Tag: bellary

  • ಜಾತಿಗಣತಿಗೆ ಗೈರು – ಇಬ್ಬರು ಶಿಕ್ಷಕರು ಅಮಾನತು

    ಜಾತಿಗಣತಿಗೆ ಗೈರು – ಇಬ್ಬರು ಶಿಕ್ಷಕರು ಅಮಾನತು

    ಬಳ್ಳಾರಿ: ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆಯಲ್ಲಿ ಗೈರಾದ ಬಳ್ಳಾರಿ ಜಿಲ್ಲೆಯಲ್ಲಿ ಇಬ್ಬರು ಶಿಕ್ಷಕರನ್ನ ಸೇವೆಯಿಂದ ಅಮಾನತು ಮಾಡಲಾಗಿದೆ.

    ಗಣತಿದಾರ ರವಿಚಂದ್ರ ಬಿ.ಸಿ ಹಾಗೂ ಮೇಲ್ವಿಚಾರಕ ರಾಘವೇಂದ್ರ ರಾವ್ ಅಮಾನತಾದ ಶಿಕ್ಷಕರು. ಕಂಪ್ಲಿಯ ಬಾಲಕರ ಪದವಿ ಪೂರ್ವ ಕಾಲೇಜಿನ ಪ್ರೌಢ ಶಾಲೆ ವಿಭಾಗದ ಶಿಕ್ಷಕ ರವಿಚಂದ್ರ ಹಾಗೂ ಸಂಡೂರಿನ ಆದರ್ಶ ವಿದ್ಯಾಲಯದ ಶಿಕ್ಷಕ ರಾಘವೇಂದ್ರ ಇಬ್ಬರನ್ನೂ ಸಮೀಕ್ಷೆಗೆ ನಿಯೋಜಿಸಲಾಗಿತ್ತು. ಸಮೀಕ್ಷಾ ಕರ್ತವ್ಯಕ್ಕೆ ನಿಯೋಜಿಸಿದ್ದರೂ ಇಬ್ಬರೂ ಶಿಕ್ಷಕರು ನಿರ್ಲಕ್ಷ್ಯ ತೋರಿದ್ದರು. ಇದನ್ನೂ ಓದಿ: ಪೂರ್ವತಯಾರಿ ಇಲ್ಲದೇ ಆತುರಾತುರವಾಗಿ ಜಾತಿಗಣತಿ, GBA ಚುನಾವಣೆಗೆ ತಯಾರಿ ಎಲ್ಲಿ?: ಸರ್ಕಾರಕ್ಕೆ ವಿಜಯೇಂದ್ರ ಪ್ರಶ್ನೆ

    ಸಮೀಕ್ಷೆಗೆ ತೆರಳದೆ ಗೈರು ಹಾಜರಾಗಿದ್ದ ಹಿನ್ನೆಲೆ ಬೇಜವಾಬ್ದಾರಿ ತೋರಿ, ಜಿಲ್ಲೆಯಲ್ಲಿ ಸಮೀಕ್ಷೆ ಕುಂಠಿತಕ್ಕೆ ಕಾರಣವಾಗಿದ್ದೀರಿ ಎಂದು ಕಾರಣ ನೀಡಿ ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್, ಇಬ್ಬರೂ ಶಿಕ್ಷಕರನ್ನ ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ.

    ರಾಜ್ಯ ಸರ್ಕಾರವು ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯನ್ನು ನಡೆಸುತ್ತಿದೆ. ಸಮೀಕ್ಷೆ ಅವಧಿಯನ್ನು ಅ.18ರ ವರೆಗೆ ವಿಸ್ತರಿಸಿದೆ. ಅಲ್ಲಿವರೆಗೆ ಎಲ್ಲಾ ಸರ್ಕಾರಿ ಶಾಲೆಗಳಿಗೆ ರಜೆ ನೀಡಲಾಗಿದೆ. ಇದನ್ನೂ ಓದಿ: ಜಾತಿಗಣತಿ ಸಮೀಕ್ಷೆಗಾಗಿ ದಸರಾ ರಜೆ ವಿಸ್ತರಣೆ – ಎಲ್ಲಾ ಸರ್ಕಾರಿ ಶಾಲೆಗಳಿಗೆ ಅ.18 ರವರೆಗೆ ರಜೆ

  • ಕರ್ತವ್ಯ ನಿರತ ASI ಹೃದಯಾಘಾತಕ್ಕೆ ಬಲಿ

    ಕರ್ತವ್ಯ ನಿರತ ASI ಹೃದಯಾಘಾತಕ್ಕೆ ಬಲಿ

    ಬಳ್ಳಾರಿ: ರಾಜಸ್ಥಾನದ (Rajastan) ಜೋಧ್‌ಪುರಕ್ಕೆ ಕರ್ತವ್ಯ ನಿಮಿತ್ತ ತೆರಳಿದ್ದ ವಿಜಯನಗರ ಜಿಲ್ಲೆಯ ಹೊಸಪೇಟೆಯ ಗ್ರಾಮೀಣ ಠಾಣೆ ಎಎಸ್‌ಐ (ASI) ಹೃದಯಾಘಾತದಿಂದ ಮೃತಪಟ್ಟಿದ್ದಾರೆ.

    ಹೊಸಪೇಟೆ ಗ್ರಾಮೀಣ ಪೊಲೀಸ್ ಠಾಣೆಯ ಎಎಸ್‌ಐ ಹಾಲಪ್ಪ (56) ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಆ.17ರಂದು ಕರ್ತವ್ಯದ ಮೇಲೆ ಹೊಸಪೇಟೆಯಿಂದ ರಾಜಸ್ಥಾನದ ಜೋಧ್‌ಪುರಕ್ಕೆ ತೆರಳಿದ್ದರು. ಇದನ್ನೂ ಓದಿ: ದೆಹಲಿ ಸಿಎಂಗೆ ಕಪಾಳಮೋಕ್ಷ – ತಿಹಾರ್‌ ಜೈಲಿನಲ್ಲಿದ್ದ ತನ್ನ ಸಂಬಂಧಿ ಬಿಡಿಸೋದಕ್ಕಾಗಿ ರೇಖಾ ಗುಪ್ತಾ ಭೇಟಿಗೆ ಬಂದಿದ್ದ ವ್ಯಕ್ತಿ

    ಹೊಸಪೇಟೆಯ ಗ್ರಾಮೀಣ ಠಾಣೆಯ ಎಎಸ್‌ಐ ಹಾಲಪ್ಪ ಅವರು ಸೇರಿದಂತೆ ಪೊಲೀಸ್ ಕಾನ್ಸ್ಟೇಬಲ್‌ ಹಾಗೂ ಹೆಡ್ ಕಾನ್ಸ್ಟೇಬಲ್‌ ತೆರಳಿದ್ದರು. ಕರ್ತವ್ಯದಲ್ಲಿದ್ದ ವೇಳೆಯೇ ಹಾಲಪ್ಪ ಅವರಿಗೆ ಹೃದಯಾಘಾತವಾಗಿ ಮೃತಪಟ್ಟಿದ್ದಾರೆ. ಇದನ್ನೂ ಓದಿ: Exclusive ಸುಜಾತ ಭಟ್‌ ತೋರಿಸಿದ ಫೋಟೋ ನನ್ನ ತಂಗಿಯದ್ದು: ಸಹೋದರ ವಿಜಯ್‌

    ಮೃತ ಎಎಸ್‌ಐ ಹಾಲಪ್ಪ ಅವರು ವಿಜಯನಗರ ಜಿಲ್ಲೆಯ ಹೂವಿನ ಹಡಗಲಿ ತಾಲೂಕಿನ ಹಿರೇಹಡಗಲಿ ಗ್ರಾಮದವರಾಗಿದ್ದರು. ನಾಳೆ ಸ್ವಗ್ರಾಮ ಹಿರೇಹಡಗಲಿಯಲ್ಲಿ ಅವರ ಅಂತ್ಯಕ್ರಿಯೆ ನಡೆಯಲಿದೆ.

