Tag: Belgaum

  • ಶತಾಯುಷಿ, ರಂಗಭೂಮಿ ಭೀಷ್ಮ ಏಣಗಿ ಬಾಳಪ್ಪ ಇನ್ನಿಲ್ಲ

    ಶತಾಯುಷಿ, ರಂಗಭೂಮಿ ಭೀಷ್ಮ ಏಣಗಿ ಬಾಳಪ್ಪ ಇನ್ನಿಲ್ಲ

    ಬೆಳಗಾವಿ: ನಾಟ್ಯ ಭೂಷಣ, ನಾಡೋಜ, ಶತಾಯುಷಿ, ರಂಗಭೂಮಿ ಭೀಷ್ಮ ಬಾಳಪ್ಪ (104) ವಿಧಿವಶರಾಗಿದ್ದಾರೆ.

    ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಬಾಳಪ್ಪ ಅವರಿಗೆ ಕಳೆದ ಮೂರು ವರ್ಷಗಳಿಂದ ಮನೆಯಲ್ಲಿಯೇ ಚಿಕಿತ್ಸೆ ನೀಡಲಾಗಿತ್ತು. ಆದರೆ ಇಂದು ಚಿಕಿತ್ಸೆ ಫಲಿಸದೇ ಶತಾಯುಷಿ ಬಾಳಪ್ಪ ಅವರು ಏಣಗಿ ಗ್ರಾಮದಲ್ಲಿ ಬೆಳಗ್ಗೆ ಇಹಲೋಕ ತ್ಯಜಿಸಿದ್ದಾರೆ.

    ನೂರಾರು ನಾಟಕ, ಚಲನಚಿತ್ರದಲ್ಲಿ ಅಭಿನಯಿಸಿರುವ ಹಿರಿಯ ಕಲಾವಿದ ಏಣಗಿ ಬಾಳಪ್ಪ ಅವರ ಅಂತ್ಯಕ್ರಿಯೆ ಶನಿವಾರ ಬೆಳಗ್ಗೆ 11 ಘಂಟೆಗೆ ಸವದತ್ತಿ ತಾಲೂಕಿನ ಏಣಗಿ ಗ್ರಾಮದಲ್ಲಿ ಅಂತ್ಯಕ್ರಿಯೆ ನಡೆಯಲಿದೆ. ಬಾಳಪ್ಪನ್ನನವರು ಮಕ್ಕಳು ಸೇರಿದಂತೆ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.

    10ನೆಯ ತರಗತಿಯಲ್ಲಿ ಓದುತ್ತಿರುವಾಗಲೇ ರಂಗಭೂಮಿ ಪ್ರವೇಶಿಸಿದ ಅವರು ಸ್ತ್ರೀ ಪಾತ್ರಗಳ ಮೂಲಕವೂ ಜನಜನಿತರಾದರಲ್ಲದೆ ಅಪಾರ ಖ್ಯಾತಿಯನ್ನು ಪಡೆದರು. ‘ಕಿತ್ತೂರು ರುದ್ರಮ್ಮ’ ನಾಟಕದ ರುದ್ರಮ್ಮನ ಪಾತ್ರ ಇವರ ಮೊಟ್ಟಮೊದಲ ಸ್ರೀಪಾತ್ರ. ಚಿಕ್ಕೋಡಿ ಸಿದ್ಧಲಿಂಗ ಸ್ವಾಮೀಜಿಯವರ ಕಂಪೆನಿಯ ಮಹಾನಂಜ ನಾಟಕದಲ್ಲಿ ಪ್ರಹ್ಲಾದನಾಗಿ ಮನೋಜ್ಞ ಅಭಿನಯ ನೀಡಿದ್ದರು, ರಂಗ ಭೂಮಿಯ ದಾಖಲೆಯಾಗಿತ್ತು.

