ಚೆ – ಮೊಬೈಲ್‍ನಲ್ಲಿ ಶ್ರೀರಾಮುಲು ಫುಲ್ ಬ್ಯುಸಿ

    ಬೆಳಗಾವಿ: ಅಧಿವೇಶನದಲ್ಲಿ ಬರಗಾಲ ಚರ್ಚೆಯ ಕಾವು ಜೋರಾಗಿದೆ. ಆದರೆ ಶಾಸಕ ಶ್ರೀರಾಮುಲು ಮಾತ್ರ ಮೌನವಾಗಿ ಎಲ್ಲವನ್ನೂ ವೀಕ್ಷಿಸುತ್ತಾ ಮೊಬೈಲ್‍ನಲ್ಲಿ ನಿರತರಾಗಿದ್ದರು.

    ಬರಗಾಲದ ಮೇಲಿನ ಅಲ್ಪಾವಧಿ ಚರ್ಚೆಯ ಕಾಲವನ್ನು ಹೆಚ್ಚಿಸುವಂತೆ ಬಿ.ಎಸ್.ಯಡಿಯೂಪ್ಪ ಕೇಳಿದರು. ಈ ವೇಳೆ ಶಾಸಕರಾದ ಶಿವಲಿಂಗೇಗೌಡ ಹಾಗೂ ಎಂ.ಪಿ.ರೇಣುಕಾಚಾರ್ಯ ಅವರು ಏಕವಚದಲ್ಲಿಯೇ ಕಿತ್ತಾಡಿಕೊಂಡರು. ಆದರೆ ಶ್ರೀರಾಮುಲು ಮಾತ್ರ ಯಾವುದಕ್ಕೂ ತಲೆ ಕೆಡಿಸಿಕೊಳ್ಳದೆ ಮೌನವಾಗಿಯೇ ಉಳಿದಿದರು.

    ಬಳ್ಳಾರಿ ಉಪಚುನಾವಣೆಯ ಬಳಿಕ ಶಾಸಕ ಶ್ರೀರಾಮುಲು ಮೌನಕ್ಕೆ ಜಾರಿದ್ದಾರೆ. ಈ ಚುನಾವಣೆ ಪ್ರಚಾರದ ವೇಳೆ ಮುಂದಿನ ಚುನಾವಣೆಯಲ್ಲಿ ಬಿಜೆಪಿ ಮುಖ್ಯಮಂತ್ರಿ ಅಭ್ಯರ್ಥಿ ಶ್ರೀರಾಮುಲು ಅಂತ ಬಿಜೆಪಿ ಮುಖಂಡ ವಿ.ಸೋಮಣ್ಣ ಹೇಳಿದ್ದರು. ಅವರ ಹೇಳಿಕೆಯಿಂದಾಗಿ ಬಿ.ಎಸ್.ಯಡಿಯೂರಪ್ಪ ಶಾಕ್ ಆಗಿದ್ದರು. ಬಳಿಕ ಶ್ರೀರಾಮುಲು ಹಾಗೂ ಬಿ.ಎಸ್.ಯಡಿಯೂರಪ್ಪ ನಡುವೆ ಅಂತರ ಆರಂಭವಾಯಿತು.

    ವಿ.ಸೋಮಣ್ಣ ಅವರ ಹೇಳಿಕೆ ಬಿಸಿ ಈಗ ಶ್ರೀರಾಮುಲು ಅವರಿಗೆ ತಟ್ಟಿದೆ. ಹೀಗಾಗಿ ಸದನದ ಒಳಗೂ ಹಾಗೂ ಹೊರಗು ಶ್ರೀರಾಮುಲು ಏಕಾಂಗಿಯಾಗಿ ಉಳಿಯುತ್ತಿದ್ದಾರೆ ಎನ್ನಲಾಗುತ್ತಿದೆ. ಇಂದು ಭೋಜನದ ನಂತರ ನಡೆದ ಕಲಾಪದಲ್ಲಿ ಮೊಬೈಲ್ ಹಿಡಿದು ವಾಟ್ಸಪ್ ನೋಡುತ್ತ ಶ್ರೀರಾಮುಲು ಕಾಲ ಕಳೆದರು. ಬಿಜೆಪಿ ಹಾಗೂ ಕಾಂಗ್ರೆಸ್ ನಾಯಕರು ಪರಸ್ಪರ ವಾಗ್ದಾಳಿ ನಡೆಸುತ್ತಿದ್ದರೂ ಇದಕ್ಕೂ ನನಗೂ ಯಾವುದೇ ಸಂಬಂಧವಿಲ್ಲ ಎನ್ನುವಂತೆ ಮೊಬೈಲ್‍ನಲ್ಲಿ ಬ್ಯುಸಿಯಾಗಿದ್ದರು.

    ಇತ್ತ ಸಹಕಾರ ಸಚಿವ ಬಂಡೆಪ್ಪ ಕಾಶಂಪೂರ್ ಗಡದ್ ನಿದ್ದೆಗೆ ಜಾರಿದ್ದರು. ಅಣ್ಣ ಕರುಣಾಕರರೆಡ್ಡಿ ಬರಗಾಲ ಚರ್ಚೆಯಲ್ಲಿ ಪಾಲ್ಗೊಂಡು ಮಾತಾಡುತ್ತಿದ್ದರೆ ಸಹೋದರ ಸೋಮಶೇಖರರೆಡ್ಡಿ ನಿದ್ದೆಯಲ್ಲಿ ಮುಳುಗಿದ್ದರು. ಭೋಜನದ ನಂತರ ಉಪಸಭಾಪತಿ ಎಂ.ಕೃಷ್ಣಾರೆಡ್ಡಿ ಕಲಾಪ ನಡೆಸುತ್ತಿದ್ದರು. ಈ ವೇಳೆ ಬಿಜೆಪಿ ಹಾಗೂ ಕಾಂಗ್ರೆಸ್ ಶಾಸಕರ ಜಟಾಪಟಿ ಮುಂದುವರಿದಿತ್ತು. ಸಭಾಪತಿ ರಮೇಶ್ ಕುಮಾರ್ ಆಗಮಿಸುತ್ತಿದ್ದಂತೆ ಒಬ್ಬೊರನ್ನೇ ಸಮಾಧಾನ ಮಾಡಿ ಸದನವನ್ನು ಚರ್ಚೆಗೆ ಅಣಿಗೊಳಿಸಿದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಏಕವಚನದಲ್ಲಿಯೇ ಕಿತ್ತಾಡಿಕೊಂಡ ಶಿವಲಿಂಗೇಗೌಡ, ರೇಣುಕಾಚಾರ್ಯ!

