Tag: bengaluru central

  • ಮಹಾದೇವಪುರದಲ್ಲಿ ಮತಗಳ್ಳತನ – ದಾಖಲೆ ಸಮೇತ ಮಾಹಿತಿ ಬಹಿರಂಗಪಡಿಸಿದ ರಾಹುಲ್ ಗಾಂಧಿ

    ಮಹಾದೇವಪುರದಲ್ಲಿ ಮತಗಳ್ಳತನ – ದಾಖಲೆ ಸಮೇತ ಮಾಹಿತಿ ಬಹಿರಂಗಪಡಿಸಿದ ರಾಹುಲ್ ಗಾಂಧಿ

    -ಸಂಜೆ 5 ಗಂಟೆ ಬಳಿಕ ಅತೀ ಹೆಚ್ಚು ಮತದಾನವಾಗುತ್ತದೆ 

    ನವದೆಹಲಿ: ಶುಕ್ರವಾರ ಬೆಂಗಳೂರಿಗೆ (Bengaluru) ಬರುವ ಮುನ್ನ ವಿಪಕ್ಷ ನಾಯಕ ರಾಹುಲ್ ಗಾಂಧಿ (Rahul Gandhi) ಮಹಾದೇವಪುರದಲ್ಲಿ ಮತಗಳ್ಳತನ ನಡೆದಿದೆ ಎಂದು ಗಂಭೀರ ಆರೋಪ ಮಾಡಿದ್ದಾರೆ.

    ಲೋಕಸಭೆ ಚುನಾವಣೆ (Lokasabha Election) ವೇಳೆ ಮತಗಳ್ಳತನ ನಡೆದಿದೆ ಎಂದು ಆರೋಪಿಸುತ್ತಿದ್ದ ವಿಪಕ್ಷ ನಾಯಕ ಇಂದು ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರದದಲ್ಲಿ ಬರುವ ಮಹಾದೇವಪುರದಲ್ಲಿ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಭಾರೀ ಅಕ್ರಮ ಅಕ್ರಮ ನಡೆದಿದೆ ಎಂದು ದಾಖಲೆ ಸಮೇತವಾಗಿ ಆರೋಪಿಸಿದ್ದಾರೆ.ಇದನ್ನೂ ಓದಿ: 25 ಲಕ್ಷ ವಂಚನೆ, ಸುಧಾಕರ್‌ ಹೆಸರು ಬರೆದಿಟ್ಟು ಚಾಲಕ ಸೂಸೈಡ್‌ – ಡೆತ್‌ನೋಟ್‌ನಲ್ಲಿ ಏನಿದೆ?

    ದೆಹಲಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು. ಕಳೆದ ಲೋಕಸಭೆ ಚುನಾವಣೆಯಲ್ಲಿ ಕರ್ನಾಟಕದಲ್ಲಿ ಬಿಜೆಪಿ 16 ಸ್ಥಾನ ಹಾಗೂ ಕಾಂಗ್ರೆಸ್ 9 ಸ್ಥಾನಗಳನ್ನು ಗೆದ್ದಿದೆ. ಕಾಂಗ್ರೆಸ್ ಅಚ್ಚರಿಯಾಗಿ ಸೋಲನ್ನು ಅನುಭವಿಸಿತು. ಹೀಗಾಗಿ ಕಡಿಮೆ ಅಂತರದಲ್ಲಿ ಸೋತ ಏಳು ಕ್ಷೇತ್ರಗಳ ಪೈಕಿ ಮಹಾದೇವಪುರ ಕ್ಷೇತ್ರದಲ್ಲಿ ತನಿಖೆ ನಡೆಸಿದೆವು. ಈ ವೇಳೆ ಕಾಂಗ್ರೆಸ್ 1,15,586 ಮತಗಳನ್ನು ಪಡೆದರೆ, ಬಿಜೆಪಿ 2,29,632 ಮತಗಳನ್ನು ಪಡೆದುಕೊಂಡಿದೆ. ಕಾಂಗ್ರೆಸ್‌ಗಿಂತ ಬಿಜೆಪಿ 1,14,046 ಮತಗಳ ಬಹುಮತ ಪಡೆದುಕೊಂಡಿದೆ. ಈ ಮತಗಳಲ್ಲಿ 11,965 ನಕಲಿ ಮತದಾರರು, 40,009 ನಕಲಿ ವಿಳಾಸದ ಮತಗಳು, ಒಂದೇ ವಿಳಾಸದಲ್ಲಿ ಹತ್ತಾರು ಮತಗಳಿರುವಂತಹ 10,452 ಮತಗಳು, ಫೋಟೋ ಇಲ್ಲದಿರುವ 4,132 ಹಾಗೂ ಫಾರಂ 6 ದುರ್ಬಳಕೆಯಾದ 33,692 ಮತಗಳಿವೆ ಸ್ಫೋಟಕ ಆರೋಪ ಮಾಡಿದರು.

    ಮಹಾರಾಷ್ಟ್ರ, ಹರಿಯಾಣ, ಕರ್ನಾಟಕ ಚುನಾವಣೆ ಸೇರಿ ಹಲವೆಡೆ ಮತಗಳ್ಳತನ ಆಗಿದೆ. ಇನ್ನೂ ಕಳೆದ ಐದು ತಿಂಗಳಲ್ಲಿ ಮಹಾರಾಷ್ಟ್ರಕ್ಕೆ ಅತಿ ಹೆಚ್ಚು ಮತದಾರರು ಸೇರ್ಪಡೆಯಾಗಿದ್ದಾರೆ. ಜನಸಂಖ್ಯೆಗಿಂತ ಹೆಚ್ಚು ಮತದಾರರಿದ್ದಾರೆ. ಸಂಜೆ ಐದು ಗಂಟೆಯ ಬಳಿಕ ಅತಿ ಹೆಚ್ಚು ಮತದಾನವಾಗುತ್ತದೆ ಎಂದು ಆರೋಪಿಸಿದ್ದಾರೆ.

    ಈ ಕುರಿತು ನಾವು ಚುನಾವಣಾ ಆಯೋಗವನ್ನು ಸಂಪರ್ಕಿಸಿದರೆ ನಮಗೆ ಯಾವುದೇ ಪ್ರತಿಕ್ರಿಯೆ ಸಿಕ್ಕಿಲ್ಲ. ಆಯೋಗ ನಮಗೆ ಮತದಾರರ ಪಟ್ಟಿ ನೀಡಲು ನಿರಾಕರಿಸಿದೆ. ಅದಲ್ಲದೇ ರಾಜಕೀಯ ಪಕ್ಷಗಳಿಗೂ ಕೂಡ ಮತದಾರರ ಪಟ್ಟಿ ನೀಡಿಲ್ಲ. ಜೊತೆಗೆ ಸಿಸಿಟಿವಿ ದೃಶ್ಯಗಳನ್ನು ಡಿಲೀಟ್ ಮಾಡಲಾಗಿದೆ ಎಂದು ಆಗ್ರಹಿಸಿದ್ದಾರೆ.ಇದನ್ನೂ ಓದಿ: ನಾಳೆ ಬೆಂಗ್ಳೂರಿಗೆ ರಾಹುಲ್ ಗಾಂಧಿ – ಹಲವೆಡೆ ಸಂಚಾರ ಬಂದ್, ಟ್ರಾಫಿಕ್ ತಪ್ಪಿಸೋಕೆ ಪರ್ಯಾಯ ವ್ಯವಸ್ಥೆ

  • ಕೊನೆಯಲ್ಲಿ ಕೈ ಹಿಡಿದ ಮಹಾದೇವಪುರ – ಸತತ 4ನೇ ಬಾರಿ ಪಿಸಿ ಮೋಹನ್‌ಗೆ ಜಯ

    ಕೊನೆಯಲ್ಲಿ ಕೈ ಹಿಡಿದ ಮಹಾದೇವಪುರ – ಸತತ 4ನೇ ಬಾರಿ ಪಿಸಿ ಮೋಹನ್‌ಗೆ ಜಯ

    ಬೆಂಗಳೂರು: ಬಹಳ ರೋಚಕತೆಯಿಂದ ಕೂಡಿದ ಬೆಂಗಳೂರು ಕೇಂದ್ರ (Bengaluru Central) ಲೋಕಸಭಾ ಕ್ಷೇತ್ರದ ಚುನಾವಣೆಯಲ್ಲಿ ಪಿಸಿ ಮೋಹನ್‌ (PC Mohan) ಜಯಗಳಿಸಿದ್ದಾರೆ. ಈ ಮೂಲಕ ಸತತ ನಾಲ್ಕನೇ ಬಾರಿ ಬಿಜೆಪಿಯಿಂದ ಸ್ಪರ್ಧಿಸಿ ಗೆದ್ದಿದ್ದಾರೆ.

    ಆರಂಭದಲ್ಲಿ ಮುನ್ನಡೆಯಲ್ಲಿದ್ದ ಪಿ. ಸಿ. ಮೋಹನ್ ನಂತರ ಸುತ್ತಿನಲ್ಲಿ ಹಿನ್ನಡೆ ಅನುಭವಿಸಿದರು. ಕಾಂಗ್ರೆಸ್ ಅಭ್ಯರ್ಥಿ ಮನ್ಸೂರ್ ಅಲಿಖಾನ್ (Mansoor Ali Khan) ಈ ಬಾರಿ ಗೆದ್ದೇ ಗೆಲ್ಲುತ್ತಾರೆ ಎಂಬ ವಿಶ್ಲೇಷಣೆ ಒಂದು ಹಂತದಲ್ಲಿ ಬಂದಿತ್ತು.