    ಹಲವು ವಿಡಂಬನಾ ನಾಟಕಗಳಲ್ಲಿ ನಟಿಸಿದ್ದ ಬಾಳಪ್ಪ ಅವರು ಬಸವೇಶ್ವರ ಪಾತ್ರದ ಮೂಲಕ ಉತ್ತರ ಕರ್ನಾಟಕದಲ್ಲಿ ಮನೆ ಮಾತಾಗಿದ್ದರು. ಕನ್ನಡ ಚಿತ್ರಗಳಲ್ಲೂ ನಟಿಸಿದ್ದ ಬಾಳಪ್ಪ ಅವರು ಶಿವರಾಜ್ ಕುಮಾರ್ ಅಭಿನಯಿಸಿದ್ದ ಗಡಿ ಬಿಡಿ ಕೃಷ್ಣ ಚಿತ್ರದಲ್ಲಿ ಪ್ರಮುಖ ಪಾತ್ರ ಮಾಡಿದ್ದರು.

  • ಸಂಗೊಳ್ಳಿ ರಾಯಣ್ಣ ಚಿತ್ರದ ನಿರ್ಮಾಪಕ ಆನಂದ್ ಅಪ್ಪುಗೋಳ್‍ಗೆ ಆರ್ಥಿಕ ಸಂಕಷ್ಟ

    ಸಂಗೊಳ್ಳಿ ರಾಯಣ್ಣ ಚಿತ್ರದ ನಿರ್ಮಾಪಕ ಆನಂದ್ ಅಪ್ಪುಗೋಳ್‍ಗೆ ಆರ್ಥಿಕ ಸಂಕಷ್ಟ

    ಬೆಳಗಾವಿ: ಖ್ಯಾತ ನಿರ್ಮಾಪಕ ಆನಂದ ಅಪ್ಪುಗೋಳ್ ಅವರು ಅಧ್ಯಕ್ಷರಾಗಿರುವ ಸಂಗೊಳ್ಳಿ ರಾಯಣ್ಣ ಕೋ ಆಪರೇಟಿವ್ ಕ್ರೆಡಿಟ್ ಸೊಸೈಟಿ ಆರ್ಥಿಕ ಸ್ಥಿತಿ ಸಂಕಷ್ಟದಲ್ಲಿದೆ. ನೋಟ್ ಬ್ಯಾನ್ ಆದ ನಂತರ ಸುಧಾರಿಸಿಕೊಳ್ಳಲಾಗದೇ ಬ್ಯಾಂಕ್‍ನ ಆರ್ಥಿಕ ಸ್ಥಿತಿ ಬಿಗಡಾಯಿಸಿದೆ.

    ಸುಮಾರು 300 ಕೋಟಿ ರೂಪಾಯಿ ಠೇವಣಿ, 50 ಸಾವಿರ ಖಾತೆ ಹಾಗೂ 50 ಬ್ರಾಂಚ್ ಹೊಂದಿದ ಸೊಸೈಟಿ ಈಗ ರೋಗಗ್ರಸ್ಥವಾಗಿರುವ ಹಿನ್ನೆಲೆಯಲ್ಲಿ ಗ್ರಾಹಕರು ಹಣ ವಾಪಸ್ ನೀಡುವಂತೆ ಪಟ್ಟು ಹಿಡಿದ್ದಾರೆ.

    ಈ ಕುರಿತಾಗಿ ಮಾಧ್ಯಮಗಳ ಜೊತೆ ಮಾತನಾಡಿದ ಆನಂದ ಅಪ್ಪುಗೋಳ್ ಅವರು, ಶೇ.35 ರಷ್ಟು ಹಣವನ್ನು ರಿಯಲ್ ಎಸ್ಟೇಟ್ ಮೇಲೆ ಹೂಡಿಕೆ ಮಾಡಿದ್ದೇವೆ. ಇದರಿಂದಾಗಿ ನಮಗೆ ಸಂಕಷ್ಟವಾಗಿದೆ. ಗ್ರಾಹಕರು ಯಾರು ಹೆದರುವ ಅವಶ್ಯಕತೆ ಇಲ್ಲ. ನನ್ನ ಸಮಸ್ತ ಆಸ್ತಿಯನ್ನ ಮಾರಿ ನಿಮ್ಮ ಹಣವನ್ನು ನೀಡುತ್ತೇನೆ. ದಯವಿಟ್ಟು ಸ್ವಲ್ಪ ಕಾಲಾವಕಾಶ ಕೊಡಿ ಎಂದು ಮನವಿ ಮಾಡಿದರು.