    ಏಕವಚನದಲ್ಲಿಯೇ ಕಿತ್ತಾಡಿಕೊಂಡ ಶಿವಲಿಂಗೇಗೌಡ, ರೇಣುಕಾಚಾರ್ಯ!

    ಬೆಳಗಾವಿ: ಬರಗಾಲದ ಮೇಲಿನ ಅಲ್ಪಾವಧಿ ಚರ್ಚೆ ವೇಳೆ ಶಾಸಕರಾದ ಶಿವಲಿಂಗೇಗೌಡ ಹಾಗೂ ರೇಣುಕಾಚಾರ್ಯ ಅವರು ಏಕವಚದಲ್ಲಿಯೇ ಕಿತ್ತಾಡಿಕೊಂಡಿದ್ದಾರೆ.

    ಭೋಜನ ವಿರಾಮದ ಬಳಿಕ ಬರಗಾಲದ ಮೇಲಿನ ಅಲ್ಪಾವಧಿ ಚರ್ಚೆಯನ್ನು ಮುಂದುವರಿಸುವಂತೆ ಆಗ್ರಹಿಸಿದ ವಿಪಕ್ಷನಾಯಕ ಬಿ.ಎಸ್.ಯಡಿಯೂರಪ್ಪ ಅವರು, ಚರ್ಚೆಗೆ ನಾವು ಸಿದ್ಧವಿದ್ದೇವೆ. ಆದರೆ ಸದನ ಪುನರಾರಂಭ ಮಾಡಲು ಒಂದು ಗಂಟೆ ವಿಳಂಬ ಮಾಡಿದ್ದು ಏಕೆ? ಸದನ ನಡೆಸಲು ಆಸಕ್ತಿ ಇಲ್ಲದಿದ್ದರೆ ಅಧಿವೇಶನವನ್ನು ಮುಂದೂಡಿ ಮನೆಗೆ ಹೋಗಿ. ಕಾಟಾಚಾರಕ್ಕೆ ಏಕೆ ಮಾಡುತ್ತೀರಾ ಎಂದು ಪ್ರಶ್ನಿಸಿ ಆಕ್ರೋಶ ಹೊರ ಹಾಕಿದರು.

    ಇದಕ್ಕೆ ಪ್ರತಿಕ್ರಿಯೆ ನೀಡಿದ ಜೆಡಿಎಸ್ ಶಾಸಕ ಶಿವಲಿಂಗೇಗೌಡ ಅವರು, ಸದನ ನಡೆಸುವವರು ಸಭಾಧ್ಯಕ್ಷರೋ? ಪ್ರತಿಪಕ್ಷ ನಾಯಕರೋ ಎಂದು ಪ್ರಶ್ನಿಸಿ ಕಿಡಿಕಾರಿದರು. ಮಧ್ಯಪ್ರವೇಶಿಸಿದ ಬಿಜೆಪಿಯ ರೇಣುಕಾಚಾರ್ಯ ಅವರು ಏರು ಧ್ವನಿಯಲ್ಲಿ, ನಮ್ಮ ಕ್ಷೇತ್ರಗಳಲ್ಲಿ ತೀವ್ರ ಬರವಿದೆ. ಈ ಕುರಿತು ಮಾತನಾಡುವುದು ನಮ್ಮ ಹಕ್ಕು. ನೀನು ಸುಮ್ಮನೆ ಕುಳಿತುಕೋ ಸಾಕು ಎಂದು ಟಾಂಗ್ ಕೊಟ್ಟರು.

    ನಾನು ನಿನ್ನ ಜೊತೆ ಮಾತನಾಡುತ್ತಿಲ್ಲ. ಅಧ್ಯಕ್ಷರಿಗೆ ಹೇಳುತ್ತಿರುವೆ. ಸುಮ್ನೆ ಕುಳಿತುಕೊಳ್ಳಿ ಎಂದು ಶಿವಲಿಂಗೇಗೌಡ ತಿರುಗೇಟು ನೀಡಿದರು. ಇದಕ್ಕೆ ಪ್ರತಿಯಾಗಿ ಏಕವಚನದಲ್ಲಿಯೇ, ಸದನ ನಿನ್ನದ್ದಷ್ಟೇ ಸ್ವತ್ತಲ್ಲ. ನಮ್ಮದು ಸ್ವತ್ತಿದೆ ಎಂದು ರೇಣುಕಾಚಾರ್ಯ ಗರಂ ಆದರು.

    ಶಾಸಕರ ವಾಕ್ ಸಮರದಲ್ಲಿ ಮಧ್ಯಪ್ರವೇಶಿಸಿದ ಸಚಿವ ಆರ್.ವಿ.ದೇಶಪಾಂಡೆ ಅವರು, ಅಜೆಂಡಾ ಪ್ರಕಾರವೇ ಸದನ ನಡೆಯುತ್ತಿದೆ. ಮುಖ್ಯಮಂತ್ರಿ ಹಾಗೂ ನಾನು ಮೇಲ್ಮನೆಯಲ್ಲಿದ್ದೇವು. ಹೀಗಾಗಿ ಇಲ್ಲಿ ಏಳು ಸಚಿವರಿದ್ದರು ಎಂದು ಸ್ಪಷ್ಟನೆ ನೀಡಿದರು.