  • ಇನ್ಸ್ಟಾಗ್ರಾಂ ಲವ್, ಸೆಕ್ಸ್, ದೋಖಾ ಆರೋಪ – ಡೆತ್‌ನೋಟ್ ಬರೆದಿಟ್ಟು ಮಹಿಳೆ ಆತ್ಮಹತ್ಯೆ

    ಇನ್ಸ್ಟಾಗ್ರಾಂ ಲವ್, ಸೆಕ್ಸ್, ದೋಖಾ ಆರೋಪ – ಡೆತ್‌ನೋಟ್ ಬರೆದಿಟ್ಟು ಮಹಿಳೆ ಆತ್ಮಹತ್ಯೆ

    ಬಳ್ಳಾರಿ: ಇನ್ಸ್ಟಾಗ್ರಾಂ (Instagram) ಲವ್, ಸೆಕ್ಸ್ ದೋಖಾ, ಕೊನೆಗೆ ಮೋಸದ ಆರೋಪ ಹೊರಿಸಿ ಡೆತ್‌ನೋಟ್ (Death Note) ಬರೆದಿಟ್ಟು ಮಹಿಳೆ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ವಿಜಯನಗರ (Vijayanagar) ಜಿಲ್ಲೆಯ ಹಡಗಲಿ ತಾಲೂಕಿನ ಮದಲಗಟ್ಟಿ ಗ್ರಾಮದ ತುಂಗಭದ್ರಾ ಸೇತುವೆ (Tunga Bhadra Bridge) ಬಳಿ ನಡೆದಿದೆ.

    ಪ್ರಿಯಕರನ ಮೋಸಕ್ಕೆ ನಾನು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದೇನೆಂದು ಡೆತ್‌ನೋಟ್ ಬರೆದು ಮಹಿಳೆ ತುಂಗಭದ್ರಾ ನದಿಗೆ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸೇತುವೆಯಿಂದ ಜಿಗಿಯುತ್ತಿರುವುದನ್ನ ಬೈಕ್ ಸವಾರರು ನೋಡಿದ್ದಾರೆ. ಮಹಿಳೆ ನದಿಗೆ ಜಿಗಿದಿದ್ದನ್ನ ಯುವಕರು ನೋಡಿ ಮದಲಗಟ್ಟಿ ಗ್ರಾಮಸ್ಥರಿಗೆ ತಿಳಿಸಿದ್ದರು. ಅಕ್ಕಪಕ್ಕದಲ್ಲಿದ್ದ ಮೀನುಗಾರರು ಮಹಿಳೆಯನ್ನು ರಕ್ಷಿಸಿಲು ಪ್ರಯತ್ನಿಸಿದ್ದಾರೆ. ಆದರೆ ನೀರಿನ ರಭಸಕ್ಕೆ ಮಹಿಳೆ ಕೊಚ್ಚಿ ಹೋಗಿದ್ದಾರೆ. ಸದ್ಯ ಪೊಲೀಸರು ಹಾಗೂ ಅಗ್ನಿಶಾಮಕ ಸಿಬ್ಬಂದಿಗಳು ಶೋಧಕಾರ್ಯ ಮುಂದುವರಿಸಿದ್ದಾರೆ. ಇದನ್ನೂ ಓದಿ: ಕೆಆರ್‌ಎಸ್ ಡ್ಯಾಂನಿಂದ 50,000 ಕ್ಯೂಸೆಕ್ ನೀರು ಬಿಡುಗಡೆ

    ಕೆ.ಅಯ್ಯನಹಳ್ಳಿ ಗ್ರಾಮದ ವಿವಾಹಿತೆ ಮಹಿಳೆಯೊಬ್ಬರು ತನ್ನ ಸಾವಿನ ಕುರಿತು ಪತ್ರ ಬರೆದಿಟ್ಟಿದ್ದಾರೆ. ನನ್ನ ಸಾವಿಗೆ ನನ್ನ ಪ್ರಿಯತಮನೇ ಕಾರಣ ಎಂದು ಪತ್ರದಲ್ಲಿ ಉಲ್ಲೇಖಿಸಲಾಗಿದೆ. ನನ್ನ ಸಾವಿಗೆ ಸುಗೂರು ಶಿವಮೂರ್ತಿನೇ ಕಾರಣ, ಈತನಿಗೆ ಮರಣದಂಡನೆ ಶಿಕ್ಷೆ ಆಗಬೇಕು. ನನ್ನ ಲೈಂಗಿಕವಾಗಿ ಬಳಸಿಕೊಂಡಿದ್ದಾನೆ, ಮದುವೆಯಾಗುವುದಾಗಿ ಹೇಳಿ ಮೋಸ ಮಾಡಿದ್ದಾನೆ. ನನ್ನ ಪ್ರೀತಿ ಮಾಡುತ್ತಾ ಸಾಕಷ್ಟು ಹುಡುಗಿಯರ ಜೊತೆ ಸುತ್ತಾಡಿ ಕೊನೆಗೆ ನನ್ನ ಬಿಟ್ಟಿದ್ದಾನೆ ಎಂದು ಉಲ್ಲೇಖಿಸಲಾಗಿದೆ. ಕಾಣೆಯಾದ ಮಹಿಳೆ ಮತ್ತು ಕೆ.ಅಯ್ಯನಹಳ್ಳಿ ಗ್ರಾಮದಲ್ಲಿ ಪತ್ರ ಬರೆದಿಟ್ಟ ಮಹಿಳೆ ಒಬ್ಬರೇ ಎಂದು ಹೇಳಲಾಗುತ್ತಿದೆ. ಹೂವಿನಹಡಗಲಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಇದನ್ನೂ ಓದಿ: ತಮಿಳುನಾಡಿನಲ್ಲಿ 4,800 ಕೋಟಿ ಮೊತ್ತದ ಅಭಿವೃದ್ಧಿ ಯೋಜನೆಗಳಿಗೆ ಪ್ರಧಾನಿ ಮೋದಿ ಚಾಲನೆ

  • ಬಳ್ಳಾರಿ | ಶಾಲೆಗೆ ತೆರಳುತ್ತಿದ್ದ ಬಾಲಕಿ ಹಠಾತ್ ಕುಸಿದು ಬಿದ್ದು ಸಾವು

    ಬಳ್ಳಾರಿ | ಶಾಲೆಗೆ ತೆರಳುತ್ತಿದ್ದ ಬಾಲಕಿ ಹಠಾತ್ ಕುಸಿದು ಬಿದ್ದು ಸಾವು

    – ಹೃದಯಾಘಾತಕ್ಕೆ 35 ವರ್ಷದ ವ್ಯಕ್ತಿ ಸಾವು

    ಬಳ್ಳಾರಿ: ಶಾಲೆಗೆ ತೆರಳುತ್ತಿದ್ದ ಬಾಲಕಿ ಹಠಾತ್ ಕುಸಿದು ಬಿದ್ದು ಮೃತಪಟ್ಟಿರುವ ಘಟನೆ ಬಳ್ಳಾರಿ (Bellary) ಜಿಲ್ಲೆಯ ಸಂಡೂರು (Sandur) ತಾಲೂಕಿನ ಕಾಳಿಂಗೇರಿಯಲ್ಲಿ ನಡೆದಿದೆ.

    ಕಾಳಂಗೇರಿಯ ದೀಕ್ಷಾ (12) ಮೃತ ಬಾಲಕಿ. 6ನೇ ತರಗತಿಯಲ್ಲಿ ಓದುತ್ತಿದ್ದ ದೀಕ್ಷಾ ಎಂದಿನಂತೆ ಸಿದ್ಧಳಾಗಿ ಶಾಲೆಗೆ ಹೋಗುತ್ತಿದ್ದಳು. ಶಾಲೆಗೆ ತೆರಳುವಾಗ ಏಕಾಏಕಿ ಕುಸಿದು ಬಿದ್ದಿದ್ದ ಬಾಲಕಿ ದೀಕ್ಷಾಳನ್ನ ಕೂಡಲೇ ಕುಟುಂಬಸ್ಥರು ಸಂಡೂರಿನ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲು ಕರೆದೊಯ್ಯಲು ಮುಂದಾಗಿದ್ದರು. ಆದರೆ ಆಸ್ಪತ್ರೆಗೆ ಕರೆದೊಯ್ಯುವ ಮಾರ್ಗ ಮಧ್ಯೆಯೇ ದೀಕ್ಷಾ ಮೃತಪಟ್ಟಿದ್ದಾಳೆ. ದೀಕ್ಷಾ ಸಾವಿಗೆ ನಿಖರ ಕಾರಣ ತಿಳಿದು ಬಂದಿಲ್ಲ. ಘಟನೆ ಸಂಬಂಧ ಸಂಡೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಭಾರೀ ಮಳೆ- ದಕ್ಷಿಣ ಕನ್ನಡದ ಮೂರು ತಾಲೂಕಿನ ಶಾಲೆಗಳಿಗೆ ರಜೆ ಘೋಷಣೆ