    ನಾನು ಸತ್ತರೆ ನಿಮ್ಮೆಲ್ಲರ ಠೇವಣಿ ಹಣವನ್ನು ಕೊಟ್ಟು ಸಾಯುತ್ತೇನೆ. ಆದರೆ ಇವತ್ತು ನಾನು ನನ್ನ ಕುಟುಂಬ ಉಳಿಸಿಕೊಂಡು ಬದುಕಿಲ್ಲ. ನನ್ನ ಕುಟುಂಬ ಅಂದರೆ ಸಂಗೊಳ್ಳಿ ರಾಯಣ್ಣ ಪರಿವಾರ, ಠೇವಣಿದಾರರು ಮತ್ತು ಸಾಲಗಾರರು ಅವರೇ ನನ್ನ ಕುಟುಂಬದವರು. ನಾನು ಎಲ್ಲಿಯೂ ಓಡಿಹೋಗಲ್ಲ, ಸಾಯುವುದಿಲ್ಲ ಸ್ವಲ್ಪ ನನಗೆ ನಿಮ್ಮ ಹಣವನ್ನು ಕೊಡಲಿಕ್ಕೆ ಅವಕಾಶ ಮಾಡಿಕೊಡಿ ಎಂದು ವಿನಂತಿಸಿದರು. ಆರ್ಥಿಕ ಸಂಕಷ್ಟದಲ್ಲಿ ಸಿಲುಕಿದ ಬ್ಯಾಂಕ್ ನ ಪರಿಸ್ಥಿತಿಯನ್ನು ವಿವರಿಸಿ ಮಾಧ್ಯಮದವರ ಮುಂದೆ ಆನಂದ ಅಪ್ಪುಗೋಳ್ ಕಣ್ಣೀರಿಟ್ಟರು.

  • ರಾಖಿ ಖರೀದಿಸಲು ಪತಿ ಹಣ ಕೊಡಲಿಲ್ಲವೆಂದು ಪತ್ನಿ ಆತ್ಮಹತ್ಯೆ

    ರಾಖಿ ಖರೀದಿಸಲು ಪತಿ ಹಣ ಕೊಡಲಿಲ್ಲವೆಂದು ಪತ್ನಿ ಆತ್ಮಹತ್ಯೆ

    ಬೆಳಗಾವಿ: ಸಹೋದರನಿಗೆ ರಾಖಿ ಖರೀದಿಸಲು ಪತಿ ಹಣ ಕೊಡಲಿಲ್ಲ ಎಂದು ಪತ್ನಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಗರದಲ್ಲಿ ನಡೆದಿದೆ.

    ಜಿಲ್ಲೆಯ ಮಲಪ್ರಭಾ ನಗರದಲ್ಲಿ ಈ ಘಟನೆ ಸಂಭವಿಸಿದ್ದು, ಮಹಾದೇವಿ ಗೊಲ್ಲರ(23) ನೇಣಿಗೆ ಶರಣಾದ ಮಹಿಳೆ. ಮಹಾದೇವಿ ತನ್ನ ಸಹೋದರನಿಗೆ ರಾಖಿ ಕಟ್ಟಲು ಪತಿಯ ಬಳಿ 10 ರೂ. ಕೇಳಿದ್ದಳು. ಆದರೆ ಪತಿ ಕೊಡಲಿಲ್ಲ ಎಂಬ ಕಾರಣಕ್ಕೆ ಪತ್ನಿ ನೇಣಿಗೆ ಶರಣಾಗಿದ್ದಾರೆ.

    ಅಶೋಕ್ ಮತ್ತು ಮಹಾದೇವಿ ಮೂರು ವರ್ಷಗಳ ಹಿಂದೆ ಪ್ರೀತಿಸಿ ಮದುವೆ ಆಗಿದ್ದರು. ಸದ್ಯ ಪತಿ ಅಶೋಕ್ ಗೊಲ್ಲರ ವಿರುದ್ಧ ಕೊಲೆ ಯತ್ನ ಎಂದು ಶಹಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಅಶೋಕನ ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

  • ರಾಖಿ ಕಟ್ಟಿದ್ದಕ್ಕೆ ಸಹೋದರಿಯರಿಗೆ ಸಹೋದರರಿಂದ ಶೌಚಾಲಯ ಗಿಫ್ಟ್!

