Tag: Bella

  • ಮೋದಿಗೆ ಬೆಲ್ಲದ ಉಡುಗೊರೆ ನೀಡಿ ಮುಖದಲ್ಲಿ ಮಂದಹಾಸ ತರಿಸಿದ ಸಂಸದೆ ಸುಮಲತಾ

    ಮೋದಿಗೆ ಬೆಲ್ಲದ ಉಡುಗೊರೆ ನೀಡಿ ಮುಖದಲ್ಲಿ ಮಂದಹಾಸ ತರಿಸಿದ ಸಂಸದೆ ಸುಮಲತಾ

    ನ್ನಡದ ಹಿರಿಯ ನಟಿ, ಮಂಡ್ಯ (Mandya) ಕ್ಷೇತ್ರದ ಸಂಸದೆ ಸುಮಲತಾ ಅಂಬರೀಶ್ (Sumalata Ambarish), ಬೆಂಗಳೂರು-ಮೈಸೂರು ದಶಪಥ ಹೆದ್ದಾರಿ ಲೋಕಾರ್ಪಣೆ ಮಾಡಿದ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರಿಗೆ ಉಡುಗೊರೆಯಾಗಿ ಬೆಲ್ಲ (Organic Jaggery) ನೀಡಿದರು. ಇಂದು ಮಂಡ್ಯದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮೋದಿಗೆ ಉಡುಗೊರೆಯಾಗಿ ಬೆಲ್ಲ ನೀಡಿದಾಗ, ಪ್ರಧಾನಿ ಮುಖದಲ್ಲಿ ಮಂದಹಾಸವಿತ್ತು. ಅಲ್ಲದೇ, ಪಕ್ಕದಲ್ಲೇ ಇದ್ದ ಸಿಎಂ ಬಸವರಾಜ ಬೊಮ್ಮಾಯಿಗೆ ಕ್ಷಣ ಹೊತ್ತು ಉಡುಗೊರೆ ಬಗ್ಗೆ ವಿವರಿಸಿದ್ದು ವಿಶೇಷವಾಗಿತ್ತು.

    ಈ ಕುರಿತಾಗಿ ಸುಮಲತಾ ಅಂಬರೀಶ್ ತಮ್ಮ ಫೇಸ್ ಬುಕ್ ಪೇಜ್ ನಲ್ಲಿ, ‘ನನ್ನ ಸ್ವಾಭಿಮಾನಿ ಮಂಡ್ಯ ಕ್ಷೇತ್ರದಲ್ಲಿ ಬೆಂಗಳೂರು-ಮೈಸೂರು ದಶಪಥ ಹೆದ್ದಾರಿಯನ್ನು ಲೋಕಾರ್ಪಣೆ ಮಾಡಿದ ಹೆಮ್ಮೆಯ ಪ್ರಧಾನ ಮಂತ್ರಿಗಳಾದ ಮಾನ್ಯ ಶ್ರೀ ನರೇಂದ್ರ ಮೋದಿ ಅವರಿಗೆ, ಮಂಡ್ಯದ ಗುರುತಾಗಿರುವ ‘ಬೆಲ್ಲ’ವನ್ನು ಉಡುಗೊರೆಯಾಗಿ ನೀಡಿದೆ. ಮಾನ್ಯ ಪ್ರಧಾನ ಮಂತ್ರಿಗಳು ಅತ್ಯಂತ ಪ್ರೀತಿ ಮತ್ತು ಗೌರವದಿಂದ ಈ ನೆಲದ ಅಸ್ಮಿತೆಯಾಗಿರುವ ಬೆಲ್ಲದ ಉಡುಗೊರೆಯನ್ನು ಸ್ವೀಕರಿಸಿದ್ದು ಸಂಭ್ರಮ ತಂದಿದೆ’ ಎಂದು ಬರೆದುಕೊಂಡಿದ್ದಾರೆ. ಇದನ್ನೂ ಓದಿ: ಲಿಂಗಭೈರವಿ ದೇವಿಯ ಮೋರೆ ಹೋದ ಸಮಂತಾ

