Tag: bengalurru

  • ನನ್ನ ಮಗಳನ್ನ ಜೀವಂತವಾಗಿ ನೋಡ್ತೀನಿ ಅಂದ್ಕೊಂಡಿರಲಿಲ್ಲ – ವಿದ್ಯಾರ್ಥಿನಿ ತಂದೆ ಕಣ್ಣೀರು

    ನನ್ನ ಮಗಳನ್ನ ಜೀವಂತವಾಗಿ ನೋಡ್ತೀನಿ ಅಂದ್ಕೊಂಡಿರಲಿಲ್ಲ – ವಿದ್ಯಾರ್ಥಿನಿ ತಂದೆ ಕಣ್ಣೀರು

    ಬೆಂಗಳೂರು: ಮಗಳನ್ನ ಜೀವಂತವಾಗಿ ನೋಡ್ತೀನಿ ಅಂತ ನಾನು ಅಂದುಕೊಂಡಿರಲಿಲ್ಲ. ಮಗಳು ಪ್ರತಿಬಾರಿಯೂ ಕರೆ ಮಾಡಿದಾಗ ‘ಲವ್ ಯೂ ಪಪ್ಪಾ’ ಅಂದಾಗ ಆಗ್ತಿದ್ದ ನೋವು ಯಾರಿಗೂ ಹೇಳೋದಕ್ಕೆ ಆಗಲ್ಲ ಎಂದು ಹೇಳುತ್ತಾ ವೈಟ್ ಫೀಲ್ಡ್ ಮೂಲದ ವಿದ್ಯಾರ್ಥಿನಿ ಇಶಾ ತಂದೆ ಭಾವುಕರಾದರು.

    ಪಬ್ಲಿಕ್ ಟಿವಿ ಜೊತೆ ಮಾತನಾಡಿದ ಅವರು, ನನ್ನ ಮಗಳು ತುಂಬಾ ಕಷ್ಟದಿಂದ ಖಾರ್ಕಿವ್ ನಿಂದ ಬಂದಿದ್ದಾಳೆ. ಅಲ್ಲಿ ಅವಳಿಗೆ ತುಂಬಾ ಕಷ್ಟವಾಗಿದೆ. ಮಗಳು ನೆಟ್‍ವರ್ಕ್ ಸಿಕ್ಕಿದ ಕೂಡಲೇ ಕರೆ ಮಾಡುತ್ತಿದ್ದಳು. 7 ದಿನ ನಿದ್ದೆಯಿಲ್ಲದೇ ಮಗಳಿಗಾಗಿ ಕಾಯುತ್ತಿದ್ದೆವು ಎಂದು ಕಣ್ಣೀರಾಕಿದರು. ಇದನ್ನೂ ಓದಿ: ಉಕ್ರೇನ್‍ನಿಂದ ಬಂದ ವೈದ್ಯಕೀಯ ವಿದ್ಯಾರ್ಥಿಗಳು ಇಂಟರ್ನ್‌ಶಿಪ್ ಮಾಡಬಹುದು: ಎನ್‍ಎಂಸಿ