    ರಾಖಿ ಕಟ್ಟಿದ್ದಕ್ಕೆ ಸಹೋದರಿಯರಿಗೆ ಸಹೋದರರಿಂದ ಶೌಚಾಲಯ ಗಿಫ್ಟ್!

    ಬೆಳಗಾವಿ: ರಾಖಿ ಕಟ್ಟಿದ ಸಹೋದರಿಯರಿಗೆ ಸಹೋದರರು ಶೌಚಾಲಯವನ್ನು ಗಿಫ್ಟ್ ನೀಡುವ ಮೂಲಕ ವಿಶಿಷ್ಟವಾಗಿ ರಕ್ಷಾ ಬಂಧನ ಹಬ್ಬವನ್ನು ಆಚರಿಸಿದ್ದಾರೆ.

    ಬೆಳಗಾವಿ ತಾಲೂಕಿನ ಹುಲ್ಯಾನೂರು ಗ್ರಾಮಸ್ಥರು ರಕ್ಷಾ ಬಂಧನದ ಹಿನ್ನೆಲೆಯಲ್ಲಿ ಸಹೋದರಿಯರಿಗೆ ಸ್ವಾಭಿಮಾನ-ರಕ್ಷಣೆಯ ಸಂಕೇತವಾಗಿ ಶೌಚಾಲಯವನ್ನು ಗಿಫ್ಟ್ ನೀಡಿದ್ದಾರೆ.

    ಈ ಹುಲ್ಯಾನೂರು ಗ್ರಾಮದಲ್ಲಿ 35 ಶೌಚಾಲಯ ಏಕಕಾಲಕ್ಕೆ ಉಡುಗರೆ ರೂಪದಲ್ಲಿ ನೀಡಲಾಯಿತು. ಈ ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯಿತಿ ಸಿಇಓ ರಾಮಚಂದ್ರನ್ ಸೇರಿ ಅನೇಕ ಅಧಿಕಾರಿಗಳು ಭಾಗವಹಿಸಿದ್ದರು.

    ಇತ್ತೀಚಿಗೆ ಬೆಳಗಾವಿ ಜಿಲ್ಲಾ ಪಂಚಾಯತ್ ಶೌಚಾಲಯ ನಿರ್ಮಿಸಿದ ಗರ್ಭಿಣಿಯರಿಗೆ ಸೀಮಂತ ಕಾರ್ಯ ಮಾಡುವ ಮೂಲಕ ಗಮನ ಸೆಳೆದಿತ್ತು. ಈಗ ರಕ್ಷ ಬಂಧನಕ್ಕೆ ಶೌಚಾಲಯವನ್ನು ಗಿಫ್ಟ್ ಕೊಡುವ ಮೂಲಕ ಗ್ರಾಮೀಣ ಭಾಗದಲ್ಲಿ ಸ್ವಚ್ಛತೆ ಬಗ್ಗೆ ಜಾಗೃತಿ ಮೂಡಿಸಲಾಗುತ್ತಿದೆ.

  • ರಸ್ತೆ ಅಫಘಾತದಲ್ಲಿ ಮೃತಪಟ್ಟ ಕೋತಿಗೆ ನ್ಯಾಯವಾದಿಗಳಿಂದ ಅಂತ್ಯಸಂಸ್ಕಾರ

    ರಸ್ತೆ ಅಫಘಾತದಲ್ಲಿ ಮೃತಪಟ್ಟ ಕೋತಿಗೆ ನ್ಯಾಯವಾದಿಗಳಿಂದ ಅಂತ್ಯಸಂಸ್ಕಾರ

    ಬೆಳಗಾವಿ: ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿದ ಕೋತಿಗೆ ವಿಧಿ ವಿಧಾನಗಳೊಂದಿಗೆ ನ್ಯಾಯವಾದಿಗಳು ಅಂತ್ಯಸಂಸ್ಕಾರ ನಡೆಸಿದ ಘಟನೆ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ಪಟ್ಟಣದಲ್ಲಿ ನಡೆದಿದೆ.