    ಇನ್ನೂ ಹೃದಯಾಘಾತದಿಂದ 35 ವರ್ಷದ ವ್ಯಕ್ತಿ ಸಾವನ್ನಪ್ಪಿರುವ ಘಟನೆ ಬಳ್ಳಾರಿ ಜಿಲ್ಲೆಯ ಸಂಡೂರು ತಾಲೂಕಿನ ತಾರಾನಗರದಲ್ಲಿ ನಡೆದಿದೆ. 35 ವರ್ಷದ ರಾಜೇಶ್ ಹೃದಯಾಘಾತಕ್ಕೆ ಬಲಿಯಾದ ವ್ಯಕ್ತಿ. ರಾಜೇಶ್ ಸೋಮವಾರ ಸಂಜೆ ತಾರಾನಗರ ಗ್ರಾಮದ ಮನೆಲ್ಲಿರುವಾಗ ಎದೆ ನೋವು ಕಾಣಿಸಿಕೊಂಡಿದೆ. ಇದನ್ನೂ ಓದಿ: ಪ್ರೊಫೆಸರ್ ವಿರುದ್ಧ ಲೈಂಗಿಕ ಕಿರುಕುಳ ಆರೋಪ – ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದ ವಿದ್ಯಾರ್ಥಿನಿ ಸಾವು

    ಹಾರ್ಟ್ ಅಟ್ಯಾಕ್ ಲಕ್ಷಣಗಳು ಇದ್ದ ಹಿನ್ನೆಲೆ, ಕೂಡಲೇ ಬಳ್ಳಾರಿ ಆಸ್ಪತ್ರೆಗೆ ಕರೆದೊಯ್ಯಲು ಯತ್ನಿಸಲಾಗಿದೆ. ತಾರಾನಗರದಿಂದ ಬಳ್ಳಾರಿಯ ವಿಮ್ಸ್ ಆಸ್ಪತ್ರೆಗೆ ರವಾನೆ ಮಾಡುತ್ತಿರುವಾಗಲೇ ರಾಜೇಶ್ ಸಾವನ್ನಪ್ಪಿದ್ದಾನೆ. ಜಿಂದಾಲ್ ಕಾರ್ಖಾನೆಯಲ್ಲಿ ಸೂಪರ್‌ವೈಸರ್ ಆಗಿ ಕೆಲಸ ಮಾಡುತ್ತಿದ್ದ ರಾಜೇಶ್‌ಗೆ ಇನ್ನೂ ವಿವಾಹವೂ ಆಗಿರಲಿಲ್ಲ. ಘಟನೆ ಕುರಿತು ಸಂಡೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಮೈಸೂರಿನಲ್ಲಿ ಸಿದ್ದು ಶಕ್ತಿ ಪ್ರದರ್ಶನಕ್ಕೆ ಸಜ್ಜು – 1 ಬಸ್ಸಿಗೆ 6 ಸಾವಿರ ಕೊಡುತ್ತಿದ್ದಾರೆ ಕೈ ನಾಯಕರು

  • ಇಡಿ ತನ್ನ ಹೆಸರನ್ನು ‘ಕಾಂಗ್ರೆಸ್ ವಿರೋಧಿ ನಿರ್ದೇಶನಾಲಯ’ ಅಂತ ಬದಲಾಯಿಸಿಕೊಳ್ಳುವುದು ಸೂಕ್ತ: ದಿನೇಶ್ ಗುಂಡೂರಾವ್

    ಇಡಿ ತನ್ನ ಹೆಸರನ್ನು ‘ಕಾಂಗ್ರೆಸ್ ವಿರೋಧಿ ನಿರ್ದೇಶನಾಲಯ’ ಅಂತ ಬದಲಾಯಿಸಿಕೊಳ್ಳುವುದು ಸೂಕ್ತ: ದಿನೇಶ್ ಗುಂಡೂರಾವ್

    -ಬಿಜೆಪಿಯೇತರ ನಾಯಕರ ಮೇಲೆ ದಾಳಿ ಮಾಡುವುದು ಇಡಿ ವೈಶಿಷ್ಟ್ಯ 

    ಬೆಂಗಳೂರು: ಕಾಂಗ್ರೆಸ್ ನಾಯಕರನ್ನೇ ನಿರ್ದಿಷ್ಟವಾಗಿ ಗುರಿಯಾಗಿಸಿಕೊಂಡು ದಾಳಿ ನಡೆಸುವ ‘ಜಾರಿ ನಿರ್ದೇಶನಾಲಯ’ ತನ್ನ ಹೆಸರನ್ನು ‘ಕಾಂಗ್ರೆಸ್ ವಿರೋಧಿ ನಿರ್ದೇಶನಾಲಯ’ ಎಂದು ಬದಲಾಯಿಸಿಕೊಳ್ಳುವುದು ಸೂಕ್ತ. ಯಾಕೆಂದರೆ ಜಾರಿ ನಿರ್ದೇಶನಾಲಯದ ಪ್ರೈಮ್ ಟಾರ್ಗೆಟ್ ಕಾಂಗ್ರೆಸ್ ನಾಯಕರೇ ಹೊರತು ಬಿಜೆಪಿಯವರಲ್ಲ ಎಂದು ಸಚಿವ ದಿನೇಶ್ ಗುಂಡೂರಾವ್ ಇಡಿ ವಿರುದ್ಧ ಕಿಡಿಕಾರಿದ್ದಾರೆ.

    ಬಳ್ಳಾರಿ ಕಾಂಗ್ರೆಸ್ ಶಾಸಕರು, ಸಂಸದರ ಮನೆಯಲ್ಲಿ ಇಡಿ ದಾಳಿ ನಡೆಸಿದ ಕುರಿತು ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ ಅವರು, ಬಿಜೆಪಿ ಹಾಗೂ ಕೇಂದ್ರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಇದನ್ನೂ ಓದಿ: ಧಾರವಾಡದಲ್ಲಿ ವರುಣನ ಆರ್ಭಟ – ಬೆಣ್ಣಿ ಹಳ್ಳದಲ್ಲಿ ಸಿಲುಕಿ ಕುಟುಂಬ ಪರದಾಟ

     

    ಎಕ್ಸ್‌ನಲ್ಲಿ ಏನಿದೆ?
    ಕರ್ನಾಟಕದಲ್ಲಿ ಕಾಂಗ್ರೆಸ್ ನಾಯಕರನ್ನು ಗುರಿಯಾಗಿಸಿಕೊಂಡು ಜಾರಿ ನಿರ್ದೇಶನಾಲಯ ಮತ್ತೆ ದಾಳಿ ನಡೆಸಿದೆ. ಜಾರಿ ನಿರ್ದೇಶನಾಲಯದ ವೈಶಿಷ್ಟ್ಯವೇನೆಂದರೆ ಅದು ದಾಳಿ ಮಾಡುವುದು ಬಿಜೆಪಿಯೇತರ ನಾಯಕರ ಮೇಲೆ ಮಾತ್ರ. ಇಲ್ಲಿಯವರೆಗೂ ಇಡಿ ಬಿಜೆಪಿ ನಾಯಕರ ತಂಟೆಗೆ ಹೋಗಿಲ್ಲ, ಹೋಗುವುದು ಇಲ್ಲ. ಇದೊಂದು ವಿಸ್ಮಯ. ಇದನ್ನೂ ಓದಿ: `ದಿ ಇಂಡಿಯಾ ಹೌಸ್ʼ ಸಿನಿಮಾ ಶೂಟಿಂಗ್‌ ಸೆಟ್‌ನಲ್ಲಿ ನೀರಿನ ಟ್ಯಾಂಕರ್‌ ಸ್ಫೋಟ – ಹಲವರಿಗೆ ಗಾಯ

    ಇತ್ತೀಚೆಗಷ್ಟೆ ತಮಿಳುನಾಡಿನ ಟಿಎಎಸ್‌ಎಂಎಸಿ ಹಗರಣದಲ್ಲಿ ಇಡಿ ನಡೆಯನ್ನು ಸುಪ್ರೀಂ ಕೋರ್ಟ್ ಕಟು ಮಾತುಗಳಲ್ಲಿ ಟೀಕಿಸಿದೆ. ಇಡಿ ಎಲ್ಲಾ ಮಿತಿಗಳನ್ನು ಮೀರುತ್ತಿದೆ ಎಂದು ಸುಪ್ರೀಂ ಎಚ್ಚರಿಕೆ ನೀಡಿದೆ. ಆದರೂ ಇಡಿ ಅಧಿಕಾರಿಗಳು ಬಿಜೆಪಿ ಕಾರ್ಯಕರ್ತರಂತೆ ವರ್ತಿಸುತ್ತಿದ್ದಾರೆ. ಇದನ್ನೂ ಓದಿ: ಹುಬ್ಬಳ್ಳಿಯಲ್ಲಿ ಧಾರಾಕಾರ ಮಳೆ – ಚರಂಡಿ ನೀರಿನಲ್ಲಿ ಕೊಚ್ಚಿ ಹೋದ ವ್ಯಕ್ತಿ