    ಮಂಡ್ಯ ಸಕ್ಕರೆ ಮತ್ತು ಬೆಲ್ಲದ ನಾಡು. ಕಬ್ಬು ಈ ಭಾಗದ ಪ್ರಮುಖ ಬೆಳೆಯೂ ಹೌದು. ಸುಮಲತಾ ಸಂಸದೆಯಾದ ನಂತರ ಮಂಡ್ಯದಲ್ಲಿ ತಯಾರಾಗುವ ಬೆಲ್ಲದ ಬಗ್ಗೆ ಸಂಸತ್ತಿನಲ್ಲೂ ಮಾತನಾಡಿದ್ದರು. ಬೆಲ್ಲದ ಹಿರಿಮೆಯನ್ನು ಎತ್ತಿ ಹಿಡಿದಿದ್ದರು. ಅಲ್ಲದೇ, ಸಾವಯವ ಬೆಲ್ಲಕ್ಕೆ ಬೆಂಬಲ ಬೆಲೆ ಘೋಷಿಸಿಬೇಕೆಂದು ಸಂಸತ್ತಿನಲ್ಲಿ ಮನವಿ ಕೂಡ ಮಾಡಿದ್ದರು. ಕಬ್ಬು ಬೆಳೆಗಾರರ ಅನೇಕ ಹೋರಾಟಗಳಲ್ಲಿ ಭಾಗಿಯಾದವರು. ಹಾಗಾಗಿ ರೈತರ ಪರವಾಗಿ ಬೆಲ್ಲವನ್ನು ಪ್ರಧಾನಿಗೆ ನೀಡಿದ್ದಾರೆ.

    ಪ್ರಧಾನಿಗೆ ಇಂದು ನೀಡಿದ ಉಡುಗೊರೆಯಲ್ಲಿ ಬೆಲ್ಲದುಡುಗೊರೆ ವಿಶೇಷವಾಗಿತ್ತು. ಅಲಂಕೃತ ಬುಟ್ಟಿಯಲ್ಲಿ ಬೆಲ್ಲದ ಚೌಕಾಕೃತಿಯ ತುಂಡುಗಳನ್ನು ಹಾಕಿ, ಸಾವಯವಬೆಲ್ಲವನ್ನೂ ಮೋದಿ ಅವರಿಗೆ ಉಡುಗೊರೆಯಾಗಿ ನೀಡಿದರು. ಈ ಬೆಲ್ಲದ ಕುರಿತು ಕೆಲ ಹೊತ್ತು ಮಾತೂ ಆಡಿದರು. ಈ ಸಂದರ್ಭದಲ್ಲಿ ಅಭಿಮಾನಿಗಳಿಂದ ಜೋರಾದ ಚಪ್ಪಾಳೆ ಕೂಡ ಕೇಳಿ ಬಂತು.

     

  • ಬೇವು-ಬೆಲ್ಲದ ಸಮರಸವೇ ಜೀವನ ಎಂದು ಸಾರುವ ಹಬ್ಬವೇ ಯುಗಾದಿ

    ಬೇವು-ಬೆಲ್ಲದ ಸಮರಸವೇ ಜೀವನ ಎಂದು ಸಾರುವ ಹಬ್ಬವೇ ಯುಗಾದಿ

    ಹಿಂದೂಗಳಲ್ಲಿ ಹಲವು ಹಬ್ಬಗಳಿವೆ, ಆದರೆ ಯುಗಾದಿ ಹಬ್ಬ ಬಹಳ ಮುಖ್ಯವಾದ ಹಬ್ಬ. ಏಕೆಂದರೆ ಇದು ಹಿಂದೂಗಳಿಗೆ ಹೊಸವರ್ಷದ ಮೊದಲ ದಿನವಾಗಿರುತ್ತೆ. ಹಿಂದೂಗಳು ಹೊಸಸಂಕಲ್ಪಗಳನ್ನು ಹಾಕಿಕೊಂಡು ಮುಂದೆ ನಡೆಯುವ ದಿನ ಇದು. ಯುಗಾದಿ ಎಂಬ ಪದ ಸಂಸ್ಕೃತದ ಯುಗ ಮತ್ತು ಆದಿ ಎಂಬ ಎರಡು ಪದಗಳಿಂದ ಕೂಡಿದೆ. ಈ ಯುಗಾದಿಯು ಕೃತಯುಗದ ಚೈತ್ರ ಶುದ್ಧ ಪಾಡ್ಯ ತಿಥಿ ದಿನದಂದು ಪ್ರಾರಂಭವಾಯಿತು ಎಂಬ ಪ್ರತೀತಿ ಇದೆ.

