Tag: Bendigeri

  • ಕೊಲೆ ಆರೋಪಿ ಗೋವಾ, ಮಹಾರಾಷ್ಟ್ರದಲ್ಲಿ ತಲೆಮರೆಸಿಕೊಳ್ಳಲು ಪ್ಲ್ಯಾನ್‌ ಮಾಡಿದ್ದ: ರೇಣುಕಾ ಸುಕುಮಾರ

    ಕೊಲೆ ಆರೋಪಿ ಗೋವಾ, ಮಹಾರಾಷ್ಟ್ರದಲ್ಲಿ ತಲೆಮರೆಸಿಕೊಳ್ಳಲು ಪ್ಲ್ಯಾನ್‌ ಮಾಡಿದ್ದ: ರೇಣುಕಾ ಸುಕುಮಾರ

    – ಮೊಬೈಲ್ ಬಳಸುತ್ತಿರಲಿಲ್ಲ, ಯಾರೊಂದಿಗೂ ಸಂಪರ್ಕದಲ್ಲಿರಲಿಲ್ಲ
    – ಅಂಜಲಿ-ವಿಶ್ವ ಪ್ರೀತಿಸುತ್ತಿದ್ದರಂತೆ – ಪೊಲೀಸ್ ಆಯುಕ್ತರ ಸ್ಫೋಟಕ ಹೇಳಿಕೆ

    ಹುಬ್ಬಳ್ಳಿ: ನೇಹಾ ಹತ್ಯೆ ಮಾದರಿಯಲ್ಲಿ ನಡೆದಿದ್ದ ಅಂಜಲಿ ಕೊಲೆ ಪ್ರಕರಣದ (Anjali Murder Case) ಆರೋಪಿ ವಿಶ್ವನನ್ನು ಕೊನೆಗೂ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಆದ್ರೆ ಆರೋಪಿ ವಿಶ್ವ ಗಂಭೀರ ಗಾಯಗೊಂಡಿರುವ ಹಿನ್ನೆಲೆ ಇಲ್ಲಿನ ಕಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.

    ಪ್ರಕರಣದ ಕುರಿತು ಮಾತನಾಡಿರುವ ಹು-ಧಾ ಪೋಲಿಸ್ ಆಯುಕ್ತರಾದ ರೇಣುಕಾ ಸುಕುಮಾರ (Renuka Sukumar), ಆರೋಪಿ ವಿಶ್ವನನ್ನ ಪತ್ತೆಹಚ್ಚುವುದಕ್ಕಾಗಿ 8 ತಂಡಗಳನ್ನು ರಚನೆ ಮಾಡಿದ್ದೆವು. ಗುರುವಾರ ರೈಲ್ವೆ ಪೊಲೀಸರ ಸಹಾಯದಿಂದ ಆರೋಪಿ ಸಿಕ್ಕಿಬಿದ್ದಿದ್ದಾನೆ. ಆರೋಪಿ ಸೆರೆ ಹಿಡಿಯುವ ವೇಳೆ ಟ್ರೈನ್‌ನಿಂದ ಬಿದ್ದು ಮುಖ ಮತ್ತು ತಲೆಯ ಭಾಗಕ್ಕೆ ಭಾರೀ ಪೆಟ್ಟಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾನೆ ಎಂದು ತಿಳಿಸಿದ್ದಾರೆ.