    ಕೊನೆಯ ಹಂತದಲ್ಲಿ ಮಹದೇವಪುರ ಕ್ಷೇತ್ರದ ಜನ 1 ಲಕ್ಷಕ್ಕೂ ಹೆಚ್ಚು ಮತಗಳ ಲೀಡ್‌ ನೀಡಿದ ಪರಿಣಾಮ 32,707 ಮತಗಳ ಅಂತರದಿಂದ ಜಯ ಸಾಧಿಸಿದ್ದಾರೆ. ಇದನ್ನೂ ಓದಿ: ವಿಧಾನಸಭೆಯಲ್ಲಿ ಸೋತು ಕಣ್ಣೀರಿಟ್ಟಿದ್ದ ಸೋಮಣ್ಣಗೆ ರಾಷ್ಟ್ರ ರಾಜಕಾರಣಕ್ಕೆ ಆಶೀರ್ವದಿಸಿದ ಮತದಾರ

    ಪಿಸಿ ಮೋಹನ್‌ 6,58,915 ಮತಗಳನ್ನು ಪಡೆದರೆ ಮನ್ಸೂರ್ ಅಲಿಖಾನ್ 6,26,208 ಮತಗಳನ್ನು ಪಡೆದರು. 2009 ರಿಂದ ಪಿಸಿ ಮೋಹನ್‌ ಈ ಕ್ಷೇತ್ರದಿಂದ ಗೆಲ್ಲುತ್ತಾ ಬಂದಿದ್ದಾರೆ.

    2019 ರ ಚುನಾವಣೆಯಲ್ಲಿ 70,968 ಮತಗಳಿಂದ, 2014 ರಲ್ಲಿ 1,37,500 ಮತಗಳಿಂದ, 2009 ರಲ್ಲಿ 35,2018 ಮತಗಳ ಅಂತರದಿಂದ ಪಿಸಿ ಮೋಹನ್‌ ಜಯಗಳಿಸಿದ್ದರು.

     

  • Bengaluru Central Lok Sabha 2024: ಹ್ಯಾಟ್ರಿಕ್‌ ಗೆಲುವಿನ ಸರದಾರನಿಗೆ ಬ್ರೇಕ್‌ ಹಾಕುತ್ತಾ ಕಾಂಗ್ರೆಸ್?‌

    Bengaluru Central Lok Sabha 2024: ಹ್ಯಾಟ್ರಿಕ್‌ ಗೆಲುವಿನ ಸರದಾರನಿಗೆ ಬ್ರೇಕ್‌ ಹಾಕುತ್ತಾ ಕಾಂಗ್ರೆಸ್?‌

    – ಪಿ.ಸಿ.ಮೋಹನ್‌ v/s ಮನ್ಸೂರ್‌ ಅಲಿ ಖಾನ್‌

    2008 ರಲ್ಲಿ ಅಸ್ತಿತ್ವಕ್ಕೆ ಬಂದ ಲೋಕಸಭಾ ಕ್ಷೇತ್ರ ಬೆಂಗಳೂರು ಕೇಂದ್ರ (Bengaluru Central). ಅಸ್ತಿತ್ವಕ್ಕೆ ಬಂದಾಗಿನಿಂದಲೂ ಇದು ಬಿಜೆಪಿ ವಶದಲ್ಲಿದೆ. ಈಗ ಮತ್ತೆ ಲೋಕಸಭಾ ಚುನಾವಣೆ ಬಂದಿದೆ. ರಾಜ್ಯದಲ್ಲಿ ಅಧಿಕಾರದಲ್ಲಿರುವ ಕಾಂಗ್ರೆಸ್‌ ಪಕ್ಷ ಕ್ಷೇತ್ರವನ್ನು ತನ್ನ ತೆಕ್ಕೆಗೆ ತೆಗೆದುಕೊಳ್ಳಲು ಶತಪ್ರಯತ್ನ ನಡೆಸುತ್ತಿದೆ. ಸತತ ನಾಲ್ಕು ಬಾರಿ ಗೆಲುವು ಸಾಧಿಸಿರುವ ಬಿಜೆಪಿ ಕ್ಷೇತ್ರವನ್ನು ಪ್ರತಿಷ್ಠೆಯ ಕಣವಾಗಿ ಸ್ವೀಕರಿಸಿದೆ.

    ಬೆಂಗಳೂರು ಕೇಂದ್ರ ಕ್ಷೇತ್ರದಲ್ಲಿ ಬಿಜೆಪಿಯ ಪಿ.ಸಿ.ಮೋಹನ್‌ (P.C.Mohan) ಬಿಗಿ ಹಿಡಿತ ಸಾಧಿಸಿದ್ದಾರೆ. ಅಲ್ಪಸಂಖ್ಯಾತ ಮತದಾರರ ಪ್ರಾಬಲ್ಯ ಹೊಂದಿರುವ ಕ್ಷೇತ್ರದಲ್ಲಿ ಭಾಷಾ ಮತ್ತ ಧಾರ್ಮಿಕ ಅಲ್ಪಸಂಖ್ಯಾತರ ಬೆಂಬಲ ಪಡೆಯುವುದು ಇಲ್ಲಿ ಸ್ಪರ್ಧಿಸುವ ಯಾವುದೇ ಅಭ್ಯರ್ಥಿಗೆ ಸವಾಲಿನ ವಿಷಯವಾಗಿದೆ. ಅದೇ ಲೆಕ್ಕಾಚಾರದಲ್ಲಿ ಈ ಬಾರಿ ಕಾಂಗ್ರೆಸ್‌ ಅಭ್ಯರ್ಥಿಯನ್ನು ಕಣಕ್ಕಿಳಿಸಿದೆ. ಬೆಂಗಳೂರು ಕೇಂದ್ರ ಕ್ಷೇತ್ರದ 2024 ರ ಸಾರ್ವತ್ರಿಕ ಚುನಾವಣೆಯು ಜಿದ್ದಾಜಿದ್ದಿನ ಕಣವಾಗಿದೆ. ಇದನ್ನೂ ಓದಿ: Bengaluru South Lok Sabha 2024: ಪ್ರತಿಷ್ಠೆಯ ಕಣವನ್ನು ಮತ್ತೆ ಗೆಲ್ಲುತ್ತಾ ಬಿಜೆಪಿ?- ‘ಕೈ’ ವಶಕ್ಕೆ ತಂತ್ರವೇನು?

    ಕ್ಷೇತ್ರ ಪರಿಚಯ
    2008 ರಲ್ಲಿ ಕ್ಷೇತ್ರ ಪುನರ್‌ ವಿಂಗಡಣೆಯಲ್ಲಿ ಬೆಂಗಳೂರು ಗ್ರಾಮಾಂತರ ಅಸ್ತಿತ್ವಕ್ಕೆ ಬಂತು. ಆಗಿನಿಂದಲೂ ಕ್ಷೇತ್ರದಲ್ಲಿ ಬಿಜೆಪಿ ಬಿಗಿ ಹಿಡಿತ ಸಾಧಿಸಿದೆ. 2009 ರಲ್ಲಿ ಕ್ಷೇತ್ರಕ್ಕೆ ನಡೆದ ಮೊದಲ ಸಾರ್ವತ್ರಿಕ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದ ಪಿ.ಸಿ.ಮೋಹನ್‌ ಗೆಲುವು ದಾಖಲಿಸಿದ್ದರು. ಮತ್ತೆ 2014, 2019 ರ ಚುನಾವಣೆಯಲ್ಲೂ ಜಯಸಿ ಹ್ಯಾಟ್ರಿಕ್‌ ಸರದಾರ ಎನಿಸಿಕೊಂಡಿದ್ದಾರೆ.

    ವಿಧಾನಸಭಾ ಕ್ಷೇತ್ರಗಳೆಷ್ಟು?
    ಈ ಕ್ಷೇತ್ರ ವ್ಯಾಪ್ತಿಯಲ್ಲಿ 8 ವಿಧಾನಸಭಾ ಕ್ಷೇತ್ರಗಳು ಒಳಪಡುತ್ತವೆ. ಸರ್ವಜ್ಞನಗರ, ಸಿ.ವಿ. ರಾಮನ್‌ ನಗರ, ಶಿವಾಜಿನಗರ, ಶಾಂತಿನಗರ, ಗಾಂಧಿ ನಗರ, ರಾಜಾಜಿನಗರ, ಚಾಮರಾಜಪೇಟೆ, ಮಹದೇವಪುರ (ಎಸ್‌ಸಿ) ವಿಧಾನಸಭಾ ಕ್ಷೇತ್ರಗಳಿವೆ. 2023 ರ ವಿಧಾನಸಭಾ ಚುನಾವಣೆಯಲ್ಲಿ ಅಂತಹದ್ದೇನು ಬದಲಾವಣೆ ಆಗಿಲ್ಲ. ಹಿಂದಿನಂತೆಯೇ ಕಾಂಗ್ರೆಸ್‌ 5 ಹಾಗೂ ಬಿಜೆಪಿ 3 ಸ್ಥಾನ ಗಳಿಸಿದೆ. ಇದನ್ನೂ ಓದಿ: Bengaluru North Lok Sabha 2024: ಬಿಜೆಪಿ ಗೆಲುವಿನ ಓಟಕ್ಕೆ ಬ್ರೇಕ್‌ ಹಾಕುತ್ತಾ ಕಾಂಗ್ರೆಸ್‌?

