Tag: Bellamkonda Sai Srinivas

  • ಡೇಟಿಂಗ್ ವಿಚಾರದಲ್ಲಿ ಸಿಕ್ಕಾಪಟ್ಟೆ ಗೊಂದಲ ಸೃಷ್ಟಿಸ್ತಿದ್ದಾರೆ ರಶ್ಮಿಕಾ ಮಂದಣ್ಣ

    ಡೇಟಿಂಗ್ ವಿಚಾರದಲ್ಲಿ ಸಿಕ್ಕಾಪಟ್ಟೆ ಗೊಂದಲ ಸೃಷ್ಟಿಸ್ತಿದ್ದಾರೆ ರಶ್ಮಿಕಾ ಮಂದಣ್ಣ

    ನ್ಯಾಷನಲ್ ಕ್ರಶ್ ರಶ್ಮಿಕಾ ಮಂದಣ್ಣ (Rashmika Mandanna) ಡೇಟಿಂಗ್ (Dating) ವಿಚಾರದಲ್ಲಿ ತಮ್ಮ ಅಭಿಮಾನಿಗಳನ್ನು ಗೊಂದಲಕ್ಕೆ ಸಿಲುಕಿಸಿದ್ದಾರಂತೆ. ರಶ್ಮಿಕಾ ಮಂದಣ್ಣ ಅಂದಾಕ್ಷಣ ಥಟ್ಟನೆ ನೆನಪಾಗುತ್ತಿದ್ದ ಮತ್ತೊಂದು ಹೆಸರು ವಿಜಯ್ ದೇವರಕೊಂಡ (Vijay Devarakonda) ಅವರದ್ದು. ಈ ಇಬ್ಬರೂ ಡೇಟಿಂಗ್ ಮಾಡುತ್ತಿದ್ದಾರೆ ಎಂದು ಹೇಳಲಾಗುತ್ತಿದೆ. ಅದಕ್ಕೆ ಸಾಕ್ಷಿ ಎನ್ನುವಂತೆ ಅವರಿಬ್ಬರೂ ಒಟ್ಟಿಗೆ ಇರುವ ಸಾಕಷ್ಟು ಫೋಟೋಗಳು ಮತ್ತು ವಿಡಿಯೋಗಳಿವೆ.

    ಫೋಟೋ ಮತ್ತು ವಿಡಿಯೋಗಳು ಮಾತ್ರವಲ್ಲ ಕಳೆದ ವರ್ಷ ಹೊಸ ವರ್ಷವನ್ನೂ ಅವರು ಗೋವಾದ ಹೋಟೆಲ್ ವೊಂದರಲ್ಲಿ ಆಚರಿಸಿದ್ದರು. ವಿದೇಶ ಪ್ರವಾಸವನ್ನೂ ಒಟ್ಟಿಗೆ ಮಾಡಿದ್ದರು. ತಾವಿಬ್ಬರೂ ಪ್ರೀತಿಸುತ್ತಿರುವ ವಿಚಾರವನ್ನು ಅವರು ಹಲವು ರೀತಿಯಲ್ಲಿ ವ್ಯಕ್ತ ಪಡಿಸಿದ್ದರು. ಆದರೆ, ದಿಢೀರ್ ಅಂತ ದೂರವಾದ ಸುದ್ದಿಯನ್ನೂ ಕೊಟ್ಟಿದ್ದರು.

    ಇತ್ತೀಚೆಗಷ್ಟೇ ಬೆಲ್ಲಂಕೊಂಡ ಸಾಯಿ ಶ್ರೀನಿವಾಸ್ (Bellamkonda Sai Srinivas) ಜೊತೆ ರಶ್ಮಿಕಾ ಹೆಸರು ಕೇಳಿ ಬಂದಿತ್ತು. ಇಬ್ಬರೂ ಅನೇಕ ಸಲ ಒಟ್ಟಿಗೆ ಹೋಟೆಲ್ ಗಳಲ್ಲಿ ಕಾಣಿಸಿಕೊಂಡರು. ಹಲವಾರು ಕಾರ್ಯಕ್ರಮಗಳಲ್ಲಿ ಜೊತೆಯಾಗಿಯೇ ಹೆಜ್ಜೆ ಹಾಕಿದ್ದರು. ಹಾಗಾಗಿ ಈ ಇಬ್ಬರೂ ಡೇಟಿಂಗ್ ಮಾಡುತ್ತಿದ್ದಾರೆ ಎಂದು ಸುದ್ದಿ ಆಯಿತು. ಈ ಸುದ್ದಿ ಇನ್ನೂ ಹಸಿಯಾಗಿರುವಾಗಲೇ ಮತ್ತೆ ವಿಜಯ್ ದೇವರಕೊಂಡ ಜೊತೆ ರಶ್ಮಿಕಾ ಇರುವುದು ಪತ್ತೆಯಾಗಿದೆ. ಇದು ನಾನಾ ಗೊಂದಲಗಳಿಗೂ ಕಾರಣವಾಗಿದೆ.