    Telugu New Year Ugadhi || How to make Ugadhi Pachadi - Subbu Cooks

    ಶತಾಯುರ್ವಜ್ರ ದೇಹಾಯ, ಸರ್ವ ಸಂಪತ್ಕರಾಯ ಚ
    ಸರ್ವಾರಿಷ್ಟ ವಿನಾಶಾಯ, ನಿಂಬಕಂ ದಳ ಭಕ್ಷಣಂ

    ಇದರರ್ಥ, ನೂರು ವರ್ಷಗಳ ಆಯುಷ್ಯ, ಸದೃಢ ಆರೋಗ್ಯ, ಸಕಲ ಸಂಪತ್ತುಗಳ ಪ್ರಾಪ್ತಿಗಾಗಿಯೂ, ಸಕಲಾರಿಷ್ಟ ನಿವಾರಣೆಗಾಗಿಯೂ ಬೇವು ಬೆಲ್ಲ ಸೇವನೆ ಮಾಡುತ್ತೇನೆ. ಈ ಶ್ಲೋಕ ಹೇಳಿ ಬೇವು-ಬೆಲ್ಲ ಸೇವಿಸಬೇಕು. ಬೇವಿನ ಎಲೆಗಳನ್ನು ಸೇವಿಸುವುದರಿಂದ ಸರ್ವ ಅನಿಷ್ಟಗಳು ನಾಶವಾಗುತ್ತೆ ಎಂದು ನಂಬಲಾಗುತ್ತೆ. ಬೆಲ್ಲ ಸಂತೋಷದ ಸಂಕೇತವಾಗಿರುತ್ತೆ. ಇವೆರೆಡು ಮನುಷ್ಯ ಜೀವನದ ಕಷ್ಟ-ಸುಖದ ಪ್ರತೀಕವಾಗಿದೆ.

    ಪುರಾಣದ ಪ್ರಕಾರ ಯುಗದಿ ದಿನದಂದು ಬ್ರಹ್ಮ ದೇವನು ಸೃಷ್ಟಿಯ ಕಾರ್ಯ ಆರಂಭಿಸಿದನೆಂಬ ಪ್ರತೀತಿಯಿದೆ. ಅಂದಿನಿಂದಲೇ ವರ್ಷ, ಖುತುಗಳು, ಮಾಸಗಳು, ಗ್ರಹಗಳು, ನಕ್ಷತ್ರಗಳು ಸೃಷ್ಟಿಸಿದನೆಂಬ ನಂಬಿಕೆಯಿದೆ. ಹಿಂದಿನ ವರ್ಷದ ಸಾಧನೆಗಳನ್ನು ಪರಿಶೀಲಿಸಿ, ಈ ವರ್ಷ ನಾವು ಯಾವ ರೀತಿ ಕಾರ್ಯಪ್ರವೃತ್ತರಾಗಬೇಕು ಎಂದು ಯೋಜನೆ ಹಾಕಿಕೊಳ್ಳುವ ದಿನ ಇಂದು.

    ಯುಗಾದಿ ಹಿನ್ನೆಲೆ: ಅಸುರೀ ಶಕ್ತಿಯ ವಿರುದ್ಧ ಸಾತ್ವಿಕ ಶಕ್ತಿಯ ವಿಜಯವೇ ಯುಗಾದಿಯ ವೈಶಿಷ್ಟ. ಈ ದಿನ ಶ್ರೀ ರಾಮ ರಾವಣನನ್ನು ಕೊಂದು ಅಯೋಧ್ಯೆಗೆ ಬಂದು ರಾಮರಾಜ್ಯವಾಳಲು ಪ್ರಾರಂಭಿಸಿದ. ಅಯೋಧ್ಯೆ ಪ್ರಜೆಗಳು ಸಂತೋಷಪಟ್ಟು, ಮನೆಯ ಮುಂದೆ ವಿಜಯ ಪತಾಕೆ ಹಾರಿಸುವ ದಿನ. ಇಂದಿಗೂ ಸಹ ಈ ಹಬ್ಬದ ದಿನ ಮನೆಯ ಮುಂದೆ ಬಾವುಟ ಹಾರಿಸಿ ನಲಿಯುವ ಪದ್ದತಿ ಇದೆ.