    ಮತದಾರರು ಎಷ್ಟಿದ್ದಾರೆ?
    ಬೆಂಗಳೂರೂ ಕೇಂದ್ರ ವ್ಯಾಪ್ತಿಯಲ್ಲಿ ಒಟ್ಟು 23,98,910 ಮತದಾರರಿದ್ದಾರೆ. ಅವರ ಪೈಕಿ 12,36,897 ಪುರುಷ ಹಾಗೂ 11,61,548 ಮಹಿಳಾ ಮತದಾರರಿದ್ದಾರೆ. 465 ತೃತೀಯಲಿಂಗಿ ಮತದಾರರು ಇದ್ದಾರೆ.

    ಕಳೆದ ಚುನಾವಣೆಯಲ್ಲಿ ಏನಾಗಿತ್ತು?
    2019 ರ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಮೂರನೇ ಬಾರಿ ಸ್ಪರ್ಧಿಸಿದ್ದ ಪಿ.ಸಿ.ಮೋಹನ್‌ ಗೆಲುವು ಸಾಧಿಸಿದ್ದರು. ಕಾಂಗ್ರೆಸ್‌ ಅಭ್ಯರ್ಥಿ ರಿಜ್ವಾನ್‌ ಅರ್ಷದ್‌ (Rizwan Arshad) ಎರಡನೇ ಬಾರಿಯೂ ಸೋತಿದ್ದರು. ಬಿಜೆಪಿ 70,968 ಮತಗಳ ಅಂತರದಿಂದ ಗೆಲುವು ದಾಖಲಿಸಿತ್ತು. ಇದನ್ನೂ ಓದಿ: Bagalkot Lok Sabha 2024: ಚಾಲುಕ್ಯರ ನಾಡಲ್ಲಿ ಬಾವುಟ ಹಾರಿಸೋದ್ಯಾರು?

     

    ಪಿ.ಸಿ.ಮೋಹನ್‌ಗೆ 4ನೇ ಬಾರಿ ಬಿಜೆಪಿ ಟಿಕೆಟ್‌
    ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಹೊಸ ಮುಖಗಳಿಗೆ ಅವಕಾಶ ನೀಡಬೇಕೆಂಬ ಬೇಡಿಕೆ ವ್ಯಕ್ತವಾಗಿತ್ತು. ಆದರೆ ಕ್ಷೇತ್ರದಲ್ಲಿ ನಡೆದ ಮೂರು ಚುನಾವಣೆಯಲ್ಲೂ ಸತತವಾಗಿ ಗೆದ್ದಿರುವ ಪಿ.ಸಿ.ಮೋಹನ್‌ಗೆ ಬಿಜೆಪಿ ಮತ್ತೆ ಮಣೆ ಹಾಕಿದೆ.

    ಕಾಂಗ್ರೆಸ್‌ನಿಂದ ರಿಜ್ವಾನ್‌ ಅರ್ಷದ್‌ ಪುತ್ರ ಕಣಕ್ಕೆ
    ಮುಸ್ಲಿಂ ಮತದಾರರ ಬಾಹುಳ್ಯವಿರುವ ಕ್ಷೇತ್ರದಲ್ಲಿ ಈ ಬಾರಿ ಗೆಲುವು ಸಾಧಿಸಬೇಕು ಎಂಬ ಲೆಕ್ಕಾಚಾರದಲ್ಲಿ ಕಾಂಗ್ರೆಸ್‌ ಅಭ್ಯರ್ಥಿಯನ್ನು ಕಣಕ್ಕಿಳಿಸಿದೆ. ಕೇಂದ್ರದ ಮಾಜಿ ಸಚಿವ ಕೆ.ರೆಹಮಾನ್‌ ಖಾನ್ ಅವರ ಪುತ್ರ‌ ಹಾಗೂ ಎಐಸಿಸಿ ಕಾರ್ಯದರ್ಶಿ ಮನ್ಸೂರ್‌ ಅಲಿ ಖಾನ್‌ (Mansoor Ali Khan) ಅವರನ್ನು ಹುರಿಯಾಳಾಗಿಸಿದೆ. ರಾಜ್ಯ ಯುವ ಕಾಂಗ್ರೆಸ್‌ ಸಮಿತಿ ಅಧ್ಯಕ್ಷ ಮೊಹಮ್ಮದ್‌ ನಲಪಾಡ್‌ ಹ್ಯಾರೀಸ್‌ ಹೈಕಮಾಂಡ್‌ ಮಟ್ಟದಲ್ಲಿ ಟಿಕೆಟ್‌ ಗಿಟ್ಟಿಸಲು ಪ್ರಯತ್ನಿಸಿದ್ದರು. ಆದರೆ ಅವರ ಪ್ರಯತ್ನ ಫಲಿಸಲಿಲ್ಲ. ಇದನ್ನೂ ಓದಿ: Dakshina Kannada Lok Sabha 2024: ಬಿಜೆಪಿ ಭದ್ರಕೋಟೆ ಭೇದಿಸುತ್ತಾ ಕಾಂಗ್ರೆಸ್?‌

    ಜಾತಿವಾರು ಲೆಕ್ಕಾಚಾರ
    ಮುಸ್ಲಿಂ- 6,00,000
    ಕ್ರೈಸ್ತರು- 2,00,000
    ಎಸ್‌ಸಿ- 4,00,000
    ಇತರೆ- 6,00,000

  • ರೋಷನ್ ಬೇಗ್ ಕ್ಷೇತ್ರದಲ್ಲೇ ನಾನು ಲೀಡ್‍ನಲ್ಲಿ ಗೆಲ್ತೇನೆ: ರಿಜ್ವಾನ್ ಅರ್ಷದ್

    ರೋಷನ್ ಬೇಗ್ ಕ್ಷೇತ್ರದಲ್ಲೇ ನಾನು ಲೀಡ್‍ನಲ್ಲಿ ಗೆಲ್ತೇನೆ: ರಿಜ್ವಾನ್ ಅರ್ಷದ್

    ಬೆಂಗಳೂರು: ಇಂದು ಲೋಕಸಮರದ ಮಹಾತೀರ್ಪು ಹೊರಬೀಳಲಿದೆ. ಯಾವ ಪಕ್ಷ ಬಹುಮತ ಗಳಿಸಿ ಅಧಿಕಾರದ ಚುಕ್ಕಾಣಿ ಹಿಡಿಯುತ್ತೆ ಎಂದು ಇಡೀ ದೇಶವೇ ಕಾದು ಕೂತಿದೆ. ಈ ನಡುವೆ ಬೆಳ್ಳಂಬೆಳಗ್ಗೆ ಬೆಂಗಳೂರು ಸೆಂಟ್ರಲ್ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ರಿಜ್ವಾನ್ ಅರ್ಷದ್ ಶಾಸಕ ರೋಷನ್ ಬೇಗ್ ವಿರುದ್ಧ ಕಿಡಿಕಾರಿದ್ದಾರೆ.

    ಲೋಕಸಭಾ ಚುನಾವಣೆಯ ಫಲಿತಾಂಶದ ಹಿನ್ನೆಲೆಯಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಶಿವಾಜಿನಗರ ಶಾಸಕ ರೋಷನ್ ಬೇಗ್ ಮೇಲೆ ಕಿಡಿಕಾರಿದರು. ರೋಷನ್ ಬೇಗ್ ಅವರು ತಾನಿಲ್ಲದೇ ಇದ್ದರೆ ನಾನು ಗೆಲ್ಲೋಕೆ ಸಾಧ್ಯವಿಲ್ಲ ಅಂದುಕೊಂಡಿದ್ದಾರೆ. ಆದರೆ ನನಗೆ ಅವರದ್ದೇ ಕ್ಷೇತ್ರ ಶಿವಾಜಿನಗರದಲ್ಲಿ ಜನ ಬೆಂಬಲಿಸಿದ್ದಾರೆ. ಅವರು ತಾನೇ ದೊಡ್ಡ ಲೀಡರ್ ಅಂದ್ಕೊಂಡಿದ್ದಾರೆ. ನಾನು ಕನಿಷ್ಠ 50 ಸಾವಿರ ಬಹುಮತದಲ್ಲಿ ಗೆದ್ದೇ ಗೆಲ್ಲುತ್ತೇನೆ ಎಂಬ ವಿಶ್ವಾಸ ಜನ ಕೊಟ್ಟಿದ್ದಾರೆ ಎಂದು ಹೇಳಿದರು.

    ಮೌಂಟ್ ಕಾರ್ಮೆಲ್ ಕಾಲೇಜ್‍ನಲ್ಲಿ ಬೆಂಗಳೂರು ಸೆಂಟ್ರಲ್ ಕ್ಷೇತ್ರದ ಮತ ಏಣಿಕೆ ನಡೆಯುತ್ತಿದೆ. ಹೀಗಾಗಿ ರಿಜ್ವಾನ್ ಅರ್ಷದ್ ನೇತೃತ್ವದಲ್ಲಿ ಕೆಪಿಸಿಸಿ ಕಚೇರಿಯಲ್ಲಿ ಸೇರಿರುವ ಕೈ ಕಾರ್ಯಕರ್ತರು ಸದ್ಯ ಕೌಂಟಿಂಗ್ ಸೆಂಟರ್‍ಗೆ ಬಂದಿದ್ದಾರೆ. ಚುನಾವಣೋತ್ತರ ಸಮೀಕ್ಷೆಗಳು ಎಲ್ಲ ಸಮಯದಲ್ಲಿ ಸತ್ಯವಾಗಲ್ಲ. ದೇಶದ ಪರ್ಸೆಂಟೆಜ್ ಲೆಕ್ಕದಲ್ಲಿ ಚುನಾವಣಾ ಸಮೀಕ್ಷೆ ಮಾಡಿದ್ದಾರೆ. ಕ್ಷೇತ್ರವಾರು ಸಮೀಕ್ಷೆ ಮಾಡಿಲ್ಲ. ಚುನಾವಣೋತ್ತರ ಸಮೀಕ್ಷೆಗಳೇ ನಿಜವಾದ್ರೆ ಚುನಾವಣೆ ಫಲಿತಾಂಶ ಯಾಕೆ ಬೇಕು ಎಂದು ರಿಜ್ವಾನ್ ಅರ್ಷದ್ ಪ್ರತಿಕ್ರಿಯಿಸಿದರು.