    ನಮ್ಮ ದೇಶದಲ್ಲೇ ಕಡಿಮೆ ಫೀಸ್ ಇದಿದ್ದರೆ ಮಗಳನ್ನ ಉಕ್ರೇನ್‍ಗೆ ಕಳುಹಿಸಿ ಓದಿಸೋ ಅಗತ್ಯ ಬರುತ್ತಿರಲಿಲ್ಲ ಅಂತಾ ತಂದೆ ಹೇಳಿದರು. ಇತ್ತ ಮಗಳು ಅಲ್ಲಿದ್ದಾಗ ಆದ ಅನುಭವವನ್ನು ಹಂಚಿಕೊಂಡಿದ್ದಾಳೆ. ಅಲ್ಲಿ ತುಂಬಾ ಕಷ್ಟದ ಪರಿಸ್ಥಿತಿ ಇತ್ತು. ಖಾರ್ಕಿವ್ ನಿಂದ 8 ಕಿಲೋ ನಡೆದುಕೊಂಡು ಬಂದು ರೈಲು ಹತ್ತಿ ಹೇಗೋ ಬಾರ್ಡರ್ ಗೆ ರಿಚ್ ಆಗಿ ಸೇಫ್ ಆಗಿ ಭಾರತಕ್ಕೆ ಬಂದಿದ್ದೇನೆ. ನಮ್ಮ ಖಾರ್ಕಿವ್ ನಿಂದ ಬಾರ್ಡರ್ ಗೆ ಬರೋ ಜರ್ನಿ ಬಹಳ ಕಷ್ಟದಿಂದ ಕೂಡಿತ್ತು. ನಮಗೆ ಟ್ರೈನ್ ಹತ್ತಲು ಸಹ ಬಿಡಲಿಲ್ಲ, ಹೇಗೋ ಸಾಧನೆ ಮಾಡಿ ಬಂದಿದ್ದೇನೆ. ಭಾರತ ಸರ್ಕಾರ ಮತ್ತು ಕರ್ನಾಟಕ ಸರ್ಕಾರಕ್ಕೆ ಧನ್ಯವಾದ ಅಂತಾ ಈಶಾ ಹೇಳಿದ್ದಾರೆ. ಇದನ್ನೂ ಓದಿ: ಯುದ್ಧ ಯಾರಿಗೂ ಬೇಡ ಎಂಬುದನ್ನು ಪುಟಿನ್‍ಗೆ ಅರ್ಥ ಮಾಡಿಸಿ: ಕುಲೆಬಾ

    ಖಾರ್ಕಿವ್‍ನಲ್ಲಿ ಬಾಂಬ್ ದಾಳಿ ಶೆಲ್ ದಾಳಿ ಇತ್ತು. ಕ್ಷಣ ಕ್ಷಣಕ್ಕೂ ಬಾಂಬ್‍ಗಳು ಬೀಳುತ್ತಿದ್ದವು. ನಾವು ಬಂಕರ್‍ಗಳಲ್ಲಿ ಊಟ, ನೀರು ಇಲ್ಲದೆ ಇದ್ದೆವು. ಬಾಂಬ್ ದಾಳಿಗೆ ನಮ್ಮ ಯುನಿವರ್ಸಿಟಿ ನಾಶವಾಯ್ತು, ನಮ್ಮ ಸೀನಿಯರ್ ನವೀನ್ ಮೃತರಾದ್ರು. ರೈಲುಗಳಲ್ಲಿ ತುಂಬಾ ಭಯದ ವಾತವರಣವಿತ್ತು. ಉಕ್ರೇನ್ ಸೈನಿಕರು ಬಿಡ್ತಿರಲಿಲ್ಲ, ಇಂಡಿಯನ್ಸ್‍ನ ಕಪ್ಪು ಜನರನ್ನ ಟ್ರೈನ್ ಹತ್ತಲು ಬಿಡಲಿಲ್ಲ. ಆದರೂ ನಾನು ಬಂದ ಟ್ರೈನ್ ನಲ್ಲಿ 20 ಜನ ಇಂಡಿಯನ್ಸ್ ಕಷ್ಟಪಟ್ಟು ಹತ್ತಿಕೊಂಡು ಬಂದೆವು. ಬಾರ್ಡರ್ ಗೆ ರೀಚ್ ಆಗಲು ತುಂಬಾ ಕಷ್ಟವಾಗಿತ್ತು. 5 ರಿಂದ 10 ನಿಮಿಷಕ್ಕೆ ಬಾಂಬ್ ದಾಳಿಯಾಗ್ತಿದ್ದ ಕಾರಣ ತುಂಬಾ ಭಯವಾಗ್ತಿತ್ತು. ಬಾರ್ಡರ್‍ಗೆ ಬಂದ ಮೇಲೆ 5 ನಿಮಿಷದಲ್ಲಿ ಇಮಿಗ್ರೇಷನ್ ಎಲ್ಲ ಆಯ್ತು. ತುಂಬಾ ಚೆನ್ನಾಗಿ ಎಂಬ್ಬೆಸ್ಸಿ ಅಧಿಕಾರಿಗಳು ನೋಡಿಕೊಂಡ್ರು ಎಂದು ಹೇಳಿದಳು. ಇದನ್ನೂ ಓದಿ: ನೇರವಾಗಿ ರಷ್ಯಾವನ್ನು ಎದುರಿಸಲು ಮತ್ತೆ ಹಿಂದೇಟು ಹಾಕಿದ ನ್ಯಾಟೋ