    ಸಾಂವಿಧಾನಿಕ ತನಿಖಾ ಸಂಸ್ಥೆಯಾದ ಇಡಿಯನ್ನು ಮೋದಿ ಸರ್ಕಾರ ರಾಜಕೀಯ ಅಸ್ತ್ರವಾಗಿ ಬಳಸಿಕೊಳ್ಳುತ್ತಿದೆ. ಇಡಿ ರಾಜಕೀಯ ಪಕ್ಷವೊಂದರ ಆಜ್ಞಾಪಾಲಕರಾದರೆ ಆ ಸಂಸ್ಥೆಗೆ ಸಾಂವಿಧಾನಿಕ ಪಾವಿತ್ರ‍್ಯತೆ ಇರಲು ಹೇಗೆ ಸಾಧ್ಯ? ಆ ಸಂಸ್ಥೆಯಿಂದ ಪ್ರಜಾಪ್ರಭುತ್ವದ ಮೌಲ್ಯ ಉಳಿಯಲು ಹೇಗೆ ಸಾಧ್ಯ ಎಂದು ಪ್ರಶ್ನಿಸಿದ್ದಾರೆ. ಇದನ್ನೂ ಓದಿ: ಮೋದಿ 11 ವರ್ಷದಲ್ಲಿ ಸಾಧನೆಗಳನ್ನ ಕಡಿದು ಕಟ್ಟೆ ಹಾಕಿದ್ದಾರೆ – ದೇಶದ ಭದ್ರತೆ, ರೈತರ ವಿಚಾರದಲ್ಲಿ ಕೇಂದ್ರ ಫೇಲ್: ಪ್ರದೀಪ್‌ ಈಶ್ವರ್‌

  • ಗಣಿ ನಾಡಲ್ಲಿ ‘ಕೈ’ ನಾಯಕರ ಬೆವರಿಳಿಸಿದ ಇಡಿ – ಮಹತ್ವದ ದಾಖಲೆಗಳು ವಶಕ್ಕೆ

    ಗಣಿ ನಾಡಲ್ಲಿ ‘ಕೈ’ ನಾಯಕರ ಬೆವರಿಳಿಸಿದ ಇಡಿ – ಮಹತ್ವದ ದಾಖಲೆಗಳು ವಶಕ್ಕೆ

    ಬಳ್ಳಾರಿ: ಗಣಿ ನಾಡು ಬಳ್ಳಾರಿಯಲ್ಲಿ (Bellary) ಬುಧವಾರ ಬೆಳ್ಳಂಬೆಳಗ್ಗೆ ಇಡಿ (ED) ಅಧಿಕಾರಿಗಳು ಕೈ ಶಾಸಕರು ಹಾಗೂ ಸಂಸದರಿಗೆ ಶಾಕ್ ಕೊಟ್ಟಿದ್ದಾರೆ. ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ (Valmiki Scam) ನೂರಾರು ಕೋಟಿ ಹಣ ಹೊಡೆದು, ಆ ಹಣವನ್ನು ಬಳ್ಳಾರಿ ಲೋಕಸಭಾ ಚುನಾವಣೆಗೆ ಬಳಸುವಲ್ಲಿ ಕೈ ಜನಪ್ರತಿನಿಧಿಗಳ ಕೈವಾಡ ಇದೆ ಎಂದು ನಾಲ್ವರು ಶಾಸಕರು ಹಾಗೂ ಓರ್ವ ಸಂಸದರಿಗೆ ಇಡಿ ಅಧಿಕಾರಗಳು ಬುಧವಾರ ಇಡೀ ದಿನ ಡ್ರಿಲ್ ಮಾಡಿದ್ದಾರೆ. ಸತತ 15 ಗಂಟೆಗಳ ಕಾಲ ಇಡಿ ಅಧಿಕಾರಿಗಳು ಶೋಧ ನಡೆಸಿದ್ದಾರೆ.

    ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದಿರುವ ನೂರಾರು ಕೋಟಿ ಭ್ರಷ್ಟಾಚಾರ ಪ್ರಕರಣದಲ್ಲಿ ಈ ಹಿಂದೆ ಇಡಿ ತನಿಖೆ ನಡೆಸಿ ಚಾರ್ಜ್ ಶೀಟ್ ಸಲ್ಲಿಕೆಯಾಗಿತ್ತು. ಒಂದಷ್ಟು ದಿನ ಮಾಜಿ ಸಚಿವ ನಾಗೇಂದ್ರ, ಅವರ ಆಪ್ತರು ಜೈಲಿನಲ್ಲಿದ್ದು ಬೇಲ್ ಪಡೆದಿದ್ದರು. ಇನ್ನೇನು ಇಡಿ ತನಿಖೆ ಮುಗೀತು ಎಂದು ನಿರಾಳರಾಗಿ ಮೈಮರೆತಿದ್ದವರಿಗೆ ಇಡಿ ಮತ್ತೆ ಶಾಕ್ ಕೊಟ್ಟಿದೆ. ಇಡಿ ಅಧಿಕಾರಿಗಳ ದೊಡ್ಡ ಪಡೆ ಬಳ್ಳಾರಿ ಲೋಕಸಭಾ ವ್ಯಾಪ್ತಿಯ ಐವರು ಶಾಸಕರು, ಓರ್ವ ಸಂಸದರಿಗೆ ಮೈಚಳಿ ಬಿಡಿಸಿದ್ದಾರೆ. ಇದನ್ನೂ ಓದಿ: ಕೆಆರ್‌ಎಸ್ ವೀಕ್ಷಣೆಗೆ ಬರುವ ಪ್ರವಾಸಿಗರ ಜೇಬಿಗೆ ಕತ್ತರಿ – 500 ಮೀ. ಸೇತುವೆ ದಾಟಲು 200 ರೂ.

    ಬಳ್ಳಾರಿ ಸಂಸದ ಇ.ತುಕಾರಾಂ ಸಂಡೂರು ನಿವಾಸ, ಬಳ್ಳಾರಿ ನಗರ ಶಾಸಕ ನಾರಾ ಭರತ್ ರೆಡ್ಡಿ ನಿವಾಸ, ಬಳ್ಳಾರಿ ಗ್ರಾಮಾಂತರ ಶಾಸಕ ಬಿ. ನಾಗೇಂದ್ರ ಬೆಂಗಳೂರು ನಿವಾಸ, ಕಂಪ್ಲಿ ಶಾಸಕ ಜೆ.ಎನ್ ಗಣೇಶ್ ನಿವಾಸ, ಸಂಡೂರು ಶಾಸಕಿ ಅನ್ನಪೂರ್ಣ ತುಕಾರಾಂ ನಿವಾಸ ಹಾಗೂ ಕೂಡ್ಲಿಗಿ ಶಾಸಕ ಎನ್.ಟಿ ಶ್ರೀನಿವಾಸ್ ಮನೆ ಮೇಲೆ ಇಡಿ ಅಧಿಕಾರಿಗಳು ದಾಳಿ ಮಾಡಿದ್ದಾರೆ. ದಾಳಿ ನಡೆಸಿ ಸುಧೀರ್ಘ 15 ಗಂಟೆಗಳ ವಿಚಾರಣೆ ನಡೆಸಿದರು. ಇದನ್ನೂ ಓದಿ: ಕರಾವಳಿ ಭಾಗದಲ್ಲಿ ಮಳೆಯ ಆರ್ಭಟ – ಉತ್ತರ ಕನ್ನಡದಲ್ಲಿ ಇಂದು ಶಾಲೆಗಳಿಗೆ ರಜೆ

    ಕಳೆದ ಬಳ್ಳಾರಿ ಲೋಕಸಭಾ ಚುನಾವಣೆಯಲ್ಲಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣ ಬಳಕೆಯಾಗಿದೆ ಎನ್ನುವ ಆರೋಪ ಇತ್ತು. ಅಷ್ಟೇ ಅಲ್ಲದೇ ಕಳೆದ ಬಾರಿ ನಾಗೇಂದ್ರ ಆಪ್ತ ಸಹಾಯಕ ಮನೆ ಮೇಲೆ ದಾಳಿ ಮಾಡಿದಾಗ, ಗಣೇಶ್, ತುಕಾರಾಂ, ಭರತ್ ರೆಡ್ಡಿ, ನಾಗೇಂದ್ರ, ಎನ್.ಟಿ ಶ್ರೀನಿವಾಸ್‌ಗೆ ಹಣ ಸಂದಾಯ ಆಗಿರುವ ಬಗ್ಗೆ ಬರೆದಿಟ್ಟ ಡೈರಿ ಸಿಕ್ಕಿತ್ತು. ಅದೇ ಆಧಾರದ ಮೇಲೆ ಇಡಿ ದಾಳಿ ನಡೆಸಿ ಇಡೀ ದಿನ ಪರಿಶೀಲನೆ ನಡೆಸಿದ್ದಾರೆ. ಇದನ್ನೂ ಓದಿ: ಎಲೆಕ್ಟ್ರಾನಿಕ್ ಸಿಟಿ ಫ್ಲೈಓವರ್ ಮೇಲೆ ಸರಣಿ ಅಪಘಾತ – ಬೈಕ್ ಸವಾರನಿಗೆ ಗಾಯ