  • ಬೆಂಗಳೂರು ರೌಂಡಪ್ – ದಕ್ಷಿಣ, ಉತ್ತರ, ಕೇಂದ್ರದಲ್ಲಿ ಯಾರಿಗೆ ಜಯಮಾಲೆ?

    ಬೆಂಗಳೂರು ರೌಂಡಪ್ – ದಕ್ಷಿಣ, ಉತ್ತರ, ಕೇಂದ್ರದಲ್ಲಿ ಯಾರಿಗೆ ಜಯಮಾಲೆ?

    ಬೆಂಗಳೂರು ಮಹಾನಗರವನ್ನು ದಕ್ಷಿಣ, ಉತ್ತರ ಮತ್ತು ಕೇಂದ್ರ ಎಂದು ಮೂರು ಲೋಕಸಭಾ ಕ್ಷೇತ್ರಗಳನ್ನು ವಿಭಾಗಿಸಲಾಗಿದೆ. ಈ ಮೂರು ಕ್ಷೇತ್ರಗಳು ಬಿಜೆಪಿಯ ಭದ್ರಕೋಟೆಗಳೆಂದು ಬಿಂಬಿತವಾಗಿದ್ದು, ಅನಂತ್‍ಕುಮಾರ್ ನಿಧನದ ಬಳಿಕ ಬೆಂಗಳೂರು ದಕ್ಷಿಣದಿಂದ ಬಿಜೆಪಿಯಿಂದ ತೇಜಸ್ವಿ ಸೂರ್ಯ ಕಣಕ್ಕಿಳಿದಿದ್ದಾರೆ. ಇತ್ತ ಉತ್ತರದಲ್ಲಿ ಡಿ.ವಿ.ಸದಾನಂದ ಗೌಡ ಎರಡನೇ ಬಾರಿಗೆ ಸ್ಪರ್ಧಿಸಿದ್ದಾರೆ. ಕೇಂದ್ರದಿಂದ ಪಿ.ಸಿ.ಮೋಹನ್ ಕಣದಲ್ಲಿದ್ದಾರೆ.

    ಇತ್ತ ಕಾಂಗ್ರೆಸ್‍ನಿಂದ ಬೆಂಗಳೂರು ಕೇಂದ್ರ ರಿಜ್ವಾನ್ ಅರ್ಷದ್, ಉತ್ತರದಲ್ಲಿ ಕೃಷ್ಣ ಬೈರೇಗೌಡ ಮತ್ತು ದಕ್ಷಿಣದಲ್ಲಿ ಬಿ.ಕೆ.ಹರಿಪ್ರಸಾದ್ ಕಣದಲ್ಲಿದ್ದಾರೆ. ಮೊದಲ ಬಾರಿಗೆ ನಟ ಪ್ರಕಾಶ್ ರೈ ಬೆಂಗಳೂರು ಕೇಂದ್ರದಲ್ಲಿ ಸ್ಪರ್ಧೆ ಮಾಡಿದ್ದಾರೆ.

    1. ಬೆಂಗಳೂರು ಉತ್ತರ ಕದನ:

    ಕಾಂಗ್ರೆಸ್‍ನ ಭದ್ರಕೋಟೆಯನ್ನು ಛಿದ್ರ ಮಾಡಿದ್ದು ಬಿಜೆಪಿ. 2004ರಿಂದಲೇ ಬೆಂಗಳೂರು ಉತ್ತರ ಕ್ಷೇತ್ರವನ್ನು ಕೈ ತೆಕ್ಕೆಯಿಂದ ಬಿಜೆಪಿ ಕಿತ್ತುಕೊಂಡಿತ್ತು. 2004ರಲ್ಲಿ ಸಾಂಗ್ಲಿಯಾನ ಬಿಜೆಪಿಯಿಂದ ಗೆಲ್ಲುವ ಮೂಲಕ 2009ರಕಲ್ಲಿ ಡಿ.ಬಿ.ಚಂದ್ರೇಗೌಡ, 2014ರಲ್ಲಿ ಡಿ.ವಿ.ಸದಾನಂದಗೌಡ ಬಿಜೆಪಿಯಿಂದ ಗೆದ್ದಿದ್ರು. ಬೆಂಗಳೂರು ಉತ್ತರದಿಂದ 7 ಬಾರಿ ಗೆದ್ದಿದ್ದ ಕಾಂಗ್ರೆಸ್‍ನ ನಾಯಕ ದಿವಂಗತ ಜಾಫರ್ ಷರೀಫ್ ಅವರು ಸಾಂಗ್ಲಿಯಾನ, ಚಂದ್ರೇಗೌಡ ಅವರ ಎದುರು ಸೋತಿದ್ದರು.

    ಅಂದಿನಿಂದ ಬೆಂಗಳೂರು ಉತ್ತರ ಬಿಜೆಪಿ ಭದ್ರಕೋಟೆಯಾಗಿ ಬದಲಾಯ್ತು. ಮಿನಿ ಭಾರತದಂತಿರುವ ಈ ಕ್ಷೇತ್ರದಲ್ಲಿ ಎಲ್ಲ ಧರ್ಮ, ಜಾತಿ, ಒಳಗಿನವರು, ಹೊರಗಿನವರು ಎಲ್ಲರನ್ನೂ ಒಳಗೊಂಡಿರುವ ಕ್ಷೇತ್ರ. ಈಗ ಇದೇ ಕ್ಷೇತ್ರದಲ್ಲಿ ಒಂದೇ ಸಮುದಾಯದ ಇಬ್ಬರು ಅಖಾಡದಲ್ಲಿ ಇದ್ದಾರೆ. ಕೇಂದ್ರ ಸಚಿವ, ಹಾಲಿ ಸಂಸದ ಡಿ.ವಿ.ಸದಾನಂದಗೌಡ, ಸಚಿವ ಕೃಷ್ಣಬೈರೇಗೌಡ ಕಣದಲ್ಲಿದ್ದು, ಕದನ ಕಣ ರಂಗೇರಿದೆ.

    ಒಟ್ಟು ಮತದಾರರು: ಬೆಂಗಳೂರು ಉತ್ತರ ಕ್ಷೇತ್ರ 28,48,705 ಮತದಾರರನ್ನು ಒಳಗೊಂಡಿದೆ. 14,81,456 ಪುರುಷ ಮತದಾರರು ಮತ್ತು 13,66,753 ಮಹಿಳಾ ಮತದಾರರನ್ನು ಹೊಂದಿದೆ. ಒಕ್ಕಲಿಗ 8 ಲಕ್ಷ, ಎಸ್‍ಸಿ-ಎಸ್‍ಟಿ 5 ಲಕ್ಷ, ಮುಸ್ಲಿಂ 3 ಲಕ್ಷ, ಕುರುಬ 3 ಲಕ್ಷ, ಲಿಂಗಾಯತರು 2 ಲಕ್ಷ, ಇತರೆ ಹಿಂದುಳಿದ ವರ್ಗ 3 ಲಕ್ಷ ಮತದಾರರಿದ್ದಾರೆ. ಒಕ್ಕಲಿಗರ ಮತಗಳ ನಿರ್ಣಾಯಕ ಸ್ಥಾನದಲ್ಲಿವೆ.

    2014ರ ಫಲಿತಾಂಶ: 2014ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯ ಡಿ.ವಿ.ಸದಾನಂದಗೌಡರು 2,29,764 (16.91%) ಮತಗಳ ಅಂತರದಿಂದ ಕಾಂಗ್ರೆಸ್‍ನ ಸಿ.ನಾರಾಯಣಸ್ವಾಮಿ ವಿರುದ್ಧ ಗೆಲುವು ಸಾಧಿಸಿದ್ದರು. ಡಿ.ವಿ.ಸದಾನಂದಗೌಡ (ಬಿಜೆಪಿ) 7,18,326 (52.91%), ಸಿ.ನಾರಾಯಣಸ್ವಾಮಿ(ಕಾಂಗ್ರೆಸ್) 4,88,562 (35.99%) ಅಬ್ದುಲ್ ಅಜೀಂ (ಜೆಡಿಎಸ್)-92,681 (6.83%) ಮತಗಳನ್ನು ಪಡೆದಿದ್ದರು.