    ಹೇಗಿತ್ತು ಪೊಲೀಸರ ತನಿಖೆ?
    ವಿಶ್ವ ಕೊಲೆ ಮಾಡಿದ ಬಳಿಕ ಹುಬ್ಬಳ್ಳಿಯಿಂದ ದಾವಣೆಗೆರೆ ಬಸ್ ಹತ್ತಿದ್ದಾನೆ. ಮಾರ್ಗಮಧ್ಯೆ ಬಸ್ ಇಳಿದು, ಹಾವೇರಿಗೆ ಹೋಗಿದ್ದಾನೆ. ಅಲ್ಲಿಂದ ಪುನಃ ಮೈಸೂರು ಬಸ್ ಹತ್ತಿದ್ದ, ಅಲ್ಲಿಂದಲೂ ಇಳಿದು, ವಿಶ್ವಮಾನವ ಟ್ರೈನ್‌ನಲ್ಲಿ (VishwaManava Train) ಮೈಸೂರಿನ ಕಡೆಗೆ ಹೊರಟಿದ್ದ. ಅಲ್ಲಿಂದ ಗೋವಾ, ಮಹಾರಾಷ್ಟ್ರಕ್ಕೆ ಹೋಗಿ ತಲೆಮರೆಸಿಕೊಳ್ಳಲು ಪ್ಲ್ಯಾನ್‌ ಮಾಡಿದ್ದ ಅನ್ನೋ ಮಾಹಿತಿಯಿದೆ. ಆರೋಪಿ ಮೊಬೈಲ್ ಸೇರಿದಂತೆ ಯಾವುದೇ ಎಲೆಕ್ಟ್ರಾನಿಕ್‌ ಉಪಕರಣ ಬಳಸುತ್ತಿರಲಿಲ್ಲ. ತಂದೆ-ತಾಯಿ ಸ್ನೇಹಿತರೊಟ್ಟಿಗೂ ಸಂಪರ್ಕದಲ್ಲಿ ಇರಲಿಲ್ಲ. ಎಲ್ಲಿ ಕೆಲಸಕ್ಕೆ ಹೋಗುತ್ತಿದ್ದನೋ ಅಲ್ಲಿಯೇ ಉಳಿದುಕೊಳ್ಳುತ್ತಿದ್ದ. ಆದ್ದರಿಂದ ಹುಡುಕಾಟ ಸವಾಲಾಗಿತ್ತು. 8 ತಂಡಗಳನ್ನು ರಚಿಸಿ, ಎಲ್ಲಾ ಆಯಾಮಗಳಲ್ಲೂ ತನಿಖೆ ನಡೆಸಲಾಗುತ್ತಿತ್ತು. ಬಳಿಕ ರೈಲ್ವೆ ಪೊಲೀಸರ ಸಹಾಯದಿಂದ ಸೆರೆ ಹಿಡಿಯಲಾಯಿತು. ಬೆಳಗ್ಗೆ 4:30ರ ವೇಳೆಗೆ ಆರೋಪಿಯನ್ನು ನಮ್ಮ ಕಸ್ಟಡಿಗೆ ತೆಗೆದುಕೊಂಡಿದ್ದೇವೆ ಎಂದು ಪೊಲೀಸ್‌ ಆಯುಕ್ತರು ತಿಳಿಸಿದ್ದಾರೆ.

    ಸದ್ಯ ಆರೋಪಿಗೆ ತಲೆ ಮತ್ತು ಮುಖದ ಭಾಗಕ್ಕೆ ತೀವ್ರ ಪೆಟ್ಟಾಗಿದೆ. ವೈದ್ಯರು ಉನ್ನತ ಮಟ್ಟದ ಚಿಕಿತ್ಸೆ ನೀಡುತ್ತಿದ್ದಾರೆ. ಅವರು ಸಂಪೂರ್ಣ ಚಿಕಿತ್ಸೆ ಮುಗಿಸಿದ ನಂತರ ವಿಚಾರಣೆಗೆ ಪಡೆಯುತ್ತೇವೆ. ವಿಶ್ವನ ಮೇಲೆ ಬೈಕ್ ಕಳ್ಳತನದ ವಿಚಾರದಲ್ಲಿ 4 ಪ್ರಕರಣಗಳು ದಾಖಲಾಗಿತ್ತು. ಪ್ರಾಥಮಿಕ ಮಾಹಿತಿ ಪ್ರಕಾರ, ಅವರಿಬ್ಬರು ಪ್ರೀತಿಸುತ್ತಿದ್ದರಂತೆ. ಇತ್ತೀಚೆಗೆ ಹುಡಗನ ಫೋನ್ ಕರೆಗಳನ್ನು ಅಂಜಲಿ ಬ್ಲಾಕ್ ಮಾಡಿದ್ದಳು ಅಂತಾ ಹೇಳಿದ್ದಾನೆ. ಅವನಿಗೆ ಪ್ರಜ್ಞೆ ಬಂದ ನಂತರ ಮುಂದಿನ ವಿಚಾರಣೆ ನಡೆಸಲಾಗುತ್ತದೆ ಎಂದು ತಿಳಿಸಿದ್ದಾರೆ.