    ಎಲ್ಲರಿಗೂ ಒಂದೇ ಮಾದರಿಯ 28 ಪ್ರಶ್ನೆ:
    ಎಲ್ಲರನ್ನೂ ಅವರ ಮನೆಗಳಲ್ಲೇ ಲಾಕ್ ಮಾಡಿದ್ದ ಇಡಿ ಅಧಿಕಾರಿಗಳು 15 ತಾಸಿಗೂ ಹೆಚ್ಚು ಹೊತ್ತು ವಿಚಾರಣೆ ನಡೆಸಿದರು. ಎಲ್ಲರನ್ನೂ ಪ್ರತ್ಯೇಕವಾಗಿ ಕೂರಿಸಿ ಒಂದೇ ಮಾದರಿಯ 28 ಪ್ರಶ್ನೆಗಳನ್ನು ಕೇಳಲಾಗಿದ್ದು, ಉತ್ತರಗಳನ್ನ ನಮೂದಿಸಲಾಗಿದೆ. ಅಲ್ಲದೇ ಕಳೆದ ಎರಡು ವರ್ಷಗಳ ಬ್ಯಾಂಕ್ ಖಾತೆಗಳ ವ್ಯವಹಾರದ ಬಗ್ಗೆ ಮಾಹಿತಿ ಪಡೆದಿದ್ದಾರೆ. ಜೊತೆಗೆ ನಾಗೇಂದ್ರ ಆಪ್ತ ಡೈರಿಯಲ್ಲಿ ಬರೆದಿದ್ದ ಹೆಸರು ಹಾಗೂ ಹಣದ ವಿವರದ ಕಾಪಿ ತೋರಿಸಿ ಪ್ರಶ್ನೆಗಳ ಸುರಿಮಳೆ ಗೈದಿದ್ದಾರೆ. ಎಲ್ಲರ ಮೊಬೈಲ್ ವಶಕ್ಕೆ ಪಡೆದು ಡಿಲೀಟೆಡ್ ಮೆಸೇಜ್‌ಗಳನ್ನು ರಿಟ್ರೀವ್ ಮಾಡಲಾಗಿದೆ. ದಾಳಿಗೆ ಒಳಗಾಗದ ಎಲ್ಲಾ ಶಾಸಕರು ಹಾಗೂ ಸಂಸದರ ಮನೆಯಿಂದ ಒಂದಷ್ಟು ಮಹತ್ವದ ದಾಖಲೆಗಳನ್ನು ಇಡಿ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಇದರ ನಡುವೆ ದಾಳಿಗೊಳಗಾದ ಶಾಸಕರು ಸಂಸದರಿಗೆ ಹೆಚ್ಚಿನ ವಿಚಾರಣೆ ಎದುರಿಸಲು ತಿಳಿಸಲಾಗಿದೆ. ಬೆಂಗಳೂರಿನ ಇಡಿ ಕಚೇರಿಗೆ ಬರುವಂತೆ ಸೂಚನೆ ನೀಡಿ ಅಧಿಕಾರಿಗಳು ವಾಪಸ್ ತೆರಳಿದ್ದಾರೆ. ಇದನ್ನೂ ಓದಿ: ಧಾರಾಕಾರ ಮಳೆಗೆ 101 ಬಾಗಿಲುಗಳುಳ್ಳ 160 ವರ್ಷಗಳ ಕಟ್ಟಡ ಕುಸಿತ

    ಇಡಿ ದಾಳಿಗೆ ಒಳಗಾಗಿ, ವಿಚಾರಣೆ ಎದುರಿಸಿದ ಬಳಿಕ ಬಳ್ಳಾರಿ ನಗರ ಶಾಸಕ ನಾರಾ ಭರತ್ ರೆಡ್ಡಿ ಪ್ರತಿಕ್ರಿಯೆ ನೀಡಿದ್ದು, ನನ್ನ ಮನೆಯಲ್ಲಿ ಒಂದು ತುಂಡನ್ನೂ ಸೀಜ್ ಮಾಡಿಲ್ಲ. ಏನೇ ದಾಖಲಾತಿ ಕೇಳಿದ್ರೂ ಕೊಡುತ್ತೇನೆ. ಕಾಂಗ್ರೆಸ್ ನಾಯಕರನ್ನು ಟಾರ್ಗೆಟ್ ಮಾಡಲಾಗುತ್ತಿದೆ ಎಂದು ಆರೋಪಿಸಿದರು. ಇದನ್ನೂ ಓದಿ: ಉಡುಪಿ | ಭಾರೀ ಮಳೆಗೆ ರೈಲ್ವೇ ಸೇತುವೆ ಬಳಿಯೇ ಭೂಕುಸಿತ

  • ಇಡಿ ಸಾಂವಿಧಾನಿಕ ಸಂಸ್ಥೆ ಅಲ್ಲ, ಬಿಜೆಪಿ ಅಂಗಸಂಸ್ಥೆ: ಇಡಿ ದಾಳಿಗೆ ಹರಿಪ್ರಸಾದ್ ಆಕ್ಷೇಪ

    ಇಡಿ ಸಾಂವಿಧಾನಿಕ ಸಂಸ್ಥೆ ಅಲ್ಲ, ಬಿಜೆಪಿ ಅಂಗಸಂಸ್ಥೆ: ಇಡಿ ದಾಳಿಗೆ ಹರಿಪ್ರಸಾದ್ ಆಕ್ಷೇಪ

    ನವದೆಹಲಿ: ವಾಲ್ಮೀಕಿ ನಿಗಮ ಮಂಡಳಿಯಲ್ಲಿ ಭ್ರಷ್ಟಚಾರ ನಡೆದಿದ್ದರೆ (Valmiki Scam) ಕಾನೂನು ಚೌಕಟ್ಟಿನಲ್ಲಿ ಕ್ರಮ ಆಗಲಿ ಆದರೆ ಅದು ರಾಜಕೀಯ ಪ್ರೇರಿತ ದಾಳಿಯಾಗಬಾರದು ಎಂದು ಪರಿಷತ್ ಸದಸ್ಯ ಬಿ.ಕೆ ಹರಿಪ್ರಸಾದ್ (BK Hariprasad) ಹೇಳಿದ್ದಾರೆ.

    ನವದೆಹಲಿಯಲ್ಲಿ ಮಾತನಾಡಿದ ಅವರು ವಾಲ್ಮಿಕಿ ಹಗರಣದಲ್ಲಿ ತಪ್ಪಾಗಿದೆ ಎಂದು ಎಲ್ಲರಿಗೂ ಗೊತ್ತಿದೆ. ಆದರೆ ಸಚಿವರ ಪಾತ್ರ ಇಲ್ಲ ಎಂದು ಸಾಬೀತಾಗಿದೆ. ಇಡಿ (ED) ಸಾಂವಿಧಾನಿಕ ಸಂಸ್ಥೆ ಅಲ್ಲ, ಬಿಜೆಪಿ ಅಂಗಸಂಸ್ಥೆ. ರಾಜಕೀಯ ಕಾರಣಗಳಿಗೆ ದಾಳಿಯಾಗಿದೆ ಎಂದು ಆರೋಪಿಸಿದರು. ಇದನ್ನೂ ಓದಿ: ಕಾಂಗ್ರೆಸ್ ಶಾಸಕರು, ಸಂಸದರ ಮೇಲೆ ಇಡಿ ದಾಳಿ ರಾಜಕೀಯ ಪ್ರೇರಿತ: ಪೊನ್ನಣ್ಣ