    ವಿಧಾನಸಭಾ ಚುನಾವಣೆಯ ಫಲಿತಾಂಶ: ಬೆಂಗಳೂರು ಉತ್ತರ ಲೋಕ ಅಖಾಡ 8 ವಿಧಾನಸಭಾ ಕ್ಷೇತ್ರಗಳನ್ನು ಹೊಂದಿದೆ. ಒಟ್ಟು 8 ವಿಧಾನಸಭಾ ಕ್ಷೇತ್ರಗಳಲ್ಲಿ ಕಾಂಗ್ರೆಸ್ 5, ಜೆಡಿಎಸ್ 2, ಬಿಜೆಪಿ 1 ಸ್ಥಾನದಲ್ಲಿ ಗೆಲುವು ಕಂಡಿವೆ. ಬ್ಯಾಟರಾಯನಪುರ – ಕೃಷ್ಣ ಭೈರೇಗೌಡ(ಕಾಂಗ್ರೆಸ್), ಯಶವಂತಪುರ – ಎಸ್.ಟಿ.ಸೋಮಶೇಖರ್(ಕಾಂಗ್ರೆಸ್), ಹೆಬ್ಬಾಳ – ಭೈರತಿ ಸುರೇಶ್ (ಕಾಂಗ್ರೆಸ್), ಕೆ.ಆರ್.ಪುರಂ- ಭೈರತಿ ಬಸವರಾಜು (ಕಾಂಗ್ರೆಸ್), ಪುಲಿಕೇಶಿನನಗರ – ಅಖಂಡ ಶ್ರೀನಿವಾಸಮೂರ್ತಿ (ಕಾಂಗ್ರೆಸ್), ಮಹಾಲಕ್ಷ್ಮೀ ಲೇಔಟ್- ಗೋಪಾಲಯ್ಯ (ಜೆಡಿಎಸ್), ದಾಸರಹಳ್ಳಿ – ಮಂಜುನಾಥ್ (ಜೆಡಿಎಸ್) ಮತ್ತು ಮಲ್ಲೇಶ್ವರಂ- ಅಶ್ವಥ್‍ನಾರಾಯಣ್ (ಬಿಜೆಪಿ) ಶಾಸಕರಾಗಿದ್ದಾರೆ.

    ಕಣದಲ್ಲಿರುವ ಪ್ರಮುಖ ಅಭ್ಯರ್ಥಿಗಳು
    1. ಡಿ.ವಿ.ಸದಾನಂದಗೌಡ- ಬಿಜೆಪಿ
    2. ಕೃಷ್ಣಬೈರೇಗೌಡ- ಕಾಂಗ್ರೆಸ್

    2. ಬೆಂಗಳೂರು ದಕ್ಷಿಣ

    ಬೆಂಗಳೂರು ದಕ್ಷಿಣ ಬಿಜೆಪಿಯ ಭದ್ರಕೋಟೆ. ದಿವಂಗತ ಕೇಂದ್ರ ಸಚಿವ ಅನಂತಕುಮಾರ್ ಅವರ ಭದ್ರಕೋಟೆಯಾಗಿತ್ತು. ಜನತಾ ಪಾರ್ಟಿಯ ಭದ್ರಕೋಟೆಯಾಗಿದ್ದ ಬೆಂಗಳೂರು ದಕ್ಷಿಣವನ್ನು ಛಿದ್ರ ಮಾಡಿದ್ದು ದಿವಂಗತ ಮಾಜಿ ಸಿಎಂ ಆರ್.ಗುಂಡೂರಾವ್. 1989ರಲ್ಲಿ ಜನತಾ ಪಾರ್ಟಿಯ ಛಿದ್ರಗೊಳಿಸಿದ ನಂತರ ಬಿಜೆಪಿಗೆ ವರವಾಯ್ತು. 1991ರಲ್ಲಿ ಕೆ.ವಿ.ಗೌಡ ಬಿಜೆಪಿಯಿಂದ ಗೆದ್ದರೆ ಆ ನಂತರ ಸತತ 6 ಬಾರಿ ಅನಂತಕುಮಾರ್ ಈ ಕ್ಷೇತ್ರವನ್ನು ಉಳಿಸಿಕೊಂಡಿದ್ದರು. ಒಕ್ಕಲಿಗ, ಬ್ರಾಹ್ಮಣ, ಮುಸ್ಲಿಂ ಸಮುದಾಯ ಪ್ರಾಬಲ್ಯ ಇರುವ ಈ ಕ್ಷೇತ್ರದಲ್ಲಿ ಉತ್ತರ ಭಾರತೀಯರು ನಿರ್ಣಾಯಕರಾಗಿದ್ದಾರೆ. ತೇಜಸ್ವಿನಿ ಅನಂತಕುಮಾರ್ ಅವರನ್ನು ರಾಜ್ಯ ಬಿಜೆಪಿ ಅಭ್ಯರ್ಥಿಯನ್ನಾಗಿ ಬಿಂಬಿಸಿ ಕೊನೆಗೆ ಹೈಕಮಾಂಡ್ ಯೂತ್ ಫೇಸ್ ನೆಪದಲ್ಲಿ ಬಿಜೆಪಿಯಿಂದ ತೇಜಸ್ವಿ ಸೂರ್ಯ ಅವರಿಗೆ ಟಿಕೆಟ್ ಕೊಟ್ಟಿದ್ದು, ಕಾಂಗ್ರೆಸ್‍ನಿಂದ ದೆಹಲಿ ಮಟ್ಟದ ಪ್ರಭಾವಿ ನಾಯಕ ಬಿ.ಕೆ.ಹರಿಪ್ರಸಾದ್ ಸ್ಪರ್ಧೆಗಿಳಿದಿದ್ದು, ಕದನ ಕಣ ರೋಚಕವಾಗಿದೆ.

    ಒಟ್ಟು ಮತದಾರರು: ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರ 22,15,758 ಮತದಾರನ್ನು ಒಳಗೊಂಡಿದೆ. 11,53,622 ಪುರುಷ ಮತದಾರರು ಮತ್ತು 10,61,796 ಮಹಿಳಾ ಮತದಾರರನ್ನು ಹೊಂದಿದೆ. ಜಾತಿವಾರು ಪ್ರಾಬಲ್ಯ ನೋಡೋದಾದ್ರೆ ಒಕ್ಕಲಿಗ ಸಮುದಾಯ 5 ಲಕ್ಷ, ಮುಸ್ಲಿಂ ಸಮುದಾಯ 4 ಲಕ್ಷ, ಬ್ರಾಹ್ಮಣ ಸಮುದಾಯ 4 ಲಕ್ಷ, ಉತ್ತರ ಭಾರತೀಯರು 2 ಲಕ್ಷ, ಕುರುಬ ಸಮುದಾಯ 2 ಲಕ್ಷ, ಎಸ್‍ಸಿ ಸಮುದಾಯ 2 ಲಕ್ಷ ಮತ್ತು ಲಿಂಗಾಯತ ಸಮುದಾಯ 1.80 ಲಕ್ಷ ಮತದಾರರು ಕ್ಷೇತ್ರದಲ್ಲಿದ್ದಾರೆ.

    2014ರ ಫಲಿತಾಂಶ: 2014ರ ಲೋಕಸಭಾ ಚುನಾವಣೆಯಲ್ಲಿ ಅನಂತಕುಮಾರ್ ಅವರು 2,28,575 (19.51) ಮತಗಳ ಅಂತರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ನಂದನ್ ನಿಲೇಕಣಿ ವಿರುದ್ಧ ಗೆದ್ದಿದ್ದರು. ಅನಂತಕುಮಾರ್ (ಬಿಜೆಪಿ) 6,33,816 (56.88%), ನಂದನ್ ನಿಲೇಕಣಿ (ಕಾಂಗ್ರೆಸ್)- 4,05,241 (36.37%), ರುತ್ ಮನೋರಮಾ (ಜೆಡಿಎಸ್) 25,677 (2.30%) ಮತಗಳನ್ನು ಪಡೆದಿದ್ದರು.

    ವಿಧಾನಸಭಾ ಫಲಿತಾಂಶ: ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರ ಸಹ 8 ವಿಧಾನಸಭಾ ಕ್ಷೇತ್ರಗಳನ್ನು ಒಳಗೊಂಡಿದೆ. ಒಟ್ಟು 8 ವಿಧಾನಸಭಾ ಕ್ಷೇತ್ರಗಳಲ್ಲಿ ಬಿಜೆಪಿ 5, ಕಾಂಗ್ರೆಸ್ 3 ಶಾಸಕರಿದ್ದಾರೆ. ಬಸವನಗುಡಿ – ರವಿ ಸುಬ್ರಮಣ್ಯ (ಬಿಜೆಪಿ), ಪದ್ಮನಾಭನಗರ – ಆರ್.ಅಶೋಕ್(ಬಿಜೆಪಿ), ಬೊಮ್ಮನಹಳ್ಳಿ ಸತೀಶ್ ರೆಡ್ಡಿ (ಬಿಜೆಪಿ), ಚಿಕ್ಕಪೇಟೆ – ಉದಯ್ ಗರುಡಾಚಾರ್(ಬಿಜೆಪಿ), ಗೋವಿಂದರಾಜನಗರ – ವಿ.ಸೋಮಣ್ಣ(ಬಿಜೆಪಿ), ವಿಜಯನಗರ – ಕೃಷ್ಣಪ್ಪ (ಕಾಂಗ್ರೆಸ್), ಜಯನಗರ – ಸೌಮ್ಯರೆಡ್ಡಿ (ಕಾಂಗ್ರೆಸ್) ಮತ್ತು ಬಿಟಿಎಂ ಲೇಔಟ್ – ರಾಮಲಿಂಗಾರೆಡ್ಡಿ (ಕಾಂಗ್ರೆಸ್) ಶಾಸಕರಿದ್ದಾರೆ.