    ಯಾವುದೇ ಸಮಸ್ಯೆಯಿದ್ದರೂ ತಿಳಿಸಿ:
    ಇದೇ ವೇಳೆ ಪೊಲೀಸ್ ಆಯುಕ್ತರು, ಸಾರ್ವಜನಿಕರಿಗೆ ಯಾವುದೇ ಸಮಸ್ಯೆಗಳಿದ್ದರೂ ಸಹಾಯವಾಣಿ ದೂ.ಸಂ. 112ಗೆ ಕರೆ ಮಾಡಿ. ಕರೆ ಮಾಡಿದ 20 ನಿಮಿಷಗಳಲ್ಲೇ ನಮ್ಮ ಪೊಲೀಸರು ಅಲ್ಲಿಗೆ ಬರಲಿದ್ದಾರೆ. ಸಮಸ್ಯೆಗಳನ್ನು ಬಗೆಹರಿಸುತ್ತಾರೆ ಎಂದು ಅಭಯ ನೀಡಿದ್ದಾರೆ.

  • ಅಂಜಲಿ ಹತ್ಯೆಗೈದಿದ್ದ ಆರೋಪಿ ಅರೆಸ್ಟ್ – ಬಗೆದಷ್ಟು ಬಯಲಾಗ್ತಿದೆ ವಿಶ್ವನ ದುಷ್ಕೃತ್ಯ

    ಅಂಜಲಿ ಹತ್ಯೆಗೈದಿದ್ದ ಆರೋಪಿ ಅರೆಸ್ಟ್ – ಬಗೆದಷ್ಟು ಬಯಲಾಗ್ತಿದೆ ವಿಶ್ವನ ದುಷ್ಕೃತ್ಯ

    ಹುಬ್ಬಳ್ಳಿ: ನೇಹಾ ಹತ್ಯೆ ಮಾದರಿಯಲ್ಲಿ ನಡೆದಿದ್ದ ಅಂಜಲಿ ಕೊಲೆ ಪ್ರಕರಣದ (Anjali Murder Case) ಆರೋಪಿಯನ್ನು ಕೊನೆಗೂ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

    ಆರೋಪಿ ವಿಶ್ವನ ಬಗ್ಗೆ ಬಗೆದಷ್ಟು ಆತನ ಕೃತ್ಯಗಳು ಬಯಲಾಗುತ್ತಿವೆ. ಈತನ ವೃತ್ತಿಯೇ ಕಳ್ಳತನ, ಪವೃತ್ತಿಯಲ್ಲಿ ಅಮಾಯಕ ಹೆಣ್ಣುಮಕ್ಕಳನ್ನು ಮೋಸ ಮಾಡುತ್ತಿದ್ದ. ಇಷ್ಟೇ ಅಲ್ಲದೇ ಮದ್ಯ ವ್ಯಸನಕ್ಕೆ ಬಲಿಯಾಗಿದ್ದ ಈತ ಹಲವು ಬಾರಿ ಕಳ್ಳತನ ಮಾಡಿ ಸಿಕ್ಕಿಕೊಂಡಿದ್ದ ಎಂದು ತಿಳಿದು ಬಂದಿದೆ. ಇದನ್ನೂ ಓದಿ: ಆಟೋದಲ್ಲಿ ಬಂದು ಅಂಜಲಿ ಕೊಲೆಗೈದು ಹಂತಕ ಎಸ್ಕೇಪ್- ಸಿಸಿಟಿವಿಯಲ್ಲಿ ದೃಶ್ಯ ಸೆರೆ