    ದೇಶಾಪಂಡೆ ಉತ್ತರಕ್ಕೆ ವಿರೋಧ ಪಕ್ಷದ ಶಾಸಕರು ಒಟ್ಟಾಗಿ ಧ್ವನಿಗೂಡಿಸಿ, ಸುಳ್ಳು ಹೇಳಬೇಡಿ. ಇಲ್ಲಿ ಇದ್ದಿದ್ದು ಮೂವರೇ ಸಚಿವರು ಎಂದು ಕೂಗಾಡಿದರು. ಬಳಿಕ ಎದ್ದು ನಿಂತ ಆರ್.ವಿ.ದೇಶಪಾಂಡೆ, ಸದನದಲ್ಲಿ ಪ್ರತಿಪಕ್ಷ ಇರಬೇಕು. ನೀವು ವಾಕೌಟ್ ಮಾಡಬಾರದು. ಸಭಾಧ್ಯಕ್ಷರು ಕೊಟ್ಟ ಅವಕಾಶವನ್ನು ಪ್ರತಿಪಕ್ಷ ಸದುಪಯೋಗ ಮಾಡಿಕೊಳ್ಳಬೇಕು. ಸದನ ನಡೆಸುವ ಜವಾಬ್ದಾರಿ ಕೇವಲ ಕಾಂಗ್ರೆಸ್ ಮೇಲೆ ಮಾತ್ರ ಇಲ್ಲ. ಪ್ರತಿಪಕ್ಷಗಳಿಗೂ ಇದೆ. ಅವಕಾಶ ಕೊಡಬೇಕೋ ಬೇಡವೋ ಎಂಬುದನ್ನು ಸ್ಪೀಕರ್ ನಿರ್ಧಾರಕ್ಕೆ ಬಿಡೋಣ ಎಂದು ಸಮಜಾಯಿಸಿ ಪ್ರತಿಕ್ರಿಯೆ ನೀಡಿದರು.

    https://www.youtube.com/watch?v=Qo4D62V6SEA

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಹೆಲಿಕಾಪ್ಟರ್ ಗೌಡ, ಯುಕೆ ಟ್ವೆಂಟಿಸೆವನ್ ಎಂದು ಶಾಸಕರನ್ನು ಕರೆದ ಸ್ಪೀಕರ್

    ಹೆಲಿಕಾಪ್ಟರ್ ಗೌಡ, ಯುಕೆ ಟ್ವೆಂಟಿಸೆವನ್ ಎಂದು ಶಾಸಕರನ್ನು ಕರೆದ ಸ್ಪೀಕರ್

    ಬೆಳಗಾವಿ: ಬಿಜೆಪಿ ಶಾಸಕ ರಾಜುಗೌಡ ಹಾಗೂ ಮಾಜಿ ಸಚಿವ ಉಮೇಶ್ ಕತ್ತಿ ಅವರನ್ನು ವಿಶೇಷ ಹೆಸರಿನ ಮೂಲಕ ಕರೆದು ಅಧಿವೇಶನದಲ್ಲಿ ಸ್ಪೀಕರ್ ರಮೇಶ್ ಕುಮಾರ್ ನಗೆ ಹರಿಸಿದ್ದಾರೆ.

    ಅಧಿವೇಶನದಲ್ಲಿ ಇಂದು ಬೆಳಗ್ಗೆ ಆರಂಭವಾಗಿದ್ದ ಪ್ರಶ್ನೋತ್ತರ ಕಲಾಪದ ವೇಳೆ ಒಬ್ಬೊಬ್ಬ ಶಾಸಕರ ಪ್ರಶ್ನೆಗಳನ್ನು ಆಲಿಸಿ ಸಂಬಂಧಪಟ್ಟ ಸಚಿವರಿಂದ ಸ್ಪೀಕರ್ ಉತ್ತರ ಕೊಡಿಸುತ್ತಿದ್ದರು. ಈ ವೇಳೆ ಬಿಜೆಪಿ ಶಾಸಕ ರಾಜೂ ಗೌಡ ಅವರನ್ನು ಹೆಲಿಕಾಪ್ಟರ್ ಗೌಡ ಎಂದು ಸ್ಪೀಕರ್ ಕರೆದರು. ನಗುತ್ತಲೇ ರಾಜೂ ಗೌಡ ಎದ್ದು ನಿಂತು ಮಾತನಾಡುತ್ತಿದ್ದಾಗ ಹೆಲಿಕಾಪ್ಟರ್ ಬಂತಾ ಎಂದು ಮತ್ತೊಮ್ಮೆ ಕೇಳಿದ ಸಭೆಯಲ್ಲಿ ಎಲ್ಲರ ಮುಖದಲ್ಲಿಯೂ ನಗೆ ಬೀರಿದರು.

    ಯುಕೆ ಟ್ವೆಂಟಿಸೆವೆನ್ ಅವರು ತಮ್ಮ ಪ್ರಶ್ನೆ ಕೇಳಬಹುದು ಎಂದು ಸ್ಪೀಕರ್ ರಮೇಶ್ ಕುಮಾರ್ ಹೇಳುತ್ತಿದ್ದಂತೆ ಯಾರನ್ನು ಉದ್ದೇಶಿಸಿ ಕರೆದಿದ್ದಾರೆ ಎನ್ನುವ ಬಗ್ಗೆ ಸ್ವಲ್ಪಹೊತ್ತು ಗೊಂದಲ ಉಂಟಾಗಿತ್ತು. ರೀ ನಾನು ಕರೆದಿದ್ದು, ಆತ್ಮೀಯ ಹಾಗೂ ಸಹೋದ್ಯೋಗಿಯಾದ ಮಾಜಿ ಸಚಿವ ಉಮೇಶ್ ಕತ್ತಿ ಅವರನ್ನು ಅಂತ ಹೇಳಿದರು. ಹಾಗೇ ಹೇಳುತ್ತಿದ್ದಂತೆ ಸದನದಲ್ಲಿದ್ದ ಎಲ್ಲರೂ ನಕ್ಕುಬಿಟ್ಟರು.