  • ಇನ್ನು ಮುಂದೆ ಅತಿಥಿ ಉಪನ್ಯಾಸಕರೆಂಬ ಪರಿಕಲ್ಪನೆಯೇ ಇರುವುದಿಲ್ಲ: ಅಶ್ವಥ್ ನಾರಾಯಣ್

    ಇನ್ನು ಮುಂದೆ ಅತಿಥಿ ಉಪನ್ಯಾಸಕರೆಂಬ ಪರಿಕಲ್ಪನೆಯೇ ಇರುವುದಿಲ್ಲ: ಅಶ್ವಥ್ ನಾರಾಯಣ್

    – ಪದವಿ ಕಾಲೇಜುಗಳಿಗೆ 8,000 ಬೋಧಕರ ನೇಮಕಕ್ಕೆ ಬೇಡಿಕೆ

    ಮೈಸೂರು: ಉನ್ನತ ಶಿಕ್ಷಣದಲ್ಲಿ ಗುಣಮಟ್ಟ ತರುವುದು ಹಾಗೂ ರಾಷ್ಟ್ರೀಯ ಶಿಕ್ಷಣ ನೀತಿಯ ಜಾರಿ ಹಿನ್ನೆಲೆಯಲ್ಲಿ ಇನ್ನು ಮುಂದೆ ಆತಿಥಿ ಉಪನ್ಯಾಸಕರೆಂಬ ಪರಿಕಲ್ಪನೆಯೇ ಇರದಂತೆ 8,000 ಖಾಯಂ ಉಪನ್ಯಾಸಕರ ನೇಮಕಾತಿಗೆ ಅನುಮತಿ ನೀಡುವಂತೆ ಕೋರಿ ಮುಖ್ಯಮಂತ್ರಿಗೆ ಬೇಡಿಕೆ ಸಲ್ಲಿಸಲಾಗಿದೆ ಎಂದು ಉನ್ನತ ಶಿಕ್ಷಣ ಸಚಿವರೂ ಆದ ಉಪಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವಥ್ ನಾರಾಯಣ್ ಹೇಳಿದರು.

    ಮೈಸೂರು ಜಿಲ್ಲೆಯ ಕೆ.ಆರ್ ನಗರದ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜಿಗೆ ಭೇಟಿ ನೀಡಿದ ನಂತರ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಉತ್ತಮ ಕಲಿಕೆ, ಬೋಧನೆಯು ಶಿಕ್ಷಣ ನೀತಿಯ ಆಶಯ. ಅದಕ್ಕೆ ತಕ್ಕಂತೆ ಗುಣಮಟ್ಟದ ಬೋಧಕರನ್ನು ನೇಮಕ ಮಾಡಿಕೊಳ್ಳಲು ಉದ್ದೇಶಿಸಲಾಗಿದೆ. ಈ ಬಗ್ಗೆ ಬಜೆಟ್ ಪೂರ್ವ ಸಭೆಯಲ್ಲಿ ಹಣಕಾಸು ಖಾತೆಯನ್ನು ಹೊಂದಿರುವ ಮುಖ್ಯಮಂತ್ರಿಗಳಿಗೆ ಬೇಡಿಕೆ ಸಲ್ಲಿಸಲಾಗಿದೆ ಎಂದರು.