    ಚಿಕ್ಕೋಡಿ ಬೆಳಗಾವಿ ರಸ್ತೆ ನ್ಯಾಯಾಲಯದ ಎದುರು ಶುಕ್ರವಾರ ಸಂಜೆ ಕೋತಿಯೊಂದು ಮೃತಪಟ್ಟಿತ್ತು. ಇದನ್ನು ಗಮನಿಸಿದ ನ್ಯಾಯವಾದಿಗಳು ಹಾಗೂ ಸಾರ್ವಜನಿಕರು ಕೋತಿಯ ಮೃತದೇಹಕ್ಕೆ ಪೂಜೆ ನೆರವೇರಿಸಿ ಅಂತಿಮ ದರ್ಶನ ಪಡೆದುಕೊಂಡರು.

    ಬಳಿಕ ವಾದ್ಯ ಮೇಳದೊಂದಿಗೆ ಮೆರವಣಿಗೆ ನಡೆಸಿ ಕೋರ್ಟ್ ಆವರಣದಲ್ಲಿ ಶಾಸ್ತ್ರೋಕ್ತವಾಗಿ ಅಂತ್ಯಕ್ರಿಯೆ ನೆರವೇರಿಸಿದರು. ಅಂತ್ಯಕ್ರಿಯೆ ನೆರವೇರಿದ ಸ್ಥಳದಲ್ಲಿ ಆಂಜನೇಯ ದೇವಸ್ಥಾನ ನಿರ್ಮಾಣ ಮಾಡಲು ನ್ಯಾಯವಾದಿಗಳು ತೀರ್ಮಾನಿಸಿದ್ದಾರೆ.

  • ಶಾಕಿಂಗ್ ವಿಡಿಯೋ: ಸ್ನೇಹಿತರ ಪ್ರಚೋದನೆಯಿಂದ ಪ್ರಪಾತಕ್ಕೆ ಹಾರಿ ಇಬ್ಬರು ಯುವಕರ ಆತ್ಮಹತ್ಯೆ

    ಶಾಕಿಂಗ್ ವಿಡಿಯೋ: ಸ್ನೇಹಿತರ ಪ್ರಚೋದನೆಯಿಂದ ಪ್ರಪಾತಕ್ಕೆ ಹಾರಿ ಇಬ್ಬರು ಯುವಕರ ಆತ್ಮಹತ್ಯೆ

    ಬೆಳಗಾವಿ: ಸ್ನೇಹಿತರ ಪ್ರಚೋದನೆಯಿಂದ ಕುಡಿದ ಮತ್ತಿನಲ್ಲಿ ಪ್ರಪಾತಕ್ಕೆ ಹಾರಿ ಇಬ್ಬರು ಯುವಕರು ಆತ್ಮಹತ್ಯೆ ಮಾಡಿಕೊಂಡಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

    ಮಹಾರಾಷ್ಟ್ರದ ಪ್ರಸಿದ್ಧ ಪ್ರವಾಸಿ ತಾಣ ಅಂಬೋಲಿ ಬಳಿಯ ಕವಳಾ ಸೇಟ್ ಪಾಯಿಂಟ್ ನಲ್ಲಿ ಈ ಘಟನೆ ಸಂಭವಿಸಿದೆ. ಕೊಲ್ಲಾಪುರ ಜಿಲ್ಲೆಯ ಗಡಿಂಗ್ಲಜ್ ಮೂಲದ ಇಮ್ರಾನ್ ಗರಡಿ (25) ಮತ್ತು ಪ್ರಸಾದ್ ರಾಥೋಡ್ (21) ಮೃತ ದುರ್ದೈವಿಗಳು.

    ಇಬ್ಬರು ಸ್ನೇಹಿತರು ಕೈಯಲ್ಲಿ ಮದ್ಯದ ಬಾಟಲಿ ಹಿಡಿದು ಪ್ರಪಾತಕ್ಕೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೂರು ದಿನಗಳ ಹಿಂದೆ ಏಳು ಸ್ನೇಹಿತರ ಜೊತೆಗೆ ಪ್ರವಾಸಕ್ಕೆ ಬಂದಾಗ ಈ ದುರ್ಘಟನೆ ಸಂಭವಿಸಿದೆ.