    ಜಾತಿ ಮರು ಸಮೀಕ್ಷೆಗೆ ಹೈಕಮಾಂಡ್ ಸೂಚನೆ ನೀಡಿದ ಬಗ್ಗೆ ಮಾತನಾಡಿದ ಅವರು, ಈಗ ಮಾಡಿರುವ ವರದಿ ಹಳೆಯದಾಗಿದೆ. ಜಯ ಪ್ರಕಾಶ್ ಹೆಗಡೆ ವರದಿ ಅವೈಜ್ಞಾನಿಕ ಎಂದರು. ಆದರೆ ಹೇಗೆ ಎಂದು ಯಾರು ಹೇಳಿಲ್ಲ. ಮುಂದಿನ ದಿನಗಳಲ್ಲಿ ಹೇಗೆ ಸಮೀಕ್ಷೆ ಬರುತ್ತೆ ಎಂದು ಜನರು ಎದುರು ನೋಡುತ್ತಿದ್ದಾರೆ. ಇಂತಹದೇ ಆರೋಪಗಳು ಮುಂದೆಯೂ ಬರಬಹುದು. ಅವೈಜ್ಞಾನಿಕ ಏನು ಎಂಬುದು ಸ್ಪಷ್ಟಪಡಿಸಬೇಕು, ಅದನ್ನು ಸರಿಪಡಿಸಿಕೊಂಡು ಮತ್ತೊಮ್ಮೆ ಸಮೀಕ್ಷೆ ಮಾಡಬೇಕು. ತೆಲಂಗಾಣದಲ್ಲಿ ಸಮೀಕ್ಷೆ ಮಾಡಿ ತೋರಿಸಿದೆ, ಇಲ್ಲೂ ಮಾಡುತ್ತೇವೆ. ಈಗಾಗಲೇ ಸಮೀಕ್ಷೆಯಿಂದ 187 ಕೊಟಿ ನಷ್ಟವಾಗಬಹುದು, ಮುಂದೆ ಹೀಗೆ ಆಗಬಾರದು. ಬಲಾಢ್ಯರಿಗೆ ಮಾತ್ರ ಅನುಕೂಲವಾಗಬಾರದು. ಹಿಂದುಳಿದ ಜನರಿಗೂ ಸಂವಿಧಾನದ ಆಶಯ ತಲುಪಬೇಕು ಎಂದು ಹೇಳಿದರು. ಇದನ್ನೂ ಓದಿ: ವಾಲ್ಮೀಕಿ ಹಗರಣದ 187 ಕೋಟಿ ಹಣ ಒಡವೆ ಅಂಗಡಿ, ಕಾರ್ ಶೋರೂಂ, ಬಾರ್‌ಗೆ ಹೋಗಿದೆ: ಸಿ.ಟಿ.ರವಿ ಆರೋಪ

    ಸಚಿವ ಸಂಪುಟ ಪುನಾರಚನೆ ಸುದ್ದಿ ಎರಡು ದಿನದಿಂದ ಓಡಾಡುತ್ತಿದೆ. ಇದು ಬೆಟ್ಟ ಅಗೆದು ಇಲಿ ಹಿಡಿದಂತೆ ಆಗಲಿದೆ. ಏನು ಆಗಲ್ಲ, ಸರ್ಕಾರ ಆರಾಮವಾಗಿ ನಡೆದುಕೊಂಡು ಹೋಗುತ್ತದೆ. ಸಚಿವ ಸಂಪುಟ ಪುನಾರಚನೆ ಆಗಲ್ಲ ಎಂದರು. ಇದನ್ನೂ ಓದಿ: ಕಾಂಗ್ರೆಸ್ ನಾಯಕರನ್ನ ತೇಜೋವಧೆ ಮಾಡಲು ಇಡಿ ದಾಳಿ: ಅಶೋಕ್ ಪಟ್ಟಣ

  • ವಾಲ್ಮೀಕಿ ಹಗರಣದ 187 ಕೋಟಿ ಹಣ ಒಡವೆ ಅಂಗಡಿ, ಕಾರ್ ಶೋರೂಂ, ಬಾರ್‌ಗೆ ಹೋಗಿದೆ: ಸಿ.ಟಿ.ರವಿ ಆರೋಪ

    ವಾಲ್ಮೀಕಿ ಹಗರಣದ 187 ಕೋಟಿ ಹಣ ಒಡವೆ ಅಂಗಡಿ, ಕಾರ್ ಶೋರೂಂ, ಬಾರ್‌ಗೆ ಹೋಗಿದೆ: ಸಿ.ಟಿ.ರವಿ ಆರೋಪ

    ಚಿಕ್ಕಮಗಳೂರು: ವಾಲ್ಮೀಕಿ ಹಗರಣದ 187 ಕೋಟಿ ರೂ. ಹಣ ಒಡವೆ ಅಂಗಡಿ, ಪೋರ್ಶೆ ಕಾರು ಶೋರೂಂ, ಬಾರ್‌ಗೆ ಹೋಗಿದೆ ಎಂದು ಕಾಂಗ್ರೆಸ್ ಸರ್ಕಾರದ ವಿರುದ್ಧ ಪರಿಷತ್ ಸದಸ್ಯ ಸಿ.ಟಿ.ರವಿ ವಾಗ್ದಾಳಿ ನಡೆಸಿದರು.

    ಇಡಿ ದಾಳಿ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, ಲೋಕಸಭೆ ಚುನಾವಣೆಗೆ ಈ ಹಣ ದುರ್ಬಳಕೆ ಮಾಡಿಕೊಂಡಿದ್ದಾರೆ ಅಂತ ಅಂಕಿ-ಅಂಶ ಸಮೇತ ಮಾಹಿತಿ ನೀಡಿದ್ವಿ. ನಾವು ಮಾಹಿತಿ ಕೊಟ್ಟರೂ ಸಿಐಡಿ ಸರಿಯಾಗಿ ತನಿಖೆ ಮಾಡಲಿಲ್ಲ. ಈಗ ಇಡಿ ರೇಡ್ ಮಾಡಿರೋದನ್ನ ನಾನು ಸ್ವಾಗತಿಸುತ್ತೇನೆ, ತಪ್ಪು ಮಾಡಿದವರಿಗೆ ಶಿಕ್ಷೆಯಾಗಲಿ. ಪರಿಶಿಷ್ಟ ಪಂಗಡದ ಗಂಗಾ ಕಲ್ಯಾಣ, ಸ್ವಯಂ ಉದ್ಯೋಗ ಯೋಜನೆ, ವಾಹನ-ಭೂ ಖರೀದಿಗೆ ಬಳಕೆ ಆಗಬೇಕಾದ ಹಣ ಚುನಾವಣೆ ಅಕ್ರಮ, ಬಾರ್, ಕಾರು ಶೋ ರೂಂಗೆ ಬಳಕೆಯಾಗೋದು ದರೋಡೆಗಿಂತ ಕ್ರೂರವಾಗಿರೋದು. ವ್ಯವಸ್ಥೆಯೊಳಗೆ ಇರೋರೆ ಮಾಡಿದ ದರೋಡೆ, ಸಮಗ್ರ ತನಿಖೆಯಾಗಬೇಕು ಎಂದು ಒತ್ತಾಯಿಸಿದರು.

    ರಾಜ್ಯದಲ್ಲಿ ಮತ್ತೊಮ್ಮೆ ಜಾತಿಗಣತಿ ವಿಚಾರ ಕುರಿತು ಪ್ರತಿಕ್ರಿಯಿಸಿ, ಕಾಂತರಾಜ್ ವರದಿಯನ್ನು ರಾಜ್ಯ ಸರ್ಕಾರ ವೈಜ್ಞಾನಿಕ ವರದಿ ಎಂದು ಸಮರ್ಥನೆ ಮಾಡಿತ್ತು. ಸಿಎಂ ಅದನ್ನ ತಮ್ಮ ಮಹತ್ವಾಕಾಂಕ್ಷೆ ಎಂದು ಹೇಳುತ್ತಿದ್ದರು. ಕಾಂತರಾಜ್ ವರದಿ ಬಳಿಕ ಜಯಪ್ರಕಾಶ್ ಹೆಗ್ಡೆ ಸ್ಕೂಟ್ನಿ ಮಾಡಿದ್ದೇನೆ ಎಂದಿದ್ರು. ನೂರಾರು ಕೋಟಿ ಖರ್ಚು ಮಾಡಿದ್ದಾರೆ. ಈಗ ಮತ್ತೆ ಜಾತಿ ಗಣತಿ ಅಂತಿದ್ದಾರೆ. ಹಾಗಾದ್ರೆ ಮೊದಲಿನ ವರದಿ ಅವೈಜ್ಞಾನಿಕ ಅಂತ ಒಪ್ಕೊಳ್ತೀರಾ? ವೈಜ್ಞಾನಿಕ ಎಂದು ಒಪ್ಪಿಕೊಳ್ಳುವುದಾದರೆ ಸರ್ಕಾರದ ಹಣವನ್ನು ವಸೂಲಿ ಮಾಡಿ ಎಂದು ಆಗ್ರಹಿಸಿದರು.