    ಗಂಡನನ್ನು ಕಳೆದು ಕೊಂಡಿರುವ ಆರೋಪಿಯ ತಾಯಿ ಸವಿತಾ, ಆತನ ಅಪರಾಧಗಳನ್ನು ನೋಡಲಾಗದೇ ದೂರದಲ್ಲಿದ್ದು ಹೊಟ್ಟೆಪಾಡಿಗೆ ಹೋಟೆಲ್‍ನಲ್ಲಿ ಕೆಲಸ ಮಾಡಿ ಜೀವನ ನಡೆಸುತ್ತಿದ್ದರು. ಇದೀಗ ಮಗನ ದುಷ್ಕೃತ್ಯಕ್ಕೆ ವಿಶ್ವನ ಮನೆಗೆ ಬೀಗ ಹಾಕಲಾಗಿದೆ. ಮತ್ತೊಂದು ಕಡೆ ಅವರನ್ನು ಮನೆ ಖಾಲಿ ಮಾಡುವಂತೆ ಮನೆಯ ಮಾಲೀಕರು ಒತ್ತಡ ಹಾಕುತ್ತಿದ್ದಾರೆ.

    ಆರೋಪಿ ವಿಶ್ವ ಯಾವಾಗಲಾದರೂ ಒಮ್ಮೆ ತಾಯಿಯನ್ನು ನೋಡಲು ಮನೆಗೆ ಬರುತ್ತಿದ್ದ. ಆಗೆಲ್ಲ ಆತನ ಬಗ್ಗೆ ವಿವಿಧ ಆರೋಪಗಳನ್ನು ಮಾಡುತ್ತಿದ್ದ ಜನ, ಆತನ ತಾಯಿಯ ಮುಖ ನೋಡಿ ಸುಮ್ಮನಾಗುತ್ತಿದ್ದರು. ಇದೀಗ ಆರೋಪಿಯ ವಿರುದ್ಧ ಜನರ ಆಕ್ರೋಶ ತೀವ್ರಗೊಂಡಿದ್ದು, ನೇಹಾ ಪ್ರಕರಣದಲ್ಲಿ ಆರೋಪಿಯನ್ನು ಎನ್‍ಕೌಂಟರ್ ಮಾಡಿದ್ರೆ, ಅಂಜಲಿ ಹತ್ಯೆ ನಡೆಯುತ್ತಿರಲಿಲ್ಲ. ಈಗ ವಿಶ್ವನನ್ನು ಎನ್‍ಕೌಂಟರ್ ಮಾಡಬೇಕು ಎಂದು ಆಗ್ರಹಿಸಿದ್ದಾರೆ. ಇದನ್ನೂ ಓದಿ: ಹುಬ್ಬಳ್ಳಿಯಲ್ಲಿ ಮನೆಗೆ ನುಗ್ಗಿ ಸಹೋದರಿಯರ ಮುಂದೆಯೇ ಯುವತಿಯ ಭೀಕರ ಹತ್ಯೆ – ಸಹಪಾಠಿಯಿಂದಲೇ ಕೃತ್ಯ

  • ಅಂಜಲಿ ಹತ್ಯೆ ಪ್ರಕರಣದಲ್ಲಿ ಪೊಲೀಸರಿಗೆ ತಲೆದಂಡ – ಪೊಲೀಸ್ ಇನ್ಸ್‌ಪೆಕ್ಟರ್‌, ಮುಖ್ಯ ಪೇದೆ ಅಮಾನತು!

    ಅಂಜಲಿ ಹತ್ಯೆ ಪ್ರಕರಣದಲ್ಲಿ ಪೊಲೀಸರಿಗೆ ತಲೆದಂಡ – ಪೊಲೀಸ್ ಇನ್ಸ್‌ಪೆಕ್ಟರ್‌, ಮುಖ್ಯ ಪೇದೆ ಅಮಾನತು!