    ಇಬ್ಬರು ಯುವಕರು ಕೈಯಲ್ಲಿ ಮದ್ಯದ ಬಾಟಲಿ ಹಿಡಿದು ತಡೆಗೋಡೆಯ ಮೇಲೆ ಹತ್ತಿದ್ದಾರೆ. ನಂತರ ಸ್ವಲ್ಪ ಸಮಯ ಅಲ್ಲೇ ಕುಡಿದ ಮತ್ತಿನಲ್ಲಿ ತೂರಾಡಿದ್ದಾರೆ. ಅದರಲ್ಲೊಬ್ಬ ಪಕ್ಕದಲ್ಲೇ ಇದ್ದ ಕೊಳದ ನೀರಿಗೆ ಇಳಿದು ಮತ್ತೆ ಎದ್ದು ಬಂದಿದ್ದಾನೆ. ಈ ವೇಳೆ ಅಲ್ಲೇ ಇದ್ದ ಅವರ ಸ್ನೇಹಿತರು ಕಿರುಚುತ್ತಾ ಚೇಡಿಸೋದನ್ನ ವಿಡಿಯೋದಲ್ಲಿ ಕೇಳಬಹುದು. ನಂತರ ಯುವಕರು ಮತ್ತೊಮ್ಮೆ ತಡೆಗೋಡೆ ಮೇಲೆ ಹತ್ತಿ ಮತ್ತೊಂದು ಬದಿಗೆ ಹೋಗಿ ಕೈ ಕೈ ಹಿಡಿದುಕೊಂಡಿದ್ದು ನೋಡನೋಡ್ತಿದ್ದಂತೆ ಕೆಳಗೆ ಧುಮುಕಿದ್ದಾರೆ.

    ಇನ್ನೂ ಮೃತರ ಶವಗಳು ಪತ್ತೆಯಾಗಿಲ್ಲ. ಈ ಕುರಿತು ಮಹಾರಾಷ್ಟ್ರದ ಅಂಬೋಲಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ತಿಳಿದುಬಂದಿದೆ.

    https://youtu.be/eWiIftqSqjA

     

  • ಜಮೀನಿನಲ್ಲಿ ತುಂಡಾಗಿ ಬಿದ್ದಿದ್ದ ವಿದ್ಯುತ್ ಸ್ಪರ್ಶಿಸಿ ಇಬ್ಬರ ಸಾವು

    ಜಮೀನಿನಲ್ಲಿ ತುಂಡಾಗಿ ಬಿದ್ದಿದ್ದ ವಿದ್ಯುತ್ ಸ್ಪರ್ಶಿಸಿ ಇಬ್ಬರ ಸಾವು

    ಬೆಳಗಾವಿ: ಜಮೀನಿನಲ್ಲಿ ಪಂಪ್ ಸೆಟ್‍ಗೆ ಅಳವಡಿಸಲಾಗಿದ್ದ ವಿದ್ಯುತ್ ತಂತಿ ತುಂಡಾಗಿ ಬಿದ್ದಿದ್ದು, ತಂತಿ ತಗುಲಿ ಇಬ್ಬರು ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಯಕ್ಸಂಬಾ ಪಟ್ಟಣದಲ್ಲಿ ನಡೆದಿದೆ.

    ಪಾಂಡುರಂಗ ಡೊಂಗರೆ (50) ಹಾಗೂ ಮುಕ್ತಾಬಾಯಿ ಪೂಜೇರಿ(34) ಸ್ಥಳದಲ್ಲಿಯೇ ಮೃತ ಪಟ್ಟ ದುರ್ದೈವಿಗಳು. ಜಮೀನಿನಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾಗ ಪಂಪಸೆಟ್ ಗೆ ಅಳವಡಿಸಿದ್ದ ತಂತಿ ತುಂಡಾಗಿ ಬಿದ್ದದನ್ನು ಗಮನಿಸದೆ ಮೊದಲು ಪಾಂಡುರಂಗ ಅವರಿಗೆ ಸ್ಪರ್ಶವಾಗಿ ವಿದ್ಯುತ್ ತಗುಲಿದೆ. ಇದನ್ನು ಗಮನಿಸಿ ವಿದ್ಯುತ್ ತಂತಿಯನ್ನು ಬಿಡಿಸಲು ಹೋಗಿ ಮುಕ್ತಾದೇವಿಗೂ ಸಹ ವಿದ್ಯುತ್ ಸ್ಪರ್ಶಿಸಿ ಇಬ್ಬರೂ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ.