    ಈಗಾಗಲೇ ನನ್ನ ಪ್ರಶ್ನೆ ಉತ್ತರ ಕೊಟ್ಟಿದ್ದಾರೆ ಎಂದು ಉಮೇಶ್ ಕತ್ತಿ ಅವರು ಹೇಳುತ್ತಿದ್ದಂತೆ, ಬಹಳ ಚೆನ್ನಾಗಿದೆಯಂತೆ ಟ್ವೆಂಟಿಸೆವನ್ ಎಂದು ಹೇಳಿ ಮತ್ತೊಮ್ಮೆ ಸ್ಪೀಕರ್ ಕಾಲೆಳೆದರು. ನಮ್ಮ ಭಾಗದ ಕಾಲೇಜುಗಳ ಶುಲ್ಕವನ್ನು ಕಡಿಮೆ ಮಾಡಬೇಕು ಎಂದು ಉಮೇಶ್ ಕತ್ತಿ ಕೇಳಿದರು. ಇದಕ್ಕೆ ಪ್ರತಿಕ್ರಿಯೆ ನೀಡಿದ ರಮೇಶ್ ಕುಮಾರ್ ಅವರು, ರೀ ಕಾಲೇಜುಗಳನ್ನು ಎಲ್ಲದ್ರೂ ಶುಗರ್ ಫ್ಯಾಕ್ಟರಿಯಲ್ಲಿ ತೆರೆದು ಬಿಟ್ಟೀರಾ ಎಂದು ಚಟಾಕಿ ಹಾರಿಸಿದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv ಮತ್ತು Live  ವೀಕ್ಷಿಸಲು  ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್  ಮಾಡಿ: play.google.com/publictv

  • ಅಧಿವೇಶನಕ್ಕೆ ಆಡಳಿತ ಪಕ್ಷಗಳಿಗಿಂತ ಬಿಜೆಪಿಯ ಶಾಸಕರೇ ಹೆಚ್ಚಿನ ಸಂಖ್ಯೆಯಲ್ಲಿ ಹಾಜರು!

    ಅಧಿವೇಶನಕ್ಕೆ ಆಡಳಿತ ಪಕ್ಷಗಳಿಗಿಂತ ಬಿಜೆಪಿಯ ಶಾಸಕರೇ ಹೆಚ್ಚಿನ ಸಂಖ್ಯೆಯಲ್ಲಿ ಹಾಜರು!

    – ಶಾಸಕ ಅನಿಲ್ ಕುಮಾರ್‌ಗೆ ಪ್ರಶ್ನೆ ಕೇಳುವ ಬಗ್ಗೆ ತಿಳಿಸಿಕೊಟ್ಟ ಸ್ಪೀಕರ್ ರಮೇಶ್ ಕುಮಾರ್

    ಬೆಳಗಾವಿ: ಎರಡನೇ ದಿನದ ಚಳಿಗಾಲ ಅಧಿವೇಶನ ಆರಂಭವಾಗಿದ್ದು, ಆಡಳಿತ ಜೆಡಿಎಸ್-ಕಾಂಗ್ರೆಸ್ ಮೈತ್ರಿ ಸರ್ಕಾರದ ಶಾಸಕರಿಗಿಂತ ವಿಪಕ್ಷ ಶಾಸಕರೇ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದಾರೆ.

    ಬಿಜೆಪಿಯ 80 ಜನ ಶಾಸಕರು ಹಾಗೂ ಮೈತ್ರಿ ಸರ್ಕಾರದ 70 ಜನ ಶಾಸಕರು ಅಧಿವೇಶನಕ್ಕೆ ಹಾಜರಾಗಿದ್ದಾರೆ. ಇತ್ತ ಮಾಜಿ ಸಿಎಂ ಸಿದ್ದರಾಮಯ್ಯ ಅವರ ಬೆಂಬಲಿಗ ಶಾಸಕರಾದ ನಾಗೇಂದ್ರ, ಕಂಪ್ಲಿಯ ಗಣೇಶ್, ಆನಂದ್ ಸಿಂಗ್, ತುಕಾರಾಂ, ಡಾ. ಸುಧಾಕರ್, ಬಿ.ಕೆ.ಸಂಗಮೇಶ್ ಹಾಗೂ ಬಿ.ನಾರಾಯಣ್ ಕೂಡ ಅಧಿವೇಶನಕ್ಕೆ ಗೈರು ಹಾಜರಿ ಆಗಿದ್ದಾರೆ. ಈ ಮೂಲಕ ಮತ್ತೆ ಸಚಿವ ಸ್ಥಾನ ಆಕಾಂಕ್ಷಿಗಳು ಕಾಂಗ್ರೆಸ್‍ಗೆ ಶಾಕ್ ನೀಡಿದ್ದಾರೆ.

    ಅಸಮಾಧಾನ ಶಾಸಕರ ನಡೆ ಭಾರೀ ಚರ್ಚೆಗೆ ಕಾರಣವಾಗಿದೆ. ಇತ್ತ ಅಧಿವೇಶನಲ್ಲಿ ಇಂದು ಶಿಕ್ಷಕರು, ಉಪನ್ಯಾಸಕರ ನೇಮಕಾತಿ, ಶೈಕ್ಷಣಿಕ ಯೋಜನೆ, ಮೂಲಸೌಕರ್ಯ ಅಭಿವೃದ್ಧಿಯ ಕುರಿತು ಭಾರೀ ಚರ್ಚೆ ಆರಂಭವಾಗಿದೆ. ಈ ಕುರಿತು ಪ್ರತಿಕ್ರಿಯೆ ನೀಡಿದ ಸಿಎಂ ಗ್ರಾಮೀಣ ಪ್ರದೇಶದಲ್ಲಿನ ಉಪನ್ಯಾಸಕರ ಕೊರತೆ ನೀಗಿಸವ ಕಡ್ಡಾಯ ವರ್ಗಾವಣೆ ನೀತಿ ಜಾರಿಗೊಳಿಸಲಾಗಿದೆ. ಸಿ ವಲಯದಲ್ಲಿ 596 ಉಪನ್ಯಾಸಕರ ಕಡ್ಡಾಯ ವರ್ಗಾವಣೆ ಮಾಡಲಾಗಿದೆ. ಮುಂದಿನ ಶೈಕ್ಷಣಿಕ ವರ್ಷದಲ್ಲಿ 1500ಕ್ಕೂ ಹೆಚ್ಚು ಉಪನ್ಯಾಸಕರ ನೇಮಕ ಮಾಡಲಾಗುತ್ತದೆ ಎಂದು ಬಿಜೆಪಿ ಶಾಸಕ ಹೆಚ್.ಹಾಲಪ್ಪ ಪ್ರಶ್ನೆಗೆ ಉತ್ತರ ನೀಡಿದರು.