    ಕಣದಲ್ಲಿರುವ ಪ್ರಮುಖ ಅಭ್ಯರ್ಥಿಗಳು
    1. ತೇಜಸ್ವಿಸೂರ್ಯ – ಬಿಜೆಪಿ
    2. ಬಿ.ಕೆ.ಹರಿಪ್ರಸಾದ್ – ಕಾಂಗ್ರೆಸ್

    3. ಬೆಂಗಳೂರು ಸೆಂಟ್ರಲ್

    ಕಾಂಗ್ರೆಸ್ ಭದ್ರಕೋಟೆ ಬೆಂಗಳೂರು ಸೆಂಟ್ರಲ್‍ನಲ್ಲಿ ಸತತ ಮೂರನೇ ಬಾರಿಗೆ ಬಿಜೆಪಿಯ ಪಿ.ಸಿ. ಮೋಹನ್ ಅದೃಷ್ಟ ಪರೀಕ್ಷೆಗೆ ಇಳಿದಿದ್ದಾರೆ. ಕಾಂಗ್ರೆಸ್ಸಿನ ಐವರು ಶಾಸಕರಿದ್ದರೂ, ಈ ಲೋಕಸಭಾ ಕ್ಷೇತ್ರ ಬಿಜೆಪಿಯ ಭದ್ರಕೋಟೆಯೇ ಆಗಿದೆ. ಕಳೆದ ಬಾರಿ ಕೇವಲ 1.30 ಲಕ್ಷ ಮತಗಳ ಅಂತರದಿಂದ ಸೋತಿದ್ದ ರಿಜ್ವನ್ ಅರ್ಷದ್ ಈ ಬಾರಿಯೂ ಕಾಂಗ್ರೆಸ್ಸಿನ ಅಭ್ಯರ್ಥಿಯಾಗಿದ್ದಾರೆ. ಉತ್ತರ ಭಾರತೀಯರು, ಮುಸ್ಲಿಮರು, ಕ್ರೈಸ್ತರು ಹಾಗೂ ತಮಿಳು ಮತದಾರರೇ ನಿರ್ಣಾಯಕವಾಗಿದ್ದಾರೆ. ಪಕ್ಷೇತರ ಅಭ್ಯರ್ಥಿಯಾಗಿ ಚಿತ್ರನಟ ಪ್ರಕಾಶ್ ರೈ ಅದೃಷ್ಟ ಪರೀಕ್ಷೆಯಲ್ಲಿದ್ದಾರೆ. ಮೋದಿ ವಿರೋಧಿಸುತ್ತಲೇ ರಾಜಕೀಯ ಭವಿಷ್ಯಕ್ಕಾಗಿ ಚುನಾವಣೆ ಅಖಾಡಕ್ಕೆ ಧುಮುಕಿದ್ದಾರೆ.

    ಒಟ್ಟು ಮತದಾರರು: ಬೆಂಗಳೂರು ಸೆಂಟ್ರಲ್ ಒಟ್ಟು 22,04,740 ಮತದಾರರನ್ನು ಹೊಂದಿದೆ. 11,45,974 ಪುರುಷ ಮತದಾರರು ಮತ್ತು 10,58,369 ಮಹಿಳಾ ಮತದಾರರಿದ್ದಾರೆ. ಜಾತಿವಾರು ನೋಡೋದಾದ್ರೆ, ತಮಿಳರು 5 ಲಕ್ಷ, ಮುಸ್ಲಿಂ 3 ಲಕ್ಷ, ಉತ್ತರ ಭಾರತೀಯರು 2.5ಲಕ್ಷ, ಕ್ರಿಶ್ಚಿಯನ್ 2 ಲಕ್ಷ, ಮೇವಾರ 1.50 ಲಕ್ಷ, ಎಸ್‍ಸಿ 3 ಲಕ್ಷ, ಲಿಂಗಾಯತ 1 ಲಕ್ಷ, ಒಕ್ಕಲಿಗ 1.5 ಲಕ್ಷ ಮತ್ತು ಇತರೆ 3 ಲಕ್ಷ ಮತದಾರರಿದ್ದಾರೆ.

    2014ರ ಫಲಿತಾಂಶ: 2014ರಲ್ಲಿ ನಡೆದ ಚುನಾವಣೆಯಲ್ಲಿ ಬಿಜೆಪಿಯ ಪಿ.ಸಿ.ಮೋಹನ್ 1,37,500 ಅಂತರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ರಿಜ್ವಾನ್ ಅರ್ಷದ್ ವಿರುದ್ಧ ಜಯಮಾಲೆಯನ್ನು ತಮ್ಮದಾಗಿಸಿಕೊಂಡಿದ್ದರು. ಪಿ.ಸಿ.ಮೋಹನ್ (ಬಿಜೆಪಿ) 5,57,130 (51.85%), ರಿಜ್ವಾನ್ ಅರ್ಷದ್ (ಕಾಂಗ್ರೆಸ್) 4,19,630 (39.05%) ಮತ್ತು ನಂದಿನಿ ಆಳಾ ್ವ(ಜೆಡಿಎಸ್) 20,387 (1.90%) ಮತಗಳನ್ನು ಪಡೆದುಕೊಂಡಿದ್ದರು.

    ವಿಧಾನಸಭಾ ಫಲಿತಾಂಶ: ಬೆಂಗಳೂರು ಸೆಂಟ್ರಲ್ ಕ್ಷೇತ್ರ 8 ವಿಧಾನಸಭಾ ಕ್ಷೇತ್ರಗಳನ್ನು ಒಳಗೊಂಡಿದ್ದು, ಕಾಂಗ್ರೆಸ್ 5, ಬಿಜೆಪಿ 3 ಶಾಸಕರನ್ನು ಹೊಂದಿದೆ. ಶಿವಾಜಿನಗರ- ರೋಷನ್‍ಬೇಗ್ (ಕಾಂಗ್ರೆಸ್), ಗಾಂಧಿನಗರ – ದಿನೇಶ್ ಗುಂಡೂರಾವ್ (ಕಾಂಗ್ರೆಸ್), ಶಾಂತಿನಗರ- ಹ್ಯಾರಿಸ್ (ಕಾಂಗ್ರೆಸ್), ಚಾಮರಾಜಪೇಟೆ – ಜಮೀರ್ ಅಹಮದ್ (ಕಾಂಗ್ರೆಸ್), ಸರ್ವಜ್ಞ ನಗರ – ಕೆ.ಜೆ.ಜಾರ್ಜ್ (ಕಾಂಗ್ರೆಸ್), ರಾಜಾಜಿನಗರ- ಸುರೇಶ್‍ಕುಮಾರ್ (ಬಿಜೆಪಿ), ಮಹದೇವಪುರ – ಅರವಿಂದ ಲಿಂಬಾವಳಿ (ಬಿಜೆಪಿ) ಮತ್ತು ಸಿ.ವಿ.ರಾಮನ್‍ನಗರ- ರಘು (ಬಿಜೆಪಿ)

    ಕಣದಲ್ಲಿರುವ ಪ್ರಮುಖ ಅಭ್ಯರ್ಥಿಗಳು
    1. ಪಿ.ಸಿ.ಮೋಹನ್ – ಬಿಜೆಪಿ
    2. ರಿಜ್ವಾನ್ ಅರ್ಷದ್ – ಕಾಂಗ್ರೆಸ್
    3. ಪ್ರಕಾಶ್ ರೈ – ಪಕ್ಷೇತರ

  • ಅಕ್ರಮವಾಗಿ ಗುರುತಿನ ಚೀಟಿ ಮುದ್ರಣ ಆರೋಪ – ಕಾಂಪ್ಲೆಕ್ಸ್ ಮೇಲೆ ದಾಳಿ, 16 ಮಂದಿ ವಶಕ್ಕೆ

    ಅಕ್ರಮವಾಗಿ ಗುರುತಿನ ಚೀಟಿ ಮುದ್ರಣ ಆರೋಪ – ಕಾಂಪ್ಲೆಕ್ಸ್ ಮೇಲೆ ದಾಳಿ, 16 ಮಂದಿ ವಶಕ್ಕೆ

    ಬೆಂಗಳೂರು: ಕೆಜೆ ರಸ್ತೆಯಲ್ಲಿರುವ ಪ್ರಭಾತ್ ಕಾಂಪ್ಲೆಕ್ಸ್ ನಲ್ಲಿ ಅಕ್ರಮವಾಗಿ ಗುರುತಿನ ಚೀಟಿ ತಯಾರಾಗುತ್ತಿದೆ ಎನ್ನುವ ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ ಚುನಾವಣಾ ಅಧಿಕಾರಿಗಳು ಹಾಗೂ ಪೊಲೀಸರು ಸೋಮವಾರ ರಾತ್ರಿ ಜಂಟಿಯಾಗಿ ದಾಳಿ ಮಾಡಿದ್ದಾರೆ.

    ಈ ವೇಳೆ ವಕೀಲ ಇಬ್ರಾಹಿಂ  ಸೇರಿ 16 ಮಂದಿಯನ್ನು ವಶಕ್ಕೆ ಪಡೆದಿದ್ದಾರೆ. ವಶಕ್ಕೆ ಪಡೆದವರಿಂದ ವೋಟರ್ ಲಿಸ್ಟ್ ಹಾಗೂ ಪ್ರಿಂಟರ್ಸ್ ಗಳನ್ನು ವಶಕ್ಕೆ ಪಡೆದು ತನಿಖೆ ಆರಂಭಸಿದ್ದಾರೆ. ಪ್ರಾಥಮಿಕ ತನಿಖೆಯ ವೇಳೆಯ ಆರೋಪಿಗಳು ಕೇಂದ್ರ ಲೋಕಸಭಾ ಕ್ಷೇತ್ರದ ಮತದಾರರ ಸರ್ವೆ ಮಾಡಿರುವ ವಿಚಾರ ಬೆಳಕಿಗೆ ಬಂದಿದೆ.