    – ಆರೋಪಿಯಿಂದ ಜೀವ ಬೆದರಿಕೆ ಬಗ್ಗೆ ಮೊದಲೇ ದೂರು ನೀಡಿದ್ದ ಕುಟುಂಬ

    ಹುಬ್ಬಳ್ಳಿ: ಇಲ್ಲಿನ ವೀರಾಪುರ ಓಣಿಯ ಅಂಜಲಿ ಯುವತಿಯ ಹತ್ಯೆ ಪ್ರಕರಣದಲ್ಲಿ ಪೊಲೀಸರಿಗೆ ತಲೆದಂಡವಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಡಿಗೇರಿ ಪೊಲೀಸ್ ಇನ್ಸ್‌ಪೆಕ್ಟರ್‌ ಚಂದ್ರಶೇಖರ ಚಿಕ್ಕೋಡಿ ಹಾಗೂ ಠಾಣೆಯ ಮುಖ್ಯಪೇದೆ ರೇಖಾ ಅವರನ್ನ ಅಮಾನತುಗೊಳಿಸಿ ಹುಬ್ಬಳ್ಳಿ-ಧಾರವಾಡ ಪೊಲೀಸ್ ಆಯುಕ್ತರಾದ ರೇಣುಕಾ ಸುಕುಮಾರ್‌ ಅವರು ಆದೇಶ ಹೊರಡಿಸಿದ್ದಾರೆ.

    ಮೃತ ಯುವತಿ ಅಂಜಲಿ ಹತ್ಯೆಗೂ ಮುನ್ನ ಆರೋಪಿ ವಿಶ್ವನಿಂದ ಜೀವ ಬೆದರಿಕೆ ಇರುವುದಾಗಿ ಅಂಜಲಿ ಕುಟುಂಬಸ್ಥರು ಪೊಲೀಸರಿಗೆ ದೂರು ನೀಡಿದ್ದರು. ಆದ್ರೆ ಪೊಲೀಸರು ನಿರ್ಲಕ್ಷ್ಯ ವಹಿಸಿದ್ದರಿಂದ ಹತ್ಯೆ ನಡೆದಿದೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ. ಅಲ್ಲದೇ ಅಂಜಲಿ ಕುಟುಂಬಸ್ಥರು ಠಾಣೆಗೆ ಬಂದು ಹೋಗಿರುವುದಕ್ಕೆ ಠಾಣೆಯ ಸಿಸಿಟಿವಿಯಲ್ಲಿ ಸೆರೆಯಾಗಿರುವ ದೃಶ್ಯಗಳೂ ಇವೆ. ಹಾಗಾಗಿ ಇಬ್ಬರು ಅಧಿಕಾರಿಗಳನ್ನ ಸಮಾನತು ಮಾಡಲಾಗಿದೆ ಎಂದು ಉನ್ನತ ಮೂಲಗಳು ತಿಳಿಸಿವೆ. ಇದನ್ನೂ ಓದಿ: ದುಬೈನಲ್ಲಿ ಪ್ರವಾಸಿಗ ಕಳೆದುಕೊಂಡಿದ್ದ ವಾಚ್‌ ಹಿಂದಿರುಗಿಸಿ ಪ್ರಾಮಾಣಿಕತೆ ಮೆರೆದ ಭಾರತೀಯ ಹುಡುಗನಿಗೆ ಪ್ರಶಂಸೆ

    ಏನಿದು ಹತ್ಯೆ ಕೇಸ್?
    ನೇಹಾ ಪ್ರಕರಣ ಮಾಸುವ ಮುನ್ನವೇ ಹುಬ್ಬಳ್ಳಿಯಲ್ಲಿ ಮತ್ತೊಂದು ಕೊಲೆ ನಡೆದಿದೆ. ವೀರಾಪುರ ಓಣಿಯ 21 ವರ್ಷ ಅಂಜಲಿ ಎಂಬ ಯುವತಿ ಅಂಜಲಿ ಎಂಬಾಕೆಯನ್ನು ವಿಶ್ವ ಅಲಿಯಾಸ್ ಗಿರೀಶ್ ಎಂಬ ಯುವಕ ಭೀಕರವಾಗಿ ಹತ್ಯೆ ಮಾಡಿದ್ದಾನೆ. ಬೆಳಗಿನ ಜಾವ ಅಂಜಲಿ ಬಾಗಿಲು ತೆಗೆಯುತ್ತಿದ್ದಂತೆಯೇ 4 ಬಾರಿ ಚಾಕು ಇರಿದು ಎಸ್ಕೇಪ್ ಆಗಿದ್ದಾನೆ. ರಕ್ತದ ಮಡುವಿನಲ್ಲಿ ಅಂಜಲಿ ನೋಡಿ ಪೋಷಕರು ಕಣ್ಣೀರು ಹಾಕಿದ್ದರು. ಬಳಿಕ ಮೃತ ಅಂಜಲಿ ಕುಟುಂಬಕ್ಕೆ 25 ಲಕ್ಷ ಪರಿಹಾರ, ಒಬ್ಬರಿಗೆ ಸರ್ಕಾರಿ ನೌಕರಿ ನೀಡಬೇಕೆಂದು ಟೆಂಗಿನಕಾಯಿ ಸರ್ಕಾರಕ್ಕೆ ಮನವಿ ಪತ್ರ ಸಲ್ಲಿಸಿದ್ದಾರೆ. ಇದೇ ವೇಳೆ ನೇಹಾ ತಂದೆ ನಿರಂಜನ ಹಿರೇಮಠ 1 ಲಕ್ಷ ರೂ. ಧನ ಸಹಾಯ ಮಾಡಿ, ಸಾಂತ್ವನ ಹೇಳಿದ್ದಾರೆ.