    ಶಾಸಕರಿಗೆ ಸ್ವೀಕರ್ ಪಾಠ:
    ಎಚ್.ಡಿ.ಕೋಡೆ ಶಾಸಕ ಅನಿಲ್ ಕುಮಾರ್ ಅವರಿಗೆ ಪ್ರಶ್ನೆ ಕೇಳುವಂತೆ ಸ್ಪೀಕರ್ ರಮೇಶ್ ಕುಮಾರ್ ಸೂಚಿಸಿದರು. ಈ ವೇಳೆ ಸ್ವಲ್ಪ ಭಯಕ್ಕೆ ಒಳಗಾಗಿದ್ದ ಅನಿಲ್ ಕುಮಾರ್ ಅವರಿಗೆ ಧೈರ್ಯ ಹೇಳಿದ ರಮೇಶ್ ಕುಮಾರ್ ಅವರು, ಮೊದಲ ಬಾರಿಗೆ ಹೀಗೆ ಆಗುತ್ತದೆ ಎಂದು ಹೇಳಿ, ಪ್ರಶ್ನೆಯನ್ನು ಹೇಗೆ ಕೇಳಬೇಕು ಎಂದು ತಿಳಿಸಿದರು. ಪ್ರಶ್ನೆ ಕೇಳಿದ ರಮೇಶ್ ಕುಮಾರ್ ಅವರು ಬಳಿಕ ಗುಡ್ ಎಂದು ಹೇಳಿ ಅನಿಲ್ ಕುಮಾರ್ ಅವರನ್ನು ಪ್ರೋತ್ಸಾಹಿಸಿದರು.

    ಅಧಿವೇಶನದ ಮೊದಲ ದಿನ ಮಾಜಿ ಸಿಎಂ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಜಿ.ಪರಮೇಶ್ವರ್ ಗೈರಿ ಆಗಿದ್ದರು. ಹೀಗಾಗಿ ಎಚ್.ಡಿ.ಕುಮಾರಸ್ವಾಮಿ ಅವರು ಏಕಾಂಗಿಯಾಗಿ ಅಧಿವೇಶನವನ್ನು ಎದುರಿಸಿದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv ಮತ್ತು Live  ವೀಕ್ಷಿಸಲು  ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್  ಮಾಡಿ: play.google.com/publictv

  • ಬೆಳಗಾವಿ ಅಧಿವೇಶನಕ್ಕೆ ಮಾಜಿ ಸಿಎಂ ಗೈರು

    ಬೆಳಗಾವಿ ಅಧಿವೇಶನಕ್ಕೆ ಮಾಜಿ ಸಿಎಂ ಗೈರು

    -ವಿದೇಶ ಪ್ರವಾಸಕ್ಕೆ ಹೋಗಲಿದ್ದಾರೆ ಸಿದ್ದರಾಮಯ್ಯ

    ಬೆಂಗಳೂರು: ಬೆಳಗಾವಿಯಲ್ಲಿ ನಡೆಯಲಿರುವ ಚಳಿಗಾಲ ಅಧಿವೇಶಕ್ಕೆ ಮೊದಲ ವಾರ ಮಾಜಿ ಸಿಎಂ ಸಿದ್ದರಾಮಯ್ಯ ಗೈರು ಆಗಲಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿವೆ.

    ಪೂರ್ವ ನಿಗದಿತ ಕಾರ್ಯಕ್ರಮದ ಹಿನ್ನೆಲೆ ಸಿದ್ದರಾಮಯ್ಯ ಅವರು ಪುತ್ರ ಯತೀಂದ್ರ ಜೊತೆಗೆ ಇದೇ ಮಂಗಳವಾರ ವಿದೇಶಿ ಪ್ರವಾಸ ಕೈಗೊಳ್ಳಲಿದ್ದಾರೆ. ಇದರಿಂದಾಗಿ ಡಿಸೆಂಬರ್ 10ರಿಂದ ಆರಂಭವಾಗುವ ಚಳಿಗಾಲ ಅಧಿವೇಶನದ ಮೊದಲ ವಾರು ಗೈರು ಆಗಲಿದ್ದಾರೆ.

    ಸಿದ್ದರಾಮಯ್ಯ ಅವರು ಎರಡನೇ ವಾರದ ಅಧಿವೇಶನಕ್ಕೆ ಹಾಜರಾಗಲಿದ್ದಾರೆ. ಹೀಗಾಗಿ ಡಿಸೆಂಬರ್ 12 ಅಥವಾ 13ರಂದು ನಡೆಯಬೇಕಿದ್ದ ಶಾಸಕಾಂಗ ಸಭೆಯನ್ನು ಮುಂದೂಡುವ ಸಾಧ್ಯತೆಗಳಿವೆ. ಮಾಜಿ ಸಿಎಂ ಆಗಮಿಸಿದ ಬಳಿಕ ಅಂದರೆ ಡಿಸೆಂಬರ್ 18ರಂದು ಸಭೆ ನಡೆಯುವ ಸಾಧ್ಯತೆಯಿದೆ ಎಂದು ಕಾಂಗ್ರೆಸ್ ಮೂಲಗಳು ತಿಳಿಸಿವೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • 25 ಲಕ್ಷ ಮೌಲ್ಯದ 360 ಬಾಕ್ಸ್ ಗೋವಾ ಮದ್ಯ ವಶಕ್ಕೆ

    25 ಲಕ್ಷ ಮೌಲ್ಯದ 360 ಬಾಕ್ಸ್ ಗೋವಾ ಮದ್ಯ ವಶಕ್ಕೆ

    – ನನ್ನ ಕಾರಿನಲ್ಲಿ ಬಾಟಲ್ ಸಾಗಿಸುತ್ತಿಲ್ಲ: ಮದ್ಯದ ಮತ್ತಿನ ವ್ಯಕ್ತಿ ರಂಪಾಟ

    ಬೆಳಗಾವಿ: ಗೋವಾದಿಂದ ಬೆಳಗಾವಿ ಮಾರ್ಗವಾಗಿ ಮಿನಿ ಲಾರಿ, ಕಾರು ಮೂಲಕ ಸಾಗಿಸುತ್ತಿದ್ದ 25 ಲಕ್ಷ ರೂ. ಮೌಲ್ಯದ ಮದ್ಯವನ್ನು ಅಬಕಾರಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.