    ಸರ್ವೆಯಲ್ಲಿ ಒಂದಷ್ಟು ಮತದಾರರು ಕೇಂದ್ರ ಲೋಕಸಭಾ ಕ್ಷೇತ್ರ ಬಿಟ್ಟು ಹೋಗಿದ್ದಾರೆ. ಕ್ಷೇತ್ರ ಬಿಟ್ಟು ಹೋಗಿರುವವರ ಪಟ್ಟಿ ಮಾಡಿ ಅವರನ್ನು ಕರೆ ತಂದು ವೋಟಿಂಗ್ ಮಾಡುವ ಪ್ಲಾನ್ ಮಾಡಿಕೊಂಡಿದ್ದರು ಎಂಬ ಮಾಹಿತಿ ತಿಳಿದು ಬಂದಿದೆ ಎಂದು ಬಿಬಿಎಂಪಿ ಆಯುಕ್ತ ಮಂಜುನಾಥ ಪ್ರಸಾದ್ ಹೇಳಿದ್ದಾರೆ.

    ಬೆಂಗಳೂರು ಕೇಂದ್ರ ಕ್ಷೇತ್ರದ ಅಭ್ಯರ್ಥಿ ಪಿಸಿ ಮೋಹನ್ ಅವರನ್ನು ಸೋಲಿಸಲು ಕಾಂಗ್ರೆಸ್ ಅಭ್ಯರ್ಥಿ ರಿಜ್ವಾನ್ ಅರ್ಷದ್ ನಕಲಿ ವೋಟರ್ ಐಡಿ ಮುದ್ರಿಸುತ್ತಿದ್ದಾರೆ ಎಂದು ಬಿಜೆಪಿ ಆರೋಪಿಸಿ ಚುನಾವಣಾ ಆಯೋಗಕ್ಕೆ ದೂರು ನೀಡಿದೆ. ಈ ಆರೋಪಕ್ಕೆ ಪ್ರತಿಯಾಗಿ ಕಾಂಗ್ರೆಸ್, ಪಿಸಿ ಮೋಹನ್ ಅವರು ಸೋಲಿನ ಭಯದಿಂದ ಆರೋಪ ಮಾಡುತ್ತಿದ್ದಾರೆ. ಬಿಜೆಪಿಯವರು ಕೂಡ ಅಭ್ಯರ್ಥಿಯ ಕಲರ್ ಪೋಟೋ ಅಂಟಿಸಿ ಮತದಾರರಿಗೆ ಹಂಚುತ್ತಿದ್ದಾರೆಂದು ಆರೋಪಿ ಉಪ್ಪಾರಪೇಟೆ ಪೊಲೀಸ್ ಠಾಣೆಯಲ್ಲಿ ದೂರು ನೀಡಿದೆ.

  • ಬೆಂಗ್ಳೂರು ಲೋಕಸಭಾ ಅಖಾಡದಲ್ಲಿ ರಿಯಲ್ ಚಾಯ್‍ವಾಲಾ!

    ಬೆಂಗ್ಳೂರು ಲೋಕಸಭಾ ಅಖಾಡದಲ್ಲಿ ರಿಯಲ್ ಚಾಯ್‍ವಾಲಾ!

    ಬೆಂಗಳೂರು: ಚಾಯ್‍ವಾಲಾನಾಗಿ ನರೇಂದ್ರ ಮೋದಿಯವರು ಪ್ರಧಾನಿ ಹುದ್ದೆಗೇರಿದ ಕಥೆ ಕೇಳಿದ್ದೀರಿ, ಇದೀಗ ಬೆಂಗಳೂರಿನ ಚುನಾವಣಾ ಅಖಾಡದಲ್ಲೂ ಒಬ್ಬ ಚಾಯ್‍ವಾಲಾ ಭರ್ಜರಿ ಮತ ಬೇಟೆ ನಡೆಸಿದ್ದಾರೆ.

    ಹೌದು. ಪ್ರಧಾನಮಂತ್ರಿ ನರೇಂದ್ರ ಮೋದಿ ಚಾಯ್ ವಾಲಾ ಎಂದೇ ಸಾಕಷ್ಟು ಫೇಮಸ್. ಗುಜರಾತಿನ ವಡ್ನಾಗರ್ ರೈಲ್ವೆ ಸ್ಟೇಷನ್‍ನಲ್ಲಿ ಚಹಾ ಮಾರುತ್ತಿದ್ದ ಮೋದಿ ಅವರು ಬಳಿಕ ದೇಶದ ಆಡಳಿತ ಚುಕ್ಕಾಣಿ ಹಿಡಿದದ್ದು ಈಗ ಇತಿಹಾಸವಾಗಿದೆ. ಹಾಗೆಯೇ ಇದೀಗ ಬೆಂಗಳೂರಲ್ಲೂ ಸೈಯದ್ ಆಸಿಫ್ ಬುಖಾರಿ ಎಂಬ ಚಹಾ ವ್ಯಾಪಾರಿ ಚುನಾವಣಾ ಅಖಾಡದಲ್ಲಿ ಕಾಣಿಸಿಕೊಂಡಿದ್ದಾರೆ.

    ಬೆಂಗಳೂರು ಸೆಂಟ್ರಲ್ ಕ್ಷೇತ್ರದಲ್ಲಿ ಪಕ್ಷೇತರರಾಗಿ ಸೈಯದ್ ಚುನಾವಣಾ ಸ್ಪರ್ಧಾ ಕಣದಲ್ಲಿದ್ದಾರೆ. ಕ್ಯಾಲ್ಕುಲೇಟರ್ ಚಿಹ್ನೆ ಹೊತ್ತು ನಾನು ಚಾಯ್ ವಾಲಾ ನನಗೆ ಮತ ಹಾಕಿ ಎಂದು ಸೈಯದ್ ತಮ್ಮ ಕ್ಷೇತ್ರದಲ್ಲಿ ಪ್ರಚಾರ ನಡೆಸುತ್ತಿದ್ದಾರೆ. ಈ ಹಿಂದೆ ಬಿಬಿಎಂಪಿ, ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಿದ್ದ ಸೈಯದ್ ಆಸೀಫ್, ಈಗ ಲೋಕಸಭಾ ಅಖಾಡದಲ್ಲಿದ್ದಾರೆ. ಎಲೆಕ್ಷನ್‍ಗಾಗಿ 25 ಸಾವಿರ ಠೇವಣಿ ಹಣ ಜೊತೆಗೆ ಪ್ರಚಾರಕ್ಕಾಗಿ 5 ಲಕ್ಷ ರೂ. ಖರ್ಚು ಮಾಡ್ತಾ ಇರೋದಾಗಿ ಸೈಯದ್ ತಿಳಿಸಿದ್ದು, ಭ್ರಷ್ಟಮುಕ್ತ ಆಡಳಿತಕ್ಕಾಗಿ ಚುನಾವಣೆಗೆ ಧುಮುಕಿರೋದಾಗಿ ಹೇಳಿದ್ದಾರೆ.

    ಬೆಂಗಳೂರಿನ ಜಾನ್ಸನ್ ಮಾರುಕಟ್ಟೆಯಲ್ಲಿ ಚಾಯ್ ಫಸ್ಟ್ ಎಂಬ ಮಳಿಗೆ ಹೊಂದಿರೋ ಸೈಯದ್ ಗುಣಾತ್ಮಕ ಬದಲಾವಣೆಯ ನಿರೀಕ್ಷೆಯಲ್ಲಿದ್ದಾರೆ. ಅದೇನೆ ಆಗಲಿ ಉದ್ಯಾನನಗರಿ ಕಣದಲ್ಲಿ ಕಾಣಿಸಿಕೊಂಡಿರೋ ಈ ಚಾಯ್‍ವಾಲಾ ಜನರ ಗಮನ ಸೆಳೆದಿದ್ದಾರೆ.

  • ರಿಜ್ವಾನ್ ನಾಮಪತ್ರ ಸಲ್ಲಿಕೆ ವೇಳೆ ಕೇಸರಿ ಆರ್ಭಟ!

    ರಿಜ್ವಾನ್ ನಾಮಪತ್ರ ಸಲ್ಲಿಕೆ ವೇಳೆ ಕೇಸರಿ ಆರ್ಭಟ!

    ಬೆಂಗಳೂರು: ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ರಿಜ್ವಾನ್ ಅರ್ಷದ್ ಅವರ ನಾಮಪತ್ರ ಸಲ್ಲಿಕೆಯ ವೇಳೆ ಅವರ ಬೆಂಬಲಿಗರು ಕೇಸರಿ ಪೇಟಾ ತೊಟ್ಟು, ಕುಂಕುಮ ಇಟ್ಟುಕೊಂಡು ಮೆರವಣಿಗೆಯಲ್ಲಿ ಭಾಗಿಯಾಗಿದ್ದರು.

    ಇಂದು ರಿಜ್ವಾನ್ ಅರ್ಷದ್ ಅವರು ನಾಮಪತ್ರ ಸಲ್ಲಿಸಲು ಮೆರವಣಿಗೆ ಮೂಲಕ ಬೆಂಬಲಿಗರೊಂದಿಗೆ ಸಾಗುತ್ತಿದ್ದರು. ಈ ವೇಳೆ ಅವರ ಬೆಂಬಲಿಗರೇ ಕೇಸರಿ ಪೇಟ ಹಾಗೂ ಕೇಸರಿ ಕುಂಕುಮ ತೊಟ್ಟು ರ್ಯಾಲಿಯಲ್ಲಿ ಭಾಗಿಯಾಗಿದ್ದ ದೃಶ್ಯ ಕಂಡುಬಂದಿತ್ತು. ಬಿಜೆಪಿ ಮಾತ್ರ ಹಿಂದೂಗಳ ಧ್ವನಿಯಲ್ಲ, ಕಾಂಗ್ರೆಸ್ ಕೂಡ ಹಿಂದೂಗಳ ಪರವಿದೆ ಎಂದು ಸಂದೇಶ ಸಾರಲು ರಿಜ್ವಾನ್ ಅರ್ಷದ್ ಬೆಂಬಲಿಗರು ಕುಂಕುಮ, ಪೇಟಾ ಧರಿಸಿದ್ದರು.