    ಪ್ರಕರಣ ವರದಿ ಕೇಳಿದ ಮಹಿಳಾ ಆಯೋಗ:
    ಪ್ರಕರಣದ ಕುರಿತು ಕಮಿಷನರ್ ರೇಣುಕಾ ಮಾತಾಡಿ, ಅಂಜಲಿ ಪ್ರೀತಿ ನಿರಾಕರಿಸಿದ್ದಕ್ಕೆ ವಿಶ್ವ ಕೊಲೆ ಮಾಡಿರುವ ಶಂಕೆ ಇದೆ. 2 ವಿಶೇಷ ತಂಡ ರಚನೆ ಮಾಡಲಾಗಿದೆ. ಶಾಲಾ, ಕಾಲೇಜು, ಕಾರ್ಯಸ್ಥಳಗಳಲ್ಲಿ, ಮಹಿಳೆಯರು ಹೆಚ್ಚಾಗಿ ಸೇರುವ ಸ್ಥಳದಲ್ಲಿ ಪೊಲೀಸರು ಜಾಗೃತಿ ಮೂಡಿಸ್ತೇವೆ ಅಂದಿದ್ದಾರೆ. ಈ ಮಧ್ಯೆ, ಕೊಲೆಗಾರನ ವಿರುದ್ಧ ನಿರ್ದಾಕ್ಷಿಣ್ಯ ಕ್ರಮಕ್ಕೆ ಹುಬ್ಬಳ್ಳಿ-ಧಾರವಾಡ ಪೊಲೀಸ್ ಆಯುಕ್ತರಿಗೆ ಮಹಿಳಾ ಆಯೋಗ ಪತ್ರ ಬರೆದು ಒತ್ತಾಯಿಸಿದೆ, ಜೊತೆಗೆ ಪ್ರಕಣದ ಕುರಿತು ವರದಿ ನೀಡುವಂತೆ ಪತ್ರದ ಮೂಲಕ ಕೇಳಿದೆ. ಇದನ್ನೂ ಓದಿ: ಅಕ್ರಮ ಹಣ ವರ್ಗಾವಣೆ ಕೇಸ್‌: ಜಾರ್ಖಂಡ್‌ನ ಕಾಂಗ್ರೆಸ್‌ ಸಚಿವ ಅಲಂಗೀರ್ ಆಲಂ ಬಂಧನ!

  • ಹುಬ್ಬಳ್ಳಿಯಲ್ಲಿ ಮನೆಗೆ ನುಗ್ಗಿ ಸಹೋದರಿಯರ ಮುಂದೆಯೇ ಯುವತಿಯ ಭೀಕರ ಹತ್ಯೆ – ಸಹಪಾಠಿಯಿಂದಲೇ ಕೃತ್ಯ

    ಹುಬ್ಬಳ್ಳಿಯಲ್ಲಿ ಮನೆಗೆ ನುಗ್ಗಿ ಸಹೋದರಿಯರ ಮುಂದೆಯೇ ಯುವತಿಯ ಭೀಕರ ಹತ್ಯೆ – ಸಹಪಾಠಿಯಿಂದಲೇ ಕೃತ್ಯ