    ಸ್ಥಳಕ್ಕೆ ಸದಲಗಾ ಪೊಲೀಸರು ಹಾಗೂ ಹೆಸ್ಕಾಂ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಬಗ್ಗೆ ಸದಲಗಾ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

  • ಬೆಳಗಾವಿಯಲ್ಲಿ ಭಾರೀ ವಿದ್ಯುತ್ ಅವಘಡಕ್ಕೆ ಇಬ್ಬರು ಬಲಿ- 6 ಮಂದಿಗೆ ಗಾಯ, ಮೂವರ ಸ್ಥಿತಿ ಗಂಭೀರ

    ಬೆಳಗಾವಿಯಲ್ಲಿ ಭಾರೀ ವಿದ್ಯುತ್ ಅವಘಡಕ್ಕೆ ಇಬ್ಬರು ಬಲಿ- 6 ಮಂದಿಗೆ ಗಾಯ, ಮೂವರ ಸ್ಥಿತಿ ಗಂಭೀರ

    ಬೆಳಗಾವಿ: ಕುಂದಾನಗರಿ ಬೆಳಗಾವಿಯಲ್ಲಿ ಭಾರೀ ವಿದ್ಯುತ್ ಅವಘಡ ಸಂಭವಿಸಿದ ಪರಿಣಾಮ ಇಬ್ಬರು ಸ್ಥಳದಲ್ಲೇ ಸಾವನಪ್ಪಿದ ಘಟನೆ ಇಂದು ನಡೆದಿದೆ.

    45 ವರ್ಷದ ಪರಶುರಾಮ ಕಠಾರೆ, 25 ವರ್ಷದ ಗೋಪಾಲ ಸೊಲಗನ್ನವರ ವಿದ್ಯುತ್ ಅವಘಡಕ್ಕೆ ಬಲಿಯಾದ ದುರ್ದೈವಿಗಳು. ಘಟನೆಯಲ್ಲಿ 6 ಜನರಿಗೆ ಗಂಭೀರ ಗಾಯಗಳಾಗಿದ್ದು, ಮೂವರ ಸ್ಥಿತಿ ಚಿಂತಾಜನಕವಾಗಿದೆ. ಸದ್ಯ ಗಾಯಾಳುಗಳು ಬೆಳಗಾವಿ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

    ಗಾಂಧಿನಗರದಲ್ಲಿ ಹೋಟೆಲ್ ನಾಮಫಲಕ ಅಳವಡಿಕೆ ವೇಳೆ ಈ ದುರ್ಘಟನೆ ಸಂಭವಿಸಿದೆ ಎನ್ನಲಾಗಿದೆ. ಸ್ಥಳಕ್ಕೆ ಡಿಸಿಪಿ ಸೀಮಾ ಲಾಟಕರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

  • ಭಾರೀ ಮಳೆಯಿಂದ ಗೋಕಾಕ್ ಜಲಪಾತಕ್ಕೆ ಜೀವ ಕಳೆ: ವಿಡಿಯೋ ನೋಡಿ

    ಭಾರೀ ಮಳೆಯಿಂದ ಗೋಕಾಕ್ ಜಲಪಾತಕ್ಕೆ ಜೀವ ಕಳೆ: ವಿಡಿಯೋ ನೋಡಿ

    ಬೆಳಗಾವಿ: ಮಹಾರಾಷ್ಟ್ರ ಪಶ್ಚಿಮ ಘಟ್ಟ ಪ್ರದೇಶದಲ್ಲಿ ಭಾರೀ ಮಳೆ ಹಿನ್ನೆಲೆಯಲ್ಲಿ ಘಟಪ್ರಭಾ, ಮಾರ್ಕಂಡೇಯ ನದಿಗೆ ಒಳ ಹರಿವಿನ ಪ್ರಮಾಣ ಹೆಚ್ಚಾಗಿದೆ.