    ಉನ್ನತ ಶಿಕ್ಷಣ ಇಲಾಖೆಯಲ್ಲಿ ಮೂಲಸೌಕರ್ಯ ಸೇರಿದಂತೆ ಅಭಿವೃದ್ಧಿ ಕಾರ್ಯಕ್ರಮಗಳನ್ನು ಕೈಗೊಳ್ಳಲು ಅನುದಾನ ಸಾಲುತ್ತಿಲ್ಲ. ಬಜೆಟ್‍ನಲ್ಲಿ ಹಂಚಿಕೆಯಾಗುವ ಒಟ್ಟು ಅನುದಾನದಲ್ಲಿ ಶೇ.88ರಷ್ಟು ಅನುದಾನ ವೇತನಕ್ಕೇ ಹೋಗುತ್ತಿದೆ. ಇದುವರೆಗೂ ಒಟ್ಟಾರೆ ಬಜೆಟ್‍ನಲ್ಲಿ ಶೇ.2ರಷ್ಟು ಅನುದಾನವನ್ನಷ್ಟೇ ಉನ್ನತ ಶಿಕ್ಷಣಕ್ಕೆ ನೀಡಲಾಗುತ್ತಿತ್ತು. ಈ ಪ್ರಮಾಣವನ್ನು ಶೇ.3.5ಕ್ಕೆ ಹೆಚ್ಚಿಸಬೇಕು ಎಂದು ಮುಖ್ಯಮಂತ್ರಿಗಳನ್ನು ಕೋರಲಾಗಿದೆ. ಇದಕ್ಕೆ ಅವರು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ ಎಂದು ಡಿಸಿಎಂ ಹೇಳಿದರು.

    ಅತಿಥಿ ಉಪನ್ಯಾಸಕರ ಮುಂದುವರಿಕೆ:
    ಕಳೆದ ಶೈಕ್ಷಣಿಕ ವರ್ಷದಲ್ಲಿ ಕೆಲಸ ಮಾಡುತ್ತಿದ್ದ ಎಲ್ಲ ಅತಿಥಿ ಉಪನ್ಯಾಸಕರನ್ನು ಈ ವರ್ಷವೂ ಮುಂದುವರಿಸಲಾಗಿದೆ. ವೇತನ ಏರಿಕೆ, ಸೇವೆ ಖಾಯಂ ಮಾಡುವುದು ಸೇರಿದಂತೆ ಹಲವು ಬೇಡಿಕೆಗಳನ್ನು ಅತಿಥಿ ಉಪನ್ಯಾಸಕರು ಮುಂದಿಟ್ಟಿದ್ದಾರೆ. ಆ ಬೇಡಿಕೆಗಳನ್ನು ಈಡೇರಿಸಲು ಪರಿಶೀಲನೆ ನಡೆಸಲಾಗುತ್ತಿದೆ ಎಂದು ಉಪ ಮುಖ್ಯಮಂತ್ರಿಗಳು ಪ್ರಶ್ನೆಯೊಂದಕ್ಕೆ ಉತ್ತರ ನೀಡಿದರು.

    ಗುಣಮಟ್ಟಕ್ಕೆ ಕ್ರಮ:
    ಸರ್ಕಾರಿ ಸ್ವಾಮ್ಯದಲ್ಲಿ ಕೆಲಸ ಮಾಡುತ್ತಿರುವ ಎಲ್ಲ ಪದವಿ ಕಾಲೇಜುಗಳ ಗುಣಮಟ್ಟ ಹೆಚ್ಚಿಸಲು ಎಲ್ಲ ರೀತಿಯ ಕ್ರಮ ಕೈಗೊಳ್ಳಲಾಗಿದೆ. ಮುಂದಿನ ದಿನಗಳಲ್ಲಿ ಸರ್ಕಾರಿ ಕಾಲೇಜುಗಳಲ್ಲಿ ಉತ್ತಮ ಫಲಿತಾಂಶ ಬರಬೇಕು. ನ್ಯಾಕ್ ಮಾನ್ಯತೆ ಸಿಗಬೇಕು. ಜೊತೆಗೆ ಆರ್ಥಿಕ ಮತ್ತು ಶೈಕ್ಷಣಿಕ ಸ್ವಾಯತ್ತತೆ ಪಡೆಯುವ ನಿಟ್ಟಿನಲ್ಲಿ ಕೆಲಸ ಮಾಡಬೇಕು ಎಂದು ಅವರು ಹೇಳಿದರು.