    – ನೇಹಾ ರೀತಿ ಹತ್ಯೆ ಮಾಡುವೆ ಎಂದಿದ್ದ ಹಂತಕ

    ಹುಬ್ಬಳ್ಳಿ: ಇಡೀ ದೇಶದಲ್ಲಿ ತೀವ್ರ ಸಂಚಲನ ಮೂಡಿಸಿದ್ದ ಹುಬ್ಬಳ್ಳಿ ಕಾಂಗ್ರೆಸ್ ಪಾಲಿಕೆ ಸದಸ್ಯ ನಿರಂಜನ್ ಅವರ ಪುತ್ರಿ ನೇಹಾ (Neha Hiremath) ಹತ್ಯೆ ಪ್ರಕರಣ ಮಾಸುವ ಮುನ್ನವೇ ಮತ್ತೊಂದು ಯುವತಿಯ (Young Woman)  ಬರ್ಬರ ಕೊಲೆಯಾಗಿದೆ. ಮನೆಯವರ ಮುಂದೆಯೇ ಯುವತಿಗೆ ಚಾಕು ಇರಿದು ಕೊಲೆ ಮಾಡಿದ ಘಟನೆ ಹುಬ್ಬಳ್ಳಿಯಲ್ಲಿ (Hubballi) ನಡೆದಿದೆ.

    ಅಂಜಲಿ ಅಂಬಿಗೇರ (21) ಕೊಲೆಯಾದ ಯುವತಿ. ಹುಬ್ಬಳ್ಳಿಯ ವೀರಾಪುರ ಓಣಿಯಲ್ಲಿ ಘಟನೆ ನಡೆದಿದ್ದು, ಮನೆಯಲ್ಲಿದ್ದ ಅಂಜಲಿಗೆ ಚಾಕು ಇರಿದು ಕೊಲೆ ಮಾಡಿ ಹಂತಕ ಎಸ್ಕೇಪ್ ಆಗಿದ್ದಾನೆ. ಗಿರೀಶ್ ಅಲಿಯಾಸ್ ವಿಶ್ವ ಈ ಕೃತ್ಯವೆಸಗಿದ್ದು, ಅಜ್ಜಿ ಮತ್ತು ಇಬ್ಬರು ಸಹೋದರಿಯರ ಮುಂದೆಯೇ ಅಂಜಲಿಯನ್ನು ಮನೆ ತುಂಬೆಲ್ಲಾ ಎಳೆದಾಡಿ ಚಾಕುವಿನಿಂದ ಚುಚ್ಚಿ ಭೀಕರ ಹತ್ಯೆಗೈದಿದ್ದಾನೆ. ಮೊದಲಿಗೆ ಮನೆಯ ಪಡಸಾಲಿಯಲ್ಲಿ ಅಂಜಲಿಗೆ ಚಾಕು ಹಾಕಿ, ಬಳಿಕ ಕುತ್ತಿಗೆ ಹಿಡಿದು ಗೋಡೆಯತ್ತ ಎಳೆದುಕೊಂಡು ಹೋಗಿ ಹೊಟ್ಟೆ ಭಾಗಕ್ಕೆ ಚಾಕು ಹಾಕಿದ್ದಾನೆ. ಅಷ್ಟಕ್ಕೇ ತೃಪ್ತಿಯಾಗದೇ ಅಲ್ಲಿಂದ ಅಡುಗೆಯ ಮನೆಗೆ ಎಳೆದೊಯ್ದು ಮನ ಬಂದಂತೆ ಚಾಕು ಚುಚ್ಚಿ ಅಂಜಲಿ ಕೊನೆಯುಸಿರೆಳೆದ ಬಳಿಕವೇ ಅಲ್ಲಿಂದ ಕಾಲ್ಕಿತ್ತಿದ್ದಾನೆ. ಇದನ್ನೂ ಓದಿ: ಕೇಸ್‌ ದಾಖಲಾಗುವ ಮೊದಲೇ A2 ಆರೋಪಿಯನ್ನು ಬಂಧಿಸಿದ್ದು ಅನುಮಾನಾಸ್ಪದ – ರೇವಣ್ಣ ಜಾಮೀನು ಆದೇಶದಲ್ಲಿ ಏನಿದೆ?