    ಕರ್ನಾಟಕ ಎರಡನೇ ಅತಿ ದೊಡ್ಡ ಜಲಪಾತ ಎಂದು ಹೆಸರುವಾಸಿಯಾದ ಈಗ ಈ ಫಾಲ್ಸ್ ಗೆ ಜೀವ ಕಳೆ ತುಂಬಿದೆ. ಈ ಫಾಲ್ಸ್‍ನ್ನು ಜನರು ನೋಡಲು ಮುಗಿಬಿದ್ದಿದ್ದಾರೆ. ಈ ಜಲಧಾರೆಯನ್ನು ನೋಡಿ ಜನರು ಸಂತಸಗೊಳ್ಳುತ್ತಿದ್ದಾರೆ.

     

  • ಸಚಿವ ಡಿ.ಕೆ.ಶಿವಕುಮಾರ್ ಹೆಸರು ಹೇಳಿಕೊಂಡು ವಂಚನೆ ಮಾಡುತ್ತಿದ್ದ ವ್ಯಕ್ತಿಯ ಬಂಧನ

    ಸಚಿವ ಡಿ.ಕೆ.ಶಿವಕುಮಾರ್ ಹೆಸರು ಹೇಳಿಕೊಂಡು ವಂಚನೆ ಮಾಡುತ್ತಿದ್ದ ವ್ಯಕ್ತಿಯ ಬಂಧನ

    ಬೆಳಗಾವಿ: ಸಚಿವ ಡಿ.ಕೆ.ಶಿವಕುಮಾರ್ ಹೆಸರು ಹೇಳಿಕೊಂಡು ವಂಚನೆ ಮಾಡುತ್ತಿದ್ದ ವ್ಯಕ್ತಿಯನ್ನ ಬೆಳಗಾವಿ ಜಿಲ್ಲೆಯ ರಾಮದುರ್ಗ ಪೊಲೀಸರು ಬಂಧಿಸಿದ್ದಾರೆ.

    ಡಿ.ಕೆ.ಶಿವಕುಮಾರ್ ಅಭಿಮಾನಿಗಳ ಸಂಘದ ಮಾಜಿ ಜಿಲ್ಲಾಧ್ಯಕ್ಷ ಅನ್ವರ್ ಜಮಾದಾರ್ ಬಂಧಿತ ಆರೋಪಿ. ಈತ ಹೆಸ್ಕಾಂನಲ್ಲಿ ಲೈನ್ ಮ್ಯಾನ್ ಸೇರಿದಂತೆ ವಿವಿಧ ಹುದ್ದೆ ಕೊಡಿಸುವುದಾಗಿ ಹೇಳಿ ಹಣ ಪಡೆದು 30ಕ್ಕೂ ಹೆಚ್ಚು ಜನರಿಗೆ ವಂಚನೆ ಮಾಡಿದ್ದ.

    ಬೆಳಗಾವಿ, ಬಾಗಲಕೋಟೆ ಹಾಗೂ ವಿಜಯಪುರ ಜಿಲ್ಲೆಗಳ ಜನರಿಗೆ ಹಣ ಪಡೆದು ವಂಚನೆ ಮಾಡಿದ್ದ. ಹಣ ವಾಪಸ್ ಕೊಡುವಂತೆ ಕೇಳಿದಾಗ ತಲೆಮರೆಸಿಕೊಂಡಿದ್ದ.

    ಇದ್ರಿಂದ ಕಂಗಾಲಾದ ಜನ ಬೆಳಗಾವಿ ಅಧಿವೇಶನದ ವೇಳೆ ಈ ವಿಷಯವನ್ನ ಡಿ.ಕೆ.ಶಿವಕುಮಾರ್ ಗಮನಕ್ಕೆ ತಂದಿದ್ರು. ಈ ವೇಳೆ ಡಿಕೆಶಿ ಸೂಚನೆ ಮೇರೆಗೆ ಹನುಮಂತ ಉಗಾರೆ ಎಂಬುವರು ದೂರು ನೀಡಿದ್ರು. ಹಣ ನೀಡಿದ್ದನ್ನು ಉಗಾರೆ ತನ್ನ ಮೊಬೈಲ್‍ನಲ್ಲಿ ಚಿತ್ರೀಕರಿಸಿಕೊಂಡಿದ್ದರು. ಇವರ ದೂರು ಹಾಗೂ ಸಾಕ್ಷಿ ಮೇರೆಗೆ ಅನ್ವರ್‍ನನ್ನ ಪೊಲೀಸರು ವಶಕ್ಕೆ ಪಡೆದಿದ್ದಾರೆ.