    ಕೇಂದ್ರ ಸರ್ಕಾರ ಜನಗಣತಿ ಜೊತೆ ಜಾತಿ ಗಣತಿಯನ್ನು ಪ್ರಕಟ ಮಾಡಿದೆ. ಜನಗಣತಿ ಹಾಗೂ ಜಾತಿ ಗಣತಿ ಮಾಡುವ ಸಂವಿಧಾನದತ್ತ ಅಧಿಕಾರವಿರುವುದು ಕೇಂದ್ರಕ್ಕೆ, ರಾಜ್ಯಕ್ಕಲ್ಲ. ರಾಜಕೀಯ ಕಾರಣಕ್ಕೆ ವಿಷಯಾಂತರ ಮಾಡಲು ಈಗ ಮತ್ತೆ ಜಾತಿಗಣತಿ ಎನ್ನುತ್ತಿದ್ದಾರೆ. ನಿಮ್ಮ ಇಚ್ಛಾಶಕ್ತಿ ಇಲ್ಲದ ರಾಜಕೀಯ ತೆವಲಿಗೆ ಮತ್ತೆ, ಜಾತಿ ದುರ್ಬಳಕೆಗೆ ಮತ್ತೆ ನೂರಾರು ಕೋಟಿ ಖರ್ಚು ಮಾಡಬೇಕಾ? ಜಾತಿ ಎತ್ತು ಕಟ್ಟಲು ಸರ್ಕಾರದ ಹಣ ಬೇಕಾ? ಇದು ಕಾಂಗ್ರೆಸ್ ಹಣ ಅಲ್ಲ, ಜನರ ತೆರಿಗೆ ಹಣ. ಕಾಂತರಾಜ್ ವರದಿ ವೈಜ್ಞಾನಿಕ ಎಂದು ಜನರಿಗೆ ಮಂಕು ಬೂದಿ ಎರಚಲು ಸುಳ್ಳು ಹೇಳಿದ್ರಾ? ನಿಮ್ಮ ‘ಕೈ’ ಕಮಾಂಡ್ ಒತ್ತಡಕ್ಕೆ ವರದಿ ಬಲಿಯಾಯ್ತಾ? ನ್ಯಾಯ ಕುಡಿಸುತ್ತೇನೆ ಎಂದು ಹೇಳುತ್ತಿದ್ರಲ್ಲ, ತಿheಡಿe is ಥಿouಡಿ ಇಚ್ಛಾಶಕ್ತಿ. ಕಾಂತರಾಜ್, ಜಯಪ್ರಕಾಶ್ ವರದಿ, ದಲಿತರು, ಹಿಂದುಳಿದವರು ಯಾರಿಗೂ ನ್ಯಾಯ ಇಲ್ಲ… ಎಲ್ಲಿದೆ ನ್ಯಾಯ, ನಿಮ್ಮ ನಂಬಿದವರಿಗೆ ಯಾರಿಗೂ ನ್ಯಾಯ ಇಲ್ಲ ಎಂದು ಕಿಡಿಕಾರಿದರು.

    ತುಮಕೂರು ಜಿಲ್ಲೆಯನ್ನ ಬೆಂಗಳೂರು ಉತ್ತರ ಮಾಡುವ ವಿಚಾರ ಬಗ್ಗೆ ಮಾತನಾಡಿ, ಕೆಂಪೇಗೌಡರು ಬೆಂದಕಾಳೂರು ಎಂಬ ಹಳ್ಳಿಯನ್ನೇ ಬ್ರಾಂಡ್ ಮಾಡಿದ್ರು. ಸಿಂಗಾಪುರ ಒಂದು ಕಾಲದಲ್ಲಿ ರೋಗಗ್ರಸ್ಥವಾಗಿದ್ದ ಸಣ್ಣ ಹಳ್ಳಿ. ಸಿಂಗಾಪುರವನ್ನು ಅಲ್ಲಿಯವರು ಅಂತಾರಾಷ್ಟ್ರೀಯ ಮಟ್ಟಕ್ಕೆ ಬೆಳೆಸಿದರು. ಇವರಿಗೆ ಭವಿಷ್ಯದಲ್ಲಿ ತನ್ನ ಊರನ್ನೇ ಬ್ರಾಂಡ್ ಮಾಡುವ ತಾಕತ್ತು ಇಲ್ವಾ. ಬೆಂಗಳೂರು ಹೆಸರಿನಲ್ಲೇ ಇವರು ತಮ್ಮ ಬೇಳೆ ಬೇಯಿಸಿಕೊಳ್ಳಬೇಕಾ? ತುಮಕೂರಿಗೂ ಒಂದು ಐಡೆಂಟಿಟಿ ಕೊಡುವ ತಾಕತ್ತು ಇವರಿಗಿಲ್ವಾ? ಹಳ್ಳಿಯನ್ನೇ ಬ್ರಾಂಡ್ ಮಾಡುವ ದಾರ್ಶನಿಕರು ಇರುವ ಕಡೆ ಇವರು ಬೆಂಗಳೂರು ಹೆಸರಲ್ಲೇ ಬೇಳೆ ಬೇಯಿಸಿಕೊಳ್ಳಬೇಕಾ? ತುಮಕೂರಿನ್ನೇ ಜಾಗತೀಕ ಮಟ್ಟದಲ್ಲಿ ಬೆಳೆಸೋಕೆ ಇವರಿಗೆ ಬರೋದಿಲ್ವಾ? ಇವರು ಕೆಂಪೇಗೌಡರ ಹೆಸರಲ್ಲೇ ಬೇಳೆ ಬೇಯಿಸಿಕೊಳ್ಳಲು ನೋಡುತ್ತಾರೆ ಎಂದು ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದರು.

  • ಕಾಂಗ್ರೆಸ್ ನಾಯಕರನ್ನ ತೇಜೋವಧೆ ಮಾಡಲು ಇಡಿ ದಾಳಿ: ಅಶೋಕ್ ಪಟ್ಟಣ

    ಕಾಂಗ್ರೆಸ್ ನಾಯಕರನ್ನ ತೇಜೋವಧೆ ಮಾಡಲು ಇಡಿ ದಾಳಿ: ಅಶೋಕ್ ಪಟ್ಟಣ

    ಬೆಂಗಳೂರು: ಕಾಂಗ್ರೆಸ್ ನಾಯಕರನ್ನ ತೇಜೋವಧೆ ಮಾಡಲು ಇಡಿ ದಾಳಿ (ED Raid) ಮಾಡಿದೆ ಎಂದು ವಿಧಾನಸಭೆ ಸರ್ಕಾರದ ಮುಖ್ಯ ಸಚೇತಕ ಅಶೋಕ್ ಪಟ್ಟಣ (Ashok Pattan) ಇಡಿ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.

    ಇಡಿ ದಾಳಿ ಬಗ್ಗೆ ವಿಧಾನಸೌಧದಲ್ಲಿ ಮಾತನಾಡಿದ ಅವರು, ಸಂಸದ ತುಕಾರಾಂ, ಶಾಸಕ ನಾಗೇಂದ್ರ ಸೇರಿದಂತೆ ಹಲವರ ಮೇಲೆ ಇಡಿ ದಾಳಿ ಮಾಡಿದೆ. ಎಂಪಿ ತುಕಾರಾಂ ಸಭ್ಯಸ್ಥ ವ್ಯಕ್ತಿ. ಬಳ್ಳಾರಿಯಲ್ಲಿ ಕಾಂಗ್ರೆಸ್‌ನವರ ಮೇಲೆ ದಾಳಿ ನಡೆದಿದೆ. ಇಡಿ ದಾಳಿ ಮಾಡಿ ತೇಜೊವಧೆಗೆ ಮಾಡೋ ಕೆಲಸ ಮಾಡ್ತಿದ್ದಾರೆ. ಈಗಾಗಲೇ ತನಿಖೆ ನಡೆಯುತ್ತಿದೆ. ಈಗ ದಾಳಿ ಮಾಡ್ತಿರೋದಕ್ಕೆ ರಾಜಕೀಯ ಕಾರಣ ಇದೆ ಅಂತ ಆರೋಪ ಮಾಡಿದರು. ಇದನ್ನೂ ಓದಿ: ಬಳ್ಳಾರಿ ಚುನಾವಣೆಗೆ 21 ಕೋಟಿ ಹಣ ಬಳಕೆ ಆರೋಪ – ಸಂಸದ ತುಕಾರಾಂ ಇಡಿ ವಶಕ್ಕೆ

    ಚುನಾವಣೆಗೆ ಹಣ ಬಳಕೆಯಾಗಿದೆ ಅನ್ನೋದಕ್ಕೆ ತನಿಖೆ ನಡೆಯುತ್ತಿದೆ. ಕೇಂದ್ರದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಕಾಂಗ್ರೆಸ್ ನಾಯಕರ ಮೇಲೆ ದಾಳಿ ಆಗ್ತಿದೆ. ತನಿಖೆಯಲ್ಲಿ ತಪ್ಪಾಗಿರೋದು ಕಂಡು ಬಂದ್ರೆ ಶಿಕ್ಷೆಯಾಗಲಿ‌. ಅದು ಬಿಟ್ಟು ಹೀಗೆ ತೇಜೋವಧೆ ಮಾಡೋದು ಸರಿಯಲ್ಲ ಎಂದರು.