    rashmika hot images

    ಎರಡು ದಿನಗಳ ಹಿಂದೆಯಷ್ಟೇ ರಶ್ಮಿಕಾ ಮಂದಣ್ಣ ತಮ್ಮ ಹುಟ್ಟು ಹಬ್ಬವನ್ನು ಆಚರಿಸಿಕೊಂಡಿದ್ದಾರೆ. ಈ ಸಮಯದಲ್ಲಿ ಅವರು ಫೇಸ್ ಬುಕ್ ಲೈವ್ ಕೂಡ ಮಾಡಿದ್ದಾರೆ. ಅದು ವಿಜಯ್ ದೇವರಕೊಂಡ ಮನೆಯಿಂದ ಎನ್ನುವುದು ಗೊಂದಲಕ್ಕೆ ಕಾರಣವಾಗಿದೆ. ಅಲ್ಲದೇ, ರಶ್ಮಿಕಾ ಧರಿಸಿದ್ದ ಉಂಗುರ ವಿಜಯ್ ದ್ದು ಎಂದು ಹೇಳಲಾಗುತ್ತಿದೆ. ಈ ಎಲ್ಲವನ್ನೂ ಇಟ್ಟುಕೊಂಡು ಅಭಿಮಾನಿಗಳು ರಶ್ಮಿಕಾಗೆ ಹಲವು  ಪ್ರಶ್ನೆಗಳನ್ನು ಕೇಳಿದ್ದಾರೆ. ಅದಕ್ಕೆ ರಶ್ಮಿಕಾ ಕೂಲ್ ಕೂಲ್ ಆಗಿ ಉತ್ತರ ಕೊಟ್ಟಿದ್ದಾರೆ. ಆದರೆ, ಲವ್ ವಿಚಾರ ಮಾತ್ರ ಹಂಚಿಕೊಳ್ಳದೇ ಜಾಣತನ ಮೆರೆದಿದ್ದಾರೆ.

  • ತೆಲುಗಿನ ನಟ ಬೆಲ್ಲಂಕೊಂಡ ವಿರುದ್ಧ ವಂಚನೆಯ ಆರೋಪ, ಪ್ರಕರಣ ದಾಖಲು

    ತೆಲುಗಿನ ನಟ ಬೆಲ್ಲಂಕೊಂಡ ವಿರುದ್ಧ ವಂಚನೆಯ ಆರೋಪ, ಪ್ರಕರಣ ದಾಖಲು

    ಹೈದರಾಬಾದ್: ಫೈನಾನ್ಷಿಯರ್‌ಗೆ 85 ಲಕ್ಷ ರೂಪಾಯಿ ವಂಚಿಸಿದ ಆರೋಪದ ಮೇಲೆ ತೆಲುಗು ಚಿತ್ರ ನಿರ್ಮಾಪಕ ಬೆಲ್ಲಂಕೊಂಡ ಸುರೇಶ್ ಮತ್ತು ಅವರ ಪುತ್ರ ಮತ್ತು ನಟ ಬೆಲ್ಲಂಕೊಂಡ ಸಾಯಿ ಶ್ರೀನಿವಾಸ್ ವಿರುದ್ಧ ಹೈದರಾಬಾದ್ ಪೊಲೀಸರು ವಂಚನೆ ಪ್ರಕರಣ ದಾಖಲಿಸಿದ್ದಾರೆ.