    ಪ್ರದೀಪ್, ಶುಭಂ ಸೇರಿದಂತೆ 5 ಜನ ಆರೋಪಿಗಳ ಪೊಲೀಸರು ಬಂಧಿಸಿದ್ದಾರೆ. ಆದರೆ ಪ್ರಕರಣ ಪ್ರಮುಖ ಆರೋಪಿ, ಕಿಂಗ್‍ಪಿನ್ ಮಹಾರಾಷ್ಟ್ರದ ಚಂದಗಡದ ಬಾಬಾ ಪರಾರಿಯಾಗಿದ್ದಾನೆ ಆತನಿಗಾಗಿ ಪೊಲೀಸರು ಬಲೆ ಬೀಸಿದ್ದಾರೆ.

    ಕುಖ್ಯಾತ ಆರೋಪಿ ಬಾಬಾ ಕಳೆದ ಕೆಲವು ವರ್ಷಗಳಿಂದ ನಿರಂತರವಾಗಿ ಗೋವಾದಿಂದ ಅಕ್ರಮವಾಗಿ ಮದ್ಯ ಸಾಗಾಣೆ ಮಾಡುತ್ತಾನೆ ಎನ್ನುವ ಆರೋಪ ಕೇಳಿಬಂದಿತ್ತು. ಈ ಬೆನ್ನಲ್ಲೇ ಆತನ ಕಾರಿನ ಮೇಲೆ ದಾಳಿ ನಡೆಸಲಾಗಿತ್ತು. ಆದರೆ ಬಾಬಾ ತಪ್ಪಿಸಿಕೊಂಡು ಹೋಗಿದ್ದ. ಬಾಬಾ ತನ್ನ ಕೃತ್ಯ ಮುಂದುವರಿಸಿದ್ದ ಎನ್ನುವುದು ತಿಳಿದು ಗುರುವಾರ ಬಂಧನಕ್ಕೆ ಯತ್ನಿಸಿದ್ದೇವು. ಈ ವೇಳೆ 5 ಜನ ಆರೋಪಿಗಳು ಸಿಕ್ಕಿಬಿದ್ದಿದ್ದು, ಬಾಬಾ ಪರಾರಿಯಾಗಿದ್ದಾನೆ ಬೆಳಗಾವಿ ಅಬಕಾರಿ ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.

    ಆರೋಪಿಗಳಿಂದ ಮಿನಿ ಲಾರಿ, ಕಾರು ಹಾಗೂ 360 ಬಾಕ್ಸ್ ನಲ್ಲಿರುವ 25 ಲಕ್ಷ ರೂ. ಮೌಲ್ಯದ ಮದ್ಯ ವಶಕ್ಕೆ ಪಡೆಯಲಾಗಿದೆ. ಆರೋಪಿಗಳನ್ನು ವಿಚಾರಣೆಗೆ ಒಳಪಡಿಸಿ ಬಾಬಾನನ್ನು ಬಂಧಿಸಲಾಗುತ್ತದೆ ಎಂದು ತಿಳಿಸಿದರು.

    ಕಾರಿನಲ್ಲಿ ಮದ್ಯ ಸಾಗಾಟ ಮಾಡುತ್ತಿದ್ದ ವ್ಯಕ್ತಿಯೊಬ್ಬನನ್ನು ಪೊಲೀಸರು ವಶಕ್ಕೆ ಪಡೆದಿದ್ದರು. ನಾನು ಮದ್ಯ ಸಾಗಿಸುತ್ತಿಲ್ಲ. ಅನಾವಶ್ಯಕವಾಗಿ ನನ್ನನ್ನು ವಶಕ್ಕೆ ಪಡೆಯಲಾಗಿದೆ ಎಂದು ವ್ಯಕ್ತಿಯೊಬ್ಬ ಅಬಕಾರಿ ಪೊಲೀಸ್ ಅಚೇರಿಯಲ್ಲಿ ರಂಪಾಟ ಮಾಡಿದ್ದಾನೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಶರಬತ್ತು ಕುಡಿಸಿದ್ರೆ ಲೀಡರ್ ಆಗಲ್ಲ, ರಮೇಶ್, ಹೆಬ್ಬಾಳ್ಕರ್, ಡಿಕೆಶಿ ಒಂದೇ ಪರಿವಾರ – ಸತೀಶ್ ಜಾರಕಿಹೊಳಿ ಟಾಂಗ್

    ಶರಬತ್ತು ಕುಡಿಸಿದ್ರೆ ಲೀಡರ್ ಆಗಲ್ಲ, ರಮೇಶ್, ಹೆಬ್ಬಾಳ್ಕರ್, ಡಿಕೆಶಿ ಒಂದೇ ಪರಿವಾರ – ಸತೀಶ್ ಜಾರಕಿಹೊಳಿ ಟಾಂಗ್

    ಬೆಳಗಾವಿ: ಸಚಿವ ರಮೇಶ್ ಜಾರಕಿಹೊಳಿ, ಡಿಕೆ ಶಿವಕುಮಾರ್, ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಒಂದೇ ಪರಿವಾರದವರಾಗಿದ್ದು, ಕಳೆದ ಇಪ್ಪತ್ತು ವರ್ಷಗಳಿಂದ ಜೊತೆಯಾಗಿ ಇದ್ದಾರೆ ಎಂದು ಮಾಜಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ.

    ನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಜಲ ಸಂಪನ್ಮೂಲ ಸಚಿವ ಡಿಕೆ ಶಿವಕುಮಾರ್ ಹಾಗೂ ಪೌರಾಡಳಿತ, ಬಂದರು ಮತ್ತು ಒಳನಾಡು ಸಾರಿಗೆ ಸಚಿವ ರಮೇಶ್ ಜಾರಕಿಹೊಳಿ ಅವರ ನಡುವೆ ಯಾವ ವಿಚಾರಕ್ಕೆ ಅಸಮಾಧಾನ ವ್ಯಕ್ತವಾಗಿದೆ ಎನ್ನುವುದು ನನಗೆ ಗೊತ್ತಿಲ್ಲ. ಆದರೆ ಬೆಳಗಾವಿಯಲ್ಲಿ ಪಕ್ಷದ ಪರ ಡಿಕೆ ಶಿವಕುಮಾರ್ ಅವರು ಆಗಮಿಸಿ ರೈತರ ಹೋರಾಟಕ್ಕೆ ಭರವಸೆ ನೀಡಿ ಹೋರಾಟವನ್ನು ಹಿಂಪಡೆಯುವಂತೆ ಮಾಡಿದ್ದಾರೆ ಅಷ್ಟೇ. ಕೇವಲ ಶರಬತ್ತು ಕುಡಿಸಿದ್ರೆ ಲೀಡರ್ ಆಗಲ್ಲ ಎಂದು ಹೇಳುವ ಮೂಲಕ ಪರೋಕ್ಷವಾಗಿ ಟಾಂಗ್ ನೀಡಿದರು.