    2 ಕೋಟಿ ಅನುದಾನ:
    ಕೆ.ಆರ್. ನಗರ ಸರಕಾರಿ ಪ್ರಥಮ ದರ್ಜೆ ಕಾಲೇಜು ಹಾಗೂ ಮಹಿಳಾ ಕಾಲೇಜುಗಳಿಗೆ ಭೇಟಿ ನೀಡಿ ಪರಿಶೀಲನೆ ಮಾಡಿದ್ದೇನೆ. ಕೆಲ ಅಭಿವೃದ್ಧಿ ಕಾಮಗಾರಿಗಳು ನಡೆಯುತ್ತಿವೆ. ಈ ಶೈಕ್ಷಣಿಕ ವರ್ಷದಲ್ಲಿ ಎರಡೂ ಕಾಲೇಜುಗಳಿಗೆ 2 ಕೋಟಿ ರೂ. ಅನುದಾನ ನೀಡಲಾಗುವುದು. ಇನ್ನೂ ಹೆಚ್ಚಿನ ಅನುದಾನ ನೀಡಲು ಪರಿಶೀಲನೆ ನಡೆಸಿ ಕ್ರಮ ಕೈಗೊಳ್ಳಲಾಗುವುದು ಎಂದು ಉಪ ಮುಖ್ಯಮಂತ್ರಿ ತಿಳಿಸಿದರು.

    ಸರ್ಕಾರಿ ಪ್ರಥಮ ದರ್ಜೆ ಕಾಲೇಜು ವತಿಯಿಂದ ವಿವಿಧ ಬೇಡಿಕೆಗಳ ಮನವಿ ಪತ್ರವನ್ನು ನೀಡಲಾಗಿದೆ. ಎಲ್ಲವನ್ನು ಪರಿಶೀಲನೆ ನಡೆಸಿದ ನಂತರ ಖಂಡಿತಾ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ಭರವಸೆ ನೀಡಿದರು. ಈ ಸಂದರ್ಭದಲ್ಲಿ ಶಾಸಕ ಸಾ.ರಾ.ಮಹೇಶ್, ಉನ್ನತ ಶಿಕ್ಷಣ ಇಲಾಖೆಯ ಅಧಿಕಾರಿಗಳು, ಕಾಲೇಜುಗಳ ಪ್ರಾಂಶುಪಾಲರು, ಉಪನ್ಯಾಸಕರು ಮುಂತಾದವರು ಹಾಜರಿದ್ದರು.

  • ಬೆಂಗ್ಳೂರು ಗಲಭೆ- ಕಿಡಿಗೇಡಿಗಳಿಗೆ ಬೊಮ್ಮಾಯಿ ವಾರ್ನಿಂಗ್

    ಬೆಂಗ್ಳೂರು ಗಲಭೆ- ಕಿಡಿಗೇಡಿಗಳಿಗೆ ಬೊಮ್ಮಾಯಿ ವಾರ್ನಿಂಗ್

    ಬೆಂಗಳೂರು: ಪುಲಿಕೇಶಿ ನಗರ ಕಾಂಗ್ರೆಸ್ ಶಾಸಕ ಅಖಂಡ ಶ್ರೀನಿವಾಸ ಮೂರ್ತಿ ಮನೆ ಮೇಲೆ ಕಿಡಿಗೇಡಿಗಳ ದಾಳಿಯಾಗಿದೆ. ಸ್ಥಳೀಯ ಡಿಜೆ ಹಳ್ಳಿ ಪೊಲೀಸ್ ಠಾಣೆ ಮೇಲೆ ಕಿಡಿಗೇಡಿಗಳ ಮುತ್ತಿಗೆ ಹಾಕಿದ್ದು, ಪೊಲೀಸರ ಮೇಲೆ ಹಲ್ಲೆಗೆ ದುಷ್ಕರ್ಮಿಗಳು ಮುಂದಾಗಿದ್ದಾರೆ. ಈ ಬಗ್ಗೆ ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಪ್ರತಿಕ್ರಿಯೆ ನೀಡಿದ್ದಾರೆ.

