Tag: bengaluru airport

  • ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಜಗದೀಶ್ ಕಾರಂತ ಬಂಧನ

    ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಜಗದೀಶ್ ಕಾರಂತ ಬಂಧನ

    ಬೆಂಗಳೂರು: ಸಾರ್ವಜನಿಕ ಸಭೆಯಲ್ಲಿ ಪೊಲೀಸ್ ಅಧಿಕಾರಿಗೆ ಅವಹೇಳನಕಾರಿಯಾಗಿ ನಿಂದಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪುತ್ತೂರು ಪೋಲೀಸರು ಶುಕ್ರವಾರ ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಹಿಂದೂ ಜಾಗರಣ ವೇದಿಕೆ ಮುಖಂಡ ಜಗದೀಶ್ ಕಾರಂತರನ್ನು ಬಂಧಿಸಿದ್ದಾರೆ.

    ಸೆ. 15 ರಂದು ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನಲ್ಲಿ ನಡೆದ ಹಿಂದೂ ಜಾಗರಣ ವೇದಿಕೆ ಆಶ್ರಯದ ಪ್ರತಿಭಟನಾ ಸಭೆಯಲ್ಲಿ, ಸರ್ಕಾರಿ ಅಧಿಕಾರಿಯಾಗಿರುವ ಅಬ್ದುಲ್ ಖಾದರ್ ಅವರನ್ನು ಮತೀಯ ನೆಲೆಯಲ್ಲಿ ನಿಂದಿಸಿದ್ದಾರೆಂದು ಆರೋಪಿಸಿ, ತನಿಖೆ ನಡೆಸಬೇಕೆಂದು ಕಬಕ ನಿವಾಸಿ ಕೆ ಅಝೀಜ್ ಪೊಲೀಸರಿಗೆ ಮನವಿ ಸಲ್ಲಿಸಿದ್ದರು.

    ಪೊಲೀಸರು ಜಗದೀಶ್ ಕಾರಂತರ ಭಾಷಣದ ವೀಡಿಯೋವನ್ನು ಸಂಪೂರ್ಣ ಅಧ್ಯಯನ ಮಾಡಿದ ಬಳಿಕ, ಸರ್ಕಾರಿ ನೌಕರನಿಗೆ ಬೆದರಿಕೆ ಒಡ್ಡಿರುವುದು, ಧರ್ಮ-ಧರ್ಮಗಳ ನಡುವೆ ವೈರತ್ವ ಹುಟ್ಟುವಂತೆ ಪ್ರೇರಣೆ ಮಾಡಿರುವುದು, ಧಾರ್ಮಿಕ ಅವಹೇಳನ, ಧಾರ್ಮಿಕ ನಿಂದನೆ ಮೊದಲಾದ ಅಂಶಗಳನ್ನು ಉಲ್ಲೇಖಿಸಿ ಭಾರತೀಯ ಅಪರಾಧ ದಂಡ ಸಂಹಿತೆಯ 153ನೇ ಸೆಕ್ಷನ್ ಅಡಿಯಲ್ಲಿ ಜಗದೀಶ್ ಕಾರಂತ ವಿರುದ್ಧ ಸ್ವಯಂ ಪ್ರೇರಿತವಾಗಿ ಕೇಸ್ ದಾಖಲಿಸಿಕೊಂಡಿದ್ದರು.

  • ಬೆಂಗಳೂರಿನ ಮಹಿಳಾ ಪೊಲೀಸ್ ಪೇದೆ ಮೇಲೆ ಕಸ್ಟಮ್ಸ್ ಇನ್ಸ್ ಪೆಕ್ಟರ್‍ನಿಂದ ರೇಪ್!

    ಬೆಂಗಳೂರಿನ ಮಹಿಳಾ ಪೊಲೀಸ್ ಪೇದೆ ಮೇಲೆ ಕಸ್ಟಮ್ಸ್ ಇನ್ಸ್ ಪೆಕ್ಟರ್‍ನಿಂದ ರೇಪ್!

    – ವಿಮಾನ ನಿಲ್ದಾಣದ ಕಸ್ಟಮ್ಸ್ ಇನ್ಸ್ ಪೆಕ್ಟರ್‍ನಿಂದ ಅತ್ಯಾಚಾರ

    ಬೆಂಗಳೂರು: ನಗದರಲ್ಲಿ ಅತ್ಯಾಚಾರ ಪ್ರಕರಣವೊಂದು ಬೆಳಕಿಗೆ ಬಂದಿದೆ. ಕೇಂದ್ರ ಕೈಗಾರಿಕಾ ಭದ್ರತಾ ಪಡೆ(ಸಿಐಎಸ್‍ಎಫ್) ಮಹಿಳಾ ಪೊಲೀಸ್ ಪೇದೆ ಮೇಲೆ ವಿಮಾನ ನಿಲ್ದಾಣದ ಕಸ್ಟಮ್ಸ್ ಇನ್ಸ್ ಪೆಕ್ಟರ್‍ ಅತ್ಯಾಚಾರ ನಡೆಸಿದ್ದಾನೆ ಎಂದು ಆರೋಪಿಸಲಾಗಿದೆ.

    ಬೆಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಕಸ್ಟಮ್ ಇನ್ಸ್ ಪೆಕ್ಟರ್ ಹೇಮರಾಜ್ ಗುರ್ಜರ್ ತನ್ನ ಮೇಲೆ ಅತ್ಯಾಚಾರವೆಸಗಿರೋದಾಗಿ 29 ವರ್ಷದ ಮಹಿಳಾ ಸಿಐಎಸ್‍ಎಫ್ ಪೇದೆ ಆರೋಪಿಸಿದ್ದಾರೆ.

    ಏನಿದು ಆರೋಪ: ಮದುವೆಯಾಗೋದಾಗಿ ನಂಬಿಸಿ, ಪೋಷಕರನ್ನು ಭೇಟಿ ಮಾಡಿಸುವುದಾಗಿ ಹೇಳಿ ಯಲಹಂಕ ಉಪನಗರದ ನಿವಾಸಕ್ಕೆ ಕರೆದುಕೊಂಡು ಹೋಗಿ ಅತ್ಯಾಚಾರವೆಸಗಿದ್ದಾನೆ. ನಂತರ ಮದುವೆಯಾಗೋಕೆ ಹೇಮರಾಜ್ ನಿರಾಕರಿಸಿದ್ದು, ಮದುವೆಯಾಗುವಂತೆ ಮಹಿಳಾ ಪೊಲೀಸ್ ಪೇದೆ ಒತ್ತಾಯಿಸಿದ್ದಾರೆ. ಈ ವೇಳೆ ಆತ ತನಗೆ ಮೊದಲೆ ಮದುವೆಯಾಗಿರುವ ಬಗ್ಗೆ ಬಾಯಿಬಿಟ್ಟಿದ್ದಾನೆ. 2013 ರಲ್ಲೇ ಮದುವೆಯಾಗಿ ಎರಡು ಮಕ್ಕಳಿದ್ದು, ಹೆಂಡತಿ ಮಕ್ಕಳು ರಾಜಸ್ಥಾನದಲ್ಲಿ ವಾಸವಿರೋದಾಗಿ ಹೇಳಿದ್ದಾನೆ.

    ಹೇಮರಾಜ್ ವಿರುದ್ಧ ದೂರು ನೀಡೋದಾಗಿ ಮಹಿಳಾ ಪೇದೆ ಹೇಳಿದಾಗ, ರಾಜಸ್ಥಾನದಿಂದ ಬಂದ ಹೇಮರಾಜ್ ತಂದೆ ಸೃಜನ್ ಸಿಂಗ್ ಹಾಗೂ ಸಹೋದರ ನಿಹಾಲ ಸಿಂಗ್ ಮದುವೆಗೆ ನಿರಾಕರಿಸಿ ಮಹಿಳೆಗೆ ಬೆದರಿಕೆ ಹಾಕಿದ್ದಾರೆ. ಇದರಿಂದ ನೊಂದ ಮಹಿಳಾ ಪೊಲೀಸ್ ಪೇದೆ ಮಾರ್ಚ್ 5 ರಂದು ಬಾಗಲೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

    ಆದರೆ ದೂರು ದಾಖಲಾಗಿ 9 ದಿನಗಳಾದ್ರೂ ಬಾಗಲೂರು ಪೊಲೀಸರು ಆರೋಪಿಯನ್ನ ಬಂಧಿಸಿಲ್ಲ. ಕನಿಷ್ಟ ಪಕ್ಷ ಪೊಲೀಸರು ಆತನನ್ನು ಕರೆದು ವಿಚಾರಣೆ ಕೂಡ ನಡೆಸಿಲ್ಲ. ಪೊಲೀಸರ ನಡೆ ಸಾಕಷ್ಟು ಅನುಮಾನಕ್ಕೆ ಎಡೆಮಾಡಿಕೊಟ್ಟದೆ ಅಂತಾ ಮಹಿಳಾ ಪೊಲೀಸ್ ಪೇದೆ ಅಳಲು ತೋಡಿಕೊಂಡಿದ್ದಾರೆ.