    ರಿಜ್ವಾನ್ ಅವರು ಕೇವಲ ಮುಸ್ಲಿಮರ ಪರವಾಗಿ ಮಾತ್ರ ಇರಲ್ಲ, ಹಿಂದೂಗಳ ಪರ ಕೂಡ ನಿಲ್ಲುತ್ತಾರೆ. ಇದರ ಸಂಕೇತವಾಗಿ ಕೇಸರಿ ಪೇಟಾ, ಕೇಸರಿ ಕುಂಕುಮ ತೊಟ್ಟಿದ್ದೇವೆ ಎಂದು ಹೇಳಿದ ರಿಜ್ವಾನ್ ಬೆಂಬಲಿಗರು ಕೇಸರಿ ಕೇವಲ ಬಿಜೆಪಿಯ ಸ್ವತ್ತಲ್ಲ ಎಂದು ಹೇಳಿ ಕಿಡಿಕಾರಿದರು.

  • ಬೆಂಗಳೂರು ಸೆಂಟ್ರಲ್ ನನಗೆ ಮಿನಿ ಇಂಡಿಯಾ- ಪ್ರಕಾಶ್ ರೈ

    ಬೆಂಗಳೂರು ಸೆಂಟ್ರಲ್ ನನಗೆ ಮಿನಿ ಇಂಡಿಯಾ- ಪ್ರಕಾಶ್ ರೈ

    – ಮಹಾಘಟಬಂಧನ್ ಭಾಗವಾಗಿರುತ್ತೇನೆ

    ಬೆಂಗಳೂರು: ಬೆಂಗಳೂರು ಸೆಂಟ್ರಲ್ ನನಗೆ ಮಿನಿ ಇಂಡಿಯಾ. ಹೀಗಾಗಿ ನಾನು ಅಲ್ಲಿಂದಲೇ ಲೋಕಸಭಾ ಚುನಾವಣೆಗೆ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕೆ ಇಳಿಯುತ್ತೇನೆ ಎಂದು ಬಹುಭಾಷಾ ಚಿತ್ರ ನಟ ಹಾಗೂ ಸಾಮಾಜಿಕ ಹೋರಾಟಗಾರ ಪ್ರಕಾಶ್ ರೈ ಹೇಳಿದ್ದಾರೆ.

    ನಗರದ ಪ್ರೆಸ್ ಕ್ಲಬ್‍ನಲ್ಲಿ ನಡೆದ ಸಂವಾದದಲ್ಲಿ ಮಾತನಾಡಿದ ಅವರು, ಎರಡು ಮೂರು ತಿಂಗಳಿನಿಂದ ಚಿಂತಿಸಿ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ನಿರ್ಧಾರ ತೆಗೆದುಕೊಂಡಿದ್ದೇನೆ. ನಾನು ಹುಟ್ಟಿದ್ದು ಮಾರ್ಥಾಸ್ ಆಸ್ಪತ್ರೆಯಲ್ಲಿ, ನಾನು ಚಾಮರಾಜ ಪೇಟೆ, ಶಾಂತಿನಗರದಲ್ಲಿದ್ದೆ. ಇಲ್ಲಿ ನನ್ನ ಸಾಕಷ್ಟು ಬಂಧುಗಳಿದ್ದಾರೆ ಎಂದು ಹೇಳಿದರು.

    ಜನರಿಗಾಗಿ ಕಾನೂನುಗಳನ್ನು ರೂಪಿಸುವಾಗ ಅವರ ಧ್ವನಿಯಾಗಲು ನಿರ್ಧರಿಸಿದ್ದೇನೆ. ಕಳೆದ ಆರು ತಿಂಗಳಲ್ಲಿ ನಮ್ಮ ಜಸ್ಟ್ ಆಸ್ಕಿಂಗ್‍ನಿಂದ ಅನೇಕ ಪ್ರಶ್ನೆಗಳನ್ನು ಮಾಡಿದ್ದೇವೆ. ಇದಕ್ಕೆ ಯಾವುದೇ ಉತ್ತರ ಸಿಕ್ಕಿಲ್ಲ. ಲೋಕಸಭೆಯಲ್ಲಿ ನಮ್ಮ ಸಂಸದರು ಜನರ ಧ್ವನಿಯಾಗುತ್ತಿಲ್ಲ. ಗೆದ್ದ ನಂತರ ಯಾರದ್ದೋ ಗುಲಾಮರಾಗುತ್ತಾರೆ. ಆದ್ದರಿಂದ ನಾನು ಚುನಾವಣಾ ಕಣಕ್ಕೆ ಇಳಿಯುವ ನಿರ್ಧಾರ ತೆಗೆದುಕೊಂಡಿದ್ದೇನೆ ಎಂದು ಹೇಳಿದರು.

    ಮಹಾಘಟಬಂಧನ್ ವಿಚಾರವಾಗಿ ಮಾತನಾಡಿದ ಪ್ರಕಾಶ್ ರಾಜ್ ಅವರು, ಕೋಮುವಾದವನ್ನು ಎದುರಿಸಲು ಶಕ್ತಿಗಳಿಗೆ ನಾನು ಕೈ ಜೋಡಿಸುತ್ತೇನೆ ಎಂದು ಹೇಳುವ ಮೂಲಕ ಮಹಾಘಟಬಂಧನ್‍ಗೆ ಭಾಗವಾಗಿರುತ್ತೇನೆ ಎಂದು ಸ್ಪಷ್ಟನೆ ನೀಡಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಮಾಲ್‍ನಲ್ಲಿ ಹಿಂದಿ ದರ್ಬಾರ್- ಪ್ರಶ್ನಿಸಿದ ಯುವತಿಗೆ ಆವಾಜ್, ದೌರ್ಜನ್ಯ

    ಮಾಲ್‍ನಲ್ಲಿ ಹಿಂದಿ ದರ್ಬಾರ್- ಪ್ರಶ್ನಿಸಿದ ಯುವತಿಗೆ ಆವಾಜ್, ದೌರ್ಜನ್ಯ

    ಬೆಂಗಳೂರು: ಸಿಲಿಕಾನ್ ಸಿಟಿಯ ಮಾಲ್‍ವೊಂದರಲ್ಲಿ ಹಿಂದಿ ಹೇರಿಕೆ ವಿರುದ್ಧ ಸಿಡಿದೆದ್ದ ಟೆಕ್ಕಿ ಯವತಿಗೆ ಮಾಲ್ ಸಿಬ್ಬಂದಿ ಅವಾಜ್ ಹಾಕಿರೋ ಘಟನೆ ನಡೆದಿದೆ.

    ಬೆಳ್ಳಂದೂರು ಸೆಂಟ್ರಲ್ ಮಾಲ್‍ನಲ್ಲಿ ಶಾಪಿಂಗ್‍ಗೆ ಹೋದ ಟೆಕ್ಕಿ ಲಕ್ಷ್ಮಿ ಅವರಿಗೆ ಹಿಂದಿಯಲ್ಲಿಯೇ ಮಾತಾನಾಡಿ. ನಾನ್ಯಾಕೆ ಕನ್ನಡ ಕಲಿಯಲಿ ಅಂತಾ ಅಲ್ಲಿನ ಸಿಬ್ಬಂದಿ ಕಿರಿಕ್ ಮಾಡಿದ್ದಾನೆ. ಕೌಂಟರ್ ಹುಡ್ಗನ ವಿರುದ್ಧ ಮಾಲ್‍ನ ಹೆಲ್ಪ್ ಡೆಸ್ಕ್ ನಲ್ಲಿ ದೂರು ನೀಡಲು ಹೋದಗ ಮಾಲ್ ಸಿಬ್ಬಂದಿ ಯುವತಿಯುನ್ನ ದಬಾಯಿಸಿದ್ದಾರೆ.

    ಈ ದೃಶ್ಯವನ್ನು ಸೆರೆಹಿಡಿಯಲು ಮೊಬೈಲ್ ಬಳಸಿದಾಗ ಅನುಮತಿ ಇಲ್ಲದೆ ರೆಕಾರ್ಡ್ ಯಾಕೆ ಮಾಡ್ತಿದ್ದೀರಾ? ಎಂದು ಹೇಳಿ ಮೊಬೈಲ್ ಕಿತ್ತುಕೊಳ್ಳಲು ಮುಂದಾಗಿದ್ದಾರೆ. ಅವನಿಗೆ ಕನ್ನಡ ಬರಲ್ಲ, ಇಂಗ್ಲೀಷ್ ಕೂಡ ಬರಲ್ಲ. ನಾವು ಹೇಗೆ ಮಾತಾಡೋದು ಎಂದು ಯುವತಿ ಪ್ರಶ್ನಿಸಿದ್ದಕ್ಕೆ ನಾವು ಮಾತಾಡ್ತಿದ್ದೀವಲ್ಲ ಎಂದು ಉತ್ತರಿಸಿ ಸುಮ್ಮನಾಗಿದ್ದಾರೆ.

    ಮೊಬೈಲ್ ರೆಕಾರ್ಡ್ ಮಾಡಿದ್ರೆ ಅಷ್ಟೇ. ಅದೇನ್ ಮಾಡ್ಕೋತಿರೋ ಮಾಡ್ಕೊಳ್ಳಿ ಅಂತಾ ಅವಾಜ್ ಹಾಕಿದ್ರು ಎಂದು ಟೆಕ್ಕಿ ಲಕ್ಷ್ಮೀ ಆರೋಪಿಸಿದ್ದಾರೆ.

    https://www.youtube.com/watch?v=NF0Ky-Z1Uow&feature=youtu.be