    ಪುಂಡರಿಗೆ ಖಡಕ್ ಎಚ್ಚರಿಕೆ ಕೊಟ್ಟಿದ್ದಾರೆ. ಡಿಜೆ ಹಳ್ಳಿ ವ್ಯಾಪ್ತಿಯಲ್ಲಿ ನಡೆದ ಪುಂಡಾಟಿಕೆ ಗಮನಕ್ಕೆ ಬಂದಿದೆ. ಬೆಂಕಿ ಹಚ್ಚುವುದು, ಗಲಾಟೆ ಕಾನೂನು ಬಾಹಿರ ಕೃತ್ಯ ನಡೆಸಿದವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು. ಹಿರಿಯ ಪೊಲೀಸ್ ಅಧಿಕಾರಿಗಳ ಜೊತೆ ಮಾತನಾಡಿದ್ದೇನೆ. ಹೆಚ್ಚುವರಿ ಪೊಲೀಸರನ್ನು ರವಾನೆ ಮಾಡಲಾಗಿದೆ. ಪೊಲೀಸರಿಗೆ ಸಂಪೂರ್ಣ ಅಧಿಕಾರವನ್ನು ಕೊಟ್ಟಿದ್ದೇನೆ. ಇದನ್ನೂ ಓದಿ: ಶಾಸಕ ಅಖಂಡ ಶ್ರೀನಿವಾಸ ಮೂರ್ತಿ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು 

    ಪೊಲೀಸರು ಪರಿಸ್ಥಿತಿಯನ್ನು ಹತೋಟಿಗೆ ತರುತ್ತಾರೆ ಎಂದರು. ತಪ್ಪು ಮಾಡಿದವರು ಎಷ್ಟೇ ದೊಡ್ಡವರಾಗಿದ್ದರೂ ಕಠಿಣ ಕ್ರಮ ಆಗಲಿದೆ ಎಂದು ಗೃಹ ಸಚಿವ ಬೊಮ್ಮಾಯಿ ಹೇಳಿದರು.

  • ಚಿರು ಜೊತೆ ಸುಮಲತಾ ಡ್ಯಾನ್ಸ್- ವೈರಲ್ ವಿಡಿಯೋಗೆ ಸಂಸದೆ ಸ್ಪಷ್ಟನೆ

    ಚಿರು ಜೊತೆ ಸುಮಲತಾ ಡ್ಯಾನ್ಸ್- ವೈರಲ್ ವಿಡಿಯೋಗೆ ಸಂಸದೆ ಸ್ಪಷ್ಟನೆ

    ಬೆಂಗಳೂರು: ಮೆಗಾಸ್ಟಾರ್ ಚಿರಂಜೀವಿ ಜೊತೆ ಮಂಡ್ಯ ಸಂಸದೆ ಸುಮಲತಾ ಸ್ಟೆಪ್ ಹಾಕಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, ಸಖತ್ ವೈರಲ್ ಆಗುತ್ತಿದೆ.

    ಚಿರಂಜೀವಿ ಬರ್ತ್ ಡೇ ಪಾರ್ಟಿಯಲ್ಲಿ ಭಾಗವಹಿಸಿದ್ದ ಸುಮಲತಾ ಡ್ಯಾನ್ಸ್ ಮಾಡಿದ್ದಾರೆ ಎನ್ನಲಾಗುತ್ತಿದೆ. ಸುಮಲತಾ ಅವರ ಫೇಸ್‍ಬುಕ್ ಖಾತೆಯಲ್ಲಿ ಈ ವಿಡಿಯೋ ಇದೆ. ಇದಕ್ಕೆ ಕಿಡಿಕಾರಿರುವ ಜನರು, ರಾಜ್ಯದಲ್ಲಿ ಪ್ರವಾಹ ಪರಿಸ್ಥಿತಿ ಇರಬೇಕಾದರೆ ಸುಮಲತಾ ಡ್ಯಾನ್ಸ್ ಮಾಡಿರುವುದು ಸರಿನಾ ಎಂದು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಆದರೆ  ಇದು ಹಳೆಯ ವಿಡಿಯೋ ಎಂದು ಸುಮಲತಾ ಅವರು ಈಗಾಗಲೇ ಸ್ಪಷ್ಟನೆ ಕೊಟ್ಟಿದ್ದಾರೆ.