    ನಾಗೇಂದ್ರ ಅವರನ್ನ ಮತ್ತೆ ಕ್ಯಾಬಿನೆಟ್‌ಗೆ ಸೇರಿಸಿಕೊಳ್ಳೋ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ನಾಗೇಂದ್ರ ಅವರನ್ನ ಸಂಪುಟಕ್ಕೆ ತೆಗೆದುಕೊಳ್ಳೋದು ಹೈಕಮಾಂಡ್, ಸಿಎಂಗೆ ಬಿಟ್ಟಿದ್ದು ಎಂದು ತಿಳಿಸಿದರು. ಇದನ್ನೂ ಓದಿ: ವಾಲ್ಮೀಕಿ ಹಗರಣ; ಸಂಸದ ತುಕಾರಾಂ, ಮೂವರು ಶಾಸಕರ ಮನೆ ಮೇಲೆ ED ದಾಳಿ

  • ವಾಲ್ಮೀಕಿ ಹಗರಣ ತನಿಖೆಗೂ ಇ.ಡಿಗೂ ಏನ್ ಸಂಬಂಧ? – ಬಸವರಾಜ ರಾಯರೆಡ್ಡಿ

    ವಾಲ್ಮೀಕಿ ಹಗರಣ ತನಿಖೆಗೂ ಇ.ಡಿಗೂ ಏನ್ ಸಂಬಂಧ? – ಬಸವರಾಜ ರಾಯರೆಡ್ಡಿ

    – ಬಳ್ಳಾರಿಯಲ್ಲಿ ಇಡಿ ದಾಳಿಗೆ ರಾಯರೆಡ್ಡಿ ಖಂಡನೆ
    – ಕಾಂಗ್ರೆಸ್ ನಾಯಕರನ್ನ ಕುಗ್ಗಿಸಲು ದಾಳಿ

    ನವದೆಹಲಿ: ವಾಲ್ಮೀಕಿ ಹಗರಣ (Valmiki Scam) ತನಿಖೆಗೂ ಇಡಿಗೂ (ED) ಏನು ಸಂಬಂಧ ಎಂದು ಬಳ್ಳಾರಿಯಲ್ಲಿ ಸಂಸದ ಹಾಗೂ ಮೂವರು ಶಾಸಕರ ಮನೆ ಮೇಲೆ ಇಡಿ ದಾಳಿಯನ್ನು ಸಿಎಂ ಆರ್ಥಿಕ ಸಲಹೆಗಾರ ಬಸವರಾಜ ರಾಯರೆಡ್ಡಿ (Basavaraj Rayareddy) ಖಂಡಿಸಿದ್ದಾರೆ.

    ಈ ಕುರಿತು ದೆಹಲಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಐಟಿ ಹಾಗೂ ಇಡಿ ಇತ್ತಿಚಿನ ವರ್ಷಗಳಲ್ಲಿ ಮೋದಿ, ಬಿಜೆಪಿ ಅಧಿಕಾರಕ್ಕೆ ಬಂದ ಮೇಲೆ ಸೇಡಿನ ರಾಜಕರಣ ಮಾಡುತ್ತಿದೆ. ಬರೀ ಕಾಂಗ್ರೆಸ್ ನಾಯಕರ ಮನೆ ಮೇಲೆ ದಾಳಿ ಮಾಡೋದು ಸರಿಯಲ್ಲ. ಇದು ಪೂರ್ವ ನಿಯೋಜಿತ, ಇದು ಸರಿಯಿಲ್ಲ. ಕಾಂಗ್ರೆಸ್ ನಾಯಕರನ್ನು ಕುಗ್ಗಿಸಲು ದಾಳಿ ಮಾಡಲಾಗುತ್ತಿದೆ. ವಾಲ್ಮೀಕಿ ಹಗರಣ ಆಗಿಲ್ಲ ಎಂದು ಹೇಳುತ್ತಿಲ್ಲ. ತನಿಖೆ ನಡೆಯುತ್ತಿದೆ, ತನಿಖೆಯಿಂದ ಸತ್ಯ ಹೊರ ಬರಲಿದೆ. ತನಿಖೆ ಆಗಲಿ ಎಂದರು. ಇದನ್ನೂ ಓದಿ: ಬಳ್ಳಾರಿ ಚುನಾವಣೆಗೆ ವಾಲ್ಮೀಕಿ ಹಣ ಬಳಕೆ; ಮತದಾರರಿಗೆ ತಲಾ 200 ರೂ. ಹಂಚಿಕೆ – ಯಾವ ಕ್ಷೇತ್ರಕ್ಕೆ ಎಷ್ಟು?

    ಜಾತಿ ಗಣತಿ ಸರ್ವೆ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ಇದು ಸಿಎಂ ಸಿದ್ದರಾಮಯ್ಯಗೆ ಹಿನ್ನಡೆ ಅಲ್ಲ. ವರದಿ ಪ್ರಕಟಿಸಿ ಎಂದು ನಾನೇ ಮೊದಲು ಹೇಳಿದ್ದು. ಸತ್ಯ ಹೊರಬರಲಿ ಎಂದು ಸಿಎಂಗೆ ನಾನು ಮೊದಲೇ ಹೇಳಿದ್ದೆ. ಸಮೀಕ್ಷೆ ತಿದ್ದುಪಡಿ ಮಾಡಿ ಅಂತಾ ಹೇಳಿದ್ದೆ. ಹತ್ತು ವರ್ಷಗಳ ಹಿಂದೆ ಮಾಡಿದ್ದ ಸರ್ವೆ ಸರಿಯಿಲ್ಲ ಎಂದು ಹಲವರು ಹೇಳಿದ್ದರು. ಸದ್ಯ ಹೈಕಮಾಂಡ್ ಕೂಡ ಮರುಸರ್ವೆ ಮಾಡಲು ಹೇಳಿದೆ. ಪ್ರಬಲ ಸಮುದಾಯದ ಒತ್ತಾಯ ಅಂತಾ ಅಲ್ಲ, ಜಾತಿ ಸಮೀಕ್ಷೆ ಮಾಡುವಾಗ ಬರೆಸುವಾಗ ಸರಿಯಾಗಿ ಬರೆಸಿದ್ದರೆ ಹಾಗೆ ಆಗುತ್ತಿರಲಿಲ್ಲ. ಸರಿಯಾಗಿ ಬರೆಸಿ ಎಂದು ಆಯಾ ಮುಖಂಡರು ಹೇಳಿದ್ದಾರೆ. ಹೀಗಾಗಿ ಆಯಾ ಮುಖಂಡರು ಸರಿಯಾಗಿ ಹೇಳಿ ಬರೆಸಲಿ. ಈ ಬಾರಿ ಸರಿಯಾಗಿ ಬರೆಸಿದರೆ ಯಾವುದೇ ತೊಂದರೆ ಆಗಲ್ಲ. ಆಧಾರ್ ಪಡೆದು ಅದರ ಮೇಲೆ ಸಹಿ ಹಾಕಿ ಈ ಬಾರಿ ಜಾತಿ ಸಮೀಕ್ಷೆ ನಡೆಸಲು ಸಲಹೆ ನೀಡಲಾಗಿದೆ ಎಂದು ತಿಳಿಸಿದರು. ಇದನ್ನೂ ಓದಿ: ಜನಾರ್ದನ ರೆಡ್ಡಿಗೆ ಬಿಗ್‌ ರಿಲೀಫ್‌ – ತೆಲಂಗಾಣ ಹೈಕೋರ್ಟ್‌ನಿಂದ ಜಾಮೀನು

    ಸಚಿವ ಸಂಪುಟ ಪುನರ್ ರಚನೆ ವಿಚಾರವಾಗಿ ಮಾತನಾಡಿದ ಅವರು, ಇದೆಲ್ಲಾ ಊಹಾಪೋಹ. ಪುನರ್ ರಚನೆ ವಿಚಾರ ಸಿಎಂಗೆ ಬಿಟ್ಟದ್ದು. ನಾನು 8 ಬಾರಿ ಶಾಸಕನಾದವನು, ನನ್ನ ಸಚಿವರಾಗಿ ಮಾಡಬೇಕು ಅಂದರೆ ಮಾಡಲಿ. ಸಚಿವರಾಗಿ ಮಾಡಿದರೆ ಸೇವೆ ಮಾಡುತ್ತೇನೆ ಎಂದು ಹೇಳಿದರು. ಇದನ್ನೂ ಓದಿ: ಕೇರಳ ಕರಾವಳಿಯಲ್ಲಿ ಹಡಗು ಅಗ್ನಿ ದುರಂತ – ಬೆಂಕಿ ತಗುಲಿ 48 ಗಂಟೆ ಕಳೆದ್ರೂ ಆರದ ಬೆಂಕಿಯ ಜ್ವಾಲೆ