    ಬೆಳಗಾವಿ ಕಬ್ಬು ಬೆಳಗಾರರ ಹೋರಾಟದಲ್ಲಿ ರಾಜಕೀಯ ಲೇಪನ ಮಾಡುವುದು ಸರಿಯಲ್ಲ. ಪಕ್ಷದ ಕಾರ್ಯಕರ್ತರು ಈ ಕುರಿತು ಮುಖಂಡರಿಗೆ ಮಾಹಿತಿ ನೀಡಿದ್ದರು. ಅದ್ದರಂತೆ ಸರ್ಕಾರದ ಪರ ಡಿಕೆ ಶಿವಕುಮಾರ್ ಅವರು ಪ್ರತಿಭಟನಕಾರರ ಮನವೊಲಿಕೆ ಮಾಡಿದ್ದಾರೆ. ನಾವು ಬೇರೆ ಬೇರೆ ಜಿಲ್ಲೆಗಳಿಗೆ ಭೇಟಿ ನೀಡಿ ಹಲವು ಹೋರಾಟಗಾರರೊಂದಿಗೆ ಚರ್ಚೆ ನಡೆಸಿದ್ದೇವೆ ಎಂದರು. ಇದನ್ನು ಓದಿ : ಬಳ್ಳಾರಿ ಆಯ್ತು ಈಗ ಜಾರಕಿಹೊಳಿ ಕೋಟೆಯಲ್ಲಿ ಹವಾ – ರೈತರ ಜೊತೆ ಡಿಕೆಶಿ ಸಂಧಾನ ಯಶಸ್ವಿ 

    ಇದೇ ವೇಳೆ ಡಿಕೆ ಶಿವಕುಮಾರ್ ಹಾಗೂ ರಮೇಶ್ ಅವರ ನಡುವಿನ ಅಸಮಾಧಾನದ ಪ್ರಶ್ನೆಗೆ ಉತ್ತರಿಸಿದ ಸತೀಶ್ ಜಾರಕಿಹೊಳಿ ಅವರು, ಬೆಳಗಾವಿ ಪಿಎಲ್‍ಡಿ ಬ್ಯಾಂಕ್ ವಿಚಾರದಲ್ಲಿ ಸಚಿವ ರಮೇಶ್ ಅವರೇ ಮಧ್ಯಸ್ಥಿಕೆಗೆ ಬಂದರು. ಆದರೆ ಡಿಕೆ ಶಿವಕುಮಾರ್ ಹಾಗೂ ರಮೇಶ್ ಮುನಿಸಿಗೂ ಪಿಎಲ್‍ಡಿ ಬ್ಯಾಂಕ್ ಚುನಾವಣೆಗೂ ಸಂಬಂಧವಿಲ್ಲ. ಈ ಬಗ್ಗೆ ಅವರಿಗೆ ಕೇಳಿದರೆ ಅವರಿಬ್ಬರೂ ಒಂದೇ ಎಂದು ಹೇಳುತ್ತಾರೆ. ಡಿಕೆ ಶಿವಕುಮಾರ್, ರಮೇಶ್ ಜಾರಕಿಹೊಳಿ, ಲಕ್ಷ್ಮಿ ಹೆಬ್ಬಾಳ್ಕರ್ ಒಂದೇ ಪರಿವಾರಕ್ಕೆ ಸೇರಿದವರು. ಕಳೆದ 20 ವರ್ಷಗಳಿಂದ ಪಕ್ಷದಲ್ಲಿ ಒಟ್ಟಿಗೆ ಬಂದಿದ್ದಾರೆ. ಆದರೆ ಅವರ ಹಳೇ ವ್ಯವಹಾರ ನನಗೆ ಏನೂ ಗೊತ್ತಿಲ್ಲ ಎಂದು ಹೊಸ ಬಾಂಬ್ ಸಿಡಿಸಿದರು.

    ಇಬ್ಬರ ನಡುವೆ ಯಾವುದಾದರೂ ವ್ಯವಹಾರ ಇರಬಹುದು ಎಂದು ಹೊಸ ಬಾಂಬ್ ಹಾಕಿದ ಶಾಸಕ ಸತೀಶ್ ಜಾರಕಿಹೊಳಿ ಅವರು, ಅವರ ಪರಿವಾರ ಒಡೆಯುವ ಕೆಲಸ ನಾನು ಮಾಡಿಲ್ಲ. ಅವರಿಗೆ ಅವರೇ ಪರಿವಾರ ಒಡೆದುಕೊಂಡಿದ್ದಾರೆ. ಇದಕ್ಕೂ ನನಗೂ ಯಾವುದೇ ಸಂಬಂಧ ಇಲ್ಲ. ಅದ್ದರಿಂದ ಏಕೆ ಜಗಳವಾಡಿದ್ದೀರಿ ಎಂದು ಮಾಧ್ಯಮಗಳೇ ಅವರನ್ನು ಪ್ರಶ್ನೆ ಮಾಡಿ. ಕಳೆದ 6 ತಿಂಗಳ ಹಿಂದೆಯಷ್ಟೇ ಜಿಲ್ಲೆಯಲ್ಲಿ ಇವರ ಮಧ್ಯೆ ಬಂದೆ. ಪಿಎಲ್‍ಡಿ ಚುನಾವಣೆಯಲ್ಲಿ ಸಚಿವ ರಮೇಶ್ ಅವರು ನನಗೆ ಬೆಂಬಲ ಕೊಟ್ಟರು. ಯಾರ ಸ್ನೇಹವನ್ನ ಒಡೆಯಬೇಕು, ಬಿಡಬೇಕು ಎಂಬ ಉದ್ದೇಶ ನಮಗಿಲ್ಲ ಎಂದು ಸ್ಪಷ್ಟಪಡಿಸಿದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv ಮತ್ತು Live  ವೀಕ್ಷಿಸಲು  ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್  ಮಾಡಿ: play.google.com/publictv