    ನಗರದ ನ್ಯಾಯಾಲಯದ ನಿರ್ದೇಶನದ ಮೇರೆಗೆ ಕೇಂದ್ರ ಅಪರಾಧ ಠಾಣೆ (ಸಿಸಿಎಸ್) ಪೊಲೀಸರು ಇಬ್ಬರ ವಿರುದ್ಧವೂ ಶುಕ್ರವಾರ ಪ್ರಕರಣ ದಾಖಲಿಸಿದ್ದಾರೆ.

    2018ರಲ್ಲಿ ನಿರ್ಮಾಪಕ ಮತ್ತು ಅವರ ಪುತ್ರ ಸಿನಿಮಾ ಮಾಡಲು ತಮ್ಮಿಂದ ಕಂತುಗಳಲ್ಲಿ ಹಣ ತೆಗೆದುಕೊಂಡಿದ್ದಾರೆ ಎಂದು ದೂರಿ ವಿಎಲ್ ಶ್ರವಣ್ ಕುಮಾರ್ ನ್ಯಾಯಾಲಯದ ಮೊರೆ ಹೋಗಿದ್ದರು. ಮಾಲಿನೇನಿ ಗೋಪಿಚಂದ್ ಅವರ ನಿರ್ದೇಶನದಲ್ಲಿ ತಯಾರಾಗಲಿರುವ ಚಿತ್ರಕ್ಕೆ ಸಹಾಯಕ ನಿರ್ಮಾಪಕನಾಗಿ ತಮ್ಮನ್ನು ತೆಗೆದುಕೊಳ್ಳುವುದಾಗಿ ನಿರ್ಮಾಪಕರು ಭರವಸೆ ನೀಡಿದ್ದರು ಎಂದು ಅರ್ಜಿದಾರರು ಹೇಳಿದ್ದಾರೆ. ಇದನ್ನೂ ಓದಿ : ‘ಪುಷ್ಪ ಪಾರ್ಟ್ 10’ ಸಿನಿಮಾಗೆ ನಟ ಮಾಸ್ಟರ್ ಆನಂದ್ ಮಗಳು ಹೀರೋಯಿನ್

    ತಂದೆ, ಮಗನ ಮಾತನ್ನು ನಂಬಿ ಅವರಿಗೆ ಹಣ ನೀಡಿದ್ದೆ. ಆದರೆ ಅವರು ನಂಬಿಸಿ ಮೋಸ ಮಾಡಿದ್ದಾರೆ ಎಂದು ಫೈನಾನ್ಷಿಯರ್ ನ್ಯಾಯಾಲಯಕ್ಕೆ ತಿಳಿಸಿದರು. ಸುರೇಶ್ ಹಾಗೂ ಶ್ರೀನಿವಾಸ್ ವಿರುದ್ಧ ಪ್ರಕರಣ ದಾಖಲಿಸುವಂತೆ ಪೊಲೀಸರಿಗೆ ಕೋರ್ಟ್ ಸೂಚಿಸಿತ್ತು. ಇದನ್ನೂ ಓದಿ: ದಿ ಕಾಶ್ಮೀರ್ ಫೈಲ್ಸ್ ಸಿನಿಮಾ: ಕ್ಷಮೆ ಕೋರಿದ ಪ್ರಕಾಶ್ ಬೆಳವಾಡಿ

    ಸಿಸಿಎಸ್ ಪೊಲೀಸರು ಭಾರತೀಯ ದಂಡ ಸಂಹಿತೆಯ ಸೆಕ್ಷನ್ 406 (ಕ್ರಿಮಿನಲ್ ನಂಬಿಕೆಯ ಉಲ್ಲಂಘನೆ), 417, 420 (ವಂಚನೆ), ಮತ್ತು 120 ಬಿ (ಅಪರಾಧ ಪಿತೂರಿ) ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

    ತನಿಖೆಯ ಭಾಗವಾಗಿ, ಪೊಲೀಸರು ದೂರುದಾರರಿಗೆ ಸೂಕ್ತ ದಾಖಲೆಗಳೊಂದಿಗೆ ತನಿಖಾಧಿಕಾರಿಯ ಮುಂದೆ ಹಾಜರಾಗಲು ಮತ್ತು ಅವರ ಹೇಳಿಕೆಯನ್ನು ದಾಖಲಿಸಲು ನ್ಯಾಯಾಲಯವು ತಿಳಿಸಿದೆ.