    ಇದು 4 ವರ್ಷಗಳ ಹಿಂದಿನ ಹಳೆಯ ವಿಡಿಯೋ ಆಗಿದೆ. ನನ್ನ ಹೆಸರಿನ ನಕಲಿ ಅಕೌಂಟ್‍ನಲ್ಲಿ ಕಿಡಿಗೇಡಿಗಳು ವಿಡಿಯೋ ಹಾಕಿದ್ದು, ಇದರಿಂದ ನನ್ನ ತೇಜೋವಧೆಗೆ ಯತ್ನಿಸಲಾಗಿದೆ ಎಂದಿದ್ದಾರೆ. ಅಲ್ಲದೆ ಫೇಸ್‍ಬುಕ್‍ನಲ್ಲಿ ನಕಲಿ ಅಕೌಂಟ್ ತೆಗೆದವರ ವಿರುದ್ಧ ಕ್ರಮಕೈಗೊಳ್ಳಬೇಕು ಎಂದು ಸಂಸದೆ  ಸೈಬರ್ ಕ್ರೈಂಗೆ ದೂರು ನೀಡಿದ್ದಾರೆ. ಗುರುವಾರವಷ್ಟೇ ನಕಲಿ ಅಕೌಂಟ್ ಗಳ ಬಗ್ಗೆ ತಮ್ಮ ಫೆಸ್ ಬುಕ್ ಪೇಜಿನಲ್ಲಿ ಸುಮಲತಾ ಅವರು ಬರೆದುಕೊಂಡಿದ್ದರು.

    ನಕಲಿ ಅಕೌಂಟ್ ಬಗ್ಗೆ ಪೋಸ್ಟ್:
    ನನ್ನ ಹೆಸರಿನಲ್ಲಿ ಹಲವಾರು ನಕಲಿ ಫೇಸ್‍ಬುಕ್ ಖಾತೆಗಳನ್ನು ರಚಿಸಲಾಗಿದೆ ಎಂದು ನನ್ನ ಗಮನಕ್ಕೆ ತರಲಾಗಿದೆ. ಸೈಬರ್ ಅಪರಾಧ ಶಾಖೆಯ ಸಹಾಯದಿಂದ ಈ ಕಿಡಿಗೇಡಿ ತನದವರಿಗೆ ಕಠಿಣ ಕ್ರಮ ಕೈಗೊಳ್ಳಲಾಗುವುದು. ಇದು ನನ್ನ ಸ್ನೇಹಿತರಿಗಾಗಿ ಪರಿಶೀಲಿಸಿದ ಫೇಸ್‍ಬುಕ್ ಖಾತೆಯಾಗಿದೆ ಮತ್ತು ನನ್ನ ಸದಸ್ಯರೊಂದಿಗೆ ಸಂವಹನ ನಡೆಸುವ ಇನ್ನೊಂದು ಅಧಿಕೃತ ಪುಟವನ್ನು ಮಾತ್ರ ಹೊಂದಿದ್ದೇನೆ ಎಂದು ಅಭಿಮಾನಿಗಳಿಗೆ ಮಾಹಿತಿ ನೀಡಿದ್ದರು.

    ಇದೇ ವೇಳೆ ತಮ್ಮ ಅಧಿಕೃತ ಫೇಸ್‍ಬುಕ್ ಖಾತೆಗಳ ಲಿಂಕ್ ಶೇರ್ ಮಾಡಿರುವ ಅವರು, ಯಾವುದೇ ಅನಧಿಕೃತ ಪುಟವನ್ನು ಯಾರಾದರೂ ಗಮನಿಸಿದರೆ ದಯವಿಟ್ಟು ಅದನ್ನು ತಕ್ಷಣ ವರದಿ ಮಾಡಿ ಎಂದು ಮನವಿ ಮಾಡಿದ್ದಾರೆ. ಅಲ್ಲದೇ ಕೆಲ ನಕಲಿ ಖಾತೆಗಳ ಸ್ಕ್ರೀನ್ ಸಾಟ್‍ಗಳನ್ನು ಪೋಸ್ಟ್ ಮಾಡಿ ಜಾಗೃತಿ ಮೂಡಿಸಿದ್ದಾರೆ.