    ಕಳೆದ ಮೂರು ತಿಂಗಳ ಹಿಂದೆ ಅಂಜಲಿ ಮನೆಯಿಂದ ಹೋಗಿದ್ದು, ಎಂಟು ದಿನಗಳ ಹಿಂದೆ ಮನೆಗೆ ಬಂದಿದ್ದಳು. ಕೊಲೆಯಾದ ಅಂಜಲಿ ಕ್ಯಾಟರಿಂಗ್ ಕೆಲಸ ಮಾಡುತ್ತಿದ್ದಳು ಎಂದು ತಿಳಿದುಬಂದಿದೆ. ಕೊಲೆ ಮಾಡಿದ ವಿಶ್ವ ಮತ್ತು ಅಂಜಲಿ ಸಹಪಾಠಿಗಳಾಗಿದ್ದು, ಉತ್ತಮ ಒಡನಾಟ ಹೊಂದಿದ್ದರು. ತನ್ನ ಜೊತೆ ಸಲುಗೆಯಿಂದ ಇದ್ದ ಅಂಜಲಿಯನ್ನು ವಿಶ್ವ ತಪ್ಪಾಗಿ ಅರ್ಥೈಸಿಕೊಂಡಿದ್ದ. ನನ್ನ ಜೊತೆ ಸುತ್ತಾಡಲು ಬಾ ಎಂದು ಪೀಡಿಸುತ್ತಿದ್ದ. ಇದಕ್ಕೆ ಅಂಜಲಿ ನಿರಾಕರಿಸಿದ್ದಳು. ಕೋಪಗೊಂಡ ಗಿರೀಶ್ ಅಲಿಯಾಸ್ ವಿಶ್ವ ಇಂದು ಬೆಳಗ್ಗಿನ ಜಾವ ಅಂಜಲಿ ಮನೆಗೆ ನುಗ್ಗಿ ಕೊಲೆ ಮಾಡಿ ಪರಾರಿಯಾಗಿದ್ದಾನೆ. ಇದನ್ನೂ ಓದಿ: 380ರ ಪೈಕಿ ಈಗಾಗಲೇ ಮೋದಿ 270 ಗೆದ್ದಿದ್ದಾರೆ : ಅಮಿತ್‌ ಶಾ ವಿಶ್ವಾಸ

    ಆರೋಪಿ ವಿಶ್ವ ಒಂದು ವಾರದ ಹಿಂದೆಯೇ ಅಂಜಲಿಗೆ ಜೀವ ಬೆದರಿಕೆ ಹಾಕಿದ್ದು, ನನ್ನ ಜೊತೆಗೆ ಬಾರದಿದ್ದರೆ ನೇಹಾ ರೀತಿ ಕೊಲೆ ಮಾಡುವೆ ಎಂದು ವಾರ್ನಿಂಗ್ ಮಾಡಿದ್ದ. ಕೂಡಲೇ ಅಂಜಲಿ ಕುಟುಂಬಸ್ಥರು ಬೆಂಡಿಗೇರಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಆದರೆ ಪೊಲೀಸರು ಅಂಜಲಿ ಕುಟುಂಬಸ್ಥರಿಗೆ ಬೈದು ನಿಮ್ಮದು ಮೂಢನಂಬಿಕೆ ಹಾಗೇನು ಆಗಲ್ಲ ಎಂದು ನಿರ್ಲಕ್ಷ್ಯ ತೋರಿದ್ದಾರೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ. ಬೆಂಡಿಗೇರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಸ್ಥಳಕ್ಕೆ ಬೆಂಡಿಗೇರಿ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸುತ್ತಿದ್ದಾರೆ. ಇದನ್ನೂ ಓದಿ: ಬಸ್‌ ಸೀಟಿಗಾಗಿ ಕಿತ್ತಾಟ – ಚಪ್ಪಲಿಯಿಂದ ಹಲ್ಲೆ, ಬಟ್ಟೆ ಹಿಡಿದು ಎಳೆದಾಡಿದ ಮಹಿಳೆಯರು