  • ವೀರಯೋಧನ ಪಾರ್ಥಿವ ಶರೀರ ಇಂದು ಸ್ವಗ್ರಾಮಕ್ಕೆ

    ವೀರಯೋಧನ ಪಾರ್ಥಿವ ಶರೀರ ಇಂದು ಸ್ವಗ್ರಾಮಕ್ಕೆ

    ಬೆಳಗಾವಿ: ಜಮ್ಮುವಿನಲ್ಲಿ ಸೋಮವಾರ ವೀರಮರಣ ಹೊಂದಿದ್ದ ಯೋಧ ಪ್ರಕಾಶ್ ಜಾಧವ್ ಅವರ ಪಾರ್ಥಿವ ಶರೀರ ಇಂದು ಅವರ ಸ್ವಗ್ರಾಮ ಜಿಲ್ಲೆಯ ನಿಪ್ಪಾಣಿ ತಾಲೂಕಿನ ಬೂಧಿಹಾಳ ಗ್ರಾಮಕ್ಕೆ ತಲುಪಲಿದೆ.

    ಯೋಧ ಪ್ರಕಾಶ್ ಜಾಧವ್ ಜಮ್ಮುವಿನಲ್ಲಿ ಉಗ್ರರ ಜತೆ ಸೆಣಸಾಡಿ ವೀರಮರಣ ಹೊಂದಿದ್ದರು. ಇಂದು ಪ್ರಕಾಶ್ ಪಾರ್ಥಿವ ಶರೀರ ದೆಹಲಿ, ಪುಣೆ, ಬೆಳಗಾವಿ ಮಾರ್ಗವಾಗಿ ಸ್ವಗ್ರಾಮ ಬೂಧಿಹಾಳಕ್ಕೆ ಸೇನಾ ಸಿಬ್ಬಂದಿ ತರಲಿದ್ದಾರೆ. ವೀರ ಮರಣ ಹೊಂದಿರುವ ಪ್ರಕಾಶ್ ಅವರ ಅಂತ್ಯ ಸಂಸ್ಕಾರ ಸಕಲ ಸರ್ಕಾರಿ ಗೌರವದೊಂದಿಗೆ ಇಂದು ನಡೆಯಲಿದೆ.

    ಪ್ರಕಾಶ್ ಅವರಿಗೆ ಕಳೆದ ವರ್ಷ ಮದುವೆಯಾಗಿತ್ತು. ಮೂರು ತಿಂಗಳ ಮಗು ಕೂಡ ಇತ್ತು. ಇದೀಗ ಯೋಧ ತನ್ನ ಮಡದಿ, ಮಗು ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ. ವೀರಯೋಧನ ಸಾವಿನಿಂದ ಅವರ ಸ್ವಗ್ರಾಮದಲ್ಲಿ ನೀರವ ಮೌನ ಮಡುಗಟ್ಟಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಗೃಹಿಣಿ ನೇಣಿಗೆ ಶರಣು- ಪತಿ ಪರಾರಿ..!

    ಗೃಹಿಣಿ ನೇಣಿಗೆ ಶರಣು- ಪತಿ ಪರಾರಿ..!

    ಬೆಳಗಾವಿ (ಚಿಕ್ಕೋಡಿ): ದೈಹಿಕ ಮತ್ತು ಮಾನಸಿಕ ಕಿರುಕುಳ ಹಿನ್ನೆಲೆಯಲ್ಲಿ ಗೃಹಿಣಿಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಿಲ್ಲೆಯ ಅಥಣಿ ತಾಲೂಕಿನ ಖೋತವಾಡಿ ಗ್ರಾಮದಲ್ಲಿ ನಡೆದಿದೆ.

    ಪ್ರತೀಕ್ಷಾ ಸುನೀಲ್ ಖೋತ (20) ನೇಣಿಗೆ ಶರಣಾದ ಗೃಹಿಣಿ. ಪ್ರತೀಕ್ಷಾಗೆ ಗಂಡ ಹಾಗೂ ಅತ್ತೆ ಮಾವ ಸೇರಿ ಚಿತ್ರಹಿಂಸೆ ನೀಡುತ್ತಿದ್ದರು. ಹೀಗಾಗಿ ದೈಹಿಕವಾಗಿ ಹಾಗೂ ಮಾನಸಿಕವಾಗಿ ಬೇಸತ್ತಿದ್ದ ಪ್ರತೀಕ್ಷಾ, ಗಂಡನ ಮನೆಯವರ ಕಿರುಕುಳ ತಾಳಲಾರದೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಹೆಂಡತಿ ಮೃತಪಟ್ಟ ನಂತರ ಪತಿ ಸುನೀಲ್ ಪರಾರಿಯಾಗಿದ್ದಾನೆ.

    ಈ ಕುರಿತು ಪ್ರತೀಕ್ಷಾ ತಂದೆ ಯಲ್ಲಪ್ಪ ಉಪ್ಪಾರ ಅಥಣಿ ಪೊಲೀಸ್‌ ಠಾಣೆಯಲ್ಲಿ ಸುನೀಲ್ ಹಾಗೂ ಅವನ ಕುಟುಂಬದವರ ವಿರುದ್ಧ ದೂರು ನೀಡಿದ್ದಾರೆ. ದೂರಿನನ್ವಯ ಪ್ರತೀಕ್ಷಾ ಅತ್ತೆ ಮಾವನನ್ನು ಪೊಲೀಸರು ವಶಕ್ಕೆ ಪಡೆದಿದ್ದು, ಪರಾರಿಯಾಗಿರುವ ಗಂಡ ಸುನೀಲ್‍ಗಾಗಿ ಹುಡುಕಾಟ ನಡೆಸುತ್ತಿದ್ದಾರೆ.

    ಘಟನೆ ಕುರಿತು ಅಥಣಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv